Headlines

nagaraj11081993

IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

2008 ರಿಂದ ಆರಂಭವಾದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ನಿಸ್ಸಂದೇಹವಾಗಿ ವಿಶ್ವದ ಅತ್ಯಂತ ಶ್ರೀಮಂತ ಲೀಗ್. ಯುವ ಪ್ರತಿಭೆಗಳನ್ನು ಸ್ಟಾರ್‌ ಆಟಗಾರರನ್ನಾಗಿ ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಕೂಡ ಐಪಿಎಲ್​ಗೆ ಸಲ್ಲಬೇಕು. ಅನೇಕ ಆಟಗಾರರು ಐಪಿಎಲ್​ ಮೂಲಕವೇ ರಾಷ್ಟ್ರೀಯ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಇದೇ ಕಾರಣದಿಂದಾಗಿ ಯುವ ಆಟಗಾರರು ಕೂಡ ಐಪಿಎಲ್​ನಲ್ಲಿ ಭಾಗವಹಿಸುವುದನ್ನು ಎದುರು ನೋಡುತ್ತಿರುತ್ತಾರೆ. ಅದರಂತೆ ಐಸಿಸಿ ಸ್ಥಾನಮಾನ ಹೊಂದಿರುವ ಬಹುತೇಕ ರಾಷ್ಟ್ರಗಳ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಪಾಕಿಸ್ತಾನದ 11 ಸ್ಟಾರ್ ಆಟಗಾರರು 2008ರ…

Read More

ಹಾರ್ಮುಜ್ ಜಲಸಂಧಿ ಕೇವಲ ಅಮೆರಿಕ ಹಾಗೂ ಇಸ್ರೇಲ್​ಗೆ ಮಾತ್ರ ಮುಚ್ಚಿದೆ: ಇರಾನ್ ವಿದೇಶಾಂಗ ಸಚಿವ

ಟೆಹ್ರಾನ್, ಮಾರ್ಚ್​ 15:ಇಸ್ರೇಲ್ ಮತ್ತು ಅಮೆರಿಕ ನಿರಂತರವಾಗಿ ಇರಾನ್(Iran) ಮೇಲೆ ದಾಳಿ ಮಾಡುತ್ತಿವೆ. ಈ ದಾಳಿಗಳಿಗೆ ಇರಾನ್ ಕೂಡ ಪ್ರತಿಕ್ರಿಯಿಸುತ್ತಿದೆ. ಏತನ್ಮಧ್ಯೆ, ಹಾರ್ಮುಜ್ ಜಲಸಂಧಿಯ ಮುಚ್ಚುವಿಕೆಯ ಬಗ್ಗೆ ಇರಾನ್ ಹೇಳಿಕೆ ನೀಡಿದೆ.ಹಾರ್ಮುಜ್ ಜಲಸಂಧಿಯನ್ನು ಮುಚ್ಚುವ ಬಗ್ಗೆ ಇರಾನ್ ವಿದೇಶಾಂಗ ಸಚಿವ ಅರಘ್ಚಿ ಸ್ಪಷ್ಟನೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಎಲ್ಲಾ ದೇಶಗಳಿಗೆ ಮುಚ್ಚಲಾಗಿಲ್ಲ, ತಮ್ಮ ಶತ್ರುಗಳಿಗೆ ಮಾತ್ರ ಮುಚ್ಚಲಾಗಿದೆ. ನಮ್ಮ ಮತ್ತು ನಮ್ಮ ಮಿತ್ರರಾಷ್ಟ್ರಗಳ ಮೇಲೆ ದಾಳಿ ಮಾಡುವ ಟ್ಯಾಂಕರ್‌ಗಳು ಮತ್ತು ಹಡಗುಗಳಿಗೆ ಜಲಸಂಧಿಯನ್ನು ಮುಚ್ಚಲಾಗುವುದು ಎಂದು ಹೇಳಿದರು….

Read More

ಕರ್ನಾಟಕದಾದ್ಯಂತ ಸಿಲಿಂಡರ್ ಕೊರತೆ: ಕಾಳಸಂತೆಯಲ್ಲಿ ಗ್ಯಾಸ್ ದಂಧೆ, 1 ಸಿಲಿಂಡರ್ ದರ 7 ಸಾವಿರ ರೂ!

