Headlines

nagaraj11081993

ದುಬಾರಿಯಾದ ಸಲ್ಮಾನ್ ಖಾನ್ ಸಿನಿಮಾ; 40 ದಿನ ರೀಶೂಟ್

‘ಬ್ಯಾಟಲ್ ಆಫ್ ಗಲ್ವಾನ್’ ಸಿನಿಮಾದ ಟೈಟಲ್​​ನ ಇತ್ತೀಚೆಗೆ ‘ಮಾತೃಭೂಮಿ’ (Matrabhoomi) ಎಂದು ಬದಲಾಯಿಸಲಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ತಂಡ ರಿವೀಲ್ ಮಾಡಿರಲಿಲ್ಲ. ಹೀಗಿರುವಾಗಲೇ ಇದರ ಹಿಂದಿನ ಅಸಲಿ ವಿಷಯ ರಿವೀಲ್ ಆಗಿದೆ. ಸಲ್ಮಾನ್ ಖಾನ್ ಸಿನಿಮಾ ದುಬಾರಿ ಆಗಿದೆ. ತಂಡದವರು ಸಿನಿಮಾದ ಟೈಟಲ್ ಬದಲಿಸಿದ್ದು ಮಾತ್ರವಲ್ಲ, 40 ದಿನಗಳ ರೀ ಶೂಟ್ ಮಾಡುತ್ತಿದ್ದಾರೆ. ಅಪೂರ್ವ ಲಖಿಯಾ ಅವರು ‘ಮಾತೃಭೂಮಿ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. 2020ರಲ್ಲಿ ಗಲ್ವಾನ್ ಕಣಿವೆಯಲ್ಲಿ ನಡೆದ ಭಾರತ ಹಾಗೂ ಚೀನಾ ಸಂಘರ್ಷದ ಬಗ್ಗೆ…

Read More

ಸ್ಪೀಕರ್ ಖಾದರ್ ಗುಡುಗಿದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ! ಇಲಾಖಾವಾರು ಎಷ್ಟು ಉತ್ತರ ನೀಡಲಾಯ್ತು? ಇಲ್ಲಿದೆ ವರದಿ

ಬೆಂಗಳೂರು, ಮಾರ್ಚ್ 17: ಶಾಸಕರ ಪ್ರಶ್ನೆಗಳಿಗೆ ಉತ್ತರಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಕರ್ನಾಟಕ (Karnataka) ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader) ಅಸಮಾಧಾನಗೊಂಡು ಕಲಾಪ ಮುಂದೂಡಿದ ಘಟನೆಗೆ ಈಗ ತಾರ್ಕಿಕ ಅಂತ್ಯ ಸಿಗುವ ಲಕ್ಷಣಗಳು ಕಾಣುತ್ತಿವೆ. ಸ್ಪೀಕರ್ ಖಡಕ್ ಎಚ್ಚರಿಕೆಯ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದ್ದು, ಇಲಾಖಾವಾರು ಲಿಖಿತ ಉತ್ತರಗಳನ್ನು ಸಲ್ಲಿಸಲು ಆರಂಭಿಸಿದೆ. ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಖಾದರ್, ಪರವಾಗಿಲ್ಲ ಈಗ ಸ್ವಲ್ಪ ಸುಧಾರಿಸಿದಂತೆ ಕಾಣುತ್ತಿದೆ ಎಂದಿದ್ದಾರೆ. ಮಂಗಳವಾರದ ಕಲಾಪದಲ್ಲಿ ಇಲಾಖಾವಾರು ಉತ್ತರಗಳ ಅಂಕಿ-ಅಂಶಗಳನ್ನು ಪ್ರಸ್ತಾಪಿಸಿದ…

