All posts by nagaraj11081993

ತಾವು ‘ಹೀರೋ’ ಆದ ಕತೆ ಹೇಳಿದ ಟಿಎನ್ ಸೀತಾರಾಮ್: ವಿಡಿಯೋ ನೋಡಿ

ತಾವು ‘ಹೀರೋ’ ಆದ ಕತೆ ಹೇಳಿದ ಟಿಎನ್ ಸೀತಾರಾಮ್: ವಿಡಿಯೋ ನೋಡಿ

ಟಿಎನ್ ಸೀತಾರಾಮ್ (TN Seetharam) ಅವರು ಜನಪ್ರಿಯ ಧಾರಾವಾಹಿ ನಿರ್ದೇಶಕರು ಮಾತ್ರವಲ್ಲದೆ ನಟರೂ ಸಹ ಹೌದು. ಕೆಲ ಸಿನಿಮಾಗಳನ್ನು ಸಹ ಅವರು ನಿರ್ದೇಶನ ಮಾಡಿದ್ದಾರೆ. ಆದರೆ ದಶಕಗಳ ಹಿಂದೆ ಅವರು ನಾಯಕನಾಗಿಯೂ ಸಹ ನಟಿಸಿದ್ದರು. ಸೀತಾರಾಮ್ ಅವರ ಗುರುಗಳಾದ ಪಿ ಲಂಕೇಶ್ ಅವರೇ ನಿರ್ದೇಶಿಸಿದ್ದ ಸಿನಿಮಾ ಅದಾಗಿತ್ತು. ಲಂಕೇಶರು ನಿರ್ದೇಶಿಸಿದ್ದ ‘ಪಲ್ಲವಿ’ ಸಿನಿಮಾನಲ್ಲಿ ತಾವು ನಾಯಕ ಆಗಿದ್ದು ಹೇಗೆ? ಲಂಕೇಶ್ ಅವರು ತಮ್ಮನ್ನು ನಾಯಕನನ್ನಾಗಿ ಆಯ್ಕೆ ಮಾಡಿದ್ದು ಹೇಗೆ? ಎಂದು ಟಿಎನ್ ಸೀತಾರಾಮ್ ಅವರು ವಿವರಿಸಿದ್ದಾರೆ. ಅದರ ಜೊತೆಗೆ ಲಂಕೇಶ್ ಅವರೊಟ್ಟಿಗಿನ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹೊಸ ಪ್ರೇಯಸಿಗಾಗಿ 10 ಕೋಟಿ ಬೆಲೆಯ ಕಾರು ಖರೀದಿಸಿದ ಹಾರ್ದಿಕ್ ಪಾಂಡ್ಯ

2026 ರ ಟಿ20 ವಿಶ್ವಕಪ್ ಗೆದ್ದು, ಪ್ರಸ್ತುತ ವಿಶ್ರಾಂತಿ ಮೂಡ್​ನಲ್ಲಿರುವ ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ದುಬಾರಿ ಬೆಲೆಯ ಐಷಾರಾಮಿ ಕಾರನ್ನು ಖರೀದಿ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ತಮ್ಮ ಪ್ರೇಯಸಿಯೊಂದಿಗೆ ಹೊಸ ಕಾರನ್ನು ಚಾಲನೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಹೊಸ ಕಾರಿನ ಬೆಲೆ 10 ಕೋಟಿ ಗೂ. ಅಧಿಕ ಎಂದು ವರದಿಯಾಗಿದೆ.

ಹಾರ್ದಿಕ್ ಪಾಂಡ್ಯ ಫೆರಾರಿ 12 ಸಿಲಿಂಡ್ರಿ ಎಂಬ ಐಷಾರಾಮಿ ಸ್ಪೋರ್ಟ್ಸ್ ಕಾರನ್ನು ಖರೀದಿಸಿದ್ದಾರೆ. ಭಾರತದಲ್ಲಿ ಇದರ ಆನ್​- ರೋಡ್ ಬೆಲೆ 10 ಕೋಟಿ ರೂ. ಎಂದು ಹೇಳಲಾಗುತ್ತದೆ. ಈ ಕಾರು ಕಪ್ಪು ಬಣ್ಣದ್ದಾಗಿದ್ದು, V12 ಎಂಜಿನ್, ಮತ್ತು ಅತ್ಯಾಧುನಿಕ ತಂತ್ರಜ್ಞಾನ ಹೊಂದಿದೆ. ವೈರಲ್ ಆಗಿರುವ ವೀಡಿಯೊದಲ್ಲಿ, ಹಾರ್ದಿಕ್ ಈ ಹೊಸ ಕಾರನ್ನು ಚಲಾಯಿಸುತ್ತಿದ್ದು, ಅವರ ಪಕ್ಕದಲ್ಲಿ ಮಹಿಕಾ ಶರ್ಮಾ ಇರುವುದನ್ನು ಕಾಣಬಹುದು.

ಹಾರ್ದಿಕ್ ಪಾಂಡ್ಯಗೆ ಕಾರಿನ ವ್ಯಾಮೋಹ ಹೆಚ್ಚು. ಅವರ ಬಳಿ ರೋಲ್ಸ್ ರಾಯ್ಸ್ ಫ್ಯಾಂಟಮ್, ಆಡಿ A6, ರೇಂಜ್ ರೋವರ್ ವೋಗ್, ಲಂಬೋರ್ಘಿನಿ ಉರಸ್ SE, ಮತ್ತು ಮರ್ಸಿಡಿಸ್-ಬೆನ್ಜ್ ಸೇರಿದಂತೆ ಹಲವು ದುಬಾರಿ ಬೆಲೆಯ ಐಷರಾಮಿ ಕಾರುಗಳಿವೆ. ಇತ್ತೀಚೆಗೆ, ಅವರು ತಮ್ಮ ಮಗ ಅಗಸ್ತ್ಯನಿಗೆ ಲ್ಯಾಂಡ್ ರೋವರ್ ಡಿಫೆಂಡರ್ ಕಾರನ್ನು ಉಡುಗೊರೆಯಾಗಿ ನೀಡಿದ್ದರು, ಇದರ ಬೆಲೆ ಸುಮಾರು 4 ಕೋಟಿ ರೂ. ಎಂದು ವರದಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಡ್ವಾನ್ಸ್ ಬುಕಿಂಗ್​​ನಲ್ಲಿಯೇ ನೂರು ಕೋಟಿ ಗಳಿಕೆ ದಾಟಿದ ‘ಧುರಂಧರ್ 2’

