All posts by nagaraj11081993

ಟಾಲಿವುಡ್​​ಗೂ ಮಾದರಿ ಆಯ್ತು ವಿಜಯಲಕ್ಷ್ಮೀ, ರಮ್ಯಾ ನಿರ್ಧಾರ

ಟಾಲಿವುಡ್​​ಗೂ ಮಾದರಿ ಆಯ್ತು ವಿಜಯಲಕ್ಷ್ಮೀ, ರಮ್ಯಾ ನಿರ್ಧಾರ

ನಟಿ ರಮ್ಯಾ (Ramya) ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಇತ್ತೀಚೆಗೆ ತಮ್ಮ ಸೋಶಿಯಲ್ ಮೀಡಿಯಾ ಅಶ್ಲೀಲ ಕಮೆಂಟ್ ಹಾಕಿದವರ ವಿರುದ್ಧ ದೂರು ನೀಡಿದ್ದರು. ಈ ಮೂಲಕ ಇಂಥವರ ವಿರುದ್ಧ ಸುಮ್ಮನೆ ಇರಬಾರದು ಎಂಬ ಸಂದೇಶ ರವಾನಿಸಿದ್ದಾರೆ. ಈ ಪ್ರಕರಣದಲ್ಲಿ ಹಲವರನ್ನು ಬಂಧಿಸಲಾಗಿದೆ. ಈ ವಿಷಯ ಸಾಕಷ್ಟು ಚರ್ಚೆ ಆಯಿತು. ಅಶ್ಲೀಲ ಕಮೆಂಟ್​​ಗಲಿಂದ ಕಂಗೆಟ್ಟಿದ್ದ ಎಲ್ಲರಿಗೂ ಇದೊಂದು ಮಾದರಿ ಆಯಿತು. ಈಗ ಪರಭಾಷೆಯಲ್ಲೂ ನಟಿಯರು ಈ ರೀತಿ ನಿರ್ಧಾರ ಮಾಡುತ್ತಿದ್ದಾರೆ. ನಟಿಯರು ಮುಂದೆ ಬಂದು ಕೇಸ್ ದಾಖಲಿಸುತ್ತಿದ್ದಾರೆ.

ಟಾಲಿವುಡ್ ನಟಿ ರೇಣು ದೇಸಾಯಿಗೆ ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಕಮೆಂಟ್ ಹಾಕಿದ್ದರು. ಇದನ್ನು ಅವರು ಪೊಲೀಸರ ಗಮನಕ್ಕೆ ತಂದಿದ್ದಾರೆ. ಸದ್ಯ ತೆಲಂಗಾಣ ಪೊಲೀಸರು ಈ ಪ್ರಕರಣದಲ್ಲಿ ಓರ್ವನನ್ನು ಬಂಧಿಸಿದ್ದಾರೆ. ಆತ ವೃತ್ತಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದಾನೆ.

ನಟಿ ಅನಸುಯಾ ಅವರ ಮೇಲೆ ಕೆಟ್ಟದಾಗಿ ಕಮೆಂಟ್ ಹಾಕಿದ ವ್ಯಕ್ತಿಯನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಈ ಮೂಲ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಅನೇಕ ನಟಿಯರು ಈ ರೀತಿ ಮುಂದೆ ಬಂದ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಕಮೆಂಟ್ ಮಾಡುವವರು ತಮ್ಮ ಗುರುತು ಯಾರಿಗೂ ಸಿಗೋದಿಲ್ಲ ಎಂದು ಅಂದುಕೊಂಡಿರುತ್ತಾರೆ. ಆದರೆ, ಅಸಲಿಗೆ ಹಾಗಿರೋದಿಲ್ಲ ಎಂಬುದನ್ನು ಪೊಲೀಸರು ತೋರಿಸುತ್ತಿದ್ದಾರೆ.

ಇದನ್ನೂ ಓದಿ: ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ ಹೇಳಿದ ರಮ್ಯಾ
ಕರ್ನಾಟಕದಲ್ಲಿ ಅನೇಕ ನಟಿಯರು ಇದೇ ರೀತಿಯ ದಿಟ್ಟ ಕ್ರಮ ಕೈಗೊಂಡಿದ್ದರು. ರಮ್ಯಾ ಅವರು ಈ ವಿಷಯದಲ್ಲಿ ಮೊದಲು ಹೆಜ್ಜೆ ಇಟ್ಟರು. ಅವರು ನೀಡಿದ ದೂರು ಆಧರಿಸಿ ಅನೇಕರನ್ನು ಬಂಧಿಸಲಾಗಿದೆ. ಇತ್ತೀಚೆಗೆ ವಿಜಯಲಕ್ಷ್ಮೀ ಅವರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲವಾಗಿ ಕಮೆಂಟ್ ಹಾಕಿದವರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಈಗ ಟಾಲಿವುಡ್ ನಟಿಯರು ಸಿಡಿದೆದ್ದಿದ್ದಾರೆ. ಇದು ಎಲ್ಲಾ ಚಿತ್ರರಂಗಕ್ಕೂ ಹಬ್ಬಬೇಕು ಎಂಬುದು ಅನೇಕರ ಆಸೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮೈಸೂರು ಪಾಲಿಕೆಯಿಂದಲೇ ಫುಟ್​ಪಾತ್ ಒತ್ತುವರಿ! ಅರಮನೆ ಮುಂಭಾಗದ ರಾಜಮಾರ್ಗ ಒಡೆದು ಟಾಂಗಾ ಸ್ಟ್ಯಾಂಡ್​

ಮೈಸೂರು, ಮಾರ್ಚ್ 18: ಮೈಸೂರು (Mysuru) ಅಂದರೆ ಅದು ಪಾರಂಪರಿಕ ಕಟ್ಟಡಗಳ ತವರು. ಇಲ್ಲಿನ ಪ್ರತಿ ರಸ್ತೆಯಿಗೂ ಒಂದು ಇತಿಹಾಸವಿದೆ. ಆದರೆ ಈಗ ಅದೇ ಇತಿಹಾಸಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ‘ಸ್ವದೇಶ್ ದರ್ಶನ 2.0’ ಯೋಜನೆಯಡಿ ನಗರದ 10 ಕಡೆ ಟಾಂಗಾ ಸ್ಟ್ಯಾಂಡ್ ನಿರ್ಮಿಸಲು ಪಾಲಿಕೆ ಮುಂದಾಗಿದೆ. ಆದರೆ ಈ ಯೋಜನೆ ಈಗ ವಿವಾದದ (Tonga stand controversy) ಕೇಂದ್ರಬಿಂದುವಾಗಿದೆ. ಅರಮನೆ ಮುಂಭಾಗದ ಚಾಮರಾಜೇಂದ್ರ ವೃತ್ತದ ಬಳಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ರಾಜಮಾರ್ಗವನ್ನು ಒಡೆದು, ಫುಟ್‌ಪಾತ್ ಮೇಲೆಯೇ ಟಾಂಗಾ ಸ್ಟ್ಯಾಂಡ್ ನಿರ್ಮಿಸಲಾಗುತ್ತಿದೆ.

