Headlines

nagaraj11081993

IPL 2026: ಹೇಜಲ್​ವುಡ್ ಎಷ್ಟು ಪಂದ್ಯಗಳಿಗೆ ಅಲಭ್ಯ? ಅವರನ್ನು ಬದಲಿಸುವವರ್ಯಾರು?

2026 ರ ಐಪಿಎಲ್​ಗೆ ಎರಡು ವಾರಕ್ಕೂ ಕಡಿಮೆ ಸಮಯ ಉಳಿದಿದೆ. ಹೀಗಾಗಿ ಈ ಲೀಗ್​ನಲ್ಲಿ ಆಡುವ ವಿದೇಶಿ ಆಟಗಾರರು ತಮ್ಮ ತಮ್ಮ ತಂಡಗಳನ್ನು ಕೂಡಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಆರ್​ಸಿಬಿ ಜೀವಾಳ ವಿರಾಟ್ ಕೊಹ್ಲಿ ಕೂಡ ಇಂದು ಮಡದಿಯೊಂದಿಗೆ ಭಾರತಕ್ಕೆ ಬಂದಿದ್ದಾರೆ. ಲೀಗ್​ನ ಮೊದಲ ಪಂದ್ಯ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಆರ್​ಸಿಬಿ ಪಾಳಯಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಬೌಲಿಂಗ್ ವಿಭಾಗದ ಪ್ರಮುಖ ಅಸ್ತ್ರ ಎನಿಸಿಕೊಂಡಿರುವ ಆಸ್ಟ್ರೇಲಿಯಾದ ಅನುಭವಿ…

Read More

ಕೋಟ್ಯಂತರ ರೂ ಆದಾಯವಿರುವ ದೇಗುಲದಲ್ಲಿ ಅಭಿವೃದ್ಧಿ ಶೂನ್ಯ: ರಾಜ್ಯದ ಶ್ರೀಮಂತ ದೇಗುಲಕ್ಕೆ ಇದೆಂಥಾ ಸ್ಥಿತಿ?

ಮಂಗಳೂರು, ಮಾರ್ಚ್​​ 17: ಕುಕ್ಕೆ ಸುಬ್ರಹ್ಮಣ್ಯ‌ ದೇವಸ್ಥಾನ (Kukke Shree Subrahmanya Temple) ರಾಜ್ಯದ ಶ್ರೀಮಂತ ದೇಗುಲಗಳಲ್ಲಿ ಒಂದು. ಕೋಟ್ಯಂತರ ರೂ ಆದಾಯ ತಂದು ಕೊಡುವ ಈ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಮಾತ್ರ ಸೂಕ್ತ ಮೂಲಭೂತ ಸೌಲಭ್ಯಗಳಿಲ್ಲ ಎಂಬುದು‌ ದಶಕಗಳ‌ ಆರೋಪ.‌ ಸಂಪತ್ತು ಇದ್ದರೂ ಇಚ್ಛಾಶಕ್ತಿ, ಕ್ರಿಯಾಶಕ್ತಿ‌ ಇಲ್ಲದ ಪರಿಣಾಮ ಇಲ್ಲಿ ಸರಿಯಾದ ವ್ಯವಸ್ಥೆ ಇಲ್ಲದೆ ಭಕ್ತರು ಪರದಾಡುವಂತಾಗಿದೆ. ಭಕ್ತರ ಆರೋಪವೇನು? ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಪ್ರಸಿದ್ಧ ನಾಗ ಕ್ಷೇತ್ರ ಅಂತಾನೆ…

Read More

ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರು, (ಮಾರ್ಚ್ 17): ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕಾರಿನಿಂದ ಗುದ್ದಿ ವ್ಯಕ್ತಿಯನ್ನು ಹತ್ಯೆ ಯತ್ನ ನಡೆದಿರುವ ಘಟನೆ ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ನಡೆದಿದೆ. ಭೂವ್ಯವಹಾರಕ್ಕೆ ಸಂಬಂಧಿಸಿ ಹಣದ ವ್ಯಾಜ್ಯದ ಕೋಪದಲ್ಲಿ ಮಂಗಳೂರಿನ ಪಳ್ನೀರ್ ನಿವಾಸಿ ಮಹಮ್ಮದ್ ಶರೀಫ್ ಎನ್ನುವಾತ ಕಾರಿನಿಂದ ಮೋಹನ್ ದಾಸ್ ಶೆಟ್ಟಿಗೆ ಗುದ್ದಿದ್ದು, ಭೀಕರ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ. ಸುರತ್ಕಲ್‌ನ ಕಾನ ಮತ್ತು ವಾಮಂಜೂರಿನಲ್ಲಿ ಆರೋಪಿ ಮಹಮ್ಮದ್ ಶರೀಫ್ ಸುಮಾರು 2 ಕೋಟಿ ರೂ. ಹಣವನ್ನು ಹೂಡಿಕೆ ಮಾಡಿದ್ದ. ಆದರೆ ಮೋಹನ್ ದಾಸ್ ಶೆಟ್ಟಿ ಮೋಸ ಮಾಡಿರುವ ಸಿಟ್ಟಿನಲ್ಲಿ ಆತ ಸ್ಕೂಟರ್​​ನಲ್ಲಿ…

