Headlines

nagaraj11081993

ಫಾರ್ಮುಲಾ-1 ರೇಸ್​ಗೂ ತಟ್ಟಿದ ಯುದ್ಧದ ಬಿಸಿ!

ಬಹ್ರೇನ್ ಮತ್ತು ಸೌದಿ ಅರೇಬಿಯಾ ಗ್ರ್ಯಾಂಡ್ ಪ್ರಿಕ್ಸ್ ರೇಸ್‌ಗಳು ಏಪ್ರಿಲ್‌ ತಿಂಗಳಲ್ಲಿ ನಡೆಯುವುದಿಲ್ಲ ಎಂದು ಫಾರ್ಮುಲಾ ಒನ್ ಮ್ಯಾನೇಜ್ಮೆಂಟ್ (FOM) ಮತ್ತು ಇಂಟರ್ನ್ಯಾಷನಲ್ ಆಟೋಮೊಬೈಲ್ ಫೆಡರೇಶನ್ (FIA) ಅಧಿಕೃತವಾಗಿ ಘೋಷಿಸಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಕ್ಷಿಪಣಿ ದಾಳಿಗಳ ಭೀತಿಯಿಂದಾಗಿ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಫ್​ಐಎ ತಿಳಿಸಿದೆ. ಇತ್ತ ಎರಡು ರೇಸ್​ಗಳು ಕ್ಯಾನ್ಸಲ್ ಆದರೂ ಬದಲಿಗೆ ಈ ಸೀಸನ್​ನಲ್ಲಿ ಯಾವುದೇ ಹೊಸ ರೇಸ್‌ಗಳನ್ನು ಸೇರಿಸಲಾಗುತ್ತಿಲ್ಲ ಎಂಬುದನ್ನು ಸಹ ಸ್ಪಷ್ಟಪಡಿಸಲಾಗಿದೆ. ಇದರಿಂದಾಗಿ 2026ರ ಸೀಸನ್ 24…

Read More

‘ಸತ್ಯ’, ‘ಕಂಪನಿ’ ಸಿನಿಮಾ ಸೇರಿಸಿ ‘ಧುರಂಧರ್’ ಮಾಡಿದ ಆದಿತ್ಯ ಧಾರ್: ವಿಷಯ ಬಯಲು

‘ಧುರಂಧರ್’ (Dhurandhar) ಚಿತ್ರದ ದೃಶ್ಯಗಳು ರಾಮ್ ಗೋಪಾಲ್ ವರ್ಮಾ ನಿರ್ದೇಶನದ ‘ಸತ್ಯ’ ಚಿತ್ರವನ್ನು ಹೋಲುತ್ತವೆ ಎಂಬ ವಿಡಿಯೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ‘ಧುರಂಧರ್’ ನಿರ್ದೇಶಕ ಆದಿತ್ಯ ಧಾರ್ (Aditya Dhar) ಅವರು ಆರ್​ಜಿವಿ ಶೈಲಿಯನ್ನು ನಕಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ರಾಮ್ ಗೋಪಾಲ್ ವರ್ಮಾ (Ram Gopal Varma) ಮಾತನಾಡಿದ್ದಾರೆ. ಸಿನಿಮಾ ರಂಗದಲ್ಲಿ ಒಬ್ಬರ ಕೆಲಸದಿಂದ ಇನ್ನೊಬ್ಬರು ಪ್ರಭಾವಿತರಾಗುವುದು ಸಾಮಾನ್ಯ ಎಂದು ವರ್ಮಾ ಅಭಿಪ್ರಾಯಪಟ್ಟಿದ್ದಾರೆ. ‘ಆದಿತ್ಯ ಧಾರ್ ಪ್ರಜ್ಞಾಪೂರ್ವಕವಾಗಿ…

Read More

ಮೈಸೂರು ಚಾಮುಂಡೇಶ್ವರಿ ದೇವಿ ಲಡ್ಡು ಪ್ರಸಾದಕ್ಕೂ ಗ್ಯಾಸ್ ಕೊರತೆ ಬಿಸಿ: ಲಡ್ಡು ತಯಾರಿಸಲು ನಿರ್ಮಾಣವಾಗ್ತಿದೆ ವಿಶೇಷ ಸೌದೆ ಒಲೆ!

