Headlines

nagaraj11081993

ಶಮನೂರು ಕುಟುಂಬಕ್ಕೆ ಟಿಕೆಟ್ ಕೊಟ್ರೆ…ಕಾಂಗ್ರೆಸ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು

ದಾವಣಗೆರೆ, (ಮಾರ್ಚ್ 18): ರಾಜ್ಯ ರಾಜಕಾರಣದ ‘ಬೆಣ್ಣೆ ನಗರಿ’ ದಾವಣಗೆರೆಯಲ್ಲಿ ಉಪ ಚುನಾವಣಾ (Davanagere South By Election) ಕಾವು ಜೋರಾಗಿದೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ನಿರಂತರವಾಗಿ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಆದರೆ ಈ ಬಾರಿ ಜಿಲ್ಲೆಯ ಕಾಂಗ್ರೆಸ್ ಮುಸ್ಲಿಂ ಮುಖಂಡು ಬದಲಾವಣೆ ಬಯಸುತ್ತಿದ್ದಾರೆ. ಶಾಮನೂರು ಕುಟುಂಬದ ಹೊರತಾಗಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ ಎಂಬುವುದು ಆಗ್ರಹವಾಗಿದೆ. ಒಂದು ವೇಳೆ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಿದರೆ ಸೋಲಿಸುವುದಾಗಿ ಮುಸ್ಲಿಂ ಮುಖಂಡರು ಬಹಿರಂಗ ಎಚ್ಚರಿಕೆ ನೀಡಿದ್ದಾರೆ. ಹಾಗಾಗಿ ಈ…

Read More

ಏಪ್ರಿಲ್ 1ರಿಂದ ಹೊಸ ಪ್ಯಾನ್ ಅಪ್ಲಿಕೇಶನ್ ನಿಯಮಗಳು ಜಾರಿಗೆ; ಅರ್ಜಿ ಪ್ರಕ್ರಿಯೆ ಸುಲಭವಿರಲ್ಲ

ನವದೆಹಲಿ, ಮಾರ್ಚ್ 18: ಒಬ್ಬ ವ್ಯಕ್ತಿಯ ಹಣಕಾಸು ಕಾರ್ಯಗಳಿಗೆ ಪ್ಯಾನ್ (PAN- Permanent Account Number) ಈಗ ಬಹಳ ಮುಖ್ಯವಾಗಿರುವ ದಾಖಲೆ ಎನಿಸಿದೆ. ಆದಾಯ ತೆರಿಗೆ ಇಲಾಖೆಯು ಈ ಪರ್ಮನೆಂಟ್ ಅಕೌಂಟ್ ನಂಬರ್ ಅನ್ನು ಒದಗಿಸುತ್ತದೆ. ವ್ಯಕ್ತಿಯ ಬಹುತೇಕ ಹಣಕಾಸು ಚಟುವಟಿಕೆಯನ್ನು ದಾಖಲಿಸಲು ಪ್ಯಾನ್ ಸಹಾಯವಾಗುತ್ತದೆ. ಹೀಗಾಗಿ, ಪ್ಯಾನ್ ನಿಯಮಗಳಲ್ಲಿ ಆಗುವ ಬದಲಾವಣೆ ಬಹಳ ಮಹತ್ವ ಎನಿಸುತ್ತದೆ. ಆದಾಯ ತೆರಿಗೆ ಇಲಾಖೆ ಏಪ್ರಿಲ್ 1ರಿಂದ ನಿಯಮ ಪರಿಷ್ಕರಣೆ ಮಾಡಿದೆ. ಏಪ್ರಿಲ್ 1ರಿಂದ ಹೊಸ ಪ್ಯಾನ್ ಅಪ್ಲಿಕೇಶನ್ ನಿಯಮಗಳು…

