All posts by nagaraj11081993

ಕಿಡ್ನಿ ವೈಫಲ್ಯಕ್ಕೂ ಮುನ್ನ ದೇಹ ನೀಡುವ ಈ 5 ಪ್ರಮುಖ ಎಚ್ಚರಿಕೆ ಸಂಕೇತಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ! – Kannada News | Kidney Health Alert: Signs Your Kidneys May Be Failing

ಮೂತ್ರಪಿಂಡಗಳು (Kidneys) ದೇಹದಲ್ಲಿನ ರಕ್ತವನ್ನು ಶುದ್ಧೀಕರಿಸಿ, ವಿಷಕಾರಿ ಅಂಶಗಳು ಹಾಗೂ ಹೆಚ್ಚುವರಿ ದ್ರವವನ್ನು ಮೂತ್ರದ ಮೂಲಕ ಹೊರಹಾಕುವ ಪ್ರಮುಖ ಅಂಗಗಳಾಗಿವೆ. ಕಿಡ್ನಿಗಳ ಕಾರ್ಯಕ್ಷಮತೆ ಕುಂಠಿತವಾಗಲು ಆರಂಭವಾದಾಗ ಅದರ ಪರಿಣಾಮ ಇಡೀ ದೇಹದ ಮೇಲೆ ಕಾಣಿಸಿಕೊಳ್ಳುತ್ತದೆ. ಆರಂಭಿಕ ಹಂತದಲ್ಲೇ ಕೆಲವು ಲಕ್ಷಣಗಳನ್ನು ಗುರುತಿಸಿದರೆ ಗಂಭೀರ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಬಹುದು. ಹಾಗಾದರೆ ಕಿಡ್ನಿ ವೈಫಲ್ಯಕ್ಕೂ ಮುನ್ನ ದೇಹ ನೀಡುವ ಎಚ್ಚರಿಕೆಯ ಸೂಚನೆಗಳು ಹೇಗಿರುತ್ತವೆ, ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ನಿರಂತರ ಆಯಾಸ ಮತ್ತು ದುರ್ಬಲತೆ

ಯಾವುದೇ ಹೆಚ್ಚಿನ ಶ್ರಮವಿಲ್ಲದೆ ದಿನವಿಡೀ ಆಯಾಸ, ಶಕ್ತಿ ಕುಂದುವುದು ಅಥವಾ ದೇಹ ಬಲಹೀನವಾಗಿರುವುದು ಕಿಡ್ನಿ ಸಮಸ್ಯೆಯ ಆರಂಭಿಕ ಸೂಚನೆಯಾಗಿರಬಹುದು. ಕಿಡ್ನಿಗಳು ರಕ್ತವನ್ನು ಸರಿಯಾಗಿ ಶುದ್ಧೀಕರಿಸದಿದ್ದರೆ ದೇಹದಲ್ಲಿ ವಿಷಕಾರಿ ಅಂಶಗಳು ಸಂಗ್ರಹವಾಗುತ್ತವೆ.

ಕೈ, ಕಾಲು ಮತ್ತು ಮುಖದಲ್ಲಿ ಊತ

ಮೂತ್ರಪಿಂಡಗಳು ಹೆಚ್ಚುವರಿ ನೀರನ್ನು ಹೊರಹಾಕಲು ವಿಫಲವಾದಾಗ ದೇಹದಲ್ಲಿ ದ್ರವ ಸಂಗ್ರಹವಾಗುತ್ತದೆ. ಇದರಿಂದ ಪಾದಗಳು, ಕಾಲುಗಂಟುಗಳು, ಕೈಗಳು ಹಾಗೂ ಕಣ್ಣಿನ ಸುತ್ತಲಿನ ಭಾಗದಲ್ಲಿ ಊತ ಕಾಣಿಸಬಹುದು. ಬೆಳಿಗ್ಗೆ ಎದ್ದಾಗ ಕಣ್ಣುಗಳ ಸುತ್ತ ಊತ ಕಂಡುಬಂದರೆ ನಿರ್ಲಕ್ಷಿಸಬೇಡಿ.

ಮೂತ್ರವಿಸರ್ಜನೆಯಲ್ಲಿ ಬದಲಾವಣೆ

ಮೂತ್ರದ ಪ್ರಮಾಣ ಹೆಚ್ಚಾಗುವುದು ಅಥವಾ ಕಡಿಮೆಯಾಗುವುದು, ರಾತ್ರಿ ವೇಳೆ ಪದೇಪದೇ ಮೂತ್ರಕ್ಕೆ ಹೋಗಬೇಕಾಗುವುದು, ಮೂತ್ರದಲ್ಲಿ ನೊರೆ ಕಾಣಿಸಿಕೊಳ್ಳುವುದು ಅಥವಾ ಬಣ್ಣದಲ್ಲಿ ಬದಲಾವಣೆ ಉಂಟಾಗುವುದು ಕಿಡ್ನಿ ಸಮಸ್ಯೆಯ ಸೂಚನೆಗಳಾಗಿರಬಹುದು.

ಚರ್ಮ ಒಣಗುವುದು ಮತ್ತು ತುರಿಕೆ

ಕಿಡ್ನಿಗಳು ರಕ್ತದಲ್ಲಿನ ತ್ಯಾಜ್ಯಗಳನ್ನು ಸರಿಯಾಗಿ ಹೊರಹಾಕದಿದ್ದಾಗ ಚರ್ಮದ ಆರೋಗ್ಯದ ಮೇಲೂ ಪರಿಣಾಮ ಬೀಳುತ್ತದೆ. ಚರ್ಮ ಒಣಗುವುದು, ತುರಿಕೆ ಅಥವಾ ಅಸಹಜ ಕಿರಿಕಿರಿ ಕಾಣಿಸಿಕೊಳ್ಳಬಹುದು.

ಇದನ್ನೂ ಓದಿ: ಕಿಡ್ನಿ ಆರೋಗ್ಯವಾಗಿ ಇರಬೇಕು ಅಂದ್ರೆ ಆರೋಗ್ಯ ತಜ್ಞರು ಹೇಳಿದ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಲೇಬೇಕು!

ಹಸಿವು ಕಡಿಮೆಯಾಗುವುದು ಮತ್ತು ವಾಕರಿಕೆ

ದೇಹದಲ್ಲಿ ವಿಷಕಾರಿ ಅಂಶಗಳು ಹೆಚ್ಚಾದಾಗ ಜೀರ್ಣಕ್ರಿಯೆಯ ಮೇಲೂ ಪರಿಣಾಮ ಬೀಳುತ್ತದೆ. ಇದರಿಂದ ಹಸಿವು ಕಡಿಮೆಯಾಗುವುದು, ವಾಕರಿಕೆ, ವಾಂತಿ ಅಥವಾ ಬಾಯಿಯಲ್ಲಿ ಕಹಿ ರುಚಿ ಕಾಣಿಸಬಹುದು.

ಯಾರಿಗೆ ಹೆಚ್ಚು ಅಪಾಯ?

ಮಧುಮೇಹ, ಅಧಿಕ ರಕ್ತದೊತ್ತಡ, ಸ್ಥೂಲಕಾಯ ಹಾಗೂ ಕುಟುಂಬದಲ್ಲಿ ಕಿಡ್ನಿ ರೋಗದ ಇತಿಹಾಸ ಇರುವವರಿಗೆ ಅಪಾಯ ಹೆಚ್ಚು. ಇಂತಹವರು ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಗತ್ಯ.

ಗಮನಿಸಿ: ಮೇಲಿನ ಲಕ್ಷಣಗಳು ನಿರಂತರವಾಗಿ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ. ಆರಂಭಿಕ ಹಂತದಲ್ಲೇ ಸಮಸ್ಯೆಯನ್ನು ಪತ್ತೆಹಚ್ಚುವುದು ಕಿಡ್ನಿಗಳ ಆರೋಗ್ಯ ಕಾಪಾಡಲು ಅತ್ಯುತ್ತಮ ಮಾರ್ಗವಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ ಎಂದ ಟೀಂ ಇಂಡಿಯಾದ ಮಾಜಿ ನಾಯಕ – Kannada News | Vaibhav Sooryavanshi: Srikkanth Hails 15 Year Old Prodigy as ‘God’s Son’, Warns Comparisons

