Headlines

nagaraj11081993

Ugadi 2026: ಕರ್ನಾಟಕದ ಜನತೆಗೆ ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ ಮೋದಿ; ಹೊಸ ವರ್ಷಕ್ಕೆ ನಮೋ ಹಾರೈಕೆ!

ದೆಹಲಿ, ಮಾ.19: ಚಾಂದ್ರಮಾನ ಯುಗಾದಿ ಮತ್ತು ಹೊಸ ವರ್ಷದ ಈ ಶುಭ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ವಸಂತ ಋತುವಿನ ಆಗಮನವು ಹೊಸ ಚೈತನ್ಯ ಮತ್ತು ಸಾಧ್ಯತೆಗಳನ್ನು ಹೊತ್ತು ತರಲಿ ಎಂದು ಅವರು ಹಾರೈಸಿದ್ದಾರೆ. “ಪವಿತ್ರ ಯುಗಾದಿಯ ಸಂದರ್ಭದಲ್ಲಿ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಸುಖಮಯ ಹೊಸ ವರ್ಷದ ಶುಭಾಶಯಗಳು” ಎಂದು ಪ್ರಧಾನಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ವಸಂತ ಕಾಲದ ಹಸಿರು, ಹೂವುಗಳ ಸುಗಂಧ ಮತ್ತು ಹಣ್ಣುಗಳ ಆಗಮನವು ಹೊಸ…

Read More

ತೈಲ ಬಿಕ್ಕಟ್ಟು, ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು, ಹಬ್ಬ ಮುಗಿದ ಮೇಲೆ ಯುದ್ಧ ಮುಂದುವರೆಸೋಣ ಎಂದ ಪಾಕ್

ಇಸ್ಲಾಮಾಬಾದ್, ಮಾರ್ಚ್​ 19: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಹಲವು ದೇಶಗಳಲ್ಲಿ ತೈಲ ಬಿಕ್ಕಟ್ಟು ಎದುರಾಗಿದೆ. ಅದರಲ್ಲಿ ಪಾಕಿಸ್ತಾನ(Pakistan)ಕೂಡ ಒಂದು. ತೈಲ ಕೊರತೆಯಿಂದಾಗಿ ಮಾರ್ಚ್​ 23 ರಂದು ನಿಗದಿಯಾಗಿದ್ದ ಗಣರಾಜ್ಯೋತ್ಸವ ಪರೇಡ್​​ ಅನ್ನು ಕೂಡ ಸರ್ಕಾರ ರದ್ದುಗೊಳಿಸಿದೆ. ಪ್ರಧಾನಿ ಶೆಹಬಾಜ್ ಷರೀಫ್ ಅವರ ಕಚೇರಿ ಮಂಗಳವಾರ ಇದನ್ನು ಪ್ರಕಟಿಸಿದೆ. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಉಂಟಾದ ಗಲ್ಫ್ ತೈಲ ಬಿಕ್ಕಟ್ಟಿನಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ. ಗಲ್ಫ್ ತೈಲ ಬಿಕ್ಕಟ್ಟು ಮತ್ತು ಸರ್ಕಾರ…

Read More

ಕರ್ನಾಟಕ ಉಪಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ, ಯಾರು ಗೊತ್ತಾ?

ಬೆಂಗಳೂರು, ಮಾ.19: ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಹಳೆಯ ಹುಲಿ ಮತ್ತು ಹೊಸ ಮುಖಕ್ಕೆ ಅವಕಾಶ ನೀಡಿದೆ. ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾಗಿದೆ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ್ ಅವರಿಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿರುವುದರಿಂದ…

Read More

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೇಷ ರಾಶಿಯವರಿಗೆ ಹೇಗಿರಲಿದೆ?

