ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ: ಈ ಜಿಲ್ಲೆಗಳಿಗೆ ಅಲರ್ಟ್!
ಬೆಂಗಳೂರು, ಮಾ.19: ರಾಜ್ಯದಾದ್ಯಂತ ಬೇಸಿಗೆಯ ಬಿಸಿಲು ಏರುತ್ತಿದ್ದರೂ, ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನೆನ್ನೆ ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯಾಗಿತ್ತು. ಇಂದು ಕೂಡ ಮಳೆ ಬರುವ ಸಾಧ್ಯ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜಧಾನಿಯಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ (ಸುಮಾರು 55% ಮಳೆಯ…