All posts by nagaraj11081993

ಕನ್ನಡಿಗರು ಉದ್ಯೋಗಕ್ಕಾಗಿ, ಬಡ್ತಿಗಾಗಿ ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ: ರೈಲ್ವೆ ಪರೀಕ್ಷೆ ಮುಂದೂಡಿದಕ್ಕೆ ಸಿಎಂ ಕೆಂಡಾಮಂಡಲ

ಕನ್ನಡಿಗರು ಉದ್ಯೋಗಕ್ಕಾಗಿ, ಬಡ್ತಿಗಾಗಿ ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ: ರೈಲ್ವೆ ಪರೀಕ್ಷೆ ಮುಂದೂಡಿದಕ್ಕೆ ಸಿಎಂ ಕೆಂಡಾಮಂಡಲ

ಬೆಂಗಳೂರು, ಮಾರ್ಚ್​ 17: ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡ ಭಾಷೆ ತೆಗೆದ ವಿಚಾರವಾಗಿ ರಾಜ್ಯದ ವಿವಿಧೆಡೆ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗಿದೆ. ಕನ್ನಡಿಗರಿಗೆ ಅನ್ಯಾಯ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಇತ್ತ ಹುಬ್ಬಳ್ಳಿಯಲ್ಲಿ ರೈಲ್ವೆ ನೇಮಕಾತಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಬಳಿಕ ವಿವಿಧ ಸಂಘಟನೆಗಳ ಹೋರಾಟಕ್ಕೆ ಮಣಿದ ರೈಲೆ ಇಲಾಖೆ ಇಂದಿನ ಪರೀಕ್ಷೆಯನ್ನು ಮುಂದೂಡಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ (Siddaramaiah) ನೈರುತ್ಯ ರೈಲ್ವೆ ಇಲಾಖೆ ನಡೆಯನ್ನು ಖಂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಮಧ್ಯೆಪ್ರವೇಶಿಸಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ನೈರುತ್ಯ ರೈಲ್ವೆ ಇಲಾಖೆಯ 194 ಗೂಡ್ಸ್‌ ರೈಲು ಮ್ಯಾನೇಜರ್‌ ಹುದ್ದೆಗಳು ಹಾಗೂ ಹುಬ್ಬಳ್ಳಿ ವಿಭಾಗದಲ್ಲಿ ಎಲ್‌ಡಿಸಿಇ 101 ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂಬಂಧ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಕನ್ನಡಿಗರು ಹಾಗೂ ಕನ್ನಡ ಸಂಘಟನೆಗಳ ಭಾರೀ ವಿರೋಧದ ತರುವಾಯ ರೈಲ್ವೆ ಇಲಾಖೆಯೂ ದಿಢೀರನೇ ರದ್ದುಪಡಿಸಿ ಕನ್ನಡಿಗ ಉದ್ಯೋಗಿಗಳನ್ನು ಅತಂತ್ರ ಪರಿಸ್ಥಿತಿಗೆ ತಳ್ಳಿದೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​​

ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವ ಬಗ್ಗೆ ಈ ಮೊದಲೇ ಸಾವಿರಾರು ಕನ್ನಡಿಗ ಉದ್ಯೋಗಿಗಳು ಧ್ವನಿಯೆತ್ತಿದ್ದರು. ಶಾಂತ ರೀತಿಯ ಪ್ರತಿಭಟನೆಯನ್ನು, ಪ್ರತಿರೋಧವನ್ನು ನಿರ್ಲಕ್ಷಿಸುತ್ತಾ ಬಂದ ರೈಲ್ವೆ ಇಲಾಖೆ ಪರೀಕ್ಷೆ ಆರಂಭವಾಗುವ ಕೊನೆ ಕ್ಷಣದಲ್ಲಿ ರದ್ದುಮಾಡಿರುವುದು ಈಗಿನ ಗೊಂದಲಕ್ಕೆ ಕಾರಣವಾಗಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ರೈಲ್ವೆ ಇಲಾಖೆಯಿಂದ ಮತ್ತೊಮ್ಮೆ ಕನ್ನಡಕ್ಕೆ ಮಲತಾಯಿ ಧೋರಣೆ: ಸಿಡಿದೆದ್ದ ಕರವೇ

ಪ್ರಾರಂಭದಲ್ಲಿಯೇ ರೈಲ್ವೆ ಇಲಾಖೆ ಎಚ್ಚೆತ್ತುಕೊಂಡು ತನ್ನ ತಪ್ಪನ್ನು ತಿದ್ದಿಕೊಂಡು ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ಮಾಡಿಕೊಟ್ಟಿದ್ದರೆ ಈಗಿನ ಅತಂತ್ರ ಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ. ಆ ಪ್ರಯತ್ನವನ್ನೇ ಮಾಡದೆ, ಕನ್ನಡಿರನ್ನು ತಾತ್ಸಾರ ಭಾವನೆಯಿಂದ ಕಂಡು, ಪ್ರತಿಭಟನೆಯ ಕಾವು ಹೆಚ್ಚಾದ ಕೂಡಲೇ ತರಾತುರಿಯಲ್ಲಿ ಪರೀಕ್ಷೆ ರದ್ದುಪಡಿಸುವ ನಿರ್ಧಾರಕ್ಕೆ ಬಂದಿರುವುದು ಖಂಡನೀಯ.

ಕನ್ನಡ,‌ ಕರ್ನಾಟಕ ಮತ್ತು ಕನ್ನಡಿಗರಿಗೆ ಅನ್ಯಾಯ

ಕನ್ನಡಿಗರಿಗೆ ಕೇಂದ್ರ ಸರ್ಕಾರದ ಪರೀಕ್ಷೆಗಳಲ್ಲಿ ಅನ್ಯಾಯವಾಗುತ್ತಿರುವುದು ಇದು ಮೊದಲ ಬಾರಿ ಅಲ್ಲ ಬಹುಷಃ ಕೊನೆಯದ್ದೂ ಅಲ್ಲ. ಕೇಂದ್ರದ ವಿವಿಧ ಇಲಾಖೆಗಳ ಉದ್ಯೋಗ ಭರ್ತಿಯಲ್ಲಿ ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ಕುಟಿಲತನದಿಂದಾಗಿ ಕನ್ನಡಿಗ ಉದ್ಯೋಗಾಕಾಂಕ್ಷಿಗಳು ಮೊದಲಿಂದಲೂ ಅನ್ಯಾಯಕ್ಕೆ ತುತ್ತಾಗುತ್ತಾ ಬಂದಿದ್ದಾರೆ. ಇದರ ವಿರುದ್ಧ ಕನ್ನಡಿಗರು ನ್ಯಾಯಕ್ಕಾಗಿ ಧ್ವನಿಯೆತ್ತುತ್ತಾ ಬಂದಿದ್ದಾರೆ. ಆದರೆ ಈ ಬಾರಿ ಕನ್ನಡಿಗರಾದ ವಿ.ಸೋಮಣ್ಣನವರು ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿರುವಾಗಲೇ ರೈಲ್ವೆ ಇಲಾಖೆ ಕನ್ನಡ ವಿರೋಧಿ ನಿಲುವು ತಳೆದು ಕನ್ನಡ,‌ ಕರ್ನಾಟಕ ಮತ್ತು ಕನ್ನಡಿಗರಿಗೆ ಅನ್ಯಾಯ ಮಾಡಿರುವುದು ಅತ್ಯಂತ ದುರದೃಷ್ಟಕರ ಎಂದು ವಾಗ್ದಾಳಿ ಮಾಡಿದ್ದಾರೆ.

ಸೋಮಣ್ಣನವರು ಕನ್ನಡಿಗರ ಪರವಾಗಿ ನಿಂತು ಅನ್ಯಾಯವನ್ನು ಸರಿಪಡಿಸುತ್ತಾರೆ ಎಂಬ ಭರವಸೆಯನ್ನು ನಾನೂ ಇಟ್ಟುಕೊಂಡಿದ್ದೆ, ಆ ನಂಬಿಕೆ ಹುಸಿಯಾಗಿದೆ. ಸೋಮಣ್ಣನವರು ಮಾತನಾಡಲು ಶುರು ಮಾಡಿದರೆ ರೈಲ್ವೆ ಇಲಾಖೆ ಇರುವುದೇ ಕರ್ನಾಟಕಕ್ಕಾಗಿ ಎನ್ನುವಂತೆ ಮಾತಿನ ಅರಮನೆ ಕಟ್ಟುತ್ತಾರೆ. ಅವರು ಮಾತು ಸ್ವಲ್ಪ ಕಡಿಮೆಮಾಡಿ ಕರ್ನಾಟಕಕ್ಕಾಗಿ‌ ಮಾಡಬೇಕಾದ ಕೆಲಸವನ್ನು ನಿಷ್ಠೆಯಿಂದ ಮಾಡಲು ಮುಂದಾಗಬೇಕು.

