All posts by nagaraj11081993

ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಗುವಾಹಟಿ, ಮಾರ್ಚ್ 13: ಪ್ರಧಾನಿ ನರೇಂದ್ರ ಮೋದಿ ಅಸ್ಸಾಂನಲ್ಲಿ ಇಂದು ಸುಮಾರು 19,480 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಅರ್ಪಿಸಿದರು. ದೇಶಾದ್ಯಂತ 9.3 ಕೋಟಿಗೂ ಹೆಚ್ಚು ರೈತರಿಗೆ ಪ್ರಧಾನ ಮಂತ್ರಿ-ಕಿಸಾನ್ ಯೋಜನೆಯ 22ನೇ ಕಂತನ್ನು ಕೂಡ ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಿಡುಗಡೆ ಮಾಡಿದರು. ಇದೇ ವೇಳೆ ಇನ್ನೂ ಕೆಲವು ಯೋಜನೆಗಳಿಗೂ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ತಪ್ಪು ಮಾಹಿತಿ ಮತ್ತು ಸುಳ್ಳುಗಳನ್ನು ಹರಡುವುದರ ಮೇಲೆ ಕೇಂದ್ರೀಕರಿಸಿದೆ ಎಂದು ಹೇಳಿದರು.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಐಪಿಎಲ್​ನಿಂದ ಹರ್ಷಿತ್ ರಾಣಾ ಔಟ್; ಕೆಕೆಆರ್‌ಗೆ ಹೆಚ್ಚಿದ ಸಂಕಷ್ಟ

Source link

ಮತ್ತೆ ಕೇಳಿಬಂತು ಅನುಷ್ಕಾ ಶೆಟ್ಟಿ ಮದುವೆ ವಿಷಯ: ಈ ಬಾರಿ ಪ್ರಭಾಸ್ ಹೆಸರಿಲ್ಲ

ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ಬಣ್ಣದ ಲೋಕದಲ್ಲಿ ಸೂಪರ್ ಸಕ್ಸಸ್ ಕಂಡಿದ್ದಾರೆ. ಅನೇಕ ಸ್ಟಾರ್ ನಟರಿಗೆ ಜೋಡಿಯಾಗಿ ಮಿಂಚಿದ್ದಾರೆ. ಆದರೆ ನಿಜ ಜೀವನದಲ್ಲಿ ಅವರು ಸಿಂಗಲ್ ಆಗಿಯೇ ಉಳಿದುಕೊಂಡಿದ್ದಾರೆ. ಅವರ ಮದುವೆ (Anushka Shetty Marriage) ಬಗ್ಗೆ ಆಗಾಗ ಗಾಸಿಪ್ ಕೇಳಿಬರುತ್ತಿದೆ. ಈಗ ಮತ್ತೊಮ್ಮೆ ಅವರ ಮದುವೆಯ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಕಳೆದ ಹಲವು ವರ್ಷಗಳಿಂದ ಅನುಷ್ಕಾ ಶೆಟ್ಟಿ ಅವರ ಹೆಸರು ನಟ ಪ್ರಭಾಸ್ (Prabhas) ಜೊತೆ ತಳುಕು ಹಾಕಿಕೊಳ್ಳುತ್ತಲೇ ಇತ್ತು. ಆದರೆ ಈಗ ಬೇರೆ ವರನ ಬಗ್ಗೆ ಗಾಸಿಪ್ ಹಬ್ಬಿದೆ.

ಹೌದು, ಈ ಬಾರಿ ಅನುಷ್ಕಾ ಶೆಟ್ಟಿ ಮದುವೆ ಗಾಸಿಪ್ ಜೊತೆ ಪ್ರಭಾಸ್ ಹೆಸರು ಕೇಳಿಬಂದಿಲ್ಲ. ಯಾಕೆಂದರೆ, ಈಗಾಗಲೇ ಈ ಜೋಡಿ ಅನೇಕ ಬಾರಿ ‘ನಾವಿಬ್ಬರು ಜಸ್ಟ್ ಫ್ರೆಂಡ್ಸ್’ ಎನ್ನುವ ಮೂಲಕ ಗಾಸಿಪ್ ಮಂದಿಯ ಬಾಯಿ ಮುಚ್ಚಿಸಿದ್ದಾರೆ. ಹಾಗಾಗಿ ಈ ಬಾರಿ ಹರಿದಾಡುತ್ತಿರುವ ಸುದ್ದಿ ಬೇರೆಯೇ ಆಗಿದೆ. ಈ ಸಲ ಅನುಷ್ಕಾ ಅವರ ಮದುವೆ ಯಾವುದೇ ನಟನ ಜೊತೆಗಲ್ಲ, ಬದಲಿಗೆ ಅವರ ಕುಟುಂಬಕ್ಕೆ ಮೊದಲೇ ಪರಿಚಯ ಇರುವ ಒಬ್ಬ ಉದ್ಯಮಿಯ ಜೊತೆಗೆ ನಡೆಯಲಿದೆ ಎಂಬ ಗುಸುಗುಸು ಕೇಳಿಬರುತ್ತಿದೆ.