ಮೈಸೂರು, ಮಾರ್ಚ್​ 15: ಕರ್ನಾಟಕದಾದ್ಯಂತ (Karnataka) ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗುತ್ತಿರುವ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲೂ ಅದರ ಪರಿಣಾಮ ಕಾಣಿಸಿಕೊಳ್ಳುತ್ತಿದೆ. ಪ್ರಸಿದ್ಧ ಚಾಮುಂಡೇಶ್ವರಿ ದೇವಿ ದೇವಸ್ಥಾನದ ಲಡ್ಡು ಪ್ರಸಾದ ತಯಾರಿಕೆಗೆ ಗ್ಯಾಸ್ ಕೊರತೆ ತಲೆದೋರಿರುವುದರಿಂದ ಇದೀಗ ಸೌದೆ ಒಲೆ ಬಳಸಿ ಲಡ್ಡು ತಯಾರಿಸಲು ದೇವಸ್ಥಾನ ಪ್ರಾಧಿಕಾರ ಮುಂದಾಗಿದೆ. ಅದಕ್ಕಾಗಿ ವಿಶೇಷ ರೀತಿಯ ಸೌದೆ ಒಲೆಯನ್ನೂ ಸಿದ್ಧಪಡಿಸಲಾಗುತ್ತಿದೆ. ಸಾಮಾನ್ಯವಾಗಿ ಲಡ್ಡು ಪ್ರಸಾದವನ್ನು ಗ್ಯಾಸ್ ಒಲೆಯಲ್ಲಿ ತಯಾರಿಸಲಾಗುತ್ತದೆ. ಆದರೆ ಸದ್ಯ ಕಮರ್ಷಿಯಲ್ ಸಿಲಿಂಡರ್‌ಗಳು ಸಮರ್ಪಕವಾಗಿ ದೊರೆಯದ ಕಾರಣ…

Read More

ಮೊಜ್ತಬಾ ಖಮೇನಿ ಜೀವಂತವಿಲ್ಲ, ಇರಾನ್ ಕದನ ವಿರಾಮಕ್ಕೆ ಸಿದ್ಧವಾಗಿದೆ, ಆದರೆ ನಮಗೆ ಮನಸ್ಸಿಲ್ಲ ಎಂದ ಟ್ರಂಪ್

ವಾಷಿಂಗ್ಟನ್, ಮಾರ್ಚ್​ 15: ಇರಾನ್​ನ ನೂತನ ಸರ್ವೋಚ್ಚ ನಾಯಕನಾಗಿ ನೇಮಕಗೊಂಡಿರುವ ಮೊಜ್ತಬಾ ಖಮೇನಿ(Mojtaba Khamenei) ಬದುಕಿಲ್ಲ, ಇರಾನ್ ಕದನ ವಿರಾಮಕ್ಕೆ ಸಿದ್ಧವಾಗಿದೆ ಆದರೆ ನಮಗೆ ಮನಸ್ಸಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ.  ಎನ್‌ಬಿಸಿ ನ್ಯೂಸ್ ಮತ್ತು ಫಾಕ್ಸ್ ನ್ಯೂಸ್ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ, ಫೆಬ್ರವರಿ 28 ರಂದು ಯುಎಸ್-ಇಸ್ರೇಲಿ ದಾಳಿಯ ಸಮಯದಲ್ಲಿ ಅವರ ತಂದೆ ಅಲಿ ಖಮೇನಿ ನಿಧನರಾದ ನಂತರ ನೇಮಕಗೊಂಡ ನಂತರ ಮೊಜ್ತಬಾ ಖಮೇನಿ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ.ಅವರು ಜೀವಂತವಾಗಿದ್ದಾರೆಯೇ ಎಂದು ನನಗೆ ತಿಳಿದಿಲ್ಲ….

