Headlines

nagaraj11081993

Gold Rates: ಚಿನ್ನದ ಬೆಲೆ ಗುರುವಾರವೂ ಕುಸಿತ; ಈ ತಿಂಗಳು 10 ಗ್ರಾಮ್ ಬೆಲೆ 17,000 ರೂ ಇಳಿಕೆ

ಬೆಂಗಳೂರು, ಮಾರ್ಚ್ 19: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ಮುಂದುವರಿದಿದೆ. ಯುಗಾದಿ ಹಬ್ಬದ ದಿನವಾದ ಇಂದು ಗುರುವಾರ ಚಿನ್ನದ ಬೆಲೆ (Gold Rates) ಒಂದು ಗ್ರಾಮ್​ಗೆ 265 ರೂಗಳಷ್ಟು ಇಳಿಕೆ ಆಗಿದೆ. ಕಳೆದ 10 ದಿನದಲ್ಲಿ ಅದರ ಬೆಲೆ ಗ್ರಾಮ್​ಗೆ 700 ರೂಗೂ ಅಧಿಕ ಮೊತ್ತದಷ್ಟು ಕಡಿಮೆಗೊಂಡಿದೆ. ಮಾರ್ಚ್ ತಿಂಗಳ ಈ 19 ದಿನದಲ್ಲಿ ಇದರ ಬೆಲೆಯಲ್ಲಿ ಬರೋಬ್ಬರಿ 1,700 ರೂಗಳಷ್ಟು ತಗ್ಗಿದೆ. ಅಂದರೆ 10 ಗ್ರಾಮ್ ಆಭರಣ ಚಿನ್ನದ ಬೆಲೆಯಲ್ಲಿ 17,000 ರೂಗಳಷ್ಟು…

Read More

ಕನ್ಯಾ ರಾಶಿಯವರಿಗೆ ‘ಲಕ್ಷ್ಮೀ’ ಯೋಗ ಇದ್ರೂ ಆಸ್ತಿ ಕಳೆದುಕೊಳ್ಳವ ಸಾಧ್ಯತೆ!

ಬೆಂಗಳೂರು, ಮಾ.19: ಯುಗಾದಿ ಭವಿಷ್ಯ 2026 ರ ಪ್ರಕಾರ, ಕನ್ಯಾ ರಾಶಿಯವರಿಗೆ ಈ ವರ್ಷ ಶ್ರಮದಿಂದ ಸಾಧನೆ ಲಭಿಸಲಿದೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಹೊಸ ಕಲಿಕೆ ಸಿಗಲಿದ್ದು, ಹಣಕಾಸು ಹಾಗೂ ಲೆಕ್ಕಪತ್ರಗಳ ವಿಷಯದಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ಮನೆಯ ದಾಖಲೆಗಳನ್ನು ಸುರಕ್ಷಿತವಾಗಿರಿಸಿಕೊಳ್ಳುವುದು ಮುಖ್ಯ. ಕುಟುಂಬದಲ್ಲಿ ಸಹೋದರರ ನೆರವು ದೊರೆಯುತ್ತದೆ. ಆರೋಗ್ಯದ ದೃಷ್ಟಿಯಿಂದ ಚರ್ಮದ ಸಮಸ್ಯೆಗಳ ಬಗ್ಗೆ ಜಾಗರೂಕರಾಗಿರುವುದು ಅವಶ್ಯಕ. ಉಷ್ಣ ಪದಾರ್ಥಗಳ ಸೇವನೆಯಿಂದ ದೂರವಿರುವುದು ಒಳಿತು. ಗ್ರಹಗತಿಗಳ ಬಗ್ಗೆ ನೋಡುವುದಾದರೆ, ಚಂದ್ರನ ಸ್ಥಾನ ದೇಹ ಸೌಖ್ಯವನ್ನು ನೀಡಿದರೆ,…

Read More

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ತುಲಾ ರಾಶಿಯವರ ಸಮಗ್ರ ಭವಿಷ್ಯ ಮತ್ತು ಪರಿಹಾರಗಳು