ಮೂಲಗಳ ಪ್ರಕಾರ, ಅನುಷ್ಕಾ ಶೆಟ್ಟಿ ಮತ್ತು ಈ ಉದ್ಯಮಿಯ ವಿವಾಹದ ಬಗ್ಗೆ ಕುಟುಂಬದ ಹಿರಿಯರ ಮಟ್ಟದಲ್ಲಿ ಈಗಾಗಲೇ ಮಾತುಕತೆಗಳು ಆರಂಭವಾಗಿವೆ ಎನ್ನಲಾಗಿದೆ. ಒಂದು ವೇಳೆ ಎಲ್ಲವೂ ಅಂದುಕೊಂಡಂತೆ ನಡೆದರೆ, 2026ರಲ್ಲೇ ಅನುಷ್ಕಾ ಶೆಟ್ಟಿ ಅವರು ಸಪ್ತಪದಿ ತುಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

ಸಾಮಾನ್ಯವಾಗಿ ಅನುಷ್ಕಾ ಶೆಟ್ಟಿ ಅವರು ತಮ್ಮ ಖಾಸಗಿ ಜೀವನದ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದಿಲ್ಲ. ತಮ್ಮ ಬಗ್ಗೆ ಬರುವ ಯಾವುದೇ ವದಂತಿಗಳಿಗೆ ಅವರು ತಕ್ಷಣ ಪ್ರತಿಕ್ರಿಯಿಸುವುದಿಲ್ಲ. ಈಗಲೂ ಸಹ ಅವರು ಈ ಮದುವೆಯ ಸುದ್ದಿಯ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ವರನ ಗುರುತನ್ನು ಅತ್ಯಂತ ಗೌಪ್ಯವಾಗಿ ಇಡಲಾಗಿದ್ದು, ಮದುವೆಯ ತಯಾರಿಗಳ ಬಗ್ಗೆ ಯಾವುದೇ ಸುಳಿವು ಹೊರಬೀಳದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಗಾಸಿಪ್ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಅಭಿಮಾನಿಗಳಿಂದ ಇನ್ನಷ್ಟು ದೂರ ಸರಿದ ನಟಿ ಅನುಷ್ಕಾ ಶೆಟ್ಟಿ

ಸದ್ಯಕ್ಕೆ ನಟನೆಯಿಂದ ಅನುಷ್ಕಾ ಶೆಟ್ಟಿ ಅವರು ದೂರ ಉಳಿದುಕೊಂಡಿದ್ದಾರೆ. ‘ಬಾಹುಬಲಿ’ ರೀತಿಯ ಬ್ಲಾಕ್ ಬಸ್ಟರ್ ಹಿಟ್ ನೀಡಿದ್ದರು ಕೂಡ ಅನುಷ್ಕಾ ಅವರು ಈಗ ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಗಿದೆ. ಅವರನ್ನು ಮತ್ತೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನೌಕಾ ಡ್ರೋನ್​ಗಳು, ಕ್ಷಿಪಣಿಗಳಿರುವ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

ಟೆಹ್ರಾನ್, ಮಾರ್ಚ್ 13: ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವುದನ್ನು ನಿರ್ಬಂಧಿಸಲು ನಿಯೋಜಿಸಲಾದ ಆತ್ಮಾಹುತಿ ಡ್ರೋನ್ ಹಡಗುಗಳ ದೊಡ್ಡ ಸಂಗ್ರಹವನ್ನು ಇರಾನ್ (Iran) ಸೇನೆ ಹೊಂದಿದೆ. ಇರಾನ್​ನ ಅಧಿಕಾರಿಗಳು “ಕ್ಷಿಪಣಿ ನಗರ” ಎಂದು ಹೇಳುವ ಭೂಗತ ಕಾಂಪ್ಲೆಕ್ಸ್​ ಒಳಗೆ ಚಿತ್ರೀಕರಿಸಲಾದ ವಿಡಿಯೋಗಳನ್ನು ಇರಾನ್​ನ ಮಾಧ್ಯಮಗಳು ಬಿಡುಗಡೆ ಮಾಡಿದೆ. ನೌಕಾ ಡ್ರೋನ್‌ಗಳು, ಹಡಗು ವಿರೋಧಿ ಕ್ಷಿಪಣಿಗಳು ಮತ್ತು ಸಮುದ್ರ ಗಣಿಗಳಿಂದ ಕೂಡಿದ ಉದ್ದವಾದ ಸುರಂಗಗಳನ್ನು ಈ ವಿಡಿಯೋದಲ್ಲಿ ನೋಡಬಹುದು. ಈ ರೆಕಾರ್ಡಿಂಗ್‌ಗಳನ್ನು ಯಾವಾಗ ಮಾಡಲಾಯಿತು, ಅಮೆರಿಕನ್ ಅಥವಾ ಇಸ್ರೇಲಿ ಪಡೆಗಳು ಆ ಸ್ಥಳವನ್ನು ಧ್ವಂಸ ಮಾಡಿವೆಯೇ ಎಂಬುದು ಸ್ಪಷ್ಟವಾಗಿಲ್ಲ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಎಲ್​ಪಿಜಿ ಕೊರತೆ ಇನ್ನಿಲ್ಲ; ಹಾರ್ಮುಜ್ ಜಲಸಂಧಿ ದಾಟಿ ಬಂತು ಭಾರತದ 2 ಗ್ಯಾಸ್ ಟ್ಯಾಂಕರ್

