ಗುವಾಹಟಿ, ಮಾರ್ಚ್ 13: ಪ್ರಧಾನಿ ನರೇಂದ್ರ ಮೋದಿ ಅಸ್ಸಾಂನಲ್ಲಿ ಇಂದು ಸುಮಾರು 19,480 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಅರ್ಪಿಸಿದರು. ದೇಶಾದ್ಯಂತ 9.3 ಕೋಟಿಗೂ ಹೆಚ್ಚು ರೈತರಿಗೆ ಪ್ರಧಾನ ಮಂತ್ರಿ-ಕಿಸಾನ್ ಯೋಜನೆಯ 22ನೇ ಕಂತನ್ನು ಕೂಡ ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಿಡುಗಡೆ ಮಾಡಿದರು. ಇದೇ ವೇಳೆ ಇನ್ನೂ ಕೆಲವು ಯೋಜನೆಗಳಿಗೂ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ತಪ್ಪು ಮಾಹಿತಿ ಮತ್ತು ಸುಳ್ಳುಗಳನ್ನು ಹರಡುವುದರ ಮೇಲೆ ಕೇಂದ್ರೀಕರಿಸಿದೆ ಎಂದು ಹೇಳಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
2026 ರ ಐಪಿಎಲ್ ಆರಂಭಕ್ಕೂ ಮುನ್ನ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡಕ್ಕೆ ಪ್ರಮುಖ ವೇಗದ ಬೌಲರ್ ಹರ್ಷಿತ್ ರಾಣಾ ಅವರನ್ನು 19 ನೇ ಸೀಸನ್ ಐಪಿಎಲ್ನಿಂದ ಹೊರಗಿಡಲಾಗಿದೆ. ಇಂಜುರಿಯಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ರಾಣಾರನ್ನು ಐಪಿಎಲ್ನಿಂದ ಹೊರಗಿಡುವ ತೀರ್ಮಾನಕ್ಕೆ ಬರಲಾಗಿದೆ.
ವಾಸ್ತವವಾಗಿ 2026 ರ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯಗಳ ಸಮಯದಲ್ಲಿ ಹರ್ಷಿತ್ ರಾಣಾ ಗಾಯಗೊಂಡಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ರಾಣಾಗೆ ಗಾಯವಾಗಿತ್ತು. ಈ ಗಾಯದಿಂದಾಗಿ ಅವರು ಟಿ20 ವಿಶ್ವಕಪ್ನಿಂದ ಹೊರಗುಳಿಯಬೇಕಾಯಿತು. ಇದರ ನಂತರ ಹರ್ಷಿತ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಟಿ20 ವಿಶ್ವಕಪ್ನಿಂದ ಹೊರಬಿದ್ದಿದ್ದ ಹರ್ಷಿತ್ ರಾಣಾ, ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ, ಇದರಿಂದಾಗಿ ಅವರು ಐಪಿಎಲ್ 2026 ರಿಂದ ಹಿಂದೆ ಸರಿಯಬೇಕಾಯಿತು. ಆದರೆ ಐಪಿಎಲ್ನಿಂದ ಹೊರಬಿದ್ದ ಬಳಿಕವೂ ಹರ್ಷಿತ್ ರಾಣಾಗೆ 4 ಕೋಟಿ ರೂ. ವೇತನ ಪಡೆಯಲಿದ್ದಾರೆ. ಆದಾಗ್ಯೂ ಈ ವೇತನವನ್ನು ಕೆಕೆಆರ್ ಫ್ರಾಂಚೈಸಿ ನೀಡುವುದಿಲ್ಲ. ಬದಲಿಗೆ ಬಿಸಿಸಿಐ ನೀಡಲಿದೆ.
ಬಿಸಿಸಿಐ ನಿಯಮಗಳ ಪ್ರಕಾರ, ಕೇಂದ್ರೀಯ ಒಪ್ಪಂದಕ್ಕೆ ಒಳಪಟ್ಟಿರುವ ಆಟಗಾರ ಗಾಯಗೊಂಡು ಇಡೀ ಆವೃತ್ತಿಯಿಂದ ಹೊರಗುಳಿದ್ದರೂ ಆತನಿಗೆ ಪೂರ್ಣ ಸಂಬಳವನ್ನು ನೀಡಲಾಗುತ್ತದೆ. 2011 ರಿಂದ ಜಾರಿಗೆ ಬಂದ ಬಿಸಿಸಿಐ ನ ಈ ನೀತಿಯು ಈಗಲೂ ಜಾರಿಯಲ್ಲಿದೆ. ಹರ್ಷಿತ್ ರಾಣಾ ಅವರಿಗಿಂತ ಮೊದಲು, ರಿಷಭ್ ಪಂತ್ ಮತ್ತು ದೀಪಕ್ ಚಾಹರ್ ಈಗಾಗಲೇ ಈ ನೀತಿಯಿಂದ ಪ್ರಯೋಜನ ಪಡೆದಿದ್ದಾರೆ.
ಹರ್ಷಿತ್ ರಾಣಾ ಐಪಿಎಲ್ನಿಂದ ಹೊರಬಿದ್ದ ಬೆನ್ನಲ್ಲೇ ಕೆಕೆಆರ್ ತಂಡಕ್ಕೆ ಜಿಂಬಾಬ್ವೆ ತಂಡದ ಸ್ಟಾರ್ ವೇಗಿ ಬ್ಲೆಸಿಂಗ್ ಮುಜರಬಾನಿಯ ಆಗಮನವಾಗಿದೆ. ಕೆಕೆಆರ್ ಮುಸ್ತಾಫಿಜುರ್ ರೆಹಮಾನ್ ಅವರ ಬದಲಿಯಾಗಿ ಬ್ಲೆಸಿಂಗ್ ಮುಜರಬಾನಿಯನ್ನು ತಂಡಕ್ಕೆ ಆಯ್ಕೆ ಮಾಡಿದೆ. ಈಗ, ಹರ್ಷಿತ್ ರಾಣಾ ಅವರ ಬದಲಿ ಆಟಗಾರನನ್ನು ಹುಡುಕುವ ಸವಾಲು ಕೆಕೆಆರ್ ಮುಂದಿದೆ. ಹರ್ಷಿತ್ ರಾಣಾ ಐಪಿಎಲ್ನಲ್ಲಿ ಕೆಕೆಆರ್ ತಂಡದ ಪ್ರಮುಖ ವೇಗದ ಬೌಲರ್ ಆಗಿದ್ದು, ಇಲ್ಲಿಯವರೆಗೆ ಈ ತಂಡದ ಪರ 34 ಪಂದ್ಯಗಳಲ್ಲಿ 40 ವಿಕೆಟ್ಗಳನ್ನು ಕಬಳಿಸಿದ್ದಾರೆ.
ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ಬಣ್ಣದ ಲೋಕದಲ್ಲಿ ಸೂಪರ್ ಸಕ್ಸಸ್ ಕಂಡಿದ್ದಾರೆ. ಅನೇಕ ಸ್ಟಾರ್ ನಟರಿಗೆ ಜೋಡಿಯಾಗಿ ಮಿಂಚಿದ್ದಾರೆ. ಆದರೆ ನಿಜ ಜೀವನದಲ್ಲಿ ಅವರು ಸಿಂಗಲ್ ಆಗಿಯೇ ಉಳಿದುಕೊಂಡಿದ್ದಾರೆ. ಅವರ ಮದುವೆ (Anushka Shetty Marriage) ಬಗ್ಗೆ ಆಗಾಗ ಗಾಸಿಪ್ ಕೇಳಿಬರುತ್ತಿದೆ. ಈಗ ಮತ್ತೊಮ್ಮೆ ಅವರ ಮದುವೆಯ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಕಳೆದ ಹಲವು ವರ್ಷಗಳಿಂದ ಅನುಷ್ಕಾ ಶೆಟ್ಟಿ ಅವರ ಹೆಸರು ನಟ ಪ್ರಭಾಸ್ (Prabhas) ಜೊತೆ ತಳುಕು ಹಾಕಿಕೊಳ್ಳುತ್ತಲೇ ಇತ್ತು. ಆದರೆ ಈಗ ಬೇರೆ ವರನ ಬಗ್ಗೆ ಗಾಸಿಪ್ ಹಬ್ಬಿದೆ.
ಹೌದು, ಈ ಬಾರಿ ಅನುಷ್ಕಾ ಶೆಟ್ಟಿ ಮದುವೆ ಗಾಸಿಪ್ ಜೊತೆ ಪ್ರಭಾಸ್ ಹೆಸರು ಕೇಳಿಬಂದಿಲ್ಲ. ಯಾಕೆಂದರೆ, ಈಗಾಗಲೇ ಈ ಜೋಡಿ ಅನೇಕ ಬಾರಿ ‘ನಾವಿಬ್ಬರು ಜಸ್ಟ್ ಫ್ರೆಂಡ್ಸ್’ ಎನ್ನುವ ಮೂಲಕ ಗಾಸಿಪ್ ಮಂದಿಯ ಬಾಯಿ ಮುಚ್ಚಿಸಿದ್ದಾರೆ. ಹಾಗಾಗಿ ಈ ಬಾರಿ ಹರಿದಾಡುತ್ತಿರುವ ಸುದ್ದಿ ಬೇರೆಯೇ ಆಗಿದೆ. ಈ ಸಲ ಅನುಷ್ಕಾ ಅವರ ಮದುವೆ ಯಾವುದೇ ನಟನ ಜೊತೆಗಲ್ಲ, ಬದಲಿಗೆ ಅವರ ಕುಟುಂಬಕ್ಕೆ ಮೊದಲೇ ಪರಿಚಯ ಇರುವ ಒಬ್ಬ ಉದ್ಯಮಿಯ ಜೊತೆಗೆ ನಡೆಯಲಿದೆ ಎಂಬ ಗುಸುಗುಸು ಕೇಳಿಬರುತ್ತಿದೆ.
ಮೂಲಗಳ ಪ್ರಕಾರ, ಅನುಷ್ಕಾ ಶೆಟ್ಟಿ ಮತ್ತು ಈ ಉದ್ಯಮಿಯ ವಿವಾಹದ ಬಗ್ಗೆ ಕುಟುಂಬದ ಹಿರಿಯರ ಮಟ್ಟದಲ್ಲಿ ಈಗಾಗಲೇ ಮಾತುಕತೆಗಳು ಆರಂಭವಾಗಿವೆ ಎನ್ನಲಾಗಿದೆ. ಒಂದು ವೇಳೆ ಎಲ್ಲವೂ ಅಂದುಕೊಂಡಂತೆ ನಡೆದರೆ, 2026ರಲ್ಲೇ ಅನುಷ್ಕಾ ಶೆಟ್ಟಿ ಅವರು ಸಪ್ತಪದಿ ತುಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.
ಸಾಮಾನ್ಯವಾಗಿ ಅನುಷ್ಕಾ ಶೆಟ್ಟಿ ಅವರು ತಮ್ಮ ಖಾಸಗಿ ಜೀವನದ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದಿಲ್ಲ. ತಮ್ಮ ಬಗ್ಗೆ ಬರುವ ಯಾವುದೇ ವದಂತಿಗಳಿಗೆ ಅವರು ತಕ್ಷಣ ಪ್ರತಿಕ್ರಿಯಿಸುವುದಿಲ್ಲ. ಈಗಲೂ ಸಹ ಅವರು ಈ ಮದುವೆಯ ಸುದ್ದಿಯ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ವರನ ಗುರುತನ್ನು ಅತ್ಯಂತ ಗೌಪ್ಯವಾಗಿ ಇಡಲಾಗಿದ್ದು, ಮದುವೆಯ ತಯಾರಿಗಳ ಬಗ್ಗೆ ಯಾವುದೇ ಸುಳಿವು ಹೊರಬೀಳದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಗಾಸಿಪ್ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ.
