All posts by nagaraj11081993

LPG ಸಿಲಿಂಡರ್​​ ಸಮಸ್ಯೆಗೆ ತಲ್ಲಣಿಸಿದ ಹೋಟೆಲ್​ ಉದ್ಯಮ: ಐದೇ ದಿನಗಳಲ್ಲಿ 100 ಕೋಟಿಗೂ ಅಧಿಕ ನಷ್ಟ!

LPG ಸಿಲಿಂಡರ್​​ ಸಮಸ್ಯೆಗೆ ತಲ್ಲಣಿಸಿದ ಹೋಟೆಲ್​ ಉದ್ಯಮ: ಐದೇ ದಿನಗಳಲ್ಲಿ 100 ಕೋಟಿಗೂ ಅಧಿಕ ನಷ್ಟ!

ಬೆಂಗಳೂರು, ಮಾರ್ಚ್​​ 15: ಮಧ್ಯಪ್ರಾಚ್ಯದ ಯುದ್ಧದ ಪರಿಣಾಮವಾಗಿ ಕರ್ನಾಟಕದಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ಎದುರಾಗಿದೆ. ಅದರಲ್ಲೂ ಹೋಟೆಲ್​​ ಉದ್ಯಮವಂತೂ ಇದರಿಂದ ಬಹಳ ಸಮಸ್ಯೆಗೆ ಸಿಲುಕಿದ್ದು, ಹಲವೆಡೆ ರೆಸ್ಟೋರೆಂಟ್​​ಗಳು ಬಂದ್​​ ಆಗಿದ್ದರೆ, ಇನ್ನು ಕೆಲ ಹೋಟೆಲ್​​ಗಳು ಮೆನುವಿನಿಲ್ಲಿ ಭಾರಿ ಕಡಿತ ಮಾಡಿ ಗ್ರಾಹಕರಿಗೆ ಸೇವೆ ಒದಗಿಸುತ್ತಿವೆ. ಇದೆಲ್ಲದರ ಪರಿಣಾಮ ಎಂಬಂತೆ ರಾಜ್ಯ ರಾಜಧಾನಿ ಬೆಂಗಳೂರೊಂದರಲ್ಲೇ ಕಳೆದ 5 ದಿನಗಳಲ್ಲಿ 100 ಕೋಟಿಗೂ ಹೆಚ್ಚು ನಷ್ಟ ಉಂಟಾಗಿದ್ದು, ಹೋಟೆಲ್​​ಗಳ ಮಾಲೀಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಟ್ಯಾಕ್ಸ್ ವಿನಾಯತಿಗೆ ಸರ್ಕಾರಕ್ಕೆ ಮನವಿ

ಬೆಂಗಳೂರಿನಲ್ಲಿ ಸರಿ ಸುಮಾರು 40 ಸಾವಿರಕ್ಕೂ ಹೆಚ್ಚು ಹೋಟೆಲ್​ಗಳಿದ್ದು, ಈ ಪೈಕಿ 4,500 ಹೋಟೆಲ್​​ಗಳು ರಿಜಿಸ್ಟರ್​​ ಆಗಿವೆ. ಇವೆಲ್ಲವೂ ಕೂಡ ಈಗ ವಾಣಿಜ್ಯ ಗ್ಯಾಸ್ ಸಿಲಿಂಡರ್ ಅಭಾವದ ಸಮಸ್ಯೆಗೆ ಸಿಲುಕಿದ್ದು, ನಷ್ಟ ಅನುಭವಿಸುತ್ತಿವೆ. ಹೀಗಾಗಿ ಟ್ಯಾಕ್ಸ್ ವಿನಾಯತಿ ನೀಡುವಂತೆ ಹೋಟೆಲ್ ಮಾಲೀಕರ ಸಂಘ ಸರ್ಕಾರಕ್ಕೆ ಮನವಿ ಮಾಡಿದೆ . ಪ್ರಾಪರ್ಟಿ ತೆರಿಗೆ ಸೇರಿ ಎಲ್ಲ ವಿಧದ ಟ್ಯಾಕ್ಸ್​​ನಿಂದ ಶೇ.20ರಿಂದ 25ರಷ್ಟು ವಿನಾಯಿತಿ ನೀಡುವಂತೆ ಕೋರಲಾಗಿದೆ. ಇನ್ನು ನಾಳೆಯಿಂದ ರಾಜ್ಯದ ಹೋಟೆಲ್​​ಗಳಿಗೆ ಶೇ.20ರಷ್ಟು LPG ಸಿಲಿಂಡರ್ ಪೂರೈಕೆಯಾಗಲಿದೆ ಎಂದು ಕೇಂದ್ರದಿಂದ ಸೂಚನೆ ಬಂದಿದ್ದು, ಇದು ನೆರವೇರಿದ್ದೇ ಆದಲ್ಲಿ ಹೋಟೆಲ್ ಉದ್ಯಮ ಕೊಂಚ ಉಸಿರಾಡಬಹುದು ಎಂದು ಆಹಾರೋದ್ಯಮಿಗಳು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸರ್ಕಾರದಿಂದ ಎಲ್​ಪಿಜಿ ಪೂರೈಕೆ ನಿಯಮದಲ್ಲಿ ಬದಲಾವಣೆ; ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ

ಹಬ್ಬದ ಹೋಳಿಗೆ ತಯಾರಿಗೂ ಸಿಗ್ತಿಲ್ಲ LPG ಸಿಲಿಂಡರ್​​

ಇನ್ನೇನು ಯುಗಾದಿ ಹಬ್ಬ ಸಮೀಪಿಸುತ್ತಿದ್ದು ಹೋಳಿಗೆಗೆ ಬೇಡಿಕೆ ಹೆಚ್ಚಾಗುತ್ತಿದೆ. ಆದರೆ ಸಿಲಿಂಡರ್​​ಗಳ ಕೊರತೆ ಇವುಗಳ ತಯಾರಿ ಮೇಲೆಯೂ ಪ್ರಭಾವ ಬೀರಿದೆ. ವೆರೈಟಿ ಹೋಳಿಗೆ ತಯಾರಿಸುವ ಬಹುತೇಕ ಹೋಳಿಗೆ ಮನೆಗಳು ಬಂದ್​​ ಆಗಿದ್ದು, ಸಂಪಿಗೆ ರಸ್ತೆಯ ಹಳ್ಳಿಮನೆ ಹೋಟೆಲ್ ಹಬ್ಬದ ಹೋಳಿಗೆ ತಯಾರಿಸಲು ಸೌದೆ ಒಲೆ ಮೊರೆ ಹೋಗಿರುವ ದೃಶ್ಯ ಕಂಡುಬಂದಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

