All posts by nagaraj11081993

Video: 4 ಕಿ.ಮೀ ಕ್ರಮಿಸಲು 45 ನಿಮಿಷಗಳು ತೆಗೆದುಕೊಂಡೆ; ಟ್ರಾಫಿಕ್‌ ಸಮಸ್ಯೆ ಬಗ್ಗೆ ಅಸಮಾಧಾನ ಹೊರಹಾಕಿದ ಗೂಗಲ್ ಟೆಕ್ಕಿ – Kannada News | Bengaluru: It took 45 minutes to travel 4 km: This is the reality of Bengaluru, says Google techie

ಬೆಂಗಳೂರು, ಮೇ 22: ಚೆನ್ನೈ, ಮುಂಬೈ ಹೀಗೆ ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿ ಇರುತ್ತದೆ. ಈ ಬೆಂಗಳೂರಿನಲ್ಲಂತೂ (Bengaluru) ಕೇಳುವುದೇ ಬೇಡ, ಬೆಳಗ್ಗೆ ಸಂಜೆಯಾದರಂತೂ ಟ್ರಾಫಿಕ್‌ನಿಂದ ರಸ್ತೆಗಳು ಬ್ಲಾಕ್ ಆಗುತ್ತದೆ. ಪೀಕ್‌ ಟೈಮ್‌ಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚೇ ಇರುತ್ತದೆ. ಇದೀಗ ಬೆಂಗಳೂರಿನ ಗೂಗಲ್‌ನಲ್ಲಿ ಕೆಲಸ ಮಾಡುತ್ತಿರುವ ಟೆಕ್ಕಿಯೊಬ್ಬರು 4 ಕಿಲೋಮೀಟರ್ ದೂರದಲ್ಲಿರುವ ತನ್ನ ಆಫೀಸಿಗೆ ತಲುಪಲು 45 ನಿಮಿಷಗಳು ಬೇಕಾಯಿತು ಎಂದು ಹೇಳಿದ್ದಾರೆ. ಈ ಮೂಲಕ ನಗರದ ಸಂಚಾರ ಪರಿಸ್ಥಿತಿಯ ಬಗ್ಗೆ ತಮ್ಮ ಹತಾಶೆಯನ್ನು ಹೊರಹಾಕಿದ್ದಾರೆ.

ವೆಂಕಟೇಶ್ ಡಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋಗೆ ಪ್ರೀಮಿಯಂ ಕ್ರಾಲಿಂಗ್ ವೇಗವನ್ನು ಅನುಭವಿಸಲು ಪ್ರೀಮಿಯಂ ತೆರಿಗೆಗಳನ್ನು ಪಾವತಿಸುವುದು ಶೀರ್ಷಿಕೆ ನೀಡಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಈ ವಿಡಿಯೋದಲ್ಲಿ, ತಾನು ಆಫೀಸಿಗೆ ಪ್ರಯಾಣಿಸಲು 9 ರಿಂದ 10 ನಿಮಿಷಗಳು ತೆಗೆದುಕೊಳ್ಳುತ್ತೇನೆ. ಆದರೆ ಭಾರೀ ದಟ್ಟಣೆಯಿಂದಾಗಿ ಅದೇ ಮಾರ್ಗದಲ್ಲಿ ಪ್ರಯಾಣಿಸಲು ಹೆಚ್ಚು ಸಮಯ ತೆಗೆದುಕೊಂಡೆ. ನಾನು ಆಫೀಸಿನಿಂದ 4 ಕಿಲೋಮೀಟರ್ ದೂರದಲ್ಲಿ ವಾಸಿಸುತ್ತಿದ್ದೇನೆ. ಇಂದು ಕಚೇರಿಗೆ ತಲುಪಲು ನನಗೆ 45 ನಿಮಿಷಗಳು ಬೇಕಾಯಿತು. ಕಚೇರಿಗೆ ತಲುಪಲು 9 ರಿಂದ 10 ನಿಮಿಷಗಳು ಬೇಕು. ಆದರೆ ಟ್ರಾಫಿಕ್ ನಿಂದ 45 ನಿಮಿಷಗಳು ಬೇಕಾಯಿತು.

ಬೆಳಿಗ್ಗೆ 10:00 ಗಂಟೆಗೆ ನಾನು ನನ್ನ ಮನೆಯಿಂದ ಹೊರಟು ಆಫೀಸಿಗೆ ತಲುಪಿದೆ. ಆದರೆ ಈಗ 10:45 ನಿಮಿಷ. ನಾನು ನನ್ನ ಸಂಬಳಕ್ಕಿಂತ ಹೆಚ್ಚಿನ ತೆರಿಗೆಗಳನ್ನು ಪಾವತಿಸಿದ ತಿಂಗಳುಗಳಿವೆ. ನಾನು ಮಾತ್ರವಲ್ಲ, ಸಾವಿರಾರು, ಲಕ್ಷಾಂತರ ಜನರು ಇದನ್ನು ಮಾಡುತ್ತಾರೆ ಎಂದು ನನಗೆ ತಿಳಿದಿದೆ. ಆದರೆ ಇದು ತುಂಬಾ ನಿರಾಶಾದಾಯಕವಾಗಿದೆ. ಇದೇನು ನಡೆಯುತ್ತಿದೆ ಎಂದು ಎನಿಸಿಕೊಂಡರೆ ನನಗೆ ತುಂಬಾ ಕೋಪ ಬರುತ್ತದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಹೈದರಾಬಾದ್​​ನಲ್ಲಿ ಇರುವಂತೆ ಬೆಂಗಳೂರು ರಸ್ತೆಗಳು ಯಾಕಿಲ್ಲ? ಕೆನಡಾ ವ್ಯಕ್ತಿಯ ವಿಡಿಯೋ ವೈರಲ್

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಇದು ಬೆಂಗಳೂರಿನ ಸಂಚಾರದ ದೈನಂದಿನ ವಾಸ್ತವ ಎಂದಿದ್ದಾರೆ. ಮತ್ತೊಬ್ಬರು, 45 ನಿಮಿಷಗಳಲ್ಲಿ ನಾಲ್ಕು ಕಿಲೋಮೀಟರ್ ಕ್ರಮಿಸುವುದು ಪ್ರಯಾಣವಲ್ಲ, ಅದುವೇ ಶಿಕ್ಷೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಇದಕ್ಕಾಗಿಯೇ ಜನರು ಮತ್ತೆ ವರ್ಕ್ ಫ್ರಮ್ ಹೋಮ್ ಎಂದು ಕೆಲಸ ಕೇಳುತ್ತಿದ್ದಾರೆ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: 34 ಸಿಕ್ಸ್, 530 ರನ್; ಸಿಎಸ್​ಕೆ ವೇಗಿಯ ಅಪರೂಪದ ದಾಖಲೆ

Source link

ಆರ್​ಬಿಐನಿಂದ ಸರ್ಕಾರಕ್ಕೆ ಈ ವರ್ಷ 2.87 ಲಕ್ಷ ಕೋಟಿ ರೂ ಡಿವಿಡೆಂಡ್; ಇದು ಹೊಸ ದಾಖಲೆ – Kannada News | RBI Approves Record Rs 2.87 Lakh Crore Dividend to Centre: Boosting India’s Fiscal Strength FY26

ನವದೆಹಲಿ, ಮೇ 22: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) 2025-26ರ ಹಣಕಾಸು ವರ್ಷಕ್ಕೆ (FY26) ಕೇಂದ್ರ ಸರ್ಕಾರಕ್ಕೆ ದಾಖಲೆ ಮಟ್ಟದ 2.87 ಲಕ್ಷ ಕೋಟಿ ರೂ (₹2,86,588.46 ಕೋಟಿ) ಲಾಭಾಂಶವನ್ನು (Dividend/Surplus Transfer) ನೀಡಲು ಅನುಮೋದನೆ ನೀಡಿದೆ. ಜಾಗತಿಕ ಉದ್ವಿಗ್ನತೆ ಮತ್ತು ಕಚ್ಚಾ ತೈಲ ಬೆಲೆ ಏರಿಕೆಯ ನಡುವೆ ಕೇಂದ್ರ ಸರ್ಕಾರಕ್ಕೆ ಆರ್ಥಿಕ ಶಕ್ತಿ ತುಂಬಲು ಈ ಬೃಹತ್ ಮೊತ್ತ ನೆರವಾಗಲಿದೆ. ಮುಂಬೈನಲ್ಲಿ ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್‌ಬಿಐ ಕೇಂದ್ರೀಯ ನಿರ್ದೇಶಕರ ಮಂಡಳಿಯ 623ನೇ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಆರ್‌ಬಿಐ ಇತಿಹಾಸದಲ್ಲೇ ಇದು ಕೇಂದ್ರ ಸರ್ಕಾರಕ್ಕೆ ನೀಡುತ್ತಿರುವ ಅತಿ ದೊಡ್ಡ ಲಾಭಾಂಶವಾಗಿದೆ. ಕಳೆದ ಹಣಕಾಸು ವರ್ಷದಲ್ಲಿ (FY25) ಆರ್‌ಬಿಐ 2.69 ಲಕ್ಷ ಕೋಟಿ ರೂ ವರ್ಗಾಯಿಸಿತ್ತು. ಈ ಬಾರಿ ಆ ಮೊತ್ತವನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