ನವದೆಹಲಿ, ಮಾರ್ಚ್ 13: ಇರಾನ್ ಹಾಗೂ ಇಸ್ರೇಲ್-ಅಮೆರಿಕದ ನಡುವೆ ಸಂಘರ್ಷ ಆರಂಭವಾದ ನಂತರ ಜಗತ್ತಿನಾದ್ಯಂತ ಹಲವೆಡೆ ಇಂಧನ, ಎಲ್​ಪಿಜಿ ಬಿಕ್ಕಟ್ಟು (LPG Crisis) ತಲೆದೋರಿತ್ತು. ಅದಕ್ಕೆ ಭಾರತವೂ ಹೊರತಾಗಿರಲಿಲ್ಲ. ಆದರೆ, ಕೊನೆಗೂ ಭಾರತದಲ್ಲಿ ಉದ್ಭವವಾಗಿದ್ದ ಎಲ್​ಪಿಜಿ ಕೊರತೆಗೆ ಪರಿಹಾರ ಸಿಕ್ಕಂತಾಗಿದೆ. ಭಾರತ ಮತ್ತು ಇರಾನ್ ಹಾರ್ಮುಜ್ ಜಲಸಂಧಿಯಿಂದ ಹಡಗುಗಳ ಸಾಗಣೆಗೆ ಒಪ್ಪಂದ ಮಾಡಿಕೊಂಡಿವೆ. ಈಗಾಗಲೇ 40,000 ಮೆಟ್ರಿಕ್ ಟನ್ ಬೃಹತ್ ಎಲ್‌ಪಿಜಿಯನ್ನು ಹೊತ್ತ ಶಿವಾಲಿಕ್ ಎಂಬ ಹಡಗು ಹಾರ್ಮುಜ್ ಜಲಸಂಧಿಯನ್ನು ದಾಟಿ ಬಂದಿದೆ. ಮತ್ತೊಂದು ಹಡಗು ಕೂಡ ಈ ಜಲಸಂಧಿಯನ್ನು ದಾಟಿ ಮುಂದಿನ ವಾರದೊಳಗೆ ಭಾರತದಲ್ಲಿ ಡಾಕ್ ಮಾಡಲಿದೆ ಎಂದು ವರದಿಗಳು ತಿಳಿಸಿವೆ.

ಇರಾನ್ ಮತ್ತು ಭಾರತದ ನಡುವೆ ನಡೆದ ಹಲವಾರು ಸುತ್ತಿನ ಮಾತುಕತೆಗಳ ನಂತರ ಇರಾನ್ ಭಾರತೀಯ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯನ್ನು ದಾಟಲು ಅವಕಾಶ ನೀಡಿತ್ತು. ಇದರ ಬೆನ್ನಲ್ಲೇ ಈ ದೊಡ್ಡ ಬೆಳವಣಿಗೆ ಸಂಭವಿಸಿದೆ. ಶಿವಾಲಿಕ್ ಹಡಗು ಇರಾನ್‌ನ ಬಂದರ್ ಅಬ್ಬಾಸ್ ಬಂದರಿನಿಂದ ಹೊರಟು ಕೆಲವು ಗಂಟೆಗಳ ಹಿಂದೆ ಹಾರ್ಮುಜ್ ಜಲಸಂಧಿಯನ್ನು ದಾಟಿದೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳಿಗೆ ಸುರಕ್ಷಿತ ಮಾರ್ಗಕ್ಕೆ ಅವಕಾಶ; ಇರಾನ್ ರಾಯಭಾರಿ ಮಾಹಿತಿ

ಇಂದು ಭಾರತದಲ್ಲಿನ ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಅವರು ಭಾರತಕ್ಕೆ ಸುರಕ್ಷಿತ ಮಾರ್ಗದ ಬಗ್ಗೆ ಪಾಸಿಟಿವ್ ಹೇಳಿಕೆಗಳನ್ನು ನೀಡಿದ್ದರು. “ಭಾರತ ನಮ್ಮ ಸ್ನೇಹಿತನಾಗಿರುವುದರಿಂದ ನೀವು ಎರಡು ಅಥವಾ ಮೂರು ಗಂಟೆಗಳಲ್ಲಿ ಅದರ ಪರಿಣಾಮವನ್ನು ನೋಡುತ್ತೀರಿ. ಇರಾನ್ ಮತ್ತು ಭಾರತ ಈ ಪ್ರದೇಶದಲ್ಲಿ ಸಾಮಾನ್ಯ ಹಿತಾಸಕ್ತಿಗಳನ್ನು ಹಂಚಿಕೊಳ್ಳುತ್ತವೆ” ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಭಾರತದ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯನ್ನು ಹಾದುಹೋಗಲು ಅನುಮತಿ ಸಿಕ್ಕಿದೆ. ಇಂದು ಮಧ್ಯಾಹ್ನ ಯಾವುದೇ ತೊಂದರೆಯಿಲ್ಲದೆ ಭಾರತೀಯ ಹಡಗು ಜಲಸಂಧಿಯನ್ನು ದಾಟಿದೆ.