ಭಾರತೀಯ ಕ್ರಿಕೆಟ್‌ನಲ್ಲಿ ಈಗ ಚರ್ಚೆಯಲ್ಲಿರುವ ಹೆಸರೆಂದರೆ ಅದು 15 ವರ್ಷದ ವೈಭವ್ ಸೂರ್ಯವಂಶಿ. ತನ್ನ ಸ್ಫೋಟಕ ಬ್ಯಾಟಿಂಗ್​ನಿಂದಾಗಿ ಭಾರತ ಟಿ20 ತಂಡಕ್ಕೆ ಆಯ್ಕೆಯಾಗಿರುವ ವೈಭವ್ ಅವರನ್ನು ಗುಣಗಾನ ಮಾಡದವರಿಲ್ಲ. ಇದೀಗ ಅಂತಹವರ ಸಾಲಿಗೆ ಭಾರತದ ಮಾಜಿ ನಾಯಕ ಮತ್ತು ಮಾಜಿ ಮುಖ್ಯ ಆಯ್ಕೆದಾರ ಕೃಷ್ಣಮಾಚಾರಿ ಶ್ರೀಕಾಂತ್ ಕೂಡ ಸೇರಿದ್ದಾರೆ. ವೈಭವ್ ಬಗ್ಗೆ ಪಿಟಿಐ ಜೊತೆ ಮಾತನಾಡಿರುವ ಶ್ರೀಕಾಂತ್, ‘ವಿಭಿನ್ನ ಯುಗಗಳ ಆಟಗಾರರನ್ನು ಹೋಲಿಸುವುದು ಸರಿಯಲ್ಲ. ದಯವಿಟ್ಟು ಸಚಿನ್ ಅವರನ್ನು ವೈಭವ್ ಜೊತೆ ಹೋಲಿಸಬೇಡಿ. ಸಚಿನ್ ಕ್ರಿಕೆಟ್ ದೇವರು. ಆ ದೇವರಿಗೆ ಯಾರನ್ನು ಹೋಲಿಸಲು ಸಾಧ್ಯವಿಲ್ಲ. ಆದರೆ ನಾನು ಈ 15 ವರ್ಷದ ಬಾಲಕ ವೈಭವ್ ಸೂರ್ಯವಂಶಿಯನ್ನು ನೋಡಿದಾಗ, ಅವನು ಆ ದೇವರ ಮಗನಂತೆ ಕಾಣುತ್ತಾನೆ.

ಐಪಿಎಲ್ ಮತ್ತು 19 ವರ್ಷದೊಳಗಿನವರ ಕ್ರಿಕೆಟ್‌ನಲ್ಲಿ ವೈಭವ್ ಸೂರ್ಯವಂಶಿ ಅವರ ದಾಖಲೆಗಳು ಅಸಾಧಾರಣವಾಗಿವೆ. ಈ ಎಡಗೈ ಬ್ಯಾಟ್ಸ್‌ಮನ್ ಮೈದಾನದಲ್ಲಿ ಶಾಟ್‌ಗಳನ್ನು ಆಡುವ ರೀತಿ ಅದ್ಭುತವಾಗಿದೆ. ವೈಭವ್ ಅವರ ಮಣಿಕಟ್ಟಿನ ವೇಗ, ಬ್ಯಾಟ್ ವೇಗ ಮತ್ತು ಬ್ಯಾಟ್ ಸ್ವಿಂಗ್ ಅದ್ಭುತವಾಗಿದೆ. ವೈಭವ್ ಅವರ ದೊಡ್ಡ ಪ್ಲಸ್ ಪಾಯಿಂಟ್ ಎಂದರೆ ಅವರು ಎಷ್ಟೇ ಭಯಾನಕ ಬೌಲರ್ ಬಂದರೂ ಕ್ರೀಸ್‌ನಲ್ಲಿ ತುಂಬಾ ಶಾಂತ ಮನಸ್ಥಿತಿಯೊಂದಿಗೆ ನಿಲ್ಲುತ್ತಾರೆ.

ಇನ್ನು ಇದೇ ವೇಳೆ ಐಪಿಎಲ್ 2026 ರ ಅರ್ಹತಾ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ವೈಭವ್ ಅವರ ಇನ್ನಿಂಗ್ಸ್ ಅನ್ನು ಶೇಷವಾಗಿ ನೆನಪಿಸಿಕೊಂಡ ಶ್ರೀಕಾಂತ್, ‘ಆ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಒತ್ತಡದಲ್ಲಿದ್ದರೂ, 15 ವರ್ಷದ ವೈಭವ್ 96 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಸಾಮಾನ್ಯವಾಗಿ ಇನ್ನಿಂಗ್ಸ್‌ನ ಮೊದಲ ಎಸೆತದಿಂದಲೇ ಔಟ್ ಆಗುವ ಅಭ್ಯಾಸ ಹೊಂದಿರುವ ವೈಭವ್, ಆ ಪಂದ್ಯದಲ್ಲಿ ತಂಡದ ಅಗತ್ಯಗಳಿಗಾಗಿ ಬಹಳ ತಾಳ್ಮೆಯಿಂದ ಆಡಿದರು.

ವೈಭವ್ ಸೂರ್ಯವಂಶಿಗೆ ಭಾರತೀಯ ಕ್ರಿಕೆಟ್‌ನಲ್ಲಿ ಉಜ್ವಲ ಭವಿಷ್ಯವಿದೆ ಎಂದಿರುವ ಶ್ರೀಕಾಂತ್, ಕ್ರಿಕೆಟ್ ಅಭಿಮಾನಿಗಳು ಮತ್ತು ಮಾಧ್ಯಮಗಳಿಗೆ ಅವರ ಮೇಲೆ ಅನಗತ್ಯ ನಿರೀಕ್ಷೆಗಳನ್ನು ಹಾಕಬೇಡಿ ಮತ್ತು ಅವರನ್ನು ಇತರ ಆಟಗಾರರೊಂದಿಗೆ ಹೋಲಿಸುವ ಮೂಲಕ ಒತ್ತಡವನ್ನು ಹೆಚ್ಚಿಸಬೇಡಿ ಎಂದು ಸಲಹೆ ನೀಡಿದರು. ‘ವೈಭವ್ ಅವರನ್ನು ಯಾರೊಂದಿಗೂ ಹೋಲಿಸಬೇಡಿ. ಅವರು ಯಾವುದೇ ಒತ್ತಡವಿಲ್ಲದೆ ಸ್ವಾಭಾವಿಕವಾಗಿ ಬೆಳೆಯಲು ಮತ್ತು ಅವರು ಇಷ್ಟಪಡುವ ರೀತಿಯಲ್ಲಿ ಮುಕ್ತವಾಗಿ ಆಡಲು ನಾವು ಅವರನ್ನು ಪ್ರೋತ್ಸಾಹಿಸಬೇಕಾಗಿದೆ. ಈ ಮಗು ದೇಶಕ್ಕೆ ಅನೇಕ ಯಶಸ್ಸನ್ನು ತರುತ್ತದೆ’ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಅಬ್ಸೆಷನ್’ ಎಫೆಕ್ಟ್: ಹಾರರ್ ಸಿನಿಮಾ ಒಪ್ಪಿಕೊಂಡ ಜಾಕ್ವೆಲಿನ್ ಫರ್ನಾಂಡಿಸ್ – Kannada News | Jacqueline Fernandez signs her first full fledged Horror Movie updates

ಇತ್ತೀಚಿನ ದಿನಗಳಲ್ಲಿ ಪ್ರೇಕ್ಷಕರಿಗೆ ಹಾರರ್ ಮತ್ತು ಸಸ್ಪೆನ್ಸ್ ಸಿನಿಮಾಗಳ ಕ್ರೇಜ್ ಜೋರಾಗಿದೆ. ಹಾಲಿವುಡ್‌ನ ‘ಅಬ್ಸೆಷನ್’ (Obsession), ‘ಬ್ಯಾಕ್ರೂಮ್ಸ್’ ಚಿತ್ರಗಳಿಂದ ಹಿಡಿದು ಭಾರತದ ‘ಶೈತಾನ್’, ‘ಭ್ರಮಯುಗಂ’ ಮತ್ತು ಇತ್ತೀಚೆಗೆ ಬಿಡುಗಡೆಯಾದ ‘ಹಾಂಟೆಡ್ 3ಡಿ: ಎಕೋಸ್ ಆಫ್ ದಿ ಪಾಸ್ಟ್’ ತನಕ ಹಾರರ್ ಚಿತ್ರಗಳು (Horror Movie) ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸುತ್ತಿವೆ. ಈ ಟ್ರೆಂಡ್ ನೋಡಿ ಈಗ ಸ್ಟಾರ್ ನಟ-ನಟಿಯರು ಕೂಡ ಹಾರರ್ ಸಿನಿಮಾಗಳತ್ತ ಮುಖ ಮಾಡುತ್ತಿದ್ದಾರೆ. ಇದೀಗ ಅದೇ ಹಾದಿಯಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಕೂಡ ಮೊದಲ ಬಾರಿಗೆ ಪಕ್ಕಾ ಹಾರರ್ ಸಿನಿಮಾವೊಂದಕ್ಕೆ ಸಹಿ ಹಾಕಿದ್ದಾರೆ.

ಈ ಹಿಂದೆ ಜಾಕ್ವೆಲಿನ್ ಅವರು ‘ಭೂತ್ ಪೊಲೀಸ್’ ಚಿತ್ರದಲ್ಲಿ ನಟಿಸಿದ್ದರಾದರೂ, ಅದು ಹಾರರ್-ಕಾಮಿಡಿ ಕಥಾಹಂದರದ ಚಿತ್ರವಾಗಿತ್ತು. ಆದರೆ ಈಗ ಅವರು ಒಪ್ಪಿಕೊಂಡಿರುವುದು ಅವರ ವೃತ್ತಿಜೀವನದ ಮೊದಲ ಸಂಪೂರ್ಣ ಹಾರರ್ ಚಿತ್ರವಾಗಿದೆ. ಬಹಳ ದಿನಗಳಿಂದ ಒಳ್ಳೆಯ ಹಾರರ್ ಕಥೆಗಾಗಿ ಹುಡುಕುತ್ತಿದ್ದ ಜಾಕ್ವೆಲಿನ್‌ಗೆ ಕೊನೆಗೂ ಕಥೆಯೊಂದು ಇಷ್ಟವಾಗಿದೆ. ಈ ಚಿತ್ರದಲ್ಲಿ ಕೇವಲ ಹಾರರ್ ಮಾತ್ರವಲ್ಲದೆ, ಭಾವನಾತ್ಮಕ ಸನ್ನಿವೇಶಗಳು ಮತ್ತು ಅದ್ಭುತವಾದ ಸಂಗೀತವೂ ಇರಲಿದ್ದು, ಪ್ರೇಕ್ಷಕರಿಗೆ ಚಿತ್ರಮಂದಿರದಲ್ಲಿ ಹೊಸ ಅನುಭವ ನೀಡಲಿದೆ ಎನ್ನಲಾಗಿದೆ.

