Headlines

nagaraj11081993

ಕರ್ನಾಟಕ ಹವಾಮಾನ ವರದಿ: ಬಿಸಿಲ ಬೇಗೆ ಆರಿಸಲು ರಾಜ್ಯದಲ್ಲಿ ತುಂತುರು ಮಳೆಯ ಸಾಧ್ಯತೆ!

ಬೆಂಗಳೂರು, ಮಾರ್ಚ್​ 16: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಹೆಚ್ಚಾದ ತಾಪಮಾನದೊಂದಿಗೆ ಒಣ ಹವೆ (Weather Forecast) ಆವರಿಸಿತ್ತು. ಆದರೆ ಇಂದು ಕರಾವಳಿ ಸೇರಿದಂತೆ ಹಲವೆಡೆ ಸಾಧಾರಣ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆಯೇ ಮುಂದುವರೆಯಲಿದ್ದು, ಇನ್ನೂ ಕೆಲ ದಿನ ಇದೇ ರೀತಿಯ ಶುಷ್ಕ ವಾತಾವರಣ ಇರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ತುಂತುರು ಮಳೆ? ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ…

Read More

ಕೇಳಿಬಂದ ಗಂಭೀರ ಆರೋಪಕ್ಕೆ ಸ್ಪಷ್ಟನೆ ಕೊಟ್ಟಿದ್ದ ಪುನೀತ್ ರಾಜ್​​ಕುಮಾರ್

ನಟ ಪುನೀತ್ ರಾಜ್ಕುಮಾರ್ ಅವರಿಗೆ (Puneeth Rajkumar) ಮಾರ್ಚ್ 17 ಜನ್ಮದಿನ. ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಅವರನ್ನು ಕಳೆದುಕೊಂಡು ಕೆಲವು ವರ್ಷಗಳು ಕಳೆದಿವೆ. ಆದಾಗ್ಯೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಅಭಿಮಾನಿಗಳಿಂದ ಆಗಾಗ ಆಗುತ್ತಲೇ ಇರುತ್ತದೆ. ಈ ಸಂದರ್ಭದಲ್ಲಿ ಅವರ ವಹಲವು ವಿಷಯಗಳು ಚರ್ಚೆ ಆಗುತ್ತಿವೆ. ಅದೇ ರೀತಿ ಅವರು ಅಕ್ರಮವಾಗಿ ಗ್ರ್ಯಾನೇಟ್ ಬಿಸ್ನೆಸ್ ಮಾಡುತ್ತಿದ್ದರು ಎಂಬ ಆರೋಪ ಇತ್ತು. ಈ ವಿಷಯವಾಗಿ ಅವರು ಮಾತನಾಡಿದ್ದರು. ಈ ಕಾರಣಕ್ಕೆ ಅವರ ತಂದೆ ರಾಜ್ಕುಮಾರ್ ಅವರನ್ನು…

Read More

ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂಬ ಕಾರಣಕ್ಕೆ ಬಾರದ ಜನ

ಚಿಕ್ಕಬಳ್ಳಾಪುರ, ಮಾರ್ಚ್ 16: ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಕೊರತೆಯಿಂದ ರಾಜ್ಯದ್ಯಂತ ಹಲವು ಹೋಟೆಲ್‌ಗಳು ಬಂದ್ ಆಗಿದ್ದರೆ, ಇನ್ನೂ ಕೆಲವೆಡೆ ಸೌದೆ ಒಲೆಗಳನ್ನೇ ನಂಬಿಕೊಂಡು ಹೋಟೆಲ್ ನಡೆಸುವ ಸ್ಥಿತಿ ಇದೆ. ಇದರ ಪರಿಣಾಮ ಪ್ರವಾಸೋದ್ಯಮದ ಮೇಲೂ ತಟ್ಟಿದೆ. ವಾರಾಂತ್ಯಗಳಲ್ಲಿ ಜನರಿಂದ ಕಿಕ್ಕಿರಿದು ತುಂಬಿರುತ್ತಿದ್ದ ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ದ ಪ್ರವಾಸಿತಾಣ ನಂದಿಗಿರಿಧಾಮ ಭಾನುವಾರ ಜನ ಇಲ್ಲದೆ ಬಿಕೊ ಎನ್ನುತ್ತಿತ್ತು. ಗಿರಿಧಾಮದಕ್ಕೆ ಹೊದರೆ ಅಲ್ಲಿರುವ ಹೋಟೆಲ್​​ಗಳಲ್ಲಿ ತಿಂಡಿ-ಊಟ ಸಿಗುತ್ತದೆಯೋ ಇಲ್ಲವೋ ಎಂಬ ಅನುಮಾನದಿಂದ ಪ್ರವಾಸಿಗರು ಅತ್ತ ಮುಖ ಮಾಡಿಲ್ಲ. ಮತ್ತೊಂದೆಡೆ ನಂದಿಗಿರಿಧಾಮದಲ್ಲಿರುವ…

