Headlines

nagaraj11081993

SSLC ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ, ವಿಡಿಯೋ ವೈರಲ್

ಬೆಂಗಳೂರು, (ಮಾರ್ಚ್ 17): 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 (SSLC Exam) ನಾಳೆಯಿಂದ ಅಂದರೆ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ (Exam) ಬರೆಯಲು ಸಜ್ಜಾಗಿದ್ದಾರೆ. ಇನ್ನು ವಿದ್ಯಾರ್ಥಿಗಳ ಪರೀಕ್ಷಾ ಪ್ರಯಾಣವನ್ನು ಸುಗಮಗೊಳಿಸಲು ಕೆಎಸ್​​ಆರ್​​ಟಿಸಿ ಉಚಿತ ಪ್ರಯಾಣ ಘೋಷಿಸಿದ್ದು, ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಬಸ್​​ನಲ್ಲಿ ಪ್ರಯಾಣಿಸಬಹುದು. ಇನ್ನು ಪರೀಕ್ಷೆಗೆ ಹೋಗುವ ಮಕ್ಕಳಿಗೆ ಕಂಡಕ್ಟರ್ ಮನ​ ಮಿಡಿದಿದ್ದು, ಡ್ರೈವರ್ ಸಾಹೇಬ್ರೆ ಎಸ್ಎಸ್​ಎಲ್​​ಸಿ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಎಲ್ಲೇ…

Read More

BCCI vs BCB: ಬಿಸಿಸಿಐಗೆ ಸೆಡ್ಡು ಹೊಡೆಯಲು ನಿಂತ ಬಾಂಗ್ಲಾ ಕ್ರಿಕೆಟ್ ಮಂಡಳಿ

2026ರ ಐಪಿಎಲ್ (IPL 2026) ಇದೇ ಮಾರ್ಚ್​ 28 ರಿಂದ ಪ್ರಾರಂಭವಾಗುತ್ತಿರುವುದು ಪ್ರತಿಯೊಬ್ಬ ಕ್ರಿಕೆಟ್ ಪ್ರಿಯರಿಗೂ ತಿಳಿದಿರುವಂತ ವಿಚಾರ. ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್​ನಲ್ಲಿ ವಿಶ್ವ ಕ್ರಿಕೆಟ್​ನ ಸೂಪರ್ ಸ್ಟಾರ್ ಆಟಗಾರರು ಆಡುವುದು ಹೊಸ ವಿಚಾರವೆನ್ನಲ್ಲ. ಹೀಗಾಗಿ ಐಪಿಎಲ್ ನಡೆಯುವ ಸಮಯದಲ್ಲಿ ಸಾಮಾನ್ಯವಾಗಿ, ಯಾವುದೇ ಪ್ರಮುಖ ಕ್ರಿಕೆಟ್ ಮಂಡಳಿಯು ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸುವುದಿಲ್ಲ. ಆದಾಗ್ಯೂ, ಈ ಬಾರಿ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಐಪಿಎಲ್ ಸಮಯದಲ್ಲಿ ಸರಣಿಯನ್ನಾಡಲು ಮುಂದಾಗಿದ್ದು, ಅದರ ವೇಳಾಪಟ್ಟಿಯನ್ನು ಸಹ ಪ್ರಕಟಿಸಿದೆ. ಅದರಂತೆ ಐಪಿಎಲ್‌…

Read More

ಬಜೆಟ್​​ ಅಧಿವೆಶನದ ನಡುವೆ ಮಹತ್ವದ ಬೆಳವಣಿಗೆ: ದೀಢೀರ್​​ ಸಿಎಂ ಭೇಟಿಯಾಗಿದ್ದೇಕೆ ಕಾಂಗ್ರೆಸ್​​ನ ಹಿರಿಯ ಶಾಸಕರ ತಂಡ?