2025-26ರ ಆರ್ಥಿಕ ವರ್ಷದಲ್ಲಿ ರಿಸರ್ವ್ ಬ್ಯಾಂಕ್‌ನ ಒಟ್ಟು ಆದಾಯ ಶೇ. 26.42 ರಷ್ಟು ಹೆಚ್ಚಾಗಿದೆ. ರಿಸ್ಕ್ ಪ್ರೊವಿಷನ್‌ಗಿಂತ (ಆಪತ್ಕಾಲೀನ ನಿಧಿ) ಮುಂಚಿನ ನಿವ್ವಳ ಆದಾಯವು 3,95,972 ಕೋಟಿ ರೂಗೆ ತಲುಪಿದೆ (ಕಳೆದ ವರ್ಷ ಇದು ₹3,13,455 ಕೋಟಿ ಆಗಿತ್ತು). ಚಿನ್ನದ ಬೆಲೆಯಲ್ಲಿ ಆದ ಭಾರಿ ಏರಿಕೆ ಮತ್ತು ವಿದೇಶಿ ವಿನಿಮಯ ವ್ಯವಹಾರಗಳಿಂದ ಆರ್‌ಬಿಐಗೆ ಈ ಭಾರಿ ಲಾಭ ಬಂದಿದೆ.

ಇದನ್ನೂ ಓದಿ: ಐಟಿಆರ್ ಸಲ್ಲಿಸುತ್ತಿದ್ದೀರಾ? ಎಐಎಸ್ ಪರಿಶೀಲನೆ ಮರೆಯದಿರಿ; ಏನದರ ಮಹತ್ವ? ಇಲ್ಲಿದೆ ಡೀಟೇಲ್ಸ್

2026ರ ಮಾರ್ಚ್ 31 ಕ್ಕೆ ಕೊನೆಗೊಂಡಂತೆ ಆರ್‌ಬಿಐನ ಬ್ಯಾಲೆನ್ಸ್ ಶೀಟ್ ಗಾತ್ರವು ಶೇಕಡಾ 20.61 ರಷ್ಟು ವೃದ್ಧಿಯಾಗಿದ್ದು, ಬರೋಬ್ಬರಿ 91.97 ಲಕ್ಷ ಕೋಟಿ ರೂಗೆ ತಲುಪಿದೆ. ಕೇವಲ ಸರ್ಕಾರಕ್ಕೆ ಲಾಭಾಂಶ ನೀಡುವುದು ಮಾತ್ರವಲ್ಲದೆ, ಆರ್‌ಬಿಐ ತನ್ನ ಸುರಕ್ಷತೆಗಾಗಿ ಇಟ್ಟುಕೊಳ್ಳುವ ಆಪತ್ಕಾಲೀನ ನಿಧಿಗೆ (Contingent Risk Buffer – CRB) ಈ ಬಾರಿ ಭಾರಿ ಮೊತ್ತವನ್ನು ವರ್ಗಾಯಿಸಿದೆ. ಕಳೆದ ವರ್ಷ 44,861 ಕೋಟಿ ರೂ ಮೀಸಲಿಟ್ಟಿದ್ದ ಆರ್‌ಬಿಐ, ಈ ಬಾರಿ ಸಿಆರ್‌ಬಿ ನಿಧಿಗೆ 1,09,379.64 ಕೋಟಿ ರೂ ಜಮಾ ಮಾಡಿದೆ. ಇದರೊಂದಿಗೆ ಈ ತುರ್ತು ನಿಧಿಯ ಪ್ರಮಾಣವನ್ನು ಬ್ಯಾಲೆನ್ಸ್ ಶೀಟ್‌ನ ಶೇ. 6.5 ರ ಮಟ್ಟದಲ್ಲಿ ಕಾಯ್ದುಕೊಳ್ಳಲಾಗಿದೆ.

ಬಜೆಟ್ ಅಂದಾಜಿಗಿಂತ ಸ್ವಲ್ಪ ಕಡಿಮೆ: ಕೇಂದ್ರ ಸರ್ಕಾರವು ತನ್ನ ಬಜೆಟ್‌ನಲ್ಲಿ ಆರ್‌ಬಿಐ ಮತ್ತು ಇತರ ಸಾರ್ವಜನಿಕ ವಲಯದ ಬ್ಯಾಂಕುಗಳಿಂದ ಒಟ್ಟು 3.16 ಲಕ್ಷ ಕೋಟಿ ರೂ ಲಾಭಾಂಶ ಬರಬಹುದು ಎಂದು ಅಂದಾಜಿಸಿತ್ತು. ಆರ್‌ಬಿಐ ನೀಡಿದ 2.87 ಲಕ್ಷ ಕೋಟಿ ರೂ ಅದರ ನಿರೀಕ್ಷೆಗಿಂತ ಕೊಂಚ ಕಡಿಮೆಯಾಗಿದ್ದರೂ, ಮಾರುಕಟ್ಟೆಯ ತಜ್ಞರ ಅಂದಾಜಿನ (₹2.7 ಲಕ್ಷ ಕೋಟಿಯಿಂದ ₹3 ಲಕ್ಷ ಕೋಟಿ) ವ್ಯಾಪ್ತಿಯಲ್ಲೇ ಇದೆ.

ಇದನ್ನೂ ಓದಿ: ಡಾಲರ್ ಎದುರು ರುಪಾಯಿ ಹೇಗೆ ಬೇಕಾದರೂ ಕುಸಿಯಲಿ ಬಿಡಿ, ಚಿಂತೆ ಬೇಡ: ಹಣಕಾಸು ಆಯೋಗ ಅಧ್ಯಕ್ಷ ಪನಗರಿಯಾ

ಸರ್ಕಾರಕ್ಕೆ ಹೇಗೆ ನೆರವಾಗಲಿದೆ?

ಮಧ್ಯಪ್ರಾಚ್ಯದಲ್ಲಿ (Middle East) ನಡೆಯುತ್ತಿರುವ ಭೌಗೋಳಿಕ ರಾಜಕೀಯ ಬಿಕ್ಕಟ್ಟಿನಿಂದಾಗಿ ಕಚ್ಚಾ ತೈಲ ಬೆಲೆ ಹೆಚ್ಚಾಗಿದ್ದು, ಭಾರತದ ಆಮದು ವೆಚ್ಚ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಆರ್‌ಬಿಐನಿಂದ ಬಂದಿರುವ ಈ ಬೃಹತ್ ಹಣವು ಸರ್ಕಾರದ ವಿತ್ತೀಯ ಕೊರತೆಯನ್ನು (Fiscal Deficit) ನಿಯಂತ್ರಣದಲ್ಲಿಡಲು ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಹಣಕಾಸು ಒದಗಿಸಲು ದಿಕ್ಸೂಚಿಯಾಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮ್ಯಾಟ್ರಿಮೋನಿಯಲ್‌ನಲ್ಲಿ ‘ಡಾಕ್ಟರ್’ ಎಂದು ಬಿಲ್ಡಪ್ ಕೊಟ್ಟು ಹತ್ತಕ್ಕೂ ಹೆಚ್ಚು ಯುವತಿಯರಿಗೆ ವಂಚನೆ!

ಬೆಂಗಳೂರು, ಮೇ.22: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗಳಲ್ಲಿ ತಾನು ಪಿಎಚ್‌ಡಿ (PhD) ಪದವೀಧರ, ಡಾಕ್ಟರ್ ಎಂದು ಸುಳ್ಳು ಪ್ರೊಫೈಲ್ ಸೃಷ್ಟಿಸಿ, ಮದುವೆಯಾಗುವುದಾಗಿ ನಂಬಿಸಿ ಮೈಸೂರು ಮತ್ತು ಬೆಂಗಳೂರಿನ ಹತ್ತಕ್ಕೂ ಹೆಚ್ಚು ಯುವತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ವಂಚನೆ ಜಾಲದ ಸೂತ್ರಧಾರ ಪ್ರದೀಪ್ ಸೋಲೋಮನ್ ಹಾಗೂ ಆತನಿಗೆ ಸಾತ್ ನೀಡಿದ ತಾಯಿ ಕಲಾವತಿ ವಿರುದ್ಧ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರ ಬಂಧನ ಭೀತಿಯಲ್ಲಿ ಅಮ್ಮ-ಮಗ ಇಬ್ಬರೂ ಎಸ್ಕೇಪ್ ಆಗಿದ್ದಾರೆ.

