All posts by nagaraj11081993

ಒಂದಕ್ಕಿಂತ ಹೆಚ್ಚು ಇಪಿಎಫ್ ಅಕೌಂಟ್​ಗಳನ್ನು ವಿಲೀನಗೊಳಿಸುವ ಸುಲಭ ಕ್ರಮಗಳು

ಒಂದಕ್ಕಿಂತ ಹೆಚ್ಚು ಇಪಿಎಫ್ ಅಕೌಂಟ್​ಗಳನ್ನು ವಿಲೀನಗೊಳಿಸುವ ಸುಲಭ ಕ್ರಮಗಳು

ಇವತ್ತು ಖಾಸಗಿ ಸಂಸ್ಥೆಗಳ ಉದ್ಯೋಗಿಗಳಿಗೆ ಭವಿಷ್ಯದ ಭದ್ರತೆಗೆ ಇರುವ ಸ್ಕೀಮ್​ಗಳಲ್ಲಿ ಇಪಿಎಫ್ ಅಕೌಂಟ್ ಪ್ರಮುಖವಾದುದು. ಪ್ರತೀ ಉದ್ಯೋಗಿಗೂ ಕಂಪನಿ ವತಿಯಿಂದ ಇಪಿಎಫ್ ಅಕೌಂಟ್ ತೆರೆಯಲಾಗುತ್ತದೆ. ಉದ್ಯೋಗಿಯ ಸಂಬಳದಲ್ಲಿ ಶೇ. 12ರಷ್ಟು ಹಣವನ್ನು ಕಡಿತಗೊಳಿಸಿ ಈ ಅಕೌಂಟ್​ಗೆ ಹಾಕಲಾಗುತ್ತದೆ. ಕಂಪನಿ (ಉದ್ಯೋಗದಾತರು) ವತಿಯಿಂದಲೂ ಅಷ್ಟೇ ಪ್ರಮಾಣದಲ್ಲಿ ಹಣವು ಇಪಿಎಫ್ ಅಕೌಂಟ್​ಗೆ ಸೇರ್ಪಡೆಯಾಗುತ್ತದೆ. ಸರ್ಕಾರದಿಂದ (ಇಪಿಎಫ್​​ಒ ಸಂಸ್ಥೆ) ಪ್ರತೀ ವರ್ಷ ಇಪಿಎಫ್ ಅಕೌಂಟ್​ನಲ್ಲಿರುವ ಹಣಕ್ಕೆ ಬಡ್ಡಿ ಸಂದಾಯ ಆಗುತ್ತದೆ. ಹೀಗೆ ಉದ್ಯೋಗಿ ನಿವೃತ್ತಿಯಾಗುವವರೆಗೂ ಹಣ ಬೆಳೆಯಬೇಕೆನ್ನುವುದು ಉದ್ದೇಶ.

ಇದೇ ವೇಳೆ, ಉದ್ಯೋಗಿಯು ಕಂಪನಿ ಬದಲಿಸಿ ಹೊಸ ಕಂಪನಿ ಸೇರಿದಾಗ ಹೊಸ ಇಪಿಎಫ್ ಅಕೌಂಟ್ ರಚನೆಯಾಗುತ್ತದೆ. ಉದ್ಯೋಗಿಯು ತನ್ನ ವೃತ್ತಿಜೀವನದಲ್ಲಿ ಹಲವು ಕಂಪನಿಗಳಲ್ಲಿ ಕೆಲಸ ಮಾಡಬಹುದಾದ್ದರಿಂದ ಬಹು ಇಪಿಎಫ್ ಅಕೌಂಟ್​ಗಳು ಇದ್ದಿರಲು ಸಾಕು. ಕಂಪನಿ ಬದಲಿಸಿದಾಗ ಹಿಂದಿನ ಕಂಪನಿಯ ಇಪಿಎಫ್ ಅಕೌಂಟ್ ಅನ್ನು ವಿಲೀನಗೊಳಿಸಲು ಹೊಸ ಕಂಪನಿಯ ಎಚ್​ಆರ್​ಗೆ ತಿಳಿಸಿದರೆ ಸುಲಭವಾಗಿ ವಿಲೀನಗೊಳಿಸಬಹುದು. ಇಲ್ಲದಿದ್ದರೆ ಒಬ್ಬ ವ್ಯಕ್ತಿಗೆ ಹಲವು ಇಪಿಎಫ್ ಅಕೌಂಟ್​ಗಳು ಇರುತ್ತವೆ.

ಇದನ್ನೂ ಓದಿ: ಹೂಡಿಕೆಗೆ ಯಾವ ರೀತಿಯ ಮ್ಯೂಚುವಲ್ ಫಂಡ್​ಗಳನ್ನು ಆಯ್ದುಕೊಳ್ಳಬೇಕು? ಗಮನಿಸಬೇಕಾದ ಅಂಶಗಳಿವು

ಒಂದಕ್ಕಿಂತ ಹೆಚ್ಚು ಇಪಿಎಫ್ ಅಕೌಂಟ್​ಗಳಿದ್ದರೆ ಅವನ್ನು ಇತ್ತೀಚಿನ ಇಪಿಎಫ್ ಅಕೌಂಟ್​ಗೆ ವಿಲೀನಗೊಳಿಸಬಹುದು. ಆನ್​ಲೈನ್​ನಲ್ಲೇ ಸುಲಭವಾಗಿ ಈ ಕೆಲಸ ಮಾಡಬಹುದು. ಹಾಗೆ ಮಾಡಲು ಯುಎಎನ್ ಆ್ಯಕ್ಟಿವೇಟ್ ಆಗಿರಬೇಕು. ಇಪಿಎಫ್ ಅಕೌಂಟ್​ಗಳನ್ನು ವಿಲೀನಗೊಳಿಸುವ ಕ್ರಮ ಹೀಗಿದೆ:

  • ಇಪಿಎಫ್​ಒ ವೆಬ್​ಸೈಟ್​ಗೆ ಭೇಟಿ ನೀಡಿ: www.epfindia.gov.in/site_en/index.php
  • ನಿಮ್ಮ ಯುಎಎನ್ ಮತ್ತು ಪಾಸ್ವರ್ಡ್ ಬಳಸಿ ಸೈನ್ ಇನ್ ಆಗಿ
  • ಆನ್​ಲೈನ್ ಸರ್ವಿಸ್ ಟ್ಯಾಬ್​ಗೆ ಹೋಗಿ, ‘ಒನ್ ಮೆಂಬರ್ ಅಂಡ್ ಒನ್ ಇಪಿಎಫ್ ಅಕೌಂಟ್’ ಲಿಂಕ್ ಕ್ಲಿಕ್ ಮಾಡಿ.
  • ಹೊಸ ವಿಂಡೋದಲ್ಲಿ ನಿಮ್ಮ ವೈಯಕ್ತಿಕ ವಿವರ ಮತ್ತು ಈಗಿರುವ ಕಂಪನಿಯ ಇಪಿಎಫ್ ಅಕೌಂಟ್ ಅನ್ನು ನೋಡಬಹುದು.
  • ನೊಂದಾಯಿತ ಫೋನ್ ನಂಬರ್ ಮತ್ತು ಯುಎಎನ್ ಸೇರಿದಂತೆ ಅಲ್ಲಿ ಕೇಳಲಾಗುವ ಮಾಹಿತಿ ಒದಗಿಸಿ.
  • ‘ಜನರೇಟ್ ಒಟಿಪಿ’ ಆಯ್ಕೆ ಆಯ್ದುಕೊಂಡು ವೆರಿಫಿಕೇಶನ್ ಪಡೆಯಿರಿ.
  • ಈಗ ಹೊಸ ಇಪಿಎಫ್ ಅಕೌಂಟ್​ಗೆ ವಿಲೀನವಾಗಬೇಕಿರುವ ಹಳೆಯ ಇಪಿಎಫ್ ಅಕೌಂಟ್​ಗಳ ಮಾಹಿತಿ ಕೇಳಲಾಗುತ್ತದೆ.
  • ಡಿಕ್ಲರೇಶನ್ ಬಾಕ್ಸ್ ಅನ್ನು ಚೆಕ್ ಮಾಡಿ, ‘ಸಬ್ಮಿಟ್’ ಕ್ಲಿಕ್ ಮಾಡಿ.