Read More

ಪೆಟ್ರೋಲ್, ಗ್ಯಾಸ್ ಬಿಕ್ಕಟ್ಟಿಗೆ ನಲುಗಿದ ಪಾಕ್; ಪಾಕಿಸ್ತಾನದ ಗಣರಾಜ್ಯೋತ್ಸವ ಆಚರಣೆಯೇ ರದ್ದು

ಇಸ್ಲಮಾಬಾದ್, ಮಾರ್ಚ್ 18: ವಿಶ್ವಾದ್ಯಂತ ಉಂಟಾಗಿರುವ ಇಂಧನ ಮತ್ತು ಅನಿಲ ಬಿಕ್ಕಟ್ಟಿನಿಂದಾಗಿ ನೆರೆಯ ದೇಶ ಪಾಕಿಸ್ತಾನವೂ ಕಂಗೆಟ್ಟಿದೆ. ಇದೇ ಕಾರಣದಿಂದ ಈ ವರ್ಷ ಪಾಕಿಸ್ತಾನದಲ್ಲಿ ‘ಪಾಕಿಸ್ತಾನ ದಿನಾಚರಣೆ'(ಪಾಕಿಸ್ತಾನದ ರಿಪಬ್ಲಿಕ್ ಡೇ) ಆಚರಿಸದಿರಲು ನಿರ್ಧರಿಸಲಾಗಿದೆ. ಮಾರ್ಚ್ 23ರಂದು ಪಾಕಿಸ್ತಾನದ (Pakistan)  ಗಣರಾಜ್ಯೋತ್ಸವ ಆಚರಿಸಬೇಕಾಗಿತ್ತು. ಆದರೆ, ಹಣ ಹಾಗೂ ಇಂಧನದ ಬಿಕ್ಕಟ್ಟಿನಿಂದ ಈ ಸಂಭ್ರಮಾಚರಣೆಯನ್ನು ರದ್ದುಗೊಳಿಸಲಾಗಿದೆ. “ಸಹೋದರರೇ, ಆಹಾರ ಮತ್ತು ಪಾನೀಯಗಳನ್ನು ಸೇವಿಸಿ ಸಂಭ್ರಮಾಚರಿಸಬೇಡಿ. ಕೇಕ್ ಕತ್ತರಿಸಿ ಮನೆಗೆ ಹೋಗಿ!” ಎಂದು ಸರ್ಕಾರದಿಂದ ಪಾಕಿಸ್ತಾನದ ಜನರಿಗೆ ಸೂಚನೆ ನೀಡಲಾಗಿದೆ. ಇರಾನ್…

Read More

ಕಾಂಗ್ರೆಸ್​​ ಜೊತೆಗಿನ ಮದುವೆ ಹಿಂಸಾತ್ಮಕವಾಗಿದ್ದರಿಂದ ವಿಚ್ಚೇದನ: ಖರ್ಗೆ ಹೇಳಿಕೆಗೆ ದೇವೇಗೌಡರ ಕೌಂಟರ್​

ನವದೆಹಲಿ, ಮಾರ್ಚ್​ 18: ನಿವೃತ್ತಿ ಹೊಂದುತ್ತಿರುವ ಸದಸ್ಯರಿಗೆ ರಾಜ್ಯಸಭೆಯಲ್ಲಿ ಆಯೋಜಿಸಿದ ಬೀಳ್ಕೊಡುಗೆ ಸಮಾರಂಭದ ವೇಳೆ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರನ್ನು ಉದ್ದೇಶಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಡಿದ್ದ ಹಾಸ್ಯಮಯ ಮಾತಿಗೆ ಅದೇ ಶೈಲಿಯಲ್ಲಿ ದೊಡ್ಡಗೌಡರೀಗ ಉತ್ತರ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಜೊತೆಗಿನ ದೇವೇಗೌಡರ ಸಂಬಂಧದ ಬಗ್ಗೆ ತಿಳಿಸಿ ಹಾಸ್ಯ ಮತ್ತು ವ್ಯಂಗ್ಯಭರಿತವಾಗಿ ಮಾತನಾಡಿದ್ದ ಖರ್ಗೆ, ನಾನು ಅವರನ್ನು 54 ವರ್ಷಗಳಿಂದ ಬಲ್ಲೆ ಮತ್ತು ಅವರೊಂದಿಗೆ ಕೆಲಸ ಮಾಡಿದ್ದೇನೆ. ಆದರೆ ಆ ನಂತರ…

