All posts by nagaraj11081993

ರಶ್ಮಿಕಾ ಹಿಂದಿ ಸಿನಿಮಾ ರಿಲೀಸ್ ದಿನಾಂಕ ನಿಗದಿ, ಬೋಲ್ಡ್ ಲುಕ್​​ನಲ್ಲಿ ನಟಿ

ರಶ್ಮಿಕಾ ಹಿಂದಿ ಸಿನಿಮಾ ರಿಲೀಸ್ ದಿನಾಂಕ ನಿಗದಿ, ಬೋಲ್ಡ್ ಲುಕ್​​ನಲ್ಲಿ ನಟಿ

ರಶ್ಮಿಕಾ ಮಂದಣ್ಣ (Rashmika Mandanna) ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ಜೊತೆಗೆ ಮದುವೆಯಾಗಿದ್ದು, ಸದ್ಯಕ್ಕೆ ಕೆಲ ವಾರಗಳ ಕಾಲ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಅಷ್ಟರಲ್ಲೇ ಅವರ ಹೊಸ ಸಿನಿಮಾದ ಬಿಡುಗಡೆ ದಿನಾಂಕ ನಿಗದಿ ಆಗಿದೆ. ರಶ್ಮಿಕಾ ನಟಿಸಿರುವ ಬಹುತಾರಾಗಣದ ಬಾಲಿವುಡ್ ಸಿನಿಮಾ ‘ಕಾಕ್​​ಟೇಲ್ 2’ ಸಿನಿಮಾದ ಬಿಡುಗಡೆ ದಿನಾಂಕ ಹಾಗೂ ಟೀಸರ್ ರಿಲೀಸ್ ದಿನಾಂಕಗಳನ್ನು ಇಂದು ಘೋಷಿಸಲಾಗಿದೆ. ಈ ಕುರಿತು ರಶ್ಮಿಕಾ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ರಶ್ಮಿಕಾ ತುಸು ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುಳಿವನ್ನು ಪೋಸ್ಟರ್ ನೀಡುತ್ತಿದೆ.

2012 ರಲ್ಲಿ ಬಿಡುಗಡೆ ಆಗಿ ಬ್ಲಾಕ್‌ಬಸ್ಟರ್ ಆಗಿದ್ದ ‘ಕಾಕ್‌ಟೇಲ್’ ಸಿನಿಮಾದ ಸೀಕ್ವೆಲ್ ಆಗಿರುವ ‘ಕಾಕ್‌ಟೇಲ್ 2’ನಲ್ಲಿ ರಶ್ಮಿಕಾ ಮಂದಣ್ಣ, ಕೃತಿ ಸನೋನ್ ಮತ್ತು ಶಾಹಿದ್ ಕಪೂರ್ ಅವರುಗಳು ನಟಿಸಿದ್ದಾರೆ. 2012 ರ ಸಿನಿಮಾನಲ್ಲಿ ದೀಪಿಕಾ ಪಡುಕೋಣೆ, ಸೈಫ್ ಅಲಿ ಖಾನ್ ಮತ್ತು ಡಿಯಾನಾ ಪೆಂಟಿ ನಟಿಸಿದ್ದರು. ಇದೀಗ ‘ಕಾಕ್​​ಟೇಲ್ 2’ ಸಿನಿಮಾದ ಪೋಸ್ಟರ್ ಮತ್ತು ಬಿಡುಗಡೆ ದಿನಾಂಕವನ್ನು ಇಂದು ಅಧಿಕೃತವಾಗಿ ಪ್ರಕಟಿಸಲಾಗಿದೆ.

ಹೋಮಿ ಅದಜಾನಿಯಾ ನಿರ್ದೇಶನ ಮಾಡಿರುವ ‘ಕಾಕ್​​ಟೇಲ್ 2’ ಸಿನಿಮಾ ಜೂನ್ 19ರಂದು ವಿಶ್ವದಾದ್ಯಂತ ತೆರೆಕಾಣಲಿದೆ. ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದ್ದು, ಅದಾದ ಎರಡು ವಾರಗಳ ಬಳಿಕ ‘ಕಾಟ್​​ಕೇಟ್ 2’ ಬಿಡುಗಡೆ ಆಗಲಿದೆ. ದಿನೇಶ್ ವಿಜನ್ ಅವರ ‘ಮ್ಯಾಡಾಕ್ ಫಿಲ್ಮ್ಸ್’ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಇದೀಗ ಬಿಡುಗಡೆ ಆಗಿರುವ ಪೋಸ್ಟರ್​​ನಲ್ಲಿ ರಶ್ಮಿಕಾ ತುಸು ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಮಾತ್ರವಲ್ಲ ಕೃತಿ ಸನೋನ್ ಪಾತ್ರವೂ ಸಹ ಗ್ಲಾಮರಸ್ ಆಗಿಯೇ ಇದ್ದಂತಿದೆ.

ಇದನ್ನೂ ಓದಿ:ಲಾವಣ್ಯ ತ್ರಿಪಾಠಿ ಬಿಟ್ಟ ಸಿನಿಮಾದಿಂದ ಸೂಪರ್ ಹಿಟ್ ಆದ ರಶ್ಮಿಕಾ ಮಂದಣ್ಣ

ಇಂದು ಬಿಡುಗಡೆಯಾದ ಪೋಸ್ಟರ್‌ನಲ್ಲಿ ರಶ್ಮಿಕಾ ಅತ್ಯಂತ ಚಟುವಟಿಕೆಯುಳ್ಳ, ಉಲ್ಲಾಸಭರಿತ ಹುಡುಗಿಯಂತೆ ಕಾಣಿಸಿಕೊಂಡಿದ್ದಾರೆ. ಕೆಲ ವರದಿಗಳ ಪ್ರಕಾರ, ರಶ್ಮಿಕಾ ಅವರು ಲೆಸ್ಬಿಯನ್ ಪಾತ್ರದಲ್ಲಿ ನಟಿಸಿದ್ದಾರೆ ಎನ್ನಲಾಗುತ್ತಿದೆ. ಹೊರನೋಟಕ್ಕೆ ಇದು ತ್ರಿಕೋನ ಪ್ರೇಮಕಥೆಯಾದರೂ ಸಹ ಮುಖ್ಯ ಲವ್ ಸ್ಟೋರಿ ಇರುವುದು ಕೃತಿ ಸನೋನ್ ಮತ್ತು ರಶ್ಮಿಕಾ ಮಂದಣ್ಣ ಪಾತ್ರದ ನಡುವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಶ್ಮಿಕಾ ಕೆಲವು ಬೋಲ್ಡ್ ದೃಶ್ಯಗಳಲ್ಲಿ ಸಹ ನಟಿಸಿದ್ದಾರೆ ಎನ್ನಲಾಗುತ್ತಿದೆ.

