ಬೆಂಗಳೂರು, ಮಾರ್ಚ್ 19: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಡಗರ ಮನೆ ಮಾಡಿದೆ. ಬೆಂಗಳೂರಿನ ಹೃದಯಭಾಗದಲ್ಲಿರುವ ಕೆಆರ್ ಮಾರ್ಕೆಟ್ನಲ್ಲಿ ಭಾರಿ ಖರೀದಿ ಭರಾಟೆ ಕಂಡುಬಂದಿದೆ. ಹೂವು, ಹಣ್ಣು ಮತ್ತು ಪೂಜಾ ಸಾಮಗ್ರಿಗಳನ್ನು ಖರೀದಿಸಲು ಸಿಲಿಕಾನ್ ಸಿಟಿ ಜನರು ಮಧ್ಯರಾತ್ರಿಯಿಂದಲೇ ಮಾರುಕಟ್ಟೆಗೆ ಧಾವಿಸಿದ್ದಾರೆ. ಕೆ.ಆರ್. ಮಾರ್ಕೆಟ್ನಲ್ಲಿ ತಾಜಾ ಮತ್ತು ವೈವಿಧ್ಯಮಯ ಹೂವುಗಳು ಹೋಲ್ಸೇಲ್ ದರದಲ್ಲಿ ಲಭ್ಯವಿರುವುದರಿಂದ ಜನರು ಹೆಚ್ಚಾಗಿ ಇಲ್ಲಿಗೆ ಆಗಮಿಸುತ್ತಾರೆ. ಬೆಂಗಳೂರಿನ ಸುತ್ತಮುತ್ತಲಿನ ರೈತರು ಮತ್ತು ಹೂವಿನ ವ್ಯಾಪಾರಿಗಳು ನೇರವಾಗಿ ಇಲ್ಲಿಗೆ ಬಂದು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುತ್ತಾರೆ. ಇದು ಸ್ಥಳೀಯ ಸಣ್ಣ ಮಾರುಕಟ್ಟೆಗಳಿಗಿಂತ ಇಲ್ಲಿ ಅಲ್ಪ ಕಡಿಮೆ ದರದಲ್ಲಿ ಹೂವುಗಳು ಸಿಗಲು ಕಾರಣವಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ದರ ಕೊಂಚ ಏರಿಕೆಯಾಗಿದ್ದರೂ, ಮಾರುಕಟ್ಟೆಯಲ್ಲಿ ಜನಸಾಗರವೇ ಹರಿದುಬಂದಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ದಾವಣಗೆರೆ, ಮಾ.19: ಎಲ್ಲಿಯೋ ನಡೆಯುತ್ತಿರುವ ಯುದ್ಧದ ಪರಿಣಾಮ ದಾವಣಗೆರೆಯ ಈರುಳ್ಳಿ ಮಾರುಕಟ್ಟೆಯ ಮೇಲೆ ಭೀಕರವಾಗಿ ಪರಿಣಾಮವನ್ನು ಉಂಟು ಮಾಡಿದೆ. ಬೆಲೆ ಕುಸಿತದಿಂದಾಗಿ ರೈತರು ಕಂಗಾಲಾಗಿದ್ದು, ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಂದ ಕೂಲಿಯೂ ಸಿಗದೆ ಒದ್ದಾಡಿದ್ದಾರೆ. ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಪ್ರತಿ ಕೆಜೆಗೆ ಕೇವಲ 6 ರಿಂದ 12 ರೂಪಾಯಿಗೆ ಕುಸಿದಿದೆ. ಉತ್ತಮ ಗಾತ್ರದ ಈರುಳ್ಳಿಗೂ ಕೇವಲ 10-12 ರೂಪಾಯಿ ಸಿಗುತ್ತಿದ್ದರೆ, ಸಣ್ಣ ಗಾತ್ರದ ಈರುಳ್ಳಿಗೆ 6-8 ರೂಪಾಯಿ ಮಾತ್ರ ಲಭಿಸುತ್ತಿದೆ.
ಜಾಗತಿಕ ಯುದ್ಧದ ಭೀತಿಯಿಂದಾಗಿ ಇಂಧನ ಮತ್ತು ಸಿಲಿಂಡರ್ ಬೆಲೆ ಏರಿಕೆಯಾಗಿದ್ದು, ಹಲವು ಹೋಟೆಲ್ಗಳು ವಹಿವಾಟು ಸ್ಥಗಿತಗೊಳಿಸಿವೆ. ಇದು ಈರುಳ್ಳಿಯ ಬೇಡಿಕೆಯ ಮೇಲೆ ನೇರ ಪರಿಣಾಮ ಬೀರಿದೆ. ಈರುಳ್ಳಿ ಬೆಲೆ ಕುಸಿದಿದ್ದರೆ, ಅದನ್ನು ತುಂಬುವ ಖಾಲಿ ಚೀಲದ ಬೆಲೆ ಮಾತ್ರ 18 ರಿಂದ 20 ರೂಪಾಯಿಗೆ ಏರಿಕೆಯಾಗಿದೆ. ರೈತರು ಈರುಳ್ಳಿಯ ಜೊತೆಗೆ ಚೀಲವನ್ನೂ ಉಚಿತವಾಗಿ ಕೊಟ್ಟು ಹೋಗಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.
ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ರಾಜ್ಯದ ಕೊಪ್ಪಳ, ಬಳ್ಳಾರಿ, ವಿಜಯಪುರ ಮತ್ತು ಹೊಸಪೇಟೆಯಿಂದ ನೂರಾರು ಕ್ವಿಂಟಾಲ್ ಈರುಳ್ಳಿ ಹೊತ್ತು ತಂದ ರೈತರು ದರ ನೋಡಿ ಕಣ್ಣೀರು ಹಾಕುತ್ತಿದ್ದಾರೆ. ಸ್ಥಳೀಯವಾಗಿ ಬೆಳೆದ ಈರುಳ್ಳಿಗೆ ನಾಸಿಕ್ ಈರುಳ್ಳಿಯ ಅರ್ಧದಷ್ಟು ದರವೂ ಸಿಗುತ್ತಿಲ್ಲ ಎಂಬುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ನಾಡಿನೆಲ್ಲೆಡೆ ಯುಗಾದಿ (Ugadi) ಹಬ್ಬದ ಸಂಭ್ರಮ, ಹಿಂದೂಗಳ ಪಾಲಿನ ವರ್ಷದ ಮೊದಲ ಹಬ್ಬ. ಯುಗಾದಿ ಹಬ್ಬ ಹಿಂದೂಗಳ ಪಾಲಿನ ವರ್ಷದ ಮೊದಲ ಹಬ್ಬ. ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಈ ಹಬ್ಬದ ದಿನ ಹೊಸ ಬಟ್ಟೆ ತೊಟ್ಟು, ಮನೆಯನ್ನು ತಳಿರು ತೋರಣ, ರಂಗೋಲಿಗಳಿಂದ ಅಲಂಕರಿಸಿ, ಪ್ರತಿಯೊಬ್ಬರೂ ಬೇವು ಬೆಲ್ಲವನ್ನು ಹಂಚುತ್ತಾರೆ.ಇಂತಹ ಸಂಭ್ರಮದ ಗಳಿಗೆಯಲ್ಲಿ ನಿಮ್ಮ ಪ್ರೀತಿಪಾತ್ರರಿಗೆ ಮನಸಾರೆ ಹಬ್ಬದ ಶುಭಾಶಯಗಳನ್ನು ಕೋರಲು ಬಯಸಿದರೆ ನಿಮಗಾಗಿ ಇಲ್ಲಿದೆ ಅರ್ಥಪೂರ್ಣ ಸಂದೇಶಗಳು.
ನಿಮ್ಮ ಪ್ರೀತಿಪಾತ್ರರಿಗೆ ಈ ರೀತಿ ಹಬ್ಬದ ಶುಭಾಶಯಗಳನ್ನು ತಿಳಿಸಿ:
ಹೊಸತನವ ಹೊತ್ತು ಯುಗಾದಿ ಬಂದಿದೆ, ಈ ಯುಗಾದಿ ಎಲ್ಲರ ಬಾಳಲ್ಲಿ ಹೊಸ ಹರ್ಷ ತರಲಿ, ಬದುಕಿನಲ್ಲಿ ನೆಮ್ಮದಿ ಇರುವಂತೆ ಮಾಡಲಿ… ಯುಗಾದಿ ಹಬ್ಬದ ಶುಭಾಶಯಗಳು.
ಬದುಕು ಎಂದ ಮೇಲೆ ಸಿಹಿ, ಕಹಿಗಳು ಸಾಮಾನ್ಯ, ಬೇವು ಬೆಲ್ಲದ ಸಮ್ಮಿಳಿತವೇ ನಮ್ಮ ಜೀವನ, ಸಿಹಿಗೆ ಹಿಗ್ಗದೆ, ಕಹಿಗೆ ಜಗ್ಗದೆ ಬದುಕು ಮುನ್ನಡೆಸೋಣ, ಸರ್ವರಿಗೂ ಯುಗಾದಿ ಹಬ್ಬದ ಶುಭಾಶಯಗಳು.
ಬೇವು ಬೆಲ್ಲ ಸವಿಯುತ್ತ ಕಹಿ ನೆನಪು ಮರೆಯುತ, ಸಿಹಿ ನೆನಪು ಚಿಗುರಲಿ, ನೀವು ಕಂಡ ಕನಸುಗಳೆಲ್ಲಾ ನನಸಾಗಲಿ, ಎಲ್ಲರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.
ಹೊಸ ವರ್ಷವು ನಿಮ್ಮೆಲ್ಲಾ ಕನಸುಗಳನ್ನು ನನಸು ಮಾಡಲಿ, ಶಾಂತಿ, ಸಮೃದ್ಧಿ, ಸಂತೋಷ ತರಲಿ. ಯುಗಾದಿ ಹಬ್ಬದ ಶುಭಾಶಯಗಳು.
ಬೇವು ಬೆಲ್ಲದಂತೆ ನೋವು-ನಲಿವು ಬೆರೆಯಲಿ, ಸುಖ, ಶಾಂತಿ, ಸಂತೋಷ ತುಂಬಿದ ಬದುಕು ನಿಮ್ಮದಾಗಲಿ, ಹೊಸ ವರ್ಷದ ಶುಭಾಶಯಗಳು.
ಯುಗಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ… ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ… ಸರ್ವರಿಗೂ ಯುಗಾದಿ ಹಬ್ಬದ ಶುಭಾಶಯಗಳು.
ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲಿ ನೀವು ಕಂಡ ಕನಸು ನನಸಾಗಲಿ, ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.