‘ಪಾಲಿಕೆ ಆಯುಕ್ತರಿಗೆ ಮೈಸೂರು ನಗರದ ವಾಸ್ತವವೇ ಗೊತ್ತಿಲ್ಲ. ಎಸಿ ಹಾಕಿಕೊಂಡು ಕಚೇರಿಯಲ್ಲಿ ಕೂತಿರುವ ಅವರಿಗೆ ಪಾದಚಾರಿ ಮಾರ್ಗ ಯಾವುದು, ಖಾಲಿ ಜಾಗ ಯಾವುದು ಎಂಬುದು ಹೇಗೆ ತಿಳಿಯುತ್ತದೆ? ಸಿಎಂ ಬಂದಾಗ ಹೂಗುಚ್ಚ ಕೊಡುವುದೇ ಅವರ ಕೆಲಸವಲ್ಲ. ಮೊದಲು ನಗರದಲ್ಲಿ ಓಡಾಡಿ ಸಮಸ್ಯೆ ಅರ್ಥ ಮಾಡಿಕೊಳ್ಳಲಿ. ಕೂಡಲೇ ಈ ಕಾಮಗಾರಿ ನಿಲ್ಲಿಸಿ, ಹಾಳಾದ ರಸ್ತೆ ಸರಿಪಡಿಸಲಿ’ ಎಂದು ಬಿಜೆಪಿ ನಾಯಕ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.

ಟಾಂಗಾ ಸವಾರಿಗೆ ಉತ್ತೇಜನ ನೀಡುವ ಹೆಸರಿನಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಾಳಿಗೆ ತೂರಲಾಗುತ್ತಿದೆ ಎಂಬುದು ಸ್ಥಳೀಯರ ಆಕ್ರೋಶ. ದಿನನಿತ್ಯ ಸಾವಿರಾರು ಪ್ರವಾಸಿಗರು ಮತ್ತು ಜನಸಾಮಾನ್ಯರು ಸಂಚರಿಸುವ ಈ ಪ್ರದೇಶದಲ್ಲಿ ಸ್ಟ್ಯಾಂಡ್ ನಿರ್ಮಿಸಿದರೆ ಪಾದಚಾರಿಗಳು ರಸ್ತೆಗೆ ಇಳಿಯಬೇಕಾದ ಅನಿವಾರ್ಯತೆ ಎದುರಾಗುತ್ತದೆ. ಪಾಲಿಕೆಯೇ ಫುಟ್‌ಪಾತ್ ಒತ್ತುವರಿ ಮಾಡುತ್ತಿದೆ ಎಂದು ಮಾಜಿ ಮೇಯರ್ ಎಂ.ಜೆ. ರವಿಕುಮಾರ್ ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.

ಫುಟ್​ಪಾತ್​ನಲ್ಲಿ ಕಾಮಗಾರಿಯ ವಿಡಿಯೋ ನೋಡಿ


‘ಪಾಲಿಕೆಯು ಮೈಸೂರನ್ನು ಶೆಲ್ಟರ್‌ಗಳ ನಗರವನ್ನಾಗಿ ಮಾಡಲು ಹೊರಟಿದೆ. ಫುಟ್‌ಪಾತ್ ತೆರವು ಮಾಡಬೇಕಾದ ಪಾಲಿಕೆಯೇ ಇಲ್ಲಿ ಒತ್ತುವರಿ ಮಾಡಿಸುತ್ತಿರುವುದು ದುರಂತ. ಯಾವುದೇ ಕಾರಣಕ್ಕೂ ಇಲ್ಲಿ ಟಾಂಗಾ ಸ್ಟ್ಯಾಂಡ್ ನಿರ್ಮಿಸಲು ಬಿಡುವುದಿಲ್ಲ’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹುಟ್ಟಿದ್ದೇ ಒಂದು ಭೀಕರ ಅಗ್ನಿದುರಂತದಿಂದ! ಇದರ ಹಿಂದಿರುವ ಅರಮನೆಯ ಆ ರಹಸ್ಯ ನಿಮಗೆ ಗೊತ್ತೇ?

ಒಟ್ಟಿನಲ್ಲಿ, ಪರಂಪರೆ ಉಳಿಸುವ ಹೆಸರಿನಲ್ಲಿ ನಡೆಯುತ್ತಿರುವ ಈ ಅವೈಜ್ಞಾನಿಕ ಕಾಮಗಾರಿ ಮೈಸೂರಿಗರ ನಿದ್ದೆಗೆಡಿಸಿದೆ. ಇನ್ನಾದರೂ ಪಾಲಿಕೆ ಎಚ್ಚೆತ್ತುಕೊಂಡು ಪರ್ಯಾಯ ಜಾಗ ಹುಡುಕುತ್ತದೆಯೇ ಅಥವಾ ಸಾರ್ವಜನಿಕರ ಆಕ್ರೋಶಕ್ಕೆ ಮಣಿಯುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಸನ್​ರೈಸರ್ಸ್’ ಪರ ಪಾಕ್ ಆಟಗಾರ ಕಣಕ್ಕಿಳಿಯುವುದು ಡೌಟ್!

