Headlines

nagaraj11081993

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್ – Kannada News | Aamir Khan Productions’ Documentary on President Droupadi Murmu: Inspiring Journey Revealed

ದ್ರೌಪದಿ ಮುರ್ಮು-ಆಮಿರ್ Image Credit source: Droupadi Murmu ಬಾಲಿವುಡ್ ನಟ ಆಮಿರ್ ಖಾನ್ ಅವರು (Aamir Khan) ಇತ್ತೀಚೆಗೆ ನಟನೆಗಿಂತ, ಸಿನಿಮಾ ನಿರ್ಮಾಣದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ‘ಆಮಿರ್ ಖಾನ್ ಪ್ರೊಡಕ್ಷನ್ಸ್’ ಮೂಲಕ ವಿಭಿನ್ನ ಹಾಗೂ ಅರ್ಥಪೂರ್ಣ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈಗ ಈ ನಿರ್ಮಾಣ ಸಂಸ್ಥೆಯಿಂದ ಡಾಕ್ಯುಮೆಂಟರಿ ಒಂದು ಬರಲಿದೆ. ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ರೋಚಕ ಹಾಗೂ ಸ್ಪೂರ್ತಿದಾಯಕ ಜೀವನದ ಕುರಿತು ವಿಶೇಷ ಸಾಕ್ಷ್ಯಚಿತ್ರ (ಡಾಕ್ಯುಮೆಂಟರಿ) ಒಂದನ್ನು ಸಿದ್ಧಪಡಿಸಲು ಆಮಿರ್ ಖಾನ್…

Read More

ಕೆಎಲ್ ರಾಹುಲ್ ಔಟ್: ಟೀಮ್ ಇಂಡಿಯಾದಲ್ಲಿ 3 ಬದಲಾವಣೆ – Kannada News | India vs Afghanistan, 3rd ODI Toss And Playing XI

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3ನೇ ಏಕದಿನ ಪಂದ್ಯ ಶುರುವಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅಫ್ಘಾನಿಸ್ತಾನ್ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ 3 ಬದಲಾವಣೆ ಮಾಡಿಕೊಂಡಿದೆ. ಕಳೆದ ಮ್ಯಾಚ್​ನಲ್ಲಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ ಅವರನ್ನು ಈ ಪಂದ್ಯದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ನಿತೀಶ್ ಕುಮಾರ್…

Read More

ಹುಟ್ಟುಹಬ್ಬದ ದಿನವೇ ನಿವೃತ್ತ ಸೈನಿಕನಿಗೆ ಸೈಬರ್ ಶಾಕ್: ‘ಗಿಫ್ಟ್’ ಆಸೆಗೆ ಬಿದ್ದ ಯೋಧನಿಗೆ 2.82 ಲಕ್ಷ ರೂ. ವಂಚನೆ – Kannada News | Tumakuru Cybercrime: Fake Birthday Gift Offer Dupes Retired Soldier of 2.82 Lakh

ತುಮಕೂರು, ಜೂ.20: ನಿವೃತ್ತರಾಗಿದ್ದ ಯೋಧರೊಬ್ಬರಿಗೆ ಅವರ ಹುಟ್ಟುಹಬ್ಬದ ದಿನದಂದೇ ಸೈಬರ್ ಖದೀಮರು ಬರೋಬ್ಬರಿ ಲಕ್ಷಾಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹ್ಯಾಪಿ ಬರ್ತ್‌ಡೇ ಎಂದು ಶುಭಕೋರಿ, ಗಿಫ್ಟ್ ಕಳುಹಿಸುವ ನೆಪದಲ್ಲಿ ನಿವೃತ್ತ ಯೋಧನಿಗೆ ಬರೋಬ್ಬರಿ 2.82 ಲಕ್ಷ ರೂಪಾಯಿ ನಾಮ ಹಾಕಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಗ್ರಾಮದ ನಿವಾಸಿ, ನಿವೃತ್ತ ಯೋಧ ಶಿವಕುಮಾರ್ ವಂಚನೆಗೊಳಗಾದವರು. ಜೂನ್ 20ರಂದು ನಿವೃತ್ತ ಯೋಧ ಶಿವಕುಮಾರ್ ಅವರ ಹುಟ್ಟುಹಬ್ಬವಿತ್ತು. ಇದೇ ದಿನ ಮುಂಜಾನೆ…

