All posts by nagaraj11081993

ಮನೆ ನಿರ್ಮಿಸದೇ 23 ಕೋಟಿ ರೂ.ಗುಳುಂ:ಕೊಳಚೆ ನಿರ್ಮೂಲನಾ ಮಂಡಳಿ ಮೇಲೆ ಲೋಕಾಯುಕ್ತ ದಾಳಿ – Kannada News | Lokayukta raids On Belagavi Slum Development Board office over money scam

ಬೆಳಗಾವಿ/ಬೆಂಗಳೂರು, (ಮೇ 19): ಕೋಟ್ಯಾಂತರ ರೂಪಾಯಿ ಅನುದಾನ ದುರ್ಬಳಕೆ ಆರೋಪ ಮೇಲೆ ಬೆಳಗಾವಿ (Belagavi) ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯಕ್ತ (Lokayukta) ದಾಳಿಯಾಗಿದೆ. 600 ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿ ಕೊಡದೇ 33 ಕೋಟಿ ರೂ. ಅನುದಾನದಲ್ಲಿ 23 ಕೋಟಿ ರೂ.ಲೂಟಿ ಮಾಡಿದ್ದಾರೆ ಎನ್ನುವ ದೂರು ದಾಖಲಾಗಿದ್ದು, ಈ ದೂರಿನ ಮೇರೆಗೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ಇಂದು (ಮೇ 19) ಬೆಂಗಳೂರು ನಗರ, ಧಾರವಾಡ, ರಾಮದುರ್ಗ, ವಿಜಯಪುರ, ಹುಬ್ಬಳ್ಳಿ ಸೇರಿದಂತೆ ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗಳಿಗೆ ಸೇರಿದ 8 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ದಾಳಿ ವೇಳೆ ಕೋಟ್ಯಂತರ ರೂ. ಮೌಲ್ಯದ ಬಿಲ್​​​ಗಳು ಸೇರಿ ಮಹತ್ವದ ದಾಖಲೆಗಳನ್ನ ಜಪ್ತಿ ಮಾಡಿದ್ದಾರೆ.

ಮುಖ್ಯಾಂಶ

  • ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾ ದಾಳಿ
  • ಬೆಳಗಾವಿ ಸೇರಿದಂತೆ 8 ಕಡೆ ಲೋಕಾಯುಕ್ತ ಪೊಲೀಸರಿಂದ ದಾಳಿ
  • ಕೋಟ್ಯಂತರ ರೂ. ಮೌಲ್ಯದ ಬಿಲ್​ಗಳು, ಮಹತ್ವದ ದಾಖಲೆ ಜಪ್ತಿ
  • ಬೆಳಗಾವಿ ಲೋಕಾಯುಕ್ತ ಕಚೇರಿಯಲ್ಲಿ ದಾಖಲಾಗಿದ್ದ ವಂಚನೆ ಕೇಸ್
  • ಸರ್ಕಾರದ ಹಣ ದುರುಪಯೋಗ ಕೇಸ್​ನಡಿ ದೂರು ದಾಖಲಾಗಿತ್ತು

ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನ ದಡಿ 600 ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡದೇ 33 ಕೋಟಿ ರೂಪಾಯಿ ಅನುದಾನದಲ್ಲಿ 23 ಕೋಟಿ ರೂ. ಲೂಟಿ ಮಾಡಿದ್ದಾರೆ ಎಂದು ಕೊಳಚೆ ನಿರ್ಮೂಲನಾ ಅಭಿವೃದ್ಧಿ ಇಲಾಖೆ ನಿವೃತ್ತ ಎಇಇ ಶಂಭುಲಿಂಗಪ್ಪ, ಎಕ್ಸಿಕ್ಯೂಟಿವ್ ಇಂಜಿನಿಯರ್ ಲಮಾಣಿ, NTCC ಮ್ಯಾನೇಜರ್ ಎನ್.ಪ್ರಸಾದ್, ವಿಜಯಪುರ ಗುತ್ತಿಗೆದಾರ ಗಿರಮಲಪ್ಪ ಜೋಗೂರ ವಿರುದ್ಧ  ಸರ್ಕಾರದ ಹಣ ದುರುಪಯೋಗ ಕೇಸ್​ನಡಿ ಕೇಸ್ ದಾಖಲಾಗಿದ್ದು, ಈ ದೂರಿನ ಅನ್ವಯ ಬೆಳಗಾವಿ ಲೋಕಾಯುಕ್ತ ಎಸ್ಪಿ ಪ್ರಶನ್ ದೇಸಾಯಿ ನೇತೃತ್ವದಲ್ಲಿ ದಾಳಿ ನಡೆದಿದೆ.

ಇದನ್ನೂ ಓದಿ: ಕೋಟ್ಯಂತರ ವಂಚನೆ ಕೇಸ್​: ಖಾತೆಯಲ್ಲಿ ನೂರಾರು ಕೋಟಿ ಪತ್ತೆಯಾದ್ರೂ ಬ್ಯಾಂಕ್ ಗಪ್‌ಚುಪ್; ಶಿವಾನಂದನೊಂದಿಗೆ ಅಧಿಕಾರಿಗಳು ಶಾಮೀಲು?

ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಕಚೇರಿ ಮತ್ತು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಪತ್ತೆಯಾದ 23 ಕೋಟಿ ರೂಪಾಯಿ ಅನಧಿಕೃತ ಬಿಲ್ ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸಿದ್ದಾರೆ.

50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಸ್ಕಾಂ AEE

ಬೆಂಗಳೂರು: ಇನ್ನು ಬೆಂಗಳೂರಿನಲ್ಲಿ ಬೆಸ್ಕಾಂ (BESCOM) ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾತ್ಕಾಲಿಕವಾಗಿ ಮೀಟರ್​ಗೆ 25 ಕಿಲೋ ವ್ಯಾಟ್ ವಿದ್ಯುತ್ ಪೂರೈಕೆ ಮಾಡಲು ಲಂಚಕ್ಕೆ (Bribe) ಬೇಡಿಕೆ ಇಟ್ಟಿದ್ದ AEE ಮನೋಜ್​ ಕುಮಾರ್​​ ಲಾಕ್​ ಆಗಿದ್ದಾರೆ. ಮನೋಜ್ ಜೊತೆಗೆ ಕಂಠರಾಜು ಎಂಬ ವಿದ್ಯುತ್ ಗುತ್ತಿಗೆದಾರ ಕೂಡ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರಿನ ಜೆಪಿ ನಗರದ ಬೆಸ್ಕಾಂ ಕಚೇರಿಯಲ್ಲಿ AEE ಆಗಿರುವ ಮನೋಜ್ ಕುಮಾರ್​, ತಾತ್ಕಾಲಿಕವಾಗಿ ಮೀಟರ್‌ಗೆ 25 ಕಿಲೋ ವ್ಯಾಟ್ ವಿದ್ಯುತ್ ಪೂರೈಕೆ ಮಾಡಲು 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣವನ್ನು ವಿದ್ಯುತ್ ಗುತ್ತಿಗೆದಾರ ಕಂಠರಾಜುಗೆ ನೀಡಲು AEE ಮನೋಜ್ ಕುಮಾರ್​ ಸೂಚನೆ ನೀಡಿದ್ದರು. ಈ ಬಗ್ಗೆ ದೂರುದಾರ ರಘುರಾಜ್‌ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್​ಪಿ ಶಿವಪ್ರಕಾಶ್​​ ದೇವರಾಜ್​​ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, AEE ಮನೋಜ್ ಕುಮಾರ್ ಮತ್ತು ವಿದ್ಯುತ್ ಗುತ್ತಿಗೆದಾರ ಕಂಠರಾಜು 50 ಸಾವಿರ ಹಣ ಪಡೆಯುವಾಗ‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸದ್ಯ ಇಬ್ಬರನ್ನು ಬಂಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

NEET ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಿ, ಯಾವುದೇ ರಾಜಿ ಬೇಡ; ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸೂಚನೆ – Kannada News | Union Education Minister Dharmendra Pradhan Chairs High Level Meeting on NEET UG Re Exam

ನವದೆಹಲಿ, ಮೇ 19: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ (NEET Paper Leak Case) ಸಿಬಿಐ ತನಿಖೆಯ ಬಳಿಕ ಈಗಾಗಲೇ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಕೋಚಿಂಗ್ ಕ್ಲಾಸ್​​ನಲ್ಲಿಯೇ ಪ್ರಶ್ನೆ ಪೇಪರ್​ಗಳನ್ನು ಹಂಚಲಾಗಿತ್ತು ಎಂಬ ವಿಷಯ ಹೊರಬಿದ್ದಿದೆ. ಇದರ ನಡುವೆ ಕೇಂದ್ರ ಸರ್ಕಾರವು ನೀಟ್ ಮರು ಪರೀಕ್ಷೆಯ ಬಗ್ಗೆ ಗಮನಹರಿಸಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಪರಿಶೀಲನಾ ಸಭೆಯಲ್ಲಿ ಬಿಗಿ ಭದ್ರತೆ, ಸಿಸಿಟಿವಿ ಕಣ್ಗಾವಲು ಮತ್ತು ಪಾರದರ್ಶಕವಾಗಿ ಪರೀಕ್ಷೆಯ ನಿರ್ವಹಣೆಯ ಕುರಿತು ಪ್ರಮುಖ ಸೂಚನೆಗಳನ್ನು ನೀಡಲಾಯಿತು.

ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಲ್ಲಿ ಆತ್ಮವಿಶ್ವಾಸ ಬೆಳೆಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಿಬಿಐ ತನಿಖೆಯಲ್ಲಿ ಆಘಾತಕಾರಿ ವಿಷಯಗಳು ಬೆಳಕಿಗೆ ಬರುತ್ತಿವೆ. ನಾಸಿಕ್ ಕೇಂದ್ರಿತವಾಗಿರುವ ಈ ಜಾಲವನ್ನು ಸಿಬಿಐ ಅಧಿಕಾರಿಗಳು ಬಯಲು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮರು-ನೀಟ್ ಪರೀಕ್ಷೆಯ ಸಿದ್ಧತೆಗಳತ್ತ ಗಮನಹರಿಸಿದೆ. ಈ ಬಾರಿ ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ನಡೆಸಲು ಕ್ರಮ ಕೈಗೊಂಡಿದೆ. ಮುಂಬರುವ ನೀಟ್ (ಯುಜಿ) ಮರು-ಪರೀಕ್ಷೆಯ ಸಿದ್ಧತೆಗಳನ್ನು ಪರಿಶೀಲಿಸಲು ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಯಿತು.

