ಕುಡಿದ ಮತ್ತಿನಲ್ಲಿ ತಂದೆಯನ್ನು ಕೊಂದು, ತನ್ನ ಮಣಿಕಟ್ಟನ್ನೇ ಕೊಯ್ದುಕೊಂಡ ವ್ಯಕ್ತಿ
ಮೀರತ್, ಮಾರ್ಚ್ 15: ಕುಡಿದ ಮತ್ತಲ್ಲಿ ತಂದೆಯನ್ನು ಕೊಂದಿದ್ದಲ್ಲದೇ ತನ್ನ ಮಣಿಕಟ್ಟನ್ನೇ ವ್ಯಕ್ತಿ ಕೊಯ್ದುಕೊಂಡಿರುವ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ. ಸಿವಿಲ್ ಲೈನ್ಸ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಇಟ್ಟಿಗೆಯಿಂದ ತಂದೆಯ ತಲೆಗೆ ಹೊಡೆದು ಹತ್ಯೆ ಮಾಡಿದ್ದಾನೆ. ಪೊಲೀಸರ ಪ್ರಕಾರ, ದಾಳಿಯ ನಂತರ ಆರೋಪಿಯು ಚಾಕುವಿನಿಂದ ತನ್ನ ಮಣಿಕಟ್ಟನ್ನು ತಾನೇ ಕೊಯ್ದುಕೊಂಡಿದ್ದಾನೆ. ಪೊಲೀಸರು ಸ್ಥಳಕ್ಕೆ ಬಂದಾಗ ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ತಂದೆ ಮತ್ತು ಮಗ ಒಟ್ಟಿಗೆ ಮದ್ಯಪಾನ ಮಾಡುತ್ತಿದ್ದಾಗ ಅವರ ನಡುವೆ ವಾಗ್ವಾದ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ….