Headlines

nagaraj11081993

ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್

ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಹೆಸರಿನಲ್ಲಿ ಅವರ ಅಭಿಮಾನಿಗಳು ಪುಣ್ಯದ ಕೆಲಸಗಳನ್ನು ಮಾಡುತ್ತಿದ್ದಾರೆ. ಅದನ್ನು ನಟ ಪ್ರಥಮ್ ಮೆಚ್ಚಿಕೊಂಡಿದ್ದಾರೆ. ಇಂದು (ಮಾರ್ಚ್ 17) ಅಪ್ಪು ಹುಟ್ಟುಹಬ್ಬ. ಆ ಪ್ರಯುಕ್ತ ಅಪಾರ ಸಂಖ್ಯೆಯ ಅಭಿಮಾನಿಗಳು, ಕುಟುಂಬದವರು, ಅನೇಕ ಸೆಲೆಬ್ರಿಟಿಗಳು ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ನಟ ಪ್ರಥಮ್ (Pratham) ಅವರು ಈ ವೇಳೆ ಮಾತನಾಡಿದರು. ‘ಅಭಿಮಾನಿಗಳು ನೇತ್ರದಾನ ಮಹಾದಾನ ಎಂಬ ಈ ಕೆಲಸವನ್ನು ನಾಲ್ಕು ವರ್ಷಗಳಿಂದ ಶ್ರಮವಹಿಸಿ ಮಾಡುತ್ತಿದ್ದಾರೆ. ಅಪ್ಪು ಸರ್ ಹೆಸರಲ್ಲಿ ಇದು…

Read More

ನಿಮಗೆ ಹೈ ಬಿಪಿ ಇದ್ಯಾ? ಹಾಗಿದ್ರೆ ಸ್ಟ್ರೋಕ್ ಆಗದಂತೆ ತಡೆಯಲು ಈ ರೀತಿ ಮಾಡಿ

ಇತ್ತೀಚಿನ ವರ್ಷಗಳಲ್ಲಿ ಹೈ ಬಿಪಿ ಪ್ರಕರಣಗಳು ಹೆಚ್ಚುತ್ತಿವೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ಅಸ್ವಸ್ಥ ಜೀವನಶೈಲಿ ಈ ರೀತಿ ಸಮಸ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣಗಳಾಗಿವೆ. ಸಾಮಾನ್ಯವಾಗಿ ರಕ್ತದೊತ್ತಡದ ಮಟ್ಟ 120/80 ಎಂಎಂಎಚ್ಜಿ (mmHg) ಇರಬೇಕು ಎಂದು ವೈದ್ಯರು ಹೇಳುತ್ತಾರೆ. ಆದರೆ ಇದು ನಿರಂತರವಾಗಿ 140/90 ಎಂಎಂಎಚ್ಜಿ ಅಥವಾ ಅದಕ್ಕಿಂತ ಹೆಚ್ಚಿದ್ದರೆ, ಅದನ್ನು ಹೈಪರ್‌ಟೆನ್ಶನ್ ಎಂದು ಕರೆಯಲಾಗುತ್ತದೆ. ಈ ಮಟ್ಟದಲ್ಲಿ ಬಿಪಿ ದೀರ್ಘಕಾಲ ಇದ್ದರೆ ಸ್ಟ್ರೋಕ್ ಅಪಾಯ ಬಹಳ ಹೆಚ್ಚುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ…

Read More

ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು, ಫುಲ್ ಟ್ರಾಫಿಕ್ ಜಾಮ್

ಧಾರವಾಡ, (ಮಾರ್ಚ್ 17): ಕಾಶ್ಮೀರ, ಶಿಮ್ಲಾದಲ್ಲಿ ಹಿಮಪಾತದಿಂದಾಗಿ ಹೇಗೆ ಮಂಜುಗಡ್ಡೆ ರಸ್ತೆ ತುಂಬೆಲ್ಲಾ ಬಿದ್ದಿರುತ್ತೋ ಹಾಗೇ ಧಾರವಾಡ ಜಿಲ್ಲೆಯ ಕಲ್ಲಘಟಗಿಯಲ್ಲೂ ಸಹ ಆಲಿಕಲ್ಲು ಬಿದ್ದಿದೆ. ಮಳೆಯಿಂದಾಗಿ ರಸ್ತೆಯಲೆಲ್ಲಾ ಆಲಿಕಲ್ಲು ಬಿದ್ದಿದ್ದು, ವಾಹನ ಸಂಚಾರಕ್ಕೆ ಅಸ್ತವ್ಯಸ್ತವಾಗಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ರಾಶಿ ರಾಶಿ ಆಲಿಕಲ್ಲು ಹೇಗೆ ಬಿದ್ದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ. Source link

