Headlines

nagaraj11081993

ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ

ನಟ ಧ್ರುವ ಸರ್ಜಾ ಅವರು ‘ಕೆಡಿ’ ಸಿನಿಮಾದ (KD Movie) ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಹೊಸ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಅದರಲ್ಲಿ ಭಾಗಿಯಾದ ಧ್ರುವ ಸರ್ಜಾ (Dhruva Sarja) ಅವರಿಗೆ ಹಲವು ಪ್ರಶ್ನೆಗಳು ಎದುರಾದವು. ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿ ಮಾಡುವುದು ಯಾಕೆ ಎಂಬುದನ್ನು ಕೂಡ ಅವರ ವಿವರಿಸಿದರು. ‘ಈ ಗೆಜೆಟ್ಸ್ ಯುಗದಲ್ಲಿ ಪರಸ್ಪರ ಭೇಟಿ ಆಗುವುದೇ ಕಡಿಮೆ ಆಗಿದೆ. ಹಾಗಾಗಿ ನನ್ನನ್ನು ಇಷ್ಟಪಡುವ ಜನರನ್ನು ನಾನು ಪ್ರತಿ ಭಾನುವಾರ…

Read More

ಐಪಿಎಲ್​ ಆರಂಭಕ್ಕೂ ಮುನ್ನವೇ ಹೊಸ ಕಂಡೀಷನ್ ಹಾಕಿದ ರೋಹಿತ್ ಶರ್ಮಾ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನು ಉಳಿದಿರುವುದು ದಿನಗಳು ಮಾತ್ರ. ಇತ್ತ ಎಲ್ಲಾ ಫ್ರಾಂಚೈಸಿಗಳು ಪ್ರೀ ಸೀಸನ್ ಕ್ಯಾಂಪ್ ಶುರು ಮಾಡಿದೆ. ಈ ಕ್ಯಾಂಪ್​ಗೆ ಸೇರುವ ಮುನ್ನವೇ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್​ಗೆ ಹೊಸ ಕಂಡೀಷನ್ ಹಾಕಿದ್ದಾರೆ ಎಂದು ವರದಿಯಾಗಿದೆ. ಆ ಕಂಡೀಷನ್ ಏನೆಂದರೆ ‘ ನೋ ಇಂಪ್ಯಾಕ್ಟ್ ಪ್ಲೇಯರ್’. ಅಂದರೆ ಐಪಿಎಲ್ 2026 ರಲ್ಲಿ ‘ಇಂಪ್ಯಾಕ್ಟ್ ಪ್ಲೇಯರ್’ ಆಗಿ ಆಡಲು ರೋಹಿತ್ ಶರ್ಮಾ ನಿರಾಕರಿಸಿದ್ದಾರೆ. ಈ ಬಗ್ಗೆ ಅವರು ಮುಂಬೈ ಇಂಡಿಯನ್ಸ್  ಮ್ಯಾನೇಜ್‌ಮೆಂಟ್‌ಗೆ ಸ್ಪಷ್ಟ…

Read More

ಇಸ್ರೇಲ್-ಇರಾನ್ ಯುದ್ಧ ಪರಿಣಾಮ: ಯಾದಗಿರಿ ಆಯ್ತು ಈಗ ರಾಯಚೂರಿನ ರೈಸ್ ಮಿಲ್​ಗಳಿಗೂ ಆರ್ಥಿಕ ಸಂಕಷ್ಟ!

ರಾಯಚೂರು, ಮಾರ್ಚ್ 15: ಇಸ್ರೇಲ್-ಇರಾನ್ ಯುದ್ಧದ ಪರಿಣಾಮವಾಗಿ, ಕರ್ನಾಟಕದ ಭತ್ತದ ನಾಡು ರಾಯಚೂರಿನ ರೈಸ್ ಮಿಲ್‌ಗಳು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿವೆ. ವಿದೇಶಗಳಿಗೆ ರಫ್ತಾಗುತ್ತಿದ್ದ ಅಪಾರ ಪ್ರಮಾಣದ ಅಕ್ಕಿ ಸಾಗಾಟ ಸಂಪೂರ್ಣ ಸ್ಥಗಿತಗೊಂಡಿದ್ದು, ರೈಸ್ ಮಿಲ್ಲರ್ಸ್ ಅಸೋಸಿಯೇಷನ್ ಆತಂಕ ವ್ಯಕ್ತಪಡಿಸಿದೆ. ರಾಯಚೂರಿನಿಂದ ಯುರೋಪ್, ಅರಬ್, ಆಫ್ರಿಕಾ ಮತ್ತು ಅಮೆರಿಕ ಸೇರಿದಂತೆ ಹಲವು ದೇಶಗಳಿಗೆ ಸೋನಾಮಸೂರಿ ಮತ್ತು ಆರ್.ಎನ್.ಆರ್‌ನಂತಹ ಉತ್ತಮ ಗುಣಮಟ್ಟದ ಅಕ್ಕಿ ರಫ್ತಾಗುತ್ತಿತ್ತು. ಸದ್ಯ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿದಿರುವುದರಿಂದ ಲಕ್ಷಾಂತರ ಟನ್ ಅಕ್ಕಿ ಮಿಲ್‌ಗಳಲ್ಲಿ ದಾಸ್ತಾನಾಗಿದೆ. ಇದು…