ಇದನ್ನೂ ಓದಿ: ವೃತ್ತಿಯಲ್ಲಿ ಬ್ಯೂಟಿಷಿಯನ್, ಗಂಡ ದಂತವೈದ್ಯ; ನೀಟ್ ಹಗರಣದಲ್ಲಿ ಸಿಕ್ಕಿಬಿದ್ದ ಮನಿಷಾ ಬಗ್ಗೆ ನಿಮಗೆಷ್ಟು ಗೊತ್ತು?

ನೀಟ್ ಮರು ಪರೀಕ್ಷೆಯನ್ನು ಸುರಕ್ಷಿತವಾಗಿ, ಯಾವುದೇ ಅಡೆತಡೆಗಳಿಲ್ಲದೆ ಮತ್ತು ಕಟ್ಟುನಿಟ್ಟಾದ ಭದ್ರತಾ ಶಿಷ್ಟಾಚಾರಗಳ ನಡುವೆ ಶಿಸ್ತುಬದ್ಧವಾಗಿ ನಡೆಸಬೇಕು ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಆದೇಶಿಸಿದ್ದಾರೆ. ಪರೀಕ್ಷಾ ವ್ಯವಸ್ಥೆಗಳನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡಲು ಮತ್ತು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು ರಾಜ್ಯಗಳಾದ್ಯಂತ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಮನ್ವಯ ಸಭೆಗಳನ್ನು ನಡೆಸಲು ಅವರು ಆದೇಶ ನೀಡಿದ್ದಾರೆ.

ಇದನ್ನೂ ಓದಿ: ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ NTAನಲ್ಲಿ ಮಹತ್ವದ ಬದಲಾವಣೆ

ಪರೀಕ್ಷಾ ಕೇಂದ್ರಗಳಲ್ಲಿ ಭದ್ರತೆಯ ಬಗ್ಗೆ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಅವರು ಒತ್ತಿ ಹೇಳಿದರು. ಇದಲ್ಲದೆ, ಸಾರಿಗೆ, ಕುಡಿಯುವ ನೀರು ಮತ್ತು ಇತರ ಅಗತ್ಯ ಸೌಲಭ್ಯಗಳು ಸೇರಿದಂತೆ ವಿದ್ಯಾರ್ಥಿಗಳಿಗೆ ಸಾಕಷ್ಟು ವ್ಯವಸ್ಥೆಗಳನ್ನು ಮಾಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಧರ್ಮೇಂದ್ರ ಪ್ರಧಾನ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಭದ್ರತೆ ಮತ್ತು ಸೌಲಭ್ಯಗಳ ಬಗ್ಗೆಯೂ ರಾಜಿ ಮಾಡಿಕೊಳ್ಳದಂತೆ ಅವರು ಸೂಚನೆ ನೀಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚೀನಾದ ಡಾರ್ಕ್ ಫ್ಯಾಕ್ಟರಿಗಳು… ಮನುಷ್ಯರು, ಬೆಳಕು ಇಲ್ಲದ ಕಾರ್ಖಾನೆಗಳು, ರೋಬೋಗಳದ್ದೇ ಆಟ; ಭವಿಷ್ಯವೇ ಪ್ರತ್ಯಕ್ಷ – Kannada News | China’s dark factories, where no humans work, production happens non stop, here is the future

ಡಾರ್ಕ್ ಫ್ಯಾಕ್ಟರಿImage Credit source: AI/Mediaforge/TV9

ಒಂದು ಕಾರ್ಖಾನೆ. ಲೈಟ್ ಇಲ್ಲ, ಮನುಷ್ಯರ ಸುಳಿವೇ ಇಲ್ಲ ಎಂದರೆ ಅದ್ಯಾವುದೋ ಪಾಳುಬಿದ್ದ ಹಾಂಟೆಡ್ ಪ್ಲೇಸ್ ಎಂದು ನೀವು ಭಾವಿಸಬಹುದು. ಆದರೆ, ಇದರಲ್ಲಿ ಮನುಷ್ಯರ ಬದಲು ರೋಬೋಗಳಿದ್ದರೆ? ಹಾಲಿವುಡ್​ನ ಸ್ಕೈಫೈ ಸಿನಿಮಾಗಳನ್ನು ನೋಡುವವರ ಕಲ್ಪನೆಗಳಿಗೂ ಮೀರಿದಂತಹ ದೃಶ್ಯಗಳನ್ನು ಈ ಕಾರ್ಖಾನೆಯಲ್ಲಿ ಕಾಣಬಹುದು. ಅದುವೇ ಚೀನಾದ ಡಾರ್ಕ್ ಫ್ಯಾಕ್ಟರಿ. ಒಂದಲ್ಲ, ಎರಡಲ್ಲ, ಇಂಥ ಹಲವು ಡಾರ್ಕ್ ಫ್ಯಾಕ್ಟರಿಗಳು ಚೀನಾದಲ್ಲಿವೆ. ಚೀನಾದ ತಂತ್ರಜ್ಞಾನ ಕ್ರಾಂತಿಯ ಅತ್ಯಂತ ರೋಮಾಂಚಕ ಮತ್ತು ಆಘಾತಕಾರಿ ಮುಖವೇ ಈ ‘ಡಾರ್ಕ್ ಫ್ಯಾಕ್ಟರಿಗಳು’ (Dark Factories) ಅಥವಾ ‘ಲೈಟ್ಸ್-ಔಟ್ ಫ್ಯಾಕ್ಟರಿಗಳು’ (Lights-out Factories). ಹೆಸರೇ ಸೂಚಿಸುವಂತೆ, ಈ ಕಾರ್ಖಾನೆಗಳಲ್ಲಿ ಸಂಪೂರ್ಣ ಕತ್ತಲಿರುತ್ತದೆ! ಅಲ್ಲಿ ಕೆಲಸ ಮಾಡಲು ಯಾವುದೇ ಮನುಷ್ಯರಿಲ್ಲದ ಕಾರಣ, ಲೈಟ್‌ಗಳು ಅಥವಾ ಫ್ಯಾನ್‌ಗಳ ಅಗತ್ಯವೇ ಇರುವುದಿಲ್ಲ. ಕೇವಲ ಕೃತಕ ಬುದ್ಧಿಮತ್ತೆ (AI) ಮತ್ತು ರೋಬೋಟ್‌ಗಳು ಮಾತ್ರ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತವೆ.

ಏನಿದು ‘ಡಾರ್ಕ್ ಫ್ಯಾಕ್ಟರಿ’?

ಇದು ಸಂಪೂರ್ಣವಾಗಿ ಸ್ವಯಂಚಾಲಿತ (Fully Automated) ಉತ್ಪಾದನಾ ಘಟಕವಾಗಿದೆ. ಇಲ್ಲಿ ಕಚ್ಚಾ ವಸ್ತುಗಳನ್ನು ಒಳಗೆ ಕಳುಹಿಸುವುದರಿಂದ ಹಿಡಿದು, ಸಿದ್ಧವಾದ ವಸ್ತುವನ್ನು ಪ್ಯಾಕ್ ಮಾಡಿ ಹೊರತರುವವರೆಗಿನ ಎಲ್ಲಾ ಪ್ರಕ್ರಿಯೆಗಳನ್ನು ಯಂತ್ರಗಳೇ ಮಾಡುತ್ತವೆ.

ಯಂತ್ರಗಳಿಗೆ ಕಣ್ಣುಗಳ ಅಗತ್ಯವಿಲ್ಲ, ಅವು ಇನ್ಫ್ರಾರೆಡ್ (Infrared) ಕ್ಯಾಮೆರಾಗಳು ಮತ್ತು ಸೆನ್ಸಾರ್‌ಗಳ ಮೂಲಕ ಕಾರ್ಯನಿರ್ವಹಿಸುತ್ತವೆ. ಹಾಗಾಗಿ ಇಡೀ ಕಾರ್ಖಾನೆಯಲ್ಲಿ ಲೈಟ್ ಆಫ್ ಮಾಡಲಾಗಿರುತ್ತದೆ.

ಇದನ್ನೂ ಓದಿ: ಭಾರತದಲ್ಲಿ ಶೀತವಾದರೆ ಅಮೆರಿಕದಲ್ಲಿ ನೆಗಡಿ..! ಭಾರತದ ಎಲ್​ಪಿಜಿ ಬಿಕ್ಕಟ್ಟಿನಿಂದ ಕ್ಯಾಲಿಫೋರ್ನಿಯಾ ತತ್ತರ; ಹೇಗೆ?

ಡಾರ್ಕ್ ಫ್ಯಾಕ್ಟರಿಗಳು ಹೇಗೆ ಕೆಲಸ ಮಾಡುತ್ತವೆ?

ಇಡೀ ಫ್ಯಾಕ್ಟರಿಯನ್ನು ಒಂದು ಕೇಂದ್ರೀಕೃತ AI ಸಾಫ್ಟ್‌ವೇರ್ ನಿಯಂತ್ರಿಸುತ್ತದೆ. ಯಾವ ರೋಬೋಟ್ ಯಾವಾಗ, ಏನು ಕೆಲಸ ಮಾಡಬೇಕು ಎಂಬುದನ್ನು ಈ ಎಐ ನಿರ್ಧರಿಸುತ್ತದೆ. ಇವು ಮನುಷ್ಯರ ಕೈಗಳಿಗಿಂತ ಹತ್ತು ಪಟ್ಟು ವೇಗವಾಗಿ ಮತ್ತು ನಿಖರವಾಗಿ ಬಿಡಿಭಾಗಗಳನ್ನು ಜೋಡಿಸುತ್ತವೆ. ಕಾರ್ಖಾನೆಯ ಒಳಗೆ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಮಗ್ರಿಗಳನ್ನು ಸಾಗಿಸಲು ಚಾಲಕರಿಲ್ಲದ ಸಣ್ಣ ರೋಬೋಟ್ ಗಾಡಿಗಳನ್ನು ಬಳಸಲಾಗುತ್ತದೆ.

