All posts by nagaraj11081993

ಜಿಮ್ ಪ್ರಾರಂಭಿಸಿ ಮಧ್ಯದಲ್ಲಿಯೇ ಬಿಟ್ಟಿದ್ದೀರಾ? ಇದರಿಂದ ಆರೋಗ್ಯಕ್ಕೆ ಹಾನಿಯಾಗುತ್ತಾ ತಿಳಿದುಕೊಳ್ಳಿ

ಜಿಮ್ ಪ್ರಾರಂಭಿಸಿ ಮಧ್ಯದಲ್ಲಿಯೇ ಬಿಟ್ಟಿದ್ದೀರಾ? ಇದರಿಂದ ಆರೋಗ್ಯಕ್ಕೆ ಹಾನಿಯಾಗುತ್ತಾ ತಿಳಿದುಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಫಿಟ್ ಆಗಿರಲು ಜಿಮ್‌ಗೆ (Gym) ಹೋಗುವುದು ಸಾಮಾನ್ಯ. ಜಿಮ್ ಹೋಗುವ ಅಭ್ಯಾಸ ದೇಹವನ್ನು ಬಲಪಡಿಸುವುದರ ಜೊತೆಗೆ ಮಾನಸಿಕವಾಗಿಯೂ ಬಲಿಷ್ಠರನ್ನಾಗಿಸುತ್ತದೆ. ಈ ರೀತಿ ವ್ಯಾಯಾಮದಿಂದ ಸ್ನಾಯುಗಳು ಬಲವಾಗುತ್ತವೆ, ಸ್ಟಾಮಿನಾ ಹೆಚ್ಚುತ್ತದೆ. ಇದರೊಂದಿಗೆ ತೂಕ ಕೂಡ ನಿಯಂತ್ರಣದಲ್ಲಿರುತ್ತದೆ, ಹೃದಯ ಆರೋಗ್ಯಕರವಾಗಿರುತ್ತದೆ ಮತ್ತು ಜೀವನಶೈಲಿಗೆ ಸಂಬಂಧಿಸಿದ ಅನೇಕ ರೋಗಗಳ ಅಪಾಯ ಕಡಿಮೆಯಾಗುತ್ತದೆ. ಪ್ರತಿದಿನ ನಿಗದಿತ ಸಮಯದಲ್ಲಿ ವ್ಯಾಯಾಮ ಮಾಡುವುದರಿಂದ ದಿನಚರಿಯೂ ಚುರುಕಾಗಿರುತ್ತದೆ. ಜಿಮ್‌ನಲ್ಲಿ ವಿಭಿನ್ನ ರೀತಿಯ ವ್ಯಾಯಾಮಗಳನ್ನು ಮಾಡುವುದರಿಂದ ದೇಹದ ಪ್ರತಿಯೊಂದು ಭಾಗಕ್ಕೂ ಪ್ರಯೋಜನವಾಗುತ್ತದೆ, ಇದರಿಂದ ಒಟ್ಟಾರೆ ಫಿಟ್‌ನೆಸ್ ಚೆನ್ನಾಗಿರುತ್ತದೆ. ಆದರೆ ಅನೇಕರು ಪ್ರಾರಂಭದಲ್ಲಿ ಜಿಮ್ ಗೆ ಹೋಗುವುದಕ್ಕೆ ಬಹಳ ಉತ್ಸಾಹ ತೋರಿಸುತ್ತಾರೆ. ಆರಂಭದಲ್ಲಿ ನಿಯಮಿತವಾಗಿ ವ್ಯಾಯಾಮವನ್ನು ಕೂಡ ಮಾಡುತ್ತಾರೆ. ಅದೇ ರೀತಿ ಆಹಾರಕ್ರಮಗಳನ್ನು ಕೂಡ ಅನುಸರಿಸುತ್ತಾರೆ. ಬಳಿಕ ಸಮಯದ ಕೊರತೆ, ಸೋಮಾರಿತನದಿಂದ ಜಿಮ್ ಅನ್ನು ಮಧ್ಯದಲ್ಲೇ ಬಿಡುತ್ತಾರೆ. ಆದರೆ ಒಮ್ಮೆ ಜಿಮ್ ಪ್ರಾರಂಭಿಸಿ ಮಧ್ಯದಲ್ಲಿ ಬಿಡುವುದರಿಂದ ದೇಹಕ್ಕೆ ಯಾವ ರೀತಿಯ ತೊಂದರೆಯಾಗುತ್ತದೆ, ನಿಜವಾಗಿಯೂ ಈ ರೀತಿ ಮಾಡುವುದು ಆರೋಗ್ಯಕ್ಕೆ ಹಾನಿಕಾರಕವೇ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಜಿಮ್ ಪ್ರಾರಂಭಿಸಿ ಮಧ್ಯದಲ್ಲಿ ಬಿಡುವುದರಿಂದಾಗುವ ಹಾನಿ?

ಸಾಮಾನ್ಯವಾಗಿ ಜಿಮ್ ಅನ್ನು ಮಧ್ಯದಲ್ಲಿ ಬಿಡುವುದರಿಂದ ದೇಹಕ್ಕೆ ಸಿಗುತ್ತಿದ್ದ ಪ್ರಯೋಜನಗಳು ನಿಧಾನವಾಗಿ ಕಡಿಮೆಯಾಗುತ್ತವೆ. ದೇಹದ ಫಿಟ್‌ನೆಸ್ ಮಟ್ಟ ಕುಸಿಯಬಹುದು ಮತ್ತು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ವೈದ್ಯರು ಹೇಳುವ ಪ್ರಕಾರ, ಜಿಮ್ ಪ್ರಾರಂಭಿಸಿ ಅದನ್ನು ಮಧ್ಯದಲ್ಲಿ ಬಿಡುವುದರಿಂದ ದೇಹದ ಮೇಲೆ ನಕಾರಾತ್ಮಕ ಪರಿಣಾಮ ಬೀಳಬಹುದು. ವ್ಯಕ್ತಿ ನಿಯಮಿತವಾಗಿ ವ್ಯಾಯಾಮ ಮಾಡಿದಾಗ ದೇಹವು ಅದಕ್ಕೆ ಹೊಂದಿಕೊಳ್ಳುತ್ತದೆ. ಆದರೆ ಅಚಾನಕ್ ಜಿಮ್ ಬಿಡುವುದರಿಂದ ಈ ಸಮತೋಲನಕ್ಕೆ ಅಡಿಯಾಗುತ್ತದೆ. ಅಷ್ಟೇಅಲ್ಲ ಸ್ನಾಯುಗಳ ಬಲ ನಿಧಾನವಾಗಿ ಕಡಿಮೆಯಾಗುತ್ತದೆ ಮತ್ತು ಸಹನಶಕ್ತಿಯೂ ಕುಗ್ಗುತ್ತದೆ.

ಇದನ್ನೂ ಓದಿ: Fitness Tips: ಜಿಮ್‌ಗೆ ಹೋಗದೆ ಫಿಟ್ ಆಗಿರುವುದು ಹೇಗೆ?

ಈ ರೀತಿಯಾಗುವುದನ್ನು ತಡೆಯಲು ಏನು ಮಾಡಬೇಕು?

ಜಿಮ್‌ಗೆ ಹೋಗಲು ಇಷ್ಟವಿಲ್ಲದವರು ಅಥವಾ ಯಾವುದೋ ಕಾರಣದಿಂದ ಅದನ್ನು ಬಿಟ್ಟಿದ್ದರೆ ಒಂದೇ ಬಾರಿಗೆ ನೀವು ಮಾಡುತ್ತಿದ್ದ ಚಟುವಟಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಡಿ. ದೈನಂದಿನ ದಿನಚರಿಯಲ್ಲಿ ಲಘು ವ್ಯಾಯಾಮ, ಯೋಗ ಅಥವಾ ಮನೆಯಲ್ಲಿಯೇ ವಾಕಿಂಗ್ ಮಾಡಿ. ಇದರಿಂದ ದೇಹ ಸದಾ ಚುರುಕಾಗಿರಲು ಸಹಾಯವಾಗುತ್ತದೆ. ಮಾತ್ರವಲ್ಲ, ಸಮತೋಲಿತ ಆಹಾರವನ್ನು ಸೇವನೆ ಮಾಡುವುದು ಬಹಳ ಮುಖ್ಯ. ಸಮಯದ ಕೊರತೆಯಿದ್ದರೆ, ಸ್ವಲ್ಪವಾದರೂ ವ್ಯಾಯಾಮ ಮಾಡುವುದನ್ನು ಮರೆಯಬೇಡಿ. ಎಲ್ಲಕ್ಕಿಂತ ಮುಖ್ಯವಾದುದು ಎಂದರೆ ದೇಹವನ್ನು ಅಚಾನಕ್ ಚಟುವಟಿಕೆಗಳಿಂದ ದೂರವಿಡಬಾರದು. ಯಾವುದಾದರೂ ರೂಪದಲ್ಲಿ ಫಿಟ್‌ನೆಸ್ ಅನ್ನು ನಿರಂತರವಾಗಿ ಮುಂದುವರಿಸುವುದು ಆರೋಗ್ಯಕರ ಜೀವನಕ್ಕೆ ಅತ್ಯಂತ ಅಗತ್ಯವಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸರಿಯಾಗೇ ಮಾಡುತ್ತಿದೆ; ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ!