Read More

IPL 2026: ಈ ಐಪಿಎಲ್‌ನಲ್ಲಿ ರೋಹಿತ್ ‘ಇಂಪ್ಯಾಕ್ಟ್’ ಹೇಗಿರಲಿದೆ? ಸ್ಪಷ್ಟನೆ ನೀಡಿದ ಹೆಡ್​ ಕೋಚ್

2026 ರ ಐಪಿಎಲ್ ಸಮೀಪಿಸುತ್ತಿದ್ದು, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಅಭಿಮಾನಿಗಳು ಈ ಚುಟುಕು ಮಾದರಿಯಲ್ಲಿ ಇವರಿಬ್ಬರ ಆಟವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಇದಕ್ಕೆ ಕಾರಣ, ಇವರಿಬ್ಬರು ಈ ಮಾದರಿಯಲ್ಲಿ ಆಡುವುದು ಐಪಿಎಲ್‌ನಲ್ಲಿ ಮಾತ್ರ. ಹೀಗಾಗಿ ಈ ಇಬ್ಬರು ದಿಗ್ಗಜರು ವರ್ಷದ ನಂತರ ಟಿ20 ಪಂದ್ಯವನ್ನಾಡಲು ಸಜ್ಜಾಗಿದ್ದಾರೆ. ಅದರಲ್ಲೂ ಹಿಟ್​ಮ್ಯಾನ್ ರೋಹಿತ್ ಶರ್ಮಾ ಈ ಲೀಗ್​ಗಾಗಿ ಸಾಕಷ್ಟು ಬೆವರು ಹರಿಸುತ್ತಿದ್ದು, ಅದರ ವಿಡಿಯೋಗಳು ಸಹ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಆದರೆ ಇದೆಲ್ಲದರ ನಡುವೆ ಈ ಬಾರಿಯ…

Read More

ಪ್ಲೀಸ್ ಸಾಯಬೇಡಮ್ಮ; ರೈಲು ಹಳಿ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಕಾಪಾಡಿದ 7 ವರ್ಷದ ಮಗಳು

ನವದೆಹಲಿ, ಮಾರ್ಚ್ 17: ಅಲಿಘರ್ ರೈಲು ನಿಲ್ದಾಣದಲ್ಲಿ ಯಾರೂ ಊಹಿಸದ ಘಟನೆಯೊಂದು ನಡೆದಿದೆ. ರೈಲು ಇನ್ನೇನು ಸ್ಟೇಷನ್​ಗೆ ತಲುಪಬೇಕು ಎನ್ನುವಷ್ಟರಲ್ಲಿ ತನ್ನ ಮಗಳ ಜೊತೆ ರೈಲಿಗಾಗಿ ಕಾಯುತ್ತಿದ್ದ ಮಹಿಳೆ ರೈಲು ಹಳಿ ಮೇಲೆ ಹಾರಿದ್ದಳು. ಆತ್ಮಹತ್ಯೆಗೆ ಯತ್ನಿಸಿದ ಆಕೆಯ ಹಿಂದೆಯೇ ಓಡಿದ 7 ವರ್ಷದ ಮಗಳು ಅಮ್ಮಾ ಬೇಡಮ್ಮಾ ಎನ್ನುತ್ತಾ ಕೂಗತೊಡಗಿದ್ದಾಳೆ. ಆಕೆಯ ಕಿರುಚಾಟ ಕೇಳಿದ ನಂತರ ಇತರ ಪ್ರಯಾಣಿಕರು ಮತ್ತು ಜಿಆರ್‌ಪಿ ಸಿಬ್ಬಂದಿ ಓಡಿ ಬಂದು ಆ ಮಹಿಳೆಯನ್ನು ಕಾಪಾಡಿದ್ದಾರೆ. ಮನೆಯಲ್ಲಿನ ಕೌಟುಂಬಿಕ ಹಿಂಸಾಚಾರದಿಂದ ನೊಂದಿದ್ದ…