ಸದ್ಯಕ್ಕೆ ನಟನೆಯಿಂದ ಅನುಷ್ಕಾ ಶೆಟ್ಟಿ ಅವರು ದೂರ ಉಳಿದುಕೊಂಡಿದ್ದಾರೆ. ‘ಬಾಹುಬಲಿ’ ರೀತಿಯ ಬ್ಲಾಕ್ ಬಸ್ಟರ್ ಹಿಟ್ ನೀಡಿದ್ದರು ಕೂಡ ಅನುಷ್ಕಾ ಅವರು ಈಗ ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಗಿದೆ. ಅವರನ್ನು ಮತ್ತೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ.
ಟೆಹ್ರಾನ್, ಮಾರ್ಚ್ 13: ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವುದನ್ನು ನಿರ್ಬಂಧಿಸಲು ನಿಯೋಜಿಸಲಾದ ಆತ್ಮಾಹುತಿ ಡ್ರೋನ್ ಹಡಗುಗಳ ದೊಡ್ಡ ಸಂಗ್ರಹವನ್ನು ಇರಾನ್ (Iran) ಸೇನೆ ಹೊಂದಿದೆ. ಇರಾನ್ನ ಅಧಿಕಾರಿಗಳು “ಕ್ಷಿಪಣಿ ನಗರ” ಎಂದು ಹೇಳುವ ಭೂಗತ ಕಾಂಪ್ಲೆಕ್ಸ್ ಒಳಗೆ ಚಿತ್ರೀಕರಿಸಲಾದ ವಿಡಿಯೋಗಳನ್ನು ಇರಾನ್ನ ಮಾಧ್ಯಮಗಳು ಬಿಡುಗಡೆ ಮಾಡಿದೆ. ನೌಕಾ ಡ್ರೋನ್ಗಳು, ಹಡಗು ವಿರೋಧಿ ಕ್ಷಿಪಣಿಗಳು ಮತ್ತು ಸಮುದ್ರ ಗಣಿಗಳಿಂದ ಕೂಡಿದ ಉದ್ದವಾದ ಸುರಂಗಗಳನ್ನು ಈ ವಿಡಿಯೋದಲ್ಲಿ ನೋಡಬಹುದು. ಈ ರೆಕಾರ್ಡಿಂಗ್ಗಳನ್ನು ಯಾವಾಗ ಮಾಡಲಾಯಿತು, ಅಮೆರಿಕನ್ ಅಥವಾ ಇಸ್ರೇಲಿ ಪಡೆಗಳು ಆ ಸ್ಥಳವನ್ನು ಧ್ವಂಸ ಮಾಡಿವೆಯೇ ಎಂಬುದು ಸ್ಪಷ್ಟವಾಗಿಲ್ಲ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನವದೆಹಲಿ, ಮಾರ್ಚ್ 13: ಇರಾನ್ ಹಾಗೂ ಇಸ್ರೇಲ್-ಅಮೆರಿಕದ ನಡುವೆ ಸಂಘರ್ಷ ಆರಂಭವಾದ ನಂತರ ಜಗತ್ತಿನಾದ್ಯಂತ ಹಲವೆಡೆ ಇಂಧನ, ಎಲ್ಪಿಜಿ ಬಿಕ್ಕಟ್ಟು (LPG Crisis) ತಲೆದೋರಿತ್ತು. ಅದಕ್ಕೆ ಭಾರತವೂ ಹೊರತಾಗಿರಲಿಲ್ಲ. ಆದರೆ, ಕೊನೆಗೂ ಭಾರತದಲ್ಲಿ ಉದ್ಭವವಾಗಿದ್ದ ಎಲ್ಪಿಜಿ ಕೊರತೆಗೆ ಪರಿಹಾರ ಸಿಕ್ಕಂತಾಗಿದೆ. ಭಾರತ ಮತ್ತು ಇರಾನ್ ಹಾರ್ಮುಜ್ ಜಲಸಂಧಿಯಿಂದ ಹಡಗುಗಳ ಸಾಗಣೆಗೆ ಒಪ್ಪಂದ ಮಾಡಿಕೊಂಡಿವೆ. ಈಗಾಗಲೇ 40,000 ಮೆಟ್ರಿಕ್ ಟನ್ ಬೃಹತ್ ಎಲ್ಪಿಜಿಯನ್ನು ಹೊತ್ತ ಶಿವಾಲಿಕ್ ಎಂಬ ಹಡಗು ಹಾರ್ಮುಜ್ ಜಲಸಂಧಿಯನ್ನು ದಾಟಿ ಬಂದಿದೆ. ಮತ್ತೊಂದು ಹಡಗು ಕೂಡ ಈ ಜಲಸಂಧಿಯನ್ನು ದಾಟಿ ಮುಂದಿನ ವಾರದೊಳಗೆ ಭಾರತದಲ್ಲಿ ಡಾಕ್ ಮಾಡಲಿದೆ ಎಂದು ವರದಿಗಳು ತಿಳಿಸಿವೆ.
ಇರಾನ್ ಮತ್ತು ಭಾರತದ ನಡುವೆ ನಡೆದ ಹಲವಾರು ಸುತ್ತಿನ ಮಾತುಕತೆಗಳ ನಂತರ ಇರಾನ್ ಭಾರತೀಯ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯನ್ನು ದಾಟಲು ಅವಕಾಶ ನೀಡಿತ್ತು. ಇದರ ಬೆನ್ನಲ್ಲೇ ಈ ದೊಡ್ಡ ಬೆಳವಣಿಗೆ ಸಂಭವಿಸಿದೆ. ಶಿವಾಲಿಕ್ ಹಡಗು ಇರಾನ್ನ ಬಂದರ್ ಅಬ್ಬಾಸ್ ಬಂದರಿನಿಂದ ಹೊರಟು ಕೆಲವು ಗಂಟೆಗಳ ಹಿಂದೆ ಹಾರ್ಮುಜ್ ಜಲಸಂಧಿಯನ್ನು ದಾಟಿದೆ.
