All posts by nagaraj11081993

Travis Head: ನಾನು ಮುಂದೆ ಏನು ಮಾಡ್ತೇನೆ ಎಂಬುದು ಊಹಿಸಲು ಸಾಧ್ಯವಿಲ್ಲ! – Kannada News | Travis Head Reacts After Virat Kohli’s Handshake Refusal

IPL 2026: ಐಪಿಎಲ್ ಪಂದ್ಯವೊಂದರಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ನಡುವೆ ನಡೆದ ಆನ್‌-ಫೀಲ್ಡ್ ಜಟಾಪಟಿ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಮೈದಾನದಲ್ಲಿ ನಡೆದಿದ್ದೇನು?

  • ವಿರಾಟ್ ಕೊಹ್ಲಿಯ ಸಂಭ್ರಮ: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಟ್ರಾವಿಸ್ ಹೆಡ್ (26) ರಾಸಿಖ್ ಸಲಾಮ್  ಅವರ ಯಾರ್ಕರ್ ಎಸೆತಕ್ಕೆ ಕ್ಲೀನ್ ಬೌಲ್ಡ್ ಆಗಿದ್ದರು. ಇತ್ತ ಔಟಾಗಿ ಹೊರ ನಡೆಯುತ್ತಿದ್ದ ಹೆಡ್ ಅವರ ಮುಂದೆ ಆಕ್ರೋಶಭರಿತರಾಗಿ ವಿರಾಟ್ ಕೊಹ್ಲಿ ಸಂಭ್ರಮಿಸಿದ್ದರು. ಇದಾಗ್ಯೂ ಟ್ರಾವಿಸ್ ಹೆಡ್ ಯಾವುದೇ ತಿರುಗೇಟು ನೀಡಿರಲಿಲ್ಲ.
  • ಹೆಡ್ ಸವಾಲು: 256 ರನ್​ಗಳ ಕಠಿಣ ಗುರಿ ಬೆನ್ನತ್ತಲು ಬಂದ ವಿರಾಟ್ ಕೊಹ್ಲಿಗೆ ಆಕ್ರಮಣಕಾರಿಯಾಗಿ ಆಡುವಂತೆ ಟ್ರಾವಿಸ್ ಹೆಡ್ ಸವಾಲು ಹಾಕಿದ್ದಾರೆ. ಅಂದರೆ ಈ ಪಂದ್ಯದಲ್ಲಿ ಕೊಹ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಆರಂಭಿಸಿದ್ದರು. ಈ ವೇಳೆ ಬಿಗ್ ಶಾಟ್ ಆಡು ನೋಡೋಣ ಎಂದು ಹೆಡ್ ಕೆಣಕಿದ್ದಾರೆ.
  • ಕೊಹ್ಲಿ ತಿರುಗೇಟು: ಟ್ರಾವಿಸ್ ಹೆಡ್ ಸವಾಲಿಗೆ ತಿರುಗೇಟು ನೀಡಿದ ವಿರಾಟ್ ಕೊಹ್ಲಿ, “ಈಗ ನೀನು ಇಂಪ್ಯಾಕ್ಟ್ ಸಬ್‌ ಆಟಗಾರ ಅಲ್ಲ, ಬಂದು ಎರಡು ಓವರ್ ಬೌಲಿಂಗ್ ಮಾಡು” ಎಂದು ವ್ಯಂಗ್ಯವಾಡಿದ್ದಾರೆ.
  • ಹೆಡ್ ಕಿಚಾಯಿಸುವಿಕೆ: ಈ ಮಾತಿನ ಚಕಮಕಿ ಮುಕ್ತಾಯದ ಬೆನ್ನಲ್ಲೇ ವಿರಾಟ್ ಕೊಹ್ಲಿ(15) ಔಟ್ ಆಗಿದ್ದಾರೆ. ಇತ್ತ ಕೊಹ್ಲಿ ಔಟಾಗಿ ಪೆವಿಲಿಯನ್‌ಗೆ ಮರಳುವಾಗ ಹೆಡ್, “ಫ್ರೆಂಡ್, ನಾನು ಬೌಲಿಂಗ್ ಮಾಡಲು ಬರುವ ಮುನ್ನವೇ ನೀನು ಔಟ್ ಆಗಿ ಹೋದೆ!” ಎಂದು ಕಿಚಾಯಿಸಿದ್ದಾರೆ.
  • ಹಸ್ತಲಾಘವ ನಿರಾಕರಣೆ: ಈ ಜಟಾಪಟಿ ಮತ್ತು ಪಂದ್ಯದಲ್ಲಿ ತಂಡದ ಸೋಲಿನ ನಿರಾಸೆಯಿಂದ ಕೋಪಗೊಂಡ ಕೊಹ್ಲಿ, ಪಂದ್ಯ ಮುಗಿದ ನಂತರ ಸಾಂಪ್ರದಾಯಿಕ ಹಸ್ತಲಾಘವದ ವೇಳೆ ಟ್ರಾವಿಸ್ ಹೆಡ್‌ಗೆ ಶೇಕ್ ಹ್ಯಾಂಡ್ ನೀಡದೇ ಮೈದಾನದಿಂದ ಹೊರನಡೆದಿದ್ದರು.

ಈ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗಲೇ ಟ್ರಾವಿಸ್ ಹೆಡ್ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದಾರೆ. ಅದು ಕೂಡ ತಾನು ಬೌಲಿಂಗ್ ಮಾಡಿದ ಫೋಟೋದೊಂದಿಗೆ ಎಂಬುದು ವಿಶೇಷ.

ಈ ಮ್ಯಾಚ್​ನಲ್ಲಿ ಟ್ರಾವಿಸ್ ಹೆಡ್ ಒಂದು ಓವರ್​ ಎಸೆದಿದ್ದರು. ಅಲ್ಲದೆ ಕೇವಲ 7 ರನ್ ನೀಡಿ ರಜತ್ ಪಾಟಿದಾರ್ ವಿಕೆಟ್ ಅನ್ನು ಪಡೆದಿದ್ದರು. ಇದೇ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಹೆಡ್ “Keep the body guessing” ಎಂಬ ಕ್ಯಾಪ್ಷನ್ ಹಂಚಿಕೊಂಡಿದ್ದಾರೆ.

ಎದುರಾಳಿ ಆಟಗಾರ ಅಥವಾ ಬ್ಯಾಟರ್ ಮುಂದಿನ ನಡೆ ಏನು ಎಂಬುದನ್ನು ಊಹಿಸಲು ಸಾಧ್ಯವಾಗದಂತೆ ಗೊಂದಲದಲ್ಲಿ ಇಡುವುದನ್ನು ಈ ವಾಕ್ಯ ಸೂಚಿಸುತ್ತದೆ.

ವಿರಾಟ್ ಕೊಹ್ಲಿ ಅವರು ಹೆಡ್‌ಗೆ “ಬಂದು ಬೌಲಿಂಗ್ ಮಾಡು” ಎಂದು ಸವಾಲು ಹಾಕಿದ್ದರು. ಆದರೆ, ಬ್ಯಾಟರ್ ಆಗಿರುವ ಹೆಡ್ ಹಠಾತ್ ಆಗಿ ಬೌಲಿಂಗ್ ಮಾಡಿ ವಿಕೆಟ್ ಪಡೆದರು.