ಇದನ್ನೂ ಓದಿ: ಮಾರ್ಕೆಟ್ ಟ್ರೆಂಡ್, ಎಕ್ಸ್​ಪೆನ್ಸ್ ರೇಶಿಯೋ, ಎಮರ್ಜೆನ್ ಫಂಡ್ ಇತ್ಯಾದಿ.. ಜನಸಾಮಾನ್ಯರು ಮಾಡುವ ಹೂಡಿಕೆ ತಪ್ಪುಗಳಿವು

ಈಗ ವಿಲೀನಕ್ಕೆ ನೀವು ಅರ್ಜಿ ಸಲ್ಲಿಸಿದಂತಾಗುತ್ತದೆ. ಈ ಅರ್ಜಿಗೆ ನಿಮ್ಮ ಈಗಿನ ಕಂಪನಿಯು ಅನುಮೋದನೆ ನೀಡಬೇಕು. ಆಗ ಈ ಅರ್ಜಿಯನ್ನು ಇಪಿಎಫ್​ಒ ಪರಿಶೀಲಿಸಿ, ಇಪಿಎಫ್ ಅಕೌಂಟ್​ಗಳನ್ನು ವಿಲೀನಗೊಳಿಸುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ರಾಗಿಣಿ ದ್ವಿವೇದಿ, ವರಲಕ್ಷ್ಮೀ ‘ಪೊಲೀಸ್ ಕಂಪ್ಲೈಂಟ್’: ಸಾಕ್ಷಿಯಾದ ಹಿರಿಯ ನಟಿ ಪ್ರೇಮಾ

ಮಹಿಳಾ ಪ್ರಧಾನ ಆ್ಯಕ್ಷನ್ ಕಹಾನಿ ಇರುವ ‘ಪೊಲೀಸ್ ಕಂಪ್ಲೈಂಟ್’ ಸಿನಿಮಾದಲ್ಲಿ ವರಲಕ್ಷ್ಮೀ ಶರತಕುಮಾರ್ ಹಾಗೂ ರಾಗಿಣಿ ದ್ವಿವೇದಿ (Ragini Dwivedi) ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ನವೀನ್ ಚಂದ್ರ, ಕೃಷ್ಣ ಸಾಯಿ ಅವರು ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ. ರವಿಶಂಕರ್, ಶರತ್ ಲೋಹಿತಾಶ್ವ, ಸಪ್ತಗಿರಿ, ಅನಿಲ್ ರಾಜ್, ಪೃಥ್ವಿರಾಜ್, ಜೆಮಿನಿ ಸುರೇಶ್ ಮುಂತಾದ ಕಲಾವಿದರು ನಟಿಸಿದ್ದಾರೆ. ಈ ಹಿಂದೆ ‘ಅನು’, ‘ದಂಡು’, ‘ಆಪ್ತ’ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದ್ದ ಸಂಜೀವ ಮೆಗೋಟಿ ಅವರು ‘ಪೊಲೀಸ್ ಕಂಪ್ಲೈಂಟ್’ (Police Complaint) ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ.

‘ಎಂ.ಎಸ್.ಕೆ. ಪ್ರಮೀದಾಶ್ರೀ ಫಿಲ್ಮ್ಸ್’ ಬ್ಯಾನರ್ ಮೂಲಕ ‘ಪೊಲೀಸ್ ಕಂಪ್ಲೈಂಟ್’ ಚಿತ್ರ ನಿರ್ಮಾಣವಾಗಿದೆ. ಈಗಾಗಲೇ ಬಹುತೇಕ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ ಟೀಸರ್ ಮತ್ತು ಹಾಡೊಂದನ್ನು ಬಿಡುಗಡೆ ಮಾಡಿದೆ. ನಟಿ ಪ್ರೇಮಾ ಟೀಸರ್ ರಿಲೀಸ್ ಮಾಡಿದರು. ಮೊದಲ ಹಾಡನ್ನು ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್.ಆರ್.ಕೆ. ವಿಶ್ವನಾಥ್ ಬಿಡುಗಡೆಗೊಳಿಸಿದರು.

ಈ ವೇಳೆ ನಿರ್ದೇಶಕ ಸಂಜೀವ್ ಮೆಗೋಟಿ ಮಾತನಾಡಿದರು. ‘ಸುಮಾರು 10 ವರ್ಷದ ನಂತರ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೆ ಬರುತ್ತಿರುವುದಕ್ಕೆ ಖುಷಿಯಾಗುತ್ತಿದೆ. ನಾವು ಮಾಡಿದ ಕರ್ಮ ಹೇಗೆ ನಮ್ಮನ್ನು ಕಾಡುತ್ತದೆ ಎಂಬ ಒಂದು ಎಳೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಕನ್ನಡ ಮತ್ತು ತೆಲುಗಿನ ಸುಮಾರು 50ಕ್ಕೂ ಹೆಚ್ಚಿನ ಕಲಾವಿದರು ನಟಿಸಿದ್ದಾರೆ. ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡುವ ಯೋಜನೆಯಿದೆ’ ಎಂದು ಅವರು ಹೇಳಿದರು.

ನಟಿ ರಾಗಿಣಿ ದ್ವಿವೇದಿ ಅವರು ‘ಪೊಲೀಸ್ ಕಂಪ್ಲೈಂಟ್’ ಚಿತ್ರದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ‘ನನ್ನ ವೃತ್ತಿಜೀವನದಲ್ಲಿ ಇದೊಂದು ವಿಭಿನ್ನ ಸಿನಿಮಾ. ಇದರಲ್ಲಿ ತಾಯಿ ಮತ್ತು ಮಗುವಿನ ಸಂಬಂಧದ ಸುತ್ತ ನನ್ನ ಪಾತ್ರ ಸಾಗುತ್ತದೆ. ಆ್ಯಕ್ಷನ್, ಹಾರರ್ ಜತೆಗೆ ಎಮೋಶನ್ಸ್ ಸಹ ಈ ಸಿನಿಮಾದಲ್ಲಿದೆ. ಎಲ್ಲಾ ರೀತಿಯ ಪ್ರೇಕ್ಷಕರಿಗೂ ಈ ಸಿನಿಮಾ ಇಷ್ಟವಾಗಲಿದೆ’ ಎಂದು ರಾಗಿಣಿ ಹೇಳಿದರು.