2 ಐಸಿಸಿ ಫೈನಲ್‌ಗಳಲ್ಲಿ ಭಾರತವನ್ನು ಮಣಿಸಿದ್ದ ಪಾಕ್ ಮಾಜಿ ನಾಯಕ ಕ್ರಿಕೆಟ್​ಗೆ ವಿದಾಯ

Source link

ಏಪ್ರಿಲ್ 1ರಿಂದ ಫಾಸ್​ಟ್ಯಾಗ್ ವಾರ್ಷಿಕ ಪಾಸ್ ಶುಲ್ಕದಲ್ಲಿ ಏರಿಕೆ; ಇಲ್ಲಿದೆ ಹೊಸ ದರ

ನವದೆಹಲಿ, ಮಾರ್ಚ್ 15: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 2026-27ರ ಹಣಕಾಸು ವರ್ಷಕ್ಕೆ ಫಾಸ್​ಟ್ಯಾಗ್ ಶುಲ್ಕವನ್ನು (FASTag annual pass) ಪರಿಷ್ಕರಿಸಿದೆ. ಕಮರ್ಷಿಯಲ್ ಅಲ್ಲದ ವಾಹನಗಳ ವಾರ್ಷಿಕ ಫಾಸ್​ಟ್ಯಾಗ್ ಪಾಸ್ ಶುಲ್ಕದಲ್ಲಿ ಅಲ್ಪ ಏರಿಕೆ ಆಗಿದೆ. ಖಾಸಗಿ ಕಾರುಗಳು, ಜೀಪ್, ವ್ಯಾನ್​ಗಳ ಮಾಲೀಕರು ವಾರ್ಷಿಕ ಪಾಸ್​ನ ಬೆಲೆ 3,000 ರೂನಿಂದ 3,075 ರೂಗೆ ಏರಿಸಲಾಗಿದೆ. ಮುಂಬರುವ ಹಣಕಾಸು ವರ್ಷದಿಂದ, ಅಂದರೆ 2026ರ ಏಪ್ರಿಲ್ 1ರಿಂದ ಹೊಸ ದರಗಳು ಜಾರಿಗೆ ಬರುತ್ತವೆ.

2025ರಲ್ಲಿ ಸ್ವಾತಂತ್ರ್ಯೋತ್ಸವ ದಿನದಂದು ಫಾಸ್​ಟ್ಯಾಗ್ ವಾರ್ಷಿಕ ಪಾಸ್​ನ ಸ್ಕೀಮ್ ಆರಂಭವಾಯಿತು. ನಾನ್-ಕಮರ್ಷಿಯಲ್ ಬಳಕೆಗೆ ನೊಂದಾಯಿಸಲಾದ ಖಾಸಗಿ ವಾಹನಗಳ ಮಾಲೀಕರಿಗೆ ಅನುಕೂಲವಾಗಲೆಂದು ಈ ಯೋಜನೆ ಚಾಲನೆಗೆ ತರಲಾಗಿದೆ. ಹೆದ್ದಾರಿಯಲ್ಲಿ ಹೆಚ್ಚೆಚ್ಚು ಓಡಾಡುವ ಇಂಥ ವಾಹನ ಮಾಲೀಕರಿಗೆ ವಾರ್ಷಿಕ ಪಾಸ್ ಬಹಳ ಅನುಕೂಲವಾಗುತ್ತದೆ.

ಇದನ್ನೂ ಓದಿ: Salary Hike: ಸರ್ಕಾರಿ ಉದ್ಯೋಗಿಗಳಿಗೆ ಶೇ 35ರಷ್ಟು ವೇತನ ಏರಿಕೆಯಾ?

ವಾರ್ಷಿಕ್ ಫಾಸ್​ಟ್ಯಾಗ್ ಪಾಸ್ ಪಡೆದರೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ 200 ಬಾರಿ ಟೋಲ್ ಪ್ಲಾಜಾದಲ್ಲಿ ಪ್ರವೇಶ ಪಡೆಯಬಹುದು. ಈ ಪಾಸ್ ಒಂದು ವರ್ಷ ಸಿಂಧು ಇರುತ್ತದೆ. ಯಾವುದೇ ಟೋಲ್ ಪ್ಲಾಜಾ ಆದರೂ ಉಚಿತವಾಗಿ ಹಾದು ಹೋಗಬಹುದು. ಕೆಲ ಟೋಲ್ ಪ್ಲಾಜಾಗಳಲ್ಲಿ ದರ ಹೆಚ್ಚಿರಲಿ, ಅಥವಾ ಕಡಿಮೆ ಇರಲಿ, ಅದು ಈ ವಾರ್ಷಿಕ ಪಾಸ್​ನಲ್ಲಿ ಗಣನೆಗೆ ಬರುವುದಿಲ್ಲ. ಒಂದು ವರ್ಷದೊಳಗೆ ಹಾದು ಹೋಗುವ ಟೋಲ್ ಪ್ಲಾಜಾಗಳ ಸಂಖ್ಯೆ 200 ದಾಟುವಂತಿಲ್ಲ.

ವಾರ್ಷಿಕ ಪಾಸ್ ಪಡೆದರೆ ಪದೇ ಪದೇ ಫಾಸ್​ಟ್ಯಾಗ್ ರೀಚಾರ್ಜ್ ಮಾಡುವುದು ತಪ್ಪುತ್ತದೆ. ಈ ಪಾಸ್ ಸ್ಕೀಮ್ ಆರಂಭವಾಗಿ ಇನ್ನೂ ಒಂದು ವರ್ಷ ಆಗಿಲ್ಲ, ಆಗಲೇ ಸಾಕಷ್ಟು ಜನಬಳಕೆ ಪಡೆಯುತ್ತಿದೆ. 50 ಲಕ್ಷಕ್ಕೂ ಹೆಚ್ಚು ಜನರು ಫಾಸ್​ಟ್ಯಾಗ್ ವಾರ್ಷಿಕ ಪಾಸ್ ಖರೀದಿ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ಕಾರುಗಳ ಶೇ. 20ರಷ್ಟು ಟೋಲ್ ಟ್ರಾನ್ಸಾಕ್ಷನ್​ಗಳು ವಾರ್ಷಿಕ ಪಾಸ್ ಬಳಸಿ ಆಗುತ್ತಿವೆ ಎಂದು ದತ್ತಾಂಶಗಳು ಹೇಳುತ್ತವೆ.

ಇದನ್ನೂ ಓದಿ: ಪ್ಲೇಸ್ಟೋರ್​ನಲ್ಲಿ ಚ್ಯಾಟ್​ಜಿಪಿಟಿ, ಫ್ಲಿಪ್​ಕಾರ್ಟ್ ಅನ್ನು ಮೀರಿಸಿದ ಎಲ್​ಪಿಜಿ ಬುಕಿಂಗ್ ಆ್ಯಪ್

ವಾರ್ಷಿಕ ಫಾಸ್​ಟ್ಯಾಗ್ ಪಾಸ್ ಪಡೆಯುವುದು ಹೇಗೆ?