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್​ಗೆ ಆಯ್ಕೆಯಾಗಿರುವ ಪಾಕಿಸ್ತಾನ್ ಸ್ಪಿನ್ನರ್ ಅಬ್ರಾರ್ ಅಹ್ಮದ್ ಮುಂಬರುವ ಟೂರ್ನಿಯಲ್ಲಿ ಸನ್​ರೈಸರ್ಸ್​ ಲೀಡ್ಸ್ ಪರ ಕಣಕ್ಕಿಳಿಯುವುದು ಅನುಮಾನ. ದಿ ಹಂಡ್ರೆಡ್ ಲೀಗ್​​ ಟೂರ್ನಿಗೆ ದಿನಾಂಕ ನಿಗದಿಯಾಗಿದ್ದು, ಇದೇ ವೇಳೆ ಪಾಕಿಸ್ತಾನ್ ತಂಡ ಟೆಸ್ಟ್ ಸರಣಿ ಆಡಲಿದೆ. ಈ ಸರಣಿಗೆ ಅಬ್ರಾರ್ ಆಯ್ಕೆಯಾದರೆ ಅವರು ಸನ್​ರೈಸರ್ಸ್ ಲೀಡ್ಸ್​ ತಂಡದಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಮಾರ್ಚ್ 12, 2026 ರಂದು ನಡೆದ ಹರಾಜಿನಲ್ಲಿ ಅಬ್ರಾರ್ ಅಹ್ಮದ್ ಅವರನ್ನುಎಸ್​ಆರ್​ಹೆಚ್ ಮಾಲೀಕತ್ವದ ಸನ್​ರೈಸರ್ಸ್ ಲೀಡ್ಸ್ ಫ್ರಾಂಚೈಸಿಯು ಬರೋಬ್ಬರಿ £1,90,000 (ಸುಮಾರು ₹2.34 ಕೋಟಿ) ಮೊತ್ತಕ್ಕೆ ಖರೀದಿಸಿದೆ.

ಭಾರತೀಯ ವಿರೋಧಿ ಮನಸ್ಥಿತಿ ಹೊಂದಿರುವ ಪಾಕ್ ಆಟಗಾರನನ್ನು ಖರೀದಿಸಿರುವುದಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಈ ಆಕ್ರೋಶದೊಂದಿಗೆ ಸನ್​ರೈಸರ್ಸ್​ ಲೀಡ್ಸ್‌ನ ‘X’ (ಟ್ವಿಟರ್) ಖಾತೆಯನ್ನು ರಿಪೋರ್ಟ್ ಮಾಡಿದ್ದ ಪರಿಣಾಮ ಎಸ್​ಆರ್​ಎಲ್​ ತಂಡದ ಸೋಷಿಯಲ್ ಮೀಡಿಯಾ ಖಾತೆಯು ತಾತ್ಕಾಲಿಕ ಸ್ಥಗಿತವಾಗಿತ್ತು.

ಇತ್ತ ಭಾರತ ಸೇರಿದಂತೆ ಎಲ್ಲೆಡೆಯಿಂದ ಎಸ್​ಆರ್​ಹೆಚ್​ ಅಭಿಮಾನಿಗಳ ಒತ್ತಡ ಹೆಚ್ಚಾಗುತ್ತಿರುವುದರಿಂದ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಪಾಕ್ ಆಟಗಾರನನ್ನು ಕೈ ಬಿಡಲಿದ್ದಾರೆ ಎಂದು ವರದಿಯಾಗಿತ್ತು.

ಇದೀಗ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಕಾದು ನೋಡುವ ತಂತ್ರಕ್ಕೆ ಮುಂದಾಗಿದೆ. ಏಕೆಂದರೆ ಅಬ್ರಾರ್ ಅಹ್ಮದ್​ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾದರೆ, ದಿ ಹಂಡ್ರೆಡ್ ಲೀಗ್​ಗೆ ಅಲಭ್ಯರಾಗಲಿದ್ದಾರೆ. ಹೀಗಾಗಿ ಜುಲೈ ತಿಂಗಳವರೆಗೆ ಎಸ್​ಆರ್​ಹೆಚ್ ಯಾವುದೇ ಕ್ರಮ ಕೈಗೊಳ್ಳುವ ಸಾಧ್ಯತೆಯಿಲ್ಲ ಎಂದು ತಿಳಿದು ಬಂದಿದೆ.

ಪಾಕಿಸ್ತಾನ್-ವೆಸ್ಟ್ ಇಂಡೀಸ್ ಸರಣಿ ಯಾವಾಗ?

ಪಾಕಿಸ್ತಾನ್ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಯು 2026ರ ಜುಲೈ 15 ರಿಂದ ಆಗಸ್ಟ್ 7 ರವರೆಗೆ ನಡೆಯಲಿದೆ. ಇತ್ತ ‘ದಿ ಹಂಡ್ರೆಡ್’ ಟೂರ್ನಿಯು ಜುಲೈ 21 ರಿಂದ ಆಗಸ್ಟ್ 16 ರವರೆಗೆ ನಡೆಯಲಿದೆ.

ಅಬ್ರಾರ್ ಅಹ್ಮದ್ ಅವರು ಆಗಸ್ಟ್ 7 ರವರೆಗೆ ವೆಸ್ಟ್ ಇಂಡೀಸ್‌ನಲ್ಲಿ ಟೆಸ್ಟ್ ಪಂದ್ಯಗಳನ್ನು ಆಡಬೇಕಿರುವುದರಿಂದ, ಅವರು ಸನ್​ರೈಸರ್ಸ್​ ಲೀಡ್ಸ್ ತಂಡದ ಬಹುತೇಕ ಪಂದ್ಯಗಳನ್ನು ತಪ್ಪಿಸಿಕೊಳ್ಳುವುದು ಖಚಿತವಾಗಿದೆ.

ಇದೇ ನೆಪವಿಟ್ಟುಕೊಂಡು ಸನ್​ರೈಸರ್ಸ್ ಲೀಡ್ಸ್ ಫ್ರಾಂಚೈಸಿಯು ಅಬ್ರಾರ್ ಬದಲಿಗೆ ಮತ್ತೋರ್ವ ವಿದೇಶಿ ಆಟಗಾರನನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.

ನೇರವಾಗಿ ಕೈ ಬಿಡಲು ಯಾಕೆ ಸಾಧ್ಯವಿಲ್ಲ?

ಕಾನೂನು ಮತ್ತು ಆರ್ಥಿಕ ಸಮಸ್ಯೆ: ಅಬ್ರಾರ್ ಅಹ್ಮದ್ ಅವರನ್ನು ಹರಾಜಿನಲ್ಲಿ £190,000 (ಸುಮಾರು ₹2.34 ಕೋಟಿ) ನೀಡಿ ಅಧಿಕೃತವಾಗಿ ಖರೀದಿಸಲಾಗಿದೆ. ಯಾವುದೇ ಬಲವಾದ ಶಿಸ್ತುಕ್ರಮದ ಕಾರಣವಿಲ್ಲದೆ ಅವರನ್ನು ಕೈಬಿಟ್ಟರೆ, ಫ್ರಾಂಚೈಸಿ ಅವರಿಗೆ ಪೂರ್ಣ ಹಣವನ್ನು ನೀಡಬೇಕಾಗುತ್ತದೆ.