ನವದೆಹಲಿ, ಮಾರ್ಚ್ 19: ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಇಂದು ಪಶ್ಚಿಮ ಏಷ್ಯಾದ ಸಂಘರ್ಷದ ಬಗ್ಗೆ ಕೇಂದ್ರ ಸರ್ಕಾರದ ಮೌನದ ಮತ್ತು ತಟಸ್ಥ ನಿಲುವನ್ನು ಬೆಂಬಲಿಸಿದ್ದಾರೆ. ಒಂದೆಡೆ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿಯ (PM Modi) ವಿರುದ್ಧ ಆರೋಪಗಳನ್ನು ಮಾಡುತ್ತಲೇ ಇದ್ದರೆ ಇನ್ನೊಂದೆಡೆ ಅದೇ ಪಕ್ಷದ ಸಂಸದ ಮನೀಶ್ ತಿವಾರಿ ಬಿಜೆಪಿ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ! ಭಾರತವು ಇತಿಹಾಸದಿಂದಲೂ ಇಸ್ರೇಲ್ ಮತ್ತು ಇರಾನ್ ಪ್ರದೇಶದಲ್ಲಿ ಸೀಮಿತ ಪಾತ್ರವನ್ನು ವಹಿಸಿದೆ. ಅದು ನಮ್ಮ ಯುದ್ಧವಲ್ಲ ಹೀಗಾಗಿ ಅದರಲ್ಲಿ ನಾವು ಮೂಗು ತೂರಿಸುವ ಅಗತ್ಯವಿಲ್ಲ. ಕೇಂದ್ರ ಸರ್ಕಾರ ಸರಿಯಾಗಿಯೇ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ಇರಾನ್, ಇಸ್ರೇಲ್ ಮತ್ತು ಯುಎಸ್ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಯ ಕುರಿತು ಮಾತನಾಡಿದ ಅವರು, ಬಿಕ್ಕಟ್ಟಿನ ಪ್ರಮಾಣ ಮತ್ತು ಸಂಕೀರ್ಣತೆಯನ್ನು ಗಮನಿಸಿದರೆ ಭಾರತದ ಎಚ್ಚರಿಕೆಯ ರಾಜತಾಂತ್ರಿಕ ವಿಧಾನವು ಸೂಕ್ತವಾಗಿದೆ ಎಂದು ಹೇಳಿದ್ದಾರೆ. “ಇಸ್ರೇಲ್ ಮತ್ತು ಇರಾನ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ಏನಾಗುತ್ತಿದೆ ಎಂಬುದನ್ನು ಎಲ್ಲರೂ ಗಮನಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ನಾವು ಒಂದು ದೇಶದ ಪರವಾಗಿ ನಿಲ್ಲುವುದು ಸೂಕ್ತವಲ್ಲ. ಅದು ನಮ್ಮ ಯುದ್ಧವಲ್ಲ. ನಾವು ಯಾವಾಗಲೂ ಗ್ರೇಟರ್ ಮಧ್ಯಪ್ರಾಚ್ಯದಲ್ಲಿ ಸ್ವಲ್ಪಮಟ್ಟಿಗೆ ಸೀಮಿತ ವಹಿವಾಟವನ್ನು ಮತ್ತು ಪಾತ್ರವನ್ನು ಹೊಂದಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಯುದ್ಧದ ನಡುವೆಯೂ ಅರ್ಮೇನಿಯಾ ಮೂಲಕ ಇರಾನ್​ನಿಂದ 550 ಭಾರತೀಯರ ಸ್ಥಳಾಂತರ

ಇಂತಹ ಸಂದರ್ಭದಲ್ಲಿ ಭಾರತವು ಜಾಗರೂಕತೆಯಿಂದ ವರ್ತಿಸುವ ಮೂಲಕ ಸರಿಯಾದದ್ದನ್ನೇ ಮಾಡುತ್ತಿದೆ. ನಾವು ಜಾಗರೂಕರಾಗಿದ್ದುಕೊಂಡು ಸರಿಯಾದದ್ದನ್ನು ಮಾಡುತ್ತಿದ್ದೇವೆ ಎಂದು ನಾನು ಭಾವಿಸುತ್ತೇನೆ. ಬಿಕ್ಕಟ್ಟಿನ ಆರಂಭದಿಂದಲೂ ಭಾರತವು ಮಾತುಕತೆ ಮತ್ತು ರಾಜತಾಂತ್ರಿಕತೆಗೆ ನಿರಂತರವಾಗಿ ಕರೆ ನೀಡಿದೆ. ಫೆಬ್ರವರಿ 28ರಂದು ಯುಎಸ್ ಮತ್ತು ಇಸ್ರೇಲ್ ಇರಾನ್ ಒಳಗೆ ಜಂಟಿಯಾಗಿ ದಾಳಿಗಳನ್ನು ನಡೆಸಿ, ಹಲವಾರು ಸ್ಥಳಗಳನ್ನು ನಾಶ ಮಾಡಿದ ನಂತರ ಸಂಘರ್ಷ ಪ್ರಾರಂಭವಾಯಿತು. ಇದಕ್ಕೆ ಪ್ರತಿಯಾಗಿ ಇರಾನ್ ತನ್ನದೇ ಆದ ದಾಳಿಯೊಂದಿಗೆ ಸೇಡಿನ ದಾಳಿ ನಡೆಸಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಪ್ರಜ್ವಲ್​​ ವಿಡಿಯೋ ವೈರಲ್​​ ಹಿಂದೆ ಜೆಡಿಎಸ್​​ನವರದ್ದೂ ಕೈವಾಡ: ಚಾರ್ಜ್​​ಶೀಟ್​​ನಲ್ಲಿ ಸ್ಫೋಟಕ ಮಾಹಿತಿ ರಿವೀಲ್​​

ಹಾಸನ, ಮಾರ್ಚ್​​ 19: ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕೇಸ್​ ಸಂಬಂಧ SIT ಸಲ್ಲಿಕೆ ಮಾಡಿರುವ ದೋಷಾರೋಪ ಪಟ್ಟಿ ಜೆಡಿಎಸ್ ವಲಯದಲ್ಲಿಯೇ ತಲ್ಲಣ ಮೂಡಿಸಿದೆ. ಪೆನ್​ಡ್ರೈವ್​ ಹಂಚಿದ ಕೇಸ್​ನ ಆರೋಪಿಗಳ ಪಟ್ಟಿಯಲ್ಲಿ ಬಿಜೆಪಿ, ಕಾಂಗ್ರೆಸ್​​ ಜೊತೆ ಜೆಡಿಎಸ್ ಕಾರ್ಯಕರ್ತರನ್ನೂ ಕೂಡ SIT ಆರೋಪಿಗಳಾಗಿಸಿರೋದು ನಾಯಕರ ಅಚ್ಚರಿಗೆ ಕಾರಣವಾಗಿದೆ. ಚಾರ್ಜ್​ಶೀಟ್​ನಲ್ಲಿ ಶಾಸಕ ಸ್ವರೂಪ್ ಚಿಕ್ಕಪ್ಪ ಹರ್ಷ ಅವರ ಪುತ್ರ ರೇವಂತ್, ರೇವಂತ್ ಸ್ನೇಹಿತ ತೇಜಸ್, ಭವಾನಿ ರೇವಣ್ಣ ಆಪ್ತ ಎನ್​.ಸಿ.ಹರೀಶ್, JDS ಕಾರ್ಯಕರ್ತ ಬೂವನಹಳ್ಳಿ ಮಂಜು ಅಲಿಯಾಸ್ ವಸಂತ್ ಕುಮಾರ್, ಬಾಲಸುಬ್ರಹ್ಮಣ್ಯ, ಜಯಸೂರ್ಯ ಸೇರಿ 7ಕ್ಕೂ ಹೆಚ್ಚು ಜನರ ಹೆಸರಿದೆ.