ಅಂದರೆ, “ನಾನು ಮುಂದೆ ಏನು ಮಾಡುತ್ತೇನೆ ಎಂದು ಯಾರೂ ಊಹಿಸಲು ಸಾಧ್ಯವಿಲ್ಲ, ಎಲ್ಲರನ್ನೂ ನಾನು ಗೊಂದಲದಲ್ಲಿ ಇಡುತ್ತೇನೆ” ಎಂಬ ಮಾರ್ಮಿಕ ಅರ್ಥದಲ್ಲಿ ಟ್ರಾವಿಸ್ ಹೆಡ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಮೂಲಕ ಬೌಲಿಂಗ್ ಮಾಡಿ ತೋರಿಸು ಎಂದ ಕೊಹ್ಲಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಗೆದ್ದು ಬೀಗಿದ ಎಸ್​ಆರ್​ಹೆಚ್​:

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 255 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 200 ರನ್​ ಕಲೆಹಾಕಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಎಸ್​ಆರ್​ಹೆಚ್​ 55 ರನ್​ಗಳ ಭರ್ಜರಿ ಜಯ ಸಾಧಿಸಿದೆ.

Published On – 2:04 pm, Sat, 23 May 26

Source link

TV9 Kannada News Live: ಹೆಲಿಕಾಪ್ಟರ್ ಪತನದಲ್ಲಿ ಬದುಕುಳಿದ ಸೈನಿಕರ ಸೆಲ್ಫಿ, ಬೇಗ ಬರಲಿದೆ ರಾಮಾಯಣ ಸಿನಿಮಾ, ಮಧ್ಯಾಹ್ನದವರೆಗಿನ ಪ್ರಮುಖ ಸುದ್ದಿಗಳು – Kannada News | From Army Chopper Escape to Mass Job Offers and Ramayana Buzz: Today’s Top Stories

ನವದೆಹಲಿ, ಮೇ 23: ಲಡಾಖ್‌ನ ಲೇಹ್ ಬಳಿಯ ಪರ್ವತ ಪ್ರದೇಶವಾದ ಟ್ಯಾಂಗ್ಸ್ಟೆಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಅದರಲ್ಲಿದ್ದ ಮೂವರು ಹಿರಿಯ ಸೇನಾ ಅಧಿಕಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೇ 20 ರಂದು ನಡೆದ ಈ ಘಟನೆಯ ವಿವರಗಳನ್ನು ಸೇನಾ ಅಧಿಕಾರಿಗಳು ಇಂದು ಬೆಳಿಗ್ಗೆ ಅಧಿಕೃತವಾಗಿ ದೃಢಪಡಿಸಿದ್ದಾರೆ.
ಸೇನೆಯ ‘ಚೀತಾ’ ಹೆಸರಿನ ಸಿಂಗಲ್-ಎಂಜಿನ್ ಹೆಲಿಕಾಪ್ಟರ್‌ನಲ್ಲಿ ಒಬ್ಬರು ಲೆಫ್ಟಿನೆಂಟ್ ಕರ್ನಲ್ ಮತ್ತು ಇಬ್ಬರು ಮೇಜರ್ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್ ಅನ್ನು ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬರು ಮೇಜರ್ ಚಲಾಯಿಸುತ್ತಿದ್ದರು. ಇವರೊಂದಿಗೆ 3ನೇ ಪದಾತಿ ದಳದ ವಿಭಾಗದ ಜನರಲ್ ಆಫೀಸರ್ ಕಮಾಂಡಿಂಗ್ ಆಗಿರುವ ಮೇಜರ್ ಜನರಲ್ ಸಚಿನ್ ಮೆಹ್ತಾ ಅವರು ಪ್ರಯಾಣಿಕರಾಗಿ ಅದೇ ವಿಮಾನದಲ್ಲಿದ್ದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

51 ಸಾವಿರ ಯುವಕರಿಗೆ ಉದ್ಯೋಗ ಪತ್ರ ವಿತರಿಸಿದ ಪ್ರಧಾನಿ
ಪ್ರಧಾನಿ ನರೇಂದ್ರ ಮೋದಿ(Narendra Modi)ಅವರು ದೇಶದ 51,000 ಕ್ಕೂ ಹೆಚ್ಚು ಯುವಕರಿಗೆ ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ನೇಮಕಾತಿ ಪತ್ರಗಳನ್ನು ವರ್ಚುವಲ್ ಮೂಲಕ ವಿತರಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ತಮ್ಮ ಇತ್ತೀಚಿನ ಐದು ದೇಶಗಳ ಪ್ರವಾಸದ ಮಹತ್ವವನ್ನು ವಿವರಿಸುವ ಮೂಲಕ ರಾಜಕೀಯ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ.
ನಾನು ಕೇವಲ ಐದು ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡು ಬಂದಿಲ್ಲ, ಬದಲಿಗೆ ಈ ಅವಧಿಯಲ್ಲಿ ಡಜನ್‌ಗಟ್ಟಲೆ ದೇಶಗಳ ಪ್ರಮುಖ ಜಾಗತಿಕ ಕಂಪನಿಗಳ ನಾಯಕರನ್ನು ಭೇಟಿ ಮಾಡಿ ವಿವರವಾದ ಚರ್ಚೆ ನಡೆಸಿದ್ದೇನೆ ಎಂದು ಪ್ರಧಾನಿ ಹೇಳಿದರು. ಇಂದು ಇಡೀ ಜಗತ್ತು ಭಾರತದ ತಾಂತ್ರಿಕ ಪ್ರಗತಿ ಮತ್ತು ಇಲ್ಲಿನ ಯುವಶಕ್ತಿಯ ಬಗ್ಗೆ ಅಪಾರ ಉತ್ಸಾಹ ಹೊಂದಿದೆ. ಜಾಗತಿಕ ಮಟ್ಟದಲ್ಲಿ ಭಾರತದ ಯುವಕರಿಗೆ ದೊಡ್ಡ ಮನ್ನಣೆ ಮತ್ತು ಅವಕಾಶಗಳು ಸಿಗಬೇಕೆಂಬುದೇ ನನ್ನ ವಿದೇಶಿ ಪ್ರವಾಸಗಳ ಮುಖ್ಯ ಉದ್ದೇಶವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಮತ್ತಷ್ಟು ಓದಿ: 51 ಸಾವಿರ ಯುವಕರಿಗೆ ಉದ್ಯೋಗ ಪತ್ರ ವಿತರಿಸಿದ ಪ್ರಧಾನಿ

ಅಂದುಕೊಂಡಿದ್ದಕ್ಕಿಂತ ಮೊದಲೇ ಬರಲಿದೆ ‘ರಾಮಾಯಣ’ ಸಿನಿಮಾ; ‘ಟಾಕ್ಸಿಕ್’ ಮೇಲೆ ಒತ್ತಡ?
ರಣಬೀರ್ ಕಪೂರ್, ರಾಕಿಂಗ್ ಸ್ಟಾರ್ ಯಶ್, ಸಾಯಿ ಪಲ್ಲವಿ ಮತ್ತು ಸನ್ನಿ ಡಿಯೋಲ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ರಾಮಾಯಣ: ಪಾರ್ಟ್ 1’ (Ramayana) ಸಿನಿಮಾದ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಸಿನಿಮಾ ಬಗ್ಗೆ ಗಾಂಧಿನಗರದಿಂದ ಹಿಡಿದು ಬಾಲಿವುಡ್‌ವರೆಗೂ ಭಾರಿ ಚರ್ಚೆ ಶುರುವಾಗಿದೆ. ಈ ಬಿಗ್ ಬಜೆಟ್ ಸಿನಿಮಾ ದೀಪಾವಳಿ ಹಬ್ಬದ ಸಂದರ್ಭದಲ್ಲಿ (ನವೆಂಬರ್ 5-6 ಸಮಯದಲ್ಲಿ) ತೆರೆಗೆ ಬರಲಿದೆ ಎಂದು ತಂಡ ಹೇಳಿತ್ತು. ಆದರೆ, ಈಗ ಸಿಗುತ್ತಿರುವ ಲೇಟೆಸ್ಟ್ ಮಾಹಿತಿ ಪ್ರಕಾರ, ಅಂದುಕೊಂಡಿದ್ದಕ್ಕಿಂತ ಒಂದು ವಾರ ಮೊದಲೇ ಅಂದರೆ ಅಕ್ಟೋಬರ್ 30, 2026ರಂದೇ ಸಿನಿಮಾ ಥಿಯೇಟರ್‌ಗೆ ಅಪ್ಪಳಿಸುವ ಸಾಧ್ಯತೆ ದಟ್ಟವಾಗಿದೆ.
ಚಿತ್ರದ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ದೀಪಾವಳಿ ಹಬ್ಬದ ರಜೆಯ ದಿನಗಳನ್ನೇ ಟಾರ್ಗೆಟ್ ಮಾಡಿಕೊಂಡಿದ್ದಾರೆ. ಆದರೆ, ಹಬ್ಬದ ವಾರದಲ್ಲೇ ರಿಲೀಸ್ ಮಾಡುವ ಬದಲು, ಒಂದು ವಾರ ಮೊದಲೇ ಸಿನಿಮಾ ರಿಲೀಸ್ ಮಾಡಿ ಸಿನಿಮಾಗೆ ಬಾಯ್ಮಾತಿನ ಪ್ರಚಾರ ನೀಡಲು ತಂಡ ಪ್ಲಾನ್ ಮಾಡಿಕೊಂಡಿದೆ ಎಂದು ವರದಿ ಆಗಿದೆ.

