All posts by nagaraj11081993

ಹಾರ್ಮುಜ್ ಜಲಸಂಧಿ ಕೇವಲ ಅಮೆರಿಕ ಹಾಗೂ ಇಸ್ರೇಲ್​ಗೆ ಮಾತ್ರ ಮುಚ್ಚಿದೆ: ಇರಾನ್ ವಿದೇಶಾಂಗ ಸಚಿವ

ಹಾರ್ಮುಜ್ ಜಲಸಂಧಿ ಕೇವಲ ಅಮೆರಿಕ ಹಾಗೂ ಇಸ್ರೇಲ್​ಗೆ ಮಾತ್ರ ಮುಚ್ಚಿದೆ: ಇರಾನ್ ವಿದೇಶಾಂಗ ಸಚಿವ

ಟೆಹ್ರಾನ್, ಮಾರ್ಚ್​ 15:ಇಸ್ರೇಲ್ ಮತ್ತು ಅಮೆರಿಕ ನಿರಂತರವಾಗಿ ಇರಾನ್(Iran) ಮೇಲೆ ದಾಳಿ ಮಾಡುತ್ತಿವೆ. ಈ ದಾಳಿಗಳಿಗೆ ಇರಾನ್ ಕೂಡ ಪ್ರತಿಕ್ರಿಯಿಸುತ್ತಿದೆ. ಏತನ್ಮಧ್ಯೆ, ಹಾರ್ಮುಜ್ ಜಲಸಂಧಿಯ ಮುಚ್ಚುವಿಕೆಯ ಬಗ್ಗೆ ಇರಾನ್ ಹೇಳಿಕೆ ನೀಡಿದೆ.ಹಾರ್ಮುಜ್ ಜಲಸಂಧಿಯನ್ನು ಮುಚ್ಚುವ ಬಗ್ಗೆ ಇರಾನ್ ವಿದೇಶಾಂಗ ಸಚಿವ ಅರಘ್ಚಿ ಸ್ಪಷ್ಟನೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಎಲ್ಲಾ ದೇಶಗಳಿಗೆ ಮುಚ್ಚಲಾಗಿಲ್ಲ, ತಮ್ಮ ಶತ್ರುಗಳಿಗೆ ಮಾತ್ರ ಮುಚ್ಚಲಾಗಿದೆ.

ನಮ್ಮ ಮತ್ತು ನಮ್ಮ ಮಿತ್ರರಾಷ್ಟ್ರಗಳ ಮೇಲೆ ದಾಳಿ ಮಾಡುವ ಟ್ಯಾಂಕರ್‌ಗಳು ಮತ್ತು ಹಡಗುಗಳಿಗೆ ಜಲಸಂಧಿಯನ್ನು ಮುಚ್ಚಲಾಗುವುದು ಎಂದು ಹೇಳಿದರು. ಹಲವಾರು ಭಾರತೀಯ ಹಡಗುಗಳು ಸೇರಿದಂತೆ ನೂರಾರು ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮನ್ ಕೊಲ್ಲಿಯ ನಡುವಿನ ಕಿರಿದಾದ ಸಮುದ್ರ ಮಾರ್ಗದಲ್ಲಿ ಸಿಲುಕಿಕೊಂಡಿರುವ ಸಮಯದಲ್ಲಿ ಇರಾನಿನ ಸಚಿವರು ಈ ಹೇಳಿಕೆ ನೀಡಿದ್ದಾರೆ.

ಹಾರ್ಮುಜ್ ಜಲಸಂಧಿ ಕೇವಲ ಅಮೆರಿಕ ಹಾಗೂ ಇಸ್ರೇಲ್​​ಗೆ ಮಾತ್ರ ಮುಚ್ಚಿದೆ ಎಂದರು. ಭದ್ರತಾ ಕಾಳಜಿ ಯಿಂದಾಗಿ ಈ ಮಾರ್ಗವನ್ನು ಮುಚ್ಚಲಾಗಿದೆ ಎಂದು ಹೇಳಿದ್ದಾರೆ.ಅನೇಕರು ತಮ್ಮ ಭದ್ರತಾ ಕಾಳಜಿಯಿಂದಾಗಿ ಈ ಮಾರ್ಗದ ಮೂಲಕ ಹಾದುಹೋಗಲು ಬಯಸುವುದಿಲ್ಲ. ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಮತ್ತೊಂದೆಡೆ, ಅನೇಕ ಟ್ಯಾಂಕರ್‌ಗಳು ಮತ್ತು ಹಡಗುಗಳು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುತ್ತಿವೆ ಎಂದಿದ್ದಾರೆ.

ಮತ್ತಷ್ಟು ಓದಿ: ಯುದ್ಧದ ಬಿಸಿ: ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು

ಇಸ್ರೇಲ್ ಮತ್ತು ಅಮೆರಿಕ ನಡುವೆ ಇರಾನ್ ಜೊತೆ ನಡೆಯುತ್ತಿರುವ ಯುದ್ಧ 16ನೇ ದಿನಕ್ಕೆ ಕಾಲಿಟ್ಟಿದೆ. ಹಾರ್ಮುಜ್ ಜಲಸಂಧಿಯ ಭದ್ರತೆಗೆ ಸಹಾಯ ಮಾಡಲು ಹಡಗುಗಳನ್ನು ಕಳುಹಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವದ ಇತರ ಹಲವು ದೇಶಗಳನ್ನು ಒತ್ತಾಯಿಸಿದ್ದಾರೆ.

ಇರಾನ್‌ನ ಮಿಲಿಟರಿ ಸಾಮರ್ಥ್ಯ ಸಂಪೂರ್ಣವಾಗಿ ನಾಶವಾಗಿದೆ ಎಂದು ಅಮೆರಿಕ ಅಧ್ಯಕ್ಷರು ಹೇಳಿಕೊಂಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು ಅಮೆರಿಕವು ಅತಿಯಾದ ಬಲಪ್ರಯೋಗ ಮಾಡುತ್ತದೆ ಎಂದು ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕರ್ನಾಟಕದಾದ್ಯಂತ ಸಿಲಿಂಡರ್ ಕೊರತೆ: ಕಾಳಸಂತೆಯಲ್ಲಿ ಗ್ಯಾಸ್ ದಂಧೆ, 1 ಸಿಲಿಂಡರ್ ದರ 7 ಸಾವಿರ ರೂ!

