Headlines

nagaraj11081993

ಹಬ್ಬಕ್ಕೆಂದು ಊರಿಗೆ ತೆರಳುವವರಿಗೆ ಗುಡ್​​ನ್ಯೂಸ್​​: ಕೆಎಸ್​​ಆರ್​​ಟಿಸಿಯಿಂದ 2,000 ಹೆಚ್ಚುವರಿ ಬಸ್​​ ವ್ಯವಸ್ಥೆ

ಬೆಂಗಳೂರು, ಮಾರ್ಚ್​​ 15: ಯುಗಾದಿ ಮತ್ತು ಈದ್-ಉಲ್-ಫಿತ್ರ್ ಹಬ್ಬಗಳ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ಊರುಗಳು ಮತ್ತು ಅಂತಾರಾಜ್ಯಗಳ ನಡುವೆ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ. ಹೀಗಾಗಿ ಹಬ್ಬಗಳ ವೇಳೆ ಪ್ರಯಾಣಿಕರಿಗೆ ಯಾವುದೇ ಅನಾನುಕೂಲತೆ ಆಗಬಾರದೆಂಬ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಈ ಸಂದರ್ಭ ರಾಜ್ಯದಾದ್ಯಂತ 2,000 ಹೆಚ್ಚುವರಿ ಬಸ್ಸುಗಳ ಸಂಚಾರಕ್ಕೆ ನಿರ್ಧರಿಸಿರೋದಾಗಿ ಪ್ರಕಟಣೆ ಮೂಲಕ KSRTC ತಿಳಿಸಿದೆ. ಯಾವೆಲ್ಲ ದಿನ ಹೆಚ್ಚುವರಿ ಬಸ್​​ ಸಂಚಾರ? pic.twitter.com/uvVtgRf7ks — KSRTC…

Read More

ತಂದೆಯಾಗುವ ಸಂತಸದಲ್ಲಿ ಸೂರ್ಯಕುಮಾರ್; ಬೇಬಿ ಶವರ್ ವಿಡಿಯೋ ವೈರಲ್

ತನ್ನ ನಾಯಕತ್ವದಲ್ಲಿ ಭಾರತ ತಂಡಕ್ಕೆ ಮೂರನೇ ಟಿ20 ವಿಶ್ವಕಪ್ ಪ್ರಶಸ್ತಿ ಗೆದ್ದುಕೊಟ್ಟ ಸಂತಸದಲ್ಲಿದ್ದ ಸೂರ್ಯಕುಮಾರ್ ಯಾದವ್ ಅವರ ಮನೆಗೆ ಪುಟ್ಟ ಕಂದಮ್ಮನ ಆಗಮನವಾಗುತ್ತಿದೆ. ಸೂರ್ಯಕುಮಾರ್ ಯಾದವ್ ಅವರ ಮಡದಿ ದೇವಿಶಾ ಶೆಟ್ಟಿ ಅವರ ಬೇಬಿ ಶವರ್ ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವಿಶಾ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಸೂರ್ಯಕುಮಾರ್ ಯಾದವ್ ಬಿಳಿ ಸೂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ದೇವಿಶಾ ಸೀರೆಯುಟ್ಟ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ….

Read More

Chanakya Niti: ಜೀವನದಲ್ಲಿ ಹಣದ ಕೊರತೆ ಎದುರಾಗಬಾರದೆಂದರೆ ಚಾಣಕ್ಯರು ಹೇಳಿರುವ ಈ ಮಾತುಗಳನ್ನು ಪಾಲಿಸಿ

ಆಚಾರ್ಯ ಚಾಣಕ್ಯರು (Acharya Chanakya)  ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಹೌದು ಶ್ರೀಮಂತಿಕೆಯನ್ನು ಗಳಿಸಲು ಏನು ಮಾಡಬೇಕು, ಯಶಸ್ಸು ಗಳಿಸುವುದು ಹೇಗೆ ಎಂಬುದರ ಬಗ್ಗೆ ಹೇಳಿದ್ದಾರೆ. ಹಣ ಗಳಿಕೆ ಮಾತ್ರವಲ್ಲದೆ ಜೀವನದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಾರದೆಂದರೆ ಏನು ಮಾಡಬೇಕು ಎಂಬುದರ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ. ಚಾಣಕ್ಯರು ಹೇಳಿರುವ ಈ ನೀತಿಪಾಠಗಳನ್ನು ನೀವು ಪಾಲಿಸಿದರೆ ಖಂಡಿತವಾಗಿಯೂ ಜೀವನದಲ್ಲಿ ಹಣದ ಕೊರತೆ ಬಾರದಂತೆ, ಆರ್ಥಿಕ ಸಂಕಷ್ಟ ಎದುರಾಗದಂತೆ ನೋಡಿಕೊಳ್ಳಬಹುದು. ಹಣದ ಕೊರತೆ ಎದುರಾಗಬಾರದೆಂದರೆ ಏನು…