ಖ್ಯಾತಿ ಮದಾನ್ ಅವರ ‘ನಾಟ್ ಔಟ್ ಎಂಟರ್‌ಟೈನ್‌ಮೆಂಟ್’ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ನಿರ್ಮಾಣವಾಗುತ್ತಿದೆ. ಚಿತ್ರದಲ್ಲಿ ಜಾಕ್ವೆಲಿನ್ ಮುಖ್ಯ ಪಾತ್ರದಲ್ಲಿದ್ದರೆ, ಅವರಿಗೆ ಜೋಡಿಯಾಗಿ ಇಬ್ಬರು ನಾಯಕ ನಟರು ಫೈನಲ್ ಆಗಿದ್ದಾರೆ. ಆದರೆ ಚಿತ್ರದ ಶೀರ್ಷಿಕೆ, ನಿರ್ದೇಶಕರು ಮತ್ತು ಇತರ ನಟರ ವಿವರಗಳನ್ನು ಸದ್ಯಕ್ಕೆ ಗುಟ್ಟಾಗಿಡಲಾಗಿದೆ.

ಮೂಲಗಳ ಪ್ರಕಾರ, ಈ ಚಿತ್ರದ ಪ್ರಮೋಷನಲ್ ಸಾಂಗ್ ಮತ್ತು ಟೀಸರ್ ಶೂಟಿಂಗ್ ಈಗಾಗಲೇ ಮುಗಿದಿದೆ. ಪ್ರಸ್ತುತ ಚಿತ್ರದ ನಟರು ವರ್ಕ್‌ಶಾಪ್‌ಗಳಲ್ಲಿ ಬ್ಯುಸಿಯಾಗಿದ್ದು, ಜೂನ್ ತಿಂಗಳ ಕೊನೆಯ ವಾರದಲ್ಲಿ ಸಿನಿಮಾದ ಚಿತ್ರೀಕರಣ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ. ಈ ಬಗ್ಗೆ ಶೀಘ್ರದಲ್ಲೇ ಚಿತ್ರತಂಡದಿಂದ ಅಧಿಕೃತ ಅನೌನ್ಸ್‌ಮೆಂಟ್ ಹೊರಬೀಳಲಿದೆ.

ಇದನ್ನೂ ಓದಿ: ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸಂಕಷ್ಟ; ಅಪ್ರೂವರ್ ಆಗುವ ಮನವಿಗೆ ಇಡಿ ತೀವ್ರ ವಿರೋಧ

ಸದ್ಯಕ್ಕಂತೂ ಜಾಕ್ವೆಲಿನ್ ಫರ್ನಾಂಡಿಸ್ ಅವರು ಬ್ಯುಸಿ ಆಗಿದ್ದಾರೆ. ಇತ್ತೀಚೆಗಷ್ಟೇ ‘ಹೌಸ್‌ಫುಲ್ 5’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಅವರು, ಸದ್ಯ ಅಕ್ಷಯ್ ಕುಮಾರ್ ಮುಖ್ಯ ಪಾತ್ರದಲ್ಲಿರುವ ಮಲ್ಟಿಸ್ಟಾರರ್ ಕಾಮಿಡಿ ಚಿತ್ರ ‘ವೆಲ್ಕಮ್ ಟು ದಿ ಜಂಗಲ್’ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ. ಈ ಬಿಗ್ ಬಜೆಟ್ ಸಿನಿಮಾ ಜೂನ್ 26ರಂದು ವಿಶ್ವದಾದ್ಯಂತ ತೆರೆಕಾಣಲು ಸಜ್ಜಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸುಲಭವಾಗಿ ಗೆಲ್ಲಬೇಕಿದ್ದ ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ – Kannada News | Karnataka MLC Election: Why Has Victory Become Difficult for BJP Candidates; Here’s What Raghu Kautilya Says

ಬೆಂಗಳೂರು, ಜೂನ್​​ 18: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಜಯಗಳಿಸಿದ್ದು, ಈ ಗೆಲುವನ್ನು ಭಾರತೀಯ ಜನತಾ ಪಕ್ಷದ ವರಿಷ್ಠರು ಹಾಗೂ ಕಾರ್ಯಕರ್ತರಿಗೆ ಸಮರ್ಪಿಸಿದ್ದಾರೆ. ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟ ಬೆನ್ನಲ್ಲೆ ಟಿವಿ9 ಜೊತೆಗೆ ಮಾತನಾಡಿದ ಅವರು, ತಮ್ಮ ಗೆಲುವಿಗೆ ಪಕ್ಷದ ಹಿರಿಯ ನಾಯಕರಾದ ವಿಜಯೇಂದ್ರ, ಯಡಿಯೂರಪ್ಪ, ನಿತಿನ್ ರಬ್ಬೇನ್, ಸಂತೋಷ್ ಜಿ, ರಾಧಾಮೋಹನ್ ಮತ್ತು ಕೋರ್ ಕಮಿಟಿ ಸದಸ್ಯರು ಹಾಗೂ ತಮ್ಮನ್ನು ಬೆಂಬಲಿಸಿದ ಎಲ್ಲ ಶಾಸಕ ಬಂಧುಗಳಿಗೆ ಕೃತಜ್ಞತೆ ಸಲ್ಲಿಸಿದರು. ಸುಲಭವಾಗಿ ಗೆಲ್ಲಬೇಕಿದ್ದ ಬಿಜೆಪಿ ಅಭ್ಯರ್ಥಿಗಳು ಎಲಿಮಿನೇಷನ್ ರೌಂಡ್‌ನಲ್ಲಿ ಗೆಲ್ಲುವ ಪರಿಸ್ಥಿತಿ ಬಂದಿದ್ದ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹೌದು, ಆದರೆ ಅದನ್ನೆಲ್ಲಾ ಈಗ ವರಿಷ್ಠರು ನೋಡುತ್ತಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Source link

ಭಯೋತ್ಪಾದನೆ, ಸೈಬರ್ ಅಪರಾಧಕ್ಕೆ ಟೆಲಿಗ್ರಾಮ್ ಆ್ಯಪ್ ಬಳಕೆ; ದೆಹಲಿ ಹೈಕೋರ್ಟ್ ಮುಂದೆ ಕೇಂದ್ರ ಸರ್ಕಾರ ಆರೋಪ – Kannada News | Indian Government Says Telegram Exploited For Terrorism, Cybercrime Delhi High Court Reserves Order

ನವದೆಹಲಿ, ಜೂನ್ 18: ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಆಗಿರುವ ಟೆಲಿಗ್ರಾಮ್ (Telegram) ಅನ್ನು ಭಯೋತ್ಪಾದನೆ, ಸೈಬರ್ ಅಪರಾಧ, ಮಾದಕ ದ್ರವ್ಯ ಕಳ್ಳಸಾಗಣೆ, ಮಕ್ಕಳ ಶೋಷಣೆ ಮತ್ತು ಆರ್ಥಿಕ ವಂಚನೆ ಸೇರಿದಂತೆ ವ್ಯಾಪಕ ಶ್ರೇಣಿಯ ಕಾನೂನುಬಾಹಿರ ಚಟುವಟಿಕೆಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಇಂದು ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ಟೆಲಿಗ್ರಾಮ್‌ ಆ್ಯಪ್​ನಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆ ವೇಳೆ ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ವಿವರವಾದ ಆಕ್ಷೇಪಣೆ ಸಲ್ಲಿಸಿತು.