ಬೆಂಗಳೂರು, ಮಾರ್ಚ್​​ 17: ಬಜೆಟ್​​ ಅಧಿವೆಶನದ ನಡುವೆಯೇ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ ನಡೆದಿದೆ. ಸಚಿವ ಸಂಪುಟ ಪುನಾರಚನೆ ವೇಳೆ ಕನಿಷ್ಠ 20 ಹಿರಿಯ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡುವಂತೆ ವಿಧಾನಸೌಧ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಎಂಎಲ್​​ಎಗಳು ಮನವಿ ಮಾಡಿದ್ದಾರೆ. ಭೋಜನ ವಿರಾಮದ ಸಮಯದಲ್ಲಿ ಸಿಎಂ ಭೇಟಿಯಾಗಿರುವ ‘ಕೈ’ ಶಾಸಕರು 3ಕ್ಕೂ ಹೆಚ್ಚು ಬಾರಿ ನಾವು ಎಂಎಲ್​​ಎಗಳಾಗಿದ್ದೇವೆ. ಹೀಗಾಗಿ ನಮಗೂ ಅವಕಾಶ ನೀಡಿ ಎಂಬ ಆಗ್ರಹ ಮುಂದಿಟ್ಟಿದ್ದಾರೆ. ಶಾಸಕರಾದ ಎನ್​.ಎ.ಹ್ಯಾರಿಸ್​, ಹಂಪನಗೌಡ ಬಾದರ್ಲಿ, ಬಾಲಕೃಷ್ಣ, ನಾರಾಯಣಸ್ವಾಮಿ, ಅಶೋಕ…

Read More

SA vs NZ: 18 ರನ್​ಗೆ 5 ವಿಕೆಟ್; ಹೀನಾಯವಾಗಿ ಸೋತ ಆಫ್ರಿಕಾ

2026 ರ ಟಿ20 ವಿಶ್ವಕಪ್ ಸೆಮಿಫೈನಲ್ ಹಾಗೂ ಫೈನಲ್​ನಲ್ಲಿ ಮುಗ್ಗರಿಸಿದ್ದ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ (South Africa vs New Zealand) ಪ್ರಸ್ತುತ 5 ಪಂದ್ಯಗಳ ಟಿ20 ಸರಣಿಯನ್ನಾಡುತ್ತಿವೆ. ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎರಡಂಕಿ ಮೊತ್ತಕ್ಕೆ ಆಲೌಟ್ ಮಾಡಿ ಪಂದ್ಯ ಗೆದ್ದಿದ್ದ ದಕ್ಷಿಣ ಆಫ್ರಿಕಾ, ಎರಡನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಹ್ಯಾಮಿಲ್ಟನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾವನ್ನು 68 ರನ್‌ಗಳಿಂದ ಸೋಲಿಸಿ, ಐದು ಪಂದ್ಯಗಳ ಸರಣಿಯನ್ನು 1-1…

Read More

Apprentice Recruitment 2026: ರೈಲ್ವೆ ನೇಮಕಾತಿ; 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾಗಿದ್ರೆ ಸಾಕು

ರೈಲ್ವೆ ನೇಮಕಾತಿ ಕೋಶ (RRC) ದಕ್ಷಿಣದ ದಕ್ಷಿಣ ಮಧ್ಯ ರೈಲ್ವೆ (SCR) ಪ್ರದೇಶಗಳಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ, ವಿವಿಧ ಇಲಾಖೆಗಳಲ್ಲಿ ಒಟ್ಟು 2,801 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಖಾಲಿ ಹುದ್ದೆಗಳನ್ನು ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಸಿಬ್ಬಂದಿ, S&T ಮತ್ತು ಇತರ ಇಲಾಖೆಗಳಲ್ಲಿ ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಏಪ್ರಿಲ್ 11 ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು…