Iran has allowed two Indian-flagged liquefied petroleum gas (LPG) carriers to sail through the Strait of Hormuz, four sources with direct knowledge of the matter said: Reuters pic.twitter.com/8wAvHOK05b
ಇಂದು ಭಾರತದಲ್ಲಿನ ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಅವರು ಭಾರತಕ್ಕೆ ಸುರಕ್ಷಿತ ಮಾರ್ಗದ ಬಗ್ಗೆ ಪಾಸಿಟಿವ್ ಹೇಳಿಕೆಗಳನ್ನು ನೀಡಿದ್ದರು. “ಭಾರತ ನಮ್ಮ ಸ್ನೇಹಿತನಾಗಿರುವುದರಿಂದ ನೀವು ಎರಡು ಅಥವಾ ಮೂರು ಗಂಟೆಗಳಲ್ಲಿ ಅದರ ಪರಿಣಾಮವನ್ನು ನೋಡುತ್ತೀರಿ. ಇರಾನ್ ಮತ್ತು ಭಾರತ ಈ ಪ್ರದೇಶದಲ್ಲಿ ಸಾಮಾನ್ಯ ಹಿತಾಸಕ್ತಿಗಳನ್ನು ಹಂಚಿಕೊಳ್ಳುತ್ತವೆ” ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಭಾರತದ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯನ್ನು ಹಾದುಹೋಗಲು ಅನುಮತಿ ಸಿಕ್ಕಿದೆ. ಇಂದು ಮಧ್ಯಾಹ್ನ ಯಾವುದೇ ತೊಂದರೆಯಿಲ್ಲದೆ ಭಾರತೀಯ ಹಡಗು ಜಲಸಂಧಿಯನ್ನು ದಾಟಿದೆ.
BIG. Confirmation from Iran’s ambassador to India. Question: Will India get safe passage through Strait of Hormuz? Answer: Yes, you will see in 2-3 hours. India-Iran are friends, have common interests. Govt of India helped us after war in different fields pic.twitter.com/0BKQQ3XDfy
ಎರಡು ವಾರಗಳ ಹಿಂದೆ ಅಮೆರಿಕ-ಇರಾನ್ ಯುದ್ಧ ಪ್ರಾರಂಭವಾದಾಗಿನಿಂದ, ಇರಾನ್ ಜಲಸಂಧಿಯನ್ನು ದಿಗ್ಬಂಧನಗೊಳಿಸುವುದಾಗಿ ಘೋಷಿಸಿತ್ತು. ಹೀಗಾಗಿ, ಭಾರತದ ದೊಡ್ಡ ಟ್ಯಾಂಕರ್ಗಳು ಅಲ್ಲೇ ಸಿಕ್ಕಿಹಾಕಿಕೊಂಡಿತ್ತು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕೊಪ್ಪಳ (ಮಾರ್ಚ್ 13): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದ ದುಬಾರಿ ಹ್ಯೂಬ್ಲೋಟ್ ವಾಚ್ ಪ್ರಕರಣ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಹ್ಯೂಬ್ಲೋಟ್ ವಾಚ್ ಅಂದ್ರೆ ಸಾಕು ಥಂಟ್ ಅಂತ ಸಿಎಂ ಸಿದ್ದರಾಮಯ್ಯನವರರು ನೆನಪಾಗುತ್ತಾರೆ. ಅಷ್ಟರ ಮಟ್ಟಿಗೆ ಸಿದ್ದರಾಮಯ್ಯನವರ ಹ್ಯೂಬ್ಲೋಟ್ ವಾಚ್ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿತ್ತು. ಅಲ್ಲದೇ ಅವರನ್ನು ಮುಜುಗರಕ್ಕೀಡು ಮಾಡಿತ್ತು. ಇದೀಗ ಸಿದ್ದರಾಮಯ್ಯನವರ ಆಪ್ತ ಶಾಸಕ ರಾಘವೇಂದ್ರ ಹಿಟ್ನಾಳ್ ಬಳಿಯೂ ಸಹ ದುಬಾರಿ ಮೌಲ್ಯದ ಹ್ಯೂಬ್ಲೋಟ್ ವಾಚ್ ಇರುವುದು ಬೆಳಕಿಗೆ ಬಂದಿದೆ. ಹೌದು..ಸುಮಾರು ಕೊಪ್ಪಳ ಕಾಂಗ್ರೆಸ್ ಶಾಸಕ ಶಾಸಕ ರಾಘವೇಂದ್ರ ಹಿಟ್ನಾಳ್ 18 ಲಕ್ಷ ರೂಪಾಯಿ ಮೌಲ್ಯದ ಹ್ಯೂಬ್ಲೋಟ್ ವಾಚ್ ಧರಿಸಿರುವುದು ಕಂಡುಬಂದಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.
ರಾಮನಗರ, ಮಾರ್ಚ್ 13: ಪೊಲೀಸ್ ಕಸ್ಟಡಿಯಲ್ಲಿದ್ದ ಕುಖ್ಯಾತ ಕಳ್ಳಿ (Thief)ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಿಂದ ಪರಾರಿ ಆಗಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಲ್ಲಿ ನಡೆದಿದೆ. ಆಂಧ್ರಪ್ರದೇಶದ ಕುಪ್ಪಂ ಮೂಲದ ಮಾಲಾ ಪರಾರಿಯಾದ ಕಳ್ಳಿ. ಮಾಲಾ ಪರಾರಿ ಸಂಬಂಧ ರಾಮನಗರ ಟೌನ್ ಠಾಣೆಯಲ್ಲಿ ಕೇಸ್ ದಾಲಾಗಿದ್ದು, ಕುಖ್ಯಾತ ಕಳ್ಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.