ಬೆಂಗಳೂರು,ಮಾರ್ಚ್ 15: ಕರ್ನಾಟಕದಲ್ಲಿ (Karnataka) ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ (LPG) ಕೊರತೆ ತೀವ್ರವಾಗುತ್ತಿದ್ದು, ಇದರ ಪರಿಣಾಮವಾಗಿ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಒಂದೇ ಒಂದು ಮಿಸ್ಡ್ ಕಾಲ್‌ಗೆ ಸಿಗುತ್ತಿದ್ದ ಗ್ಯಾಸ್ ಸಿಲಿಂಡರ್‌ಗಾಗಿ ಈಗ ಹೋಟೆಲ್ ಮಾಲೀಕರು ಪರದಾಡುವಂತ ಸ್ಥಿತಿ ಎದುರಾಗಿದೆ. ಈ ಕೊರತೆಯನ್ನು ಕೆಲವು ದಂಧೆಕೋರರು ದುರುಪಯೋಗಪಡಿಸಿಕೊಂಡು ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಬೆಂಗಳೂರಿನಲ್ಲಿ 1,900 ರೂಪಾಯಿ ಬೆಲೆಯ ವಾಣಿಜ್ಯ ಸಿಲಿಂಡರ್ ಅನ್ನು ಕಾಳಸಂತೆಯಲ್ಲಿ ಸುಮಾರು 7 ಸಾವಿರ ರೂಪಾಯಿಗೆ ಮಾರಲಾಗುತ್ತಿದೆ ಎಂದು ಹೋಟೆಲ್ ಮಾಲೀಕರು ಆರೋಪಿಸಿದ್ದಾರೆ. ಮೀನಾಕ್ಷಿ ಕಾಫಿ ಬಾರ್ ಮಾಲೀಕ ಸುನೀಲ್ ಮಾತನಾಡಿ, ಇದು ಕೃತಕ ಅಭಾವ ಸೃಷ್ಟಿಸಿ ನಡೆಯುತ್ತಿರುವ ದಂಧೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ರೀತಿ ಮೈಸೂರಿನಲ್ಲೂ ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಒಂದು ಸಿಲಿಂಡರ್‌ಗೆ 4 ರಿಂದ 5 ಸಾವಿರ ರೂಪಾಯಿ ವರೆಗೆ ಹಣ ಪಡೆದು ಮಾರಾಟ ಮಾಡಲಾಗುತ್ತಿದೆ ಎಂದು ಕೆಲ ಹೋಟೆಲ್ ಮಾಲೀಕರು ತಿಳಿಸಿದ್ದಾರೆ.

ಬೆಂಗಳೂರು ಹೋಟೆಲ್​​ಗಳಲ್ಲಿ ತಿಂಡಿ ದರ ಹೆಚ್ಚಳ

ಸಿಲಿಂಡರ್ ಕೊರತೆಯಿಂದ ಸಂಕಷ್ಟಕ್ಕೀಡಾದ ಹೋಟೆಲ್ ಮಾಲೀಕರು ಅದರ ಹೊರೆಯನ್ನು ಗ್ರಾಹಕರ ಮೇಲೆ ಹಾಕುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಶಿವಾನಂದ ಸರ್ಕಲ್‌ನಲ್ಲಿರುವ ಬೆಂಗಳೂರು ಕಫೆಯಲ್ಲಿ ಉಪಾಹಾರಗಳ ಬೆಲೆಯನ್ನು 10 ರೂಪಾಯಿವರೆಗೆ ಹೆಚ್ಚಿಸಲಾಗಿದೆ. ಲಾಲ್‌ಬಾಗ್ ರಸ್ತೆಯಲ್ಲಿರುವ ಸತ್ಕಾರ್ ಹೋಟೆಲ್‌ನಲ್ಲಿ ಗ್ಯಾಸ್ ಕೊರತೆಯಿಂದ ಸೌದೆ ಒಲೆ ಬಳಸಿ ಅಡುಗೆ ಮಾಡಲಾಗುತ್ತಿದೆ. ಜೊತೆಗೆ ಊಟ ಮತ್ತು ತಿಂಡಿಗಳ ಬೆಲೆಯನ್ನೂ 5 ರಿಂದ 20 ರೂಪಾಯಿ ತನಕ ಹೆಚ್ಚಿಸಲಾಗಿದೆ.

ಗೃಹ ಬಳಕೆಯ ಎಲ್​ಪಿಜಿ ವಾಣಿಜ್ಯ ಉದ್ದೇಶಕ್ಕೆ ಬಳಕೆ: ಹಲವೆಡೆ ದಾಳಿ

ಇನ್ನೂ ಕೆಲವು ಕಡೆ ವಾಣಿಜ್ಯ ಸಿಲಿಂಡರ್ ಸಿಗದ ಕಾರಣ ಗೃಹಬಳಕೆಯ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರಾಜ್ಯಾದ್ಯಂತ ದಾಳಿ ನಡೆಸಿ ಹಲವು ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದೆ. ಬೆಂಗಳೂರಿನ ಪೀಣ್ಯದಲ್ಲಿ 45, ಚಿಕ್ಕಜಾಲದಲ್ಲಿ 209, ಶಿವಮೊಗ್ಗದಲ್ಲಿ 3, ಯಾದಗಿರಿಯಲ್ಲಿ 46 ಮತ್ತು ದಾವಣಗೆರೆಯಲ್ಲಿ 13 ಸಿಲಿಂಡರ್ ಸೇರಿ ಒಟ್ಟು 316 ಸಿಲಿಂಡರ್‌ಗಳನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಸೂಚನೆಯಂತೆ ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ 20 ಶೇಕಡಾವರೆಗೆ ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣದ ಕ್ಯಾಂಟೀನ್‌ಗಳು, ದೇವಸ್ಥಾನಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ಬೆಂಗಳೂರಿನ ಹಲವು ಹೋಟೆಲ್​ಗಳು ಬಂದ್

ಸಿಲಿಂಡರ್ ಕೊರತೆಯಿಂದ ಕೆಲವು ಹೋಟೆಲ್‌ಗಳು ಬಾಗಿಲು ಮುಚ್ಚುವ ಪರಿಸ್ಥಿತಿ ಎದುರಿಸಿದೆ. ಬೆಂಗಳೂರಿನ ಆನಂದ್ ರಾವ್ ಸರ್ಕಲ್‌ನಲ್ಲಿರುವ ಕೃಷ್ಣಸಾಗರ್ ಹೋಟೆಲ್, ಶೇಷಾದ್ರಿಪುರಂನ ಹೋಟೆಲ್ ಸನ್ಮಾನ್ ಮತ್ತು ಬಸವನಗುಡಿಯ ಬೈಟು ಕಾಫಿ ಹೋಟೆಲ್ ತಾತ್ಕಾಲಿಕವಾಗಿ ಬಂದ್ ಆಗಿವೆ.

ಆದರೆ ಕೆಲ ಹೋಟೆಲ್ ಮಾಲೀಕರು ಪರ್ಯಾಯ ವ್ಯವಸ್ಥೆ ಕಂಡುಕೊಂಡಿದ್ದಾರೆ. ಶಿವಮೊಗ್ಗದ ದುರ್ಗಿಗುಡಿಯಲ್ಲಿ ಇರುವ ಶುಭಂ ಹೋಟೆಲ್‌ನಲ್ಲಿ ಇದ್ದಿಲು ಬಳಸಿ ಅಡುಗೆ ಮಾಡಲಾಗುತ್ತಿದೆ. ಚಿತ್ರದುರ್ಗದ ಕೆಲವು ಹೋಟೆಲ್‌ಗಳಲ್ಲಿ ಆಧುನಿಕ ಒಲೆಗಳನ್ನು ಬಳಸಿ ಅಡುಗೆ ಸಿದ್ಧಪಡಿಸಲಾಗುತ್ತಿದೆ.

ಇನ್ನೂ ಕಲಬುರಗಿಯ ಶರಣಬಸವೇಶ್ವರ ಮಠದಲ್ಲಿ ನಿತ್ಯ ಸಾವಿರಾರು ಭಕ್ತರಿಗೆ ನೀಡಲಾಗುತ್ತಿದ್ದ ದಾಸೋಹಕ್ಕೂ ಸಿಲಿಂಡರ್ ಕೊರತೆಯ ಪರಿಣಾಮ ತಟ್ಟಿದೆ. ಸದ್ಯ ಮಠದಲ್ಲಿ ಸೌದೆ ಒಲೆ ಬಳಸಿ ಅಡುಗೆ ಮಾಡಲಾಗುತ್ತಿದೆ. ಚಾಮುಂಡಿ ಬೆಟ್ಟದಲ್ಲೂ ಪ್ರಸಾದ ಸಿದ್ಧಪಡಿಸಲು ಸೌದೆ ಒಲೆ ಬಳಸಲಾಗುತ್ತಿದೆ.

