All posts by nagaraj11081993

ಆಸ್ಕರ್​ ಅವಾರ್ಡ್ಸ್​​​​ಗೆ ನೆನಪಾಗಿಲ್ಲ ಬಾಲಿವುಡ್​ ಲೆಜೆಂಡ್ ನಟ ಧರ್ಮೇಂದ್ರ

ಆಸ್ಕರ್​ ಅವಾರ್ಡ್ಸ್​​​​ಗೆ ನೆನಪಾಗಿಲ್ಲ ಬಾಲಿವುಡ್​ ಲೆಜೆಂಡ್ ನಟ ಧರ್ಮೇಂದ್ರ

Oscars 2026 Updates:98ನೇ ಸಾಲಿ ಆಸ್ಕರ್ ಅವಾರ್ಟಡ್ ಕಾರ್ಯಕ್ರಮ ಭಾರತೀಯ ಕಾಲಮಾನದ ಪ್ರಕಾರ ಸೋಮವಾರ (ಮಾರ್ಚ್ 16) ಬೆಳಿಗ್ಗೆ ಆರಂಭ ಆಗಿದೆ. ಭಾರತ ಹಾಗೂ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಕಾರ್ಯಕ್ರಮದಲ್ಲಿ ಮಿಂಚಿದರು. ಅಚ್ಚರಿಯೆಂದರೆ, ಬಾಲಿವುಡ್ ದಂತಕಥೆ ಧರ್ಮೇಂದ್ರ ಅವರನ್ನು ಆಸ್ಕರ್ 2026 ‘ಮೆಮೋರಿಯಮ್’ ವಿಭಾಗದಲ್ಲಿ ಸೇರಿಸಲಾಗಿಲ್ಲ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಭಾರತ ಮೂಲದ ಅಮೆರಿಕ ನಿರ್ದೇಶಕಿ ಗೀತಾ ಕೂಡ ಆಸ್ಕರ್ ಕಾರ್ಯಕ್ರಮದಲ್ಲಿ ಇದ್ದರು. ‘ದಿ ಪರ್ಫೆಕ್ಟ್ ನೇಬರ್’ (ಬೆಸ್ಟ್ ಡಾಕ್ಯುಮೆಂಟರಿ ಫೀಚರ್) ಹಾಗೂ ‘ದಿ ಡೆವಿಲ್’ (ದಿ ಬೆಸ್ಟ್ ಡಾಕ್ಯುಮೆಂಟರಿ ಶಾರ್ಟ್) ನಾಮಿನೇಟ್ ಆಗಿದ್ದವು. ಆದರೆ, ಅವಾರ್ಡ್ ಗೆಲ್ಲಲು ಸಾಧ್ಯವಾಗಿಲ್ಲ.

ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ ಧರ್ಮೇಂದ್ರ ಅವರು ಕಳೆದ ವರ್ಷ ನಿಧನ ಹೊಂದಿದರು. ಅವರು ಭಾರತೀಯ ಮತ್ತು ಜಾಗತಿಕ ಸಿನಿಮಾಗೆ ಹಲವು ದಶಕಗಳ ಕಾಲ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಇವರನ್ನು ಅಕಾಡೆಮಿ ಅವಾರ್ಡ್ಸ್​ನಲ್ಲಿ ಗೌರವಿಸಲಾಗುವುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಇದರಲ್ಲಿ ಅವರ ಹೆಸರು ಇರಲೇ ಇಲ್ಲ. ಈ ವರ್ಷ ಅಕಾಡೆಮಿಯ ಗೌರವವು ಇತರ ಸಿನಿಮಾ ರಂಗದ ದಂತಕಥೆಗಳ ಮೇಲೆ ಆಧರಿಸಿದೆ.

ಇದನ್ನೂ ಓದಿ: ಧರ್ಮೇಂದ್ರ ಕುಟುಂಬ ಹೇಮಾ ಮಾಲಿನಿಯನ್ನು ಒಂಟಿ ಮಾಡಿದೆ; ಕೇಳಿ ಬಂತು ಆರೋಪ

ಕಾಮಿಡಿಯನ್ ಕೊನನ್ ಒ ಬ್ರೇನ್ ಅವವರು ಈ ಬಾರಿ ಅಕಾಡೆಮಿ ಅವಾರ್ಡ್ಸ್ ಕಾರ್ಯಕ್ರಮ ಹೋಸ್ಟ್ ಮಾಡಿದ್ದಾರೆ. ‘ಸಿನ್ನರ್ಸ್’ ಸಿನಿಮಾ ಬರೋಬ್ಬರಿ 17 ವಿಭಾಗಳಲ್ಲಿ ನಾಮ ನಿರ್ದೇಶನಗೊಂಡಿದೆ.
ಬಾಲಿವುಡ್​ನ ಹಿರಿಯ ನಟ ಧರ್ಮೇಂದ್ರ ಅವರು ಕಳೆದ ನವೆಂಬರ್ 24ರಂದು ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಹಲವು ಸಮಯದಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೊನೆಗೂ ಬದುಕುಳಿಯಲೇ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್

ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಬಾಂಗ್ಲಾದೇಶ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ 8 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು 127 ರನ್​ಗಳ ವಿಜಯ ದಾಖಲಿಸಿದ್ದರು. ಇದೀಗ ಮೂರನೇ ಪಂದ್ಯದಲ್ಲಿ 11 ರನ್​ಗಳ ರೋಚಕ ಗೆಲುವು ದಾಖಲಿಸಿ ಬಾಂಗ್ಲಾದೇಶ್ ತಂಡ ಸರಣಿ ವಶಪಡಿಸಿಕೊಂಡಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 50 ಓವರ್​ಗಳಲ್ಲಿ 290 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು 279 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಬಾಂಗ್ಲಾದೇಶ್ ಪಡೆ 11 ರನ್​ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಪಾಕಿಸ್ತಾನ್ ವಿರುದ್ಧ ಬ್ಯಾಕ್ ಟು ಬ್ಯಾಕ್ ಮೂರು ಸರಣಿಗಳನ್ನು ಗೆದ್ದ ಐತಿಹಾಸಿಕ ಸಾಧನೆ ಮಾಡಿದೆ.