Read More

ಅಮೆರಿಕ, ಇಸ್ರೇಲ್ ನಮ್ಮೆದುರು ಮಂಡಿಯೂರಬೇಕು; ಇರಾನ್‌ ಸುಪ್ರೀಂ ನಾಯಕ ಪಟ್ಟು

ಟೆಹ್ರಾನ್, ಮಾರ್ಚ್ 17: ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಮಧ್ಯಪ್ರಾಚ್ಯದಲ್ಲಿ ಯುದ್ಧವನ್ನು ನಿಲ್ಲಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಮ್ಮ ಮುಂದೆ ಮಂಡಿಯೂರಬೇಕು, ಆ ಎರಡೂ ದೇಶಗಳು ಸೋಲನ್ನು ಒಪ್ಪಿಕೊಳ್ಳಬೇಕು. ಶಾಂತಿ ಮಾತುಕತೆಯ ಸಮಯ ಮುಗಿದುಹೋಗಿದೆ ಎಂದು ಅವರು ಘೋಷಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಮೊಜ್ತಬಾ ಖಮೇನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ವಿರೂಪಗೊಂಡಿದ್ದಾರೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಹೇಳಿದ ಬೆನ್ನಲ್ಲೇ ಅವರು ಈ…

Read More

IPL 2026: ಹೇಜಲ್​ವುಡ್ ಎಷ್ಟು ಪಂದ್ಯಗಳಿಗೆ ಅಲಭ್ಯ? ಅವರನ್ನು ಬದಲಿಸುವವರ್ಯಾರು?

2026 ರ ಐಪಿಎಲ್​ಗೆ ಎರಡು ವಾರಕ್ಕೂ ಕಡಿಮೆ ಸಮಯ ಉಳಿದಿದೆ. ಹೀಗಾಗಿ ಈ ಲೀಗ್​ನಲ್ಲಿ ಆಡುವ ವಿದೇಶಿ ಆಟಗಾರರು ತಮ್ಮ ತಮ್ಮ ತಂಡಗಳನ್ನು ಕೂಡಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಆರ್​ಸಿಬಿ ಜೀವಾಳ ವಿರಾಟ್ ಕೊಹ್ಲಿ ಕೂಡ ಇಂದು ಮಡದಿಯೊಂದಿಗೆ ಭಾರತಕ್ಕೆ ಬಂದಿದ್ದಾರೆ. ಲೀಗ್​ನ ಮೊದಲ ಪಂದ್ಯ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಆರ್​ಸಿಬಿ ಪಾಳಯಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಬೌಲಿಂಗ್ ವಿಭಾಗದ ಪ್ರಮುಖ ಅಸ್ತ್ರ ಎನಿಸಿಕೊಂಡಿರುವ ಆಸ್ಟ್ರೇಲಿಯಾದ ಅನುಭವಿ…

Read More

ಕೋಟ್ಯಂತರ ರೂ ಆದಾಯವಿರುವ ದೇಗುಲದಲ್ಲಿ ಅಭಿವೃದ್ಧಿ ಶೂನ್ಯ: ರಾಜ್ಯದ ಶ್ರೀಮಂತ ದೇಗುಲಕ್ಕೆ ಇದೆಂಥಾ ಸ್ಥಿತಿ?