2026ರ ಯುಗಾದಿ ತುಲಾ ರಾಶಿಯವರಿಗೆ ಸಮತೋಲನದ ವರ್ಷವಾಗಿರಲಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತುತಜ್ಞ ವೇದಬ್ರಹ್ಮ ಕೆ. ವೆಂಕಟೇಶ್ ಶರ್ಮಾ ಅವರು ಭವಿಷ್ಯ ನುಡಿದಿದ್ದಾರೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಪಾಲುದಾರಿಕೆಯಿಂದ ಉತ್ತಮ ಫಲಿತಾಂಶಗಳು ಸಿಗುವ ಸಾಧ್ಯತೆಯಿದೆ. ಆದಾಯ ಮತ್ತು ಖರ್ಚು ಸಮನಾಗಿರುವುದರಿಂದ ಆರ್ಥಿಕ ಸ್ಥಿತಿ ಸ್ಥಿರವಾಗಿರುತ್ತದೆ. ಕುಟುಂಬ ಮತ್ತು ದಾಂಪತ್ಯ ಜೀವನದಲ್ಲಿ ಉತ್ತಮ ಹೊಂದಾಣಿಕೆ ಹಾಗೂ ಅನ್ಯೋನ್ಯತೆ ಹೆಚ್ಚುತ್ತದೆ. ಕಳೆದ ವರ್ಷದ ಕಲಹಗಳು ದೂರವಾಗಿ ಸಂಬಂಧಗಳಲ್ಲಿ ಸಾಮರಸ್ಯ ಮೂಡಲಿದೆ. ಆರೋಗ್ಯದ ವಿಷಯದಲ್ಲಿ ಬೆನ್ನುನೋವು ಕುರಿತು ಎಚ್ಚರ ವಹಿಸುವುದು…

Read More

ಬಾಗಲಕೋಟೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕಂತೆ ಕಂತೆ ಹಣ ನಾಯನೇಗಲಿ ಚೆಕ್ ಪೋಸ್ಟ್​ನಲ್ಲಿ ಸೀಜ್

ಬಾಗಲಕೋಟೆ, ಮಾರ್ಚ್ 19: ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 15.50 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ನಾಯನೇಗಲಿ ಚೆಕ್‌ಪೋಸ್ಟ್‌ನಲ್ಲಿ ನಡೆದ ವಾಹನ ತಪಾಸಣೆಯ ವೇಳೆ, ಕೆಎ-28 ಎಎ-4833 ಸಂಖ್ಯೆಯ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರದಿಂದ ಕುಷ್ಟಗಿ ಕಡೆಗೆ ತೆರಳುತ್ತಿದ್ದ ಈ ಕಾರಿನಲ್ಲಿ ವಿಜಯ್ ಮೇಲಗಡೆ ಹಾಗೂ ಕುಮಾರ ಹಿರೇಮಠ…

Read More

ಉಪ ಚುನಾವಣೆ: ಕಾಂಗ್ರೆಸ್​​ನಲ್ಲಿ ಬಗೆಹರಿಯದ ಟಿಕೆಟ್​​ ಕಗ್ಗಂಟು; ಮುಂದುವರಿದ ಗೊಂದಲ

ಬೆಂಗಳೂರು, ಮಾರ್ಚ್​​ 19: ದಾವಣೆಗೆರೆ ದಕ್ಷಿನ ಮತ್ತು ಬಾಗಲಕೋಟೆ ಉಪ ಚುನಾವಣೆಗಳಿಗೆ ವಿಪಕ್ಷ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಆದರೆ ಆಡಳಿತಾರೂಢ ಕಾಂಗ್ರೆಸ್​​ನಲ್ಲಿ ಈ ಬಗ್ಗೆ ಗೊಂದಲ ಮುಂದುವರಿದಿದ್ದು ಅಭ್ಯರ್ಥಿಗಳ ಆಯ್ಕೆಯೇ ಕಗ್ಗಂಟಾಗಿ ಮಾರ್ಪಟ್ಟಿದೆ. ಬಾಗಲಕೋಟೆಯಲ್ಲಿ ಮೇಟಿ ಕುಟುಂಬಸ್ಥರಿಗೇ ಟಿಕೆಟ್​​ ಪಕ್ಕಾ ಎನ್ನಲಾಗಿದ್ದರೂ ನಾಲ್ವರು ಮಕ್ಕಳ ಪೈಕಿ ಯಾರಿಗೆ ಪಕ್ಷ ಮಣೆ ಹಾಕಲಿದೆ ಎಂಬ ಪ್ರಶ್ನೆ ಸದ್ಯ ಉದ್ಭವಿಸಿದೆ. ಮತ್ತೊಂದೆಡೆ ದಾವಣಗೆರೆ ದಕ್ಷಿಣ ಕ್ಕ್ಷೆತ್ರದಲ್ಲಿ ಟಿಕೆಟ್​​ಗಾಗಿ ಕೈಮನೆಯ ಒಳಗೆಯೇ ಭಾರಿ ಗುದ್ದಾಟ ನಡೆಯುತ್ತಿರುವ…

Read More

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮಿಥುನ ರಾಶಿಯವರಿಗೆ ಹೇಗಿರಲಿದೆ?

