Headlines

nagaraj11081993

ದೇವಸ್ಥಾನಗಳ ಚಿನ್ನದ ನಗದೀಕರಣದ ಯಾವ ಯೋಜನೆಯೂ ಇಲ್ಲ; ವೈರಲ್ ಸುದ್ದಿ ಕೇವಲ ವದಂತಿ: ಕೇಂದ್ರ ಸರ್ಕಾರ ಸ್ಪಷ್ಟನೆ – Kannada News | Temple Gold Monetization Rumor Debunked: PIB Confirms No New Scheme

ನವದೆಹಲಿ, ಮೇ 19: ದೇವಸ್ಥಾನದಲ್ಲಿರುವ ಚಿನ್ನವನ್ನು ನಗದೀಕರಣಗೊಳಿಸಲು (Gold Monetisation scheme) ಸರ್ಕಾರ ಯೋಜಿಸುತ್ತಿದೆ ಎಂಬಂತಹ ಕೆಲ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. “ಕೇಂದ್ರ ಸರ್ಕಾರವು ದೇಶದ ದೇವಸ್ಥಾನಗಳಿಗಾಗಿ ಹೊಸ ‘ಚಿನ್ನದ ಬಾಂಡ್ ಯೋಜನೆ’ (Gold Bond Scheme) ಯನ್ನು ಜಾರಿಗೊಳಿಸಲು ಮತ್ತು ದೇವಸ್ಥಾನದ ಗೋಪುರ ಇತ್ಯಾದಿ ಕಟ್ಟಡಗಳಲ್ಲಿ ಹಾಕಲಾಗಿರುವ ಗೋಲ್ಡ್ ಪ್ಲೇಟ್ ಇತ್ಯಾದಿ ಚಿನ್ನವನ್ನು ದೇಶದ ಸ್ಟ್ರಾಟಿಜಿಕ್ ರಿಸರ್ವ್ ಎಂದು ಪರಿಗಣಿಸಲು ಯೋಜಿಸುತ್ತಿದೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಸುದ್ದಿಯನ್ನು ಭಾರತ ಸರ್ಕಾರ ಅಧಿಕೃತವಾಗಿ…

Read More

ಎರಡೆರಡು ಬಾರಿ ಸೆರೆ, ಮನೆಗಳ ಬಾಗಿಲು ಮುರಿದು ಪುಂಡಾಟ: ಕಾದಾಟದಲ್ಲಿ ಮೃತಪಟ್ಟ ಮಾರ್ತಾಂಡ ಆನೆಗಿತ್ತು ಭಯಂಕರ ಇತಿಹಾಸ – Kannada News | Dubare Camp Elephant Martanda Dies in Fight; Had a Fearsome Past

ಕಾದಾಟದಲ್ಲಿ ಮೃತಪಟ್ಟ ಮಾರ್ತಾಂಡ ಆನೆಗಿತ್ತು ಭಯಂಕರ ಇತಿಹಾಸ ಮಡಿಕೇರಿ, ಮೇ 19: ಕುಶಾಲನಗರದ ದುಬಾರೆ ಕ್ಯಾಂಪ್​​ನಲ್ಲಿ ಕಾದಾಟದ ವೇಳೆ ಆನೆ ಕಂಜನ್​​ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಆನೆ ಮಾರ್ತಾಂಡ ಚಿಕಿತ್ಸೆ ಫಲಿಸದೆ ಇಂದು (ಮೇ 19  ಮೃತಪಟ್ಟಿದೆ. ಮೂರು ವರ್ಷಗಳ ಹಿಂದೆ ಮೇ 19ರಂದೇ ಮಾರ್ತಾಂಡನನ್ನು ಸೆರೆಹಿಡಿಯಲಾಗಿತ್ತು.  ಕಾಕತಾಳೀಯ ಎಂಬಂತೆ ಅದೇ ತಾರೀಕಿನಂದು ಆನೆಯೀಗ ಮೃತಪಟ್ಟಿದೆ. 2023ರಲ್ಲಿ ಸೆರೆಯಾಗಿ ಪಳಗಿದ ಬಳಿಕ ಮಾರ್ತಾಂಡ ಶಾಂತ ಸ್ವಭಾವದಿಂದ ಇರುತ್ತಿತ್ತು ಎನ್ನಲಾಗಿದೆ. ಡಾ‌. ಚಿಟ್ಟಿಯಪ್ಪ ನೇತೃತ್ವದಲ್ಲಿ ಆನೆಯ ಮರಣೋತ್ತರ ಪರೀಕ್ಷೆ…