ಸಿಲಿಂಡರ್ ಬುಕ್ ಮಾಡುವಾಗ ಸೈಬರ್ ವಂಚಕರ ಬಗ್ಗೆ ಎಚ್ಚರ

ಇದೇ ಸಂದರ್ಭದಲ್ಲಿ ಸೈಬರ್ ವಂಚಕರು ಕೂಡ ಜನರ ಸಂಕಷ್ಟವನ್ನು ದುರುಪಯೋಗಪಡಿಸಿಕೊಳ್ಳಲು ಮುಂದಾಗಿದ್ದಾರೆ. ‘ನಿಮ್ಮ ಹೆಸರಲ್ಲಿ ಗ್ಯಾಸ್ ಬುಕ್ ಆಗಿದೆ’ ಎಂಬಂತೆ ಕಳ್ಳ ಲಿಂಕ್‌ಗಳನ್ನು ಕಳುಹಿಸಿ ವಂಚಿಸಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ಬೆಂಗಳೂರು ಪೊಲೀಸರು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದ್ದಾರೆ.

ಅಡುಗೆ ಎಣ್ಣೆ ದರವೂ ಏರಿಕೆ

ಇನ್ನೊಂದೆಡೆ ಯುದ್ಧದ ಪರಿಣಾಮವಾಗಿ ಕೇವಲ ಗ್ಯಾಸ್ ಸಿಲಿಂಡರ್ ಮಾತ್ರವಲ್ಲ, ಅಡುಗೆ ಎಣ್ಣೆಯ ದರವೂ ಏರಿಕೆಯಾಗಿದೆ. 15 ಕೆಜಿ ಟಿನ್‌ಗೆ ಸುಮಾರು 150 ರೂಪಾಯಿ ಮತ್ತು ಲೀಟರ್‌ಗೆ 10 ರಿಂದ 15 ರೂಪಾಯಿ ತನಕ ಏರಿಕೆಯಾಗಿದೆ. ಆದರೆ ಮೊಟ್ಟೆಗಳ ರಫ್ತು ಕಡಿಮೆಯಾಗಿರುವ ಕಾರಣ ಅವುಗಳ ಬೆಲೆ ಇಳಿಕೆಯಾಗಿದೆ. ಮೊದಲು 6 ರಿಂದ 7 ರೂಪಾಯಿ ಇದ್ದ ಮೊಟ್ಟೆ ಈಗ 3 ರಿಂದ 4 ರೂಪಾಯಿಗೆ ಮಾರಾಟವಾಗುತ್ತಿದೆ.

ಇದನ್ನೂ ಓದಿ: ಗ್ಯಾಸ್​ ಬುಕಿಂಗ್ ಆಗುತ್ತಿಲ್ಲವೇ? ವಾಟ್ಸಾಪ್ ಮೂಲಕ ಸುಲಭವಾಗಿ LPG ಬುಕ್ ಮಾಡುವುದು ಹೇಗೆ?

ಒಟ್ಟಾರೆ ಗ್ಯಾಸ್ ಕೊರತೆ ಮತ್ತು ಬೆಲೆ ಏರಿಕೆಯ ಪರಿಣಾಮ ರಾಜ್ಯದ ಹೋಟೆಲ್ ಉದ್ಯಮ ಹಾಗೂ ಗ್ರಾಹಕರ ಮೇಲೆ ದೊಡ್ಡ ಹೊರೆ ಬಿದ್ದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಮಕ್ಕಳ ನಾಲಿಗೆ ಮೇಲೆ ಓಂಕಾರ ಬರೆಯುವುದರ ಹಿಂದಿನ ರಹಸ್ಯವೇನು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮಕ್ಕಳ ನಾಲಿಗೆ ಮೇಲೆ ಓಂಕಾರ ಬರೆಯುವುದರ ಹಿಂದಿನ ರಹಸ್ಯವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸನಾತನ ಸಂಸ್ಕೃತಿಯಲ್ಲಿ ಸಂಪ್ರದಾಯಗಳು ಮತ್ತು ಸಂಸ್ಕಾರಗಳಿಗೆ ಹೆಚ್ಚಿನ ಪ್ರಾಶಸ್ತ್ಯವಿದೆ. ಜನನದ ನಂತರ ಮಗುವಿಗೆ ನೀಡಲಾಗುವ ಸಂಸ್ಕಾರಗಳಲ್ಲಿ, ಅಕ್ಷರಾಭ್ಯಾಸದ ಸಂದರ್ಭದಲ್ಲಿ ಮಗುವಿನ ನಾಲಿಗೆಯ ಮೇಲೆ ಓಂಕಾರ ಬರೆಯುವುದು ಒಂದು ಪ್ರಮುಖ ಆಚರಣೆಯಾಗಿದೆ. ಓಂಕಾರವು ಹಿಂದೂ ಧರ್ಮದಲ್ಲಿ ಪವಿತ್ರ ಸ್ಥಾನಮಾನವನ್ನು ಹೊಂದಿರುವ ಒಂದು ಶಬ್ದ. ಅಕಾರ, ಉಕಾರ, ಮಕಾರಗಳ ಸಮ್ಮಿಲನವೇ ಓಂಕಾರವಾಗಿದ್ದು, ಇದನ್ನು ಬ್ರಹ್ಮಾಂಡದ ಪ್ರಪ್ರಥಮ ಶಬ್ದ ಮತ್ತು ಪ್ರಣವ ಮಂತ್ರ ಎಂದು ಪರಿಗಣಿಸಲಾಗುತ್ತದೆ.

ಈ ಓಂಕಾರವನ್ನು ಮಗುವಿನ ನಾಲಿಗೆ ಮೇಲೆ ಬರೆಯುವುದರಿಂದ ಸರಸ್ವತಿ, ಗಣೇಶ, ಹಯಗ್ರೀವ ಹಾಗೂ ಜ್ಞಾನದ ಅಧಿದೇವತೆಗಳ ಅನುಗ್ರಹ ದೊರೆಯುತ್ತದೆ ಎಂಬ ನಂಬಿಕೆಯಿದೆ. ತುಪ್ಪ ಮತ್ತು ಜೇನುತುಪ್ಪವನ್ನು ಬೆರೆಸಿ, ಬಂಗಾರ, ತುಳಸಿ, ಶ್ರೀಗಂಧ ಅಥವಾ ಬಿಲ್ವಪತ್ರೆಯ ಕಡ್ಡಿಯಿಂದ ಓಂಕಾರವನ್ನು ಬರೆಯಲಾಗುತ್ತದೆ. ಇದರಿಂದ ಮಗುವಿನ ಸಪ್ತ ಚಕ್ರಗಳು ಜಾಗೃತಗೊಂಡು, ಮಧುರ ಮಾತುಗಳು, ದೇಹದ ಕಾಂತಿ, ಜ್ಞಾನ ವೃದ್ಧಿ ಮತ್ತು ಮೆದುಳಿನ ಕಾರ್ಯಕ್ಷಮತೆ ಹೆಚ್ಚುತ್ತದೆ. ಅಲ್ಲದೆ, ನಕಾರಾತ್ಮಕ ಶಕ್ತಿಗಳು ದೂರವಾಗಿ ಮಗು ಆರೋಗ್ಯವಂತವಾಗಿರುತ್ತದೆ ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.