Read More

Bangalore Rain: ಸಂಜೆಯಾಗುತ್ತಿದ್ದಂತೆ ಬೆಂಗಳೂರಿಗೆ ಎಂಟ್ರಿಕೊಟ್ಟ ಮಳೆ: ಆಲಿಕಲ್ಲು ಮಳೆ ಕಂಡು ಸಿಟಿ ಮಂದಿ ಖುಷ್

ಬೆಂಗಳೂರು, ಮಾರ್ಚ್​ 18: ಕರ್ನಾಟಕದಲ್ಲಿ ಬೇಸಿಗೆ ಮಳೆ (Rain) ಆರ್ಭಟ ಶುರುವಾಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆ ಆಲಿಕಲ್ಲು ಸಹಿತ ಭಾರಿ ಮಳೆ ಆಗುತ್ತಿದ್ದು, ಇಂದು ಕೂಡ ಮಳೆ ಸುರಿದಿದೆ. ಇತ್ತ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಸಂಜೆ ಆಗುತ್ತಿದ್ದಂತೆ ನಗರದ ಹಲವೆಡೆ ಆಲಿಕಲ್ಲು ಸಹಿತ ಮಳೆ ಆಗಿದೆ. ಆ ಮೂಲಕ ಸಿಲಿಕಾನ್ ಸಿಟಿ ಕೂಲ್​ ಕೂಲ್​ ಆಗಿದೆ. ಆಲಿಕಲ್ಲಿನ ಮಳೆ ಕಂಡು ಸಿಟಿ ಮಂದಿ ಫುಲ್ ಖುಷ್​​. ಏಲೆಲ್ಲಿ ಮಳೆ ರಣ ರಣ…

Read More

Dhurandhar 2 First Half Review: ‘ಧುರಂಧರ್ 2’ ಚಿತ್ರದ ಮೊದಲಾರ್ಧ ವಿಮರ್ಶೆ; ಸಿನಿಮಾದಲ್ಲಿ ಏನೆಲ್ಲ ಇದೆ?

‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ತೆರೆಕಾಣುತ್ತಿದೆ. ಅದಕ್ಕೂ ಮೊದಲು ಅಂದರೆ ಇಂದು (ಮಾರ್ಚ್ 18) ಸಿನಿಮಾ ಪ್ರೀಮಿಯರ್ ಆಗಿದೆ. ಪ್ರೀಮಿಯರ್ ಶೋಗಳ ಟಿಕೆಟ್​​​ಗಳು ಭಾರೀ ಸಂಖ್ಯೆಯಲ್ಲಿ ಮಾರಾಟ ಆಗಿದೆ.  ಈ ಚಿತ್ರ ‘ಧುರಂಧರ್’ ಚಿತ್ರದ ಮುಂದುವರಿದ ಭಾಗ. ಈ ಸಿನಿಮಾ ಸೇಡಿನ ಕಥೆಯನ್ನು ಹೊಂದಿದೆ. ಹಾಗಾದರೆ, ಸಿನಿಮಾದ ಮೊದಲಾರ್ಧದಲ್ಲಿ ಏನೆಲ್ಲ ಇದೆ? ಯಾವ ಭಾಗ ಹೈಲೈಟ್ ಆಗಿದೆ? ಯಾವ ವಿಷಯವನ್ನು ಆದಿತ್ಯ ಧಾರ್ ಹೈಲೈಟ್ ಮಾಡಿದ್ದಾರೆ? ಆ ಬಗ್ಗೆ ಇಲ್ಲಿದೆ ವಿವರ. ಸಿನಿಮಾದ ಮೊದಲಾರ್ಧದ ವಿಶೇಷತೆಗಳೇನು?…

