Headlines

nagaraj11081993

ಮಾರ್ಗ ಮಧ್ಯದಲ್ಲೇ ಶತ್ರುಗಳ ಕಣ್ತಪ್ಪಿಸುವ ಡ್ಯಾನ್ಸಿಂಗ್ ಮಿಸೈಲ್! ಇಸ್ರೇಲ್ ವಿರುದ್ಧ ಇರಾನ್ ಬಳಸಿದ ಸೆಜ್ಜಿಲ್ ಅಸಲಿಯತ್ತು ಇಲ್ಲಿದೆ

ನವದೆಹಲಿ, ಮಾರ್ಚ್ 16: ಯುದ್ಧದ ತೀವ್ರತೆ ಹೆಚ್ಚುತ್ತಿರುವ ಬೆನ್ನಲ್ಲೇ ಇರಾನ್ (Iran) ಅತ್ಯಾಧುನಿಕ, ದೇಶೀಯ ನಿರ್ಮಿತ ‘ಡ್ಯಾನ್ಸಿಂಗ್ ಮಿಸೈಲ್ (Dancing Missile)’ ಸೆಜ್ಜಿಲ್ (Sejjil) ಮೂಲಕ ಇಸ್ರೇಲ್ ವಿರುದ್ಧ ದಾಳಿ ನಡೆಸಿದೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಇದರೊಂದಿಗೆ, ಇರಾನ್ ಮೊತ್ತಮೊದಲ ಬಾರಿಗೆ ಇಸ್ರೇಲ್ ವಿರುದ್ಧ ಡ್ಯಾನ್ಸಿಂಗ್ ಮಿಸೈಲ್ ಪ್ರಯೋಗ ಮಾಡಿದಂತಾಗಿದೆ. ಇಸ್ರೇಲ್​ನ ಪ್ರಮುಖ ಪ್ರದೇಶಗಳನ್ನು ಗುರಿಯಾಗಿಸಿ ಇರಾನ್, ಸೆಜ್ಜಿಲ್ ಮೂಲಕ ದಾಳಿ ನಡೆಸಿದೆ. ಸದ್ಯ ‘ಡ್ಯಾನ್ಸಿಂಗ್ ಮಿಸೈಲ್’ ಎಂಬ ಹೆಸರು ಜಗತ್ತಿನ ಗಮನ ಸೆಳೆದಿದೆ….

Read More

ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ

ಯಾವುದೇ ಸೆಲೆಬ್ರಿಟಿ ಹೊರಗೆ ಕಾಣಿಸಿಕೊಂಡರೆ ಸಾಕು, ಅವರನ್ನು ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಹೀಗಾಗದಂತೆ ತಡೆಯಲು ಭದ್ರತಾ ಸಿಬ್ಬಂದಿ ಎಷ್ಟೇ ಪ್ರಯತ್ನಿಸಿದರೂ ಅದು ಸಾಧ್ಯವಾಗೋದಿಲ್ಲ. ಈಗ ಕಾಜೋಲ್ ಅವರಿಗೆ ಹಾಗೆಯೇ ಆಗಿದೆ. ಅವರು ಬಾಲಿವುಡ್ ನಟಿ. ಅಜಯ್ ದೇವಗನ್ ಪತ್ನಿ. ಅವರು ಬರುತ್ತಾರೆ ಎಂದರೆ ಸಾಕಷ್ಟು ಭದ್ರತೆ ನೀಡಲಾಗುತ್ತದೆ. ಆದಾಗ್ಯೂ ಅಭಿಮಾನಿಗಳು ಮುತ್ತಿಕೊಂಡರು. ಕೊನೆಗೆ ಅವರು ಕಷ್ಟಪಟ್ಟು ಕಾರನ್ನು ಏರಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