ಕಳೆದ ಎರಡು ವರ್ಷಗಳಲ್ಲಿ ಬಾಂಗ್ಲಾದೇಶವು ಪಾಕಿಸ್ತಾನ್ ವಿರುದ್ಧ ಅಸಾಧಾರಣ ಪ್ರದರ್ಶನ ನೀಡಿದೆ. ಏಕೆಂದರೆ ಬಾಂಗ್ಲಾ ಪಡೆ ಬ್ಯಾಕ್ ಟು ಬ್ಯಾಕ್ ಸರಣಿ ಗೆಲ್ಲುತ್ತಿರುವುದು ಇದೇ ಮೊದಲ ಬಾರಿಗೆ…

ಟೆಸ್ಟ್ ಕ್ರಿಕೆಟ್ (2024): ಪಾಕಿಸ್ತಾನದ ನೆಲದಲ್ಲೇ ಅವರನ್ನು 2-0 ಅಂತರದಿಂದ ಸೋಲಿಸಿ ಮೊದಲ ಬಾರಿಗೆ ಟೆಸ್ಟ್ ಸರಣಿ ಗೆದ್ದುಕೊಂಡಿತು.

ಟಿ20 ಕ್ರಿಕೆಟ್ (2025): ಜುಲೈ 2025 ರಲ್ಲಿ ನಡೆದ ಸರಣಿಯಲ್ಲಿ ಪಾಕಿಸ್ತಾನವನ್ನು 2-1 ರಿಂದ ಸೋಲಿಸಿ ಮೊದಲ ಟಿ20 ಸರಣಿ ಜಯ ದಾಖಲಿಸಿತು.

ಏಕದಿನ ಕ್ರಿಕೆಟ್ (2026): ಇದೀಗ ಏಕದಿನ ಸರಣಿ ಗೆಲುವಿನೊಂದಿಗೆ, ಬಾಂಗ್ಲಾದೇಶವು ಪಾಕಿಸ್ತಾನದ ವಿರುದ್ಧ ಮೂರೂ ಮಾದರಿಯ ಕ್ರಿಕೆಟ್‌ನಲ್ಲಿ ಸರಣಿ ಗೆದ್ದ ಅಪರೂಪದ ಸಾಧನೆ ಮಾಡಿದೆ.

ಅಷ್ಟೇ ಅಲ್ಲದೆ ಇದು ಬಾಂಗ್ಲಾದೇಶ್ ತಂಡದ ಐತಿಹಾಸಿಕ ಸರಣಿ ಗೆಲುವು ಎಂಬುದು ವಿಶೇಷ. ಅಂದರೆ ಬಾಂಗ್ಲಾದೇಶ್ ತಂಡವು  ಪಾಕಿಸ್ತಾನದ ವಿರುದ್ಧ 11 ವರ್ಷಗಳ ನಂತರ ಮೊದಲ ಬಾರಿಗೆ ಏಕದಿನ ಸರಣಿಯನ್ನು (2-1 ರಿಂದ) ಗೆದ್ದುಕೊಂಡಿದೆ. 2015 ರ ಬಳಿಕ ಪಾಕ್ ವಿರುದ್ಧ ಒಮ್ಮೆಯೂ ಬಾಂಗ್ಲಾ ತಂಡ ಗೆದ್ದಿರಲಿಲ್ಲ.

ಇದೀಗ ದಶಕದ ಬಳಿಕ ಪಾಕಿಸ್ತಾನ್ ತಂಡವನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ನಿರ್ಮಿಸುವಲ್ಲಿ ಬಾಂಗ್ಲಾದೇಶ್ ತಂಡ ಯಶಸ್ವಿಯಾಗಿರುವುದು ವಿಶೇಷ.

 

Source link

ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ

ಬೆಂಗಳೂರು, ಮಾರ್ಚ್ 16: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕರ್ನಾಟಕದ ಹಲವೆಡೆ ಭಾನುವಾರ ಮಳೆಯಾಗಿದ್ದು, ಜನತೆಗೆ ಕೊಂಚ ನೆಮ್ಮದಿ ತಂದಿದೆ. ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲಿ ಮಳೆಯೊಂದಿಗೆ ಬೀಸಿದ ಗಾಳಿಗೆ ಮರವೊಂದು ಉರುಳಿ ಬಿದ್ದ ಪರಿಣಾಮ ಶೃಂಗೇರಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯುಂಟಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಮೂಡಿಗೆರೆ ಮತ್ತು ಎನ್.ಆರ್.ಪುರ ತಾಲೂಕುಗಳ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಬೆಳಗಾವಿ ನಗರದ ಸದಾಶಿವನಗರ ಮತ್ತು ಶಾಹುನಗರದಲ್ಲಿ ಭಾರೀ ಮಳೆಯಾಗಿದೆ. ಬೀದರ್‌ನ ಔರಾದ್, ಕಮಲನಗರ, ಭಾಲ್ಕಿ, ಚಿಟಗುಪ್ಪ, ಬಸವಕಲ್ಯಾಣ, ಹುಲಸೂರು ಸೇರಿದಂತೆ ಹಲವೆಡೆ ಉತ್ತಮ ಮಳೆ ಸುರಿದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಮದುವೆ, ಶುಭ ಸಮಾರಂಭಗಳಲ್ಲಿ ಮುಯ್ಯಿ ಕೊಡಬೇಕು ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮದುವೆ, ಶುಭ ಸಮಾರಂಭಗಳಲ್ಲಿ ಮುಯ್ಯಿ ಕೊಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸನಾತನ ಸಂಪ್ರದಾಯದಲ್ಲಿ ವಿವಾಹ, ನಾಮಕರಣ ಅಥವಾ ಗೃಹಪ್ರವೇಶದಂತಹ ಶುಭ ಸಮಾರಂಭಗಳಿಗೆ ಹೋಗುವಾಗ ಮುಯ್ಯಿ ನೀಡುವ ಪದ್ಧತಿ ಅನಾದಿ ಕಾಲದಿಂದಲೂ ರೂಢಿಯಲ್ಲಿದೆ. ಇದು ಕೇವಲ ಒಂದು ಕಾಣಿಕೆಯಾಗದೆ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ.

