Headlines

nagaraj11081993

18 ವರ್ಷ ಅಡೋಬ್ ಸಿಇಒ ಆಗಿದ್ದ ಭಾರತ ಮೂಲದ ಶಾಂತನು ನಾರಾಯಣ್ ರಾಜೀನಾಮೆ

ಕ್ಯಾಲಿಫೋರ್ನಿಯಾ, ಮಾರ್ಚ್ 13: ವಿಶ್ವದ ಅತಿದೊಡ್ಡ ಡಿಸೈನ್ ಸಾಫ್ಟ್​ವೇರ್ ಕಂಪನಿಯಾದ ಅಡೋಬ್ (Adobe) ಅನ್ನು ಎರಡು ದಶಕಗಳ ಕಾಲ ಮುನ್ನಡೆಸಿರುವ ಭಾರತ ಮೂಲದ ಶಾಂತನು ನಾರಾಯಣ್ (Shantanu Narayen) ಅವರು ರಾಜೀನಾಮೆ ನೀಡಿದ್ದಾರೆ. ಮಾರ್ಚ್ 12, ನಿನ್ನೆ ಅವರು ತಮ್ಮ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದಾರೆ. ಎಐನಲ್ಲಿ ಕ್ಷಿಪ್ರ ಬದಲಾವಣೆಗಳಾಗುತ್ತಿರುವ ಹೊತ್ತಲ್ಲಿ ಹೊಸ ನಾಯಕತ್ವಕ್ಕೆ ಅವರು ಎಡೆ ಮಾಡಿಕೊಡುತ್ತಿದ್ಧಾರೆ. ಎರಡು ದಶಕಗಳ ಕಾಲ ಕಂಪನಿ ಮುನ್ನಡೆಸಿ ಈಗ ನಾಯಕತ್ವವನ್ನು ಮುಂದಿನ ತಲೆಮಾರಿಗೆ ಬಿಟ್ಟುಕೊಡುತ್ತಿದ್ದಾರೆ. ಹೈದರಾಬಾದ್ ಮೂಲದ ಶಾಂತನು ನಾರಾಯಣ್…

Read More

ಕಾಂಗ್ರೆಸ್​​ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು

ಬೆಂಗಳೂರು, ಮಾರ್ಚ್​​ 13: ಕಾಂಗ್ರೆಸ್ ಪಕ್ಷದ 27-28 ಹಿರಿಯ ಶಾಸಕರು ಸಚಿವ ಸಂಪುಟ ಪುನಾರಚನೆಗೆ ಒತ್ತಾಯಿಸಿ ಬೌರಿಂಗ್ ಕ್ಲಬ್‌ನಲ್ಲಿ ಸಭೆ ನಡೆಸಿದ್ದಾರೆ. ಈ ಕುರಿತು ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಮುಂದಿನ ಚುನಾವಣೆಗಳಿಗೂ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶದಿಂದ ಈ ಚರ್ಚೆ ನಡೆಸಲಾಗಿದೆ. ಸಚಿವ ಸಂಪುಟದಲ್ಲಿ ಬದಲಾವಣೆ ತಂದು ಹೊಸ ಮುಖಗಳಿಗೆ ಅವಕಾಶ ನೀಡಬೇಕು. ಇದು ಯಾವುದೇ ಭಿನ್ನಮತವಲ್ಲ, ಬದಲಾಗಿ ಪಕ್ಷದ ಅಭಿವೃದ್ಧಿಗಾಗಿ ಮತ್ತು ಹಿರಿಯರಿಗೆ ಅವಕಾಶ ನೀಡಲು ಕೇಳುತ್ತಿರುವ ಹಕ್ಕು ಎಂದು ಬೇಳೂರು ಗೋಪಾಲಕೃಷ್ಣ…

Read More

‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ

ಪುನೀತ್ ರಾಜ್​​ಕುಮಾರ್ (Puneeth Rajkumar) ನಟನೆಯ ‘ಆಕಾಶ್’ ಸಿನಿಮಾ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. 2005 ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾನಲ್ಲಿ ರಮ್ಯಾ ನಾಯಕಿಯಾಗಿ ನಟಿಸಿದ್ದರು. ಪುನೀತ್ ನಾಯಕನಾಗಿ ನಟಿಸಿದ ಐದನೇ ಸಿನಿಮಾ ಇದಾಗಿದ್ದು, ರಮ್ಯಾ ಜೊತೆಗೆ ನಟಿಸಿದ ಎರಡನೇ ಸಿನಿಮಾ ಆಗಿತ್ತು. ಮಹೇಶ್ ನಿರ್ದೇಶಿಸಿದ್ದ ಈ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು. ಸಿನಿಮಾ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದ್ದು, ನಟಿ ರಮ್ಯಾ ಸೇರಿದಂತೆ, ರಾಘವೇಂದ್ರ ರಾಜ್​ಕುಮಾರ್ ಇನ್ನೂ ಹಲವರು…

