Headlines

nagaraj11081993

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ​ಗಿರಿ: ಹಿಂದೂ ವಿದ್ಯಾರ್ಥಿನಿಯರ ಜತೆ ಜಾತ್ರೆಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ

ಮಂಗಳೂರು, ಮಾ.19: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಜಾತ್ರೆಯ ಸಂಭ್ರಮದ ನಡುವೆಯೇ ಅಹಿತಕರ ಘಟನೆಯೊಂದು ನಡೆದಿದೆ. ಹಿಂದೂ ಸ್ನೇಹಿತೆಯರ ಜೊತೆ ಜಾತ್ರೆ ನೋಡಲು ಬಂದಿದ್ದ 17 ವರ್ಷದ ಮುಸ್ಲಿಂ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರ ಗುಂಪೊಂದು ಹಲ್ಲೆ ನಡೆಸಿ, ಅಪಹರಿಸಿರುವ ದೂರು ದಾಖಲಾಗಿದೆ. ಮಾರ್ಚ್ 18ರಂದು ಸಂಜೆ ಉಜಿರೆ ಜಾತ್ರಾ ಮೈದಾನದಲ್ಲಿ ಈ ಘಟನೆ ನಡೆದಿದೆ. ಮುಸ್ಲಿಂ ಬಾಲಕನು ತನ್ನ ಹಿಂದೂ ಸ್ನೇಹಿತೆಯರೊಂದಿಗೆ ಜಾತ್ರೆ ವೀಕ್ಷಿಸುತ್ತಿದ್ದನು. ಈ ವೇಳೆ…

Read More

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ವೃಷಭ ರಾಶಿಯವರಿಗೆ ಹೇಗಿರಲಿದೆ?

ಯುಗಾದಿ ಭವಿಷ್ಯ 2026 ರ ಪ್ರಕಾರ, ವೃಷಭ ರಾಶಿಯವರಿಗೆ ಈ ವರ್ಷ ಸ್ಥಿರತೆ ಮತ್ತು ಬೆಳವಣಿಗೆಯನ್ನು ತರಲಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತುತಜ್ಞ ವೇದಬ್ರಹ್ಮ ಶ್ರೀ ಕೆ. ವೆಂಕಟೇಶ್ ಶರ್ಮಾ ಗುರೂಜಿ ಅವರು ವಿವರವಾದ ಭವಿಷ್ಯ ನುಡಿದಿದ್ದಾರೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಯಶಸ್ಸು ನಿಧಾನವಾಗಿ ಆದರೆ ಖಚಿತವಾಗಿ ಸಿಗಲಿದೆ. ಹಣಕಾಸು ಉಳಿತಾಯಕ್ಕೆ ಇದು ಉತ್ತಮ ಸಮಯವಾಗಿದ್ದು, ಉತ್ತಮ ಸಂಪಾದನೆ ಇರುತ್ತದೆ. ಕುಟುಂಬದಲ್ಲಿ ಸಂತೋಷ ಮತ್ತು ನೆಮ್ಮದಿ ನೆಲಸಲಿದೆ. ತಂದೆ-ತಾಯಿಗಳ ಸೇವೆ ಮಾಡಿದಷ್ಟು ಪುಣ್ಯ ಈ ರಾಶಿಯವರಿಗೆ…

Read More

ಅಮೆರಿಕದಲ್ಲಿ ಈ ಬಾರಿಯೂ ಬಡ್ಡಿದರ ಬದಲಾಗಲ್ಲ; ಹಣದುಬ್ಬರ ನಿರೀಕ್ಷೆಮೀರಿ ಹೆಚ್ಚಬಹುದು: ಸೆಂಟ್ರಲ್ ಬ್ಯಾಂಕ್ ಅಂದಾಜು

