All posts by nagaraj11081993

ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ!; ರಾಹುಕಾಲದ ಎಚ್ಚರಿಕೆ ಯಾರಿಗೆ? – Kannada News | TV9 Kannada Horoscope Today: Effects on All 12 Zodiac Signs by Basavaraj Guruji

ಬೆಂಗಳೂರು, ಜೂ.19: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 19-06-2026, ಶುಕ್ರವಾರದ ದಿನ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಪಂಚಮಿ ಮತ್ತು ಆಶ್ಲೇಷ ನಕ್ಷತ್ರವಿರುವ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ರಾಹುಕಾಲವು ಬೆಳಗ್ಗೆ 10:43 ರಿಂದ 12:19 ರ ವರೆಗೆ ಇರುತ್ತದೆ. ಸಂಕಲ್ಪ ಕಾಲ, ಸರ್ವ ಸಿದ್ಧಿ ಮತ್ತು ಶುಭ ಕಾಲವು ಮಧ್ಯಾಹ್ನ 12:20 ರಿಂದ 1:57 ರ ವರೆಗೆ ಇರುತ್ತದೆ. ಇಂದಿನ ದಿನ ಶುಕ್ರವಾರ ಮತ್ತು ಶ್ರುತ ಪಂಚಮಿ ಆಗಿದ್ದು, ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಶುಭಕರವಾಗಿದೆ. ಆಶ್ಲೇಷ ನಕ್ಷತ್ರವು ಕರ್ಕಾಟಕ ರಾಶಿಯಲ್ಲಿ ಚಂದ್ರನ ಸಂಚಾರದೊಂದಿಗೆ ಗಜಕೇಸರಿ ಯೋಗವನ್ನು ಸೃಷ್ಟಿಸಿದೆ. ಡಾ. ಬಸವರಾಜ ಗುರೂಜಿ ಅವರು ಮೇಷದಿಂದ ಮೀನದವರೆಗಿನ ದ್ವಾದಶ ರಾಶಿಗಳಿಗೆ ಗ್ರಹಗಳ ಶುಭ ಫಲಗಳು, ಆರೋಗ್ಯ, ಉದ್ಯೋಗ, ಆರ್ಥಿಕ ಸ್ಥಿತಿ, ಮತ್ತು ಸಂಬಂಧಗಳ ಕುರಿತು ವಿವರವಾದ ಭವಿಷ್ಯವನ್ನು ನೀಡಿದ್ದಾರೆ. ಪ್ರತಿಯೊಂದು ರಾಶಿಗೆ ಅದೃಷ್ಟ ಸಂಖ್ಯೆ, ಶುಭ ಬಣ್ಣ ಮತ್ತು ಜಪಿಸಬೇಕಾದ ಮಂತ್ರವನ್ನೂ ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರ ವ್ಯವಹಾರ ಹಲವು ತಿರುವುಗಳಿಂದ ಇರಲಿದೆ.. – Kannada News | Dina Rashi Bhavishya June 19, 2026: Daily Horoscope Predictions for Friday

ಮೇಷ ರಾಶಿ :

ಇಂದು ಆರ್ಥಿಕ ಸಹಾಯಕ್ಕಾಗಿ ನಿಮ್ಮನ್ನು ಯಾರಾದರೂ ಕೇಳಬಹುದು. ಹಗಲು ಪ್ರಯಾಣದಿಂದ ನಿಮ್ಮ ಮಾನಸಿಕ ಶಕ್ತಿ ಹೆಚ್ಚಾಗುವುದು. ಮುಂದಿನ ಹಾದಿಗೆ ದಾರಿ ತೋರುವುದು. ಆದರೆ ಕೆಲವೊಮ್ಮೆ ಒತ್ತಡದ ಸಂದರ್ಭಗಳು ಎದುರಾಗಬಹುದು. ಆದರೆ, ನಿಮ್ಮ ಆಂತರಿಕ ಶಕ್ತಿ ಅದನ್ನು ನಿಭಾಯಿಸಬಲ್ಲದು. ಹಣದ ವ್ಯವಹಾರಗಳಲ್ಲಿ ದೃಢವಾಗಿರಿ. ಕೊಡುಕೊಳ್ಳುವ ವ್ಯವಹಾರದಲ್ಲಿ ಸಣ್ಣ ಬೇಸರವಾಗಬಹುದು. ವಿವಾಹದ ಮಾತುಕತೆ ನಡೆಯಬಹುದು. ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಿರಿ.

ವೃಷಭ ರಾಶಿ :

ಹಣದ ಉಳಿತಾಯದಿಂದ ಅನಿವಾರ್ಯವಾದ ಆಭರಣಗಳನ್ನು ಖರೀದಿಸುವಿರಿ. ನಿಮ್ಮನ್ನು ಬೇರೆಯರಿಗಿಂತ ವಿಭಿನ್ನವನ್ನಾಗಿ ತೋರಿಸಬಹುದು. ಆದರೆ, ಪ್ರತಿಯೊಂದು ಮಾತು ಎಣಿಕೆಯಿಂದ ಮಾತಾಡಿ. ಬೇರೆವರಿಗಿಂತ ಭಿನ್ನವಾಗಿರಲು ಇಷ್ಟಪಡುವಿರಿ. ಹಣಕಾಸಿನಲ್ಲಿ ಹೊಸ ದಿಕ್ಕು ಕಂಡುಬರುವ ಸಾಧ್ಯತೆ ಇದೆ. ಸ್ವಾಭಿಮಾನಕ್ಕೆ ಧಕ್ಕೆಯಾಗಬಹುದು. ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ ನೀವು ಕಿವಿಯಾಗಬೇಕಾದೀತು.

ಮಿಥುನ ರಾಶಿ :

ನಿಮ್ಮ ನಷ್ಟವನ್ನು ಮರೆಮಾಚಲು ತಂತ್ರವನ್ನು ಹೂಡುವಿರಿ. ಕೆಲಸದಲ್ಲಿ ಸಹೋದ್ಯೋಗಿಗಳಿಂದ ಬೆಂಬಲ ಸಿಗಬಹುದು. ನಿಮ್ಮೊಳಗಿನ ಪ್ರಪಂಚ ನಿಮ್ಮನ್ನು ದೂಡಿ ಹೊರಹಾಕಬಹುದು. ಮನಸ್ಸಿನಲ್ಲಿ ಗಾಬರಿಯ ಸ್ಥಿತಿಯನ್ನು ನಿವಾರಿಸಿಕೊಳ್ಳಿ. ಮನೆಯಲ್ಲಿನ ಪರಿಸ್ಥಿತಿಯಲ್ಲಿ ಸುಧಾರಣೆ ಸಾಧ್ಯ. ಅಳುಕುವ ಅವಶ್ಯಕತೆ ಇಲ್ಲ.‌ ಎಲ್ಲವೂ ನಿಮಗೆ ತಿಳಿದೇ ಆಗಬೇಕು ಎನ್ನುವ ಹಠವಿರುವುದು. ಸಹೋದರನಿಂದ ಯಾವ ಸಹಕಾರವನ್ನು ನಿರೀಕ್ಷಿಸದೇ ಕಾರ್ಯಪ್ರವೃತ್ತರಾಗುವಿರಿ.

ಕರ್ಕಾಟಕ ರಾಶಿ :

ಹೊಸದಾಗಿ ನಿಮ್ಮ ಸಹವಾಸಕ್ಕೆ ಸೇರಿದವರ ಮೇಲೆ ಹದ್ದಿನ ಕಣ್ಣಿಡಿ. ನಿಮ್ಮ ಉತ್ಸಾಹ ಇತರರನ್ನೂ ಪ್ರೇರೇಪಿಸಬಹುದು. ಕೆಲಸಗಳಲ್ಲಿ ಹೆಚ್ಚಿನ ಗಮನ ಬೇಕಾಗಿರುತ್ತದೆ. ಆದರೆ, ಸಮಯ ಸರಿಯಾಗಿ ಬಳಸಿಕೊಳ್ಳುವುದು ಮುಖ್ಯ. ಹಣದ ವಿಚಾರದಲ್ಲಿ ನಿರ್ಧಾರ ಸರಿಯಾಗಿ ತೆಗೆದುಕೊಳ್ಳಿ. ಆತುರದ ನಿರ್ಧಾರಕ್ಕೆ ನಷ್ಟವೊಂದೇ ಫಲ. ದ್ವಿಚಕ್ರ ವಾಹನದಲ್ಲಿ ಆಯ ತಪ್ಪಬಹುದು. ಅದನ್ನು ಯೋಜನೆ ಗೊಳಿಸಿ. ಸಭ್ಯತೆಯ ಮಾತಿನಿಂದ ನೀವು ಕೆಲಸಗಳನ್ನು ಮಾಡಿಸಿಕೊಳ್ಳುವಿರಿ.