ಮತ್ತಷ್ಟು ಓದಿ: ಮೊದಲೇ ಬರಲಿದೆ ‘ರಾಮಾಯಣ’ ಸಿನಿಮಾ; ‘ಟಾಕ್ಸಿಕ್’ ಮೇಲೆ ಒತ್ತಡ?

1 ಗೆಲುವು, 2 ತಂಡಗಳ ಜಯ: ಹೀಗಿದೆ ಪಂಜಾಬ್ ಕಿಂಗ್ಸ್​ ಪ್ಲೇಆಫ್ ಲೆಕ್ಕಾಚಾರ
ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್​ಗೇರಿದರೆ, ಮೂರು ತಂಡಗಳು ಪ್ಲೇಆಫ್​ ರೇಸ್​ನಲ್ಲಿದೆ. ಅಂದರೆ ನಾಲ್ಕನೇ ಸ್ಥಾನಕ್ಕಾಗಿ ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡಗಳ ನಡುವೆ ನೇರ ಪೈಪೋಟಿ ಇದೆ.
ಈ ಪೈಪೋಟಿಯಲ್ಲಿರುವ ಪಂಜಾಬ್ ಕಿಂಗ್ಸ್ ತಂಡವು ಇಂದು (ಮೇ.23) ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದರೆ ಪಂಜಾಬ್ ಪಡೆ ಒಟ್ಟು 15 ಅಂಕಗಳನ್ನು ಪಡೆಯಲಿದೆ. ಇದಾಗ್ಯೂ ಪಂಜಾಬ್ ಕಿಂಗ್ಸ್ ತಂಡ ನೇರವಾಗಿ ಪ್ಲೇಆಫ್​ಗೇರುವುದಿಲ್ಲ. ಬದಲಾಗಿ ಇತರೆ ಎರಡು ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!

ಬಳ್ಳಾರಿ, ಮೇ 23: ಜಿಲ್ಲೆಯ ಕಾಂಗ್ರೆಸ್ ಮಹಾನಗರಪಾಲಿಕೆ ಸದಸ್ಯೆ ಉಮಾದೇವಿ ಅವರ ಪತಿ ಶಿವರಾಜ್ ವಿರುದ್ಧ ಬಡವರಿಗೆ ಭೂಮಿ ನೀಡುವ ನೆಪದಲ್ಲಿ ಮಹಾ ವಂಚನೆ ನಡೆಸಿದ ಆರೋಪ ಕೇಳಿಬಂದಿದೆ. ಬೂದಿಹಾಳ ಸರ್ವೇ ನಂಬರ್ 125ರಲ್ಲಿ ಸುಮಾರು 7.87 ಎಕರೆ ಸರ್ಕಾರಿ ಹಳ್ಳದ ಜಾಗವನ್ನು ಒತ್ತುವರಿ ಮಾಡಿ ಶಿವರಾಜ್ ಅವರು ಲೇಔಟ್ ನಿರ್ಮಿಸಿದ್ದರು. ಈ ಲೇಔಟ್‌ನಲ್ಲಿ ಬಡ ಕುಟುಂಬಗಳಿಗೆ ಒಂದೂವರೆಯಿಂದ ಎರಡು ಲಕ್ಷ ರೂಪಾಯಿಗಳಿಗೆ ಪ್ಲಾಟ್‌ಗಳನ್ನು ಮಾರಾಟ ಮಾಡಿದ್ದರು.

ಜನರು ಸಾಲ ಮಾಡಿ ಮನೆಗಳನ್ನು ನಿರ್ಮಿಸಿಕೊಂಡ ನಂತರ, ಜಿಲ್ಲಾಡಳಿತವು ತೆರವು ಕಾರ್ಯಾಚರಣೆಗೆ ಮುಂದಾಗಿದೆ. ಇದರಿಂದ ವಂಚನೆಗೆ ಒಳಗಾದ ಬಡ ಕುಟುಂಬಗಳು ಬೀದಿಪಾಲಾಗಿವೆ. ನಮ್ಮದೇ ಸರ್ಕಾರವಿದೆ, ಭಯಪಡಬೇಡಿ ಎಂದು ಭರವಸೆ ನೀಡಿ ಶಿವರಾಜ್ ಹಣ ಪಡೆದಿದ್ದರು ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ಇದೀಗ ಸಂತ್ರಸ್ತರು ನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಕಾನ್ ಚಿತ್ರೋತ್ಸವದಲ್ಲಿ ಬಾಲಿವುಡ್ ದಿವಾ ಐಶ್ವರ್ಯಾ ರೈ ಬಚ್ಚನ್ ಅವರು ಮತ್ತೊಮ್ಮೆ ತಮ್ಮ ಸೌಂದರ್ಯವನ್ನು ಪ್ರದರ್ಶಿಸಿದ್ದಾರೆ. ರೆಡ್ ಕಾರ್ಪೆಟ್ ಮೇಲೆ ಡಿಸೈನರ್ ನೀಲಿ ಗೌನ್ ಧರಿಸಿ ಅತ್ಯಂತ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ಐಶ್ವರ್ಯಾ, ಅಲ್ಲಿ ನೆರೆದಿದ್ದ ಜಾಗತಿಕ ಮಾಧ್ಯಮಗಳು ಮತ್ತು ಅಭಿಮಾನಿಗಳನ್ನು ನೋಡಿ ಮುಗುಳ್ನಗುತ್ತಾ ಫ್ಲೈಯಿಂಗ್ ಕಿಸ್ ನೀಡಿದ್ದಾರೆ. ಸದ್ಯ ಈ ವಿಡಿಯೋ ಇಂಟರ್ನೆಟ್‌ನಲ್ಲಿ ಭಾರಿ ವೈರಲ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಆನೇಕಲ್‌ನಲ್ಲಿ ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ – Kannada News | Bengaluru International Cricket Stadium inauguration : CM Siddaramaiah Lays Foundation Stone

ಆನೇಕಲ್‌ನಲ್ಲಿ ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

ಆನೆಕಲ್, ಮೇ 23: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ದೇಶದ 2ನೇ ಅತಿ ದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ (International Stadium) ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಭವ್ಯ ಶಂಕುಸ್ಥಾಪನೆ ನೆರವೇರಿಸಿದರು. ಈ ಐತಿಹಾಸಿಕ ಯೋಜನೆಯ ಭೂಮಿ ಪೂಜೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಸ್ಥಳೀಯ ಶಾಸಕ ಆನೇಕಲ್ ಶಿವಣ್ಣ ಅವರು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ‘ಬೆಳ್ಳಿ ಗದೆ’ಯನ್ನು ಉಡುಗೊರೆಯಾಗಿ ನೀಡಿ, ಅಭಿನಂದಿಸಿ ಗೌರವಿಸಿದರು.