Read More

ತುಳುನಾಡಿನಲ್ಲೇ ದೈವಕ್ಕೆ ಅಪಚಾರ? ಕ್ರಿಶ್ಚಿಯನ್ ಹುಡುಗನಿಂದ ದೈವ ನರ್ತನ ಆರೋಪ!

ಮಂಗಳೂರು, ಮಾರ್ಚ್​ 15: ತುಳುನಾಡಿನ ಪ್ರಸಿದ್ಧ ದೈವಾರಾಧನೆಯ ದೈವ ನರ್ತನ (Daiva Nartana)ಇದೀಗ ಭಾರೀ ವಿವಾದದಕ್ಕೆ ಕಾರಣವಾಗಿದೆ. ಮಂಗಳೂರಿನ ಪ್ರಸಿದ್ಧ ದೈವಸ್ಥಾನದಲ್ಲಿ ನಡೆದ ನೇಮೋತ್ಸವದ ವೇಳೆ ಬಂಟ ದೈವಕ್ಕೆ ಕ್ರೈಸ್ತ ಧರ್ಮದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಘಟನೆ ತುಳುನಾಡಿನ ದೈವಾರಾಧನೆ ಪರಂಪರೆಯ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಗಿದೆ. ತಂದೆ ಹಿಂದೂ, ತಾಯಿ ಕ್ರಿಶ್ಚಿಯನ್! ಜನವರಿ 31ರಂದು ಮಂಗಳೂರಿನ ಪ್ರಸಿದ್ಧ ದೈವಕ್ಷೇತ್ರದಲ್ಲಿ ಶ್ರೀ ಜಾರಂದಾಯ ಹಾಗೂ ಬಂಟ ದೈವಕ್ಕೆ ನೇಮೋತ್ಸವ…

Read More

ಬೆಂಗಳೂರು: ಯುವತಿಗೆ ಕಿರುಕುಳ ಕೊಟ್ಟು ಹಲ್ಲೆಗೆ ಯತ್ನ, ಸಿಸಿಟಿವಿಲಿ ಸೆರೆಯಾಯ್ತು ಯುವಕನ ಅಟ್ಟಹಾಸದ ವಿಡಿಯೋ

ಬೆಂಗಳೂರು, ಮಾರ್ಚ್ 15: ಬೆಂಗಳೂರಿನ ಇಂದಿರಾನಗರದಲ್ಲಿ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಯುವತಿಯ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ದೊಮ್ಮಲೂರು ಪ್ರದೇಶದಲ್ಲಿರುವ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ಯುವತಿಗೆ ಮನು ಶರ್ಮಾ ಎಂಬಾತ ಪ್ರತಿದಿನವೂ ಕಿರುಕುಳ ನೀಡುತ್ತಿದ್ದ. ತನ್ನೊಂದಿಗೆ ಸಂಬಂಧ ಇಟ್ಟುಕೊಳ್ಳುವಂತೆ ಒತ್ತಾಯ ಮಾಡುತ್ತಿದ್ದ ಆರೋಪಿಯು, ಯುವತಿ ಅದಕ್ಕೆ ಒಪ್ಪದಿದ್ದಾಗ ಆಕೆಯೊಂದಿಗೆ ಗಲಾಟೆ ನಡೆಸಿದ್ದಾನೆ. ಯುವತಿ ಮಾತ್ರವಲ್ಲದೆ, ಆಕೆಯ ಸ್ನೇಹಿತೆಯೊಂದಿಗೆ ಸಹ ಆರೋಪಿಯು ಜಗಳವಾಡಿ ಕಿರುಕುಳ ನೀಡಿದ್ದಾನೆ ಎಂಬ ಆರೋಪವಿದೆ….