ಎರಡು ವಾರಗಳ ಹಿಂದೆ ಅಮೆರಿಕ-ಇರಾನ್ ಯುದ್ಧ ಪ್ರಾರಂಭವಾದಾಗಿನಿಂದ, ಇರಾನ್ ಜಲಸಂಧಿಯನ್ನು ದಿಗ್ಬಂಧನಗೊಳಿಸುವುದಾಗಿ ಘೋಷಿಸಿತ್ತು. ಹೀಗಾಗಿ, ಭಾರತದ ದೊಡ್ಡ ಟ್ಯಾಂಕರ್‌ಗಳು ಅಲ್ಲೇ ಸಿಕ್ಕಿಹಾಕಿಕೊಂಡಿತ್ತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಸಿದ್ದರಾಮಯ್ಯ ಬೆನ್ನಲ್ಲೇ ಈಗ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ಹುಬ್ಲೋಟ್‌ ವಾಚ್‌

ಕೊಪ್ಪಳ (ಮಾರ್ಚ್ 13): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದ ದುಬಾರಿ ಹ್ಯೂಬ್ಲೋಟ್ ವಾಚ್ ಪ್ರಕರಣ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಹ್ಯೂಬ್ಲೋಟ್ ವಾಚ್ ಅಂದ್ರೆ ಸಾಕು ಥಂಟ್ ಅಂತ ಸಿಎಂ ಸಿದ್ದರಾಮಯ್ಯನವರರು ನೆನಪಾಗುತ್ತಾರೆ. ಅಷ್ಟರ ಮಟ್ಟಿಗೆ ಸಿದ್ದರಾಮಯ್ಯನವರ ಹ್ಯೂಬ್ಲೋಟ್ ವಾಚ್ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿತ್ತು. ಅಲ್ಲದೇ ಅವರನ್ನು ಮುಜುಗರಕ್ಕೀಡು ಮಾಡಿತ್ತು. ಇದೀಗ ಸಿದ್ದರಾಮಯ್ಯನವರ ಆಪ್ತ ಶಾಸಕ ರಾಘವೇಂದ್ರ ಹಿಟ್ನಾಳ್ ಬಳಿಯೂ ಸಹ ದುಬಾರಿ ಮೌಲ್ಯದ ಹ್ಯೂಬ್ಲೋಟ್ ವಾಚ್ ಇರುವುದು ಬೆಳಕಿಗೆ ಬಂದಿದೆ. ಹೌದು..ಸುಮಾರು ಕೊಪ್ಪಳ ಕಾಂಗ್ರೆಸ್ ಶಾಸಕ ಶಾಸಕ ರಾಘವೇಂದ್ರ ಹಿಟ್ನಾಳ್ 18 ಲಕ್ಷ ರೂಪಾಯಿ ಮೌಲ್ಯದ ಹ್ಯೂಬ್ಲೋಟ್ ವಾಚ್ ಧರಿಸಿರುವುದು ಕಂಡುಬಂದಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.

Source link

ಸಿಕ್ಕಳೆನ್ನುವಷ್ಟರಲ್ಲಿ ಮತ್ತೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಕುಖ್ಯಾತ ಕಳ್ಳಿ ಮಾಲಾ

ರಾಮನಗರ, ಮಾರ್ಚ್​ 13: ಪೊಲೀಸ್ ಕಸ್ಟಡಿಯಲ್ಲಿದ್ದ ಕುಖ್ಯಾತ ಕಳ್ಳಿ (Thief) ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಿಂದ ಪರಾರಿ ಆಗಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಲ್ಲಿ ನಡೆದಿದೆ. ಆಂಧ್ರಪ್ರದೇಶದ ಕುಪ್ಪಂ ಮೂಲದ ಮಾಲಾ ಪರಾರಿಯಾದ ಕಳ್ಳಿ. ಮಾಲಾ ಪರಾರಿ ಸಂಬಂಧ ರಾಮನಗರ ಟೌನ್ ಠಾಣೆಯಲ್ಲಿ ಕೇಸ್​​​​ ದಾಲಾಗಿದ್ದು, ಕುಖ್ಯಾತ ಕಳ್ಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ಹದಿನಾರು ವರ್ಷದಿಂದ ಪೊಲೀಸರ ಕೈಗೆ ಸಿಗದ ಕಳ್ಳಿ

ಮೂಲತಃ ಆಂಧ್ರಪ್ರದೇಶದ ಕುಪ್ಪಂ ಮೂಲದ ಮಾಲಾ ಹಲವು ವರ್ಷಗಳಿಂದ ಪೊಲೀಸರ ಕೈಗೆ ಸಿಗದೇ ತಪ್ಪಿಸಿಕೊಂಡು ತಿರುಗಾಡುತ್ತಿದ್ದಳು. ಕಳೆದ ಹದಿನಾರು ವರ್ಷಗಳಿಂದ ವಿವಿಧ ಕಡೆಗಳಲ್ಲಿ ಕಳ್ಳತನ ಎಸಗಿ ಪೊಲೀಸರ ಕೈಗೆ ಸಿಕ್ಕಿರಲಿಲ್ಲ.