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾಕ್ಕಿಂತಲೂ ಭಾರಿ ದೊಡ್ಡ ಯಶಸ್ಸನ್ನು ‘ಧುರಂಧರ್ 2’ ಗಳಿಸಲಿರುವುದು ಬಹುತೇಕ ಖಾತ್ರಿ ಆಗಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿ ಕೆಲವೇ ದಿನಗಳಾಗಿದ್ದು ಅಷ್ಟರಲ್ಲೇ ಈ ಸಿನಿಮಾ ಕೇವಲ ಮುಂಗಡ ಬುಕಿಂಗ್ ನಿಂದಲೇ 100 ಕೋಟಿ ಗಳಿಕೆ ದಾಟಿದೆ. ಅಲ್ಲಿಗೆ ಸಿನಿಮಾ ಬಿಡುಗಡೆ ಆದ ಬಳಿಕ ಸಿನಿಮಾದ ಕಲೆಕ್ಷನ್ ಹಳೆಯ ದಾಖಲೆಗಳನ್ನೆಲ್ಲ ಪುಡಿಗಟ್ಟುವುದು ಖಾತ್ರಿಯೇ ಆಗಿದೆ.

‘ಧುರಂಧರ್ 2’ ಸಿನಿಮಾದ ಟ್ರೈಲರ್ ಮಾರ್ಚ್ 7ರಂದು ಬಿಡುಗಡೆ ಆಗಿತ್ತು. ಅದೇ ದಿನ ಸಿನಿಮಾದ ಪ್ರೀಮಿಯರ್ ಶೋಗೆ ಅಡ್ವಾನ್ಸ್ ಬುಕಿಂಗ್ ಆರಂಭವಾಗಿತ್ತು. ಅದಾದ ಕೆಲವು ದಿನಗಳ ಬಳಿಕ ಸಿನಿಮಾದ ಇತರೆ ಶೋಗಳಿಗೆ ಅಂದರೆ ರಿಲೀಸ್ ಡೇಟ್​ ಮತ್ತು ಅದರ ಬಳಿಕದ ಮೂರ್ನಾಲ್ಕು ದಿನಗಳ ಶೋಗಳಿಗೆ ಅಡ್ವಾನ್ಸ್ ಬುಕಿಂಗ್ ಓಪನ್ ಆಯ್ತು. ಇದೀಗ ಎಲ್ಲ ಅಡ್ವಾನ್ಸ್ ಬುಕಿಂಗ್ ಸೇರಿ ‘ಧುರಂಧರ್ 2’ ಸಿನಿಮಾದ ಗಳಿಕೆ 100 ಕೋಟಿಯನ್ನು ದಾಟಿಬಿಟ್ಟಿದೆ.

ವರದಿಗಳ ಪ್ರಕಾರ, ಪೇಯ್ಡ್ ಪ್ರೀಮಿಯರ್ ಮತ್ತು ಸಿನಿಮಾ ಬಿಡುಗಡೆ ದಿನದ (ಮಾರ್ಚ್ 19) ಶೋಗಳ ಗಳಿಕೆಯಿಂದಲೇ ಸಿನಿಮಾ 100 ಕೋಟಿಗೂ ಹೆಚ್ಚು ಗಳಿಕೆ ಮಾಡಿದೆ. ಇದರಲ್ಲಿ 44 ಕೋಟಿಗೂ ಹೆಚ್ಚಿನ ಮೊತ್ತ ಭಾರತದ ಮುಂಗಡ ಬುಕಿಂಗ್​​ಗಳಿಂದ ಬಂದರೆ ಉಳಿಕೆ ಮೊತ್ತ ಬಂದಿರುವುದು ಓವರ್​​ಸೀಸ್​ ಅಥವಾ ವಿದೇಶಗಳಿಂದ. ಸಿನಿಮಾಕ್ಕೆ ಭಾರಿ ನಿರೀಕ್ಷೆ ಇದ್ದು, ಟಿಕೆಟ್ ದರ ಹೆಚ್ಚಿದ್ದರೂ ಸಹ ಜನ ಮುಗಿಬಿದ್ದು ಟಿಕೆಟ್​ ಖರೀದಿ ಮಾಡುತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ಸಿನಿಮಾ ಬ್ಯಾನ್ ಆಗಿದ್ದರೂ, ಕೆಲ ರಾಷ್ಟ್ರಗಳಲ್ಲಿ ಯುದ್ಧ ಪರಿಸ್ಥಿತಿ ಇದ್ದರೂ ಸಹ ಜನ ಮುಗಿಬಿದ್ದು ಸಿನಿಮಾ ನೋಡಲು ಮುಂದಾಗಿದ್ದಾರೆ.

ಇದನ್ನೂ ಓದಿ:ಕ್ರಿಕೆಟರ್ ಆಗಬೇಕಿದ್ದ ‘ಧುರಂಧರ್’ ನಿರ್ದೇಶಕ ಆದಿತ್ಯ ಸಿನಿಮಾ ರಂಗಕ್ಕೆ ಬಂದಿದ್ದು ಹೇಗೆ?

‘ಧುರಂಧರ್ 2’ ಸಿನಿಮಾದ ಪೇಯ್ಡ್ ಪ್ರೀಮಿಯರ್ ಶೋಗಳು ಮಾರ್ಚ್ 18ರ ಸಂಜೆಯಿಂದಲೇ ಪ್ರದರ್ಶನ ಆರಂಭಿಸಲಿವೆ. ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಪೇಯ್ಡ್ ಪ್ರೀಮಿಯರ್​​ ಟಿಕೆಟ್ ಬೆಲೆಗಳನ್ನು ಏರಿಕೆ ಮಾಡಲಾಗಿದ್ದು, ಇದರಿಂದಲೇ ದೊಡ್ಡ ಮೊತ್ತವನ್ನು ಚಿತ್ರತಂಡ ಬಾಚಿಕೊಳ್ಳಲಿದೆ. ಇನ್ನು ಮಾರ್ಚ್ 19ರ ರಿಲೀಸ್​​ಗೂ ಸಹ ಟಿಕೆಟ್ ದರಗಳು ಕಡಿಮೆ ಏನಿಲ್ಲ. ಸಿನಿಮಾದಲ್ಲಿ ರಣ್ವೀರ್ ಸಿಂಗ್, ಅಕ್ಷಯ್ ಖನ್ನಾ, ಸಂಜಯ್ ದತ್, ಅರ್ಜುನ್ ರಾಮ್​​ಪಾಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಆದಿತ್ಯ ಧರ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಭೀಕರ ಅಪಘಾತದಲ್ಲಿ ಮೂವರು SIಗಳು ಸಾವು: ದುರಂತದ ಬಗ್ಗೆ SP ಹೇಳಿದ್ದಿಷ್ಟು