Read More

ಬಾಗಲಕೋಟೆ ಉಪಚುನಾವಣೆಗೆ ಈಗಿಂದಲೇ ತಂತ್ರ, ಪ್ರತಿತಂತ್ರ ಶುರು: ಯಾರೆಲ್ಲಾ ಆಕಾಂಕ್ಷಿಗಳು ಗೊತ್ತಾ?

ಬಾಗಲಕೋಟೆ, ಮಾರ್ಚ್​​ 15: ಕರ್ನಾಟಕದಲ್ಲಿ ಸದ್ಯ ಎರಡು ಉಪಚುನಾವಣೆ ಮೇಲೆ‌ ಎಲ್ಲರ ಚಿತ್ತವಿದೆ. ಅದರಲ್ಲೊಂದು ‌ಹೆಚ್​ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ (Bagalkot By-election). ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕ ಘೋಷಣೆ ಮಾಡುತ್ತಿದ್ದಂತೆ ಇತ್ತ ಬಾಗಲಕೋಟೆ ಉಪಚುನಾವಣೆಗಾಗಿ ತಂತ್ರ ಪ್ರತಿತಂತ್ರಗಳು ಶುರುವಾಗಿವೆ. ಅದರಲ್ಲೂ ನಿನ್ನೆ ಸಿಎಂ, ಡಿಸಿಎಂ ಮಾಡಿದ ತಂತ್ರ ಬಾರಿ ಸಂಚಲನ ಸೃಷ್ಟಿ ಮಾಡಿದೆ. ಬಾಗಲಕೋಟೆ ಉಪಚುನಾವಣೆ ವಿಚಾರ ಸದ್ಯ ಕಾವೇರುತ್ತಿದೆ. ಹೆಚ್​.ವೈ.ಮೇಟಿ ನಿಧನದಿಂದ ಕ್ಷೇತ್ರ ತೆರವಾಗಿದ್ದು, ಮೇಟಿಯವರ ಕನಸಿನ ಕೂಸು…

Read More

ಚೀನಾದಲ್ಲಿ ದೊಡ್ಡ ಬದಲಾವಣೆಗೆ ಕಾರಣಾಗಿದೆ ಈ ಸಿನಿಮಾ: ಇದಲ್ಲವೆ ನಿಜವಾದ ಯಶಸ್ಸು

ಸಿನಿಮಾಗಳ ಯಶಸ್ಸನ್ನು ಬಾಕ್ಸ್ ಆಫೀಸ್​​ (Box Office) ಸಂಖ್ಯೆಯ ಮೇಲೆ ಅಳೆಯಲಾಗುತ್ತದೆ. ಸಿನಿಮಾ ಒಂದು ಬಾಕ್ಸ್ ಆಫೀಸ್​​ನಲ್ಲಿ ಗಳಿಸುವ ಹಣ ಆ ಸಿನಿಮಾದ ಯಶಸ್ಸಿನ ಮಾನದಂಡವಾಗಿದೆ. ಭಾರತದಲ್ಲಂತೂ ಈ ಬಾಕ್ಸ್ ಆಫೀಸ್ ಲೆಕ್ಕಾಚಾರ ಮಿತಿ ಮೀರಿ ಬೆಳೆದುಬಿಟ್ಟಿದೆ. ಮೊದಲೆಲ್ಲ ಸಿನಿಮಾದ ಕತೆ, ನಟನೆ ಇನ್ನಿತರೆ ಅಂಶಗಳ ಮೇಲೆ ಸಿನಿಮಾದ ಗೆಲುವು ನಿಶ್ಚಯ ಆಗುತ್ತಿತ್ತು ಆದರೆ ಈಗ ಬಾಕ್ಸ್ ಆಫೀಸ್ ಸಂಖ್ಯೆಯ ಮೇಲೆ ನಿರ್ಧಾರಿತವಾಗುತ್ತದೆ. ಆದರೆ ಇದು ನಿಜವಾದ ಯಶಸ್ಸೆ? ಖಂಡಿತ ಅಲ್ಲ. ಇತ್ತೀಚೆಗೆ ಸಿನಿಮಾ ಒಂದು ವಿಶ್ವದ…

