Headlines

nagaraj11081993

3D ತಂತ್ರಜ್ಙಾನದಲ್ಲಿ ಬರಲಿದೆ ‘ಕೊರಗಜ್ಜ’ ಚಿತ್ರ: ಜೊತೆಗೆ ಮತ್ತೊಂದು ಸಾಹಸ

ಸುಧೀರ್ ಅತ್ತಾವರ್ ನಿರ್ದೇಶನ ಮಾಡಿರುವ ‘ಕೊರಗಜ್ಜ’ (Koragajja) ಸಿನಿಮಾ ಚಿತ್ರೀಕರಣದ ಆರಂಭದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿ ಮಾಡುತ್ತಲೇ ಇದೆ. ಸಿನಿಮಾ ಈಗಾಗಲೇ ಬಿಡುಗಡೆ ಆಗಬೇಕಿತ್ತು ಆದರೆ ಇದೀಗ ಮತ್ತೊಮ್ಮೆ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಈ ಬಾರಿ ಕೆಲವು ವಿಶೇಷ ಕಾರಣಗಳಿಗೆ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ. ಸಿನಿಮಾ ತಂಡದಿಂದ ಹೊರಬಿದ್ದಿರುವ ಹೊಸ ಅಪ್​​ಡೇಟ್ ಎಂದರೆ ‘ಕೊರಗಜ್ಜ’ ಸಿನಿಮಾ ಇದೀಗ 3ಡಿ ತಂತ್ರಜ್ಙಾನದೊಂದಿಗೆ ಬಿಡುಗಡೆ ಆಗಲಿದೆ. ಸಾಮಾನ್ಯವಾಗಿ ಚಿತ್ರೀಕರಣದ ವೇಳೆಯಲ್ಲೇ 3ಡಿ ಶೂಟಿಂಗ್ ಮಾಡುವುದು ಸಂಪ್ರದಾಯ….

Read More

IPL: ಐಪಿಎಲ್​ನಲ್ಲಿ ಅತಿ ಹೆಚ್ಚು ನಾಯಕರನ್ನು ಕಂಡ ತಂಡಗಳು ಯಾವ್ಯಾವು ಗೊತ್ತಾ?

ಮಾರ್ಚ್ 28 ರಂದು 2026 ರ ಐಪಿಎಲ್ (IPL 2026) ಆರಂಭವಾಗಲಿದ್ದು, 19 ನೇ ಸೀಸನ್ ಆರಂಭವಾಗುವ ಮುನ್ನ ಸನ್‌ರೈಸರ್ಸ್ ಹೈದರಾಬಾದ್ (SRH) ತನ್ನ ಹೊಸ ನಾಯಕನನ್ನು ಘೋಷಿಸಿದೆ. ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ (Ishan Kishan) ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಚುಕ್ಕಾಣಿ ಹಿಡಿದ 11 ನೇ ನಾಯಕ ಇಶಾನ್ ಕಿಶನ್. ಕೆಲವು ಫ್ರಾಂಚೈಸಿಗಳು ನಾಯಕರನ್ನು ಬದಲಿಸುವುದನ್ನೇ ಕಾಯಕ ಮಾಡಿಕೊಂಡಿವೆ. ಪ್ರತಿ ಸೀಸನ್​ಗೂ ಒಬ್ಬೊಬ್ಬರನ್ನು ನಾಯಕನಾಗಿ ನೇಮಿಸಿದ ನಿದರ್ಶನಗಳು ಇವೆ. ಹಾಗಿದ್ದರೆ,…

Read More

ಐತಿಹಾಸಿಕ ಮೇಲುಕೋಟೆ ವೈರಮುಡಿ ಉತ್ಸವಕ್ಕೆ ಸ್ಪಾನ್ಸರ್​​: ಖಾಲಿ ಆಯ್ತಾ ಸರ್ಕಾರದ ಖಜಾನೆ?