ಬೆಂಗಳೂರು,ಮಾರ್ಚ್ 15: ಕರ್ನಾಟಕದಲ್ಲಿ (Karnataka) ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ (LPG) ಕೊರತೆ ತೀವ್ರವಾಗುತ್ತಿದ್ದು, ಇದರ ಪರಿಣಾಮವಾಗಿ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಒಂದೇ ಒಂದು ಮಿಸ್ಡ್ ಕಾಲ್‌ಗೆ ಸಿಗುತ್ತಿದ್ದ ಗ್ಯಾಸ್ ಸಿಲಿಂಡರ್‌ಗಾಗಿ ಈಗ ಹೋಟೆಲ್ ಮಾಲೀಕರು ಪರದಾಡುವಂತ ಸ್ಥಿತಿ ಎದುರಾಗಿದೆ. ಈ ಕೊರತೆಯನ್ನು ಕೆಲವು ದಂಧೆಕೋರರು ದುರುಪಯೋಗಪಡಿಸಿಕೊಂಡು ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಬೆಂಗಳೂರಿನಲ್ಲಿ 1,900 ರೂಪಾಯಿ ಬೆಲೆಯ ವಾಣಿಜ್ಯ ಸಿಲಿಂಡರ್ ಅನ್ನು ಕಾಳಸಂತೆಯಲ್ಲಿ ಸುಮಾರು 7 ಸಾವಿರ ರೂಪಾಯಿಗೆ ಮಾರಲಾಗುತ್ತಿದೆ…

Read More

Daily Devotional: ಮಕ್ಕಳ ನಾಲಿಗೆ ಮೇಲೆ ಓಂಕಾರ ಬರೆಯುವುದರ ಹಿಂದಿನ ರಹಸ್ಯವೇನು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮಕ್ಕಳ ನಾಲಿಗೆ ಮೇಲೆ ಓಂಕಾರ ಬರೆಯುವುದರ ಹಿಂದಿನ ರಹಸ್ಯವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸನಾತನ ಸಂಸ್ಕೃತಿಯಲ್ಲಿ ಸಂಪ್ರದಾಯಗಳು ಮತ್ತು ಸಂಸ್ಕಾರಗಳಿಗೆ ಹೆಚ್ಚಿನ ಪ್ರಾಶಸ್ತ್ಯವಿದೆ. ಜನನದ ನಂತರ ಮಗುವಿಗೆ ನೀಡಲಾಗುವ ಸಂಸ್ಕಾರಗಳಲ್ಲಿ, ಅಕ್ಷರಾಭ್ಯಾಸದ ಸಂದರ್ಭದಲ್ಲಿ ಮಗುವಿನ ನಾಲಿಗೆಯ ಮೇಲೆ ಓಂಕಾರ ಬರೆಯುವುದು ಒಂದು ಪ್ರಮುಖ ಆಚರಣೆಯಾಗಿದೆ. ಓಂಕಾರವು ಹಿಂದೂ ಧರ್ಮದಲ್ಲಿ ಪವಿತ್ರ ಸ್ಥಾನಮಾನವನ್ನು ಹೊಂದಿರುವ ಒಂದು ಶಬ್ದ. ಅಕಾರ, ಉಕಾರ, ಮಕಾರಗಳ ಸಮ್ಮಿಲನವೇ ಓಂಕಾರವಾಗಿದ್ದು, ಇದನ್ನು ಬ್ರಹ್ಮಾಂಡದ ಪ್ರಪ್ರಥಮ ಶಬ್ದ…

Read More

Horoscope Today 15th​​ March​: ಇಂದು ಈ ರಾಶಿಯವರಿಗೆ ಸಂಗಾತಿಯಿಂದ ಶುಭ ಸಮಾಚಾರ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 15​​​​​, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಏಕಾದಶಿ ತಿಥಿ, ಶ್ರವಣ ನಕ್ಷತ್ರ, ಪರಿಘ ಯೋಗ ಮತ್ತು ಬಾಲವ ಕರಣ ಇರುತ್ತದೆ. ರಾಹುಕಾಲ ಸಂಜೆ 4:59 ರಿಂದ 6:30 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭ ಕಾಲ ಬೆಳಿಗ್ಗೆ 10:58 ರಿಂದ…