Read More

Daily Devotional: ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಬೇಕು ಎನ್ನುವುದೇಕೆ? ಜ್ಯೋತಿಷ್ಯ ಸಲಹೆ ಇಲ್ಲಿದೆ

ಮನೆಯ ಹೊಸ್ತಿಲಿನಲ್ಲಿ ಮಹಾಲಕ್ಷ್ಮಿಯ ಕೃಪೆ ಮತ್ತು ಅನುಗ್ರಹ ಸದಾ ನೆಲೆಸಿರುತ್ತದೆ ಎಂದು ಹೇಳಲಾಗುತ್ತದೆ. ಇವತ್ತಿನ ದಿನ ಹೊಸ್ತಿಲಿನ ಮಹತ್ವ ಮತ್ತು ವಿಶೇಷತೆಗಳನ್ನು ತಿಳಿಯೋಣ. ಮನೆಯಿಂದ ಹೊರಗೆ ಹೋಗುವಾಗ ಅಥವಾ ಒಳಗೆ ಬರುವಾಗ ಹೊಸ್ತಿಲಿನ ದರ್ಶನ ಮತ್ತು ಸ್ಪರ್ಶವು ನಮ್ಮ ಜೀವನದ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ. ಏಕೆಂದರೆ ಮಹಾಲಕ್ಷ್ಮಿಯ ಅನುಗ್ರಹ ಈ ಹೊಸ್ತಿಲಿನಲ್ಲಿಯೇ ಇರುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ…

Read More

World Consumer Rights Day 2026: ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಏಕೆ ಆಚರಿಸಲಾಗುತ್ತದೆ? ಅದರ ಉದ್ದೇಶವನ್ನು ತಿಳಿಯಿರಿ

ಆನ್‌ಲೈನ್‌ ಆಗಿರಲಿ ಅಥವಾ ಆಫ್‌ಲೈನ್‌ ಮಾರುಕಟ್ಟೆಗಳಲ್ಲಾಗಿರಲಿ ಗ್ರಾಹಕರಿಗೆ (Consumer) ಸರಿಯಾದ ಸೇವೆಗಳು ಲಭಿಸುವುದಿಲ್ಲ ಹಾಗೆಯೇ ಕಲಬೆರಕೆ, ಕಳಪೆ ಗುಣಮಟ್ಟದ ಉತ್ಪನ್ನ, ಬೆಲೆ ಹೆಚ್ಚಳ, ಕಳಪೆ ಗುಣಮಟ್ಟದ ಸರಕುಗಳ ಮಾರಾಟ ಸೇರಿದಂತೆ ಒಂದಷ್ಟು ವಿಷಯಗಳಲ್ಲಿ ಮೋಸಗಳಾಗುತ್ತವೆ. ಮಾರುಕಟ್ಟೆಗಳಲ್ಲಿ ನಡೆಯುವಂತಹ ಈ ಮೋಸ ಮತ್ತು ವಂಚನೆಗಳಿಗೆ ಪರಿಹಾರ ಪಡೆಯುವುದು ಹೇಗೆ ಎಂಬ ಬಗ್ಗೆ ಹೆಚ್ಚಿನ ಗ್ರಾಹಕರಿಗೆ ತಿಳಿದಿಲ್ಲ. ಈ ನಿಟ್ಟಿನಲ್ಲಿ ಗ್ರಾಹಕರಿಗಾಗಿ ಇರುವಂತಹ ಹಕ್ಕುಗಳು ಯಾವುವು, ಆ ಹಕ್ಕುಗಳ ಮುಖಾಂತರ ಯಾವ ರೀತಿ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ…

Read More

Gold Rates: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 15: ಇರಾನ್ ಯುದ್ಧದ ಪರಿಣಾಮವೆಂಬಂತೆ ಚಿನ್ನದ ಬೆಲೆ (Gold Rates) ಸತತವಾಗಿ ಇಳಿಯುತ್ತಿದೆ. ಬೆಳ್ಳಿ ಬೆಲೆಯೂ ತಗ್ಗುತ್ತಿದೆ. ಚಿನ್ನದ ಬೆಲೆ ಕಳೆದ ಈ ತಿಂಗಳು ಒಂದು ಗ್ರಾಮ್​​ಗೆ 1,230 ರೂನಷ್ಟು ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 15,865 ರೂನಿಂದ 14,635 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 16,000 ರೂ ಗಡಿಯೊಳಗೆ ಬಂದಿದೆ. ಮಾರ್ಚ್ ಆರಂಭದಲ್ಲಿ ಬೆಳ್ಳಿ ಬೆಲೆ ಗ್ರಾಮ್​ಗೆ 315 ರೂ ಇತ್ತು. ಎರಡು ವಾರದಲ್ಲಿ ಬೆಲೆ ಗ್ರಾಮ್​​ಗೆ ಬರೋಬ್ಬರಿ 40…

Read More

ಹೆಗ್ಗೆರೆ ಬಳಿ ಕಾರು-ಲಾರಿ ಭೀಕರ ಅಪಘಾತ; ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!