Read More

ಭಯ ಬೇಡ ನಾನಿದ್ದೀನಿ, ಪತ್ನಿ ಸಮಾಧಿ ಪಕ್ಕ ತನ್ನ ಸಮಾಧಿ ನಿರ್ಮಿಸಿಕೊಂಡ ಪತಿ – Kannada News | Heartbroken Husband Builds Resting Place Beside Wife’s Grave in Andhra Pradesh

ಕಡಪ, ಮೇ 19: ಬದುಕಿನ ಪಯಣದಲ್ಲಿ ಸಪ್ತಪದಿ ತುಳಿದು ಒಂದಾದ ನಾವು, ಸಾವಿನ ನಂತರವೂ ಬೇರೆಯಾಗಬಾರದು ಎಂಬ ಈ ಮಾತುಗಳನ್ನು ಅಕ್ಷರಶಃ ನಿಜವಾಗಿಸಿದ್ದಾರೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಚಿನ್ನ ಚೌಕ್‌ನ ಸಹಕಾರಿ ಕಾಲೋನಿ ನಿವಾಸಿ ಪಿ. ರಾಮಮೋಹನ್ ರಾಜು. ಕ್ಯಾನ್ಸರ್‌(Cancer)ನಿಂದ ಮೃತಪಟ್ಟ ಪತ್ನಿಯ ಮೇಲಿನ ಪ್ರೀತಿಗಾಗಿ, ಅವರು ಸ್ಮಶಾನದಲ್ಲೇ ಆಕೆಯ ಸಮಾಧಿಯ ಪಕ್ಕದಲ್ಲಿ ತನಗಾಗಿಯೂ ಒಂದು ಸಮಾಧಿಯನ್ನು ನಿರ್ಮಿಸಿಕೊಂಡಿದ್ದಾರೆ. ನಿವೃತ್ತ ಸರ್ಕಾರಿ ಉದ್ಯೋಗಿಯಾದ ಪಿ. ರಾಮಮೋಹನ್ ರಾಜು ಅವರು ಭವಿಷ್ಯ ನಿಧಿ (PF) ಕಚೇರಿಯಲ್ಲಿ ಅಧಿಕಾರಿಯಾಗಿ ಹಾಗೂ…

Read More

ಶಿವರಾಜ್ ಕುಮಾರ್ ಗೀತಾ ದಂಪತಿಗಳ ವಿವಾಹ ವಾರ್ಷಿಕೋತ್ಸವ: ಇಲ್ಲಿವೆ ಚಿತ್ರಗಳು

ನಟ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರು ಇಂದು (ಮೇ 19) ತಮ್ಮ 40ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಸ್ಯಾಂಡಲ್​​ವುಡ್ ಆದರ್ಶ ದಂಪತಿಗಳು ಎನಿಸಿಕೊಂಡಿರುವ ಶಿವರಾಜ್ ಕುಮಾರ್ ಮತ್ತು ಗೀತಾ ಅವರು 1986, ಮೇ 19 ರಂದು ಅದ್ಧೂರಿಯಾಗಿ ವಿವಾಹವಾಗಿದ್ದರು. 40 ವರ್ಷಗಳಿಂದ ಜೊತೆಗಿರುವ ಇವರ ವಿವಾಹ ವಾರ್ಷಿಕೋತ್ಸವ ಈ ವರ್ಷ ಅಭಿಮಾನಿಗಳ ಜೊತೆಗೆ ಸರಳವಾಗಿ ಆಚರಿಸಲಾಯ್ತು. ಹಲವು ಅಭಿಮಾನಿಗಳು ಶಿವಣ್ಣನ ಮನೆ ಮುಂದೆ ಆಗಮಿಸಿ ದಂಪತಿಗೆ ಶುಭ ಹಾರೈಸಿದರು. ಅಭಿಮಾನಿಗಳು ತಂದಿದ್ದ…

Read More

ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ: ಯಶ್ ಸಿನಿಮಾದ ತೆರೆಹಿಂದೆ 10 ಸಾವಿರಕ್ಕೂ ಹೆಚ್ಚು ತಂತ್ರಜ್ಞರು – Kannada News | Yash starrer Ramayana is first Indian movie to have 10000 crew members

ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ ದೊಡ್ಡ ಚಿತ್ರವಾಗಿ ‘ರಾಮಾಯಣ’ (Ramayana) ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ನಟ ಯಶ್ (Yash) ಅವರು ರಾವಣನಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಅಭಿನಯಿಸುತ್ತಿದ್ದಾರೆ. ಬೃಹತ್ ಬಜೆಟ್‌ನಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ. ನಿರ್ಮಾಪಕ ನಮಿತ್ ಮಲ್ಹೋತ್ರಾ, ನಿರ್ದೇಶಕ ನಿತೇಶ್ ತಿವಾರಿ ಅವರು ‘ರಾಮಾಯಣ’ ಸಿನಿಮಾವನ್ನು ಭಾರಿ ದೊಡ್ಡ ಮಟ್ಟದಲ್ಲಿ ಸಿದ್ಧಪಡಿಸುತ್ತಿದ್ದಾರೆ. ಅತಿ ಹೆಚ್ಚು ತಂತ್ರಜ್ಞರು ಕೆಲಸ ಮಾಡಿದ ಭಾರತೀಯ ಸಿನಿಮಾ ಎಂಬ ಖ್ಯಾತಿಗೆ ಈ ಸಿನಿಮಾ ಪಾತ್ರವಾಗುತ್ತಿದೆ….