ಆರೋಪಿ ಪ್ರದೀಪ್ ಸೋಲೋಮನ್ ಮ್ಯಾಟ್ರಿಮೋನಿಯಲ್ ಸೈಟ್‌ಗಳಲ್ಲಿ ‘ಡಾ. ಪ್ರದೀಪ್ ಸೋಲೋಮನ್’ ಹೆಸರಿನಲ್ಲಿ ಹೈ-ಫೈ ಪ್ರೊಫೈಲ್ ತೆರೆದಿದ್ದನು. ಮಗನ ಈ ವಂಚನೆ ಆಟಕ್ಕೆ ತಾಯಿ ಕಲಾವತಿ ಕೂಡ ಸಂಪೂರ್ಣ ಸಾತ್ ನೀಡಿದ್ದಳು. ಇವರಿಬ್ಬರು ಮೈಸೂರಿನಲ್ಲಿ ದೊಡ್ಡದೊಂದು ಐಷಾರಾಮಿ ಬಂಗಲೆಯನ್ನು ಬಾಡಿಗೆಗೆ ಪಡೆದು, ತಾವು ದೊಡ್ಡ ಶ್ರೀಮಂತರು ಎಂಬಂತೆ ಸಮಾಜದಲ್ಲಿ ಬಿಲ್ಡಪ್ ಕೊಡುತ್ತಿದ್ದರು. ಈ ಬಂಗಲೆ ಮತ್ತು ಅವರ ಲೈಫ್‌ಸ್ಟೈಲ್ ನೋಡಿ ಮದುವೆ ಸಂಬಂಧ ಬೆಳೆಸಲು ಮುಂದೆ ಬರುವ ವಧುವಿನ ಕುಟುಂಬಸ್ಥರನ್ನು ತಮ್ಮ ಬಣ್ಣದ ಮಾತುಗಳ ಬಲೆಗೆ ಬೀಳಿಸಿಕೊಳ್ಳುತ್ತಿದ್ದರು.

ಇದನ್ನೂ ಓದಿ: ವೆಬ್​​​ಸೈಟ್​​​​ಗೆ ಪೇಜ್​​ ವಿವ್ಸ್​​​ ಬರದಿರಲು ಇದೆ ಅಸಲಿ ಕಾರಣ!: ಗೂಗಲ್ ತಂದ ಎಐ ಮಾರಿ; ಇನ್ಮುಂದೆ ಲಿಂಕ್ ಕ್ಲಿಕ್ ಮಾಡೋರೇ ಇರಲ್ವಾ?

ಯುವತಿಯರ ಕುಟುಂಬದ ನಂಬಿಕೆ ಗಳಿಸಿದ ನಂತರ, “ನನ್ನ ದೊಡ್ಡ ಮೊತ್ತದ ಹಣ ತಾಂತ್ರಿಕ ಕಾರಣಗಳಿಂದ ಬ್ಯಾಂಕ್‌ನಲ್ಲಿ ಸ್ಟ್ರಕ್ (Stuck) ಆಗಿದೆ, ಇನ್ನು ಕೆಲವೇ ದಿನಗಳಲ್ಲಿ ಹಣ ವಾಪಸ್ ಬರುತ್ತದೆ, ಸದ್ಯಕ್ಕೆ ಅರ್ಜೆಂಟ್ ಇದೆ” ಎಂದು ಹೇಳಿ ಲಕ್ಷ ಲಕ್ಷ ರೂಪಾಯಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದನು. ಪ್ರದೀಪನ ಮಾತು ನಂಬಿ ಇತ್ತೀಚೆಗೆ ಬೆಂಗಳೂರು ಮೂಲದ ಶ್ರೀಮಂತ ಕುಟುಂಬವೊಂದು ಲಕ್ಷಾಂತರ ರೂಪಾಯಿ ಹಣ ನೀಡಿ ವಂಚನೆಗೊಳಗಾಗಿದೆ. ಹಣ ಕೈ ಸೇರಿದ ಬೆನ್ನಲ್ಲೇ ಅಮ್ಮ-ಮಗ ಇಬ್ಬರೂ ನಾಪತ್ತೆಯಾಗಿದ್ದಾರೆ.

ಪ್ರದೀಪ್ ಕೈಯಲ್ಲಿ ಮೋಸ ಹೋದ ಮೈಸೂರು ಮತ್ತು ಬೆಂಗಳೂರಿನ ಹಲವು ಯುವತಿಯರು ಹಾಗೂ ಅವರ ಕುಟುಂಬಸ್ಥರು ಈಗ ಮೈಸೂರಿನ ಆ ಬಂಗಲೆಯ ಮುಂದೆ ಬಂದು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ಇತ್ತ ಅಡುಗೋಡಿ ಪೊಲೀಸರು ಕಳೆದ ಎರಡು ದಿನಗಳಿಂದ ವಂಚಕ ಅಮ್ಮ-ಮಗನಿಗಾಗಿ ತೀವ್ರ ಶೋಧ ಕಾರ್ಯ (ತಲಾಶ್) ನಡೆಸುತ್ತಿದ್ದಾರೆ. ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಈ ಖತರ್ನಾಕ್ ಜೋಡಿಯ ಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ, ಇಲ್ಲಿದೆ ನೋಡಿ ವಿಡಿಯೋ – Kannada News | Lost Son Found in Delhi: Mother’s Joyful Tears After 4 Year Separation

ದೆಹಲಿ, ಮೇ.22: ಹೆತ್ತ ಕರಳಿಗೆ ತನ್ನ ಮಗನೇ ಸರ್ವಸ್ವ. ಅಂತಹ ಮಗ ಕಣ್ಣೆದುರೇ ಇದ್ದಕ್ಕಿದ್ದಂತೆ ನಾಪತ್ತೆಯಾಗಿ ಬಿಟ್ಟರೆ ಆ ಹೆತ್ತವರ ಒಡಲು ಅನುಭವಿಸುವ ನರಕಯಾತನೆ ಅಷ್ಟಿಷ್ಟಲ್ಲ. ಇಲ್ಲೊಂದು ಕುಟುಂಬ ಕಳೆದ ನಾಲ್ಕು ವರ್ಷಗಳಿಂದ ಮಗನ ಅಗಲಿಕೆಯ ತೀವ್ರ ವೇದನೆಯನ್ನು ಅನುಭವಿಸುತ್ತಿತ್ತು. ಆದರೆ ಇಂದು, ಆ ಕಳೆದುಹೋಗಿದ್ದ ಮಗ ಸಾಕ್ಷಾತ್ ತನ್ನ ಕಣ್ಣೆದುರೇ ಬಂದು ನಿಂತಾಗ, ಆ ತಾಯಿ ನಿಯಂತ್ರಿಸಲಾಗದೆ ಭಾವುಕತೆಯ ಕಣ್ಣೀರಿನ ಮಹಾಪೂರವನ್ನೇ ಹರಿಸಿದ್ದಾಳೆ. ಈ ಹೃದಯಸ್ಪರ್ಶಿ ದೃಶ್ಯಕ್ಕೆ ಸಾಕ್ಷಿಯಾದ ಇಡೀ ವಾತಾವರಣವೇ ಭಾವುಕತೆಯ ಗೂಡಾಗಿ ಮಾರ್ಪಟ್ಟಿತ್ತು. ಕಳೆದ ನಾಲ್ಕು ವರ್ಷಗಳಿಂದ ಈ ಬಡ ಹೆತ್ತವರು ಪ್ರತಿಕ್ಷಣವೂ ಅನುಭವಿಸಿದ ನೋವು, ಪಟ್ಟ ಪಾಡು ಮತ್ತು ಎದೆಯೊಳಗಿನ ಯಾತನೆ ಎಂತವರ ಕಣ್ಣಲ್ಲೂ ನೀರು ತರಿಸುವಂತದ್ದು. ಮಗ ಜೀವಂತವಾಗಿದ್ದಾನೋ ಇಲ್ಲವೋ ಎಂಬ ಆತಂಕದ ಮಧ್ಯೆಯೇ ದಿನ ದೂಡುತ್ತಿದ್ದ ಆ ಪೋಷಕರಿಗೆ ಇಂದು ಜಗತ್ತಿನ ಅತ್ಯಂತ ದೊಡ್ಡ ಸಂತೋಷ ಸಿಕ್ಕಂತಾಗಿದೆ. ಮಗನನ್ನು ಬಿಗಿದಪ್ಪಿ ಅಳುತ್ತಿದ್ದ ಆ ತಾಯಿಯ ಕಣ್ಣೀರು, ಆಕೆ ಇಷ್ಟು ವರ್ಷಗಳ ಕಾಲ ಮನಸ್ಸಿನೊಳಗೆ ಬಚ್ಚಿಟ್ಟುಕೊಂಡಿದ್ದ ಕೋಟಿ ಜನ್ಮಗಳ ನೋವನ್ನು ಹೊರಹಾಕುತ್ತಿತ್ತು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್’ ನೋಡಿ ‘ಡ್ರ್ಯಾಗನ್’ ಕತೆ ಬದಲಾಯಿಸಿದರೇ ಪ್ರಶಾಂತ್ ನೀಲ್? – Kannada News | Did Prashanth Neel following Dhurandhar success secrete for Dragon movie