Read More

ಟಪೋರಿ ರೀತಿ ವರ್ತಿಸುತ್ತಾರೆ; ರಾಹುಲ್ ಗಾಂಧಿ ಮುಂದೆ ಮಹಿಳೆಯರು ಓಡಾಡುವುದೇ ಕಷ್ಟ ಎಂದ ಕಂಗನಾ ರಣಾವತ್

ನವದೆಹಲಿ, ಮಾರ್ಚ್ 18: ಬಿಜೆಪಿ ಸಂಸದೆ ಕಂಗನಾ ರಣಾವತ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದಿದ್ದಾರೆ. ರಾಹುಲ್ ಗಾಂಧಿ (Rahul Gandhi) ಯಾವಾಗಲೂ ಮಹಿಳೆಯರಿಗೆ ಮುಜುಗರವಾಗುವಂತೆ ವರ್ತಿಸುತ್ತಾರೆ. ಅವರು ಎದುರು ಬಂದರೆ ಸಾಕು ಮಹಿಳಾ ಸಂಸದರಿಗೆ ಅನ್​ಕಂಫರ್ಟಬಲ್ ಆಗುತ್ತದೆ. ಅವರು ಟಪೋರಿ ರೀತಿ ವರ್ತಿಸುತ್ತಾರೆ. ಯಾರಾದರೂ ಇಂಟರ್​​ವ್ಯೂ ನೀಡುತ್ತಿದ್ದರೆ ಜೋರಾಗಿ ಕಿರುಚುತ್ತಾ ಡಿಸ್ಟರ್ಬ್ ಮಾಡುತ್ತಾರೆ ಎಂದು ಕಂಗನಾ ರಣಾವತ್ ಸಂಸತ್ತಿನ ಸಂಕೀರ್ಣದಲ್ಲಿ ಹೇಳಿದ್ದಾರೆ. ರಾಹುಲ್ ಗಾಂಧಿಯವರು ತಮ್ಮ ಸಹೋದರಿಯಾದ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ…

Read More

ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾಗೆ ಬಿಸಿಸಿಐ ಕಡೆಯಿಂದ ಯುಗಾದಿ ಗಿಫ್ಟ್

ಟೀಂ ಇಂಡಿಯಾದ ಸ್ಟಾರ್ ಆಟಗಾರರಾದ ಜಸ್ಪ್ರೀತ್ ಬುಮ್ರಾ (Jasprit Bumrah) ಮತ್ತು ಅಕ್ಷರ್ ಪಟೇಲ್​ಗೆ ( Axar Patel) ಬಿಸಿಸಿಐನಿಂದ (BCCI) ಯುಗಾದಿ ಗಿಫ್ಟ್ ಸಿಗಲಿದೆ ಎಂದು ವರದಿಯಾಗಿದೆ. ವಾಸ್ತವವಾಗಿ ಈ ಇಬ್ಬರು ಆಟಗಾರರು ಐಸಿಸಿಯ ಪ್ರತಿಯೊಂದು ಈವೆಂಟ್​ಗಳಲ್ಲೂ ಟೀಂ ಇಂಡಿಯಾ ಪರ ಶ್ರೇಷ್ಠ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ತಂಡವನ್ನು ಚಾಂಪಿಯನ್ ಮಾಡುವಲ್ಲಿಯೂ ಶ್ರಮಿಸಿದ್ದಾರೆ. ಹೀಗಾಗಿ ಇವರಿಬ್ಬರ ವಾರ್ಷಿಕ ವೇತನವನ್ನು ಹೆಚ್ಚಿಸಲು ಬಿಸಿಸಿಐ ಯೋಚಿಸಿದೆ ಎಂದು ಹೇಳಲಾಗುತ್ತಿದೆ. ಕೆಲವೇ ದಿನಗಳ ಹಿಂದೆ ಬಿಸಿಸಿಐ ಹೊಸ ಕೇಂದ್ರ…