ಶವೋಮಿ ಸ್ಮಾರ್ಟ್ ಫ್ಯಾಕ್ಟರಿಯಲ್ಲಿ ಸೆಕೆಂಡ್​ಗೆ 1 ಫೋನ್ ತಯಾರಿಕೆ

ಚೀನಾದ ಪ್ರಮುಖ ಸ್ಮಾರ್ಟ್‌ಫೋನ್ ಕಂಪನಿಯಾದ ಶವೋಮಿಯ ಬೀಜಿಂಗ್‌ನಲ್ಲಿರುವ ‘ಚಾಂಗ್‌ಪಿಂಗ್’ ಸ್ಮಾರ್ಟ್ ಫ್ಯಾಕ್ಟರಿಯಲ್ಲಿ ವರ್ಷಕ್ಕೆ 1 ಕೋಟಿ ಫ್ಲ್ಯಾಗ್‌ಶಿಪ್ ಫೋನ್‌ಗಳನ್ನು ಉತ್ಪಾದಿಸಲಾಗುತ್ತದೆ. ಇಲ್ಲಿ ದಿನದ 24 ಗಂಟೆಯೂ ಮನುಷ್ಯರಿಲ್ಲದೆ ಕೆಲಸ ನಡೆಯುತ್ತದೆ. ವರದಿಗಳ ಪ್ರಕಾರ, ಈ ಫ್ಯಾಕ್ಟರಿಯಲ್ಲಿ ಪ್ರತಿ ಸೆಕೆಂಡಿಗೆ ಒಂದು ಸ್ಮಾರ್ಟ್‌ಫೋನ್ ತಯಾರಾಗುತ್ತದೆ.

ಆಪಲ್ ಫೋನ್‌ಗಳನ್ನು ತಯಾರಿಸುವ ಫಾಕ್ಸ್​ಕಾನ್ ಸಂಸ್ಥೆಯು (Foxconn) ಚೀನಾದ ತನ್ನ ಕುನ್ಶಾನ್ ಪ್ಲಾಂಟ್‌ನಲ್ಲಿ ರೋಬೋಟ್‌ಗಳನ್ನು ಅಳವಡಿಸಿದೆ. ಒಂದೇ ಬಾರಿಗೆ ಸುಮಾರು 60,000 ಕಾರ್ಮಿಕರನ್ನು ಕೆಲಸದಿಂದ ಮುಕ್ತಗೊಳಿಸಿದೆ.

ಚೀನಾದ ಪ್ರಸಿದ್ಧ ಇವಿ ಕಾರು ಸಂಸ್ಥೆಗಳಾದ BYD ಮತ್ತು Zeekr ಇಂತಹ ಡಾರ್ಕ್ ಫ್ಯಾಕ್ಟರಿಗಳ ಮೂಲಕ ದಿನಕ್ಕೆ ಸಾವಿರಾರು ಕಾರುಗಳನ್ನು ಸಿದ್ಧಪಡಿಸುತ್ತಿವೆ. ಇತ್ತೀಚಿನ ವರದಿಗಳ ಪ್ರಕಾರ, ಚೀನಾ ತನ್ನ ಅತ್ಯಾಧುನಿಕ J-20 ಸ್ಟೆಲ್ತ್ ಯುದ್ಧ ವಿಮಾನಗಳ ಬಿಡಿಭಾಗಗಳನ್ನು ತಯಾರಿಸಲು ಕೂಡ ಇಂತಹ ಎಐ ಚಾಲಿತ ಡಾರ್ಕ್ ಫ್ಯಾಕ್ಟರಿಯನ್ನು ಬಳಸುತ್ತಿದ್ದು, ಇದು ಉತ್ಪಾದನಾ ಸಾಮರ್ಥ್ಯವನ್ನು ದುಪ್ಪಟ್ಟುಗೊಳಿಸಿದೆ.

ಈ ತಂತ್ರಜ್ಞಾನದ ಲಾಭಗಳೇನು?

ಮನುಷ್ಯರಿಗೆ ಕೆಲಸ ಸಾಮರ್ಥ್ಯ ಸೀಮಿತವಾಗಿರುತ್ತದೆ. ಆದರೆ, ರೋಬೋಗಳು ಯಂತ್ರಗಳಾದ್ದರಿಂದ ಆಯಾಸ ಎಂಬುದಿರೋದಿಲ್ಲ. 24×7 ನಿರಂತರ ಕೆಲಸ ಮಾಡುತ್ತಿರುತ್ತವೆ. ರಜೆ, ಶಿಫ್ಟ್ ಇತ್ಯಾದಿ ತಡೆಗಳಿಲ್ಲ. ದಿನಕ್ಕೆ 24 ಗಂಟೆ, ವರ್ಷಕ್ಕೆ 365 ದಿನವೂ ರೋಬೋಗಳಿಗೆ ಕೆಲಸವೋ ಕೆಲಸ.

ಇದನ್ನೂ ಓದಿ: ಮೈಕ್ರೋಸಾಫ್ಟ್ ಎಐ ಮುಖ್ಯಸ್ಥರ ಎಚ್ಚರಿಕೆ; ಇನ್ನು, 12-18 ತಿಂಗಳಲ್ಲಿ ಇನ್ನಿಲ್ಲವಾಗುತ್ತವಂತೆ ವೈಟ್ ಕಾಲರ್ ಜಾಬ್​ಗಳು

ಲೈಟ್‌ಗಳು ಮತ್ತು ಎಸಿ (Air Conditioning) ಅಗತ್ಯವಿಲ್ಲದಿರುವುದರಿಂದ ಭಾರಿ ಪ್ರಮಾಣದ ವಿದ್ಯುತ್ ಉಳಿತಾಯವಾಗುತ್ತದೆ. ಮನುಷ್ಯರಿಗೆ ಕೊಡುವ ಸಂಬಳ ಮತ್ತು ಇತರೆ ಸೌಲಭ್ಯಗಳ ಖರ್ಚು ಇರುವುದಿಲ್ಲ.

ಮನುಷ್ಯರು ಮಾಡುವಂತೆ ರೋಬೋಟ್‌ಗಳು ಅಳತೆಯಲ್ಲಿ ಅಥವಾ ಜೋಡಣೆಯಲ್ಲಿ ತಪ್ಪು ಮಾಡುವುದಿಲ್ಲ. ಹಾಗಾಗಿ ಗುಣಮಟ್ಟ ಅತ್ಯುತ್ತಮವಾಗಿರುತ್ತದೆ.

ಡಾರ್ಕ್ ಫ್ಯಾಕ್ಟರಿಗಳಿಂದ ಮನುಷ್ಯರಿಗೆ ಆತಂಕ

ಈ ತಂತ್ರಜ್ಞಾನವು ಉತ್ಪಾದನಾ ಕ್ಷೇತ್ರಕ್ಕೆ ವರದಾನವಾಗಿದ್ದರೂ, ಮಾನವ ಸಮಾಜಕ್ಕೆ ದೊಡ್ಡ ಸವಾಲಾಗಿದೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಚೀನಾದಲ್ಲಿ ಉತ್ಪಾದನಾ ವಲಯದ ಉದ್ಯೋಗಿಗಳ ಸಂಖ್ಯೆ ಗಣನೀಯವಾಗಿ ಕುಸಿದಿದೆ. ಕೇವಲ ಹತ್ತು ವರ್ಷಗಳಲ್ಲಿ ಕೋಟ್ಯಂತರ ಕಾರ್ಮಿಕರು ತಮ್ಮ ಕೆಲಸ ಕಳೆದುಕೊಂಡಿದ್ದಾರೆ.

ಜಾಗತಿಕ ಮಾರುಕಟ್ಟೆ ಸಂಶೋಧನಾ ಸಂಸ್ಥೆಗಳ ಪ್ರಕಾರ, ಮುಂಬರುವ ದಿನಗಳಲ್ಲಿ ಜಗತ್ತಿನ ಶೇ. 60 ಕ್ಕೂ ಹೆಚ್ಚು ಪ್ರಮುಖ ಉತ್ಪಾದನಾ ಕಂಪನಿಗಳು ಈ ‘ಡಾರ್ಕ್ ಫ್ಯಾಕ್ಟರಿ’ ಮಾದರಿಯನ್ನು ಅಳವಡಿಸಿಕೊಳ್ಳಲಿವೆ. ತಾಂತ್ರಿಕವಾಗಿ ಇದು ಅದ್ಭುತ ಸಾಧನೆಯಾದರೂ, “ಭವಿಷ್ಯದಲ್ಲಿ ಸಾಮಾನ್ಯ ಜನರಿಗೆ ಉದ್ಯೋಗ ಎಲ್ಲಿಂದ ಸಿಗುತ್ತದೆ?” ಎಂಬ ಯಕ್ಷಪ್ರಶ್ನೆ ಜಗತ್ತಿನ ಎದುರಿಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಪೆದ್ದಿ’ಯ ಪ್ರೀ ರಿಲೀಸ್ ಇವೆಂಟ್ ಸಿನಿಮಾದಷ್ಟೆ ಅದ್ಧೂರಿ, 150 ಕೋಟಿ ಮೌಲ್ಯದ ಸೆಟಪ್ – Kannada News | Ram Charan’s Peddi Movie event in Bhopal is very huge

ರಾಮ್ ಚರಣ್ (Ram Charan) ನಟಿಸಿ, ‘ಉಪ್ಪೆನ’ ಖ್ಯಾತಿಯ ಬುಚ್ಚಿಬಾಬು ಸಾನಾ ನಿರ್ದೇಶನ ಮಾಡಿರುವ ಅತ್ಯಂತ ನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವಿಚಾರದಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾಗಿದೆ. ನಿನ್ನೆಯಷ್ಟೆ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ದೇಶದ ಪ್ರಮುಖ ನಗರಗಳಿಗೆ ತೆರಳಿ ಚಿತ್ರತಂಡ ಪ್ರಚಾರ ಮಾಡಲಿದೆ. ಆದರೆ ಭೋಪಾಲ್ ಮತ್ತು ಹೈದರಾಬಾದ್​​ನಲ್ಲಿ ಮಾತ್ರ ಭಾರಿ ಅದ್ಧೂರಿಯಾಗಿ ಕಾರ್ಯಕ್ರಮವನ್ನು ಚಿತ್ರತಂಡ ಮಾಡಲಿದೆ. ಅದರಲ್ಲೂ ಭೂಪಾಲ್​​ನಲ್ಲಿ ಮಾಡಲಿರುವ ವಿಶೇಷ ಕಾರ್ಯಕ್ರಮಕ್ಕೆ ಸಿನಿಮಾಕ್ಕೆ ಹಾಕಿರುವಷ್ಟೆ ಬೃಹತ್ ಬಂಡವಾಳವನ್ನು ಚಿತ್ರತಂಡ ಹೂಡಿಕೆ ಮಾಡುತ್ತಿದ್ದು, ಇದು ದಾಖಲೆ ಪುಸ್ತಕ ಸೇರುವುದು ಖಾತ್ರಿ ಎನ್ನಲಾಗುತ್ತಿದೆ.