ಚಿತ್ರದುರ್ಗ, ಮಾರ್ಚ್​​ 15: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ರಾಷ್ಟ್ರೀಯ ಹೆದ್ದಾರಿ 150A ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್​ಇನ್ಸ್​ಪೆಕ್ಟರ್​ಗಳು (ಆರ್​ಎಸ್​ಐ) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಿಖರ ಕಾರಣದ ಬಗ್ಗೆ ಐಮಂಗಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ದುರಂತದ ಬಗ್ಗೆ ಚಿತ್ರದುರ್ಗ ಎಸ್​​ಪಿ ರಂಜಿತ್ ಕುಮಾರ್ ಬಂಡಾರು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು ಹೀಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಹಬ್ಬಕ್ಕೆಂದು ಊರಿಗೆ ತೆರಳುವವರಿಗೆ ಗುಡ್​​ನ್ಯೂಸ್​​: ಕೆಎಸ್​​ಆರ್​​ಟಿಸಿಯಿಂದ 2,000 ಹೆಚ್ಚುವರಿ ಬಸ್​​ ವ್ಯವಸ್ಥೆ

ಬೆಂಗಳೂರು, ಮಾರ್ಚ್​​ 15: ಯುಗಾದಿ ಮತ್ತು ಈದ್-ಉಲ್-ಫಿತ್ರ್ ಹಬ್ಬಗಳ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ಊರುಗಳು ಮತ್ತು ಅಂತಾರಾಜ್ಯಗಳ ನಡುವೆ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ. ಹೀಗಾಗಿ ಹಬ್ಬಗಳ ವೇಳೆ ಪ್ರಯಾಣಿಕರಿಗೆ ಯಾವುದೇ ಅನಾನುಕೂಲತೆ ಆಗಬಾರದೆಂಬ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಈ ಸಂದರ್ಭ ರಾಜ್ಯದಾದ್ಯಂತ 2,000 ಹೆಚ್ಚುವರಿ ಬಸ್ಸುಗಳ ಸಂಚಾರಕ್ಕೆ ನಿರ್ಧರಿಸಿರೋದಾಗಿ ಪ್ರಕಟಣೆ ಮೂಲಕ KSRTC ತಿಳಿಸಿದೆ.

ಯಾವೆಲ್ಲ ದಿನ ಹೆಚ್ಚುವರಿ ಬಸ್​​ ಸಂಚಾರ?

ಸಾರಿಗೆ ನಿಗಮದ ಮಾಹಿತಿ ಪ್ರಕಾರ, ಮಾರ್ಚ್ 19ರಂದು ಯುಗಾದಿ ಹಾಗೂ ಮಾರ್ಚ್ 21ರಂದು ಈದ್-ಉಲ್-ಫಿತ್ರ್ ಹಬ್ಬಗಳಿರುವ ಹಿನ್ನೆಲೆಯಲ್ಲಿ ಮಾರ್ಚ್ 18, 19 ಮತ್ತು 20ರಂದು ವಿಶೇಷ ಬಸ್ ಸೇವೆಗಳು ಇರಲಿವೆ. ಇದೇ ವೇಳೆ ವಿವಿಧ ರಾಜ್ಯ ಮತ್ತು ಅಂತಾರಾಜ್ಯಗಳಿಂದ ಮಾರ್ಚ್ 22ರಂದು ಬೆಂಗಳೂರಿಗೆ ಹಿಂದಿರುಗಲೂ ಈ ವಿಶೇಷ ಬಸ್ ಸೇವೆಗಳು ಇರಲಿವೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ ಮತ್ತು ಬಳ್ಳಾರಿ ಸೇರಿದಂತೆ ಹಲವು ಪ್ರಮುಖ ಸ್ಥಳಗಳಿಗೆ ವಿಶೇಷ ಬಸ್ಸುಗಳು ಸಂಚರಿಸಲಿವೆ. ಇದಲ್ಲದೆ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಕುಶಾಲನಗರ ಹಾಗೂ ಮಡಿಕೇರಿ ಕಡೆಗೂ ಹೆಚ್ಚುವರಿ ಬಸ್ ಸೇವೆಗಳು ಲಭ್ಯವಿರಲಿವೆ. ಪ್ರಯಾಣಿಕರು KSRTC ವೆಬ್‌ಸೈಟ್ ಹಾಗೂ ಕರ್ನಾಟಕ ಮತ್ತು ನೆರೆ ರಾಜ್ಯಗಳಲ್ಲಿನ ರಿಸರ್ವೇಶನ್ ಕೌಂಟರ್‌ಗಳ ಮೂಲಕ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಬಹುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ

ವಿಶೇಷ ರಿಯಾಯಿತಿ

ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಮಂದಿ ಒಟ್ಟಿಗೆ ಟಿಕೆಟ್ ಬುಕ್ ಮಾಡಿದರೆ ಶೇ.5 ರಿಯಾಯಿತಿ ಹಾಗೂ ಹೋಗಿ-ಬರುವ (ರಿಟರ್ನ್) ಪ್ರಯಾಣದ ಟಿಕೆಟ್ ಒಂದೇ ವೇಳೆ ಬುಕ್ ಮಾಡಿದರೆ ಶೇ. 10ರಷ್ಟು ರಿಯಾಯಿತಿಯನ್ನು ಪ್ರಯಾಣಿಕರಿಗೆ ನೀಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ತಂದೆಯಾಗುವ ಸಂತಸದಲ್ಲಿ ಸೂರ್ಯಕುಮಾರ್; ಬೇಬಿ ಶವರ್ ವಿಡಿಯೋ ವೈರಲ್

ತನ್ನ ನಾಯಕತ್ವದಲ್ಲಿ ಭಾರತ ತಂಡಕ್ಕೆ ಮೂರನೇ ಟಿ20 ವಿಶ್ವಕಪ್ ಪ್ರಶಸ್ತಿ ಗೆದ್ದುಕೊಟ್ಟ ಸಂತಸದಲ್ಲಿದ್ದ ಸೂರ್ಯಕುಮಾರ್ ಯಾದವ್ ಅವರ ಮನೆಗೆ ಪುಟ್ಟ ಕಂದಮ್ಮನ ಆಗಮನವಾಗುತ್ತಿದೆ. ಸೂರ್ಯಕುಮಾರ್ ಯಾದವ್ ಅವರ ಮಡದಿ ದೇವಿಶಾ ಶೆಟ್ಟಿ ಅವರ ಬೇಬಿ ಶವರ್ ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವಿಶಾ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಸೂರ್ಯಕುಮಾರ್ ಯಾದವ್ ಬಿಳಿ ಸೂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ದೇವಿಶಾ ಸೀರೆಯುಟ್ಟ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಮಯದಲ್ಲಿ ಸೂರ್ಯಕುಮಾರ್ ಯಾದವ್ ತಮ್ಮ ಪತ್ನಿ ದೇವಿಶಾ ಶೆಟ್ಟಿಯ ಕೈ ಹಿಡಿದು ಒಳಗೆ ಪ್ರವೇಶಿಸುತ್ತಿರುವುದು ಕಾಣಬಹುದು.