Read More

‘ಸರ್ಸೆ ಸೆರಗು’ ಹಾಡು ವಿವಾದ: ಆರೋಪಗಳಿಗೆ ಸ್ಪಷ್ಟನೆ ಕೊಟ್ಟ ಪ್ರೇಮ್

ಧ್ರುವ ಸರ್ಜಾ (Dhrva Sarja) ನಟನೆಯ ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ವಿವಾದಕ್ಕೆ ಕಾರಣವಾಗಿದೆ. ಅದರಲ್ಲೂ ಹಾಡಿನ ಹಿಂದಿ ಆವೃತ್ತಿಯ ಬಗ್ಗೆ ತೀವ್ರ ಟೀಕೆ, ವಿರೋಧ ವ್ಯಕ್ತವಾಗಿದ್ದು, ಪ್ರೇಮ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ. ಈ ಹಾಡನ್ನು ನಿಷೇಧ ಮಾಡಿರುವುದಾಗಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಹೇಳಿದ್ದಾರೆ. ಹಾಡಿನಲ್ಲಿ ಕಾಣಿಸಿಕೊಂಡಿರುವ ನೋರಾ ಫತೇಹಿ ಸ್ವತಃ ಹಾಡಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲವೂ ಮುಗಿದ ಬಳಿಕ ಇದೀಗ ಹಾಡು ಬರೆದ ಪ್ರೇಮ್ ಸಾಮಾಜಿಕ ಜಾಲತಾಣದ…

Read More

ಕ್ರೈಸ್ತ ವ್ಯಕ್ತಿಯಿಂದ ದೈವ ನರ್ತನ ಸೇವೆ ಆರೋಪ:ಜಾತಿ ಪ್ರಮಾಣಪತ್ರ ಮೂಲಕ ದೈವ ನರ್ತಕ ಸ್ಪಷ್ಟನೆ

ಮಂಗಳೂರು, (ಮಾರ್ಚ್ 18): ಮಂಗಳೂರಿನ ದೈವಸ್ಥಾನವೊಂದರಲ್ಲಿ ನಡೆದ ದೈವ ನರ್ತನ ಸೇವೆ ಇದೀಗ ದೊಡ್ಡ ವಿವಾದಕ್ಕೆ (Mangaluru Daivaradhane Row) ಕಾರಣವಾಗಿದೆ. ಪಂಬದ ಸಮಾಜದ ಸಂಶೋಧಕಿ ಡಾ. ರತಿ‌ ಕೆಲ ದಿನಗಳ ಹಿಂದೆ ಗಂಭೀರ ಆರೋಪ ಮಾಡಿದ್ದರು. ಬಂಟ ದೈವದ ನರ್ತನ ಸೇವೆ ವೇಳೆ ಕ್ರೈಸ್ತ ಧರ್ಮದ ವ್ಯಕ್ತಿಯಿಂದ ದೈವ ನರ್ತನ ಮಾಡಿಸಲಾಗಿದೆ ಎಂದು ಅವರು ಹೇಳಿಕೆ ನೀಡಿದ್ದರು. ಶ್ರೀ ಜಾರಂದಾಯ ದೈವಕ್ಕೆ ನಿಯಮಾನುಸಾರ ಪಂಬದ ಸಮುದಾಯದವರೇ ನರ್ತನ ಮಾಡಿದ್ದರೂ‌, ಬಂಟ ದೈವಕ್ಕೆ ಮಾತ್ರ ಅನ್ಯಧರ್ಮದ ವ್ಯಕ್ತಿಗೆ…

Read More