ಬದುಕಿನ ಕಷ್ಟಗಳೆಂಬ ಕಹಿ ದೂರವಾಗಲಿ, ಬರೀ ಖುಷಿ ಸಿಹಿಯಷ್ಟೇ ತುಂಬಿರಲಿ. ಎಲ್ಲರಿಗೂ ಹೊಸ ಸಂವತ್ಸರದ ಹಾರ್ದಿಕ ಶುಭಾಶಯಗಳು.
ಕಹಿಯಾದ ಬೇವಿನ ಅಂಚಿನಲ್ಲಿ ಬೆಲ್ಲದ ಸಿಂಚನ ಸಿಗಲಿ, ನಿಮ್ಮ ಬಾಳಲ್ಲಿ ಹೊಸ ಚೇತನ, ಉತ್ಸಾಹ, ನೆಮ್ಮದಿ ಇರಲಿ ಯುಗಾದಿ ಹಬ್ಬದ ಶುಭಾಶಯಗಳು. ಯುಗಾದಿ ಹಬ್ಬದ ಸಂಭ್ರಮದಲ್ಲಿ ನೋವೆಲ್ಲಾ ಬತ್ತು ಹೋಗಲಿ, ನಿಮ್ಮೆಲ್ಲರ ಬಾಳಲ್ಲಿ ಸಂತೋಷ ಚಿಮ್ಮಲಿ, ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.
ಹಳೆಯ ನೋವನ್ನೆಲ್ಲಾ ಮರೆಸಿ, ಹೊಸ ಆಶಯಗಳ ಕೊಟ್ಟು ಎಲ್ಲರಿಗೂ ಶುಭವ ತರಲಿ ಯುಗಾದಿ, ಸರ್ವರಿಗೂ ಯುಗಾದಿ ಹಬ್ಬದ ಶುಭಾಶಯಗಳು.
ಯುಗಾದಿಯ ಹೊಸ ಬೆಳಕು ನಿಮ್ಮ ಜೀವನದಲ್ಲಿ ಶಾಂತಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ನಿಮಗೂ ನಿಮ್ಮ ಕುಟುಂಬಕ್ಕೂ ಯುಗಾದಿ ಹಬ್ಬದ ಶುಭಾಶಯಗಳು.
ಬೇವು ಬೆಲ್ಲ ತಿಂದು ಒಳ್ಳೆ ಮಾತಾಡಿ. ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.
ಬೇವು ಬೆಲ್ಲದಂತೆ ಜೀವನದಲ್ಲಿ ಬರುವ ಕಹಿ, ಸಿಹಿಗಳನ್ನು ಸಮನಾಗಿ ಸ್ವೀಕರಿಸೋಣ, ಸರ್ವರಿಗೂ ಯುಗಾದಿ ಹಬ್ಬದ ಶುಭಾಶಯಗಳು.
ನಿಮ್ಮ ಬಾಳಲ್ಲಿ ಬೇವಿನ ಕಹಿಗಿಂತ ಬೆಲ್ಲದ ಸಿಹಿಯೇ ಹೆಚ್ಚಾಗಲಿ. ಸುಖ, ಶಾಂತಿ, ಸಮೃದ್ಧಿ, ಯಶಸ್ಸು ನಿಮ್ಮ ಜೀವನದಲ್ಲಿ ಹೆಚ್ಚಾಗಲಿ. ಯುಗಾದಿಯ ಶುಭಾಶಯಗಳು.
ಯುಗಾದಿಯ ಸೂರ್ಯನ ಬೆಳಕು ಅಂಧಕಾರವನ್ನು ಹೋಗಲಾಡಿಸಿ, ನಿಮಗೆ ಉಜ್ವಲ ಭವಿಷ್ಯದ ಹಾದಿಯನ್ನು ಬೆಳಗಿಸಲಿ, ಯುಗಾದಿ ಹಬ್ಬದ ಶುಭಾಶಯಗಳು.
ಇಂದೋರ್, ಮಾರ್ಚ್ 19: ಇವಿ ಚಾರ್ಜಿಂಗ್ ಸ್ಫೋಟಗೊಂಡ ಪರಿಣಾಮ ಬೆಂಕಿ ಮನೆಗೂ ತಗುಲಿದ್ದು, ಇದರ ಪರಿಣಾಮ ಮನೆಯೊಳಗಿದ್ದ 10ಸಿಲಿಂಡರ್ಗಳು ಸ್ಫೋಟಗೊಂಡಿದ್ದು, 7 ಮಂದಿ ಸಜೀವದಹನವಾಗಿರುವ ಘಟನೆ ಇಂದೋರ್ನಲ್ಲಿ ನಡೆದಿದೆ. ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪುಗಾಲಿಯಾ ಕುಟುಂಬದ ಮನೆಯ ಹೊರಗೆ ವಿದ್ಯುತ್ ವಾಹನ (ಇವಿ) ಚಾರ್ಜಿಂಗ್ ಪಾಯಿಂಟ್ನಲ್ಲಿ ಶಂಕಿತ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷಗಳಲ್ಲಿ, ಜ್ವಾಲೆಗಳು ವಾಹನದಿಂದ ಮೂರು ಅಂತಸ್ತಿನ ವಸತಿ ಕಟ್ಟಡಕ್ಕೆ ವೇಗವಾಗಿ ಹರಡಿ 7 ಮಂದಿ ಸಾವಿಗೆ ಕಾರಣವಾಯಿತು.