Read More

ಖಗೋಳ ವಿಸ್ಮಯ: ವಿಜಯಪುರದಲ್ಲಿ ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣದ ಉಂಗುರ! – Kannada News | Rare Sun Halo Spotted in Vijayapura: Tikota Gonasagi School Students Witness Beautiful Sun Ring

ವಿಜಯಪುರ, ಜೂನ್ 20: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಘೋಣಸಗಿ ಗ್ರಾಮದ ಆಕಾಶದಲ್ಲಿ ಶನಿವಾರ ಬೆಳಿಗ್ಗೆ ಒಂದು ಅಪರೂಪದ ವಿಸ್ಮಯ ಕಾಣಿಸಿಕೊಂಡು ಜನರ ಗಮನ ಸೆಳೆದಿದೆ. ಬೆಳಿಗ್ಗೆ ಸುಮಾರು 10:30ರ ಸುಮಾರಿಗೆ ಸೂರ್ಯನ ಸುತ್ತಲೂ ಪ್ರಕಾಶಮಾನವಾದ ಸ್ವರ್ಣ ವರ್ಣದ ವೃತ್ತಾಕಾರದ ಉಂಗುರ ಮೂಡಿದೆ. ಈ ಆಕರ್ಷಕ ದೃಶ್ಯವನ್ನು ಕಂಡು ಜನಸಾಮಾನ್ಯರು ಕೌತುಕದಿಂದ ಆಕಾಶದತ್ತ ಮುಖ ಮಾಡಿದ್ದಾರೆ. ಘೋಣಸಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಈ ಅಪರೂಪದ ಉಂಗುರಾಕೃತಿಯನ್ನು ಕಂಡು ಅತ್ಯಂತ ಖುಷಿ ಪಟ್ಟರು. ಶಾಲೆಯ…

Read More

ನೀರಜ್ ಚೋಪ್ರಾ ಕಂಬ್ಯಾಕ್: ಕಾಮನ್‌ವೆಲ್ತ್ ಗೇಮ್ಸ್​ಗೆ ಎಂಟ್ರಿ! – Kannada News | Doha Diamond League 2026: Neeraj qualifies for Commonwealth Games

ಭಾರತದ ಒಲಿಂಪಿಕ್ ಪದಕ ವಿಜೇತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಖತಾರ್​ನ ದೋಹಾದಲ್ಲಿ ನಡೆದ ಡೈಮಂಡ್ ಲೀಗ್​ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಬೆನ್ನು ನೋವಿನ ಸಮಸ್ಯೆಯ ಕಾರಣ ಕಳೆದ ಕೆಲ ತಿಂಗಳುಗಳಿಂದ ಮೈದಾನಕ್ಕಿಳಿಯದ ನೀರಜ್  ಈ ಬಾರಿ 85.69 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ಗಮನ ಸೆಳೆದಿದ್ದಾರೆ. 4ನೇ ಸ್ಥಾನ ಪಡೆದ ನೀರಜ್: ಬೆನ್ನು ನೋವಿನ ಸಮಸ್ಯೆಯ ಕಾರಣ ಸುಮಾರು 9 ತಿಂಗಳುಗಳ ಕಾಲ ಸ್ಪರ್ಧಾತ್ಮಕ ಕ್ರೀಡೆಯಿಂದ ದೂರವಿದ್ದ ನೀರಜ್ ಚೋಪ್ರಾ ದೋಹಾ ಡೈಮಂಡ್ ಲೀಗ್​ನಲ್ಲಿ…

Read More

Spiritual Meaning Lotus: ದೇವತೆಗಳ ಆಸನವಾಗಿ ಕಮಲವನ್ನೇ ಏಕೆ ಆಯ್ಕೆ ಮಾಡಲಾಗಿದೆ? ಆಧ್ಯಾತ್ಮಿಕ ರಹಸ್ಯ ಇಲ್ಲಿ ತಿಳಿಯಿರಿ – Kannada News | Why Hindu Gods Embrace Lotus: Spiritual Meaning and Symbolism Explained