ಹದಿನಾರು ವರ್ಷದಿಂದ ಪೊಲೀಸರ ಕೈಗೆ ಸಿಗದ ಕಳ್ಳಿ
ಮೂಲತಃ ಆಂಧ್ರಪ್ರದೇಶದ ಕುಪ್ಪಂ ಮೂಲದ ಮಾಲಾ ಹಲವು ವರ್ಷಗಳಿಂದ ಪೊಲೀಸರ ಕೈಗೆ ಸಿಗದೇ ತಪ್ಪಿಸಿಕೊಂಡು ತಿರುಗಾಡುತ್ತಿದ್ದಳು. ಕಳೆದ ಹದಿನಾರು ವರ್ಷಗಳಿಂದ ವಿವಿಧ ಕಡೆಗಳಲ್ಲಿ ಕಳ್ಳತನ ಎಸಗಿ ಪೊಲೀಸರ ಕೈಗೆ ಸಿಕ್ಕಿರಲಿಲ್ಲ.
350 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದ ಮಾಲಾ
ಇತ್ತೀಚೆಗೆ ಮಾಗಡಿ ಪಟ್ಟಣದಲ್ಲಿ ಮಹಿಳೆಯ ಗಮನವನ್ನು ಬೇರೆಡೆ ಸೆಳೆದು ಸುಮಾರು 350 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣದಲ್ಲಿ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಸಂಬಂಧ ಮಾಗಡಿ ಠಾಣೆ ಪೊಲೀಸರು ಮಾಲಾಳನ್ನು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದರು. ನಂತರ ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದರು.
ಬಳಿಕ ಆರೋಪಿಯನ್ನು ರಾಮನಗರದ ಜಿಲ್ಲಾಸ್ಪತ್ರೆಯಲ್ಲಿರುವ ಸಖಿ ಕೇಂದ್ರದಲ್ಲಿ ತಡರಾತ್ರಿ ಇರಿಸಲಾಗಿತ್ತು. ಆದರೆ ಇದೇ ವೇಳೆ ಪೊಲೀಸರ ಗಮನವನ್ನು ಬೇರೆಡೆ ಸೆಳೆದು, ಅವರಿಗೆ ಚೆಳ್ಳೆಹಣ್ಣು ತಿನ್ನಿಸಿ ಮಾಲಾ ಅಲ್ಲಿಂದ ಪರಾರಿಯಾಗಿದ್ದಾಳೆ. ಇನ್ನು ಆರೋಪಿ ಮಾಲಾಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ.
97 ಲಕ್ಷಕ್ಕೂ ಅಧಿಕ ಮೌಲ್ಯದ ಡೈಮಾಂಡ್ ಮಿಶ್ರಿತ ಚಿನ್ನ ಕಳವು
ಕೊಪ್ಪಳ ನಗರದಲ್ಲಿ ಭಾರೀ ಮೌಲ್ಯದ ಚಿನ್ನ ಕಳುವಾಗಿರುವ ಪ್ರಕರಣ ಸಂಬಂಧ ಕೊನೆಗೂ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರಿನ ಮೂಲದ ಮೊಹಮ್ಮದ್ ಅಸ್ಗರ್ ಎಂಬುವವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಸುಮಾರು 97,17,700 ರೂ. ಮೌಲ್ಯದ ವಜ್ರ ಮಿಶ್ರಿತ ಚಿನ್ನಾಭರಣ ಜೊತೆಗೆ 26,000 ರೂ. ನಗದು ಮತ್ತು ಲ್ಯಾಪ್ಟಾಟ್ ಕಳ್ಳತನವಾಗಿದೆ.
ಮೊಹಮ್ಮದ್ ಅಸ್ಗರ್ ಯುನಿಷೆಫ್ ಡೈಮಂಡ್ ಲಿ. ಕಂಪನಿಯ ಫೀಲ್ಡ್ ಆಪರೇಷನ್ ಮ್ಯಾನೇಜರ್ ಆಗಿದ್ದು, ಈ ಚಿನ್ನಾಭರಣ ಮಂಗಳೂರಿನ ಮೊಹಮ್ಮದ್ ಇರ್ಷಾದ್ ಅವರಿಗೆ ಸೇರಿದೆ. ಘಟನೆ ನಿನ್ನೆ ರಾತ್ರಿ ಕೊಪ್ಪಳ ನಗರದ ತವಾ ಪಂಜಾಬ್ ಹೋಟೆಲ್ ಬಳಿ ನಡೆದಿದೆ. ಸಿಂಧನೂರಿನಿಂದ ಮಂಗಳೂರಿಗೆ ಖಾಸಗಿ ಸ್ಲೀಪರ್ ಕೋಚ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮೊಹಮ್ಮದ್ ಅಸ್ಗರ್, ಊಟಕ್ಕಾಗಿ ಬಸ್ ನಿಲ್ಲಿಸಿದ್ದ ವೇಳೆ ಬಸ್ನಲ್ಲಿದ್ದ ಚಿನ್ನದ ಬ್ಯಾಗ್ನ್ನು ಯಾರೋ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಬಾಂಗ್ಲಾದೇಶ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ತಂಡದಿಂದ ಹೊರಹಾಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಅವರ ಬದಲಿಯಾಗಿ ಕಳೆದ ಆವೃತ್ತಿಯಲ್ಲಿ ಆರ್ಸಿಬಿ ತಂಡದ ಭಾಗವಾಗಿದ್ದ ಜಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಜರಬಾನಿ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಟಿ20 ವಿಶ್ವಕಪ್ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಬ್ಲೆಸಿಂಗ್ ಮುಜರಬಾನಿಗೆ ಕೆಕೆಆರ್ ಪ್ಲೇಯಿಂಗ್ 11ನಲ್ಲೂ ಸ್ಥಾನ ಸಿಗುವ ಸಾಧ್ಯತೆಗಳು ಹೆಚ್ಚಿವೆ.
ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಕೆಕೆಆರ್, ಬಾಂಗ್ಲಾದೇಶ ವೇಗಿ ಮುಸ್ತಾಫಿಜುರ್ ರೆಹಮಾನ್ ಬದಲಿಗೆ ಜಿಂಬಾಬ್ವೆಯ ವೇಗದ ಬೌಲರ್ ಬ್ಲೆಸಿಂಗ್ ಮುಜರಬಾನಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಮುಜರಬಾನಿ ಮಾರ್ಚ್ 17 ರಂದು ತಂಡವನ್ನು ಸೇರಿಕೊಳ್ಳಲಿದ್ದು, ಮಾರ್ಚ್ 28 ರಿಂದ ಪ್ರಾರಂಭವಾಗಲಿರುವ ಐಪಿಎಲ್ನಲ್ಲಿ ಕೆಕೆಆರ್ ಪರ ಆಡಲಿದ್ದಾರೆ ಎಂದಿದೆ.
ವಾಸ್ತವವಾಗಿ ಐಪಿಎಲ್ಗೆ ಸೇರುವ ಮೊದಲು, ಬ್ಲೆಸಿಂಗ್ ಮುಜರಬಾನಿ ಪಾಕಿಸ್ತಾನ ಸೂಪರ್ ಲೀಗ್ನಲ್ಲಿ ಇಸ್ಲಾಮಾಬಾದ್ ಯುನೈಟೆಡ್ ತಂಡದ ಭಾಗವಾಗಿದ್ದರು. ಆದಾಗ್ಯೂ, ಬ್ಲೆಸಿಂಗ್ ಮುಜರಬಾನಿ ಐಪಿಎಲ್ನಲ್ಲಿ ಕೆಕೆಆರ್ ಪರ ಆಡುವ ಸಲುವಾಗಿ ಪಿಎಸ್ಎಲ್ನಿಂದ ತಮ್ಮ ಹೆಸರನ್ನು ಹಿಂತೆಗೆದುಕೊಂಡಿದ್ದಾರೆ.
ಅಚ್ಚರಿಯ ಸಂಗತಿಯೆಂದರೆ, ಬ್ಲೆಸಿಂಗ್ ಮುಜರಬಾನಿ ಕಳೆದ ತಿಂಗಳು ನಡೆದಿದ್ದ ಪಿಎಸ್ಎಲ್ ಹರಾಜಿನಲ್ಲಿ ಮಾರಾಟವಾಗದೆ ಉಳಿದಿದ್ದರು. ಆದರೆ ವೆಸ್ಟ್ ಇಂಡೀಸ್ನ ಶಮರ್ ಜೋಸೆಫ್ಗೆ ಬದಲಿ ಆಟಗಾರನಾಗಿ ಇಸ್ಲಾಮಾಬಾದ್ ಯುನೈಟೆಡ್ ಫ್ರಾಂಚೈಸಿ ಬ್ಲೆಸಿಂಗ್ ಮುಜರಬಾನಿ ಅವರನ್ನು ತಂಡಕ್ಕೆ ಸೇರಿಸಿಕೊಂಡಿತ್ತು.
ಮೇಲೆ ಹೇಳಿದಂತೆ ಐಪಿಎಲ್ನಲ್ಲಿ ಬ್ಲೆಸ್ಸಿಂಗ್ ಮುಜರಬಾನಿ ಕಾಣಿಸಿಕೊಳ್ಳುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮೊದಲು, ಅವರು 2025 ರ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭಾಗವಾಗಿದ್ದರು. ಆರ್ಸಿಬಿ ತಾತ್ಕಾಲಿಕವಾಗಿ ಅವರನ್ನು ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿತ್ತು. ಆದರೆ ಅವರಿಗೆ ಪ್ಲೇಯಿಂಗ್ 11 ನಲ್ಲಿ ಆಡುವ ಅವಕಾಶ ಸಿಕ್ಕಿರಲಿಲ್ಲ.
ಜನವರಿ 23ರಂದು ‘ಲ್ಯಾಂಡ್ಲಾರ್ಡ್’ ಸಿನಿಮಾ (Landlord Kannada Movie) ಬಿಡುಗಡೆ ಆಗಿತ್ತು. ದುನಿಯಾ ವಿಜಯ್, ರಚಿತಾ ರಾಮ್, ಶಿಶಿರ್ ಬೈಕಾಡಿ, ರಿತನ್ಯ ವಿಜಯ್, ಉಮಾಶ್ರೀ, ರಾಜ್ ಬಿ. ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿರುವ ಈ ಸಿನಿಮಾಗೆ ಚಿತ್ರಮಂದಿರಗಳಲ್ಲಿ ಜನರ ಮೆಚ್ಚುಗೆ ಸಿಕ್ಕಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು. ಈಗ ‘ಲ್ಯಾಂಡ್ಲಾರ್ಡ್’ ಚಿತ್ರ ಒಟಿಟಿಗೆ ಬರುತ್ತಿದೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ಜೀ5 ಒಟಿಟಿ (Zee5 OTT) ಮೂಲಕ ಈ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ.