2026ರ ಯುಗಾದಿ ಭವಿಷ್ಯದ ಪ್ರಕಾರ, ಮೇಷ ರಾಶಿಯವರಿಗೆ ಈ ವರ್ಷ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತುತಜ್ಞ ವೇದಬ್ರಹ್ಮ ಶ್ರೀ ಕೆ. ವೆಂಕಟೇಶ್ ಶರ್ಮಾ ಗುರೂಜಿ ಅವರು ವಿವರವಾದ ಭವಿಷ್ಯವನ್ನು ನೀಡಿದ್ದಾರೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಲಾಭದ ಸಾಧ್ಯತೆಗಳಿವೆ. ಖರ್ಚುಗಳು ಸ್ವಲ್ಪ ಹೆಚ್ಚಾಗಬಹುದಾದರೂ, ಆದಾಯವೂ ಹೆಚ್ಚಾಗಲಿದೆ. ಕುಟುಂಬದಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಗ್ರಹಗಳ ಸ್ಥಾನಗಳ ಪರಿಣಾಮಗಳ ಕುರಿತು ಹೇಳುವುದಾದರೆ, ಮೂರನೇ ಗುರು ಆರೋಗ್ಯವನ್ನು ಸ್ವಲ್ಪ ಕೆಡಿಸಬಹುದು, ಇದಕ್ಕೆ ಗುರು ಆರಾಧನೆ ಅಗತ್ಯ….

Read More

Love Mocktail 3 Review: ನಗಿಸುತ್ತಾ ಅಳಿಸುವ ತಂದೆ-ಮಗಳ ಎಮೋಷನಲ್ ಕಹಾನಿ

ಡಾರ್ಲಿಂಗ್ ಕೃಷ್ಣ ಅವರು ನಟಿಸಿ, ನಿರ್ದೇಶನ ಮಾಡಿದ ‘ಲವ್ ಮಾಕ್ಟೇಲ್’ ಚಿತ್ರಕ್ಕೆ ಪ್ರತ್ಯೇಕ ಫ್ಯಾನ್ ಬೇಸ್ ಇದೆ. ಇದರ ಮೂರನೇ ಇನ್​ಸ್ಟಾಲ್​ಮೆಂಟ್ ಈಗ ಬಿಡುಗಡೆ ಆಗಿದೆ. ಹೌದು, ಮಾರ್ಚ್ 19ರಂದು ‘ಲವ್ ಮಾಕ್ಟೇಲ್ 3’ (Love Mocktail 3) ತೆರೆಕಂಡಿದೆ. ಟ್ರೇಲರ್​​ನಲ್ಲಿ ಕಥೆಯ ಬಗ್ಗೆ ಹೆಚ್ಚೇನೂ ಬಿಟ್ಟುಕೊಟ್ಟಿರಲಿಲ್ಲ. ಚಿತ್ರಮಂದಿರಕ್ಕೆ ಬಂದ ಪ್ರೇಕ್ಷಕರಿಗೆ ಅಪ್ಪ-ಮಗಳ ಎಮೋಷನಲ್ ಕಹಾನಿ ಕಾಣಿಸುತ್ತದೆ. ಎಮೋಷನಲ್ ದೃಶ್ಯಗಳ ಜೊತೆಗೆ ಕಾಮಿಡಿಗೂ ಕೊರತೆ ಮಾಡಿಲ್ಲ. ‘ಲವ್ ಮಾಕ್ಟೇಲ್ 3’ ವಿಮರ್ಶೆ (Love Mocktail 3 Movie…

Read More

ಇಸ್ರೇಲ್ ಇರಾನ್​​ನ ಅನಿಲ ಸ್ಥಾವರಗಳ ಮೇಲೆ ದಾಳಿ ನಡೆಸುವ ಬಗ್ಗೆ ನಮಗೆ ತಿಳಿದಿರಲಿಲ್ಲ, ನಮ್ಮ ಪಾತ್ರ ಏನೂ ಇಲ್ಲ ಎಂದ ಟ್ರಂಪ್