ಮಂಗಳೂರು, ಮಾರ್ಚ್​​ 17: ಕುಕ್ಕೆ ಸುಬ್ರಹ್ಮಣ್ಯ‌ ದೇವಸ್ಥಾನ (Kukke Shree Subrahmanya Temple) ರಾಜ್ಯದ ಶ್ರೀಮಂತ ದೇಗುಲಗಳಲ್ಲಿ ಒಂದು. ಕೋಟ್ಯಂತರ ರೂ ಆದಾಯ ತಂದು ಕೊಡುವ ಈ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಮಾತ್ರ ಸೂಕ್ತ ಮೂಲಭೂತ ಸೌಲಭ್ಯಗಳಿಲ್ಲ ಎಂಬುದು‌ ದಶಕಗಳ‌ ಆರೋಪ.‌ ಸಂಪತ್ತು ಇದ್ದರೂ ಇಚ್ಛಾಶಕ್ತಿ, ಕ್ರಿಯಾಶಕ್ತಿ‌ ಇಲ್ಲದ ಪರಿಣಾಮ ಇಲ್ಲಿ ಸರಿಯಾದ ವ್ಯವಸ್ಥೆ ಇಲ್ಲದೆ ಭಕ್ತರು ಪರದಾಡುವಂತಾಗಿದೆ. ಭಕ್ತರ ಆರೋಪವೇನು? ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಪ್ರಸಿದ್ಧ ನಾಗ ಕ್ಷೇತ್ರ ಅಂತಾನೆ…

Read More

ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರು, (ಮಾರ್ಚ್ 17): ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕಾರಿನಿಂದ ಗುದ್ದಿ ವ್ಯಕ್ತಿಯನ್ನು ಹತ್ಯೆ ಯತ್ನ ನಡೆದಿರುವ ಘಟನೆ ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ನಡೆದಿದೆ. ಭೂವ್ಯವಹಾರಕ್ಕೆ ಸಂಬಂಧಿಸಿ ಹಣದ ವ್ಯಾಜ್ಯದ ಕೋಪದಲ್ಲಿ ಮಂಗಳೂರಿನ ಪಳ್ನೀರ್ ನಿವಾಸಿ ಮಹಮ್ಮದ್ ಶರೀಫ್ ಎನ್ನುವಾತ ಕಾರಿನಿಂದ ಮೋಹನ್ ದಾಸ್ ಶೆಟ್ಟಿಗೆ ಗುದ್ದಿದ್ದು, ಭೀಕರ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ. ಸುರತ್ಕಲ್‌ನ ಕಾನ ಮತ್ತು ವಾಮಂಜೂರಿನಲ್ಲಿ ಆರೋಪಿ ಮಹಮ್ಮದ್ ಶರೀಫ್ ಸುಮಾರು 2 ಕೋಟಿ ರೂ. ಹಣವನ್ನು ಹೂಡಿಕೆ ಮಾಡಿದ್ದ. ಆದರೆ ಮೋಹನ್ ದಾಸ್ ಶೆಟ್ಟಿ ಮೋಸ ಮಾಡಿರುವ ಸಿಟ್ಟಿನಲ್ಲಿ ಆತ ಸ್ಕೂಟರ್​​ನಲ್ಲಿ…

Read More

IPL 2026: ಈ ಐಪಿಎಲ್‌ನಲ್ಲಿ ರೋಹಿತ್ ‘ಇಂಪ್ಯಾಕ್ಟ್’ ಹೇಗಿರಲಿದೆ? ಸ್ಪಷ್ಟನೆ ನೀಡಿದ ಹೆಡ್​ ಕೋಚ್

2026 ರ ಐಪಿಎಲ್ ಸಮೀಪಿಸುತ್ತಿದ್ದು, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಅಭಿಮಾನಿಗಳು ಈ ಚುಟುಕು ಮಾದರಿಯಲ್ಲಿ ಇವರಿಬ್ಬರ ಆಟವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಇದಕ್ಕೆ ಕಾರಣ, ಇವರಿಬ್ಬರು ಈ ಮಾದರಿಯಲ್ಲಿ ಆಡುವುದು ಐಪಿಎಲ್‌ನಲ್ಲಿ ಮಾತ್ರ. ಹೀಗಾಗಿ ಈ ಇಬ್ಬರು ದಿಗ್ಗಜರು ವರ್ಷದ ನಂತರ ಟಿ20 ಪಂದ್ಯವನ್ನಾಡಲು ಸಜ್ಜಾಗಿದ್ದಾರೆ. ಅದರಲ್ಲೂ ಹಿಟ್​ಮ್ಯಾನ್ ರೋಹಿತ್ ಶರ್ಮಾ ಈ ಲೀಗ್​ಗಾಗಿ ಸಾಕಷ್ಟು ಬೆವರು ಹರಿಸುತ್ತಿದ್ದು, ಅದರ ವಿಡಿಯೋಗಳು ಸಹ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಆದರೆ ಇದೆಲ್ಲದರ ನಡುವೆ ಈ ಬಾರಿಯ…