ಸೂರ್ಯಕುಮಾರ್ ಯಾದವ್ ಮತ್ತು ದೇವಿಶಾ ಶೆಟ್ಟಿ ಮೊದಲು ಭೇಟಿಯಾದದ್ದು ಕಾಲೇಜಿನಲ್ಲಿ. ಆ ನಂತರ ಸ್ನೇಹ ಪ್ರೇಮಕ್ಕೆ ತಿರುಗಿ, ಸೂರ್ಯಕುಮಾರ್ ದೇವಿಶಾ ಅವರಿಗೆ ಪ್ರಪೋಸ್ ಮಾಡಿದರು. ಹಲವು ವರ್ಷಗಳ ಕಾಲ ಡೇಟಿಂಗ್ ಮಾಡಿದ ನಂತರ, ಇಬ್ಬರೂ 2016 ರಲ್ಲಿ ವಿವಾಹವಾದರು. ದೇವಿಶಾ ಶೆಟ್ಟಿ ಕರ್ನಾಟಕದ ಉಡುಪಿ ಮೂಲದವರು. ಕಾಪು ಮಾರಿಕಾಂಬೆಯ ಪರಮಭಕ್ತರಾಗಿರುವ ಈ ಜೋಡಿ ಆಗಾಗ್ಗೆ ಈ ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Chanakya Niti: ಜೀವನದಲ್ಲಿ ಹಣದ ಕೊರತೆ ಎದುರಾಗಬಾರದೆಂದರೆ ಚಾಣಕ್ಯರು ಹೇಳಿರುವ ಈ ಮಾತುಗಳನ್ನು ಪಾಲಿಸಿ

ಆಚಾರ್ಯ ಚಾಣಕ್ಯರು (Acharya Chanakya)  ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಹೌದು ಶ್ರೀಮಂತಿಕೆಯನ್ನು ಗಳಿಸಲು ಏನು ಮಾಡಬೇಕು, ಯಶಸ್ಸು ಗಳಿಸುವುದು ಹೇಗೆ ಎಂಬುದರ ಬಗ್ಗೆ ಹೇಳಿದ್ದಾರೆ. ಹಣ ಗಳಿಕೆ ಮಾತ್ರವಲ್ಲದೆ ಜೀವನದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಾರದೆಂದರೆ ಏನು ಮಾಡಬೇಕು ಎಂಬುದರ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ. ಚಾಣಕ್ಯರು ಹೇಳಿರುವ ಈ ನೀತಿಪಾಠಗಳನ್ನು ನೀವು ಪಾಲಿಸಿದರೆ ಖಂಡಿತವಾಗಿಯೂ ಜೀವನದಲ್ಲಿ ಹಣದ ಕೊರತೆ ಬಾರದಂತೆ, ಆರ್ಥಿಕ ಸಂಕಷ್ಟ ಎದುರಾಗದಂತೆ ನೋಡಿಕೊಳ್ಳಬಹುದು.

ಹಣದ ಕೊರತೆ ಎದುರಾಗಬಾರದೆಂದರೆ ಏನು ಮಾಡಬೇಕು?

ಹಣ ಗಳಿಕೆಯ ಮಾರ್ಗ ಪ್ರಾಮಾಣಿಕವಾಗಿರಲಿ: ಅನ್ಯಾಯದ ಮಾರ್ಗ, ವಂಚನೆ ಅಥವಾ ಇತರರಿಗೆ ನೋವು ಕೊಟ್ಟು ಗಳಿಸಿದ ಹಣ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಚಾಣಕ್ಯ ಹೇಳುತ್ತಾರೆ. ಅಂತಹ ಸಂಪತ್ತು ವ್ಯಕ್ತಿಯನ್ನು ತೊಂದರೆಗೆ ಸಿಲುಕಿಸಬಹುದು. ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆಯಿಂದ ಗಳಿಸಿದ ಹಣ ಮಾತ್ರ ಮನೆಗೆ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.

ಕೆಟ್ಟ ಸಮಯಕ್ಕಾಗಿ ಹಣವನ್ನು ಉಳಿಸಿ: ಸಂಕಷ್ಟಗಳು ಯಾವ ಸಂದರ್ಭದಲ್ಲಿ ಬರುತ್ತದೆಂದು ಹೇಳಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಭವಿಷ್ಯಕ್ಕಾಗಿ ಮತ್ತು ತುರ್ತು ಸಂದರ್ಭಗಳಿಗಾಗಿ ಆದಾಯದ ಸ್ವಲ್ಪ ಭಾಗವನ್ನು ಉಳಿಸಬೇಕು. ಗಳಿಸಿದ ಎಲ್ಲಾ ಹಣವನ್ನು  ಖರ್ಚು ಮಾಡುವ ವ್ಯಕ್ತಿಯು ತೀರಾ ಆರ್ಥಿಕ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ.  ಹಾಗಾಗಿ ಯಾವಾಗಲೂ ಸಂಪಾದನೆಯ ಒಂದು ಭಾಗವನ್ನು ಕಷ್ಟದ ಸಂದರ್ಭಗಳಿಗಾಗಿ ಉಳಿಸಿ.

ನಿಮ್ಮ ಯೋಜನೆಗಳನ್ನು ಯಾರಿಗೂ ಹೇಳಬೇಡಿ: ನೀವು ಹೊಸ ಉದ್ಯಮವನ್ನು ಪ್ರಾರಂಭಿಸುವ ಯೋಜನೆಯಲ್ಲಿದ್ದರೆ  ಅಥವಾ ಹಣ ಹೂಡಿಕೆ ಮಾಡಲು ಹೊರಟಿದ್ದರೆ, ಅದರ ಬಗ್ಗೆ ಎಲ್ಲರಿಗೂ ಹೇಳಬೇಡಿ. ನಿಮ್ಮ ಯೋಜನೆಗಳನ್ನು ರಹಸ್ಯವಾಗಿಡುವುದರಿಂದ ಎದುರಾಗುವ ಎಲ್ಲಾ ರೀತಿಯ ಅಪಾಯಗಳನ್ನು ತಡೆ ಹಿಡಯಬಹುದು ಮತ್ತು ಇದರಿಂದ ಆರ್ಥಿಕ ತೊಂದರೆಗಳೂ ಎದುರಾಗುವುದಿಲ್ಲ.