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಮೇ 23 ರಂದು ‘ಪೆದ್ದಿ’ ಮ್ಯೂಸಿಕಲ್ ನೈಟ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಭಾರತೀಯ ಚಿತ್ರರಂಗದಲ್ಲೇ ಇದು ಅತ್ಯಂತ ದೊಡ್ಡ ಮಟ್ಟದ ಪ್ರಚಾರ ಕಾರ್ಯಕ್ರಮ ಎನಿಸಿಕೊಳ್ಳಲಿದೆ. ಭೋಪಾಲ್‌ನ ಬಿಎಚ್‌ಇಎಲ್ ದಸರಾ ಮೈದಾನದಲ್ಲಿ ಸಂಜೆ 5 ಗಂಟೆಯಿಂದ ಈ ಸಂಗೀತದ ಹಬ್ಬ ಆರಂಭವಾಗಲಿದೆ. ಭಾರಿ ಸಂಖ್ಯೆಯ ಜನ ಕಾರ್ಯಕ್ರಮಕ್ಕೆ ಸೇರುವ ಜೊತೆಗೆ ಹಲವಾರು ಸಿನಿಮಾ ಸೆಲೆಬ್ರಿಟಿಗಳು ಸಹ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ.

ಭೋಪಾಲ್‌ನಲ್ಲಿ ನಡೆಯಲಿರುವ ಈ ‘ಪೆದ್ದಿ’ ಸಂಗೀತ ರಸಸಂಜೆಗಾಗಿ ಚಿತ್ರತಂಡ ಭಾರಿ ಸಿದ್ಧತೆ ಮಾಡಿಕೊಂಡಿದೆ. ಬರೋಬ್ಬರಿ 50 ಎಕರೆ ವಿಸ್ತೀರ್ಣದ ಮೈದಾನದಲ್ಲಿ ಅತ್ಯಾಧುನಿಕ ರಂಗಸಜ್ಜಿಕೆ ನಿರ್ಮಿಸಲಾಗುತ್ತಿದ್ದು, ಇಡೀ ಭಾರತೀಯ ಸಿನಿಮಾರಂಗವೇ ಬೆರಗಾಗುವಂತಹ ವಿಶ್ವದರ್ಜೆಯ ಸೌಂಡ್ ಸಿಸ್ಟಮ್ ಬಳಸಲಾಗುತ್ತಿದೆ. ಕೇವಲ ಈ ಕಾರ್ಯಕ್ರಮದ ಸೌಂಡ್ ಮತ್ತು ಸ್ಟೇಜ್ ಇನ್‌ಫ್ರಾಸ್ಟ್ರಕ್ಚರ್‌ಗಾಗಿ ಬಾಡಿಗೆ ಆಧಾರದ ಮೇಲೆ ಸುಮಾರು 150 ಕೋಟಿ ರೂಪಾಯಿ ಮೌಲ್ಯದ ತಾಂತ್ರಿಕ ಉಪಕರಣಗಳನ್ನು, ಸೌಂಡ್ ಸಿಸ್ಟಮ್ ಅನ್ನು ತರಿಸಿಕೊಳ್ಳಲಾಗುತ್ತಿದೆ. ಕಾರ್ಯಕ್ರಮದ ಒಟ್ಟು ಬಜೆಟ್ ಸರಿಸುಮಾರು 4 ರಿಂದ 5 ಕೋಟಿ ರೂಪಾಯಿ ದಾಟಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:‘ಪೆದ್ದಿ’ ಸಿನಿಮಾ ಟ್ರೈಲರ್ ನೋಡಿ ರಿಷಬ್ ಶೆಟ್ಟಿ ಹೇಳಿದ್ದು ಹೀಗೆ

‘ಪೆದ್ದಿ’ ಸಿನಿಮಾಕ್ಕೆ ಆಸ್ಕರ್ ಪ್ರಶಸ್ತಿ ವಿಜೇತ ಎಆರ್ ರೆಹಮಾನ್ ಸಂಗೀತ ನೀಡಿದ್ದು, ಮ್ಯೂಸಿಕಲ್ ನೈಟ್ ಅನ್ನು ಸಹ ಅವರೇ ನಡೆಸಿಕೊಡುತ್ತಿದ್ದಾರೆ. ರೆಹಮಾನ್ ಮತ್ತು ಅವರ ಜಗತ್ಪ್ರಸಿದ್ಧ ಗಾಯಕರ ತಂಡ ಈ ವೇದಿಕೆಯ ಮೇಲೆ ‘ಪೆದ್ದಿ’ ಸಿನಿಮಾದ ಹಾಡುಗಳ ಜೊತೆಗೆ ಇನ್ನೂ ಹಲವಾರು ಹಾಡುಗಳನ್ನು ಹಾಡಿ ರಂಜಿಸಲಿದೆ. ಹಿಂದಿ, ತೆಲುಗು, ತಮಿಳು ಭಾಷೆಗಳ ಹಾಡುಗಳನ್ನು ರೆಹಮಾನ್ ಅಂದು ಹಾಡಲಿದ್ದಾರೆ. ಇದರ ಜೊತೆಗೆ ಅದ್ಧೂರಿ ವೇದಿಕೆಯ ಮೇಲೆ ‘ಪೆದ್ದಿ’ ಹೊಸ ಹಾಡನ್ನು ಸಹ ಬಿಡುಗಡೆ ಮಾಡಲಾಗುತ್ತದೆ. ಈಗಾಗಲೇ ಸಿನಿಮಾದ ‘ಚಿಕಿರಿ’ ಸೇರಿದಂತೆ ಇನ್ನೂ ಕೆಲ ಹಾಡುಗಳು ಹಿಟ್ ಆಗಿದ್ದು, ಭೂಪಾಲ್​​ನಲ್ಲಿ ಶ್ರುತಿ ಹಾಸನ್ ಜೊತೆಗಿನ ಐಟಂ ಹಾಡನ್ನು ಬಿಡುಗಡೆ ಮಾಡಲಿದೆ ಚಿತ್ರತಂಡ.

ತೆಲುಗು ಸಿನಿಮಾಗಳಿಗೆ ಉತ್ತರ ಭಾರತದಲ್ಲಿ ಭಾರಿ ಬೇಡಿಕೆ ಇದೆ. ಹಾಗಾಗಿ ಇತ್ತೀಚೆಗೆ ತೆಲುಗು ಸಿನಿಮಾಗಳು ಉತ್ತರ ಭಾರತದಲ್ಲಿ ಹಚ್ಚಿನ ಪ್ರಚಾರ ಮಾಡುತ್ತಿವೆ. ‘ಪುಷ್ಪ 2’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಪಾಟ್ನಾನಲ್ಲಿ ನಡೆದಿತ್ತು. ಇತ್ತೀಚೆಗೆ ಬಿಡುಗಡೆ ಆದ ‘ಡಕಾಯತ್’ಸಿನಿಮಾದ ಪ್ರಚಾರ ಉತ್ತರ ಪ್ರದೇಶದ ನಗರವೊಂದರಲ್ಲಿ ನಡೆದಿತ್ತು. ಈಗ ‘ಪೆದ್ದಿ’ ಸಹ ಇದೇ ಮಾದರಿಯನ್ನೇ ಅನುಸರಿಸುತ್ತಿದೆ. ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 7:11 pm, Tue, 19 May 26

Source link

ಶರ್ಟ್‌ ಕಾಲರ್‌ನಲ್ಲಿ ಅಂಟಿರುವ ಹಠಮಾರಿ ಕಲೆಯನ್ನು ಸುಲಭವಾಗಿ ತೆಗೆದುಹಾಕಲು ಇಲ್ಲಿವೆ ಮನೆಮದ್ದು – Kannada News | Easily remove shirt collar stains with these home remedies

ಬಟ್ಟೆಗಳ ಮೇಲೆ ಅಂಟಿರುವ ಕಲೆಗಳನ್ನು (stains) ತೆಗೆದುಹಾಕುವುದು ಸುಲಭ.  ಆದರೆ ಶರ್ಟ್‌ ಕಾಲರ್‌ ಮೇಲೆ ಅಂಟಿರುವ ಹಠಮಾರಿ ಕಲೆಗಳನ್ನು ತೆಗೆದುಹಾಕುವುದು ಅಷ್ಟು ಸುಲಭವಲ್ಲ. ಕಾಲರ್ ನಿರಂತರವಾಗಿ ಕುತ್ತಿಗೆಯೊಂದಿಗೆ ಸಂಪರ್ಕದಲ್ಲಿರುವುದರಿಂದ ಬೆವರು, ಚರ್ಮದ ಎಣ್ಣೆ, ಧೂಳು ಮತ್ತು ಕೊಳೆ ಶರ್ಟ್‌ ಕಾಲರ್‌ಗೂ ಅಂಟಿಕೊಳ್ಳುತ್ತದೆ.  ಈ ಕಲೆಗಳು ಅಷ್ಟು ಸುಲಭವಾಗಿ ಹೋಗುವುದಿಲ್ಲ. ಇನ್ನೂ ಕಲೆಯನ್ನು ತೆಗೆಯುವ ಸಲುವಾಗಿ ಕಾಲರ್‌ ಅನ್ನು ತಿಕ್ಕಿ ತಿಕ್ಕಿ ಉಜ್ಜಿದರೆ ಕಾಲರ್‌ ಸವೆದು ಹೋಗುತ್ತದೆ. ಈ ಕಾರಣದಿಂದ ಬಟ್ಟೆಯೂ ಹಳೆಯದರಂತೆ ಕಾಣುತ್ತದೆ. ಹೀಗಿರುವಾಗ ಈ ಕೆಲವು ಮನೆಮದ್ದುಗಳ ಸಹಾಯದಿಂದ ಶರ್ಟ್‌ ಕಾಲರ್‌ನಲ್ಲಿ ಅಂಟಿರುವ ಕಲೆಗಳನ್ನು ಸುಲಭವಾಗಿ ತೆಗೆದುಹಾಕಬಹುದು.