ಸಿಂಹ ರಾಶಿ :

ನಿಮ್ಮ ಇಷ್ಟದ‌ ಕಾರ್ಯವನ್ನು ಮಾಡಿ ಸಂತೋಷಗೊಳ್ಳುವಿರಿ. ನಿಮ್ಮ ಶ್ರಮಕ್ಕೆ ಕೂಡಲೇ ಫಲ ಸಿಗುತ್ತದೆ ಎನ್ನುವ ಧಾವಂತ‌ ಬೇಡ. ತಾಳ್ಮೆಯ ಅವಶ್ಯಕತೆ ಇದೆ. ನಿಮ್ಮ ಉತ್ಸಾಹವನ್ನು ಉಳಿಸಿಕೊಂಡು ಮುಂದೆ ಸಾಗಬೇಕು. ಹಣಕಾಸಿನ ಚಿಂತೆ ಇತ್ತು ಸಹ ಪರಿಹಾರ ದೊರೆಯಬಹುದು. ಸಲಹೆಯನ್ನು ಸ್ವೀಕರಿಸಿ ಕ್ರಮಬದ್ಧವಾಗಿ ಆಚರಿಸಿ.‌ ಪ್ರಯಾಣದಲ್ಲಿ ಪ್ರೇಮವಾಗುವ ಸಂಭವವಿದೆ. ಸಜ್ಜನರ ಸಹವಾಸ ಸಿಗುವುದು. ಅವರನ್ನು ಆಡಿಕೊಳ್ಳಬೇಡಿ. ಮಕ್ಕಳು ನಿಮ್ಮನ್ನು ಕಂಡು ಹಾಸ್ಯ ಮಾಡಿಯಾರು.‌

ಕನ್ಯಾ ರಾಶಿ :

ನಿಮಗೆ ಇಂದು ಏನಾದರೂ ಹೊಸತನ್ನು ಮಾಡಬೇಕು ಎಂದು ಅನ್ನಿಸುವುದು. ಸ್ಪಷ್ಟತೆಯ ಜೊತೆ ಮುಂದೆ ಸಾಗಿರಿ. ನೀವು ಕುಟುಂಬದ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸಿ ಗೊತ್ತಾಗುವುದು. ಹಲವು ರೀತಿಯ ವಿರೋಧವನ್ನು ನೀವು ತೆಗೆದುಕೊಳ್ಳುವ ತೀರ್ಮಾನದಿಂದ ಬರಲಿದೆ. ಭೂ ವ್ಯವಹಾರವು ಇತ್ಯರ್ಥ ಆಗುವುದು ಕಷ್ಟ. ಚೆನ್ನಾಗಿ ಮಾತನಾಡುತ್ತೇನೆಂದು ಬೇರೆಯವರಿಗೆ ನೋವನ್ನು ಕೊಡಬೇಡಿ. ನಗುಮುಖದಿಂದ ಇಂದು ಇದ್ದರು ನಿಮ್ಮ ಬಳಿ ಅನೇಕರು ಮಾತನಾಡಲು ಬರಬಹುದು.

ತುಲಾ ರಾಶಿ :

ನಿಮ್ಮ ಮಾನಸಿಕ ಹಿತಕ್ಕಾಗಿ ಕೆಲಸ ಕೆಲಸ ಮಾಡುವಿರಿ. ಕೆಲಸಗಳಲ್ಲಿ ವಿಶಿಷ್ಟ ಯಶಸ್ಸುಗಳು ಸಂಭವಿಸಬಹುದು. ಆದರೆ, ಕೆಲಸದ ಒತ್ತಡ ಜಾಸ್ತಿಯಾಗಬಹುದು. ಹಣದ ವ್ಯವಹಾರಗಳಲ್ಲಿ ನಿರ್ಣಯ ದೃಢವಾಗಿರಲಿ. ಸ್ವಭಾವವನ್ನು ತಿದ್ದಿಕೊಳ್ಳಲಾಗದೇ ಎಲ್ಲರಿಂದ ನಿಂದನೆಗೆ ಒಳಗಾಗುವಿರಿ. ಸಮಾಜದಲ್ಲಿ ಉತ್ತಮ ಸ್ಥಾನವನ್ನು ಪಡೆಯುವ ಸಾಧ್ಯತೆ ಇದೆ. ನಿಮ್ಮ ಶ್ರಮದ ಬಗ್ಗೆ ಕಹಿಯಾದ ಮಾತುಗಳು ಕೇಳಿಬರಬಹುದು. ಸಾಮಾಜಿಕ ಕಾರ್ಯದಲ್ಲಿ ಅವಮಾನದ ಕಾರಣದಿಂದ ಅದನ್ನು ಮಾಡಲು ಹಿಂದೇಟು ಹಾಕುವಿರಿ.

ವೃಶ್ಚಿಕ ರಾಶಿ :

ಇಂದು ವೃತ್ತಿಯಲ್ಲಿ ಸಮಯ ಬದಲಾವಣೆ ಆಗುವ ಸಾಧ್ಯತೆ ಇದೆ‌. ಸೌಂದರ್ಯದ ಸಾಧನಗಳನ್ನು ಸ್ತ್ರೀಯರು ಹೆಚ್ಚು ಬಳಸುವರು. ಮಕ್ಕಳ ಕಡೆ ಗಮನ ಹೆಚ್ಚು ಬೇಕಾಗುವುದು. ನಿರುತ್ಸಾಹದ ಮಾತಿಗೆ ಕಿವಿಯಾಗದೇ ಇದ್ದರೆ ಒಳ್ಳೆಯದು. ಕೆಲಸವು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತದೆ. ದಂಪತಿಗಳ ನಡುವೆ ಸಾಮರಸ್ಯವಿರುವುದು. ಬೇಸರವಾಗಿ ಎಲ್ಲವೂ ಅಶಾಶ್ವತ ಎಂದೆನಿಸಬಹುದು. ಗೆಳೆತನಕ್ಕೆ ಹೊಸ ವ್ಯಕ್ತಿಗಳು ಸಿಗುವರು.‌

ಧನು ರಾಶಿ :

ಇಂದು ನಿಮ್ಮ ಪರೀಕ್ಷೆಗೆಂದು ಕೆಲವು ಘಟನೆಗಳು ನಡೆಯಬಹುದು. ಇಂದಿನ‌ ಯೋಜನೆಗಳು ಕೊನೆಯ ಕ್ಷಣದಲ್ಲಿ ಬದಲಾಗಬಹುದು.‌ ನಿಮ್ಮ ಕಾರ್ಯಕ್ಷಮತೆ ಇತರರನ್ನು ಪ್ರಭಾವಿತ ಮಾಡುತ್ತದೆ. ಹಿರಿಯರಿಂದ ಮೆಚ್ಚುಗೆ ಸಿಗಬಹುದು. ಹಣಕಾಸಿನ ಪರಿಸ್ಥಿತಿ ಸಮೃದ್ಧವಾಗಬಹುದು. ವಾಹನ ಚಾಲನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವುದು ಉತ್ತಮ. ಮನಸ್ಸು ಹೇಳಿದಂತೆ ಕೇಳಬೇಡಿ, ಸಮಾಧಾನದಿಂದ ಇರಿ. ನೀವು ಉದ್ಯೋಗವನ್ನು ವಿನಮ್ರಭಾವದಿಂದ ನಡೆಸುವಿರಿ.

ಮಕರ ರಾಶಿ :

ನೀವಾಡುವ ಮಾತುಗಳು ನಿಮಗೆ ಮಾತ್ರ ಖುಷಿ ಕೊಡಬಹುದು. ಇಂದು ನಿಮಗೆ ಸಿಗುವ ಬೆಂಬಲ ಇಲ್ಲವಾಗುವುದು. ಕೆಲಸದಲ್ಲಿ ಬದಲಾವಣೆ ಅಥವಾ ಹೊಸ ಅವಕಾಶ ಸಿಗಬಹುದು. ಹಣಕಾಸಿನ ವಿಷಯಗಳಲ್ಲಿ ತಾಳ್ಮೆಯಿಂದ ನಡೆದುಕೊಳ್ಳಿ. ಮನಸ್ಸನ್ನು ಕಡಿಮಾಣ ಹಾಕಿ ನಿಲ್ಲಿಸುವುದು ಉತ್ತಮ. ಮಕ್ಕಳು ಉತ್ಸಾಹದಿಂದ ದಿನವನ್ನು ಪ್ರಾರಂಭಿಸಲಿದ್ದು ಅವರಿಗೆ ಕೊಡಬೇಕಾದ ತಿಳಿವಳಿಕೆಯನ್ನು ಆಗಲೇ ಕೊಡುವುದು ಉತ್ತಮ. ನಿರುಪಯೋಗಿ ವಸ್ತುಗಳನ್ನು ನೀವು ದೂರ ಮಾಡುವಿರಿ.

