Headlines

nagaraj11081993

ಶಾಸಕ ಯತ್ನಾಳ್​​ ಪುತ್ರನ ಆರತಕ್ಷತೆಯಲ್ಲಿ ಜನವೋ ಜನ!: ವಿವಿಧ ಗಣ್ಯರು, ಮಠಾಧೀಶರು ಭಾಗಿ

ವಿಜಯಪುರ, ಮಾರ್ಚ್​​ 15: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ರ ರಾಮನಗೌಡ ಅವರ ಅದ್ದೂರಿ ವಿವಾಹ ಆರತಕ್ಷತೆ ಕಾರ್ಯಕ್ರಮವು ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಆವರಣದಲ್ಲಿ ವಿಜೃಂಭಣೆಯಿಂದ ಜರುಗಿತು. ರಾಮನಗೌಡ ಹಾಗೂ ಅಬೋಲಿ ಅವರ ವಿವಾಹೋತ್ಸವದ ಆರತಕ್ಷತೆಯಲ್ಲಿ ಅಪಾರ ಸಂಖ್ಯೆಯ ಜನರು ಪಾಲ್ಗೊಂಡಿದ್ದರು. ನಾಡಿನ ವಿವಿಧ ಮಠಾಧೀಶರು, ರಾಜಕಾರಣಿಗಳು ಹಾಗೂ ಅನೇಕ ಗಣ್ಯ ವ್ಯಕ್ತಿಗಳು ಆಗಮಿಸಿ ನೂತನ ದಂಪತಿಗಳನ್ನು ಶುಭ ಹಾರೈಸಿದ್ದಾರೆ. ಮಂತ್ರ-ಘೋಷಗಳ ಮಧ್ಯೆ ವಧು-ವರರು ಪರಸ್ಪರ ಹಾರ ಬದಲಾಯಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಶಾಸಕ ಯತ್ನಾಳ್ ಅವರ ನೃತ್ಯ ವಿಶೇಷವಾಗಿತ್ತು….

Read More

ಬೇಸಿಗೆಯಲ್ಲಿ ಕಾಡುವ ಆಯಾಸ, ನಿರ್ಜಲೀಕರಣವನ್ನು ದೂರ ಮಾಡಲು ಸೇವಿಸಲೇಬೇಕಾದ ಆಹಾರಗಳು

ಈ ಸುಡು ಬೇಸಿಗೆಯಲ್ಲಿ (summer) ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಬಿಸಿಲಿನ ತಾಪಕ್ಕೆ ಆಯಾಸ, ಸುಸ್ತು, ನಿರ್ಜಲೀಕರಣದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ  ಈ ಸಮಯದಲ್ಲಿ ದೇಹವನ್ನು ಹೈಡ್ರೇಟ್‌ ಆಗಿ ಇಟ್ಟುಕೊಳ್ಳುವುದು ತುಂಬಾನೇ ಮುಖ್ಯ. ಇದಕ್ಕಾಗಿ ಸಾಕಷ್ಟು ನೀರು ಕುಡಿದರೆ ಸಾಕು ಎಂದು ಹಲವರು ಭಾವಿಸುತ್ತಾರೆ. ಆದರೆ ಸಾಕಷ್ಟು ಪ್ರಮಾಣದ ನೀರನ್ನು ಕುಡಿದರೂ ಬಿರು ಬೇಸಿಗೆಯಲ್ಲಿ ದೇಹ ಹೆಚ್ಚು ಬೆವರುವ ಕಾರಣ ನಿರ್ಜಲೀಕರಣ ಸಮಸ್ಯೆ ಕಾಣಿಸಿಕೊಳ್ಳಬಹುದು. ಹಾಗಾಗಿ ಸಾಕಷ್ಟು ಪ್ರಮಾಣದ ನೀರನ್ನು ಕುಡಿಯುವುದರ ಜೊತೆಗೆ ನಿರ್ಜಲೀಕರಣವನ್ನು ತಡೆಗಟ್ಟಲು…

Read More

Salary Hike: ಸರ್ಕಾರಿ ಉದ್ಯೋಗಿಗಳಿಗೆ ಶೇ 35ರಷ್ಟು ವೇತನ ಏರಿಕೆಯಾ?

