Headlines

nagaraj11081993

ಬಮೂಲ್​​ ಬೆನ್ನಲ್ಲೇ ಕೋಮುಲ್​​ನಿಂದ ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್‌

ಕೋಲಾರ, ಮಾರ್ಚ್​​ 17: ಇತ್ತೀಚೆಗೆ ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಿಸುವ ಮೂಲಕ ಹಾಲು ಉತ್ಪಾದಕರಿಗೆ ಯುಗಾದಿ ಉಡುಗೊರೆ ನೀಡಿತ್ತು. ಇದೀಗ ಅದರಂತೆ ಕೋಲಾರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (komul) ಕೂಡ ಹಾಲು ಉತ್ಪಾದಕರಿಗೆ ಲೀಟರ್‌ಗೆ 2 ರೂಪಾಯಿ ಹೆಚ್ಚಿಸುವ ಮೂಲಕ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್‌ ನೀಡಿದೆ. ಪ್ರತಿ ಲೀಟರ್‌ಗೆ 2 ರೂಪಾಯಿ ಹೆಚ್ಚಳ ಯುಗಾದಿ ಹಬ್ಬಕ್ಕೆ ಕೋಲಾರ ಜಿಲ್ಲಾ ಹಾಲು ಉತ್ಪಾದಕರಿಗೆ…

Read More

ಭಾರತದಲ್ಲಿ ಹಾರ್ಡ್ ರಾಕ್ ಕೆಫೆ ಯುಗ ಅಂತ್ಯ: ಬೆಂಗಳೂರು ಸೇರಿದಂತೆ 10 ನಗರಗಳ ಔಟ್‌ಲೆಟ್ ಬಂದ್, ಕಾರಣವೇನು?

ಬೆಂಗಳೂರು, ಮಾ.17: ದಶಕಗಳ ಕಾಲ ರಾಕ್ ಸಂಗೀತ ಮತ್ತು ಅಮೇರಿಕನ್ ಶೈಲಿಯ ಆಹಾರಕ್ಕೆ ಹೆಸರಾಗಿದ್ದ ‘ಹಾರ್ಡ್ ರಾಕ್ ಕೆಫೆ’ (HRC) ಭಾರತಕ್ಕೆ ಗುಡ್‌ಬೈ ಹೇಳುತ್ತಿದೆ. ಭಾರತದಲ್ಲಿ ಈ ಕೆಫೆಗಳನ್ನು ನಡೆಸುತ್ತಿದ್ದ JSM ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್ ಜೊತೆಗಿನ ಒಪ್ಪಂದವನ್ನು ಹಾರ್ಡ್ ರಾಕ್ ಇಂಟರ್ನ್ಯಾಷನಲ್ ಅಧಿಕೃತವಾಗಿ ಕೊನೆಗೊಳಿಸಿದೆ. ಅದರಲ್ಲೂ ಬೆಂಗಳೂರಿನಲ್ಲಿ ತನ್ನದೇ ಆಗಿರುವ ರುಚಿಯನ್ನು ಹಾಗೂ ವೈಶಿಷ್ಟವನ್ನು ಹೊಂದಿದ್ದ ಇದು, ಇದೀಗ ಬೆಂಗಳೂರಿಗರಿಗೆ ದೊಡ್ಡ ನಿರಾಶಿಯನ್ನು ಮೂಡಿಸಿದೆ. ಇನ್ನು ಈ ನಿರ್ಧಾರದಿಂದಾಗಿ ಭಾರತದ ಪ್ರಮುಖ ನಗರಗಳಲ್ಲಿದ್ದ 10 ಕೆಫೆಗಳು…