ವಾಷಿಂಗ್ಟನ್, ಮಾರ್ಚ್​ 19:ಇರಾನ್​(Iran)ನ ಅನಿಲ ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ ನಡೆಸು ಬಗ್ಗೆ ನಮಗೇನೂ ತಿಳಿದಿರಲಿಲ್ಲ, ಇದು ಕೇವಲ ಇಸ್ರೇಲ್ ನಡೆಸಿರುವ ದಾಳಿಯಷ್ಟೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಅನಿಲ ಸ್ಥಾವರಗಳ ಮೇಲೆ ಇಸ್ರೇಲ್ ಇನ್ನುಮುಂದೆ ಯಾವುದೇ ದಾಳಿ ನಡೆಸುವುದಿಲ್ಲ. ಜತೆಗೆ ಹೆಚ್ಚುತ್ತಿರುವ ಹಗೆತನದ ನಡುವೆ ಕತಾರ್‌ನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಳ್ಳುವುದರ ವಿರುದ್ಧ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ದಾಳಿಗಳ ಬಗ್ಗೆ ಕೋಪಗೊಂಡು ದಕ್ಷಿಣ ಪಾರ್ಸ್ ಅನಿಲ…

Read More

Ugadi 2026: ಕರ್ನಾಟಕದ ಜನತೆಗೆ ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ ಮೋದಿ; ಹೊಸ ವರ್ಷಕ್ಕೆ ನಮೋ ಹಾರೈಕೆ!

ದೆಹಲಿ, ಮಾ.19: ಚಾಂದ್ರಮಾನ ಯುಗಾದಿ ಮತ್ತು ಹೊಸ ವರ್ಷದ ಈ ಶುಭ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ವಸಂತ ಋತುವಿನ ಆಗಮನವು ಹೊಸ ಚೈತನ್ಯ ಮತ್ತು ಸಾಧ್ಯತೆಗಳನ್ನು ಹೊತ್ತು ತರಲಿ ಎಂದು ಅವರು ಹಾರೈಸಿದ್ದಾರೆ. “ಪವಿತ್ರ ಯುಗಾದಿಯ ಸಂದರ್ಭದಲ್ಲಿ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಸುಖಮಯ ಹೊಸ ವರ್ಷದ ಶುಭಾಶಯಗಳು” ಎಂದು ಪ್ರಧಾನಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ವಸಂತ ಕಾಲದ ಹಸಿರು, ಹೂವುಗಳ ಸುಗಂಧ ಮತ್ತು ಹಣ್ಣುಗಳ ಆಗಮನವು ಹೊಸ…

Read More

ಇನ್ನೆರಡು ದಿನ ಕಳೆದ್ರೆ ನಂದಿನಿ ಉತ್ಪನ್ನಗಳೂ ಸಿಗೋದು ಡೌಟ್! ಕೆಎಂಎಫ್​ಗೂ ಎದುರಾಯ್ತು ಸಂಕಷ್ಟ

ಬೆಂಗಳೂರು, ಮಾರ್ಚ್ 19: ಯುಗಾದಿ (Ugadi) ಹಬ್ಬದ ಸಮಯದಲ್ಲೇ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಆಗಿರುವ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತಕ್ಕೂ (KMF) ಸಂಕಷ್ಟ ಎದುರಾಗಿದೆ. ಇರಾನ್-ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮವಾಗಿ ದೇಶಾದ್ಯಂತ ಉಂಟಾಗಿರುವ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಕೊರತೆಯ ಪರಿಣಾಮ ಇದೀಗ ನಂದಿನಿ ಉತ್ಪನ್ನಗಳ (Nandini Products) ಮೇಲೂ ತಟ್ಟತೊಡಗಿದೆ. ಕಳೆದ ಕೆಲ ದಿನಗಳಿಂದ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್‌ಗಳ ಸರಬರಾಜು ವ್ಯತ್ಯಯಗೊಂಡಿರುವುದರಿಂದ ಕೆಎಂಎಫ್​ ಉತ್ಪಾದನಾ ಘಟಕಗಳು ಒತ್ತಡಕ್ಕೆ ಸಿಲುಕಿವೆ. ಉತ್ಪನ್ನಗಳ ತಯಾರಿಗೆ ಕೆಎಂಎಫ್ ಸಾಮಾನ್ಯವಾಗಿ…