ಮುಯ್ಯಿ ಎಂದರೆ ಪ್ರೀತಿಪೂರ್ವಕವಾಗಿ, ಮನಸ್ಸಿನ ಒಳ್ಳೆಯ ಭಾವನೆಯಿಂದ ನೀಡುವ ಹಣ ಅಥವಾ ವಸ್ತುವಾಗಿದೆ. ಮುಯ್ಯಿ ನೀಡುವಾಗ ಹಣಕ್ಕೆ “ಒಂದು” ರೂಪಾಯಿ ಸೇರಿಸುವ ರೂಢಿ ಇದೆ (ಉದಾಹರಣೆಗೆ 101, 501). ಸೊನ್ನೆಯು ಪರಿಪೂರ್ಣತೆಯ ಸಂಕೇತವಲ್ಲ, ಬದಲಿಗೆ “ಒಂದು” ಅಭಿವೃದ್ಧಿ, ಪ್ರಾರಂಭ ಮತ್ತು ಸೂರ್ಯನ ಸಂಕೇತವಾಗಿದೆ. ಇದು “ನೂರು ಮುಗಿಸಿ ಒಂದಕ್ಕೆ ಹೋಗುತ್ತಿದ್ದೀರಿ, ನಿಮಗೆ ಶುಭವಾಗಲಿ” ಎಂಬ ಆಶಯವನ್ನು ಸೂಚಿಸುತ್ತದೆ. ಹೀಗೆ ಮುಯ್ಯಿಯು ಬಾಂಧವ್ಯಗಳನ್ನು ಗಟ್ಟಿಗೊಳಿಸುತ್ತದೆ ಮತ್ತು ಆರ್ಥಿಕ ನೆರವನ್ನು ಒದಗಿಸುತ್ತದೆ. ಸಂಪತ್ತಿದ್ದರೂ, ಇದು ಆಶೀರ್ವಾದದ ರೂಪದಲ್ಲಿ ನೀಡಲಾಗುತ್ತದೆ ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Source link

Horoscope Today 16th​​ March​: ಇಂದು ಈ ರಾಶಿಯವರ ಅಡೆತಡೆಗಳು ನಿವಾರಣೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 1​​​​6, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ ದ್ವಾದಶಿ, ಧನಿಷ್ಠ ನಕ್ಷತ್ರ, ಶಿವಯೋಗ ಮತ್ತು ತೈತಲ ಕರಣವನ್ನು ಒಳಗೊಂಡಿದೆ.

ಬೆಳಿಗ್ಗೆ 7 ಗಂಟೆ 56 ನಿಮಿಷದಿಂದ 9 ಗಂಟೆ 27 ನಿಮಿಷದವರೆಗೆ ರಾಹುಕಾಲ ಇರುತ್ತದೆ. ಹಾಗೆಯೇ 9 ಗಂಟೆ 27 ನಿಮಿಷದಿಂದ 10 ಗಂಟೆ 58 ನಿಮಿಷದವರೆಗೆ ಸಂಕಲ್ಪ ಕಾಲ ಅಥವಾ ಶುಭಕಾಲವಿರುತ್ತದೆ. ಇದು ಸೋಮ ಪ್ರದೋಷದ ಪರ್ವ ದಿನವಾಗಿದೆ. ಪೆರ್ಡೂರಿನಲ್ಲಿ ರಥೋತ್ಸವ, ಧಾರವಾಡದಲ್ಲಿ ಮೃತ್ಯುಂಜಯ ಶ್ರೀಗಳ ವರ್ಧಂತ್ಯೋತ್ಸವ ಮತ್ತು ರಾಷ್ಟ್ರೀಯ ಲಸಿಕಾ ದಿನದ ಆಚರಣೆಯಿದೆ. ರವಿ ಮೀನ ರಾಶಿಯಲ್ಲಿ ಮತ್ತು ಚಂದ್ರ ಕುಂಭ ರಾಶಿಯಲ್ಲಿ ಸಂಚಾರ ಮಾಡುತ್ತಾರೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Source link

ಸಮುದ್ರ ತೀರದಲ್ಲಿ ರಶ್ಮಿಕಾ-ಆನಂದ್ ದೇವರಕೊಂಡ ಆಹ್ವಾನಿಸಿದ್ದು ಯಾರನ್ನ? ಫನ್ ಫೋಟೋ ವೈರಲ್

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ (Vijay Devarakonda) ವಿವಾಹ ಆಗಿ ಹಾಯಾಗಿದ್ದಾರೆ. ಇವರು ಮದುವೆಗೂ ಮೊದಲು ಅನೇಕ ಕಡೆಗಳಲ್ಲಿ ಸುತ್ತಾಟ ನಡೆಸಿದ್ದರು. ವಿಶೇಷ ಎಂದರೆ ಈ ರೀತಿ ಸುತ್ತಾಟ ನಡೆಸುವಾಗ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಜೊತೆ ಆನಂದ್ ದೇವರಕೊಂಡ ಕೂಡ ಇರುತ್ತಿದ್ದರು. ರಶ್ಮಿಕಾ ಹಾಗೂ ಆನಂದ್​ದು ಅತ್ತಿಗೆ-ಬಾವ ಸಂಬಂಧ. ಇವರ ಸಂಬಂಧ ಕ್ರೇಜಿ ಆಗಿದೆ ಎಂದು ಹೇಳಿಕೊಂಡಿದ್ದಾರೆ.

ವಿಜಯ್, ರಶ್ಮಿಕಾ ಹಾಗೂ ಆನಂದ್ ಈ ಮೊದಲು ಅನೇಕ ಕಡೆಗಳಲ್ಲಿ ಸುತ್ತಾಟ ನಡೆಸಲು ತೆರಳಿದ್ದು ಇದೆ. ಈ ವೇಳೆ ವಿಜಯ್ ದೇವರಕೊಂಡ ಅವರು ಒಂದು ಫನ್​ ಫೋಟೋನ ಕ್ಲಿಕ್ ಮಾಡಿದ್ದರು. ಈ ಫೋಟೋದಲ್ಲಿ ರಶ್ಮಿಕಾ ಹಾಗೂ ಆನಂದ್ ಸಮುದ್ರ ನೋಡುತ್ತಾ ನಿಂತಿದ್ದಾರೆ. ಅಲ್ಲದೆ, ಸಿಳ್ಳೆ ಹೊಡೆಯುತ್ತಾ ಇದ್ದಾರೆ. ಈ ಪೋಸ್ ನೋಡಿ ವಿಜಯ್ ದೇವರಕೊಂಡ ಅವರು ಒಂದು ಫನ್​ ಕಮೆಂಟ್​​ನ ಪಾಸ್ ಮಾಡಿದ್ದರಂತೆ. ಜೀವನದಲ್ಲಿ ಯಾವಾಗಲೂ ಇಷ್ಟೇ ಕ್ರೇಜಿ ಆಗಿರಬೇಕು ಎಂದು ರಶ್ಮಿಕಾ ಹೇಳಿದ್ದಾರೆ.

‘ಮೀನನ್ನು ಕರೆಯುವಂತೆ ಕಾಣಿಸುತ್ತಿದೆ ಎಂದು ವಿಜಯ್ ದೇವರಕೊಂಡ ಅವರು ಹೇಳಿದ್ದರು’ ಎಂದು ವಿಜಯ್ ದೇವರಕೊಂಡ ಫನ್ ಕಮೆಂಟ್ ಮಾಡಿದ್ದರಂತೆ. ಈ ಫೋಟೋನ ಹಂಚಿಕೊಂಡು, ಆನಂದ್​​ಗೆ ರಶ್ಮಿಕಾ ಬರ್ತ್​​ಡೇ ವಿಶ್ ಮಾಡಿದ್ದಾರೆ. ‘ಆನಂದಾ… ಹ್ಯಾಪಿ ಹ್ಯಾಪಿ ಹ್ಯಾಪಿಯೆಸ್ಟ್ ಬರ್ತ್​​ಡೇ. ನೀನು ಶೂಟಿಂಗ್ ಕಾರಣಕ್ಕೆ ಹೊರಕ್ಕೆ ಇರುವುದರಿಂದ ನಿನ್ನನ್ನು ಮಿಸ್ ಮಾಡಿಕೊಳ್ಳುತ್ತೇವೆ’ ಎಂದು ರಶ್ಮಿಕಾ ಹೇಳಿದ್ದಾರೆ.

ಇದನ್ನೂ ಓದಿ: ರಶ್ಮಿಕಾ-ವಿಜಯ್ ದೇವರಕೊಂಡ ವಿವಾಹಕ್ಕೆ ಅಂತಿಮವಾಗಿ ಖರ್ಚಾಗಿದ್ದೆಷ್ಟು?

ವಿಜಯ್ ದೇವರಕೊಂಡ ಸಹೋದರ ಆನಂದ್ ಅವರು ಕೆಲವು ವರ್ಷಗಳಿಂದ ಚಿತ್ರರಂಗದಲ್ಲಿ ಇದ್ದಾರೆ. ವಿಜಯ್ ಹೀರೋ ಆಗಿ ಮಿಂಚಿದ ಬಳಿಕ ಆನಂದ್ ಕೂಡ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಆನಂದ್ ನಟನೆಯ ಸ್ಯಾಡ್ ಎಂಡಿಂಗ್ ಇರೋ ‘ಬೇಬಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಬಳಿಕ ಆನಂದ್ ಜನಪ್ರಿಯತೆ ಹೆಚ್ಚಿತು. ಅವರು ಸದ್ಯ ಆಯ್ದ ಕೆಲವು ಪ್ರಾಜೆಕ್ಟ್​​ಗಳನ್ನು ಒಪ್ಪಿ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

200ಕ್ಕೂ ಹೆಚ್ಚು ಹೋಟೆಲ್‌ ಸಿಬ್ಬಂದಿಯ ಕೆಲಸಕ್ಕೂ ಕುತ್ತು: ಸಂಬಳ ಕಡಿತ, ಉದ್ಯೋಗ ಕಳೆದುಕೊಳ್ಳುವ ಆತಂಕ

ಬೆಂಗಳೂರು, ಮಾರ್ಚ್ 16: ಕರ್ನಾಟಕದಲ್ಲಿ (Karnataka) ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರಗೊಂಡಿದ್ದು, ಹೋಟೆಲ್ ಉದ್ಯಮ (Hotel Business) ಗಂಭೀರ ಸಂಕಷ್ಟಕ್ಕೆ ಸಿಲುಕಿದೆ. ಗಲ್ಫ್ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ವ್ಯತ್ಯಯಗೊಂಡಿದ್ದು, ಹಲವು ಹೋಟೆಲ್‌ಗಳು ಕಾರ್ಯಾಚರಣೆ ನಡೆಸಲು ಸಾಧ್ಯವಾಗದೆ ಬಾಗಿಲು ಮುಚ್ಚುವ ಪರಿಸ್ಥಿತಿ ಎದುರಾಗಿದೆ. ಕೆಲ ಹೋಟೆಲ್‌ಗಳು ಸೌದೆ ಒಲೆಗಳನ್ನು ಬಳಸಿಕೊಂಡು ಸೀಮಿತ ಮೆನುಗಳೊಂದಿಗೆ ಆಹಾರ ತಯಾರಿಸುತ್ತಿದ್ದರೆ, ಇನ್ನೂ ಕೆಲವು ಸಂಪೂರ್ಣವಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿವೆ.

ಗ್ಯಾಸ್ ಸಿಲಿಂಡರ್ ಸಿಗದೆ ಹೋಟೆಲ್ ಉದ್ಯಮಿಗಳು ಕಂಗಾಲಾಗಿದ್ದಾರೆ. ಹಣ ಕೊಟ್ಟರೂ ಸಿಲಿಂಡರ್ ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಗೃಹಬಳಕೆ ಸಿಲಿಂಡರ್ ಬಳಸುವುದಕ್ಕೂ ನಿಯಮಗಳ ಅಡ್ಡಿಯಿದೆ. ಇನ್ನೊಂದೆಡೆ ಸೌದೆ ಒಲೆಗಳನ್ನು ಬಳಸಲು ಬೇಕಾದಷ್ಟು ಜಾಗವೂ ಲಭ್ಯವಿಲ್ಲದ ಕಾರಣ ಹೋಟೆಲ್ ಮಾಲೀಕರು ದಿಕ್ಕೇ ತೋಚದ ಸ್ಥಿತಿಗೆ ತಲುಪಿದ್ದಾರೆ.