 

Source link

Horoscope Today 15th​​ March​: ಇಂದು ಈ ರಾಶಿಯವರಿಗೆ ಸಂಗಾತಿಯಿಂದ ಶುಭ ಸಮಾಚಾರ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 15​​​​​, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಏಕಾದಶಿ ತಿಥಿ, ಶ್ರವಣ ನಕ್ಷತ್ರ, ಪರಿಘ ಯೋಗ ಮತ್ತು ಬಾಲವ ಕರಣ ಇರುತ್ತದೆ. ರಾಹುಕಾಲ ಸಂಜೆ 4:59 ರಿಂದ 6:30 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭ ಕಾಲ ಬೆಳಿಗ್ಗೆ 10:58 ರಿಂದ ಮಧ್ಯಾಹ್ನ 12:28 ರವರೆಗೆ ಇರುತ್ತದೆ. ಈ ಪರ್ವ ದಿನದಂದು ಸೂರ್ಯನು ಕುಂಭ ರಾಶಿಯಿಂದ ಮೀನ ರಾಶಿಗೆ ಬೆಳಗಿನ ಜಾವ 1:08ಕ್ಕೆ ಪ್ರವೇಶಿಸುತ್ತಾನೆ. ಚಂದ್ರನು ಮಕರ ರಾಶಿಯಲ್ಲಿ ಶ್ರವಣ ನಕ್ಷತ್ರದಲ್ಲಿ ಸಂಚರಿಸುತ್ತಾನೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Source link

ಆರ್. ಮಾಧವನ್ ಹೆಸರಲ್ಲಿ ಮೋಸ: ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ ‘ಧುರಂಧರ್’ ನಟ

ಬಹುಭಾಷಾ ನಟ ಆರ್. ಮಾಧವನ್ ಅವರ ಹೆಸರಿನಲ್ಲಿ ಕಿಡಿಗೇಡಿಯೊಬ್ಬ ನಕಲಿ ಸೋಶಿಯಲ್ ಮೀಡಿಯಾ (Fake Account) ಖಾತೆಯನ್ನು ತೆರೆದು ಜನರ ದಾರಿ ತಪ್ಪಿಸುತ್ತಿದ್ದಾನೆ. ಈ ವಿಷಯದ ಬಗ್ಗೆ ಸ್ವತಃ ಮಾಧವನ್ ಅವರೇ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯ ಮೂಲಕ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ತಮ್ಮ ಹೆಸರನ್ನು ಬಳಸಿಕೊಂಡು ಜನರನ್ನು ಸಂಪರ್ಕಿಸುತ್ತಿರುವ ಈ ವ್ಯಕ್ತಿಯೊಂದಿಗೆ ತಮಗಾಗಲಿ ಅಥವಾ ತಮ್ಮ ತಂಡಕ್ಕಾಗಲಿ ಯಾವುದೇ ಸಂಬಂಧವಿಲ್ಲ ಎಂದು ಮಾಧವನ್ (R. Madhavan) ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪೋಸ್ಟ್ ಮಾಡಿರುವ ಮಾಧವನ್ ಅವರು, ‘ಇದು ವಂಚನೆಯ ಖಾತೆ. ಈ ವ್ಯಕ್ತಿ ನನ್ನ ಅಥವಾ ನನ್ನ ತಂಡದ ಪರವಾಗಿ ಮಾತನಾಡುತ್ತಿಲ್ಲ. ಇನ್‌ಸ್ಟಾಗ್ರಾಮ್ ಅಥವಾ ಯಾವುದೇ ಸೋಶಿಯಲ್ ಮೀಡಿಯಾದಲ್ಲಿ ನನ್ನ ಪರವಾಗಿ ಮಾತನಾಡಲು ಬೇರೆ ಯಾವುದೇ ಖಾತೆಗಳಿಲ್ಲ. ದಯವಿಟ್ಟು ಇಂತಹ ಖಾತೆಗಳ ಬಗ್ಗೆ ಜಾಗರೂಕರಾಗಿರಿ” ಎಂದು ಬರೆದುಕೊಂಡಿದ್ದಾರೆ.

ಅಭಿಮಾನಿಗಳು ಮೋಸ ಹೋಗಬಾರದು ಎಂಬ ಉದ್ದೇಶದಿಂದ ಮಾಧವನ್ ಅವರು ಆ ನಕಲಿ ಖಾತೆಯ ಸ್ಕ್ರೀನ್‌ಶಾಟ್ ಸಹ ಹಂಚಿಕೊಂಡಿದ್ದಾರೆ. ಅಲ್ಲದೆ, ಈ ಕೃತ್ಯ ಎಸಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇಂಥ ಸೋಶಿಯಲ್ ಮೀಡಿಯಾ ಖಾತೆಗಳನ್ನು ನಂಬಿ ಜನರು ಮೋಸ ಹೋಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಮಾಧವನ್ ಮೊದಲೇ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಆರ್​. ಮಾಧವನ್​ ಖರೀದಿಸಿದ ಹೊಸ ಬಂಗಲೆ ಬೆಲೆ ಬರೋಬ್ಬರಿ 17.5 ಕೋಟಿ ರೂಪಾಯಿ

ಸಿನಿಮಾ ವಿಚಾರಕ್ಕೆ ಬರುವುದಾದರೆ, ಮಾರ್ಚ್ 19ರಂದು ರಿಲೀಸ್ ಆಗಲಿರುವ ‘ಧುರಂಧರ್ 2’ ಚಿತ್ರದಲ್ಲಿ ಆರ್. ಮಾಧವನ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ಇಂಟೆಲಿಜೆನ್ಸ್ ಬ್ಯೂರೋ ಮುಖ್ಯಸ್ಥ ಅಜಯ್ ಸಾನ್ಯಾಲ್ ಎಂಬ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಮೊದಲ ಭಾಗದಲ್ಲಿ ಅವರ ನಟನೆಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿತ್ತು, ಈಗ ಎರಡನೇ ಭಾಗದ ಮೇಲೂ ಅಭಿಮಾನಿಗಳಲ್ಲಿ ಹೆಚ್ಚಿನ ನಿರೀಕ್ಷೆಯಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಲಿಫ್ಟ್​ ಬಾಗಿಲಲ್ಲಿ ಕೈ ಸಿಲುಕಿ ಒದ್ದಾಡಿದ ಮಗು