ಕುಂಭ ರಾಶಿ :

ಹಿರಿಯರ ಆದೇಶದಂತೆ ಮನೆಯಲ್ಲಿ ಮಂಗಲ ಕಾರ್ಯವನ್ನು ಮಾಡುವಿರಿ. ಸ್ನೇಹಿತರಿಂದ ನೆರವು ಸಿಗಬಹುದು. ಏನೇ ಮಾಡಿದರೂ ವಿರೋಧಿಗಳ ಮೀರಿಸುವ ಸಾಮರ್ಥ್ಯ ಬರದು. ಭವಿಷ್ಯದ ಬಗ್ಗೆ ಚಿಂತೆ ಮಾಡದಿರಿ, ಕಾಲ ಸರಿದಂತೆ ಪರಿಹಾರ ಸಿಗುತ್ತದೆ. ಕೆಲವು ಸಮಯದಲ್ಲಿ ಮನಸ್ಸಿಗೆ ನೆಮ್ಮದಿ ಸಿಗಬಹುದು. ನಿಮ್ಮಷ್ಟಕ್ಕೆ ಕಾರ್ಯದಲ್ಲಿ ಮಗ್ನರಾಗಿರುವಿರಿ. ಆಯಾಸವಾದರೆ ವಿಶ್ರಾಂತಿಯ ಜೊತೆ ಕೆಲಸವನ್ನು ಮಾಡಿ. ಗುರಿಯೆಡಗೆ ಪ್ರಯತ್ನವು ನಿರಂತರವಾಗಿರಲಿ.

ಮೀನ ರಾಶಿ :

ಇಂದು ಅನ್ಯರಿಗೆ ಕೊಡಬೇಕಾದ ವಸ್ತುವನ್ನು ಇಟ್ಟುಕೊಳ್ಳುವುದು ಬೇಡ. ಉದ್ಯೋಗಸ್ಥರಿಗೆ ಬಡ್ತಿಯ ಸಾಧ್ಯತೆ ಇದೆ. ಕೆಲವರು ನಿಮ್ಮ ಪ್ರತಿಭೆಯನ್ನು ಗುರುತಿಸುತ್ತಾರೆ. ಇನ್ನೊಬ್ಬರ ಬಗ್ಗೆ ಅಂದುಕೊಂಡಿದ್ದು ಸತ್ಯವಾಗಲಿದೆ. ಆತ್ಮವಿಶ್ವಾಸದಿಂದ ಮುಂದೆ ಸಾಗಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಿ. ಇಂದು ನಿಮ್ಮ ಮಹತ್ತ್ವದ ಕಾರ್ಯವು ಕೈಗೂಡಬಹುದು. ಹಳೆಯ ಸಮಾಚಾರವನ್ನು ಪುನಃ ನೆನಪಿಸಿಕೊಳ್ಳುವಿರಿ. ಮಾತನ್ನು ಕಡಿಮೆ‌ ಮಾಡಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಮೃಗಶಿರಾ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಆಶ್ಲೇಷ, ಯೋಗ : ವೃದ್ಧಿ, ಕರಣ : ತೈತಿಲ, ಸೂರ್ಯೋದಯ – 05 – 55 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:45 – 12:21, ಯಮಗಂಡ ಕಾಲ 15:34 – 17:10, ಗುಳಿಕ ಕಾಲ 07:32 – 09:08

– ಲೋಹಿತ್ ಹೆಬ್ಬಾರ್ – 8762924271 (what’s app only)

Source link

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ – Kannada News | Priya Mitra Narendra Jai Hind French President Macrons farewell message for PM Modi in Hindi Video Goes Viral

ಪ್ಯಾರಿಸ್, ಜೂನ್ 18: ಭಾರತದ ಪ್ರಧಾನಿ ನರೇಂದ್ರ ಮೋದಿ (PM Modi in France) ಫ್ರಾನ್ಸ್ ಪ್ರವಾಸ ಮುಗಿಸಿದ್ದಾರೆ. ಈ ವೇಳೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಳ ಆತ್ಮೀಯವಾದ ಬೀಳ್ಕೊಡುಗೆ ನೀಡಿರುವುದು ಜಗತ್ತಿನ ಗಮನ ಸೆಳೆದಿದೆ. ಭಾರತದ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಪ್ರಧಾನಿ ಮೋದಿಯವರಿಗೆ ಹಿಂದಿಯಲ್ಲೇ ವಿದಾಯ ಹೇಳಿರುವ ವಿಡಿಯೋ ಭಾರೀ ವೈರಲ್ ಆಗಿದೆ.

ಜಿ7 ಶೃಂಗಸಭೆಯ ಪ್ರವಾಸದ ಕೊನೆಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ವಿಡಿಯೋ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮ್ಯಾಕ್ರನ್, “ಪ್ರಿಯ ಮಿತ್ರ ನರೇಂದ್ರ, ನಿಮ್ಮ ಈ ಭೇಟಿಯಿಂದ ನನಗೆ ತುಂಬಾ ಸಂತೋಷವಾಗಿದೆ, ನಿಮ್ಮನ್ನು ಸ್ವಾಗತಿಸುತ್ತಾ, ಫ್ರಾನ್ಸ್ ಮತ್ತು ಭಾರತದ ಸ್ನೇಹ ಅಮರವಾಗಲಿ. ಜೈ ಹಿಂದ್” ಎಂದು ಹಿಂದಿ ಭಾಷೆಯಲ್ಲಿ ಮಾತನಾಡಿದ್ದಾರೆ.

“ನಾನು ಹೇಳಿದ್ದು ಸರಿಯಾಗಿದೆ ಎಂದು ಭಾವಿಸುತ್ತೇನೆ. ನಿಮ್ಮ ಭೇಟಿಗೆ ಧನ್ಯವಾದಗಳು. ನಮ್ಮ ಸ್ನೇಹಕ್ಕಾಗಿ ಧನ್ಯವಾದಗಳು. ಇದೊಂದು ಅತ್ಯಂತ ಫಲಪ್ರದ ಭೇಟಿಯಾಗಿದೆ. ಫ್ರಾನ್ಸ್ ನಿಮ್ಮನ್ನು ಪ್ರೀತಿಸುತ್ತದೆ. ಮುಂಬರುವ ಫೆಬ್ರವರಿಯಲ್ಲಿ ನಾವು ನಿಮ್ಮನ್ನು ಮತ್ತೊಮ್ಮೆ ಭೇಟಿಯಾಗಲು ಉತ್ಸುಕರಾಗಿದ್ದೇವೆ. ಜೈ ಹಿಂದ್” ಎಂದು ಬಳಿಕ ಇಂಗ್ಲಿಷ್​​ನಲ್ಲಿ ಮ್ಯಾಕ್ರನ್ ಮಾತನಾಡಿದ್ದಾರೆ.

(Video Source: Elysee Palace via XP Division, MEA)

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜಗತ್ತಿನಲ್ಲೇ ಅತಿ ವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕತೆ ನಮ್ಮದು; ಪ್ಯಾರಿಸ್‌ನ ಭಾರತೀಯರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ – Kannada News | Worlds Fastest Growing Economy PM Modi Hails India At Paris diaspora event

ಪ್ಯಾರಿಸ್, ಜೂನ್ 18: ಪ್ರಧಾನಿ ನರೇಂದ್ರ ಮೋದಿ (PM Modi in France) ಫ್ರಾನ್ಸ್​ ಪ್ರವಾಸದ ಕೊನೆಯ ಹಂತವಾಗಿ ಪ್ಯಾರಿಸ್​​ಗೆ ಭೇಟಿ ನೀಡಿದ್ದಾರೆ. ಇಲ್ಲಿ ಮೋದಿಗಾಗಿ “ಬೊಂಜೊರ್ ಮೋದಿ” ಎಂಬ ವಿಶೇಷ ಕಾರ್ಯಕ್ರಮವನ್ನು ಭಾರತೀಯ ವಲಸಿಗರು ಆಯೋಜಿಸಿದ್ದರು. ಇದರಲ್ಲಿ ಪಾಲ್ಗೊಂಡ ಮೋದಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪ್ರಸ್ತುತ ಭಾರತವು ತಂತ್ರಜ್ಞಾನ ಮತ್ತು ನಾವೀನ್ಯತೆಯ ಜಾಗತಿಕ ಕೇಂದ್ರವಾಗಿ ಹೇಗೆ ಬದಲಾಗುತ್ತಿದೆ ಎಂಬುದನ್ನು ಮೋದಿ ವಿವರಿಸಿದರು. ಭಾರತ ಭವಿಷ್ಯದ ಸಿದ್ಧತೆಯನ್ನು ಮಾತ್ರ ಮಾಡುತ್ತಿಲ್ಲ, ಅದು ಭವಿಷ್ಯವನ್ನು ರೂಪಿಸುತ್ತಿದೆ ಎಂದು ಹೇಳಿದರು. ಕಳೆದ ಒಂದು ದಶಕದಲ್ಲಿ ಭಾರತವು ತಂತ್ರಜ್ಞಾನದ ಸಹಾಯದಿಂದ ದೊಡ್ಡ ಆರ್ಥಿಕ ಮತ್ತು ಸಾಮಾಜಿಕ ಪರಿವರ್ತನೆಗೆ ಸಾಕ್ಷಿಯಾಗಿದೆ ಎಂದರು.