ವಾಷಿಂಗ್ಟನ್, ಮಾರ್ಚ್ 19: ಅಮೆರಿಕದ ಸೆಂಟ್ರಲ್ ಬ್ಯಾಂಕ್ ಆಗಿರುವ ಫೆಡರಲ್ ರಿಸರ್ವ್ ತನ್ನ ಬಡ್ಡಿದರದಲ್ಲಿ (US Fed Reserve Rates) ಬದಲಾವಣೆ ಮಾಡದಿರಲು ನಿರ್ಧರಿಸಿದೆ. ಈಗಿರುವ ಶೇ. 3.50-3.75 ಶ್ರೇಣಿಯಲ್ಲಿ ಬಡ್ಡಿದರ ಮುಂದುವರಿಸುವ ನಿರ್ಧಾರ ಮಾಡಿದೆ. ಫೆಡರಲ್ ರಿಸರ್ವ್​ನ ಛೇರ್ಮನ್ ಜಿರೋಮ್ ಪೋವೆಲ್ ನೇತೃತ್ವದಲ್ಲಿ ನಡೆದ ಎಫ್​ಒಎಂಸಿ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಆದರೆ, ಗಮನಾರ್ಹ ಅಂಶವೆಂದರೆ, ಬಡ್ಡಿದರ ಹೆಚ್ಚಳ ಸಾಧ್ಯತೆ ಇಲ್ಲ ಎಂಬುದು ಸ್ಪಷ್ಟವಾಗಿದೆ. ಮುಂಬರುವ ದಿನಗಳಲ್ಲಿ ಬಡ್ಡಿದರ ಕಡಿಮೆ ಆಗುವ ಸುಳಿವನ್ನು ಈ ಸಭೆಯಲ್ಲಿ…

Read More

Video: ಅಮ್ಮ ಬೈದದ್ದಕ್ಕೆ ದೇವರ ಮುಂದೆ ದೂರು ನೀಡಿದ ಪುಟಾಣಿ

ಪುಟಾಣಿ ಮಕ್ಕಳು (little kids) ಏನು ಮಾಡಿದ್ರು ನೋಡೋಕೆ ಚಂದ. ಈ ಪುಟಾಣಿ ತೊದಲು ನುಡಿಗಳನ್ನು ಕೇಳುವುದು ಇನ್ನು ಚಂದ. ಅಮ್ಮ ಏನಾದ್ರೂ ಬೈದರೆ, ಹೊಡೆದರೆ ಅಪ್ಪನ ಬಳಿ ಹೋಗಿ ದೂರು ಹೇಳುವುದನ್ನು ನೀವು ನೋಡಿರುತ್ತೀರಿ. ಆದರೆ ಈ ಪುಟಾಣಿ ಮಾತ್ರ ಹಾಗೆ ಮಾಡಿಲ್ಲ. ಅಮ್ಮ ಬೈದರೆಂದು ದೇವರ ಮುಂದೆ ಅಳುತ್ತಾ ಅಮ್ಮನ ಬಗ್ಗೆ ದೂರು ಹೇಳಿದೆ. ಈ ಮುದ್ದಾದ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮುಗ್ಧತೆ ಕರಗಿ ಹೋಗಿದ್ದಾರೆ. Lavkush Yadav Baba Nam ಹೆಸರಿನ…

Read More

ಇಫ್ತಾರ್​​ಕೂಟದಲ್ಲಿ ಭಾಗಿ ಆದ ದಳಪತಿ ವಿಜಯ್; ವಿವಾದದಿಂದ ತಪ್ಪಿಸಿಕೊಳ್ಳಲು ಹೊಸ ಐಡಿಯಾ

ಕಳೆದ ವರ್ಷ ರಂಜಾನ್ ಸಂದರ್ಭದಲ್ಲಿ ದಳಪತಿ ವಿಜಯ್ ಅವರು ಇಫ್ತಾರ್ ಕೂಟದಲ್ಲಿ ಭಾಗಿ ಆಗಿದ್ದರು. ಈ ವೇಳೆ ಅವರ ವಿರುದ್ಧ ದೂರು ದಾಖಲಾಗಿತ್ತು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಬಾರಿಯೂ ವಿಜಯ್ ಅವರು ಇಫ್ತಾರ್ ಕೂಟದಲ್ಲಿ ಭಾಗಿ ಆಗಿದ್ದಾರೆ. ಆದರೆ, ವಿವಾದಿಂದ ದೂರ ಇರಲು ಅವರು ಕೆಲ ತಂತ್ರಗಳನ್ನು ಬಳಸಿದ್ದಾರೆ. ಮಮಲ್ಲಪುರಂನಲ್ಲಿ ಇಫ್ತಾರ್ ಕೂಟ ಆಯೋಜನೆ ಮಾಡಿತ್ತು. ಹೋಟೆಲ್ ಒಂದರಲ್ಲಿ ಬುಧವಾರ ಸಂಜೆ ಆರು ಗಂಟೆಯಿಂದ 9 ಗಂಟೆವರೆಗೆ ಈ ಕಾರ್ಯಕ್ರಮ ನೆರವೇರಿತ್ತು. ಈ ಕೂಟದಲ್ಲಿ…