ಪುಣೆ, ಮಾರ್ಚ್​ 15: ಲಿಫ್ಟ್​ನಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುವಾಗ ತುಂಬಾ ಜಾಗೃತೆಯಾಗಿರಬೇಕು. ಲಿಫ್ಟ್​​ನಿಂದ ಹೊರ ಬರಬೇಕು ಎನ್ನುವಾಗ ಅಜ್ಜಿಯ ಕೈಲಿದ್ದ ಮಗುವಿನ ಕೈ ಲಿಫ್ಟ್​ ಬಾಗಿಲಲ್ಲಿ ಸಿಲುಕಿ ಒದ್ದಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ತಾಯಿ ಮತ್ತು ಅಜ್ಜಿ ಇಬ್ಬರು ಮಕ್ಕಳನ್ನು ಎತ್ತಿಕೊಂಡು ಲಿಫ್ಟ್ ಹತ್ತಿದ್ದಾರೆ, ಇನ್ನೇನು ಇಳಿಯಬೇಕು ಎನ್ನುವಷ್ಟರಲ್ಲಿ ಮಗುವಿನ ಕೈ ಲಿಫ್ಟ್ ಬಾಗಿಲೊಳಗೆ ಸಿಲುಕಿದೆ. ಲಿಫ್ಟ್​ನಲ್ಲಿದ್ದವರು ಹರಸಾಹಸ ಪಟ್ಟು ಅಂತೂ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲವರು ದಿನಗಳ ಹಿಂದೆ ಇಂಥದ್ದೇ ಘಟನೆ ನಡೆದಿತ್ತು. ವ್ಯಕ್ತಿಯೊಬ್ಬರು ಇನ್ನೇನು ಲಿಫ್ಟ್​ ಇಳಿಯಬೇಕು ಎನ್ನುವಷ್ಟರಲ್ಲಿ ಬಾಗಿಲು ತೆಗೆದಾಕ್ಷಣ ಲಿಫ್ಟ್​ ಕೆಳಗೆ ಹೋಗಿತ್ತು, ವ್ಯಕ್ತಿ ನೇರವಾಗಿ ಕೆಳಗೆ ಬಿದ್ದಿದ್ದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಯುದ್ಧದ ಬಿಸಿ: ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು

ಬೆಂಗಳೂರು, ಮಾರ್ಚ್ 15: ಭಾರತದಲ್ಲಿ ವಿಮಾನ ಪ್ರಯಾಣವು ಮತ್ತಷ್ಟು ದುಬಾರಿಯಾಗಿದ್ದು, ಇಂಡಿಗೋ, ಏರ್ ಇಂಡಿಯಾ ಮತ್ತು ಆಕಾಸ ಏರ್‌ಲೈನ್ಸ್‌ನಂತಹ ಪ್ರಮುಖ ವಿಮಾನಯಾನ ಸಂಸ್ಥೆಗಳು ಇಂಧನ ಶುಲ್ಕವನ್ನು ವಿಧಿಸಲು ಪ್ರಾರಂಭಿಸಿವೆ. ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಮಧ್ಯಪ್ರಾಚ್ಯದಲ್ಲಿ ಇಂಧನ ಬೆಲೆಗಳ ಮೇಲೆ ಪರಿಣಾಮ ಬೀರಿದ್ದು, ಭಾರತೀಯ ಜನಸಾಮಾನ್ಯರ ಮೇಲೆ ನೇರವಾಗಿ ಪ್ರಭಾವ ಬೀರಿದೆ. ಈ ನಿರ್ಧಾರದಿಂದಾಗಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ದರಗಳು ಏರಿಕೆಯಾಗಿವೆ.

ಇಂಡಿಗೋ ವಿಮಾನಯಾನ ಸಂಸ್ಥೆಯು ಭಾರತದೊಳಗಿನ ಪ್ರಯಾಣಕ್ಕೆ ಪ್ರತಿ ಟಿಕೆಟ್‌ಗೆ 425 ರೂ. ಇಂಧನ ಶುಲ್ಕವನ್ನು ವಿಧಿಸುತ್ತಿದೆ. ಮಧ್ಯಪ್ರಾಚ್ಯಕ್ಕೆ 900 ರೂ., ಆಗ್ನೇಯ ಏಷ್ಯಾ, ಚೀನಾ, ಆಫ್ರಿಕಾ ಮತ್ತು ಪಶ್ಚಿಮ ಏಷ್ಯಾದಂತಹ ಪ್ರದೇಶಗಳಿಗೆ 1,800 ರೂ. ಮತ್ತು ಯುರೋಪ್‌ಗೆ ತೆರಳುವ ವಿಮಾನಗಳಿಗೆ 2,300 ರೂ. ಶುಲ್ಕ ನಿಗದಿಪಡಿಸಲಾಗಿದೆ. ವಿಮಾನ ದರಗಳ ಈ ಹಠಾತ್ ಏರಿಕೆಗೆ ಪ್ರಯಾಣಿಕರು ತೀವ್ರ ಅಸಮಾಧಾನಕ್ಕೆ ವ್ಯಕ್ತಪಡಿಸುತ್ತಿದ್ದಾರೆ. ಅನಿವಾರ್ಯ ಕಾರಣಗಳಿಂದ ಪ್ರಯಾಣಿಸಬೇಕಾದವರು ಹೆಚ್ಚಿನ ಹಣ ಪಾವತಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು

ಮೇಷ ರಾಶಿ:

ಧನಾರ್ಜನೆಗೆ ಹೆಚ್ಚು ಅವಕಾಶಗಳು ಲಭ್ಯವಾಗಿದ್ದು ಉತ್ತಮ ಆದಾಯದ್ದನ್ನು ಆಯ್ಕೆ ಮಾಡಿಕೊಳ್ಳುವಿರಿ. ಆದರೆ ಇದರಿಂದ ಕೆಲವು ರಿಸ್ಕ್ ಗಳನ್ನೂ ಎದುರಿಸಬೇಕಾಗುವುದು. ಆಪ್ತರ ಮೇಲಿನ ನಂಬಿಕೆ ಹುಸಿಯಾಗುವುದು. ನಿರೀಕ್ಷೆಯ ಮಟ್ಟಕ್ಕೆ ಹೋಗುವುದು ಕಷ್ಟವಾದರೂ ಸ್ವಲ್ಪ ನೆಮ್ಮದಿಯು ಇರಲಿದೆ. ಸ್ತ್ರೀಯರಿಗೆ ಅಭದ್ರತೆಯು ಕಾಡಬಹುದು. ಮಕ್ಕಳ ವಿಚಾರದಲ್ಲಿ ನೀವು ಮೃದುವಾಗುವಿರಿ. ಬಂಧುಗಳು ಅನಿರೀಕ್ಷಿತ ಭೇಟಿಯಾಗಿ ಸಂತೋಷ ಕೊಡುವರು. ಹಲವು ದಿನದ ಮನಸ್ತಾಪವು ದೂರವಾಗಬಹುದು.

ವೃಷಭ ರಾಶಿ:

ನಿಮ್ಮ ನಕಾರಾತ್ಮಕ ಜನಪ್ರಿಯತೆಯು ನಿಮಗೆ ಬೇಸರ ಕೊಡುವುದು. ಮಿತ್ರರ ಸಹಕಾರವನ್ನು ಬಹಳ ದಿನಗಳ ಅನಂತರ ಕೇಳುವಿರಿ. ಆದರೆ ಅವರಿಂದ ಅದು ಸಿಗದು. ನಿಮ್ಮ ವ್ಯವಹಾರವನ್ನು ಅಳೆಯುವುದು ಸುಲಭವಲ್ಲ. ಅಜ್ಞಾನದಿಂದ ತಪ್ಪುಗಳು ನಡೆಯಬಹುದು. ನಿಮ್ಮನ್ನು ವಿರೋಧಿಸುವವರ ನಡುವೆ ಬೆಳೆಯಲು ಹಂಬಲಿಸುವಿರಿ. ಇಂದು ಒಂಟಿಯಾದಂತೆ ನಿಮಗೆ ಅನ್ನಿಸಬಹುದು. ಅತಿಯಾದ ಕೋಪವನ್ನು ಮಾಡಿಕೊಳ್ಳುವುದು ಬೇಡ.