ಮುಖ್ಯಾಂಶಗಳು

  • ಆನೇಕಲ್‌ನ ಇಂಡ್ಲವಾಡಿಯಲ್ಲಿ 900 ಕೋಟಿ ವೆಚ್ಚದ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿಪೂಜೆ ನಡೆದಿದೆ.
  • ಶಾಸಕ ಆನೇಕಲ್ ಶಿವಣ್ಣ ಸಿಎಂ, ಡಿಸಿಎಂ ಅವರಿಗೆ ಬೆಳ್ಳಿ ಗದೆ ನೀಡಿ ಅಭಿನಂದಿಸಿದರು.
  • ಸೂರ್ಯನಗರದಲ್ಲಿ 80 ಸಾವಿರ ಆಸನ ಸಾಮರ್ಥ್ಯದ ದೇಶದ ಎರಡನೇ ದೊಡ್ಡ ಸ್ಟೇಡಿಯಂ ನಿರ್ಮಾಣವಾಗಲಿದೆ.

ಇನ್ನೆರಡು ವರ್ಷಗಳಲ್ಲಿ ನಿರ್ಮಾಣ ಕಾರ್ಯ ಪೂರ್ಣ

ಕರ್ನಾಟಕ ಗೃಹ ಮಂಡಳಿ (KHB) ವತಿಯಿಂದ ಬರೋಬ್ಬರಿ 100 ಎಕರೆ ಜಾಗದಲ್ಲಿ, ಸುಮಾರು 900 ಕೋಟಿ ರೂಪಾಯಿ ಭಾರಿ ವೆಚ್ಚದಲ್ಲಿ ಈ ಅತ್ಯಾಧುನಿಕ ಸ್ಟೇಡಿಯಂ ನಿರ್ಮಾಣವಾಗುತ್ತಿದೆ. 80,000 ಆಸನಗಳ ಬೃಹತ್ ಸಾಮರ್ಥ್ಯ ಹೊಂದಲಿರುವ ಈ ಕ್ರೀಡಾಂಗಣವು ಕೇವಲ 2 ರಿಂದ 3 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರನ್ನು ಬೃಹತ್ ಗಾತ್ರದ ಆಪಲ್ ಹಾರ ಹಾಗೂ ಮಹಿಳೆಯರ ಪೂರ್ಣಕುಂಭ ಕಲಶ ಮತ್ತು ಸಾಂಪ್ರದಾಯಿಕ ಕಲಾತಂಡಗಳ ವೈಭವದೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಈ ಐತಿಹಾಸಿಕ ಸಮಾರಂಭದಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್, ಶಾಸಕ ಕೆ.ಎಂ. ಶಿವಲಿಂಗೇಗೌಡ, ಸಿಎಂ ಕಾನೂನು ಸಲಹೆಗಾರ ಪೊನಣ್ಣ ಹಾಗೂ ಶಾಸಕ ಕೃಷ್ಣಪ್ಪ ಸೇರಿದಂತೆ ಹಲವು ಪ್ರಮುಖ ನಾಯಕರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ ಆನೇಕಲ್​​ ಬಳಿ ಹೊಸ ಕ್ರಿಕೆಟ್​​ ಸ್ಟೇಡಿಯಂಗೆ ನಾಳೆ ಗುದ್ದಲಿ ಪೂಜೆ: ಕ್ರೀಡಾಂಗಣದ ವಿಶೇಷತೆಗಳೇನು?

ಜಮೀರ್ ಅಹಮದ್ ಏನಂದ್ರು?

ಇದೇ ವೇಳೆ ಟಿವಿ9 ಗೆ ಪ್ರತಿಕ್ರಿಯಿಸಿದ ವಸತಿ ಸಚಿವ ಜಮೀರ್ ಅಹಮದ್ ಖಾನ್, ಸೂರ್ಯನಗರದಲ್ಲಿ ಕ್ರೀಡಾಂಗಣ ಮತ್ತು ಶಾಲೆ ನಿರ್ಮಿಸಬೇಕೆಂಬುದು ಜಾಗ ನೀಡಿದ ರೈತರ ಬಹಳ ದಿನಗಳ ಬೇಡಿಕೆಯಾಗಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ಆರ್‌ಸಿಬಿ ಪಂದ್ಯದ ವೇಳೆ ಉಂಟಾದ ನೂಕುನುಗ್ಗಲು ಹಾಗೂ ದುರಂತದ ಪರಿಸ್ಥಿತಿಯ ಬಳಿಕ ಬೆಂಗಳೂರಿನ ಹೊರವಲಯದಲ್ಲಿ ಮತ್ತೊಂದು ಬೃಹತ್ ಕ್ರೀಡಾಂಗಣದ ಅವಶ್ಯಕತೆಯಿತ್ತು. ನಮ್ಮ ಸರ್ಕಾರದ ಅವಧಿಯಲ್ಲೇ ಈ ಯೋಜನೆ ಸಾಕಾರಗೊಳ್ಳುತ್ತಿರುವುದು ಅತ್ಯಂತ ಸಂತಸ ತಂದಿದೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Viral: ಸಾವಿನ ಮನೆಯಲ್ಲೂ ಸಂಭ್ರಮ; ಭಾರಿ ಸೌಂಡ್ ಮಾಡುತ್ತಿದೆ ‘ಡ್ಯಾನ್ಸಿಂಗ್ ಅಂಡರ್‌ಟೇಕರ್ಸ್’ ಟ್ರೆಂಡ್! – Kannada News | Peru’s Dancing Undertakers: Celebrating Life with Unique Funeral Trends and Joyful Farewell

ಸಾವಿನ ಮನೆಯಲ್ಲೂ ಸಂಭ್ರಮImage Credit source: Twitter

ಸಾಮಾನ್ಯವಾಗಿ ಸಾವು ಎಂದರೆ ಅಲ್ಲಿ ಕಣ್ಣೀರು, ದುಃಖ ಮತ್ತು ಮೌನ ಮನೆಮಾಡಿರುತ್ತದೆ. ಆದರೆ ದಕ್ಷಿಣ ಅಮೆರಿಕಾದ ದೇಶವಾದ ಪೆರು (Peru) ನಲ್ಲಿ ಈಗ ಅಂತ್ಯಸಂಸ್ಕಾರದ ಹಳೆಯ ಪದ್ಧತಿಯನ್ನೇ ಬದಲಾಯಿಸುವಂತಹ ಹೊಸದೊಂದು ವಿಶಿಷ್ಟ ಟ್ರೆಂಡ್ ವೇಗವಾಗಿ ಹರಡುತ್ತಿದೆ. ಅಲ್ಲಿ ಸಾಂಪ್ರದಾಯಿಕ ಶೋಕಾಚರಣೆಯ ಬದಲಾಗಿ, ಮೃತರ ಅಂತಿಮಯಾತ್ರೆಯನ್ನು ಹಬ್ಬದಂತೆ ಸಂಭ್ರಮಿಸುವ “ಡ್ಯಾನ್ಸಿಂಗ್ ಅಂಡರ್‌ಟೇಕರ್ಸ್” (los portadores bailarines – ನೃತ್ಯ ಮಾಡುವ ಶವವಾಹಕರು) ಪರಿಕಲ್ಪನೆ ಜನಪ್ರಿಯವಾಗುತ್ತಿದೆ. ಈ ಹೊಸ ಆಚರಣೆಯ ಕುರಿತಾದ ಕೆಲವು ಪ್ರಮುಖ ಮತ್ತು ಆಸಕ್ತಿದಾಯಕ ಅಂಶಗಳು ಇಲ್ಲಿವೆ