ಟೆಲಿಗ್ರಾಮ್‌ನ ಎಂಡ್‌-ಟು-ಎಂಡ್‌ ಎನ್‌ಕ್ರಿಪ್ಶನ್ ಮತ್ತು ಅನಾಮಧೇಯತೆ ವೈಶಿಷ್ಟ್ಯಗಳನ್ನು ಬಳಸಿಕೊಂಡು ಉಗ್ರಗಾಮಿ ಸಂಘಟನೆಗಳು ಯುವಕರನ್ನು ನೇಮಕಾತಿ ಮಾಡಿಕೊಳ್ಳಲು, ಪ್ರಚಾರ ಮಾಡಲು ಮತ್ತು ಸಂಚು ರೂಪಿಸಲು ಮುಕ್ತವಾಗಿ ಬಳಸುತ್ತಿವೆ ಎಂದು ಕೇಂದ್ರ ಸರ್ಕಾರ ಆರೋಪಿಸಿದೆ. ಇತ್ತೀಚಿನ ದಿನಗಳಲ್ಲಿ ಜಾಗತಿಕ ಮತ್ತು ದೇಶೀಯ ಸೈಬರ್ ವಂಚನೆಗಳು, ಹ್ಯಾಕಿಂಗ್ ಪರಿಕರಗಳ ಮಾರಾಟ, ಸೋರಿಕೆಯಾದ ವೈಯಕ್ತಿಕ ಡೇಟಾ ಮಾರಾಟ ಹಾಗೂ ನಕಲಿ ಹೂಡಿಕೆ ದಂಧೆಗಳು ಟೆಲಿಗ್ರಾಮ್ ಚಾನಲ್‌ಗಳ ಮೂಲಕವೇ ರಾಜಾರೋಷವಾಗಿ ನಡೆಯುತ್ತಿವೆ ಎಂದು ಹೇಳಿದೆ.

ಇದನ್ನೂ ಓದಿ: Telegram Ban: ಭಾರತದಲ್ಲಿ ಟೆಲಿಗ್ರಾಮ್​ಗೆ ತಾತ್ಕಾಲಿಕ ನಿಷೇಧ: ನೀಟ್ ಮರು ಪರೀಕ್ಷೆಗೂ ಮುನ್ನ ಕೇಂದ್ರದ ಕ್ರಮ

ದೇಶದ ಕಾನೂನು ಜಾರಿ ಸಂಸ್ಥೆಗಳು ಅಥವಾ ಪೊಲೀಸರು ಅಪರಾಧ ಪ್ರಕರಣಗಳ ತನಿಖೆಗಾಗಿ ಮಾಹಿತಿ ಕೇಳಿದಾಗ, ಟೆಲಿಗ್ರಾಮ್ ಸಂಸ್ಥೆಯು ಬಳಕೆದಾರರ ಗೌಪ್ಯತೆಯ ನೆಪ ಒಡ್ಡಿ ಸೂಕ್ತ ವಿವರಗಳನ್ನು ನೀಡದೆ ತನಿಖೆಗೆ ಅಸಹಕಾರ ತೋರುತ್ತಿದೆ ಎಂದು ಸರ್ಕಾರ ಆರೋಪಿಸಿದೆ. ಕೇಂದ್ರ ಸರ್ಕಾರವು ತನ್ನ ಅಫಿಡವಿಟ್‌ನಲ್ಲಿ ಟೆಲಿಗ್ರಾಮ್ ಅನ್ನು ಇಂಟರ್ನೆಟ್‌ನ ಅತ್ಯಂತ ಕರಾಳ ಜಗತ್ತಾದ ‘ಡಾರ್ಕ್ ವೆಬ್’ಗೆ ಹೋಲಿಸಿದೆ. ಡಾರ್ಕ್ ವೆಬ್‌ನಲ್ಲಿ ನಡೆಯುವ ಮಾದಕ ದ್ರವ್ಯಗಳ ಮಾರಾಟ, ಅಶ್ಲೀಲ ವಿಡಿಯೋಗಳ ದಂಧೆ ಹಾಗೂ ಶಸ್ತ್ರಾಸ್ತ್ರಗಳ ಕಳ್ಳಸಾಗಣೆಯಂತಹ ಕೃತ್ಯಗಳು ಈಗ ಅತ್ಯಂತ ಸುಲಭವಾಗಿ ಟೆಲಿಗ್ರಾಮ್‌ನ ಸೀಕ್ರೆಟ್ ಚಾಟ್‌ಗಳು ಮತ್ತು ಚಾನಲ್‌ಗಳ ಮೂಲಕ ಸಾಮಾನ್ಯ ಜನರಿಗೂ ಲಭ್ಯವಾಗುತ್ತಿವೆ. ಇದು ದೇಶದ ಸಾರ್ವಭೌಮತ್ವ ಮತ್ತು ಆಂತರಿಕ ಭದ್ರತೆಗೆ ದೊಡ್ಡ ಸವಾಲಾಗಿದೆ ಎಂದು ಸರ್ಕಾರ ಆತಂಕ ವ್ಯಕ್ತಪಡಿಸಿದೆ.

“ಟೆಲಿಗ್ರಾಮ್ ಅಪರಾಧಿಗಳನ್ನು ಪರಸ್ಪರ ಜೋಡಿಸುವ ಹೊಸ ಡಾರ್ಕ್ ವೆಬ್ ಆಗಿ ಮಾರ್ಪಟ್ಟಿದೆ. ಅಪರಾಧಿಗಳು ತಮ್ಮ ಚಾನೆಲ್‌ಗಳಲ್ಲಿ ಡೀಪ್ ವೆಬ್ ಲಿಂಕ್‌ಗಳ ಮೂಲಕ ಡಾರ್ಕ್ ವೆಬ್ ಫೋರಮ್‌ಗಳಿಗೆ ಸಂಪರ್ಕಿಸುವ ಲಿಂಕ್‌ಗಳನ್ನು ಪೋಸ್ಟ್ ಮಾಡಲು ಟೆಲಿಗ್ರಾಮ್ ಅನ್ನು ವೇಗವಾಗಿ ಅಳವಡಿಸಿಕೊಳ್ಳುತ್ತಿದ್ದಾರೆ, ಇದರಿಂದಾಗಿ ಅಧಿಕಾರಿಗಳಿಗೆ ಅಪರಾಧಿಗಳನ್ನು ಪತ್ತೆಹಚ್ಚುವುದು ಮತ್ತು ಅವರ ಮೇಲೆ ಕ್ರಮ ಕೈಗೊಳ್ಳುವುದು ಕಷ್ಟವಾಗುತ್ತಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

ಇದನ್ನೂ ಓದಿ: ಟೆಲಿಗ್ರಾಮ್ ತಾತ್ಕಾಲಿಕ ನಿಷೇಧ: ಕೇಂದ್ರದ ನಿರ್ಧಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸಂಸ್ಥೆ

ಕೇಂದ್ರ ಸರ್ಕಾರದ ಪರ ವಾದ ಮತ್ತು ಅರ್ಜಿದಾರರ ಆಹವಾಲುಗಳನ್ನು ಆಲಿಸಿದ ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳನ್ನೊಳಗೊಂಡ ಪೀಠವು ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದೆ. ಟೆಲಿಗ್ರಾಮ್‌ನಂತಹ ಒಟಿಟಿ (OTT) ಪ್ಲಾಟ್‌ಫಾರ್ಮ್‌ಗಳನ್ನು ನಿಯಂತ್ರಿಸಲು ಭಾರತದಲ್ಲಿ ಪ್ರಸ್ತುತ ಇರುವ ಐಟಿ ಕಾಯ್ದೆಗಳು ಮತ್ತು ಮುಂಬರುವ ಹೊಸ ನಿಯಮಾವಳಿಗಳ ವ್ಯಾಪ್ತಿಯನ್ನು ಪರಿಶೀಲಿಸಿದ ನ್ಯಾಯಾಲಯವು, ಈ ವಿಷಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತನ್ನ ಅಂತಿಮ ಆದೇಶವನ್ನು ಕಾಯ್ದಿರಿಸಿದೆ.

ಕೇಂದ್ರ ಸರ್ಕಾರದ ಈ ಕಠಿಣ ನಿಲುವಿನಿಂದಾಗಿ ಭಾರತದಲ್ಲಿ ಟೆಲಿಗ್ರಾಮ್ ಆ್ಯಪ್‌ನ ಭವಿಷ್ಯದ ಮೇಲೆ ತೂಗುಗತ್ತಿ ನೇತಾಡುತ್ತಿದೆ. ಒಂದು ವೇಳೆ ಹೈಕೋರ್ಟ್ ಸರ್ಕಾರದ ವಾದವನ್ನು ಪುರಸ್ಕರಿಸಿ ಕಠಿಣ ಮಾರ್ಗಸೂಚಿಗಳನ್ನು ಜಾರಿಗೊಳಿಸಲು ಆದೇಶಿಸಿದರೆ, ಟೆಲಿಗ್ರಾಮ್ ಭಾರತದಲ್ಲಿ ತನ್ನ ಕಾರ್ಯನಿರ್ವಹಣಾ ಶೈಲಿಯನ್ನು ಬದಲಾಯಿಸಿಕೊಳ್ಳಬೇಕಾಗುತ್ತದೆ ಅಥವಾ ತೀವ್ರ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ ಎಂದು ಐಟಿ ತಜ್ಞರು ವಿಶ್ಲೇಷಿಸಿದ್ದಾರೆ.