Read More

ಟೀಮ್ ಇಂಡಿಯಾ ಆಟಗಾರರಿಗೆ ಈ ವಿಷಯದಲ್ಲಿ ‘ಹೊಟ್ಟೆಕಿಚ್ಚು’ ಇದೆ!

ಟೀಮ್ ಇಂಡಿಯಾದ ಆರಂಭಿಕ ಜೋಡಿ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಮತ್ತೆ ಜೊತೆಯಾಗಿದ್ದಾರೆ. ಆದರೆ ಈ ಬಾರಿ ಮೈದಾನದಲ್ಲಿ ಅಲ್ಲ. ಬದಲಾಗಿ ಖಾಸಗಿ ಕಾರ್ಯಕ್ರಮವೊಂದರಲ್ಲಿ. ಈ ಕಾರ್ಯಕ್ರಮದಲ್ಲಿ ನಡೆಸಲಾದ ಚಿಟ್​ ಚಾಟ್​ನಲ್ಲಿ ಟೀಮ್ ಇಂಡಿಯಾ ಆಟಗಾರರು ಅಭಿಷೇಕ್ ಶರ್ಮಾ ಕುರಿತಾಗಿ ಪಡುತ್ತಿರುವ ‘ಹೊಟ್ಟೆಕಿಚ್ಚ’ನ್ನು ಸಂಜು ಸ್ಯಾಮ್ಸನ್​ ಬಹಿರಂಗಪಡಿಸಿದ್ದಾರೆ. ಮಾರ್ಚ್ 2026 ರಲ್ಲಿ ನಡೆದ ಇಂಡಿಯಾ ಟುಡೇ ಕಾನ್ಕ್ಲೇವ್  ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಸಂಜು ಸ್ಯಾಮ್ಸನ್ ಟೀಮ್ ಇಂಡಿಯಾ ಒಳಗಿನ ಕೆಲ ತಮಾಷೆಯ ಮತ್ತು ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ….

Read More

ಫ್ಯಾನ್ಸಿ ಸ್ಟೋರ್‌ನಲ್ಲಿ ನಶೆ ಮಾತ್ರೆಗಳ ಅಕ್ರಮ ಮಾರಾಟ: ಕಿಕ್​ಗಾಗಿ ಮಾತ್ರೆ, ಇಂಜೆಕ್ಷನ್ ಮೊರೆ ಹೋಗ್ತಿರುವ ಯುವಕರು!

ಕೊಪ್ಪಳ, ಮಾರ್ಚ್ 15: ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ (Gangavathi) ನಗರದ ಫ್ಯಾನ್ಸಿ ಸ್ಟೋರ್ ಒಂದರಲ್ಲಿ ನಶೆ ನೀಡುವ ಮಾತ್ರೆಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಈ ಘಟನೆ ಜನತೆಯನ್ನು ಬೆಚ್ಚಿಬೀಳಿಸಿದೆ. ಗಂಗಾವತಿ ನಗರದ ದುರ್ಗಾದೇವಿ ಗುಡಿ ಸಮೀಪದಲ್ಲಿರುವ ‘ಕೃಷ್ಣಾ ಫ್ಯಾನ್ಸಿ ಸ್ಟೋರ್’ನಲ್ಲಿ ನೋವು ನಿವಾರಕ ಮಾತ್ರೆ ಎಂದು ಹೇಳಿ ನಶೆ ಮಾತ್ರೆಗಳನ್ನು ಮಾರಾಟ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಅಂಗಡಿಯ ಮಾಲೀಕ ಕಿಶನ್ ಕುಮಾರ್ ಕೇವಲ ಎರಡು ಮಾತ್ರೆಗಳಿಗೆ ಸುಮಾರು 300…