Read More

SSLC ವಿದ್ಯಾರ್ಥಿಗಳೇ ಗಮನಿಸಿ: ಶಿಕ್ಷಣ ಇಲಾಖೆಯಿಂದ ಮಹತ್ವದ ಸಲಹೆ; ಇಲ್ಲಿದೆ ಮಾಹಿತಿ

ಬೆಂಗಳೂರು, ಮಾರ್ಚ್​​ 17: ನಾಳೆಯಿಂದ ರಾಜ್ಯಾದ್ಯಂತ ಎಸ್​ಎಸ್​ಎಲ್​​ಸಿ ಪರೀಕ್ಷೆ ಆರಂಭವಾಗಲಿದ್ದು, ಒಟ್ಟು 2871 ಕೇಂದ್ರಗಳಲ್ಲಿ ಎಕ್ಸಾಂ ನಡೆಯಲಿದೆ. ಈ ವರ್ಷ 9,02,889 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಆ ಪೈಕಿ 8,12,855 ಹೊಸಬರು ಪರೀಕ್ಷೆ ಬರೆಯಲಿದ್ದಾರೆ. 62,845 ರಿಪೀಟರ್ಸ್​ ಮತ್ತು 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕದ ಹಿನ್ನೆಲೆ ತಡೆಗೆ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಮಾರ್ಗಸೂಚಿಯಲ್ಲಿ ಇರೋದೇನು? ಪರೀಕ್ಷಾ ಕೇಂದ್ರಗಳಲ್ಲಿ…

Read More

‘ಕೆಡಿ’ ಹಾಡಿನ ಪರ ವಹಿಸಿ ರಕ್ಷಿತಾ ಪೋಸ್ಟ್: ಬೇರೆ ಭಾಷೆ ಹಾಡುಗಳ ಉದಾಹರಣೆ

ಪ್ರೇಮ್ (prem) ನಿರ್ದೇಶಿಸಿ, ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ ಸರ್ಸೆ’ ಹಾಡು ಇತ್ತೀಚೆಗಷ್ಟೆ ಬಿಡುಗಡೆ ಆಯ್ತು. ಕನ್ನಡದಲ್ಲಿ ಮಾತ್ರವೇ ಅಲ್ಲದೆ ಹಿಂದಿ ಸೇರಿದಂತೆ ಇನ್ನೂ ಹಲವು ಭಾಷೆಗಳಲ್ಲಿ ಸಿನಿಮಾದ ಹಾಡು ಬಿಡುಗಡೆ ಆಗಿದೆ. ಆದರೆ ಈ ಹಾಡಿನ ಸಾಹಿತ್ಯ ತೀರ ಅಶ್ಲೀಲವಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ದೆಹಲಿ, ಮುಂಬೈ ನಗರಗಳಲ್ಲಿ ಹಾಡಿನ ವಿರುದ್ಧ, ನಿರ್ದೇಶಕ ಪ್ರೇಮ್ ಸೇರಿದಂತೆ ಚಿತ್ರತಂಡದ ಇತರೆ ಸದಸ್ಯರ ವಿರುದ್ಧ ದೂರುಗಳು ದಾಖಲಾಗಿವೆ. ಇದೀಗ ಪ್ರೇಮ್ ಅವರ ಪತ್ನಿ…

Read More

ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು? ಹೊರ ದೇಶಕ್ಕೆ ಎಷ್ಟು ರಫ್ತು ಆಗ್ತಿತ್ತು?

ಬೆಂಗಳೂರು, (ಮಾರ್ಚ್ 17): ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಮೊಟ್ಟೆ ವ್ಯಾಪಾರಿಗಳಿಗೆ ಇದೀಗ ಸಂಕಷ್ಟ ಎದುರಾಗಿವೆ. ಯುದ್ಧದ ಪರಿಣಾಮ, ಗ್ಯಾಸ್ ದರ ಏರಿಕೆ, ಹಾಗೂ ರಂಜಾನ್ ಸಮಯದಲ್ಲಿ ಹೋಟೆಲ್‌ಗಳ ಕಾರ್ಯಾಚರಣೆ ಕಡಿಮೆಯಾಗಿರುವುದು ಮೊಟ್ಟೆ ಮಾರುಕಟ್ಟೆಗೆ ನೇರ ಹೊಡೆತ ನೀಡಿದೆ. ಇದರಿಂದ ಮೊಟ್ಟೆ ಬೇಡಿಕೆ ಕುಸಿತ ಕಂಡಿದ್ದು, ಮೊಟ್ಟೆಯ ದರ ಕುಸಿತವಾಗಿದೆ. ಇದರಿಂದ ವ್ಯಾಪಾರಸ್ಥರು ಆತಂಕದಲ್ಲಿ ಮುಳುಗಿದ್ದಾರೆ. ಇನ್ನು ಈ ಬಗ್ಗೆ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಅಧ್ಯಕ್ಷ ನಾಗರಾಜ್ ಅವರು ಟಿವಿ9 ಜೊತೆ ಮಾತನಾಡಿ, ಕೋಳಿ ಮೊಟ್ಟೆ ಬೆಳೆಯ…

Read More

IPL 2026: ಯಾರಾಗಲಿದ್ದಾರೆ SRH ತಂಡದ ಹೊಸ ನಾಯಕ?