ಪ್ರಕರಣ ದೇಶಾದ್ಯಂತ ಸದ್ದು ಮಾಡಿದ್ದ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರೇ ರಾಜಕೀಯ ಉದ್ದೇಶದಿಂದ ವಿಡಿಯೋ ವೈರಲ್ ಮಾಡಿದ್ದಾರೆ ಎಂದು ಕೆಲ ಜೆಡಿಎಸ್​ ನಾಯಕರು ಗಂಭೀರ ಆರೋಪ ಮಾಡಿದ್ದರು. ಆದರೀಗ ಎಸ್​ಐಟಿ ಅಧಿಕಾರಿಗಳ ತನಿಖೆ ಬಳಿಕ ಸ್ಫೋಟಕ ಮಾಹಿತಿ ಬಯಲಾಗಿದ್ದು, ಜೆಡಿಎಸ್​​ ಕಾರ್ಯಕರ್ತರೂ ಈ ಪ್ರಕರಣದಲ್ಲಿ ಇರೋದಾಗಿ ತನಿಖಾ ವರದಿ ಹೇಳಿದೆ. ಐಟಿ ಆ್ಯಕ್ಟ್​​ 2008ರ ಸೆಕ್ಷನ್ 67ಎ ಅಡಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

ಇದನ್ನೂ ಓದಿ:  ಪ್ರಜ್ವಲ್ ರೇವಣ್ಣ ಪ್ರಕರಣ; ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ಬಿಗ್ ರಿಲೀಫ್

ಇನ್ನು ಚಾರ್ಜ್​​​ಶೀಟ್​​ನಲ್ಲಿ ಜೆಡಿಎಸ್​​ ಕಾರ್ಯಕರ್ತರ ಹೆಸರು ಉಲ್ಲೇಖ ವಿಚಾರ ಸಂಬಂಧ ಟಿವಿ9ಗೆ ದೂರುದಾರ ಮತ್ತು ವಕೀಲ ಪೂರ್ಣಚಂದ್ರ ಪ್ರತಿಕ್ರಿಯಿಸಿದ್ದಾರೆ. ಆರೋಪಿಗಳು ಯಾವ ಪಕ್ಷದವರು ಎಂಬುದು ನಮಗೆ ಮುಖ್ಯವಲ್ಲ. ಚಾರ್ಜ್​​ಶೀಟ್​​ ಪ್ರತಿ ಇನ್ನೂ ನನ್ನ ಕೈಗೆ ಸಿಕ್ಕಿಲ್ಲ. ದಾಖಲೆ ನೋಡಿದ ಬಳಿಕ ಯಾರ ಮೇಲೆ ಏನು ಆರೋಪ‌ಮಾಡಲಾಗಿದೆ ಎಂದು ಮಾತನಾಡುತ್ತೇನೆ. ಆದರೆ ಪ್ರಕರಣ ಸಂಬಂಧ ತಪ್ಪಿತಸ್ಥರಿಗೆ ಶಿಕ್ಕೆ ಆಗೋವರೆಗೂ ನಾನು ಸುಮ್ಮನಿರಲ್ಲ. ನಾನು ಯಾರಮೇಲೆ‌ ದೂರು ಕೊಟ್ಟಿದ್ದೆ? ಅವರ ಹಿಂದೆ ಇರೋದು ಯಾರು? ಅವರನ್ನು ಯಾಕೆ‌ ವಿಚಾರಣೆಯನ್ನೇ ಮಾಡಲಿಲ್ಲ? ಎಂಬ ಷಡ್ಯಂತ್ರ ಬಯಲಾಗಬೇಕು. ಪ್ರಕರಣದ ನಿಜ ಆರೋಪಿಗಳು ಹೊರ ಬರಬೇಕಾದರೆ ಮತ್ತಷ್ಟು ತನಿಖೆ ಆಗಲೇ‌ಬೇಕು. ಜೆಡಿಎಸ್ ನಾಯಕರ ಬಾಯಿ ಮುಚ್ಚಿಸುವ ಸಲುವಾಗಿ ಕೆಲ‌ ಜೆಡಿಎಸ್ ಕಾರ್ಯಕರ್ತರ ಹೆಸರನ್ನು ಆರೋಪಿಗಳ ಪಟ್ಟಿಯಲ್ಲಿ ಸೇರಿಸಲಾಗಿದೆಯಾ ಎನ್ನುವ ಅನುಮಾನ ಈಗ ನಮ್ಮನ್ನು ಕಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಯುಗಾದಿ ಹಬ್ಬದಂದೇ ದಿನೇಶ್ ಕಾರ್ತಿಕ್ ಮನೆಗೆ ಪುಟ್ಟ ದೇವತೆಯ ಆಗಮನ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾರ್ಗದರ್ಶಕ ಮತ್ತು ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ (Dinesh Karthik) ಮನೆಗೆ ಯುಗಾದಿ ಹಬ್ಬದಂದೇ ಪುಟ್ಟ ದೇವತೆಯ ಆಗಮನವಾಗಿದೆ. ದಿನೇಶ್ ಕಾರ್ತಿಕ್ ಅವರ ಮಡದಿ ದೀಪಿಕಾ ಪಳ್ಳಿಕಲ್ (Deepika Pallikal) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರವನ್ನು ಸ್ವತಃ ದಿನೇಶ್ ಕಾರ್ತಿಕ್ ಅವರೇ ತಮ್ಮ ಇನ್ಸ್​ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದರ ಜೊತೆಗೆ ಮಗಳ ಹೆಸರನ್ನು ಬಹಿರಂಗಪಡಿಸಿರುವ ಕಾರ್ತಿಕ್, ಪುಟ್ಟ ಕಂದಮ್ಮನಿಗೆ ‘ರಾಹ’ (Raaha) ಎಂದು ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ.

ಮೇಲೆ ಹೇಳಿದಂತೆ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾರ್ಗದರ್ಶಕ ಮತ್ತು ಬ್ಯಾಟಿಂಗ್ ಕೋಚ್ ಆಗಿರುವ ದಿನೇಶ್ ಕಾರ್ತಿಕ್, ಕೆಲವು ದಿನಗಳ ಹಿಂದೆ ತಂಡದೊಂದಿಗೆ ಅಭ್ಯಾಸ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಆರ್​ಸಿಬಿ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಫೋಟೋಗಳಲ್ಲಿ ದಿನೇಶ್ ಕಾರ್ತಿಕ್ ಯುವ ಆಟಗಾರರಿಗೆ ಬ್ಯಾಟಿಂಗ್ ಟಿಪ್ಸ್ ನೀಡುತ್ತಿರುವುದನ್ನು ಕಾಣಬಹುದು. ಅಂದರೆ ಮಗುವಿನ ನಿರೀಕ್ಷೆಯ ನಡುವೆಯೂ ತಮ್ಮ ಕರ್ತವ್ಯ ಮರೆಯದ ಕಾರ್ತಿಕ್, ಆರ್​ಸಿಬಿಯ ಅಭ್ಯಾಸ ಶಿಬಿರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಮಗಳ ಆಗಮನದಿಂದಾಗಿ ಕಾರ್ತಿಕ್, ಕುಟುಂಬದೊಂದಿಗೆ ಇದ್ದು, ಆ ನಂತರ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಎರಡನೇ ಬಾರಿಗೆ ತಂದೆಯಾದ ಡಿಕೆ