ರಾಜಮಾರ್ಗ್ ಯಾತ್ರಾ ಆ್ಯಪ್ ಹಾಗೂ ಹೆದ್ದಾರಿ ಪ್ರಾಧಿಕಾರ ಮತ್ತು ರಸ್ತೆ ಸಾರಿಗೆ ಸಚಿವಾಲಯದ ಅಧಿಕೃತ ವೆಬ್​ಸೈಟ್​ಗಳಲ್ಲಿ ಫಾಸ್​ಟ್ಯಾಗ್ ವಾರ್ಷಿಕ ಪಾಸ್ ಅನ್ನು ಪಡೆಯಬಹುದು. ಈ ವೆಬ್​ಸೈಟ್ ಅಥವಾ ಆ್ಯಪ್​ಗೆ ಹೋಗಿ, ಫಾಸ್​ಟ್ಯಾಗ್ ಜೋಡಿತ ಅಕೌಂಟ್, ವಾಹನ ನೊಂದಣಿ ವಿವರ ಮತ್ತು ನೊಂದಾಯಿತ ಮೊಬೈಲ್ ನಂಬರ್ ಮೂಲಕ ಲಾಗಿನ್ ಆಗಬೇಕು. ವಾರ್ಷಿಕ ಪಾಸ್​ಗೆ ಪೇಮೆಂಟ್ ಮಾಡಿದ ಬಳಿಕ ಅದು ಆ್ಯಕ್ಟಿವೇಟ್ ಆಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹಳ್ಳಿಗಳು ಮುಳುಗುವ ಆತಂಕ: ಬಫರ್ ಡ್ಯಾಮ್ ನಿರ್ಮಾಣಕ್ಕೆ ಕೊರಟಗೆರೆಯಲ್ಲಿ ತೀವ್ರ ವಿರೋಧ

ತುಮಕೂರು, ಮಾರ್ಚ್​​ 15: ಜಿಲ್ಲೆಯ ಕೊರಟಗೆರೆ ತಾಲೂಕಿನ ವಡ್ಡೇರಹಳ್ಳಿ ಗ್ರಾಮದ ಬಳಿ ಎತ್ತಿನಹೊಳೆ ಯೋಜನೆಯ ಭಾಗವಾಗಿ ಬಫರ್ ಡ್ಯಾಮ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಸುಮಾರು 1.2 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿರುವ ಈ ಡ್ಯಾಮ್ ನಿರ್ಮಾಣಕ್ಕೆ ಬಜೆಟ್‌ನಲ್ಲಿಯೂ ಅನುಮೋದನೆ ಸಿಕ್ಕಿದೆ. ಆದರೆ ವಡ್ಡೇರಹಳ್ಳಿ ಬಳಿ ಹಾದುಹೋಗುವ ಎತ್ತಿನಹೊಳೆ ನಾಲೆಯ ಬಳಿ 817.50 ಮೀಟರ್ ಎತ್ತರ ಮತ್ತು ಸುಮಾರು 1,440 ಮೀಟರ್ ಉದ್ದದ ಬಫರ್ ಡ್ಯಾಮ್ ನಿರ್ಮಿಸುವ ಈ ಯೋಜನೆ ಹಳ್ಳಿಗಳನ್ನೇ ಮುಳುಗಿಸಬಹುದೆಂಬ ಆತಂಕ ವ್ಯಕ್ತವಾಗಿದ್ದು, ಸರ್ಕಾರದ ನಿರ್ಧಾರಕ್ಕೆ ಸ್ಥಳೀಯ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೀರು ಸಾಗಿಸಲು ಈ ಡ್ಯಾಮ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಸರ್ಕಾರವೇನೋ ಹೇಳಿದೆ. ಆದರೆ ಈಗಾಗಲೇ ನಿರ್ಧರಿಸಿದ್ದ ಬಫರ್ ಡ್ಯಾಮ್ ಯೋಜನೆಯ ಮೂಲ ಸ್ಥಳದ ಬದಲಿಗೆ ವಡೇರಹಳ್ಳಿಯಲ್ಲಿ ಅಣೆಕಟ್ಟು ನಿರ್ಮಾಣದ ಚಿಂತನೆಗೆ ಗ್ರಾಮಸ್ಥರು ಅಸಮಾಧಾನಗೊಂಡಿದ್ದಾರೆ. ಈ ಡ್ಯಾಮ್ ನಿರ್ಮಾಣ ವಿಚಾರ ವಡ್ಡೇರಹಳ್ಳಿ ಸೇರಿದಂತೆ ಕಾಟೇನಹಳ್ಳಿ, ಅಂಕೋನಹಳ್ಳಿ, ನಾಯಕರಪಾಳ್ಯ, ಚೆಣಚೆಹಟ್ಟಿ, ನರಸಾಪುರ ಹಾಗೂ ಗಾಣದಹಟ್ಟಿ ಸೇರಿದಂತೆ ಏಳೆಂಟು ಗ್ರಾಮಗಳ ರೈತರನ್ನು ಆತಂಕಕ್ಕೆ ತಳ್ಳಿದೆ. ಭೂಮಿ ಮತ್ತು ಮನೆಗಳು ಮುಳುಗುವ ಭೀತಿಯಿಂದ ರೈತರು ಯೋಜನೆ ವಿರೋಧಿಸುತ್ತಿದ್ದು, ಪ್ರಾಣ ಬಿಟ್ಟೇವೇ ಹೊರತು ಡ್ಯಾಮ್ ನಿರ್ಮಾಣಕ್ಕೆ ಜಾಗ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ವರ್ಷಗಳಿಂದ ಅಭಿವೃದ್ಧಿ ಕಾಣದೆ ಉಳಿದ ಬಾಲಕಿಯರ ವಸತಿ ನಿಲಯ; ಮೌಢ್ಯವನ್ನೇ ನೆಪ ಮಾಡಿಕೊಂಡಿತಾ ಸರ್ಕಾರ?

ಮತ್ತೊಂಡೆ ಸ್ಥಳೀಯ ಗ್ರಾಮಸ್ಥರ ವಿರೋಧದ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ರೈತರನ್ನು ಕೂರಿಸಿಕೊಂಡು ಮಾತನಾಡುವ ಮುಖಾಂತರ ಸಮಸ್ಯೆ ಬಗೆ ಹರಿಸೊದಾಗಿ ಹೇಳಿದ್ದಾರೆ. ಈ ಹಿಂದೆ ಬಫರ್ ಡ್ಯಾಂ ಬೈರಗೊಂಡನಹಳ್ಳಿಯಲ್ಲಿ ನಿರ್ಮಿಸುವ ಚಿಂತನೆ ನಡೆದಿತ್ತು. ಕೆಲ ಬೆಳವಣಿಗೆ ಬಳಿಕ ದೊಡ್ಡಬಳ್ಳಾಪುರದ ಚರ್ಚೆಯಾಯ್ತು. ನಂತರ ಮತ್ತೆ ಬೈರಗೊಂಡ್ಲುವಿನ್ನಲ್ಲಿ ಮಾಡುವ ಬಗ್ಗೆ ಚರ್ಚೆಯಾದಾಗ ಗ್ರಾಮಸ್ಥರು ವಿರೋಧ ವ್ಯಕ್ತ ಪಡಿಸಿದ್ದರು. ಆರೇಳು ಬಾರಿ ಸಭೆ ಮಾಡಿದರೂ ಗ್ರಾಮಸ್ಥರು ಬೇಡ ಎಂದರು. ಹೀಗಾಗಿ ವಡೇರಹಳ್ಳಿಯಲ್ಲಿ ನಿರ್ಮಾಣ ಮಾಡುವ ನಿರ್ಧಾರ ಮಾಡಲಾಗಿದೆ‌. ಸ್ಥಳೀರನ್ನು ಏನಾದರೂ ಮಾಡಿ ಮನವೊಲಿಸುವ ಮುಖಾಂತರ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಸಮಸ್ಯೆ ಬಗೆ ಹರಿಸಲಾಗುವುದು ಎಂದು ತಿಳಿಸಿದ್ದಾರೆ. ಹೀಗಿದ್ದರೂ ಸದ್ಯ ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಬಫರ್ ಡ್ಯಾಮ್ ನಿರ್ಮಾಣ ವಿಚಾರ ಸರ್ಕಾರ ಹಾಗೂ ಗ್ರಾಮಸ್ಥರ ನಡುವಿನ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಇದು ಎಲ್ಲಿಗೆ ಹೋಗಿ ನಿಲ್ಲುತ್ತೆ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