ರಾಜ್ಯದ ಹಲವೆಡೆ ಹೋಟೆಲ್‌ಗಳು ಬಂದ್

ಬೆಂಗಳೂರಿನ ಗಾಂಧಿನಗರದಲ್ಲಿರುವ ಐಡಿಸಿ ಹೋಟೆಲ್, ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರುವ ಹೋಳಿಗೆ ಮನೆ, ಬಸವನಗುಡಿಯ ಬೈಟು ಕಾಫಿ ಹೋಟೆಲ್, ಆನಂದರಾವ್ ಸರ್ಕಲ್‌ನ ಕೃಷ್ಣಸಾಗರ ಹೋಟೆಲ್ ಮತ್ತು ಬಸವನಗುಡಿಯ ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಸೇರಿದಂತೆ ಹಲವು ಹೋಟೆಲ್‌ಗಳು ಬಾಗಿಲು ಮುಚ್ಚಿವೆ.

ಇದೇ ರೀತಿ ಚಾಮರಾಜನಗರ ಜಿಲ್ಲೆಯ ಒಂದರಲ್ಲೇ 18ಕ್ಕೂ ಹೆಚ್ಚು ಹೋಟೆಲ್‌ಗಳು ಕಾರ್ಯಾಚರಣೆ ಸ್ಥಗಿತಗೊಳಿಸಿವೆ. ಚನ್ನಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ವೆಂಕಟಾದ್ರಿ ಹೋಟೆಲ್, ಧಾರವಾಡದ 100 ವರ್ಷಗಳ ಇತಿಹಾಸವಿರುವ ಬಾಂಬೆ ರೆಸ್ಟೋರೆಂಟ್, ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ರಾಜಭವನ ಹೋಟೆಲ್, ಸಕಲೇಶಪುರದ ಮೈತ್ರಿ ಹಾಗೂ ಕರ್ನಾಟಕ ಹೋಟೆಲ್‌ಗಳು, ಯಾದಗಿರಿ ಬಸ್ ನಿಲ್ದಾಣದ ಬಳಿ ಇರುವ ಗುರುಮೂರ್ತಿ ಖಾನಾವಳಿ ಮತ್ತು ತುಮಕೂರಿನ ಅಂತರಸನಹಳ್ಳಿ ಇಂದಿರಾ ಕ್ಯಾಂಟೀನ್ ಕೂಡ ಸಿಲಿಂಡರ್ ಕೊರತೆಯಿಂದ ಬಂದ್ ಆಗಿವೆ.

ಇದೇ ರೀತಿಯಾಗಿ ಇನ್ನೂ ನೂರಾರು ಹೋಟೆಲ್‌ಗಳು ಸಿಲಿಂಡರ್ ಸಿಗದೆ ಅನಿವಾರ್ಯವಾಗಿ ಶಟರ್ ಎಳೆಯಬೇಕಾದ ಪರಿಸ್ಥಿತಿಗೆ ತಲುಪಿವೆ. ಕೆಲವರು ಸಿಲಿಂಡರ್ ಸಿಗದೆ ಹೋಟೆಲ್ ಮುಚ್ಚಿದರೆ, ಇನ್ನೂ ಕೆಲವರು ಕಾಳಸಂತೆಯಲ್ಲಿ ದುಪ್ಪಟ್ಟು ಹಣ ನೀಡಿ ಹೋಟೆಲ್ ನಡೆಸುತ್ತಿದ್ದಾರೆ.

ಐದು ದಿನದಲ್ಲಿ 100 ಕೋಟಿ ರೂಪಾಯಿಗೂ ಹೆಚ್ಚು ನಷ್ಟ

ಗ್ಯಾಸ್ ಕೊರತೆಯಿಂದ ಅನೇಕ ಹೋಟೆಲ್‌ಗಳು ಬಂದ್ ಆಗಿರುವುದು ಹಾಗೂ ಮೆನು ಕಡಿತಗೊಂಡಿರುವುದರಿಂದ ಕಳೆದ ಐದು ದಿನಗಳಲ್ಲಿ ಹೋಟೆಲ್ ಉದ್ಯಮಕ್ಕೆ 100 ರೂಪಾಯಿಗೂ ಹೆಚ್ಚು ನಷ್ಟ ಉಂಟಾಗಿದೆ ಎಂದು ಉದ್ಯಮಿಗಳು ಅಂದಾಜಿಸಿದ್ದಾರೆ.

ಸಿಬ್ಬಂದಿಗೆ ಉದ್ಯೋಗ ನಷ್ಟ ಭೀತಿ

ಹೋಟೆಲ್‌ಗಳು ಬಂದ್ ಆಗುತ್ತಿದ್ದಂತೆ ಸಿಬ್ಬಂದಿಗೂ ಸಂಕಷ್ಟ ಎದುರಾಗಿದೆ. ಸಂಪಾದನೆ ಇಲ್ಲದಿದ್ದರೆ ಸಿಬ್ಬಂದಿಗೆ ಸಂಬಳ ನೀಡಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ಹಲವೆಡೆ 200ಕ್ಕೂ ಹೆಚ್ಚು ಮಂದಿ ಹೋಟೆಲ್ ಸಿಬ್ಬಂದಿ ಉದ್ಯೋಗ ಕಳೆದುಕೊಂಡಿದ್ದಾರೆ.