Read More

ಊಟದ ವಿಚಾರಕ್ಕೆ ಗಲಾಟೆ: ಯುವಕನ ಬಡಿದು ಕೊಂದ ಕಿರಾತಕರು; ಆರೋಪಿಗಳು ಅರೆಸ್ಟ್​​

ಆನೇಕಲ್​​, ಮಾರ್ಚ್​​ 15: ಬೆಂಗಳೂರಿನ ಬನ್ನೇರುಘಟ್ಟ ವ್ಯಾಪ್ತಿಯಲ್ಲಿ ಮಾರ್ಚ್ 8ರಂದು ನಡೆದಿದ್ದ ಯುವಕನೊಬ್ಬನ ಕೊಲೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಪನಾಯಕನಹಳ್ಳಿ ನಿವಾಸಿ ತಿಲಕ್(23) ಅಲಿಯಾಸ್​​ ಗುಡ್ಡೆ ಎಂಬಾತನ ತಲೆ ಮೇಲೆ ಇಟ್ಟಿಗೆ ಹಾಕಿ, ದೊಣ್ಣೆಯಿಂದ ಹೊಡೆದು ಕೊಲೆ ಮಾಡಲಾಗಿತ್ತು. ಈ ಸಂಬಂಧ ಬನ್ನೇರುಘಟ್ಟ ಪೊಲೀಸರು ಕೆಂಪನಾಯಕನಹಳ್ಳಿ ವಾಸಿ ಅಜಯ್ ಕುಮಾರ್(25), ರವಿಚಂದ್ರ ನಾಯಕ್ ಅಲಿಯಾಸ್​​ ಪಾಯಿಸನ್ ರವಿ (24), ಸಂಜಯ್ ಅಲಿಯಾಸ್​​ ನಾಯಿಬಾಬಾ(26) ಮತ್ತು ಮೊಹಮ್ಮದ್ ರಜಾಕ್(24) ಎಂಬವರನ್ನು ಬಂಧಿಸಿದ್ದಾರೆ. ಕುಡಿದ ಮತ್ತಿನಲ್ಲಿ…

Read More

BAN vs PAK: ಪಾಕ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ತಂಜಿದ್ ಹಸನ್

ಬಾಂಗ್ಲಾದೇಶ ಮತ್ತು ಪಾಕಿಸ್ತಾನ ನಡುವೆ ಏಕದಿನ ಸರಣಿಯ ಮೂರನೇ ಪಂದ್ಯ ನಡೆಯುತ್ತಿದೆ. ಮಿರ್ಪುರದಲ್ಲಿ ನಡೆಯುತ್ತಿರುವ ಈ ಸರಣಿ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ಪರ ಆರಂಭಿಕ ಆಟಗಾರ ತಂಜಿದ್ ಹಸನ್ ತಮೀಮ್ ಸ್ಮರಣೀಯ ಶತಕ ಬಾರಿಸಿದ್ದಾರೆ. ಸುಮಾರು ಎರಡೂವರೆ ವರ್ಷಗಳ ಕಾಲ ಅಂತರರಾಷ್ಟ್ರೀಯ ಕ್ರಿಕೆಟ್ ಆಡಿರುವ ತಂಜಿದ್ ಯಾವುದೇ ಸ್ವರೂಪದಲ್ಲಿ ಗಳಿಸಿದ ಮೊದಲ ಶತಕ ಇದಾಗಿದೆ. ತಂಜಿದ್ ಅವರ ಶತಕದ ಇನ್ನಿಂಗ್ಸ್​ನಲ್ಲಿ 13 ಬೌಂಡರಿ ಮತ್ತು ಸಿಕ್ಸರ್‌ ಕೂಡ ಸೇರಿಸಿತ್ತು. ಸರಣಿಯ ಮೊದಲ ಪಂದ್ಯವನ್ನು…

Read More

ಆಸ್ಕರ್ 2026 ಸಮಾರಂಭ: ಎಲ್ಲಿ ವೀಕ್ಷಿಸಬಹುದು? ಭಾರತದಲ್ಲಿ ಟೆಲಿಕಾಸ್ಟ್ ಯಾವಾಗ?