RCB: ವಿವಾದದ ನಡುವೆ ಗುಟ್ಟಾಗಿ ಸಪ್ತಪದಿ ತುಳಿದ ಆರ್‌ಸಿಬಿ ವೇಗಿ ಯಶ್ ದಯಾಳ್

2026 ರ ಐಪಿಎಲ್ (IPL 2026) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹಾಲಿ ಚಾಂಪಿಯನ್ ಆರ್​ಸಿಬಿ (RCB) ಸತತ ಎರಡನೇ ಬಾರಿಗೆ ಟ್ರೋಫಿ ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯಲಿದೆ. ಆದರೆ ಸೀಸನ್ ಪ್ರಾರಂಭವಾಗುವ ಮೊದಲೇ ಆರ್​ಸಿಬಿ ವೇಗಿ ಯಶ್ ದಯಾಳ್ (Yash Dayal) ಗುಟ್ಟಾಗಿ ವೈವಾವಿಕ ಜೀವನಕ್ಕೆ ಕಾಲಿರಿಸಿದ್ದಾರೆ. ವಾಸ್ತವವಾಗಿ ಯಶ್ ದಯಾಳ್ ಹುಡುಗಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಾತ್ರವಲ್ಲದೆ ಅವರನ್ನು ಯಾವಾಗ ಬೇಕಾದರೂ ಬಂಧಿಸಿ ಜೈಲಿಗಟ್ಟಬಹುದು. ಹೀಗಿರುವಾಗ ಯಶ್ ದಯಾಳ್ ರಹಸ್ಯವಾಗಿ ಮದುವೆಯಾಗಿ ಎಲ್ಲರಿಗೂ ಶಾಕ್ ನೀಡಿದ್ದಾರೆ.

ಗುಟ್ಟಾಗಿ ನಡೆದ ದಯಾಳ್ ಮದುವೆ

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ. ಯಶ್ ದಯಾಳ್ ಅವರ ವಿವಾಹ ಫೆಬ್ರವರಿ 4 ರಂದು ಉತ್ತರ ಪ್ರದೇಶದ ನೋಯ್ಡಾದಲ್ಲಿ ನೆರವೇರಿದ್ದು, ಇದೀಗ ಅದರ ಫೋಟೋಗಳು ಎಲ್ಲೆಡೆ ವೈರಲ್ ಆಗುತ್ತಿವೆ. ಮದುವೆಯನ್ನು ತುಂಬಾ ರಹಸ್ಯವಾಗಿಡಲಾಗಿದ್ದು, ಎರಡೂ ಕುಟುಂಬಗಳ ಸದಸ್ಯರು ಮಾತ್ರ ಹಾಜರಿದ್ದರು ಎಂದು ವರದಿಯಾಗಿದೆ. ಅಚ್ಚರಿಯ ಸಂಗತಿಯೆಂದರೆ ಯಶ್ ದಯಾಳ್ ತಮ್ಮ ಸ್ನೇಹಿತರನ್ನಾಗಲಿ ಅಥವಾ ಯಾವುದೇ ಕ್ರಿಕೆಟಿಗರನ್ನಾಗಲಿ ತಮ್ಮ ಮದುವೆಗೆ ಆಹ್ವಾನಿಸಿಲ್ಲ. ಯಶ್ ದಯಾಳ್, ವ್ಲಾಗರ್ ಶ್ವೇತಾ ಪುಂಡಿರ್ ಅವರನ್ನು ವರಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನು ಯಶ್ ದಯಾಳ್ ಅವರ ವೃತ್ತಿಜೀವನದ ವಿಚಾರಕ್ಕೆ ಬರುವುದಾದರೆ.. ಐಪಿಎಲ್‌ನಲ್ಲಿ ಆರ್​ಸಿಬಿ ತಂಡದ ಪರ ಆಡುತ್ತಿರುವ ದಯಾಳ್, ತಂಡದ ಪ್ರಮುಖ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಆದಾಗ್ಯೂ ಈ ಆವೃತ್ತಿಯಲ್ಲಿ ಅವರು ತಂಡದ ಪರ ಆಡುತ್ತಾರೋ, ಇಲ್ಲವೋ ಎಂಬುದು ಖಚಿತವಾಗಿಲ್ಲ. ಏಕೆಂದರೆ ಕಳೆದ ವರ್ಷ ಯುವತಿಯೊಬ್ಬಳು ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆ ಪ್ರಕರಣ ಪ್ರಸ್ತುತ ವಿಚಾರಣೆಯಲ್ಲಿದೆ. ದಯಾಳ್ ಅವರ ವಿರುದ್ಧ ಕೇಳಿ ಬಂದ ಈ ಆರೋಪದಿಂದಾಗಿ ಆರ್​ಸಿಬಿ ಕೂಡ ಮುಜುಗರಕ್ಕೀಡಾಗಬೇಕಾಯಿತು. ಹೀಗಾಗಿ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ದಯಾಳ್​ರನ್ನು ಆರ್​ಸಿಬಿ ಆಡಿಸುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಜಾಮೀನು ಅರ್ಜಿ ವಜಾ; ಆರ್​ಸಿಬಿ ವೇಗಿ ಯಶ್ ದಯಾಳ್​ಗೆ ಬಂಧನ ಭೀತಿ

ದಯಾಳ್ ವಿರುದ್ಧ ಅತ್ಯಾಚಾರದ ಆರೋಪ

ಕಳೆದ ವರ್ಷ ಆರ್‌ಸಿಬಿ ತಂಡದ ಗೆಲುವಿನಲ್ಲಿ ಎಡಗೈ ವೇಗಿ ಯಶ್ ದಯಾಳ್ ಪ್ರಮುಖ ಪಾತ್ರ ವಹಿಸಿದ್ದರು. ಆದಾಗ್ಯೂ, ಆರ್‌ಸಿಬಿ ಪ್ರಶಸ್ತಿ ಗೆದ್ದ ಕೆಲವೇ ದಿನಗಳಲ್ಲಿ, ಮಹಿಳೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ದಯಾಳ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. ದಯಾಳ್ ಅವರೊಂದಿಗಿನ ಹಳೆಯ ಫೋಟೋಗಳು ಮತ್ತು ಚಾಟ್‌ಗಳನ್ನು ಹಂಚಿಕೊಂಡ ಅವರು, ಮದುವೆಯ ಸುಳ್ಳು ಭರವಸೆ ನೀಡಿ ದಯಾಳ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಇದರ ನಂತರ, ದಯಾಳ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆದಾಗ್ಯೂ, ಅಲಹಾಬಾದ್ ಹೈಕೋರ್ಟ್ ದಯಾಳ್ ಬಂಧನಕ್ಕೆ ತಡೆ ನೀಡಿತ್ತು.