350 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದ ಮಾಲಾ 

ಇತ್ತೀಚೆಗೆ ಮಾಗಡಿ ಪಟ್ಟಣದಲ್ಲಿ ಮಹಿಳೆಯ ಗಮನವನ್ನು ಬೇರೆಡೆ ಸೆಳೆದು ಸುಮಾರು 350 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣದಲ್ಲಿ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಸಂಬಂಧ ಮಾಗಡಿ ಠಾಣೆ ಪೊಲೀಸರು ಮಾಲಾಳನ್ನು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದ್ದರು. ನಂತರ ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ಹಬ್ಬ ಮುಗಿದ ಮೂರೇ ದಿನಕ್ಕೆ ದೇಗುಲಕ್ಕೆ ಕನ್ನ: 4 ಕೆಜಿ ಬೆಳ್ಳಿ, 30 ಗ್ರಾಂ ಚಿನ್ನಾಭರಣ ದೋಚಿ ಪರಾರಿ

ಬಳಿಕ ಆರೋಪಿಯನ್ನು ರಾಮನಗರದ ಜಿಲ್ಲಾಸ್ಪತ್ರೆಯಲ್ಲಿರುವ ಸಖಿ ಕೇಂದ್ರದಲ್ಲಿ ತಡರಾತ್ರಿ ಇರಿಸಲಾಗಿತ್ತು. ಆದರೆ ಇದೇ ವೇಳೆ ಪೊಲೀಸರ ಗಮನವನ್ನು ಬೇರೆಡೆ ಸೆಳೆದು, ಅವರಿಗೆ ಚೆಳ್ಳೆಹಣ್ಣು ತಿನ್ನಿಸಿ ಮಾಲಾ ಅಲ್ಲಿಂದ ಪರಾರಿಯಾಗಿದ್ದಾಳೆ. ಇನ್ನು ಆರೋಪಿ ಮಾಲಾಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ.

97 ಲಕ್ಷಕ್ಕೂ ಅಧಿಕ ಮೌಲ್ಯದ ಡೈಮಾಂಡ್ ಮಿಶ್ರಿತ ಚಿನ್ನ ಕಳವು

ಕೊಪ್ಪಳ ನಗರದಲ್ಲಿ ಭಾರೀ ಮೌಲ್ಯದ ಚಿನ್ನ ಕಳುವಾಗಿರುವ ಪ್ರಕರಣ ಸಂಬಂಧ ಕೊನೆಗೂ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರಿನ ಮೂಲದ ಮೊಹಮ್ಮದ್ ಅಸ್ಗರ್ ಎಂಬುವವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಸುಮಾರು 97,17,700 ರೂ. ಮೌಲ್ಯದ ವಜ್ರ ಮಿಶ್ರಿತ ಚಿನ್ನಾಭರಣ ಜೊತೆಗೆ 26,000 ರೂ. ನಗದು ಮತ್ತು ಲ್ಯಾಪ್‌ಟಾಟ್​ ಕಳ್ಳತನವಾಗಿದೆ.

ಇದನ್ನೂ ಓದಿ: ನಗರ ಪೊಲೀಸ್ ಆಯುಕ್ತರ ಹೆಸರಲ್ಲೇ ಡಿಜಿಟಲ್ ಅರೆಸ್ಟ್​​ಗೆ ಯತ್ನ: ಸೈಬರ್ ಕ್ರೈಂ ಪೊಲೀಸರಿಗೆ ದೂರು

ಮೊಹಮ್ಮದ್ ಅಸ್ಗರ್ ಯುನಿಷೆಫ್ ಡೈಮಂಡ್ ಲಿ. ಕಂಪನಿಯ ಫೀಲ್ಡ್ ಆಪರೇಷನ್ ಮ್ಯಾನೇಜರ್ ಆಗಿದ್ದು, ಈ ಚಿನ್ನಾಭರಣ ಮಂಗಳೂರಿನ ಮೊಹಮ್ಮದ್ ಇರ್ಷಾದ್ ಅವರಿಗೆ ಸೇರಿದೆ. ಘಟನೆ ನಿನ್ನೆ ರಾತ್ರಿ ಕೊಪ್ಪಳ ನಗರದ ತವಾ ಪಂಜಾಬ್ ಹೋಟೆಲ್ ಬಳಿ ನಡೆದಿದೆ. ಸಿಂಧನೂರಿನಿಂದ ಮಂಗಳೂರಿಗೆ ಖಾಸಗಿ ಸ್ಲೀಪರ್ ಕೋಚ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮೊಹಮ್ಮದ್ ಅಸ್ಗರ್, ಊಟಕ್ಕಾಗಿ ಬಸ್ ನಿಲ್ಲಿಸಿದ್ದ ವೇಳೆ ಬಸ್‌ನಲ್ಲಿದ್ದ ಚಿನ್ನದ ಬ್ಯಾಗ್‌ನ್ನು ಯಾರೋ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IPL 2026: ಮುಸ್ತಾಫಿಜುರ್ ರೆಹಮಾನ್ ಬದಲಿಗೆ ಕೆಕೆಆರ್ ಸೇರಿದ ಮಾಜಿ ಆರ್​ಸಿಬಿ ವೇಗಿ