ಇದನ್ನೂ ಓದಿ: ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ

‘ಈವರೆಗೆ ತೆಲುಗಿನಲ್ಲಿ ಕೆಲವು ಚಿತ್ರಗಳಲ್ಲಿ ನಟಿಸಿದ್ದೇನೆ. ಕನ್ನಡದಲ್ಲಿ ಹೀರೋ ಆಗಿ ಇದು ನನಗೆ ಮೊದಲ ಸಿನಿಮಾ. ಸಿನಿಮಾದ ಕಥೆ ಮತ್ತು ಪಾತ್ರ ತುಂಬಾ ಚೆನ್ನಾಗಿದೆ’ ಎಂದು ಕೃಷ್ಣಸಾಯಿ ಹೇಳಿದರು. ಬಿಡುಗಡೆಯಾಗಿರುವ ಹಾಡಿಗೆ ಆರೋಹಣ ಸುಧೀಂದ್ರ ಸಂಗೀತ ನೀಡಿದ್ದು, ಬಿ.ಆರ್. ಛಾಯಾ ಧ್ವನಿಯಾಗಿದ್ದಾರೆ. ಈ ಸಿನಿಮಾಗೆ ಹರೀಶ್ ಸೊಂಡೇಕೊಪ್ಪ ಛಾಯಾಗ್ರಹಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚಾಮರಾಜನಗರ: ವಿದ್ಯುತ್ ಶಾಕ್​​ಗೆ ಹೆಣ್ಣು ಹುಲಿ ಬಲಿ; ಅರಣ್ಯಾಧಿಕಾರಿಗಳ ಕಳ್ಳಾಟಕ್ಕೆ ರೊಚ್ಚಿಗೆದ್ದ ರೈತರು

ಚಾಮರಾಜನಗರ, ಮಾರ್ಚ್​​ 17: ಗಡಿನಾಡು ಚಾಮರಾಜನಗರದಲ್ಲಿ ಮಾನವ ಮತ್ತು ಕಾಡು ಪ್ರಾಣಿ ಸಂಘರ್ಷ ಮತ್ತೆ ಮುಂದುವರೆದಿದೆ. ಕಳೆದ ವಾರ ಮೂರು ಹಸುವನ್ನ ಕೊಂದು ತಿಂದಿದ್ದ 5 ವರ್ಷದ ಹೆಣ್ಣು ಹುಲಿ (tiger) ವಿದ್ಯುತ್ ಶಾಕ್​​ಗೆ ಬಲಿಯಾಗಿರುವಂತಹ (death) ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ. ಜಾನುವಾರು ಸತ್ತಾಗ ಬಾರದ ಅರಣ್ಯ ಸಿಬ್ಬಂದಿ ಇದೀಗ ಹುಲಿ ಸಾವಿನ ವಿಚಾರ ತಿಳಿಯುತ್ತಿದ್ದಂತೆ ಓಡೋಡಿ ಬಂದಿದ್ದ ಅರಣ್ಯಾಧಿಕಾರಿಗಳಿಗೆ ರೈತರು ಚಳಿ ಕೂಡ ಬಿಡಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗೆ ಘೇರಾವ್ ಹಾಕಿದ ಅನ್ನದಾತರು 

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಜಮೀನು ಒಂದಕ್ಕೆ ನೀಡಿದ್ದ ವಿದ್ಯುತ್ ಸಂಪರ್ಕದಿಂದ 5 ವರ್ಷ ಪ್ರಾಯದ ಹೆಣ್ಣು ಹುಲಿ ಸಾವನ್ನಪ್ಪಿದೆ. ಈ ಹಿನ್ನಲೆ ಸ್ಥಳಕ್ಕೆ ಬಂದ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿಗೆ ಘೇರಾವ್ ಹಾಕಿ ಅನ್ನದಾತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ ಹುಲಿ ಸಾವು ಕೇಸ್​: ಉರುಳು ಹಾಕಿದ್ದ ಆರೋಪಿ ಅರೆಸ್ಟ್

ಇನ್ನು ಕಳೆದ 15 ದಿನಗಳಲ್ಲಿ ರವಿಚಂದ್ರ ಎಂಬುವವರ ಜಮೀನಿನಲ್ಲಿ ಮೇಯುತ್ತಿದ್ದ ಮೂರು ಜಾನುವಾರುಗಳ ಮೇಲೆ ವ್ಯಾಘ್ರ ದಾಳಿ ಮಾಡಿತ್ತು. ಮೂರು ಹಸುವನ್ನ ಕೊಂದು ತಿಂದು ತೇಗಿತ್ತು. ಆಗ ಬಂಡೀಪುರ ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದರೆ ಸ್ಥಳಕ್ಕೆ ಬಾರದೆ ಉಡಾಫೆ ತೋರಿದ್ದರು. ಆದರೆ ಇಂದು ಹುಲಿ ಸತ್ತ ವಿಚಾರ ತಿಳಿದ ತಕ್ಷಣ ಇಡೀ ಬಂಡೀಪುರ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದರು. ಇದರಿಂದ ರೊಚ್ಚಿಗೆದ್ದ ರೈತ ವರ್ಗ ಅರಣ್ಯ ಸಿಬ್ಬಂದಿಗೆ ಘೇರಾವ್ ಹಾಕಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

ಹುಲಿಯ ಕಾಟಕ್ಕೆ ಈ ಭಾಗದ ರೈತರು ರೋಸಿಹೋಗಿದ್ದಾರೆ. ಆಗಲೇ ಅರಣ್ಯ ಸಿಬ್ಬಂದಿ ಬೋನಿಟ್ಟು ಹುಲಿಯನ್ನ ಹಿಡಿದಿದ್ದರೆ ಇಂದು ಹುಲಿ ಬಲಿಯಾಗುತ್ತಿರಲಿಲ್ಲ ಎಂದು ರೈತ ದಿನೇಶ್​ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ: ಗಂಡು ಹುಲಿ ಮೃತದೇಹ ಪತ್ತೆ: ಡ್ಯಾಂನಲ್ಲಿ ಶವ ತೇಲುತ್ತಿರುವುದನ್ನು ಕಂಡು ಬೆಚ್ಚಿಬಿದ್ದ ಪ್ರವಾಸಿಗರು