2026ರ ಯುಗಾದಿ ಮಿಥುನ ರಾಶಿಯವರಿಗೆ ಹಲವು ಬದಲಾವಣೆಗಳನ್ನು ತರಲಿದೆ ಎಂದು ಜ್ಯೋತಿಷಿ ಕೆ. ವೆಂಕಟೇಶ್ ಶರ್ಮಾ ತಿಳಿಸಿದ್ದಾರೆ. ಈ ವರ್ಷ ಹೊಸ ಅವಕಾಶಗಳು ಮಿಥುನ ರಾಶಿಯವರನ್ನು ಹುಡುಕಿಕೊಂಡು ಬರಲಿದ್ದು, ಉದ್ಯೋಗ ಮತ್ತು ವ್ಯಾಪಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ನಿರೀಕ್ಷಿತವಾಗಿವೆ. ಹಣಕಾಸಿನ ವಿಚಾರದಲ್ಲಿ ಮಿಶ್ರ ಫಲಿತಾಂಶಗಳು ಕಂಡುಬರುತ್ತವೆ. ಕುಟುಂಬದಲ್ಲಿ ಸಹೋದರ, ಸಹೋದರಿಯರಿಂದ ಬೆಂಬಲ ಸಿಗಲಿದೆ. ಆರೋಗ್ಯದ ವಿಷಯದಲ್ಲಿ ವಿಶೇಷ ಕಾಳಜಿ ವಹಿಸಬೇಕು, ವಿಶೇಷವಾಗಿ ನರ ಸಂಬಂಧಿತ ಸಮಸ್ಯೆಗಳ ಬಗ್ಗೆ ಜಾಗ್ರತೆ ಅಗತ್ಯ. ಗುರು ಗ್ರಹದ ಪ್ರಭಾವದಿಂದ ಮನಸ್ಸಿಗೆ ಕಷ್ಟವಾಗಬಹುದು. ಇದಕ್ಕೆ…

Read More

ಕರ್ಕಾಟಕ ರಾಶಿಯವರಿಗೆ ಯುಗಾದಿಯಂದು ಈ ಭಾಗ್ಯ ಖಂಡಿತ ಲಭಿಸುತ್ತದೆ!: ಆದರೆ ಈ ತಪ್ಪು ಎಲ್ಲವನ್ನೂ ನಾಶ ಮಾಡತ್ತದೆ

ಬೆಂಗಳೂರು, ಮಾ.19: 2026ರ ಯುಗಾದಿ ದಿನದಂದು ಕರ್ಕಾಟಕ ರಾಶಿಗೆ ಇರುವ ಫಲಗಳ ಬಗ್ಗೆ ಕೆ. ವೆಂಕಟೇಶ್ ಶರ್ಮಾ ಅವರು ವಿವರಿಸಿದ್ದಾರೆ. ಈ ವರ್ಷ ಕರ್ಕಾಟಕ ರಾಶಿಯವರಿಗೆ ಭಾವನಾತ್ಮಕ ಸ್ಥಿರತೆ ಮತ್ತು ಉದ್ಯೋಗ, ವ್ಯಾಪಾರದಲ್ಲಿ ಹೆಚ್ಚಳ ಕಂಡುಬರಲಿದೆ. ಜವಾಬ್ದಾರಿಗಳು ಅಧಿಕವಾಗುವ ಸಾಧ್ಯತೆಗಳಿವೆ. ಹಣಕಾಸು ವಿಚಾರದಲ್ಲಿ ಪ್ರಗತಿ ಕಂಡುಬರಲಿದ್ದು, ಮನೆ ಅಥವಾ ಭೂಮಿ ಖರೀದಿಯ ಸಾಧ್ಯತೆಗಳು ಸಹ ಇವೆ. ಆರೋಗ್ಯದ ವಿಚಾರದಲ್ಲಿ ಕುಟುಂಬದ ಹಿರಿಯರ ಬಗ್ಗೆ ಕಾಳಜಿ ವಹಿಸುವುದು ಅಗತ್ಯ. ಸ್ವಂತ ಆರೋಗ್ಯದಲ್ಲಿ ಜೀರ್ಣಕ್ರಿಯೆ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಎರಡನೇ ಮನೆಯ…

Read More

ಮೆಟ್ರೋದಲ್ಲಿ ಹಾಡು ಹಾಡಿದವರ ವಿರುದ್ಧ ಪ್ರಕರಣ ದಾಖಲು!