ನವದೆಹಲಿ, ಮಾರ್ಚ್ 15: ಏಳನೇ ವೇತನ ಆಯೋಗದ ಅವಧಿ 2025ರ ಡಿಸೆಂಬರ್ 31ಕ್ಕೆ ಮುಗಿದಿದೆ. ಎಂಟನೇ ವೇತನ ಆಯೋಗ ಜಾರಿಗೆ ಬರುತ್ತಿದೆ. ಎಂಟನೇ ವೇತನ ಆಯೋಗವು ಕೋಟ್ಯಂತರ ಸರ್ಕಾರಿ ನೌಕರರು ಮತ್ತು ನಿವೃತ್ತರಿಗೆ ಸಂಬಳ, ಪಿಂಚಣಿ, ಭತ್ಯೆಗಳನ್ನು ಪರಿಷ್ಕರಿಸುವ ಕೆಲಸ ಮಾಡುತ್ತಿದೆ. ಅಧಿಸೂಚನೆಯಾಗಿ 18 ತಿಂಗಳೊಳಗೆ ಆಯೋಗವು ತನ್ನ ಈ ಜವಾಬ್ದಾರಿಯನ್ನು ಮುಗಿಸಬೇಕಿದೆ. ವೇತನ, ಪಿಂಚಣಿ ಮತ್ತು ಭತ್ಯೆ ಪರಿಷ್ಕರಣೆ ಕುರಿದಂತೆ ಉದ್ಯೋಗಿಗಳು, ಪಿಂಚಣಿದಾರು, ಉದ್ಯೋಗಿಗಳ ಒಕ್ಕೂಟಗಳು ಮತ್ತಿತರ ಭಾಗೀದಾರರಿಂದ ಸಲಹೆ ಸೂಚನೆಗಳನ್ನು ಆಹ್ವಾನಿಸಲಾಗಿದೆ. 2026ರ ಏಪ್ರಿಲ್…

Read More

Video: ಮೊದಲ ಬಾರಿಗೆ ಆನ್ಲೈನ್ ಪೇಮೆಂಟ್ ಮಾಡಿ ಗೆದ್ದಂತೆ ಸಂಭ್ರಮಿಸಿದ ಮಹಿಳೆ

ಹೆತ್ತವರಿಗೆ (parents) ಮಕ್ಕಳೇ ಪ್ರಪಂಚ. ಹೀಗಾಗಿ ಮಕ್ಕಳ ಸಂತೋಷಕ್ಕಾಗಿ ತಂದೆ ತಾಯಿ ಏನನ್ನೂ ಬೇಕಾದರೂ ಮಾಡಲು ಸಿದ್ಧವಿರುತ್ತಾರೆ. ಇತ್ತ ಮಕ್ಕಳಿಗೂ ಕೂಡ ತಮ್ಮ ಹೆತ್ತವರ ಮೊಗದಲ್ಲಿನ ಖುಷಿ, ಸಂತೋಷ ಕಂಡು ಖುಷಿ ಪಡುತ್ತಾರೆ. ಇಲ್ಲೊಬ್ಬಳು ಮಗಳು ತನ್ನ ತಾಯಿಯ (mother) ಖುಷಿಯನ್ನು ಕಣ್ತುಂಬಿಸಿಕೊಂಡಿದ್ದಾಳೆ. ಮಹಿಳೆಯೊಬ್ಬಳು ಮೊದಲ ಬಾರಿಗೆ ಆನ್ಲೈನ್ ಪೇಮೆಂಟ್ ಮಾಡಿದ್ದು, ಆಕೆಯ ಖುಷಿಗೆ ಪಾರಾವೇ ಇಲ್ಲದಂತಾಗಿದೆ. ಮಗಳ ಮುಂದೆ ತನ್ನ ಖುಷಿಯನ್ನು ವ್ಯಕ್ತಪಡಿಸಿರುವ ವಿಡಿಯೋ ವೈರಲ್ ಆಗಿದೆ. ಈ ಹೃದಯಸ್ಪರ್ಶಿ ದೃಶ್ಯ ನೋಡಿ ನೆಟ್ಟಿಗರು ಮೆಚ್ಚುಗೆ…