“ಜಗತ್ತಿನ ಒಟ್ಟು ಡಿಜಿಟಲ್ ವಹಿವಾಟುಗಳಲ್ಲಿ ಶೇ. 50ರಷ್ಟು ಭಾರತದಲ್ಲೇ ನಡೆಯುತ್ತಿವೆ. ಭಾರತದ ಹೆಮ್ಮೆಯ ‘ಯುಪಿಐ’ ತಂತ್ರಜ್ಞಾನ ಈಗ ಫ್ರಾನ್ಸ್‌ನಲ್ಲೂ ಲಭ್ಯವಿರುವುದನ್ನು ನೋಡಿ ಖುಷಿಯಾಗುತ್ತಿದೆ. ತಂತ್ರಜ್ಞಾನದ ಲಾಭ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿದಾಗಲೇ ನಿಜವಾದ ಪ್ರಗತಿ ಸಾಧ್ಯ. ಫ್ರಾನ್ಸ್‌ನಲ್ಲಿ ನೆಲೆಸಿರುವ ಭಾರತೀಯರು ಎರಡು ದೇಶಗಳ ನಡುವಿನ ಬಾಂಧವ್ಯದ ಜೀವಂತ ಸೇತುವೆಯಾಗಿದ್ದಾರೆ. ಅವರು ತಮ್ಮ ಕಠಿಣ ಪರಿಶ್ರಮದಿಂದ ಭಾರತದ ಸಂಸ್ಕೃತಿ ಮತ್ತು ಮೌಲ್ಯಗಳನ್ನು ವಿದೇಶಿ ಮಣ್ಣಿನಲ್ಲಿ ಎತ್ತಿಹಿಡಿಯುತ್ತಿದ್ದಾರೆ” ಎಂದು ಮೋದಿ ಶ್ಲಾಘಿಸಿದರು.

ಭಾರತ-ಫ್ರಾನ್ಸ್ ಸಂಬಂಧಗಳನ್ನು ಬಲಪಡಿಸುವಲ್ಲಿ ಅನಿವಾಸಿ ಭಾರತೀಯರ ಕೊಡುಗೆಯನ್ನು ಶ್ಲಾಘಿಸಿದ ಅವರು, ವಿದೇಶದಲ್ಲಿ ವಾಸಿಸುತ್ತಿರುವ ಸಮುದಾಯದಲ್ಲಿ ಪ್ರತಿಫಲಿಸುತ್ತಿರುವ ಭಾರತದ ಸಾಂಸ್ಕೃತಿಕ ವೈವಿಧ್ಯತೆಯನ್ನು ಕೊಂಡಾಡಿದರು. “ಪ್ಯಾರಿಸ್ ಬೆಳಕಿನ ನಗರಿ. ಇದು ಬಣ್ಣಗಳ ನಗರ. ಇಲ್ಲಿ ಆಲೋಚನೆಗಳಿವೆ ಮತ್ತು ನಾವೀನ್ಯತೆಗೆ ಸ್ಫೂರ್ತಿಯಿದೆ. ಭಾರತದ ವಿವಿಧ ರಾಜ್ಯಗಳಿಂದ ಬಂದಿರುವ ನೀವೆಲ್ಲರೂ ಈ ನಗರವನ್ನು ಇನ್ನಷ್ಟು ಸುಂದರಗೊಳಿಸಿದ್ದೀರಿ. ನೀವು ಇದಕ್ಕೆ ಹೊಸ ಬಣ್ಣಗಳನ್ನು ತುಂಬಿದ್ದೀರಿ. ಇಲ್ಲಿ ಕೆಲವರು ತಮಿಳರು, ಕೆಲವರು ಪಂಜಾಬಿಗಳು, ಕೆಲವರು ಗುಜರಾತಿಗಳು, ಕೆಲವರು ಮರಾಠಿಗರು ಮತ್ತು ಕೆಲವರು ಬೆಂಗಾಲಿಗಳಿದ್ದಾರೆ. ಭಾರತದ ಪ್ರತಿಯೊಂದು ಮೂಲೆಯೂ ಇಲ್ಲಿ ಪ್ರತಿನಿಧಿಸಲ್ಪಟ್ಟಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: ಪ್ಯಾರಿಸ್‌ಗೆ ಪ್ರಧಾನಿ ಮೋದಿ ಆಗಮನ: ಜಾಗತಿಕ ಪ್ರಗತಿಗೆ ಭಾರತ-ಫ್ರಾನ್ಸ್ ಸಹಭಾಗಿತ್ವ ಅತ್ಯಗತ್ಯ

ದ್ವಿಪಕ್ಷೀಯ ಬಾಂಧವ್ಯವನ್ನು ಗಟ್ಟಿಗೊಳಿಸುವಲ್ಲಿ ಭಾರತೀಯ ಸಮುದಾಯದ ಪಾತ್ರವನ್ನು ಒತ್ತಿಹೇಳಿದ ಪ್ರಧಾನಿ ಮೋದಿ, “ಅನಿವಾಸಿ ಭಾರತೀಯರು ಭಾರತ ಮತ್ತು ಫ್ರಾನ್ಸ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯ ಪ್ರಮುಖ ಪಿಲ್ಲರ್ ಆಗಿ ಹೊರಹೊಮ್ಮಿದ್ದಾರೆ” ಎಂದರು.


ಕಳೆದ ದಶಕದಲ್ಲಿ ಭಾರತ ಸಾಧಿಸಿದ ಪ್ರಗತಿಯನ್ನು ಎತ್ತಿಹಿಡಿದ ಅವರು, ಕಳೆದ 12 ವರ್ಷಗಳು ದೇಶದ 140 ಕೋಟಿ ಜನರ ಅಪಾರ ಸಾಮರ್ಥ್ಯವನ್ನು ಜಗತ್ತಿಗೆ ಸಾಬೀತುಪಡಿಸಿವೆ ಎಂದರು. “ಈ ಅವಧಿಯಲ್ಲಿ ಭಾರತದ ಜಿಡಿಪಿ (GDP) ದ್ವಿಗುಣಗೊಂಡಿದೆ. ವಿಮಾನ ನಿಲ್ದಾಣಗಳ ಸಂಖ್ಯೆ ದುಪ್ಪಟ್ಟಾಗಿದೆ. ವಿಶ್ವವಿದ್ಯಾಲಯಗಳ ಸಂಖ್ಯೆಯೂ ದ್ವಿಗುಣಗೊಂಡಿದೆ. ಹೆದ್ದಾರಿ ನಿರ್ಮಾಣದ ವೇಗ ದುಪ್ಪಟ್ಟಾಗಿದೆ” ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮೋದಿ ಬಹಳ ಸುಂದರ ವ್ಯಕ್ತಿ, ಕೆಲಸದ ವಿಷಯದಲ್ಲಿ ಮಾತ್ರ ಕಿಲ್ಲರ್; ಗೆಳೆಯನನ್ನು ಹೊಗಳಿದ ಟ್ರಂಪ್

“ಕಳೆದ 12 ವರ್ಷಗಳಲ್ಲಿ ಭಾರತದ ರಫ್ತು 35 ಪಟ್ಟು ಹೆಚ್ಚಾಗಿದೆ. ಭಾರತದಲ್ಲಿ ಮೊಬೈಲ್ ಫೋನ್ ಉತ್ಪಾದನಾ ಘಟಕಗಳು ನೂರು ಪಟ್ಟು ಹೆಚ್ಚಾಗಿವೆ. ಭಾರತವು ಇಂದು ವಿಶ್ವದ ಎರಡನೇ ಅತಿ ದೊಡ್ಡ ಮೊಬೈಲ್ ಫೋನ್ ಉತ್ಪಾದಕ ದೇಶವಾಗಿದೆ. ಈ ತೀವ್ರ ವೇಗ ಮತ್ತು ಪ್ರಗತಿಯ ಫಲವಾಗಿ, ಭಾರತವು ಇಂದು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಜಾರ್ಖಂಡ್ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್‌ಗೆ ಮುಖಭಂಗ, ಕ್ರಾಸ್ ವೋಟಿಂಗ್​ನಿಂದ ಗೆದ್ದು ಬೀಗಿದ ಪರಿಮಳ್ ನತ್ವಾಣಿ – Kannada News | BJP backed candidate Parimal Nathwani wins Jharkhand Rajya Sabha polls after cross voting big jolt to Congress

ರಾಂಚಿ, ಜೂನ್ 18: ಜಾರ್ಖಂಡ್‌ನಲ್ಲಿ ನಡೆದ 2 ರಾಜ್ಯಸಭಾ ಚುನಾವಣೆಗಳ (Rajya Sabha Election Results) ಫಲಿತಾಂಶ ಪ್ರಕಟವಾಗಿದೆ. ಎನ್‌ಡಿಎ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಪರಿಮಳ್ ನತ್ವಾಣಿ ಒಂದು ಸ್ಥಾನವನ್ನು ಗೆದ್ದಿದ್ದಾರೆ. ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಅಭ್ಯರ್ಥಿ ಬೈದ್ಯನಾಥ್ ರಾಮ್ ಇನ್ನೊಂದು ಸ್ಥಾನವನ್ನು ಗೆದ್ದರು. ಕಾಂಗ್ರೆಸ್ ಅಭ್ಯರ್ಥಿ ಪ್ರಣವ್ ಝಾ ಸೋತಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ 3 ಮತಗಳು ತಿರಸ್ಕೃತಗೊಂಡವು. ಪರಿಮಳ್ ನತ್ವಾಣಿ ಸಂಸತ್ತಿನ ಮೇಲ್ಮನೆಗೆ ಆಯ್ಕೆಯಾಗುತ್ತಿರುವುದು ಇದು ನಾಲ್ಕನೇ ಬಾರಿ. ಅವರು 28 ಮತಗಳನ್ನು ಪಡೆದರೆ ಕಾಂಗ್ರೆಸ್ ಅಭ್ಯರ್ಥಿ ಕೇವಲ 20 ಮತಗಳನ್ನು ಪಡೆದರು.