Read More

ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಸಾಧನಾ ಸಮಾವೇಶದಲ್ಲಿ ಪ್ರಮಾಣಪತ್ರ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ – Kannada News | Tumakuru Creates Guinness Record by Uploading 21,529 Land Titles; CM Siddaramaiah Receives Certificate

ತುಮಕೂರು, ಮೇ 19: ತುಮಕೂರು ಜಿಲ್ಲೆಯು 21,529 ಹಕ್ಕುಪತ್ರಗಳನ್ನು ಯಶಸ್ವಿಯಾಗಿ ಅಪ್‌ಲೋಡ್ ಮಾಡುವ ಮೂಲಕ ಗಿನ್ನಿಸ್​ ವಿಶ್ವ ದಾಖಲೆಯಲ್ಲಿ ನೋಂದಾಯಿತವಾಗಿದೆ. ಈ ಅಸಾಮಾನ್ಯ ಸಾಧನೆಗಾಗಿ ಗಿನ್ನಿಸ್​ ವರ್ಲ್ಡ್​ ರೆಕಾರ್ಡ್ಸ್‌ನ ಪ್ರತಿನಿಧಿಗಳಾದ ಮಿಸ್ಟರ್ ಸ್ವಪ್ನಿಲ್ ಡಂಗರಿಕರ್ ಮತ್ತು ಶ್ರೀಮತಿ ಶೈಲಜಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಮಾಣಪತ್ರವನ್ನು ರಾಜ್ಯ ಸರ್ಕಾರದ ಸಾಧನಾ ಸಮಾವೇಶದಲ್ಲಿ ಹಸ್ತಾಂತರಿಸಿದರು. ನಂತರ, ಮುಖ್ಯಮಂತ್ರಿಗಳು ಈ ಪ್ರಮಾಣಪತ್ರವನ್ನು ಜಿಲ್ಲಾಧಿಕಾರಿ ಶ್ರೀಮತಿ ಶುಭ ಕಲ್ಯಾಣ ಅವರಿಗೆ ಹಸ್ತಾಂತರಿಸಿದರು. ಕಂದಾಯ ಗ್ರಾಮಗಳ ಗುರುತಿಸುವಿಕೆ, ಹಕ್ಕುಪತ್ರಗಳ ಸಿದ್ಧತೆ ಮತ್ತು ಇ-ಸ್ವತ್ತು…

Read More

ಇದು ಮಾನ್ಯತಾ ಟೆಕ್ ಪಾರ್ಕ್ ಅಲ್ಲ, ಮಾನ್ಯತಾ ವಾಟರ್ ಪಾರ್ಕ್! ಮಳೆಯಿಂದ ಹೊಳೆಯಂತಾದ ರಸ್ತೆಯ ವಿಡಿಯೋ ವೈರಲ್ – Kannada News | Manyata Water Park? Netizens Troll Bengaluru’s Premium Tech Hub After Heavy Rains Flood Infrastructure, Viral Video

ಮಳೆಯಿಂದ ಹೊಳೆಯಂತಾದ ಮಾನ್ಯತಾ ಟೆಕ್ ಪಾರ್ಕ್ ರಸ್ತೆImage Credit source: @karnatakaportf ಬೆಂಗಳೂರು, ಮೇ 19: ಭಾರತದ ಸಿಲಿಕಾನ್ ಸಿಟಿ ಎಂದೇ ಖ್ಯಾತಿಯಾಗಿರುವ ಬೆಂಗಳೂರಿನ (Bengaluru) ಜಾಗತಿಕ ಐಟಿ ಇಮೇಜ್‌ಗೆ ಸೋಮವಾರ ಸಂಜೆ ಸುರಿದ ಭಾರಿ ಮಳೆ ಮತ್ತೊಮ್ಮೆ ಮಸಿ ಬಳಿದಿದೆ. ದೇಶದ ಅತ್ಯಂತ ದೊಡ್ಡ ಹಾಗೂ ಪ್ರತಿಷ್ಠಿತ ಟೆಕ್ ಪಾರ್ಕ್‌ಗಳಲ್ಲಿ ಒಂದಾದ ಹೆಣ್ಣೂರು ರಸ್ತೆಯ ‘ಮಾನ್ಯತಾ ಟೆಕ್ ಪಾರ್ಕ್’ ಏರಿಯಾವು ಕೇವಲ ಒಂದು ಸಂಜೆಯ ಮಳೆಗೆ ಸಂಪೂರ್ಣ ಜಲಾವೃತಗೊಂಡಿದೆ. ಕಚೇರಿ ಮುಗಿಸಿ ಮನೆಗೆ ಹೊರಟ ಸಾವಿರಾರು…