ರಾತ್ರಿಯಿಡೀ ಚಾರ್ಜ್ ಮಾಡಲು ಎಲೆಕ್ಟ್ರಿಕ್ ಕಾರನ್ನು ಪ್ಲಗ್ ಇನ್ ಮಾಡಲಾಗಿತ್ತು. ಹಠಾತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಚಾರ್ಜಿಂಗ್ ಪಾಯಿಂಟ್ ನಲ್ಲಿ ಸ್ಫೋಟ ಸಂಭವಿಸಿ, ವಾಹನಕ್ಕೆ ಬೆಂಕಿ ಹೊತ್ತಿಕೊಂಡಿತು. ಮನೆಯೊಳಗೆ ಸಂಗ್ರಹಿಸಲಾಗಿದ್ದ ಒಂದು ಡಜನ್ ಗಿಂತಲೂ ಹೆಚ್ಚು ಎಲ್ ಪಿಜಿ ಸಿಲಿಂಡರ್ಗಳಿಗೂ ಬೆಂಕಿ ತಗುಲಿತ್ತು.
ಹುಣಸೂರು, ಮಾ.19: ಆಹಾರ ಮತ್ತು ನೀರು ಅರಸಿ ನಾಡಿಗೆ ಬಂದಿದ್ದ ಒಂಟಿ ಸಲಗವೊಂದು ವಾಪಸ್ ಕಾಡಿಗೆ ಹೋಗುವ ಸಂಭ್ರಮದಲ್ಲಿ ರೈಲ್ವೆ ಬ್ಯಾರಿಕೇಡ್ಗಳ ನಡುವೆ ಸಿಲುಕಿ ಹಾಕಿಕೊಂಡು ಅಕ್ಷರಶಃ ಮರಣಯಾತನೆ ಅನುಭವಿಸಿದ ಘಟನೆ ಉಡುವೆಪುರ ಗ್ರಾಮದ ಬಳಿ ನಡೆದಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಹೊರಬಂದಿದ್ದ ಈ ಒಂಟಿ ಸಲಗ, ಹಸಿವಿನಿಂದಾಗಿ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದ ರೈತರ ಜಮೀನುಗಳಿಗೆ ನುಗ್ಗಿತ್ತು. ಬೆಳ್ಳಂಬೆಳಿಗ್ಗೆ ಜಮೀನಿನಲ್ಲಿ ಆನೆಯನ್ನು ಕಂಡ ರೈತರು ಭಯದಿಂದ ಜೋರಾಗಿ ಕೂಗಾಡಿದ್ದಾರೆ. ಜನರ ಚೀರಾಟ ಮತ್ತು ವಾಹನಗಳ ಹಾರ್ನ್ ಸದ್ದಿನಿಂದ ಬೆದರಿದ ಆನೆ, ಗಾಬರಿಯಿಂದ ಕಾಡಿನತ್ತ ಓಡಲಾರಂಭಿಸಿದೆ. ಕಾಡಿನೊಳಗೆ ಪ್ರವೇಶಿಸುವ ಬರದಲ್ಲಿ ಆನೆಯು ರೈಲ್ವೆ ಹಳಿಗಳಿಂದ ನಿರ್ಮಿಸಲಾಗಿದ್ದ ತಡೆಗೋಡೆಯ (Railway Track Fence) ಅಡಿಯಿಂದ ನುಸುಳಲು ಪ್ರಯತ್ನಿಸಿದೆ. ಈ ವೇಳೆ ಆನೆಯ ದೇಹವು ಕಂಬಗಳ ನಡುವೆ ಸಿಲುಕಿಕೊಂಡಿದೆ. ಸುಮಾರು ಹೊತ್ತು ಆನೆಯು ಹೊರಬರಲಾರದೆ ಒದ್ದಾಡಿದ್ದು, ಅದರ ಸ್ಥಿತಿಯನ್ನು ಕಂಡು ಸ್ಥಳೀಯರು ಮರುಗಿದ್ದಾರೆ. ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಆನೆಗೆ ಯಾವುದೇ ಗಾಯವಾಗದಂತೆ ಜಾಣ್ಮೆಯಿಂದ ಅದನ್ನು ಬಿಡಿಸುವಲ್ಲಿ ಯಶಸ್ವಿಯಾದರು.
ನೀವು ಕ್ರೈಮ್ ಥ್ರಿಲ್ಲರ್ ಸಿನಿಮಾಗಳನ್ನು ಇಷ್ಟಪಡುತ್ತೀರಾ? ಒಟಿಟಿಯಲ್ಲಿ ಉತ್ತಮ ಕ್ರೈಮ್ ಥ್ರಿಲ್ಲರ್ ಸಿನಿಮಾವನ್ನು ನೋಡಲು ಬಯಸುತ್ತೀರಾ? ಈ ಸಿನಿಮಾ ಹತ್ತು ವರ್ಷಗಳ ಹಿಂದೆ, ಅಂದರೆ 2016ರಲ್ಲಿ ಬಿಡುಗಡೆಯಾಯಿತು. ಆದರೆ ಈ ಸಿನಿಮಾದ ಹೆಸರು ಖಂಡಿತವಾಗಿಯೂ ಟಾಪ್ ಕ್ರೈಮ್ ಥ್ರಿಲ್ಲರ್ ಸಿನಿಮಾಗಳ ಪಟ್ಟಿಯಲ್ಲಿದೆ. ಈ ಸಿನಿಮಾದ ಹೆಸರು ‘ಧ್ರುವಂಗಲ್ ಪದಿನಾರು’. ಕಾರ್ತಿಕ್ ನರೇನ್ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಈ ಸಿನಿಮಾ ಮಾಡುವ ಸಮಯದಲ್ಲಿ ಕಾರ್ತಿಕ್ ಕೇವಲ 21 ವರ್ಷ ವಯಸ್ಸಿನವನಾಗಿದ್ದನು. ಉತ್ತಮ ಥ್ರಿಲ್ಲರ್ ಸಿನಿಮಾವನ್ನು ನೀಡಿದರು.