2 ಸ್ಥಾನಗಳಿಗೆ ನಡೆದ ಈ ಚುನಾವಣೆಯಲ್ಲಿ ಮೂವರು ಅಭ್ಯರ್ಥಿಗಳು ಕಣದಲ್ಲಿದ್ದರು. ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಅಭ್ಯರ್ಥಿ ಬೈದ್ಯನಾಥ್ ರಾಮ್ ಮತ್ತು ಬಿಜೆಪಿಯ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಪರಿಮಳ್ ನತ್ವಾಣಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಣವ್ ಝಾ ಹೀನಾಯ ಸೋಲು ಅನುಭವಿಸಿದ್ದಾರೆ. ಜಾರ್ಖಂಡ್‌ನಿಂದ ರಾಜ್ಯಸಭೆ ಪ್ರವೇಶಿಸಲು ಒಬ್ಬ ಅಭ್ಯರ್ಥಿಗೆ ಕನಿಷ್ಠ 28 ಮತಗಳ ಅಗತ್ಯವಿತ್ತು. ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನವು ಎನ್‌ಡಿಎ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಪರಿಮಳ್ ನತ್ವಾಣಿ ಅವರ ಗೆಲುವಿಗೆ ದಾರಿ ಮಾಡಿಕೊಟ್ಟಿತು.

ಇದನ್ನೂ ಓದಿ: ಕಾಂಗ್ರೆಸ್​ ಎಡವಟ್ಟಿನಿಂದ ಮಧ್ಯಪ್ರದೇಶದ ಎಲ್ಲ ರಾಜ್ಯಸಭಾ ಸ್ಥಾನಗಳೂ ಬಿಜೆಪಿ ತೆಕ್ಕೆಗೆ

ಬಿಜೆಪಿ ಬೆಂಬಲಿತ ಪರಿಮಳ್ ನತ್ವಾಣಿ ಒಟ್ಟು 30 ಮತಗಳನ್ನು ಪಡೆದಿದ್ದರು. ಆದರೆ ಅವರಲ್ಲಿ 2 ಮತಗಳು ಅಸಿಂಧು ಎಂದು ಘೋಷಣೆಯಾದ ಹಿನ್ನೆಲೆಯಲ್ಲಿ ಅವರ ಅಧಿಕೃತ ಮತಗಳ ಸಂಖ್ಯೆ 28ಕ್ಕೆ ತಲುಪಿತು. ಇದು ಗೆಲುವಿಗೆ ಬೇಕಾದ ನಿಖರ ಸಂಖ್ಯೆಯಾಗಿದ್ದರಿಂದ ಅವರು ಜಯಶಾಲಿ ಎಂದು ಘೋಷಿಸಲ್ಪಟ್ಟರು.

ಜೆಎಂಎಂ ಅಭ್ಯರ್ಥಿ ಬೈದ್ಯನಾಥ್ ರಾಮ್ ಅವರು 1 ಮತ ತಿರಸ್ಕೃತಗೊಂಡ ನಂತರ ಒಟ್ಟು 30 ಮತಗಳನ್ನು ಪಡೆದು ಸುಲಭವಾಗಿ ಆಯ್ಕೆಯಾದರು. ಮೈತ್ರಿಯಿದ್ದರೂ ಕಾಂಗ್ರೆಸ್ ಅಭ್ಯರ್ಥಿ ಪ್ರಣವ್ ಝಾ ಅವರು ಕೇವಲ 20 ಮತಗಳನ್ನು ಪಡೆದರು. ಆಡಳಿತಾರೂಢ ಮೈತ್ರಿಕೂಟದ ಶಾಸಕರೇ ಕಾಂಗ್ರೆಸ್ ವಿರುದ್ಧ ಕ್ರಾಸ್ ವೋಟಿಂಗ್ ಮಾಡಿರುವುದು ಈ ಸೋಲಿಗೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ: ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಈ ಗೆಲುವಿನೊಂದಿಗೆ 245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಅದರ ಮಿತ್ರಪಕ್ಷಗಳ ಒಟ್ಟು ಸಂಖ್ಯಾಬಲ 153ಕ್ಕೆ ಏರಿಕೆಯಾಗಿದೆ. ಪಶ್ಚಿಮ ಬಂಗಾಳದ ಟಿಎಂಸಿ ಪಕ್ಷದ ಸುಖೇಂದು ಶೇಖರ್ ರಾಯ್, ಸುಶ್ಮಿತಾ ದೇವ್ ಸೇರಿದಂತೆ 4 ಸಂಸದರ ರಾಜೀನಾಮೆಯಿಂದಾಗಿ ಸದ್ಯ 4 ಸ್ಥಾನಗಳು ಖಾಲಿಯಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಂಗ್ಲೆಂಡ್‌ ಟೆಸ್ಟ್ ತಂಡದಿಂದ ಹೊರಬಿದ್ದ ಬೆನ್ ಸ್ಟೋಕ್ಸ್ ಹೊಸ ತಂಡಕ್ಕೆ ಎಂಟ್ರಿ – Kannada News | Ben Stokes Dropped: Nightclub Brawl Leads to England Exclusion, County Return

ಪ್ರಸ್ತುತ ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (England vs New Zealand) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ಇಂಗ್ಲೆಂಡ್‌ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಇದೀಗ ಉಭಯ ತಂಡಗಳ ನಡುವೆ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಆದರೆ ಈ ಪಂದ್ಯದಲ್ಲಿ ಇಂಗ್ಲೆಂಡ್‌ ಟೆಸ್ಟ್ ತಂಡದ ನಿಯಮಿತ ನಾಯಕ ಬೆನ್ ಸ್ಟೋಕ್ಸ್ (Ben Stokes) ಆಡುತ್ತಿಲ್ಲ. ಹೀಗಾಗಿ ಅವರ ಬದಲಿಗೆ ಜೋ ರೂಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಷ್ಟಕ್ಕೂ ಬೆನ್ ಸ್ಟೋಕ್ಸ್ ಏಕೆ ಈ ಪಂದ್ಯವನ್ನು ಆಡುತ್ತಿಲ್ಲ ಎಂಬುದಕ್ಕೆ ಕಾರಣ, ನೈಟ್ ಕ್ಲಬ್​ನಲ್ಲಿ ಬೆನ್ ಸ್ಟೋಕ್ಸ್ ಕುಡಿದು ಜಗಳವಾಡಿದ್ದು.

ಈ ಕಾರಣದಿಂದಾಗಿ ಇಂಗ್ಲೆಂಡ್ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ಅವರನ್ನು ತಂಡದಿಂದ ಕೈಬಿಡಲಾಯಿತು. ಆದಾಗ್ಯೂ, ಸ್ಟೋಕ್ಸ್ ಕ್ರಿಕೆಟ್ ಮೈದಾನಕ್ಕೆ ಮರಳಿದ್ದು, ಕೌಂಟಿ ಕ್ರಿಕೆಟ್​ನಲ್ಲಿ ಡರ್ಹಾಮ್ ತಂಡದ ಪರ ಆಡಲು ಸಜ್ಜಾಗಿದ್ದಾರೆ. ಡರ್ಹಾಮ್ ತಂಡ ಶುಕ್ರವಾರದಿಂದ ನಾರ್ಥಾಂಪ್ಟನ್ಶೈರ್ ವಿರುದ್ಧ ಕೌಂಟಿ ಚಾಂಪಿಯನ್‌ಶಿಪ್ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೆ ಸ್ಟೋಕ್ಸ್ ಜೊತೆಗೆ, ಗಸ್ ಅಟ್ಕಿನ್ಸನ್ ಕೂಡ ದೇಶೀಯ ಕ್ರಿಕೆಟ್ ಆಡಲು ಅನುಮತಿ ಪಡೆದಿದ್ದಾರೆ. ಅಟ್ಕಿನ್ಸನ್ ಗ್ಲಾಮೋರ್ಗನ್ ವಿರುದ್ಧ ಸರ್ರೆ ಪರ ಆಡಲಿದ್ದಾರೆ.

ಬೆನ್ ಸ್ಟೋಕ್ಸ್ ತಂಡದಿಂದ ಹೊರಬೀಳಲು ಕಾರಣವೇನು?

