Headlines

nagaraj11081993

Oscars 2026: ಈ ಬಾರಿ ಆಸ್ಕರ್ ಅವಾರ್ಡ್​ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ

98ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಅಮೆರಿಕದ ಲಾಸ್ ಎಂಜಲೀಸ್​​​ನಲ್ಲಿರುವ ಹಾಲಿವುಡ್ ಸ್ಟುಡಿಯೋದ ಡಾಲ್ಬಿ ಥಿಯೇಟರ್​​​ನಲ್ಲಿ ನಡೆದಿದೆ. ಹಾಲಿವುಡ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಇದು ಹಾಲಿವುಡ್ ಚಿತ್ರರಂಗದ ಪಾಲಿಗೆ ವಿಶೇಷ ಎನಿಸಿಕೊಂಡಿದೆ. ಭಾರತದ ಪ್ರಿಯಾಂಕಾ ಚೋಪ್ರಾ ಸೇರಿದಂತೆ ಅನೇಕರು ಇಲ್ಲಿ ಭಾಗಿ ಆಗಿದ್ದರು. ಈ ವೇಳೆ ವಿವಿಧ ಸಿನಿಮಾಗಳಿಗೆ ಅವಾರ್ಡ್ ನೀಡಲಾಯಿತು. ‘ಸಿನ್ನರ್ಸ್’ ಸಿನಿಮಾ ಬರೋಬ್ಬರಿ 16 ವಿಭಾಗಗಳಲ್ಲಿ ನಾಮಿನೇಟ್ ಆಗಿತ್ತು. ಆಸ್ಕರ್ ಅವಾರ್ಡ್ ಇತಿಹಾಸದಲ್ಲಿ ಚಿತ್ರವೊಂದು ಇಷ್ಟು ನಾಮಿನೇಟ್…

Read More

ಇಂದು 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಸ್ಥಾನಗಳಿಗೆ ಅವಿರೋಧ ಆಯ್ಕೆ; ಮತ್ತಷ್ಟು ಭದ್ರವಾಗಲಿದೆ ಬಿಜೆಪಿ ಸ್ಥಾನ

ನವದೆಹಲಿ, ಮಾರ್ಚ್ 16: ಇಂದು ಸೋಮವಾರ 10 ರಾಜ್ಯಗಳಲ್ಲಿನ 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ (Rajya Sabha polls) ನಡೆಯುತ್ತಿದೆ. ಈ ಪೈಕಿ ಏಳು ರಾಜ್ಯಗಳ 26 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಲಿದ್ದಾರೆ. ಉಳಿದ 11 ಅಭ್ಯರ್ಥಿಗಳ ಆಯ್ಕೆಯು ಮತದಾನದ ಮೂಲಕ ನಿರ್ಧಾರ ಆಗಲಿದೆ. ಬೆಳಗ್ಗೆ 9ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಆಗಲಿದ್ದು, ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. ಚುನಾವಣೆ ಎದುರಿಸುತ್ತಿರುವ 37 ರಾಜ್ಯಸಭಾ ಸ್ಥಾನಗಳು ಮಹಾರಾಷ್ಟ್ರ: 7 ತಮಿಳುನಾಡು: 6 ಪಶ್ಚಿಮ…

Read More

ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ

ಆನೇಕಲ್, ಮಾರ್ಚ್ 16: ಬೆಂಗಳೂರಿನ ಸಮೀಪದ ಬನ್ನೇರುಘಟ್ಟ ಮೃಗಾಲಯದಲ್ಲಿ (Bannerghatta Biological Park) ಹೊಸ ಅತಿಥಿಗಳ ಆಗಮನದಿಂದ ಸಂತಸದ ವಾತಾವರಣ ನಿರ್ಮಾಣವಾಗಿದೆ. ಉದ್ಯಾನವನದಲ್ಲಿರುವ ಎರಡು ಜೀಬ್ರಾಗಳು ಮರಿಗಳಿಗೆ ಜನ್ಮ ನೀಡಿದ್ದು, ಪ್ರಾಣಿ ಪ್ರಿಯರಲ್ಲಿ ಸಂತೋಷ ಮೂಡಿಸಿದೆ. ಉದ್ಯಾನವನದಲ್ಲಿರುವ ಕೋಕಿಲ ಎಂಬ ಜೀಬ್ರಾ ಹೆಣ್ಣು ಮರಿಗೆ ಜನ್ಮ ನೀಡಿದ್ದು, ಕಾವೇರಿ ಎಂಬ ಮತ್ತೊಂದು ಜೀಬ್ರಾ ಕೂಡ ಹೆಣ್ಣು ಮರಿಗೆ ಜನ್ಮ ನೀಡಿದೆ. ಈ ಮೂಲಕ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿನ ಜೀಬ್ರಾಗಳ ಸಂಖ್ಯೆ ಇದೀಗ 9ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಉದ್ಯಾನವನದಲ್ಲಿರುವ…

Read More

IPL 2026: ಈ ಬಾರಿಯ ಐಪಿಎಲ್​ನಲ್ಲಿ RCBಗೆ ‘ಗೋಲ್ಡನ್’ ಗೌರವ!