ಕಲಬುರಗಿಯ ಇಂದಿರಾ ಕ್ಯಾಂಟೀನ್ ಅಡುಗೆಮನೆಯಲ್ಲಿ ಕೆಲಸ ಮಾಡುತ್ತಿದ್ದ 10 ಮಹಿಳೆಯರು ಕೂಡ ಉದ್ಯೋಗ ಕಳೆದುಕೊಂಡಿದ್ದಾರೆ. ಚಪಾತಿ ಹಾಗೂ ರೊಟ್ಟಿ ತಯಾರಿಸುತ್ತಿದ್ದ ಸಿಬ್ಬಂದಿಗೆ ಸಿಲಿಂಡರ್ ಸಿಗುವವರೆಗೆ ಕೆಲಸಕ್ಕೆ ಬರಬೇಡಿ ಎಂದು ಗುತ್ತಿಗೆದಾರರು ತಿಳಿಸಿರುವುದಾಗಿ ಹೇಳಲಾಗಿದೆ.

ಗೃಹಬಳಕೆ ಸಿಲಿಂಡರ್ ಬಳಕೆ: ಅಧಿಕಾರಿಗಳ ದಾಳಿ

ಇನ್ನೂ ಕೆಲವು ಹೋಟೆಲ್ ಮಾಲೀಕರು ಅನಿವಾರ್ಯವಾಗಿ ಗೃಹಬಳಕೆ ಸಿಲಿಂಡರ್ ಬಳಸಿ ಅಡುಗೆ ಮಾಡುತ್ತಿರುವುದು ಪತ್ತೆಯಾಗಿದ್ದು, ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ಕೋಲಾರದಲ್ಲಿ ಎರಡು ಬೇಕರಿ ಮತ್ತು ಐದು ಹೋಟೆಲ್‌ಗಳಿಂದ 21 ಗೃಹಬಳಕೆ ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ.

ಸರ್ಕಾರ ಅಲರ್ಟ್: ಇಂದು ಮುಖ್ಯ ಕಾರ್ಯದರ್ಶಿ ಸಭೆ

ರಾಜ್ಯದಲ್ಲಿ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆ ರಾಜ್ಯ ಸರ್ಕಾರವೂ ಎಚ್ಚೆತ್ತುಕೊಂಡಿದೆ. ಅನಿಲ ಪೂರೈಕೆ ಕಂಪನಿಗಳೊಂದಿಗೆ ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಹೋಟೆಲ್‌ಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಇದರ ಮಧ್ಯೆ ಗ್ಯಾಸ್ ಕೊರತೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ‘ಪರ್ಯಾಯ ವ್ಯವಸ್ಥೆ ಮಾಡುವುದು ಕೇಂದ್ರದ ಜವಾಬ್ದಾರಿ’ ಎಂದು ಹೇಳಿದ್ದಾರೆ.

ಗ್ಯಾಸ್ ಬುಕ್ಕಿಂಗ್‌ಗೆ ಮುಗಿಬೀಳುತ್ತಿರುವ ಜನ

ಹೋಟೆಲ್‌ಗಳ ಪರಿಸ್ಥಿತಿ ನೋಡಿದ ಸಾರ್ವಜನಿಕರಲ್ಲಿ ಕೂಡ ಆತಂಕ ಮೂಡಿದೆ. ಮನೆಗಳಿಗೆ ಗ್ಯಾಸ್ ಸಿಲಿಂಡರ್ ಸಿಗುತ್ತದೆಯೇ ಎಂಬ ಭೀತಿಯಿಂದ ಜನರು ಮುಂಗಡ ಬುಕ್ಕಿಂಗ್ ಮಾಡಲು ಮುಗಿಬಿದ್ದಿದ್ದಾರೆ. ಭಾನುವಾರ ಒಂದೇ ದಿನದಲ್ಲಿ ಸುಮಾರು 88 ಲಕ್ಷ 70 ಸಾವಿರ ಗ್ಯಾಸ್ ಬುಕ್ಕಿಂಗ್ ನಡೆದಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: LPG ಸಿಲಿಂಡರ್​​ ಸಮಸ್ಯೆಗೆ ತಲ್ಲಣಿಸಿದ ಹೋಟೆಲ್​ ಉದ್ಯಮ: ಐದೇ ದಿನಗಳಲ್ಲಿ 100 ಕೋಟಿಗೂ ಅಧಿಕ ನಷ್ಟ!

ಈ ಹಿಂದೆ ಬುಕ್ ಮಾಡಿಕೊಂಡಿದ್ದವರು ಕೂಡ ತಾಳ್ಮೆ ಕಳೆದುಕೊಂಡು ಗ್ಯಾಸ್ ಏಜೆನ್ಸಿಗಳ ಮುಂದೆ ಸಿಲಿಂಡರ್ ಪಡೆಯಲು ಕಾಯುತ್ತಿರುವ ದೃಶ್ಯಗಳು ಕಂಡುಬರುತ್ತಿವೆ. ಒಟ್ಟಿನಲ್ಲಿ, ಗ್ಯಾಸ್ ಕೊರತೆಯಿಂದ ರಾಜ್ಯದಲ್ಲಿ ಹೋಟೆಲ್ ಉದ್ಯಮ ಹಾಗೂ ಸಾಮಾನ್ಯರ ಜೀವನ ಎರಡೂ ಸಂಕಷ್ಟಕ್ಕೆ ಸಿಲುಕಿರುವುದು ಸ್ಪಷ್ಟವಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 16ರ ದಿನಭವಿಷ್ಯ