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ನಿಯಮ: ‘ದಿ ಹಂಡ್ರೆಡ್’ ಟೂರ್ನಿಯು ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯ ನಿಯಮದಡಿ ನಡೆಯುತ್ತದೆ. ಕೇವಲ ಸೋಶಿಯಲ್ ಮೀಡಿಯಾ ಆಕ್ರೋಶದ ಕಾರಣಕ್ಕೆ ಆಟಗಾರನನ್ನು ತೆಗೆದುಹಾಕಲು ಇಸಿಬಿ ಅನುಮತಿ ನೀಡುವುದಿಲ್ಲ.

ಹೀಗಾಗಿಯೇ ಇದೀಗ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಕಾದು ನೋಡುವ ತಂತ್ರಕ್ಕೆ ಮುಂದಾಗಿದೆ. ಅದರಂತೆ ಅಬ್ರಾರ್ ಅಹ್ಮದ್ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಆಯ್ಕೆಯಾದರೆ, ಸನ್​ರೈಸರ್ಸ್ ಲೀಡ್ಸ್ ತಂಡದಿಂದ ಹೊರಬೀಳುವುದು ಖಚಿತ.,

ಸನ್‌ರೈಸರ್ಸ್ ಲೀಡ್ಸ್ ತಂಡದ ಆಟಗಾರರು:

ವಿದೇಶಿ ಆಟಗಾರರು: ಅಬ್ರಾರ್ ಅಹ್ಮದ್ (ಪಾಕಿಸ್ತಾನ್), ಮಿಚೆಲ್ ಮಾರ್ಷ್ (ಆಸ್ಟ್ರೇಲಿಯಾ), ನಾಥನ್ ಎಲ್ಲಿಸ್ (ಆಸ್ಟ್ರೇಲಿಯಾ), ಮತ್ತು ರಯಾನ್ ರಿಕೆಲ್ಟನ್ (ಸೌತ್ ಆಫ್ರಿಕಾ).

ಇನ್ನೂ ಓದಿ: ಕೆಎಲ್​ ರಾಹುಲ್​ಗಾಗಿ ಇಂಗ್ಲೆಂಡ್ ಆಟಗಾರನ ಖರೀದಿಸಿದ ಡೆಲ್ಲಿ ಕ್ಯಾಪಿಟಲ್ಸ್

ಇಂಗ್ಲೆಂಡ್ ಆಟಗಾರರು: ಹ್ಯಾರಿ ಬ್ರೂಕ್ (ನಾಯಕ), ಝಾಕ್ ಕ್ರಾಲಿ, ಬೆನ್ ಹೌವೆಲ್, ಬ್ರೈಡನ್ ಕಾರ್ಸ್, ಡಾನ್ ಲಾರೆನ್ಸ್, ಮ್ಯಾಥ್ಯೂ ಪಾಟ್ಸ್, ರೀಸ್ ಟೋಪ್ಲಿ, ಟಾಮ್ ಅಲ್ಸೊಪ್, ಎಡ್ ಬರ್ನಾರ್ಡ್, ಟಾಮ್ ಲಾಸ್, ಮತ್ತು ಲಿಯಾಮ್ ಪ್ಯಾಟರ್ಸನ್-ವೈಟ್.

 

 

 

Source link

ಮೈಸೂರು ಸಿಗ್ನಲ್​​​ ಬಗ್ಗೆ ಸಿದ್ದರಾಮಯ್ಯ ಅವರ ಸುಪುತ್ರ ಹೇಳಬೇಕು; ಕಮಿಷನ್ ಆಸೆಗಾಗಿ ಈ ವ್ಯವಸ್ಥೆ ಎಂದ ಪ್ರತಾಪ್ ಸಿಂಹ