ಎಲ್ಲರಿಗೂ ತಿಳಿದಿರುವಂತೆ ಇದು ದಿನೇಶ್ ಕಾರ್ತಿಕ್ ಅವರ ಎರಡನೇ ಮದುವೆ. ಮೊದಲ ಮಡದಿ ದಿನೇಶ್ ಕಾರ್ತಿಕ್​​ಗೆ ವಿಚ್ಛೇದನ ನೀಡಿ, ಟೀಂ ಇಂಡಿಯಾದ ಮಾಜಿ ಆಟಗಾರ ಮುರುಳಿ ವಿಜಯ್ ಅವರನ್ನು ಮದುವೆಯಾಗಿದ್ದರು. ಅದಾದ ಬಳಿಕ ದಿನೇಶ್ ಕಾರ್ತಿಕ್ ಭಾರತದ ಹೆಸರಾಂತ ಸ್ಕ್ವಾಷ್ ಆಟಗಾರ್ತಿ ದೀಪಿಕಾ ಪಳ್ಳಿಕಲ್ ಅವರನ್ನು ಪ್ರೀತಿಸಿ 2013 ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನಂತರ ಈ ಜೋಡಿ 2015 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿತ್ತು. ಆಗಸ್ಟ್ 18 ರಂದು ಕ್ರಿಶ್ಚಿಯನ್ ವಿಧಿಗಳ ಪ್ರಕಾರ ಮತ್ತು ಆಗಸ್ಟ್ 20 ರಂದು ಹಿಂದೂ ಸಂಪ್ರದಾಯಗಳ ಪ್ರಕಾರ ಮದುವೆ ನೆರವೇರಿತ್ತು. 2021 ರಲ್ಲಿ, ದಂಪತಿಗೆ ಜಿಯಾನ್ ಮತ್ತು ಕಬೀರ್ ಎಂಬ ಅವಳಿ ಗಂಡು ಮಕ್ಕಳು ಜನಿಸಿದ್ದರು. ಈಗ, ಮಗಳ ಆಗಮನವು ಕುಟುಂಬದ ಸಂತೋಷವನ್ನು ಇಮ್ಮಡಿಗೊಳಿಸಿದೆ.

RCB: ವಿವಾದದ ನಡುವೆ ಗುಟ್ಟಾಗಿ ಸಪ್ತಪದಿ ತುಳಿದ ಆರ್‌ಸಿಬಿ ವೇಗಿ ಯಶ್ ದಯಾಳ್

ಆರ್​ಸಿಬಿಗೆ ಕಪ್ ಗೆಲ್ಲಿಸಿಕೊಟ್ಟ ಕಾರ್ತಿಕ್

ದೀಪಿಕಾ ಪಳ್ಳಿಕಲ್ ವೈಯಕ್ತಿಕ ಜೀವನದಲ್ಲಿ ಮಾತ್ರವಲ್ಲದೆ ಕಾರ್ತಿಕ್ ಅವರ ಕ್ರಿಕೆಟ್ ವೃತ್ತಿಜೀವನದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಕಾರ್ತಿಕ್ ಅವರ ಕ್ರಿಕೆಟ್ ವೃತ್ತಿಜೀವನ ಯಾವಾಗಲೂ ಸುದ್ದಿಯಲ್ಲಿದೆ. ಐಪಿಎಲ್‌ನಲ್ಲಿ ಆರ್‌ಸಿಬಿ ಪರ ವರ್ಷಗಳ ಕಾಲ ಆಡಿದ್ದ ಕಾರ್ತಿಕ್ ಫಿನಿಷರ್ ಆಗಿ ಹೆಸರುವಾಸಿಯಾಗಿದ್ದರು. ನಿವೃತ್ತಿಯ ನಂತರ ಇದೇ ಆರ್​ಸಿಬಿ ತಂಡದ ಕೋಚಿಂಗ್ ಸಿಬ್ಬಂದಿಯಾಗಿ ಸೇರಿಕೊಂಡಿದ್ದ ಕಾರ್ತಿಕ್ 2025 ರ ಐಪಿಎಲ್​ನಲ್ಲಿ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಉಳಿದಂತೆ ಕಾರ್ತಿಕ್ ಟೀಮ್ ಇಂಡಿಯಾ ಪರ 26 ಟೆಸ್ಟ್, 94 ಏಕದಿನ ಮತ್ತು 60 ಟಿ20 ಪಂದ್ಯಗಳನ್ನು ಆಡಿದ್ದು, 3,463 ರನ್ ಗಳಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?

2026ರ ಯುಗಾದಿ ಭವಿಷ್ಯದ ಪ್ರಕಾರ, ಮೀನ ರಾಶಿಯವರಿಗೆ ವ್ಯಾಪಾರ ಕ್ಷೇತ್ರದಲ್ಲಿ ಯಶಸ್ಸು ದೊರೆಯಲಿದೆ ಎಂದು ಜ್ಯೋತಿಷಿ ಕೆ ವೆಂಕಟೇಶ್ ಶರ್ಮಾ ಭವಿಷ್ಯ ನುಡಿದಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಅನುಭವಿಸಿದ ತೊಂದರೆಗಳು ಕಡಿಮೆಯಾಗಿ ಸ್ಥಿರ ಆದಾಯವನ್ನು ಕಾಣುವ ಸಾಧ್ಯತೆ ಇದೆ. ಕುಟುಂಬದಲ್ಲಿ ಶಾಂತಿ ಮತ್ತು ಸಂತೋಷ ನೆಲೆಸಲಿದೆ. ಆದಾಗ್ಯೂ, ಆರೋಗ್ಯದ ಬಗ್ಗೆ ಗಮನ ಹರಿಸಬೇಕಿದ್ದು, ನಿದ್ರಾಹೀನತೆ ಮತ್ತು ಒತ್ತಡವು ಕಾಡಬಹುದು. ಉತ್ತಮ ನಿದ್ರೆ ಮತ್ತು ಮಾನಸಿಕ ನೆಮ್ಮದಿಗಾಗಿ ಹೆಚ್ಚು ಗಮನ ನೀಡಬೇಕು.

ಗ್ರಹಗಳ ಸ್ಥಾನವನ್ನು ಅವಲೋಕಿಸಿದಾಗ, ಶನಿ ಗ್ರಹದ ದುಷ್ಪರಿಣಾಮಗಳಿರುವುದರಿಂದ ಆಂಜನೇಯನ ಮೊರೆ ಹೋಗುವುದು ಸೂಕ್ತ. ಕುಜ ದೋಷಕ್ಕೆ ಸುಬ್ರಹ್ಮಣ್ಯೇಶ್ವರನ ಆರಾಧನೆ ಮಾಡುವುದು ಪರಿಹಾರ ನೀಡುತ್ತದೆ. ರವಿ ಗ್ರಹವು ಸ್ವಲ್ಪ ವ್ಯಾಧಿಗಳನ್ನು ತಂದರೂ, ಶುಕ್ರನು ಲಕ್ಷ್ಮಿಕರನಾಗಿರುತ್ತಾನೆ. ಗುರು ಸ್ನೇಹ ನಾಶ, ಬುಧ ಅತಿನಷ್ಟ ಮತ್ತು ರಾಹು ಶತ್ರು ಭಯವನ್ನು ಸೂಚಿಸುತ್ತದೆ. ಈ ಎಲ್ಲಾ ಗ್ರಹ ದೋಷಗಳಿಗೆ ನಿರ್ದಿಷ್ಟ ಪರಿಹಾರ ಕ್ರಮಗಳನ್ನು ಅನುಸರಿಸುವ ಮೂಲಕ ಉತ್ತಮ ಫಲಗಳನ್ನು ಪಡೆಯಬಹುದು.