IPL 2026: ಐಪಿಎಲ್‌ನ ಹಾಲಿ ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಈ ಬಾರಿ ತನ್ನ ಜೆರ್ಸಿಯ ಮೇಲೆ ಚಿನ್ನದ ಬಣ್ಣದ ಐಪಿಎಲ್ ಲೋಗೋ (Golden IPL Logo) ಧರಿಸಲಿದೆ. ಇನ್ನುಳಿದ 9 ತಂಡಗಳು ಸಾಧಾರಣ ಐಪಿಎಲ್ ಲೋಗೋನಲ್ಲಿ ಕಾಣಿಸಿಕೊಳ್ಳಲಿದೆ. ಐಪಿಎಲ್​ನಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ತಂಡವನ್ನು ಗೌರವಿಸಲು ಈ ವಿಶೇಷ ಸಂಪ್ರದಾಯವನ್ನು ಅನುಸರಿಸಲಾಗುತ್ತಿದೆ. ಅದರಂತೆ ಕಳೆದ ಬಾರಿಯ ಚಾಂಪಿಯನ್ ಆರ್​ಸಿಬಿ ತಂಡವು ಈ ಬಾರಿ ಗೋಲ್ಡನ್ ಐಪಿಎಲ್ ಲೋಗೋದೊಂದಿಗೆ ಕಣಕ್ಕಿಳಿಯಲಿದೆ. ಹಾಗೆಯೇ ಈ ಬಾರಿಯ…

Read More

ಬೆಂಗಳೂರು: ಪಿಂಕ್ ಲೈನ್ ಮೆಟ್ರೋಗೆ ಬಂತು ನಾಲ್ಕನೇ ರೈಲು, ಮೇನಲ್ಲಿ ಸಂಚಾರ ನಿರೀಕ್ಷೆ

ಬೆಂಗಳೂರು, ಮಾರ್ಚ್ 16: ನಮ್ಮ ಮೆಟ್ರೋ (Namma Metro) ವಿಸ್ತರಣೆಗೆ ಮತ್ತೊಂದು ಹೆಜ್ಜೆ ಇಟ್ಟಿರುವ ಬಿಎಂಆರ್​ಸಿಎಲ್ (BMRCL) ಮೇ ತಿಂಗಳಲ್ಲಿ ಪಿಂಕ್ ಲೈನ್‌ನಲ್ಲಿ ಕಾರ್ಯಾಚರಣೆ ಶುರು ಮಾಡಲು ಸಿದ್ಧತೆ ಶುರುಮಾಡಿದೆ. ಪಿಂಕ್ ಲೈನ್‌ ಮೆಟ್ರೋಗಾಗಿ ನಾಲ್ಕನೇ ರೈಲು ಭಾನುವಾರ ಬಂದಿಳಿದಿದೆ. ಆರು ಕೋಚ್‌ಗಳಿರುವ ಈ ಹೊಸ ರೈಲು ಸೆಟ್‌ ಅನ್ನು ಮಾರ್ಚ್‌ 13ರಂದು ಬಿಇಎಂಎಲ್ ಸಂಸ್ಥೆಯ ನ್ಯೂ ತಿಪ್ಪಸಂದ್ರ ಘಟಕದಿಂದ ಬನ್ನೇರುಘಟ್ಟ ರಸ್ತೆಯಲ್ಲಿರುವ ಕೊತ್ತನೂರು ಡಿಪೋಗೆ ತರಲಾಗಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. ಈ ರೈಲನ್ನು ಪ್ರಸ್ತುತ…

Read More

ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ

ಡಾಲಿ ಧನಂಜಯ್ ಅವರು ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ನಟನೆಯ ಜೊತೆಗೆ ಸಿನಿಮಾ ನಿರ್ಮಾಣ ಕೆಲಸಗಳಲ್ಲೂ ಅವರು ತೊಡಗಿಕೊಂಡಿದ್ದು, ಹೊಸ ಮುಖಗಳಿಗೆ ಮಣೆ ಹಾಕುತ್ತಿದ್ದಾರೆ. ಈಗ ಅವರ ಕಡೆಯಿಂದ ಹೊಸ ಸುದ್ದಿ ಒಂದು ಸಿಗುವ ಸೂಚನೆ ಸಿಕ್ಕಿದೆ. ಜೀ5 ಅಲ್ಲಿ ಕನ್ನಡದ ಹೊಸ ಸರಣಿ ಬರುತ್ತಿದ್ದು, ಇದಕ್ಕೆ ಡಾಲಿ ನಿರ್ಮಾಣ ಇದೆ ಎನ್ನಲಾಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Bengaluru Air Quality: ಬೆಳಗಾವಿ, ಹುಬ್ಬಳ್ಳಿ ಸೇರಿ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ!