ಮಂಡ್ಯ, ಮಾರ್ಚ್​​ 18: ವೈರಮುಡಿ ಉತ್ಸವ ಕರ್ನಾಟಕದ ಅತ್ಯಂತ ಭವ್ಯ ಆಚರಣೆಗಳಲ್ಲೊಂದು. ವಜ್ರಖಚಿತ ಕಿರೀಟಧಾರಿಯಾದ ಶ್ರೀ ಚೆಲುವನಾರಾಯಣಸ್ವಾಮಿಯನ್ನು (Cheluvanarayana Swamy) ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಭಕ್ತಿ ಮತ್ತು ಸಂಸ್ಕೃತಿಯ ಸಮ್ಮಿಲನವಾಗುವ ಈ ಉತ್ಸವದಲ್ಲಿ ಈಗ ಹೊಸ ವಿವಾದವೊಂದು ಸೃಷ್ಟಿಯಾಗಿದೆ. ಸರ್ಕಾರದಿಂದ ನಡೆಯುತ್ತಿದ್ದ ಉತ್ಸವ ಇದೀಗ ಖಾಸಗಿ ಪ್ರಾಯೋಜಕತ್ವಕ್ಕೆ ಮೊರೆ ಹೋಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಇದಕ್ಕೆ ಅಧಿಕಾರಿಗಳು ಕೊಡುತ್ತಿರುವ ಉತ್ತರವೇ ಬೇರೆ. ಪ್ರಯೋಜಕತ್ವಕ್ಕೆ ಮೊರೆ ಹೋದ ಸರ್ಕಾರ? ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ…

Read More

ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಬೇರೆಡೆಗೆ ಡೈವರ್ಟ್

ಬೆಂಗಳೂರು, (ಮಾರ್ಚ್ 18): ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಿನ್ನೆ (ಮಾರ್ಚ್ 17) ವರ್ಷದ ಮಳೆಯಾಗಿದ್ದು, ಇಂದು (ಮಾರ್ಚ್ 18) ಸಹ ಮಳೆಯಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಸುತ್ತಮುತ್ತ ಭಾರೀ ಆಲಿಕಲ್ಲು ಮಳೆಯಾಗುತ್ತಿದೆ. ಇದರಿಂದ ಮಳೆ ನೀರು ನುಗ್ಗಿ ಬಸ್ ನಿಲ್ಥಾಣ ಸೇರಿದಂತೆ ಹೆದ್ದಾರಿಯಲ್ಲಿ ಜನರ ಪರದಾಡುತ್ತಿದ್ದಾರೆ. ಇನ್ನು ಭಾರೀ ಮಳೆಯಿಂದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (kempegowda international airport) ಆಗಮಿಸಬೇಕಿದ್ದ  20ಕ್ಕೂ ಅಧಿಕ ವಿಮಾನಗಳು ಡೈವರ್ಟ್ ವಿಮಾನಗಳನ್ನು ಪಕ್ಕದ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡಿಗೆ…

Read More

IPL: ಧೋನಿ, ರೋಹಿತ್, ಕೊಹ್ಲಿ.. ಅತಿ ಹೆಚ್ಚು ರನ್ ಗಳಿಸಿದ ನಾಯಕ ಯಾರು ಗೊತ್ತಾ?

ಐಪಿಎಲ್ ಇತಿಹಾಸದಲ್ಲಿ ನಾಯಕನಾಗಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿದೆ. ಕೊಹ್ಲಿ 2011 ರಿಂದ 2023 ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಿದ್ದರು. ಈ ಅವಧಿಯಲ್ಲಿ ನಾಯಕನಾಗಿ 143 ಪಂದ್ಯಗಳನ್ನಾಡಿದ್ದ ಕೊಹ್ಲಿ 4994 ರನ್ ಬಾರಿಸಿದ್ದರು. ಇದರಲ್ಲಿ ಐದು ಶತಕಗಳು ಮತ್ತು 37 ಅರ್ಧಶತಕಗಳನ್ನು ಸೇರಿದ್ದವು. ಆದರೂ ಕೊಹ್ಲಿಗೆ ತಂಡವನ್ನು ಟ್ರೋಫಿ ಗೆಲುವಿನತ್ತ ಮುನ್ನಡೆಸಲು ಸಾಧ್ಯವಾಗಲಿಲ್ಲ. ಎರಡನೇ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಐದು ಐಪಿಎಲ್ ಪ್ರಶಸ್ತಿಗಳಿಗೆ ಮುನ್ನಡೆಸಿದ…