Read More

ಆರ್. ಮಾಧವನ್ ಹೆಸರಲ್ಲಿ ಮೋಸ: ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ ‘ಧುರಂಧರ್’ ನಟ

ಬಹುಭಾಷಾ ನಟ ಆರ್. ಮಾಧವನ್ ಅವರ ಹೆಸರಿನಲ್ಲಿ ಕಿಡಿಗೇಡಿಯೊಬ್ಬ ನಕಲಿ ಸೋಶಿಯಲ್ ಮೀಡಿಯಾ (Fake Account) ಖಾತೆಯನ್ನು ತೆರೆದು ಜನರ ದಾರಿ ತಪ್ಪಿಸುತ್ತಿದ್ದಾನೆ. ಈ ವಿಷಯದ ಬಗ್ಗೆ ಸ್ವತಃ ಮಾಧವನ್ ಅವರೇ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯ ಮೂಲಕ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ತಮ್ಮ ಹೆಸರನ್ನು ಬಳಸಿಕೊಂಡು ಜನರನ್ನು ಸಂಪರ್ಕಿಸುತ್ತಿರುವ ಈ ವ್ಯಕ್ತಿಯೊಂದಿಗೆ ತಮಗಾಗಲಿ ಅಥವಾ ತಮ್ಮ ತಂಡಕ್ಕಾಗಲಿ ಯಾವುದೇ ಸಂಬಂಧವಿಲ್ಲ ಎಂದು ಮಾಧವನ್ (R. Madhavan) ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪೋಸ್ಟ್ ಮಾಡಿರುವ ಮಾಧವನ್ ಅವರು,…

Read More

Video: ಲಿಫ್ಟ್​ ಬಾಗಿಲಲ್ಲಿ ಕೈ ಸಿಲುಕಿ ಒದ್ದಾಡಿದ ಮಗು

ಪುಣೆ, ಮಾರ್ಚ್​ 15: ಲಿಫ್ಟ್​ನಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುವಾಗ ತುಂಬಾ ಜಾಗೃತೆಯಾಗಿರಬೇಕು. ಲಿಫ್ಟ್​​ನಿಂದ ಹೊರ ಬರಬೇಕು ಎನ್ನುವಾಗ ಅಜ್ಜಿಯ ಕೈಲಿದ್ದ ಮಗುವಿನ ಕೈ ಲಿಫ್ಟ್​ ಬಾಗಿಲಲ್ಲಿ ಸಿಲುಕಿ ಒದ್ದಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ತಾಯಿ ಮತ್ತು ಅಜ್ಜಿ ಇಬ್ಬರು ಮಕ್ಕಳನ್ನು ಎತ್ತಿಕೊಂಡು ಲಿಫ್ಟ್ ಹತ್ತಿದ್ದಾರೆ, ಇನ್ನೇನು ಇಳಿಯಬೇಕು ಎನ್ನುವಷ್ಟರಲ್ಲಿ ಮಗುವಿನ ಕೈ ಲಿಫ್ಟ್ ಬಾಗಿಲೊಳಗೆ ಸಿಲುಕಿದೆ. ಲಿಫ್ಟ್​ನಲ್ಲಿದ್ದವರು ಹರಸಾಹಸ ಪಟ್ಟು ಅಂತೂ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲವರು ದಿನಗಳ ಹಿಂದೆ ಇಂಥದ್ದೇ ಘಟನೆ ನಡೆದಿತ್ತು. ವ್ಯಕ್ತಿಯೊಬ್ಬರು ಇನ್ನೇನು…