ಇದನ್ನೂ ಓದಿ: ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಗೂಡ್ಸ್ ಮ್ಯಾನೇಜರ್ ಎಲ್‌ಡಿಸಿ ಹುದ್ದೆಗಳ ಮುಂಬಡ್ತಿ ಪರೀಕ್ಷೆ ಮುಂದೂಡಿಕೆ

ಕೇಂದ್ರ ಸರ್ಕಾರಕ್ಕೆ ಹಿಂದಿ ಭಾಷೆ ಮೇಲೆ ಇರುವ ಪ್ರೀತಿ ಮತ್ತು ಕನ್ನಡವೂ ಸೇರಿದಂತೆ ರಾಜ್ಯಭಾಷೆಗಳ ಮೇಲೆ ಇರುವ ತಾತ್ಸಾರ ಮನೋಭಾವದ ದುಷ್ಪರಿಣಾಮವನ್ನು ಕನ್ನಡಿಗರು ಈಗಾಗಲೇ ಅನುಭವಿಸಿದ್ದಾರೆ.
ಉತ್ತರ ಭಾರತದ ಹಿಂದಿ ಭಾಷಿಗರಿಗೆ ನೆರವಾಗಬೇಕೆಂಬ ಏಕೈಕ ಉದ್ದೇಶದಿಂದ ಕೇಂದ್ರದ ಪರೀಕ್ಷೆಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್‌ ಗೆ ಮಾತ್ರ ಅವಕಾಶ ನೀಡುವ ಕೇಂದ್ರದ ಭಾಷಾ ದಬ್ಬಾಳಿಕೆಯನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತ ರಾಜ್ಯಗಳ ಒಕ್ಕೂಟ, ಈ ರಾಜ್ಯಗಳು ಭಾಷೆಗಳ ಆಧಾರದಲ್ಲಿಯೇ ರಚನೆಯಾಗಿರುವುದನ್ನು ಮರೆಯಬಾರದು. ನಾವು ಹಿಂದಿಯನ್ನು ಭಾಷೆಯಾಗಿ ವಿರೋಧಿಸುವುದಿಲ್ಲ, ಹಿಂದಿಯನ್ನು ಕನ್ನಡದ ಮೇಲೆ ಹೇರುವುದನ್ನು ಮಾತ್ರ ಖಂಡಿತ ಸಹಿಸುವುದಿಲ್ಲ. ಆಳುವ ಪಕ್ಷದ ಸಂಸದರು ಪಕ್ಷದ ಮುಲಾಜಿಗೆ ಬಿದ್ದು ಕನ್ನಡಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತದೆ ಬಾಯಿ ಮುಚ್ಚಿಕೊಂಡಿರಬಹುದು, ಆದರೆ ಕನ್ನಡಿಗರು ಜಾಗೃತರಾಗಿದ್ದಾರೆ.

ಕನ್ನಡಿಗರು ಉದ್ಯೋಗಕ್ಕಾಗಿ, ಬಡ್ತಿಗಾಗಿ ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ

ಕನ್ನಡಿಗರು ಉದ್ಯೋಗಕ್ಕಾಗಿ, ಬಡ್ತಿಗಾಗಿ ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ, ತಾವು ಶಿಕ್ಷಣ ಪಡೆದ ಭಾಷೆಯಲ್ಲೇ ತಮ್ಮ ಹಕ್ಕಿನ ಉದ್ಯೋಗ ಬಡ್ತಿಯನ್ನು ಕೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕನ್ನಡ ಭಾಷಿಗರಿಗೆ ಭಾಷೆಯ ಹೆಸರಲ್ಲಿ ಅನ್ಯಾಯವಾಗದಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಅವರೇ ಮಧ್ಯೆಪ್ರವೇಶಿಸಿ ಸಂಬಂಧಿತ ಇಲಾಖೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ರದ್ದುಪಡಿಸಲಾದ ರೈಲ್ವೆ ಇಲಾಖೆಯ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಅವಕಾಶ ಕಲ್ಪಿಸಿ ಶೀಘ್ರದಲ್ಲಿಯೇ ನಡೆಸಲು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಶ್ಲೀಲ ಹಾಡು: ‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ

ಧ್ರುವ ಸರ್ಜಾ, ಸಂಜಯ್ ದತ್, ನೋರಾ ಫತೇಹಿ ಮುಂತಾದವರು ನಟಿಸಿರುವ ‘ಕೆಡಿ’ (KD Movie) ಸಿನಿಮಾದ ‘ಸರ್ಸೆ ನಿನ್ನ ಸೆರಗ’ ಹಾಡು ವಿವಾದಕ್ಕೆ ಗುರಿ ಆಗಿದೆ. ಅಶ್ಲೀಲ ಸಾಹಿತ್ಯ ಹೊಂದಿರುವ ಕಾರಣಕ್ಕೆ ಈ ಹಾಡನ್ನು ವಿರೋಧಿಸಲಾಗುತ್ತಿದೆ. ‘ಕೆಡಿ’ ಚಿತ್ರತಂಡಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಅನೇಕ ಕಡೆಗಳಲ್ಲಿ ದೂರು ಕೂಡ ದಾಖಲಾಗಿದೆ. ಈ ಬಗ್ಗೆ ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ (Nagalakshmi Choudhary) ಅವರು ಮಾತನಾಡಿದ್ದಾರೆ. ‘ಹೆಣ್ಮಕ್ಕಳು ಅನುಭವಿಸುತ್ತಿರುವ ಪರಿಸ್ಥಿತಿ ಬಹಳ ಕಷ್ಟ ಇದೆ. ಇಂಥ ಹಾಡುಗಳು ಬಂದರೆ ಇನ್ನೂ ಹಗುರವಾಗಿ ಮಾತನಾಡಲು ಶುರು ಮಾಡುತ್ತಾರೆ. ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಸೆನ್ಸಾರ್ ಮಂಡಳಿಗೆ ಪತ್ರ ಬರೆದು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದೇವೆ. ಆ ಹಾಡನ್ನು ಕೇಳಲು ನನಗೆ ಸಾಧ್ಯವಾಗಲಿಲ್ಲ. ಆರಂಭದ ಕೆಲವು ಸಾಲುಗಳನ್ನು ಕೇಳುವಾಗಲೇ ಮುಜುಗರ ಆಯಿತು’ ಎಂದು ನಾಗಲಕ್ಷ್ಮಿ ಚೌಧರಿ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಗತ್ಯ ಇದ್ದರೆ ಮಾತ್ರ ಎಲ್​ಪಿಜಿ ಸಿಲಿಂಡರ್ ಬುಕ್ ಮಾಡಿ: ಇಂಡಿಯನ್ ಆಯಿಲ್ ಮನವಿ

ನವದೆಹಲಿ, ಮಾರ್ಚ್ 17: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಎಲ್​ಪಿಜಿ ಸರಬರಾಜು (LPG) ಕ್ಷೀಣಿಸಿದೆ. ಬಹಳ ಜನರು ಎಲ್​ಪಿಜಿ ಸಿಲಿಂಡರ್ ಬುಕ್ ಮಾಡಲು ಆಗುತ್ತಿಲ್ಲ ಎಂದು ದೂರುತ್ತಿದ್ದಾರೆ. ಸಿಲಿಂಡರ್ ದರವೂ ಹೆಚ್ಚಿದೆ. ಬುಕಿಂಗ್ ಆದರೂ ಡೆಲಿವರಿ ವಿಳಂಬವಾಗಿ ಆಗುತ್ತಿದೆ. ಇದರಿಂದ ಜನರು ಭವಿಷ್ಯದಲ್ಲಿ ಎಲ್​ಪಿಜಿಗೆ ಮತ್ತಷ್ಟು ತತ್ವಾರ ಬರುವ ನಿರೀಕ್ಷೆಯಲ್ಲಿ ಅನಗತ್ಯವಾಗಿದ್ದರೂ ಎಲ್​ಪಿಜಿ ಬುಕಿಂಗ್ ಮಾಡಲು ಮುಗಿಬೀಳುತ್ತಿದ್ದಾರೆ. ಇದೇ ವೇಳೆ ಇಂಡಿಯನ್ ಆಯಿಲ್ ಸಂಸ್ಥೆ ಅಡ್ವೈಸರಿ ಹೊರಡಿಸಿದ್ದು, ಜನರು ಅಗತ್ಯ ಇಲ್ಲದಿದ್ದರೂ ಎಲ್​ಪಿಜಿ ಬುಕಿಂಗ್ ಮಾಡದಿರಲು ವಿನಂತಿಸಿದೆ.

‘ದೇಶಾದ್ಯಂತ ಮನೆಗಳಿಗೆ ಎಲ್​ಪಿಜಿ ಲಭ್ಯತೆ ಸ್ಥಿರವಾಗಿ ಇದೆ ಎಂಬುದನ್ನು ಇಂಡಿಯನ್ ಆಯಿಲ್ ಖಚಿತಪಡಿಸುತ್ತಿದೆ. ಕೆಲ ಗ್ರಾಹಕರು ಮಾಮೂಲಿಗಿಂತ ಬೇಗನೇ ರೀಫಿಲ್ಸ್ ಬುಕಿಂಗ್ ಮಾಡುತ್ತಿದ್ದಾರೆ. ಈ ರೀತಿ ಮುಂಗಡವಾಗಿ ಸಿಲಿಂಡರ್ ಬುಕಿಂಗ್ ಮಾಡುವುದರಿಂದ ಎಲ್​ಪಿಜಿ ಬೇಡಿಕೆ ತಾತ್ಕಾಲಿಕವಾಗಿ ಹೆಚ್ಚುತ್ತದೆ. ಪರಿಣಾಮವಾಗಿ ಡೆಲಿವರಿ ವಿಳಂಬವೂ ಹೆಚ್ಚುತ್ತದೆ’ ಎಂದು ಇಂಡಿಯನ್ ಆಯಿಲ್ ತನ್ನ ಅಡ್ವೈಸರಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಎಲ್​ಪಿಜಿ ಇಕೆವೈಸಿ ಎಲ್ಲರಿಗೂ ಕಡ್ಡಾಯವಲ್ಲ; ಈ ಗ್ರಾಹಕರಿಗೆ ಮಾತ್ರ ಅನ್ವಯ, ಗಮನಿಸಿ

ಭಾರತದಲ್ಲಿ ಕಳೆದ ಒಂದು ವರ್ಷದಲ್ಲಿ ಗೃಹಬಳಕೆಯ ಅಡುಗೆ ಅನಿಲದಲ್ಲಿ ಮೊದಲ ಬಾರಿಗೆ ದರ ಪರಿಷ್ಕರಣೆ ಆಗಿದೆ. ಇತ್ತೀಚೆಗೆ 14.2 ಕಿಲೋ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ 60 ರೂ ಏರಿಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇದರ ಬೆಲೆ 915.50 ರೂ ಆಗಿದೆ.