ಮಿಥುನ ರಾಶಿ:

ಅನಿರೀಕ್ಷಿತ ನಿಧಿಯ ನಿರೀಕ್ಷೆಯಲ್ಲಿ ಇರುವಿರಿ. ಮನೆಯ ಕಾರ್ಯಗಳು ಇಂದು ಅಧಿಕವಾಗಿ ಇರಬಹುದು. ಅಂದುಕೊಂಡಿದ್ದರ ವಿರುದ್ಧ ನಡೆಯುವುದು ನಿಮಗೆ ಬೇಸರ ತರಿಸಬಹುದು. ನಿಮ್ಮ ವ್ಯಕ್ತಿತ್ವದ ಬಗ್ಗೆ ಇತರರು ಹೆಮ್ಮೆಪಡುವರು. ಪ್ರಶಂಸೆಯಿಂದ ಅಹಂಕಾರವು ಬರುವ ಸಾಧ್ಯತೆ ಇದೆ. ಕುಟುಂಬಕ್ಕೆ ಹೆಚ್ಚು ಸಮಯವನ್ನು ಕೊಡುವಿರಿ. ಸಣ್ಣ ವಸ್ತುವನ್ನು ದಾನ ಮಾಡಿ ಸಂತೋಷಪಡುವಿರಿ.

ಕರ್ಕಾಟಕ ರಾಶಿ:

ಇಂದು ಎಲ್ಲದಕ್ಕೂ ಯಂತ್ರದ ಮೊರೆ ಹೋಗುವುದರಿಂದ ನಿಮಗೆ ಕಷ್ಟ. ಸಹೋದ್ಯೋಗಿಗಳು ಅಹಂಕಾರವನ್ನು ತೋರಿಸುವರು. ನಿಮ್ಮ ನಿಲುವಲ್ಲಿ ನೀವಿರುವುದು ಉತ್ತಮ. ಬೇಕೆಂದುಕೊಂಡಿದ್ದನ್ನು ಪಡೆಯುವುದು ಕಷ್ಟವಾಗುವುದು. ಗೊತ್ತಿಲ್ಲದ ಕಾರ್ಯವನ್ನು ಮಾಡಲು ನಿಮಗೆ ಉತ್ಸಾಹ ಇರಲಿದೆ. ಇನ್ನೊಬ್ಬರ ವಸ್ತುವಿನ ಬಗ್ಗೆ ಮೋಹವು ಇರುವುದು‌. ಆತ್ಮಪ್ರಶಂಸೆಯು ಅಧಿಕಾವಾಗಿ ತೋರುವುದು. ಮಾಧ್ಯಮ‌ ಕ್ಷೇತ್ರದಲ್ಲಿ ಇರುವವರಿಗೆ ಮೇಲುಗೈ ಸಾಧಿಸುವ ಅವಕಾಶವಿರಲಿದೆ.

ಸಿಂಹ ರಾಶಿ:

ಸಹನೆಯನ್ನು ಮೀರಿ ನೀವು ಇಂದು ವರ್ತಿಸುವಿರಿ. ತಂತ್ರಜ್ಞಾನದಿಂದ ಅನ್ಯ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶ ಸಿಗಲಿದೆ. ನೂತನ ವಾಹನದ ಖರೀದಿಗೆ ಪರ ಊರಿಗೆ ಹೋಗುವಿರಿ. ಮೊದಲೇ ನಿಶ್ಚಯಪಡಿಸಿದ ಕಾರ್ಯವನ್ನು ಬಿಟ್ಟು ಬೇರೆ ಯೋಚನೆ ಮಾಡುವುದು ಬೇಡ. ನಿಮಗೆ ವಹಿಸಿದ ಕೆಲಸವನ್ನು ಅದ್ಭುತವಾಗಿ ಮಾಡಲು ಪ್ರಯತ್ನಿಸುವಿರಿ. ನಿಮ್ಮ ಕಾಯುವಿಕೆಯು ಸಾರ್ಥಕವಾಗಬಹುದು. ಮಾತಿನಲ್ಲಿ ಮಾರ್ದವ ಇರಲಿ.

ಕನ್ಯಾ ರಾಶಿ:

ಇಂದು ಮಕ್ಕಳ ವಿಚಾರವಾಗಿ ನಿಮಗೆ ದೂರು ಬರಬಹುದು. ವಿವಾಹದ ಬಗ್ಗೆ ಯೋಚನೆ ಇದ್ದರೂ ಪ್ರಸ್ತಾಪಿಸುವವರು ಯಾರು ಇಲ್ಲ. ಅನೇಕ ದಿನಗಳಿಂದ ಅನಾರೋಗ್ಯದ ಕಾರಣ ಬಳಲುತ್ತಿದ್ದು ಸೂಕ್ತ ಚಿಕಿತ್ಸೆಯ ಅವಶ್ಯಕತೆ ಇರುವುದು. ಉದ್ಯೋಗದಲ್ಲಿ ಮಕ್ಕಳಿಗೆ ಪ್ರವೇಶವನ್ನು ಕೊಡುವಿರಿ. ಅಪಮಾನದಿಂದ ಮನಸ್ಸು ಉಗ್ರರೂಪಕ್ಮೆ ಬದಲಾಗಬಹುದು. ಯಾರ ಬಗ್ಗೆಯೂ ಸುಮ್ಮನೆ ಆಡಿಕೊಳ್ಳುವುದು ಬೇಡ.

ತುಲಾ ರಾಶಿ:

ನಿಮಗೆ ಸಂಬಂಧಿಸದ ವಿಚಾರಗಳಲ್ಲಿ ಪ್ರವೇಶವನ್ನು ಪಡೆಯುವುದು ಬೇಡ. ಸರ್ಕಾರದ ಕಾರ್ಯಗಳನ್ನು ಬೇಗ ಮುಗಿಸಿಕೊಳ್ಳಲಿದ್ದೀರಿ. ವ್ಯವಹಾರದ ದಾಖಲೆಗಳು ಸರಿಯಾಗಿ ಇಟ್ಟುಕೊಳ್ಳುವಿರಿ. ವಿದೇಶಕ್ಕೆ ತೆರಳುವ ನಿರೀಕ್ಷೆಯಲ್ಲಿ ಇರುವಿರಿ. ಮನಸ್ಸಿಗೆ ಹಿಡಿಸಿದ ಕೆಲಸವನ್ನು ಮಾತ್ರ ಬೇಗ ಮಾಡಿ ಮುಗಿಸುವಿರಿ. ಮಕ್ಕಳನ್ನು ಪಡೆದುಕೊಳ್ಳುವ ಚಿಂತೆಯು ಕಾಡುವುದು. ಪ್ರೇಮದಲ್ಲಿ ಸಿಕ್ಕಿಕೊಂಡು ಕಷ್ಟಪಡುವಿರಿ. ನಿಮ್ಮ ತೀರ್ಮಾನವನ್ನು ಒಪ್ಪುವುದು ಕಷ್ಟವಾದೀತು.