ಜೂ ಎನ್​​ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ ನಿರ್ದೇಶಿಸಿರುವ ‘ಡ್ರ್ಯಾಗನ್’ ಸಿನಿಮಾದ ಟೀಸರ ಮೇ 20ಕ್ಕೆ ಬಿಡುಗಡೆ ಆಗಿದ್ದು, ಸಖತ್ ವೈರಲ್ ಆಗುತ್ತಿದೆ. ಮಾದಕ ದ್ರವ್ಯದ ಸಾಮ್ರಾಜ್ಯದ ಮೇಲೆ ಹಿಡಿತ ಸಾಧಿಸಲು ಗ್ಯಾಂಗುಗಳು ಪರಸ್ಪರ ಬಡಿದಾಡುವ ಕತೆಯನ್ನು ಸಿನಿಮಾ ಒಳಗೊಂಡಿರುವುದು ಟೀಸರ್​​ನಿಂದ ತಿಳಿದು ಬರುತ್ತಿದೆ. ಆದರೆ ‘ಡ್ರ್ಯಾಗನ್’ ಸಿನಿಮಾಕ್ಕೂ ‘ಧುರಂಧರ್’ಗೂ ಸಾಮ್ಯತೆ ಇದೆ ಎಂಬುದು ಆ ನಂತರ ಹೊರಬಂದ ಪ್ರಶಾಂತ್ ನೀಲ್ ಸಂದರ್ಶನದಿಂದ ತಿಳಿದು ಬಂರುತ್ತಿದ್ದು, ‘ಧುರಂಧರ್’ ಸಿನಿಮಾದ ಯಶಸ್ಸಿನ ಬಳಿಕ ‘ಡ್ರ್ಯಾಗನ್’ ಕತೆಯನ್ನು ನೀಲ್ ಬದಲಿಸಿದ್ದಾರೆಯೇ ಎಂಬ ಅನುಮಾನವನ್ನು ಕೆಲ ನೆಟ್ಟಿಗರು ವ್ಯಕ್ತಪಡಿಸಿದ್ದಾರೆ.

ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಪ್ರಶಾಂತ್ ನೀಲ್, ‘ಡ್ರ್ಯಾಗನ್’ ಸಿನಿಮಾವನ್ನು ಒಂದು ವಾಕ್ಯದಲ್ಲಿ ವಿವರಿಸಿ ಎಂದಾಗ, ‘ನಾವು ಈ ವರೆಗೆ ಎಂದೂ ಬರದಂಥಹಾ ಒಂದು ದೇಶಭಕ್ತಿಯ ಸಿನಿಮಾವನ್ನು ನೀಡುತ್ತಿದ್ದೇವೆ’ ಎಂದಿದ್ದಾರೆ. ಆ ಮೂಲಕ ಇದು ಪ್ರಶಾಂತ್ ನೀಲ್ ಅವರ ಹಿಂದಿನ ಸಿನಿಮಾಗಳಂತೆ ಕೇವಲ ಗ್ಯಾಂಗ್ ವಾರ್, ನಾಯಕನ ವಿಜೃಂಭಣೆ, ಅಬ್ಬರದ ಸಂಗೀತದ ಸಿನಿಮಾ ಮಾತ್ರವಲ್ಲ, ಇದು ದೇಶಭಕ್ತಿಯನ್ನು ಜಾಗೃತಗೊಳಿಸುವ ಸಿನಿಮಾ ಎಂಬ ಅಂಶವನ್ನು ಖುದ್ದು ನೀಲ್ ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ:ಥಿಯೇಟರ್​​​ನಲ್ಲಿ 65ದಿನ ಪೂರೈಸಿದ ‘ಧುರಂಧರ್ 2’; ಒಟ್ಟೂ ಗಳಿಕೆ ಎಷ್ಟು?

‘ಧುರಂಧರ್’ ಸಹ ದೇಶಭಕ್ತಿಯನ್ನು ಜಾಗೃತಪಡಿಸುವ ಸಿನಿಮಾ ಆಗಿದ್ದು, ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿದೆ. ಅದು ಮಾತ್ರವೇ ಅಲ್ಲದೆ ರಾಷ್ಟ್ರೀಯತೆಯ ವಿಷಯವಾಗಿ ಇತ್ತೀಚೆಗೆ ಹಲವು ಸಿನಿಮಾಗಳು ಬಂದಿದ್ದು, ಬಹುತೇಕ ಸಿನಿಮಾಗಳು ದೊಡ್ಡ ಹಿಟ್ ಆಗಿವೆ. ಮಾತ್ರವಲ್ಲದೆ ದೇಶಪ್ರೇಮ, ರಾಷ್ಟ್ರೀಯತೆಯನ್ನು ಆಧಾರವಾಗಿಟ್ಟುಕೊಂಡು ಹಲವು ಸಿನಿಮಾಗಳು ನಿರ್ಮಾಣ ಹಂತದಲ್ಲಿವೆ. ಈಗ ರಾಷ್ಟ್ರೀಯತೆಯ ಟ್ರೆಂಡ್ ಜೋರಾಗಿರುವ ಕಾರಣ, ‘ಡ್ರ್ಯಾಗನ್’ ಅಂಥಹಾ ಗ್ಯಾಂಗ್​​ಸ್ಟರ್ ಸಿನಿಮಾನಲ್ಲಿ ದೇಶಭಕ್ತಿಯ ಅಂಶಗಳನ್ನು ನೀಲ್ ಬೆರೆಸಿದ್ದಾರೆ ಎನ್ನಲಾಗುತ್ತಿದೆ.

ನೀಲ್ ಅವರು ತಮ್ಮ ಸಿನಿಮಾಗಳಲ್ಲಿ ಸೆಂಟಿಮೆಂಟ್ ಅಂಶಗಳನ್ನು ಇರಿಸಿಯೇ ಇರಿಸುತ್ತಾರೆ. ‘ಉಗ್ರಂ’ನಲ್ಲಿ ತಾಯಿ ಮತ್ತು ಗರ್ಲ್​ಫ್ರೆಂಡ್ ಸೆಂಟಿಮೆಂಟ್, ‘ಕೆಜಿಎಫ್’ನಲ್ಲಿ ತಾಯಿ, ‘ಸಲಾರ್’ನಲ್ಲೂ ತಾಯಿ. ಈಗ ‘ಡ್ರ್ಯಾಗನ್’ ಸಿನಿಮಾನಲ್ಲಿ ದೇಶಪ್ರೇಮದ ಸೆಂಟಿಮೆಂಟ್ ಅನ್ನು ಎಳೆದು ತಂದಿರುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ‘ಡ್ರ್ಯಾಗನ್’ ಸಿನಿಮಾ ಮುಂದಿನ ವರ್ಷ ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ಆದರೆ ಅಧಿಕೃತ ಬಿಡುಗಡೆ ದಿನಾಂಕ ಇನ್ನೂ ಪ್ರಕಟ ಆಗಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Tv9 Kannada News Live: ಕರ್ನಾಟಕದಲ್ಲಿ ಮಳೆ ಅಬ್ಬರ, ಸೀಕ್ರೆಟ್ ಮದ್ವೆಗೆ ಕಂಗನಾ ಸ್ಪಷ್ಟನೆ: ಸಂಜೆವರೆಗಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Heavy Rains Lash Karnataka; Kangana Ranaut Clarifies Secret Marriage Rumours