ಸಿನಿಮಾ (Cinema) ಲೋಕದ ಅತ್ಯುನ್ನತ ಪ್ರಶಸ್ತಿ ಎಂದೇ ಪರಿಗಣಿಸಲ್ಪಡುವುದು ಆಸ್ಕರ್ ಅಥವಾ ಅಕಾಡೆಮಿ ಪ್ರಶಸ್ತಿ. ಈ ವರ್ಷದ ಆಸ್ಕರ್ಸ್ (Oscars 2026) ಪ್ರದಾನ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಾಲಿವುಡ್‌ನ ಲಾಸ್ ಏಂಜಲ್ಸ್​​ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆಯಲಿರುವ ಈ ವರ್ಣರಂಜಿತ ಕಾರ್ಯಕ್ರಮವನ್ನು ಕಣ್ಣುಂಬಿಕೊಳ್ಳಲು ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ಭಾರತೀಯ ಸಿನಿಮಾ ಪ್ರೇಮಿಗಳಿಗೂ ಸಹ ಆಸ್ಕರ್​ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ ಆಸ್ಕರ್ಸ್ ಅನ್ನು ಭಾರತೀಯರು ಎಲ್ಲಿ ನೋಡಬಹುದು? ಯಾವ ಸಮಯಕ್ಕೆ ನೋಡಬಹುದು? ಮಾಹಿತಿ ಇಲ್ಲಿದೆ… ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ…

Read More

ಬೀದರ್‌ನ ಅಷ್ಟೂರು ಜಾತ್ರೆ ಹಿಂದೂ-ಮುಸ್ಲಿಮರ ಭಾವೈಕ್ಯತೆಯ ಸಂಕೇತ: ಜಾತ್ರೆಯ ವಿಶೇಷತೆ ತಿಳಿಯಿರಿ

ಬೀದರ್​​, ಮಾರ್ಚ್​​ 15: ಹಿಂದೂ-ಮುಸ್ಲಿಂ ಧಾರ್ಮಿಕ ಸಾಮರಸ್ಯದ ಸಂಕೇತವಾದ ಬೀದರ್​​​ ಅಷ್ಟೂರು ಜಾತ್ರೆ (Astur Jatre) ಅದ್ಧೂರಿಯಾಗಿ ನಡೆಯುತ್ತಿದೆ. ಹಿಂದೂ-ಮುಸ್ಲಿಂ ಭೇದ ಭಾವ ಮರೆತು ಶತಮಾನಗಳಿಂದ ವಿಜೃಂಭಣೆಯಿಂದ ಹಿಂದೂಗಳು ಅಲ್ಲಮಪ್ರಭು ಎಂದು ಮುಸ್ಲಿಂರು ಅಹೆಮದ್ ಶಾ ವಲಿ ಎಂದು ಪೂಜಿಸುತ್ತಾರೆ. ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಗೆ ಜನಸಾಗರವೆ ಹರಿದು ಬರುತ್ತದೆ. ದೇವನೂಬ್ಬ ನಾಮ ಹಲವು ಎಂಬಂತೆ ಬೀದರ್ ನಗರಕ್ಕೆ ಸಮೀಪದ ಅಷ್ಟೂರ ಗ್ರಾಮದ ಅಹ್ಮದ ಶಾ ಅಲಿ ವಲಿ ಬಹಮನಿ ದರ್ಗಾದ ಗುಂಬಜ್‌ಗಳು ಹಿಂದೂ ಹಾಗೂ ಮುಸ್ಲಿಂ…

Read More

IPL 2026: ಐಪಿಎಲ್‌ನಲ್ಲಿ ವಿಶೇಷ ತ್ರಿಶತಕದ ಹೊಸ್ತಿಲಿನಲ್ಲಿ ಕಿಂಗ್ ಕೊಹ್ಲಿ

2026 ರ ಐಪಿಎಲ್ ಇದೇ ಮಾರ್ಚ್ 28 ರಿಂದ ಆರಂಭವಾಗಲಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ಈ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಈ ಪಂದ್ಯದ ಇನ್ನೊಂದು ಹೈಲೈಟ್ಸ್ ಅಂದರೆ ಕ್ರಿಕೆಟ್ ಅಭಿಮಾನಿಗಳ ಆರಾಧ್ಯ ದೈವ ಮತ್ತೊಮ್ಮೆ ಅಭಿಮಾನಿಗಳನ್ನು ರಂಜಿಸಲು ಕ್ರಿಕೆಟ್ ಅಂಗಳಕ್ಕೆ ಇಳಿಯಲಿದ್ದಾರೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ ಈ ಸ್ವರೂಪದಲ್ಲಿ ಐಪಿಎಲ್ ಮಾತ್ರ ಆಡುತ್ತಿದ್ದಾರೆ. ಹೀಗಾಗಿ ಚುಟುಕು ಮಾದರಿಯಲ್ಲಿ ಕಿಂಗ್ ಕೊಹ್ಲಿಯ ಹೊಡಿಬಡಿ ಆಟವನ್ನು ನೋಡಲು…

Read More