ಕಣ್ಣೀರಿನ ಬದಲು ನೃತ್ಯದ ವಿದಾಯ:

ಈ ಪದ್ಧತಿಯಲ್ಲಿ ವಿಶೇಷವಾಗಿ ತರಬೇತಿ ಪಡೆದ ಯುವಕರ ತಂಡವೊಂದು ಶವಪೆಟ್ಟಿಗೆಯನ್ನು ಹೆಗಲ ಮೇಲೆ ಹೊತ್ತು, ಜೋರಾದ ಸಂಗೀತಕ್ಕೆ ತಕ್ಕಂತೆ ಹೆಜ್ಜೆ ಹಾಕುತ್ತಾ ನೃತ್ಯ ಮಾಡುತ್ತದೆ. ಮೃತರ ಕುಟುಂಬಸ್ಥರು ಕಣ್ಣೀರು ಹಾಕುವ ಬದಲು ಅವರ ನೆನಪುಗಳನ್ನು ನಗುತ್ತಾ ಸಂಭ್ರಮಿಸಬೇಕು ಎಂಬುದು ಇದರ ಹಿಂದಿನ ಆಶಯ.

ಆಫ್ರಿಕಾದ ಘಾನಾ ಶೈಲಿಯ ಪ್ರೇರಣೆ:

ಕೆಲವು ವರ್ಷಗಳ ಹಿಂದೆ ಆಫ್ರಿಕಾದ ಘಾನಾ ದೇಶದ “ಡ್ಯಾನ್ಸಿಂಗ್ ಪಾಲ್‌ಬಿಯರರ್ಸ್” ವೀಡಿಯೋಗಳು ಜಾಗತಿಕವಾಗಿ ವೈರಲ್ ಆಗಿದ್ದವು. ಅದೇ ಶೈಲಿಯನ್ನು ಈಗ ಪೆರು ದೇಶದ ಸಂಸ್ಕೃತಿಗೆ ತಕ್ಕಂತೆ ಅಳವಡಿಸಿಕೊಳ್ಳಲಾಗಿದೆ.

ಮೃತರ ನೆಚ್ಚಿನ ಹಾಡುಗಳಿಗೆ ಸ್ಟೆಪ್ಸ್:

ಅಂತ್ಯಸಂಸ್ಕಾರದ ಸಮಯದಲ್ಲಿ ಮೃತಪಟ್ಟ ವ್ಯಕ್ತಿಗೆ ಇಷ್ಟವಾದ ಜನಪ್ರಿಯ ಗೀತೆಗಳನ್ನು ಹಾಕಲಾಗುತ್ತದೆ. ಶವಪೆಟ್ಟಿಗೆಯನ್ನು ಹೊತ್ತ ತಂಡವು ಅತ್ಯಂತ ಜಾಗರೂಕತೆಯಿಂದ ಮತ್ತು ಲಯಬದ್ಧವಾಗಿ ನೃತ್ಯ ಮಾಡುತ್ತಾ ಸ್ಮಶಾನದತ್ತ ಸಾಗುತ್ತದೆ.

ಇದನ್ನೂ ಓದಿ: ಹೈದರಾಬಾದ್​​ನಲ್ಲಿ ಇರುವಂತೆ ಬೆಂಗಳೂರು ರಸ್ತೆಗಳು ಯಾಕಿಲ್ಲ? ಕೆನಡಾ ವ್ಯಕ್ತಿಯ ವಿಡಿಯೋ ವೈರಲ್

ಬದಲಾಗುತ್ತಿರುವ ಜನರ ಮನಸ್ಥಿತಿ:

“ನಮ್ಮ ಪ್ರೀತಿಪಾತ್ರರು ಜಗತ್ತನ್ನು ಬಿಟ್ಟು ಹೋಗುವಾಗ ದುಃಖದ ವಾತಾವರಣ ಇರಬಾರದು, ಬದಲಿಗೆ ಅವರು ಬದುಕಿದ ಜೀವನವನ್ನು ನಾವು ಆಚರಿಸಬೇಕು” ಎಂದು ಪೆರುವಿನ ಅನೇಕ ಕುಟುಂಬಗಳು ಈ ಹೊಸ ಆಲೋಚನೆಯನ್ನು ಮುಕ್ತವಾಗಿ ಸ್ವೀಕರಿಸುತ್ತಿದ್ದಾರೆ.

ಒಂದು ಸಣ್ಣ ಇತಿಹಾಸ:

ಈ ರೀತಿಯ ಆಚರಣೆಗಳು ಕೇವಲ ಇತ್ತೀಚಿನ ಟ್ರೆಂಡ್ ಅಷ್ಟೇ ಅಲ್ಲ, ಜಗತ್ತಿನ ಕೆಲವು ಪುರಾತನ ಬುಡಕಟ್ಟು ಸಂಸ್ಕೃತಿಗಳಲ್ಲಿ ‘ಸಾವು’ ಎನ್ನುವುದನ್ನು ಮುಂದಿನ ಲೋಕದ ಹೊಸ ಪ್ರಯಾಣದ ಆರಂಭ ಎಂದು ನಂಬಿ ಸಂಭ್ರಮಿಸುವ ಪದ್ಧತಿ ಮೊದಲಿನಿಂದಲೂ ಇತ್ತು. ಈಗ ಅದು ಆಧುನಿಕ ರೂಪ ಪಡೆದುಕೊಂಡಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಧೋನಿ ಕಾರಣ CSK ತಂಡಕ್ಕೆ ಕೋಚ್ ಆಗಲು ಹಿಂದೇಟು! – Kannada News | CSK Coach Crisis: The Dhoni Dilemma

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಸೀಸನ್ ಮುಕ್ತಾಯದ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿಯಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಸಿಕ್ಕಿದೆ. ಈ ಬದಲಾವಣೆಯೊಂದಿಗೆ ಸಿಎಸ್​ಕೆ ತಂಡದ ಕೋಚ್ ಕೂಡ ಬದಲಾಗಲಿದ್ದಾರೆ. ಅಂದರೆ ಪ್ರಸ್ತುತ ಕೋಚ್ ಸ್ಟೀಫನ್ ಫ್ಲೆಮಿಂಗ್ ಬದಲಿಗೆ ಹೊಸ ತರಬೇತುದಾರರನ್ನು ಆಯ್ಕೆ ಮಾಡಲು ಸಿಎಸ್​ಕೆ ಮ್ಯಾನೇಜ್ಮೆಂಟ್ ನಿರ್ಧರಿಸಿದೆ.  ಆದರೆ, ತಂಡಕ್ಕೆ ಹೊಸ ಮುಖ್ಯ ಕೋಚ್ ಅನ್ನು ನೇಮಕ ಮಾಡುವ ಸಿಎಸ್​ಕೆ ಮ್ಯಾನೇಜ್‌ಮೆಂಟ್ ಪ್ರಯತ್ನಕ್ಕೆ “ಧೋನಿಯ ಉಪಸ್ಥಿತಿಯೇ” ದೊಡ್ಡ ಸವಾಲಾಗಿ ಪರಿಣಮಿಸಿದೆ.

ಕೋಚ್ ಹುದ್ದೆ ಅಲಂಕರಿಸಲು ದಿಗ್ಗಜರ ಹಿಂಜರಿಕೆ!