ಬೆಂಗಳೂರು, ಮೇ 22: ಕನ್ನಡ ಪರ ಹೋರಾಟಗಾರರು, ರೈತರು, ದಲಿತರು ಹಾಗೂ ಕಳಸಾ-ಬಂಡೂರಿ ಮತ್ತು ಕಾವೇರಿ ಹೋರಾಟಗಾರರ ವಿರುದ್ಧ ದಾಖಲಾಗಿದ್ದ ಒಟ್ಟು 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕರ್ನಾಟಕ ಸಚಿವ ಸಂಪುಟ (cabinet) ತೀರ್ಮಾನಿಸಿದೆ. ಇದರಲ್ಲಿ ಕಲಬುರಗಿ ಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ವಿವಾದಕ್ಕೆ ಸಂಬಂಧಿಸಿದ 7 ಪ್ರಕರಣಗಳೂ ಸೇರಿವೆ. ಸರ್ಕಾರದ ಈ ನಿರ್ಧಾರಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರವು ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಕಿರುಕುಳ ನೀಡುತ್ತಿದ್ದು, ಮುಸ್ಲಿಮರ ಮೇಲಿನ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯುವ ಮೂಲಕ ಕ್ರಿಮಿನಲ್‌ಗಳ ಪರ ಎಂಬ ಕೆಟ್ಟ ಸಂದೇಶ ನೀಡುತ್ತಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಕಿಡಿಕಾರಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕ್ಯಾಬಿನೆಟ್ ಉಪಸಮಿತಿಯ ಶಿಫಾರಸಿನಂತೆ ಕಾನೂನಾತ್ಮಕವಾಗಿ ಮತ್ತು ಸುದೀರ್ಘ ಚರ್ಚೆಯ ಬಳಿಕವೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)

ಇಂದಿನಿಂದ ಒಂದು ವಾರ ರಾಜ್ಯಾದ್ಯಂತ ವ್ಯಾಪಕ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಾರುತಗಳ ತೀವ್ರತೆ ಹೆಚ್ಚಾಗಿರುವುದರಿಂದ ಮೇ 22 ರಿಂದ ಮುಂದಿನ ಒಂದು ವಾರ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಹಲವು ಪ್ರದೇಶಗಳಲ್ಲಿ ಗುಡುಗು, ಸಿಡಿಲು ಮತ್ತು ಬಿರುಗಾಳಿ ಗಂಟೆಗೆ 30-40 ಕಿ.ಮೀ ವೇಗ ಸಹಿತ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲೂ ಮುಂದಿನ ಕೆಲವು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಹೊತ್ತಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತಕ್ಕೆ ಆತಂಕ ಬೇಡ: ಪನಗರಿಯಾ

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು ಕುಸಿಯುತ್ತಿರುವುದರ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಅತಿಯಾಗಿ ಆತಂಕಪಡುವ ಅಗತ್ಯವಿಲ್ಲ ಎಂದು 16ನೇ ಹಣಕಾಸು ಆಯೋಗದ ಅಧ್ಯಕ್ಷ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಅರವಿಂದ್ ಪನಗರಿಯಾ ಹೇಳಿದ್ದಾರೆ. ರೂಪಾಯಿ ಮೌಲ್ಯ ಪ್ರತಿ ಡಾಲರ್‌ಗೆ 100 ರೂಪಾಯಿಗಳ ಗಡಿ ದಾಟಿದರೂ ಅದು ಕೇವಲ ಒಂದು ಸಂಖ್ಯೆಯಷ್ಟೇ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಒಂದು ವೇಳೆ ಕೃತಕವಾಗಿ ರೂಪಾಯಿ ಮೌಲ್ಯವನ್ನು ರಕ್ಷಿಸಲು ಹೋದರೆ ದೇಶದ ಫಾರೆಕ್ಸ್ ನಿಧಿ ಖಾಲಿಯಾಗುವ ಅಪಾಯವಿದೆ ಎಚ್ಚರಿಸಿದ್ದಾರೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)

ಐಪಿಎಲ್‌ನಲ್ಲಿ ಮತ್ತೊಂದು ದಾಖಲೆ ಸೃಷ್ಟಿಸುತ್ತಾರಾ ವಿರಾಟ್ ಕೊಹ್ಲಿ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಗೆದ್ದರೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿ ಕ್ವಾಲಿಫೈಯರ್ 1 ಪಂದ್ಯಕ್ಕೆ ಅರ್ಹತೆ ಪಡೆಯಲಿದೆ. ಇನ್ನು ಪಂದ್ಯದಲ್ಲಿ ಆರ್‌ಸಿಬಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮಹತ್ತರ ಇತಿಹಾಸ ಸೃಷ್ಟಿಸುವ ಸನಿಹದಲ್ಲಿದ್ದಾರೆ.

ಇದನ್ನೂ ಓದಿ: SRH vs RCB: ಕೊನೆಯ ಲೀಗ್ ಪಂದ್ಯದಲ್ಲಿ ಆರ್​ಸಿಬಿಗೆ ಸನ್‌ರೈಸರ್ಸ್ ಎದುರಾಳಿ; ಪಂದ್ಯ ಎಷ್ಟು ಗಂಟೆಗೆ ಆರಂಭ?

ಇಂದು ವಿರಾಟ್ ಕೊಹ್ಲಿ ಕೇವಲ 58 ರನ್ ಗಳಿಸಿದರೆ, ಐಪಿಎಲ್ ಇತಿಹಾಸದಲ್ಲೇ ಸತತ 4 ಸೀಸನ್‌ಗಳಲ್ಲಿ 600ಕ್ಕಿಂತ ಹೆಚ್ಚು ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಕಿಂಗ್ ಕೊಹ್ಲಿ ಈ ಹಿಂದೆ 2023ರಲ್ಲಿ 639, 2024ರಲ್ಲಿ 741 ಮತ್ತು 2025ರಲ್ಲಿ 657 ರನ್​​ ಗಳಿಸಿದ್ದರು. ಸದ್ಯ ನಡೆಯುತ್ತಿರುವ ಆವೃತ್ತಿಯಲ್ಲಿ 13 ಪಂದ್ಯಗಳಲ್ಲಿ ಅವರು 542 ರನ್ ಗಳಿಸಿದ್ದಾರೆ. ಈಗಾಗಲೇ ಕ್ರಿಸ್ ಗೇಲ್, ಡೇವಿಡ್ ವಾರ್ನರ್ ಮತ್ತು ಕೆ.ಎಲ್. ರಾಹುಲ್ ಸತತ ಮೂರು ಆವೃತ್ತಿಗಳಲ್ಲಿ 600ಕ್ಕೂ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದ್ದಾರಾದರೂ, ಸತತ ನಾಲ್ಕು ಬಾರಿ ಯಾರೂ ಈ ಮೈಲಿಗಲ್ಲು ತಲುಪಿಲ್ಲ. ಇಂದು ಕೊಹ್ಲಿ ಆ ಅಪರೂಪದ ದಾಖಲೆ ಮೇಲೆ ಕಣ್ಣಿಟ್ಟಿದ್ದಾರೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)

ಸೀಕ್ರೆಟ್ ಮದ್ವೆ ಬಗ್ಗೆ ನಟಿ ಕಂಗನಾ ರಣಾವತ್ ಸ್ಪಷ್ಟನೆ

ನಟಿ ಮತ್ತು ಸಂಸದೆ ಕಂಗನಾ ರಣಾವತ್ ಅವರು ಮಂಗಳಸೂತ್ರ ಹಾಗೂ ಹಸಿರು ಬಳೆಗಳನ್ನು ಧರಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೇ ಅವರು ರಹಸ್ಯವಾಗಿ ಮದುವೆಯಾಗಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ ಈ ಬಗ್ಗೆ ಸ್ವತಃ ಕಂಗನಾ ರಣಾವತ್​ ಅವರು ಸ್ಪಷ್ಟನೆ ನೀಡಿದ್ದು, ಇದು ಸಿನಿಮಾ ಚಿತ್ರೀಕರಣವೊಂದರ ಪಾತ್ರದ ಗೆಟಪ್ ಆಗಿದ್ದು, ಇದನ್ನ ಯಾರೋ ಫೋಟೋ ಕ್ಲಿಕ್ಕಿಸಿದ್ದಾರೆ. ನಾನು ಎಂದಿಗೂ ಗುಟ್ಟಾಗಿ ಮದುವೆಯಾಗುವುದಿಲ್ಲ ಎಂದು ವದಂತಿಗಳಿಗೆ ತೆರೆ ಎಳೆದಿದ್ದಾರೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ದೆಹಲಿ ಏಮ್ಸ್​​ನಿಂದ ತ್ವಿಶಾ ಶರ್ಮಾ 2ನೇ ಮರಣೋತ್ತರ ಪರೀಕ್ಷೆಗೆ ಮಧ್ಯಪ್ರದೇಶ ಹೈಕೋರ್ಟ್ ಅನುಮತಿ – Kannada News | Madhya Pradesh High Court allows Twisha Sharma’s second post mortem to be conducted by Delhi AIIMS

ನವದೆಹಲಿ, ಮೇ 22: ತ್ವಿಶಾ ಶರ್ಮಾ (Twisha Sharma) ಸಾವಿನ ಪ್ರಕರಣದಲ್ಲಿ ಒಂದು ದೊಡ್ಡ ಬೆಳವಣಿಗೆಯಲ್ಲಿ, ಮಧ್ಯಪ್ರದೇಶ ಹೈಕೋರ್ಟ್ ಇಂದು ಭೋಪಾಲ್‌ನಲ್ಲಿ ಏಮ್ಸ್ ದೆಹಲಿ ವೈದ್ಯರ ತಂಡದಿಂದ ಎರಡನೇ ಮರಣೋತ್ತರ ಪರೀಕ್ಷೆ ನಡೆಸಬೇಕೆಂದು ಆದೇಶಿಸಿದೆ. ಕೆಳ ನ್ಯಾಯಾಲಯವು ತಮ್ಮ ವಿನಂತಿಯನ್ನು ನಿರಾಕರಿಸಿದ ನಂತರ ತ್ವಿಶಾ ಶರ್ಮಾ ಅವರ ಕುಟುಂಬ ಸದಸ್ಯರು ಎರಡನೇ ಶವಪರೀಕ್ಷೆ ಕೋರಿ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು.