ಜೂನ್ 21ರಂದು ನಡೆಯಲಿರುವ ನೀಟ್-ಯುಜಿ 2026 (NEET-UG 2026) ಮರು-ಪರೀಕ್ಷೆಯ ಮುನ್ನ ಭಾರತದಲ್ಲಿ ಟೆಲಿಗ್ರಾಮ್‌ನ ಕಾರ್ಯನಿರ್ವಹಣೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಸರ್ಕಾರ ಕೈಗೊಂಡಿದ್ದ ನಿರ್ಧಾರದ ವಿರುದ್ಧ ಕಾನೂನು ಹೋರಾಟ ನಡೆಯುತ್ತಿರುವ ಮಧ್ಯೆಯೇ ಕೇಂದ್ರ ಸರ್ಕಾರ ಈ ಕಳವಳವನ್ನು ವ್ಯಕ್ತಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪರಿಷತ್​​ ಚುನಾವಣೆ: ಕೊನೇ ಕ್ಷಣದಲ್ಲಿ ಕೈ ಹಿಡಿದ BJP ರಾಜ್ಯ ನಾಯಕರ ಕಾರ್ಯತಂತ್ರ; ತಪ್ಪಿದ ಭಾರೀ ಮುಖಭಂಗ – Kannada News | Karnataka MLC Polls: Sharp Last Minute Strategy Saves BJP from Major Embarrassment; Wins Both Seats

ವಿಪಕ್ಷ ನಾಯಕ ಆರ್​​. ಅಶೋಕ್​​Image Credit source: Tv9 Kannada

ಬೆಂಗಳೂರು, ಜೂನ್​​ 18: ವಿಧಾನ ಪರಿಷತ್​​ನ 7 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ 5 ​​ಮತ್ತು 2 ಸ್ಥಾನಗಳಲ್ಲಿ ವಿಪಕ್ಷ ಬಿಜೆಪಿ ಗೆಲುವು ದಾಖಲಿಸಿದೆ. ಜೆಡಿಎಸ್​​ ಅಭ್ಯರ್ಥಿಗೆ ಸೋಲಾಗಿದೆ. ಭಾರಿ ಕ್ರಾಸ್​​ ವೋಟಿಂಗ್​​ಗೆ ಎಲೆಕ್ಷನ್​​ ಸಾಕ್ಷಿಯಾಗಿದ್ದು 11 ಮತಗಳನ್ನು ಕಾಂಗ್ರೆಸ್​​ ಹೆಚ್ಚುವರಿಯಾಗಿ ಪಡೆದುಕೊಂಡಿದೆ. ಆ ಮೂಲಕ ವಿಪಕ್ಷಗಳಿಗೆ ಭರ್ಜರಿ ಚೆಕ್​​ಮೇಟ್​​ ಕೊಟ್ಟಿದೆ.

ಬಿಜೆಪಿ ಕೈ ಹಿಡಿದ ರಾಜ್ಯ ನಾಯಕರ ಕಾರ್ಯತಂತ್ರ

ಹೌದು, ಚುನಾವಣಾ ಅಖಾಡದಲ್ಲಿದ್ದ ಬಿಜೆಪಿ ಅಭ್ಯರ್ಥಿ ಆರ್.ರಘುಗೆ 29 ಮತಗಳು ಸಿಕ್ಕಿದ್ದರೆ, ಲಿಂಗರಾಜು ಪಾಟೀಲ್​ಗೆ 27 ಮತಗಳು ಬಿದ್ದಿವೆ. ಈ ಪೈಕಿ ಆರ್.ರಘುಗೆ ಚಲಾವಣೆಯಾಗಿದ್ದ ಒಂದು ಮತ ಅಸಿಂಧುಗೊಂಡಿದೆ. ಪ್ರತಿ ಅಭ್ಯರ್ಥಿ ಗೆಲ್ಲಲು 27.63 ಮತ ಪಡೆಯಬೇಕು. ಆದರೆ ಲಿಂಗರಾಜ ಪಾಟೀಲ್​ಗೆ ಕೇವಲ 27 ಮತಗಳು ಸಿಕ್ಕಿದ್ದವು. ಆದರೆ ಜೆಡಿಎಸ್​ನ ಗೋವಿಂದರಾಜು 14 ಮತ ಪಡೆದಿದ್ದ ಹಿನ್ನೆಲೆ ಎಲಿಮಿನೇಷನ್ ರೌಂಡ್​ನಲ್ಲಿ ಲಿಂಗರಾಜ್ ಪಾಟೀಲ್​ಗೆ ಜಯ ಸಿಕ್ಕಿದೆ. ಇಬ್ಬರೂ ಅಭ್ಯರ್ಥಿಗಳ ಗೆಲುವಿಗೆ ಕೊನೆಯ ಕ್ಷಣದಲ್ಲಿ ಬಿಜೆಪಿ ರಾಜ್ಯ ನಾಯಕರ ಕಾರ್ಯತಂತ್ರ ಕೈ ಹಿಡಿದಿದೆ ಎನ್ನಲಾಗಿದೆ.

ಇದನ್ನೂ ಓದಿ: ಪರಿಷತ್​​ ಚುನಾವಣೆ ಫಲಿತಾಂಶ; ಕಾಂಗ್ರೆಸ್​​ನ​​ ಐವರು, ಬಿಜೆಪಿಯ ಇಬ್ಬರ ಗೆಲುವು, ಸೋಲುಂಡ ಜೆಡಿಎಸ್​​ನ ಗೋವಿಂದರಾಜು

ಬಿಜೆಪಿ ಅಭ್ಯರ್ಥಿಗಳಿಗೆ ತಲಾ 28 ಮತಗಳನ್ನು ಹಾಕಿಸುವಂತೆ ಹೈಕಮಾಂಡ್ ಸೂಚನೆ ನೀಡಿತ್ತು. ಆದರೆ ಇಂದು ಬೆಳಗ್ಗೆ 30 ಮತಗಳನ್ನು ಹಾಕಿಸಲೇಬೇಕು ಎಂದು ವಿಪಕ್ಷ ನಾಯಕ ಅಶೋಕ್ ಪಟ್ಟುಹಿಡಿದಿದ್ದರು. ಲಿಂಗರಾಜ್ ಪಾಟೀಲ್ ಮತ್ತು ರಘು ಕೌಟಿಲ್ಯಗೆ ತಲಾ 2 ದ್ವಿತೀಯ ಪ್ರಾಶಸ್ತ್ಯದ ಮತಗಳನ್ನು ಹಾಕಿಸಲಾಗಿದ್ದು, ಹೀಗಾಗಿ ಕೊನೆಯ ಕ್ಷಣದಲ್ಲಿ ಬಿಜೆಪಿಗೆ ದೊಡ್ಡ ಮುಖಭಂಗ ತಪ್ಪಿದೆ.

‘ಪಕ್ಷಕ್ಕೆ ದ್ರೋಹ ಬಗೆದವರು ಸಿಕ್ಕಿಹಾಕಿಕೊಳ್ಳುತ್ತಾರೆ’

ಇನ್ನು ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್​​. ಅಶೋಕ್​​, ನಮ್ಮ ಮೂರು ಮತಗಳು ಕ್ರಾಸ್​ ಆಗಿದೆ ಅಂತಾ ಮಾಹಿತಿ ಬಂದಿದೆ. ಯಾವ ಶಾಸಕರು ಕ್ರಾಸ್ ವೋಟಿಂಗ್ ಮಾಡಿದ್ದಾರೆಂದು ಗೊತ್ತಾಗುತ್ತೆ. ಮುಂದೆ ಅದರ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ. ಆರ್​.ರಘು ಅವರಿಗೆ ಕೊಟ್ಟಿದ್ದ ಒಂದು ಮತ ಅಸಿಂಧು ಆಗಿದೆ. ಲಿಂಗರಾಜ್​ ಪಾಟೀಲ್​ಗೆ ನಿಗದಿ ಮಾಡಿದ 3 ಮತಗಳು ಮಿಸ್ ಆಗಿದೆ. ನಾಲ್ಕು ಮತಗಳನ್ನು ಜೆಡಿಎಸ್​ಗೆ ಕೊಟ್ಟಿದ್ದೆವು. ಪಕ್ಷಕ್ಕೆ ದ್ರೋಹ ಬಗೆದವರು ಸಿಕ್ಕಿಹಾಕಿಕೊಳ್ಳುತ್ತಾರೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 8:02 pm, Thu, 18 June 26

Source link

ಈ ಸರಳ ಸಲಹೆಯನ್ನು ಪಾಲಿಸುವ ಮೂಲಕ ಕೋಪವನ್ನು ನಿಯಂತ್ರಿಸಬಹುದು – Kannada News | You can control anger by following this simple advice

ಕೋಪವು (Anger) ಮನುಷ್ಯನ ಬಹುದೊಡ್ಡ ಶತ್ರುವಾಗಿದ್ದು, ಕೋಪದ ಮಾತುಗಳು, ಕೋಪದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಸಂಬಂಧವನ್ನು ಹಾಳು ಮಾಡುತ್ತದೆ. ಅಲ್ಲದೆ ಇದು ನಮ್ಮ ಭಾವನೆಗಳು, ಆಲೋಚನೆಗಳು ಮತ್ತು ನಡವಳಿಕೆಯ ಮೇಲೂ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಕೋಪದಲ್ಲಿ ಕುಯ್ದುಕೊಂಡ ಮೂಗು ಮತ್ತೆ ಬಂದೀತೆ ಎನ್ನುವಂತೆ ಕೋಪದಲ್ಲಿ ತೆಗದುಕೊಳ್ಳುವಂತಹ ನಿರ್ಧಾರಗಳು ನಮ್ಮನ್ನು ಜೀವನಪರ್ಯಂತ ವಿಷಾಧಿಸುವಂತೆ ಮಾಡುತ್ತದೆ. ಹಾಗಾಗಿ ಕೋಪವನ್ನು ನಿಯಂತ್ರಿಸುವುದು ತುಂಬಾನೇ ಮುಖ್ಯ. ಈ  ಕೆಲವು ಪ್ರಮುಖ ಕೋಪ ನಿರ್ವಹಣಾ ಸಲಹೆಗಳು ಮತ್ತು ಜೀವನಶೈಲಿಯ ಬದಲಾವಣೆಗಳ ಮೂಲಕ ನೀವು ಕೋಪವನ್ನು ನಿಯಂತ್ರಿಸಬಹುದು. ಈ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಕೋಪವನ್ನು ನಿಯಂತ್ರಿಸುವುದು ಹೇಗೆ?

