Headlines

nagaraj11081993

‘ಬ್ಯಾಟಲ್ ಆಫ್ ಗಲ್ವಾನ್’ ಶೀರ್ಷಿಕೆ ಬದಲು: ಸಲ್ಮಾನ್ ಖಾನ್ ಚಿತ್ರಕ್ಕೆ ಈಗ ‘ಮಾತೃಭೂಮಿ’ ಟೈಟಲ್

ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ‘ಬ್ಯಾಟಲ್ ಆಫ್ ಗಲ್ವಾನ್’ (Battle of Galwan) ಸಿನಿಮಾದ ಬಿಡುಗಡೆಯನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಆದರೆ ಈಗ ಯಾವುದೇ ಸೂಚನೆ ನೀಡದೇ ಚಿತ್ರತಂಡದವರು ಶೀರ್ಷಿಕೆ ಬದಲಾವಣೆ ಮಾಡಿದ್ದಾರೆ. ‘ಬ್ಯಾಟಲ್ ಆಫ್ ಗಲ್ವಾನ್’ ಬದಲಿಗೆ ‘ಮಾತೃಭೂಮಿ’ (Maatrubhoomi) ಎಂದು ನಾಮಕರಣ ಮಾಡಲಾಗಿದೆ. ಮಾರ್ಚ್ 16ರಂದು ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಹೊಸ ಪೋಸ್ಟರ್ ಹಂಚಿಕೊಂಡಿರುವ ಸಲ್ಮಾನ್ ಖಾನ್ (Salman Khan), ‘ಯುದ್ಧಕ್ಕೆ ಶಾಂತಿ ಸಿಗಲಿ’ ಎಂಬ ಕ್ಯಾಪ್ಶನ್ ನೀಡುವ ಮೂಲಕ ಅಭಿಮಾನಿಗಳಲ್ಲಿ ಕುತೂಹಲ…

Read More

ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​: ರೆಡಿಮೇಡ್ ಉಡುಪುಗಳ ಬೆಲೆ ಏರಿಕೆ ಸಾಧ್ಯತೆ

ಬೆಂಗಳೂರು, ಮಾರ್ಚ್​​ 16: ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಇದೀಗ ಬೆಂಗಳೂರಿನ ಚಿಕ್ಕಪೇಟೆಯ ಜವಳಿ ಉದ್ಯಮದಕ್ಕೂ ತಟ್ಟಿದೆ. ಕಡಿಮೆ ಬೆಲೆಗೆ ಮತ್ತು ವಿವಿಧ ಬಗೆಯ ಬಟ್ಟೆಗಳಿಗೆ ಹೆಸರುವಾಸಿಯಾದ ಚಿಕ್ಕಪೇಟೆಯ ರೆಡಿಮೇಡ್ ಉಡುಪುಗಳ ಬೆಲೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದ್ದು, ಟ್ರೇಡ್ ಆಕ್ಟಿವಿಸ್ಟ್ ಸಜ್ಜನ್‌ರಾಜ್ ಮೆಹ್ತಾ ಅವರ ಪ್ರಕಾರ ಯುದ್ಧ ಮುಂದುವರಿದರೆ ಏಪ್ರಿಲ್‌ನಿಂದ ಬಟ್ಟೆಗಳ ಬೆಲೆ ಶೇ. 10-15 ಹೆಚ್ಚಳವಾಗುವ ಸಾಧ್ಯತೆ ಇದೆ. ಉತ್ಪಾದನಾ ಹಂತದಲ್ಲಿ ಈಗಾಗಲೇ ಶೆ. 30-40ರಷ್ಟು ಬೆಲೆ ಏರಿಕೆಯಾಗಿದ್ದು, ಕಚ್ಚಾ ವಸ್ತುಗಳು, ರಾಸಾಯನಿಕಗಳು ಮತ್ತು…