ಮೈಸೂರು, ಮಾ.18: ನಗರದಲ್ಲಿ ನೂತನವಾಗಿ ಅಳವಡಿಸಲಾಗಿರುವ ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಫ್ಲೆಕ್ಸ್ ಬೋರ್ಡ್‌ಗಳ ವಿರುದ್ಧ ಸಂಸದ ಪ್ರತಾಪ್ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುಮಾರು 108 ಹೊಸ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿದ್ದು, ಇದು ಅವೈಜ್ಞಾನಿಕವಾಗಿದೆ. ಕೇವಲ 1.5 ರಿಂದ 2 ಕಿಲೋಮೀಟರ್ ಅಂತರದಲ್ಲಿ 9-10 ಸಿಗ್ನಲ್‌ಗಳಿದ್ದು, ವಾಹನ ದಟ್ಟಣೆ ಇಲ್ಲದ ರಸ್ತೆಗಳಲ್ಲೂ ಸಿಗ್ನಲ್‌ಗಳನ್ನು ಅಳವಡಿಸಿರುವುದು ಜನರಿಗೆ ಅನಾನುಕೂಲ ಉಂಟುಮಾಡುತ್ತಿದೆ ಎಂದು ಅವರು ಹೇಳಿದ್ದಾರೆ. ರಿಂಗ್ ರೋಡ್‌ಗೆ ಅಂಡರ್‌ಪಾಸ್ ಮತ್ತು ಓವರ್‌ಬ್ರಿಡ್ಜ್‌ಗಳು ಪರಿಹಾರವೇ ಹೊರತು ಸಿಗ್ನಲ್‌ಗಳಲ್ಲ ಎಂದು ಸಿಂಹ ಪ್ರತಿಪಾದಿಸಿದ್ದಾರೆ. ಅದೇ ರೀತಿ, ಮೈಸೂರಿನಾದ್ಯಂತ ಹೆಚ್ಚುತ್ತಿರುವ ಫ್ಲೆಕ್ಸ್ ಬೋರ್ಡ್‌ಗಳ ಬಗ್ಗೆಯೂ ಅವರು ಚಿಂತಿತರಾಗಿದ್ದಾರೆ. ರಾಜಕೀಯ ಪಕ್ಷಗಳು ತಮ್ಮ ಪ್ರಚಾರಕ್ಕಾಗಿ ನಗರವನ್ನು ಗಬ್ಬೆಬ್ಬಿಸುತ್ತಿವೆ ಎಂದು ಆರೋಪಿಸಿದ ಪ್ರತಾಪ್ ಸಿಂಹ, ಬದಲಿಗೆ ಸ್ಥಳೀಯ ಪತ್ರಿಕೆಗಳು ಮತ್ತು ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ನೀಡುವಂತೆ ಮನವಿ ಮಾಡಿದ್ದಾರೆ. ಮೈಸೂರನ್ನು ಫ್ಲೆಕ್ಸ್ ಮುಕ್ತ ನಗರವನ್ನಾಗಿ ಮಾಡುವಂತೆ ಅವರು ಜಿಲ್ಲಾಧಿಕಾರಿಗಳು ಮತ್ತು ಎಲ್ಲ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿಕೊಂಡಿದ್ದಾರೆ. ರಿಂಗ್ ರೋಡ್‌ಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಸಿಗ್ನಲ್‌ಗಳ ಬದಲು ಅಂಡರ್‌ಪಾಸ್ ಮತ್ತು ಓವರ್‌ಬ್ರಿಡ್ಜ್‌ಗಳು ಪರಿಹಾರವಾಗಿವೆ ಎಂದು ಸಿಂಹ ತಿಳಿಸಿದ್ದಾರೆ. ಸಂಸದರಾಗಿ ತಾವು ಈಗಾಗಲೇ ರಿಂಗ್ ರೋಡ್‌ಗೆ ಏಳು ಅಂಡರ್‌ಪಾಸ್ ಮತ್ತು ಓವರ್‌ಬ್ರಿಡ್ಜ್‌ಗಳಿಗೆ ಅನುಮೋದನೆ ನೀಡಿದ್ದಾಗಿ ಉಲ್ಲೇಖಿಸಿದ್ದಾರೆ. ಬೆಳಗ್ಗೆ ಪೀಕ್ ಅವರ್ಸ್ ಹೊರತುಪಡಿಸಿ, ಹಗಲಿನ ಸಮಯದಲ್ಲಿ ಈ ಸಿಗ್ನಲ್‌ಗಳ ಅಗತ್ಯವಿಲ್ಲ. ಕಮಿಷನ್ ಆಸೆಗಾಗಿ ಸಿಕ್ಕ ಸಿಕ್ಕ ಜಾಗಗಳಲ್ಲೆಲ್ಲಾ ಸಿಗ್ನಲ್‌ಗಳನ್ನು ಅಳವಡಿಸಿರುವುದು ಜನರಿಗೆ ಅನಾನುಕೂಲವನ್ನುಂಟುಮಾಡುತ್ತಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯುಗಾದಿಗೆ ಗಣೇಶ್ ಕಡೆಯಿಂದ ಸಿಗಲಿದೆ ದೊಡ್ಡ ಸರ್​ಪ್ರೈಸ್

ಗೋಲ್ಡನ್ ಸ್ಟಾರ್ ಗಣೇಶ್ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ‘ಯುಗಾದಿ, ಹೊಸ ವರ್ಷ ಮಾತ್ರ ಅಲ್ಲ, ಹೊಸ ಟೈಟಲ್, ಹೊಸ ಸಂಚಲನ, ಹೊಸ ಸಿನಿಮಾ, ಹಲವು ತಿಂಗಳ ಪರಿಶ್ರಮ, ಅನೇಕ ಕನಸುಗಳ ಶ್ರಮ’ ಎಂದು ಕ್ಯಾಪ್ಶನ್ ಹಾಕಿದ್ದಾರೆ. ಈ ವಿಡಿಯೋದಲ್ಲಿ ಮಂಜು ಪಾವಗಡ ಟೈಟಲ್ ಹೇಳಿ ಅಂತ ದುಂಬಾಲು ಬೀಳ್ತಾರೆ. ಕೊನೆಗೆ ಗಣೇಶ್ ಬಳಿಯೂ ಬರ್ತಾರೆ. ಯುಗಾದಿಗೆ ಟೈಟಲ್ ಹೇಳೋದಾಗಿ ಅವರು ತಿಳಿಸ್ತಾರೆ. ಇದರಿಂದ ಯುಗಾದಿಗೆ ಸರ್​​ಪ್ರೈಸ್ ಸಿಗೋದು ಪಕ್ಕಾ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕ್ರಿಕೆಟರ್ ಆಗ ಹೊರಟಿದ್ದ ‘ಧುರಂಧರ್’ ನಿರ್ದೇಶಕ; ರಾಜಕೀಯದಿಂದ ಎಲ್ಲವೂ ಬದಲಾಯ್ತು

ನಿರ್ದೇಶಕ ಆದಿತ್ಯ ಧಾರ್ (Aditya Dhar) ಅವರು ಈಗ ಸುದ್ದಿಯಲ್ಲಿದ್ದಾರೆ. ಅವರ ನಿರ್ದೇಶನದ ‘ಧುರಂಧರ್’ ಸಿನಿಮಾ ಅದ್ಭುತ ಯಶಸ್ಸು ಕಂಡಿತು. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 1300 ಕೋಟಿ ರೂಪಾಯಿ ಗಳಿಕೆ ಮಾಡಿತು. ಈ ಮೂಲಕ ಹಲವು ದಾಖಲೆಗಳನ್ನು ಬರೆಯಿತು. ಹಿಂದಿ ಚಿತ್ರವೊಂದು ವಿಶ್ವ ಮಟ್ಟದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಸಿದ್ದು ಇದೇ ಮೊದಲು. ಇನ್ನು, ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಮಾಡಲು ರೆಡಿ ಆಗಿದೆ. ಈ ಮಧ್ಯೆ ಚಿತ್ರದ ನಿರ್ದೇಶಕ ಆದಿತ್ಯ ಧಾರ್ ಅವರ ಬಗ್ಗೆ ಚರ್ಚೆ ಆಗುತ್ತಿದೆ. ಅವರು ಕ್ರಿಕೆಟರ್ ಆಗಹೊರಟಿದ್ದರು. ಆದರೆ, ಅಲ್ಲಿನ ರಾಜಕೀಯ ಅವರಿಗೆ ಅವಕಾಶ ನೀಡಲೇ ಇಲ್ಲ.