ಶರ್ಟ್‌ ಕಾಲರ್‌ನಲ್ಲಿ ಅಂಟಿರುವ ಕಲೆಗಳನ್ನು ತೆಗೆದುಹಾಕಲು ಸಹಕಾರಿ ಈ ಮನೆಮದ್ದು:

ಅಡಿಗೆ ಸೋಡಾ ಮತ್ತು ನಿಂಬೆ: ಕಾಲರ್ ಮೇಲಿನ ಕಲೆಗಳನ್ನು ತೆಗೆದುಹಾಕುವಲ್ಲಿ ಅಡಿಗೆ ಸೋಡಾ ಮತ್ತು ನಿಂಬೆ ದ್ರಾವಣವು ತುಂಬಾ ಪರಿಣಾಮಕಾರಿಯಾಗಿದೆ. ಇದಕ್ಕಾಗಿ 2 ಚಮಚ ಅಡಿಗೆ ಸೋಡಾವನ್ನು ಸ್ವಲ್ಪ ನಿಂಬೆ ರಸದೊಂದಿಗೆ ಬೆರೆಸಿ ದಪ್ಪ ಪೇಸ್ಟ್ ತಯಾರಿಸಿ.  ಈ ಪೇಸ್ಟ್ ಅನ್ನು ಕಾಲರ್ ನ ಕಲೆ ಇರುವ ಜಾಗಕ್ಕೆ ಹಚ್ಚಿ ಹಳೆಯ ಟೂತ್ ಬ್ರಷ್ ಸಹಾಯದಿಂದ ನಿಧಾನವಾಗಿ ಸ್ಕ್ರಬ್ ಮಾಡಿ. 15-20 ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ಇದು ಕಾಲರ್‌ನಿಂದ ಹಠಮಾರಿ ಕಲೆಗಳನ್ನು ತೆಗೆದುಹಾಕುತ್ತವೆ.

ಬಿಳಿ ವಿನೆಗರ್ ಮತ್ತು ಡಿಟೆರ್ಜಂಟ್: ಕಾಲರ್‌ನಲ್ಲಿ ಅಂಟಿರುವ ಹಳೆಯ, ಕಪ್ಪು, ಹಳದಿ ಮತ್ತು ಮೊಂಡುತನದ ಕಲೆಗಳನ್ನು ತೆಗೆದುಹಾಕಲು ಇನ್ನೊಂದು ಸುಲಭ ಮಾರ್ಗವೆಂದರೆ ಬಿಳಿ ವಿನೆಗರ್ ಮತ್ತು ಡಿಟರ್ಜೆಂಟ್. ಕಾಲರ್‌ಗೆ ಸ್ವಲ್ಪ ಲಿಕ್ವಿಡ್ ಡಿಟೆರ್ಜಂಟ್ ಹಚ್ಚಿ, ನಂತರ ಅದರ ಮೇಲೆ 1-2 ಚಮಚ ಬಿಳಿ ವಿನೆಗರ್ ಸುರಿಯಿರಿ. ಅದನ್ನು 10-15 ನಿಮಿಷಗಳ ಕಾಲ ಹಾಗೆಯೇ ಬಿಡಿ ಮತ್ತು ನಂತರ ಬ್ರಷ್ ನಿಂದ ನಿಧಾನವಾಗಿ ಸ್ಕ್ರಬ್ ಮಾಡಿ. ಇದು ಕಲೆಗಳನ್ನು ಸುಲಭವಾಗಿ ತೆಗೆದುಹಾಕಬಹುದು.

ಡಿಶ್‌ವಾಶ್‌ ಲಿಕ್ವಿಡ್‌ ಮತ್ತು ಶಾಂಪೂ: ಒಂದು ಬಟ್ಟಲಿನಲ್ಲಿ ಸ್ವಲ್ಪ ಪ್ರಮಾಣದ ಪಾತ್ರೆ ತೊಳೆಯುವ ದ್ರವವನ್ನು ಸಮಾನ ಪ್ರಮಾಣದ ಶಾಂಪೂ ಜೊತೆ ಬೆರೆಸಿ. ಅದನ್ನು ನೇರವಾಗಿ ಶರ್ಟ್‌ನ ಕಾಲರ್‌ಗೆ ಹಚ್ಚಿ. 10 ನಿಮಿಷಗಳ ಕಾಲ ಹಾಗೆಯೇ ಬಿಡಿ, ನಂತರ ಬ್ರಷ್‌ನಿಂದ ಸ್ಕ್ರಬ್ ಮಾಡಿ, ತೊಳೆಯಿರಿ. ಇದು ಎಣ್ಣೆಯಂತಹ ಮೊಂಡುತನದ ಕಲೆಗಳನ್ನು ಸಹ ತೆಗೆದುಹಾಕುತ್ತದೆ.

ಇದನ್ನೂ ಓದಿ: ಟೊಮೆಟೊದಲ್ಲಿ ಎರಡು ವಸ್ತುಗಳನ್ನು ಬೆರೆಸಿ ಮನೆಯ ಮೂಲೆಗಳಲ್ಲಿಟ್ಟರೆ ಜಿರಳೆಗಳ ಕಾಟವೇ ಇರೋದಿಲ್ಲ

ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಿ:

ಕಾಲರ್‌ನಲ್ಲಿ ಅಂಟಿರುವ ಕಲೆಯನ್ನು ತೆಗೆಯುವಾಗ ಈ ಕೆಲವು ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದು ಮುಖ್ಯ, ಇಲ್ಲದಿದ್ದರೆ ಅದು ಬೇಗನೆ ಹರಿದು ಹೋಗಬಹುದು ಅಥವಾ ಹಾಳಾಗಬಹುದು.

  • ಬ್ರಷ್‌ನಿಂದ ಕಾಲರ್ ಅನ್ನು ಎಂದಿಗೂ ತುಂಬಾ ಗಟ್ಟಿಯಾಗಿ ಉಜ್ಜಬೇಡಿ; ಇದರಿಂದ ಬಟ್ಟೆಗೆ ಹಾನಿಯಾಗಬಹುದು.
  • ಬಣ್ಣದ ಶರ್ಟ್‌ಗಳ ಮೇಲೆ ನಿಂಬೆ ಅಥವಾ ಬ್ಲೀಚ್ ಅನ್ನು ಎಚ್ಚರಿಕೆಯಿಂದ ಬಳಸಬೇಕು.
  • ಈ ಮೇಲಿನ ಪರಿಹಾರಗಳನ್ನು ಬಳಸುವ ಮೊದಲು, ಹಳೆಯ ಉಡುಪಿನ ಮೇಲೆ ಪ್ಯಾಚ್ ಟೆಸ್ಟ್‌ ಮಾಡಲು ಮರೆಯದಿರಿ. ಬಟ್ಟೆ ಬಣ್ಣ ಮಸುಕಾದರೆ, ಅದನ್ನು ಬಳಸುವುದನ್ನು ತಪ್ಪಿಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮನೆಯಲ್ಲಿರುವ ಇಲಿಗಳಿಂದ ಹಂಟಾವೈರಸ್ ಬರುತ್ತದೆಯೇ? ಈ ಲಕ್ಷಣಕಂಡುಬಂದರೆ ನಿರ್ಲಕ್ಷ್ಯ ಮಾಡಬೇಡಿ – Kannada News | Early Hantavirus Symptoms After Rat Exposure: When To Seek Medical Help

ಪ್ರಪಂಚದ ಹಲವೆಡೆ ಹಂಟಾವೈರಸ್ (Hantavirus) ಬಗ್ಗೆ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಭಯವೂ ಹೆಚ್ಚಾಗಿದೆ. ಸಾಮಾನ್ಯವಾಗಿ ಈ ವೈರಸ್ ಸೋಂಕಿತ ಇಲಿಗಳ ಮಲ, ಮೂತ್ರ ಮತ್ತು ಲಾಲಾರಸದ ಮೂಲಕ ಮಾನವರಿಗೆ ಹರಡಬಹುದು ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಮನೆಗಳಲ್ಲಿ ಇಲಿಗಳಿರುವುದು ಸಾಮಾನ್ಯವಾದರೂ, ಇದರಿಂದಲೇ ವೈರಸ್ ಹರಡುತ್ತದೆ ಎಂಬುದಲ್ಲ. ಆದರೆ ಸ್ವಚ್ಛತೆಯ ಕೊರತೆ ಮತ್ತು ಇಲಿಗಳ ಹೆಚ್ಚಳ ಸೋಂಕಿನ ಅಪಾಯವನ್ನು ಹೆಚ್ಚಿಸಬಹುದು. ವೈದ್ಯಕೀಯವಾಗಿ “ಹಂಟಾವೈರಸ್ ಪಲ್ಮನರಿ ಸಿಂಡ್ರೋಮ್” ಎಂದು ಕರೆಯಲಾಗುವ ಈ ಸೋಂಕು ಮುಖ್ಯವಾಗಿ ಸೋಂಕಿತ ಇಲಿಗಳ ಸಂಪರ್ಕದಿಂದ ಹರಡುತ್ತದೆ. ಇಲಿಗಳ ಮಲ ಅಥವಾ ಮೂತ್ರ ಒಣಗಿ ಗಾಳಿಯಲ್ಲಿ ಮಿಶ್ರಣವಾದಾಗ, ಅದನ್ನು ಉಸಿರಾಟದ ಮೂಲಕ ಒಳಗೆಳೆದರೆ ಸೋಂಕಿನ ಅಪಾಯ ಉಂಟಾಗಬಹುದು. ವಿಶೇಷವಾಗಿ ದೀರ್ಘಕಾಲ ಮುಚ್ಚಿಟ್ಟ ಕೊಠಡಿಗಳು, ಗೋದಾಮುಗಳು ಮತ್ತು ಕಸದ ಪ್ರದೇಶಗಳಲ್ಲಿ ಈ ಅಪಾಯ ಹೆಚ್ಚು ಎಂದು ತಜ್ಞರು ಹೇಳಿದ್ದಾರೆ.