ಇದನ್ನೂ ಓದಿ: ಯುಗಾದಿ ಬಳಿಕ 1 ವರ್ಷ ಈ ರಾಶಿಗೆ ಸಾಕಷ್ಟು ಅದೃಷ್ಟ ಕೂಡಿಬರಲಿದೆ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​ ಉತ್ತರ ನೋಡಿ

ಬೆಂಗಳೂರು, ಮಾರ್ಚ್​​ 19: ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಪ್ರತಿಕ್ರಿಯಿಸಿದ್ದಾರೆ. ಅವರ ಹೇಳಿಕೆಯನ್ನು ನಾನು ಗಮನಿಸಿದ್ದು, ಪಕ್ಷ ಮತ್ತು ಶಾಸಕರು ತೀರ್ಮಾನಿಸೋದಾಗಿಯೂ ಅವರು ತಿಳಿಸಿರೋದಾಗಿ ಡಿಕೆಶಿ ಹೇಳಿದ್ದಾರೆ. ಕೆಲ ಶಾಸಕರಿಂದ ಸಚಿವ ಸ್ಥಾನದ ಬೇಡಿಕೆ ವಿಚಾರವಾಗಿಯೂ ಮಾತನಾಡಿದ ಅವರು, ಮಂತ್ರಿ ಆಗಬೇಕು ಎಂದು ಆಸೆ ಪಡುವುದರಲ್ಲಿ ತಪ್ಪಿಲ್ಲ. ಸಂಪುಟ ಪುನಾರಚನೆ ಬಗ್ಗೆ ಸಿಎಂ ಹೇಳಿದ್ದಕ್ಕೆ ಕೆಲವರು ಆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಎಂಬ ಬಗ್ಗೆ ಕಾಲ ನಿರ್ಣಯ ಮಾಡಲಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಾಗಲಕೋಟೆ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಯತ್ನಾಳ್: ದಾವಣಗೆರೆ ಬಿಜೆಪಿ ಅಭ್ಯರ್ಥಿ ಬಗ್ಗೆ ಹೊಸ ಬಾಂಬ್

ವಿಜಯಪುರ, ಮಾರ್ಚ್​​ 19: ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಗೆ ಈಗಾಗಲೇ ಮುಹೂರ್ತ ಫಿಕ್ಸ್ ಆಗಿದೆ. ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನ ಘೋಷಣೆ ಮಾಡಲಾಗಿದೆ. ಬಾಗಕೋಟೆಗೆ ವೀರಣ್ಣ ಚರಂತಿಮಠ ಹಾಗೂ ದಾವಣಗೆರೆಗೆ ಶ್ರೀನಿವಾಸ ಹೆಸರು ಫೈನಲ್ ಆಗಿದೆ. ಈ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (basanagouda patil yatnal)​​ ಮಾತನಾಡಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠಗೆ ನಾನು ಬೆಂಬಲ ನೀಡುತ್ತೇನೆ ಎಂದಿದ್ದಾರೆ. ಜೊತೆಗೆ ದಾವಣಗೆರೆಯಲ್ಲಿ ಕೊನೆಕ್ಷಣದಲ್ಲಿ ಏನಾದರೂ ಆಗಬಹುದು, ಶಾಮನೂರು ಕುಟುಂಬಕ್ಕೆ ‌ಬಿಜೆಪಿ ಟಿಕೆಟ್ ಕೊಟ್ಟರು ಅಚ್ಚರಿಯಿಲ್ಲ ಎಂದು ಹೊಸ ಬಾಂಬ್​​ ಸಿಡಿಸಿದ್ದಾರೆ.

ವೀರಣ್ಣ ಚರಂತಿಮಠಗೆ ಬೆಂಬಲಿಸುವೆ ಎಂದ ಯತ್ನಾಳ್

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಚರಂತಿಮಠಗೆ ಬೆಂಬಲಿಸುವೆ. ಚರಂತಿಮಠ ಹಾಗೂ ನಮ್ಮದು ಹಳೆಯ ಸಂಬಂಧ. ನನ್ನ ಕಷ್ಟ ಕಾಲದಲ್ಲಿ ಸಹಾಯ ಮಾಡಿದ್ದಾರೆ. ಅವರಿಗೆ ಈ ಹಿಂದೆ ಬಿಜೆಪಿ ಟಿಕೆಟ್ ಕೊಡಿಸಿದ್ದೇ ನಾನು. ಆಗ ವೀರಣ್ಣ ಚರಂತಿಮಠಗೆ ಟಿಕೆಟ್ ಕೊಡುವ ಮನಸ್ಸು ಯಡಿಯೂರಪ್ಪಗೆ ಇರಲಿಲ್ಲ. ಅನಂತಕುಮಾರ ನಾನು ಹಾಗೂ ಇತರರು ಸೇರಿ ಚರಂತಿಮಠ ಅವರಿಗೆ ಟಿಕೆಟ್ ಕೊಡಿಸಿದ್ದೇವು. ಆಗ ಜಗದೀಶ್ ಶೆಟ್ಟರ್ ಎಲೆಕ್ಷನ್ ಕಮೀಟಿ ಚೇರ್ಮನ್ ಆಗಿದ್ದರು. ಶೆಟ್ಟರ್ ಜೊತೆಗೆ ಜಗಳ ಮಾಡಿ ಚರಂತಿಮಠಗೆ ಟಿಕೆಟ್ ಕೊಡಿಸಿದ್ದೇವೆ ಎಂದಿದ್ದಾರೆ.

ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಯತ್ನಾಳ್​ ವಾಗ್ದಾಳಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಯಡಿಯೂರಪ್ಪ ವಾಗ್ದಾಳಿ ಮಾಡಿದ ಯತ್ನಾಳ್​​, ಬಿಜೆಪಿ ಮಹಾನ್ ನಾಯಕರು ಎಲ್ಲೆಲ್ಲಿ ಹೊಂದಾಣಿಕೆ ಇದೆ ಎಂದು ನೋಡಬೇಕು. ಅಪ್ಪ-ಮಕ್ಕಳು ಯಾರನ್ನು ಕೊಲ್ಲಬೇಕೆಂದುಕೊಳ್ಳುತ್ತಾರೋ ನೋಡಬೇಕು. ಅವರದ್ದು ಶಾಮನೂರು ಜೊತೆ ಹೊಂದಾಣಿಕೆ ಇದೆ ಹಾಗಾಗಿ ಬಿಜೆಪಿ ಪರ ಕೆಲಸ ಮಾಡುತ್ತಾರೋ ಇಲ್ಲವೋ ಗೊತ್ತಿಲ್ಲ. ಯಡಿಯೂರಪ್ಪ ಹಾಗೂ ಮಕ್ಕಳು ಸರಿಯಾಗಿ ಕೆಲಸ ಮಾಡುತ್ತಾರೋ ಇಲ್ವೋ ಎಂದು ಗೊತ್ತಿಲ್ಲ. ಇನ್ನು ಶಾಮನೂರು ಕುಟುಂಬಕ್ಕೆ ಕಾಂಗ್ರೆಸ್ ಟಿಕೆಟ್ ಸಿಗುತ್ತೋ ಇಲ್ವೋ ಅದೂ ಸಹ ಗೊತ್ತಿಲ್ಲ. ಶಾಮನೂರು, ಯಡಿಯೂರಪ್ಪ ಕುಟುಂಬಗಳು ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಒಂದು ವೇಳೆ ದಾವಣಗೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಮುಸ್ಲಿಂಮರಿಗೆ ಕೊಟ್ಟರೆ, ಶಾಮನೂರು ಮಲ್ಲಿಕಾರ್ಜುನ ಮಗನಿಗೆ ಬಿಜೆಪಿ ಟಿಕೆಟ್ ಕೊಟ್ಟರೂ ಆಶ್ಚರ್ಯವಿಲ್ಲ. ನೂರಕ್ಕೆ ನೂರರಷ್ಟು ಮಾಹಿತಿ ನನಗಿದೆ ಎಂದು ಯತ್ನಾಳ್​ ಬಾಂಬ್ ಸಿಡಿಸಿದ್ದಾರೆ.