Read More

ವರ್ಷಗಳಿಂದ ಅಭಿವೃದ್ಧಿ ಕಾಣದೆ ಉಳಿದ ಬಾಲಕಿಯರ ವಸತಿ ನಿಲಯ; ಮೌಢ್ಯವನ್ನೇ ನೆಪ ಮಾಡಿಕೊಂಡಿತಾ ಸರ್ಕಾರ?

ತುಮಕೂರು, ಮಾರ್ಚ್​ 13:  ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಅಕ್ಕಿರಾಂಪುರ ಗ್ರಾಮದಲ್ಲಿ ಬಾಲಕಿಯರ ವಸತಿ ನಿಲಯ (Girl’s Hostel) ಅಭಿವೃದ್ಧಿ ಕಾಣದೆ ಪಾಳು ಬಿದ್ದಿದೆ. ಗ್ರಾಮದಲ್ಲಿ ಇರುವ ಪಾರಂಪರಿಕ ನಂಬಿಕೆಯನ್ನು ನೆಪ ಮಾಡಿಕೊಂಡು ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೇ ನಿರ್ಲಕ್ಷ್ಯ ತೋರಿಸುತ್ತಿದೆಯೇ ಎಂಬ ಪ್ರಶ್ನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಸುಮಾರು 69 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಕಸ್ತೂರಿಬಾ ಬಾಲಿಕಿಯರ ವಿದ್ಯಾರ್ಥಿನಿಲಯ ಕಳೆದ ಎಂಟು ವರ್ಷಗಳಿಂದ ಖಾಲಿ ಬಿದ್ದಿದ್ದು, ಇದು ಇದೀಗ ವಿವಾದಕ್ಕೆ ಕಾರಣವಾಗಿದೆ. ನಿರ್ಮಾಣವಾದ ಒಂದು ತಿಂಗಳಲ್ಲೇ…

Read More

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಬದುಕಿದ್ದಾರಷ್ಟೇ, ಟ್ರಂಪ್ ಹೀಗ್ಯಾಕಂದ್ರು?

ವಾಷಿಂಗ್ಟನ್, ಮಾರ್ಚ್​ 13: ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮಹತ್ವದ ಹೇಳಿಕೆ ನೀಡಿದ್ದಾರೆ. ಮೊಜ್ತಾಬಾ ಖಮೇನಿ ಉಸಿರಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಇಡೀ ಮಧ್ಯಪ್ರಾಚ್ಯವನ್ನು ಆವರಿಸಿದೆ. ಅಮೆರಿಕ-ಇಸ್ರೇಲ್ ವಾಯುದಾಳಿಗಳಿಗೆ ಪ್ರತಿಕ್ರಿಯೆಯಾಗಿ ಇರಾನ್ ಗಲ್ಫ್ ರಾಷ್ಟ್ರಗಳಾದ ಯುಎಇ, ಬಹ್ರೇನ್, ಕುವೈತ್, ಕತಾರ್ ಮತ್ತು ಸೌದಿ ಅರೇಬಿಯಾಗಳ ಮೇಲೆ ದಾಳಿ ಮಾಡಿದೆ. ಯುದ್ಧದ ಮಧ್ಯೆ, ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ…

Read More

ಫರ್ಮಾನ್ ಖಾನ್ ಜೊತೆ ಮೊನಲಿಸಾ ಮದುವೆ: ತಂದೆ ಹೇಳಿದ್ದೇನು?