Read More

ಪ್ಲೀಸ್ ಸಾಯಬೇಡಮ್ಮ; ರೈಲು ಹಳಿ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಕಾಪಾಡಿದ 7 ವರ್ಷದ ಮಗಳು

ನವದೆಹಲಿ, ಮಾರ್ಚ್ 17: ಅಲಿಘರ್ ರೈಲು ನಿಲ್ದಾಣದಲ್ಲಿ ಯಾರೂ ಊಹಿಸದ ಘಟನೆಯೊಂದು ನಡೆದಿದೆ. ರೈಲು ಇನ್ನೇನು ಸ್ಟೇಷನ್​ಗೆ ತಲುಪಬೇಕು ಎನ್ನುವಷ್ಟರಲ್ಲಿ ತನ್ನ ಮಗಳ ಜೊತೆ ರೈಲಿಗಾಗಿ ಕಾಯುತ್ತಿದ್ದ ಮಹಿಳೆ ರೈಲು ಹಳಿ ಮೇಲೆ ಹಾರಿದ್ದಳು. ಆತ್ಮಹತ್ಯೆಗೆ ಯತ್ನಿಸಿದ ಆಕೆಯ ಹಿಂದೆಯೇ ಓಡಿದ 7 ವರ್ಷದ ಮಗಳು ಅಮ್ಮಾ ಬೇಡಮ್ಮಾ ಎನ್ನುತ್ತಾ ಕೂಗತೊಡಗಿದ್ದಾಳೆ. ಆಕೆಯ ಕಿರುಚಾಟ ಕೇಳಿದ ನಂತರ ಇತರ ಪ್ರಯಾಣಿಕರು ಮತ್ತು ಜಿಆರ್‌ಪಿ ಸಿಬ್ಬಂದಿ ಓಡಿ ಬಂದು ಆ ಮಹಿಳೆಯನ್ನು ಕಾಪಾಡಿದ್ದಾರೆ. ಮನೆಯಲ್ಲಿನ ಕೌಟುಂಬಿಕ ಹಿಂಸಾಚಾರದಿಂದ ನೊಂದಿದ್ದ…

Read More

‘ನನಗೆ ನಯನತಾರಾ ಬೇಕು’: ಸಂಸದನ ಅಸಭ್ಯ ಮಾತಿಗೆ ಕಲಾವಿದರ ಸಂಘ ಗರಂ

ತಮಿಳುನಾಡಿನ ಎಐಎಡಿಎಂಕೆ ಸಂಸದ ಸಿ.ವಿ. ಷಣ್ಮುಗಂ ಅವರು ನಟಿ ನಯನತಾರಾ (Nayanthara) ಬಗ್ಗೆ ನೀಡಿದ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆಯು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಮಹಿಳೆಯರ ಸುರಕ್ಷತೆಗಾಗಿ ತಮ್ಮ ಪಕ್ಷ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲೇ ಅವರು ಇಂತಹ ಕೀಳುಮಟ್ಟದ ಹೇಳಿಕೆ ನೀಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಸಿ.ವಿ. ಷಣ್ಮುಗಂ (CV Shanmugam) ಅವರ ಹೇಳಿಕೆಯನ್ನು ದಕ್ಷಿಣ ಭಾರತ ಕಲಾವಿದರ ಸಂಘ ಖಂಡಿಸಿದೆ. ಕೂಡಲೇ ಕ್ಷಮೆ ಕೇಳಬೇಕು ಎಂದು ಸಂಘ ಆಗ್ರಹಿಸಿದೆ. ಘಟನೆ ಹಿನ್ನೆಲೆ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್…

Read More