Read More

TTD Tirumala: ತಿರುಪತಿಯಲ್ಲಿ ಬೃಹತ್ ಹೈಟೆಕ್ ಅನ್ನಪ್ರಸಾದ ಕೇಂದ್ರ ನಿರ್ಮಾಣ; ರಿಲಯನ್ಸ್ ಸಂಸ್ಥೆಯಿಂದ 120 ಕೋಟಿ ರೂ. ದೇಣಿಗೆ

ವೆಂಕಟೇಶ್ವರನ ದರ್ಶನಕ್ಕೆ ಬರುವ ಲಕ್ಷಾಂತರ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನಂ (TTD) ಮತ್ತೊಂದು ಸಂತಸದ ಸುದ್ದಿ ನೀಡಿದೆ. ತಿರುಮಲದಲ್ಲಿ ಈಗಾಗಲೇ ಇರುವ ಅನ್ನಪ್ರಸಾದ ಕೇಂದ್ರಗಳ ಜೊತೆಗೆ, ಶೀಘ್ರದಲ್ಲೇ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಮತ್ತೊಂದು ಬೃಹತ್ ಊಟದ ಹಾಲ್ ಮತ್ತು ಅಡುಗೆಮನೆ ಭಕ್ತರ ಸೇವೆಗೆ ಲಭ್ಯವಾಗಲಿದೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆಶಯದಂತೆ, ಅನ್ನಪ್ರಸಾದ ವಿತರಣೆಯಲ್ಲಿ ಸಂಪೂರ್ಣ ಯಾಂತ್ರೀಕರಣ ಮತ್ತು ಆಧುನಿಕತೆಯನ್ನು ತರಲು ಟಿಟಿಡಿ ಮುಂದಾಗಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಗೆ ಭಾರತದ ಪ್ರತಿಷ್ಠಿತ ರಿಲಯನ್ಸ್ ಸಂಸ್ಥೆಯು ಸುಮಾರು…

Read More

ಮದುವೆಯಾಗಿ ಒಂದುವರೆ ವರ್ಷಕ್ಕೆ ವಿವಾಹಿತೆ ಸಾವು: ಅಳಿಯನೇ ಕೊಲೆಗೈದದ್ದು ಎಂದ ಮಹಿಳೆ ಪೋಷಕರು

ಬೆಂಗಳೂರು, ಮಾರ್ಚ್​​ 15: ಅವರದ್ದು ಕರ್ನಾಟಕದ ಗಡಿ ಭಾಗ. ಪಾವಗಡ ಮೂಲದ ಯುವತಿಗೆ ಅದೇ ಊರಿನ ಯುವಕನೊಂದಿಗೆ ಮದುವೆ ಮಾಡಿದ್ದರು. ಇನ್ನೇನು ಚೆನ್ನಾಗಿ ಇರ್ತಾರೆ ಎನ್ನುವಷ್ಟರಲ್ಲೇ ವಿವಾಹಿತ ಮಹಿಳೆ ಹೆಣವಾಗಿದ್ದಾಳೆ (death). ವರಿಸಿದವನೇ ಕೊಂದಿದ್ದಾನೆ ಎನ್ನವು ಆರೋಪ ಕೇಳಿಬರ್ತಿದೆ. ಯಲಹಂಕ ನ್ಯೂಟೌನ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು? ಬೆಂಗಳೂರಿನ ಯಲಹಂಕ ನ್ಯೂಟೌನ್​​​ನ ಬೃಂದಾವನ ಲೇಔಟ್​​ನಲ್ಲಿ ವಾಸವಿದ್ದ 24 ವರ್ಷದ ಶೃತಿ ಇಂದು ಹೆಣವಾಗಿ ಬಿದ್ದಿದ್ದಾಳೆ. ಕಳೆದ 2024ರ ಡಿಸೆಂಬರ್‌ನಲ್ಲಿ ಪವನ್ ಕಲ್ಯಾಣ್ ಎಂಬಾತನ ಜೊತೆ ಶೃತಿ…