ಭಾರತಕ್ಕೆ ಅಗತ್ಯವಿರುವ ಹೆಚ್ಚಿನ ಎಲ್​ಪಿಜಿ ಸಿಲಿಂಡರ್​ಗಳು ಹಾರ್ಮುಜ್ ಜಲಸಂಧಿ ಮೂಲಕವೇ ಬರಬೇಕು. ಹೀಗಾಗಿ, ಎಲ್​ಪಿಜಿ ಲಭ್ಯತೆ ವಿಚಾರದಲ್ಲಿ ಭಾರತ ಇಕ್ಕಟ್ಟಿನ ಸ್ಥಿತಿಯಲ್ಲಿದೆ. ಆದರೂ ಕೂಡ ಜಲಸಂಧಿ ಮೂಲಕ ಒಂದೊಂದೇ ಎಲ್​ಪಿಜಿ ಟ್ಯಾಂಕರ್​ಗಳನ್ನು ಭಾರತ ತರಿಸಿಕೊಳ್ಳಲು ಯಶಸ್ವಿಯಾಗಿದೆ. ಈಗಾಗಲೇ ಮೂರು ಎಲ್​ಪಿಜಿ ಟ್ಯಾಂಕರ್​ಗಳು ಭಾರತಕ್ಕೆ ಬಂದಾಗಿದೆ. ಇನ್ನೊಂದು ಟ್ಯಾಂಕರ್ ನಾಳೆ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ: ಪಿಎನ್​ಜಿ ಗ್ಯಾಸ್​ಗೂ ಎಲ್​ಪಿಜಿಗೂ ಏನು ವ್ಯತ್ಯಾಸ? ನೀವು ಪಿಎನ್​ಜಿ ಕನೆಕ್ಷನ್ ಪಡೆಯುವುದು ಹೇಗೆ?

ಗಲ್ಫ್ ರಾಷ್ಟ್ರಗಳಿಂದ ಪೂರೈಕೆಯಾಗುವ ಎಲ್​ಪಿಜಿಯನ್ನು ಹೊತ್ತ ಹಲವು ಭಾರತೀಯ ನೌಕೆಗಳು ಇನ್ನೂ ಕೂಡ ಹಾರ್ಮುಜ್ ಜಲಸಂಧಿಯಲ್ಲಿ ನಿಂತಿವೆ. ಇರಾನ್ ಜೊತೆ ಭಾರತ ಮಾತುಕತೆ ನಡೆಸುತ್ತಿದ್ದು, ಒಂದೊಂದೇ ನೌಕೆಯನ್ನು ತರಿಸಿಕೊಳ್ಳಲು ಯತ್ನಿಸುತ್ತಿದೆ. ಭಾರತದ ಯುದ್ಧ ನೌಕೆಗಳಿರುವ ಎರಡು ಕಾರ್ಯಪಡೆಗಳನ್ನು ಪರ್ಷಿಯನ್ ಕೊಲ್ಲಿಯಲ್ಲಿ ನಿಯೋಜಿಸಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಪ್ರತಿದಿನ ದಾಳಿಂಬೆ ಹಣ್ಣು ತಿನ್ನುವುದರಿಂದ ಲಭಿಸುವ ಪ್ರಯೋಜನಗಳೇನು ಗೊತ್ತಾ?

ಹಣ್ಣುಗಳು ನಮ್ಮ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಅದರಲ್ಲೂ ಸಣ್ಣ ಸಣ್ಣ ಮಾಣಿಕ್ಯದಂತೆ ಕೆಂಪು ಬೀಜಗಳನ್ನು ಹೊಂದಿರುವ ದಾಳಿಂಬೆ ಹಣ್ಣು (pomegranate) ಪೋಷಕಾಂಶಗಳು ಮತ್ತು ಆರೋಗ್ಯ ಪ್ರಯೋಜನಗಳ ಶಕ್ತಿ ಕೇಂದ್ರ ಎಂದಿನಿಸಿದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು, ನಾರಿನಾಂಶ, ವಿಟಮಿನ್ ಸಿ, ವಿಟಮಿನ್ ಕೆ, ಪೊಟ್ಯಾಸಿಯಮ್, ಫೈಬರ್ ಮತ್ತು ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿದ್ದು, ಇದು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ತುಂಬಾನೇ ಸಹಕಾರಿಯಾಗಿದೆ.  ಅದರಲ್ಲೂ ಪ್ರತಿದಿನ ದಾಳಿಂಬೆ ತಿನ್ನುವುದರಿಂದ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಂತೆ. ಹಾಗಿದ್ರೆ ಪ್ರತಿನಿತ್ಯ ಒಂದು ಬೌಲ್‌ ದಾಳಿಂಬೆ ಹಣ್ಣು ಸೇವನೆ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ನೋಡೋಣ ಬನ್ನಿ.

ಪ್ರತಿದಿನ ದಾಳಿಂಬೆ ತಿನ್ನುವುದರಿಂದ ಲಭಿಸುವ  ಪ್ರಯೋಜನಗಳನ್ನು ತಿಳಿಯಿರಿ:

ರಕ್ತಹೀನತೆಯನ್ನು ನಿವಾರಿಸುತ್ತದೆ:  ದಾಳಿಂಬೆಯಲ್ಲಿ ಕಬ್ಬಿಣಾಂಶ ಹೇರಳವಾಗಿದೆ. ಇದು ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ, ಇದು ರಕ್ತಹೀನತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ ಮತ್ತು ಮುಖದ ನೈಸರ್ಗಿಕ ಹೊಳಪನ್ನು ಹೆಚ್ಚಿಸುತ್ತದೆ.

ಉರಿಯೂತವನ್ನು ಕಡಿಮೆ ಮಾಡುತ್ತದೆ: ದಾಳಿಂಬೆಯು ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು, ಇದು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.  ಇದನ್ನು ತಿನ್ನುವುದರಿಂದ ಸಂಧಿವಾತ ಮತ್ತು ದೀರ್ಘಕಾಲದ ಉರಿಯೂತದಿಂದ ಪರಿಹಾರ ಸಿಗುತ್ತದೆ. ಇದಲ್ಲದೆ, ದಾಳಿಂಬೆಯಲ್ಲಿರುವ ಉತ್ಕರ್ಷಣ ನಿರೋಧಕಗಳು ಜೀವಕೋಶಗಳನ್ನು ಹಾನಿಯಿಂದ ರಕ್ಷಿಸಲು ಸಹಾಯ ಮಾಡುತ್ತದೆ, ಇದರಿಂದಾಗಿ ಉರಿಯೂತ ಕಡಿಮೆಯಾಗುತ್ತದೆ.

ಹೃದಯಕ್ಕೆ ಪ್ರಯೋಜನಕಾರಿ: ದಾಳಿಂಬೆ ಹೃದಯ ಸಂಬಂಧಿ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡಲು ಬಹಳ ಸಹಾಯಕವಾಗಿದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಪಾಲಿಫಿನಾಲ್‌ಗಳು ಕೊಲೆಸ್ಟ್ರಾಲ್‌ ಕಡಿಮೆ ಮಾಡಲು, ಆರೋಗ್ಯಕರ ರಕ್ತನಾಳಗಳನ್ನು ಕಾಪಾಡಿಕೊಳ್ಳಲು ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.  ಅಲ್ಲದೆ ಇದು ಹೃದಯಾಘಾತದ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ.

ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ: ದಾಳಿಂಬೆಯಲ್ಲಿ ಉರಿಯೂತ ನಿವಾರಕ ಗುಣಗಳು ಮತ್ತು ವಿಟಮಿನ್ ಸಿ ಸಮೃದ್ಧವಾಗಿದ್ದು, ಇದು ಬಿಳಿ ರಕ್ತ ಕಣಗಳ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇವುಗಳನ್ನು ನಿಯಮಿತವಾಗಿ ತಿನ್ನುವುದರಿಂದ ಶೀತ, ಕೆಮ್ಮು, ನೆಗಡಿಯಂತಹ ಸಾಮಾನ್ಯ ಸೋಂಕುಗಳನ್ನು ತಡೆಗಟ್ಟಬಹುದು.

ಜೀರ್ಣಾಂಗ ವ್ಯವಸ್ಥೆ ಬಲಗೊಳ್ಳುತ್ತದೆ:  ದಾಳಿಂಬೆಯು ದೇಹಕ್ಕೆ ಅಗತ್ಯವಿರುವ 45% ಫೈಬರ್ ಅನ್ನು ಹೊಂದಿದ್ದು, ಇದು ಮಲಬದ್ಧತೆಯನ್ನು ನಿವಾರಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಸ್ಮರಣಶಕ್ತಿ ಮತ್ತು ಮೆದುಳಿಗೆ ಒಳ್ಳೆಯದು:  ಅಧ್ಯಯನಗಳ ಪ್ರಕಾರ, ದಾಳಿಂಬೆಯನ್ನು ಪ್ರತಿದಿನ ತಿನ್ನುವುದರಿಂದ ಸ್ಮರಣಶಕ್ತಿ ಸುಧಾರಿಸುತ್ತದೆ ಮತ್ತು ವಯಸ್ಸಾದಂತೆ ಸಂಭವಿಸುವ ಆಲ್ಝೈಮರ್ನಂತಹ ಕಾಯಿಲೆಗಳಿಂದ ರಕ್ಷಿಸುತ್ತದೆ. ಇದು ಮೆದುಳಿನ ಕೋಶಗಳಿಗೆ ಹಾನಿಯಾಗುವುದನ್ನು ತಡೆಯುತ್ತದೆ.