Read More

IPL 2026: ಹೊಸ ಲುಕ್​ನೊಂದಿಗೆ ಆರ್​ಸಿಬಿಗೆ ಮರಳಿದ ಕಿಂಗ್ ಕೊಹ್ಲಿ! ವಿರಾಟ್ ಹೇಗಿದ್ದಾರೆ ನೋಡಿ

ಅಭಿಮಾನಿಗಳು ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. ಹೊಸ ಸೀಸನ್‌ಗೆ ತಯಾರಿ ನಡೆಸಲು ಮಾರ್ಚ್ 18 ರಂದು ಆರ್​ಸಿಬಿ ತಂಡದ ಶಿಬಿರ ಆರಂಭವಾಗಿದೆ. ತಂಡದ ಆಟಗಾರರು ಶಿಬಿರಕ್ಕೆ ಮರಳಿರುವ ಚಿತ್ರವನ್ನು ಎಕ್ಸ್​ ಖಾತೆಯಲ್ಲಿ ಆರ್​​ಸಿಬಿ ಹಂಚಿಕೊಂಡಿದೆ. ಮಾರ್ಚ್ 18, ಬುಧವಾರ ತಂಡವನ್ನು ಸೇರಿಕೊಂಡ ಕಿಂಗ್ ಕೊಹ್ಲಿ ಮೊದಲ ತರಬೇತಿ ಅವಧಿಯಲ್ಲಿ ಭಾಗವಹಿಸಿದರು. ವಿರಾಟ್ ಕೊಹ್ಲಿ ನೆಟ್ಸ್​​ನಲ್ಲಿ ಭಾಗವಹಿಸಿರುವುದು ಅವರ ಅಭಿಮಾನಿಗಳಿಗೆ ಖುಷಿಕೊಟ್ಟಿದ್ದು, ಐಪಿಎಲ್ ಮೊದಲ ಪಂದ್ಯದಲ್ಲಿ ಕೊಹ್ಲಿ ಬ್ಯಾಟಿಂಗ್ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ. ಕೊಹ್ಲಿ ತಂಡ ಸೇರಿರುವ ಕೆಲವು ಫೋಟೋಗಳನ್ನು…

Read More

Ugadi 2026: ಆರೋಗ್ಯ ಮತ್ತು ಅಧ್ಯಾತ್ಮದ ಸಂಗಮ; ಯುಗಾದಿಯ ಬೇವು-ಬೆಲ್ಲ ಸೇವನೆಯ ಹಿಂದಿನ ರಹಸ್ಯ ಇಲ್ಲಿ ತಿಳಿದುಕೊಳ್ಳಿ

ಯುಗಯುಗಾಂತರಗಳಿಂದ ಯುಗಾದಿ ಹಬ್ಬವು ತನ್ನದೇ ಆದ ಮಹತ್ವವನ್ನು ಉಳಿಸಿಕೊಂಡು ಬಂದಿದೆ. ಪ್ರತಿಯೊಂದು ಹಬ್ಬದಂತೆ ಯುಗಾದಿಯೂ ತನ್ನ ವಿಶಿಷ್ಟತೆಯನ್ನು ಹೊಂದಿದೆ, ವಿಶೇಷವಾಗಿ ಬೇವು ಬೆಲ್ಲದ ಸೇವನೆಯ ಮೂಲಕ. ಈ ಬಗ್ಗೆ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಆಯುರ್ವೇದದ ದೃಷ್ಟಿಯಿಂದ ಬೇವು ಮತ್ತು ಬೆಲ್ಲ ಎರಡೂ ಆರೋಗ್ಯ ಮತ್ತು ಶಕ್ತಿವರ್ಧಕಗಳಾಗಿವೆ. ಬೇವಿನು ಅನೇಕ ಔಷಧೀಯ ಗುಣಗಳನ್ನು ಹೊಂದಿದ್ದು, ಆರೋಗ್ಯಕ್ಕೆ ಸಹಕಾರಿ. ಬೆಲ್ಲವೂ…