Read More

Congress Sadhana Samavesha Live: ತುಮಕೂರಿನಲ್ಲಿ ಸರ್ಕಾರದಿಂದ ಸಾಧನಾ ಸಮಾವೇಶ ನೇರಪ್ರಸಾರ – Kannada News | Karnataka Congress Govt’s 3rd Year Sadhana Samavesha Today in Tumakuru

ತುಮಕೂರು, ಮೇ 19: ಇಂದು ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ 3ನೇ ವರ್ಷದ ಭವ್ಯ ಸಾಧನಾ ಸಮಾವೇಶ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಲಿದೆ. ಈ ಮಹಾವೇದಿಕೆಯಲ್ಲಿ ಜಿಲ್ಲೆಯ 1.52 ಲಕ್ಷ ಫಲಾನುಭವಿಗಳಿಗೆ ಇ-ಖಾತಾ, ಹಕ್ಕುಪತ್ರ ಹಾಗೂ ನಿವೇಶನ ಪತ್ರಗಳು ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದೆ. ಜೊತೆಗೆ, 600 ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ಪತ್ರ ಹಾಗೂ 687…

Read More

‘ನನ್ನ ಜಾತಿ ಯಾವುದೆಂದು ಗೊತ್ತೇ’; ಸಚಿವ ಗಡ್ಕರಿಗೆ ನಟ ನಾನಾ ಪಾಟೇಕರ್ ನೇರ ಪ್ರಶ್ನೆ – Kannada News | Nana Patekar Slams Caste Politics: Humanity is Your Only Religion at Jalakranti

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ (Nana Patekar) ತಮ್ಮ ನೇರ ನಡೆ-ನುಡಿಗೆ ಹೆಸರುವಾಸಿ. ಇತ್ತೀಚೆಗೆ ನಾಗ್ಪುರದ ರೇಷ್ಮಿಬಾಗ್‌ನಲ್ಲಿ ನಡೆದ ‘ಜಲಕ್ರಾಂತಿ’ ಸಮಾವೇಶದಲ್ಲಿ ಅವರು ಸಮಾಜದಲ್ಲಿ ಹೆಚ್ಚುತ್ತಿರುವ ಜಾತಿ ಮತ್ತು ಧರ್ಮದ ರಾಜಕಾರಣದ ವಿರುದ್ಧ ತೀವ್ರವಾಗಿ ಗುಡುಗಿದ್ದಾರೆ. ವೇದಿಕೆಯ ಮೇಲಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ, ‘ಗಡ್ಕರಿ ಸಾಹೇಬರೇ, ನನ್ನ ಜಾತಿ ಯಾವುದು ಎಂದು ನಿಮಗೆ ಗೊತ್ತೇ?’ ಎಂದು ನೇರವಾಗಿ ಪ್ರಶ್ನಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡ ನಾನಾ ಪಾಟೇಕರ್,…

Read More

ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ! – Kannada News | 10 Foot King Cobra Found Sleeping Outside House Door in Mudigere

ಚಿಕ್ಕಮಗಳೂರು, ಮೇ 19: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆ. ತಲಗೂರು ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದೆ. ಗ್ರಾಮದ ಮಂಜುನಾಥ್ ಆಚಾರ್ ಎಂಬುವವರ ಮನೆ ಬಾಗಿಲಿಗೆ ತಂಪಾದ ನೆರಳು ಹುಡುಕಿಕೊಂಡು ಬಂದ ಈ ಹಾವು, ಹೊಸ್ತಿಲಲ್ಲೇ ತಣ್ಣಗೆ ಮಲಗಿತ್ತು. ಮುಂಜಾನೆ ಇದನ್ನು ಕಂಡ ಮನೆಯವರು ಭಯಭೀತರಾಗಿದ್ದಾರೆ. ಸುಮಾರು 10 ಅಡಿ ಉದ್ದವಿದ್ದ ಈ ಬೃಹತ್ ಕಾಳಿಂಗ ಸರ್ಪವನ್ನು ಕಂಡು ಗ್ರಾಮಸ್ಥರು ತಕ್ಷಣವೇ ಉರಗ ತಜ್ಞ ಸ್ನೇಕ್ ಆರೀಫ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ…

Read More