Source link

ಮಾರ್ಚ್ 19ರಿಂದ ಜೀ5 ಒಟಿಟಿಯಲ್ಲಿ ‘ಲ್ಯಾಂಡ್​ಲಾರ್ಡ್’ ಸಿನಿಮಾ ಪ್ರಸಾರ

ಜನವರಿ 23ರಂದು ‘ಲ್ಯಾಂಡ್​ಲಾರ್ಡ್’ ಸಿನಿಮಾ (Landlord Kannada Movie) ಬಿಡುಗಡೆ ಆಗಿತ್ತು. ದುನಿಯಾ ವಿಜಯ್, ರಚಿತಾ ರಾಮ್, ಶಿಶಿರ್ ಬೈಕಾಡಿ, ರಿತನ್ಯ ವಿಜಯ್, ಉಮಾಶ್ರೀ, ರಾಜ್ ಬಿ. ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿರುವ ಈ ಸಿನಿಮಾಗೆ ಚಿತ್ರಮಂದಿರಗಳಲ್ಲಿ ಜನರ ಮೆಚ್ಚುಗೆ ಸಿಕ್ಕಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು. ಈಗ ‘ಲ್ಯಾಂಡ್​ಲಾರ್ಡ್’ ಚಿತ್ರ ಒಟಿಟಿಗೆ ಬರುತ್ತಿದೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ಜೀ5 ಒಟಿಟಿ (Zee5 OTT) ಮೂಲಕ ಈ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ.

ಮಾರ್ಚ್ 19ಕ್ಕೆ ಜೀ5ನಲ್ಲಿ ‘ಲ್ಯಾಂಡ್​ಲಾರ್ಡ್’ ಸಿನಿಮಾ ಪ್ರಸಾರ ಆರಂಭ ಆಗಲಿದೆ. ಜಡೇಶ್ ಕೆ. ಹಂಪಿ ನಿರ್ದೇಶನದ ಈ ಸಿನಮಾ 1980ರಲ್ಲಿ ಗ್ರಾಮೀಣ ಕರ್ನಾಟಕದಲ್ಲಿ ನಡೆಯುವ ಕಥೆಯನ್ನು ಹೇಳುತ್ತದೆ. ‘ಸಾರಥಿ ಫಿಲ್ಮ್ಸ್’ ಬ್ಯಾನರ್ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಸಂಪತ್ ಮೈತ್ರೇಯ, ಭಾವನಾ ರಾವ್ ಕೂಡ ಈ ಚಿತ್ರದಲ್ಲಿ ಗಮನಾರ್ಹ ಪಾತ್ರಗಳನ್ನು ಮಾಡಿದ್ದಾರೆ.

‘ಲ್ಯಾಂಡ್​ಲಾರ್ಡ್’ ಸಿನಿಮಾದಲ್ಲಿ ದುನಿಯಾ ವಿಜಯ್ ಅವರು ಕೊಡಲಿ ರಾಚಯ್ಯ ಎಂಬ ಪಾತ್ರ ಮಾಡಿದ್ದಾರೆ. ಆ ಪಾತ್ರದ ಕುರಿತು ಮಾತನಾಡಿದ ಅವರು, ‘ನಾನು ರಾಚಯ್ಯ ಎಂಬ ಪಾತ್ರವನ್ನು ವಹಿಸಿದ್ದೇನೆ. ರಾಚಯ್ಯನು ಒಬ್ಬ ಅಂತರ್ಮುಖಿ‌. ಹೆಚ್ಚು ಮಾತನಾಡದೇ ಒಳಗಿನ ಭಾವನೆಗಳನ್ನು ವ್ಯಕ್ತಪಡಿಸುವ ಈ ಪಾತ್ರ ನನಗೆ ಒಂದು ಸವಾಲಾಗಿತ್ತು. ಇದೀಗ ಜೀ5ನಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿರುವುದು ನನಗೆ ಸಂತಸ ತಂದಿದೆ. ಪ್ರೇಕ್ಷಕರ ಅಭಿಪ್ರಾಯಕ್ಕಾಗಿ ಕಾಯುತ್ತಿದ್ದೇನೆ’ ಎಂದಿದ್ದಾರೆ.