ಚಿತ್ರದುರ್ಗ, ಮಾರ್ಚ್​ 15: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಘಟನೆ ಮೃತರನ್ನು ಮಂಜುನಾಥ್, ಅಂಬರೀಷ್ ಮತ್ತು ಸಚಿನ್…

Read More

ಇಂದು ಕೇರಳ, ಬಂಗಾಳ, ತಮಿಳುನಾಡು, ಅಸ್ಸಾಂ, ಪುದುಚೇರಿ ಚುನಾವಣಾ ವೇಳಾಪಟ್ಟಿ ಘೋಷಣೆ ಸಾಧ್ಯತೆ

ನವದೆಹಲಿ, ಮಾರ್ಚ್​ 15:ಭಾರತ ಚುನಾವಣಾ ಆಯೋಗವು (ECI) ಇಂದು(ಮಾರ್ಚ್​ 15) ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆ(Assembly Election)ಯ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.ಇದು ದೇಶಾದ್ಯಂತ ಪ್ರಮುಖ ಚುನಾವಣಾ ಸ್ಪರ್ಧೆಗೆ ವೇದಿಕೆಯನ್ನು ಸಿದ್ಧಪಡಿಸುತ್ತದೆ. ಚುನಾವಣಾ ಆಯೋಗವು ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿಯನ್ನು ನಡೆಸಲಿದೆ. ಏಪ್ರಿಲ್‌ನಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದ್ದು, ಮೇ ತಿಂಗಳ ಆರಂಭದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ, ಏಕೆಂದರೆ ಆ ವೇಳೆಗೆ ಹಲವಾರು ರಾಜ್ಯಗಳ ವಿಧಾನಸಭೆಗಳ ಅವಧಿ ಮುಕ್ತಾಯಗೊಳ್ಳಲಿದೆ….

Read More

ಬಿಗ್ ಬಾಸ್ ಖ್ಯಾತಿಯ ಅನುರಾಗ್ ದೊಭಾಲ್ ಸ್ಥಿತಿ ಗಂಭೀರ: ಹೆಚ್ಚಿದೆ ಶ್ವಾಸಕೋಶದ ಸೋಂಕು

ಖ್ಯಾತ ಯೂಟ್ಯೂಬರ್ ಹಾಗೂ ಬಿಗ್ ಬಾಸ್ 17ರ ಸ್ಪರ್ಧಿ ಅನುರಾಗ್ ದೊಭಾಲ್ (Anurag Dobhal) ಅಲಿಯಾಸ್ ಯುಕೆ 07 ರೈಡರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಇತ್ತೀಚೆಗಷ್ಟೇ ಅವರನ್ನು ಐಸಿಯುನಿಂದ ಹೊರತಂದು ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಆದರೆ ಈಗ ಅವರನ್ನು ಮತ್ತೆ ಐಸಿಯುಗೆ (ICU) ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ಅಪಘಾತಕ್ಕೀಡಾಗಿದ್ದ ಅವರ ಶ್ವಾಸಕೋಶದಲ್ಲಿ ತೀವ್ರ ಸೋಂಕು ಕಾಣಿಸಿಕೊಂಡಿರುವುದೇ ಇದಕ್ಕೆ ಕಾರಣ ಎಂದು ಅವರ ಮ್ಯಾನೇಜರ್ ತಿಳಿಸಿದ್ದಾರೆ. ಅನುರಾಗ್ ಅವರ ಮ್ಯಾನೇಜರ್ ರೋಹಿತ್ ಪಾಂಡೆ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ…

Read More