ಸುಮ್ಮನಿರಿ: ಕೋಪ ಬಂದಾಗ ಏನೇನೋ ಪ್ರತಿಕ್ರಿಯೆ ತೋರ್ಪಡಿಸುವುದಕ್ಕಿಂತ, ಕೋಪ ಬಂದಾಗ ಮೌನವಾಗಿರುವುದು ಉತ್ತಮ. ನೀವು ಏನನ್ನೂ ಹೇಳದಿದ್ದರೆ, ಅದು ಸಂಘರ್ಷಕ್ಕೆ ಕಾರಣವಾಗುವುದಿಲ್ಲ. ಮತ್ತು ನೀವು ಕೋಪಗೊಂಡಾಗ ಮೌನವಾಗಿದ್ದರೆ, ತಪ್ಪು ಮಾತನಾಡುವುದನ್ನು ತಪ್ಪಿಸಬಹುದು. ಇದು ಪರಿಸ್ಥಿತಿಯನ್ನೂ ಶಾಂತವಾಗಿಸುತ್ತದೆ. ಹಾಗಾಗಿ ಕೋಪ ಬಂದಾಗ ಶಾಂತವಾಗಿರುವನ್ನು ಅಭ್ಯಾಸ ಮಾಡಿಕೊಳ್ಳಿ.

ಸ್ಥಳ ಬದಲಾಯಿಸಿ: ನೀವು ತುಂಬಾ ಕೋಪಗೊಂಡಿದ್ದರೆ, ಕೋಪಗೊಂಡ ಸ್ಥಳದಿಂದ ಬೇರೆಡೆ ಹೋಗಿ. ನಿಮ್ಮ ಸ್ಥಳವನ್ನು ಬದಲಾಯಿಸುವುದರಿಂದ ನಿಮ್ಮ ಮನಸ್ಸು ಶಾಂತವಾಗುತ್ತದೆ. ಟೆರೇಸ್‌ ಅಥವಾ ಉದ್ಯಾನವನದಂತಹ ತಾಜಾ ಗಾಳಿ ಇರುವ ಸ್ಥಳಗಳಿಗೆ ಹೋಗಿ. ಇದು ನಿಮ್ಮ ಕೋಪವನ್ನು ಶಮನಗೊಳಿಸಲು ಸಹಾಯ ಮಾಡುತ್ತದೆ.

ಸಂಗೀತ ಕೇಳಿ: ಕೋಪ ಬಂದಾಗ ಜನರು ತಪ್ಪು ಮಾತುಗಳನ್ನಾಡುತ್ತಾರೆ ಮತ್ತು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಕೆಲವರು ತಮ್ಮನ್ನು ಅಥವಾ ಇತರರನ್ನು ನೋಯಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಇದರಿಂದ ಎಲ್ಲರೂ ನೋವು ಅನುಭವಿಸಬೇಕಾಗುತ್ತದೆ. ಹಾಗಾಗಿ ಕೋಪಗೊಂಡರೆ ನಿಮ್ಮ ನೆಚ್ಚಿನ ಹಾಡನ್ನು ಕೇಳಿ, ಮನಸ್ಸನ್ನು ಶಾಂತಗೊಳಿಸುವ ಸಂಗೀತವನ್ನು ಆಲಿಸಿ. ಸಂಗೀತವನ್ನು ಕೇಳುವುದರಿಂದ ಮನಸ್ಸು ಮತ್ತು ಮೆದುಳು ಕೂಡ ಶಾಂತವಾಗುತ್ತದೆ.

 ವಾಕಿಂಗ್‌ ಮಾಡಿ: ನೀವು ತುಂಬಾ ಒತ್ತಡದಲ್ಲಿರುವಾಗ ಅಥವಾ ಕೋಪದಲ್ಲಿರುವಾಗ ವಾಕಿಂಗ್‌ ಮಾಡಿ. ಚುರುಕಾದ ನಡಿಗೆಯು ಕಾರ್ಟಿಸೋಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ನಿಮಗೆ ಉತ್ತಮ ಭಾವನೆಯನ್ನು ನೀಡುತ್ತದೆ. ಆದ್ದರಿಂದ, ನೀವು ಕೋಪಗೊಂಡಿದ್ದರೆ ಅಥವಾ ಒತ್ತಡಕ್ಕೊಳಗಾಗಿದ್ದರೆ, ಪ್ರಕೃತಿಯ ಮಡಿಲಲ್ಲಿ ವಾಕಿಂಗ್‌ ಮಾಡಿ.

ಉಸಿರಾಟದ ವ್ಯಾಯಾಮ ಮಾಡಿ: ನೀವು ಕೋಪಗೊಳ್ಳುತ್ತಿದ್ದರೆ ಅಥವಾ ಒತ್ತಡಕ್ಕೊಳಗಾಗುತ್ತಿದ್ದರೆ, ಸಮಯ ಸಿಕ್ಕಾಗಲೆಲ್ಲಾ ಉಸಿರಾಟದ ವ್ಯಾಯಾಮವನ್ನು ಅಭಯಾಸ ಮಾಡಿ.  ನಿಮಗೆ ಕೋಪ ಬಂದಾಗಲೆಲ್ಲಾ, ನಿಮ್ಮ ಕಣ್ಣುಗಳನ್ನು ಮುಚ್ಚಿ ನಿಧಾನವಾಗಿ ಉಸಿರನ್ನು ಒಳಗೆಳೆದು ಆಳವಾಗಿ ಉಸಿರನ್ನು ಬಿಡಿ. ಇದನ್ನು ಕನಿಷ್ಠ 8 ರಿಂದ 10 ಬಾರಿ ಮಾಡಿ. ಇದು ನಿಮ್ಮ ಕೋಪವನ್ನು ಗಣನೀಯವಾಗಿ ಶಾಂತಗೊಳಿಸುತ್ತದೆ.

ಇದನ್ನೂ ಓದಿ: ಸಂತೋಷದಿಂದ ಜೀವನ ನಡೆಸಲು ನೀವು ಮಾಡಬೇಕಾದದ್ದು ಇಷ್ಟೆ

 ಸ್ಟ್ರೆಚಿಂಗ್ ಸಹಾಯ ಮಾಡುತ್ತದೆ: ಸ್ಟ್ರೆಚಿಂಗ್ ವ್ಯಾಯಾಮ ನಿಮ್ಮ ದೇಹದಲ್ಲಿನ ಒತ್ತಡವನ್ನು ಬಿಡುಗಡೆ ಮಾಡುವುದಲ್ಲದೆ, ನಿಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ನಿಮ್ಮ ಕೋಪ ಮತ್ತು ಒತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ನಿಮ್ಮ ಭಾವನೆಗಳ ಮೇಲೆ ನಿಯಂತ್ರಣ ಸಾಧಿಸಲು ಸಹಾಯ ಮಾಡುತ್ತದೆ. ಅಲ್ಲದೆ ನೀವು ನಿರಂತರವಾಗಿ ಕೋಪಗೊಂಡಿದ್ದರೆ, ಯೋಗ, ಧ್ಯಾನ, ಸಂಗೀತ, ನೃತ್ಯ ಮತ್ತು ಸೈಕ್ಲಿಂಗ್‌ನಂತಹ ಚಟುವಟಿಕೆಗಳನ್ನು ಪ್ರಯತ್ನಿಸಿ.

ಅತಿಯಾದ ಕೋಪದ ಪರಿಣಾಮಗಳೇನು?