ಯಾವ ಸೂಚನೆಗಳನ್ನು ನಿರ್ಲಕ್ಷ್ಯ ಮಾಡಬಾರದು?

ಮನೆಯಲ್ಲಿ ವಿಚಿತ್ರ ದುರ್ವಾಸನೆ ಬರುತ್ತಿದ್ದರೆ, ವಸ್ತುಗಳು ಇಲಿಗಳಿಂದ ಕಚ್ಚಲ್ಪಟ್ಟಿರುವ ಗುರುತು ಕಂಡುಬಂದರೆ ಅಥವಾ ಇಲಿಗಳ ಸಂಖ್ಯೆ ಹೆಚ್ಚಾಗಿದ್ದರೆ ಎಚ್ಚರಿಕೆಯಿಂದ ಇರಬೇಕು. ದೀರ್ಘಕಾಲ ಮುಚ್ಚಿಟ್ಟಿದ್ದ ಕೊಠಡಿಗಳನ್ನು ತೆರೆಯುವಾಗ ಸ್ವಚ್ಛತೆ ಕಾಪಾಡುವುದು ಬಹಳ ಮುಖ್ಯ. ಅಂಥ ಸ್ಥಳಗಳಲ್ಲಿ ವೈರಸ್ ಕಣಗಳು ಗಾಳಿಯಲ್ಲಿ ಹರಡುವ ಸಾಧ್ಯತೆ ಇರುತ್ತದೆ. ಕುಟುಂಬದ ಯಾರಿಗಾದರೂ ಏಕಾಏಕಿ ಜ್ವರ, ದೇಹ ನೋವು, ದೌರ್ಬಲ್ಯ ಅಥವಾ ಉಸಿರಾಟದ ತೊಂದರೆ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಹಂಟಾವೈರಸ್ ಈಗ ಕಂಡುಬಂದಿದ್ದಲ್ಲ; ಆರೋಗ್ಯ ತಜ್ಞರು ನೀಡಿರುವ ಮಾಹಿತಿಯಲ್ಲಿದೆ ಆತಂಕಕಾರಿ ಅಂಶ

ಭಾರತದಲ್ಲಿ ಹ್ಯಾಂಟಾವೈರಸ್ ಅಪಾಯ ಇದೆಯೇ?

ಸಾಂಕ್ರಾಮಿಕ ರೋಗ ತಜ್ಞ ಡಾ. ಜುಗಲ್ ಕಿಶೋರ್ ಅವರು ಹೇಳುವ ಪ್ರಕಾರ, ಭಾರತದಾದ್ಯಂತ ಮನೆಗಳಲ್ಲಿ ಇಲಿಗಳು ಸಾಮಾನ್ಯವಾಗಿದ್ದರೂ ಹ್ಯಾಂಟಾವೈರಸ್ ಹರಡುವ ಸಾಧ್ಯತೆ ಈಗಾಗಲೇ ಕಂಡುಬಂದಿಲ್ಲ. ದೇಶದಲ್ಲಿ ಈ ವೈರಸ್‌ನ ಯಾವುದೇ ಪ್ರಕರಣ ದಾಖಲಾಗಿಲ್ಲ. ಅಲ್ಲದೆ ಪ್ರತಿಯೊಂದು ಇಲಿಯಲ್ಲೂ ಈ ವೈರಸ್ ಇರುವುದಿಲ್ಲ. ಲಕ್ಷಾಂತರ ಇಲಿಗಳಲ್ಲಿ ಕೆಲವೇ ಕೆಲವು ಸೋಂಕಿತವಾಗಿರಬಹುದು. ಆದ್ದರಿಂದ ಅನಾವಶ್ಯಕ ಭಯ ಬೇಡ, ಆದರೆ ಮುನ್ನೆಚ್ಚರಿಕೆ ಅಗತ್ಯ ಎಂದು ಅವರು ಹೇಳಿದ್ದಾರೆ.

ಹೇಗೆ ಮುನ್ನೆಚ್ಚರಿಕೆ ವಹಿಸಬೇಕು?

ಮನೆ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡುವುದು ಮುಖ್ಯ. ಆಹಾರ ಪದಾರ್ಥಗಳನ್ನು ಮುಚ್ಚಿ ಇಡಿ, ಕಸವನ್ನು ಸಮಯಕ್ಕೆ ತೆರವುಗೊಳಿಸಿ ಹಾಗೂ ಇಲಿಗಳ ಸಂಚಾರ ಕಂಡುಬಂದರೆ ತಕ್ಷಣ ನಿಯಂತ್ರಣ ಕ್ರಮ ಕೈಗೊಳ್ಳಿ. ಮುಚ್ಚಿದ ಕೊಠಡಿಗಳನ್ನು ಸ್ವಚ್ಛಗೊಳಿಸುವಾಗ ಮಾಸ್ಕ್ ಮತ್ತು ಗ್ಲೌಸ್ ಧರಿಸುವುದು ಸುರಕ್ಷಿತ ಎಂದು ಆರೋಗ್ಯ ತಜ್ಞರು ಸೂಚಿಸಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಅಪ್ಪಾ ನನ್ನನ್ನು ಬದುಕಿಸಿ’; ಫೋನ್ ಮಾಡಿದ 20 ನಿಮಿಷದಲ್ಲೇ ಯುವತಿ ಸಾವು – Kannada News | Gwalior woman dies Within Year Of Marriage her family alleges dowry harrasment

ಗ್ವಾಲಿಯರ್, ಮೇ 19: ಹೊಸದಾಗಿ ಮದುವೆಯಾಗಿದ್ದ ಯುವತಿಯೊಬ್ಬರು ತನ್ನನ್ನು ರಕ್ಷಿಸುವಂತೆ ತಂದೆಗೆ ಕರೆ ಮಾಡಿದ 20 ನಿಮಿಷಗಳಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಗ್ವಾಲಿಯರ್​ನಲ್ಲಿ ನಡೆದಿದೆ. ವರದಕ್ಷಿಣೆ (Dowry) ಕಿರುಕುಳದಿಂದಾಗಿ ಈ ಸಾವು ಸಂಭವಿಸಿದೆ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ. 21 ವರ್ಷದ ಯುವತಿ ಮದುವೆಯಾದ ಕೇವಲ 1 ವರ್ಷದೊಳಗೆ ಗ್ವಾಲಿಯರ್‌ನಲ್ಲಿರುವ ತನ್ನ ಗಂಡನ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇತ್ತೀಚೆಗೆ ಹೆಚ್ಚುತ್ತಿರುವ ವರದಕ್ಷಿಣೆ ಕಿರುಕುಳ ಪ್ರಕರಣ ಆತಂಕ ಹೆಚ್ಚಿಸಿದೆ.

ಮೃತ ಯುವತಿಯನ್ನು ಪಾಲಕ್ ರಜಾಕ್ ಎಂದು ಗುರುತಿಸಲಾಗಿದ್ದು, ಆಕೆ ಸಾವನ್ನಪ್ಪುವ ಕೆಲವೇ ಕ್ಷಣಗಳ ಮುನ್ನ ತನ್ನ ತಂದೆಗೆ ಅತ್ಯಂತ ಹತಾಶೆಯಿಂದ ಕರೆ ಮಾಡಿ, ತನ್ನನ್ನು ಗಂಡನ ಮನೆಯಿಂದ ಕರೆದುಕೊಂಡು ಹೋಗುವಂತೆ ಬೇಡಿಕೊಂಡಿದ್ದರು ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ. ಮೇ 12ರ ಸಂಜೆ ಆಕೆ ಸಾವನ್ನಪ್ಪುವ ಕೇವಲ 20ರಿಂದ 30 ನಿಮಿಷಗಳ ಮೊದಲು ಪಾಲಕ್ ತನ್ನ ತಂದೆಗೆ ಕರೆ ಮಾಡಿದ್ದರು. ಗಂಡನ ಮನೆಯವರು ಬಹಳ ಹಿಂಸೆ ನೀಡುತ್ತಿದ್ದಾರೆ, ನನ್ನನ್ನು ಇಲ್ಲಿಂದ ಕರೆದುಕೊಂಡು ಹೋಗಿ ಬದುಕಿಸಿ ಅಪ್ಪಾ ಎಂದು ಆಕೆ ಅಪ್ಪನ ಬಳಿ ಹೇಳಿಕೊಂಡಿದ್ದರು.

ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಎಂಜಿನಿಯರ್ ದಾರುಣ ಅಂತ್ಯ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ?

“ಅಪ್ಪಾ, ನನ್ನನ್ನು ಇಲ್ಲಿಂದ ಕರೆದುಕೊಂಡು ಹೋಗಿ. ಅವರು ಪದೇ ಪದೇ ಕಾರು ಮತ್ತು ಚಿನ್ನದ ಸರಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ನನಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ಇವರು ನನ್ನನ್ನು ಕೊಂದುಬಿಡುತ್ತಾರೆ” ಎಂದು ಆಕೆ ಫೋನ್‌ನಲ್ಲಿ ಅಳುತ್ತಾ ತನ್ನ ತಂದೆಗೆ ಹೇಳಿದ್ದರು ಎನ್ನಲಾಗಿದೆ.