ಇದನ್ನೂ ಓದಿ: ಜೀವನದಲ್ಲಿ ಸಂತೋಷವಾಗಿರಬೇಕೆಂದರೆ ಚಾಣಕ್ಯರ ತತ್ವಗಳನ್ನು ಅನುಸರಿಸಿ

ಹಣ ಮತ್ತು ದಾನದ ಸರಿಯಾದ ಬಳಕೆ:  ಗಳಿಸಿದ ಹಣವನ್ನು ಕೂಡಿಟ್ಟರೆ ಅದರ ಮೌಲ್ಯ ಕಡಿಮೆಯಾಗುತ್ತದೆ. ಹಾಗಾಗಿ  ಹಣವನ್ನು ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಲು ಕಲಿಯಬೇಕು. ಇದರಿಂದ ಗಳಿಸಿದ ಹಣವು ದುಪ್ಪಟ್ಟಾಗುತ್ತದೆ. ಮತ್ತು ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಸಹಾಯ ಮಾಡಿ, ನಿಮ್ಮ ಸಾಮರ್ಥ್ಯಕ್ಕೂ ಮೀರಿ ಯಾರಿಗೂ ದಾನ ಮಾಡಬೇಡಿ ಇದರಿಂದ ಆರ್ಥಿಕ ಸಂಕಷ್ಟ ಎದುರಾಗಬಹುದು ಎಂದು ಚಾಣಕ್ಯರು ಹೇಳಿದ್ದಾರೆ.

ಸೋಮಾರಿತನ ಬಿಟ್ಟು ಕಷ್ಟಪಟ್ಟು ಕೆಲಸ ಮಾಡಿ: ಇಂದಿನ ಕೆಲಸಗಳನ್ನು ನಾಳೆಗೆ ಮುಂದೂಡುವ ಸೋಮಾರಿ ವ್ಯಕ್ತಿಯ ಬಳಿ ಎಂದಿಗೂ ಹಣ ಉಳಿಯುವುದಿಲ್ಲ. ಯಶಸ್ಸು ಮತ್ತು ಸಂಪತ್ತಿಗೆ ಶಿಸ್ತು ಮತ್ತು ಕಠಿಣ ಪರಿಶ್ರಮ ಅತ್ಯಗತ್ಯ. ಹಾಗಾಗಿ ಕಷ್ಟಪಟ್ಟು ಕೆಲಸ ಮಾಡುವ ಅಭ್ಯಾಸ ಬೆಳೆಸಿಕೊಳ್ಳಿ. ಇದರಿಂದ ನೀವು ಆರ್ಥಿಕವಾಗಿ ಸ್ಥಿತಿವಂತತರಾಗುತ್ತೀರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಾಗಲಕೋಟೆ ಉಪಚುನಾವಣೆಗೆ ಈಗಿಂದಲೇ ತಂತ್ರ, ಪ್ರತಿತಂತ್ರ ಶುರು: ಯಾರೆಲ್ಲಾ ಆಕಾಂಕ್ಷಿಗಳು ಗೊತ್ತಾ?

ಬಾಗಲಕೋಟೆ, ಮಾರ್ಚ್​​ 15: ಕರ್ನಾಟಕದಲ್ಲಿ ಸದ್ಯ ಎರಡು ಉಪಚುನಾವಣೆ ಮೇಲೆ‌ ಎಲ್ಲರ ಚಿತ್ತವಿದೆ. ಅದರಲ್ಲೊಂದು ‌ಹೆಚ್​ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ (Bagalkot By-election). ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕ ಘೋಷಣೆ ಮಾಡುತ್ತಿದ್ದಂತೆ ಇತ್ತ ಬಾಗಲಕೋಟೆ ಉಪಚುನಾವಣೆಗಾಗಿ ತಂತ್ರ ಪ್ರತಿತಂತ್ರಗಳು ಶುರುವಾಗಿವೆ. ಅದರಲ್ಲೂ ನಿನ್ನೆ ಸಿಎಂ, ಡಿಸಿಎಂ ಮಾಡಿದ ತಂತ್ರ ಬಾರಿ ಸಂಚಲನ ಸೃಷ್ಟಿ ಮಾಡಿದೆ.

ಬಾಗಲಕೋಟೆ ಉಪಚುನಾವಣೆ ವಿಚಾರ ಸದ್ಯ ಕಾವೇರುತ್ತಿದೆ. ಹೆಚ್​.ವೈ.ಮೇಟಿ ನಿಧನದಿಂದ ಕ್ಷೇತ್ರ ತೆರವಾಗಿದ್ದು, ಮೇಟಿಯವರ ಕನಸಿನ ಕೂಸು ಸರಕಾರಿ ಮೆಡಿಕಲ್ ಕಾಲೇಜು ಕಟ್ಟಡಕ್ಕೆ ನಿನ್ನೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಉಪಚುನಾವಣೆ ಸಮೀಪದಲ್ಲಿ ಮಾಡಿದ ಕಾರ್ಯದ ಹಿಂದೆ ಲಾಭದ ಉದ್ದೇಶ ಅಡಗಿದೆ ಎಂದು ಬಿಂಬಿಸಲಾಗುತ್ತಿದೆ. ಅದರಲ್ಲೂ ಸಿಎಂ, ಡಿಸಿಎಂ ಬಿಜೆಪಿಗೆ ಚೆಕ್ ಮೇಟ್ ಕೊಟ್ಟಿದ್ದಾರೆ.