ಅಪಘಾತದಿಂದಾಗಿ ತನ್ನ ಕಾಲು ಕಳೆದುಕೊಂಡ ನಿವೃತ್ತ ಇನ್ಸ್ಪೆಕ್ಟರ್ ತನ್ನ ವೃತ್ತಿಜೀವನದ ಅತ್ಯಂತ ಕಠಿಣ ಪ್ರಕರಣವನ್ನು ಹೇಗೆ ಪರಿಹರಿಸುತ್ತಾನೆ ಎಂಬುದರ ಕುರಿತಾಗಿದೆ ಈ ಸಿನಿಮಾ. ಈ ಸಿನಿಮಾದ ಸಂಪೂರ್ಣ ಕಥೆ ನಿವೃತ್ತ ಪೊಲೀಸ್ ಅಧಿಕಾರಿ ದೀಪಕ್ (ರಹಮಾನ್) ಸುತ್ತ ಸುತ್ತುತ್ತದೆ. ದೀಪಕ್ ಅಪಘಾತದಲ್ಲಿ ತನ್ನ ಕಾಲುಗಳನ್ನು ಕಳೆದುಕೊಳ್ಳುತ್ತಾನೆ. ಅವನು ತನ್ನ ವೃತ್ತಿಜೀವನದ ಕೊನೆಯ, ಅಪೂರ್ಣ ಪ್ರಕರಣವನ್ನು ತನಿಖೆ ಮಾಡುತ್ತಾನೆ.
ಒಂದೇ ರಾತ್ರಿಯಲ್ಲಿ ಮೂರು ವಿಭಿನ್ನ ಘಟನೆಗಳು (ಅಪಘಾತ, ಆತ್ಮಹತ್ಯೆ, ಕೊಲೆ) ನಡೆಯುತ್ತವೆ. ಈ ಚಿತ್ರದ ಪರಾಕಾಷ್ಠೆ ಪ್ರೇಕ್ಷಕರಿಗೆ ಅನಿರೀಕ್ಷಿತ ಆಘಾತವನ್ನು ನೀಡುತ್ತದೆ. ಪೊಲೀಸ್ ತನಿಖೆಯನ್ನು ಇದರಲ್ಲಿ ಬಹಳ ಹತ್ತಿರದಿಂದ ತೋರಿಸಲಾಗಿದೆ. ಈ ಚಿತ್ರ ಹಿಂದಿಯಲ್ಲಿಯೂ ತಯಾರಾಗಲಿದೆ ಎಂಬ ಗುಸುಗುಸು ಕೇಳಿಬರುತ್ತಿದೆ. ನಟ ವರುಣ್ ಧವನ್ ಹಿಂದಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಇದನ್ನು ಈ ಹಿಂದೆ ಕನ್ನಡದಲ್ಲಿಯೂ ರಿಮೇಕ್ ಮಾಡಲಾಗಿತ್ತು. ಇದರ ಹೆಸರು ‘ದೃಶ್ಯ’.
ಈ ಚಿತ್ರದ ವಿಶೇಷವೆಂದರೆ ಇದು ಕೇವಲ 1 ಗಂಟೆ 45 ನಿಮಿಷ ಇದೆ. ಈ ಚಿತ್ರವು IMDB ಅಲ್ಲಿ 8.2 ರೇಟಿಂಗ್ ಪಡೆದಿದೆ. ಈ ಚಿತ್ರವು ಹಲವು ಪ್ರಶಸ್ತಿಗಳನ್ನು ಸಹ ಗೆದ್ದಿದೆ. ವೆಂಕಟೇಶ್ ಮತ್ತು ಮೋಹನ್ ಲಾಲ್ ನಟಿಸಿದ ‘ದೃಶ್ಯಂ’ ನಂತಹ ಕ್ರೈಮ್ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳನ್ನು ನೀವು ಇಷ್ಟಪಟ್ಟರೆ, ನಿಮಗೆ ಈ ಚಿತ್ರವೂ ಖಂಡಿತವಾಗಿಯೂ ಇಷ್ಟವಾಗುತ್ತದೆ. ಪ್ರಸ್ತುತ, ಈ ಚಿತ್ರ ಜಿಯೋ ಹಾಟ್ಸ್ಟಾರ್ನಲ್ಲಿ ಲಭ್ಯವಿದೆ.
ಬೆಂಗಳೂರು, ಮಾರ್ಚ್ 18: ಯುಗಾದಿ (Ugadi) ಹಾಗೂ ರಂಜಾನ್ ಹಬ್ಬದ ಸಾಲು ರಜೆಗಳ ಸಂದರ್ಭ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ (SWR) ಬೆಂಗಳೂರು (Bangalore) ನಗರದಿಂದ ವಿವಿಧ ಸ್ಥಳಗಳಿಗೆ ವಿಶೇಷ ರೈಲುಗಳ ಸೇವೆ ಒದಗಿಸುತ್ತಿದೆ. ಬೆಳಗಾವಿ, ಹುಬ್ಬಳ್ಳಿ, ವಿಜಯಪುರ, ಹೋಸಪೇಟೆ ಹಾಗೂ ಗೋವಾ (ಮಡಗಾಂವ್) ಮಾರ್ಗಗಳಿಗೆ ಈ ವಿಶೇಷ ರೈಲುಗಳು ಸಂಚರಿಸುತ್ತಿವೆ. ವಿಶೇಷ ರೈಲುಗಳ ವೇಳಾಪಟ್ಟಿ, ಎಲ್ಲೆಲ್ಲಿ ನಿಲುಗಡೆ ಹೊಂದಿವೆ ಎಂಬ ಹಾಗೂ ಇತರ ಮಾಹಿತಿ ಇಲ್ಲಿದೆ.