Read More

ಭವಿಷ್ಯ ಹೇಳ್ತೀನಿ ಅಂತ ಬಂದ ರಮೇಶ್ ಅರವಿಂದ್

ರಮೇಶ್ ಅರವಿಂದ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ಅಭಿಮಾನಿಗಳ ಭವಿಷ್ಯ ಹೇಳೋದಾಗಿ ಹೇಳಿದ್ದಾರೆ. ಈ ವಿಡಿಯೋ ಹಂಚಿಕೊಳ್ಳೋಕೆ ಕಾರಣ ಯುಗಾದಿ. ಹಿಂದೂಗಳು ಯುಗಾದಿಯನ್ನು ಹೊಸ ವರ್ಷ ಎಂದು ಪರಿಗಣಿಸುತ್ತಾರೆ. ಹೀಗಾಗಿ, ವಿಡಿಯೋ ಮಾಡಿರೋ ರಮೇಶ್ ಅರವಿಂದ್, ಹೊಸ ವರ್ಷ ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತೆ ಎಂದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Ugadi 2026: ಕರ್ನಾಟಕದ ಜನತೆಗೆ ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ ಮೋದಿ; ಹೊಸ ವರ್ಷಕ್ಕೆ ನಮೋ ಹಾರೈಕೆ!

ದೆಹಲಿ, ಮಾ.19: ಚಾಂದ್ರಮಾನ ಯುಗಾದಿ ಮತ್ತು ಹೊಸ ವರ್ಷದ ಈ ಶುಭ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ವಸಂತ ಋತುವಿನ ಆಗಮನವು ಹೊಸ ಚೈತನ್ಯ ಮತ್ತು ಸಾಧ್ಯತೆಗಳನ್ನು ಹೊತ್ತು ತರಲಿ ಎಂದು ಅವರು ಹಾರೈಸಿದ್ದಾರೆ. “ಪವಿತ್ರ ಯುಗಾದಿಯ ಸಂದರ್ಭದಲ್ಲಿ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಸುಖಮಯ ಹೊಸ ವರ್ಷದ ಶುಭಾಶಯಗಳು” ಎಂದು ಪ್ರಧಾನಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ವಸಂತ ಕಾಲದ ಹಸಿರು, ಹೂವುಗಳ ಸುಗಂಧ ಮತ್ತು ಹಣ್ಣುಗಳ ಆಗಮನವು ಹೊಸ…

Read More

ತೈಲ ಬಿಕ್ಕಟ್ಟು, ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು, ಹಬ್ಬ ಮುಗಿದ ಮೇಲೆ ಯುದ್ಧ ಮುಂದುವರೆಸೋಣ ಎಂದ ಪಾಕ್

ಇಸ್ಲಾಮಾಬಾದ್, ಮಾರ್ಚ್​ 19: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಹಲವು ದೇಶಗಳಲ್ಲಿ ತೈಲ ಬಿಕ್ಕಟ್ಟು ಎದುರಾಗಿದೆ. ಅದರಲ್ಲಿ ಪಾಕಿಸ್ತಾನ(Pakistan)ಕೂಡ ಒಂದು. ತೈಲ ಕೊರತೆಯಿಂದಾಗಿ ಮಾರ್ಚ್​ 23 ರಂದು ನಿಗದಿಯಾಗಿದ್ದ ಗಣರಾಜ್ಯೋತ್ಸವ ಪರೇಡ್​​ ಅನ್ನು ಕೂಡ ಸರ್ಕಾರ ರದ್ದುಗೊಳಿಸಿದೆ. ಪ್ರಧಾನಿ ಶೆಹಬಾಜ್ ಷರೀಫ್ ಅವರ ಕಚೇರಿ ಮಂಗಳವಾರ ಇದನ್ನು ಪ್ರಕಟಿಸಿದೆ. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಉಂಟಾದ ಗಲ್ಫ್ ತೈಲ ಬಿಕ್ಕಟ್ಟಿನಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ. ಗಲ್ಫ್ ತೈಲ ಬಿಕ್ಕಟ್ಟು ಮತ್ತು ಸರ್ಕಾರ…

Read More