ಜಮೀನಿನಲ್ಲಿ ವಿದ್ಯುತ್ ಕೊಟ್ಟು ಹುಲಿ ಸಾವಿಗೆ ಕಾರಣವಾದವರ ಮೇಲೆ ಎಫ್​ಐಆರ್ ಮಾಡಿ ಕಾನೂನು ಕ್ರಮ ತೆಗೆದುಕೊಳ್ಳಿ, ಆದರೆ ಕರ್ತವ್ಯ ಲೋಪ ಎಸಗಿದ ಅರಣ್ಯ ಇಲಾಖೆಯ ಸಿಎಫ್ ಪ್ರಭಾಕರನ್ ಮೇಲೆ ಎಫ್ ಐ ಆರ್ ಮಾಡಿದರೆ ಮಾತ್ರ ರೈತನ ಮೇಲೆ ಎಫ್​ಐಆರ್ ಮಾಡಬೇಕು. ಇಲ್ಲದೆ ಹೋದರೆ ಯಾವುದೇ ಕಾರಣಕ್ಕೂ ಪ್ರಕರಣ ದಾಖಲು ಮಾಡುವುದಕ್ಕೆ ಬಿಡಲ್ಲವೆಂದು ರೈತರು ಪಟ್ಟುಹಿಡಿದರು. ರೈತರ ಉಗ್ರ ರೂಪಕ್ಕೆ ಬೆದರಿದ ಬಂಡೀಪುರ ಸಿಎಫ್ ಪ್ರಭಾಕರನ್, ಪೊಲೀಸ್ ರಕ್ಷಣೆ ಜೊತೆ ಸ್ಥಳಕ್ಕೆ ಬಂದಿದ್ದು ಹಾಸ್ಯಸ್ಪದವಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕೆಯುಡಬ್ಲ್ಯೂಜೆ ಸಂಸ್ಥಾಪಕ ಡಿವಿಜಿ ಜನ್ಮ ದಿನಾಚರಣೆ: ಇತಿಹಾಸ ಸ್ಮರಿಸಿದ ಶಿವಾನಂದ ತಗಡೂರು

ಬೆಂಗಳೂರು, ಮಾರ್ಚ್​​ 17: ಆಧುನಿಕ ಕನ್ನಡ ಸಾಹಿತ್ಯದ ಸರ್ವಜ್ಞ, ಸಾಹಿತ್ಯ ದಿಗ್ಗಜ ಡಿ.ವಿ. ಗುಂಡಪ್ಪನವರು ಕೇವಲ ಸಾಹಿತಿಯಷ್ಟೇ ಅಲ್ಲದೆ ಪತ್ರಕರ್ತರ ಹಿತರಕ್ಷಣೆಗಾಗಿ 95 ವರ್ಷಗಳ ಹಿಂದೆಯೇ ಸಂಘಟನೆಯನ್ನು ಕಟ್ಟಿದ ದೂರದರ್ಶಿ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ.
ನಗರದಲ್ಲಿ ನಡೆದ ಬೆಂಗಳೂರು ಜಿಲ್ಲಾ ಘಟಕದ ನೂತನ ಕಚೇರಿ ಪೂಜೆ ಹಾಗೂ ಡಿ.ವಿ.ಜಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಡಿ.ವಿ.ಜಿ ಅವರು ಅಂದು ಹಾಕಿಕೊಟ್ಟ ಅಡಿಪಾಯದ ಮೇಲೆ ಇಂದು ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ ಹೆಮ್ಮರವಾಗಿ ಬೆಳೆದಿದೆ. ಸುಮಾರು 10,000 ಸದಸ್ಯರನ್ನು ಹೊಂದಿರುವ ಇದು ದೇಶದ ಅತಿದೊಡ್ಡ ಸಂಘಟನೆಗಳಲ್ಲಿ ಒಂದಾಗಿದೆ. ಹಿರಿಯ ಪತ್ರಕರ್ತ ಖಾದ್ರಿ ಶಾಮಣ್ಣ ಸಮಿತಿಯ ಶಿಫಾರಸಿನ ಮೇರೆಗೆ ಹುಬ್ಬಳ್ಳಿಯಲ್ಲಿ ನಡೆದ ಸಮ್ಮೇಳನದಲ್ಲಿ ಈ ಸಂಘಕ್ಕೆ ಮರುನಾಮಕರಣ ಮಾಡಲಾಗಿದೆ ಎಂದು ಹೇಳುವ ಮೂಲಕ ಇತಿಹಾಸವನ್ನು ತಗಡೂರು ಸ್ಮರಿಸಿದ್ದಾರೆ.

ಕರ್ನಾಟಕ ಭೂ ಕಬಳಿಕೆ ನಿಷೇಧ ನ್ಯಾಯಾಲಯದ (ಕಂದಾಯ) ಸದಸ್ಯ ಕೆ.ಎಚ್. ಅಶ್ವತ್ಥನಾರಾಯಣ ಮಾತನಾಡಿ, ಡಿ.ವಿ.ಜಿ ಪ್ರೌಢಶಾಲೆವರೆಗೆ ಓದಿದ್ದರೂ ಕನ್ನಡ, ಇಂಗ್ಲಿಷ್ ಮತ್ತು ಸಂಸ್ಕೃತ ಭಾಷೆಯಲ್ಲಿ ಅವರು ಹೊಂದಿದ್ದ ಪಾಂಡಿತ್ಯ ಅಪ್ರತಿಮವಾದುದು. ಅವರ ‘ಮಂಕುತಿಮ್ಮನ ಕಗ್ಗ’ ಕೃತಿಯು ಸಮಾಜದ ಪ್ರತಿಯೊಂದು ಸಮಸ್ಯೆಗೆ ಪರಿಹಾರ ನೀಡುವ ಶಕ್ತಿ ಹೊಂದಿವೆ ಎಂದಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ಮಾತನಾಡಿ, ದೇಶಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ಹೇಗೋ, ಪತ್ರಕರ್ತರು ಮತ್ತು ಸಾಮಾನ್ಯ ಜನರ ಬದುಕಿಗೆ ಡಿ.ವಿ.ಜಿ ಅವರ ‘ಮಂಕುತಿಮ್ಮನ ಕಗ್ಗ’ ಸಂವಿಧಾನದಂತಿದೆ ಎಂದು ಕೊಂಡಾಡಿದ್ದಾರೆ.

ಇದನ್ನೂ ಓದಿ: SSLC ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ, ವಿಡಿಯೋ ವೈರಲ್

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಹಿರಿಯ ಪತ್ರಕರ್ತ ಭೋಪಯ್ಯ ಭಾಗವಹಿಸಿದ್ದರು. ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ್, ಬೆಂಗಳೂರು ನಗರ ಜಿಲ್ಲೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಬೆಂಗಳೂರು ನಗರ ಜಿಲ್ಲೆ ಅಧ್ಯಕ್ಷರಾದ ಎಸ್.ಸೋಮಶೇಖರ ಗಾಂಧಿ ಸ್ವಾಗತಿಸಿದರು. ಬೆಂಗಳೂರು ನಗರ ಜಿಲ್ಲೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ರವೀಶ್ ವಂದನಾರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ ಬೆಂಗಳೂರು ನಗರ ಘಟಕದ ಕಚೇರಿಯಲ್ಲಿ ವಿದ್ಯುಕ್ತವಾಗಿ ಪೂಜೆ ಸಲ್ಲಿಸಿದ ನೂತನ ಪದಾಧಿಕಾರಿಗಳು ಸಂಘದ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಿದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹೈದರಾಬಾದ್ ತಂಡಕ್ಕೆ ಮಾರ್ನಸ್ ಲಬುಶೇನ್ ನಾಯಕ

Source link

Ugadi 2026: ಯುಗಾದಿ ಹಬ್ಬದಂದು ಬೇವು-ಬೆಲ್ಲ ಹಂಚುವುದರ ಹಿಂದಿನ ಆಧ್ಯಾತ್ಮಿಕ, ವೈಜ್ಞಾನಿಕ ಮಹತ್ವವೇನು?