Read More

ಕ್ರಿಕೆಟರ್ ಆಗಬೇಕಿದ್ದ ‘ಧುರಂಧರ್’ ನಿರ್ದೇಶಕ ಆದಿತ್ಯ ಸಿನಿಮಾ ರಂಗಕ್ಕೆ ಬಂದಿದ್ದು ಹೇಗೆ?

‘ಧುರಂಧರ್’ (Dhurandhar) ಬಾಕ್ಸ್ ಆಫೀಸ್ ಅನ್ನು ಧೂಳಿಪಟ ಮಾಡಿದ ಸಿನಿಮಾ. 2025ರಲ್ಲಿ ಬಿಡುಗಡೆ ಆದ ಈ ಸಿನಿಮಾ ನಿರ್ದೇಶಿಸಿದ್ದು ಆದಿತ್ಯ ಧರ್. ‘ಧುರಂಧರ್’ ಅಂಥಹಾ ಬ್ಲಾಕ್ ಬಸ್ಟರ್ ಸಿನಿಮಾ ನಿರ್ದೇಶಿಸುವುದಕ್ಕೆ ಮುಂಚೆ ಆದಿತ್ಯ ನಿರ್ದೇಶಿಸಿದ್ದು ಕೇವಲ ಒಂದೇ ಒಂದು ಸಿನಿಮಾ, ಅದೂ ಸಹ ಬ್ಲಾಕ್ ಬಸ್ಟರ್ ಆಗಿತ್ತು. ಅದುವೇ ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’. ಆದರೆ ಎರಡು ಸೂಪರ್ ಹಿಟ್ ಸಿನಿಮಾ ನೀಡಿ, ಇದೀಗ ‘ಧುರಂಧರ್ 2’ ಮೂಲಕ ಮತ್ತೊಂದು ಬ್ಲಾಕ್ ಬಸ್ಟರ್ ಸಿನಿಮಾ ನೀಡಲು ಸಜ್ಜಾಗಿರುವ…

Read More

Video: ಕೊಲ್ಲಂನಲ್ಲಿ ಗ್ಯಾಂಗ್‌ಸ್ಟರ್ ಅಲುವಾ ಅತುಲ್ ಬರ್ಬರ ಹತ್ಯೆ

ಕೊಲ್ಲಂ, ಮಾರ್ಚ್​ 15: ಕೇರಳದ ಕೊಲ್ಲಂ ಜಿಲ್ಲೆಯ ಕರುಣಗಪ್ಪಲ್ಲಿ ಪ್ರದೇಶದಲ್ಲಿ ಹಾಡಹಗಲೇ ಗ್ಯಾಂಗ್​ಸ್ಟರ್ ಅಲುವಾ ಅತುಲ್​​ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಗ್ಯಾಂಗ್ ವಾರ್ ನಡೆಯುವ ಸಾಧ್ಯತೆಯ ಬಗ್ಗೆ ಹೊಸ ಕಳವಳ ವ್ಯಕ್ತವಾಗಿದೆ.2025 ರಲ್ಲಿ ನಡೆದ ಗ್ಯಾಂಗ್ ಲೀಡರ್ ಜಿಮ್ ಸಂತೋಷ್ ಹತ್ಯೆಯಲ್ಲಿ ಪ್ರಮುಖ ಆರೋಪಿಯಾಗಿದ್ದ ಅಲುವಾ ಅತುಲ್ ಇತ್ತೀಚೆಗೆ ಜಾಮೀನು ಪಡೆದಿದ್ದ.ಅತುಲ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಐದು ಜನರ ಗುಂಪು ಉದ್ದೇಶಪೂರ್ವಕವಾಗಿ ಆತನ ವಾಹನಕ್ಕೆ ತಮ್ಮ ವಾಹನ ಡಿಕ್ಕಿ ಹೊಡೆಸಿ, ಅಪಘಾತ ಮಾಡಿದಿ, ಬಳಿಕ ಕಾರನ್ನು…

