Headlines

nagaraj11081993

ಶಕ್ತಿಮಾನ್ ಕತೆಯನ್ನೇ ಅಲ್ಲು ಅರ್ಜುನ್​ಗಾಗಿ ಹೆಣೆಯುತ್ತಿರುವ ಬಾಸಿಲ್ ಜೋಸೆಫ್? – Kannada News | Basil Joseph not doing Shaktiman movie with Allu Arjun

‘ಪುಷ್ಪ 2’ (Pushpa 2) ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಅಲ್ಲು ಅರ್ಜುನ್ ಗೆ ಒಂದರ ಹಿಂದೊಂದು ದೊಡ್ಡ ದೊಡ್ಡ ನಿರ್ದೇಶಕರುಗಳ ಆಫರ್ ಬಂದಿದ್ದು, ಈಗಾಗಲೇ ಕೆಲವು ನಿರ್ದೇಶಕರುಗಳೊಟ್ಟಿಗೆ ಸಿನಿಮಾ ಒಪ್ಪಿಕೊಂಡಿದ್ದಾರೆ ಸಹ. ಇದೀಗ ಅಟ್ಲಿ ನಿರ್ದೇಶನದ ‘ರಾಕಾ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅದಾದ ಬಳಿಕ ಲೋಕೇಶ್ ಕನಗರಾಜ್ ನಿರ್ದೇಶನದ ಸಿನಿಮಾನಲ್ಲಿ ನಟಿಸಲಿದ್ದಾರೆ. ಅದಾದ ಬಳಿಕ ಮಲಯಾಳಂ ಸ್ಟಾರ್ ನಟ ಬಾಸಿಲ್ ಜೋಸೆಫ್ ನಿರ್ದೇಶನದ ಸೂಪರ್ ಹೀರೋ ಸಿನಿಮಾನಲ್ಲಿ ನಟಿಸಲಿದ್ದಾರೆ. ಅದರ ಬಳಿಕ ಸಂದೀಪ್ ರೆಡ್ಡಿ ವಂಗಾ ಸಿನಿಮಾ…

Read More

ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ – Kannada News | Ram Charan starrer Peddi musical event organized in Bhopal

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಈಗಾಗಲೇ ಆರಂಭಿಸಿದೆ. ಇಂದು (ಮೇ 23) ಮಧ್ಯ ಪ್ರದೇಶದ ಭೂಪಾಲ್​​ನಲ್ಲಿ ‘ಪೆದ್ದಿ’ ಸಿನಿಮಾದ ದೊಡ್ಡ ಇವೆಂಟ್ ಅನ್ನು ಆಯೋಜಿಸಲಾಗಿದ್ದು, ಎಆರ್ ರೆಹಮಾನ್ ಮ್ಯೂಸಿಕಲ್ ನೈಟ್ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ಮಧ್ಯ ಪ್ರದೇಶದ ಕೆಲವು ಸಚಿವರ ಜೊತೆಗೆ ರಾಮ್ ಚರಣ್, ಜಾನ್ಹವಿ ಕಪೂರ್, ನಟ, ಸಂಸದ ರವಿ ಕಿಶನ್, ದಿವ್ಯಾಂದು ಇನ್ನೂ ಹಲವರು ಭಾಗಿ ಆಗಿದ್ದರು. ಈ ವೇಳೆ…

Read More

ಮಗಳೇ ಹೋಗಿದ್ದಾಳೆ, ಇನ್ಯಾರ ಮೇಲೆ ದೂರೋಣ!’: ನೀಟ್ ಪರೀಕ್ಷೆಯ ಒತ್ತಡಕ್ಕೆ ಬಲಿಯಾಯ್ತಾ ಮತ್ತೊಂದು ಜೀವ? ಕಣ್ಣೀರಿಟ್ಟ ತಂದೆ – Kannada News | Kalaburagi Student Suicide: NEET Dream Crushed by Exam Pressure, Awaits Results

