nagaraj11081993

ಲೋಕಾಯುಕ್ತ ಭರ್ಜರಿ ಕಾರ್ಯಚರಣೆ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಹಲವು ಅಧಿಕಾರಿಗಳು

ಯಾದಗಿರಿ, ಏಪ್ರಿಲ್​ 02: ಗುತ್ತಿಗೆದಾರನಿಂದ ಲಂಚ (Bribe) ಸ್ವೀಕರಿಸುತ್ತಿದ್ದ ವೇಳೆ ಕೆಬಿಜೆಎನ್ಎಲ್ ಭೀಮರಾಯನಗುಡಿ ವಿಭಾಗದ ಎಇಇ ಮತ್ತು ಜೆಇ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಎಇಇ ಮಧುಸೂದನ್ ಮತ್ತು ಜೆಇ ಮಂಜುನಾಥ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ಲೋಕಾಯುಕ್ತ ಡಿವೈಎಸ್​ಪಿ ಜೆ.ಹೆಚ್.ಇನಾಂದಾರ್ ನೇತೃತ್ವದಲ್ಲಿ ದಾಳಿ ಮಾಡಿ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಅಧಿಕಾರಿಗಳು ಎಇಇ ಮಧುಸೂದನ್ ಮತ್ತು ಜೆಇ ಮಂಜುನಾಥ ಕಾಮಗಾರಿ ಬಿಲ್ ಮಂಜೂರು ಮಾಡಲು ಗುತ್ತಿಗೆದಾರ ಖಾಸಿಂ ಸಾಬ್​ನಿಂದ…

Read More

KKR vs SRH : ವೃತ್ತಿಜೀವನದ ಬೆಸ್ಟ್ ಕ್ಯಾಚ್ ಹಿಡಿದ ವರುಣ್ ಚಕ್ರವರ್ತಿ; ಹುಟ್ಟಿಕೊಳ್ತು ವಿವಾದ

ಕೋಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧ ನಡೆದ ಐಪಿಎಲ್ 2026 ರ (IPL 2026) 6ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (KKR vs SRH) ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (Abhishek Sharma) 48 ರನ್‌ಗಳ ಅಬ್ಬರದ ಇನ್ನಿಂಗ್ಸ್ ಆಡಿದರು. ಅವರ ಈ ಇನ್ನಿಂಗ್ಸ್​ನಲ್ಲಿ 4 ಸಿಕ್ಸರ್‌ಗಳು ಮತ್ತು 4 ಬೌಂಡರಿಗಳು ಸೇರಿದ್ದವು. ಆದರೆ ಅವರ ವಿಕೆಟ್ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಅಭಿಷೇಕ್ ಶರ್ಮಾ ಅವರ ವಿಕೆಟ್ ಅನ್ನು ಬ್ಲೆಸ್ಸಿಂಗ್ ಮುಜರಬಾನಿ ಪಡೆದರಾದರೂ, ವರುಣ್ ಚಕ್ರವರ್ತಿ…

Read More

‘ಜನ ನಾಯಗನ್’ ಸಿನಿಮಾ ತಡ ಆಗಿದ್ದಕ್ಕೆ ನನಗೆ ನ್ಯಾಯ ಬೇಕು: ಗುಡುಗಿದ ವಿಜಯ್

ತಮಿಳು ಚಿತ್ರರಂಗದ ಖ್ಯಾತ ನಟ ಮತ್ತು ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ದಳಪತಿ ವಿಜಯ್ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಅಧಿಕೃತವಾಗಿ ತಿರುಚನಾಪಳ್ಳಿಯಲ್ಲಿ (ತಿರುಚಿ) ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಯ ನಂತರ ಅಲ್ಲಿ ನೆರೆದಿದ್ದ ಅಪಾರ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ದಳಪತಿ ವಿಜಯ್ (Thalapathy Vijay) ಅವರು, ತಮ್ಮ ಕೊನೆಯ ಚಿತ್ರ ‘ಜನ ನಾಯಗನ್’ (Jana Nayagan) ಬಿಡುಗಡೆಯ ವಿಳಂಬದ ಹಿಂದೆ ದೊಡ್ಡ ರಾಜಕೀಯ ಷಡ್ಯಂತ್ರವಿದೆ ಎಂದು ಗಂಭೀರ ಆರೋಪ…

Read More

ಇರಾನ್ ಯುದ್ಧದಿಂದೀಚೆ ಹೂಡಿಕೆದಾರರಿಗೆ 41 ಲಕ್ಷ ರೂ ನಷ್ಟ; ಷೇರುಗಳಲ್ಲಿ ಹೂಡಿಕೆ ಮಾಡುವ ಸಮಯವಾ?