Read More

‘ಬಾಸ್’ ಸಿನಿಮಾಗೆ ಸಂಕಷ್ಟ; ನೋಟಿಸ್ ಕೊಟ್ಟ ದರ್ಶನ್ ಲಾಯರ್

ನಟ ದರ್ಶನ್ ಅವರು (Darshan) ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರು ಈ ಪ್ರಕರಣದಲ್ಲಿ ಎ2 ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣದ ವಿವರ ಎಲ್ಲರಿಗೂ ತಿಳಿದಿದೆ. ಚಾರ್ಜ್​​ಶೀಟ್​​​ನಲ್ಲಿ ಎಲ್ಲ ವಿಷಯವನ್ನೂ ವಿವರವಾಗಿ ಬರೆಯಲಾಗಿದೆ. ಹೀಗಿರುವಾಗಲೇ ‘ಬಾಸ್’ ಹೆಸರಿನ ಸಿನಿಮಾ ಸೆಟ್ಟೇರಿ, ರಿಲೀಸ್​​​ಗೆ ರೆಡಿ ಆಗಿದೆ. ಈ ಸಿನಿಮಾ ಟೀಸರ್ ನೋಡಿದರೆ ಇದು ದರ್ಶನ್ ಪ್ರಕರಣವನ್ನೇ ನೆನಪಿಸಿದೆ. ಇದು ಚರ್ಚೆಗೆ ಕಾರಣ ಆಗಿತ್ತು. ಹೀಗಿರುವಾಗಲೇ ದರ್ಶನ್ ಪರ ವಕೀಲರು ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಿದ್ದು, ಸಿನಿಮಾಗೆ…

Read More

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ರಾಜ್ಯದಿಂದ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದು

ಬೆಂಗಳೂರು, ಮಾರ್ಚ್​​ 16: ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ ಹಿನ್ನೆಲೆ ಭಾರತದಿಂದ ದುಬೈಗೆ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದುಗೊಂಡಿದೆ. ಏರ್‌ ಇಂಡಿಯಾ, ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಭವಿಷ್ಯದ ಬೇರೆ ದಿನಾಂಕಕ್ಕೆ ತಮ್ಮ ಪ್ರಯಾಣವನ್ನು ಮರುನಿಗದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಪ್ರಯಾಣ ಬೇಡವೆನ್ನುವವರು ಟಿಕೆಟ್ ರದ್ದುಗೊಳಿಸಿ ಪೂರ್ಣ ಹಣವನ್ನು ಮರಳಿ ಪಡೆಯಬಹುದಾಗಿದೆ. ಇನ್ನು ವಿಮಾನ ರದ್ದಿನಿಂದ‌ ದುಬೈನಲ್ಲಿ ಸಿಲುಕಿರುವ ಪ್ರಯಾಣಿಕರು ಪರದಾಟ ನಡೆಸಿರುವ ಪ್ರಸಂಗವೂ ವರದಿಯಾಗಿದೆ….

Read More

ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ಭಯಾನಕ ವಿಡಿಯೋ ವೈರಲ್

ಆನೇಕಲ್, ಮಾರ್ಚ್ 16: ಬೆಂಗಳೂರು–ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಡೆಡ್ಲಿ ರೋಡ್ ರೇಜ್ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ತಮಿಳುನಾಡು ಗಡಿಯ ಸಮೀಪದ ಜೂಜುವಾಡಿ ಚೆಕ್​ಪೋಸ್ಟ್ ಬಳಿ ಪೊಲೀಸರು ತಡೆದಾಗ ಕಾರು ನಿಲ್ಲಿಸದ ಚಾಲಕ ಎದುರಿದ್ದ ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಹಾರಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ತಮಿಳುನಾಡಿನಲ್ಲಿ ಗುಟ್ಕಾ ನಿಷೇಧ ಇರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಅಕ್ರಮವಾಗಿ ಗುಟ್ಕಾ ಮತ್ತು ಮದ್ಯವನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಅನುಮಾನಕ್ಕೆ ಪೊಲೀಸರು ಕಾರನ್ನು ತಡೆದು ಪರಿಶೀಲಿಸಲು ಮುಂದಾದರು. ಈ ವೇಳೆ ಕಾರು ಚಾಲಕ…

Read More

ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!