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ… ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ… ಮತ್ತೆ ಯುಗಾದಿ ಬಂದಿದೆ.. ಹೊಸ ಆರಂಭ, ಹೊಸ ವರ್ಷ, ಶುದ್ಧತೆ, ಹೊಸ ನಿರೀಕ್ಷೆ ಮತ್ತು ಸಮೃದ್ಧಿಯ ಸಂಕೇತವಾಗಿ ಯುಗಾದಿ (Ugadi) ಹಬ್ಬವನ್ನು ಆಚರಿಸಲಾಗುತ್ತದೆ. ಹಿಂದೂಗಳ ಈ ಪವಿತ್ರ ಹಬ್ಬದ ದಿನ ದೇವರ ಪೂಜಾ ಕಾರ್ಯದ ಜೊತೆಗೆ ಮನೆಮಂದಿಯೆಲ್ಲಾ ಬೇವು ಬೆಲ್ಲವನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಸ್ನೇಹಿತರು, ಸಂಬಂಧಿಕರಿಗೂ ಬೇವು-ಬೆಲ್ಲವನ್ನು ಹಂಚುತ್ತಾರೆ. ಹೌದು  ಸಂಕ್ರಾಂತಿ ಹಬ್ಬದಂದು ಎಳ್ಳು ಬೆಲ್ಲ ಸವಿಯುವ ಹಾಗೆ ಯುಗಾದಿ ಹಬ್ಬದಂದು ಬೇವು ಬೆಲ್ಲ ಸೇವಿಸುವ ಆಚರಣೆ ರೂಢಿಯಲ್ಲಿದೆ. ಇದು ಕೇವಲ ಆಚರಣೆಯಲ್ಲ, ಇದರ ಹಿಂದೆ ವೈಜ್ಞಾನಿಕ ಕಾರಣವೂ ಇದೆ. ಬೇವು-ಬೆಲ್ಲವನ್ನು ಸವಿಯುವುದರ ಹಿಂದಿರುವ ವೈಜ್ಞಾನಿಕ ಕಾರಣವೇನು ಎಂಬುದನ್ನು ತಿಳಿಯೋಣ ಬನ್ನಿ.

ಬೇವು-ಬೆಲ್ಲದ ಆಧ್ಯಾತ್ಮಿಕ ಮಹತ್ವವೇನು?

ನೋವು-ನಲಿವನ್ನು ಸಂಕೇತಿಸುತ್ತದೆ: ಕಹಿ ಬೇವು ಮತ್ತು ಸಿಹಿ ಬೆಲ್ಲವು ಜೀವನದ ದ್ವಂದ್ವ ಸ್ವಭಾವವನ್ನು ಸಂಕೇತಿಸುತ್ತದೆ.  ಸಂತೋಷ ಮತ್ತು ದುಃಖ, ಸವಾಲುಗಳು ಮತ್ತು ಯಶಸ್ಸು ಎಲ್ಲವನ್ನು ಬೇವು ಬೆಲ್ಲದಂತೆ ಸಮಾನವಾಗಿ ಸ್ವೀಕರಿಸಬೇಕು ಜೀವನವು ಕಹಿ ಮತ್ತು ಸಿಹಿ ಅನುಭವಗಳ ಮಿಶ್ರಣವಾಗಿದ್ದು, ಈ  ಎರಡನ್ನೂ ಸಮಾನವಾಗಿ ಸ್ವೀಕರಿಸುವುದರಿಂದ ಜೀವನವು ಸಂತೋಷದಿಂದ ಸಾಗುತ್ತದೆ ಎಂಬುದನ್ನು ಸಂಕೇತಿಸುತ್ತದೆ.

ಶುಭ ಆರಂಭದ ಸಂಕೇತ: ಹಿಂದೂ ಸಂಪ್ರದಾಯದಲ್ಲಿ, ಬೇವನ್ನು ದೈವಿಕ ಗುಣಗಳನ್ನು ಹೊಂದಿರುವ ಪವಿತ್ರ ಮರವೆಂದು ಪರಿಗಣಿಸಲಾಗುತ್ತದೆ. ಇದನ್ನು ಬೆಲ್ಲದೊಂದಿಗೆ ಪ್ರಸಾದವಾಗಿ ಅರ್ಪಿಸುವುದು ಶುದ್ಧೀಕರಣ ಮತ್ತು ಹೊಸ ವರ್ಷದ ಆಶೀರ್ವಾದದ ಆರಂಭವನ್ನು ಸೂಚಿಸುತ್ತದೆ. ಇದು ನಕಾರಾತ್ಮಕತೆಯನ್ನು ಶುದ್ಧೀಕರಿಸುತ್ತದೆ ಮತ್ತು ಸಕಾರಾತ್ಮಕತೆಯನ್ನು ಆಕರ್ಷಿಸುತ್ತದೆ, ಮುಂಬರುವ ವರ್ಷವನ್ನು ಸಮೃದ್ಧಗೊಳಿಸುತ್ತದೆ ಎಂದು ನಂಬಲಾಗಿದೆ. ಅದಕ್ಕಾಗಿಯೇ ಹೊಸ ವರ್ಷವಾದ ಯುಗಾದಿ ಹಬ್ಬದ ದಿನ ಬೇವು ಬೆಲ್ಲವನ್ನು ಸ್ವೀಕರಿಸಲಾಗುತ್ತದೆ.

ಬೇವು ಬೆಲ್ಲದ ಸೇವನೆಯ ವೈಜ್ಞಾನಿಕ ಮಹತ್ವವೇನು?

ಯುಗಾದಿ ಹಬ್ಬದ ದಿನದಿಂದ ವಸಂತ ಕಾಲ ಆರಂಭವಾಗುತ್ತದೆ. ಈ ಸಮಯದಲ್ಲಿ ಸೂರ್ಯನ ಪ್ರಖರತೆ ಹೆಚ್ಚಾದಂತೆ ವಾತಾವರಣವು ಒಣಗಿ, ಬಿಸಿಲಿನಿಂದ ಕೂಡಿ, ಬೆಚ್ಚಗಾಗುತ್ತದೆ ಮತ್ತು ಸೂರ್ಯನ ಶಾಖದ ಪ್ರಭಾವದಿಂದಾಗಿ ದೇಹದಲ್ಲಿ ಪಿತ್ತರದ ಅಂಶವೂ ಹೆಚ್ಚಾಗುತ್ತದೆ. ಇದರಿಂದಾಗಿ ಹೊಟ್ಟೆ ಸಂಬಂಧಿ ಕಾಯಿಲೆಗಳು, ಬಾಯಿ ಹುಣ್ಣು, ವಾಂತಿ, ಎದೆಯುರಿ, ಅತಿಯಾದ ಬೆವರುವಿಕೆ, ತುರಿಕೆ ಇತ್ಯಾದಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಈ ಕಾಯಿಲೆಗಳನ್ನು ತಡೆಗಟ್ಟಲು, ಅತಿಯಾದ ಪಿತ್ತರಸದ ಅಂಶವನ್ನು ಕಡಿಮೆ ಮಾಡಲು ಮತ್ತು ರೋಧನಿರೋಧಕ ಶಕ್ತಿಯನ್ನು ಹೆಚ್ಚಿಸಲು ಯುಗಾದಿ ಹಬ್ಬದಂದು ಬೇವು ಬೆಲ್ಲವನ್ನು ಸೇವನೆ ಮಾಡಲಾಗುತ್ತದೆ.