ನವದೆಹಲಿ, ಏಪ್ರಿಲ್ 2: ಇರಾನ್ ಯುದ್ಧಕ್ಕೆ ಮೊದಲು ಚೇತರಿಕೆಯ ಹಾದಿಯಲ್ಲಿದ್ದ ಭಾರತೀಯ ಷೇರು ಮಾರುಕಟ್ಟೆ (stock market) ಈಗ ಮತ್ತೆ ತತ್ತರಿಸುತ್ತಿದೆ. ಇರಾನ್ ಯುದ್ಧ ಆರಂಭವಾದ ಬಳಿಕ ಗಡಗಡ ನಡುಗುತ್ತಿದೆ. ಮಾರ್ಚ್ ತಿಂಗಳಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ಶೇ 11ರಷ್ಟು ಕುಸಿತ ಕಂಡಿವೆ. ಹೆಚ್ಚಿನ ಸೂಚ್ಯಂಕಗಳು ಶೇ. 10ಕ್ಕಿಂತಲೂ ಹೆಚ್ಚಿನ ಕುಸಿತ ಕಂಡಿವೆ. ಇಸ್ರೇಲ್ ಮತ್ತು ಅಮೆರಿಕ ದೇಶಗಳು ಇರಾನ್ ಮೇಲೆ ದಾಳಿ ಮಾಡುವ ಮುನ್ನ, ಅಂದರೆ ಫೆಬ್ರುವರಿ 27ರಂದು ಬಿಎಸ್​ಇಯಲ್ಲಿ ಲಿಸ್ಟ್ ಆಗಿರುವ ಕಂಪನಿಗಳ…

Read More

‘ಲವ್ ಮಾಕ್ಟೇಲ್ 3’ ಬಳಿಕ ‘ಪೀಟರ್’ ಬಿಡುಗಡೆ ಮಾಡಲಿರುವ ‘ಕೆವಿಎನ್ ಪ್ರೊಡಕ್ಷನ್ಸ್’

ಇತ್ತೀಚೆಗೆ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆಯು ‘ಲವ್ ಮಾಕ್ಟೇಲ್ 3’ ಸಿನಿಮಾವನ್ನು ಬಿಡುಗಡೆ ಮಾಡಿತ್ತು. ಆ ಸಿನಿಮಾ ಸೂಪರ್ ಹಿಟ್ ಆಯಿತು. ಅದರ ಬೆನ್ನಲ್ಲೇ ‘ಪೀಟರ್’ ಸಿನಿಮಾವನ್ನು ವಿತರಣೆ ಮಾಡಲು ‘ಕೆವಿಎನ್ ಪ್ರೊಡಕ್ಷನ್ಸ್’ ಸಜ್ಜಾಗಿದೆ. ಈ ಸಿನಿಮಾದ ಕಂಟೆಂಟ್ ನೋಡಿ ಇಷ್ಟಪಟ್ಟಿದ್ದರಿಂದ ವಿತರಿಸಲು ಮುಂದೆ ಬಂದಿದೆ. ಏಪ್ರಿಲ್ 10ಕ್ಕೆ ರಾಜ್ಯದಾದ್ಯಂತ ಬಿಡುಗಡೆ ಮಾಡಲಿದೆ. ರಾಜೇಶ್ ಧ್ರುವ ಅವರು ‘ಪೀಟರ್’ (Peter) ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ನಾಯಕಿಯಾಗಿ ಜಾನ್ವಿ ನಟಿಸಿದ್ದಾರೆ. ರವೀಕ್ಷಾ ಶೆಟ್ಟಿ , ರಘು…