ಬೆಂಗಳೂರು, ಮಾರ್ಚ್​ 16: ಕ್ಯೂ ನೆಟ್ (Qnet) ಹಾಗೂ ವಿಹಾನ್ ದೈರೆಕ್ಟ್ ಸೆಲ್ಲಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (Vihaan Direct Selling India Private Limited) ವಿರುದ್ಧವಾಗಿ ಯಾವುದೇ ರೀತಿಯ ಸುಳ್ಳು ಮಾಹಿತಿ ಸುದ್ದಿಗಳನ್ನು ಸಾರ್ವಜನಿಕ ವಲಯ ಹಾಗೂ ಮಾಧ್ಯಮದಲ್ಲಿ ಬಿತ್ತರಿಸಬಾರದು ಎಂದು ಬೆಂಗಳೂರಿನ ಮಾನ್ಯ ಸಿವಿಲ್ ನ್ಯಾಯಾಲಯವು ಹಣಕಾಸು ವಂಚನೆ ಸಂತ್ರಸ್ತರ ಕಲ್ಯಾಣ ಸಂಘದ (Financial Fraud Victims Welfare Association) ವಿರುದ್ಧ ತಾತ್ಕಾಲಿಕ ತಡೆಯಾಜ್ಞೆ ಆದೇಶ ನೀಡಿದೆ. ವಿಹಾನ್ ಹಾಗೂ ಕ್ಯೂ ನೆಟ್ ಮೇಲೆ…

Read More

ಬೆಂಗಳೂರಿನಲ್ಲಿ ಮಂತ್ರಿ ಡೆವಲಪರ್ಸ್​ ಮೇಲೆ ಇಡಿ ದಾಳಿ! ಅಕ್ರಮ ಹಣ ವರ್ಗಾವಣೆ ಆರೋಪ

ಬೆಂಗಳೂರು, ಮಾರ್ಚ್​ 16: ಬೆಂಗಳೂರು ನಗರದ ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆಯಾದ ಮಂತ್ರಿ ಡೆವೆಲಪರ್ಸ್​ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ (ED Raid) ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆ ED ಅಧಿಕಾರಿಗಳು ಸಂಸ್ಥೆಯ ಕಚೇರಿ ಹಾಗೂ ಸಂಸ್ಥಾಪಕ ಸುನಿಲ್ ಮಂತ್ರಿ ನಿವಾಸಗಳಲ್ಲಿ ಶೋಧ ನಡೆಸಿದ್ದಾರೆ. ದೆಹಲಿಯಿಂದ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ 1999ರಲ್ಲಿ ಸ್ಥಾಪನೆಯಾದ ಮಂತ್ರಿ ಡೆವಲಪರ್ಸ್ ಸಂಸ್ಥೆ ಬೆಂಗಳೂರು ಕೇಂದ್ರ ಕಚೇರಿಯೊಂದಿಗೆ ಚೆನ್ನೈ, ಹೈದರಾಬಾದ್ ಮತ್ತು…

Read More

ಸಾರ್ವಕಾಲಿಕ RCB ಇಲೆವೆನ್ ಹೆಸರಿಸಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಕಳೆದ 18 ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಣಕ್ಕಿಳಿದಿದ್ದಾರೆ. ಈ ಹದಿನೆಂಟು ವರ್ಷಗಳಲ್ಲಿ ಅನೇಕ ಆಟಗಾರರು ಬಂದು ಹೋಗಿದ್ದಾರೆ. ಇವರಲ್ಲಿ ಕೆಲವರು ಆರ್​ಸಿಬಿ ತಂಡದ ಆಲ್​ ಟೈಮ್ ಫೇವರೇಟ್ ಆಗಿ ಗುರುತಿಸಿಕೊಂಡರೆ, ಇನ್ನು ಕೆಲವರು ಮಿಂಚಿ ಮರೆಯಾಗಿದ್ದಾರೆ. ಹೀಗೆ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡ ಅತ್ಯುತ್ತಮ ಆಟಗಾರರನ್ನು ಒಳಗೊಂಡಿರುವ ಸಾರ್ವಕಾಲಿಕ ಇಲೆವೆನ್ ಹೆಸರಿಸಿದ್ದಾರೆ ವಿರಾಟ್ ಕೊಹ್ಲಿ. ಈ ಹನ್ನೊಂದು ಆಟಗಾರರಲ್ಲಿ ಇಬ್ಬರು ಕನ್ನಡಿಗರು ಕೂಡ ಕಾಣಿಸಿಕೊಂಡಿರುವುದು ವಿಶೇಷ. ವಿರಾಟ್ ಕೊಹ್ಲಿ ತಮ್ಮ ಸಾರ್ವಕಾಲಿಕ ಇಲೆವೆನ್​ನಲ್ಲಿ…