Read More

ಶೂನ್ಯದಿಂದ ಆಸ್ತಿ ಸಂಪಾದನೆ ಮಾಡುವುದು ಹೇಗೆ? ಇಲ್ಲಿದೆ ತಿಳಿದಿರಬೇಕಾದ ಸಂಗತಿಗಳು

ಏನೂ ಬಂಡವಾಳ ಇಲ್ಲದೇ ಜನರು ಉನ್ನತ ಹಂತಕ್ಕೆ ಹೋಗಿರುವ ಉದಾಹರಣೆಗಳು ಹಲವಿವೆ. ಪಿತ್ರಾರ್ಜಿತ ಆಸ್ತಿ ಅಥವಾ ತಂದೆ ತಾಯಿಯ ಹಣದ ನೆರವು, ಮನೆ ಇತ್ಯಾದಿ ಯಾವ ಸೌಲಭ್ಯವೂ ಸ್ವಂತವಾಗಿ ಹಣ, ಆಸ್ತಿ ಸಂಪಾದನೆ ಮಾಡುವುದು ನಿಜಕ್ಕೂ ಸಾಧನೆಯೇ. ಈ ನಿಟ್ಟಿನಲ್ಲಿ ಯಾವುದೇ ವ್ಯಕ್ತಿಯ ಮೊದಲ ಮುಖ್ಯ ಅಂಶ ಆತನ ಸಂಪಾದನೆಯ ಶಕ್ತಿ. ಹಣ ಸಂಪಾದನೆಗೆ ಬೇಕಾದ ಅಗತ್ಯ ಕೌಶಲ್ಯಗಳನ್ನು ಪಡೆಯುವುದು ಬಹಳ ಮುಖ್ಯ. ಹಣವಂತರಾಗಲು ಮೂರು ಅಂಶಗಳಿರಬೇಕು. ಹಣ ಗಳಿಕೆ, ಹಣ ಉಳಿಸುವಿಕೆ ಮತ್ತು ಹಣ ಹೂಡಿಕೆ….

Read More

‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ

ಪುನೀತ್ ರಾಜ್​​ಕುಮಾರ್ (Puneeth Rajkumar) ಮತ್ತು ರಮ್ಯಾ ನಟನೆಯ ‘ಆಕಾಶ್’ ಸಿನಿಮಾ ಬಿಡುಗಡೆ ಆಗಿ 21 ವರ್ಷಗಳಾಗಿವೆ. ಇತ್ತೀಚೆಗಷ್ಟೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿತ್ತು. ನಟಿ ರಮ್ಯಾ ಸಹ ‘ಆಕಾಶ್’ ಸಿನಿಮಾದ ಮರು ಬಿಡುಗಡೆ ಶೋಗೆ ಹೋಗಿ ಎಂಜಾಯ್ ಮಾಡಿದ್ದರು. ಇದೀಗ ನಟಿ ರಮ್ಯಾ ಅವರು ‘ಆಕಾಶ್’ ಸಿನಿಮಾದ ಶೂಟಿಂಗ್​​ನ ವಿಡಿಯೋ ಒಂದನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಪುನೀತ್ ರಾಜ್​​ಕುಮಾರ್, ಅಶ್ವಿನಿ ಪುನೀತ್ ರಾಜ್​​ಕುಮಾರ್, ರಾಘಣ್ಣ, ರಾಜ್​​ಕುಮಾರ್, ಪಾರ್ವತಮ್ಮ, ಯುವ, ವಿನಯ್ ರಾಜ್​​ಕುಮಾರ್, ಮಹೇಶ್ ಬಾಬು ಇನ್ನೂ…