‘ಕಾಕ್​​ಟೇಲ್ 2’ ಜೂನ್ 19ಕ್ಕೆ ಬಿಡುಗಡೆ ಆಗುತ್ತಿದೆಯಾದರೂ, ಮಾರ್ಚ್ 18ರಂದು ‘ಕಾಕ್‌ಟೇಲ್ 2’ ಚಿತ್ರದ ಮೊದಲ ಟೀಸರ್ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ರಣವೀರ್ ಸಿಂಗ್ ಅಭಿನಯದ ‘ಧುರಂಧರ್: ದಿ ರಿವೆಂಜ್’ ಸಿನಿಮಾದ ಪ್ರದರ್ಶನದ ಸಮಯದಲ್ಲಿ ಈ ಟೀಸರ್ ಅನ್ನು ವೀಕ್ಷಿಸಬಹುದಾಗಿದೆ. ರಶ್ಮಿಕಾ ಮಂದಣ್ಣ ಮದುವೆ ಆದ ಬಳಿಕ ಬಿಡುಗಡೆ ಆಗುತ್ತಿರುವ ಅವರ ಮೊದಲ ಸಿನಿಮಾ ಇದಾಗಿದ್ದು, ಸಿನಿಮಾದ ಪ್ರಚಾರದಲ್ಲಿ ಅವರು ಶೀಘ್ರವೇ ಪಾಲ್ಗೊಳ್ಳಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಇರಾಕ್ ಬಳಿ ಟ್ಯಾಂಕರ್ ದಾಳಿಯಲ್ಲಿ ಗಾಯಗೊಂಡಿದ್ದ ಮುಂಬೈ ಮೂಲದ ಭಾರತೀಯ ಎಂಜಿನಿಯರ್ ನಿಧನ

ನವದೆಹಲಿ, ಮಾರ್ಚ್ 13: ಎಂಟಿ ಸಫೇಸಿಯಾ ವಿಷ್ಣುವಿನ ಹೆಚ್ಚುವರಿ ಮುಖ್ಯ ಎಂಜಿನಿಯರ್ (ಸೂಪರಿಂಟೆಂಡೆಂಟ್) ದೇವಾನಂದನ್ ಪ್ರಸಾದ್ ಸಿಂಗ್ ಬುಧವಾರ ಮಾರ್ಷಲ್ ದ್ವೀಪದ ಧ್ವಜ ಹೊತ್ತ ಟ್ಯಾಂಕರ್ (Oil Tanker) ಮೇಲೆ ನಡೆದ ದಾಳಿಯಲ್ಲಿ ಮೃತಪಟ್ಟಿದ್ದಾರೆ. 50 ವರ್ಷದ ದೇವಾನಂದನ್ ಸಿಂಗ್ 2019ರಲ್ಲಿ ತಮ್ಮ ಊರಾದ ಬಿಹಾರದಿಂದ ಮುಂಬೈಗೆ ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಸ್ಥಳಾಂತರಗೊಂಡಿದ್ದರು. ಅವರು ಸರಕು ಹಡಗುಗಳಲ್ಲಿ ಸಿಬ್ಬಂದಿಯೊಂದಿಗೆ ಸಾಗರಗಳಲ್ಲಿ ಪ್ರಯಾಣಿಸಿ ಅವರನ್ನು ನೋಡಿಕೊಳ್ಳುತ್ತಿದ್ದರು.

ಆ ತೈಲ ಟ್ಯಾಂಕರ್ ಡಿಕ್ಕಿ ಹೊಡೆದಾಗ ಸುಮಾರು 48,000 ಮೆಟ್ರಿಕ್ ಟನ್ ನಾಫ್ತಾ ಸಾಗಿಸುತ್ತಿತ್ತು. ನೀರೊಳಗಿನ ಡ್ರೋನ್ ಅದಕ್ಕೆ ಡಿಕ್ಕಿ ಹೊಡೆದಿತ್ತು. ಈ ಸ್ಫೋಟದಲ್ಲಿ ಭಾರತೀಯ ನಾವಿಕ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ತೈಲ ಟ್ಯಾಂಕರ್ ಮೇಲಿನ ದಾಳಿಯ ನಂತರ ದೇವಾನಂದನ್ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಯ ಸಮಯದಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ದೃಢಪಟ್ಟಿದೆ. ಬೆಂಕಿ ಹೊತ್ತಿಕೊಂಡ ಹಡಗಿನಿಂದ ಇತರ 15 ಭಾರತೀಯರನ್ನು ರಕ್ಷಿಸಲಾಗಿತ್ತು.