Read More

ಸ್ಪೀಕರ್ ಸಿಟ್ಟಿಗೆ​​ ಮೂವರು ಅಧಿಕಾರಿಗಳ ತಲೆದಂಡ: ಖಾದರ್​​ ಮನವೊಲಿಕೆ ಬಳಿಕ ಸದನ ಪುನಾರಂಭ

ಬೆಂಗಳೂರು, ಮಾರ್ಚ್​​ 16: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆಗಿ ಸದನ ಮುಂದೂಡಿದ್ದಲ್ಲದೆ ಪೀಠದಿಂದಲೇ ಎದ್ದು ಹೊರ ನಡೆದ ಯು.ಟಿ. ಖಾದರ್​​ ಅವರನ್ನು ಸಿಎಂ ಸಿದ್ದರಾಮಯ್ಯ ಅಂತಿಮವಾಗಿ ಮನವೊಲಿಸಿದ್ದಾರೆ. ಸ್ಪೀಕರ್ ಸಿಟ್ಟಿಗೆ ಕಂದಾಯ, ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯುಡಿ ಇಲಾಖೆಗಳ ಒಟ್ಟು ಮೂವರು ಅಧಿಕಾರಿಗಳ ತಲೆದಂಡವಾಗಿದೆ.  ಜೊತೆಗೆ ಸಮರ್ಪಕ ಉತ್ತರ ಕೊಡದ 3-4 ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಉತ್ತರ ಒದಗಿಸದ…

Read More

ನೈಸ್ ರಸ್ತೆಯಲ್ಲಿ ದಿನಕ್ಕೆ 10 ಕೋಟಿ ರೂ. ಟೋಲ್ ಸಂಗ್ರಹಿಸಿ ಮಜಾ ಮಾಡ್ತಾರೆ, ಸೌಕರ್ಯ ಕೊಡಲ್ಲ: ಶಾಸಕ ಸೋಮಶೇಖರ್ ಆಕ್ರೋಶ

ಬೆಂಗಳೂರು, ಮಾರ್ಚ್​ 16: ನೈಸ್ ರಸ್ತೆಯ (NICE Road) ನಿರ್ವಹಣೆ ಹಾಗೂ ಅದಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಬಜೆಟ್ ಅಧಿವೇಶನದಲ್ಲಿ ಶಾಸಕ ಎಸ್​ಟಿ ಸೋಮಶೇಖರ್ (ST Somashekhar) ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಹೊಸೂರು ರಸ್ತೆಯಿಂದ ಮಾಗಡಿ ರಸ್ತೆ ವರೆಗೆ ನೈಸ್ ರಸ್ತೆಯನ್ನು ಸರ್ಕಾರ ತಕ್ಷಣವೇ ವಶಕ್ಕೆ ಪಡೆಯಬೇಕು ಎಂದು ಅವರು ಸದನದಲ್ಲಿ ಆಗ್ರಹಿಸಿದರು. ಈ ಹಿಂದೆ ಇದೇ ವಿಷಯದ ಕುರಿತು ಪ್ರಶ್ನೆ ಎತ್ತಿದಾಗ ತನಿಖೆಗೆ ಆದೇಶ ನೀಡಲಾಗಿದ್ದರೂ, ನೈಸ್ ರಸ್ತೆಯ ಸೇತುವೆಗಳ ಸ್ಥಿತಿಗೆ ಸಂಬಂಧಿಸಿದಂತೆ…

Read More