ಬೆಂಗಳೂರು ಬೆಳಗಾವಿ ವಿಶೇಷ ರೈಲು
ರೈಲು ಸಂಖ್ಯೆ 06503 ಮಾರ್ಚ್ 18ರಂದು ಸಂಜೆ 7 ಗಂಟೆಗೆ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ (SMVT) ಬೆಂಗಳೂರಿನಿಂದ ಹೊರಟು, ಮುಂದಿನ ದಿನ ಬೆಳಿಗ್ಗೆ 7.35ಕ್ಕೆ ಬೆಳಗಾವಿ ತಲುಪಿದೆ.
ರಿಟರ್ನ್ ರೈಲು ಸಂಖ್ಯೆ 06504 ಮಾರ್ಚ್ 22ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು, ಮಾರ್ಚ್ 23ರಂದು ಬೆಳಿಗ್ಗೆ 5ಕ್ಕೆ ಬೆಂಗಳೂರು ತಲುಪಲಿದೆ.
ಈ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೊಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.
ಬೆಂಗಳೂರು ವಿಜಯಪುರ ವಿಶೇಷ ರೈಲು
ರೈಲು ಸಂಖ್ಯೆ 06277 ಮಾರ್ಚ್ 18ರಂದು ರಾತ್ರಿ 9.50ಕ್ಕೆ ಯಶವಂತಪುರದಿಂದ ಹೊರಟು, ಮುಂದಿನ ದಿನ ಬೆಳಿಗ್ಗೆ 9.45ಕ್ಕೆ ವಿಜಯಪುರ ತಲುಪಿದೆ.
ರಿಟರ್ನ್ ರೈಲು ಸಂಖ್ಯೆ 06278 ಮಾರ್ಚ್ 22ರಂದು ಮಧ್ಯಾಹ್ನ 1.30ಕ್ಕೆ ವಿಜಯಪುರದಿಂದ ಹೊರಟು, ಮಾರ್ಚ್ 23ರಂದು ರಾತ್ರಿ 12.30ಕ್ಕೆ ಯಶವಂತಪುರ ತಲುಪಲಿದೆ.
ಈ ರೈಲು ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.
ಹುಬ್ಬಳ್ಳಿ-ಯಶವಂತಪುರ ವಿಶೇಷ ರೈಲು
ರೈಲು ಸಂಖ್ಯೆ 07379 ಮಾರ್ಚ್ 18ರಂದು ಮಧ್ಯಾಹ್ನ 12ಕ್ಕೆ ಹುಬ್ಬಳ್ಳಿಯಿಂದ ಹೊರಟು, ಅದೇ ದಿನ ರಾತ್ರಿ 8.15ಕ್ಕೆ ಯಶವಂತಪುರ ತಲುಪಿದೆ.
ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ.
ಬೆಂಗಳೂರು ಗೋವಾ (ಮಡಗಾಂವ್) ವಿಶೇಷ ರೈಲು
ರೈಲು ಸಂಖ್ಯೆ 06267 ಮಾರ್ಚ್ 18ರಂದು ಮಧ್ಯಾಹ್ನ 12ಕ್ಕೆ ಯಶವಂತಪುರದಿಂದ ಹೊರಟು, ಮಾರ್ಚ್ 19ರಂದು ಬೆಳಿಗ್ಗೆ 6.45ಕ್ಕೆ ಮಡಗಾಂವ್ ತಲುಪಿದೆ.
ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮಂಗಳೂರು ಸಮೀಪದ ಹಲವಾರು ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ.
ರಿಟರ್ನ್ ರೈಲು ಸಂಖ್ಯೆ 06268 ಮಾರ್ಚ್ 19ರಂದು ಬೆಳಿಗ್ಗೆ 11ಕ್ಕೆ ಮಡಗಾಂವ್ನಿಂದ ಹೊರಟು, ಮಾರ್ಚ್ 20ರಂದು ಬೆಳಿಗ್ಗೆ 5.20ಕ್ಕೆ ಬೆಂಗಳೂರು ಕ್ಯಾಂಟೋನ್ಮೆಂಟ್ ತಲುಪಲಿದೆ. ಈ ರೈಲು SMVT ಬೆಂಗಳೂರಲ್ಲಿಯೂ ನಿಲುಗಡೆ ಹೊಂದಿದೆ.
ಬೆಂಗಳೂರು ಹೋಸಪೇಟೆ ವಿಶೇಷ ರೈಲು
ರೈಲು ಸಂಖ್ಯೆ 06533 ಮಾರ್ಚ್ 18ರಂದು ಸಂಜೆ 6.15ಕ್ಕೆ ಯಶವಂತಪುರದಿಂದ ಹೊರಟು, ಮಾರ್ಚ್ 19ರಂದು ಮಧ್ಯಾಹ್ನ 4ಕ್ಕೆ ಹೋಸಪೇಟೆ ತಲುಪಲಿದೆ. ರಿಟರ್ನ್ ರೈಲು ಸಂಖ್ಯೆ 06534 ಮಾರ್ಚ್ 19ರಂದು ಬೆಳಿಗ್ಗೆ 9ಕ್ಕೆ ಹೋಸಪೇಟೆಯಿಂದ ಹೊರಟಿದ್ದು, ಸಂಜೆ 7.20ಕ್ಕೆ ಯಶವಂತಪುರ ತಲುಪಲಿದೆ.
ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕ್ಯಾಂಟೋನ್ಮೆಂಟ್ ಮತ್ತು ತೋರಣಗಲ್ಲು ನಿಲ್ದಾಣಗಳಲ್ಲಿ ಈ ರೈಲಿಗೆ ನಿಲುಗಡೆ ಇರುತ್ತದೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಊರಿಗೆ ತೆರಳಿ ವಾಪಸಾಗುತ್ತಿರುವ ಹಿನ್ನೆಲೆಯಲ್ಲಿ, ಈ ವಿಶೇಷ ರೈಲುಗಳು ಪ್ರಯಾಣಿಕರಿಗೆ ದೊಡ್ಡ ಮಟ್ಟದಲ್ಲಿ ಅನುಕೂಲ ಕಲ್ಪಿಸಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಕಠ್ಮಂಡು, ಮಾರ್ಚ್ 19: ನೇಪಾಳದಲ್ಲಿ ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಆದರೆ ಪವಾಡವೆಂಬಂತೆ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಪೈಲಟ್ ಸೇರಿ ಐದು ಪ್ರಯಾಣಿಕರು ಬದುಕುಳಿದಿದ್ದಾರೆ.ಆದರೆ ಒಬ್ಬ ವ್ಯಕ್ತಿಯನ್ನು ಹೊರತುಪಡಿಸಿ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ, ಅವರ ಕಾಲಿಗೆ ಸಣ್ಣಪುಟ್ಟ ಗಾಯವಾಗಿದೆ. ಏರ್ ರಾಜವಂಶದ ಚಾಪರ್ ಅಪಘಾತಕ್ಕೊಳಗಾಗಿರುವ ಹೆಲಿಕಾಪ್ಟರ್ ಆಗಿದೆ. ಕೃಷಿ ಭೂಮಿಯಲ್ಲಿ ಇಳಿಯುವಾಗ ಹೆಲಿಕಾಪ್ಟರ್ ಅಪಘಾತಕ್ಕೀಡಾಯಿತು. ಗಾಯಗೊಂಡ ಪ್ರಯಾಣಿಕರನ್ನು ಕಂಪನಿಯ ಮತ್ತೊಂದು ಹೆಲಿಕಾಪ್ಟರ್ ಮೂಲಕ ಕಠ್ಮಂಡುವಿಗೆ ಸ್ಥಳಾಂತರಿಸಲಾಯಿತು. ಉಳಿದ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.
ಆಮಿರ್ ಖಾನ್ ನಟನೆಯ ‘ದಂಗಲ್’ ಸಿನಿಮಾ ವಿಶಿಷ್ಟ ದಾಖಲೆಗಳನ್ನು ಮಾಡಿದ್ದು ಗೊತ್ತೇ ಇದೆ. ಈ ಸಿನಿಮಾ ಮೂಲಕ ವಿಶಿಷ್ಟ ದಾಖಲೆ ಬರೆದರು. ‘ದಂಗಲ್’ ಚಿತ್ರದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ ಅವರು, ಅಲ್ಪಾವಧಿಯಲ್ಲಿಯೇ ತಮ್ಮ ಸಹಜ ನಟನೆಗಾಗಿ ಮೆಚ್ಚುಗೆಯನ್ನು ಪಡೆದರು. ಹಲವು ವರ್ಷಗಳ ಕಠಿಣ ಪರಿಶ್ರಮದಿಂದ ಅವರು ಮುಂಬೈನಲ್ಲಿ ಭವ್ಯವಾದ ಮನೆಯನ್ನು ಖರೀದಿಸಿದ್ದಾರೆ.
ಸಾನ್ಯಾ ಈ ಅಪಾರ್ಟ್ಮೆಂಟ್ ಅನ್ನು ಸುಮಾರು 14.3 ಕೋಟಿ ರೂಪಾಯಿ ನೀಡಿ ಖರೀದಿಸಿದ್ದಾರೆ. ಇದಕ್ಕಾಗಿ ಅವರು ಕೇವಲ 71.5 ಲಕ್ಷ ರೂ. ಸ್ಟಾಂಪ್ ಡ್ಯೂಟಿಯಲ್ಲಿ ಪಾವತಿಸಿದ್ದಾರೆ . ಮುಂಬೈನಲ್ಲಿ ಇದು ಅವರ ಎರಡನೇ ಮನೆ. ಅವರು 2018 ರಲ್ಲಿ ಫ್ಲಾಟ್ ಖರೀದಿಸಿದ್ದರು. ಆ ಫ್ಲ್ಯಾಟ್ ಚಿಕ್ಕದಾಗಿತ್ತು. ತಮ್ಮ ಕುಟುಂಬ ಸದಸ್ಯರು ದೆಹಲಿಯಿಂದ ಬಂದಾಗ ಆರಾಮವಾಗಿರಬೇಕೆಂಬ ಉದ್ದೇಶದಿಂದ ಈ ದೊಡ್ಡ ಮನೆಯನ್ನು ಖರೀದಿಸಿರುವುದಾಗಿ ಹೇಳಿದ್ದಾರೆ. ಈ ಮನೆ ವಿಶಾಲವಾಗಿದೆ.