Read More

ಆಸ್ಕರ್​ ಅವಾರ್ಡ್ಸ್​​​​ಗೆ ನೆನಪಾಗಿಲ್ಲ ಬಾಲಿವುಡ್​ ಲೆಜೆಂಡ್ ನಟ ಧರ್ಮೇಂದ್ರ

Oscars 2026 Updates:98ನೇ ಸಾಲಿ ಆಸ್ಕರ್ ಅವಾರ್ಟಡ್ ಕಾರ್ಯಕ್ರಮ ಭಾರತೀಯ ಕಾಲಮಾನದ ಪ್ರಕಾರ ಸೋಮವಾರ (ಮಾರ್ಚ್ 16) ಬೆಳಿಗ್ಗೆ ಆರಂಭ ಆಗಿದೆ. ಭಾರತ ಹಾಗೂ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಕಾರ್ಯಕ್ರಮದಲ್ಲಿ ಮಿಂಚಿದರು. ಅಚ್ಚರಿಯೆಂದರೆ, ಬಾಲಿವುಡ್ ದಂತಕಥೆ ಧರ್ಮೇಂದ್ರ ಅವರನ್ನು ಆಸ್ಕರ್ 2026 ‘ಮೆಮೋರಿಯಮ್’ ವಿಭಾಗದಲ್ಲಿ ಸೇರಿಸಲಾಗಿಲ್ಲ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಭಾರತ ಮೂಲದ ಅಮೆರಿಕ ನಿರ್ದೇಶಕಿ ಗೀತಾ ಕೂಡ ಆಸ್ಕರ್ ಕಾರ್ಯಕ್ರಮದಲ್ಲಿ ಇದ್ದರು. ‘ದಿ ಪರ್ಫೆಕ್ಟ್ ನೇಬರ್’ (ಬೆಸ್ಟ್ ಡಾಕ್ಯುಮೆಂಟರಿ ಫೀಚರ್)…

Read More

ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್

ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಬಾಂಗ್ಲಾದೇಶ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ 8 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು 127 ರನ್​ಗಳ ವಿಜಯ ದಾಖಲಿಸಿದ್ದರು. ಇದೀಗ ಮೂರನೇ ಪಂದ್ಯದಲ್ಲಿ 11 ರನ್​ಗಳ ರೋಚಕ ಗೆಲುವು ದಾಖಲಿಸಿ ಬಾಂಗ್ಲಾದೇಶ್ ತಂಡ ಸರಣಿ ವಶಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 50 ಓವರ್​ಗಳಲ್ಲಿ 290 ರನ್ ಕಲೆಹಾಕಿತು. ಈ ಗುರಿಯನ್ನು…

Read More

ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ

ಬೆಂಗಳೂರು, ಮಾರ್ಚ್ 16: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕರ್ನಾಟಕದ ಹಲವೆಡೆ ಭಾನುವಾರ ಮಳೆಯಾಗಿದ್ದು, ಜನತೆಗೆ ಕೊಂಚ ನೆಮ್ಮದಿ ತಂದಿದೆ. ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲಿ ಮಳೆಯೊಂದಿಗೆ ಬೀಸಿದ ಗಾಳಿಗೆ ಮರವೊಂದು ಉರುಳಿ ಬಿದ್ದ ಪರಿಣಾಮ ಶೃಂಗೇರಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯುಂಟಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಮೂಡಿಗೆರೆ ಮತ್ತು ಎನ್.ಆರ್.ಪುರ ತಾಲೂಕುಗಳ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಬೆಳಗಾವಿ ನಗರದ ಸದಾಶಿವನಗರ ಮತ್ತು ಶಾಹುನಗರದಲ್ಲಿ ಭಾರೀ ಮಳೆಯಾಗಿದೆ. ಬೀದರ್‌ನ ಔರಾದ್, ಕಮಲನಗರ,…

Read More

Daily Devotional: ಮದುವೆ, ಶುಭ ಸಮಾರಂಭಗಳಲ್ಲಿ ಮುಯ್ಯಿ ಕೊಡಬೇಕು ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮದುವೆ, ಶುಭ ಸಮಾರಂಭಗಳಲ್ಲಿ ಮುಯ್ಯಿ ಕೊಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸನಾತನ ಸಂಪ್ರದಾಯದಲ್ಲಿ ವಿವಾಹ, ನಾಮಕರಣ ಅಥವಾ ಗೃಹಪ್ರವೇಶದಂತಹ ಶುಭ ಸಮಾರಂಭಗಳಿಗೆ ಹೋಗುವಾಗ ಮುಯ್ಯಿ ನೀಡುವ ಪದ್ಧತಿ ಅನಾದಿ ಕಾಲದಿಂದಲೂ ರೂಢಿಯಲ್ಲಿದೆ. ಇದು ಕೇವಲ ಒಂದು ಕಾಣಿಕೆಯಾಗದೆ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ. ಮುಯ್ಯಿ ಎಂದರೆ ಪ್ರೀತಿಪೂರ್ವಕವಾಗಿ, ಮನಸ್ಸಿನ ಒಳ್ಳೆಯ ಭಾವನೆಯಿಂದ ನೀಡುವ ಹಣ ಅಥವಾ ವಸ್ತುವಾಗಿದೆ. ಮುಯ್ಯಿ ನೀಡುವಾಗ ಹಣಕ್ಕೆ “ಒಂದು” ರೂಪಾಯಿ ಸೇರಿಸುವ ರೂಢಿ…