ಕಲಬುರಗಿ, ಮೇ,23: ವೈದ್ಯಕೀಯ ಶಿಕ್ಷಣದ (Medical Education) ದೊಡ್ಡ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಅತ್ಯಂತ ದಾರುಣ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಮೇ 2ರಂದು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಬರೆದಿದ್ದ ಭಾಗ್ಯಶ್ರೀ (18) ಮೃತಪಟ್ಟ ದುರ್ದೈವಿ. ಕಲಬುರಗಿ ನಗರದ ಕೋರ್ಟ್ ವೃತ್ತದ ಬಳಿ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ಸಂಭವಿಸಿದೆ. ಮೃತ ಭಾಗ್ಯಶ್ರೀ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 92 ರಷ್ಟು ಅತ್ಯುತ್ತಮ ಅಂಕಗಳನ್ನು ಗಳಿಸಿ ತೇರ್ಗಡೆಯಾಗಿದ್ದಳು. ವೈದ್ಯಕೀಯ…

Read More

ಪ್ಲೇಆಫ್‌ಗೂ ಮುನ್ನ ಆರ್​ಸಿಬಿಗೆ ಆಘಾತ; ಐಪಿಎಲ್‌ನಿಂದ ಹೊರಬಿದ್ದ ಸ್ಟಾರ್ ಆರಂಭಿಕ – Kannada News | IPL 2026 Playoffs: RCB Faces Setback as jacob bethell Out, Phil Salt Returns to Boost Squad

ಐಪಿಎಲ್ 2026 (IPL 2026) ರ ಪ್ಲೇಆಫ್‌ಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಹಾಲಿ ಚಾಂಪಿಯನ್ ಆರ್​ಸಿಬಿ ಇದೇ ಮೇ 26 ರಂದು ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕಾಗಿ ಆರ್​ಸಿಬಿ ಸಕಲ ತಯಾರಿಯನ್ನು ನಡೆಸುತ್ತುದೆ. ಈ ನಡುವೆ ತಂಡಕ್ಕೆ ಹಿನ್ನಡೆಯುಂಟಾಗಿದ್ದು, ತಂಡದ ಯುವ ಇಂಗ್ಲಿಷ್ ಬ್ಯಾಟ್ಸ್‌ಮನ್ ಜಾಕೋಬ್ ಬೆಥೆಲ್ (Jacob Bethell) ಗಾಯದಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ಬೆರಳಿನ ಗಾಯದಿಂದ ಬಳಲುತ್ತಿರುವ ಬೆಥೆಲ್ ತಂಡವನ್ನು…

Read More

ತುಮಕೂರು ಮೆಟ್ರೋ ವಿಸ್ತರಣೆ ಬಗ್ಗೆ ಬಿಗ್​​​​ ಅಪ್ಡೇಟ್​ ನೀಡಿದ ಗೃಹಸಚಿವ ಡಾ. ಜಿ. ಪರಮೇಶ್ವರ್ – Kannada News | Tumakuru Metro Link: Decades Long Dream Nears Reality, PPP Model for RS.20,000 Cr Project

ಬೆಂಗಳೂರು, ಮೇ 23: ತುಮಕೂರು ಮತ್ತು ಬೆಂಗಳೂರು ನಡುವೆ ದಿನನಿತ್ಯ ಸಂಚರಿಸುವ ಲಕ್ಷಾಂತರ ಪ್ರಯಾಣಿಕರ ದಶಕಗಳ ಕನಸು ಕೊನೆಗೂ ನನಸಾಗುವತ್ತ ದೊಡ್ಡ ಹೆಜ್ಜೆ ಇಟ್ಟಿದೆ. ಬೆಂಗಳೂರಿನ ಮಾದಾವರದಿಂದ ತುಮಕೂರು ನಗರದವರೆಗೆ ‘ನಮ್ಮ ಮೆಟ್ರೋ’ (Namma Metro) ರೈಲು ಯೋಜನೆಯನ್ನು ವಿಸ್ತರಿಸುವ ಕುರಿತು ವಿಸ್ತೃತ ಯೋಜನಾ ವರದಿ (DPR) ಸಿದ್ಧವಾಗಿದ್ದು, ಶೀಘ್ರದಲ್ಲೇ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಹೇಳಿದ್ದಾರೆ. ತುಮಕೂರಿಗೆ ಮೆಟ್ರೋ ಸಂಪರ್ಕ ಕಲ್ಪಿಸಬೇಕೆಂದು ಬಹಳ ದಿನಗಳಿಂದ…