IPL 2026: ಐಪಿಎಲ್​ 2026ರ ಆರಂಭಿಕ ಪಂದ್ಯಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತವಾಗಿದೆ. ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಅವರು ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಆರಂಭಿಕ ನಾಲ್ಕು ಪಂದ್ಯಗಳಿಗೆ ಹೊಸ ನಾಯಕನನ್ನು ಆಯ್ಕೆ ಮಾಡಲಿದೆ. ಇತ್ತ ನಾಯಕತ್ವದ ರೇಸ್​ನಲ್ಲಿ ಯುವ ದಾಂಡಿಗರಿಬ್ಬರು ಮುಂಚೂಣಿಯಲ್ಲಿರುವುದು ವಿಶೇಷ. ಅವರೆಂದರೆ ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ. ಇಶಾನ್ ಕಿಶನ್ ಈ ಹಿಂದೆ…

Read More

ಪಾಳು ಮನೆಯಲ್ಲಿ ಅಪ್ರಾಪ್ತೆಯ ಭೀಕರ ಕೊಲೆ: ಭಾವಿ ಪತಿಯಿಂದಲೇ ನಡೀತು ಹತ್ಯೆ!; ಕಾರಣ ನಿಗೂಢ

ಬೆಂಗಳೂರು/ ಗದಗ, ಮಾರ್ಚ್​ 17: ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆಯನ್ನೇ ವ್ಯಕ್ತಿಯೋರ್ವ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಡಿ.ಜೆ.ಹಳ್ಳಿ ಸಕ್ಕರೆ ಮಂಡಿಯ ಪಾಳುಮನೆಯಲ್ಲಿ ನಡೆದಿದೆ. ಯುವತಿ ಜೋಯಾಯಳ ಕತ್ತುಕೊಯ್ದು ಕೊಂದು ಶಬೀಲ್(20) ಪರಾರಿಯಾಗಿದ್ದು, ಬೆಳಗ್ಗೆ 6.30ರ ಸುಮಾರಿಗೆ ಘಟನೆ ನಡೆದಿದೆ. ಆರೋಪಿ ಶಬೀಲ್ ಕುಟುಂಬ ಸದಸ್ಯರಿಂದಲೇ ಪ್ರಕರಣ ಬೆಳಕಿಗೆ ಬಂದಿದ್ದು, ಡಿ.ಜೆ.ಹಳ್ಳಿ ಠಾಣೆ ಪೊಲೀಸರಿಂದ ಆರೋಪಿ ಶಬೀಲ್​ಗಾಗಿ ಶೋಧ ಮುಂದುವರಿದಿದೆ. ಬಾಲಕಿ ಹತ್ಯೆಯಾಗಿರುವ ಬಗ್ಗೆ ಬೆಳಗ್ಗೆ 11 ಗಂಟೆಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. ಘಟನೆ ಬಗ್ಗೆ…

Read More

ಎಲ್​ಪಿಜಿ ಇಕೆವೈಸಿ ಎಲ್ಲರಿಗೂ ಕಡ್ಡಾಯವಲ್ಲ; ಈ ಗ್ರಾಹಕರಿಗೆ ಮಾತ್ರ ಅನ್ವಯ, ಗಮನಿಸಿ

ನವದೆಹಲಿ, ಮಾರ್ಚ್ 17: ಎಲ್​ಪಿಜಿ ಗ್ರಾಹಕರು ಇಕೆವೈಸಿ (Biometric Aadhaar Authentication) ಮಾಡುವುದು ಕಡ್ಡಾಯ ಎನ್ನುವಂತಹ ಸುದ್ದಿ ಎರಡು ದಿನಗಳಿಂದ ಕೇಳಿಬರುತ್ತಿದೆ. ಇದೇ ವೇಳೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವಿಚಾರದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದು, ಆಧಾರ್ ಬಯೋಮೆಟ್ರಿಲ್ ದೃಢೀಕರಣ ಅಥವಾ ಇಕೆವೈಸಿಯು ಎಲ್ಲಾ ಎಲ್​ಪಿಜಿ ಗ್ರಾಹಕರಿಗೂ ಕಡ್ಡಾಯವೇನಲ್ಲ. ಇಕೆವೈಸಿ ಮಾಡಿಸಿಲ್ಲದ ಎಲ್​ಪಿಜಿ ಗ್ರಾಹಕರು ಮಾತ್ರ ಈ ಗ್ಯಾಸ್ ಪಡೆಯಲು ಇಕೆವೈಸಿ ಮಾಡುವುದು ಕಡ್ಡಾಯ ಎಂದು ಸಚಿವಾಲಯವು ಹೇಳಿದೆ. ಎಲ್​ಪಿಜಿ ಗ್ರಾಹಕರು ಆಧಾರ್ ದೃಢೀಕರಣ…