ಕುಂಭಮೇಳದ ಒಂದು ಚಿತ್ರದಿಂದ ಭಾರಿ ಜನಪ್ರಿಯತೆ ಪಡೆದ ಮೊನಲಿಸಾ ಭೋಸ್ಲೆಯ (Monalisa Bhosle) ಮದುವೆ ಇತ್ತೀಚೆಗಷ್ಟೆ ಕೇರಳದಲ್ಲಿ ನಡೆದಿದ್ದು, ಅವರ ಕುಂಭಮೇಳದ ಚಿತ್ರದಷ್ಟೆ ಅವರ ಮದುವೆಯೂ ವೈರಲ್ ಆಗುತ್ತಿದೆ. ಮೊನಲಿಸಾ ಭೋಸ್ಲೆ, ಫರ್ಮಾನ್ ಖಾನ್ ಎಂಬುವರನ್ನು ಅವರ ಕುಟುಂಬದ ಇಚ್ಛೆಯ ವಿರುದ್ಧವಾಗಿ ಕೇರಳದಲ್ಲಿ ಮದುವೆ ಆಗಿದ್ದಾರೆ. ಇವರ ಮದುವೆಯ ಮುಂದಾಳತ್ವವನ್ನು ಕೇರಳದ ಕೆಲವು ರಾಜಕೀಯ ಮುಖಂಡರು ವಹಿಸಿಕೊಂಡಿದ್ದು ವಿಶೇಷ. ಮೊನಲಿಸಾ ಮತ್ತು ಫರ್ಮಾನ್ ಖಾನ್ ಅವರ ಮದುವೆಯನ್ನು ಕೆಲವರು ‘ಲವ್ ಜಿಹಾದ್’ ಎಂದು ಸಹ ಕರೆದಿದ್ದಾರೆ, ಆದರೆ…

Read More

ತೆಲುಗು ಹೀರೋಗಳ ನೋಡಿ ಕಲಿಯಬೇಕಿದೆ ಕನ್ನಡದ ನಟರು

ಕನ್ನಡದಲ್ಲಿ ಕೆಲವು ಅದ್ಭುತವಾದ ನಟರುಗಳಿದ್ದಾರೆ. ಪ್ರತಿಭೆಯ ವಿಷಯವಾಗಿ, ವ್ಯಕ್ತಿತ್ವದ ವಿಷಯವಾಗಿ ಅವರು ಇತರೆ ಚಿತ್ರರಂಗದ ನಟರುಗಳಿಗೆ ಮಾದರಿ ಆಗಬಲ್ಲರು. ಆದರೆ ಕೆಲವು ವಿಷಯಗಳಲ್ಲಿ ವಿಶೇಷವಾಗಿ ಸ್ವತಃ ಚಿತ್ರರಂಗದ ವಿಷಯವಾಗಿ ಅವರಿಂದ ಇನ್ನಷ್ಟು ತೊಡಗಿಕೊಳ್ಳುವಿಕೆಯನ್ನು ಪ್ರೇಕ್ಷಕರು ನಿರೀಕ್ಷಿಸುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ತೆಲುಗು ಚಿತ್ರರಂಗದ ಸ್ಟಾರ್ ನಟರು ಮಾಡುತ್ತಿರುವ ಕಾರ್ಯವನ್ನು ಪ್ರೇಕ್ಷಕರು ಕನ್ನಡದ ಸ್ಟಾರ್ ನಟರು ತಂತ್ರಜ್ಞರಿಂದಲೂ ನಿರೀಕ್ಷಿಸುತ್ತಿದ್ದಾರೆ. ತೆಲುಗಿನ ಸ್ಟಾರ್ ನಟರುಗಳಾದ ಮಹೇಶ್ ಬಾಬು, ಅಲ್ಲು ಅರ್ಜುನ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ಇನ್ನೂ ಹಲವರು ತಮ್ಮದೇ ಆದ…

Read More

ಅಡ್ವಾನ್ಸ್ ಬುಕಿಂಗ್​​ನಿಂದ 60 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಧುರಂಧರ್ 2’; ಹೊಸ ದಾಖಲೆ

ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಹೊಸ ದಾಖಲೆ ಬರೆಯಲು ರೆಡಿ ಆಗಿದೆ. ಈ ಚಿತ್ರ ಮಾರ್ಚ್ 19ಕ್ಕೆ ತೆರೆಗೆ ಬರಲಿದೆ. ಅದಕ್ಕೂ ಹಿಂದಿನ ದಿನ ಅಂದರೆ ಮಾರ್ಚ್​ 18ರಂದು ಸಿನಿಮಾಗೆ ಸಾಕಷ್ಟು ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗಿದೆ. ಬೆಂಗಳೂರು, ಮುಂಬೈ ಸೇರಿದಂತೆ ಅನೇಕ ಕಡೆಗಳಲ್ಲಿ ಶೋ ಹೌಸ್​​​ಫುಲ್ ಆಗಿದೆ. ಇದರಿಂದ ಸಿನಿಮಾಗೆ ದೊಡ್ಡ ಮೊಟ್ಟದಲ್ಲಿ ಹಣ ಹರಿದು ಬರುತ್ತಿದೆ. ಅಡ್ವಾನ್ಸ್ ಬುಕಿಂಗ್​​ನಿಂದ ಚಿತ್ರಕ್ಕೆ ವಿಶ್ವಾದ್ಯಂತ 60 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ‘ಧುರಂಧರ್ 2’…

Read More

Video: ನೆಮ್ಮದಿಯಿಂದ ಚಹಾ ಕುಡಿಯಲು ಆಗ್ತಾ ಇಲ್ಲ; ಕಂದಮ್ಮನ ಆರೈಕೆಯನ್ನು ನೆನೆದು ಭಾವುಕಳಾದ ತಾಯಿ

ತಾಯಿ (mother) ಅಂದರೆ ತ್ಯಾಗ, ಪ್ರೀತಿಗೆ ಇನ್ನೊಂದು ಹೆಸರು. ಮಕ್ಕಳ ಆರೈಕೆ ಹಾಗೂ ಬೆಳವಣಿಗೆಯಲ್ಲಿ ತಾಯಿಯ ಪಾತ್ರ ಬಹುಮುಖ್ಯ. ಮಕ್ಕಳು ಬೆಳೆದು ಸ್ವಲ್ಪ ದೊಡ್ಡವರಾಗುವವರೆಗೂ ತಾಯಿ ತನ್ನ ನಿದ್ದೆ, ಊಟ, ತಿಂಡಿ ಎಲ್ಲವನ್ನೂ ತ್ಯಾಗ ಮಾಡಬೇಕು. ಇದೀಗ ಎರಡು ವರ್ಷದ ಮಗುವಿನ ಆರೈಕೆ ಮಾಡುತ್ತಿರುವ ತಾಯಿಯೊಬ್ಬಳು ತನ್ನ ಕಂದಮ್ಮ ತನ್ನನ್ನು ಬಿಟ್ಟು ಒಂದು ನಿಮಿಷ ಕೂಡ ಇರಲಾರದು. ನನಗೆ ಊಟ, ತಿಂಡಿ ಮಾಡಲು ಸಮಯವಿಲ್ಲ ಎಂದು ಕಣ್ಣೀರು ಹಾಕಿರುವ ವಿಡಿಯೋ ವೈರಲ್‌ ಆಗಿದೆ. ಈ ಕ್ಲಿಪಿಂಗ್‌ ನೋಡಿದ…

Read More

ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಹೇಳಿಕೆಯಿಂದ ಕಾಂಗ್ರೆಸ್​​ಗೆ ಡ್ಯಾಮೇಜ್​​: ರಾಮಲಿಂಗಾರೆಡ್ಡಿ ಏನಂದ್ರು?

ಬೆಂಗಳೂರು, ಮಾರ್ಚ್​​ 13: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್​​ ಬಗ್ಗೆ ಸ್ವಪಕ್ಷ ಶಾಸಕ ಇಕ್ಬಾಲ್​​ ಹುಸೇನ್​​ ನೀಡಿದ್ದ ಹೇಳಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಇಕ್ಬಾಲ್ ಹುಸೇನ್ ಮಾತ್ರವಲ್ಲ, ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮುಂದೆ ಬಹಿರಂಗವಾಗಿ ಚರ್ಚಿಸಬಾರದು. ಯಾವುದೇ ಸಮಸ್ಯೆಗಳಿದ್ದರೂ, ಮುಖ್ಯಮಂತ್ರಿಗಳು ಅಥವಾ ಉಪಮುಖ್ಯಮಂತ್ರಿಗಳೊಂದಿಗೆ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮಾತನಾಡಿ ಪರಿಹಾರ ಕಂಡುಕೊಳ್ಳಬೇಕು. ಮಾಧ್ಯಮಗಳ ಮುಂದೆ ಮಾತನಾಡುವುದರಿಂದ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬಜೆಟ್​​​ ಸಮಾಧಾನ ತಂದಿಲ್ಲ. ಆಯವ್ಯಯ…

Read More