Read More

Karnataka Weather forecast: ಮೇ 29ರವರೆಗೆ ಕರ್ನಾಟಕದಾದ್ಯಂತ ಮಳೆ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – Kannada News | Karnataka Weather Forecast: Rain Likely Till May 29; Yellow Alert in Bengaluru, 17 Districts

ಬೆಂಗಳೂರು, ಮೇ 23: ಕರ್ನಾಟಕದಲ್ಲಿ (Karnataka) ಮೇ 29ರವರೆಗೆ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ಘೋಷಿಸಲಾಗಿದೆ. ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಕೊಪ್ಪಳ ಮತ್ತು ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ಮುಖ್ಯಾಂಶಗಳು ರಾಜ್ಯಾದ್ಯಂತ ಮೇ 29ರವರೆಗೆ ಮಳೆ ಮುನ್ಸೂಚನೆ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…

Read More

‘ಡ್ರ್ಯಾಗನ್’ನಲ್ಲಿ ಜೂ ಎನ್​​ಟಿಆರ್ ಹೆಸರಿನ ಹಿನ್ನೆಲೆಯೇನು? ಸ್ವಾತಂತ್ರ್ಯ ಹೋರಾಟದ ಜೊತೆ ಇದೆ ಲಿಂಕ್ – Kannada News | Story behind Jr NTR’s character name in Dragon movie

ಜೂ ಎನ್​​ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ ನಿರ್ದೇಶನ ಮಾಡಿರುವ ‘ಡ್ರ್ಯಾಗನ್’ ಸಿನಿಮಾದ ಟೀಸರ್ ಮೇ 20ರಂದು ಬಿಡುಗಡೆ ಆಗಿದೆ. ಬ್ರಿಟೀಷರು ಬಿಟ್ಟು ಹೋದ ಮಾದಕ ವಸ್ತು ಉತ್ಪಾದನೆ ಮತ್ತು ವಿತರಣೆ ಮೇಲೆ ಹಿಡಿತ ಸಾಧಿಸಲು ಗ್ಯಾಂಗುಗಳ ನಡುವೆ ನಡೆಯುವ ಭೀಕರ ಯುದ್ಧದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ ಎಂಬುದು ಟೀಸರ್​​ನಿಂದ ತಿಳಿದು ಬರುತ್ತಿದೆ. ಆದರೆ ಟೀಸರ್ ಬಿಡುಗಡೆ ಆದ ಬಳಿಕ ‘ಇದು ಮೊಟ್ಟ ಮೊದಲ ಬೃಹತ್ ಬಜೆಟ್​​ನ ದೇಶಭಕ್ತಿಯ ಕತೆ’ ಎಂದು ಪ್ರಶಾಂತ್ ನೀಲ್…

Read More

ತೆಲಂಗಾಣದಲ್ಲಿ ಬಿಸಿಲಿಗೆ 16 ಜನ ಸಾವು! ಭೀಕರ ಉಷ್ಣಗಾಳಿಗೆ ನಡುಗಿದ 7 ಜಿಲ್ಲೆಗಳು – Kannada News | Telangana Heatstroke: 16 Dead Amid El Nino Threat, Govt Orders Compensation