Read More

ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ

ಮಂಗಳೂರು, (ಮಾರ್ಚ್ 17): ದಕ್ಷಿಣ ಕನ್ನಡದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ (moodabidri inspector Sandesh case) ಬಗೆದಷ್ಟು ಬಯಲಾಗುತ್ತಿದೆ. ರಕ್ಷಣೆ ಕೋರಿ ಬಂದ ಮಹಿಳೆಯರಿಗೆ ಲೈಂಗಿಕ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಸಂಬಂಧಿಸಿದ ಆಡಿಯೋ, ವಿಡಿಯೋಗಳು ವೈರಲ್ ಆಗಿವೆ. ಆದರೆ, ಇನ್ಸ್‌ಪೆಕ್ಟರ್ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ಇನ್ನು ಇದೀಗ ಇನ್ಸ್‌ಪೆಕ್ಟರ್ ಸಂದೇಶ್ ಮೇಲೆ ಲೈಂಗಿಕ ಆರೋಪ ಮಾಡಿರುವ ಸಂತ್ರಸ್ತ ಮಹಿಳೆ ವಿರುದ್ಧವೇ ಆಕೆಯ ಸಹೋದರಿ (victim Sister) ಗಂಭೀರ ಆರೋಪ ಮಾಡಿ…

Read More

ರೇಣುಕಾ ಸ್ವಾಮಿ ಪ್ರಕರಣ: ಆರೋಪಿ ಪವನ್ ವಕೀಲರಿಗೆ ದಂಡ

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ. 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ವಿಚಾರಣೆ ಚಾಲ್ತಿಯಲ್ಲಿದ್ದು, ಆರೋಪಿಗಳ ಪರ ವಕೀಲರು ವಾದ ಮಂಡನೆ ಮಾಡುತ್ತಿದ್ದಾರೆ. ಕಳೆದ ವಿಚಾರಣೆ ವೇಳೆ, ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಪವನ್ (ಎ3) ಪರ ವಕೀಲರು, ಪ್ರಕರಣದ ತನಿಖಾಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ್ದರು ಮಾತ್ರವಲ್ಲದೆ, ತನಿಖಾಧಿಕಾರಿಗಳಲ್ಲಿ ಒಬ್ಬರಾಗಿರುವ ಎಸಿಪಿ ಚಂದನ್ ಅವರನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ಪರಿಗಣಿಸಬೇಕು ಎಂದು ವಾದಿಸಿದ್ದರು. ಬಳಿಕ ನ್ಯಾಯಾಲವು ವಿಚಾರಣೆ ಮುಂದೂಡಿತ್ತು. ಪವನ್ ಪರ ವಕೀಲರ…

Read More

ರೈಲ್ವೆ ಇಲಾಖೆಯಿಂದ ಮತ್ತೊಮ್ಮೆ ಕನ್ನಡಕ್ಕೆ ಮಲತಾಯಿ ಧೋರಣೆ: ಸಿಡಿದೆದ್ದ ಕರವೇ

ಹುಬ್ಬಳ್ಳಿ, ಮಾರ್ಚ್​​ 17: ರೈಲ್ವೆ ಪರೀಕ್ಷೆಗಳಲ್ಲಿ (Railway Exam) ಮೇಲಿಂದ ಮೇಲೆ ಕನ್ನಡಿಗರಿಗೆ ಅನ್ಯಾಯವಾಗುತ್ತಲೇ ಇದೆ. ಈ ಹಿಂದೆ ಅನೇಕ ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ ನೀಡುವಂತೆ ಹೋರಾಟ ಮಾಡಿ ಅವಕಾಶ ಪಡೆಯಲಾಗಿತ್ತು. ಇದೀಗ ರೈಲ್ವೆ ಇಲಾಖೆಯ ಪದೋನ್ನತಿ ಪರೀಕ್ಷೆಯಲ್ಲಿ ಕೂಡ ಕನ್ನಡಕ್ಕೆ ಮಲತಾಯಿ ಧೋರಣೆ ಮಾಡಲಾಗಿದೆ. ಕೇವಲ ಹಿಂದಿ ಮತ್ತು ಇಂಗ್ಲಿಷ್​ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಇದನ್ನು ಖಂಡಿಸಿ ಇಂದು ಹುಬ್ಬಳ್ಳಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸಂಘಟನೆ ರೈಲ್ವೆ ನೇಮಕಾತಿ ಕಚೇರಿಗೆ…