ಇದನ್ನೂ ಓದಿ: ವರ್ಷ ಯುಗಾದಿ ಹಬ್ಬ ಯಾವಾಗ ? ದಿನ ಏನು ಮಾಡಬೇಕು ಮತ್ತು ಏನು ಮಾಡಬಾರದು?

ಬೇವು-ಬೆಲ್ಲದ ಆರೋಗ್ಯ ಪ್ರಯೋಜನಗಳೇನು?

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಬೇವು-ಬೆಲ್ಲದ ಮಿಶ್ರಣವು ಬ್ಯಾಕ್ಟೀರಿಯಾ ವಿರೋಧಿ, ಆಂಟಿವೈರಲ್ ಮತ್ತು ಶಿಲೀಂಧ್ರನಾಶಕ ಗುಣಗಳನ್ನು ಹೊಂದಿದ್ದು, ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ದೇಹವನ್ನು ತಂಪಾಗಿಸುತ್ತದೆ: ಕಹಿಯಾದ ಬೇವನ್ನು ಸಿಹಿಯಾದ ಬೆಲ್ಲದೊಂದಿಗೆ ಸೇವಿಸಿದಾಗ, ದೇಹದಲ್ಲಿನ ಪಿತ್ತರಸ ಅಂಶವು ಕಡಿಮೆಯಾಗುತ್ತದೆ ಮತ್ತು ಇದು ದೇಹವನ್ನು ತಂಪಾಗಿಸುತ್ತದೆ.

ಬೇವು ದೇಹವನ್ನು ನಿರ್ವಿಷಗೊಳಿಸುತ್ತದೆ: ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ವಿಷವನ್ನು ತೆಗೆದುಹಾಕುತ್ತದೆ, ಚರ್ಮ ಮತ್ತು ಜೀರ್ಣಕ್ರಿಯೆಯ ಆರೋಗ್ಯವನ್ನು ಉತ್ತೇಜಿಸುತ್ತದೆ.

ಬೇವು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ: ಬೇವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಇದು ಮಧುಮೇಹಿಗಳಿಗೆ ಪ್ರಯೋಜನಕಾರಿಯಾಗಿದೆ.

ಬೆಲ್ಲ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ: ಬೆಲ್ಲ ನೈಸರ್ಗಿಕ ಜೀರ್ಣಕಾರಿ ಸಹಾಯಕವಾಗಿ ಕಾರ್ಯನಿರ್ವಹಿಸುತ್ತದೆ, ಆಮ್ಲೀಯತೆ ಮತ್ತು ಉಬ್ಬುವಿಕೆಯನ್ನು ತಡೆಯುತ್ತದೆ.

ಬೆಲ್ಲ ಕಬ್ಬಿಣದಿಂದ ಸಮೃದ್ಧವಾಗಿದೆ: ಇದು ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುವ ಮೂಲಕ ರಕ್ತಹೀನತೆಯ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಬೆಲ್ಲ ತ್ವರಿತ ಶಕ್ತಿಯನ್ನು ಒದಗಿಸುತ್ತದೆ:  ಬೆಲ್ಲವು ನೈಸರ್ಗಿಕ ಶಕ್ತಿಯ ಮೂಲವಾಗಿದ್ದು, ಇದು ಬೇಸಿಗೆಯಲ್ಲಿ ದೇಹ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಗಾಯಗಳನ್ನು ಗುಣಪಡಿಸುತ್ತದೆ: ಬೇವು ಬೆಲ್ಲದ ಮಿಶ್ರಣವು ಉರಿಯೂತ ನಿವಾರಕ ಗುಣಗಳನ್ನು ಹೊಂದಿರುವುದರಿಂದ, ಇದು ಗಾಯಗಳನ್ನು ಗುಣಪಡಿಸುತ್ತದೆ ಮತ್ತು ಅವುಗಳನ್ನು ಬೇಗನೆ ಗುಣಪಡಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇರ್ಫಾನ್ ಪಠಾಣ್ ಬಿಟ್ಟು ವಾಸಿಂ ಜಾಫರ್ ಹಿಂದೆ ಬಿದ್ದ ಹಾರ್ದಿಕ್ ಪಾಂಡ್ಯ

Source link

ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ

ಬೆಳಗಾವಿ, (ಮಾರ್ಚ್ 17): ಕರ್ನಾಟಕದಲ್ಲಿ (Karnataka) ಬೇಸಿಗೆಯ (Summer)  ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣದೇವ (Rain) ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ಹೌದು… ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಹಾಗೂ ಸಾಧಾರಣ ಮಳೆಯಾಗುತ್ತಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ ಜನತೆಗೆ ವರುಣ ತಂಪೆರೆದಂತಾಗಿದೆ. ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಶಿವಬಸವನಗರ, ನೆಹರು ನಗರ, ಎಸ್ ಪಿ ಕಚೇರಿ ಸುತ್ತಮುತ್ತ ಭಾರಿ ಆಲಿಕಲ್ಲು ಮಳೆಯಾಅಗುತ್ತಿದ್ದು, ಏಕಾಏಕಿ ಸುರಿದ ಮಳೆಗೆ ಜನರು ಕಂಗಾಲಾಗಿದ್ದಾರೆ.

ಇದನ್ನೂ ಓದಿ: Bangalore Rain: ಬೆಂಗಳೂರಿನ ಹಲವೆಡೆ ತುಂತುರು ಮಳೆ: ಬಿಸಿಲ ಬೇಗೆಗೆ ತಂಪೆರೆದ ವರುಣ

Source link

ಗ್ಯಾಸ್ ಸಿಲಿಂಡರ್​​ಗಾಗಿ ಹೈಕೋರ್ಟ್​​ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್: ರಿಟ್​​ ಅರ್ಜಿ ಸಲ್ಲಿಕೆ

ಬೆಂಗಳೂರು, ಮಾರ್ಚ್​​ 17: ರಾಜ್ಯದಲ್ಲಿ ಕಮರ್ಷಿಯಲ್​​ ಸಿಲಿಂಡರ್​​ಗಳ ಅಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರೋದು ಹೋಟೆಲ್​​ ಉದ್ಯಮವನ್ನು ನಷ್ಟದ ಕೂಪಕ್ಕೆ ತಳ್ಳುತ್ತಿದೆ. ಈಗಾಗಲೇ ಹಲವು ಹೋಟೆಲ್​​ಗಳು ಬಂದ್​​ ಆಗಿದ್ದರೆ, ಇನ್ನೊಂದಿಷ್ಟು ಮೆನುವಿನಲ್ಲಿ ಭಾರೀ ಕಡಿತದ ಜೊತೆ ಗ್ರಾಹಕರಿಗೆ ಸೇವೆ ನೀಡುತ್ತಿವೆ. ಸ್ಥಿತಿ ಹೀಗೆಯೇ ಮುಂದುವರಿದರೆ ಅವುಗಳೂ ಕ್ಲೋಸ್​​ ಆಗುವ ಆತಂಕ ಎದುರಾಗಿದೆ. ಈ ಬೆನ್ನಲ್ಲೇ ಬೆಂಗಳೂರು ಹೋಟೆಲ್ ಅಸೋಸಿಯೇಷನ್, ವಾಣಿಜ್ಯ ಬಳಕೆಯ ಸಿಲಿಂಡರ್​​ಗಳಿಗಾಗಿ ಹೈಕೋರ್ಟ್​​ ಕದ ತಟ್ಟಿದೆ.