Read More

ಇಸ್ರೇಲ್ ದಾಳಿಯಲ್ಲಿ ನಮ್ಮ ದೇಶದ ಗುಪ್ತಚರ ಸಚಿವ ಎಸ್ಮಾಯಿಲ್ ಖತೀಬ್ ಹತ್ಯೆ; ಇರಾನ್ ಸ್ಪಷ್ಟನೆ

ನವದೆಹಲಿ, ಮಾರ್ಚ್ 18: ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್​ನ ಗುಪ್ತಚರ ಸಚಿವ ಮೃತಪಟ್ಟಿದ್ದಾರೆ. ಗುಪ್ತಚರ ಇಲಾಖೆಯ ಎಸ್ಮಾಯಿಲ್ ಖತೀಬ್ ಅವರ ಹತ್ಯೆಯನ್ನು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ದೃಢಪಡಿಸಿದ್ದಾರೆ. ಈ ದಾಳಿಯನ್ನು ಅವರು “ಹೇಡಿತನದ ಹತ್ಯೆ” ಎಂದು ಕರೆದಿದ್ದಾರೆ. ಇಸ್ರೇಲ್ ತನ್ನ ಪಡೆಗಳು ಟೆಹ್ರಾನ್ ಮೇಲೆ ರಾತ್ರಿಯಿಡೀ ನಡೆಸಿದ ವೈಮಾನಿಕ ದಾಳಿ ನಡೆಸಿ ಸಚಿವ ಎಸ್ಮಾಯಿಲ್ ಅವರನ್ನು ಹತ್ಯೆ ಮಾಡಿವೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಇರಾನ್ (Iran War) ಕೂಡ ಈ ಬಗ್ಗೆ ದೃಢಪಡಿಸಿದೆ….

Read More

ನೆಲಮಂಗಳದಲ್ಲಿ ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್

ಬೆಂಗಳೂರು, (ಮಾರ್ಚ್ 18): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಹ ಬೇಸಿಗೆ ಮಳೆಯ ಅಬ್ಬರ ಶುರುವಾಗಿದೆ. ನಿನ್ನೆ (ಮಾರ್ಚ್ 17) ಬೆಂಗಳೂರಿನ ಈ ವರ್ಷದ ಮಾಳೆಯಾಗಿದ್ದು, ಇಂದು (ಮಾರ್ಚ್ 18) ಸಹ ಮುಂದುವರೆದಿದೆ. ಸಂಜೆಯಾಗುತ್ತಿದ್ದಂತೆಯೇ ಮಳೆ ಶುರುವಾಗಿದ್ದು, ಭಾರೀ ಬಿರುಗಾಳಿ ಮಳೆಗೆ ನೆಲಮಂಗಲ ನಗರದಲ್ಲಿ ನೇಮ್ ಬೋರ್ಡ್ ಪಿಲ್ಲರ್ ಧರೆಗುರುಳಿದಿದೆ. ನೆಲಮಂಗಲದ ಬಸವನಹಳ್ಳಿ ಕ್ರಾಸ್ ಬಳಿ ನಗರಸಭೆಯಿಂದ ನಿರ್ಮಾಣ ಮಾಡಿದ್ದ ಬೃಹತ್ ನೇಮ್ ಬೋರ್ಡ್ ಪಿಲ್ಲರ್ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ…

Read More

ಹೊಸ ‘ಸ್ಪೈಡರ್​​ಮ್ಯಾನ್’ ಟ್ರೈಲರ್ ಬಿಡುಗಡೆ: ಕಾಣುತ್ತಿದೆ ಸಾಕಷ್ಟು ಬದಲಾವಣೆ

‘ಸ್ಪೈಡರ್​​ಮ್ಯಾನ್’ (Spiderman) ವಿಶ್ವದ ಅತ್ಯಂತ ಜನಪ್ರಿಯ ಮತ್ತು ಯಶಸ್ವಿ ಸೂಪರ್ ಹೀರೋ ಸಿನಿಮಾ ಸರಣಿಗಳಲ್ಲಿ ಪ್ರಮುಖವಾದ ಸಿನಿಮಾ. ‘ಸ್ಪೈಡರ್​​ಮ್ಯಾನ್​’ನ ಹಲವು ಆವೃತ್ತಿಗಳು ಹಾಲಿವುಡ್​​ನಲ್ಲಿ ಈಗಾಗಲೇ ಬಂದಿವೆ. ‘ಸ್ಪೈಡರ್​​ಮ್ಯಾನ್’ ಸರಣಿಯ ಹಲವು ಸಿನಿಮಾಗಳು ಬ್ಲಾಕ್ ಬಸ್ಟರ್ ಸಹ ಆಗಿವೆ. ಇದೀಗ ಇದೇ ಸರಣಿಯ ಹೊಸ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಹೊಸ ಸಿನಿಮಾದ ಟ್ರೈಲರ್ ಇಂದಷ್ಟೆ ಬಿಡುಗಡೆ ಆಗಿದೆ. ಜೊತೆಗೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ. ‘ಸ್ಪೈಡರ್​​ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಹೆಸರಿನ ಸಿನಿಮಾ ಇದಾಗಿದ್ದು, ಟ್ಯಾಗ್​ಲೈನ್​​ನಲ್ಲಿಯೇ…

Read More