Read More

ಐಪಿಎಲ್ ಆರಂಭಕ್ಕೂ ಮುನ್ನ ಹೊಸ ಮಾರ್ಗಸೂಚಿಗಳನ್ನು ಮುಂದಿಟ್ಟ ಬಿಸಿಸಿಐ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಅದಕ್ಕೂ ಮುನ್ನ ಬಿಸಿಸಿಐ ಎಲ್ಲಾ ತಂಡಗಳಿಗೆ ಹೊಸ ಮಾರ್ಗಸೂಚಿಗಳನ್ನು ನೀಡಿದೆ. ಈ ಮಾರ್ಗಸೂಚಿಗಳ ಪ್ರಕಾರವೇ ಅಭ್ಯಾಸ ನಡೆಸಬೇಕೆಂದು ತಿಳಿಸಲಾಗಿದೆ. ಬಿಸಿಸಿಐ ಮುಂದಿಟ್ಟಿರುವ ಮಾರ್ಗಸೂಚಿಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ತಾಜಾ ಪಿಚ್‌ಗಳ ಬಳಕೆ: ಯಾವುದೇ ತಂಡವು ಅಭ್ಯಾಸದ ವೇಳೆ ತನ್ನ ಪ್ರತಿಸ್ಪರ್ಧಿ ತಂಡ ಬಳಸಿದ ಪಿಚ್ ಅಥವಾ ನೆಟ್‌ಗಳನ್ನು ಬಳಸುವಂತಿಲ್ಲ. ಪ್ರತಿ ಸೆಷನ್‌ಗೂ ಹೊಸದಾಗಿ ಸಿದ್ಧಪಡಿಸಿದ ಪಿಚ್‌ಗಳನ್ನೇ ನೀಡಬೇಕು. ಉದಾಹರಣೆಗೆ, ಬೆಳಿಗ್ಗೆ…

Read More

ಬೆಂಗಳೂರಿನಲ್ಲಿ ಪಬ್ಗಳಿಗೂ ಸಿಲಿಂಡರ್ ಸಮಸ್ಯೆ: ಕೋಲಾರದಲ್ಲಿ ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!

ಬೆಂಗಳೂರು, ಕೋಲಾರ ಮಾರ್ಚ್ 17: ಕರ್ನಾಟಕದಲ್ಲಿ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್‌ಗಳ ಕೊರತೆ ತೀವ್ರಗೊಂಡಿದ್ದು, ಕಳೆದ ಎಂಟು ದಿನಗಳಿಂದ ಈ ಸಮಸ್ಯೆ ಬಗೆಹರಿದಿಲ್ಲ. ಇದರ ಬಿಸಿ ಬೆಂಗಳೂರಿನಾದ್ಯಂತ ಪಬ್‌ಗಳಿಗೂ ತಟ್ಟಿದೆ. ವಿಶೇಷವಾಗಿ ಎಂಜಿ ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಚ್ ಸ್ಟ್ರೀಟ್ ಪ್ರದೇಶಗಳಲ್ಲಿ, ಸಿಲಿಂಡರ್ ಕೊರತೆಯಿಂದ ಪಬ್​ಗಳ ಮಾಲಕರು ಕಂಗಾಲಾಗಿದ್ದಾರೆ. ಹಲವು ಪಬ್‌ಗಳಲ್ಲಿ ‘ಫೈರ್‌ಲೆಸ್ ಕುಕಿಂಗ್’ ಅಂದರೆ ಬೆಂಕಿ ಬಳಸದೆ ತಯಾರಿಸುವ ಸಲಾಡ್, ಹಣ್ಣುಗಳಂತಹ ಆಹಾರ ಪದಾರ್ಥಗಳನ್ನು ನೀಡಲಾಗುತ್ತಿದೆ. ಕೋಲಾರ ಜಿಲ್ಲೆಯಲ್ಲೂ ಹೋಟೆಲ್‌ಗಳು ಗ್ಯಾಸ್ ಸಿಲಿಂಡರ್ ಕೊರತೆಯಿಂದ…

Read More