ವರದಿಗಳ ಪ್ರಕಾರ, ಸಿಎಸ್‌ಕೆ ಮ್ಯಾನೇಜ್‌ಮೆಂಟ್ ರಾಹುಲ್ ದ್ರಾವಿಡ್ ಸೇರಿದಂತೆ ಭಾರತದ ಪ್ರಮುಖ ಹಿರಿಯ ಕೋಚ್‌ಗಳನ್ನು ಸಂಪರ್ಕಿಸಿದೆ. ಆದರೆ, ಯಾವುದೇ ಹೈ-ಪ್ರೊಫೈಲ್ ಕೋಚ್ ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಿದ್ಧರಿಲ್ಲ ಎನ್ನಲಾಗುತ್ತಿದೆ. ಇದಕ್ಕೆ ಮುಖ್ಯ ಕಾರಣಗಳು ಇಲ್ಲಿವೆ:

  • ನಿರ್ಧಾರಗಳ ಸ್ವತಂತ್ರ ಕೊರತೆಯ ಭೀತಿ: ಸಿಎಸ್‌ಕೆ ತಂಡದಲ್ಲಿ ಎಂ.ಎಸ್. ಧೋನಿ ಅವರ ಪ್ರಭಾವ ಅಪಾರವಾಗಿದೆ. ಹೊಸದಾಗಿ ಬರುವ ಕೋಚ್‌ಗಳಿಗೆ ತಮಗೆ ಬೇಕಾದಂತೆ ತಂಡವನ್ನು ಪುನರ್ರಚಿಸಲು ಅಥವಾ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಧೋನಿಯವರ ಇರುವಿಕೆ ಅಡ್ಡಿಯಾಗಬಹುದು ಎಂಬ ಆತಂಕ ಕೋಚ್‌ಗಳಲ್ಲಿದೆ.
  • ಧೋನಿ ಭವಿಷ್ಯದ ಅನಿಶ್ಚಿತತೆ: ಧೋನಿ ಮುಂದಿನ ಸೀಸನ್‌ನಲ್ಲಿ ಆಟಗಾರನಾಗಿ ಮುಂದುವರಿಯುತ್ತಾರಾ ಅಥವಾ ಮೆಂಟರ್ ಆಗಿ ಮ್ಯಾನೇಜ್‌ಮೆಂಟ್ ಸೇರುತ್ತಾರಾ ಎಂಬುದು ಇನ್ನೂ ಅಧಿಕೃತವಾಗಿಲ್ಲ. ಈ ಗೊಂದಲ ಬಗೆಹರಿಯದ ಹೊರತು ತಂಡದ ದೀರ್ಘಕಾಲದ ತಂತ್ರಗಳನ್ನು ರೂಪಿಸುವುದು ಕೋಚ್‌ಗಳಿಗೆ ಕಷ್ಟ ಸಾಧ್ಯ.

ಅಶ್ವಿನ್ ನೀಡಿದ ಹೊಸ ಟ್ವಿಸ್ಟ್!

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೋಚ್ ಆಯ್ಕೆಯೇ ದೊಡ್ಡ ಸಮಸ್ಯೆಯಾಗಿರುವುದನ್ನು ಮನಗಂಡಿರುವ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ ಸೋಷಿಯಲ್ ಮೀಡಿಯಾ ಮೂಲಕ ಆಸಕ್ತಿದಾಯಕ ಸಲಹೆಯೊಂದನ್ನು ನೀಡಿದ್ದಾರೆ.

“ಸಿಎಸ್‌ಕೆ ತಂಡ ಹೊಸ ಕೋಚ್‌ಗಾಗಿ ಹೊರಗೆ ಹುಡುಕುವ ಅಗತ್ಯವಿಲ್ಲ. ಎಂ.ಎಸ್. ಧೋನಿ ಅವರೇ ನೇರವಾಗಿ ತಂಡದ ಮುಂದಿನ ಮುಖ್ಯ ಕೋಚ್ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದು ನಿಜವಾದಲ್ಲಿ ಸಿಎಸ್‌ಕೆಯ ಕೋಚಿಂಗ್ ಬಿಕ್ಕಟ್ಟಿಗೆ ಶಾಶ್ವತ ಪರಿಹಾರ ಸಿಕ್ಕಂತಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: 1 ಗೆಲುವು, 2 ತಂಡಗಳ ಜಯ: ಹೀಗಿದೆ ಪಂಜಾಬ್ ಕಿಂಗ್ಸ್​ ಪ್ಲೇಆಫ್ ಲೆಕ್ಕಾಚಾರ

ಮುಂದಿನ ಹಾದಿ ಏನು?

ಇಂಡಿಯನ್ ಪ್ರೀಮಿಯರ್ ಲೀಗ್ 2027 ರಲ್ಲಿ ಮಿನಿ ಹರಾಜು ನಡೆಯಲಿದೆ. ಪ್ರಸ್ತುತ ತಂಡದಲ್ಲಿರುವ ಕೆಲ ಆಟಗಾರರು ಕೈ ಬಿಟ್ಟು ಬಲಿಷ್ಠ ಪಡೆಯನ್ನು ರೂಪಿಸಬೇಕಾದ ಅನಿವಾರ್ಯತೆ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ಮುಂದಿದೆ. ಅದಕ್ಕೂ ಮುನ್ನ ಸಿಎಸ್​ಕೆ ಹೊಸ ಕೋಚ್ ಅನ್ನು ನೇಮಕ ಮಾಡಬೇಕಿದೆ.

ಅಂದರೆ, ಧೋನಿ ತಮ್ಮ ನಿವೃತ್ತಿ ಅಥವಾ ಭವಿಷ್ಯದ ನಡೆ ಕುರಿತು ನೀಡುವ ಅಂತಿಮ ನಿರ್ಧಾರದ ಮೇಲೆಯೇ ಸಿಎಸ್‌ಕೆಯ ಮುಂದಿನ ಭವಿಷ್ಯ ಮತ್ತು ಹೊಸ ಕೋಚ್ ನೇಮಕಾತಿ ಪ್ರಕ್ರಿಯೆ ಅವಲಂಬಿತವಾಗಿದೆ. ಹೀಗಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕೂಡ ಮಹೇಂದ್ರ ಸಿಂಗ್ ಧೋನಿಯ ಮುಂದಿನ ನಿರ್ಧಾರವನ್ನು ಎದುರು ನೋಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

Source link

ತನಿಷಾ ಕುಪ್ಪಂಡ ಜೊತೆ ಅಸಭ್ಯವಾಗಿ ವರ್ತಿಸಿದ ಫೋಟೋಗ್ರಾಫರ್; ನಟಿಯ ನೇರ ಕ್ಲಾಸ್ – Kannada News | Tanisha Kuppanda Slams Photographer for Inappropriate Behavior: A Bold Warning

‘ಕನ್ನಡ ಬಿಗ್ ಬಾಸ್ ಸೀಸನ್ 10’ರ ಖ್ಯಾತ ಸ್ಪರ್ಧಿ ಹಾಗೂ ನಟಿ ತನಿಷಾ ಕುಪ್ಪಂಡ ಅವರು (Tanisha Kuppanda ) ತಮ್ಮ ಜೊತೆ ಅಸಭ್ಯವಾಗಿ ನಡೆದುಕೊಂಡವರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿತ್ರರಂಗದ ನಟಿಯರನ್ನು ಟಾರ್ಗೆಟ್ ಮಾಡುತ್ತಿರುವ ಕಿಡಿಗೇಡಿಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ವಾರ್ನಿಂಗ್ ನೀಡಿರುವ ತನಿಷಾ, ಯಾರೂ ಕೂಡ ನನ್ನ ತಾಳ್ಮೆಯನ್ನು ಪರೀಕ್ಷಿಸಲು ಬರಬೇಡಿ ಎಂದು ಗುಡುಗಿದ್ದಾರೆ.