ಕ್ರಿಕೆಟ್​ ಅಲ್ಲಿ ಹೆಸರು ಮಾಡಬೇಕು ಎಂದು ಆದಿತ್ಯಧಾರ್ ಪ್ರಯತ್ನಿಸಿದ್ದರು. ಏನೇ ಮಾಡಿದರೂ ಅದರ ಒಳಗೆ ಎಂಟ್ರಿ ಸಿಗಲೇ ಇಲ್ಲ. ಈ ಕಾರಣದಿಂದ ಅವರು ಸಿನಿಮಾದತ್ತ ವಾಲಿದರು. ಅಲ್ಲಿ ಅವರಗೆ ದೊಡ್ಡ ಯಶಸ್ಸು ಸಿಕ್ಕಿತು. ಈ ಬಗ್ಗೆ ನಿರ್ದೇಶಕ ಪ್ರಿಯದರ್ಶನ್ ಮಾತನಾಡಿದ್ದಾರೆ.

‘ಆದಿತ್ಯ ಧಾರ್ ಕ್ರಿಕೆಟಿಗರಾಗಿದ್ದರು. ಆದರೆ ಕೆಲವು ರಾಜಕೀಯ ಪ್ರಭಾವದಿಂದಾಗಿ ಅಂಡರ್ -19 ತಂಡಕ್ಕೆ ಸೇರಲು ಸಾಧ್ಯವಾಗಲಿಲ್ಲ. ಆದ್ದರಿಂದ ಅವರನ್ನು ಹೊರಹಾಕಲಾಯಿತು. ಮನೆಯಲ್ಲಿ ಕುಳಿತಿದ್ದಾಗ ಅವರು ತುಂಬಾ ನಿರಾಶೆಗೊಂಡಿದ್ದರು. ಯಾರೋ ಅವರಿಗೆ ಸಿನಿಮಾ ನೋಡಲು ಬರುವಂತೆ ಕರೆ ನೀಡಿದರು. ಅದು ಗಾರ್ಡಿಶ್ ಹೆಸರಿನ ಸಿನಿಮಾ ಆಗಿತ್ತು. ಚಿತ್ರ ನೋಡಿದ ಬಳಿಕ ಅವರಿಗೆ ಸಿನಿಮಾ ಮಾಡುವ ಬಯಕೆ ಬಂತು’ ಎಂದು ನಿರ್ದೇಶಕ ಪ್ರಿಯದರ್ಶನ್ ಹೇಳಿದ್ದಾರೆ.

ಇದನ್ನೂ ಓದಿ: ‘ಸತ್ಯ’, ‘ಕಂಪನಿ’ ಸಿನಿಮಾ ಸೇರಿಸಿ ‘ಧುರಂಧರ್’ ಮಾಡಿದ ಆದಿತ್ಯ ಧಾರ್: ವಿಷಯ ಬಯಲು

ಆದಿತ್ಯ ಧಾರ್ ಮುಂಬೈಗೆ ಬಂದರು. ಇಲ್ಲಿ ಸಿನಿಮಾ ಮಾಡಲು ಆರಂಭಿಸಿದರು. ಆದರೆ, ಅವರಿಗೆ ಕ್ರೆಡಿಟ್ ಸಿಗಲಿಲ್ಲ. ಕೊನೆಗೆ 2010ರ ಸಮಯದಲ್ಲಿ ಆದಿತ್ಯ ಅವರು ಪ್ರಿಯದರ್ಶನ್ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದರು. ಆ ಬಳಿಕ ಅವರು ಪೂರ್ಣಪ್ರಮಾಣದ ನಿರ್ದೇಶಕರಾದರು. ಈಗ ಎಲ್ಲರೂ ತಿರುಗಿ ನೋಡುವ ರೀತಿಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನಮ್ಮನ್ನು ಕೇಳಿ ಈ ಯುದ್ಧ ಆರಂಭಿಸಿಲ್ಲ: ಟ್ರಂಪ್‌ಗೆ ನ್ಯಾಟೋ ರಾಷ್ಟ್ರಗಳ ಶಾಕ್; ಏಕಾಂಗಿಯಾದ ಅಮೆರಿಕ?

ಟೆಹ್ರಾನ್, ಮಾ.18: ಇರಾನ್‌ನಲ್ಲಿ ಹೊಸ ಆಡಳಿತ ತರುವ ಅಮೆರಿಕ ಮತ್ತು ಇಸ್ರೇಲ್ ಪ್ಲ್ಯಾನ್‌ಗೆ ಈಗ ಇರಾನ್ ಸೇನೆ ಮತ್ತು ಹೊಸ ನಾಯಕ ಮೊಜ್ತಾಬಾ ಖಮನೈ ಮರ್ಮಾಘಾತ ನೀಡಿದ್ದಾರೆ. ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ (NATO) ದೇಶಗಳು ಈಗ ಯುದ್ಧದಿಂದ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಹಾರ್ಮುಜ್ ಜಲಸಂಧಿಯನ್ನು ಇರಾನ್ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಟ್ರಂಪ್ ನ್ಯಾಟೋ ದೇಶಗಳ ಸಹಾಯ ಕೋರಿದ್ದರು. ಆದರೆ ನ್ಯಾಟೋ ರಾಷ್ಟ್ರಗಳು ಕಡಾತುಂಡಾಗಿ ನಿರಾಕರಿಸಿವೆ.

ನ್ಯಾಟೋಗೆ ಈ ಯುದ್ಧಕ್ಕೂ ಸಂಬಂಧವಿಲ್ಲ ಎಂದು ಜರ್ಮನಿ ಹೇಳಿದೆ. ನಾವು ಈ ಯುದ್ಧದಲ್ಲಿ ಪಾಲುದಾರರಲ್ಲ ಎಂದು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಸ್ಪಷ್ಟಪಡಿಸಿದ್ದಾರೆ. ನಮ್ಮದು ಕೇವಲ ರಕ್ಷಣಾತ್ಮಕ ನಿಲುವು ಎಂದು ಯುಕೆ ಪ್ರಧಾನಿ ಸ್ಟಾರ್ಮರ್ ಹೇಳಿದ್ದಾರೆ. ಇನ್ನು ನಮ್ಮನ್ನು ಕೇಳಿ ಈ ಯುದ್ಧ ಆರಂಭಿಸಿಲ್ಲ ಎಂದು ಕೆನಡಾ ಧಾನಿ ಮಾರ್ಕ್ ಕಾರ್ನಿ ಖಾರವಾಗಿ ಹೇಳಿದ್ದಾರೆ.