Read More

Horoscope Today 16th​​ March​: ಇಂದು ಈ ರಾಶಿಯವರ ಅಡೆತಡೆಗಳು ನಿವಾರಣೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 1​​​​6, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ ದ್ವಾದಶಿ, ಧನಿಷ್ಠ ನಕ್ಷತ್ರ, ಶಿವಯೋಗ ಮತ್ತು ತೈತಲ ಕರಣವನ್ನು ಒಳಗೊಂಡಿದೆ. ಬೆಳಿಗ್ಗೆ 7 ಗಂಟೆ 56 ನಿಮಿಷದಿಂದ 9 ಗಂಟೆ 27 ನಿಮಿಷದವರೆಗೆ ರಾಹುಕಾಲ ಇರುತ್ತದೆ. ಹಾಗೆಯೇ 9 ಗಂಟೆ 27 ನಿಮಿಷದಿಂದ 10…

Read More

ಸಮುದ್ರ ತೀರದಲ್ಲಿ ರಶ್ಮಿಕಾ-ಆನಂದ್ ದೇವರಕೊಂಡ ಆಹ್ವಾನಿಸಿದ್ದು ಯಾರನ್ನ? ಫನ್ ಫೋಟೋ ವೈರಲ್

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ (Vijay Devarakonda) ವಿವಾಹ ಆಗಿ ಹಾಯಾಗಿದ್ದಾರೆ. ಇವರು ಮದುವೆಗೂ ಮೊದಲು ಅನೇಕ ಕಡೆಗಳಲ್ಲಿ ಸುತ್ತಾಟ ನಡೆಸಿದ್ದರು. ವಿಶೇಷ ಎಂದರೆ ಈ ರೀತಿ ಸುತ್ತಾಟ ನಡೆಸುವಾಗ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಜೊತೆ ಆನಂದ್ ದೇವರಕೊಂಡ ಕೂಡ ಇರುತ್ತಿದ್ದರು. ರಶ್ಮಿಕಾ ಹಾಗೂ ಆನಂದ್​ದು ಅತ್ತಿಗೆ-ಬಾವ ಸಂಬಂಧ. ಇವರ ಸಂಬಂಧ ಕ್ರೇಜಿ ಆಗಿದೆ ಎಂದು ಹೇಳಿಕೊಂಡಿದ್ದಾರೆ. ವಿಜಯ್, ರಶ್ಮಿಕಾ ಹಾಗೂ ಆನಂದ್ ಈ ಮೊದಲು ಅನೇಕ ಕಡೆಗಳಲ್ಲಿ ಸುತ್ತಾಟ ನಡೆಸಲು ತೆರಳಿದ್ದು ಇದೆ….

Read More

200ಕ್ಕೂ ಹೆಚ್ಚು ಹೋಟೆಲ್‌ ಸಿಬ್ಬಂದಿಯ ಕೆಲಸಕ್ಕೂ ಕುತ್ತು: ಸಂಬಳ ಕಡಿತ, ಉದ್ಯೋಗ ಕಳೆದುಕೊಳ್ಳುವ ಆತಂಕ

ಬೆಂಗಳೂರು, ಮಾರ್ಚ್ 16: ಕರ್ನಾಟಕದಲ್ಲಿ (Karnataka) ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರಗೊಂಡಿದ್ದು, ಹೋಟೆಲ್ ಉದ್ಯಮ (Hotel Business) ಗಂಭೀರ ಸಂಕಷ್ಟಕ್ಕೆ ಸಿಲುಕಿದೆ. ಗಲ್ಫ್ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ವ್ಯತ್ಯಯಗೊಂಡಿದ್ದು, ಹಲವು ಹೋಟೆಲ್‌ಗಳು ಕಾರ್ಯಾಚರಣೆ ನಡೆಸಲು ಸಾಧ್ಯವಾಗದೆ ಬಾಗಿಲು ಮುಚ್ಚುವ ಪರಿಸ್ಥಿತಿ ಎದುರಾಗಿದೆ. ಕೆಲ ಹೋಟೆಲ್‌ಗಳು ಸೌದೆ ಒಲೆಗಳನ್ನು ಬಳಸಿಕೊಂಡು ಸೀಮಿತ ಮೆನುಗಳೊಂದಿಗೆ ಆಹಾರ ತಯಾರಿಸುತ್ತಿದ್ದರೆ, ಇನ್ನೂ ಕೆಲವು ಸಂಪೂರ್ಣವಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿವೆ. ಗ್ಯಾಸ್ ಸಿಲಿಂಡರ್ ಸಿಗದೆ ಹೋಟೆಲ್ ಉದ್ಯಮಿಗಳು ಕಂಗಾಲಾಗಿದ್ದಾರೆ….

Read More