ಇದನ್ನೂ ಓದಿ: ಇರಾಕ್‌ ಬಳಿ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ; ಗಲ್ಫ್ ಯುದ್ಧಕ್ಕೆ ಮತ್ತೋರ್ವ ಭಾರತೀಯ ಬಲಿ

ದೇವಾನಂದನ್ ಸಿಂಗ್ ಈ ಹಿಂದೆ ನಿಯೋಮ್ ಮ್ಯಾರಿಟೈಮ್, ಯುನೈಟೆಡ್ ಓಷನ್ ಶಿಪ್ ಮ್ಯಾನೇಜ್‌ಮೆಂಟ್, ಬರ್ನಾರ್ಡ್ ಶುಲ್ಟೆ ಶಿಪ್ ಮ್ಯಾನೇಜ್‌ಮೆಂಟ್, ಸ್ಯಾಮ್ಸನ್ ಮ್ಯಾರಿಟೈಮ್ ಮತ್ತು ಶಿಪ್ಪಿಂಗ್ ಕಾರ್ಪೊರೇಷನ್‌ನಲ್ಲಿ ಕೆಲಸ ಮಾಡಿದ್ದರು. ಡ್ರೋನ್ ಹಡಗನ್ನು ಅಪ್ಪಳಿಸಿದ ನಂತರ, ಎಲ್ಲಾ ಸಿಬ್ಬಂದಿ ಸದಸ್ಯರು ಹಡಗನ್ನು ಬಿಟ್ಟು ನೀರಿಗೆ ಹಾರಿದರು. ಹತ್ತಿರದಲ್ಲಿ ಕಾರ್ಯನಿರ್ವಹಿಸುತ್ತಿದ್ದ STS ಟಗ್ ಮೂಲಕ ಅವರನ್ನು ರಕ್ಷಿಸಲಾಯಿತು. ಆದರೆ, ದೇವಾನಂದನ್ ತೀವ್ರವಾಗಿ ಗಾಯಗೊಂಡಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಇನ್ನೊಮ್ಮೆ ಇಂಥಹಾ ತಪ್ಪು ಮಾಡಲ್ಲ ಕ್ಷಮಿಸಿಬಿಡಿ: ರಾಜೇಂದ್ರ ಪ್ರಸಾದ್ ಮನವಿ

ತೆಲುಗು ಚಿತ್ರರಂಗದ (Tollywood) ಹಿರಿಯ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ರಾಜೇಂದ್ರ ಪ್ರಸಾದ್ ಅವರು ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, ತಾವು ಆಡಿದ ಮಾತಿನಿಂದ ಆಗಿರುವ ವಿವಾದದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿರುವುದು ಮಾತ್ರವೇ ಅಲ್ಲದೆ. ‘ತಾವು ಜೀವನದಲ್ಲಿ ಇನ್ನೊಮ್ಮೆ ಇಂಥಹಾ ಘೋರ ತಪ್ಪು ಮಾಡುವುದಿಲ್ಲ, ಇದೊಂದು ಬಾರಿ ನನ್ನನ್ನು ಕ್ಷಮಿಸಿಬಿಡಿ’ ಎಂದು ತಮಿಳು ಜನರ ಬಳಿ ಕೈಮುಗಿದು ಕ್ಷಮೆ ಕೇಳಿದ್ದಾರೆ.

ಕೆಲ ದಿನಗಳ ಹಿಂದೆ ರಾಜೇಂದ್ರ ಪ್ರಸಾದ್ ಅವರಿಗೆ ಕಾಂತಾರಾವ್ ಪ್ರಶಸ್ತಿ ನೀಡಲಾಯ್ತು. ಕಾರ್ಯಕ್ರಮದಲ್ಲಿ ಭಾವಾವೇಶದಿಂದ ಮಾತನಾಡಿದ ರಾಜೇಂದ್ರ ಪ್ರಸಾದ್, ಕಾಂತಾರಾವ್ ಅವರ ನಟನೆಯನ್ನು ಕೊಂಡಾಡುತ್ತಾ, ‘ಕಾಂತಾರಾವ್ ಮಾಡುತ್ತಿದ್ದ ಸಿನಿಮಾ, ಅವರ ಜನಪದ ಶೈಲಿನ ನಟನೆಯನ್ನು ನೋಡಿ ಎಂಜಿಆರ್ ಅಂಥಹವರೇ ಪ್ಯಾಂಟಿನಲ್ಲಿ ಮೂತ್ರವಿಸರ್ಜನೆ ಮಾಡಿಕೊಳ್ಳುತ್ತಿದ್ದರು. ಇವನ್ಯಾರಯ್ಯ, ಭಾರತೀಯ ಸಿನಿಮಾವನ್ನು ಎಲ್ಲಿಗೋ ತೆಗೆದುಕೊಂಡು ಹೋಗುತ್ತಾನೆ ಎಂದು ಅವರು ಭಯಗೊಂಡು ಮೂತ್ರ ಮಾಡಿಕೊಳ್ಳುತ್ತಿದ್ದರು’ ಎಂದಿದ್ದರು.

ತಮಿಳು ಚಿತ್ರರಂಗದ ದಿಗ್ಗಜ ನಟ, ಮಾಜಿ ಸಿಎಂ ಸಹ ಆಗಿರುವ ಎಂಜಿಆರ್ ಅವರ ಬಗ್ಗೆ ರಾಜೇಂದ್ರ ಪ್ರಸಾದ್ ಆಡಿದ್ದ ಕೀಳು ಮಾತುಗಳನ್ನು ತಮಿಳು ಸಿನಿಮಾ ಪ್ರೇಮಿಗಳು ಮಾತ್ರವಲ್ಲದೆ ತಮಿಳು ಚಿತ್ರರಂಗದ ಪ್ರಮುಖ ನಟರುಗಳಾದ ನಾಸರ್, ನಟ ವಿಶಾಲ್ ಇನ್ನೂ ಹಲವರು ಖಂಡಿಸಿದ್ದರು. ಕ್ಷಮೆ ಕೇಳುವಂತೆ ಒತ್ತಾಯ ಸಹ ಮಾಡಿದ್ದರು. ಅದರಂತೆ ಇದೀಗ ರಾಜೇಂದ್ರ ಪ್ರಸಾದ್ ಕ್ಷಮೆ ಕೋರಿದ್ದಾರೆ.