ದೇವತೆಗಳು ಕಮಲದ ಮೇಲೆ ಏಕೆ ಕುಳಿತುಕೊಳ್ಳುತ್ತಾರೆ?Image Credit source: Getty Images ಹಿಂದೂ ಧರ್ಮದಲ್ಲಿ ಪ್ರತಿಯೊಂದು ಆಚರಣೆ, ಸಂಕೇತ ಮತ್ತು ದೇವತೆಗಳ ರೂಪದ ಹಿಂದೆ ಆಳವಾದ ವೈಜ್ಞಾನಿಕ ಹಾಗೂ ಆಧ್ಯಾತ್ಮಿಕ ರಹಸ್ಯಗಳು ಅಡಗಿವೆ. ನೀವು ಯಾವುದೇ ಪ್ರಮುಖ ಹಿಂದೂ ದೇವತೆಗಳ, ವಿಶೇಷವಾಗಿ ಲಕ್ಷ್ಮಿ ದೇವಿ, ಸರಸ್ವತಿ ದೇವಿ ಮತ್ತು ಬ್ರಹ್ಮದೇವರ ಚಿತ್ರ ಅಥವಾ ಮೂರ್ತಿಯನ್ನು ಗಮನಿಸಿದರೆ, ಅವರು ಕಮಲದ ಹೂವಿನ ಮೇಲೆ ಆಸೀನರಾಗಿರುತ್ತಾರೆ ಅಥವಾ ಕೈಯಲ್ಲಿ ಕಮಲವನ್ನು ಹಿಡಿದಿರುತ್ತಾರೆ. ಸನಾತನ ಸಂಪ್ರದಾಯದಲ್ಲಿ ಕಮಲದ ಹೂವು ಅತ್ಯಂತ ಪವಿತ್ರ…

Read More

‘ದೇವಿ ಮಹಾತ್ಮೆ’ ಟೀಸರ್ ಮೂಲಕ ಗಮನ ಸೆಳೆದ ರಂಗಾಯಣ ರಘು; ಮತ್ತೊಂದು ಅದ್ಭುತ ಕತೆ ಮೂಲಕ ಎಂಟ್ರಿ – Kannada News | Rangayana Raghu’s Devi Mahatme Teaser Promises Thrilling Suspense Film

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ರಂಗಾಯಣ ರಘು (Rangayana Raghu) ಅವರು ಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದಿದ್ದಾರೆ. ಹಾಸ್ಯ ಹಾಗೂ ನೆಗೆಟಿವ್ ಪಾತ್ರಗಳು ಅವರನ್ನು ಅರಸಿ ಬರುತ್ತವೆ. ಇದರ ಜೊತೆಗೆ ಇತ್ತೀಚೆಗೆ ಸಸ್ಪೆನ್ಸ್ ಪಾತ್ರಗಳಿಗೂ ಅವರು ಕೈ ಹಾಕಿದ್ದಾರೆ. ‘ಶಾಖಾಹಾರಿ’ ಸಿನಿಮಾ ಬೇರೆಯದೇ ಹಂತದಲ್ಲಿ ಇತ್ತು. ಈಹ ಅವರು ಮತ್ತೊಮ್ಮೆ ವಿಭಿನ್ನ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಯಾವುದೇ ಪಾತ್ರ ನೀಡಿದರೂ ಅದಕ್ಕೆ ಜೀವ ತುಂಬುವ ಅವರು, ಸದ್ಯ ತೀವ್ರ ಕುತೂಹಲ ಮೂಡಿಸಿರುವ…

Read More

ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ: ಶೀಘ್ರದಲ್ಲೇ ಆರಂಭವಾಗಲಿದೆ ಚತುಷ್ಪಥ ರೈಲು ಮಾರ್ಗ ಕಾಮಗಾರಿ – Kannada News | Bengaluru Tumakuru Quadruple Railway Line: Rs 6000 Crore Action Plan Ready, Land Acquisition Soon Says Minister V Somanna

ತುಮಕೂರು, ಜೂನ್ 20: ಉದ್ಯೋಗ, ಶಿಕ್ಷಣ ಹಾಗೂ ವ್ಯಾಪಾರ ವಹಿವಾಟುಗಳಿಗಾಗಿ ಕಲ್ಪತರು ನಾಡು ತುಮಕೂರಿನಿಂದ ರಾಜಧಾನಿ ಬೆಂಗಳೂರಿಗೆ ದಿನನಿತ್ಯ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ. ಸದ್ಯ ಕೇವಲ ಎರಡು ಪಥಗಳ (Double Track) ರೈಲ್ವೆ ಹಳಿ ಇರುವುದರಿಂದ ರೈಲುಗಳ ಸಂಚಾರ ವಿಳಂಬವಾಗುತ್ತಿದ್ದು, ಪ್ರಯಾಣಿಕರು ಪರದಾಡಬೇಕಿದೆ. ಈ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಲು ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ಮಹತ್ವದ ಯೋಜನೆ ಬಗ್ಗೆ ಘೋಷಣೆ ಮಾಡಿದ್ದು, ಬೆಂಗಳೂರು-ತುಮಕೂರು ನಡುವೆ ಚತುಷ್ಪಥ ರೈಲು…