ಬಿಜೆಪಿ ಸಂಭಾವ್ಯ ಅಭ್ಯರ್ಥಿ ಮನೆಗೆ ಸಿಎಂ, ಡಿಸಿಎಂ ಭೇಟಿ 

ಬಿಜೆಪಿ ಸಂಭಾವ್ಯ ಅಭ್ಯರ್ಥಿ ವೀರಣ್ಣ ಚರಂತಿಮಠ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರ ಮನೆಗೆ ಸಿಎಂ, ಡಿಸಿಎಂ ಭೇಟಿ ನೀಡಿ ಚಹಾ ಕುಡಿದಿದ್ದಾರೆ. ಇದು ಉಪಚುನಾವಣೆ ಹೊತ್ತಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಕೇವಲ ಕುಶಲೋಪರಿ ಮಾತ್ರ ಎಂದು ಹೇಳಿರುವ ಮಲ್ಲಿಕಾರ್ಜುನ ಚರಂತಿಮಠ, ಚರ್ಚೆಯ ಗುಟ್ಟು ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ: ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಮಹೂರ್ತ ಫಿಕ್ಸ್​​: ಮತದಾನ, ಫಲಿತಾಂಶ ಯಾವಾಗ?; ಇಲ್ಲಿದೆ ಮಾಹಿತಿ

ಇನ್ನೊಂದು ಕಡೆ ಈಗಾಗಲೇ ಕೇಂದ್ರ ಚುನಾವಣಾ ಆಯೋಗದಿಂದ ಬಾಗಲಕೋಟೆ ಉಪಚುನಾವಣೆಗೆ ಏಪ್ರಿಲ್ 9ರಂದು ದಿನಾಂಕ ಫಿಕ್ಸ್ ಆಗಿದೆ. ಇದರಿಂದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮತ್ತಷ್ಟು ಚುನಾವಣಾ ಚಟುವಟಿಕೆಗಳು ಕಾಂಗ್ರೆಸ್​ನಲ್ಲಿ ಗರಿಗೆದರಿವೆ. ಹೆಚ್​​ವೈ ಮೇಟಿ ಮಕ್ಕಳಾದ ಮಲ್ಲಿಕಾರ್ಜುನ ಮೇಟಿ, ಉಮೇಶ್ ಮೇಟಿ, ಮಾದೇವಿ ಮೇಟಿ, ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಕುಟುಂಬವನ್ನು ಹೊರತುಪಡಿಸಿದರೆ ಮಾಜಿ ಸಚಿವ ಅಜಯ್ ಕುಮಾರ್ ಸರನಾಯಕ್, ಗೋವಿಂದ ಬಳ್ಳಾರಿ, ರಕ್ಷಿತಾ ಈಟಿ ಸೇರಿದಂತೆ ಅನೇಕ ಪ್ರಬಲ ಆಕಾಂಕ್ಷಿಗಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಾಗಲಕೋಟೆ ಉಪಚುನಾವಣೆಯ ತಂತ್ರದ ಮೊದಲ ಹೆಜ್ಜೆ ಎಂಬಂತೆ ನಿನ್ನೆ ಭರ್ಜರಿ ಸ್ಟ್ರೋಕ್ ನೀಡಿದ್ದಾರೆ. ಬಿಜೆಪಿ ಸಂಭಾವ್ಯ ಅಭ್ಯರ್ಥಿ ವೀರಣ್ಣ ಚರಂತಿಮಠ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಭೇಟಿ ನೀಡಿದ್ದಾರೆ. ಇದು ಉಪಚುನಾವಣೆ ಹೊತ್ತಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಮಲ್ಲಿಕಾರ್ಜುನ ಚರಂತಿಮಠ ಕಳೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡಿ 10 ಸಾವಿರಕ್ಕೂ ಅಧಿಕ ಮತಗಳನ್ನು ಗಳಿಸಿದ್ದರು. ನಂತರ ಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಆದರೆ ಇತ್ತೀಚಿಗೆ ಮಲ್ಲಿಕಾರ್ಜುನ ಚರಂತಿಮಠ ವಾಪಸ್ ಬಿಜೆಪಿಗೆ ಬರುತ್ತಾರೆ ಎಂಬ ಸುದ್ದಿ ಹರಡಿತ್ತು. ಈ ಬೆನ್ನಲ್ಲೇ ಸಿಎಂ, ಡಿಸಿಎಂ ಅವರ ಮನೆಗೆ ಹೋಗಿದ್ದು ಸಂಚಲನ ಸೃಷ್ಟಿದೆ.

ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು 

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಯಾವುದೇ ರೀತಿ ಪ್ರತಿಕ್ರಿಯೆ ನೀಡಲಿಲ್ಲ. ಆದರೆ ಡಿಸಿಎಂ ಡಿಕೆ ಶಿವಕುಮಾರ್ ಆದಷ್ಟು ಬೇಗ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ‌ ಮಾಡುತ್ತೇವೆ‌. ಅವರೇ ಜವಾಬ್ದಾರಿಯಾಗಿ ನಿಂತುಕೊಂಡು ನಮ್ಮ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ಕೆಲಸವನ್ನು ಮಾಡುತ್ತಾರೆ. ನಮ್ಮ ಸ್ನೇಹಿತರು ಬಹಳ ಒಳ್ಳೆಯವರು.
ಅವರು ನಮ್ಮ ಜೊತೆ ಇರ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

ಸದ್ಯ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷಗಳು ಭರ್ಜರಿ ತಂತ್ರ ಪ್ರತಿತಂತ್ರ ಹೆಣೆಯುತ್ತಿದ್ದು, ಇದರಲ್ಲಿ ಯಾರ ತಂತ್ರ ಫಲ ನೀಡುತ್ತೋ ಚುನಾವಣೆಯೇ ಉತ್ತರಿಸಬೇಕು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಚೀನಾದಲ್ಲಿ ದೊಡ್ಡ ಬದಲಾವಣೆಗೆ ಕಾರಣಾಗಿದೆ ಈ ಸಿನಿಮಾ: ಇದಲ್ಲವೆ ನಿಜವಾದ ಯಶಸ್ಸು

ಸಿನಿಮಾಗಳ ಯಶಸ್ಸನ್ನು ಬಾಕ್ಸ್ ಆಫೀಸ್​​ (Box Office) ಸಂಖ್ಯೆಯ ಮೇಲೆ ಅಳೆಯಲಾಗುತ್ತದೆ. ಸಿನಿಮಾ ಒಂದು ಬಾಕ್ಸ್ ಆಫೀಸ್​​ನಲ್ಲಿ ಗಳಿಸುವ ಹಣ ಆ ಸಿನಿಮಾದ ಯಶಸ್ಸಿನ ಮಾನದಂಡವಾಗಿದೆ. ಭಾರತದಲ್ಲಂತೂ ಈ ಬಾಕ್ಸ್ ಆಫೀಸ್ ಲೆಕ್ಕಾಚಾರ ಮಿತಿ ಮೀರಿ ಬೆಳೆದುಬಿಟ್ಟಿದೆ. ಮೊದಲೆಲ್ಲ ಸಿನಿಮಾದ ಕತೆ, ನಟನೆ ಇನ್ನಿತರೆ ಅಂಶಗಳ ಮೇಲೆ ಸಿನಿಮಾದ ಗೆಲುವು ನಿಶ್ಚಯ ಆಗುತ್ತಿತ್ತು ಆದರೆ ಈಗ ಬಾಕ್ಸ್ ಆಫೀಸ್ ಸಂಖ್ಯೆಯ ಮೇಲೆ ನಿರ್ಧಾರಿತವಾಗುತ್ತದೆ. ಆದರೆ ಇದು ನಿಜವಾದ ಯಶಸ್ಸೆ? ಖಂಡಿತ ಅಲ್ಲ. ಇತ್ತೀಚೆಗೆ ಸಿನಿಮಾ ಒಂದು ವಿಶ್ವದ ಅತಿ ದೊಡ್ಡ ದೇಶಗಳಲ್ಲಿ ಒಂದಾದ ಚೀನಾದ ಜನರ, ಸರ್ಕಾರದ ಮನಸ್ಥಿತಿಯ ಮೇಲೆ ದೊಡ್ಡ ಪರಿಣಾಮ ಬೀರಿದ್ದು ಭಾರಿ ಬದಲಾವಣೆಗೆ ಕಾರಣವಾಗಿದೆ.