ಇದನ್ನೂ ಓದಿ:ತಮಿಳಿನ ದಿಗ್ಗಜ ನಟ, ಮಾಜಿ ಸಿಎಂ ಎಂಜಿಆರ್​​ ಬಗ್ಗೆ ತೆಲುಗು ಹಿರಿಯ ನಟನ ಕೀಳು ಹೇಳಿಕೆ

‘ಎಂಜಿಆರ್, ತಮಿಳು ಚಿತ್ರರಂಗದ ದೇವರು. ನಾನು ಅವರನ್ನು ಟೀಕೆ ಮಾಡುವಷ್ಟು ದೊಡ್ಡವನಲ್ಲ. ನಾನು ಮದ್ರಾಸ್ ಫಿಲಂ ಇನ್​​ಸ್ಟಿಟ್ಯೂಟ್​​ನಲ್ಲಿ ಕಲಿಯುವಾಗ ಅವರು ಸಿಎಂ, ಅವರು ಸಹ ಒಮ್ಮೆ ನಮ್ಮ ಇನ್​​ಸ್ಟಿಟ್ಯೂಟಿಗೆ ಭೇಟಿ ನೀಡಿದ್ದರು. ಅವರೊಬ್ಬ ಮಹಾನ್ ನಟ. ಕಾಂತಾರಾವ್ ಅವರ ಬಗ್ಗೆ ಲೋಕಾಭಿರಾಮವಾಗಿ ಮಾತನಾಡುವಾಗ ನನ್ನ ಬಾಯಿಂದ ಅದೊಂದು ವಾಕ್ಯ ತಪ್ಪಿ ಬಂದುಬಿಟ್ಟಿತು. ನಾನು ಎಂಜಿಆರ್ ಬಗ್ಗೆ ಅಪಾರ ಗೌರವ ಉಳ್ಳವನು. ಈ ಬಾರಿ ನನ್ನನ್ನು ಕ್ಷಮಿಸಿಬಿಡಿ, ಮುಂದೆ ಜೀವನದಲ್ಲಿ ಇನ್ನೆಂದೂ ಇಂಥಹಾ ತಪ್ಪು ನಾನು ಮಾಡುವುದಿಲ್ಲ’ ಎಂದು ಕೈ ಮುಗಿದು ಕ್ಷಮೆ ಕೇಳಿದ್ದಾರೆ ಹಿರಿಯ ನಟ.

ರಾಜೇಂದ್ರ ಪ್ರಸಾದ್ ಅವರು ಇತ್ತೀಚೆಗೆ ತಮ್ಮ ಹೇಳಿಕೆಗಳಿಂದ ವಿವಾದಗಳನ್ನು ಸೃಷ್ಟಿಸುತ್ತಲೇ ಇದ್ದಾರೆ. ಈ ಹಿಂದೆ ಬ್ರಹ್ಮಾನಂದಂ, ಆಲಿ ಅವರ ಬಗ್ಗೆ ಕೀಳಾಗಿ ಮಾತನಾಡಿದ್ದರು. ತೆಲುಗು ಸಿನಿಮಾ ಒಂದರಲ್ಲಿ ನಟಿಸಿದ್ದ ಕ್ರಿಕೆಟಿಗ ಡೇವಿಡ್ ವಾರ್ನರ್ ಬಗ್ಗೆಯೂ ಇವರು ನೀಡಿದ್ದ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿದ್ದವು. ಆದರೆ ಈ ಬಾರಿ ಅವರು ಕ್ಷಮೆ ಕೇಳುವ ಮೂಲಕ ವಿವಾದಕ್ಕೆ ಕೊನೆ ಹಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Yadgir Court Recruitment 2026: ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು

ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​ ಇಲ್ಲಿದೆ. ಅಧಿಕೃತ ಅಧಿಸೂಚನೆಯ ಮೂಲಕ ಯಾದಗಿರಿ ಇ-ಕೋರ್ಟ್ ಪ್ರಸ್ತುತ ಖಾಲಿ ಇರುವ ಒಟ್ಟು 14 ಪ್ರೊಸೆಸ್ ಸರ್ವರ್ ಮತ್ತು ಪಿಯೋನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ಅಡಿಯಲ್ಲಿ ಬರುವ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,000 ರಿಂದ ರೂ. 61,300 ರವರೆಗೆ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ನೇಮಕಾತಿ ಪ್ರಕ್ರಿಯೆಗೆ ಅರ್ಹರಾಗಿದ್ದು, ವಯೋಮಿತಿಯು 29 ಜನವರಿ 2026 ರಂತೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷಗಳ ಒಳಗಿರಬೇಕು. ಸರ್ಕಾರದ ನಿಯಮಾನುಸಾರ ಎಸ್‌ಸಿ/ಎಸ್‌ಟಿ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳು, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ ಅಂಗವಿಕಲ ಅಥವಾ ವಿಧವೆ ಅಭ್ಯರ್ಥಿಗಳಿಗೆ 10 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ಏಪ್ರಿಲ್ 12 ರ ಒಳಗಾಗಿ ಆನ್‌ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗದವರಿಗೆ ರೂ. 200 ಮತ್ತು ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ (SC/ST/Cat-1/PH) ರೂ. 100 ನಿಗದಿಪಡಿಸಲಾಗಿದ್ದು, ಇದನ್ನು ಆನ್‌ಲೈನ್ ಮೂಲಕವೇ ಪಾವತಿಸಬಹುದಾಗಿದೆ.

ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10th ಪಾಸಾಗಿದ್ರೆ ಸಾಕು!

ಅಭ್ಯರ್ಥಿಗಳ ಆಯ್ಕೆಯು ಕೇವಲ ಸಂದರ್ಶನದ ಮೂಲಕ ನಡೆಯಲಿದ್ದು, ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ತಮ್ಮ ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಮತ್ತು ಶೈಕ್ಷಣಿಕ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಅವಶ್ಯಕ. ಅಧಿಕೃತ ಇ-ಕೋರ್ಟ್ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಗತ್ಯ ವಿವರಗಳನ್ನು ಭರ್ತಿ ಮಾಡಿ, ದಾಖಲೆಗಳನ್ನು ಅಪ್‌ಲೋಡ್ ಮಾಡಿದ ನಂತರ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬಹುದು. ಯಾದಗಿರಿಯಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇದು ಸುಸಂದರ್ಭವಾಗಿದ್ದು, ಕೊನೆಯ ದಿನಾಂಕದವರೆಗೆ ಕಾಯದೆ ಶೀಘ್ರವಾಗಿ ಅರ್ಜಿ ಸಲ್ಲಿಸುವುದು ಸೂಕ್ತ.

ಅಧಿಕೃತ ಅಧಿಸೂಚನೆ ಓದಲು ಈ ಲಿಂಕ್​ ಮೇಲೆ ಕ್ಲಿಕ್​ ಮಾಡಿ: Yadgiri-District-Court-Recruitment-2026-Apply-for-Process-Server-Posts-Notification

ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್​​ಗೆ ಭೇಟಿ ನೀಡಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶಿರಾಡಿಘಾಟ್​​ನಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸಾವು, ಓರ್ವನ ಸ್ಥಿತಿ ಗಂಭೀರ

ಮಂಗಳೂರು, (ಮಾರ್ಚ್ 13): KSRTC ರಾಜಹಂಸ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು,  ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ  ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್​​​ನ (shiradi ghat) ಗುಂಡ್ಯ ಸಮೀಪ ನಡೆದಿದೆ. ಉಜಿರೆ ನಿವಾಸಿಗಳಾದ ಶ್ರೀಧರ ಮರಕಡ, ಜನಾರ್ದನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇನ್ನು ಈ ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತೋರ್ವ ಸುರೇಶ್ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

ನಾಲ್ವರು ಒಂದೇ ಕಾರಿನಲ್ಲಿ ಸಕಲೇಶಪುರದಲ್ಲಿ ಮದುವೆ ಮುಗಿಸಿಕೊಂಡು ವಾಪಸ್ ಉಜಿರೆ ಕಡೆ ಹೋಗುತ್ತಿದ್ದರು. ಇನ್ನು ಕೆಎಸ್​​ಆರ್​​ಟಿಸಿ ರಾಜಹಂಸ ಬಸ್ ಮಂಗಳೂರು ಕಡೆಯಿಂದ ಬಂದಿದ್ದು, ಶಿರಾಡಿಘಾಟ್​ನ ಗುಂಡ್ಯ ಸಮೀಪ ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Source link

ಚಿಂತಿತರಾಗಬೇಡಿ, ಬೇಕಾದಷ್ಟು ಎಲ್​ಪಿಜಿ ಸಂಗ್ರಹವಿದೆ; ಸರ್ಕಾರದಿಂದ ಗ್ರಾಹಕರಿಗೆ ಮನವಿ

ನವದೆಹಲಿ, ಮಾರ್ಚ್ 13: ಭಾರತದ ಅನೇಕ ನಗರಗಳಲ್ಲಿ ಹೋಟೆಲ್, ರೆಸ್ಟೋರೆಂಟ್​​ಗಳಲ್ಲಿ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್​ಗಳ ಅಭಾವ ಎದುರಾಗುತ್ತಿದ್ದಂತೆ ದಿನಬಳಕೆಯ ಎಲ್​ಪಿಜಿ ಸಿಲಿಂಡರ್​ಗಳನ್ನು ಬುಕ್ ಮಾಡುವ ಗ್ರಾಹಕರ ಸಂಖ್ಯೆ ವಿಪರೀತ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಗ್ರಾಗಕರಿಗೆ ಸ್ಪಷ್ಟನೆ ನೀಡಿದ್ದು, ಬೇಕಾದಷ್ಟು ಸಿಲಿಂಡರ್ ಸ್ಟಾಕ್ ಇರುವುದರಿಂದ ಯಾರೂ ಗೊಂದಲಕ್ಕೊಳಗಾಗಬೇಡಿ, ಚಿಂತಿತರಾಗಬೇಡಿ, ಆತುರದಿಂದ ಸಿಲಿಂಡರ್ ಬುಕ್ ಮಾಡಬೇಡಿ ಎಂದು ಸೂಚಿಸಿದೆ.

Source link

ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ: ಸಾವು-ಬದುಕಿನ ನಡುವೆ ಮಹಿಳೆಯ ಹೋರಾಟ

ಬೆಂಗಳೂರು, ಮಾರ್ಚ್​​ 13: ಹೆತ್ತ ತಾಯಿ ಹೊತ್ತ ನಾಡು ಸ್ವರ್ಗಕ್ಕಿಂತಲೂ ಮಿಗಿಲು ಎಂಬ ಮಾತಿದೆ. ಜನ್ಮ ನೀಡಿದ ತಾಯಿ ಅಂದ್ರೆ ನಡೆದಾಡುವ ದೇವರು ಎಂದು ನಾವು ಪೂಜಿಸುತ್ತೇವೆ. ಆದರೆ ಇಲ್ಲೊಬ್ಬ ಮಗ ಆಸ್ತಿಗಾಗಿ ಅಂತಹ ತಾಯಿ ಮೇಲೆಯೇ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಪಾಪಿ ಮಗನ ಕ್ರೌರ್ಯಕ್ಕೆ ವೃದ್ಧೆ ಆಸ್ಪತ್ರೆ ಸೇರಿದ್ದಾರೆ. ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲಕ್ಷ್ಮೀ ಎಂಬವರು ಗಂಭೀರ ಗಾಯಗೊಂಡಿದ್ದಾರೆ.