Read More

‘ನೋರಾ ಹೇಳಿದ್ದು ತಪ್ಪು, ವಿವಾದದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿರಬಹುದು’; ಪ್ರೇಮ್

‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಚರ್ಚೆ ಹುಟ್ಟುಹಾಕಿದೆ. ನೋರಾ ಫತೇಹಿ (Nora Fatehi) ಕನ್ನಡದಲ್ಲಿ ಕಾಣಿಸಿಕೊಂಡ ಮೊದಲ ಹಾಡು ಇದು. ಈ ಹಾಡನ್ನು ನೋಡಿ ಅನೇಕರು ಅಪಸ್ವರ ಎತ್ತಿದ್ದಾರೆ. ಈ ಹಾಡನ್ನು ಈಗ ತಾತ್ಕಾಲಿಕವಾಗಿ ತೆಗೆದು ಹಾಕಲಾಗಿದ್ದು, ಹೊಸ ಸಾಹಿತ್ಯದ ಮೂಲಕ ಬರೋದಾಗಿ ಪ್ರೇಮ್ ಹೇಳಿದ್ದಾರೆ. ಈ ಮಧ್ಯೆ ಹಾಡಿನ ವಿಷಯದಲ್ಲಿ ನೋರಾ ಉಲ್ಟಾ ಹೊಡೆದಿದ್ದಾರೆ. ಇಷ್ಟು ಕೆಟ್ಟ ಸಾಹಿತ್ಯ ಇದೆ ಎಂದು ನನಗೆ ಗೊತ್ತಿರಲಿಲ್ಲ ಎಂದು ಅವರು ಹೇಳಿರುವುದು ಪ್ರೇಮ್ ಅಸಮಾಧಾನಕ್ಕೆ…

Read More

ಯುಗಾದಿ ಹಬ್ಬದ ಖರೀದಿಗೆ ಕೆಆರ್​ ಮಾರ್ಕೆಟ್​ಗೆ ಮುಗಿಬಿದ್ದ ಗ್ರಾಹಕರು

ಬೆಂಗಳೂರು, ಮಾರ್ಚ್ 19: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಡಗರ ಮನೆ ಮಾಡಿದೆ. ಬೆಂಗಳೂರಿನ ಹೃದಯಭಾಗದಲ್ಲಿರುವ ಕೆಆರ್ ಮಾರ್ಕೆಟ್‌ನಲ್ಲಿ ಭಾರಿ ಖರೀದಿ ಭರಾಟೆ ಕಂಡುಬಂದಿದೆ. ಹೂವು, ಹಣ್ಣು ಮತ್ತು ಪೂಜಾ ಸಾಮಗ್ರಿಗಳನ್ನು ಖರೀದಿಸಲು ಸಿಲಿಕಾನ್ ಸಿಟಿ ಜನರು ಮಧ್ಯರಾತ್ರಿಯಿಂದಲೇ ಮಾರುಕಟ್ಟೆಗೆ ಧಾವಿಸಿದ್ದಾರೆ. ಕೆ.ಆರ್. ಮಾರ್ಕೆಟ್‌ನಲ್ಲಿ ತಾಜಾ ಮತ್ತು ವೈವಿಧ್ಯಮಯ ಹೂವುಗಳು ಹೋಲ್‌ಸೇಲ್ ದರದಲ್ಲಿ ಲಭ್ಯವಿರುವುದರಿಂದ ಜನರು ಹೆಚ್ಚಾಗಿ ಇಲ್ಲಿಗೆ ಆಗಮಿಸುತ್ತಾರೆ. ಬೆಂಗಳೂರಿನ ಸುತ್ತಮುತ್ತಲಿನ ರೈತರು ಮತ್ತು ಹೂವಿನ ವ್ಯಾಪಾರಿಗಳು ನೇರವಾಗಿ ಇಲ್ಲಿಗೆ ಬಂದು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುತ್ತಾರೆ….

Read More