Read More

ಭಾರತೀಯ ಸ್ನೇಹಿತರು ಚಿಂತಿಸಬೇಕಾಗಿಲ್ಲ; ಹಾರ್ಮುಜ್ ಜಲಸಂಧಿಯ ಬಗ್ಗೆ ಇರಾನ್ ಭರವಸೆ

ಟೆಹ್ರಾನ್, ಏಪ್ರಿಲ್ 2: ಮಧ್ಯ ಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಭಾರತಕ್ಕೆ ಇರಾನ್ ಮತ್ತೊಮ್ಮೆ ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳಿಗೆ ಯಾವುದೇ ತೊಂದರೆಯಾಗದು ಎಂದು ಭರವಸೆ ನೀಡಿದೆ. ಇರಾನಿನ ರಾಯಭಾರ ಕಚೇರಿ ಇಂದು ಹಾರ್ಮುಜ್ ಜಲಸಂಧಿಯ (Strait of Hormuz) ಬಗ್ಗೆ ಭಾರತಕ್ಕೆ ಭರವಸೆ ನೀಡಿದ್ದು, ಸಂಘರ್ಷ ಮುಂದುವರಿದಿದ್ದರೂ, ಕದನ ವಿರಾಮವನ್ನು ಸಾಧಿಸುವ ಪ್ರಯತ್ನಗಳು ವಿಫಲವಾಗಿದ್ದರೂ ಭಾರತ ಭಯಭೀತರಾಗುವ ಅಗತ್ಯವಿಲ್ಲ ಎಂದು ಒತ್ತಿಹೇಳಿದೆ. ಹಾರ್ಮುಜ್ ಜಲಸಂಧಿಯು ಕಿರಿದಾದ ಹಾಗೂ ಪ್ರಮುಖ ಜಲಮಾರ್ಗವಾಗಿದ್ದು, ಇದು ಪರ್ಷಿಯನ್ ಕೊಲ್ಲಿಯನ್ನು ಓಮನ್…

Read More

ದಾರಿ ನಿರ್ಮಾಣ ವಿಚಾರದಲ್ಲಿ ಕುಟುಂಬಗಳ ಮಧ್ಯೆ ಮಾರಾಮಾರಿ: ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆಗೆ ಯತ್ನ

ಹಾಸನ, ಏಪ್ರಿಲ್​ 02: ಅವರೆಲ್ಲಾ ಒಂದೇ ಕುಟುಂಬಗಳು. ಒಂದೇ ಸಮುದಾಯಕ್ಕೆ ಸೇರಿದವರು. ಆದರೆ ದಶದಕದ ಹಿಂದೆ ನಡೆದ ಅದೊಂದು ಚುನಾವಣೆ ಊರಿನ್ನೇ ಎರಡು ಭಾಗ ಮಾಡಿ ಹಾಕಿದೆ. ಸಣ್ಣಪುಟ್ಟ ವಿಚಾರಕ್ಕೂ ಕಲಹ, ಮಾರಾಮಾರಿ (Clash) ನಡೆಯುತ್ತಿದೆ. ಐದು ಕುಟುಂಬಗಳು ವಾಸಿಸುವ ಮನೆಗಳಿಗೆ ತೆರಳಲು ರಸ್ತೆ ನಿರ್ಮಾಣದ ವಿಚಾರ ಇದೀಗ ಊರಿನಲ್ಲಿ ಮತ್ತೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಜಿಲ್ಲೆಯ ಬೇಲೂರು ತಾಲೂಕಿನ ಹಂಚಿಹಳ್ಳಿಯಲ್ಲಿ ಘಟನೆ ನಡೆದಿದೆ. ಅಧಿಕಾರಿಗಳ ಸೂಚನೆಯಂತೆ ದಾರಿ ಮಾಡಿಕೊಳ್ಳಲು ಮುಂದಾದಾಗ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಯತ್ನ ಎಂಬ…

Read More

KKR vs SRH Record Alert: ಅಪರೂಪದ ತ್ರಿಶತಕ ಪೂರೈಸಿದ ಅಭಿ‘ಸಿಕ್ಸರ್’ ಶರ್ಮಾ

ಇತ್ತೀಚೆಗೆ ಮುಕ್ತಾಯಗೊಂಡ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಆರಂಭಿಕ ಅಭಿಷೇಕ್ ಶರ್ಮಾ ನಿರೀಕ್ಷೆಯಂತೆ ಪ್ರದರ್ಶನ ನೀಡಲಿಲ್ಲ. ದ್ವಿಪಕ್ಷೀಯ ಸರಣಿಯಲ್ಲಿ ರನ್‌ಗಳ ಪ್ರವಾಹವನ್ನೇ ಹರಿಸಿದ್ದ ಅಭಿಷೇಕ್ ನಿರ್ಣಾಯಕ ಪಂದ್ಯಾವಳಿಯಲ್ಲಿನ ವೈಫಲ್ಯಕ್ಕಾಗಿ ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಗಿತ್ತು. ಪ್ರಸ್ತುತ ನಡೆಯುತ್ತಿರುವ ಐಪಿಎಲ್​ನ ಮೊದಲ ಪಂದ್ಯದಲ್ಲಿಯೂ ಅಭಿಷೇಕ್ ಪ್ರಭಾವ ಬೀರಲಿಲ್ಲ. ಆದಾಗ್ಯೂ, ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ತಮ್ಮ ಹಳೆಯ ಫಾರ್ಮ್​ ಕಂಡುಕೊಂಡಿರುವ ಅಭಿಷೇಕ್ ರನ್​​ಗಳ ಮಳೆ ಹರಿಸಿದರು. ತಮ್ಮ ಸ್ಫೋಟಕ ಬ್ಯಾಟಿಂಗ್‌ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟ ಅಭಿಷೇಕ್ 48 ರನ್​ಗಳ…