ಜಯನಗರದ ನಿವಾಸಿ ಲಕ್ಷ್ಮೀ ಹಾಗೂ ಸಣ್ಣಸಿದ್ದಪ್ಪ ದಂಪತಿಗೆ 3 ಜನ ಗಂಡು ಮಕ್ಕಳು. ಈ ಪೈಕಿ ಲಕ್ಷ್ಮೀ ಅವರ ಪತಿ ಸಣ್ಣಸಿದ್ದಪ್ಪ ಮತ್ತು ಎರಡನೇ ಮಗ ಸುರೇಶ್​​ ಆರೋಗ್ಯ ಸಮಸ್ಯೆಯಿಂದ ಮೃತಪಟ್ಟಿದ್ದಾರೆ. ಕುಟುಂಬ ಜಯನಗರದಲ್ಲಿ ಮನೆ, ಬನ್ನೇರುಘಟ್ಟ ಬಳಿ ಫ್ಯಾಕ್ಟರಿ ಮತ್ತು ಶಿರಾ ಬಳಿ 7 ಎಕರೆ ಜಮೀನು ಹೊಂದಿದ್ದು, ಆಸ್ತಿಗಾಗಿ ಮೊದಲನೇ ಮಗ ರಮೇಶ್ ಹಾಗೂ ಮೂರನೇ ಮಗ ಪ್ರಕಾಶ್ ನಡುವೆ ಕಲಹ ನಡೆದಿತ್ತು. ಆಸ್ತಿ ಭಾಗ ಆಗಬೇಕೆಂದು ಮೂರನೇ ಮಗ ಪ್ರಕಾಶ್ ಕೋರ್ಟ್ ಮೆಟ್ಟಿಲು ಕೂಡ ಏರಿದ್ದ. 2016ರಿಂದಲೂ ಇದರ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ; ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ಯಾರು?

ಈ ನಡುವೆ ನಿನ್ನೆ ಜಯನಗರದ 9ನೇ ಬ್ಲಾಕ್​​ನ ಮನೆ ಬಳಿ ಬಂದ ಪ್ರಕಾಶ್ ಏಕಾಏಕಿ ಮನೆ ರಿನೋವೇಷನ್ ಮಾಡಲು ಮುಂದಾಗಿದ್ದಾನೆ. ಆಗ ತಾಯಿ ಕೋರ್ಟ್​​ನಲ್ಲಿ ಕೇಸ್ ಇರುವಾಗ ಇದೆಲ್ಲ ಯಾಕೆ ಮಾಡ್ತೀಯ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಕುಪಿತಗೊಂಡ ಮಗ ಪ್ರಕಾಶ್ ತಾಯಿ ಮನೆಯ ವಸ್ತುಗಳನ್ನೆಲ್ಲ ಒಡೆದು ಹಾಳುಮಾಡಿದ್ದಾನೆ. ಜೊತೆಗೆ ವಾಕಿಂಗ್ ಸ್ಟಿಕ್​​ನಿಂದ ತಲೆಗೆ ಹೊಡೆದಿದ್ದಾನೆ‌‌. ಪೆಟ್ಟಾಗಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಲಕ್ಷ್ಮೀ ಅವರನ್ನು ಮೊದಲ ಮಗ ರಮೇಶ್​​ ಆಸ್ಪತ್ರೆಗೆ ದಾಖಲಿಸಿದ್ದು, ಜಯನಗರ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ನೀಡಲಾಗ್ತಿದೆ. ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕಾಶ್ ವಿರುದ್ಧ ದೂರು ದಾಖಲಾಗಿದೆ. ಸದ್ಯ FIR ದಾಖಲಿಸಿರೋ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು

ಕಾರವಾರ, ಮಾರ್ಚ್​ 13: ಯುಎಇಯಿಂದ ಡಾಂಬರು ಹೊತ್ತು ಕಾರವಾರ ಬಂದರಿಗೆ ಚೆಂಗ್ ಎಕ್ಸ್ ಎಂಬ ಹಡಗು ಆಗಮಿಸಿದೆ. ಮಧ್ಯಪ್ರಾಚ್ಯದಲ್ಲಿನ ಪ್ರಸ್ತುತ ಪರಿಸ್ಥಿತಿ ಮತ್ತು ಹರ್ಮುಜ್ ಜಲಸಂಧಿಯಲ್ಲಿನ ನಿರ್ಬಂಧಗಳ ಕಾರಣದಿಂದ ಪೆಟ್ರೋಲಿಯಂ ಮತ್ತು ಕಚ್ಚಾ ಡಾಂಬರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಈ ನಿರ್ಬಂಧದ ನಡುವೆಯೂ, ಮಾರ್ಚ್ 3ರಂದು ಯುಎಇಯಿಂದ ಹೊರಟಿದ್ದ ಈ ಹಡಗು ಮತ್ತೊಂದು ಮಾರ್ಗದ ಮೂಲಕ ಸುರಕ್ಷಿತವಾಗಿ ಬಂದರನ್ನು ತಲುಪಿದೆ. ಸರಿಸುಮಾರು 5,500 ಟನ್ ಸಾಮರ್ಥ್ಯದ ಈ ಹಡಗು 3,100 ಟನ್ ಡಾಂಬರನ್ನು ಹೊತ್ತು ಬಂದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ವಿಜಯ್ ಜೊತೆಗಿನ ಅಫೇರ್ ಬಗ್ಗೆ ನೇರ ಪ್ರಶ್ನೆ: ತ್ರಿಶಾ ಪ್ರತಿಕ್ರಿಯೆ ಹೇಗಿತ್ತು ನೋಡಿ

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ ಮತ್ತು ತಮಿಳು ನಟ ದಳಪತಿ ವಿಜಯ್ (Thalapthy Vijay) ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮದುವೆ ಸಮಾರಂಭವೊಂದಕ್ಕೆ ಇಬ್ಬರೂ ಜೊತೆಯಾಗಿ ಆಗಮಿಸಿದ್ದು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ಈ ನಡುವೆ, ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ತ್ರಿಶಾ ಅವರಿಗೆ ವರದಿಗಾರರು ವಿಜಯ್ ಕುರಿತಾದ ಪ್ರಶ್ನೆಗಳಿಂದ ಮುತ್ತಿಗೆ ಹಾಕಿದ್ದಾರೆ. ಆದರೆ ತ್ರಿಶಾ (Trisha Krishnan) ಅವರು ಯಾವುದೇ ಉತ್ತರ ನೀಡದೇ ಮೌನ ತಾಳಿದ್ದಾರೆ.

ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ತ್ರಿಶಾ, ಬಿಳಿ ಟಿ-ಶರ್ಟ್, ಕಪ್ಪು ಪ್ಯಾಂಟ್ ಮತ್ತು ಡೆನಿಮ್ ಜಾಕೆಟ್ ಧರಿಸಿ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಅವರು ಒಳಗೆ ನಡೆಯುತ್ತಿದ್ದಂತೆ, ಅಲ್ಲಿದ್ದ ವರದಿಗಾರರು ವಿಜಯ್ ಜೊತೆಗಿನ ಸಂಬಂಧ ಮತ್ತು ಇತ್ತೀಚಿನ ವಿವಾದಗಳ ಬಗ್ಗೆ ಪ್ರಶ್ನೆಗಳ ಸುರಿಮಳೆಗೈದರು. ಆದರೆ, ತ್ರಿಶಾ ಯಾವುದೇ ಪ್ರಶ್ನೆಗೂ ಪ್ರತಿಕ್ರಿಯಿಸದೆ, ಅತ್ಯಂತ ಶಾಂತವಾಗಿ ಮತ್ತು ಗಂಭೀರವಾಗಿ ನಡೆದು ಹೋದರು. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೆಲವು ದಿನಗಳ ಹಿಂದೆ ನಿರ್ಮಾಪಕ ಕಲ್ಪತಿ ಸುರೇಶ್ ಅವರ ಮಗನ ಮದುವೆಯ ರಿಸೆಪ್ಷನ್‌ನಲ್ಲಿ ವಿಜಯ್ ಮತ್ತು ತ್ರಿಶಾ ಒಟ್ಟಿಗೆ ಕಾಣಿಸಿಕೊಂಡಿದ್ದರು. ವಿಶೇಷವೆಂದರೆ, ಇಬ್ಬರೂ ಕ್ರೀಮ್ ಮತ್ತು ಗೋಲ್ಡ್ ಬಣ್ಣದ ಮ್ಯಾಚಿಂಗ್ ಉಡುಪುಗಳನ್ನು ಧರಿಸಿದ್ದರು. ಇದು ಅಭಿಮಾನಿಗಳಲ್ಲಿ ಮತ್ತಷ್ಟು ಕುತೂಹಲ ಮೂಡಿಸಿತ್ತು. ಆ ಮದುವೆಯಲ್ಲಿ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದು ವಿವಾದಕ್ಕೆ ಕಾರಣ ಆಯಿತು.

ಈ ಬೆಳವಣಿಗೆಗಳ ನಡುವೆ, ವಿಜಯ್ ಪತ್ನಿ ಸಂಗೀತಾ ಸೊರ್ನಲಿಂಗಂ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿರುವುದು ಸಂಚಲನ ಮೂಡಿಸಿದೆ. ಅರ್ಜಿಯಲ್ಲಿ ಅವರು ವಿಜಯ್ ಅವರ ಪರಸ್ತ್ರೀ ಸಂಬಂಧದ ಬಗ್ಗೆ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ವಿಜಯ್ ಅವರು ನಟಿಯೊಬ್ಬರ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ ಎನ್ನಲಾಗುತ್ತಿದ್ದು, ಇದು ನೇರವಾಗಿ ತ್ರಿಶಾ ಕೃಷ್ಣನ್ ಅವರತ್ತ ಬೆರಳು ಮಾಡುವಂತೆ ಮಾಡಿದೆ.

ಇದನ್ನೂ ಓದಿ: ಡೇಟಿಂಗ್ ವದಂತಿ; ಎಲ್ಲರಿಗೂ ಗೊಂದಲ ಮೂಡಿಸಿದ ತ್ರಿಶಾ ಕೃಷ್ಣನ್

ವಿಚ್ಛೇದನದ ಬಗ್ಗೆ ವಿಜಯ್ ನೇರವಾಗಿ ಮಾತನಾಡಿಲ್ಲವಾದರೂ, ಇತ್ತೀಚೆಗೆ ನಡೆದ ಟಿವಿಕೆ ರ‍್ಯಾಲಿಯಲ್ಲಿ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದರು. ‘ಇತ್ತೀಚಿನ ದಿನಗಳಲ್ಲಿ ಕೆಲವು ವಿಷಯಗಳು ಓಡಾಡುತ್ತಿವೆ. ಇಂತಹ ಆರೋಪಗಳ ಬಗ್ಗೆ ನೀವು ಹೋರಾಡುತ್ತಿರುವುದನ್ನು ಮತ್ತು ನೋವು ಅನುಭವಿಸುತ್ತಿರುವುದನ್ನು ನಾನು ನೋಡುತ್ತಿದ್ದೇನೆ. ನಿಮ್ಮ ಮನಸ್ಸಿಗೆ ನೋವಾದಾಗ ನನಗೂ ನೋವಾಗುತ್ತದೆ. ಆ ಸಮಸ್ಯೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ, ಅದಕ್ಕೆ ಅಷ್ಟು ಬೆಲೆ ನೀಡುವ ಅಗತ್ಯವಿಲ್ಲ. ನಾನು ಎಲ್ಲವನ್ನೂ ನಿಭಾಯಿಸುತ್ತೇನೆ’ ಎಂದು ಅಭಿಮಾನಿಗಳಿಗೆ ದಳಪತಿ ವಿಜಯ್ ಧೈರ್ಯ ತುಂಬಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ

ದಿ ಹಂಡ್ರೆಡ್ ಲೀಗ್‌ನಲ್ಲಿ ಸನ್‌ರೈಸರ್ಸ್ ಲೀಡ್ಸ್ ತಂಡ ಪಾಕಿಸ್ತಾನಿ ಆಟಗಾರ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಸನ್‌ರೈಸರ್ಸ್ ಲೀಡ್ಸ್ ಐಪಿಎಲ್ ಫ್ರಾಂಚೈಸ್ ಸನ್‌ರೈಸರ್ಸ್ ಹೈದರಾಬಾದ್‌ನ ಅಂಗಸಂಸ್ಥೆಯಾಗಿದೆ. ಹೀಗಾಗಿ ವಿದೇಶಿ ಲೀಗ್‌ನಲ್ಲಿ ಪಾಕಿಸ್ತಾನಿ ಆಟಗಾರನನ್ನು ಖರೀದಿಸಿದ್ದಕ್ಕಾಗಿ ಫ್ರಾಂಚೈಸಿಯ ಮಾಲೀಕರಾದ ಕಾವ್ಯ ಮಾರನ್ ವಿರುದ್ಧ ಭಾರತೀಯರು ಕೋಪಗೊಂಡಿದ್ದು, ಸನ್‌ರೈಸರ್ಸ್ ಗ್ರೂಪ್ ಮೇಲೆ ಟೀಕೆಗಳ ಮಳೆಗರೆದಿದ್ದಾರೆ. ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಪ್ರತಿಕ್ರಿಯಿಸಿದ್ದು, ವಿದೇಶಿ ಲೀಗ್‌ನಲ್ಲಿ ಯಾವ ತಂಡವು ಯಾವ ಆಟಗಾರನನ್ನು ಖರೀದಿಸುತ್ತದೆ ಎಂಬುದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದಿದೆ.

ಮಾರ್ಚ್ 12 ರಂದು ಇಂಗ್ಲೆಂಡ್‌ನಲ್ಲಿ ನಡೆದ ಹರಾಜಿನಲ್ಲಿ ಕಾವ್ಯಾ ಮಾರನ್ ಒಡೆತನದ ಸನ್‌ರೈಸರ್ಸ್ ಲೀಡ್ಸ್ ತಂಡವು ಪಾಕಿಸ್ತಾನಿ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು 2.3 ಕೋಟಿ ರೂ. ಗೆ ಖರೀದಿಸಿತು. ಸನ್‌ರೈಸರ್ಸ್ ಲೀಡ್ಸ್ ಹೊರತಾಗಿ ಇತರ ಮೂರು ಭಾರತೀಯ ಒಡೆತನದ ಫ್ರಾಂಚೈಸಿಗಳು ಯಾವುದೇ ಪಾಕಿಸ್ತಾನಿ ಆಟಗಾರನನ್ನು ಖರೀದಿ ಮಾಡಲಿಲ್ಲ. ಹೀಗಾಗಿ ಸನ್‌ರೈಸರ್ಸ್ ಲೀಡ್ಸ್ ಫ್ರಾಂಚೈಸಿಯ ನಡೆಯ ಬಗ್ಗೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಬಹಿಷ್ಕರಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಇದೆಲ್ಲದರ ನಡುವೆ ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ, ‘ಇದು ಬಿಸಿಸಿಐ ವ್ಯಾಪ್ತಿಯಿಂದ ಹೊರಗಿದೆ. ಬಿಸಿಸಿಐ ನಡೆಸುವ ಐಪಿಎಲ್‌ನಲ್ಲಿ ಪಾಕ್ ಆಟಗಾರರಿಗೆ ಅವಕಾಶವಿಲ್ಲ. ಆದರೆ ವಿದೇಶಿ ಲೀಗ್​ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ಯಾವ ಲೀಗ್‌ನಲ್ಲಿ ಯಾರು ಏನು ಮಾಡುತ್ತಿದ್ದಾರೆ, ಯಾವ ಆಟಗಾರನನ್ನು ಖರೀದಿಸಿದ್ದಾರೆ ಎಂಬುದು ನಮಗೆ ಬೇಕಿಲ್ಲ. ಇದರಲ್ಲಿ ನಾವು ಹೇಗೆ ಹಸ್ತಕ್ಷೇಪ ಮಾಡಬಹುದು?. ಇದು ನಮಗೆ ಅಪ್ರಸ್ತುತವಾಗುತ್ತದೆ’ ಎಂದಿದ್ದಾರೆ.

ನಾಲ್ಕು ಐಪಿಎಲ್ ಫ್ರಾಂಚೈಸಿಗಳ ಮಾಲೀಕರು ದಿ ಹಂಡ್ರೆಡ್ ಲೀಗ್​ನಲ್ಲಿ ತಂಡಗಳ ಒಡೆತನ ಹೊಂದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ನಾರ್ದರ್ನ್ ಸೂಪರ್‌ಚಾರ್ಜರ್ಸ್ (ಈಗ ಸನ್‌ರೈಸರ್ಸ್ ಲೀಡ್ಸ್), ಲಕ್ನೋ ಸೂಪರ್‌ಜೈಂಟ್ಸ್ ಮ್ಯಾಂಚೆಸ್ಟರ್ ಒರಿಜಿನಲ್ಸ್ (ಈಗ ಮ್ಯಾಂಚೆಸ್ಟರ್ ಸೂಪರ್‌ಜೈಂಟ್ಸ್), ಮುಂಬೈ ಇಂಡಿಯನ್ಸ್ ಓವಲ್ ಇನ್ವಿನ್ಸಿಬಲ್ಸ್ (ಈಗ ಎಂಐ ಲಂಡನ್) ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಸಹ-ಮಾಲೀಕ ಜಿಎಂಆರ್ ಸದರ್ನ್ ಬ್ರೇವ್ ತಂಡವನ್ನು ಖರೀದಿಸಿದ್ದಾರೆ. ಇವುಗಳಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ಮಾತ್ರ ಪಾಕಿಸ್ತಾನಿ ಆಟಗಾರನನ್ನು ಖರೀದಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link