Read More

ಬಾಗಲಕೋಟೆ ಬೈ ಎಲೆಕ್ಷನ್: ಕಾಂಗ್ರೆಸ್​​ ಟಿಕೆಟ್​​ಗಾಗಿ ಹೆಚ್​​.ವೈ. ಮೇಟಿ ಮಕ್ಕಳ ನಡುವೆಯೇ ಪೈಪೋಟಿ

ಬಾಗಲಕೋಟೆ, ಮಾರ್ಚ್​ 17: ಹೆಚ್​.ವೈ.ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯಲಿದೆ ಎಂದು ಆಯೋಗ ಘೋಷಿಸಿದ ಬೆನ್ನಲ್ಲೇ ಟಿಕೆಟ್​​ ಆಕಾಂಕ್ಷಿಗಳ ನಡುವಿನ ಪೈಪೋಟಿ ಜೋರಾಗಿದೆ. ಕಾಂಗ್ರೆಸ್​​ ಮತ್ತು ಬಿಜೆಪಿ ಸೇರಿ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಟಿಕೆಟ್​​ಗಾಗಿ ಲಾಬಿಯೂ ಜೋರಾಗಿದೆ. ಕಾಂಗ್ರೆಸ್​​ನಿಂದ ಸ್ಫರ್ಧೆಗಾಗಿ ದಿವಂಗತ ಶಾಸಕ ಮೇಟಿ ಕುಟುಂಬದಲ್ಲಿಯೇ ಗುದ್ದಾಟ ನಡೆಯುತ್ತಿದ್ದರೆ, ಇತ್ತ ಬಿಜೆಪಿಯಲ್ಲಿ ವಿವಿಧ ಸಮುದಾಯಗಳ ಮುಖಂಡರು ನಮಗೊಂದು ಅವಕಾಶ ಕೊಡಿ ಎಂದು ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಕಾಂಗ್ರೆಸ್​​ ಟಿಕೆಟ್​​ಗಾಗಿ…

Read More

ಕತ್ರಿನಾ ಕೈಫ್ ಜತೆಗಿನ ಸಂಸಾರ ವಿಕ್ಕಿ ಕೌಶಲ್​ಗೆ ಬೋರ್ ಆಯ್ತಾ? ವಿಡಿಯೋ ವೈರಲ್

ಬಾಲಿವುಡ್‌ನ ಅತ್ಯಂತ ಪ್ರೀತಿಪಾತ್ರ ಜೋಡಿಗಳಲ್ಲಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ (Katrina Kaif) ಕೂಡ ಇದ್ದಾರೆ. ಪರಸ್ಪರರ ಮೇಲಿರುವ ಗೌರವ ಮತ್ತು ಪ್ರೀತಿಯಿಂದಲೇ ಈ ಜೋಡಿ ಅಭಿಮಾನಿಗಳ ಮನ ಗೆದ್ದಿದೆ. ಆದರೆ, ಇತ್ತೀಚೆಗೆ ವಿಕ್ಕಿ ಕೌಶಲ್ ಅವರು ಮದುವೆ ಸಮಾರಂಭವೊಂದರಲ್ಲಿ ಮಾಡಿದ ಹಾಸ್ಯವು ವಿವಾದಕ್ಕೆ ಈಡಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ಇಷ್ಟು ದಿನ ಉತ್ತಮ ನಡವಳಿಕೆಗಳ ಕಾರಣದಿಂದ ಮೆಚ್ಚುಗೆ ಪಡೆಯುತ್ತಿದ್ದ ವಿಕ್ಕಿ ಕೌಶಲ್ (Vicky Kaushal) ಅವರು ಈಗ ವಿವಾದಾತ್ಮಕ ಜೋಕ್ ಮಾಡಿ…

Read More