Read More

Video: ನಾಯಿ ಕಡಿತದಿಂದ 14 ವರ್ಷದ ಬಾಲಕನಿಗೆ ಬಂತು ರೇಬಿಸ್, ಪರಿಸ್ಥಿತಿ ಏನಾಗಿದೆ ನೋಡಿ

ಮಿರ್ಜಾಪುರ, ಮಾರ್ಚ್​ 15: ನಾಯಿ ಕಡಿತದಿಂದ ಬಾಲಕನಿಗೆ ರೇಬಿಸ್ ಬಂದಿದೆ. ಆದರೆ ಕುಟುಂಬಕ್ಕೆ ಇದರ ಅರಿವು ಇಲ್ಲದ ಕಾರಣ ದೆವ್ವವೇನೋ ಮೆಟ್ಟಿಕೊಂಡಿರಬೇಕೆಂದು ವಿವಿಧ ದೇವಸ್ಥಾನಗಳಿಗೆ ಸುತ್ತುತ್ತಲೇ ಇತ್ತು, ಎಷ್ಟೋ ದಿನಗಳ ಬಳಿಕ ಇದು ರೇಬಿಸ್ ಎಂದು ಅರಿವಾಗಿದೆ. ವೈದ್ಯರು ಈಗ ಬಾಲಕನನ್ನು ಚಿಕಿತ್ಸೆಗಾಗಿ ಉನ್ನತ ವೈದ್ಯಕೀಯ ಕೇಂದ್ರಕ್ಕೆ ತೆರಳುವಂತೆ ಸೂಚಿಸಿದ್ದಾರೆ. ಈ ಘಟನೆ ಮುರ್ಜಾಪುರದಲ್ಲಿ ನಡೆದಿದೆ. ಮಕ್ಕಳಿಗು ಕೂಡ ರೇಬಿಸ್ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಒಂದೊಮ್ಮೆ ನಾಯಿ ಕಚ್ಚಿದ್ದರ ಬಗ್ಗೆ ಆತ ಮನೆಯಲ್ಲಿ ಹೇಳಿಕೊಂಡಿದ್ದರೆ ಇಂಥಾ…

Read More

ಶ್ರೇಯಸ್ ಅಯ್ಯರ್ ಜೊತೆ ಕನ್ನಡದ ನಟಿ ನಿಮಿಕಾ ರತ್ನಾಕರ್ ಫೋಟೋ ವೈರಲ್

ಕನ್ನಡ ಚಿತ್ರರಂಗದ ಖ್ಯಾತ ನಟಿ ನಿಮಿಕಾ ರತ್ನಾಕರ್ ಅವರು ಕ್ರೀಡೆಯಲ್ಲೂ ಆಸಕ್ತಿ ಹೊಂದಿದ್ದಾರೆ. ಖ್ಯಾತ ಕ್ರಿಕೆಟರ್​ಗಳ ಜೊತೆ ಅವರಿಗೆ ಸ್ನೇಹ ಇದೆ. ಅದಕ್ಕೆ ಸಾಕ್ಷಿ ಎಂಬಂತೆ ಹೊಸ ಫೋಟೋಗಳು ಲಭ್ಯವಾಗಿವೆ. ಕ್ರಿಕೆಟರ್ ಪೃಥ್ವಿ ಶಾ ಮತ್ತು ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ದೂರಿಯಾಗಿ ನಡೆದಿದೆ. ಈ ಸಮಾರಂಭಕ್ಕೆ ನಿಮಿಕಾ ರತ್ನಾಕರ್ ಕೂಡ ಕುಟುಂಬ ಸಮೇತರಾಗಿ ಹಾಜರಿ ಹಾಕಿದ್ದರು. ಈ ಸಮಾರಂಭಕ್ಕೆ ಶ್ರೇಯಸ್ ಅಯ್ಯರ್ ಕೂಡಾ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶ್ರೇಯಸ್ ಮತ್ತು ನಿಮಿಕಾ ಅಚಾನಕ್ಕಾಗಿ…

Read More

ಕರ್ನಾಟಕ ಹವಾಮಾನ ವರದಿ: ಕೊಡಗು, ಹಾಸನದಲ್ಲಿ ಲಘು ಮಳೆಯ ಸಾಧ್ಯತೆ!

ಬೆಂಗಳೂರು, ಮಾರ್ಚ್​ 15: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಹೆಚ್ಚಾದ ತಾಪಮಾನದೊಂದಿಗೆ ಒಣ ಹವೆ (Weather Forecast) ಆವರಿಸಿದ್ದು, ಇಂದೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಮಾತ್ರ ತುಂತುರು ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಕೆಲ ದಿನ ಇದೇ ರೀತಿಯ ಶುಷ್ಕ ವಾತಾವರಣ ಇರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ? ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ…

Read More