Source link

Video: ಪುಟ್ಟಹುಡುಗಿ ಐಸ್ ಕ್ರೀಮ್ ಕೊಟ್ಟಿದ್ದಕ್ಕೆ ಮುತ್ತು ಕೊಟ್ಟು ಥ್ಯಾಂಕ್ಸ್ ಹೇಳಿದ ಗಜರಾಜ

ಆನೆಗಳ ((elephants) ಆಟ ತುಂಟಾಟ ನೋಡುವುದೇ ಚಂದ. ಎಲ್ಲರಿಗೂ ತಿಳಿದಿರುವಂತೆ ಈ ಆನೆಗಳು  ಭಾವನಾತ್ಮಕ ಜೀವಿಗಳು. ಆನೆಗಳಿಗೆ ಮನುಷ್ಯರು ತುಂಬಾ ಮುದ್ದಾಗಿ ಕಾಣುತ್ತಾರೆಯಂತೆ. ಹೀಗಾಗಿ ಈ ಪ್ರಾಣಿಗಳು ಮನುಷ್ಯರೊಂದಿಗೆ ಬಹುಬೇಗನೇ ಆಪ್ತವಾಗುತ್ತವೆ. ಹೀಗಾಗಿ ಗಜರಾಜನ ಜತೆಗಿನ ಬಾಂಧವ್ಯ ಸಾರುವ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಪುಟ್ಟ ಹುಡುಗಿಯೊಂದಿಗೆ ಆನೆಯೊಂದು ಪ್ರೀತಿಯಿಂದ ವರ್ತಿಸಿದೆ. ಹೌದು ಐಸ್ ಕ್ರೀಮ್ ಕೊಟ್ಟ ಬಾಲಕಿಗೆ ಮುತ್ತು ನೀಡಿ ಧನ್ಯವಾದ ತಿಳಿಸಿದೆ. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

primepost07 ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟ್ಟ ಹುಡುಗಿಯೊಬ್ಬಳು ಆನೆಗೆ ಐಸ್ ಕ್ರೀಮ್ ಕೊಡುವುದನ್ನು ಕಾಣಬಹುದು. ಐಸ್ ಕ್ರೀಮ್ ಕೊಟ್ಟ ಖುಷಿಗೆ ಆನೆ ಪುಟ್ಟ ಹುಡುಗಿಗೆ ಥ್ಯಾಂಕ್ಸ್ ಹೇಳಿ ಮುತ್ತು ನೀಡಿದೆ. ಪುಟ್ಟ ಹುಡುಗಿಯೂ ಖುಷಿಯಿಂದ ನಕ್ಕಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ನೋಡ ನೋಡುತ್ತಿದ್ದಂತೆ ಮಹಿಳೆಯ ತಲೆಯಲ್ಲಿದ್ದ ಟೋಪಿಯನ್ನು ಮೆಲ್ಲನೆ ಎಗರಿಸಿದ ಆನೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ತುಂಬಾನೇ ಮುದ್ದಾಗಿದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ಐಸ್ ಕ್ರೀಮ್ ಕೊಟ್ಟದ್ದಕ್ಕೆ ಈ ಗಜರಾಜನಿಗೆ ಎಷ್ಟು ಖುಷಿ ನೋಡಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಮುಗ್ಧ ಮನಸ್ಸುಗಳ ಶುದ್ಧ ಗೆಳತನ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

Hindu Rituals: ಮಕ್ಕಳ ನಾಲಿಗೆ ಮೇಲೆ ಓಂಕಾರ ಬರೆಯುವುದರ ಹಿಂದಿನ ರಹಸ್ಯ; ಜ್ಯೋತಿಷ್ಯ ಸಲಹೆ ಇಲ್ಲಿದೆ

ಓಂಕಾರವು ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವಾದ ಸ್ಥಾನಮಾನವನ್ನು ಹೊಂದಿದೆ. ಅಕಾರ, ಉಕಾರ, ಮಕಾರಗಳ ಸಮ್ಮಿಲನವೇ ಓಂಕಾರವಾಗಿದ್ದು, ಇದನ್ನು ಇಡೀ ಬ್ರಹ್ಮಾಂಡದಲ್ಲಿ ಮೊದಲು ಉದ್ಭವಿಸಿದ ಶಬ್ದ ಎಂದು ನಂಬಲಾಗುತ್ತದೆ. ಇದನ್ನು ಪ್ರಣವ ಮಂತ್ರ ಎಂದೂ ಕರೆಯುತ್ತಾರೆ. ಈ ಓಂಕಾರವನ್ನು ಮಗುವಿನ ನಾಲಿಗೆಯ ಮೇಲೆ ಬರೆಯುವುದರಿಂದ ಸಾಕ್ಷಾತ್ ಶಾರದಾ ದೇವಿ, ಸರಸ್ವತಿ, ಗಣೇಶ ಮತ್ತು ಹಯಗ್ರೀವ ಸೇರಿದಂತೆ ವಿದ್ಯೆಗೆ ಸಂಬಂಧಿಸಿದ ಎಲ್ಲಾ ದೇವಾನುದೇವತೆಗಳ ಅನುಗ್ರಹ ಮಗುವಿಗೆ ದೊರೆಯುತ್ತದೆ ಎಂಬ ನಂಬಿಕೆಯಿದೆ. ಅಕ್ಷರಾಭ್ಯಾಸಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡುವ ನಮ್ಮ ಸಂಸ್ಕೃತಿಯಲ್ಲಿ, ವೇದಗಳಿಗೂ ಮತ್ತು ಮಂತ್ರಗಳಿಗೂ ಓಂಕಾರವು ಅತ್ಯಂತ ಪವಿತ್ರವಾಗಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

ಗುರೂಜಿಯವರು ಹೇಳುವಂತೆ, ಮಗುವಿನ ನಾಲಿಗೆ ಮೇಲೆ ಓಂಕಾರ ಬರೆಯುವುದು ಹಲವು ವಿಧಗಳಲ್ಲಿ ಶುಭಕರವಾಗಿದೆ. ಜಾತಕರ್ಮದ ಸಮಯದಲ್ಲಿ ತಂದೆ, ತಾಯಿ, ಗುರುಗಳು ಅಥವಾ ವೇದ ಮಂತ್ರಗಳನ್ನು ಪಠಿಸುವವರು ಈ ಓಂಕಾರವನ್ನು ಬರೆಯಬಹುದು. ಓಂಕಾರವನ್ನು ಬರೆಯಲು ತುಪ್ಪ ಮತ್ತು ಜೇನುತುಪ್ಪವನ್ನು ಬೆರೆಸಿ ಬಳಸಲಾಗುತ್ತದೆ. ಇದರ ಜೊತೆಗೆ, ಬಂಗಾರದ ಕಡ್ಡಿ, ತುಳಸಿಯ ರೆಂಬೆಯ ಕಡ್ಡಿ, ಶ್ರೀಗಂಧದ ಕಡ್ಡಿ, ಪವಿತ್ರ ಬಿಲ್ವಪತ್ರೆಯ ಕಡ್ಡಿ, ತಾಮ್ರದ ಕಡ್ಡಿ, ಬೆಳ್ಳಿಯ ಕಡ್ಡಿ ಅಥವಾ ಬಂಗಾರದ ಕಡ್ಡಿಗಳನ್ನು ಬಳಸಿ ಮಗುವಿನ ನಾಲಿಗೆ ಮೇಲೆ ಓಂಕಾರವನ್ನು ಬರೆಯಲಾಗುತ್ತದೆ.