ಆಕೆಯ ಮಾತು ಕೇಳಿ ಹೆದರಿದ್ದ ಪೋಷಕರು ಪಾಲಕ್ ಅವರನ್ನು ಮರಳಿ ಮನೆಗೆ ಕರೆತರಲು ತಮ್ಮ ಮನೆಯಿಂದ ಹೊರಟಿದ್ದರು. ಆದರೆ ಅವರು ಅಲ್ಲಿಗೆ ತಲುಪುವ ಮೊದಲೇ ಪಾಲಕ್ ಪತಿ ಅಮಿತ್ ಅವರಿಂದ ಕರೆ ಬಂದಿದ್ದು, ಪಾಲಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದ್ದರು. ದುರದೃಷ್ಟವಶಾತ್, ಆಕೆಯ ಕುಟುಂಬದವರು ಆಸ್ಪತ್ರೆ ತಲುಪುವಷ್ಟರಲ್ಲಿ ಆಕೆ ಸಾವನ್ನಪ್ಪಿದ್ದರು.

ಇದನ್ನೂ ಓದಿ: ವರದಕ್ಷಿಣೆ ಪಡೆದರೂ ತೀರದ ಧನ ದಾಹ, ಸಾಲದಕ್ಕೆ ಅನುಮಾನ: ಪತಿ ಟಾರ್ಚರ್​​ಗೆ ಪತ್ನಿ ಆತ್ಮಹತ್ಯೆ

ಪಾಲಕ್ ಅವರ ಕುತ್ತಿಗೆ, ಕಾಲುಗಳು ಮತ್ತು ದೇಹದ ಇತರ ಭಾಗಗಳಲ್ಲಿ ಗಾಯದ ಗುರುತುಗಳಿದ್ದು, ಇದು ಕೊಲೆಯ ಶಂಕೆಯನ್ನು ಹುಟ್ಟುಹಾಕಿದೆ ಎಂದು ತವರು ಮನೆಯವರು ಆರೋಪಿಸಿದ್ದಾರೆ. ಆಕೆಯ ಪತಿ, ಅತ್ತೆ ಮತ್ತು ಮೈದುನ ವರದಕ್ಷಿಣೆಗಾಗಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಪಾಲಕ್ ಕುಟುಂಬದವರು ಆರೋಪಿಸಿದ್ದಾರೆ. ಮದುವೆಯಾದಾಗಿನಿಂದಲೂ ಆಕೆಗೆ ಸತತವಾಗಿ ಹಿಂಸೆ ನೀಡಲಾಗುತ್ತಿತ್ತು. ಮನೆಯೊಳಗೆ ಯಾರೊಂದಿಗೂ ಮಾತನಾಡದಂತೆ ಕೂಡಿಹಾಕಲಾಗಿತ್ತು, ಆಹಾರವನ್ನೂ ನೀಡುತ್ತಿರಲಿಲ್ಲ ಎಂದು ಆಕೆಯ ಸಂಬಂಧಿಕರು ದೂರಿದ್ದಾರೆ.

ಆಕೆಯ ಸಾವಿನ ನಂತರ, ಆಕ್ರೋಶಗೊಂಡ ಪಾಲಕ್ ಸಂಬಂಧಿಕರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಬಹಳ ಹೊತ್ತಾದರೂ ಪಾಲಕ್ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ನೀಡದಿದ್ದಾಗ ಆಕೆಯ ಕೋಣೆಯ ಬಾಗಿಲನ್ನು ಒಡೆದು ಒಳಗೆ ಹೋಗಿ ನೋಡಿದಾಗ ಆಕೆ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿದ್ದಳು. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಕೆ ಬದುಕಲಿಲ್ಲ ಎಂದು ಪಾಲಕ್ ಅವರ ಮಾವ (ಪತಿಯ ತಂದೆ) ಸಮರ್ಥಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್ ಹಿರಿಯ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ನಿಧನ: ಅಂತಿಮ ದರ್ಶನ ಪಡೆದ ಡಿ.ಕೆ. ಶಿವಕುಮಾರ್ – Kannada News | DyCM DK Shivakumar Pays Last Respects to Senior Congress Leader Haji Syed Ziaullah

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ
ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ
ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ
ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್
ಆಡೊ ಹವ್ಯಾಸ ಇದೆ.

Read More

Source link

RR vs LSG Playing XI: ಪ್ರಮುಖ ಆಟಗಾರರು ಅಲಭ್ಯ: ಹೀಗಿದೆ ಪ್ಲೇಯಿಂಗ್ 11 – Kannada News | RR vs LSG Playing XI Rajasthan Royals vs Lucknow Super Giants Today IPL 2026 match Confirmed playing 11 details with name in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 64ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ಹಂಗಾಮಿ ನಾಯಕ  ಯಶಸ್ವಿ ಜೈಸ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಇನ್ನು ಈ ಪಂದ್ಯದಿಂದ ಆರ್​ಆರ್ ತಂಡದ ಕ್ಯಾಪ್ಟನ್ ರಿಯಾನ್ ಪರಾಗ್ ಹೊರಗುಳಿದಿದ್ದಾರೆ. ಅತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮೊಹಮ್ಮದ್ ಶಮಿ ಹಾಗೂ ಐಡೆನ್ ಮಾರ್ಕ್ರಾಮ್ ಕಾಣಿಸಿಕೊಂಡಿಲ್ಲ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್ (ನಾಯಕ), ಲುವಾನ್-ಡ್ರೆ ಪ್ರಿಟೋರಿಯಸ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಡೊನೊವನ್ ಫೆರೇರಾ, ಶುಭಂ ದುಬೆ, ದಸುನ್ ಶಾನಕ, ಜೋಫ್ರಾ ಆರ್ಚರ್, ಸುಶಾಂತ್ ಮಿಶ್ರಾ, ಸಂದೀಪ್ ಶರ್ಮಾ, ಬ್ರಿಜೇಶ್ ಶರ್ಮಾ, ಯಶ್ ರಾಜ್ ಪುಂಜಾ.

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಮಿಚೆಲ್ ಮಾರ್ಷ್, ಜೋಶ್ ಇಂಗ್ಲಿಸ್, ನಿಕೋಲಸ್ ಪೂರನ್, ರಿಷಭ್ ಪಂತ್ (ನಾಯಕ), ಆಯುಷ್ ಬದೋನಿ, ಅಬ್ದುಲ್ ಸಮದ್, ಶಹಬಾಝ್ ಅಹ್ಮದ್, ಮೊಹ್ಸಿನ್ ಖಾನ್, ಮಯಾಂಕ್ ಯಾದವ್, ಆಕಾಶ್ ಮಹಾರಾಜ್ ಸಿಂಗ್, ಪ್ರಿನ್ಸ್ ಯಾದವ್.

ನಿರ್ಣಾಯಕ ಪಂದ್ಯ:

ಈ ಮ್ಯಾಚ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ನಿರ್ಣಾಯಕ. ಏಕೆಂದರೆ ಇಂದಿನ ಪಂದ್ಯದಲ್ಲಿ ಗೆದ್ದರೆ ರಾಜಸ್ಥಾನ್ ರಾಯಲ್ಸ್ ತಂಡದ ಪ್ಲೇಆಫ್ ಸುಲಭವಾಗಲಿದೆ. ಏಕೆಂದರೆ ಇಂದಿನ ಮ್ಯಾಚ್​ನಲ್ಲಿ ಆರ್​ಆರ್​ ಪಡೆ ಜಯ ಸಾಧಿಸಿದರೆ ಒಟ್ಟು 14 ಅಂಕಗಳನ್ನು ಹೊಂದಲಿದೆ.

ಅಲ್ಲದೆ ಕೊನೆಯ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ 16 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲು ಅವಕಾಶ ದೊರೆಯಲಿದೆ. ಅಂದರೆ ನೇರವಾಗಿ ಪ್ಲೇಆಫ್​ಗೇರಬೇಕಿದ್ದರೆ ರಾಜಸ್ಥಾನ್ ರಾಯಲ್ಸ್ ತಂಡವು ಇಂದಿನ ಪಂದ್ಯದಲ್ಲಿ ಜಯ ಸಾಧಿಸಲೇಬೇಕು. ಹೀಗಾಗಿ ಒಂದಾರ್ಥದಲ್ಲಿ ಈ ಮ್ಯಾಚ್ ಆರ್​ಆರ್​ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

ಹೆಡ್ ಟು ಹೆಡ್:

ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್​ ಜೈಂಟ್ಸ್ ತಂಡಗಳು ಈವರೆಗೆ 7 ಪಂದ್ಯಗಳಲ್ಲಿ ಮಾತ್ರ ಮುಖಾಮುಖಿಯಾಗಿವೆ. ಈ ವೇಳೆ ಲಕ್ನೋ ಸೂಪರ್ ಜೈಂಟ್ಸ್ ಗೆದ್ದಿರುವುದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ 5 ಮ್ಯಾಚ್​ಗಳಲ್ಲೂ ರಾಜಸ್ಥಾನ್ ರಾಯಲ್ಸ್ ತಂಡ ಜಯಭೇರಿ ಬಾರಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಆರ್​ಆರ್​ ಪಡೆ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ.

ರಾಜಸ್ಥಾನ್ ರಾಯಲ್ಸ್: ರಿಯಾನ್ ಪರಾಗ್ (ನಾಯಕ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಡೊನೊವನ್ ಫೆರೇರಾ, ಸಂದೀಪ್ ಶರ್ಮಾ, ಶುಭಂ ದುಬೆ, ವೈಭವ್ ಸೂರ್ಯವಂಶಿ, ಲುವಾನ್-ಡ್ರೆ ಪ್ರಿಟೋರಿಯಸ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ಧ್ರುವ ಜುರೆಲ್, ಯುಧ್ವೀರ್ ಸಿಂಗ್ ಚರಕ್, ಜೋಫ್ರಾ ಆರ್ಚರ್, ತುಷಾರ್ ದೇಶಪಾಂಡೆ, ಕ್ವೇನಾ ಮಫಾಕ, ನಾಂಡ್ರೆ ಬರ್ಗರ್, ರವಿ ಬಿಷ್ಣೋಯ್, ಸುಶಾಂತ್ ಮಿಶ್ರಾ, ಯಶ್ ರಾಜ್ ಪುಂಜಾ, ವಿಘ್ನೇಶ್ ಪುತ್ತೂರ್, ರವಿ ಸಿಂಗ್, ಅಮನ್ ರಾವ್, ಬ್ರಿಜೇಶ್ ಶರ್ಮಾ, ಆಡಮ್ ಮಿಲ್ನ್​, ಕುಲದೀಪ್ ಸೇನ್.