ಇದನ್ನೂ ಓದಿ: ಅಡುಗೆಯ ರುಚಿ ಹೆಚ್ಚಿಸುವ ಕೊತ್ತಂಬರಿ ಸೊಪ್ಪು ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿಯಂತೆ‌

ಚರ್ಮದ ಹೊಳಪನ್ನು ಹೆಚ್ಚಿಸುತ್ತದೆ:  ದಾಳಿಂಬೆಯಲ್ಲಿರುವ ವಯಸ್ಸಾಗುವಿಕೆಯನ್ನು ತಡೆಯುವ ಗುಣಗಳು ಚರ್ಮದ ಕೋಶಗಳನ್ನು ಸರಿಪಡಿಸಲು ಸಹಾಯ ಮಾಡುತ್ತದೆ, ಚರ್ಮದ ಹೊಳಪನ್ನು ಹೆಚ್ಚಿಸುತ್ತದೆ, ಸುಕ್ಕುಗಳನ್ನು ನಿವಾರಿಸುತ್ತದೆ.  ಮತ್ತು ಚರ್ಮವನ್ನು ಆರೋಗ್ಯಕರ, ತಾಜಾವಾಗಿ ಕಾಣುವಂತೆ ಮಾಡುತ್ತದೆ.

ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ: ದಾಳಿಂಬೆ ಸೇವನೆಯು ಇನ್ಸುಲಿನ್ ಸಂವೇದನೆಯನ್ನು ಹೆಚ್ಚಿಸುತ್ತದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಮಧುಮೇಹ ಇರುವವರಿಗೆ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ.

ಶಕ್ತಿಯನ್ನು ಒದಗಿಸುತ್ತದೆ: ದಾಳಿಂಬೆಗಳು ಅನೇಕ ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿವೆ. ಅವುಗಳು ಫ್ರಕ್ಟೋಸ್ ಮತ್ತು ಗ್ಲೂಕೋಸ್ ಅನ್ನು ಸಹ ಒಳಗೊಂಡಿರುತ್ತವೆ, ಇದು ತ್ವರಿತ ಶಕ್ತಿಯನ್ನು ನೀಡುತ್ತದೆ. ಆದ್ದರಿಂದ, ಪ್ರತಿದಿನ ಉಪಹಾರದ ಸಮಯದಲ್ಲಿ ದಾಳಿಂಬೆಯನ್ನು ಸೇವಿಸುವುದರಿಂದ ದಿನವಿಡೀ ಶಕ್ತಿಯನ್ನು ಕಾಪಾಡಿಕೊಳ್ಳಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶನಿಯ ನೇರ ದೃಷ್ಟಿಯಿಂದ 3 ರಾಶಿಗೆ ಅದ್ಭುತ ಲಾಭ, ಆದರೆ ಈ ರಾಶಿಗೆ ಸಹಿಸಿಕೊಳ್ಳಲಾಗದ ಸಂಕಷ್ಟ!

ಶನಿ ದೇವನು ಮೀನ ರಾಶಿಯಲ್ಲಿ ಸಂಚರಿಸುವಾಗ, ಅವನ ಸ್ಥಾನ ಮತ್ತು ದೃಷ್ಟಿಗಳು ದ್ವಾದಶ ರಾಶಿಗಳ ಮೇಲೆ ಹಾಗೂ ಜೀವನದ ವಿವಿಧ ಕ್ಷೇತ್ರಗಳ ಮೇಲೆ ಮಹತ್ವದ ಪ್ರಭಾವ ಬೀರುತ್ತವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶನಿಗೆ 3, 7, ಮತ್ತು 10ನೇ ದೃಷ್ಟಿಗಳಿವೆ.

​ಮೀನ ರಾಶಿಯಲ್ಲಿರುವ ಶನಿಯು ಈ ಕೆಳಗಿನ ರಾಶಿಗಳ ಮೇಲೆ ತನ್ನ ದೃಷ್ಟಿಯನ್ನು ಬೀರುತ್ತಾನೆ:

​ವೃಷಭ ರಾಶಿ :

ಇದು ಶನಿಯ ಮೈತ್ರಿ ರಾಶಿಯಾದರೂ, 3ನೇ ದೃಷ್ಟಿಯು ಶ್ರಮವನ್ನು ಸೂಚಿಸುತ್ತದೆ. ಈ ರಾಶಿಯವರಿಗೆ ಆರ್ಥಿಕ ಲಾಭಕ್ಕಾಗಿ ಹೆಚ್ಚಿನ ಓಡಾಟ ಮತ್ತು ಪರಿಶ್ರಮದ ಅಗತ್ಯವಿರುತ್ತದೆ.

​ಕನ್ಯಾ ರಾಶಿ :

ನೇರ ದೃಷ್ಟಿಯು ಕನ್ಯಾ ರಾಶಿಯ ಮೇಲೆ ಬೀಳುವುದರಿಂದ ವೈವಾಹಿಕ ಜೀವನ ಮತ್ತು ಪಾಲುದಾರಿಕೆಯಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ.

​ಧನು ರಾಶಿ :

ವೃತ್ತಿ ಜೀವನದ ಮೇಲೆ ಪ್ರಭಾವ ಬೀರುತ್ತದೆ. ಕೆಲಸದ ಸ್ಥಳದಲ್ಲಿ ಜವಾಬ್ದಾರಿಗಳು ಹೆಚ್ಚಾಗಲಿವೆ ಮತ್ತು ಶಿಸ್ತಿನಿಂದ ಕೆಲಸ ಮಾಡಿದರೆ ಮಾತ್ರ ಯಶಸ್ಸು ಸಿಗುತ್ತದೆ.

​ಶುಭ ಪ್ರಭಾವ

​ಶನಿಯು ಮೀನ ರಾಶಿಯಲ್ಲಿರುವುದರಿಂದ ಈ ಕೆಳಗಿನ ಕ್ಷೇತ್ರಗಳಿಗೆ ಮತ್ತು ರಾಶಿಗಳಿಗೆ ಅನುಕೂಲಕರ.

​ವೃತ್ತಿ ಕ್ಷೇತ್ರ:

ಅಧ್ಯಾತ್ಮ, ತತ್ವಶಾಸ್ತ್ರ, ವಿದೇಶಿ ವ್ಯವಹಾರಗಳು, ಜಲಮೂಲದ ಉದ್ಯಮಗಳು ಮತ್ತು ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಉತ್ತಮ ಫಲಿತಾಂಶಗಳು ಸಿಗಲಿವೆ.

​ಅಧ್ಯಾತ್ಮ:

ಮೀನವು ಮೋಕ್ಷದ ರಾಶಿಯಾದ್ದರಿಂದ, ಆಧ್ಯಾತ್ಮಿಕ ಚಿಂತನೆಯಲ್ಲಿರುವವರಿಗೆ ಶನಿಯು ಹೆಚ್ಚಿನ ಆಳ ಮತ್ತು ಗಾಂಭೀರ್ಯವನ್ನು ನೀಡುತ್ತಾನೆ.

ವೃಷಭ ಮತ್ತು ಮಕರ ರಾಶಿಯವರಿಗೆ ಶನಿಯ ಸಂಚಾರವು ಸ್ಥಿರತೆಯನ್ನು ತಂದುಕೊಡುವ ಸಾಧ್ಯತೆ ಇರುತ್ತದೆ.

​ಅಶುಭ ಪ್ರಭಾವಗಳು

​ಕೆಲವು ಸಂದರ್ಭಗಳಲ್ಲಿ ಶನಿಯು ಸವಾಲುಗಳನ್ನು ತರಬಹುದು.

​ಆರೋಗ್ಯ:

ಕಾಲುಗಳು, ನಿದ್ರಾಹೀನತೆ ಮತ್ತು ಮಾನಸಿಕ ಒತ್ತಡದ ಸಮಸ್ಯೆಗಳು ಹೆಚ್ಚಾಗಬಹುದು. ವಿಶೇಷವಾಗಿ ಮೀನ ರಾಶಿಯವರಿಗೆ ಏಳೂವರೆ ಶನಿಯ ಜನ್ಮ ಕಾಲವಿರುವುದರಿಂದ ಮಾನಸಿಕ ಕ್ಲೇಶವಿರಬಹುದು.

ಕುಂಭ, ಮೀನ ಮತ್ತು ಮೇಷ ರಾಶಿಯವರಿಗೆ ಏಳೂವರೆ ಶನಿಯ ಪ್ರಭಾವವಿರುತ್ತದೆ. ಇವರು ಆರ್ಥಿಕ ವ್ಯವಹಾರಗಳಲ್ಲಿ ಜಾಗರೂಕರಾಗಿರಬೇಕು. ಕನ್ಯಾ ರಾಶಿಯವರು ಸಂಬಂಧಗಳಲ್ಲಿ ತಾಳ್ಮೆ ವಹಿಸಬೇಕು.

​ಶನಿ ದೋಷಕ್ಕೆ ಪರಿಹಾರ

​ಶನಿಯ ಅಶುಭ ಪ್ರಭಾವವನ್ನು ಕಡಿಮೆ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಬಹುದು. ಶನಿವಾರದಂದು ಹನುಮಾನ್ ಚಾಲೀಸಾ ಪಠಿಸುವುದು ಹನುಮಂತನ ಆರಾಧನೆಯು ಶನಿ ದೋಷಕ್ಕೆ ಉತ್ತಮ ಪರಿಹಾರ. ಬಡವರಿಗೆ ಅಥವಾ ಕಷ್ಟದಲ್ಲಿರುವವರಿಗೆ ಕಪ್ಪು ಎಳ್ಳು, ಎಣ್ಣೆ ದಾನ ಮಾಡುವುದು.