ಯತ್ನಾಳ್​ ಬಿಜೆಪಿಗೆ ಏಕೆ ಬೇಕೆಂದು ಕೆಲವರು ಪೋಸ್ಟ್ ಮಾಡುತ್ತಾರೆ. ಇದೆಲ್ಲಾ ಕೆಲಸವನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಕಲಿ ಫೇಸ್ ಬುಕ್ ಮೂಲಕ ಮಾಡಿಸುತ್ತಾನೆ. ಬಿ.ಎಲ್ ಸಂತೋಷ್​, ಪ್ರಲ್ಹಾದ್​ ಜೋಶಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಹಾಕಿಸುತ್ತಾನೆ. ಇದಕ್ಕಾಗಿ ಪ್ರತಿ ತಿಂಗಳು 50 ಲಕ್ಷ ರೂ ಖರ್ಚು ಮಾಡುತ್ತಾನೆಂದು ವಾಗ್ದಾಳಿ ಮಾಡಿದರು. ತಾಯಿಗೆ ದ್ರೋಹ ಬಗೆಯಲ್ಲಾ ಎಂದು ನಿಮ್ಮಪ್ಪ ಭಾಷಣ ಮಾಡುತ್ತಿದ್ದ. ಅದನ್ನೇ ನೋಡಿ ಕನ್ನಡಿ ಮುಂದೆ ನಿಂತು ಭಾಷಣ ಕಲಿತಿದ್ದೀಯಾ, ನಿನಗೆ ಹಣ ತಿನ್ನೋದು ಮಾತ್ರ ಗೊತ್ತಿದೆ ಎಂದು ವಿಜಯೇಂದ್ರ ವಿರುದ್ದ ಕಿಡಿಕಾರಿದರು. ಈಗ ಉಪ ಚುನಾವಣೆಯಲ್ಲಿ ನೀನು ಬಾಗಲಕೋಟೆ, ದಾವಣಗೆರಯಲ್ಲಿ ಸರಿಯಾಗಿ ಕೆಲಸ ಮಾಡಬೇಕು. ಇಲ್ಲವಾದರೆ ಶಾಮನೂರು ಜೊತೆ ಹೋಗಬೇಕಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ ಪ್ರಚಾರಕ್ಕೆ ಉಚ್ಛಾಟಿತ ಶಾಸಕ? ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯ ಸ್ಫೋಟಕ ಹೇಳಿಕೆ

ಕುಮಾರಸ್ವಾಮಿಯನ್ನು ಸೋಲಿಸಲು ಪ್ರಯತ್ನ ಮಾಡಿದರು, ಸೋಮಣ್ಣರನ್ನು ಸೋಲಿಸಲು ಪ್ರಯತ್ನ ಮಾಡಿದ್ದರು. ಕೊಪ್ಪಳದಲ್ಲಿ ಡೀಲಿಂಗ್, ಶಿಖಾರಿಪುರದಲ್ಲಿ ಡೀಲಿಂಗ್, ಕಲಬುರಗಿಯಲ್ಲೂ ಸೋಲಲು ಹೊಂದಾಣಿಕೆ ಮಾಡಿಕೊಂಡರು. ರಾಯಚೂರು, ಬಳ್ಳಾರಿ, ಕೊಪ್ಫಳದಲ್ಲೂ ಹೊಂದಾಣಿಕೆ ಮಾಡಿದರು. ಇದೆಲ್ಲಾ ಮುಂದೆ ನಡೆಯಲ್ಲ. ಯಡಿಯೂರಪ್ಪ ಇದ್ದರೆ ಲಿಂಗಾಯತ ಇರುತ್ತಾರೆ, ಇಲ್ಲದಿದ್ದರೆ ಇಡಿ ಕರ್ನಾಟಕ ಬಿಜೆಪಿ ಮುಳುಗುತ್ತದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿಗಳು ಹೇಳುವುದನ್ನು ನಂಬಿ ಪಿಎಂ
ಮೋದಿ, ಅಮೀತ್ ಶಾ, ಬಿಜೆಪಿ ಹೈಕಮಾಂಡ್ ಕಣ್ಣು ಮುಚ್ಚಬಾರದು ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವಿವಾಹ ವದಂತಿಗೆ ಸ್ಪಷ್ಟನೆ ಕೊಟ್ಟ ಅನುಷ್ಕಾ ಶೆಟ್ಟಿ

ಇತ್ತೀಚೆಗೆ ಸ್ಟಾರ್ ನಾಯಕಿ ಅನುಷ್ಕಾ ಶೆಟ್ಟಿ ಹೆಚ್ಚು ಸಿನಿಮಾಗಳಲ್ಲಿ ನಟಿಸುತ್ತಿಲ್ಲ. ಬಹುನಿರೀಕ್ಷಿತ ‘ಘಾಟಿ’ ಬಾಕ್ಸ್ ಆಫೀಸ್‌ನಲ್ಲಿ ಹೀನಾಯವಾಗಿ ಸೋತಿತು. ಅನುಷ್ಕಾ ತಂಡದಿಂದ ಅವರ ಮುಂದಿನ ಯೋಜನೆಯ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಸಿನಿಮಾ ಹೊರತಾಗಿ ಸ್ವೀಟಿ ಅವರ ಮದುವೆಯ ವದಂತಿಗಳಿಗಾಗಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಹಿಂದೆ ಅವರ ಮದುವೆಯ ಬಗ್ಗೆ ಅನೇಕ ವದಂತಿಗಳು ಬಂದಿವೆ. ಉದ್ಯಮಿ, ಹೀರೋದಿಂದ ಅವರ ವಿವಾಹದ ವದಂತಿಗಳು ಇದ್ದವು. ಆದರೆ ಅದರಲ್ಲಿ ಯಾವುದೇ ಸತ್ಯವಿಲ್ಲ ಎಂದು ಸ್ಪಷ್ಟವಾಗಿದೆ.

ಈಗ, ಅನುಷ್ಕಾ ಉದ್ಯಮಿಯನ್ನು ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಹುಟ್ಟಿಕೊಂಡಿವೆ. ಅನುಷ್ಕಾ ಹಿಂದೆ ಅಂತಹ ವದಂತಿಗಳಿಗೆ ಹೆಚ್ಚು ಪ್ರತಿಕ್ರಿಯಿಸಲಿಲ್ಲ. ಆದರೆ ಈಗ ಅವರು ತುಂಬಾ ಗಂಭೀರವಾಗಿದ್ದಾರೆ. ಅವರ ತಂಡವು ಅನುಷ್ಕಾ ಅವರ ಮದುವೆಯ ಸುದ್ದಿಯನ್ನು ನಿರಾಕರಿಸುವ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ.

‘ಯಾರದ್ದೋ ಜೀವನ. ನಿಜವೋ ಅಲ್ಲವೋ ಎಂದು ಪರಿಶೀಲಿಸುವ ಮೊದಲು ಸುದ್ದಿಯನ್ನಾಗಿ ಮಾಡುವುದಿಲ್ಲ. ಊಹಾಪೋಹ ಮಾಡುವುದು, ಭವಿಷ್ಯ ನುಡಿಯುವುದು ಮತ್ತು ಅನಧಿಕೃತ ಮಾಹಿತಿಯನ್ನು ಪದೇ ಪದೇ ಪ್ರಕಟಿಸುವುದು ಸರಿಯಲ್ಲ. ಅವರ ವಯಸ್ಸಿಗೆ ಅನಗತ್ಯ ಗಮನ ನೀಡುವುದು ಮತ್ತು ಪ್ರತಿ ಪೋಸ್ಟ್‌ನಲ್ಲಿ ’44’ ಸಂಖ್ಯೆಯನ್ನು ಯಾವುದೋ ವಿವಾದಾತ್ಮಕ ವಿಷಯದಂತೆ ಹೈಲೈಟ್ ಮಾಡುವುದು ಸರಿಯಲ್ಲ’ ಎಂದು ಅನುಷ್ಕಾ ತಂಡ ಹೇಳಿದೆ.

‘ನಟಿಯರಿಗೆ ವಯಸ್ಸು ಇಷ್ಟು ದೊಡ್ಡ ಸಮಸ್ಯೆಯಾಗಿದ್ದರೆ, ನಾಯಕರಿಗೆ ಏಕೆ ಅಷ್ಟು ಗಮನ ಕೊಡಲ್ಲ? ಮಹಿಳೆಯರಿಗೆ ಅದು ಏಕೆ ಭಿನ್ನವಾಗಿದೆ? ಅನುಷ್ಕಾ ಶೆಟ್ಟಿ ತಮ್ಮ ವೃತ್ತಿಜೀವನವನ್ನು ಪ್ರತಿಭೆ ಮತ್ತು ಘನತೆಯಿಂದ ನಿರ್ಮಿಸಿಕೊಂಡಿದ್ದಾರೆ. ಅವರು ಎಂದಿಗೂ ಪಿಆರ್ ಸ್ಟಂಟ್‌ಗಳನ್ನು ಅವಲಂಬಿಸಿಲ್ಲ’ ಎಂದು ಹೇಳಲಾಗಿದೆ.