‘ಬಿಗ್ ವರ್ಲ್ಡ್’ ಹೆಸರಿನ ಚೀನಾ ಭಾಷೆಯ ಸಿನಿಮಾ 2024ರ ಡಿಸೆಂಬರ್​ನಲ್ಲಿ ಬಿಡುಗಡೆ ಆಗಿತ್ತು. ಸೆರೆಬ್ರಲ್ ಪ್ಯಾಲಸಿ ಸಮಸ್ಯೆಯಿಂದ ಬಳಲುತ್ತಿರುವ ಯುವಕನೊಬ್ಬನ ಕತೆಯನ್ನು ಸಿನಿಮಾ ಒಳಗೊಂಡಿತ್ತು. ಈ ಸಮಸ್ಯೆ ಉಳ್ಳ ವ್ಯಕ್ತಿಗಳು ಸಾಮಾನ್ಯರಂತೆಯೇ ಬುದ್ಧಿಮತ್ತೆ ಹೊಂದಿರುತ್ತಾರೆ, ಆದರೆ ಅವರಿಗೆ ತಮ್ಮ ದೇಹದ ಮೇಲೆ ಹಿಡಿತ ಇರುವುದಿಲ್ಲ, ನೆಟ್ಟಗೆ ನಡೆಯಲು ಆಗದು, ಅಲುಗಾಡುತ್ತಲೇ ಇರುತ್ತಾರೆ. ಊಟ ಮಾಡಲು ಸಹ ಕಷ್ಟವಾಗುವಂಥಹಾ ದೇಹ ಪರಿಸ್ಥಿತಿ ಇವರಿಗೆ ಇರುತ್ತದೆ. ಆದರೆ ಸಾಮಾನ್ಯ ಮನುಷ್ಯರಂತೆ ಯೋಚಿಸಬಲ್ಲರು, ಓದಬಲ್ಲರು, ಬರೆಯಬಲ್ಲರು ಆದರೆ ದೇಹ ಮಾತ್ರ ನ್ಯೂನ್ಯತೆಯಿಂದ ಕೂಡಿರುತ್ತದೆ.

ಈ ರೀತಿಯ ಸೆರಬ್ರಲ್ ಪ್ಯಾಲಸಿ ಹೊಂದಿರುವ ಯುವಕನೊಬ್ಬ ಇತರರಂತೆ ತಾನೂ ಸಾಮಾನ್ಯ ಜೀವನ ನಡೆಸುವ ಕನಸು ಕಂಡು ಅದಕ್ಕಾಗಿ ಹೋರಾಡುವ ಕತೆಯನ್ನು ‘ಬಿಗ್ ವರ್ಲ್ಡ್’ ಸಿನಿಮಾ ಒಳಗೊಂಡಿತ್ತು. ಸೆರೆಬ್ರಲ್ ಪ್ಯಾಲಸಿ ಹೊಂದಿರುವವರು ದಿನನಿತ್ಯದ ಬದುಕಿನಲ್ಲಿ ಎಷ್ಟು ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ ಎಂಬುದನ್ನು ಈ ಸಿನಿಮಾ ಅದ್ಭುತವಾಗಿ ತೋರಿಸಿತ್ತು. ಸಾಮಾನ್ಯ ಜಗತ್ತು ಹೇಗೆ ಕೇವಲ ಸಾಮಾನ್ಯರಿಗಾಗಿ ಮಾತ್ರವೇ ಮೂಲಭೂತ ಸೌಕರ್ಯಗಳನ್ನು ಒದಗಿಸಿದೆ, ಸೆಲೆಬ್ರಲ್ ಪ್ಯಾಲಸಿ ಅಥವಾ ಇನ್ಯಾವುದೇ ಅಂಗವೈಕಲ್ಯ ಹೊಂದಿರುವವರನ್ನು ಹೇಗೆ ನಿರ್ಲಕ್ಷಿಸಲಾಗಿದೆ ಎಂಬುದನ್ನು ತೋರಿಸಲಾಗಿತ್ತು.

ಇದನ್ನೂ ಓದಿ:’ಜನ ನಾಗಯನ್‘ ಸಿನಿಮಾ: ಯಶಸ್ವಿಯಾಯ್ತು ವಿಜಯ್ ರಾಜಕೀಯ ವಿರೋಧಿಗಳ ಪ್ಲ್ಯಾನ್

ಈ ಸಿನಿಮಾ ದೊಡ್ಡ ಹಿಟ್ ಆಗಲಿಲ್ಲ ಆದರೆ ಅದೆಷ್ಟು ಪರಿಣಾಮ ಬೀರಿತೆಂದರೆ ಶಾಲಾ, ಕಾಲೇಜುಗಳು ಸೆಲೆಬ್ರಲ್ ಪ್ಯಾಲಸಿ ಹೊಂದಿರುವ ವಿದ್ಯಾರ್ಥಿಗಳನ್ನು ಸಾಮಾನ್ಯ ತರಗತಿಗೆ ಸೇರಿಸಿಕೊಳ್ಳುವಂತಾಯ್ತು. ಯಾವ ಮಟ್ಟಿಗೆ ಬದಲಾವಣೆ ಆಯ್ತೆಂದರೆ ರೆಸ್ಟೊರೆಂಟ್ ಒಂದರಲ್ಲಿ ಸೆರಬ್ರಲ್ ಪ್ಯಾಲಸಿ ಉಳ್ಳ ವ್ಯಕ್ತಿಯನ್ನು ನೌಕರಿಗೆ ಸೇರಿಸಿಕೊಳ್ಳುವ ಜೊತೆಗೆ ಅವರ ಕೆಲಸಕ್ಕೆ ಅನುಕೂಲ ಆಗುವಂತೆ ವ್ಯವಸ್ಥೆ ಸಹ ಮಾಡಿಕೊಡಲಾಯ್ತು. ಹಲವಾರು ವಿಭಾಗಗಳಲ್ಲಿ ಸೆರಬ್ರಲ್ ಪ್ಯಾಲಸಿ ಹೊಂದಿರುವವರಿಗೆ ಉದ್ಯೋಗ ನೀಡಲಾಯ್ತು. ಸ್ವತಃ ಸರ್ಕಾರವೇ ಹಲವು ಬದಲಾವಣೆಗಳನ್ನು ನಿಯಮಗಳಲ್ಲಿ ಮಾಡಿದ್ದಲ್ಲೆ, ಸಾರ್ವಜನಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯವನ್ನು ಬದಲಾವಣೆ ಮಾಡಿತು.