IPL 2026: 10 ತಂಡಗಳು ರೆಡಿ: ಯಾರು ಬಲಿಷ್ಠ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​  ಆರಂಭಕ್ಕೆ ಇನ್ನು ಉಳಿದಿರುವುದು ದಿನಗಳು ಮಾತ್ರ. ಮಾರ್ಚ್ 28 ರಿಂದ ಶುರುವಾಗಲಿರುವ 19ನೇ ಆವೃತ್ತಿಯ ಟೂರ್ನಿಗೆ ಈಗಾಗಲೇ 10 ತಂಡಗಳು ಸಜ್ಜಾಗಿವೆ. ಈ ತಂಡಗಳಲ್ಲಿ ಇರುವ ಆಟಗಾರರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…  ಕೋಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ಅಂಗ್​ಕ್ರಿಶ್ ರಘುವಂಶಿ, ಅನುಕುಲ್ ರಾಯ್, ಮನೀಶ್ ಪಾಂಡೆ, ರಮಣದೀಪ್ ಸಿಂಗ್, ರಿಂಕು ಸಿಂಗ್, ರೋವ್​ಮನ್ ಪೊವೆಲ್, ಸುನಿಲ್ ನರೈನ್, ಉಮ್ರಾನ್ ಮಲಿಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ, ಕ್ಯಾಮೆರೋನ್…

Read More

ಹಾರ್ಮುಜ್ ಜಲಸಂಧಿ ರಕ್ಷಣೆಗೆ ಬರಲು ಭಾರತವೂ ಸೇರಿ ಹಲವು ರಾಷ್ಟ್ರಗಳಿಗೆ ಅಮೆರಿಕ ಮನವಿ

ನವದೆಹಲಿ, ಮಾರ್ಚ್ 16: ಜಗತ್ತಿನ ಪ್ರಮುಖ ತೈಲ ಮಾರ್ಗಗಳಲ್ಲಿ ಒಂದೆನಿಸಿರುವ ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ತೈಲ ಹಡಗುಗಳ ಸಾಗಣೆಗೆ ರಕ್ಷಣೆ ಒದಗಿಸಲು ಅಮೆರಿಕವು ಹಲವು ದೇಶಗಳ ನೆರವು ಯಾಚಿಸುತ್ತಿದೆ. ಇರಾನ್ ಯುದ್ಧದಿಂದಾಗಿ ಈ ಹಾರ್ಮುಜ್ ಸ್ಟ್ರೇಟ್ ಬಹುತೇಕ ಸ್ಥಗಿತಗೊಂಡಿದೆ. ತೈಲ ಹೊತ್ತ ಕೆಲವೇ ಕೆಲವು ಹಡಗುಗಳ ಮಾತ್ರ ಆಗಾಗ್ಗೆ ಹೊರಬರುತ್ತಿವೆ. ಇದರ ಪರಿಣಾಮವಾಗಿ ಜಾಗತಿಕವಾಗಿ ತೈಲ ಬೆಲೆ ಗಗನಕ್ಕೇರುತ್ತಿದೆ. ಇದೇ ವೇಳೆ, ಹಾರ್ಮುಜ್ ಜಲಸಂಧಿಯಲ್ಲಿ ತೈಲ ಹಡಗುಗಳನ್ನು ಸಾಗಿಸಲು ಬಿಡುವುದಿಲ್ಲ ಎಂದು ಇರಾನ್ ಹೇಳಿರುವ…

Read More

ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ ಶುರು

ಬಾಗಲಕೋಟೆ, ಮಾರ್ಚ್​​ 16: ಉಪ ಚುನಾವಣೆಗೆ ದಿನಾಂಕ ಘೋಷಣೆ ಬೆನ್ನಲ್ಲೇ ಬಾಗಲಕೋಟೆ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್​​ ಆಕಾಂಕ್ಷಿಗಳ ನಡುವೆ ಫೈಟ್​​ ಜೋರಾಗಿದೆ. ಹೈಕಮಾಂಡ್​​ ಮಟ್ಟದಲ್ಲಿ ಲಾಭಿ ಶುರುವಾಗಿದ್ದು, ಪ್ರಬಲ ಆಕಾಂಕ್ಷಿ ವೀರಣ್ಣ ಹಳೆಗೌಡರ ಪತ್ರ ಕೂಡ ಬರೆದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್, ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಪ್ರಮುಖರಿಗೆ ಟಿಕೆಟ್​​ಗಾಗಿ ಮನವಿ ಮಾಡಿದ್ದಾರೆ. ನಾನು ಹಿಂದುಳಿದ ವರ್ಗಕ್ಕೆ…