ಇದನ್ನೂ ಓದಿ: ಅನುಷ್ಕಾ ಶೆಟ್ಟಿಗೆ ಕನ್ನಡದ ಮೇಲೆ ಇದೆ ವಿಶೇಷ ಪ್ರೀತಿ; ಇಲ್ಲಿದೆ ಉದಾಹರಣೆ

‘ಅನುಷ್ಕಾ ತಮ್ಮ ವೈಯಕ್ತಿಕ ಜೀವನವನ್ನು ಖಾಸಗಿಯಾಗಿಡಲು ಬಯಸುತ್ತಾರೆ. ಅಂತಹ ಮಹಿಳೆಯನ್ನು ಈ ರೀತಿ ಗುರಿಯಾಗಿಸಿಕೊಳ್ಳುವುದು ಅನ್ಯಾಯ. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಏನಾಗುತ್ತಿದೆ ಎಂದು ಎಲ್ಲರಿಗೂ ಹೇಳಲು ಬಯಸುವುದಿಲ್ಲ. ಪ್ರತಿಯೊಬ್ಬರೂ ಆ ನಿರ್ಧಾರವನ್ನು ಗೌರವಿಸಬೇಕು. ಮದುವೆ ವೈಯಕ್ತಿಕ ವಿಷಯ. ಇದು ಬ್ರೇಕಿಂಗ್ ನ್ಯೂಸ್ ಅಲ್ಲ. ಇದು ಟ್ರೆಂಡ್ ಅಲ್ಲ. ಜವಾಬ್ದಾರಿಯುತವಾಗಿರಿ. ಗಡಿಗಳನ್ನು ಗೌರವಿಸಿ. ಪ್ರಕಟಿಸುವ ಮೊದಲು, ಅದು ನಿಜವೋ ಸುಳ್ಳೋ ಎಂದು ಖಚಿತಪಡಿಸಿಕೊಳ್ಳಿ. ನಾಯಕಿಯರೊಂದಿಗೆ ನಾಯಕಿಯರನ್ನು ಸಮಾನವಾಗಿ ಗೌರವಿಸಿ’ ಎಂದು ಅನುಷ್ಕಾ ತಂಡ ಬಲವಾದ ಎಚ್ಚರಿಕೆ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

 

Source link

Video: ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ

ಈ ವಿಡಿಯೋ ನೋಡಿದಾಗ ಮಾವ-ಸೊಸೆ ಹೀಗಿರಬೇಕೆಂದು ಹೇಳುವುದು ಪಕ್ಕಾ, ಸೊಸೆಯ ಕೈ ಮುರಿದಿದೆ ಕಷ್ಟವಾಗುತ್ತೆಂದು ಮಾವ ಆಕೆಗೆ ರೊಟ್ಟಿ ಒರೆದುಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಮಾವ ಮಾಡಿಕೊಟ್ಟರೆ ಮತ್ತೊಂದೆಡೆ ಸೊಸೆ ಅದನ್ನು ಕಾವಲಿ ಮೇಲೆ ಬೇಯಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಮಾವನಿಗೆ ನಿಲ್ಲಲಾಗದಷ್ಟು ವಯಸ್ಸಾಗಿದ್ದರೂ ಕೂಡ ಸೊಸೆ ಮೇಲಿನ ಕಾಳಜಿಯಿಂದ ಊಟಕ್ಕೆ ಸಹಾಯ ಮಾಡಿದ್ದಾರೆ.ಈ ವಿಡಿಯೋ ನೋಡಿದ ನಂತರ, ವೀಡಿಯೊವನ್ನು ಯಾರು ಚಿತ್ರೀಕರಿಸುತ್ತಿದ್ದಾರೆ ಮತ್ತು ಅವರು ರೊಟ್ಟಿಗೆ ಏಕೆ ಸಹಾಯ ಮಾಡುತ್ತಿಲ್ಲ ಎಂಬ ಪ್ರಶ್ನೆಗಳನ್ನು ಜನರು ಎತ್ತಿದ್ದಾರೆ. ಅದೇನೆ ಆಗಲಿ ಎಲ್ಲಾ ಮನೆಯಲ್ಲೂ ಮಾವ-ಸೊಸೆ ಇದೇ ರೀತಿ ಇದ್ದರೆ ಮನೆಯಲ್ಲಿ ಸುಖ, ಶಾಂತಿ ನೆಲೆಸಿರುತ್ತದೆ ಎಂದು ಜನರು ಕಮೆಂಟ್ ಮಾಡಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ದಾವಣಗೆರೆ ಬೈ ಎಲೆಕ್ಷನ್: ಬಿಎಸ್​​ವೈ ಬಣಕ್ಕೆ ತೀವ್ರ ಮುಖಭಂಗ, ಮೇಲುಗೈ ಸಾಧಿಸಿದ ಮಾಜಿ ಎಂಪಿ

ದಾವಣಗೆರೆ, (ಮಾರ್ಚ್ 19): ಕರ್ನಾಟಕದ ಎರಡು ವಿಧಾನಸಭಾ ಉಪಚುನಾವಣೆಗೆ (Davanagere By Election ) ಬಿಜೆಪಿಯ ಕೇಂದ್ರೀಯ ಆಯ್ಕೆ ಸಮಿತಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಯುಗಾದಿಯ ದಿನದಂದು, ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ದಾವಣಗೆರೆಯಲ್ಲಿ ಅಚ್ಚರಿಯ ಅಭ್ಯರ್ಥಿಯ ಘೋಷಣೆ ಮಾಡಲಾಗಿದೆ. ದಾವಣಗೆರೆ ದಕ್ಷಿಣದಿಂದ ಶ್ರೀನಿವಾಸ ಟಿ ದಾಸಕರಿಯಪ್ಪ (Srinivas Dasakariyappa) ಅವರಿಗೆ ಟಿಕೆಟ್ ನೀಡಲಾಗಿದೆ. ಈ ಮೂಲಕ ದಾವಣಗೆರೆ ರೆಬೆಲ್ ಬಣದ ಅಭ್ಯರ್ಥಿಗೆ ಮಣೆ ಹಾಕಿದ್ದು, ರಾಜ್ಯ ಬಿಜೆಪಿ ಘಟಕಕ್ಕೆ ಕೇಂದ್ರದ ನಾಯಕರು ಅಚ್ಚರಿಯನ್ನು ಮೂಡಿಸಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ವಿರೋಧಿ ಬಣದ ನಾಯಕನಿಗೆ ಟಿಕೆಟ್ ನೀಡಿರುವುದು ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇನ್ನು ತಮ್ಮದೇ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಬಿಎಸ್​​ವೈ ಬಣದ ನಾಯಕ ಎಂಪಿ ರೇಣುಕಾಚಾರ್ಯಗೆ ಮುಖಂಭಂಗವಾಗಿದೆ.

ಬಿಜೆಪಿ ಬಿಗ್ ಸರ್ಪ್ರೈಸ್

ಬಾಗಲಕೋಟೆಯಲ್ಲಿ ಅಭ್ಯರ್ಥಿ ಆಯ್ಕೆಯ ವಿಚಾರದಲ್ಲಿ ಬಿಜೆಪಿಯಲ್ಲಿ ಅಷ್ಟೊಂದು ಗೊಂದಲವಿರಲಿಲ್ಲ. ಲಿಂಗಾಯತ ಸಮುದಾಯದ ಚರಂತಿಮಠ ಅವರಿಗೆ ಟಿಕೆಟ್ ಬಹುತೇಕ ಕನ್ಫರ್ಮ್ ಆಗಿತ್ತು. ಆದರೆ, ದಾವಣಗೆರೆಗೆ ಬಿಜೆಪಿಯ ಎರಡು ಬಣಗಳ ಪೈಪೋಟಿ ಜೋರಾಗಿತ್ತು ಮತ್ತು ಐವರು ಹೆಸರು ಕೇಳಿ ಬರುತ್ತಿತ್ತು.ಬಿಜಿ ಅಜಯ್ ಕುಮಾರ್, ರಾಜನಹಳ್ಳಿ ಶಿವಕುಮಾರ್, ಶ್ರೀನಿವಾಸ ದಾಸ ಕರಿಯಪ್ಪ, ದೇವರಮನೆ ಶಿವಕುಮಾರ್ ಮತ್ತು ಯಶ್ವಂತ್ ರಾವ್ ಜಾಧವ್ ಹೆಸರು ಕೇಳಿ ಬರುತ್ತಿತ್ತು. ಈ ಪೈಕಿ, ಯುವ ನಾಯಕ ಅಜಯ್ ಕುಮಾರ್ ಅವರಿಗೆ ಬಹುತೇಕ ಟಿಕೆಟ್ ಕನ್ಫರ್ಮ್ ಎಂದು ಹೇಳಲಾಗುತ್ತಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಹೈಕಮಾಂಡ್, ಈ ಕ್ಷೇತ್ರದಲ್ಲಿ ಪ್ರಬಲವಾಗಿರುವ ಲಿಂಗಾಯತ ಅಥವಾ ಮರಾಠ ಸಮುದಾಯದ ನಾಯಕರಿಗೆ ಟಿಕೆಟ್ ನೀಡುವ ಪದ್ಧತಿಯನ್ನು ಬದಿಗೊತ್ತಿ, ಇದೇ ಮೊದಲ ಬಾರಿಗೆ ಪರಿಶಿಷ್ಟ ಪಂಗಡದ (ST) ನಾಯಕ ಶ್ರೀನಿವಾಸ್ ಟಿ ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡಿದೆ. ಇದರೊಂದಿಗೆ ಅತಿ ಹೆಚ್ಚು ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಬಿಗ್ ಸರ್ಪ್ರೈಸ್ ನೀಡಿದೆ.