ಇತ್ತೀಚೆಗಷ್ಟೇ ನಟಿ ರುಕ್ಮಿಣಿ ವಸಂತ್ ಅವರ ಹೆಸರಿನಲ್ಲಿ ನಕಲಿ ಬಿಕಿನಿ ವಿಡಿಯೋಗಳನ್ನು ಸೃಷ್ಟಿಸಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿತ್ತು. ಇದಕ್ಕೆ ರುಕ್ಮಿಣಿ ಎಚ್ಚರಿಕೆ ನೀಡಿದ್ದರು. ಈ ಘಟನೆಯ ಬೆನ್ನಲ್ಲೇ ತನಿಷಾ ಕುಪ್ಪಂಡ ಮಾಡಿರುವ ಇನ್‌ಸ್ಟಾಗ್ರಾಮ್ ಪೋಸ್ಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇಂಟರ್ನೆಟ್ ಲೋಕದಲ್ಲಿ ಸೆಲೆಬ್ರಿಟಿಗಳ, ಅದರಲ್ಲೂ ಮುಖ್ಯವಾಗಿ ಮಹಿಳಾ ನಟಿಯರ ತೇಜೋವಧೆ ಮಾಡುತ್ತಿರುವ ವ್ಯಕ್ತಿ ವಿರುದ್ಧ ತನಿಷಾ ತೀವ್ರವಾಗಿ ಗರಂ ಆಗಿದ್ದಾರೆ.

ತಮ್ಮ ಸ್ಟೇಟಸ್‌ನಲ್ಲಿ ಬರೆದುಕೊಂಡಿರುವ ತನಿಷಾ, ‘ಕೆಲವು ಕೆಟ್ಟ ಫೋಟೋಗ್ರಾಫರ್​​ಗಳು ಬಂದು ಕಲಾವಿದರ ಬಳಿ ನಾನ್​ಸೆನ್ಸ್​ ಮಾತನಾಡುತ್ತಾರೆ. ಫೋಟೋಶೂಟ್ ಮಾಡುವ ಯೋಗ್ಯತೆ ಇಲ್ಲ ಅಂದರೆ ಕೇಳಬಾರದು. ನಿಮ್ಮಂತ 3ರ್​​ಡ್​ ಕ್ಲಾಸ್ ಫೋಟೋಗ್ರಾಫರ್​​ಗಳಿಂದ ಬೇರೆ ಛಾಯಾಗ್ರಹಕರಿಗೆ ಅವಮಾನ’ ಎಂದು ತನಿಷಾ ಹೇಳಿದ್ದಾರೆ. ಅನಿಲ್ ಕುಮಾರ್ ಎಂಬ ಛಾಯಾಗ್ರಾಹಕ ಫೋಟೋಗ್ರಾಫಿ ಹೆಸರಲ್ಲಿ ಡೇಟ್​​ಗೆ ಕರೆದಿದ್ದಾರೆ.

ಇದನ್ನೂ ಓದಿ:  ‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಚಿತ್ರ ಹಾಡಿ ಹೊಗಳಿದ ತನಿಷಾ

ಬಿಗ್ ಬಾಸ್ ಮನೆಯಲ್ಲೂ ತಮ್ಮ ನೇರ ನಡೆ ಹಾಗೂ ಬೋಲ್ಡ್ ಸ್ವಭಾವದಿಂದಲೇ ಗುರುತಿಸಿಕೊಂಡಿದ್ದ ತನಿಷಾ, ಈಗ ಸೋಶಿಯಲ್ ಮೀಡಿಯಾ ಕಿರುಕುಳದ ವಿರುದ್ಧವೂ ಧ್ವನಿ ಎತ್ತಿರುವುದಕ್ಕೆ ಅಭಿಮಾನಿಗಳಿಂದ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಈ ಜಾಲಕ್ಕೆ ಬ್ರೇಕ್ ಬೀಳಲೇಬೇಕು ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ಕಿಡಿಗೇಡಿಗಳಿಗೆ ತನಿಷಾ ನೀಡಿರುವ ಈ ಖಡಕ್ ಸಂದೇಶ ಸದ್ಯ ಗಾಂಧಿನಗರದ ವಲಯದಲ್ಲಿ ಭಾರಿ ವೈರಲ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟ! ವಿದ್ಯಾರ್ಥಿಗಳ ವಾಟ್ಸಪ್‌ಗೇ ಬಂತು ರಿಸಲ್ಟ್ – Kannada News | VTU Exam Results in 10 Minutes: Visvesvaraya Technological University Creates History

ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟ

ಬೆಳಗಾವಿ, ಮೇ 23: ದೇಶದ ಇಂಜಿನಿಯರಿಂಗ್ ಶಿಕ್ಷಣ ರಂಗದಲ್ಲಿ ಹಿಂದೆಂದೂ ಕೇಳರಿಯದ ಅಪರೂಪದ ಮತ್ತು ಐತಿಹಾಸಿಕ ದಾಖಲೆಯೊಂದಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಸಾಕ್ಷಿಯಾಗಿದೆ. ರಾಜ್ಯದ 200ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳನ್ನು ಒಳಗೊಂಡಿರುವ ವಿಟಿಯು, ಬಿಇ ಹಾಗೂ ಬಿ.ಟೆಕ್ ಅಂತಿಮ ಸೆಮಿಸ್ಟರ್ ಪರೀಕ್ಷೆ ಮುಗಿದ ಕೇವಲ ಹತ್ತೇ ನಿಮಿಷಗಳಲ್ಲಿ ಫಲಿತಾಂಶ ಪ್ರಕಟಿಸಿ ಇತಿಹಾಸ ನಿರ್ಮಿಸಿದೆ.

ಮುಖ್ಯಾಂಶಗಳು

  • ವಿಟಿಯು ಪರೀಕ್ಷೆ ಮುಗಿದ ಕೇವಲ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿದೆ.
  • ಅತ್ಯಾಧುನಿಕ ಡಿಜಿಟಲ್ ಸಾಫ್ಟ್‌ವೇರ್ ಬಳಸಿ ಆಟೋಮ್ಯಾಟಿಕ್ ಆಗಿ ಮೌಲ್ಯಮಾಪನ ಮಾಡಲಾಗಿದೆ.
  • ಇಂಜಿನಿಯರಿಂಗ್ ಅಂತಿಮ ವರ್ಷದ ಫಲಿತಾಂಶವನ್ನು ವಿದ್ಯಾರ್ಥಿಗಳ ವಾಟ್ಸಪ್‌ಗೆ ಕಳುಹಿಸಲಾಗಿದೆ.

ವಾಟ್ಸಪ್‌ಗೇ ಬಂತು ರಿಸಲ್ಟ್

ಶುಕ್ರವಾರ ಸಂಜೆ 5:30ಕ್ಕೆ ಬಿಇ ಮತ್ತು ಬಿ.ಟೆಕ್ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಮುಕ್ತಾಯಗೊಂಡಿದ್ದವು. ಸರಿಯಾಗಿ 10 ನಿಮಿಷಗಳ ಬಳಿಕ, ಅಂದರೆ ಸಂಜೆ 5:40ರ ವೇಳೆಗೆ ವಿಶ್ವವಿದ್ಯಾಲಯವು ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿ ಕ್ರಾಂತಿಕಾರಿ ಡಿಜಿಟಲ್ ತಂತ್ರಜ್ಞಾನದ ನೆರವೇರಿಕೆಯಿಂದ ಫಲಿತಾಂಶದ ವಿವರಗಳನ್ನು ನೇರವಾಗಿ ವಿದ್ಯಾರ್ಥಿಗಳ ಮೊಬೈಲ್‌ನ ವಾಟ್ಸಪ್ ಸಂಖ್ಯೆಗೆ ರವಾನಿಸಲಾಗಿದೆ. ಈ ಬಾರಿ ಒಟ್ಟು 56,192 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಶೇಕಡಾ 99.98 ರಷ್ಟು ಅಭೂತಪೂರ್ವ ತೇರ್ಗಡೆ ದಾಖಲಾಗಿದೆ.