– ಲೋಹಿತ ಹೆಬ್ಬಾರ್

Source link

ಕಾಮಕಾಂಡ ಪ್ರಕರಣ: ಮೂಡುಬಿದಿರೆ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್​​ಗೆ ಬಿಗ್ ಶಾಕ್

ಮಂಗಳೂರು, (ಮಾರ್ಚ್ 17): ಕೌಟುಂಬಿಕ ಕಲಹದ ವಿಚಾರಕ್ಕೆ ದೂರು ನೀಡಲು ಬಂದ ಮಹಿಳೆಯರನ್ನು ಅಸಭ್ಯವಾಗಿ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ (moodbidri inspector Sandesh) ವಿರುದ್ಧ ಈಗ ರಾಜ್ಯ ಮಹಿಳಾ ಆಯೋಗವು ಸಿಡಿದೆದ್ದಿದ್ದು, ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಅಲ್ಲದೇ ಈ ಪ್ರಕರಣ ಸಂಬಂಧ ವರದಿ ನೀಡುವಂತೆ ಮಂಗಳೂರ ನಗರ ಪೊಲೀಸ್ ಕಮಿಷನರ್​ಗೆ ಪತ್ರ ಬರೆದಿದೆ. ಇದರ ಬೆನ್ನಲ್ಲೇ ಇನ್ಸ್​ಪೆಕ್ಟರ್​​ ಸಂದೇಶನನ್ನು ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ. ಆಡಿಯೋ, ವಿಡೀಯೋದಲ್ಲಿ ಮಹಿಳೆಯರ ಜೊತೆ ಅನುಚಿತ ವರ್ತನೆಯ ಕಾರಣ ನೀಡಿ ಸಂದೇಶ ಅವರನ್ನ ಸಸ್ಪೆಂಡ್ ಮಾಡಲಾಗಿದೆ.

ಸಂತ್ರಸ್ತೆ ಮಹಿಳೆ ಆರೋಪ ಸಂಬಂಧ ಕೆಲ ಆಡಿಯೋ ವಿಡಿಯೋಗಳ ಬಯಲಿಗೆ ಬರುತ್ತಿದ್ದಂತೆಯೇ ಇನ್ಸ್​ಪೆಕ್ಟರ್​ ವಿರುದ್ಧದ ಪ್ರಕರಣದ ತನಿಖೆ ನಡೆಸಿ ವರದಿ ನೀಡುವಂತೆ ಎಸಿಪಿ ಶ್ರೀಕಾಂತ್‌ಗೆ ಜವಾಬ್ದಾರಿ ನೀಡಲಾಗಿತ್ತು. ಮತ್ತೊಂದೆಡೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಮಹಿಳೆಯರಿಗೆ ಕಿರುಕುಳ ಆರೋಪ ಸಂಬಂಧ ಶಾಸಕ ಉಮಾನಾಥ್ ಕೋಟ್ಯಾನ್ ಗೃಹ ಸಚಿವರನ್ನ ಭೇಟಿ ಮಾಡಿ ಮಾಡಿದ್ದು, ಸಂದೇಶ್ ಅವರನ್ನು ಅಮಾನತ್ತಿನಲ್ಲಿಟ್ಟು ತನಿಖೆ ಮಾಡುವಂತೆ ಮನವಿ ಮಾಡಿದ್ದರು. ಅಲ್ಲದೇ ಈ ಬಗ್ಗೆ ಮಹಿಳಾ ಆಯೋಗ ಸಹ ಸುಮಟೋ ಕೇಸ್ ದಾಖಲಿಸಿಕೊಂಡಿದ್ದು, ಪ್ರಕರಣದ ವರದಿ ನೀಡುವಂತೆ ಮಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿತ್ತು. ಈ ಎಲ್ಲಾ ಬೆಳವಣಿಗೆ ಬಳಿಕ ಇನ್ಸ್​ಪೆಕ್ಟರ್​ ಸಂದೇಶ ಅವರನ್ನು ಕೊನೆಗೂ ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ

ಎಸಿಪಿ ತನಿಖಾ ವರದಿಯ ಪ್ರಮುಖ ಅಂಶಗಳು

  • ಸುಮತಿ ನಾಯಕ್ ಅವರು ದೂರು ಹಾಗೂ ಮಾಧ್ಯಮ ಹೇಳಿಕೆ ನೀಡಿದ್ದಾರೆ. ಅವರ ಮತ್ತು ಅವರ ಸಹೋದರಿಯ ನಡುವೆ ಕುಟುಂಬ ಸಮಸ್ಯೆಗಳು ಇದ್ದು, ಸುಮತಿ ನಾಯಕ್ ವಿರುದ್ಧ ಎರಡು ಪ್ರಕರಣಗಳು ಮತ್ತು ಅವರ ಸಹೋದರಿಯ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಒಂದು ಪ್ರಕರಣ ತನಿಖೆಯಲ್ಲಿದ್ದು, ಉಳಿದವು ಹೈಕೋರ್ಟ್‌ನಲ್ಲಿ ಸ್ಥಗಿತಗೊಂಡಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯಬೇಕಿದೆ.
  • ಅವಿತಾ ಮಿನೇಜಸ್ ಅವರು ಇನ್ಸ್‌ಪೆಕ್ಟರ್ ವಿರುದ್ಧ ಮಾಧ್ಯಮದಲ್ಲಿ ಹೇಳಿಕೆ ನೀಡಿದ ಮತ್ತೊಬ್ಬ ಮಹಿಳೆ. ಅವರ ಪತಿಯ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಒಂದರಲ್ಲಿ ಅವರು ಖುಲಾಸೆಯಾಗಿದ್ದಾರೆ. ಒಂದು ಪ್ರಕರಣದಲ್ಲಿ, ಅವರು ಮತ್ತು ಅವರ ಪತಿ ಕಿಡ್ನಿ ಚಿಕಿತ್ಸೆಗೆ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪವಿದೆ. ಸಾಕ್ಷ್ಯ ಸಂಗ್ರಹದ ನಂತರ, ಇವರಿಬ್ಬರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಇವರ ಮೇಲೆ ಯಾವುದೇ ಕಿರುಕುಳದ ಸಾಕ್ಷ್ಯ ದೊರಕಿಲ್ಲ. ಅವರು ಇನ್ಸ್‌ಪೆಕ್ಟರ್ ಹಣ ಕೇಳಿದರು ಹಾಗೂ ಕಿರುಕುಳ ನೀಡಿದರು ಎಂದು ಹೇಳಿದ ಸ್ಥಳದಲ್ಲಿ ಸಿಸಿಟಿವಿ ಇದ್ದು, ಅಲ್ಲಿದ್ದ ಇಬ್ಬರು ಮಾಧ್ಯಮ ಪ್ರತಿನಿಧಿಗಳು ಮತ್ತು ಒಬ್ಬ ವಕೀಲರು ಇಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಹೇಳಿದ್ದಾರೆ.
  •  ಮಾಧ್ಯಮದಲ್ಲಿ ಹೇಳಿಕೆ ನೀಡಿದ ಮಹಿಳೆಯರು ಮತ್ತು ವಿಡಿಯೋ/ಆಡಿಯೋದಲ್ಲಿ ಕಾಣುವ ಮಹಿಳೆಯರು ಬೇರೆಬೇರೆ ವ್ಯಕ್ತಿಗಳಾಗಿದ್ದಾರೆ.
  • ಆದರೆ ವಿಡಿಯೋ ಮತ್ತು ಆಡಿಯೋದಲ್ಲಿ ಇನ್ಸ್‌ಪೆಕ್ಟರ್ ಅಸಭ್ಯ ವರ್ತನೆ ತೋರಿದಂತೆ ಹಾಗೂ ಫೋನ್‌ನಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ಮಾತನಾಡಿದಂತೆ ಕಾಣುತ್ತದೆ.
  •  ವಿಡಿಯೋ/ಆಡಿಯೋದಲ್ಲಿ ಕಾಣುವ ಇಬ್ಬರು ಮಹಿಳೆಯರು ಯಾವುದೇ ದೂರು ನೀಡಲು ನಿರಾಕರಿಸಿದ್ದಾರೆ. ಅವರಿಗೆ ನಂತರವೂ ಹೇಳಿಕೆ ನೀಡಬಹುದೆಂದು ತಿಳಿಸಲಾಗಿದೆ.
    ಇದರಿಂದ, ಆಡಿಯೋ ಮತ್ತು ವಿಡಿಯೋ ಆಧಾರದ ಮೇಲೆ ಇನ್ಸ್‌ಪೆಕ್ಟರ್ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಗೋಚರಿಸುತ್ತಿದ್ದು, ಅವರನ್ನು ತಾತ್ಕಾಲಿಕವಾಗಿ ಅಮಾನತು (suspension) ಮಾಡಲಾಗಿದೆ. ಹೆಚ್ಚಿನ ತನಿಖೆ ಮುಂದುವರಿಯಲಿದೆ.

ಸಂದೇಶ್ ವಿರುದ್ಧ ಸ್ವಯಂಪ್ರೇರಿತ ಕೇಸ್

ಇನ್ನು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಮಹಿಳಾ ಆಯೋಗ, ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ (ಸುಮಟೋ ಕೇಸ್) ದಾಖಲಿಸಿಕೊಂಡಿದೆ. ಅಲ್ಲದೇ ಈ ಪ್ರಕರಣ ಸಂಬಂಧ ತನಿಖೆ ನಡೆಸಿ 5 ದಿನದೊಳಗೆ ವರದಿ ನೀಡುವಂತೆ ಮಂಗಳೂರ ನಗರ ಪೊಲೀಸ್ ಕಮಿಷನರ್​ಗೆ ಪತ್ರ ಬರೆದಿದೆ.