ಲಾರ್ಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧದ ಗೆಲುವಿನ ನಂತರ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಲಂಡನ್ ನೈಟ್‌ಕ್ಲಬ್‌ನಲ್ಲಿ ವಿಪರೀತ ಮದ್ಯ ಸೇವಿಸಿ ತಂಡದ ಸಹ ಆಟಗಾರ ಗಸ್ ಅಟ್ಕಿನ್ಸನ್ ಅವರೊಂದಿಗೆ ಸೇರಿ, ಅದೇ ಕ್ಲಬ್‌ನಲ್ಲಿದ್ದ ರಗ್ಬಿ ಆಟಗಾರನ ಮೇಲೆ ಹಲ್ಲೆ ನಡೆಸಿದರು. ಬೆನ್ ಸ್ಟೋಕ್ಸ್ ಅವರ ಈ ಕೃತ್ಯದ ವೀಡಿಯೊ ಸೋಶಿಯಲ್ ಮೀಡಿಯಾದಲ್ಲೂ ವೈರಲ್ ಆಗಿತ್ತು. ಇದಾದ ಬಳಿಕ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ತಕ್ಷಣ ಕ್ರಮ ಕೈಗೊಂಡು ಸ್ಟೋಕ್ಸ್ ಅವರನ್ನು ಓವಲ್ ಟೆಸ್ಟ್‌ನಿಂದ ಕೈಬಿಟ್ಟಿತು.

ಬೆನ್ ಸ್ಟೋಕ್ಸ್ ವಿವಾದ

  • ಬೆನ್ ಸ್ಟೋಕ್ಸ್ ಈ ರೀತಿಯ ವಿವಾದಕ್ಕೆ ಸಿಲುಕುತ್ತಿರುವುದು ಇದೇ ಮೊದಲಲ್ಲ. ತಮ್ಮ ವೃತ್ತಿಜೀವನದ ಆರಂಭದಿಂದಲೂ, ಅವರು ಮದ್ಯಪಾನ ಮಾಡುವ ಮೂಲಕ ಹಲವಾರು ಬಾರಿ ತಂಡದ ನಿಯಮಗಳನ್ನು ಮುರಿದಿದ್ದಾರೆ. 2011 ರಲ್ಲಿ, ಅವರು ಡರ್ಹಾಮ್‌ನಲ್ಲಿ ಪೊಲೀಸರೊಂದಿಗೆ ಕುಡಿದ ಮತ್ತಿನಲ್ಲಿ ವಾಗ್ವಾದ ನಡೆಸಿದ್ದರು. ನಂತರ ಅವರನ್ನು ಎಚ್ಚರಿಕೆ ನೀಡಿ ಬಿಡುಗಡೆ ಮಾಡಲಾಗಿತ್ತು.
  • 2013 ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಇಂಗ್ಲೆಂಡ್ ತಂಡದ ಜೊತೆಗೆ ಬೆನ್ ಸ್ಟೋಕ್ಸ್ ಮದ್ಯಪಾನ ಮಾಡುವ ಮೂಲಕ ತಂಡದ ನಿಯಮ ಉಲ್ಲಂಘಿಸಿದ ಕಾರಣ ಅವರನ್ನು ಮನೆಗೆ ಕಳುಹಿಸಲಾಗಿತ್ತು.
  • 2014 ರ ವೆಸ್ಟ್ ಇಂಡೀಸ್ ಪ್ರವಾಸದ ಸಮಯದಲ್ಲಿ ಬೆನ್ ಸ್ಟೋಕ್ಸ್ ಕೈ ಮುರಿದುಕೊಂಡಿದ್ದರು. ಕೋಪದ ಭರದಲ್ಲಿ, ಅವರು ಡ್ರೆಸ್ಸಿಂಗ್ ರೂಮ್ ಲಾಕರ್‌ಗೆ ಗುದ್ದಿದರು, ಇದರ ಪರಿಣಾಮವಾಗಿ ಕೈ ಮೂಳೆ ಮುರಿದಿತು. ಇದರ ಪರಿಣಾಮವಾಗಿ ಅವರು 2014 ರ ಟಿ20 ವಿಶ್ವಕಪ್‌ನಿಂದ ಹೊರಗುಳಿಯಬೇಕಾಯಿತು.
  • 2017 ರಲ್ಲಿ, ಬೆನ್ ಸ್ಟೋಕ್ಸ್ ಬ್ರಿಸ್ಟಲ್ ನೈಟ್‌ಕ್ಲಬ್‌ನಲ್ಲಿ ಇಬ್ಬರು ಪುರುಷರ ಮೇಲೆ ಹಲ್ಲೆ ನಡೆಸಿದರು. ಹೀಗಾಗಿ ಸ್ಟೋಕ್ಸ್​ಗೆ ದಂಡವನ್ನು ವಿಧಿಸಲಾಗಿತ್ತು. ಇದರ ಜೊತೆಗೆ ಎಂಟು ಪಂದ್ಯಗಳಿಂದ ಅವರನ್ನು ಹೊರಗಿಡಲಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:40 pm, Thu, 18 June 26

Source link

ಅಂದು ಶಿವಣ್ಣ, ಇಂದು ಧನುಷ್; ‘ಓಂ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಘೋಷಣೆ – Kannada News | Dhanush 55th movie D55 titled OM Rajkumar Periasamy Film release date first look

ಶಿವರಾಜ್​ಕುಮಾರ್ ಅವರ ವೃತ್ತಿಜೀವನದಲ್ಲಿ ‘ಓಂ’ ಸಿನಿಮಾಗೆ ವಿಶೇಷ ಸ್ಥಾನ ಇದೆ. ಉಪೇಂದ್ರ ನಿರ್ದೇಶನ ಮಾಡಿದ್ದ ಆ ಸಿನಿಮಾದ ಶೀರ್ಷಿಕೆ ಕೇಳಿದರೆ ಅಭಿಮಾನಿಗಳು ಈಗಲೂ ಥ್ರಿಲ್ ಆಗುತ್ತಾರೆ. ‘ಓಂ’ ಸಿನಿಮಾ (Om Movie) 1995ರಲ್ಲಿ ತೆರೆಕಂಡು ಸೂಪರ್ ಹಿಟ್ ಆಗಿತ್ತು. ಅಷ್ಟಕ್ಕೂ ಈಗ ಮತ್ತೆ ಆ ಸಿನಿಮಾ ಬಗ್ಗೆ ಮಾತನಾಡಲು ಕಾರಣ ಇದೆ. ತಮಿಳಿನಲ್ಲಿ ಧನುಷ್ (Dhanush) ನಟನೆಯ ಹೊಸ ಸಿನಿಮಾಗೆ ‘ಓಂ’ ಎಂದು ಶೀರ್ಷಿಕೆ ಇಡಲಾಗಿದೆ. ಇಂಥ ಪವರ್​ಫುಲ್ ಟೈಟಲ್ ಇಟ್ಟಿದ್ದಕ್ಕೆ ಸಿನಿಮಾ ಮೇಲಿನ ನಿರೀಕ್ಷೆ ಜಾಸ್ತಿ ಆಗಿದೆ.

ಇದು ಧನುಷ್ ನಟಿಸಲಿರುವ 55ನೇ ಸಿನಿಮಾ. ಈ ಚಿತ್ರವನ್ನು ಇಷ್ಟು ದಿನಗಳ ಕಾಲ ತಾತ್ಕಾಲಿಕವಾಗಿ ‘D55’ ಎಂದು ಕರೆಯಲಾಗುತ್ತಿತ್ತು. ಶೀರ್ಷಿಕೆ ಏನು ಎಂಬುದನ್ನು ತಿಳಿಯಲು ಅಭಿಮಾನಿಗಳು ಕಾದಿದ್ದರು. ಇದೀಗ ಈ ಬಹುನಿರೀಕ್ಷಿತ ಚಿತ್ರಕ್ಕೆ ಅಧಿಕೃತವಾಗಿ ಶೀರ್ಷಿಕೆ ಅನೌನ್ಸ್ ಆಗಿದೆ. ಭರ್ಜರಿ ಟೀಸರ್ ಮೂಲಕ ‘ಓಂ’ ಶೀರ್ಷಿಕೆಯನ್ನು ಅನಾವರಣ ಮಾಡಲಾಗಿದೆ.

‘ಅಮರನ್’ ಖ್ಯಾತಿಯ ರಾಜ್‌ಕುಮಾರ್ ಪೆರಿಯಸಾಮಿ ಅವರ ನಿರ್ದೇಶನದ ಈ ಚಿತ್ರವು ಇದೇ ವರ್ಷ ಅಕ್ಟೋಬರ್ 16ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿದೆ. ಧನುಷ್ ಜೊತೆಗೆ ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟ್ಟಿ, ನಟಿ ಸಾಯಿ ಪಲ್ಲವಿ ಮತ್ತು ಶ್ರೀಲೀಲಾ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವುದರಿಂದ ಈ ಚಿತ್ರದ ಹೈಪ್ ಹೆಚ್ಚಾಗಿದೆ.