ವೃಶ್ಚಿಕ ರಾಶಿ:

ಬಂಧುಗಳ ಕುಹಕಕ್ಕೆ ಸಿಲುಕುವಿರಿ. ನ್ಯಾಯಾಲಯದ ಹೋರಾಟವು ಅಪಯಶಸ್ಸನ್ನು ಕೊಡಬಹುದು. ಕಲಾವಂತಿಕೆಯಿಂದ ನಿಮ್ಮ ಅನೇಕ ನಕಾರಾತ್ಮಕ ವಿಚಾರಗಳು ಮರೆಯಾಗಬಹುದು. ಭೂಮಿಯ ವ್ಯವಹಾರಕ್ಕೆ ಆಪ್ತರನ್ನು ಜೋಡಿಸಿಕೊಳ್ಳುವಿರಿ. ದಾನದಿಂದ ಸಮಾಧಾನ ಸಿಗುವ ಸಾಧ್ಯತೆ ಇದೆ. ಇನ್ನೊಬ್ಬರ ಒತ್ತಾಯದ ಕಾರಣಕ್ಕೆ ನೀವು ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ಮಕ್ಕಳಿಂದ ಆರ್ಥಿಕ ಸಹಾಯವು ಸಿಗುವುದು.

ಧನು ರಾಶಿ:

ಹಿರಿಯರ ಕೋಪಕ್ಕೆ ನೀವು ಬಲಿಯಾಗಬೇಕಾದೀತು. ಮಾನಸಿಕವಾದ ಅಸ್ಥಿರತೆಯಿಂದ ನಿಮಗೆ ಕಷ್ಟವಾದೀತು. ವೃತ್ತಿಯಲ್ಲಿ ನಿಮಗೆ ತೃಪ್ತಿಯು ಸಿಗಲಿದೆ. ಧಾರ್ಮಿಕ ವಿಚಾರವಾಗಿ ನೀವು ದೂರ ಪ್ರಯಾಣವನ್ನು ಮಾಡುವಿರಿ. ಎಲ್ಲ ಕೆಲಸದಲ್ಲಿ ಆತ್ಮತೃಪ್ತಿಯನ್ನು ಬಯಸುಬಿರಿ. ನಿಮ್ಮ ಮಾತುಗಳೇ ನಿಮಗೆ ಮುಳುವಾಗುವ ಸಾಧ್ಯತೆ ಇದೆ. ಉದ್ಯೋಗವಿಲ್ಲದೇ ಬೇಸರಗೊಂಡ ನಿಮಗೆ ಬೇರೆಕಡೆಯಲ್ಲಿ ಕೆಲಸವು ಸಿಗುವುದು. ಇಂದು ಸಂದರ್ಭವನ್ನು ನೋಡಿಕೊಂಡು ಮಾತನಾಡಿ.

ಮಕರ ರಾಶಿ:

ಆರ್ಥಿಕತೆಯಲ್ಲಿ ನೀವು ನಂಬಿಕೆಯನ್ನು ಉಳಿಸಿಕೊಳ್ಳಬೇಕಾಗುವುದು. ನಿಮ್ಮ ಬಾಗುವ ಸ್ವಭಾವವು ನಿಮ್ಮನ್ನು ಮೇಲಕ್ಕೆ ಏರಿಸುವುದು. ಹೇಳಿಕೊಳ್ಳಲಾಗದ ಸಂಕಟವನ್ನು ಮನಸ್ಸಿನಲ್ಲಿಯೇ ನುಂಗುವಿರಿ. ಪ್ರಭಾವಿ ಗಣ್ಯರ ಜೊತೆ ಕೆಲವು ಸಮಯವನ್ನು ಕಳೆಯುವಿರಿ. ಪ್ರೀತಿಯನ್ನು ಕುಟುಂಬದ ಜೊತೆ ಹಂಚಿಕೊಳ್ಳುವಿರಿ. ಮನೆತನದ ಕಾರಣದಿಂದ ನಿಮಗೆ ಗೌರವವು ಪ್ರಾಪ್ತವಾಗಲಿದೆ. ಮೇಲಧಿಕಾರಿಗಳನ್ನು ಮೆಚ್ಚಿಸುವಿರಿ. ನಿಮ್ಮ ಮೌನವನ್ನು ಅನ್ಯರೀತಿಯಲ್ಲಿ ಅರ್ಥೈಸಿಕೊಳ್ಳಬಹುದು.

ಕುಂಭ ರಾಶಿ:

ನಿಮ್ಮ ಬದುಕಿಗೆ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಳ್ಳುವಿರಿ. ಬರುವ ಹಣವು ಕೈಸೇರಿದರೂ ಖರ್ಚಿನ ದಾರಿ ಮುಕ್ತವಾಗಿರುವುದು ಮಕ್ಕಳಿಗೆ ಸಿಗುವ ಪುರಸ್ಕಾರದಿಂದ ನಿಮಗೆ ಸಂತೋಷವಾಗುವುದು. ಅಪರೂಪದ ಮಿತ್ರರು ನಿಮ್ಮನ್ನು ಭೇಟಿ ಮಾಡುವರು. ದಿನಸಿ ವ್ಯಾಪಾರಿಗಳಿಗೆ ಉತ್ತಮ ಲಾಭವು ಆಗಲಿದೆ. ಸ್ವಂತ ನಿರ್ಧಾರವನ್ನು ತೆಗೆದುಕೊಳ್ಳಲು ನೀವು ಸಫಲರಾಗುವುದಿಲ್ಲ. ಏಕಪಕ್ಷೀಯವಾದ ನಿರ್ಧಾರದಿಂದ ನಿಮ್ಮವರಿಗೆ ಬೇಸರವಾದೀತು.

ಮೀನ ರಾಶಿ:

ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಮಾರ್ಗದರ್ಶನ ಅಭಾವವು ಹೆಚ್ಚು ತೋರುವುದು. ಹೂಡಿಕೆಯಿಂದ ನಷ್ಟ ಸಂಭವ. ತಾಯಿ ಮೇಲೆ ಪ್ರೀತಿ ಹೆಚ್ಚಾಗುವುದು. ಅವರಿಗೆ ಖುಷಿಯಾಗುವಂತೆ ನಡೆದುಕೊಳ್ಳುವಿರಿ. ಇಂದಿನ ವ್ಯವಹಾರದಲ್ಲಿ ನಿಮಗೆ ತೊಡಕಿರುವುದು. ಬಂಧುಗಳ ಕಾರಣಕ್ಕಾಗಿ ಧನವ್ಯಯವಾಗುವುದು. ನಿಮ್ಮ ಆಸ್ತಿಯ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ. ಹಳೆಯ ನೋವುಗಳು ಕಾಣಿಸಿಕೊಳ್ಳಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಮೀನ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಶ್ರವಣಾ, ಯೋಗ : ಪರಿಘ, ಕರಣ : ಕೌಲವ, ಸೂರ್ಯೋದಯ – 06 – 33 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:03 – 18:34, ಯಮಗಂಡ ಕಾಲ 12:33 – 14:03, ಗುಳಿಕ ಕಾಲ 15:33 – 17:33

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಸಂಖ್ಯಾಶಾಸ್ತ್ರ ಭವಿಷ್ಯ:  ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ

ಈ ದಿನ ಕನಿಷ್ಠ 108 ಬಾರಿ ‘ಓಂ’ ಕಾರ ಜಪ ಮಾಡಿ. ಇದರಿಂದ ನಿಮ್ಮ ಸುಪ್ತ ಪ್ರಜ್ಞೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮ ಕೈಲಿ ಇನ್ನಷ್ಟು ಮೊತ್ತವನ್ನು ಇಟ್ಟುಕೊಳ್ಳಬೇಕು ಎಂದು ಆಲೋಚನೆ ಮಾಡಲಿದ್ದೀರಿ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದಂಥವರು ಈ ದಿನ ಸ್ವಲ್ಪ ಮಟ್ಟಿಗೆ ಒತ್ತಡಕ್ಕೆ ಗುರಿ ಆಗಬೇಕಾಗುತ್ತದೆ. ನೀವು ಬಹಳ ಆತ್ಮವಿಶ್ವಾಸದಿಂದ ನೀಡಿದಂಥ ಹಣಕಾಸಿನ ಸಲಹೆಗಳು ಬೂಮ್ ರಾಂಗ್ ಆಗಬಹುದು. ಆದ್ದರಿಂದ ಇತರರಿಗೆ ಸಲಹೆ ನೀಡುವ ಮುಂಚೆ ಸಾಧಕ- ಬಾಧಕಗಳ ಬಗ್ಗೆ ಆಲೋಚಿಸಿ, ಹೆಜ್ಜೆಯಿಡುವುದು ಒಳ್ಳೆಯದು.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಬ್ಯಾಂಕ್ ಲಾಕರ್ ನಲ್ಲಿ ಚಿನ್ನದ ಒಡವೆಗಳನ್ನು ಇಡುವುದಕ್ಕೆ ಆಲೋಚಿಸುತ್ತೀರಿ ಎಂದಾದಲ್ಲಿ ಒಂದಕ್ಕೆ ನಾಲ್ಕು ಬಾರಿ ಆಲೋಚಿಸಿ ಹಾಗೂ ಸಾಮಾನ್ಯ ದಿನಗಳಲ್ಲಿ ತೆಗೆದುಕೊಳ್ಳುವುದಕ್ಕಿಂತ ಹೆಚ್ಚಿನ ನಿಗಾ ವಹಿಸುವುದು ಮುಖ್ಯ. ಒಂದು ವೇಳೆ ನೀವೇನಾದರೂ ಚೂಪಾದ ವಸ್ತುಗಳನ್ನು ಬಳಸುತ್ತೀರಿ ಅಥವಾ ಅಂಥ ವಸ್ತುಗಳನ್ನು ಬಳಸುವಂಥ ಕೆಲಸಗಳಲ್ಲಿ ತೊಡಗಿಕೊಳ್ಳುತ್ತೀರಿ ಅಂತಾದಲ್ಲಿ ಸಣ್ಣ-ಪುಟ್ಟ ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಏನಾಗುತ್ತಿದೆ ನಿಮ್ಮ ಸುತ್ತ ಎಂಬ ಬಗ್ಗೆ ವಾಸ್ತವ ಸಂಗತಿ ತಿಳಿಯಲಿದೆ. ಕೆಲವರು ನಿಮ್ಮನ್ನು ದೂರವಿಟ್ಟು ಕೆಲಸ ಮಾಡುತ್ತಿದ್ದಾರೆ ಎಂಬ ಸಂಗತಿ ತಿಳಿದುಬರಲಿದೆ. ಕಮಿಷನ್ ಆಧಾರದಲ್ಲಿ ಕೆಲಸ ಮಾಡುವಂಥವರು ನಿಮಗೆ ಬರಬೇಕಾದ ಹಣದ ಕಡೆಗೆ ಹೆಚ್ಚಿನ ಗಮನವನ್ನು ನೀಡಿ. ಏಕೆಂದರೆ ನಿಮ್ಮ ಜತೆಗೆ ಚೆನ್ನಾಗಿರುವಂತೆಯೇ ಕಾಣಿಸುವಂಥವರು ನಿಮಗೆ ಬರಬೇಕಾದ ಆದಾಯವನ್ನು ತಮ್ಮದಾಗಿಸಿಕೊಳ್ಳುವಂಥ ಸಾಧ್ಯತೆಗಳಿವೆ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ:  ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 15ರ ದಿನಭವಿಷ್ಯ

ಮನೆಯ ಮುಖ್ಯ ದ್ವಾರದ ಮೇಲೆ ‘ಸ್ವಸ್ತಿಕ’ ಚಿಹ್ನೆಯನ್ನು ಬರೆಯಿರಿ. ಇದರಿಂದ ನಕಾರಾತ್ಮಕ ಆಲೋಚನೆಗಳು ದೂರ ಆಗಲಿದೆ. ಕುಟುಂಬ ಸದಸ್ಯರ ಮಧ್ಯೆ ಸಾಮರಸ್ಯ ಮೂಡಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ನೀವೇ ನಂಬುವುದಕ್ಕೆ ಸಾಧ್ಯವಿಲ್ಲದ ಗಾಸಿಪ್ ನಿಮ್ಮ ಬಗ್ಗೆ ಹರಿದಾಡಲಿದೆ. ಸಂಬಂಧಿಕರ ಬಳಿ ಈ ಹಿಂದೆ ನೀವು ಮಾಡಿದಂಥ ಸಾಲವೋ ಅಥವಾ ಆಸ್ತಿ ವ್ಯವಹಾರವೋ ವಿಪರೀತ ಒತ್ತಡವನ್ನು ಸೃಷ್ಟಿ ಮಾಡಲಿದೆ. ನಕ್ಕು ಸುಮ್ಮನಾಗ ಬೇಕಾದ ಆಕ್ಷೇಪ, ಆಪಾದನೆಗಳ ಬಗ್ಗೆ ವಿಪರೀತ ತಲೆ ಕೆಡಿಸಿಕೊಳ್ಳುವಂತಾಗುತ್ತದೆ. ಮುಖ್ಯವಾದ ವಸ್ತುವೊಂದನ್ನು ಒಂದು ಕಡೆ ಇಟ್ಟು, ಮತ್ತೊಂದು ಕಡೆ ಹುಡುಕಾಟ ನಡೆಸುವಂತಾಗುತ್ತದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಮಾಧ್ಯಮಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಸ್ವಂತವಾಗಿ ವ್ಯವಹಾರ ಶುರು ಮಾಡುವುದಕ್ಕೆ ಸ್ನೇಹಿತರು ಹಾಗೂ ಸಂಬಂಧಿಕರು ಸಹ ಉತ್ತೇಜನ ನೀಡುವ ಸಾಧ್ಯತೆ ಇದೆ. ಇನ್ನು ನಿಮ್ಮಲ್ಲಿ ಯಾರು ಸ್ವ ಉದ್ಯೋಗ ಮಾಡಬೇಕು ಎಂದು ಬ್ಯಾಂಕ್ ಅಥವಾ ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಂದ ಸಾಲಕ್ಕಾಗಿ ಪ್ರಯತ್ನ ಮಾಡುತ್ತಿರುವಿರೋ ಅಂಥವರಿಗೆ ಸಲೀಸಾಗಿ ಹಣ ಸಿಗುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಉದ್ಯೋಗ ಬದಲಾವಣೆ ಮಾಡಬೇಕು ಎಂದು ಯೋಚಿಸುತ್ತಿರುವವರಿಗೆ ಸದ್ಯಕ್ಕೆ ಬದಲಾವಣೆ ಮಾಡುವುದು ಬೇಡ ಎಂದೆನಿಸುವುದಕ್ಕೆ ಶುರು ಆಗುತ್ತದೆ. ಪ್ರಕೃತಿ ಮಧ್ಯದಲ್ಲಿ ಸಮಯ ಕಳೆಯಬೇಕು, ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು ಎಂದು ನಿಶ್ಚಯ ಮಾಡಲಿದ್ದೀರಿ. ಜಿಮ್, ಯೋಗ ಅಥವಾ ಪ್ರಾಣಾಯಾಮಕ್ಕೆ ಸೇರ್ಪಡೆ ಆಗುವ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Source link