Read More

‘ನನಗೆ ನಯನತಾರಾ ಬೇಕು’: ಸಂಸದನ ಅಸಭ್ಯ ಮಾತಿಗೆ ಕಲಾವಿದರ ಸಂಘ ಗರಂ

ತಮಿಳುನಾಡಿನ ಎಐಎಡಿಎಂಕೆ ಸಂಸದ ಸಿ.ವಿ. ಷಣ್ಮುಗಂ ಅವರು ನಟಿ ನಯನತಾರಾ (Nayanthara) ಬಗ್ಗೆ ನೀಡಿದ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆಯು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಮಹಿಳೆಯರ ಸುರಕ್ಷತೆಗಾಗಿ ತಮ್ಮ ಪಕ್ಷ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲೇ ಅವರು ಇಂತಹ ಕೀಳುಮಟ್ಟದ ಹೇಳಿಕೆ ನೀಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಸಿ.ವಿ. ಷಣ್ಮುಗಂ (CV Shanmugam) ಅವರ ಹೇಳಿಕೆಯನ್ನು ದಕ್ಷಿಣ ಭಾರತ ಕಲಾವಿದರ ಸಂಘ ಖಂಡಿಸಿದೆ. ಕೂಡಲೇ ಕ್ಷಮೆ ಕೇಳಬೇಕು ಎಂದು ಸಂಘ ಆಗ್ರಹಿಸಿದೆ. ಘಟನೆ ಹಿನ್ನೆಲೆ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್…

Read More

IPL 2026: ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ; ವಿಡಿಯೋ ವೈರಲ್

ಕುಟುಂಬದೊಂದಿಗೆ ಲಂಡನ್‌ನಲ್ಲಿ ನೆಲೆಯೂರಿರುವ ವಿರಾಟ್ ಕೊಹ್ಲಿ ಇದೀಗ 2026 ರ ಐಪಿಎಲ್​ಗಾಗಿ ಭಾರತದಕ್ಕೆ ಬಂದಿಳಿದಿದ್ದಾರೆ. ವಿಮಾನ ನಿಲ್ದಾಣದಿಂದ ತನ್ನ ಮಡದಿ ಅನುಷ್ಕಾ ಶರ್ಮಾ ಅವರೊಂದಿಗೆ ಹೊರಬರುತ್ತಿರುವ ಅವರ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಐಪಿಎಲ್‌ನ 19 ನೇ ಸೀಸನ್‌ಗಾಗಿ ವಿರಾಟ್ ಕೊಹ್ಲಿ ಲಂಡನ್‌ನಲ್ಲಿ ಸಿದ್ಧತೆಗಳನ್ನು ಆರಂಭಿಸಿದ್ದರು. ಅದರ ವಿಡಿಯೋಗಳು ಕೂಡ ವೈರಲ್ ಆಗಿದ್ದವು. ಆದಾಗ್ಯೂ, ಭಾರತಕ್ಕೆ ಬಂದ ನಂತರ, ಅವರು ಶೀಘ್ರದಲ್ಲೇ ಆರ್‌ಸಿಬಿ ಶಿಬಿರವನ್ನು ಸೇರಲಿದ್ದು, ತಮ್ಮ ಅಭ್ಯಾಸವನ್ನು ಮುಂದುವರೆಸಿಲಿದ್ದಾರೆ. ಆರ್‌ಸಿಬಿ ಪ್ರಸ್ತುತ ಐಪಿಎಲ್…

Read More

ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?

ಬೆಂಗಳೂರು, (ಮಾರ್ಚ್ 17): ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ವಿಧಾನಸಭೆ ಕಲಾಪದಲ್ಲಿಂದು ಹಿರಿಯ ಶಾಸಕ ಬಿ ಆರ್ ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ. ವರ್ಗಾವಣೆ ಆದೇಶ ನನ್ನ ಬಳಿ ಇದೆ. ಅಧಿಕಾರಿಗಳೇ ನಿಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ. ದಿನೇಶ್ ಗುಂಡೂರಾವ್ ಬಂದ ಮೇಲೆ ಇಲಾಖೆಯಲ್ಲಿ ಸುಧಾರಣೆ ತರುತ್ತಿದ್ದಾರೆ. ಆದರೆ ರಿವರ್ಸ್ ಗೇರ್ ನಲ್ಲಿ ತರಬೇಕಾ? ಹಿಂದೆ ಹೋಗುವ ಗಾಡಿ ಮುಂದೆ ಹೋಗಬೇಕು. ಆದರೆ ಅದು ಹಿಂದನೆ ಹೋಗುತ್ತಿದೆ. ಡೆಲಿವರಿನೇ ಆಗಿಲ್ಲ ಎಂದು ವೈದ್ಯರ ವರ್ಗಾವಣೆ ಮಾಡಿದ್ದೀರಿ….