ಸಾಫ್ಟ್‌ವೇರ್ ಮೂಲಕ ಆಟೋಮ್ಯಾಟಿಕ್ ಮೌಲ್ಯಮಾಪನ

ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ವಿಟಿಯು ಅತ್ಯಾಧುನಿಕ ಡಿಜಿಟಲ್ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಉತ್ತರ ಪತ್ರಿಕೆಯನ್ನು ವಿಶ್ವವಿದ್ಯಾಲಯದ ವಿಶೇಷ ಸಾಫ್ಟ್‌ವೇರ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದಂತೆ, ತಂತ್ರಜ್ಞಾನದ ಸಹಾಯದಿಂದ ಅದು ತಾನಾಗಿಯೇ ವ್ಯಾಲ್ಯೂವೇಷನ್ ಮಾಡಿ ನಿಖರ ಫಲಿತಾಂಶವನ್ನು ಸಿದ್ಧಪಡಿಸಿದೆ. ಥಿಯರಿ ಪರೀಕ್ಷೆಗಳು ಮೇ 19ಕ್ಕೇ ಮುಗಿದು ಫಲಿತಾಂಶ ಸಿದ್ಧವಾಗಿತ್ತು. ಶುಕ್ರವಾರ ನಡೆದ ಕೊನೆಯ ಇಂಟರ್ನ್‌ಶಿಪ್ ಪ್ರಾಯೋಗಿಕ ಪರೀಕ್ಷೆಯ ಅಂಕಗಳು ಸರ್ವರ್‌ಗೆ ಅಪ್‌ಲೋಡ್ ಆಗುತ್ತಿದ್ದಂತೆ ಕೇವಲ 10 ನಿಮಿಷದಲ್ಲಿ ಅಂತಿಮ ರಿಸಲ್ಟ್ ಹೊರಬಿದ್ದಿದೆ.

ಇದನ್ನೂ ಓದಿ ಪುಷ್ಪ ಸಿನಿಮಾ ಶೈಲಿಯಲ್ಲಿ ಅಕ್ರಮ ಸ್ಪಿರಿಟ್ ಸಾಗಾಟ: 35 ಲಕ್ಷ ಮೌಲ್ಯದ ಟ್ಯಾಂಕರ್ ಜಪ್ತಿ, ಓರ್ವನ ಬಂಧನ!

ತ್ವರಿತವಾಗಿ ಮತ್ತು ಅತ್ಯಂತ ಯಶಸ್ವಿಯಾಗಿ ಫಲಿತಾಂಶ ಪ್ರಕಟಿಸಲು ಹಗಲಿರುಳು ಶ್ರಮಿಸಿದ ವಿಶ್ವವಿದ್ಯಾಲಯದ ಎಲ್ಲಾ ಸಿಬ್ಬಂದಿ ವರ್ಗಕ್ಕೆ ಕುಲಪತಿ (ವಿಸಿ) ಪ್ರೊ. ಎಸ್. ವಿದ್ಯಾಶಂಕರ್ ಹಾಗೂ ಕುಲಸಚಿವರಾದ ಯು.ಜೆ. ಉಜ್ವಲ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಉದ್ಯೋಗ ಮತ್ತು ಉನ್ನತ ಶಿಕ್ಷಣಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವಿಟಿಯುನ ಈ ಮಾದರಿಯ ವಿದ್ಯಾರ್ಥಿ ಸ್ನೇಹಿ ವ್ಯವಸ್ಥೆ ಭಾರಿ ಸಂತಸ ತಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Guru Sanchara 2026: ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? – Kannada News | Leo Horoscope 2026: Dr. Basavaraj Gurujis Insights on Guru Transit

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಸಿಂಹ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರ ಗುರು ಸಂಚಾರವು ಸಿಂಹ ರಾಶಿಯವರಿಗೆ ನಿರ್ದಿಷ್ಟ ಫಲಗಳನ್ನು ತರಲಿದೆ. ರಾಶ್ಯಾಧಿಪತಿ ರವಿಯಾಗಿರುವ ಈ ರಾಶಿಯವರಿಗೆ ಗುರುವು 12ನೇ ಮನೆಗೆ ಪ್ರವೇಶಿಸುತ್ತಾನೆ. ಇದು ಹೆಚ್ಚಿದ ಖರ್ಚುಗಳನ್ನು ಸೂಚಿಸುತ್ತದೆ. ಆಧ್ಯಾತ್ಮಿಕ ಒಲವು ಮತ್ತು ವಿದೇಶ ಪ್ರಯಾಣದ ಯೋಗ ಇರುತ್ತದೆ. ಕುಟುಂಬದಲ್ಲಿ ಸಣ್ಣ ಪುಟ್ಟ ಕಲಹಗಳ ಸಾಧ್ಯತೆಯಿದ್ದು, ವ್ಯಾಪಾರಸ್ಥರು ಅತಿಯಾದ ಹೂಡಿಕೆಯಿಂದ ದೂರವಿರಬೇಕು.

ರಾಜಕೀಯ ವ್ಯಕ್ತಿಗಳು ಮತ್ತು ಉನ್ನತ ಸ್ಥಾನದಲ್ಲಿರುವವರು ತಮ್ಮ ಸ್ಥಾನಕ್ಕೆ ಕಂಟಕ ಎದುರಿಸುವ ಸಾಧ್ಯತೆಗಳಿರುವುದರಿಂದ ಎಚ್ಚರಿಕೆ ವಹಿಸಬೇಕು. ಆಸ್ತಿ ವಿಭಜನೆ ವಿಚಾರದಲ್ಲಿ ಜಾಗ್ರತೆ ಅಗತ್ಯ. ವೈವಾಹಿಕ ಜೀವನದಲ್ಲಿ ಸಾಮರಸ್ಯಕ್ಕಾಗಿ ಹೊಂದಾಣಿಕೆ ಮುಖ್ಯ. ಸರ್ಕಾರಿ ನೌಕರರು ಮಾತನಾಡುವಾಗ ಎಚ್ಚರದಿಂದ ಇರಬೇಕು. ಮೌನಂ ಕಲಹಂ ನಾಸ್ತಿ ಎಂಬ ತತ್ವವನ್ನು ಅನುಸರಿಸುವುದು ಉತ್ತಮ. ಬಾಕಿ ಇರುವ ವ್ಯವಹಾರಗಳನ್ನು ಪೂರ್ಣಗೊಳಿಸುವುದು ಸೂಕ್ತ. ಮಕ್ಕಳೊಂದಿಗೆ ವಿರೋಧಗಳುಂಟಾಗುವ ಸಾಧ್ಯತೆಗಳಿದ್ದರೂ, ವಿವಾಹ ವಿಷಯಗಳಲ್ಲಿ ಶುಭಫಲವಿರುತ್ತದೆ. ಗುರು ಬಲವಿಲ್ಲದಿದ್ದರೂ, ಇತರ ಗ್ರಹಗಳ ಬಲದಿಂದ ಕಾರ್ಯಗಳು ಸಾಗುತ್ತವೆ. ದತ್ತಾತ್ರೇಯ ಜಪ, ನಿಂಬೆಹಣ್ಣು ಅರ್ಪಣೆ ಮತ್ತು ಹಿರಿಯರಿಗೆ ಗೌರವ ನೀಡುವುದು ಶುಭ ಫಲಗಳನ್ನು ತರುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link