ಗಂಭೀರ ಆರೋಪಗಳ ಸುರಿಮಳೆ

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಸಂತ್ರಸ್ತ ಮಹಿಳೆಯರು ಅತ್ಯಂತ ಭೀಕರ ಆರೋಪಗಳನ್ನು ಮಾಡಿದ್ದಾರೆ. ಕೌಟುಂಬಿಕ ಸಮಸ್ಯೆಗೆ ನ್ಯಾಯ ಕೇಳಲು ಹೋದರೆ, ಅದಕ್ಕೆ ಪ್ರತಿಯಾಗಿ ಲೈಂಗಿಕ ಸುಖಕ್ಕೆ ಬೇಡಿಕೆ ಇಡುತ್ತಿದ್ದರು ಎಂಬುದು ಪ್ರಮುಖ ಆರೋಪ. ಅಷ್ಟೇ ಅಲ್ಲದೆ, ಗಂಡನನ್ನು ಬಂಧಿಸಿ ಬಳಿಕ ಅವರನ್ನು ಬಿಡುಗಡೆ ಮಾಡಲು ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರು ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಸಂತ್ರಸ್ತೆಯ ಮಗನ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂಬ ದೂರು ಕೇಳಿಬಂದಿದೆ. ಈ ಪ್ರಕರಣವು ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದ್ದು, ಉನ್ನತ ಅಧಿಕಾರಿಗಳ ತನಿಖೆಯ ಬಳಿಕ ಸತ್ಯಾಸತ್ಯತೆ ಹೊರಬರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿಗೆ ದೇಶಾದ್ಯಂತ ವಿರೋಧ: ಹಿಂದಿ ವರ್ಷನ್ ಡಿಲೀಟ್

ಬಾಲಿವುಡ್ ನಟಿ ನೋರಾ ಫತೇಹಿ (Nora Fatehi) ಮತ್ತು ನಟ ಸಂಜಯ್ ದತ್ ಕಾಣಿಸಿಕೊಂಡಿರುವ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಭಾರಿ ವಿವಾದಕ್ಕೆ ಗುರಿಯಾಗಿದೆ. ಹಾಡಿನ ಸಾಹಿತ್ಯ ಮತ್ತು ದೃಶ್ಯಗಳು ಮಹಿಳೆಯರಿಗೆ ಅವಮಾನಕಾರಿಯಾಗಿವೆ ಎಂಬ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಹಿಂದಿ ವರ್ಷನ್ (Sarke Chunar Teri) ಹಾಡನ್ನು ಅಧಿಕೃತ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕಲಾಗಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿರುವ, ಮಂಗ್ಲಿ ಹಾಡಿರುವ ಈ ಹಾಡಿನ ಸಾಲುಗಳು ಭಾರಿ ಟೀಕೆಗೆ ಒಳಗಾಗಿವೆ. ಸಾಹಿತ್ಯದಲ್ಲಿ ಬಳಸಲಾದ ಪದಗಳು ಮಹಿಳೆಯರನ್ನು ಕೆಟ್ಟದಾಗಿ ಬಿಂಬಿಸುತ್ತವೆ ಎಂದು ಅನೇಕರು ದೂರಿದ್ದಾರೆ.

‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿನ ನೃತ್ಯ ಸಂಯೋಜನೆಯ ಬಗ್ಗೆಯೂ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೋರಾ ಫತೇಹಿ ಅವರು ಪದೇ ಪದೇ ಸೀರೆಯ ಸೆರಗನ್ನು ಕೆಳಗೆ ಹಾಕಿ ಮತ್ತೆ ಎತ್ತುವ ದೃಶ್ಯಗಳು ಅಸಭ್ಯವಾಗಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ಕೇಳಿಬಂದಿದೆ. ಈ ವಿವಾದ ಕೇವಲ ಸೋಷಿಯಲ್ ಮೀಡಿಯಾಗೆ ಸೀಮಿತವಾಗದೆ ಕಾನೂನು ಹಂತ ತಲುಪಿದೆ.

ವಕೀಲ ವಿನೀತ್ ಜಿಂದಾಲ್ ಅವರು ಸೆನ್ಸಾರ್ ಮಂಡಳಿ, ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ದೂರು ನೀಡಿದ್ದಾರೆ. ದೆಹಲಿ ಪೊಲೀಸರ ಸೈಬರ್ ಸೆಲ್‌ಗೆ ಪ್ರತ್ಯೇಕ ದೂರು ನೀಡಲಾಗಿದ್ದು, ಅಪ್ರಾಪ್ತ ವಯಸ್ಕರಿಗೂ ಈ ಹಾಡು ಲಭ್ಯವಿರುವುದರಿಂದ ಭಾರತೀಯ ನ್ಯಾಯ ಸಂಹಿತೆ ಮತ್ತು ಪೋಕ್ಸೋ ಕಾಯ್ದೆಯಡಿ ಕ್ರಮಕ್ಕೆ ಒತ್ತಾಯಿಸಲಾಗಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಈ ಬಗ್ಗೆ ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದೆ.

ಗಾಯಕ ಅರ್ಮಾನ್ ಮಲಿಕ್, ನಟಿ ಕಂಗನಾ ರಣಾವತ್ ಮತ್ತು ಕ್ರಿಕೆಟಿಗ ಹರ್ಭಜನ್ ಸಿಂಗ್ ಸೇರಿದಂತೆ ಹಲವು ಗಣ್ಯರು ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿನ ಸಾಹಿತ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತೀವ್ರ ವಿರೋಧದ ಹಿನ್ನೆಲೆಯಲ್ಲಿ ಮಾರ್ಚ್ 17ರಂದು ಹಾಡಿನ ಹಿಂದಿ ಆವೃತ್ತಿಯನ್ನು ಯೂಟ್ಯೂಬ್‌ನಿಂದ ಡಿಲೀಟ್ ಮಾಡಲಾಗಿದೆ.

ಇದನ್ನೂ ಓದಿ: ಪ್ರೇಮ್ ಬರೆದ ‘ಕೆಡಿ’ ಹಾಡಿನ ಅಶ್ಲೀಲ ಸಾಹಿತ್ಯಕ್ಕೆ ಜನರ ಆಕ್ರೋಶ; ಸೆಲೆಬ್ರಿಟಿಗಳೂ ಗರಂ

ಹಿಂದಿ ವರ್ಷನ್ ಡಿಲೀಟ್ ಆಗಿದ್ದರೂ ಕೂಡ ಕನ್ನಡ ಸೇರಿದಂತೆ ಇತರ ದಕ್ಷಿಣ ಭಾರತದ ಭಾಷೆಗಳಲ್ಲಿನ ಈ ಹಾಡುಗಳು ಇನ್ನೂ ಲಭ್ಯವಿದೆ. ಅವುಗಳನ್ನೂ ಯಾವಾಗ ತೆಗೆದುಹಾಕಲಾಗುತ್ತದೆ ಎಂಬ ಕುತೂಹಲ ಮೂಡಿದೆ. ಹಿಂದಿ ವರ್ಷನ್ ಬಗ್ಗೆ ಪ್ರತಿಕ್ರಿಯಿಸಿರುವ ಗೀತರಚನೆಕಾರ ರಕೀಬ್ ಆಲಂ, ‘ನಾನು ಕೇವಲ ಮೂಲ ಕನ್ನಡ ಸಾಹಿತ್ಯವನ್ನು ಹಿಂದಿಗೆ ಅನುವಾದ ಮಾಡಿದ್ದೇನೆ ಅಷ್ಟೇ, ಇದರಲ್ಲಿ ನನ್ನದೇನೂ ತಪ್ಪಿಲ್ಲ’ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

PSL 2026: ‘ಅಲ್ಲಿಗೆ ಹೋಗಲೇಬೇಡಿ’; ಪಾಕಿಸ್ತಾನ ಸೂಪರ್ ಲೀಗ್ ನಡೆಯುವುದು ಅನುಮಾನ

ಭಾರತದಲ್ಲಿ ನಡೆಯುವ ಐಪಿಎಲ್​ಗೆ (IPL) ಸೆಡ್ಡು ಹೊಡೆಯುವ ಸಲುವಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪಾಕಿಸ್ತಾನ ಸೂಪರ್ ಲೀಗ್ (PSL) ಅನ್ನು ಐಪಿಎಲ್ ಆರಂಭವಾಗುವ ಸಮಯದಲ್ಲೇ ನಡೆಸಲು ಮುಂದಾಗಿದೆ. ಅದರಂತೆ 2026 ರ ಐಪಿಎಲ್ ಮಾರ್ಚ್​ 28 ರಿಂದ ಆರಂಭವಾದರೆ, ಅದಕ್ಕೂ ಎರಡು ದಿನ ಮೊದಲು ಅಂದರೆ ಮಾರ್ಚ್​ 26 ರಂದು ಪಾಕಿಸ್ತಾನ ಸೂಪರ್ ಲೀಗ್ ಆರಂಭಿಸಲು ಪಿಸಿಬಿ ತೀರ್ಮಾನಿಸಿತ್ತು. ಆದರೆ ಈ ಲೀಗ್ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಇದಕ್ಕೆ ಕಾರಣ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ನಿರಂತರವಾಗಿ ನಡೆಯುತ್ತಿರುವ ಸಂಘರ್ಷ.

ವಾಸ್ತವವಾಗಿ ಮಾರ್ಚ್ 16 ರಂದು ಪಾಕಿಸ್ತಾನ, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ವೈಮಾನಿಕ ದಾಳಿ ನಡೆಸಿ 400 ಕ್ಕೂ ಹೆಚ್ಚು ಜನರನ್ನು ಕೊಂದಿದೆ ಎಂದು ವರದಿಯಾಗಿದೆ. ಪಾಕಿಸ್ತಾನ, ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿರುವ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ. ಈ ದಾಳಿಯು ಎರಡು ದೇಶಗಳ ನಡುವೆ ಯುದ್ಧದಂತಹ ಪರಿಸ್ಥಿತಿಯನ್ನು ಸೃಷ್ಟಿಸಿದೆ. ಹೀಗಾಗಿ ಆಸ್ಟ್ರೇಲಿಯಾ ಸರ್ಕಾರ ತನ್ನ ನಾಗರಿಕರು ಮತ್ತು ಆಟಗಾರರಿಗೆ ಪಾಕಿಸ್ತಾನದ ಪೇಶಾವರಕ್ಕೆ ಪ್ರಯಾಣಿಸದಂತೆ ಸೂಚಿಸಿದೆ ಎಂದು ವರದಿಯಾಗಿದೆ.

