Headlines

nagaraj11081993

ಧಾರವಾಡದ ಕೇಂದ್ರ ಕಾರಾಗೃಹ ಕೈದಿಗಳ ಪಾಲಿಗೆ ಪಂಚತಾರಾ ಹೋಟೆಲ್: ಹಣ ಕೊಟ್ಟರೆ ಎಲ್ಲ ಸಿಗುತ್ತದೆ, ಆಡಿಯೋ ವೈರಲ್

ಧಾರವಾಡ, ಮಾ.14: ಜೈಲುಗಳು ಅಂದರೆ ಕೈದಿಗಳು ಪಶ್ಚಾತ್ತಾಪ ಪಡುವ ಶಿಕ್ಷಾ ತಾಣಗಳಾಗಬೇಕು. ಆದರೆ ಧಾರವಾಡದ ಕೇಂದ್ರ ಕಾರಾಗೃಹ ಮಾತ್ರ ಕೈದಿಗಳ ಪಾಲಿಗೆ ಪಂಚತಾರಾ ಹೋಟೆಲ್ ಆಗಿ ಮಾರ್ಪಟ್ಟಿದೆಯೇ ಎಂಬ ಸಂಶಯ ಮೂಡಿದೆ. ಪೋಕ್ಸೋ ಕಾಯ್ದೆಯಡಿ ಜೈಲು ಸೇರಿರುವ ಕೈದಿಯೊಬ್ಬ ಹೊರಗಿನ ಬಾಲಕಿಯೊಂದಿಗೆ ಮಾತನಾಡಿರುವ ಆಡಿಯೋ ಈಗ ಸಂಚಲನ ಮೂಡಿಸಿದೆ. ಪೋಕ್ಸೋ ಪ್ರಕರಣದ ಕೈದಿ ಪರ್ವೇಜ್ ಎಂಬಾತ ಬಾಲಕಿಯೊಂದಿಗೆ ಜೈಲಿನಿಂದಲೇ ಫೋನ್‌ನಲ್ಲಿ ಮಾತನಾಡಿದ್ದಾನೆ. “ಜೈಲಿನಲ್ಲಿ ಹಣ ಕೊಟ್ಟರೆ ಸಾಕು ಸಿಗರೇಟ್, ಸರಾಯಿ (ಮದ್ಯ) ಮತ್ತು ಮೊಬೈಲ್ ಸೇರಿದಂತೆ ಎಲ್ಲವೂ…

Read More

Cooking Oil Price Hike: ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ದರ ಭಾರೀ ಏರಿಕೆ

ಬೆಂಗಳೂರು (ಮಾ.14): ಇರಾನ್-ಇಸ್ರೇಲ್ ಯುದ್ಧದ ಭೀತಿಯು ಇದೀಗ ಗ್ಯಾಸ್ ಸಿಲಿಂಡರ್‌ಗಳ ನಂತರ ಅಡುಗೆ ಎಣ್ಣೆಯ ಮೇಲೂ ಪರಿಣಾಮ ಬೀರಿದೆ. ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಮುನ್ನವೇ ಅಡುಗೆ ಎಣ್ಣೆಯ ದರ ಏರಿಕೆಯಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಯುದ್ಧದ ಕಾರಣದಿಂದ ಅಡುಗೆ ಎಣ್ಣೆಯ ರಫ್ತು ಸಂಪೂರ್ಣವಾಗಿ ಸ್ಥಗಿತಗೊಂಡಿದೆ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ. ಏಜೆಂಟ್‌ಗಳಿಗೆ ಕೇಳಿದರೆ, 100-200 ಬಾಕ್ಸ್‌ಗಳ ಬದಲು ಕೇವಲ 10 ಪ್ರತಿಶತದಷ್ಟು (ಸುಮಾರು 20 ಆಯಿಲ್ ಟ್ಯಾಂಕರ್‌ಗಳು) ಮಾತ್ರ ಪೂರೈಕೆಯಾಗುತ್ತಿದೆ. ಬೆಂಗಳೂರಿನ ಅಡುಗೆ ಎಣ್ಣೆ ಅಂಗಡಿ…