Read More

ಬೆಂಗಳೂರಿನ ಶೇ. 80 ಐಟಿ ಕೂಲಿಗಳಿಗೆ ಇನ್ನು 3 ವರ್ಷದಲ್ಲಿ ಕೆಲಸ ಇರೋದಿಲ್ಲ: ಶಾಕ್ ಕೊಟ್ಟಿದೆ ರೆಡ್ಡಿಟ್ ಪೋಸ್ಟ್

ಬೆಂಗಳೂರು, ಏಪ್ರಿಲ್ 2: ನೀವು ದುಡಿದ ಹಣವೆಲ್ಲವನ್ನೂ ಬಳಸಿ ಬೆಂಗಳೂರಿನಲ್ಲಿ ಮನೆ ಖರೀದಿಸಲು ಹೋಗಬೇಡಿ. ನಿಮ್ಮ ಕೆಲಸ ಯಾವಾಗ ಬೇಕಾದರೂ ಹೋಗಬಹುದು. ಬಾಡಿಗೆ ಮನೆಯಲ್ಲಿ ವಾಸವಿರಿ… ಇದು ಬೆಂಗಳೂರಿನ ಐಟಿ ವೃತ್ತಿಪರನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ರೆಡ್ಡಿಟ್ ಸೋಷಿಯಲ್ ಮೀಡಿಯಾದಲ್ಲಿ (Reddit Post) ಹಾಕಿದ ಪೋಸ್ಟ್​ನಲ್ಲಿ ಐಟಿ ಬಿಟಿ ಸಿಟಿಯ ಟೆಕ್ಕಿಗಳಿಗೆ ಕೊಡಲಾಗಿರುವ ಸಲಹೆ. ಇವರ ಪ್ರಕಾರ ಮುಂದಿನ ಮೂರು ವರ್ಷದೊಳಗೆ ಬೆಂಗಳೂರಿನ ಶೇ. 80ರಷ್ಟು ಐಟಿ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುತ್ತಾರಂತೆ. ತನ್ನ ಗುಂಡಿ ತಾನೇ ತೋಡಿದ ಟೆಕ್ಕಿ…

Read More

ಹಾರ್ಮುಜ್ ಜಲಸಂಧಿಯ ದಿಗ್ಬಂಧನ ತೆರೆಯುವ ಕುರಿತ ಇಂಗ್ಲೆಂಡ್​​ನ ಶೃಂಗಸಭೆಯಲ್ಲಿ ಭಾರತ ಭಾಗಿ

ನವದೆಹಲಿ, ಏಪ್ರಿಲ್ 2: ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಇಂಗ್ಲೆಂಡ್ (UK) ಡಜನ್‌ಗಟ್ಟಲೆ ದೇಶಗಳೊಂದಿಗೆ ಮಾತುಕತೆ ನಡೆಸುತ್ತಿದೆ. ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಮಧ್ಯೆ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು ಯುನೈಟೆಡ್ ಕಿಂಗ್‌ಡಮ್ ಆಯೋಜಿಸಿರುವ ಬಹು-ರಾಷ್ಟ್ರಗಳ ವರ್ಚುವಲ್ ಶೃಂಗಸಭೆಯಲ್ಲಿ ಭಾರತ ಭಾಗವಹಿಸಿದೆ ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ಸಂಘರ್ಷ ಪೀಡಿತ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಕುರಿತು ಬಹುಪಕ್ಷೀಯ ಮಾತುಕತೆಗಳಿಗೆ ಯುನೈಟೆಡ್ ಕಿಂಗ್‌ಡಮ್ (UK) ಭಾರತ ಸೇರಿದಂತೆ 35 ದೇಶಗಳನ್ನು ಆಹ್ವಾನಿಸಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ….

Read More