ಎರಡನೇ ಮರಣೋತ್ತರ ಪರೀಕ್ಷೆಗಾಗಿ ಕೆಳ ನ್ಯಾಯಾಲಯವು ಮಾಡಿದ ಮನವಿಯನ್ನು ವಜಾಗೊಳಿಸಿದ ನಂತರ ತ್ವಿಶಾ ಶರ್ಮಾ ಅವರ ಕುಟುಂಬ ಹೈಕೋರ್ಟ್‌ಗೆ ತೆರಳಿದ ನಂತರ ಈ ಬೆಳವಣಿಗೆ ಸಂಭವಿಸಿದೆ. ತ್ವಿಶಾ ಶರ್ಮಾ ಅವರ ದೇಹವನ್ನು ಭೋಪಾಲ್ ಏಮ್ಸ್‌ನ ಶವಾಗಾರದಲ್ಲಿ ಮೈನಸ್ 4 ಡಿಗ್ರಿ ಸೆಲ್ಸಿಯಸ್‌ನಲ್ಲಿ ಇರಿಸಲಾಗಿದೆ. ಆದರೆ ಮೃತದೇಹವನ್ನು ಹೆಚ್ಚಿನ ಸಮಯದವರೆಗೆ ಸಂರಕ್ಷಿಸಲು ಮೈನಸ್ 80 ಡಿಗ್ರಿ ಸೆಲ್ಸಿಯಸ್ ಅಗತ್ಯವಿದೆ. ಆ ನಗರದಲ್ಲಿ ಅಂತಹ ಸೌಲಭ್ಯಗಳು ಲಭ್ಯವಿಲ್ಲ. ಹೀಗಾಗಿ, ಬೇಗ ಶವಪರೀಕ್ಷೆ ನಡೆಸಿ ಎಂದು ನ್ಯಾಯಾಲಯ ಹೇಳಿದೆ.

ತನಿಖೆಯಲ್ಲಿ ತಾಂತ್ರಿಕ ದೋಷಗಳಿವೆ ಎಂದು ಬಲಿಪಶುವಿನ ಕುಟುಂಬವು ಆರೋಪಿಸಿತ್ತು ಮತ್ತು ಎಫ್‌ಐಆರ್ ದಾಖಲಿಸುವಲ್ಲಿ ಮೂರು ದಿನಗಳ ವಿಳಂಬದ ವಿಷಯವನ್ನು ಸಹ ಎತ್ತಿತ್ತು. ಅವರ ಅರ್ಜಿಯ ಪ್ರಕಾರ, ಮೊದಲ ಮರಣೋತ್ತರ ಪರೀಕ್ಷೆ ನಡೆಸಿದಾಗ ನೇಣು ಬಿಗಿದ ಬೆಲ್ಟ್ ಅನ್ನು ತನಿಖಾಧಿಕಾರಿಗಳು ಒದಗಿಸಲು ವಿಫಲರಾಗಿದ್ದಾರೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ತ್ವಿಶಾ ಅವರ ದೇಹದ ಮೇಲೆ ಕಂಡುಬಂದ ಗಾಯಗಳ ಬಗ್ಗೆ ವಿವರವಾದ ಉಲ್ಲೇಖವಿಲ್ಲದಿರುವ ಬಗ್ಗೆ ಅವರ ವಕೀಲರು ಕಳವಳ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಮಹಿಳೆಯ ಅನುಮಾನಾಸ್ಪದ ಸಾವು, ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಂದೆಯ ಎಚ್ಚರಿಕೆ

ಉತ್ತರ ಪ್ರದೇಶದ ನೊಯ್ಡಾದ 33 ವರ್ಷದ ತ್ವಿಶಾ ಶರ್ಮಾ ಮೇ 12ರಂದು ಭೋಪಾಲ್‌ನಲ್ಲಿರುವ ಅವರ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ತ್ವಿಶಾ ಸಾಯುವಂತೆ ಮಾಡಲಾಗಿತ್ತು. ಆದರೆ, ಅವರು 33 ವರ್ಷದ ತ್ವಿಶಾ ಶರ್ಮಾ ಮಾದಕ ವ್ಯಸನಿಯಾಗಿದ್ದರು ಎಂದು ಆಕೆಯ ಗಂಡನ ಮನೆಯವರು ಆರೋಪಿಸಿದ್ದರು.

ತ್ವಿಶಾ ಶರ್ಮಾ ಅವರ ಪತಿ ಸಮರ್ಥ್ ಸಿಂಗ್ ಕೂಡ ಅವರ ಸಾವಿನ ನಂತರ ತಲೆಮರೆಸಿಕೊಂಡಿದ್ದು, ಅವರನ್ನು ಹಿಡಿಯಲು ಪೊಲೀಸರು ಬಹುಮಾನ ಘೋಷಿಸಿದ್ದಾರೆ. ಈ ಮಧ್ಯೆ ಸಮರ್ಥ್ ಸಿಂಗ್ ಶೀಘ್ರದಲ್ಲೇ ಪೊಲೀಸರಿಗೆ ಶರಣಾಗಲಿದ್ದಾರೆ ಎಂದು ಅವರ ವಕೀಲರು ಹೇಳಿದ್ದಾರೆ.

ತ್ವಿಶಾ ಶರ್ಮಾ ಅವರ ಸಾವು ಸಾಮಾನ್ಯ ಆತ್ಮಹತ್ಯೆಯಲ್ಲ, ಇದೊಂದು ವ್ಯವಸ್ಥಿತ ಕೊಲೆ ಎಂದು ಅವರ ಪೋಷಕರು ಮತ್ತು ಕುಟುಂಬದವರು ಗಂಭೀರ ಆರೋಪ ಮಾಡಿದ್ದರು. ಮೊದಲನೇ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಕೆಲವು ಲೋಪದೋಷಗಳಿರಬಹುದು. ಸತ್ಯವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿರಬಹುದು ಎಂದು ಶಂಕಿಸಿದ ಕುಟುಂಬಸ್ಥರು, ಎರಡನೇ ಬಾರಿ ಮರಣೋತ್ತರ ಪರೀಕ್ಷೆ ನಡೆಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದರು.

ಇದನ್ನೂ ಓದಿ: 33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?

ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಸಾವಿನ ಹಿಂದಿನ ನೈಜ ಕಾರಣವನ್ನು ಮತ್ತು ಸತ್ಯಾಂಶವನ್ನು ಹೊರತರಲು ದೆಹಲಿಯ ಅತ್ಯುನ್ನತ ವೈದ್ಯಕೀಯ ಸಂಸ್ಥೆಯಾದ ಏಮ್ಸ್ (AIIMS Delhi) ತಜ್ಞ ವೈದ್ಯರ ಮಂಡಳಿಯ ಮೂಲಕ ಎರಡನೇ ಬಾರಿ ಮರಣೋತ್ತರ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ನಾನು ತಾಳಿ ಧರಿಸಿದ್ದು ದೊಡ್ಡ ವಿಷಯ ಅಲ್ಲ’; ಸೀಕ್ರೆಟ್ ಮದುವೆ ವದಂತಿಗೆ ಕಂಗನಾ ಸ್ಪಷ್ಟನೆ – Kannada News | Kangana Ranaut clarifies secret Marriage rumours over Mangalsutra Viral Video