Read More

ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್: ಭಯಾನಕ ದೃಶ್ಯ ವೈರಲ್

ದೆಹಲಿ, ಮಾ.17: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಬೇಕೆಂಬ ಹಂಬಲ ಮತ್ತು ಅಪಾಯಕಾರಿ ರೀಲ್ಸ್ ಮಾಡುವ ಹುಚ್ಚು ದೆಹಲಿಯ ಯುವಕನೊಬ್ಬನ ಪ್ರಾಣವನ್ನೇ ಬಲಿಪಡೆದಿದೆ. ಸಿನಿಮಾ ಶೈಲಿಯಲ್ಲಿ ರಿವಾಲ್ವರ್ ಹಿಡಿದು ರೀಲ್ಸ್ ಮಾಡುತ್ತಿದ್ದಾಗ ಅಚಾನಕ್ಕಾಗಿ ಗುಂಡು ಹಾರಿದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತನನ್ನು ದೆಹಲಿಯ ದಲ್ಲುಪುರ ನಿವಾಸಿ ಪವನ್ ಎಂದು ಗುರುತಿಸಲಾಗಿದೆ. ಪವನ್ ತನ್ನ ಗೆಳೆಯನ ಜೊತೆ ಸೇರಿ ರೀಲ್ಸ್ ಮಾಡಲು ಮುಂದಾಗಿದ್ದ. ತನ್ನ ಬಳಿ ಇದ್ದ ರಿವಾಲ್ವರ್‌ಗೆ ಬುಲೆಟ್ ಲೋಡ್ ಮಾಡುವುದು ಹೇಗೆ ಮತ್ತು ಅದನ್ನು ಭಯವಿಲ್ಲದೆ…

Read More

ಬಾಲಿವುಡ್​ ಸ್ಟಾರ್​​ಗೂ ತಟ್ಟಿತು ಎಲ್​​ಪಿಜಿ ಸಿಲಿಂಡರ್ ಕೊರತೆಯ ಬಿಸಿ

ದೇಶಾದ್ಯಂತ ಈಗ ಎಲ್‌ಪಿಜಿ (LPG) ಸಿಲಿಂಡರ್‌ಗಳ ಕೊರತೆ ಉಂಟಾಗಿದೆ. ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವೆ ಸೃಷ್ಟಿಯಾಗಿರುವ ಸಂಘರ್ಷದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಭಾರತದಲ್ಲಿ ಎಲ್​​ಪಿಜಿ ಕೊರತೆ ಶುರುವಾಗಿದೆ. ಬೆಂಗಳೂರು ಸೇರಿದಂತೆ ದೇಶದಾದ್ಯಂತ ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು ಬಿದ್ದಿದೆ. ಹಲವಾರು ಹೋಟೆಲ್​​ಗಳು ಈಗಾಗಲೇ ಬಾಗಿಲು ಹಾಕಿವೆ. ಗೃಹಬಳಕೆ ಸಿಲಿಂಡರ್​ ಲಭ್ಯತೆಯೂ ಕಡಿಮೆ ಆಗಿದೆ. ಈ ಪರಿಸ್ಥಿತಿಯಿಂದ ಸಾಮಾನ್ಯ ಜನರಿಗೆ ಸಾಕಷ್ಟು ಸಮಸ್ಯೆ ಆಗುತ್ತಿದೆ. ಸಾಮಾನ್ಯರಿಗೆ ಮಾತ್ರವಲ್ಲದೆ ಇದೀಗ ಬಾಲಿವುಡ್‌ನ ಸೆಲೆಬ್ರಿಟಿಗಳಿಗೂ ಎಲ್​​ಪಿಜಿ ಸಿಲಿಂಡರ್ ಕೊರತೆ ಸಮಸ್ಯೆಯ…

Read More

ನೆಲಮಂಗಲ ಬಳಿ ಭೀಕರ ಅಪಘಾತ: ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​

ನೆಲಮಂಗಲ, ಮಾರ್ಚ್​​ 17: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 30 ವರ್ಷದ ಗೃಹಿಣಿ ಲಕ್ಷ್ಮಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಯಾದಗಿರಿ ಮೂಲದ ಲಕ್ಷ್ಮಿ ಬೆಂಗಳೂರಿನ ಕಾಚೊಹಳ್ಳಿಯಲ್ಲಿ ವಾಸವಾಗಿದ್ದು, ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಸುಮಾರು 8:30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಲಕ್ಷ್ಮಿ ಅವರು ತಮ್ಮ ಅನಾರೋಗ್ಯ ಪೀಡಿತ ಮಗನನ್ನು ಗೊಲ್ಲರಹಟ್ಟಿ ಬಳಿಯ ಆಸ್ಪತ್ರೆಗೆ ಕರೆದೊಯ್ದು ಮನೆಗೆ ಮರಳುತ್ತಿದ್ದರು. ಗೊಲ್ಲರಹಟ್ಟಿ ಕ್ರಾಸ್ ಬಳಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಇವರಿಗೆ ಹಿಂದಿನಿಂದ ವೇಗವಾಗಿ…