ಬೆಂಗಳೂರು, ಮಾರ್ಚ್​ 16: ಹಲವಾರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿತ್ತು. ಆದರೆ ಇಂದು ಹಲವು ಭಾಗಗಳಲ್ಲಿ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದಂತಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ…

Read More

ಒಡಿಶಾದ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ

ಕಟಕ್, ಮಾರ್ಚ್ 16: ಒಡಿಶಾದ ಕಟಕ್ ನಗರದಲ್ಲಿರುವ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡವೊಂದು ಸಂಭವಿಸಿದ್ದು, 10 ರೋಗಿಗಳು ಬಲಿಯಾಗಿದ್ದಾರೆ. 11ಕ್ಕೂ ಹೆಚ್ಚು ಆಸ್ಪತ್ರೆ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ (SCB Medical College & Hospital) ಈ ದುರಂತ ಸಂಭವಿಸಿರುವುದು ವರದಿಯಾಗಿದೆ. ಮಧ್ಯರಾತ್ರಿಯ ನಂತರ 2:30ರಿಂದ 3 ಗಂಟೆಯ ಸಮಯದಲ್ಲಿ ಈ ಅಗ್ನಿ ಅಪಘಾತವಾಗಿರುವುದು (Fire Accident) ತಿಳಿದುಬಂದಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿರಬಹುದು ಎಂದು ಸದ್ಯ ಶಂಕಿಸಲಾಗಿದೆ. ಆಸ್ಪತ್ರೆಯ ಟ್ರಾಮಾ ಕೇರ್…

Read More

550 ಕೋಟಿ ರೂಪಾಯಿ ಒಡತಿ ಆಲಿಯಾ ಭಟ್; ಗಳಿಕೆ ಹೇಗೆ?

ಬಾಲಿವುಡ್‌ನ ಪ್ರಸಿದ್ಧ ನಿರ್ದೇಶಕ ಕರಣ್ ಜೋಹರ್ ಪರಿಚಯಿಸಿದ ಆಲಿಯಾ ಭಟ್ ಇಂದು ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಕರಣ್ ಜೋಹರ್ ನಿರ್ದೇಶನದ ‘ಸ್ಟೂಡೆಂಟ್ ಆಫ್ ದಿ ಇಯರ್’ ಚಿತ್ರದ ಮೂಲಕ ಆಲಿಯಾ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು, ನಂತರ ಆಲಿಯಾ ಹಿಂತಿರುಗಿ ನೋಡಿಲ್ಲ. ಇಂದು ಆಲಿಯಾ ಬಾಲಿವುಡ್‌ನ ಪ್ರಸಿದ್ಧ ಮತ್ತು ಜನಪ್ರಿಯ ನಟಿಯರಲ್ಲಿ ಒಬ್ಬರು. ‘ಸ್ಟೂಡೆಂಟ್ ಆಫ್ ದಿ ಇಯರ್’ ಚಿತ್ರದ ನಂತರ, ನಟಿ ‘2 ಸ್ಟೇಟ್ಸ್’, ‘ಹೈವೇ’, ‘ಡಿಯರ್ ಜಿಂದಗಿ’, ‘ರಾಝಿ’, ‘ಗಲ್ಲಿ ಬಾಯ್’ ಮತ್ತು ‘ಗಂಗೂಬಾಯಿ ಕಥಿಯಾವಾಡಿ’ ಮುಂತಾದ…

Read More

ಬಿಸಿಸಿಐ ‘ನಮನ್’ ಪ್ರಶಸ್ತಿ ಪಡೆದ ಕ್ರಿಕೆಟಿಗರ ಸಂಪೂರ್ಣ ಪಟ್ಟಿ ಇಲ್ಲಿದೆ

ದೆಹಲಿಯಲ್ಲಿ ಭಾನುವಾರ (ಮಾರ್ಚ್ 15) ನಡೆದ ಸಮಾರಂಭದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ವಾರ್ಷಿಕ ನಮನ್ ಪ್ರಶಸ್ತಿಗಳನ್ನು ಪ್ರಧಾನ ಮಾಡಿದೆ. ಈ ಸಮಾರಂಭದಲ್ಲಿ ದಿಗ್ಗಜ ರಾಹುಲ್ ದ್ರಾವಿಡ್​ ಅವರಿಗೆ ಪ್ರತಿಷ್ಠಿತ ಕರ್ನಲ್ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇನ್ನು ಭಾರತ ಟೆಸ್ಟ್ ತಂಡದ ನಾಯಕ ಶುಭ್​ಮನ್ ಗಿಲ್, ಟೀಮ್ ಇಂಡಿಯಾ ಬ್ಯಾಟರ್​ ಸ್ಮೃತಿ ಮಂಧಾನ ಸೇರಿದಂತೆ ಹಲವರಿಗೆ ಪ್ರಶಸ್ತಿ ನೀಡಲಾಯಿತು. ಈ ಪ್ರಶಸ್ತಿಗಳ ಸಂಪೂರ್ಣ ಪಟ್ಟಿ ಕೆಳಗಿನಂತಿದೆ… 2025ರ ನಮನ್…

Read More