ಬೆಂಗಳೂರು, ಮಾರ್ಚ್ 19: ನಮ್ಮ ಮೆಟ್ರೋ ರೈಲಿನಲ್ಲಿ ಹಾಡು ಹಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದ ಘಟನೆಗೆ ಸಂಬಂಧಿಸಿದಂತೆ ಮೆಟ್ರೋ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಭಾನುವಾರ ರಾತ್ರಿ ನಮ್ಮ ಮೆಟ್ರೋದಲ್ಲಿ ಈ ಘಟನೆ ನಡೆದಿತ್ತು. ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮರಳುತ್ತಿದ್ದ ಯುವತಿಯರ ಗುಂಪೊಂದು ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದಾಗ, ಜೋರಾಗಿ ಹಾಡು ಹಾಡಿ ನೃತ್ಯ ಮಾಡಿತ್ತು. ಇದರಿಂದ ಮೆಟ್ರೋದಲ್ಲಿದ್ದ ಇತರೆ ಪ್ರಯಾಣಿಕರಿಗೆ ಅಸೌಕರ್ಯ ಮತ್ತು ತೊಂದರೆ ಉಂಟಾಗಿದೆ. ನಿರ್ದಿಷ್ಟವಾಗಿ, ಕೆಲವು ಯುವತಿಯರು ಮೆಟ್ರೋ ಬೋಗಿಯ ನೆಲದ ಮೇಲೆ ಕುಳಿತು ಹಾಡು ಹಾಡಿದ್ದರು…

Read More

‘ಹಳೆಯ ಕಮರ್ಷಿಯಲ್ ಸಿನಿಮಾ’;‘ಉಸ್ತಾದ್ ಭಗತ್ ಸಿಂಗ್’ ನೋಡಿದವರು ಏನಂದ್ರು?

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇಂದು (ಮಾರ್ಚ್ 19) ರಿಲೀಸ್ ಆಗಿದೆ. ಸಿನಿಮಾ ನೋಡಿದ ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿ ಇರೋದ್ರಿಂದ ಸದ್ಯದ ಮಟ್ಟಿಗೆ ಇದು ಅವರ ಕೊನೆಯ ಸಿನಿಮಾ ಆಗಿರಲಿದೆ. ಈ ಕಾರಣದಿಂದ ಸಿನಿಮಾ ನಿರೀಕ್ಷೆ ಹುಟ್ಟುಹಾಕಿತ್ತು. ಸಿನಿಮಾ ನೋಡಿದ ಅನೇಕರು ಚಿತ್ರದ ವಿಮರ್ಶೆ ತಿಳಿಸುತ್ತಿದ್ದಾರೆ. ಕೆಲವರು ಸಿನಿಮಾನ ಇಷ್ಟಪಟ್ಟರೆ, ಇನ್ನೂ ಕೆಲವರು ಚಿತ್ರ ಹಳೆಯ ಕಮರ್ಷಿಯಲ್ ಅಂಶಗಳನ್ನು ಹೊಂದಿದೆ ಎಂದು…

Read More

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ​ಗಿರಿ: ಹಿಂದೂ ವಿದ್ಯಾರ್ಥಿನಿಯರ ಜತೆ ಜಾತ್ರೆಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ

ಮಂಗಳೂರು, ಮಾ.19: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಜಾತ್ರೆಯ ಸಂಭ್ರಮದ ನಡುವೆಯೇ ಅಹಿತಕರ ಘಟನೆಯೊಂದು ನಡೆದಿದೆ. ಹಿಂದೂ ಸ್ನೇಹಿತೆಯರ ಜೊತೆ ಜಾತ್ರೆ ನೋಡಲು ಬಂದಿದ್ದ 17 ವರ್ಷದ ಮುಸ್ಲಿಂ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರ ಗುಂಪೊಂದು ಹಲ್ಲೆ ನಡೆಸಿ, ಅಪಹರಿಸಿರುವ ದೂರು ದಾಖಲಾಗಿದೆ. ಮಾರ್ಚ್ 18ರಂದು ಸಂಜೆ ಉಜಿರೆ ಜಾತ್ರಾ ಮೈದಾನದಲ್ಲಿ ಈ ಘಟನೆ ನಡೆದಿದೆ. ಮುಸ್ಲಿಂ ಬಾಲಕನು ತನ್ನ ಹಿಂದೂ ಸ್ನೇಹಿತೆಯರೊಂದಿಗೆ ಜಾತ್ರೆ ವೀಕ್ಷಿಸುತ್ತಿದ್ದನು. ಈ ವೇಳೆ…

Read More