ನ್ಯಾಟೋ ನಿಲುವಿನಿಂದ ಕೆರಳಿರುವ ಟ್ರಂಪ್, “ಇದು ನ್ಯಾಟೋ ಮಾಡುತ್ತಿರುವ ಮೂರ್ಖತನದ ತಪ್ಪು. ನಮಗೆ ಯಾರ ಸಹಾಯವೂ ಬೇಕಿಲ್ಲ, ನಮ್ಮ ಶಕ್ತಿಯೇ ನಮಗೆ ಸಾಕು” ಎಂದು ಗುಡುಗಿದ್ದಾರೆ. ಅಲ್ಲದೆ, ಏಕಾಂಗಿಯಾಗಿಯಾದರೂ ಹಾರ್ಮುಜ್ ಜಲಸಂಧಿಯನ್ನು ವಶಪಡಿಸಿಕೊಳ್ಳುವುದಾಗಿ ಸವಾಲು ಹಾಕಿದ್ದಾರೆ. ಇರಾನ್ ವಿರುದ್ಧದ ಕಾರ್ಯಾಚರಣೆಗೆ ಬೆಂಬಲ ನೀಡದ ಚೀನಾದ ಮೇಲೆ ಟ್ರಂಪ್ ಅಸಮಾಧಾನಗೊಂಡಿದ್ದಾರೆ. ಈ ಕಾರಣಕ್ಕೆ ಮಾರ್ಚ್ 31 ರಿಂದ ನಿಗದಿಯಾಗಿದ್ದ ತಮ್ಮ ಚೀನಾ ಪ್ರವಾಸವನ್ನು ಐದು ವಾರಗಳ ಕಾಲ ಮುಂದೂಡಿದ್ದಾರೆ.

ಇದನ್ನೂ ಓದಿ: ಹೊರನಡೆದಿದ್ದು ಒಳ್ಳೆಯದೇ ಆಯಿತು; ಜೋ ಕೆಂಟ್ ರಾಜೀನಾಮೆ ಕುರಿತು ಟ್ರಂಪ್ ಪ್ರತಿಕ್ರಿಯೆ

ಇರಾನ್ ಮೇಲಿನ ಯುದ್ಧಕ್ಕೆ ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (NCTC) ನಿರ್ದೇಶಕ ಜೋಸೆಫ್ ಕೆಂಟ್ ತೀವ್ರ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. “ಇರಾನ್ ನಮ್ಮ ದೇಶಕ್ಕೆ ಯಾವುದೇ ಬೆದರಿಕೆ ಹಾಕಿಲ್ಲ” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದು ಟ್ರಂಪ್ ಅವರ ‘ಮೇಕ್ ಅಮೆರಿಕಾ ಗ್ರೇಟ್ ಅಗೈನ್’ (MAGA) ಬೆಂಬಲಿಗರಲ್ಲೇ ಒಡಕು ಮೂಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಕೆಎಲ್​ ರಾಹುಲ್​ಗಾಗಿ ಇಂಗ್ಲೆಂಡ್ ಆಟಗಾರನ ಖರೀದಿಸಿದ ಡೆಲ್ಲಿ ಕ್ಯಾಪಿಟಲ್ಸ್

Source link

‘ಧುರಂಧರ್ 2’ ಸಿನಿಮಾ ಬಜೆಟ್ ಹಾಗೂ ಸ್ಟಾರ್​​ಗಳ ಸಂಭಾವನೆ ವಿವರ

ಆದಿತ್ಯ ಧಾರ್ ನಿರ್ದೇಶನದ ಮತ್ತು ರಣವೀರ್ ಸಿಂಗ್ ನಾಯಕನಾಗಿ ನಟಿಸಿರುವ ‘ಧುರಂಧರ್ 2’ (Dhurandhar 2) ಬಿಡುಗಡೆ ಸಮೀಪಿಸುತ್ತಿದೆ. ಪ್ರೇಕ್ಷಕರು ಕಾತರದಿಂದ ಕಾಯುತ್ತಿರುವ ಈ ಚಿತ್ರವು ಮಾರ್ಚ್ 19ರಂದು ಯುಗಾದಿಗೆ ಉಡುಗೊರೆಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಅದಕ್ಕೂ ಒಂದು ದಿನ ಮೊದಲು ಅಂದರೆ ಮಾರ್ಚ್ 18ರಂದು, ‘ಧುರಂಧರ್ 2’ ಪ್ರೀಮೀಯರ್​ಗಳನ್ನು ಆಯೋಜಿಸಲಾಗಿದೆ. ಮೊದಲ ಭಾಗವು ಬ್ಲಾಕ್ಬಸ್ಟರ್ ಆಗಿದ್ದರಿಂದ, ಈ ಮುಂದುವರಿದ ಭಾಗದ ಮೇಲೆ ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆಗಳಿವೆ. ರಣವೀರ್ ಸಿಂಗ್, ಸಂಜಯ್ ದತ್, ಆರ್. ಮಾಧವನ್, ಅರ್ಜುನ್ ರಾಂಪಾಲ್, ಸಾರಾ ಅರ್ಜುನ್ ಮತ್ತು ಇತರ ತಾರೆಯರು ಈ ಬಹುತಾರಾಗಣದ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರದ ಬಜೆಟ್ 275 ಕೋಟಿ ರೂಪಾಯಿ. ಕಲಾವಿದರ ಸಂಭಾವನೆ ಬಗ್ಗೆ ಇಲ್ಲಿದೆ ವಿವರ.