ಬಾಲಿವುಡ್ ನಟಿ ಹಾಗೂ ರಾಜಕಾರಣಿ ಕಂಗನಾ ರಣಾವತ್ ಅವರು ಇತ್ತೀಚೆಗೆ ಮಂಗಳಸೂತ್ರ (Mangalsutra) ಮತ್ತು ಹಸಿರು ಬಳೆಗಳನ್ನು ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿತ್ತು. ಕಂಗನಾ ರಣಾವತ್ ಯಾರಿಗೂ ತಿಳಿಯದಂತೆ ಗುಟ್ಟಾಗಿ ಮದುವೆಯಾಗಿದ್ದಾರೆ ಎಂಬ ವದಂತಿಗಳು ಕಾಳ್ಗಿಚ್ಚಿನಂತೆ ಹಬ್ಬಿದ್ದವು. ಆ ‘ಅದೃಷ್ಟವಂತ ಪುರುಷ’ ಯಾರು ಎಂದು ನೆಟ್ಟಿಗರು ಹುಡುಕಾಡಲಾರಂಭಿಸಿದ್ದರು. ಈ ಎಲ್ಲಾ ಊಹಾಪೋಹಗಳಿಗೆ ಸ್ವತಃ ಕಂಗನಾ ರಣಾವತ್ (Kangana Ranaut) ಅವರೇ ಸ್ಪಷ್ಟನೆ ನೀಡಿದ್ದು, ‘ಇದರಲ್ಲಿ ಇಷ್ಟೊಂದು ತಲೆಕೆಡಿಸಿಕೊಳ್ಳುವಂತದ್ದು ಏನಿದೆ?’ ಎಂದು ಪ್ರಶ್ನಿಸಿದ್ದಾರೆ.

ಇತ್ತೀಚೆಗೆ ಕಂಗನಾ ಅವರು ಗುಲಾಬಿ ಬಣ್ಣದ ಸಲ್ವಾರ್ ಸೂಟ್ ಧರಿಸಿ, ಕತ್ತಿನಲ್ಲಿ ಮಂಗಳಸೂತ್ರ ಹಾಗೂ ಕೈಯಲ್ಲಿ ಹಸಿರು ಬಳೆಗಳೊಂದಿಗೆ ಕಟ್ಟಡವೊಂದರಿಂದ ಹೊರಬಂದು ತಮ್ಮ ಕಾರಿನತ್ತ ತೆರಳುತ್ತಿದ್ದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದವು. ಇದನ್ನು ನೋಡಿದ ತಕ್ಷಣವೇ, ‘ಕಂಗನಾ ರಹಸ್ಯವಾಗಿ ಮದುವೆಯಾಗಿದ್ದಾರೆ’ ಎಂದು ನೆಟ್ಟಿಗರು ತೀರ್ಮಾನಿಸಿಬಿಟ್ಟಿದ್ದರು.

ಈ ಕುರಿತು ಶುಕ್ರವಾರ (ಮೇ 22) ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ ಅವರು, ಹರಡುತ್ತಿರುವ ವದಂತಿಗಳಿಗೆ ಬ್ರೇಕ್ ಹಾಕಿದ್ದಾರೆ. ‘ನಾನು ಪ್ರತಿದಿನ ನಗರದ ಸುತ್ತಮುತ್ತ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುತ್ತೇನೆ. ಯಾರೋ ಒಬ್ಬರು ನನ್ನ ಕ್ಯಾರೆಕ್ಟರ್ ಮೇಕ್-ಅಪ್ ಲುಕ್‌ನ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈಗ ನನಗೆ ಸಾಲು ಸಾಲು ಫೋನ್ ಕರೆಗಳು ಬರುತ್ತಿವೆ. ಅಷ್ಟಕ್ಕೂ ವಿವಾಹಿತ ಮಹಿಳೆಯ ಲುಕ್‌ನಲ್ಲಿ ಕಾಣಿಸಿಕೊಂಡರೆ ಅದರಲ್ಲಿ ಅಷ್ಟೊಂದು ದೊಡ್ಡ ವಿಷಯ ಏನಿದೆ? ನಟರು ಚಿತ್ರಗಳಿಗಾಗಿ ಎಲ್ಲಾ ರೀತಿಯ ಪಾತ್ರಗಳನ್ನೂ ಮಾಡುತ್ತಾರೆ. ನಾನು ಎಂದಿಗೂ ರಹಸ್ಯವಾಗಿ ಮದುವೆಯಾಗುವುದಿಲ್ಲ. ಇದು ನನ್ನ ಪ್ರಾಮಿಸ್’ ಎಂದು ಬರೆದುಕೊಂಡಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ ಕಂಗನಾ ರಣಾವತ್ ಅವರು ತೀವ್ರವಾದ ಬಿಸಿಲಿನಲ್ಲಿ ಹೊರಾಂಗಣ ಶೂಟಿಂಗ್ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಎಸಿ ರೂಮ್‌ನಲ್ಲಿ ಕುಳಿತು ದೂರುವ ಸುದ್ದಿ ನಿರೂಪಕರ ಕಾಲೆಳೆದಿದ್ದಾರೆ. ‘ಎಸಿ ಸ್ಟುಡಿಯೋಗಳಲ್ಲಿ ಕುಳಿತುಕೊಳ್ಳುವ ನ್ಯೂಸ್ ಆ್ಯಂಕರ್‌ಗಳು ಹೊರಗಿನ ತಾಪಮಾನ ಮತ್ತು ಬಿಸಿಲಿನ ಬೇಗೆಯ ಬಗ್ಗೆ ದೂರುತ್ತಿದ್ದಾರೆ. ಆದರೆ ನಮ್ಮಂತವರ ಪಾಡೇನು? ನಾವು ಅಷ್ಟೊಂದು ಲೈಟ್ಸ್‌ ನಡುವೆ ಹೊರಾಂಗಣ ಶೂಟಿಂಗ್ ಮಾಡುತ್ತಿದ್ದೇವೆ. ದೂರುವುದನ್ನು ನಿಲ್ಲಿಸಿ ಫ್ರೆಂಡ್ಸ್. ಜೀವನ ಸವಾಲಾಗಿದ್ದರಷ್ಟೇ ಬದುಕಿದ್ದೀವಿ ಎನಿಸುತ್ತದೆ, ಸುಲಭ ಮತ್ತು ನಿರೀಕ್ಷಿತವಾಗಿದ್ದರೆ ಅದು ಸಾವಿಗೆ ಸಮಾನ. ಹ್ಯಾಪಿ ಸಮ್ಮರ್’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕಂಗನಾ ಮಾಡಿದ ‘ಎಮರ್ಜೆನ್ಸಿ’ ಸಿನಿಮಾ 2 ದಿನ ಓಡಲಿಲ್ಲ: ಖಾರವಾಗಿ ಹೇಳಿದ ‘ಧುರಂಧರ್ 2’ ನಟ

‘ಎಮರ್ಜೆನ್ಸಿ’ ಚಿತ್ರದ ಸೋಲಿನ ನಂತರ ಕಂಗನಾ ಅವರು ‘ಭಾರತ್ ಭಾಗ್ಯ ವಿಧಾತ’ ಸಿನಿಮಾದಲ್ಲಿ ನಟಿಸಿದ್ದಾರೆ. 2008ರಲ್ಲಿ ಮುಂಬೈನಲ್ಲಿ ನಡೆದ ಭೀಕರ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಆಸ್ಪತ್ರೆಯೊಂದರ ಒಳಗೆ ನಡೆಯುವ ನೈಜ ಘಟನೆಗಳ ಆಧಾರಿತ ಕಥೆಯನ್ನು ಈ ಸಿನಿಮಾ ತೋರಿಸಲಿದೆ. ಈ ಚಿತ್ರವು ಜೂನ್ 12ರಂದು ತೆರೆಕಾಣಲು ಸಜ್ಜಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮಾನಸಿಕವಾಗಿ ಕುಗ್ಗಿದ್ದ ರಾಮ್ ಚರಣ್​​ಗೆ ನೆರವು ನೀಡಿದ್ದು ಆ ಸ್ಟಾರ್ ನಿರ್ದೇಶಕ – Kannada News | Ram Charan talks about how SS Rajamouli helped in his tough times