ಹೈಕೋರ್ಟ್​ಗೆ ರಿಟ್ ಅರ್ಜಿ

ಹೋಟೆಲ್​ಗಳಿಗೆ ಗ್ಯಾಸ್ ಸಿಲಿಂಡರ್ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳನ್ನು ಪ್ರತಿವಾದಿಯನ್ನಾಗಿಸಿ ಅರ್ಜಿ ಸಲ್ಲಿಸಲಾಗಿದ್ದು, ಹೋಟೆಲ್ ಮುಚ್ಚಿರುವುದರಿಂದ ಹಾಲು ಮತ್ತು ತರಕಾರಿ ಮಾರಾಟಗಾರರಿಗೂ ತೊಂದರೆ ಆಗಿದೆ. 40 ಸಾವಿರ ಹೋಟೆಲ್, 6 ಲಕ್ಷ ಕಾರ್ಮಿಕರಿಗೆ ಸಮಸ್ಯೆಯಾಗಿದೆ. ಹೀಗಾಗಿ ಗ್ಯಾಸ್ ಸಿಲಿಂಡರ್ ಪೂರೈಕೆಗೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಅಸೋಸಿಯೇಷನ್ ಪರ ವಕೀಲ ಕೆ.ಸತೀಶ್ ಭಟ್ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: LPG ಸಿಲಿಂಡರ್​​ ಸಮಸ್ಯೆಗೆ ತಲ್ಲಣಿಸಿದ ಹೋಟೆಲ್​ ಉದ್ಯಮ; ಐದೇ ದಿನಗಳಲ್ಲಿ 100 ಕೋಟಿಗೂ ಅಧಿಕ ನಷ್ಟ!

ಹೋಟೆಲ್ ಉದ್ಯಮಕ್ಕೆ 1 ಸಾವಿರ ಸಿಲಿಂಡರ್​ಗಳನ್ನು ಪೂರೈಸುವುದಾಗಿ ಸಚಿವ ಮುನಿಯಪ್ಪ ಹೇಳಿದ್ದರೂ, ಸಚಿವರ ಭರವಸೆ ಬಗ್ಗೆ ಬೆಂಗಳೂರಿನ ಹೋಟೆಲ್ ಮಾಲೀಕರು ಅಸಮಾಧಾನ ಹೊರಹಾಕಿದ್ದಾರೆ. 40 ಸಾವಿರ ಹೋಟೆಲ್​​ಗಳಿಗೆ ಒಂದು ಸಾವಿರ ಸಿಲಿಂಡರ್ ಕೊಡುವ ಬದಲು, ಕೊಡದೆ ಇರುವುದೇ ಒಳ್ಳೆಯದು. ಹೋಟೆಲ್​​ಗಳ ಮಾಲಕರು ಮಾತ್ರವಲ್ಲದೆ ಅಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರು ಮತ್ತು ಅವರ ಕುಟುಂಬದ ಬಗ್ಗೆಯೂ ಸರ್ಕಾರ ಗಮನ ಹರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ. ಬೆಂಗಳೂರಿನಲ್ಲಿ ಸರಿ ಸುಮಾರು 40 ಸಾವಿರಕ್ಕೂ ಹೆಚ್ಚು ಹೋಟೆಲ್​ಗಳಿದ್ದು, ಈ ಪೈಕಿ 4,500 ಹೋಟೆಲ್​​ಗಳು ರಿಜಿಸ್ಟರ್​​ ಆಗಿವೆ. ಇವೆಲ್ಲವೂ ಕೂಡ ಈಗ ವಾಣಿಜ್ಯ ಗ್ಯಾಸ್ ಸಿಲಿಂಡರ್ ಅಭಾವದ ಸಮಸ್ಯೆಗೆ ಸಿಲುಕಿದ್ದು, ನಷ್ಟ ಅನುಭವಿಸುತ್ತಿವೆ. ಹಲವೆಡೆ ರೆಸ್ಟೋರೆಂಟ್​​ಗಳು ಬಂದ್​​ ಆಗಿದ್ದರೆ, ಇನ್ನು ಕೆಲ ಹೋಟೆಲ್​​ಗಳು ನಷ್ಟದಲ್ಲಿಯೇ ಗ್ರಾಹಕರಿಗೆ ಸೇವೆ ಒದಗಿಸುತ್ತಿರುವ ಪರಿಣಾಮ ರಾಜ್ಯ ರಾಜಧಾನಿ ಬೆಂಗಳೂರೊಂದರಲ್ಲೇ ನೂರಾರು ಕೋಟಿ ರೂಪಾಯಿ ಹೋಟೆಲ್​​ ಉದ್ಯಮಕ್ಕೆ ನಷ್ಟ ಉಂಟಾಗಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Guru Chandal Yoga: ಗುರು ಚಂಡಾಲ ಯೋಗ ಎಂದರೇನು? ಇದರಿಂದಾಗುವ ಸಮಸ್ಯೆಗಳೇನು?

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸಂಚಾರ ಮತ್ತು ಅವುಗಳ ಸ್ಥಾನಪಲ್ಲಟವು ಮನುಷ್ಯನ ಜೀವನದ ಮೇಲೆ ಅಪಾರ ಪ್ರಭಾವ ಬೀರುತ್ತದೆ. ಜಾತಕದಲ್ಲಿ ಗ್ರಹಗಳು ಶುಭ ಸ್ಥಾನದಲ್ಲಿದ್ದರೆ ಜೀವನ ಸುಗಮವಾಗಿರುತ್ತದೆ, ಆದರೆ ಕೆಲವು ಗ್ರಹಗಳ ಸಂಯೋಗವು ಅಶುಭ ‘ಯೋಗ’ಗಳನ್ನು ಸೃಷ್ಟಿಸುತ್ತವೆ. ಅಂತಹವುಗಳಲ್ಲಿ ಪ್ರಮುಖವಾದುದು ‘ಗುರು ಚಂಡಾಲ ಯೋಗ’. ಈ ಯೋಗವು ಜಾತಕದಲ್ಲಿ ಕಂಡುಬಂದಾಗ ವ್ಯಕ್ತಿಯು ಮಾನಸಿಕ ಗೊಂದಲ, ತಪ್ಪು ನಿರ್ಧಾರಗಳು ಮತ್ತು ಆರ್ಥಿಕ ಸಂಕಷ್ಟಗಳನ್ನು ಎದುರಿಸಬೇಕಾಗಬಹುದು. ಆದರೆ ಸರಿಯಾದ ಧಾರ್ಮಿಕ ಪರಿಹಾರಗಳು ಮತ್ತು ಪ್ರಾರ್ಥನೆಗಳ ಮೂಲಕ ಇದರ ತೀವ್ರತೆಯನ್ನು ಕಡಿಮೆ ಮಾಡಿಕೊಳ್ಳಲು ಸಾಧ್ಯವಿದೆ.