  • ಅತಿಯಾದ ಕೋಪವು ಜೀರ್ಣಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಹೊಟ್ಟೆ ನೋವು, ಆಮ್ಲೀಯತೆ ಮತ್ತು ಅಜೀರ್ಣದತೊಂದರೆ ಉಂಟುಮಾಡಬಹುದು.
  • ಅತಿಯಾದ ಕೋಪವು ಅಡ್ರಿನಾಲಿನ್ ಮತ್ತು ಕಾರ್ಟಿಸೋಲ್ ಅನ್ನು ಬಿಡುಗಡೆ ಮಾಡುತ್ತದೆ, ಇದನ್ನು ಒತ್ತಡದ ಹಾರ್ಮೋನುಗಳು ಎಂದೂ ಕರೆಯುತ್ತಾರೆ, ಇದು ಉಸಿರಾಟ ಮತ್ತು ಹೃದಯ ಬಡಿತವನ್ನು ಹೆಚ್ಚಿಸುತ್ತದೆ. ಇದು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ ಮತ್ತು ಹೃದಯಕ್ಕೆ ಅಪಾಯಕಾರಿಯಾಗಬಹುದು.
  • ಒತ್ತಡದ ಹಾರ್ಮೋನುಗಳು ಅಧಿಕ ಪ್ರಮಾಣದಲ್ಲಿರುವುದರಿಂದ ನಿದ್ರೆಯ ಸಮಸ್ಯೆಗಳು ಉಂಟಾಗಬಹುದು. ನಿದ್ರೆಯ ಕೊರತೆಯು ಒಟ್ಟಾರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND W vs ENG W: ಟೀಂ ಇಂಡಿಯಾ ವಿರುದ್ಧದ ಲಾರ್ಡ್ಸ್‌ ಟೆಸ್ಟ್​​ಗೆ ಇಂಗ್ಲೆಂಡ್‌ ತಂಡ ಪ್ರಕಟ – Kannada News | India vs England Women’s Test: Squads Announced for Lord’s Historic Clash on July 10

ಪ್ರಸ್ತುತ ಇಂಗ್ಲೆಂಡ್‌ನಲ್ಲಿ 2026 ರ ಮಹಿಳಾ ಟಿ20 ವಿಶ್ವಕಪ್ ನಡೆಯುತ್ತಿದೆ. ಈ ಪಂದ್ಯಾವಳಿ ಮುಗಿದ ಬಳಿಕ ಐತಿಹಾಸಿಕ ಲಾರ್ಡ್ಸ್ (Lord’s) ಮೈದಾನದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತು ಇಂಗ್ಲೆಂಡ್ ಮಹಿಳಾ ತಂಡದ (India vs England Women) ನಡುವೆ ಏಕೈಕ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಭಾರತ ಮಹಿಳಾ ತಂಡವನ್ನು ಬಿಸಿಸಿಐ ಈಗಾಗಲೇ ಘೋಷಿಸಿತ್ತು. ಇದೀಗ ಇಂಗ್ಲೆಂಡ್ ಮಹಿಳಾ ಟೆಸ್ಟ್ ತಂಡವನ್ನು ಸಹ ಪ್ರಕಟಿಸಲಾಗಿದೆ. ನ್ಯಾಟ್ ಸಿವರ್ ಬ್ರಂಟ್ ನಾಯಕತ್ವದ ಬಲಿಷ್ಠ ಇಂಗ್ಲೆಂಡ್‌ ತಂಡ, ಭಾರತದ ವಿರುದ್ಧ ಸೆಣಸಲು ಸಜ್ಜಾಗಿದೆ.

15 ಸದಸ್ಯರ ಬಲಿಷ್ಠ ತಂಡ ಪ್ರಕಟ

ಜುಲೈ 10 ರಿಂದ ಐತಿಹಾಸಿಕ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಏಕೈಕ ಮಹಿಳಾ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಇಂಗ್ಲೆಂಡ್ 15 ಸದಸ್ಯರ ಬಲಿಷ್ಠ ತಂಡವನ್ನು ಘೋಷಿಸಿದೆ. ಐದು ವರ್ಷಗಳ ನಂತರ ಭಾರತೀಯ ಮಹಿಳಾ ತಂಡ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಪಂದ್ಯವನ್ನು ಆಡಲಿದೆ. ಇದಕ್ಕೂ ಮೊದಲು ಉಭಯ ತಂಡಗಳ ನಡುವಿನ ಕೊನೆಯ ಟೆಸ್ಟ್ ಪಂದ್ಯವು 2023 ರಲ್ಲಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದಿತ್ತು. ಆ ಪಂದ್ಯವನ್ನು ಆತಿಥೇಯ ಭಾರತ ತಂಡ 347 ರನ್‌ಗಳಿಂದ ಗೆದ್ದುಕೊಂಡಿತ್ತು.

ಇನ್ನು ಲಾರ್ಡ್ಸ್‌ ಟೆಸ್ಟ್​ನಲ್ಲಿ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿರುವ ನಾಯಕಿ ನ್ಯಾಟ್ ಸಿವರ್-ಬ್ರಂಟ್ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಆಡಲಿದ್ದಾರೆ. ತಂಡದಲ್ಲಿ ಹೀದರ್ ನೈಟ್, ಟ್ಯಾಮಿ ಬ್ಯೂಮಾಂಟ್ ಮತ್ತು ಆಮಿ ಜೋನ್ಸ್‌ರಂತಹ ಅನುಭವಿ ಆಟಗಾರ್ತಿಯರು ಇದ್ದಾರೆ. ಹಾಗೆಯೇ ಈ ತಂಡದಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ಆಲಿಸ್ ಕ್ಯಾಪ್ಸೆ, ಟಿಲ್ಲಿ ಕೋರ್ಟೆನೆ-ಕೋಲ್ಮನ್, ಮಾಡಿ ವಿಲಿಯರ್ಸ್, ಗ್ರೇಸ್ ಪಾಟ್ಸ್ ಮತ್ತು ಎಲ್ಲೀ ಥ್ರೆಲ್ಕೆಲ್ಡ್ ಕೂಡ ಸ್ಥಾನ ಪಡೆದಿದ್ದಾರೆ. ಇವರಲ್ಲಿ, ಗ್ರೇಸ್ ಪಾಟ್ಸ್ ಮತ್ತು ಎಲ್ಲೀ ಥ್ರೆಲ್ಕೆಲ್ಡ್ ಇನ್ನೂ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿಲ್ಲ.

ENG vs NZ: ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಹೀನಾಯವಾಗಿ ಸೋತ ನ್ಯೂಜಿಲೆಂಡ್

ಉಭಯ ತಂಡಗಳು

ಲಾರ್ಡ್ಸ್ ಟೆಸ್ಟ್‌ಗೆ ಇಂಗ್ಲೆಂಡ್ ಮಹಿಳಾ ತಂಡ: ನ್ಯಾಟ್ ಸಿವರ್ ಬ್ರಂಟ್ (ನಾಯಕಿ), ಟ್ಯಾಮಿ ಬ್ಯೂಮಾಂಟ್, ಲಾರೆನ್ ಬೆಲ್, ಮಾಯಾ ಬೌಚಿಯರ್, ಎಲಿಸ್ ಕ್ಯಾಪ್ಸೆ, ಟಿಲ್ಲಿ ಕೋರ್ಟಿನ್ ಕೋಲ್ಮನ್, ಸೋಫಿ ಎಕ್ಲೆಸ್ಟೋನ್, ಲಾರೆನ್ ಫಿಲ್ಲರ್, ಆಮಿ ಜೋನ್ಸ್, ಹೀದರ್ ನೈಟ್, ಎಮ್ಮಾ ಲ್ಯಾಂಬ್, ಗ್ರೇಸ್ ಪಾಟ್ಸ್, ಎಲ್ಲೀ ಥ್ರೆಲ್ಕೆಲ್ಡ್, ಮ್ಯಾಡಿ ವಿಲಿಯರ್ಸ್, ಇಸ್ಸಿ ವಾಂಗ್.

ಭಾರತ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಪ್ರತೀಕಾ ರಾವಲ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೀ ಚರಣಿ, ಯಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನಂದನಿ ಶರ್ಮಾ, ಹರ್ಲೀನ್ ಡಿಯೋಲ್, ರೇಣುಕಾ ಠಾಕೂರ್, ಕ್ರಾಂತಿ ಗೌಡ್, ಸಯಾಲಿ ಸತ್ಘರೆ, ಸ್ನೇಹ ರಾಣಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:45 pm, Thu, 18 June 26

Source link

ಉದ್ಯಮಿಯ ಪತ್ನಿಗೆ ನಿರಂತರ ಲೈಂಗಿಕ ಕಿರುಕುಳ; ಬಲವಂತವಾಗಿ ಮೂತ್ರ ಕುಡಿಸಿದ ಬಾಬಾ! – Kannada News | Pune Godman Abused Woman For Years Made Her to Drink His Urine

ಪುಣೆ, ಜೂನ್ 18: ಮೂಢನಂಬಿಕೆ ಮತ್ತು ಮಾಟ-ಮಂತ್ರದ ಹೆಸರಿನಲ್ಲಿ ಮಹಿಳೆಯೊಬ್ಬರ ಮೇಲೆ ಹಲವು ವರ್ಷಗಳ ಕಾಲ ದೈಹಿಕ ಹಾಗೂ ಮಾನಸಿಕ ದೌರ್ಜನ್ಯ ಎಸಗಿರುವ ಘಟನೆ ಪುಣೆಯಲ್ಲಿ (Pune) ನಡೆದಿದೆ. ಉದ್ಯಮದಲ್ಲಿ ಯಶಸ್ಸು ಮತ್ತು ಹಣದ ಆಸೆ ತೋರಿಸಿ ಈ ಪಾಪಿ ದೇವಮಾನವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಬಲವಂತವಾಗಿ ತನ್ನ ಮೂತ್ರವನ್ನು ಕುಡಿಸಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಸಂತ್ರಸ್ತ ಮಹಿಳೆಯ ಪತಿ ಪುಣೆಯ ಪ್ರಭಾವಿ ಉದ್ಯಮಿಯಾಗಿದ್ದಾರೆ. ಅವರ ವ್ಯವಹಾರದಲ್ಲಿ ಕೆಲವು ಆರ್ಥಿಕ ನಷ್ಟಗಳು ಉಂಟಾದಾಗ, ಪರಿಚಯಸ್ಥರ ಮೂಲಕ ಈ ‘ದೇವಮಾನವ’ನ ಸಂಪರ್ಕ ಸಿಕ್ಕಿತ್ತು. ಉದ್ಯಮದಲ್ಲಿ ಭಾರಿ ಲಾಭ ತಂದುಕೊಡುವುದಾಗಿ ಹಾಗೂ ಮನೆಯಲ್ಲಿ ಐಶ್ವರ್ಯ ವೃದ್ಧಿಸುವುದಾಗಿ ನಂಬಿಸಿದ ದೇವಮಾನವ ಮಾಟ-ಮಂತ್ರ, ಪೂಜೆಯ ನೆಪದಲ್ಲಿ ಆ ಉದ್ಯಮಿಯ ಕುಟುಂಬವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದ್ದನು.