ಪಿಎಸ್​ಎಲ್ ನಡೆಯುವುದು ಅನುಮಾನ

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಈ ಸಂಘರ್ಷ, ಪಿಎಸ್‌ಎಲ್ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಏಕೆಂದರೆ ಪಾಕಿಸ್ತಾನದ ಮೇಲೆ ಅಫ್ಘಾನಿಸ್ತಾನ ಪ್ರತಿಕಾರ ತೀರಿಸಿಕೊಳ್ಳದೆ ಬಿಡದು. ಆದ್ದರಿಂದ ಪಾಕಿಸ್ತಾನ ಸೂಪರ್ ಲೀಗ್ ನಡೆಯುವ ನಗರಗಳ ಮೇಲೆ ಅಫ್ಘಾನಿಸ್ತಾನ ದಾಳಿ ಮಾಡುವ ಸಾಧ್ಯತೆಗಳು ಹೆಚ್ಚಿವೆ. ಇದನ್ನು ಮನಗಂಡಿರುವ ಆಸ್ಟ್ರೇಲಿಯಾ ಸರ್ಕಾರ, ಪಿಎಸ್‌ಎಲ್‌ನಲ್ಲಿ ಆಡುವ ಆಸ್ಟ್ರೇಲಿಯಾ ಆಟಗಾರರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಲು ಅನುಮತಿ ನೀಡಿದೆಯಾದರೂ, ದಾಳಿ ನಡೆಯಬಹುದಾಂತಹ ಸ್ಥಳಗಳಿಗೆ ಹೋಗದಂತೆ ಎಚ್ಚರಿಕೆ ನೀಡಿದೆ.

ಪಿಎಸ್‌ಎಲ್‌ನಲ್ಲಿ ಆಸ್ಟ್ರೇಲಿಯಾದ ಅನೇಕ ಪ್ರಮುಖ ಆಟಗಾರರು ಆಡಲಿದ್ದಾರೆ. ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್‌ರಂತಹ ಆಟಗಾರರು ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಭಾಗವಹಿಸುತ್ತಿದ್ದಾರೆ. ಜೊತೆಗೆ ತರಬೇತಿ ಮತ್ತು ಸಹಾಯಕ ಸಿಬ್ಬಂದಿಯಲ್ಲಿ ಹಲವಾರು ಆಸ್ಟ್ರೇಲಿಯಾದ ನಾಗರಿಕರು ಇದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ಸರ್ಕಾರದ ಎಚ್ಚರಿಕೆಯನ್ನು ಅನುಸರಿಸಿ ಇವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಹೈದರಾಬಾದ್ ತಂಡಕ್ಕೆ ಮಾರ್ನಸ್ ಲಬುಶೇನ್ ನಾಯಕ

ಪಂದ್ಯಗಳು ನಡೆಯುವ ನಗರಗಳು ಟಾರ್ಗೆಟ್

ಮೇಲೆ ಹೇಳಿದಂತೆ ಪ್ರತೀಕಾರಕ್ಕಾಗಿ ಕಾಯುತ್ತಿರುವ ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲಿ ವಿದೇಶಿಯರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳನ್ನು ಗುರಿಯಾಗಿಸಿ ದಾಳಿ ನಡೆಸಬಹುದು. ಅದರಲ್ಲೂ ಪೇಶಾವರ್ ಮತ್ತು ರಾವಲ್ಪಿಂಡಿ ನಗರಗಳು ಅಫ್ಘಾನಿಸ್ತಾನದ ಟಾರ್ಗೆಟ್ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವಾಗಿ ರಾವಲ್ಪಿಂಡಿಯಲ್ಲಿ 11 ಪಿಎಸ್‌ಎಲ್‌ ಪಂದ್ಯಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಹೀಗಾಗಿ ಆಸ್ಟ್ರೇಲಿಯಾದ ಆಟಗಾರರು ಇದ್ದಕ್ಕಿದ್ದಂತೆ ಪಿಎಸ್‌ಎಲ್‌ನಿಂದ ಹಿಂದೆ ಸರಿದರೆ, ಪಿಎಸ್‌ಎಲ್ ಅನ್ನು ಮುಂದೂಡಬಹುದು, ಏಕೆಂದರೆ ಅನೇಕ ತಂಡಗಳು ಪ್ರಮುಖ ಆಸ್ಟ್ರೇಲಿಯಾದ ಆಟಗಾರರನ್ನು ಹೊಂದಿವೆ. ಹಲವಾರು ಆಟಗಾರರು ಈಗಾಗಲೇ ಪಿಎಸ್‌ಎಲ್‌ನಿಂದ ಹಿಂದೆ ಸರಿದಿದ್ದಾರೆ. ಐಪಿಎಲ್‌ನಲ್ಲಿ ಆಡಲು ಹಲವಾರು ಆಟಗಾರರು ಪಿಎಸ್‌ಎಲ್ ಅನ್ನು ತೊರೆದಿದ್ದಾರೆ. ಒಂದು ವೇಳೆ ಪಿಎಸ್‌ಎಲ್ ರದ್ದಾದರೆ ಅಥವಾ ಮುಂದೂಡಿದರೆ, ಪಿಸಿಬಿ ಕೋಟ್ಯಾಂತರ ರೂಪಾಯಿಗಳ ನಷ್ಟ ಅನುಭವಿಸುವುದು ಖಚಿತ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

PSL 2026: ‘ಅಲ್ಲಿಗೆ ಹೋಗಲೇಬೇಡಿ’; ಪಾಕಿಸ್ತಾನ ಸೂಪರ್ ಲೀಗ್ ನಡೆಯುವುದು ಅನುಮಾನ

ಭಾರತದಲ್ಲಿ ನಡೆಯುವ ಐಪಿಎಲ್​ಗೆ (IPL) ಸೆಡ್ಡು ಹೊಡೆಯುವ ಸಲುವಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪಾಕಿಸ್ತಾನ ಸೂಪರ್ ಲೀಗ್ (PSL) ಅನ್ನು ಐಪಿಎಲ್ ಆರಂಭವಾಗುವ ಸಮಯದಲ್ಲೇ ನಡೆಸಲು ಮುಂದಾಗಿದೆ. ಅದರಂತೆ 2026 ರ ಐಪಿಎಲ್ ಮಾರ್ಚ್​ 28 ರಿಂದ ಆರಂಭವಾದರೆ, ಅದಕ್ಕೂ ಎರಡು ದಿನ ಮೊದಲು ಅಂದರೆ ಮಾರ್ಚ್​ 26 ರಂದು ಪಾಕಿಸ್ತಾನ ಸೂಪರ್ ಲೀಗ್ ಆರಂಭಿಸಲು ಪಿಸಿಬಿ ತೀರ್ಮಾನಿಸಿತ್ತು. ಆದರೆ ಈ ಲೀಗ್ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಇದಕ್ಕೆ ಕಾರಣ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ನಿರಂತರವಾಗಿ ನಡೆಯುತ್ತಿರುವ ಸಂಘರ್ಷ.

ವಾಸ್ತವವಾಗಿ ಮಾರ್ಚ್ 16 ರಂದು ಪಾಕಿಸ್ತಾನ, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ವೈಮಾನಿಕ ದಾಳಿ ನಡೆಸಿ 400 ಕ್ಕೂ ಹೆಚ್ಚು ಜನರನ್ನು ಕೊಂದಿದೆ ಎಂದು ವರದಿಯಾಗಿದೆ. ಪಾಕಿಸ್ತಾನ, ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿರುವ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ. ಈ ದಾಳಿಯು ಎರಡು ದೇಶಗಳ ನಡುವೆ ಯುದ್ಧದಂತಹ ಪರಿಸ್ಥಿತಿಯನ್ನು ಸೃಷ್ಟಿಸಿದೆ. ಹೀಗಾಗಿ ಆಸ್ಟ್ರೇಲಿಯಾ ಸರ್ಕಾರ ತನ್ನ ನಾಗರಿಕರು ಮತ್ತು ಆಟಗಾರರಿಗೆ ಪಾಕಿಸ್ತಾನದ ಪೇಶಾವರಕ್ಕೆ ಪ್ರಯಾಣಿಸದಂತೆ ಸೂಚಿಸಿದೆ ಎಂದು ವರದಿಯಾಗಿದೆ.

ಪಿಎಸ್​ಎಲ್ ನಡೆಯುವುದು ಅನುಮಾನ

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಈ ಸಂಘರ್ಷ, ಪಿಎಸ್‌ಎಲ್ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಏಕೆಂದರೆ ಪಾಕಿಸ್ತಾನದ ಮೇಲೆ ಅಫ್ಘಾನಿಸ್ತಾನ ಪ್ರತಿಕಾರ ತೀರಿಸಿಕೊಳ್ಳದೆ ಬಿಡದು. ಆದ್ದರಿಂದ ಪಾಕಿಸ್ತಾನ ಸೂಪರ್ ಲೀಗ್ ನಡೆಯುವ ನಗರಗಳ ಮೇಲೆ ಅಫ್ಘಾನಿಸ್ತಾನ ದಾಳಿ ಮಾಡುವ ಸಾಧ್ಯತೆಗಳು ಹೆಚ್ಚಿವೆ. ಇದನ್ನು ಮನಗಂಡಿರುವ ಆಸ್ಟ್ರೇಲಿಯಾ ಸರ್ಕಾರ, ಪಿಎಸ್‌ಎಲ್‌ನಲ್ಲಿ ಆಡುವ ಆಸ್ಟ್ರೇಲಿಯಾ ಆಟಗಾರರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಲು ಅನುಮತಿ ನೀಡಿದೆಯಾದರೂ, ದಾಳಿ ನಡೆಯಬಹುದಾಂತಹ ಸ್ಥಳಗಳಿಗೆ ಹೋಗದಂತೆ ಎಚ್ಚರಿಕೆ ನೀಡಿದೆ.