ಈ ಮನೆ ಸಮುದ್ರಕ್ಕೆ ಮುಖ ಮಾಡಿಕೊಂಡಿದೆ. ಹೀಗಾಗಿ, ಮನೆಯಲ್ಲೇ ಕುಳಿತು ಸಮುದ್ರ ತೀರದಲ್ಲಿ ನಡೆಯುವ ದೃಶ್ಯಗಳನ್ನು ಅವರು ಕಣ್ತುಂಬಿಕೊಳ್ಳಬಹುದು. ಸಮುದ್ರವನ್ನು ನೋಡುತ್ತಾ ಮತ್ತು ಸೂರ್ಯಾಸ್ತವನ್ನು ಆನಂದಿಸುವ ವಿಶಾಲವಾದ ಬಾಲ್ಕನಿಗಳಿವೆ.
ಆರಂಭದಲ್ಲಿ, ಆರ್ಥಿಕ ಸಮಸ್ಯೆಗಳಿಂದಾಗಿ ಸನ್ಯಾ ಮನೆ ಖರೀದಿಸಲು ಹಿಂಜರಿಯುತ್ತಿದ್ದರು. ಆದರೆ, ಬಾಡಿಗೆಗೆ ಪಡೆಯುವುದಕ್ಕಿಂತ ಸ್ವಂತ ಮನೆ ಹೊಂದಿರುವುದು ಉತ್ತಮ ಎಂದು ಅವರ ತಂದೆ ಈ ನಿರ್ಧಾರ ತೆಗೆದುಕೊಳ್ಳುವಂತೆ ಪ್ರೋತ್ಸಾಹಿಸಿದರು.ಈಗ ಅವರ ಆಸೆ ಈಡೇರಿರುವುದರಿಂದ, ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಅವರಿಗೆ ಶುಭ ಹಾರೈಸುತ್ತಿದ್ದಾರೆ. ಸಾನ್ಯಾ ಅವರು ಬಾಲಿವುಡ್ನಲ್ಲಿ ಹೆಸರು ಮಾಡಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿ ಗಮನ ಸೆಳೆದಿದ್ದಾರೆ. ‘ದಂಗಲ್’ ಅವರ ಮೊದಲ ಸಿನಿಮಾ. ಈ ಚಿತ್ರ ಅವರಿಗೆ ಸಾಕಷ್ಟು ಜನಪ್ರಿಯತೆಯನ್ನು ನೀಡಿತು.
ಮಿರ್ಜಾಪುರ, ಮಾರ್ಚ್ 19: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ವಿಂಧ್ಯಾಚಲ ಪ್ರದೇಶದಲ್ಲಿ ಹೊಸದಾಗಿ ಅಗಲೀಕರಣಗೊಂಡ ರಸ್ತೆಯ ಮಧ್ಯದಲ್ಲಿ ಹ್ಯಾಂಡ್ ಪಂಪ್ ಇರುವುದು ತೀವ್ರ ಆಕ್ರೋಶವನ್ನು ಹುಟ್ಟುಹಾಕಿತ್ತು. ವಿಂಧ್ಯವಾಸಿನಿ ದೇವಸ್ಥಾನಕ್ಕೆ ಹೋಗುವ ಪ್ರಮುಖ ಮಾರ್ಗವಾದ ದೂಧ್ನಾಥ್ ತಿರಹಾದಿಂದ ವಿಂಧ್ಯಚಲದವರೆಗೆ ರಸ್ತೆಯನ್ನು ಅಗಲೀಕರಣ ಮಾಡಲಾಗುತ್ತಿದೆ. ರಸ್ತೆಬದಿಯಲ್ಲಿರುವ ಹ್ಯಾಂಡ್ ಪಂಪ್ ಅನ್ನು ತೆಗೆದುಹಾಕುವ ಬದಲು, ಅಧಿಕಾರಿಗಳು ಅದರ ಸುತ್ತ ರಸ್ತೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ.ವಿಸ್ತರಣೆಯ ನಂತರ ಅದನ್ನು ಮಧ್ಯದಲ್ಲಿಯೇ ಬಿಟ್ಟಿದ್ದರು.
ಕೈ ಪಂಪ್ ಮೊದಲು ಬದಿಯಲ್ಲಿತ್ತು, ಆದರೆ ಅಗಲಗೊಳಿಸಿದ ನಂತರ ಅದು ಮಧ್ಯದಲ್ಲಿ ಬಂದಿತ್ತು ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ. ಆದರೆ ಈಗ ವಾಹನ ಓಡಾಡುವಾಗ ಮಧ್ಯದಲ್ಲಿ ಹ್ಯಾಂಡ್ ಪಂಪ್ ಇದ್ದರೆ ಅಲ್ಲಿ ಹೋಗಿ ನೀರು ತೆಗೆದುಕೊಳ್ಳಲು ಕೂಡ ನಿವಾಸಿಗಳಿಗೆ ತೊಂದರೆಯಾಗುತ್ತದೆ ಎಂಬುದು ಜನರ ವಾದ. ಕೊನೆಗೂ ಈಗ ಆ ಹ್ಯಾಂಡ್ಪಂಪನ್ನು ಅಲ್ಲಿಂದ ಸ್ಥಳಾಂತರಿಸಲಾಗಿದೆ.