ಈ ದಿನ ಸಂಜೆ ಮನೆಯ ಹೊಸ್ತಿಲಲ್ಲಿ ತುಪ್ಪದ ದೀಪ ಹಚ್ಚುವುದರಿಂದ ಕೌಟುಂಬಿಕ ಕಲಹಗಳು ಕಡಿಮೆಯಾಗಿ, ಮನೆಯಲ್ಲಿ ಸುಖದ ವಾತಾವರಣ ನಿರ್ಮಾಣವಾಗುತ್ತದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಸೋದರ ಸಂಬಂಧಿಗಳ ಆರ್ಥಿಕ ಸ್ಥಿತಿ ಒಂದಿಷ್ಟು ಒತ್ತಡವನ್ನು ತರಲಿದೆ. ಮಕ್ಕಳ ಆರೋಗ್ಯ ವಿಚಾರವು ಆತಂಕಕ್ಕೆ ಕಾರಣ ಆಗಲಿದೆ. ಇನ್ನು ಹಣಕಾಸನ್ನು ಹೊಂದಿಸುವುದಕ್ಕೆ ಹಾಗೂ ಇತರ ಜವಾಬ್ದಾರಿಗಳನ್ನು ನಿರ್ವಹಿಸುವುದಕ್ಕೆ ಹೆಚ್ಚಿನ ಶ್ರಮವನ್ನು ಹಾಕಬೇಕಾಗುತ್ತದೆ. ನಿಮ್ಮ ಮೇಲೆ ಹಗೆ ತೀರಿಸಿಕೊಳ್ಳಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ ಎಂಬುದು ನಿಮ್ಮ ಗಮನಕ್ಕೆ ಬರಲಿದೆ. ಇಂಥವರಿಗೆ ಹೇಗೆ ಉತ್ತರ ಕೊಡಬೇಕು ಎಂದು ಆಲೋಚಿಸುವಂತೆ ಆಗುತ್ತದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಕುಟುಂಬದ ಸಲುವಾಗಿಯೇ ಹೆಚ್ಚು ಸಮಯವನ್ನು ಮೀಸಲಿಡಲಿದ್ದೀರಿ. ಕಾರು ಅಥವಾ ಬೈಕ್ ಸರ್ವೀಸ್ ಮಾಡಿಸಿದ್ದೀರಾ ಎಂಬುದನ್ನು ನೋಡಿಕೊಳ್ಳಿ. ಒಂದು ವೇಳೆ ಮುಖ್ಯ ವ್ಯಕ್ತಿಯನ್ನು ಭೇಟಿ ಆಗಬೇಕು ಎಂದಿದ್ದಲ್ಲಿ ಸಮಯಕ್ಕೆ ಸರಿಯಾಗಿ ಅಲ್ಲಿರುವಂತೆ ನೋಡಿಕೊಳ್ಳಿ. ಸಂಬಂಧಿಕರು, ಸ್ನೇಹಿತರ ಮನೆಗೆ ತೆರಳಬೇಕು ಎಂದಿದ್ದಲ್ಲಿ ಅಲ್ಲಿನ ಪರಿಸ್ಥಿತಿ, ವಾತಾವರಣ ಹೇಗಿದೆ ಎಂಬುದನ್ನು ಅವಲೋಕಿಸಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಇವರು ಏನು ನನಗೆ ಹೇಳುವುದು ಎಂಬ ಧೋರಣೆ ಯಾವುದೇ ಕಾರಣಕ್ಕೂ ಬೇಡ. ಈ ದಿನ ಇತರರು ನಿಮ್ಮ ಜತೆಗೆ ಮಾತನಾಡುವಾಗ ಶ್ರದ್ಧೆಯಿಂದ ಕೇಳಿಸಿಕೊಳ್ಳಿ. ಈ ಹಿಂದೆ ಯಾವಾಗಲೋ ನಡೆದಿದ್ದ ಘಟನೆಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡು, ಯಾವುದೇ ತೀರ್ಮಾನಕ್ಕೆ ಬರಬೇಡಿ. ಇನ್ನು ಈ ದಿನ ಸೋದರ- ಸೋದರಿಯರಿಗೆ ನಿಮ್ಮ ನೆರವಿನ ಅಗತ್ಯ ಕಂಡುಬರಲಿದೆ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 16ರ ದಿನಭವಿಷ್ಯ

ಈ ದಿನ ಮಾನಸಿಕ ಶಾಂತಿ ದೊರೆಯುವುದಕ್ಕಾಗಿ ಶಿವನಿಗೆ ಅಥವಾ ದೇವಿಗೆ ಬಿಳಿ ಹೂವುಗಳನ್ನು ಅರ್ಪಿಸಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಈ ದಿನ ನಿಮ್ಮ ಪರಿಸ್ಥಿತಿ ಬಗ್ಗೆ ನಿಮಗೆ ಮರುಕ ಹುಟ್ಟಲಿದೆ. ಆದ್ದರಿಂದ ಮೇಲುನೋಟಕ್ಕೆ ಕಾಣುವಂಥ ವಿಚಾರಗಳು ಆಳದಲ್ಲಿ ಅಷ್ಟು ಗಂಭೀರವಾಗಿ ಇರುವುದಿಲ್ಲ ಎಂಬುದನ್ನು ಅರಿತುಕೊಳ್ಳುವುದು ಮುಖ್ಯವಾಗುತ್ತದೆ. ಕಟ್ಟಡ ನಿರ್ಮಾಣ ವೃತ್ತಿಯಲ್ಲಿ ಇರುವವರಿಗೆ ಹೊಸ ಕೆಲಸಗಳು ದೊರೆಯಲಿವೆ. ವಿಷಯಕ್ಕೆ ಹಾಗೂ ವ್ಯಕ್ತಿಗಳಿಗೆ ಎಷ್ಟು ಪ್ರಾಮುಖ್ಯವೋ ಅಷ್ಟು ಮಾತ್ರ ನೀಡಿ. ಮನೆಗೆ ಕೆಲವು ಎಲೆಕ್ಟ್ರಿಕಲ್ ವಸ್ತುಗಳನ್ನು ಖರೀದಿಸುವ ಯೋಗವಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ನಿಮ್ಮ ಲೆಕ್ಕಾಚಾರಲ್ಲಿ ತಪ್ಪಿದೆಯಾ ಎಂದು ಪದೇಪದೇ ಅನಿಸಲಿದೆ. ವಿಪರೀತ ಗಾಬರಿ, ಆತಂಕ ಸೃಷ್ಟಿ ಆಗಲಿದೆ. ಏಕೋ ಅಂದುಕೊಂಡಂತೆ ಏನೂ ಆಗುತ್ತಿಲ್ಲ ಅಂತಲೂ ಅನಿಸಲಿದೆ. ಇನ್ನೂ ಮುಂದುವರಿದು ಸಣ್ಣ ಸಮಸ್ಯೆಗೆ ಇಡೀ ದಿನ ತಲೆ ಕೆಡಿಸಿಕೊಳ್ಳುವಂತೆ ಆಗುತ್ತದೆ. ಆದರೆ ವಾಸ್ತವ ಹೇಗಿರುತ್ತದೆ, ಉಗುರಿನಲ್ಲಿ ಹೋಗುವುದಕ್ಕೆ ಕೊಡಲಿ ತೆಗೆದುಕೊಂಡರು ಎಂಬ ಮಾತಿದೆಯಲ್ಲಾ ಹಾಗೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಈಗಾಗಲೇ ಮಾಡಿದ್ದ ಹೂಡಿಕೆ ಅಥವಾ ಸೇವಿಂಗ್ಸ್ ಮುರಿಸಬೇಕಾಗಬಹುದು. ಈ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಲಿದ್ದೀರಿ. ಕಾರ್ಯಕ್ರಮ ಅಥವಾ ಸಮಾರಂಭಗಳಲ್ಲಿ ಭಾಗವಹಿಸುವ ಸಲುವಾಗಿ ಪ್ರಯಾಣ ಮಾಡಬೇಕಾಗಬಹುದು. ಇದರಿಂದ ದಣಿವು ಸಹ ಆಗಲಿದೆ. ನೀವು ಲೆಕ್ಕ ಹಾಕಿಕೊಂಡಂತೆಯೇ ಕೆಲವು ವ್ಯವಹಾರಗಳ ನಡೆಯಲಿವೆ. ಮತ್ತೆ ಬಾರದು ಎಂದುಕೊಂಡಿದ್ದ ಹಣವೊಂದು ಕೈ ಸೇರುವುದಕ್ಕೆ ಏನು ಮಾಡಬೇಕು ಎಂಬ ಮಾರ್ಗ ಗೋಚರ ಆಗಲಿದೆ.
ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 16ರ ದಿನಭವಿಷ್ಯ

ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಚಿಂತೆ ಇರುವವರು “ಓಂ ನಮೋ ಭಗವತೇ ವಾಸುದೇವಾಯ ಧನ್ವಂತರಯೇ ನಮಃ” ಮಂತ್ರವನ್ನು ಸ್ಮರಿಸಿ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಹಲವು ವಿಚಾರ- ವಿವಾದಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ಬೇಕಾದ ವೇದಿಕೆ ಸಿಗಲಿದೆ. ಈ ಹಿಂದೆ ಸಿಟ್ಟಿನಲ್ಲಿ ನೀವು ಆಡಿದ್ದ ಮಾತಿನಿಂದ ಆದ ಬೇಸರವನ್ನು ಕಡಿಮೆ ಮಾಡುವುದಕ್ಕೆ ಸರಿಯಾದ ದಿನ ಇದಾಗಿರುತ್ತದೆ. ಖರ್ಚಿನ ವಿಚಾರದಲ್ಲಿಯೂ ಉದಾರವಾಗಿ ವರ್ತಿಸಲಿದ್ದೀರಿ. ಪ್ರೀತಿಪಾತ್ರರಿಗೆ ಉಡುಗೊರೆಗಳನ್ನು ನೀಡುವ ಯೋಗ ಸಹ ಇದೆ. ರೆಸಾರ್ಟ್, ರೆಸ್ಟೋರೆಂಟ್, ಸಿನಿಮಾ ಹೀಗೆ ಮನರಂಜನೆಗಾಗಿ ಹೆಚ್ಚಿನ ಸಮಯವನ್ನು ಮೀಸಲಿಡಲಿದ್ದೀರಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಪ್ರೇಮಿಗಳಿಗೆ ಉತ್ತಮವಾದ ಸಮಯವನ್ನು ಕಳೆಯುವಂಥ ಯೋಗ ಇದೆ. ವಿದೇಶಗಳಲ್ಲಿ ಉದ್ಯೋಗ ಮಾಡುತ್ತಿರುವವರಿಗೆ ಕೆಲಸ ಬದಲಾವಣೆ ಮಾಡುವುದಕ್ಕೆ ಸ್ನೇಹಿತರ ಸಹಾಯ ದೊರೆಯಲಿದೆ. ಈ ಹಿಂದೆ ನೀವು ಪಟ್ಟ ಶ್ರಮವನ್ನು ಗುರುತಿಸಿ, ಉಡುಗೊರೆಗಳನ್ನು ನೀಡಬಹುದು. ಚಿನ್ನ- ಬೆಳ್ಳಿ ಖರೀದಿ ಮಾಡಬೇಕು ಎಂದುಕೊಂಡಿದ್ದಲ್ಲಿ ದಿನದ ಮಟ್ಟಿಗೆ ನಿರ್ಧಾರವನ್ನು ಮುಂದೆ ಹಾಕುವುದು ಉತ್ತಮ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನೀವು ಯಾರ ಜತೆಗೆ ಭಾವನಾತ್ಮಕವಾಗಿ ಬಹಳ ಹತ್ತಿರ ಆಗಿರುತ್ತೀರಿ ಅವರ ಬದುಕಿನಲ್ಲಿ ಅನಿರೀಕ್ಷಿತ ಬೆಳವಣಿಗೆಯಿಂದ ಕುಗ್ಗಿಹೋಗುವ ಸಾಧ್ಯತೆಗಳಿವೆ. ಮತ್ತು ಇದೇ ದಿನ ತಂದೆ- ತಾಯಿಯ ಆರೋಗ್ಯ ವಿಚಾರ ಚಿಂತೆಗೆ ಕಾರಣ ಆಗಲಿದೆ. ನೀವು ಯಾರನ್ನು ಭೇಟಿ ಆಗಬಾರದು, ಮಾತನಾಡಬಾರದು ಅಂದುಕೊಂಡಿರುತ್ತೀರೋ ಅಂಥ ವ್ಯಕ್ತಿ ನಿರೀಕ್ಷೆಯೇ ಮಾಡದ ರೀತಿಯಲ್ಲಿ ಎದುರಾಗಿ, ಆ ವ್ಯಕ್ತಿಯ ಮುಖಾಮುಖಿಯಿಂದಾಗಿ ಮುಜುಗರ, ಮಾನಸಿಕ ಹಿಂಸೆ ಅನುಭವಿಸಬೇಕಾಗುತ್ತದೆ.

ಲೇಖನ- ಸ್ವಾತಿ ಎನ್.ಕೆ.

Source link