ಸಿನಿಮಾದ ಬಗ್ಗೆ ಮತ್ತು ತಮ್ಮ ಪಾತ್ರದ ಕುರಿತು ಮಾತನಾಡಿದ ನಟಿ ರಚಿತಾ ರಾಮ್, ‘ಚಿತ್ರವು ಸರಳವಾಗಿದ್ದರೂ, ಕಥೆಯಲ್ಲಿರುವ ಭಾವನೆಗಳ ಆಳ ದೊಡ್ಡದಾಗಿದೆ. ಅಗಾಧವಾದ ಭಾವನೆಗಳನ್ನು ವ್ಯಕ್ತಪಡಿಸುವ ಕಥೆಯೇ ಲ್ಯಾಂಡ್​ಲಾರ್ಡ್. ಇದರಲ್ಲಿ ನನ್ನದು ಬಹಳ ವಿಶೇಷವಾದ ಪಾತ್ರ’ ಎಂದಿದ್ದಾರೆ. ಉಮಾಶ್ರೀ ಅವರ ಪಾತ್ರ ಕೂಡ ಗಮನ ಸೆಳೆಯುಂತಿದೆ.

ಇದನ್ನೂ ಓದಿ: Landlord Movie Review: ಅಸಮಾನತೆ, ಅನ್ಯಾಯದ ಇತಿಹಾಸ ಕೆದಕಿದ ‘ಲ್ಯಾಂಡ್​ಲಾರ್ಡ್’

‘ಲ್ಯಾಂಡ್​ಲಾರ್ಡ್​’ ಸಿನಿಮಾದಲ್ಲಿನ ಎಲ್ಲ ಕಲಾವಿದರ ನಟನೆಗೆ ಚಿತ್ರಮಂದಿರದಲ್ಲಿ ಜನರು ಭೇಷ್ ಎಂದಿದ್ದರು. ವಿಲನ್ ಪಾತ್ರದಲ್ಲಿ ಅಬ್ಬರಿಸಿದ ರಾಜ್ ಬಿ. ಶೆಟ್ಟಿ ಅವರು ಚಪ್ಪಾಳೆ ಗಿಟ್ಟಿಸಿದರು. ಈಗ ಒಟಿಟಿಯಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಯುವ ಸಮಯ ಸಮೀಪಿಸಿದೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಫ್ರೀ ಬಸ್​​ ಗದ್ದಲದಿಂದ ಬೇಸತ್ತಿರುವ ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಗುಡ್​​ನ್ಯೂಸ್

ಬೆಂಗಳೂರು, (ಮಾರ್ಚ್ 13): ಮಹಿಳೆಯರಿಗೆ (Women)  ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ  (shakthi yojana)ಜಾರಿ ಬಂದಾಗಿನಿಂದ ಬಸ್ (Bus)​ ಓಡಾಟ ಕಡಿಮೆಯಾಗಿದೆ ಎನ್ನುವ ಆರೋಪಗಳು ಕೇಳಿಬಂದಿವೆ. ಇದರ ಬೆನ್ನಲ್ಲೇ ಹೊಸ ಬಸ್ಸುಗಳು ರಸ್ತೆಗಿಳಿದಿವೆ. ಹೌದು.. ಕೆಎಸ್‌ಆರ್‌ಟಿಸಿ 45 ಸಾಮಾನ್ಯ ಹಾಗೂ 70 ಪಲ್ಲಕ್ಕಿ ಸ್ಲೀಪರ್ ಬಸ್‌ಗಳು ಸೇರಿದಂತೆ ಒಟ್ಟು 115 ನೂತನ ಬಸ್‌ಗಳಿಗೆ ಇಂದು (ಮಾರ್ಚ್ 13) ಸಚಿವ ರಾಮಲಿಂಗರೆಡ್ಡಿ ಹಸಿರು ನಿಶಾನೆ ತೋರಿಸಿದ್ದು, ಈ ಹೊಸ ಬಸ್‌ಗಳು ಬೆಂಗಳೂರಿನಿಂದ ರಾಜ್ಯದ ಹಲವು ಪ್ರಮುಖ ಮಾರ್ಗಗಳಿಗೆ ಸಂಚಾರ ನಡೆಸಲಿವೆ.

ಒಟ್ಟು 115 ಬಸ್​ಗಳು ಪೈಕಿ 70 ಬಸ್​ಗಳು ಪ್ರೀಮಿಯಂ ಪಲ್ಲಕ್ಕಿ ಬಸ್​ಗಳು ಹಾಗೂ 45 ಬಸ್​ಗಳು ನಾರ್ಮಲ್​ ಬಸ್​ಗಳಾಗಿದ್ವು.ಈ ಪಲ್ಲಕ್ಕಿ ಬಸ್​ಗಳ ವಿಶೇಷತೆ ಏನಂದ್ರೆ, ಈ ಬಸ್​ಗಳಲ್ಲಿ ಹೈಟೆಕ್​ ಸೀಟಿನ ವ್ಯವಸ್ಥೆ ಸೇರಿದಂತೆ ಅನೇಕ ಅನುಕೂಲಗಳಿವೆ.  ಪಲ್ಲಕ್ಕಿ ಬಸ್​ಗಳಲ್ಲಿ ಹೆಣ್ಣು ಮಕ್ಕಳೂ ಸಹ ಹಣ ಕೊಟ್ಟು ಪ್ರಯಾಣ ಮಾಡಬೇಕು. ಇನ್ನು 45 ನಾರ್ಮಲ್​ ಬಸ್​ಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಸಂಚಾರ ಮಾಡಬಹುದು.