Read More

ಯುದ್ಧದ ಬಿಸಿ: ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು

ಬೆಂಗಳೂರು, ಮಾರ್ಚ್ 15: ಭಾರತದಲ್ಲಿ ವಿಮಾನ ಪ್ರಯಾಣವು ಮತ್ತಷ್ಟು ದುಬಾರಿಯಾಗಿದ್ದು, ಇಂಡಿಗೋ, ಏರ್ ಇಂಡಿಯಾ ಮತ್ತು ಆಕಾಸ ಏರ್‌ಲೈನ್ಸ್‌ನಂತಹ ಪ್ರಮುಖ ವಿಮಾನಯಾನ ಸಂಸ್ಥೆಗಳು ಇಂಧನ ಶುಲ್ಕವನ್ನು ವಿಧಿಸಲು ಪ್ರಾರಂಭಿಸಿವೆ. ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಮಧ್ಯಪ್ರಾಚ್ಯದಲ್ಲಿ ಇಂಧನ ಬೆಲೆಗಳ ಮೇಲೆ ಪರಿಣಾಮ ಬೀರಿದ್ದು, ಭಾರತೀಯ ಜನಸಾಮಾನ್ಯರ ಮೇಲೆ ನೇರವಾಗಿ ಪ್ರಭಾವ ಬೀರಿದೆ. ಈ ನಿರ್ಧಾರದಿಂದಾಗಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ದರಗಳು ಏರಿಕೆಯಾಗಿವೆ. ಇಂಡಿಗೋ ವಿಮಾನಯಾನ ಸಂಸ್ಥೆಯು ಭಾರತದೊಳಗಿನ ಪ್ರಯಾಣಕ್ಕೆ ಪ್ರತಿ ಟಿಕೆಟ್‌ಗೆ 425…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು

ಮೇಷ ರಾಶಿ: ಧನಾರ್ಜನೆಗೆ ಹೆಚ್ಚು ಅವಕಾಶಗಳು ಲಭ್ಯವಾಗಿದ್ದು ಉತ್ತಮ ಆದಾಯದ್ದನ್ನು ಆಯ್ಕೆ ಮಾಡಿಕೊಳ್ಳುವಿರಿ. ಆದರೆ ಇದರಿಂದ ಕೆಲವು ರಿಸ್ಕ್ ಗಳನ್ನೂ ಎದುರಿಸಬೇಕಾಗುವುದು. ಆಪ್ತರ ಮೇಲಿನ ನಂಬಿಕೆ ಹುಸಿಯಾಗುವುದು. ನಿರೀಕ್ಷೆಯ ಮಟ್ಟಕ್ಕೆ ಹೋಗುವುದು ಕಷ್ಟವಾದರೂ ಸ್ವಲ್ಪ ನೆಮ್ಮದಿಯು ಇರಲಿದೆ. ಸ್ತ್ರೀಯರಿಗೆ ಅಭದ್ರತೆಯು ಕಾಡಬಹುದು. ಮಕ್ಕಳ ವಿಚಾರದಲ್ಲಿ ನೀವು ಮೃದುವಾಗುವಿರಿ. ಬಂಧುಗಳು ಅನಿರೀಕ್ಷಿತ ಭೇಟಿಯಾಗಿ ಸಂತೋಷ ಕೊಡುವರು. ಹಲವು ದಿನದ ಮನಸ್ತಾಪವು ದೂರವಾಗಬಹುದು. ವೃಷಭ ರಾಶಿ: ನಿಮ್ಮ ನಕಾರಾತ್ಮಕ ಜನಪ್ರಿಯತೆಯು ನಿಮಗೆ ಬೇಸರ ಕೊಡುವುದು. ಮಿತ್ರರ ಸಹಕಾರವನ್ನು ಬಹಳ ದಿನಗಳ…

Read More

ಸಂಖ್ಯಾಶಾಸ್ತ್ರ ಭವಿಷ್ಯ:  ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ

ಈ ದಿನ ಕನಿಷ್ಠ 108 ಬಾರಿ ‘ಓಂ’ ಕಾರ ಜಪ ಮಾಡಿ. ಇದರಿಂದ ನಿಮ್ಮ ಸುಪ್ತ ಪ್ರಜ್ಞೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ಕೈಲಿ ಇನ್ನಷ್ಟು ಮೊತ್ತವನ್ನು ಇಟ್ಟುಕೊಳ್ಳಬೇಕು ಎಂದು ಆಲೋಚನೆ ಮಾಡಲಿದ್ದೀರಿ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದಂಥವರು ಈ ದಿನ ಸ್ವಲ್ಪ ಮಟ್ಟಿಗೆ ಒತ್ತಡಕ್ಕೆ ಗುರಿ ಆಗಬೇಕಾಗುತ್ತದೆ. ನೀವು ಬಹಳ ಆತ್ಮವಿಶ್ವಾಸದಿಂದ ನೀಡಿದಂಥ ಹಣಕಾಸಿನ ಸಲಹೆಗಳು ಬೂಮ್ ರಾಂಗ್ ಆಗಬಹುದು….

Read More