ಕೆಲವು ಮಾಧ್ಯಮ ವರದಿಗಳ ಪ್ರಕಾರ, ‘ಧುರಂಧರ್ 2’ ಚಿತ್ರಕ್ಕಾಗಿ ರಣವೀರ್ ಸಿಂಗ್ ಅವರಿಗೆ 50 ಕೋಟಿ ರೂ. ಸಂಭಾವನೆ ನೀಡಲಾಗಿದೆ. ಈ ಚಿತ್ರದಲ್ಲಿ ಅವರು ಅತಿ ಹೆಚ್ಚು ಸಂಭಾವನೆ ಪಡೆದಿರೋ ನಟ. ಈ ಚಿತ್ರದಲ್ಲಿ ರಣವೀರ್ ಹಮ್ಜಾ ಮತ್ತು ಜಸ್ಕಿರತ್ ಸಿಂಗ್ ರಂಗಿ ಎಂಬ ಎರಡು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಚೌಧರಿ ಅಸ್ಲಾಂ ಪಾತ್ರದಲ್ಲಿ ನಟಿಸಿರುವ ಸಂಜಯ್ ದತ್ ಗೆ 10 ಕೋಟಿ ರೂ. ಅರ್ಜುನ್ ರಾಂಪಾಲ್ ಈ ಚಿತ್ರದಲ್ಲಿ ಅತ್ಯಂತ ಕ್ರೂರ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದಕ್ಕಾಗಿ ಅವರಿಗೆ 3 ಕೋಟಿ ರೂ. ಸಂಭಾವನೆ ನೀಡಲಾಗಿದೆ. ಸಾರಾ ಅರ್ಜುನ್ ಗೆ 1 ಕೋಟಿ ರೂ. ಹಮ್ಜಾ ಅವರ ಪತ್ನಿ ಯಲಿನಾ ಜಮಾಲಿ ಪಾತ್ರದಲ್ಲಿ ನಟಿಸಿದ್ದಾರೆ. ಇದಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ: ಕ್ರಿಕೆಟರ್ ಆಗ ಹೊರಟಿದ್ದ ‘ಧುರಂಧರ್’ ನಿರ್ದೇಶಕ; ರಾಜಕೀಯದಿಂದ ಎಲ್ಲವೂ ಬದಲಾಯ್ತು

ಈ ಚಿತ್ರದಲ್ಲಿ ನಟ ಆರ್. ಮಾಧವನ್ ಅಜಯ್ ಸನ್ಯಾಲ್ ಪಾತ್ರವನ್ನು ನಿರ್ವಹಿಸಿದ್ದಾರೆ. ಇದಕ್ಕಾಗಿ ಅವರು 9 ಕೋಟಿ ರೂ. ಸಂಭಾವನೆ ಪಡೆದರು. ‘ಧುರಂಧರ್’ ಚಿತ್ರದಲ್ಲಿ ಅಕ್ಷಯ್ ಖನ್ನಾ ಅವರ ಪಾತ್ರವು ಒಂದು ಹೈಲೈಟ್ ಆಗಿತ್ತು. ಮೊದಲ ಭಾಗದಲ್ಲಿ, ಅಕ್ಷಯ್, ರೆಹಮಾನ್ ಡಕಾಯಿತ ಪಾತ್ರ ಸಾಯುತ್ತದೆ. ಆದರೆ ಈಗ ಎರಡನೇ ಭಾಗದಲ್ಲಿ ಅಕ್ಷಯ್ ಫ್ಲ್ಯಾಷ್‌ಬ್ಯಾಕ್ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕಾಗಿ ಅವರು 2 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ‘ಧುರಂಧರ್’ ಚಿತ್ರದ ಮೊದಲ ಭಾಗವು ಡಿಸೆಂಬರ್ 2025 ರಲ್ಲಿ ಬಿಡುಗಡೆಯಾಯಿತು. ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ 1300 ಕೋಟಿ ರೂ.ಗಳಿಗೂ ಹೆಚ್ಚು ಸಂಗ್ರಹಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

LPG ಸಿಲಿಂಡರ್ ಬಿಕ್ಕಟ್ಟು: ಕಾಳಸಂತೆಯಲ್ಲಿ ಏಜೆನ್ಸಿಗಳು, ದಂಧೆಕೋರರ ಕಳ್ಳಾಟ, 15 ಸಾವಿರ ಸಿಲಿಂಡರ್ ಜಪ್ತಿ

ಬೆಂಗಳೂರು, ನವದೆಹಲಿ, ಮಾರ್ಚ್ 18: ಇರಾನ್-ಇಸ್ರೇಲ್, ಮಧ್ಯಪ್ರಾಚ್ಯ ಸಂಘರ್ಷ ಭಾರತದಲ್ಲಿ, ಅದರಲ್ಲೂ ಕರ್ನಾಟಕದಲ್ಲಿ ಗ್ಯಾಸ್ ಸಿಲಿಂಡರ್‌ಗಳ ತೀವ್ರತರದ ಅಭಾವಕ್ಕೆ ಕಾರಣವಾಗಿದೆ. ಈ ಪರಿಸ್ಥಿತಿಯು ಹೋಟೆಲ್ ಮಾಲೀಕರನ್ನು ದಿಕ್ಕೆಡಿಸಿದ್ದು, ಕಮರ್ಷಿಯಲ್ ಸಿಲಿಂಡರ್‌ಗಳ ಕೊರತೆಯಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಬಿಕ್ಕಟ್ಟನ್ನು ದುರ್ಬಳಕೆ ಮಾಡಿಕೊಂಡ ಕೆಲ ಖದೀಮರು ಗೃಹಬಳಕೆ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಈ ಅಕ್ರಮಗಳ ವಿರುದ್ಧ ದೇಶಾದ್ಯಂತ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ, ದೆಹಲಿ, ಜಮ್ಮು ಕಾಶ್ಮೀರ, ಕೇರಳ ಸೇರಿದಂತೆ 12 ಸಾವಿರಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ಈ ದಾಳಿಗಳಲ್ಲಿ ಸುಮಾರು 15 ಸಾವಿರ ಗ್ಯಾಸ್ ಸಿಲಿಂಡರ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ದೆಹಲಿಯಲ್ಲಿ 600 ಸಿಲಿಂಡರ್‌ಗಳು, ಉತ್ತರ ಪ್ರದೇಶದಲ್ಲಿ 405 ತಪಾಸಣೆಗಳು ನಡೆದಿವೆ ಹಾಗೂ 10 ಜನರನ್ನು ಬಂಧಿಸಲಾಗಿದೆ. ಜಮ್ಮು ಕಾಶ್ಮೀರದಲ್ಲಿ 504 ದಾಳಿ ನಡೆಸಿ ಎಫ್‌ಐಆರ್‌ ದಾಖಲಿಸಲಾಗಿದೆ.

ಕರ್ನಾಟಕದಲ್ಲಿ ಬೀದರ್‌ನಲ್ಲಿ 105, ದಾವಣಗೆರೆ ಮತ್ತು ಯಾದಗಿರಿಯಲ್ಲಿ ತಲಾ 20 ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ. ಏತನ್ಮಧ್ಯೆ, ಕಮರ್ಷಿಯಲ್ ಗ್ಯಾಸ್ ಬಿಕ್ಕಟ್ಟು ಹಿನ್ನೆಲೆಯಲ್ಲಿ ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್ ಮೆಟ್ಟಿಲೇರಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಸಮರ್ಪಕ ಗ್ಯಾಸ್ ಪೂರೈಕೆಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link