ಇದನ್ನೂ ಓದಿ: ಕೊಟ್ಟ ಭರವಸೆ ಈಡೇರಿಸಿದ ಡಿಕೆಶಿ: ರಾಮನಗರ ಜನರ ಬಹುದಿನಗಳ ಕನಸು ನನಸು

45 ಸಾಮಾನ್ಯ ಬಸ್‌ಗಳು, 70 ಪಲ್ಲಕ್ಕಿ ಬಸ್‌ಗಳು

ಈ ಹಂತದಲ್ಲಿ ಒಟ್ಟು 115 ಬಸ್‌ಗಳನ್ನು ಸೇವೆಗೆ ಸೇರಿಸಲಾಗಿದೆ, ಅದರಲ್ಲಿ 45 ಸಾಮಾನ್ಯ ಬಸ್‌ಗಳು ಮತ್ತು 70 ಪಲ್ಲಕ್ಕಿ (ಸ್ಲೀಪರ್) ಬಸ್‌ಗಳು ಸೇರಿವೆ. ವಿಶೇಷವಾಗಿ ದೀರ್ಘ ದೂರ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಆಧುನಿಕ ಸೌಲಭ್ಯಗಳೊಂದಿಗೆ ಈ ಪಲ್ಲಕ್ಕಿ ಬಸ್‌ಗಳನ್ನು ವಿನ್ಯಾಸಗೊಳಿಸಲಾಗಿದೆ.

ಈ ನೂತನ ಸ್ಲೀಪರ್ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ವಿನ್ಯಾಸ ಮಾಡಲಾಗಿದೆ. ಇವುಗಳಲ್ಲಿ ಒಟ್ಟು ಐದು ಬಾಗಿಲುಗಳನ್ನು (ಡೋರ್‌ಗಳು) ಅಳವಡಿಸಲಾಗಿದೆ. ಇದಕ್ಕೂ ಮೊದಲು ಸಾಮಾನ್ಯವಾಗಿ ಎರಡು ಬಾಗಿಲುಗಳು ಮತ್ತು ಒಂದು ಎಮರ್ಜೆನ್ಸಿ ಎಕ್ಸಿಟ್ ಬಾಗಿಲು ಮಾತ್ರ ಇದ್ದವು. ಆದರೆ ಹೊಸ ಮಾದರಿಯ ಸ್ಲೀಪರ್ ಬಸ್‌ಗಳಲ್ಲಿ ಬಸ್‌ನ ಮೇಲ್ಭಾಗದಲ್ಲಿಯೂ ಎರಡು ಹೆಚ್ಚುವರಿ ಬಾಗಿಲುಗಳನ್ನು ಅಳವಡಿಸಲಾಗಿದ್ದು, ತುರ್ತು ಪರಿಸ್ಥಿತಿಯಲ್ಲಿ ಪ್ರಯಾಣಿಕರು ಸುರಕ್ಷಿತವಾಗಿ ಹೊರಬರಲು ಈ ವ್ಯವಸ್ಥೆ ಸಹಾಯಕವಾಗಲಿದೆ.

ಹೊಸ ಬಸ್‌ಗಳು ಎಲ್ಲಿಂದ ಎಲ್ಲಿಗೆ ಸಂಚಾರ?

ಹೊಸ ಪಲ್ಲಕ್ಕಿ ಸ್ಲೀಪರ್ ಬಸ್‌ಗಳನ್ನು ರಾಜ್ಯದ ಹಾಗೂ ಹೊರರಾಜ್ಯಗಳ ಪ್ರಮುಖ ಧಾರ್ಮಿಕ ಮತ್ತು ವಾಣಿಜ್ಯ ಕೇಂದ್ರಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಸಂಚಾರಕ್ಕೆ ಬಿಡಲಾಗಿದೆ. ಪಲ್ಲಕ್ಕಿ ನಾನ್‌ ಎಸಿ ಬಸ್‌ಗಳು ಉಡುಪಿ, ಮಂಗಳೂರು, ಮೈಸೂರು, ಧರ್ಮಸ್ಥಳ, ಶೃಂಗೇರಿ, ಹೊರನಾಡು, ಆಗುಂಬೆ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಂಪಿ, ರಾಯಚೂರು, ಜಮಖಂಡಿ, ಪುತ್ತೂರು, ಕಾಣಿಯೂರು, ಕುಕ್ಕೆ ಸುಬ್ರಹ್ಮಣ್ಯ, ಕಾಸರಗೋಡು, ಮಂತ್ರಾಲಯ, ತಿರುಚಿ, ಕೊಜಿಕ್ಕೋಡ್, ಮುನ್ನಾರ್, ಪಾಂಡಿಚೇರಿ, ತಂಜಾವೂರು, ಕೊಟ್ಟಾಯಂ, ಹೈದಾರಬಾದ್, ಚೆನ್ನೈ, ಪಣಜಿ, ಮಧುರೈ, ಕುಂಭಕೋಣಂ, ಎರ್ನಾಕುಲಂಗೆ ಸಂಚರಿಸುತ್ತವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link