Read More

ಹಾರ್ಮುಜ್ ಜಲಸಂಧಿಯಿಂದ ಗುಜರಾತ್​ಗೆ ಬಂದ ಭಾರತದ ಎರಡನೇ ಎಲ್​ಪಿಜಿ ಟ್ಯಾಂಕರ್ ನಂದಾದೇವಿ

ನವದೆಹಲಿ, ಮಾರ್ಚ್ 17: ಹಾರ್ಮುಜ್ ಜಲಸಂಧಿಯಿಂದ ಎಲ್​ಪಿಜಿ ಗ್ಯಾಸ್ ಹೊತ್ತ ಎರಡನೇ ಹಡಗೊಂದು ಭಾರತವನ್ನು ತಲುಪಿದೆ. 45,000 ಮೆಟ್ರಿಕ್ ಟನ್ ಎಲ್​ಪಿಜಿ ಹೊಂದಿರುವ ನಂದಾದೇವಿ ಎನ್ನುವ ಹಡಗು ಇಂದು ಗುರುವಾರ ಗುಜರಾತ್​ನ ವಡಿನಾರ್ ಬಂದರನ್ನು ತಲುಪಿದೆ. ಮೂಲ ಯೋಜನೆ ಪ್ರಕಾರ ಈ ಹಡಗು ಕಾಂಡ್ಲಾ ಪೋರ್ಟ್ ತಲುಪಬೇಕಿತ್ತು. ಆದರೆ, ಕಾರಣಾಂತರದಿಂದ ವಡಿನಾರ್ ಕಡೆಗೆ ತಿರುಗಿಸಲಾಯಿತು. ಇರಾನ್ ಯುದ್ಧ ಶುರುವಾದಾಗಿನಿಂದ ಹಾರ್ಮುಜ್ ಜಲಸಂಧಿಗೆ ತಡೆಯಾಗಿದೆ. ಆದರೆ, ಭಾರತ ನಡೆಸಿದ ಮಾತುಕತೆಯ ಫಲವಾಗಿ ಇರಾನ್ ದೇಶವು ಹಾರ್ಮುಜ್ ಜಲಸಂಧಿಯಿಂದ ಈವರೆಗೆ…

Read More

ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ

ಪುನೀತ್ ರಾಜ್​​ಕುಮಾರ್ (Puneeth Rajkumar) ಅವರ 51ನೇ ಜಯಂತಿಯಂದು ಕುಟುಂಬ ಸದಸ್ಯರು ಪುನೀತ್ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ರಾಘವೇಂದ್ರ ರಾಜ್​ಕುಮಾರ್, ವಿನಯ್ ರಾಜ್​ಕುಮಾರ್, ಯುವ ರಾಜ್​ಕುಮಾರ್ ಇನ್ನೂ ಹಲವು ಕುಟುಂಬ ಸದಸ್ಯರು. ಅಪ್ಪು ಅವರ ಆಪ್ತರು ಇಂದು (ಮಾರ್ಚ್ 17) ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ವಿನಯ್ ರಾಜ್​ಕುಮಾರ್ ಮತ್ತು ಯುವ ರಾಜ್​ಕುಮಾರ್ ಅವರುಗಳು ಚಿಕ್ಕಪ್ಪ ಇದ್ದಾಗ ಆಚರಿಸುತ್ತಿದ್ದ ಅವರ ಹುಟ್ಟುಹಬ್ಬಗಳನ್ನು ನೆನಪು ಮಾಡಿಕೊಂಡರು. ಹೇಗೆ…