ರಾಧೇಶ್ಯಾಮ್ ಮಿಶ್ರಾ ಅಲಿಯಾಸ್ ರಾಧಾಮೋಹನ್ ಮಿಶ್ರಾ ಎಂಬಾತ ಪುಣೆಯ ವಾಗೋಲಿಯ ಉಬಾಲೆ ನಗರ ಪ್ರದೇಶದಲ್ಲಿ ‘ಮಾಡರ್ನ್ ಗುರುಕುಲ’ ಎಂಬ ಆಶ್ರಮವನ್ನು ನಡೆಸುತ್ತಿದ್ದನು. ಮಿಶ್ರಾ ಕಳೆದ ಹಲವು ವರ್ಷಗಳಿಂದ ಜನರನ್ನು ವಂಚಿಸಿ ಶೋಷಿಸುತ್ತಿದ್ದನು. ಸಂತ್ರಸ್ತ ಮಹಿಳೆ ಜೊತೆ 2010ರಲ್ಲಿ ಈತನ ಸಂಪರ್ಕವಾಗಿತ್ತು. 2010 ಮತ್ತು 2016ರ ನಡುವೆ ಈತ ಮಹಿಳೆಯನ್ನು ಲೈಂಗಿಕವಾಗಿ ಶೋಷಿಸಿದ್ದಲ್ಲದೆ, ದೈಹಿಕವಾಗಿ ಹಲ್ಲೆ ನಡೆಸಿ, ಎಲೆಕ್ಟ್ರಿಕ್ ಶಾಕ್ ನೀಡಿ ಚಿತ್ರಹಿಂಸೆ ನೀಡಿದ್ದನು ಮತ್ತು ಆಕೆಯ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿಕೊಂಡಿದ್ದನು. ಆ ವೀಡಿಯೊಗಳನ್ನು ಬಳಸಿಕೊಂಡು ಆಕೆ ಹಾಗೂ ಆಕೆಯ ಕುಟುಂಬಕ್ಕೆ ತನಗೆ ದೈವಿಕ ‘ಶಕ್ತಿಗಳು’ ಇವೆ ಎಂದು ಬೆದರಿಸಿ, ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನು.

ಇದನ್ನೂ ಓದಿ: ಅನುಮತಿ ಇಲ್ಲದೆ ಖಾಸಗಿ ಚಿತ್ರ ಹಂಚಿಕೊಂಡರೆ ಎಫ್‌ಐಆರ್ ಆಗುತ್ತೆ ಹುಷಾರ್!: ಕರ್ನಾಟಕ ಪೊಲೀಸ್ ಮುಖ್ಯಸ್ಥರ ಕಡಕ್ ಆದೇಶ

ಉದ್ಯಮದ ಏಳಿಗೆಗಾಗಿ ವಿಶೇಷ ರಹಸ್ಯ ಪೂಜೆಗಳನ್ನು ಮಾಡಬೇಕೆಂದು ನಂಬಿಸಿ, ಆ ಮಹಿಳೆಯನ್ನು ಹಲವು ವರ್ಷಗಳ ಕಾಲ ಲೈಂಗಿಕವಾಗಿ ಬಳಸಿಕೊಳ್ಳಲಾಗಿತ್ತು. ಇದಕ್ಕೆ ಸಂತ್ರಸ್ತೆಯ ಪತಿ ಮತ್ತು ಆಕೆಯ ಅತ್ತೆ-ಮಾವಂದಿರು ಕೂಡ ಸಾಥ್ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ತಾಂತ್ರಿಕ ವಿಧಿವಿಧಾನಗಳ ಭಾಗವೆಂದು ಹೇಳಿ, ಮಹಿಳೆಗೆ ಬಲವಂತವಾಗಿ ಈ ದೇವಮಾನವನ ಮೂತ್ರವನ್ನು ಕುಡಿಸಲಾಗಿತ್ತು. ಇದನ್ನು ವಿರೋಧಿಸಿದಾಗ ಆಕೆಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ, ಕುಟುಂಬಕ್ಕೆ ತೊಂದರೆಯಾಗಲಿದೆ ಎಂದು ಬೆದರಿಕೆ ಹಾಕಲಾಗಿತ್ತು.

ಪೂಜೆಗಳ ಹೆಸರಿನಲ್ಲಿ ಮಹಿಳೆಯ ಬಳಿಯಿದ್ದ ಭಾರಿ ಪ್ರಮಾಣದ ಚಿನ್ನಾಭರಣ ಹಾಗೂ ಕೋಟ್ಯಂತರ ರೂಪಾಯಿ ಹಣವನ್ನು ಈ ಕೂಟ ಲೂಟಿ ಮಾಡಿದೆ. ದೀರ್ಘಕಾಲದ ಕಿರುಕುಳದಿಂದ ಬೇಸತ್ತ ಮಹಿಳೆ ಕೊನೆಗೆ ಧೈರ್ಯ ಮಾಡಿ ಪುಣೆಯ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ಆ ದೇವಮಾನವ, ಸಂತ್ರಸ್ತೆಯ ಪತಿ ಮತ್ತು ಆಕೆಯ ಅತ್ತೆ-ಮಾವ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬಿಹಾರದಲ್ಲಿ ಫೇಸ್‌ಬುಕ್ ಲೈವ್‌ನಲ್ಲಿ ಶರಣಾಗುವುದಾಗಿ ಹೇಳಿದ್ದ ರೌಡಿ ಎನ್‌ಕೌಂಟರ್‌ಗೆ ಬಲಿ!

ಈ ಘಟನೆಯು ಪುಣೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ವಿದ್ಯಾವಂತ ಕುಟುಂಬಗಳೂ ಇಂತಹ ಮೂಢನಂಬಿಕೆಗೆ ಬಲಿಯಾಗುತ್ತಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಪೊಲೀಸರು ಮಿಶ್ರಾನ ಆಶ್ರಮದ ಮೇಲೆ ದಾಳಿ ನಡೆಸಿದಾಗ, ಅಲ್ಲಿನ ನೆಲದಡಿಯ ರಹಸ್ಯ ಕೋಣೆಯಿಂದ ಭಾರಿ ಪ್ರಮಾಣದ ಆಕ್ಷೇಪಾರ್ಹ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿಯ ವೇಳೆ 12 ಲ್ಯಾಪ್‌ಟಾಪ್‌ಗಳು, 11 ಮೊಬೈಲ್ ಫೋನ್‌ಗಳು, 19 ಹಾರ್ಡ್ ಡ್ರೈವ್‌ಗಳು, ಹಲವಾರು ಪೆನ್ ಡ್ರೈವ್‌ಗಳು ಮತ್ತು ಕ್ಯಾಸೆಟ್‌ಗಳು, 6.5 ಲಕ್ಷ ರೂ. ನಗದು ಮತ್ತು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸಿಕ್ಕಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ – Kannada News | Congress Leaders Press Conference over Karnataka MLC Results

ಬೆಂಗಳೂರು, ಜೂನ್​​ 18: ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟದ ಬೆನ್ನಲ್ಲೇ ಕಾಂಗ್ರೆಸ್​​ ನಾಯಕರು ಸುದ್ದಿಗೋಷ್ಠಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್​ ನಾಯಕರ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆ ಶಿವಕುಮಾರ್​​, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ರಾಜ್ಯ ಉಸ್ತುವಾರಿ ರಣದೀಪ್​​ ಸುರ್ಜೇವಾಲಾ ಸೇರಿ ಪಕ್ಷದ ನಾಯಕರು ಭಾಗಿಯಾಗಿದ್ದಾರೆ. ವಿಧಾನಪರಿಷತ್​ ಚುನಾವಣೆಯಲ್ಲಿ ಕಾಂಗ್ರೆಸ್​ನ ಐವರು ಅಭ್ಯರ್ಥಿಗಳು ಗೆದ್ದಿದ್ದು, ಪ್ರಥಮ ಸುತ್ತಿನ ಮತಗಳಲ್ಲೇ ಎಲ್ಲಾ ಅಭ್ಯರ್ಥಿಗಳು ವಿಜಯ ಕಂಡಿರುವ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಸಂತಸ ಹಂಚಿಕೊಳ್ಳಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link