Read More

ಸಂಜು ಸ್ಯಾಮ್ಸನ್ ಫೋಟೋ ಎಡಿಟ್ ಮಾಡಿ ಹಂಚಿಕೊಂಡ್ರಾ ಗಿಲ್: ಇಲ್ಲಿದೆ ನಿಜಾಂಶ

ಟಿ20 ವಿಶ್ವಕಪ್ ಗೆದ್ದ ಬಳಿಕ ಟೀಮ್ ಇಂಡಿಯಾವನ್ನು ಅಭಿನಂದಿಸಿ ಶುಭ್​​ಮನ್ ಗಿಲ್ (Shubman Gill) ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಭಾರತ ತಂಡದ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್ ಇರಲಿಲ್ಲ. ಇದರ ಬೆನ್ನಲ್ಲೇ ಶುಭ್​ಮನ್ ಗಿಲ್ ಸಂಜು ಸ್ಯಾಮ್ಸನ್ ಅವರನ್ನು ಫೋಟೋದಿಂದ ಎಡಿಟ್ ಮಾಡಿ ತೆಗೆದುಹಾಕಿದ್ದಾರೆ ಎಂದು ಅಭಿಮಾನಿಗಳು ಆರೋಪಿಸಿದ್ದರು. ಇದಕ್ಕೆ ಸಾಕ್ಷಿಯಾಗಿ ಮತ್ತೊಂದು ಪೋಟೋವನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಸಂಜು ಸ್ಯಾಮ್ಸನ್ ಜಸ್​ಪ್ರೀತ್ ಬುಮ್ರಾ ಅವರ ಹಿಂಬದಿಯಲ್ಲಿ ನಿಂತಿರುವುದು ಕಾಣುತ್ತಿತ್ತು. ಹೀಗಾಗಿಯೇ ಶುಭ್​ಮನ್…

Read More

ಲಡಾಖ್​​ಗೆ ರಾಜ್ಯ ಸ್ಥಾನಮಾನ ನೀಡುವಂತೆ ಪ್ರತಿಭಟನೆ, 6 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ಸೋನಮ್ ವಾಂಗ್​​ಚುಕ್ ಶೀಘ್ರ ಬಿಡುಗಡೆ

ಲಡಾಖ್, ಮಾರ್ಚ್​ 14: ಲಡಾಕ್​ಗೆ ರಾಜ್ಯ ಸ್ಥಾನಮಾನ ನೀಡುವಂತೆ ಒತ್ತಾಯಿಸಿ  ಲೇಹ್ ಲಡಾಖ್(Ladakh)​ನಲ್ಲಿ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬಳಿಕ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್​ಚುಕ್ ಅವರನ್ನು ಇದೀಗ ಆರು ತಿಂಗಳ ಬಳಿಕ ಬಿಡುಗಡೆ ಮಾಡಲಾಗುತ್ತಿದೆ.ಸೋನಮ್ ವಾಂಗ್‌ಚುಕ್ ಅವರನ್ನು ಇಂದು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಯಿತು. ಕೇಂದ್ರಾಡಳಿತ ಪ್ರದೇಶವಾದ ಲಡಾಖ್​​ಗೆ ರಾಜ್ಯ ಸ್ಥಾನಮಾನ ನೀಡುವಂತೆ ಒತ್ತಾಯಿಸುತ್ತಿರುವ ಪ್ರತಿಭಟನಾಕಾರರನ್ನು ಪ್ರಚೋದಿಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.15 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್…

Read More

ಬೆಂಗಳೂರಿನಲ್ಲಿ ಎಲ್​ಪಿಜಿ ಸಿಲಿಂಡರ್ ಎಮರ್ಜೆನ್ಸಿ! ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಬೆಂಗಳೂರು, ಮಾರ್ಚ್ 14: ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ (LPG Gas Cylinder) ಕೊರತೆ ತೀವ್ರವಾಗಿರುವ ಹಿನ್ನೆಲೆ ಮಹಿಳಾ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಗೆ ತುರ್ತು ಪರಿಹಾರ ಒದಗಿಸುವಂತೆ ಬೆಂಗಳೂರಿನ ಗಾಂಧಿನಗರದಲ್ಲಿರುವ ‘ರಸಪಾಕ’ ಹೋಟೆಲ್ ಮಾಲಕಿ ರೂಪಾ ಶಾಸ್ತ್ರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ? ಕರ್ನಾಟಕದ ನಾರಿ ಶಕ್ತಿ ಪರವಾಗಿ ಪತ್ರ ಬರೆದಿರುವ ರೂಪಾ ಶಾಸ್ತ್ರಿ, ಕಳೆದ ಕೆಲವು ವಾರಗಳಿಂದ ವಾಣಿಜ್ಯ ಅಡುಗೆ ಅನಿಲದ ತೀವ್ರ ಕೊರತೆ ಮತ್ತು ಬೆಲೆ ಏರಿಕೆಯು ಹೋಟೆಲ್…