Read More

ಡ್ರಂಕ್​​ ಆ್ಯಂಡ್​​ ಡ್ರೈವ್​​ ಮಾಡಿದವನಿಗೆ ಕೋರ್ಟ್​​ ಕೊಟ್ಟ ಶಿಕ್ಷೆ ಎಂತಹದ್ದು ನೋಡಿ

ಚಿಕ್ಕಮಗಳೂರು, ಮಾರ್ಚ್​​ 17: ಅದೆಷ್ಟೇ ಜಾಗೃತಿ ಕೆಲಸಗಳನ್ನು ಸಂಚಾರಿ ಪೊಲೀಸರು ಮಾಡಿದರೂ ಕೆಲ ವಾಹನ ಸವಾರರು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನಗಳ ಚಾಲನೆ ಹಲವರ ಅಭ್ಯಾಸವಾಗಿಹೋಗಿದೆ. ಪೊಲೀಸರ ಕೈಗೆ ಸಿಕ್ಕಿಬಿದ್ದರೆ ಹೆಚ್ಚೆಂದರೆ ದಂಡ ಹಾಕಬಹುದು ಎಂಬ ಉಡಾಫೆಯ ಮನಸ್ಥಿತಿಗೆ ಜನ ತಲುಪುತ್ತಿದ್ದಾರೆ. ಆದರೆ ಚಿಕ್ಕಮಗಳೂರಿನಲ್ಲಿ ನಡೆದ ಪ್ರಕರಣವೊಂದು ಅಂತವರಿಗೆ ಪಾಠವಾಗುವಂತಿದೆ. ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಗೆ ನ್ಯಾಯಾಲಯ ಶಾಕ್​​ ಕೊಟ್ಟಿದ್ದು, ಟ್ರಾಫಿಕ್ ರೂಲ್ಸ್ ಇರುವ‌ ಬೋರ್ಡ್ ಹಿಡಿದು ನಿಲ್ಲುವಂತೆ ಆದೇಶ ಮಾಡಿದೆ….

Read More

ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಗೂಡ್ಸ್ ಮ್ಯಾನೇಜರ್ ಎಲ್‌ಡಿಸಿ ಹುದ್ದೆಗಳ ಮುಂಬಡ್ತಿ ಪರೀಕ್ಷೆ ಮುಂದೂಡಿಕೆ

ಹುಬ್ಬಳ್ಳಿ, ಮಾರ್ಚ್ 17: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಡೆಸಿದ ಭಾರಿ ಪ್ರತಿಭಟನೆಗೆ ಮಣಿದ ರೈಲ್ವೆ ಇಲಾಖೆ, ಗೂಡ್ಸ್ ಮ್ಯಾನೇಜರ್ ಎಲ್‌ಡಿಸಿ ಹುದ್ದೆಗಳಿಗಾಗಿ ಮಾರ್ಚ್ 17 ರಂದು ನಡೆಸಲಿದ್ದ ಮುಂಬಡ್ತಿ ಪರೀಕ್ಷೆಯನ್ನು ರದ್ದುಪಡಿಸಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿನ ಕೆಲವು ಅವ್ಯವಸ್ಥೆಗಳು ಮತ್ತು ಸ್ಥಳೀಯ ಭಾಷೆಗಳ ಕಡೆಗಣನೆ ಕುರಿತು ಕರವೇ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ತೀವ್ರ ಹೋರಾಟ ನಡೆಸಿದ್ದರು. ಈ ಹೋರಾಟದ ಪರಿಣಾಮವಾಗಿ, ರೈಲ್ವೆ ಇಲಾಖೆಯು ಮುಂಬಡ್ತಿ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದೆ. ಹಲವು ದಿನಗಳಿಂದ ಕರವೇ ಮುಖಂಡರು ಮತ್ತು ಸದಸ್ಯರು…

Read More

ದಿನದ 24 ಗಂಟೆಯೂ ಪ್ರದರ್ಶನ ಕಾಣಲಿದೆ ‘ಧುರಂಧರ್ 2’ ಸಿನಿಮಾ

‘ಧುರಂಧರ್ 2’ (Dhurandhar 2) ರಿಲೀಸ್ ಆಗೋಕೆ ಕೌಂಟ್​ಡೌನ್ ಶುರುವಾಗಿದೆ. ಮಾರ್ಚ್ 19ಕ್ಕೆ ಸಿನಿಮಾ ರಿಲೀಸ್ ಆಗುತ್ತಿದ್ದರೂ, ಡಿಸೆಂಬರ್ 18ಕ್ಕೆ ಸಿನಿಮಾಗೆ ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗಿದೆ. ಇದಕ್ಕೆ ಬುಕ್ಕಿಂಗ್ ಜೋರಾಗಿದೆ. ಹೀಗಿರುವಾಗಲೇ ಸಿನಿಮಾ ಹೊಸ ಹೊಸ ದಾಖಲೆಗಳನ್ನು ಬರೆಯಲು ರೆಡಿ ಆಗಿದೆ. ಭಾರತದ ಕೆಲ ಭಾಗದಲ್ಲಿ ದಿನದ 24 ಗಂಟೆಯೂ ‘ಧುರಂಧರ್ 2’ಗೆ ಶೋ ನೀಡಲಾಗುತ್ತಿದೆ! ‘ಧುರಂಧರ್ 2’ ಸಿನಿಮಾದ ಅವಧಿ ಸರಿ ಸುಮಾರು ನಾಲ್ಕು ಗಂಟೆ ಇದೆ. ದಿನಕ್ಕೆ ಐದು ಶೋ ಮಾಡಬೇಕು ಎಂದರೆ…

Read More