Read More

ಟ್ರಂಪ್​ಗೆ ಭಾರೀ ಹೊಡೆತ; ಇರಾನ್ ಮೇಲಿನ ದಾಳಿಯನ್ನು ಖಂಡಿಸಿ ಅಮೆರಿಕದ ಅಧಿಕಾರಿ ರಾಜೀನಾಮೆ

ವಾಷಿಂಗ್ಟನ್, ಮಾರ್ಚ್ 17: ಇಸ್ರೇಲ್ ಜೊತೆ ಸೇರಿಕೊಂಡು ಇರಾನ್ (Iran War) ಮೇಲೆ ಅಮೆರಿಕ ಕೂಡ ದಂಡೆತ್ತಿ ಹೋಗಿತ್ತು. ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿ, ಸುಪ್ರೀಂ ನಾಯಕ ಖಮೇನಿಯನ್ನು ಕೊಂದರೆ ಸೋಲೊಪ್ಪಿಕೊಂಡು ಇರಾನ್ ತಮ್ಮ ಅಡಿಯಾಳಾಗುತ್ತದೆ ಎಂಬ ಭ್ರಮೆಯಲ್ಲಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ (Donald Trump) ಇರಾನ್ ಸರಿಯಾಗೇ ಬೆವರಿಳಿಸುತ್ತಿದೆ. ಗಲ್ಫ್ ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ದಾಳಿ ನಡೆಸುತ್ತಲೇ ಇರುವ ಇರಾನ್ ತಾನು ನಾಶವಾಗುವುದಾದರೆ ಅಮೆರಿಕ ಮತ್ತು ಇಸ್ರೇಲ್​ ಅನ್ನು ನಾಶಮಾಡಿಯೇ ತೀರುತ್ತೇನೆ…

Read More

Chanakya Niti: ಈ ಎರಡು ವೈಯಕ್ತಿಕ ವಿಚಾರಗಳನ್ನು ಸಹದ್ಯೋಗಿಗಳೊಂದಿಗೆ ತಪ್ಪಿಯೂ ಕೂಡ ಶೇರ್‌ ಮಾಡಬಾರದು

ವೃತ್ತಿ ಜೀವನದಲ್ಲಿ (career) ಯಶಸ್ಸನ್ನು ಸಾಧಿಸಬೇಕು, ಉನ್ನತ ಸ್ಥಾನವನ್ನು ಪಡೆಯಬೇಕು ಎಂಬ ಬಯಕೆ, ಆಸೆ ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ. ಇದಕ್ಕಾಗಿ ಕೆಲಸದ ಸ್ಥಳದಲ್ಲಿ ಕಠಿಣ ಪರಿಶ್ರಮವನ್ನೂ ಪಡುತ್ತಾರೆ. ಆದರೆ ಕೆಲವರು ಎಷ್ಟೇ ಶ್ರಮ ವಹಿಸಿ ಕೆಲಸ ಮಾಡಿದರೂ ವೃತ್ತಿ ಜೀವನದಲ್ಲಿ ಅಂದುಕೊಂಡ ಯಶಸ್ಸು ಲಭಿಸುವುದಿಲ್ಲ. ಇದಕ್ಕೆ ಕಾರಣ ನಮ್ಮ ತಪ್ಪುಗಳೇ ಕಾರಣ ಎಂದು ಹೇಳಿದ್ದಾರೆ ಆಚಾರ್ಯ ಚಾಣಕ್ಯರು. ಹೌದು ಆಚಾರ್ಯ ಚಾಣಕ್ಯರ ಪ್ರಕಾರ ನಾವು ನಮ್ಮ ಕೆಲವು ಸೀಕ್ರೆಟ್‌ ವಿಚಾರಗಳನ್ನು ಸಹದ್ಯೋಗಿಗಳೊಂದಿಗೆ ಹಂಚಿಕೊಳ್ಳುವುದರಿಂದಲೇ ಸಮಸ್ಯೆಗಳು ಉದ್ಭವಿಸುವುದು. ಆದ್ದರಿಂದ…

Read More