ಇದನ್ನೂ ಓದಿ: RR vs LSG IPL 2026 Live Score: ರಾಯಲ್ಸ್​ vs ಸೂಪರ್ ಜೈಂಟ್ಸ್

ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ (ನಾಯಕ), ಅಬ್ದುಲ್ ಸಮದ್, ಆಯುಷ್ ಬದೋನಿ, ಐಡೆನ್ ಮರ್ಕ್ರಾಮ್, ಮ್ಯಾಥ್ಯೂ ಬ್ರೀಟ್ಝ್ಕ್​, ಹಿಮ್ಮತ್ ಸಿಂಗ್,  ನಿಕೋಲಸ್ ಪೂರನ್, ಮಿಚೆಲ್ ಮಾರ್ಷ್, ಶಹಬಾಝ್ ಅಹ್ಮದ್, ಅರ್ಶಿನ್ ಕುಲಕರ್ಣಿ, ಮಯಾಂಕ್ ಯಾದವ್, ಅವೇಶ್ ಖಾನ್, ಮೊಹ್ಸಿನ್ ಖಾನ್, ಮಣಿಮಾರನ್ ಸಿದ್ಧಾರ್ಥ್, ದಿಗ್ವೇಶ್ ರಾಠಿ, ಪ್ರಿನ್ಸ್ ಯಾದವ್, ಆಕಾಶ್ ಸಿಂಗ್, ಮೊಹಮ್ಮದ್ ಶಮಿ, ಅರ್ಜುನ್ ತೆಂಡೂಲ್ಕರ್, ವನಿಂದು ಹಸರಂಗ, ಅನ್ರಿಕ್ ನೋಕಿಯ, ಮುಕುಲ್ ಚೌಧರಿ, ನಮನ್ ತಿವಾರಿ, ಅಕ್ಷತ್ ರಘುವಂಶಿ, ಜೋಶ್ ಇಂಗ್ಲಿಸ್.

Source link

ವಚನಾನಂದಶ್ರೀ ವಿರುದ್ಧದ ಪೋಕ್ಸೋ ಪ್ರಕರಣದ ತನಿಖಾಧಿಕಾರಿ ವರ್ಗಾವಣೆ, ಕಾರಣವೇನು? – Kannada News | Harihara panchamasali swamiji Vachanananda Shri POCSO Case investigation officer PSI Manjula transferred

ದಾವಣಗೆರೆ, (ಮೇ 19): ಹರಿಹರ (Harihara) ಪಂಚಮಸಾಲಿ ಪೀಠದ ವಚನಾನಂದಶ್ರೀ (Vachananand Shri) ವಿರುದ್ಧ ಫೋಕ್ಸೋ ಪ್ರಕರಣದ ತನಿಖೆ ಮುಂದುವರೆದಿದ್ದು, ಈಗಾಗಲೇ ಆರೋಪಿ ಸ್ಥಾನದಲ್ಲಿರುವ ವಚನಾನಂದ ಸ್ವಾಮೀಜಿಯನ್ನು ಎರಡು ಬಾರಿ ವಿಚಾರಣೆಗೊಳಪಡಿಸಲಾಗಿದೆ. ಪ್ರಕರಣದ ತನಿಖೆ ಚುರುಕೊಂಡಿರುವ ನಡುವೆ ತನಿಖಾಧಿಕಾರಿ ವರ್ಗಾವಣೆಯಾಗಿದೆ. ಹೌದು… ವಚನಾನಂದಶ್ರೀ ವಿರುದ್ಧದ ಪೋಕ್ಸೋ ಕೇಸ್‌ನ ತನಿಖಾಧಿಕಾರಿಯಾಗಿದ್ದ ಹರಿಹರ ಗ್ರಾಮಾಂತರ ಠಾಣೆ ಪಿಎಸ್‌ಐ ಮಂಜುಳಾ ಅವರನ್ನ ದಿಢೀರ್ ವರ್ಗಾವಣೆ ಮಾಡಿ ದಾವಣಗೆರೆ  (Davanagere) ಎಸ್‌ಪಿ H.T.ಶೇಖರ್ ಆದೇಶ ಹೊರಡಿಸಿದ್ದಾರೆ.

ಮುಖ್ಯಾಂಶ

  • ಪಂಚಮಸಾಲಿ ಪೀಠದ  ವಚನಾನಂದಶ್ರೀ ವಿರುದ್ಧದ ಪೋಕ್ಸೋ ಕೇಸ್‌ನ ತನಿಖಾಧಿಕಾರಿ ವರ್ಗಾವಣೆ
  • ದಾವಣಗೆರೆ ಜಿಲ್ಲೆಯ  ಹರಿಹರ ಗ್ರಾಮಾಂತರ ಠಾಣೆ ಪಿಎಸ್‌ಐ ಮಂಜುಳಾ ದಿಢೀರ್ ವರ್ಗಾವಣೆ ಮಾಡಿ ಎಸ್ಪಿ H.T.ಶೇಖರ್ ಆದೇಶ.
  • ಮಂಜುಳಾ ಜಾಗಕ್ಕೆ ಆಜಾದ್‌ನಗರ ಠಾಣೆ ಪಿಎಸ್‌ಐ ಜಯರತ್ನಮ್ಮ ನೇಮಕ
  • ವಚನಾನಂದಶ್ರೀ ವಿರುದ್ಧದ ಕೇಸ್‌ನ ತನಿಖಾ ಜವಾಬ್ದಾರಿ ಹೊತ್ತ ಜಯರತ್ನಮ್ಮ

ಮಂಜುಳಾ ಜಾಗಕ್ಕೆ ಜಯರತ್ನಮ್ಮ ನೇಮಕ

ಪ್ರಕರಣದ ತನಿಖೆ ಸರಿಯಾಗಿ ಮಾಡುತ್ತಿಲ್ಲ ಎಂದು ಹರಿಹರ (Harihara) ಪಂಚಮಸಾಲಿ ಪೀಠ ಟ್ರಸ್ಟ್​​ನ ಪದಾಧಿಕಾರಿಗಳು ಪೂರ್ವ ವಲಯ ಐಜಿಪಿ ಬಿ.ಆರ್.ರವಿಕಾಂತೇಗೌಡ ಅವರಿಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ತನಿಖಾಧಿಕಾರಿಯನ್ನು ಬದಲಾವಣೆ ಮಾಡುವಂತೆ ಎಸ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಇದರ ಮೇರೆಗೆ ದಾವಣಗೆರೆ ಎಸ್ಪಿ H.T.ಶೇಖರ್ ಅವರು ಪಿಎಸ್‌ಐ ಮಂಜುಳಾ ಅವರನ್ನು ವರ್ಗಾವಣೆ ಮಾಡಿದ್ದು, ಇವರ ಜಾಗಕ್ಕೆ  ದಾವಣಗೆರೆಯ ಆಜಾದ್‌ನಗರ ಠಾಣೆಯ ಪಿಎಸ್‌ಐ ಜಯರತ್ನಮ್ಮ ಅವರನ್ನ ನೇಮಕ ಮಾಡಿ ಆದೇಶ ಹೊಡಿಸಿದ್ದಾರೆ.

ಇದನ್ನೂ ನೋಡಿ: ಪೋಕ್ಸೋ ಕೇಸ್: ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಪೋಸ್ಕೋ ಪ್ರಕರಣದ ತನಿಖಾಧಿಕಾರಿ ಆಗಿದ್ದ ಎಸ್ ಐ ಮಂಜುಳಾ ಅವರನ್ನ ದಾವಣಗೆರೆ ಅಜಾದ್ ನಗರ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು, ಇವರ ಸ್ಥಾನಕ್ಕೆ ದಾವಣಗೆರೆ ಅಜಾದ್ ನಗರ ಠಾಣೆ ಎಸ್ ಐ ಜಯರತ್ನಮ್ಮ ಅವರನ್ನ ನೇಮಕ ಮಾಡಲಾಗಿದ್ದು, ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣದ ತನಿಖೆ ಜವಾಬ್ದಾರಿಯನ್ನು ಜಯರತ್ನಮ್ಮ ಅವರಿಗೆ ನೀಡಲಾಗಿದೆ.

ಶ್ರೀಗಳನ್ನ ಎರಡು ಬಾರಿ ವಿಚಾರಣೆ ನಡೆಸಿದ್ದ ಮಂಜುಳಾ

ವಚನಾನಂದ ಸ್ವಾಮೀಜಿ ವಿರುದ್ಧ ಮಕ್ಕಳ ಮೇಲಿನ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಇದರ ಬೆನ್ನಲ್ಲೇ ಹರಿಹರ ಗ್ರಾಮಾಂತರ ಠಾಣೆ ಪಿಎಸ್‌ಐ ಮಂಜುಳಾ ಅವರ ವಚನಾನಂದಶ್ರೀ ವಿರುದ್ಧ ಫೋಕ್ಸೋ ಪ್ರಕರಣ ದಾಖಲಿಸಿದ್ದರು. ಅಲ್ಲದೇ ಪ್ರಕರಣದ ತನಿಖೆ ಸಲುವಾಗಿ ಸ್ವಾಮೀಜಿಯನ್ನು ಹರಿಹರ ಠಾಣೆಗೆ 2 ಸಲ ಕರೆಸಿಕೊಂಡು ವಿಚಾರಣೆ ನಡೆಸಿದ್ದರು. ಇದೀಗ ಹೊಸ ತನಿಖಾಧಿಕಾರಿ ಬಂದಿದ್ದು, ಯಾವ ರೀತಿ ತನಿಖೆ ನಡೆಯುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 7:13 pm, Tue, 19 May 26

Source link