ಸಿನಿಮಾದ ಮತ್ತೊಂದು ಪ್ರಮುಖ ಅಂಶವನ್ನು ಹೇಳಲೇ ಬೇಕು. ಅದುವೇ ಸಿನಿಮಾದ ನಾಯಕ ಜಾಕ್​​ಸನ್ ಯೀ. ಅದೆಷ್ಟು ಅದ್ಭುತವಾಗಿ ಇವರು ಸೆರಬ್ರಲ್ ಪ್ಯಾಲಸಿ ಇರುವ ಯುವಕನ ಪಾತ್ರದಲ್ಲಿ ನಟಿಸಿದ್ದಾರೆಂದರೆ, ನಿಜಕ್ಕೂ ಆ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿಯೇ ಇವರೇನೋ ಎನಿಸುವಷ್ಟು ಆ ಪಾತ್ರದಲ್ಲಿ ಮುಳುಗಿ ಹೋಗಿದ್ದಾರೆ. ಸಿನಿಮಾ ಇಂಗ್ಲೀಷ್ ಸಬ್​​ಟೈಟಲ್ಸ್​​ಗಳ ಜೊತೆಗೆ ಯೂಟ್ಯೂಬ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ ಆಸಕ್ತಿ ಉಳ್ಳವರು ನೋಡಬಹುದಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಊಟದ ವಿಚಾರಕ್ಕೆ ಗಲಾಟೆ: ಯುವಕನ ಬಡಿದು ಕೊಂದ ಕಿರಾತಕರು; ಆರೋಪಿಗಳು ಅರೆಸ್ಟ್​​

ಆನೇಕಲ್​​, ಮಾರ್ಚ್​​ 15: ಬೆಂಗಳೂರಿನ ಬನ್ನೇರುಘಟ್ಟ ವ್ಯಾಪ್ತಿಯಲ್ಲಿ ಮಾರ್ಚ್ 8ರಂದು ನಡೆದಿದ್ದ ಯುವಕನೊಬ್ಬನ ಕೊಲೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಪನಾಯಕನಹಳ್ಳಿ ನಿವಾಸಿ ತಿಲಕ್(23) ಅಲಿಯಾಸ್​​ ಗುಡ್ಡೆ ಎಂಬಾತನ ತಲೆ ಮೇಲೆ ಇಟ್ಟಿಗೆ ಹಾಕಿ, ದೊಣ್ಣೆಯಿಂದ ಹೊಡೆದು ಕೊಲೆ ಮಾಡಲಾಗಿತ್ತು. ಈ ಸಂಬಂಧ ಬನ್ನೇರುಘಟ್ಟ ಪೊಲೀಸರು ಕೆಂಪನಾಯಕನಹಳ್ಳಿ ವಾಸಿ ಅಜಯ್ ಕುಮಾರ್(25), ರವಿಚಂದ್ರ ನಾಯಕ್ ಅಲಿಯಾಸ್​​ ಪಾಯಿಸನ್ ರವಿ (24), ಸಂಜಯ್ ಅಲಿಯಾಸ್​​ ನಾಯಿಬಾಬಾ(26) ಮತ್ತು ಮೊಹಮ್ಮದ್ ರಜಾಕ್(24) ಎಂಬವರನ್ನು ಬಂಧಿಸಿದ್ದಾರೆ. ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿ ಆರೋಪಿಗಳು ತಿಲಕ್​​ನ ಕೊಂದಿರೋದಾಗಿ ತಿಳಿದುಬಂದಿದೆ.

ಬನ್ನೇರುಘಟ್ಟ ಗೊಲ್ಲಹಳ್ಳಿ ಗುಟ್ಟೆ ಮೈದಾನ ಬಳಿ ಕೊಲೆ ನಡೆದಿದ್ದು, ಪ್ರಮುಖ ಆರೋಪಿ ಅಜಯ್​​ 30ಕ್ಕೂ ಅಧಿಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಖಾಕಿಯಿಂದ ತಪ್ಪಿಸಿಕೊಳ್ಳಲು ಹೆಚ್ಚಾಗಿ ಕಾಡಿನಲ್ಲಿ ವಾಸಿಸುತ್ತಿದ್ದ ಕೃತ್ಯ ನಡೆದ ದಿನ ಊಟ ತರಲು ಈತ ತಿಲಕ್​​ಗೆ ಹೇಳಿದ್ದ. ಆದರೆ ತಿಲಕ್​​ ಪ್ರೇಯಸಿ ಭೇಟಿಗಾಗಿ ತೆರಳಿದ್ದು, ಆಕ್ರೋಶಗೊಂಡ ಅಜಯ್ ತಿಲಕ್​​ ಬರುತ್ತಿದ್ದಂತೆ ಆವಾಜ್​​ ಹಾಕಿದ್ದಾನೆ. ತನಗಿಂತ ಹುಡುಗಿ ಹೆಚ್ಚಾ ಎಂದು ಈತ ಪ್ರಶ್ನಿಸಿದ ಹಿನ್ನೆಲೆ ವಾಗ್ವಾದ ನಡೆದಿದೆ. ಹೀಗಾಗಿ ತನ್ನ ವಿರುದ್ಧವೇ ಮಾತನಾಡುತ್ತೀಯಾ ಎಂದು ರೊಚ್ಚಿಗೆದ್ದು ತಿಲಕ್​​ ಮೇಲೆ ದಾಳಿ ನಡೆಸಿರೋದು ತನಿಖೆ ವೇಳೆ ಬಯಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link