‘ಓಂ’ ಸಿನಿಮಾದ ಟೀಸರ್:

ಚಿತ್ರದ ಶೀರ್ಷಿಕೆಯೊಂದಿಗೆ ಬಿಡುಗಡೆಯಾಗಿರುವ ಸಣ್ಣ ಟೀಸರ್ ಸಖತ್ ಸದ್ದು ಮಾಡುತ್ತಿದೆ. ಕತ್ತಲ ಲೋಕದ ದೃಶ್ಯಗಳು, ಹಿನ್ನೆಲೆ ಸಂಗೀತ ಮತ್ತು ರಗಡ್ ಮೇಕಿಂಗ್ ಶೈಲಿ ನೋಡಿದರೆ ಇದೊಂದು ಪಕ್ಕಾ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ಎಂಬುದು ಗೊತ್ತಾಗುತ್ತಿದೆ. ಟೀಸರ್‌ನಲ್ಲಿ ಹೆಚ್ಚೇನೂ ಕಥೆ ಬಿಟ್ಟುಕೊಟ್ಟಿಲ್ಲ. ಆದರೆ ಅಸಮಾನತೆ ಮತ್ತು ಹೋರಾಟದ ಕಥೆ ಈ ಸಿನಿಮಾದಲ್ಲಿ ಇರಬಹುದು ಎಂಬ ಅನುಮಾನ ಮೂಡಿದೆ.

ಇದನ್ನೂ ಓದಿ: ಧನುಷ್ ಜತೆ ಡೇಟಿಂಗ್ ಗಾಸಿಪ್: ಪ್ರೀತಿ ಬಗ್ಗೆ ಮನಸಾರೆ ಮಾತನಾಡಿದ ಮೃಣಾಲ್ ಠಾಕೂರ್

‘ಓಂ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್‌ನಲ್ಲಿ ಧನುಷ್ ರಗಡ್ ಅವತಾರ ತಾಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಧನುಷ್ ಲುಕ್ ವೈರಲ್ ಆಗಿದೆ. ಪೋಸ್ಟರ್‌ನಲ್ಲಿ ಬಳಸಿರುವ ಡಾರ್ಕ್ ಕಲರ್ ಗ್ರೇಡಿಂಗ್ ಮತ್ತು ವಿನ್ಯಾಸವು ಗಮನ ಸೆಳೆದಿದೆ. ಧನುಷ್ ಮತ್ತು ಮಮ್ಮುಟ್ಟಿ ಅವರ ನಡುವಿನ ಕಾಂಬಿನೇಷನ್ ಸೀನ್‌ಗಳನ್ನು ನೋಡಲು ಸಿನಿಪ್ರಿಯರು ಕಾಯುತ್ತಿದ್ದಾರೆ. ಸಾಯಿ ಅಭ್ಯಂಕರ್ ಅವರು ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಧನುಷ್ ಅವರ ಸ್ವಂತ ಬ್ಯಾನರ್ ‘ವಂಡರ್‌ಬಾರ್ ಫಿಲ್ಮ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಾಜ್ಯದಲ್ಲಿ ಭೀಕರ ಬರಗಾಲದ ವದಂತಿ ಸುಳ್ಳು: ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದ ಹವಾಮಾನ ತಜ್ಞರು – Kannada News | Rumours of Severe Drought in Karnataka Are False, Say Meteorologists; Farmers Need Not Worry

ಪ್ರಾತಿನಿಧಿಕ ಚಿತ್ರImage Credit source: Getty images

ಬೆಂಗಳೂರು, ಜೂನ್​​ 18: ಇತ್ತೀಚೆಗೆ ರಾಜ್ಯದಲ್ಲಿ ಮಳೆ (rain) ಮತ್ತು ಬರಗಾಲದ (drought) ಕುರಿತಾದ ಸುದ್ದಿಯೊಂದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಬಾರಿ ರಾಜ್ಯದಲ್ಲಿ ಸರಿಯಾಗಿ ಮಳೆಯಾಗುವುದಿಲ್ಲ, ಭೀಕರ ಬರಗಾಲ ಆವರಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದರಿಂದ ಅನ್ನದಾತರು ಕಂಗಾಲಾಗಿದ್ದಾರೆ. ಆದರೆ, ಈ ಆತಂಕಕ್ಕೆ ಹವಾಮಾನ ತಜ್ಞರು ಹಾಗೂ ವಿಜ್ಞಾನಿಗಳು ಮಹತ್ವದ ಮಾಹಿತಿ ನೀಡುವ ಮೂಲಕ ತೆರೆ ಎಳೆದಿದ್ದಾರೆ. ರಾಜ್ಯದಲ್ಲಿ ಯಾವುದೇ ಭೀಕರ ಬರಗಾಲ ಬರುವುದಿಲ್ಲ ಹಾಗೂ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ.

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ಬರಗಾಲದ ವದಂತಿಗೆ ಸ್ಪಷ್ಟನೆ ನೀಡಿದ ತಜ್ಞರು
  • ಎಲ್ ನಿನೋ ಪರಿಣಾಮ ಮತ್ತು ರಾಜ್ಯದ ಮಳೆ ಕೊರತೆ
  • ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರಲ್ಲ ಎಂದ ತಜ್ಞರು

ರೈತರು ಆತಂಕ ಪಡುವ ಅಗತ್ಯವಿಲ್ಲ: ಡಾ. ಎಂ.ಬಿ. ರಾಜೇಗೌಡ

ಈ ಕುರಿತು ಟಿವಿ9 ಜೊತೆಗೆ ಮಾತನಾಡಿದ ಕೃಷಿ ಹವಾಮಾನ ತಜ್ಞ ಡಾ. ಎಂ.ಬಿ. ರಾಜೇಗೌಡ, ‘ರಾಜ್ಯದಲ್ಲಿ ಭೀಕರ ಬರಗಾಲ ಬರುತ್ತದೆ ಎಂಬುದು ಸುಳ್ಳು, ರೈತರು ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ಎಲ್ ನಿನೋ ಎಫೆಕ್ಟ್ ಇರುವುದು ನಿಜ. ಆದರೆ, -64% ಮಳೆ ಕೊರತೆಯಾಗುತ್ತದೆ ಎಂಬ ವದಂತಿ ಸಂಪೂರ್ಣ ಸುಳ್ಳು. ಇತಿಹಾಸದಲ್ಲಿ ಇಷ್ಟು ದೊಡ್ಡ ಮಟ್ಟದ ಮಳೆ ಕೊರತೆಯಾಗಲು ಸಾಧ್ಯವೇ ಇಲ್ಲ. ಎಲ್ ನಿನೋ ಪ್ರಭಾವದಿಂದ ರಾಜ್ಯದಲ್ಲಿ ಸದ್ಯ ಕೇವಲ -8% ಮಳೆ ಕೊರತೆ ಸಂಭವಿಸುವ ಸಾಧ್ಯತೆಯಿದೆ. ಹಿಂದೆ 1964-65ರಲ್ಲಿ ಶೇಕಡಾ -28% ಮಳೆ ಕೊರತೆಯಾದಾಗ ಇಡೀ ದೇಶವೇ ನಲುಗಿಹೋಗಿತ್ತು, ಆದರೆ ಸದ್ಯದ ಪರಿಸ್ಥಿತಿ ಹಾಗಾಗುವುದಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: Karnataka Weather Forecast: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ, ಮಳೆಯಬ್ಬರ!

‘ಎಲ್ ನಿನೋ ನೆಗೆಟಿವ್ ಇಂಪ್ಯಾಕ್ಟ್ ಪ್ರತಿ 4 ವರ್ಷಗಳಿಗೊಮ್ಮೆ ನಡೆಯುವ ಸಾಮಾನ್ಯ ನೈಸರ್ಗಿಕ ವಿದ್ಯಮಾನವಾಗಿದೆ. ಇದರಿಂದ -4 ರಿಂದ -8% ಮಳೆ ಕೊರತೆಯಾಗಬಹುದಾದರೂ, ಮಳೆ ಹಂಚಿಕೆ ಸಮರ್ಪಕವಾಗಿದ್ದರೆ ಕೃಷಿ ಚಟುವಟಿಕೆಗಳ ಮೇಲೆ ಯಾವುದೇ ದುಷ್ಪರಿಣಾಮ ಬೀರದು. ನೆಗೆಟಿವ್ ನಾರ್ಮಲ್‌ನಿಂದಾಗಿ ಡ್ಯಾಮ್‌ಗಳು ತುಂಬಬಹುದು, ಆದಾಗ್ಯೂ, ಕೃಷಿಗೆ ಇದರಿಂದ ಯಾವುದೇ ಧಕ್ಕೆ ಇಲ್ಲ. ಇದರ ಮಧ್ಯೆ ವೆಸ್ಟರ್ನ್‌ ಡಿಸ್ಟ್ರಬೆನ್ಸ್ ಆರಂಭವಾಗಿರುವುದರಿಂದ ಉತ್ತರ ಮತ್ತು ಮಧ್ಯ ಭಾರತದಲ್ಲಿ ಉತ್ತಮ ಮಳೆಯಾಗುತ್ತಿರುವುದು ಶುಭ ಸೂಚಕವಾಗಿದೆ. ಅಲ್ಲದೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಬಿತ್ತನೆ ಕಾರ್ಯ ಹೆಚ್ಚಾಗಿದೆ. ಕಳೆದ ಸಲ 14 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿದ್ದ ಬಿತ್ತನೆ ಕ್ಷೇತ್ರ, ಈ ಬಾರಿ 17 ಲಕ್ಷ ಹೆಕ್ಟೇರ್‌ಗೆ ವಿಸ್ತರಿಸಿದೆ. ಹೀಗಾಗಿ ರೈತಾಪಿ ವರ್ಗ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ’ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಶೇ 10ರಷ್ಟು ಮಳೆ ಕಡಿಮೆಯಾಗುವ ಸಾಧ್ಯತೆಯಿದೆ: ವಿಜ್ಞಾನಿ ಸಿ.ಎಸ್. ಪಾಟೀಲ್

ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿ ಸಿ.ಎಸ್. ಪಾಟೀಲ್​​ ಟಿವಿ9ಗೆ ಪ್ರತಿಕ್ರಿಯಿಸಿದ್ದು, ‘ಕಳೆದ ವರ್ಷ ರಾಜ್ಯಾದ್ಯಂತ ಶೇಕಡಾ 14ರಷ್ಟು ಮಳೆಯ ಪ್ರಮಾಣ ಹೆಚ್ಚಾಗಿತ್ತು. ಉತ್ತರ ಒಳನಾಡಿನಲ್ಲಿ 50% ರಷ್ಟು ಮಳೆ ಹೆಚ್ಚಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ 4% ರಷ್ಟು ಮಳೆ ಕಡಿಮೆಯಾಗಿತ್ತು. ಆದರೆ ಈ ವರ್ಷ ಎಲ್ ನಿನೋ ಎಫೆಕ್ಟ್‌ನಿಂದಾಗಿ ರಾಜ್ಯದಲ್ಲಿ ಸರಾಸರಿ ಶೇಕಡಾ 10ರಷ್ಟು ಮಳೆ ಕಡಿಮೆಯಾಗುವ ಸಾಧ್ಯತೆಯಿದೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಪೂರ್ಣ ಬತ್ತಿದ ಕಾವೇರಿ ನದಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರದ ಭೀತಿ

ಒಟ್ಟಾರೆಯಾಗಿ, ರಾಜ್ಯದಲ್ಲಿ ಭೀಕರ ಬರಗಾಲ ಬರಲಿದೆ ಎಂಬ ವದಂತಿಗೆ ತಜ್ಞರು ಮತ್ತು ವಿಜ್ಞಾನಿಗಳು ಸ್ಪಷ್ಟನೆ ನೀಡಿದ್ದಾರೆ. ಈ ಬಾರಿ ಒಂದಷ್ಟು ಮಳೆಯ ಕೊರತೆ ಉಂಟಾಗುವ ಸಾಧ್ಯತೆ ಇದೆಯೇ ಹೊರತು, ಅಷ್ಟೊಂದು ದೊಡ್ಡ ಮಟ್ಟದಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ರೈತರಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಎಸಿಯಲ್ಲಿ ಹೆಚ್ಚು ಸಮಯ ಕಳೆಯುವುದರಿಂದ ಎಲುಬುಗಳು ಬೇಗ ದುರ್ಬಲವಾಗುತ್ತವೆಯೇ? ತಜ್ಞರು ಹೇಳುವುದೇನು? – Kannada News | Does AC Cause Joint Pain? What Orthopedic Doctors Want You to Know

ಇತ್ತೀಚಿನ ದಿನಗಳಲ್ಲಿ ಜನ ಬಿಸಿಲಾಗಲಿ, ಮಳೆಯಾಗಲಿ ಮನೆ, ಆಫೀಸ್ ಹಾಗೆಯೇ ಸಂಚರಿಸುವ ವಾಹನಗಳಲ್ಲಿಯೂ ಏರ್ ಕಂಡೀಷನರ್ (AC) ಬಳಕೆ ಮಾಡಲು ಆರಂಭ ಮಾಡಿದ್ದಾರೆ. ಹಾಗಾಗಿ ಇದೊಂದು ಸಾಮಾನ್ಯ ಅಭ್ಯಾಸವಾಗಿಬಿಟ್ಟಿದೆ. ಆದರೆ, ಎಸಿಯಲ್ಲಿ ಹೆಚ್ಚು ಸಮಯ ಇರುವವರಲ್ಲಿ ಎಲುಬುಗಳು ಬೇಗ ದುರ್ಬಲವಾಗುತ್ತವೆಯೇ ಎಂಬ ಪ್ರಶ್ನೆ ಹಲವರಲ್ಲಿ ಮೂಡುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಎಸಿಯ ತಂಪು ಗಾಳಿ ನೇರವಾಗಿ ಎಲುಬುಗಳಿಗೆ ಹಾನಿ ಮಾಡುವುದಿಲ್ಲ. ಆದರೆ ಕೆಲವು ಪರೋಕ್ಷ ಪರಿಣಾಮಗಳು ಎಲುಬಿನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾದರೆ ಎಸಿ ಯಾವ ರೀತಿ ನಮ್ಮ ದೇಹದ ಮೇಲೆ ಪರಿಣಾಮ ಬೀರುತ್ತದೆ, ಯಾವ ರೀತಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಎಲುಬುಗಳ ಮೇಲೆ ಎಸಿಯ ಪರಿಣಾಮ

ಸಾಮಾನ್ಯವಾಗಿ ಎಲುಬುಗಳ ಬಲವು ಮುಖ್ಯವಾಗಿ ಕ್ಯಾಲ್ಸಿಯಂ, ವಿಟಮಿನ್ ಡಿ, ಸಮತೋಲಿತ ಆಹಾರ ಹಾಗೂ ನಿಯಮಿತ ವ್ಯಾಯಾಮದ ಮೇಲೆ ಅವಲಂಬಿತವಾಗಿರುತ್ತದೆ. ದಿನದ ಬಹುಪಾಲು ಸಮಯವನ್ನು ಎಸಿ ಕೊಠಡಿಗಳಲ್ಲೇ ಕಳೆಯುವುದರಿಂದ ಸೂರ್ಯನ ಬೆಳಕಿನ ಸಂಪರ್ಕ ಕಡಿಮೆಯಾಗುತ್ತದೆ. ಇದರಿಂದ ದೇಹದಲ್ಲಿ ವಿಟಮಿನ್ ಡಿ ಕೊರತೆ ಉಂಟಾಗಬಹುದು. ದೀರ್ಘಕಾಲದ ವಿಟಮಿನ್ ಡಿ ಕೊರತೆ ಎಲುಬುಗಳನ್ನು ದುರ್ಬಲಗೊಳಿಸಿ ಆಸ್ಟಿಯೋಪೊರೋಸಿಸ್‌ನಂತಹ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ.

ಕೀಲು ನೋವು ಹೆಚ್ಚಾಗುತ್ತದೆಯೇ?

ಎಸಿ ಬಳಕೆಯಿಂದ ಆರ್ಥ್ರೈಟಿಸ್ ಉಂಟಾಗುವುದಿಲ್ಲ. ಆದರೆ ಈಗಾಗಲೇ ಕೀಲು ನೋವು ಅಥವಾ ಆಸ್ಟಿಯೋಆರ್ಥ್ರೈಟಿಸ್ ಇರುವವರಿಗೆ ತಂಪಾದ ವಾತಾವರಣದಿಂದ ನೋವು, ಬಿಗಿತದ ಅನುಭವವಾಗಬಹುದು.

ಯಾವ ರೀತಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು?

  • ಪ್ರತಿದಿನ ಕನಿಷ್ಠ 10– 15 ನಿಮಿಷ ಸೂರ್ಯನ ಬೆಳಕಿನಲ್ಲಿ ಸಮಯ ಕಳೆಯಬೇಕು.
  • ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಸಮೃದ್ಧ ಆಹಾರ ಸೇವಿಸಿ.
  • ಹಾಲು, ಮೊಸರು, ಚೀಸ್ ಮುಂತಾದ ಹಾಲು ಉತ್ಪನ್ನಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಿ.
  • ಪ್ರತಿದಿನ ನಡೆಯುವುದು ಅಥವಾ ಲಘು ವ್ಯಾಯಾಮ ಮಾಡುವ ಅಭ್ಯಾಸ ಬೆಳೆಸಿಕೊಳ್ಳಿ.
  • ಎಸಿ ತಾಪಮಾನವನ್ನು 24°C ಇಡುವುದು ಉತ್ತಮ.
  • ದೀರ್ಘಕಾಲ ಒಂದೇ ಭಂಗಿಯಲ್ಲಿ ಕುಳಿತುಕೊಳ್ಳುವುದನ್ನು ತಪ್ಪಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಂದಲ್ಲ, ಎರಡಲ್ಲ, ಮೂರು ದಾಖಲೆಗಳನ್ನು ನಿರ್ಮಿಸಿದ ಸ್ಮೃತಿ ಮಂಧಾನ – Kannada News | Smriti Mandhana T20 WC Brilliance: Breaks 3 Records, Leads India to Victory

2026 ರ ಮಹಿಳಾ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನ, ಟಿ20 ವಿಶ್ವಕಪ್​ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಆಡಿರುವ ಮೊದಲೆರಡು ಪಂದ್ಯಗಳಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು (PC-PTI).

Source link