Read More

‘ನಾನು ನಿರ್ಮಿಸಿದ ಎಲ್ಲಾ ಸಿನಿಮಾಗಳು ನಷ್ಟವನ್ನೇ ಮಾಡಿವೆ’; ವಿಜಯ್ ಸೇತುಪತಿ ಬೇಸರ

ಸ್ಟಾರ್ ಹೀರೋ ಆಗಿ ಬೆಳೆದ ಬಳಿಕ ಕೆಲವರಿಗೆ ಸಿನಿಮಾ ನಿರ್ಮಾಣ ಮಾಡುವ ಹುಮ್ಮಸ್ಸು ಬರುತ್ತದೆ. ಹಾಗಂತ ಅದನ್ನು ಮಾಡೋದ್ರಲ್ಲಿ ಸ್ವಾರ್ಥ ಇದೆ ಎಂದರ್ಥವಲ್ಲ. ಹೊಸ ಪ್ರತಿಭೆಗಳಿಗೆ ಅವಕಾಶ ಸಿಗಲಿ ಎಂಬುದು ಇದರ ಮುಖ್ಯ ಉದ್ದೇಶ ಆಗಿರುತ್ತದೆ. ತಮಿಳಿನ ಸ್ಟಾರ್ ನಟ ವಿಜಯ್ ಸೇತುಪತಿ ಕೂಡ ತಮ್ಮದೇ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಹೊಸ ಸಿನಿಮಾಗಳನ್ನು ಅವರು ನಿರ್ಮಿಸುತ್ತಿದ್ದಾರೆ. ಅವರು ಬಂಡವಾಳ ಹಾಕಿದ ಸಿನಿಮಾಗಳೆಲ್ಲ ಬಾಕ್ಸ್ ಆಫೀಸ್​​​ನಲ್ಲಿ ಸೋತಿವೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ಭಾರದ್ವಾಜ್ ರಂಗನ್ ಜೊತೆ ‘ಗಲಾಟಾ…

Read More

ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!

ಕಾರವಾರ, ಮಾರ್ಚ್ 16: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಭಾನುವಾರ ಸಂಜೆ ಅಬ್ಬರದ ಗಾಳಿ ಮಳೆ ಸುರಿದಿದೆ. ಪರಿಣಾಮವಾಗಿ ಬೃಹತ್ ಮರ ಧರೆಗುರುಳಿದೆ. ಮುಂಡಗೋಡ–ಪಾಳ–ಹಾನಗಲ್ ರಸ್ತೆಯಲ್ಲಿ ಮರ ಉರುಳಿಬಿದ್ದಿದೆ. ಆಲಿಕಲ್ಲು ಮಳೆಯೂ ಸಹ ಸುರಿದಿದೆ. ಮರ ಹೆದ್ದಾರಿಯ ಮಧ್ಯೆ ಬಿದ್ದ ಪರಿಣಾಮ ವಾಹನ ಸವಾರರು ಕೆಲಕಾಲ ಪರದಾಡಬೇಕಾಯಿತು. ಇದರ ಮಧ್ಯೆ ದೇಶದ ಹಲವು ಭಾಗಗಳಲ್ಲಿ ಎಲ್‌ಪಿಜಿ ಗ್ಯಾಸ್ ಕೊರತೆ ಉಂಟಾಗಿರುವ ಹಿನ್ನೆಲೆ, ಸ್ಥಳೀಯರು ಮರವನ್ನು ಸೌದೆಗಾಗಿ ಕತ್ತರಿಸಿಕೊಳ್ಳಲು ಮುಗಿಬಿದ್ದರು. ಮಳೆ ಸುರಿಯುತ್ತಿದ್ದರೂ ಸಹ ಹಲವರು ಮರದ…

Read More

Viral: ಬೆಂಗಳೂರಿನಲ್ಲಿ ಎರಡು ತಿಂಗಳ ಇಂಟರ್ನ್‌ಶಿಪ್‌ ಅವಧಿಯಲ್ಲಿ ಆದ ಖರ್ಚು ವೆಚ್ಚ ವಿವರಿಸಿದ ಯುವತಿ