Read More

ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ: ಸಹೋದರರಿಂದಲೇ ಹಲ್ಲೆಗೊಳಗಾಗಿದ್ದ ವ್ಯಕ್ತಿ ಸಾವು

ಗದಗ, ಮಾರ್ಚ್​​ 15: ಮನೆ ಮಗಳ ಮದುವೆ ಅಂದ್ರೆ ದೊಡ್ಡಪ್ಪ-ಚಿಕ್ಕಪ್ಪಂದಿರ ಸಮೇತ ಕುಟುಂಬಸ್ಥರೆಲ್ಲ ಸಂಭ್ರಮಿಸ್ತಾರೆ. ಪ್ರತಿಯೊಂದು ಕೆಲಸವನ್ನು ಖುದ್ದಾಗಿ ತಾವೇ ನಿಂತು ನಿಭಾಯಿಸುತ್ತಾರೆ. ಮನೆ ಮಗಳು ಹೋದ ಮನೆಯಲ್ಲಿಯೂ ಚೆನ್ನಾಗಿರಬೇಕೆಂಬ ಕಾರಣಕ್ಕೆ ಯಾವ ತ್ಯಾಗಕ್ಕೂ ಸಿದ್ಧರಿರುತ್ತಾರೆ. ಆದರೆ ಗದಗದಲ್ಲಿ ಇವೆಲ್ಲದಕ್ಕೂ ತದ್ವಿರುದ್ಧ ಎಂಬ ಘಟನೆಯೊಂದು ನಡೆದಿದೆ. ಮಗಳ ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸಹೋದರರಿಂದಲೇ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಪ್ರಾಣ ಬಿಟ್ಟಿದ್ದಾರೆ. ಹೌದು, ಗಿರೀಶಪ್ಪ ಆಲೂರು(47) ಮೃತ ದುರ್ದೈವಿ. ಮಗಳ ಮದುವೆ…

Read More

ಒಂಟಿ ದಂತದ ಕಾಡಾನೆ ಹಾವಳಿಗೆ ಕಾಡಂಚಿನ ಗ್ರಾಮಸ್ಥರು ಹೈರಾಣು: ಒಂದೇ ಏಟಿಗೆ ಕಬ್ಬಿಣದ ಗೇಟ್ ಛಿದ್ರ

ಚಾಮರಾಜನಗರ, ಮಾರ್ಚ್​​ 15: ಒಂಟಿ ದಂತದ ಆನೆ ಹಾವಳಿಗೆ ಕಾಡಂಚಿನ ಗ್ರಾಮಸ್ಥರು ಹೈರಾಣಾಗಿದ್ದಾರೆ. ಒಂಟಿ ಸಲಗನ ಏಟಿಗೆ ಕಬ್ಬಿಣದ ಗೇಟ್ ಛಿದ್ರವಾದ ಘಟನೆ ಚಾಮರಾಜನಗರದ ಗಡಿಗ್ರಾಮ ತಮಿಳುನಾಡಿನ ಅರಳವಾಡಿಯಲ್ಲಿ ನಡೆದಿದೆ. ವಾಹನವೊಂದು ಬರುತ್ತಿದ್ದನ್ನು ಕಂಡ ಒಂಟಿದಂತದ ಕಾಡಾನೆ ಸಲೀಸಾಗಿ ಗೇಟ್ ಮುರಿದು ತೋಟಕ್ಕೆ ನುಗ್ಗಿ ಬೆಳೆ ಮೇಯ್ದಿದೆ. ಕಾಡಾನೆ ಗೇಟ್ ಮುರಿದು ಒಳನುಗ್ಗುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ. ಸದ್ಯ ಕರ್ನಾಟಕ ಮತ್ತು ತಮಿಳುನಾಡಿನ ಜನರಿಗೆ ಕಾಡಾನೆ ತಲೆನೋವಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More