Read More

Shani Dev: ಶನಿವಾರದ ಆಚರಣೆ; ಈ ದಿನ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳ ಬಗ್ಗೆ ಇಲ್ಲಿ ತಿಳಿಯಿರಿ

ಹಿಂದೂ ಧರ್ಮದಲ್ಲಿ ಪ್ರತಿಯೊಂದು ವಾರಕ್ಕೂ ತನ್ನದೇ ಆದ ವಿಶೇಷ ಮಹತ್ವವಿದೆ. ಅದರಲ್ಲೂ ವಿಶೇಷವಾಗಿ ‘ಶನಿವಾರ’ವು ಶನಿ ದೇವನಿಗೆ ಅರ್ಪಿತವಾದ ದಿನ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿವಾರದಂದು ಅನುಸರಿಸುವ ಕೆಲವು ಆಚರಣೆಗಳು ನಮ್ಮ ಜೀವನದ ಅದೃಷ್ಟ ಮತ್ತು ದುರದೃಷ್ಟದ ಮೇಲೆ ನೇರ ಪರಿಣಾಮ ಬೀರುತ್ತವೆ. ಹಾಗಾದರೆ, ಈ ದಿನ ಯಾವ ಕೆಲಸಗಳನ್ನು ಮಾಡಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಶನಿವಾರ ಈ ಕೆಲಸಗಳನ್ನು ತಪ್ಪಿಸಿ: ಜ್ಯೋತಿಷ್ಯದ ಪ್ರಕಾರ ಶನಿ ಮತ್ತು ಮಂಗಳ ಗ್ರಹಗಳ ನಡುವೆ ವೈರತ್ವವಿದೆ. ಹೀಗಾಗಿ,…

Read More

ವೈಯರ್‌ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ ಆತ್ಮಹತ್ಯೆ ಎಂದು ನಾಟಕವಾಡಿದ್ದ ಪ್ರಿಯಕರ!

ಬೆಂಗಳೂರು, ಮಾ.14: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ( Kodathi murder case) ಕರೆತಂದ ಪ್ರಿಯಕರನೇ, ಮದುವೆಯ ವಿಚಾರಕ್ಕೆ ಶುರುವಾದ ಜಗಳದ ಹಿನ್ನೆಲೆಯಲ್ಲಿ ಪ್ರಿಯತಮೆಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಡತಿ ಬಳಿ ನಡೆದಿದೆ. ಕೊಡಗು ಮೂಲದ ರಂಜಿತಾ (24) ಮೃತಪಟ್ಟ ದುರ್ದೈವಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಯ್ಯಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ರಂಜಿತಾ ಮತ್ತು ಆರೋಪಿ ಅಯ್ಯಪ್ಪ ಇಬ್ಬರೂ ಕೊಡಗಿನ ಪೊನ್ನಂಪೇಟೆ ಮೂಲದವರು. ಅಯ್ಯಪ್ಪನಿಗೆ ಈಗಾಗಲೇ ಮದುವೆಯಾಗಿದ್ದು, ಹೆಂಡತಿಯನ್ನು ಬಿಟ್ಟಿದ್ದ. ತನ್ನ…

Read More

Video: ಅಸ್ಸಾಂನಲ್ಲಿ ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ, 8 ಗಂಟೆಯಲ್ಲಿ ಈಗ 5 ಗಂಟೆಗಳಲ್ಲಿ ಪ್ರಯಾಣಿಸಬಹುದು