ಈ ಕ್ರಿಯೆಯಿಂದ ಮಗುವಿನ ಸಪ್ತ ಚಕ್ರಗಳು ಜಾಗೃತಗೊಳ್ಳುತ್ತವೆ ಎಂದು ಹೇಳಲಾಗುತ್ತದೆ. ತುಪ್ಪವು ಪರಿಶುದ್ಧತೆಯ ಸಂಕೇತವಾಗಿದ್ದು, ಜೇನುತುಪ್ಪವು ಮಗುವಿಗೆ ಮಧುರವಾದ ಮಾತುಗಳನ್ನು ತಂದುಕೊಡುತ್ತದೆ. ಬಂಗಾರದಿಂದ ದೇಹಕ್ಕೆ ಕಾಂತಿ ದೊರೆತು, ಋಣಾತ್ಮಕ ಶಕ್ತಿಗಳು ದೂರವಾಗುತ್ತವೆ. ಆರೋಗ್ಯದ ದೃಷ್ಟಿಯಿಂದಲೂ ಈ ಓಂಕಾರವು ಮಗುವಿನ ಜ್ಞಾನ ವೃದ್ಧಿಗೆ ಸಹಕಾರಿಯಾಗಿದ್ದು, ಮೆದುಳಿನ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ. ಆಯುರ್ವೇದದಲ್ಲೂ ಸಹ ಓಂಕಾರಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದೆ.

ಇದನ್ನೂ ಓದಿ: ಈ ವರ್ಷ ಯುಗಾದಿ ಹಬ್ಬ ಯಾವಾಗ ? ಈ ದಿನ ಏನು ಮಾಡಬೇಕು ಮತ್ತು ಏನು ಮಾಡಬಾರದು?

ಓಂಕಾರವನ್ನು ಬರೆಯಲು ಕೆಲವು ಶುಭ ದಿನಗಳು ಮತ್ತು ತಿಥಿಗಳನ್ನು ಸೂಚಿಸಲಾಗಿದೆ. ಗುರುವಾರ, ಸೋಮವಾರ ಮತ್ತು ಶುಕ್ರವಾರಗಳು ಸೂಕ್ತವಾಗಿವೆ. ಬುಧವಾರವೂ ಪ್ರಾಶಸ್ತ್ಯ ನೀಡಬಹುದು. ವಿಶೇಷವಾಗಿ ಅಕ್ಷಯ ತೃತೀಯ, ವಿಜಯದಶಮಿ, ಯುಗಾದಿ ಮತ್ತು ವಸಂತ ಪಂಚಮಿಯಂತಹ ಪವಿತ್ರ ದಿನಗಳಲ್ಲಿ ಈ ಸಂಸ್ಕಾರವನ್ನು ಮಾಡುವುದು ಉತ್ತಮ. ಅಕ್ಷಯ ತೃತೀಯ ಹೊಸ ಆರಂಭದ ಪ್ರತೀಕವಾಗಿದ್ದು, ವಿಜಯದಶಮಿ ವಿಜಯದ ಸಂಕೇತವಾಗಿದೆ. ವಸಂತ ಪಂಚಮಿಯು ಸರಸ್ವತಿ ದೇವಿಯ ಜನ್ಮದಿನವಾಗಿದೆ. ದ್ವಿತೀಯ, ತೃತೀಯ, ಪಂಚಮಿ, ಸಪ್ತಮಿ, ದಶಮಿಯಂತಹ ಶುಭ ತಿಥಿಗಳಲ್ಲಿ ಸಂಧ್ಯಾಕಾಲ ಅಥವಾ ಬ್ರಾಹ್ಮೀ ಮುಹೂರ್ತದಲ್ಲಿ ಓಂಕಾರವನ್ನು ಬರೆಸುವುದು ಅತ್ಯಂತ ಶ್ರೇಷ್ಠ. ಪುಷ್ಯ ನಕ್ಷತ್ರ ಮತ್ತು ರವಿಯೋಗವಿರುವ ಸಂದರ್ಭಗಳಲ್ಲೂ ಇದನ್ನು ಮಾಡಬಹುದು.

ಪೂರ್ವಾಭಿಮುಖವಾಗಿ ಕುಳಿತು, ದೀಪವನ್ನು ಸಾಕ್ಷಿಯಾಗಿಟ್ಟುಕೊಂಡು, ಜೇನುತುಪ್ಪ ಮತ್ತು ತುಪ್ಪವನ್ನು ಬೆರೆಸಿ ಮಗುವಿನ ನಾಲಿಗೆ ಮೇಲೆ ಓಂಕಾರ ಬರೆಯುವುದರಿಂದ ಅದಕ್ಕೆ ಅಪಾರ ಶಕ್ತಿ ದೊರೆಯುತ್ತದೆ. ಇದನ್ನು ಮೂರು, ಐದು, ಏಳು ಅಥವಾ ಒಂಬತ್ತು ವರ್ಷಗಳ ವಯಸ್ಸಿನಲ್ಲಿ ಮಾಡುವುದು ಉತ್ತಮ ಎಂದು ಹೇಳಲಾಗುತ್ತದೆ. “ಆಚಾರವೇ ಸ್ವರ್ಗ, ಅನಾಚಾರವೇ ನರಕ” ಎಂಬ ಮಾತಿನಂತೆ, ಈ ಆಚರಣೆಗಳು ಮಗುವಿನ ಉತ್ತಮ ಭವಿಷ್ಯಕ್ಕೆ ಪೂರಕವಾಗಿವೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಸೇರಿ ಆರು ರಾಜ್ಯಗಳಲ್ಲಿ ಏ. 9, 23ರಂದು ಉಪಚುನಾವಣೆ; ಮೇ 4ರಂದು ಫಲಿತಾಂಶ

ನವದೆಹಲಿ, ಮಾರ್ಚ್ 15: ದೇಶದ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆ (Assembly Elections) ಏಪ್ರಿಲ್ 9ರಿಂದ 29ರವರೆಗೂ ನಡೆಯಲಿದೆ. ಅದೇ ವೇಳೆ, ಆರು ರಾಜ್ಯಗಳಲ್ಲಿನ 8 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯೂ ಆಗಲಿದೆ. ಏಪ್ರಿಲ್ 9 ಮತ್ತು 29ರಂದು ಈ ಉಪಚುನಾವಣೆ (By Polls) ನಡೆಯುತ್ತದೆ. ಮೇ 4ರಂದು ಎಲ್ಲಾ ಕ್ಷೇತ್ರಗಳಿಗೆ ಚುನಾವಣಾ ಫಲಿತಾಂಶ (Election Results) ಪ್ರಕಟವಾಗುತ್ತದೆ.

ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಗೋವಾ, ನಾಗಲ್ಯಾಂಡ್ ಮತ್ತು ತ್ರಿಪುರಾ ರಾಜ್ಯಗಳಲ್ಲಿನ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಿಗದಿಯಾಗಿದೆ. ಕರ್ನಾಟಕ, ನಾಗಾಲ್ಯಾಂಡ್, ತ್ರಿಪುರಾ ಮತ್ತು ಗೋವಾ ರಾಜ್ಯಗಳಲ್ಲಿ ಏಪ್ರಿಲ್ 9ರಂದು ಉಪಚುನಾವಣೆ ಆಗುತ್ತದೆ. ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಏಪ್ರಿಲ್ 23ರಂದು ಉಪಚುನಾವಣೆ ನಡೆಯುತ್ತದೆ.

ಇದನ್ನೂ ಓದಿ: ಐದು ರಾಜ್ಯಗಳ ಚುನಾವಣೆ: ಏಪ್ರಿಲ್ 9ರಿಂದ 29ರವರೆಗೂ ಮತದಾನ; ಚುನಾವಣಾ ಆಯುಕ್ತ ಘೋಷಣೆ

ಕರ್ನಾಟಕದಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಉಪಚುನಾವಣೆ ಆಗುತ್ತಿದೆ. ಎಚ್. ವೈ. ಮೇಟಿ ಅವರ ನಿಧನದಿಂದ ಬಾಗಲಕೋಟೆ ವಿಧಾನಸಭಾ ಸ್ಥಾನ ತೆರವಾಗಿದೆ. ಇನ್ನು, ದಾವಣಗೆರೆ ದಕ್ಷಿಣ ಕ್ಷೇತ್ರವು ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿತ್ತು. ಈ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಮತದಾನ ಆಗುತ್ತದೆ. ನಾಮಪತ್ರ ಸಲ್ಲಿಕೆಗೆ ಮಾರ್ಚ್ 24 ಕೊನೆಯ ದಿನವಾಗಿದೆ.

ಉಪಚುನಾವಣೆ ಎದುರಿಸಲಿರುವ ಎಂಟು ಕ್ಷೇತ್ರಗಳು

  1. ಕರ್ನಾಟಕ: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ
  2. ಮಹಾರಾಷ್ಟ್ರ: ರಾಹೂರಿ ಮತ್ತು ಬಾರಾಮತಿ
  3. ಗೋವಾ: ಪೋಂಡ
  4. ಗುಜರಾತ್: ಉಮ್ರದ್
  5. ನಾಗಾಲ್ಯಾಂಡ್: ಕೋರಿಡಾಂಗ್ (ಎಸ್​ಟಿ)
  6. ತ್ರಿಪುರ: ಧರ್ಮನಗರ್

ಇದನ್ನೂ ಓದಿ: ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಮಹೂರ್ತ ಫಿಕ್ಸ್​​: ಮತದಾನ, ಫಲಿತಾಂಶ ಯಾವಾಗ?; ಇಲ್ಲಿದೆ ಮಾಹಿತಿ

ಇದೇ ವೇಳೆ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಮ್ ಮತ್ತು ಪುದುಚೆರಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಕೇರಳ, ಅಸ್ಸಾಮ್ ಮತ್ತು ಪುದುಚೆರಿಯಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತದೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಚುನಾವಣೆ ಆಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು 29ರಂದು ಎರಡು ಹಂತದಲ್ಲಿ ಚುನಾವಣೆಯಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

KHPT Recruitment 2026: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ಉದ್ಯೋಗವಕಾಶ; ಪದವೀಧರರಿಗೆ ಸುವರ್ಣವಕಾಶ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಪ್ರಮುಖ ಹುದ್ದೆಗಳ ಭರ್ತಿಗೆ ಸಿದ್ಧವಾಗಿದೆ. ಈ ನೇಮಕಾತಿ ಅಡಿಯಲ್ಲಿ ‘ಹಣಕಾಸು ಅಧಿಕಾರಿ’ (Finance Officer) ಮತ್ತು ‘ಜಿಲ್ಲಾ ಪ್ರಮುಖ’ (District Lead) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರ ಮತ್ತು ಆರೋಗ್ಯ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಅಥವಾ ವಿಜಯನಗರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಸಂಬಂಧಿತ ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ವೇತನ ಶ್ರೇಣಿಯು ಸಂಸ್ಥೆಯ ಮಾನದಂಡಗಳ ಪ್ರಕಾರ ಅತ್ಯುತ್ತಮವಾಗಿದ್ದು, ಅಭ್ಯರ್ಥಿಯ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಆಸಕ್ತರು ಮಾರ್ಚ್ 22 ರೊಳಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕೆಂದು ಸೂಚಿಸಲಾಗಿದೆ.

ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10th ಪಾಸಾಗಿದ್ರೆ ಸಾಕು!

ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಅತ್ಯಂತ ಸರಳವಾಗಿದ್ದು, ಅಭ್ಯರ್ಥಿಗಳು ಕೆಎಚ್‌ಪಿಟಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಬೇಕು. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಯು ಸರಿಯಾದ ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಐಡಿ ಪ್ರೂಫ್, ಶೈಕ್ಷಣಿಕ ದಾಖಲೆಗಳು ಮತ್ತು ನವೀಕರಿಸಿದ ರೆಸ್ಯೂಮ್ ಅನ್ನು ಸಿದ್ಧವಾಗಿಟ್ಟುಕೊಳ್ಳುವುದು ಅವಶ್ಯಕ. ಆನ್‌ಲೈನ್ ಅರ್ಜಿಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ, ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿದ ನಂತರ ಅರ್ಜಿ ಶುಲ್ಕವಿದ್ದರೆ ಪಾವತಿಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಕೊನೆಯಲ್ಲಿ ಅರ್ಜಿ ಸಲ್ಲಿಕೆಯಾದ ನಂತರ ಸಿಗುವ ಅರ್ಜಿ ಸಂಖ್ಯೆಯನ್ನು ಮುಂದಿನ ಉಲ್ಲೇಖಕ್ಕಾಗಿ ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಮರೆಯಬೇಡಿ.

ಅಧಿಕೃತ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್​ ಮಾಡಿ: KHPT-Recruitment-2026-Apply-for-Finance-Officer-Posts-Notification

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

’ಜನ ನಾಗಯನ್‘ ಸಿನಿಮಾ: ಯಶಸ್ವಿಯಾಯ್ತು ವಿಜಯ್ ರಾಜಕೀಯ ವಿರೋಧಿಗಳ ಪ್ಲ್ಯಾನ್

ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ರಾಜಕೀಯಕ್ಕೆ ಸಿಲುಕಿ ಇನ್ನೂ ಬಿಡುಗಡೆ ಆಗಿಲ್ಲ. ಜನವರಿ 09 ರಂದು ಬಿಡುಗಡೆ ಆಗಬೇಕಿತ್ತು. ಆದರೆ ಸಿನಿಮಾ ಸಿಬಿಎಫ್​​ಸಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲು ವಿಳಂಬ ನೀತಿ ಅನುಸರಿಸಿತು. ಇದೇ ಕಾರಣಕ್ಕೆ ಸಿನಿಮಾದ ನಿರ್ಮಾಣ ಸಂಸ್ಥೆಯಾದ ಕೆವಿಎನ್, ನ್ಯಾಯಾಲಯದ ಮೆಟ್ಟಿಲೇರಿತು. ಆದರೆ ಅಲ್ಲಿ ವಿಚಾರಣೆ ತಡವಾಗಿ ಸಿನಿಮಾದ ಬಿಡುಗಡೆ ಇನ್ನಷ್ಟು ವಿಳಂಬವಾಯ್ತು. ಆದರೆ ನಿರ್ಮಾಪಕರು ಕೇಸು ಹಿಂಪಡೆದು, ಸಿಬಿಎಫ್​​ಸಿಯಿಂದಲೇ ಪ್ರಮಾಣ ಪತ್ರ ಪಡೆಯಲು ಮುಂದಾದರು. ಆದರೆ ಮತ್ತೆ ಉದ್ದೇಶಪೂರ್ವಕ (?) ವಿಳಂಬ ಮಾಡಲಾಯ್ತು. ಇದೀಗ ಮತ್ತೊಮ್ಮೆ ಸಿನಿಮಾದ ಬಿಡುಗಡೆ ತಡವಾಗುತ್ತಿದೆ. ಆ ಮೂಲಕ ವಿಜಯ್ ಅವರ ರಾಜಕೀಯ ವಿರೋಧಿಗಳ ಕೈ ಮೇಲಾಗಿದೆ. ಅವರ ಉದ್ದೇಶ ಈಡೇರಿದೆ.

ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ಇಂದು (ಮಾರ್ಚ್ 15) ಘೋಷಣೆ ಆಗಿದ್ದು, ‘ಜನ ನಾಯಗನ್’ ಸಿನಿಮಾದ ನಾಯಕ ದಳಪತಿ ವಿಜಯ್ ಸಹ ಚುನಾವಣೆಗೆ ಸ್ಪರ್ಧಿಸಲಿದ್ದು, ಇಂದಿನಿಂದಲೇ ರಾಜ್ಯದಾದ್ಯಂತ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸಿನಿಮಾದ ಬಿಡುಗಡೆ ಬಹುತೇಕ ಅಸಾಧ್ಯವಾಗಿದೆ. ನೀತಿ ಸಂಹಿತೆ ಪ್ರಕಾರ, ಚುನಾವಣಾ ಪಕ್ಷದ ಪರವಾಗಿ ಪ್ರಚಾರ ಮಾಡುವ, ನಿರ್ದಿಷ್ಟ ಪಕ್ಷಕ್ಕೆ ಮತ ಹಾಕುವಂತೆ ಮತದಾರರ ಮೇಲೆ ಪ್ರಭಾವ ಬೀರುವ ಇತರೆ ರಾಜಕೀಯ ಪಕ್ಷಗಳ ಟೀಕೆ ಮಾಡುವಂಥಹಾ ಸಿನಿಮಾಗಳನ್ನು ಪ್ರದರ್ಶಿಸುವಂತಿಲ್ಲ. ಹಾಗಾಗಿ ‘ಜನ ನಾಯಗನ್’ ಸಿನಿಮಾದ ಬಿಡುಗಡೆ ಇನ್ನಷ್ಟು ವಿಳಂಬ ಆಗಲಿದೆ.

‘ಜನ ನಾಯಗನ್’ ಸಿನಿಮಾವು ತೆಲುಗಿನ ‘ಭಗವಂತ ಕೇಸರಿ’ ಸಿನಿಮಾದ ರೀಮೇಕ್ ಆಗಿದ್ದರೂ ಸಹ ಸಿನಿಮಾನಲ್ಲಿ ಕೆಲವು ರಾಜಕೀಯ ಪಕ್ಷಗಳನ್ನು ಟೀಕೆ ಮಾಡುವ ದೃಶ್ಯಗಳಿವೆ. ಅಲ್ಲದೆ, ವಿಜಯ್ ಅವರ ಪಕ್ಷದ ಬಗ್ಗೆ ಪ್ರಚಾರಾತ್ಮಕ ಎನ್ನಬಹುದಾದ ಕೆಲವು ಸಂಭಾಷಣೆಗಳು ಇವೆಯಂತೆ. ಇದೇ ಕಾರಣಕ್ಕೆ ಸಿಬಿಎಫ್​​ಸಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕಿತ್ತು. ಇದೀಗ ಮಾಡೆಲ್ ಕೋಡ್ ಆಫ್ ಕಂಡಕ್ಟ್ ಜಾರಿಗೆ ಬಂದಿರುವ ಕಾರಣ, ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಿದರೂ ಸಹ ಸಿನಿಮಾದ ಬಿಡುಗಡೆ ಅಸಾಧ್ಯ ಎಂಬಂತಾಗಿದೆ.

ಇದನ್ನೂ ಓದಿ:‘ಧುರಂಧರ್ 2’ ಜೊತೆ ಕ್ಲ್ಯಾಶ್ ಮಿಸ್ ಮಾಡಿಕೊಂಡ ‘ಟಾಕ್ಸಿಕ್’ ಎದುರು ಬರ್ತಿವೆ ಡಜನ್ ಸಿನಿಮಾಗಳು

ತಮಿಳುನಾಡು ವಿಧಾನಸಭಾ ಚುನಾವಣೆ ಏಪ್ರಿಲ್ 23, 2026 ಕ್ಕೆ ನಿಗದಿ ಆಗಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಹೊರಬೀಳಲಿದೆ. ಈ ಅವಧಿಯಲ್ಲಿ ರಾಜ್ಯದಾದ್ಯಂತ ಮಾದರಿ ಚುನಾವಣಾ ನೀತಿ ಸಂಹಿತೆ (MCC) ಜಾರಿಯಲ್ಲಿರುವುದರಿಂದ, ಫಲಿತಾಂಶದ ಬಳಿಕ ಅಂದರೆ ಮೇ ತಿಂಗಳಲ್ಲಿಯೇ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಸಾಧ್ಯ ಎನ್ನಲಾಗುತ್ತಿದೆ.

ವಿಜಯ್ ಅವರ ರಾಜಕೀಯ ವಿರೋಧಿಗಳು ‘ಜನ ನಾಯಗನ್’ ಸಿನಿಮಾವನ್ನು ಚುನಾವಣೆಗೆ ಮುಂಚೆ ಬಿಡುಗಡೆ ಮಾಡದಂತೆ ತಡೆಹಿಡಿಯಲು ಯಶಸ್ವಿ ಆಗಿದ್ದು, ವಿಜಯ್​​ಗೆ ದೊಡ್ಡ ರಾಜಕೀಯ ಪೆಟ್ಟನ್ನೇ ನೀಡಿದ್ದಾರೆ. ಇನ್ನು ವಿಜಯ್ ಅವರು ತಮಿಳಗ ವೆಟ್ರಿ ಕಳಗಂ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿದ್ದು, ರಾಜ್ಯದ ಎಲ್ಲ ಕ್ಷೇತ್ರಗಳಿಂದಲೂ ಅವರ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದಾರಂತೆ. ಸ್ವತಃ ವಿಜಯ್ ಅವರು ಎರಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link