ಇದನ್ನೂ ಓದಿ: ದಾವಣಗೆರೆ ಬೈ ಎಲೆಕ್ಷನ್: ಇಬ್ಬರ ಜಗಳದಲ್ಲಿ 3ನೇ ವ್ಯಕ್ತಿಗೆ ಟಿಕೆಟ್, ಬಿಜೆಪಿಯಲ್ಲಿ ಸಂಚಲನ

ಬಿಎಸ್​​ವೈ ವಿರೋಧಿ ಬಣದ ಮೇಲುಗೈ

ರಾಜ್ಯ ಎಸ್‌ಟಿ ಮೋರ್ಚಾ ಉಪಾಧ್ಯಕ್ಷರಾಗಿರುವ ಶ್ರೀನಿವಾಸ್ ಕಳೆದ ಹಲವು ಚುನಾವಣೆಗಳಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದರು. ಈ ಬಾರಿ ಪಕ್ಷೇತರರಾಗಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಇದನ್ನು ಮನಗಂಡ ಹೈಕಮಾಂಡ್ ಬಂಡಾಯ ತಡೆಯಲು ಅವರಿಗೆ ಮನ್ನಣೆ ನೀಡಿದೆ. ಮುಖ್ಯವಾಗಿ ಮಾಜಿ ಸಿಎಂ ಬಿಎಸ್​​ ಯಡಿಯೂರಪ್ಪ ವಿರೋಧಿ ಬಣದ ಮಾಜಿ ಸಂಸದ ಸಿದ್ದೇಶ್ವರ್ ತಂಡದಲ್ಲಿ ಗುರುತಿಸಿಕೊಂಡಿದ್ದರು.

ಯುವ ನಾಯಕ ಅಜಯ್ ಕುಮಾರ್ ಅವರಿಗೆ ಟಿಕೆಟ್ ನೀಡಬೇಕೆಂದು ಬಿಎಸ್​​​ವೈ ಬಣದ ರೇಣುಕಾಚಾರ್ಯ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರಿಗೆ ಮನವಿ ಮಾಡಿದ್ದರು. ಹೀಗಾಗಿ ಎಷ್ಟೇ ಆಗಲಿ ಯಡಿಯೂರಪ್ಪ ಸಿನೀಯರ್ ಲೀಡರ್. ಇದರಿಂದ ಹೈಕಮಾಂಡ್, ಅಜಯ್ ಕುಮಾರ್ ಅವರಿಗೆ ಮಣೆ ಹಾಕುತ್ತೆ ಎಂದು ಹೇಳಲಾಗಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಬಿಎಸ್​ವೈ ವಿರೋಧಿ ಸಿದ್ದೇಶ್ವರ್ ಬಣದ ನಾಯಕನಿಗೆ ಹೈಕಮಾಂಡ್ ಮಣೆ ಹಾಕಿರುವುದು ಅಚ್ಚರಿಕೆ ಕಾರಣವಾಗಿದೆ.

ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ನೇತೃತ್ವದ ಬಣ ಯರಿಯೂರಪ್ಪನವರ ವಿರೋಧಿ ಬಣವಾಗಿತ್ತು. ವಿಜಯೇಂದ್ರ ನಡೆಸುವ ಕಾರ್ಯಚಟುವಟಿಗಳಿಂದ ಸಿದ್ದೇಶ್ವರ್- ಯತ್ನಾಳ್ ಬಣ ಹಾಜರಾಗುತ್ತಿರಲಿಲ್ಲ. ಸಾಲದಕ್ಕೆ ಸಿದ್ದೇಶ್ವರ್ ಆಗಲಿ ಯತ್ನಾಳ್ ಬಹಿರಂಗವಾಗಿಯೇ ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಇದೀಗ ದಾವಣಗೆರೆ ಕ್ಷೇತ್ರದ ಟಿಕೆಟ್ ವಿಚಾರದಲ್ಲೂ ಸಹ ಬಿಎಸ್​​ವೈ ಆಪ್ತ ರೇಣುಕಾಚಾರ್ಯ ತನ್ನ ಬಣ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದರು. ಸಾಲದಕ್ಕೆ ದೆಹಲಿಗೆ ತೆರಳಿ ನಾಯಕರನ್ನು ಭೇಟಿ ಮಾಡಿ ಬಂದಿದ್ದರು. ಆದ್ರೆ, ಅಂತಿಮವಾಗಿ ಹೈಕಮಾಂಡ್ ಸಿದ್ದೇಶ್ವರ ಬಣದಲ್ಲಿ ಗುರುತಿಸಿಕೊಂಡಿದ್ದ ಶ್ರೀನಿವಾಸ್ ಅವರಿಗೆ ಟಿಕೆಟ್ ನೀಡಿದೆ. ಹೀಗಾಗಿ ಬಿಎಸ್​ಐ ಬಣದ ಕ್ಯಾಪ್ಟರ್ ಎಂಪಿ ರೇಣುಕಾಚಾರ್ಯ ಲೆಕ್ಕಾಚಾರವೆಲ್ಲ ತಲೆಕೆಳಗಾಗಿವೆ.

2024ರ ಲೋಕಸಭೆ ಚುನಾವಣೆ ವೇಳೆ ಜಿ.ಎಂ.ಸಿದ್ದೇಶ್ವರ್ ವಿರುದ್ಧ ಯಡಿಯೂರಪ್ಪ, ವಿಜಯೇಂದ್ರ ಆಪ್ತ ವಲಯದಲ್ಲಿರುವ ರೇಣುಕಾಚಾರ್ಯ ಗುಂಪುಕಟ್ಟಿಕೊಂಡು ಓಡಾಡಿದ್ದರು. ಇದು ಸಿದ್ದೇಶ್ವರ್ ಪತ್ನಿ ಸೋಲಿಗೆ ಕಾರಣವಾಯ್ತು. ಹೀಗಾಗಿ ಸಿದ್ದೇಶ್ವರ್ ಕಣ್ಣುಕೆಂಪಾಗಿಸಿದ್ದು, ಅಂದಿನಿಂದ ಸಿದ್ದೇಶ್ವರ್ ಬಿಎಸ್​ವೈ ಕುಟುಂಬ ಹಾಗೂ ರೇಣುಕಾಚಾರ್ಯ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸುತ್ತಲೇ ಬಂದಿದ್ದಾರೆ. ಅಲ್ಲದೇ ಬಿಎಸ್​ವೈ ವಿರೋಧಿ ಬಣ ಕಟ್ಟಿ ತೊಡೆತಟ್ಟಿದ್ದಾರೆ. ಇದೀಗ ರೇಣುಕಾಚಾರ್ಯ ತಮ್ಮ ಆಪ್ತ ಬಿ.ಜಿ.ಅಜಯ್ ಕುಮಾರ್​​ಗೆ ಟಿಕೆಟ್ ತಪ್ಪಿಸುವ ಮೂಲಕ ಸಿದ್ದೇಶ್ವ ರ್ ದಾವಣಗೆರೆ ಬಿಜೆಪಿ ಘಟಕ ತನ್ನ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ.

ಆದ್ರೆ ಉಪಚುನಾವಣೆ ಫಲಿತಾಂಶ ಏನಾಗಲಿದೆ ಎನ್ನುವುದು ಕಾದುನೋಡಬೇಕಿದೆ.

Source link