ಮಾರ್ಚ್ 19ಕ್ಕೆ ಜೀ5ನಲ್ಲಿ ‘ಲ್ಯಾಂಡ್ಲಾರ್ಡ್’ ಸಿನಿಮಾ ಪ್ರಸಾರ ಆರಂಭ ಆಗಲಿದೆ. ಜಡೇಶ್ ಕೆ. ಹಂಪಿ ನಿರ್ದೇಶನದ ಈ ಸಿನಮಾ 1980ರಲ್ಲಿ ಗ್ರಾಮೀಣ ಕರ್ನಾಟಕದಲ್ಲಿ ನಡೆಯುವ ಕಥೆಯನ್ನು ಹೇಳುತ್ತದೆ. ‘ಸಾರಥಿ ಫಿಲ್ಮ್ಸ್’ ಬ್ಯಾನರ್ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಸಂಪತ್ ಮೈತ್ರೇಯ, ಭಾವನಾ ರಾವ್ ಕೂಡ ಈ ಚಿತ್ರದಲ್ಲಿ ಗಮನಾರ್ಹ ಪಾತ್ರಗಳನ್ನು ಮಾಡಿದ್ದಾರೆ.
‘ಲ್ಯಾಂಡ್ಲಾರ್ಡ್’ ಸಿನಿಮಾದಲ್ಲಿ ದುನಿಯಾ ವಿಜಯ್ ಅವರು ಕೊಡಲಿ ರಾಚಯ್ಯ ಎಂಬ ಪಾತ್ರ ಮಾಡಿದ್ದಾರೆ. ಆ ಪಾತ್ರದ ಕುರಿತು ಮಾತನಾಡಿದ ಅವರು, ‘ನಾನು ರಾಚಯ್ಯ ಎಂಬ ಪಾತ್ರವನ್ನು ವಹಿಸಿದ್ದೇನೆ. ರಾಚಯ್ಯನು ಒಬ್ಬ ಅಂತರ್ಮುಖಿ. ಹೆಚ್ಚು ಮಾತನಾಡದೇ ಒಳಗಿನ ಭಾವನೆಗಳನ್ನು ವ್ಯಕ್ತಪಡಿಸುವ ಈ ಪಾತ್ರ ನನಗೆ ಒಂದು ಸವಾಲಾಗಿತ್ತು. ಇದೀಗ ಜೀ5ನಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿರುವುದು ನನಗೆ ಸಂತಸ ತಂದಿದೆ. ಪ್ರೇಕ್ಷಕರ ಅಭಿಪ್ರಾಯಕ್ಕಾಗಿ ಕಾಯುತ್ತಿದ್ದೇನೆ’ ಎಂದಿದ್ದಾರೆ.
ಸಿನಿಮಾದ ಬಗ್ಗೆ ಮತ್ತು ತಮ್ಮ ಪಾತ್ರದ ಕುರಿತು ಮಾತನಾಡಿದ ನಟಿ ರಚಿತಾ ರಾಮ್, ‘ಚಿತ್ರವು ಸರಳವಾಗಿದ್ದರೂ, ಕಥೆಯಲ್ಲಿರುವ ಭಾವನೆಗಳ ಆಳ ದೊಡ್ಡದಾಗಿದೆ. ಅಗಾಧವಾದ ಭಾವನೆಗಳನ್ನು ವ್ಯಕ್ತಪಡಿಸುವ ಕಥೆಯೇ ಲ್ಯಾಂಡ್ಲಾರ್ಡ್. ಇದರಲ್ಲಿ ನನ್ನದು ಬಹಳ ವಿಶೇಷವಾದ ಪಾತ್ರ’ ಎಂದಿದ್ದಾರೆ. ಉಮಾಶ್ರೀ ಅವರ ಪಾತ್ರ ಕೂಡ ಗಮನ ಸೆಳೆಯುಂತಿದೆ.
‘ಲ್ಯಾಂಡ್ಲಾರ್ಡ್’ ಸಿನಿಮಾದಲ್ಲಿನ ಎಲ್ಲ ಕಲಾವಿದರ ನಟನೆಗೆ ಚಿತ್ರಮಂದಿರದಲ್ಲಿ ಜನರು ಭೇಷ್ ಎಂದಿದ್ದರು. ವಿಲನ್ ಪಾತ್ರದಲ್ಲಿ ಅಬ್ಬರಿಸಿದ ರಾಜ್ ಬಿ. ಶೆಟ್ಟಿ ಅವರು ಚಪ್ಪಾಳೆ ಗಿಟ್ಟಿಸಿದರು. ಈಗ ಒಟಿಟಿಯಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಯುವ ಸಮಯ ಸಮೀಪಿಸಿದೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ನೀಡಿದ್ದಾರೆ.
ಬೆಂಗಳೂರು, (ಮಾರ್ಚ್ 13): ಮಹಿಳೆಯರಿಗೆ (Women) ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ (shakthi yojana)ಜಾರಿ ಬಂದಾಗಿನಿಂದ ಬಸ್ (Bus) ಓಡಾಟ ಕಡಿಮೆಯಾಗಿದೆ ಎನ್ನುವ ಆರೋಪಗಳು ಕೇಳಿಬಂದಿವೆ. ಇದರ ಬೆನ್ನಲ್ಲೇ ಹೊಸ ಬಸ್ಸುಗಳು ರಸ್ತೆಗಿಳಿದಿವೆ. ಹೌದು.. ಕೆಎಸ್ಆರ್ಟಿಸಿ 45 ಸಾಮಾನ್ಯ ಹಾಗೂ 70 ಪಲ್ಲಕ್ಕಿ ಸ್ಲೀಪರ್ ಬಸ್ಗಳು ಸೇರಿದಂತೆ ಒಟ್ಟು 115 ನೂತನ ಬಸ್ಗಳಿಗೆ ಇಂದು (ಮಾರ್ಚ್ 13) ಸಚಿವ ರಾಮಲಿಂಗರೆಡ್ಡಿ ಹಸಿರು ನಿಶಾನೆ ತೋರಿಸಿದ್ದು, ಈ ಹೊಸ ಬಸ್ಗಳು ಬೆಂಗಳೂರಿನಿಂದ ರಾಜ್ಯದ ಹಲವು ಪ್ರಮುಖ ಮಾರ್ಗಗಳಿಗೆ ಸಂಚಾರ ನಡೆಸಲಿವೆ.