ಅಸ್ಸಾಂ, ಮಾರ್ಚ್​ 14: ಅಸ್ಸಾಂನ ಸಿಲ್ಚಾರ್‌ನಲ್ಲಿ ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್ ಯೋಜನೆಗೆ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ.ಇದು ಈಶಾನ್ಯ ಭಾರತದ ಮೊದಲ ಪ್ರವೇಶ-ನಿಯಂತ್ರಿತ, ಹಸಿರು ಮೈದಾನ, ನಾಲ್ಕು ಪಥ, ಹೈ-ಸ್ಪೀಡ್ ಕಾರಿಡಾರ್ ಆಗಲಿದೆ. ಸರಿಸುಮಾರು 166 ಕಿಲೋಮೀಟರ್ ಉದ್ದದ ಈ ಯೋಜನೆಯನ್ನು ಸುಮಾರು 22,860 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಈ ಕಾರಿಡಾರ್ ಮೇಘಾಲಯ ಮತ್ತು ಅಸ್ಸಾಂ ನಡುವಿನ ಸಂಪರ್ಕವನ್ನು ಸುಧಾರಿಸುತ್ತದೆ. ಈ ಯೋಜನೆ ಪೂರ್ಣಗೊಂಡ ನಂತರ, ಗುವಾಹಟಿ ಮತ್ತು ಸಿಲ್ಚಾರ್ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ,…

Read More

ಪಾತ್ರೆಯೊಳಗಿದ್ದ ಬೇಯಿಸಿದ ಮೀನು ತಿಂದಿದ್ದು ಇಲಿಗಳು, ಆದ್ರೆ ಅನುಮಾನ ಪಟ್ಟು ಸ್ನೇಹಿತನನ್ನೇ ಕೊಂದ ಯುವಕರು

ಮುಂಬೈ, ಮಾರ್ಚ್​ 14: ಪಾತ್ರೆಯೊಳಗಿದ್ದ ಬೇಯಿಸಿದ ಮೀನು(Fish) ಕಾಣೆಯಾಗಿದ್ದಕ್ಕೆ ಇಬ್ಬರು ಸ್ನೇಹಿತರು ಸೇರಿ ಮತ್ತೊಬ್ಬ ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಫೆಬ್ರವರಿ 24 ರಂದು ಈ ಘಟನೆ ನಡೆದಿದೆ, ಮೃತರನ್ನು ಅಫ್ಸರ್ ಎಂದು ಗುರುತಿಸಲಾಗಿದೆ, ಆತನ ಇಬ್ಬರು ಸ್ನೇಹಿತರಾದ ಸುರೇಶ್ ಮತ್ತು ರಾಜೇಶ್ ರಮೇಶ್‌ನಾಥ್ ಅಲಿಯಾಸ್ ನೇಪಾಳಿ ಮುಂಬೈನ ಗೋರೆಗಾಂವ್‌ನಲ್ಲಿರುವ ತಮ್ಮ ಮನೆಯಲ್ಲಿ ಮೀನು ಅಡುಗೆ ಮಾಡುತ್ತಿದ್ದಾಗ ಮದ್ಯ ಸೇವಿಸಿದ್ದರು. ಸ್ವಲ್ಪ ಹೊತ್ತಿನ ನಂತರ,…

Read More

ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?

‘ಫಸ್ಟ್ ರ‍್ಯಾಂಕ್ ರಾಜು’ ಸಿನಿಮಾ ಮೂಲಕ ಗಮನ ಸೆಳೆದ ನಟ ಗುರುನಂದನ್ ಅವರು ಈಗ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಗೋಣಿಬೀಡು ಕಸ್ಕೆಬೈಲ್ ಗ್ರಾಮದಲ್ಲಿ ಅವರ ಒಡೆತನದ ವಿಲ್ಲಾ ತೋಟಕ್ಕೆ ಆನೆ ನುಗ್ಗಿದೆ. ಇಡೀ ಗ್ರಾಮಕ್ಕೆ ಪ್ರತಿ ಬೇಸಿಗೆಯಲ್ಲೂ ಇದೇ ಪರಿಸ್ಥಿತಿ ನಿರ್ಮಾಣ ಆಗುತ್ತದೆ ಎಂದಿರುವ ಅವರು, ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿಲ್ಲ ಎಂದು ನಟ ಗುರುನಂದನ್ ಬೇಸರ ಹೊರಹಾಕಿದ್ದಾರೆ. ‘40-50 ಆನೆಗಳು ಬರುತ್ತವೆ. ನಾಡಿಗೆ ಬಂದು ಅವು ಹಾಳು ಮಾಡುತ್ತಿವೆ. ಶಾಸಕರು, ಅರಣ್ಯ ಇಲಾಖೆಯವರು…

Read More