ರಾಮ್ ಚರಣ್ (Ram Charan) ಈಗ ಪ್ಯಾನ್ ಇಂಡಿಯಾ ಸ್ಟಾರ್ ನಟ. ಆದರೆ ಅವರು ಇಂದು ಏರಿರುವ ಸ್ಥಾನವನ್ನು ಗಳಿಸಿಕೊಳ್ಳಲು ಸಾಕಷ್ಟು ಕಷ್ಟ ಪಟ್ಟಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಪುತ್ರ ಆಗಿದ್ದ ರಾಮ್ ಚರಣ್ ಮೇಲೆ ಭಾರಿ ನಿರೀಕ್ಷೆಗಳಿತ್ತು. ಆರಂಭದಲ್ಲಿ ರಾಜಮೌಳಿ ನಿರ್ದೇಶಿಸಿದ್ದ ‘ಮಗಧೀರ’ ಗೆದ್ದಿತಾದರೂ ಆ ನಂತರ ಬಂದ ಸಿನಿಮಾಗಳು ಸೋತು, ರಾಮ್ ಚರಣ್ ಟಾಲಿವುಡ್​​ನಿಂದ ಹೊರಗುಳಿಯುತ್ತಾರೆ ಎನ್ನಲಾಗಿತ್ತು. ಆದರೆ ಸತತ ಪರಿಶ್ರಮದಿಂದ ರಾಮ್ ಚರಣ್ ಸ್ಪರ್ಧೆಯಲ್ಲಿ ಉಳಿದವರು ಮಾತ್ರವಲ್ಲೇ ತಮ್ಮ ನಟನೆಯನ್ನು ತಿದ್ದಿಕೊಳ್ಳುತ್ತಾ ಇಂದು ಸ್ಟಾರ್ ನಟ ಎನಿಸಿಕೊಂಡಿದ್ದಾರೆ. ಆದರೆ ಒಂದು ಸಮಯದಲ್ಲಿ ರಾಮ್ ಚರಣ್ ಬಹಳ ಕುಗ್ಗಿಹೋಗಿದ್ದರಂತೆ. ಆಗ ಅವರಿಗೆ ನೆರವು ನೀಡಿದ್ದು ಈಗಿನ ಸ್ಟಾರ್ ನಿರ್ದೇಶಕ.

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರ ಕಾರ್ಯದಲ್ಲಿ ರಾಮ್ ಚರಣ್ ತೊಡಗಿದ್ದಾರೆ. ಸಿನಿಮಾದ ಪ್ರಚಾರದ ಭಾಗವಾಗಿ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ನಟ ರಾಮ್ ಚರಣ್, ತಾವು ಮಾನಸಿಕವಾಗಿ ತೀವ್ರವಾಗಿ ಕುಗ್ಗಿದ್ದ ಆ ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ. ಮಾತ್ರವಲ್ಲದೆ ಆ ಸಮಯದಲ್ಲಿ ತಮಗೆ ನೆರವು ನೀಡಿದ್ದು ಖ್ಯಾತ ನಿರ್ದೇಶಕ ಎಸ್​​ಎಸ್ ರಾಜಮೌಳಿ ಎಂದು ರಾಮ್ ಚರಣ್ ಹೇಳಿಕೊಂಡಿದ್ದಾರೆ.

ರಾಮ್ ಚರಣ್, ಜೂ ಎನ್​​ಟಿಆರ್ ನಟಿಸಿ, ರಾಜಮೌಳಿ ನಿರ್ದೇಶಿಸಿರುವ ‘ಆರ್‌ಆರ್‌ಆರ್’ (RRR) ಸಿನಿಮಾದ ಚಿತ್ರೀಕರಣ ಪ್ರಾರಂಭವಾದ ಸಮಯದಲ್ಲಿಯೇ ಕೋವಿಡ್ ಲಾಕ್‌ಡೌನ್ ಘೋಷಣೆಯಾಯಿತು ಎಂಬುದನ್ನು ನೆನಪು ಮಾಡಿಕೊಂಡಿರುವ ರಾಮ್ ಚರಣ್, ಆ ಸಮಯದಲ್ಲಿ ಶೂಟಿಂಗ್ ಸಂಪೂರ್ಣವಾಗಿ ನಿಂತುಹೋಗಿತ್ತು ಮತ್ತು ಸಿನಿಮಾ ಯಾವಾಗ ಮುಗಿಯುತ್ತದೆ ಎಂಬ ಗೊಂದಲವಿತ್ತು. ಅಂತಹ ಪರಿಸ್ಥಿತಿಯಲ್ಲಿ ಮನೆಯಲ್ಲೇ ಖಾಲಿ ಕುಳಿತುಕೊಳ್ಳುವುದು ತಮಗೆ ತೀವ್ರ ಮಾನಸಿಕ ಆತಂಕ ಮತ್ತು ಒತ್ತಡವನ್ನು ಉಂಟುಮಾಡಿತ್ತು ಎಂದು ಚರಣ್ ತಿಳಿಸಿದ್ದಾರೆ.

ಇದನ್ನೂ ಓದಿ:ದಂಗಲ್, ಸುಲ್ತಾನ್ ರೀತಿ ಇದೆಯಾ ‘ಪೆದ್ದಿ’ ಕಥೆ? ಆಮಿರ್, ಸಲ್ಲುಗೆ ರಾಮ್ ಚರಣ್ ಧನ್ಯವಾದ

‘ಲಾಕ್‌ಡೌನ್ ಸಮಯದಲ್ಲಿ ಭವಿಷ್ಯದ ಬಗ್ಗೆ ಅನಿಶ್ಚಿತತೆ ಇತ್ತು. ಸಿನಿಮಾ ರಂಗದ ಪರಿಸ್ಥಿತಿ ಏನಾಗಬಹುದು ಎಂಬ ಆತಂಕ ನನ್ನನ್ನು ಕಾಡುತ್ತಿತ್ತು. ಆ ಸಮಯದಲ್ಲಿ ನಾನು ತೀವ್ರ ಮಾನಸಿಕ ಸಂಘರ್ಷಕ್ಕೆ ಒಳಗಾಗಿದ್ದೆ. ಆಗ ನಾನು ನಿರ್ದೇಶಕ ರಾಜಮೌಳಿ ಅವರಿಗೆ ಕರೆ ಮಾಡಿ ನನ್ನ ಪರಿಸ್ಥಿತಿಯನ್ನು ವಿವರಿಸಿದೆ. ಆಗ ರಾಜಮೌಳಿ ಅವರು ನನಗೆ ಒಂದು ಅದ್ಭುತವಾದ ಸಲಹೆ ನೀಡಿದರು’ ಎಂದು ರಾಮ್ ಚರಣ್ ಹೇಳಿದ್ದಾರೆ.

ರಾಜಮೌಳಿ ಅವರ ಸಲಹೆಯನ್ನು ನೆನಪಿಸಿಕೊಂಡಿರುವ ರಾಮ್ ಚರಣ್, ‘ರಾಜಮೌಳಿ ಅವರು ನನಗೆ ಫೋನ್‌ನಲ್ಲಿ ಧೈರ್ಯ ತುಂಬಿದರು. ‘ಪರಿಸ್ಥಿತಿ ನಮ್ಮ ಕೈಯಲ್ಲಿಲ್ಲದಿದ್ದಾಗ ಅದರ ಬಗ್ಗೆ ಯೋಚಿಸಿ ಸಮಯ ವ್ಯರ್ಥ ಮಾಡಬೇಡ. ಈ ಸಮಯವನ್ನು ನಿನ್ನ ದೇಹ ಮತ್ತು ಮನಸ್ಸನ್ನು ಹುರಿದುಂಬಿಸಲು ಬಳಸಿಕೊ. ನಿನಗೆ ಇಷ್ಟವಾದ ಕೆಲಸಗಳನ್ನು ಮಾಡು, ಪುಸ್ತಕಗಳನ್ನು ಓದು ಮತ್ತು ಮುಂದಿನ ದೊಡ್ಡ ಹೋರಾಟಕ್ಕೆ ಸಿದ್ಧನಾಗು’ ಎಂದು ಹೇಳಿದರು. ಅವರ ಆ ಮಾತುಗಳು ನನ್ನಲ್ಲಿ ಹೊಸ ಭರವಸೆ ಮೂಡಿಸಿದವು ಮತ್ತು ಆ ಮಾನಸಿಕ ಒತ್ತಡದಿಂದ ಹೊರಬರಲು ಸಹಾಯ ಮಾಡಿದವು’ ಎಂದು ತಿಳಿಸಿದ್ದಾರೆ.

ಲಾಕ್​​ಡೌನ್ ಬಳಿಕ ‘ಆರ್​​ಆರ್​​ಆರ್’ ಸಿನಿಮಾ ಮತ್ತೆ ಶುರುವಾಯ್ತು ಆ ನಂತರದ್ದು ಇತಿಹಾಸ. ರಾಮ್ ಚರಣ್ ಅನ್ನು ಟಾಲಿವುಡ್ ಸ್ಟಾರ್ ನಟನಿಂದ ಪ್ಯಾನ್ ಇಂಡಿಯಾ ಸ್ಟಾರ್ ನಟನನ್ನಾಗಿ ಮಾಡಿತು ಆ ಸಿನಿಮಾ. ರಾಮ್ ಚರಣ್ ಇದೀಗ ‘ಪೆದ್ದಿ’ ಸಿನಿಮಾನಲ್ಲಿ ನಟಿಸಿದ್ದು, ಜೂನ್ 4 ರಂದು ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ಶಿವರಾಜ್ ಕುಮಾರ್ ಸಹ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link