ಗುರು ಚಂಡಾಲ ಯೋಗ ಎಂದರೇನು ಮತ್ತು ಅದು ಹೇಗೆ ರೂಪುಗೊಳ್ಳುತ್ತದೆ?

ದೇವಗುರು ಬೃಹಸ್ಪತಿಯು ರಾಹು ಅಥವಾ ಕೇತುವಿನೊಂದಿಗೆ ಒಂದೇ ಮನೆಯಲ್ಲಿ ಸ್ಥಿತನಾಗಿದ್ದಾಗ ಅಥವಾ ಇವರು ಪರಸ್ಪರ ದೃಷ್ಟಿಯನ್ನು ಹೊಂದಿದ್ದಾಗ ಜಾತಕದಲ್ಲಿ ಗುರು ಚಂಡಾಲ ಯೋಗ ಉಂಟಾಗುತ್ತದೆ. ಗುರುವು ಜ್ಞಾನ ಮತ್ತು ಧರ್ಮದ ಸಂಕೇತವಾದರೆ, ರಾಹು-ಕೇತುಗಳು ಅನಿಶ್ಚಿತತೆ ಮತ್ತು ಭ್ರಮೆಯ ಕಾರಕರು. ಇವರ ಸಂಯೋಗದಿಂದಾಗಿ ವ್ಯಕ್ತಿಯ ಶುದ್ಧ ಆಲೋಚನಾ ಶಕ್ತಿಯು ಮಂಕಾಗಬಹುದು. ಈ ಯೋಗದ ಪ್ರಭಾವವು ವ್ಯಕ್ತಿಯ ಜಾತಕದಲ್ಲಿ ಗ್ರಹಗಳ ಬಲಾಬಲದ ಮೇಲೆ ನಿರ್ಧಾರವಾಗುತ್ತದೆ.

ಗುರು ಚಂಡಾಲ ಯೋಗದ ಲಕ್ಷಣಗಳು:

  • ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಪದೇ ಪದೇ ತಪ್ಪುಗಳಾಗುವುದು.
  • ಶಿಕ್ಷಣ ಅಥವಾ ವೃತ್ತಿಜೀವನದಲ್ಲಿ ಅನಿರೀಕ್ಷಿತ ಅಡೆತಡೆಗಳು ಎದುರಾಗುವುದು.
  • ಆರ್ಥಿಕ ಅಸ್ಥಿರತೆ ಅಥವಾ ಹಣಕಾಸಿನ ನಷ್ಟ ಉಂಟಾಗುವುದು.
  • ಸದಾ ಮನಸ್ಸಿನಲ್ಲಿ ಗೊಂದಲ, ತಪ್ಪು ತಿಳುವಳಿಕೆ ಮತ್ತು ಅಶಾಂತಿ ನೆಲೆಸುವುದು.
  • ಸಮಾಜದಲ್ಲಿ ಗೌರವಕ್ಕೆ ಧಕ್ಕೆ ಬರುವಂತಹ ಸಂದರ್ಭಗಳು ಎದುರಾಗುವುದು.

ಇದನ್ನೂ ಓದಿ: ಈ ವರ್ಷ ಯುಗಾದಿ ಹಬ್ಬ ಯಾವಾಗ ? ಈ ದಿನ ಏನು ಮಾಡಬೇಕು ಮತ್ತು ಏನು ಮಾಡಬಾರದು?

ಪರಿಹಾರ ಮಾರ್ಗಗಳು ಮತ್ತು ಪೂಜಾ ವಿಧಾನಗಳು:

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ದೋಷದ ಪ್ರಭಾವ ತಗ್ಗಿಸಲು ವಿಷ್ಣು ಸಹಸ್ರನಾಮ ಪಠಣ ಮತ್ತು ಗುರು ದೇವನ ಆರಾಧನೆ ಅತ್ಯಂತ ಫಲದಾಯಕ.

  • ಶ್ರೀ ಮಹಾವಿಷ್ಣುವಿನ ಆರಾಧನೆ: ಗುರುವಾರದಂದು ವಿಷ್ಣುವಿಗೆ ವಿಶೇಷ ಪೂಜೆ ಸಲ್ಲಿಸಿ. ಹಳದಿ ಬಣ್ಣದ ಹೂವುಗಳು, ಬಟ್ಟೆ ಹಾಗೂ ಕಡಲೆ ಹಿಟ್ಟಿನ ಸಿಹಿತಿಂಡಿಗಳನ್ನು ನೈವೇದ್ಯವಾಗಿ ಅರ್ಪಿಸುವುದರಿಂದ ಗುರು ಗ್ರಹವು ಬಲಗೊಂಡು ನಕಾರಾತ್ಮಕತೆ ದೂರವಾಗುತ್ತದೆ.
  • ಮಂತ್ರ ಪಠಣ: ಪ್ರತಿ ಗುರುವಾರ ‘ಓಂ ಬೃಂ ಬೃಹಸ್ಪತಯೇ ನಮಃ’ ಎಂಬ ಮಂತ್ರವನ್ನು ಕನಿಷ್ಠ 108 ಬಾರಿ ಜಪಿಸುವುದು ಉತ್ತಮ.
  • ರಾಹು-ಕೇತು ಶಾಂತಿ: ರಾಹುವಿನ ಅಶುಭ ದೃಷ್ಟಿ ನಿವಾರಿಸಲು ಶನಿವಾರದಂದು ಬಡವರಿಗೆ ಕಪ್ಪು ಎಳ್ಳು, ಸಾಸಿವೆ ಎಣ್ಣೆ ಅಥವಾ ಕಪ್ಪು ಬಟ್ಟೆಯನ್ನು ದಾನ ಮಾಡಿ.
  • ದಾನ ಧರ್ಮ: ಗುರುವಾರದಂದು ಹಳದಿ ವಸ್ತುಗಳಾದ ಅರಿಶಿನ, ಕಡಲೆ ಬೇಳೆ ಅಥವಾ ಬಾಳೆಹಣ್ಣನ್ನು ದಾನ ಮಾಡುವುದರಿಂದ ಗುರುವಿನ ಅನುಗ್ರಹ ಲಭಿಸುತ್ತದೆ.
  • ಗುರು ಹಿರಿಯರ ಗೌರವ: ಆಧ್ಯಾತ್ಮಿಕ ಗುರುಗಳನ್ನು, ಹಿರಿಯರನ್ನು ಗೌರವಿಸುವುದು ಮತ್ತು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಈ ಯೋಗದ ದುಷ್ಪರಿಣಾಮಗಳನ್ನು ತಗ್ಗಿಸಲು ಇರುವ ಅತ್ಯಂತ ಸರಳ ಹಾಗೂ ಪರಿಣಾಮಕಾರಿ ಮಾರ್ಗವಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link