ಹೈದರಾಬಾದ್, ಮೇ.23: ದೇಶದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪಮಾನ ಮಿತಿಮೀರುತ್ತಿದ್ದು, ನೆರೆರಾಜ್ಯ ತೆಲಂಗಾಣದಲ್ಲಿ ಭೀಕರ ಉಷ್ಣಗಾಳಿ (Heatwave) ಮತ್ತು ತೀವ್ರ ಬಿಸಿಲಿಗೆ (Heatstroke) ಕಳೆದ ಕೆಲವು ದಿನಗಳಲ್ಲಿ ಒಟ್ಟು 16 ಜನರು ಸಾವನ್ನಪ್ಪಿದ್ದಾರೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ಈ ಸಾವುಗಳು ವರದಿಯಾಗಿದ್ದು, ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಸರ್ಕಾರ ಹೈ ಅಲರ್ಟ್ ಘೋಷಿಸಿದೆ. ರಾಜ್ಯದ ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಅವರು ಹೈದರಾಬಾದ್‌ನ ಸೆಕ್ರೆಟೇರಿಯಟ್‌ನಲ್ಲಿ ತುರ್ತು ಪರಿಶೀಲನಾ ಸಭೆ ನಡೆಸಿದ ಬಳಿಕ ಈ ಆಘಾತಕಾರಿ ಮಾಹಿತಿಯನ್ನು ಅಧಿಕೃತವಾಗಿ…

Read More

ಪ್ರಧಾನಿ ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ – Kannada News | US Secretary of State Marco Rubio Meets PM Modi, Invites Him to Visit US

ದೆಹಲಿ, ಮೇ 23: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೋ ಸದ್ಯ ಭಾರತ ಪ್ರವಾಸದಲ್ಲಿದ್ದು, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಈ ಮಹತ್ವದ ಭೇಟಿಯು ದ್ವಿಪಕ್ಷೀಯ ಸಂಬಂಧಗಳ ಹಲವಾರು ಆಯಾಮಗಳ ಕುರಿತು ನಿರೀಕ್ಷೆಗಳನ್ನು ಮೂಡಿಸಿದೆ. ಮುಖ್ಯವಾಗಿ, ಇಂಧನ ಭದ್ರತೆ, ವ್ಯಾಪಾರ ಒಪ್ಪಂದಗಳು ಮತ್ತು ರಕ್ಷಣಾ ಸಹಕಾರದಂತಹ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ತಿಳಿದುಬಂದಿದೆ. ಭಾರತ ಮತ್ತು ಅಮೆರಿಕ ನಡುವೆ ಈಗಾಗಲೇ ಕೆಲವು ಒಪ್ಪಂದಗಳು ನಡೆದಿವೆ. ಆದರೆ, ಇವು ಭಾರತಕ್ಕೆ ಆರ್ಥಿಕವಾಗಿ ನಷ್ಟವನ್ನುಂಟು ಮಾಡಿದೆ…

Read More

ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು? – Kannada News | Actress Rukmini Vasanth talks about her AI video

ಎಐ ಬಳಸಿ ನಟಿ ರುಕ್ಮಿಣಿ ವಸಂತ್ (Rukmini Vasanth) ಅವರ ನಕಲಿ ವಿಡಿಯೋವನ್ನು ಕೆಲ ದುರುಳರು ಹರಿಬಿಟ್ಟಿದ್ದಾರೆ. ಮಹಿಳೆಯೊಬ್ಬಳು ಬಿಕಿನಿ ತೊಟ್ಟು ಸ್ವಿಮ್ಮಿಂಗ್ ಪೂಲ್​​ನಲ್ಲಿ ಇಳಿಯುತ್ತಿರುವ ದೃಶ್ಯ ಅದಾಗಿದ್ದು, ಆ ಮಹಿಳೆಯ ಮುಖವನ್ನು ರುಕ್ಮಿಣಿ ಮುಖದೊಂದಿಗೆ ಬದಲಾಯಿಸಲಾಗಿದೆ. ಎಐ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ನಾನಾ ರೀತಿಯ ಕಮೆಂಟುಗಳು ಹರಿದಾಡುತ್ತಿವೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ನಟಿ, ತೀವ್ರ ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಇದೀಗ ಮಾಧ್ಯಮಗಳ ಮುಂದೆ ಇದೇ ವಿಷಯವಾಗಿ ಮೊದಲ…

Read More