Read More

ಗಂಭೀರ್ ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದರು: ಶ್ರೀಶಾಂತ್ ಗಂಭೀರ ಆರೋಪ  – Kannada News | Gautam Gambhir Called Me Deshdrohi: S. Sreesanth

ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಗೌತಮ್ ಗಂಭೀರ್ ಹಾಗೂ ಎಸ್​. ಶ್ರೀಶಾಂತ್ ನಡುವಿನ ಹಳೆಯ ಜಗಳ ಮತ್ತೆ ಮುನ್ನಲೆಗೆ ಬಂದಿದೆ. ಹೀಗೆ ಹಳೆಯ ಕಿತ್ತಾಟದ ಮುನ್ನಲೆಗೆ ಬರಲು ಮುಖ್ಯ ಕಾರಣ ಶ್ರೀಶಾಂತ್ ಇತ್ತೀಚೆಗೆ ನೀಡಿದ ಹೇಳಿಕೆ. ಸಂದರ್ಶನವೊಂದರಲ್ಲಿ ಮಾತನಾಡಿದ್ದ ಶ್ರೀಶಾಂತ್, ಗೌತಮ್ ಗಂಭೀರ್ ತನ್ನ ವಿರುದ್ಧ ಅತ್ಯಂತ ಅಸಭ್ಯ ಪದಗಳನ್ನು ಬಳಸಿದ್ದರು ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾರೆ. 2023ರ ಲೆಜೆಂಡ್ಸ್ ಲೀಗ್ ಕ್ರಿಕೆಟ್​ ಟೂರ್ನಿಯಲ್ಲಿ ಗೌತಮ್ ಗಂಭೀರ್ ಇಂಡಿಯಾ ಕ್ಯಾಪಿಟಲ್ಸ್​ ಹಾಗೂ ಶ್ರೀಶಾಂತ್ ಗುಜರಾತ್ ಜೈಂಟ್ಸ್ ಪರ ಕಣಕ್ಕಿಳಿದಿದ್ದರು….

Read More

ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್! – Kannada News | Bengaluru Deepfake Scandal: Educated Suspects Arrested for Rukmini Vasanth AI Exploitation

AI ಡೀಪ್‌ಫೇಕ್ ಫೋಟೋ-ವಿಡಿಯೋ ಸೃಷ್ಟಿಸಿದ ಮೂವರು ಸುಶಿಕ್ಷಿತ ಆರೋಪಿಗಳು ಬೆಂಗಳೂರು, ಜೂ.20: ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ರುಕ್ಮಿಣಿ ವಸಂತ ಅವರ ಹೆಸರಿನಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಡೀಪ್‌ಫೇಕ್ ಫೋಟೋ ಹಾಗೂ ವಿಡಿಯೋಗಳನ್ನು ಸೃಷ್ಟಿಸಿ ವೈರಲ್ ಮಾಡಿದ್ದ ಸೈಬರ್ ಅಪರಾಧಿಗಳನ್ನು ಬೆಂಗಳೂರಿನ ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದು, ಆರೋಪಿಗಳ ಆಘಾತಕಾರಿ ಹಿನ್ನೆಲೆ ಈಗ ಬೆಳಕಿಗೆ ಬಂದಿದೆ. ಬಂಧಿತರೆಲ್ಲರೂ ಸುಶಿಕ್ಷಿತರು ಮತ್ತು ಸಮಾಜದಲ್ಲಿ ಒಳ್ಳೆಯ ಹುದ್ದೆಯಲ್ಲಿದ್ದವರಾಗಿದ್ದಾರೆ. ಬಂಧಿತ ಆರೋಪಿಗಳನ್ನು ಬಾಗಲಕೋಟೆ ನಿವಾಸಿ ರವಿಕುಮಾರ್ (24), ಬೆಂಗಳೂರಿನ ಸಾಫ್ಟ್‌ವೇರ್…

Read More