ಬೆಂಗಳೂರು, ಮಾರ್ಚ್ 16: ಬೆಂಗಳೂರು (Bengaluru) ಅಂದ್ರೆ ದುಬಾರಿ. ಇಲ್ಲಿ ಎಷ್ಟು ದುಡಿದ್ರೂ ಮನೆ ಬಾಡಿಗೆ, ದಿನಸಿ ಹಾಗೂ ಉಳಿದ ಖರ್ಚು ವೆಚ್ಚಗಳನ್ನು ತೂಗಿಸಿಕೊಂಡು ಹೋಗೋದ್ರಲ್ಲಿಯೇ ಜೇಬು ಖಾಲಿಯಾಗಿರುತ್ತದೆ. ಇಂತಹದ್ದೇ ಅನುಭವ ಯುವತಿಯೊಬ್ಬಳಿಗೆ ಆಗಿದೆ. ಬೆಂಗಳೂರಿನಲ್ಲಿ ಎರಡು ತಿಂಗಳ ಇಂಟರ್ನ್‌ಶಿಪ್‌ ಅವಧಿಯಲ್ಲಿ ಅಂಶಿಕಾ ಅಗರ್ವಾಲ್ (Anshika Aggarwal) ತನ್ನ ಮಾಸಿಕ ಖರ್ಚು ವೆಚ್ಚಗಳ ಬಗ್ಗೆ ಮಾತನಾಡಿದ್ದಾಳೆ. ಈ ಪೋಸ್ಟ್‌ನಲ್ಲಿ ವಿವರವಾದ ಮಾಹಿತಿ ನೀಡಿದ್ದಾಳೆ. ಅಂಶಿಕಾ ಅಗರ್ವಾಲ್  (@kipupwidanshika) ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಸಿಕ ಖರ್ಚುವೆಚ್ಚಗಳ…

Read More

110 ಅಡಿಗೆ ಇಳಿದ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ; ಕುಡಿಯುವ ನೀರಿಗೆ ಸಮಸ್ಯೆ ಆಗುತ್ತಾ?

ಮಂಡ್ಯ, ಮಾರ್ಚ್​ 16: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ (KRS) ಜಲಾಶಯದ ನೀರಿನ ಮಟ್ಟ ಇದೀಗ 110 ಅಡಿಗೆ ಇಳಿದಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 110.44 ಅಡಿ ನೀರು ಇದ್ದು, ಸುಮಾರು 32.167 ಟಿಎಂಸಿ ನೀರು ಸಂಗ್ರಹವಾಗಿದೆ. ಹೀಗಾಗಿ ಈ ಬಾರಿ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತಾ ಎಂಬ ಆತಂಕ ಶುರುವಾಗಿದೆ. ಬೆಂಗಳೂರಿಗೆ ಕುಡಿಯುವ ನೀರಿಗೆ ಸಮಸ್ಯೆ ಇಲ್ಲಾ ಸಾಮಾನ್ಯವಾಗಿ ಜೂನ್–ಜುಲೈ ತಿಂಗಳಲ್ಲಿ ತುಂಬುವ ಕೆಆರ್‌ಎಸ್ ಜಲಾಶಯ ಈ ಬಾರಿ ಉತ್ತಮ…

Read More

ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಮುಖಕ್ಕೆ ಗಾಯ; ಆಗಿದ್ದು ಹೇಗೆ?

ತೆಲುಗು ಬಿಗ್ ಬಾಸ್ ಖ್ಯಾತಿಯ ಪ್ರಸಿದ್ಧ ನಟಿ ಅಶ್ವಿನಿ ತಮ್ಮ ವೃತ್ತಿಜೀವನದ ಆರಂಭದಲ್ಲಿ ಹಲವು ಸಿನಿಮಾಗಳನ್ನು ಮಾಡಿದ್ದರು. ಬಿಗ್ ಬಾಸ್‌ನ ಏಳನೇ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಬಿಗ್ ಬಾಸ್ ಮನೆಯಿಂದ ಹೊರಬಂದ ಅಶ್ವಿನಿ ಈಗ ಚಲನಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ನಿರತರಾಗಿದ್ದಾರೆ. ಅವರು ಸಾಮಾಜಿಕ ಮಾಧ್ಯಮದಲ್ಲಿಯೂ ಸಂಪೂರ್ಣವಾಗಿ ಸಕ್ರಿಯರಾಗಿದ್ದಾರೆ. ಈಗ ಅವರಿಗೆ ಗಾಯ ಆಗಿದೆ. ಅಶ್ವಿನಿ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಗ್ಲಾಮರಸ್ ಫೋಟೋ ಹಂಚಿಕೊಳ್ಳುತ್ತಾರೆ. ಇತ್ತೀಚೆಗೆ, ಅಶ್ವಿನಿ ಶ್ರೀ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ…

Read More