ಪಿಎಸ್‌ಎಲ್‌ನಲ್ಲಿ ಆಸ್ಟ್ರೇಲಿಯಾದ ಅನೇಕ ಪ್ರಮುಖ ಆಟಗಾರರು ಆಡಲಿದ್ದಾರೆ. ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್‌ರಂತಹ ಆಟಗಾರರು ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಭಾಗವಹಿಸುತ್ತಿದ್ದಾರೆ. ಜೊತೆಗೆ ತರಬೇತಿ ಮತ್ತು ಸಹಾಯಕ ಸಿಬ್ಬಂದಿಯಲ್ಲಿ ಹಲವಾರು ಆಸ್ಟ್ರೇಲಿಯಾದ ನಾಗರಿಕರು ಇದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ಸರ್ಕಾರದ ಎಚ್ಚರಿಕೆಯನ್ನು ಅನುಸರಿಸಿ ಇವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಪಂದ್ಯಗಳು ನಡೆಯುವ ನಗರಗಳು ಟಾರ್ಗೆಟ್

ಮೇಲೆ ಹೇಳಿದಂತೆ ಪ್ರತೀಕಾರಕ್ಕಾಗಿ ಕಾಯುತ್ತಿರುವ ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲಿ ವಿದೇಶಿಯರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳನ್ನು ಗುರಿಯಾಗಿಸಿ ದಾಳಿ ನಡೆಸಬಹುದು. ಅದರಲ್ಲೂ ಪೇಶಾವರ್ ಮತ್ತು ರಾವಲ್ಪಿಂಡಿ ನಗರಗಳು ಅಫ್ಘಾನಿಸ್ತಾನದ ಟಾರ್ಗೆಟ್ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವಾಗಿ ರಾವಲ್ಪಿಂಡಿಯಲ್ಲಿ 11 ಪಿಎಸ್‌ಎಲ್‌ ಪಂದ್ಯಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಹೀಗಾಗಿ ಆಸ್ಟ್ರೇಲಿಯಾದ ಆಟಗಾರರು ಇದ್ದಕ್ಕಿದ್ದಂತೆ ಪಿಎಸ್‌ಎಲ್‌ನಿಂದ ಹಿಂದೆ ಸರಿದರೆ, ಪಿಎಸ್‌ಎಲ್ ಅನ್ನು ಮುಂದೂಡಬಹುದು, ಏಕೆಂದರೆ ಅನೇಕ ತಂಡಗಳು ಪ್ರಮುಖ ಆಸ್ಟ್ರೇಲಿಯಾದ ಆಟಗಾರರನ್ನು ಹೊಂದಿವೆ. ಹಲವಾರು ಆಟಗಾರರು ಈಗಾಗಲೇ ಪಿಎಸ್‌ಎಲ್‌ನಿಂದ ಹಿಂದೆ ಸರಿದಿದ್ದಾರೆ. ಐಪಿಎಲ್‌ನಲ್ಲಿ ಆಡಲು ಹಲವಾರು ಆಟಗಾರರು ಪಿಎಸ್‌ಎಲ್ ಅನ್ನು ತೊರೆದಿದ್ದಾರೆ. ಒಂದು ವೇಳೆ ಪಿಎಸ್‌ಎಲ್ ರದ್ದಾದರೆ ಅಥವಾ ಮುಂದೂಡಿದರೆ, ಪಿಸಿಬಿ ಕೋಟ್ಯಾಂತರ ರೂಪಾಯಿಗಳ ನಷ್ಟ ಅನುಭವಿಸುವುದು ಖಚಿತ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

3 ತಿಂಗಳ ಮೇಲಿನ ಮಗುವನ್ನು ದತ್ತು ಪಡೆದ ತಾಯಂದಿರಿಗೂ ಹೆರಿಗೆ ರಜೆ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ, ಮಾರ್ಚ್ 17: ದತ್ತು ಪಡೆಯುವ ತಾಯಂದಿರಿಗೆ ಹೆರಿಗೆ ರಜೆ ನೀಡುವ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ಐತಿಹಾಸಿಕ ತೀರ್ಪು ನೀಡಿದೆ. 3 ತಿಂಗಳಿಗಿಂತ ಹೆಚ್ಚಿನ ವಯಸ್ಸಿನ ಮಗುವನ್ನು ದತ್ತು ತೆಗೆದುಕೊಳ್ಳುವವರಿಗೂ ಪೂರ್ಣ ಹೆರಿಗೆ ರಜೆ ಸಿಗಲಿದೆ. ಇದನ್ನು ಮಾನವ ಹಕ್ಕು ಎಂದು ಕರೆದ ಸುಪ್ರೀಂ ಕೋರ್ಟ್ ದತ್ತು ಪಡೆದ ಮಗು ಆ ತಾಯಿ ಹೆತ್ತ ಮಗುವಿಗಿಂತ ಭಿನ್ನವಾಗಿಲ್ಲ. ದತ್ತು ಪಡೆದ ಮಗು ಕೂಡ ಆ ಮಹಿಳೆಯ ಮಗುವಿನಂತೆಯೇ ಎಂದು ಹೇಳಿದೆ.

ದತ್ತು ಪಡೆದ ಮಗುವಿನ ವಯಸ್ಸನ್ನು ಲೆಕ್ಕಿಸದೆ ದತ್ತು ಪಡೆದ ತಾಯಿಗೆ 12 ವಾರಗಳ ಹೆರಿಗೆ ರಜೆಗೆ ಅರ್ಹತೆ ಇರಬೇಕು ಎಂದು ನ್ಯಾಯಮೂರ್ತಿ ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಮಹಾದೇವನ್ ಅವರ ಪೀಠ ಸ್ಪಷ್ಟಪಡಿಸಿದೆ. ದತ್ತು ಪಡೆದ ತಾಯಂದಿರಿಗೆ ಮೂರು ತಿಂಗಳೊಳಗಿನ ಮಕ್ಕಳನ್ನು ದತ್ತು ತೆಗೆದುಕೊಳ್ಳುವವರಿಗೆ ಮಾತ್ರ ಹೆರಿಗೆ ರಜೆಯನ್ನು ಸೀಮಿತಗೊಳಿಸುವ ಕಾನೂನು ನಿಬಂಧನೆಯನ್ನು ಸುಪ್ರೀಂ ಕೋರ್ಟ್ ಅಸಂವಿಧಾನಿಕ ಎಂದು ಘೋಷಿಸಿದೆ. ಮಗುವಿನ ವಯಸ್ಸನ್ನು ಲೆಕ್ಕಿಸದೆ, ಎಲ್ಲಾ ದತ್ತು ಪಡೆದ ತಾಯಂದಿರು ದತ್ತು ಪಡೆದ ದಿನಾಂಕದಿಂದ 12 ವಾರಗಳ ರಜೆಗೆ ಅರ್ಹರಾಗಿರುತ್ತಾರೆ. ಈ ಸಂದರ್ಭದಲ್ಲಿ ಇಬ್ಬರಿಗೂ ಬಾಂಧವ್ಯ, ಆರೈಕೆ ಮತ್ತು ಹೊಂದಾಣಿಕೆಗೆ ಸಮಯ ಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಇದನ್ನೂ ಓದಿ: NCERT ಪುಸ್ತಕ ವಿವಾದ; ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಅಧ್ಯಾಯ ಬರೆದ ಲೇಖಕರಿಗೆ ಸುಪ್ರೀಂ ಕೋರ್ಟ್ ನಿಷೇಧ

ಸುಪ್ರೀಂ ಕೋರ್ಟ್‌ನ ಈ ತೀರ್ಪಿನ ಮೊದಲು ಮಗು ಮೂರು ತಿಂಗಳಿಗಿಂತ ದೊಡ್ಡದಾಗಿದ್ದರೆ ದತ್ತು ಪಡೆದ ತಾಯಿಗೆ ಹೆರಿಗೆ ರಜೆಯ ಸೌಲಭ್ಯ ದೊರೆಯುವುದಿಲ್ಲ ಎಂಬ ನಿಯಮವಿತ್ತು. ಈಗ ಮಗುವಿನ ವಯಸ್ಸಿನ ಮಿತಿಯನ್ನು ತೆರವುಗೊಳಿಸಿರುವ ಸುಪ್ರೀಂ ಕೋರ್ಟ್​ ಯಾವುದೇ ವಯೋಮಾನದ ಮಗುವನ್ನು ದತ್ತು ಪಡೆದ ಮಹಿಳೆಯರಿಗೆ ಹೆರಿಗೆ ರಜೆ ನಿರಾಕರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

ಹಾಗೇ, ಸುಪ್ರೀಂ ಕೋರ್ಟ್ ಪಿತೃತ್ವ ರಜೆಯ ವಿಷಯವನ್ನು ಆಯಾ ಸರ್ಕಾರಕ್ಕೆ ಬಿಡಲಾಗಿದೆ. ತನ್ನ ತೀರ್ಪಿನಲ್ಲಿ ಪಿತೃತ್ವ ರಜೆಗಾಗಿ ಹೊಸ ನಿಯಮಗಳು ಮತ್ತು ಮಾಡಬೇಕಾದ ಯಾವುದೇ ಬದಲಾವಣೆಗಳನ್ನು ಸರ್ಕಾರ ನಿರ್ಧರಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link