ಒಟ್ಟು 115 ಬಸ್ಗಳು ಪೈಕಿ 70 ಬಸ್ಗಳು ಪ್ರೀಮಿಯಂ ಪಲ್ಲಕ್ಕಿ ಬಸ್ಗಳು ಹಾಗೂ 45 ಬಸ್ಗಳು ನಾರ್ಮಲ್ ಬಸ್ಗಳಾಗಿದ್ವು.ಈ ಪಲ್ಲಕ್ಕಿ ಬಸ್ಗಳ ವಿಶೇಷತೆ ಏನಂದ್ರೆ, ಈ ಬಸ್ಗಳಲ್ಲಿ ಹೈಟೆಕ್ ಸೀಟಿನ ವ್ಯವಸ್ಥೆ ಸೇರಿದಂತೆ ಅನೇಕ ಅನುಕೂಲಗಳಿವೆ. ಪಲ್ಲಕ್ಕಿ ಬಸ್ಗಳಲ್ಲಿ ಹೆಣ್ಣು ಮಕ್ಕಳೂ ಸಹ ಹಣ ಕೊಟ್ಟು ಪ್ರಯಾಣ ಮಾಡಬೇಕು. ಇನ್ನು 45 ನಾರ್ಮಲ್ ಬಸ್ಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಸಂಚಾರ ಮಾಡಬಹುದು.
ಈ ಹಂತದಲ್ಲಿ ಒಟ್ಟು 115 ಬಸ್ಗಳನ್ನು ಸೇವೆಗೆ ಸೇರಿಸಲಾಗಿದೆ, ಅದರಲ್ಲಿ 45 ಸಾಮಾನ್ಯ ಬಸ್ಗಳು ಮತ್ತು 70 ಪಲ್ಲಕ್ಕಿ (ಸ್ಲೀಪರ್) ಬಸ್ಗಳು ಸೇರಿವೆ. ವಿಶೇಷವಾಗಿ ದೀರ್ಘ ದೂರ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಆಧುನಿಕ ಸೌಲಭ್ಯಗಳೊಂದಿಗೆ ಈ ಪಲ್ಲಕ್ಕಿ ಬಸ್ಗಳನ್ನು ವಿನ್ಯಾಸಗೊಳಿಸಲಾಗಿದೆ.
ಈ ನೂತನ ಸ್ಲೀಪರ್ ಬಸ್ಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ವಿನ್ಯಾಸ ಮಾಡಲಾಗಿದೆ. ಇವುಗಳಲ್ಲಿ ಒಟ್ಟು ಐದು ಬಾಗಿಲುಗಳನ್ನು (ಡೋರ್ಗಳು) ಅಳವಡಿಸಲಾಗಿದೆ. ಇದಕ್ಕೂ ಮೊದಲು ಸಾಮಾನ್ಯವಾಗಿ ಎರಡು ಬಾಗಿಲುಗಳು ಮತ್ತು ಒಂದು ಎಮರ್ಜೆನ್ಸಿ ಎಕ್ಸಿಟ್ ಬಾಗಿಲು ಮಾತ್ರ ಇದ್ದವು. ಆದರೆ ಹೊಸ ಮಾದರಿಯ ಸ್ಲೀಪರ್ ಬಸ್ಗಳಲ್ಲಿ ಬಸ್ನ ಮೇಲ್ಭಾಗದಲ್ಲಿಯೂ ಎರಡು ಹೆಚ್ಚುವರಿ ಬಾಗಿಲುಗಳನ್ನು ಅಳವಡಿಸಲಾಗಿದ್ದು, ತುರ್ತು ಪರಿಸ್ಥಿತಿಯಲ್ಲಿ ಪ್ರಯಾಣಿಕರು ಸುರಕ್ಷಿತವಾಗಿ ಹೊರಬರಲು ಈ ವ್ಯವಸ್ಥೆ ಸಹಾಯಕವಾಗಲಿದೆ.
ಹೊಸ ಬಸ್ಗಳು ಎಲ್ಲಿಂದ ಎಲ್ಲಿಗೆ ಸಂಚಾರ?
ಹೊಸ ಪಲ್ಲಕ್ಕಿ ಸ್ಲೀಪರ್ ಬಸ್ಗಳನ್ನು ರಾಜ್ಯದ ಹಾಗೂ ಹೊರರಾಜ್ಯಗಳ ಪ್ರಮುಖ ಧಾರ್ಮಿಕ ಮತ್ತು ವಾಣಿಜ್ಯ ಕೇಂದ್ರಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಸಂಚಾರಕ್ಕೆ ಬಿಡಲಾಗಿದೆ. ಪಲ್ಲಕ್ಕಿ ನಾನ್ ಎಸಿ ಬಸ್ಗಳು ಉಡುಪಿ, ಮಂಗಳೂರು, ಮೈಸೂರು, ಧರ್ಮಸ್ಥಳ, ಶೃಂಗೇರಿ, ಹೊರನಾಡು, ಆಗುಂಬೆ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಂಪಿ, ರಾಯಚೂರು, ಜಮಖಂಡಿ, ಪುತ್ತೂರು, ಕಾಣಿಯೂರು, ಕುಕ್ಕೆ ಸುಬ್ರಹ್ಮಣ್ಯ, ಕಾಸರಗೋಡು, ಮಂತ್ರಾಲಯ, ತಿರುಚಿ, ಕೊಜಿಕ್ಕೋಡ್, ಮುನ್ನಾರ್, ಪಾಂಡಿಚೇರಿ, ತಂಜಾವೂರು, ಕೊಟ್ಟಾಯಂ, ಹೈದಾರಬಾದ್, ಚೆನ್ನೈ, ಪಣಜಿ, ಮಧುರೈ, ಕುಂಭಕೋಣಂ, ಎರ್ನಾಕುಲಂಗೆ ಸಂಚರಿಸುತ್ತವೆ.