All posts by nagaraj11081993

Brain Teaser: ನೀವು ಗಣಿತದಲ್ಲಿ ಪಂಟರಾಗಿದ್ರೆ ಈ ಲೆಕ್ಕ ಬಿಡಿಸಿ ಜಾಣರು ಎನಿಸಿಕೊಳ್ಳಿ

Brain Teaser: ನೀವು ಗಣಿತದಲ್ಲಿ ಪಂಟರಾಗಿದ್ರೆ ಈ ಲೆಕ್ಕ ಬಿಡಿಸಿ ಜಾಣರು ಎನಿಸಿಕೊಳ್ಳಿ

ಈಗಂತೂ ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ನಂತಹ ಒಗಟಿನ ಆಟಗಳು ಟ್ರೆಂಡಿಂಗ್‌ನಲ್ಲಿವೆ. ಒಂದಕ್ಕಿಂತ ಒಂದು ಒಗಟಿನ ಚಿತ್ರಗಳು ಟ್ರಿಕ್ಕಿಯಾಗಿದ್ದು, ಬಿಡಿಸುವುದು ಕಷ್ಟಕರ. ಆದರೆ ನಿಮ್ಮ ಬುದ್ಧಿವಂತಿಕೆಗೆ ಸವಾಲೊಡ್ಡುವಂತಹ ಇಂತಹ ಆಟಗಳನ್ನು ಆಡುವ ಮಜಾನೇ ಬೇರೆ. ಇದೀಗ ಗಣಿತದ ಲೆಕ್ಕವನ್ನು ನೀಡಲಾಗಿದ್ದು, ನೀವು ಲೆಕ್ಕ ಬಿಡಿಸೋದರಲ್ಲಿ ಪಂಟರಾಗಿದ್ದರೆ ಈ ಒಗಟು ಬಿಡಿಸಿ ಸರಿಯಾದ ಉತ್ತರ ಹೇಳಿ.

ಒಗಟಿನ ಪ್ರಶ್ನೆ ಹೀಗಿದೆ ನೋಡಿ

ನೋಡೋದಕ್ಕೆ ಸುಲಭ ಎನಿಸಿದರೂ ಉತ್ತರ ಹುಡುಕುವ ಅಷ್ಟು ಸುಲಭವಲ್ಲ. ಈ ಬ್ರೈನ್ ಟೀಸರ್ ಒಗಟಿನ ಪ್ರಶ್ನೆ ತಲೆಗೆ ಹುಳ ಬಿಟ್ಟಂತಿದೆ. 2+3 = 10, 8+4= 96, 7+2 = 63, 6+5 = 66 ಮತ್ತು 9+5 = ಎಷ್ಟು ಎಂದು ಕಂಡು ಹಿಡಿಯುವುದೇ ಇಲ್ಲಿರುವ ಸವಾಲು. ಆದರೆ ಈ ಲೆಕ್ಕವನ್ನು ಐದು ಸೆಕೆಂಡುಗಳಲ್ಲಿ ಬಿಡಿಸುವ ಸವಾಲು ನೀಡಲಾಗಿದೆ. ನೀವು ನಿಮ್ಮ ಮೆದುಳಿಗೆ ಕೆಲಸ ನೀಡುವ ಸಮಯ ಈಗ ಆರಂಭವಾಗಿದ್ದು, ಈ ಲೆಕ್ಕ ಬಿಡಿಸಿ ಜಾಣರು ಎನಿಸಿಕೊಳ್ಳಿ.

ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್‌; ಈ ಚಿತ್ರದಲ್ಲಿ ಮರೆಮಾಡಲಾಗಿರುವ ಕಪ್ ಕೇಕ್ ಗುರುತಿಸಬಲ್ಲಿರಾ

ಈ ಲೆಕ್ಕ ಬಿಡಿಸಲು ಸಾಧ್ಯವಾಯಿತೇ?

ಮೆದುಳಿಗೆ ಕೈ ಹಾಕುವಂತಿರುವ ಈ ಟ್ರಿಕ್ಕಿ ಗಣಿತದ ಲೆಕ್ಕ ಬಿಡಿಸಲು ಎಲ್ಲರಿಂದಲೂ ಸಾಧ್ಯವಿಲ್ಲ. ಆದರೆ, ಗಣಿತದಲ್ಲಿ ಪರಿಣಿತರಾಗಿದ್ದವರೂ ಮಾತ್ರ ಸಲೀಸಾಗಿ ಈ ಲೆಕ್ಕ ಬಿಡಿಸುತ್ತಾರೆ. 2+3 = 10, 8+4 = 96, 7+2 = 63, 6+5 = 66 ಮತ್ತು 9+5 =? ಈ ಪ್ರಶ್ನೆಗೆ ಉತ್ತರ ಕಂಡುಹಿಡಿಯಲು ಸಾಧ್ಯವಾಗಿಲ್ಲವೇ. ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಈ ಲೆಕ್ಕದ ಉತ್ತರವನ್ನು ನಾವೇ ನಿಮಗೆ ಹೇಳುತ್ತೇವೆ. 2+2=10 ( 2*2+3*2) , 8+4=96 ( 8*8+4*8), 9+5 = (9*9+5*9 ) = 126 ಈ ಲೆಕ್ಕವನ್ನು ಬಿಡಿಸುವ ರೀತಿ ಹೀಗಿದೆ. ಹೀಗಾಗಿ ಈ ಟ್ರಿಕ್ಕಿ ಲೆಕ್ಕದ ಉತ್ತರ 126 ಆಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಕುರ್ಚಿ ಕಿತ್ತಾಟದ ನಡುವೆ ಮುಂದಿನ ರಾಜಕೀಯ ಜೀವನದ ಬಗ್ಗೆ ಸಿಎಂ ಸಿದ್ದರಾಮಯ್ಯ ಖಡಕ್ ಮಾತು!

ಮೈಸೂರು, ಮಾರ್ಚ್ 13: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಅಧಿಕಾರ ಹಂಚಿಕೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಮ್ಮ ರಾಜಕೀಯ ಜೀವನದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲೇ ಇರುತ್ತೇನೆ ಮತ್ತು ಜನರ ಸೇವೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರ ವ್ಯಾಪ್ತಿಯ ವರಕೋಡು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯ ಜೀವನದ ಬಗ್ಗೆ ಮನಬಿಚ್ಚಿ ಮಾತನಾಡಿದರು.

ರಾಜಕೀಯದಲ್ಲಿ ಗೆಲುವು-ಸೋಲು ಸಹಜವಾದದ್ದು ಎಂದು ಹೇಳಿದ ಸಿಎಂ, ನನ್ನ ರಾಜಕೀಯ ಜೀವನದಲ್ಲಿ ಸೋಲು-ಗೆಲುವು ಎರಡನ್ನೂ ಕಂಡಿದ್ದೇನೆ. ಆದರೆ ಚುನಾವಣೆಯಲ್ಲಿ ಸೋತಾಗಲೂ ನಾನು ಜನಸೇವೆಯನ್ನು ಎಂದಿಗೂ ಬಿಟ್ಟಿಲ್ಲ ಎಂದು ಹೇಳಿದರು.

ನನ್ನನ್ನು ಬೆಳೆಸಿದಂತೆಯೇ ಮಗನನ್ನೂ ಬೆಳೆಸಿ: ಸಿದ್ದರಾಮಯ್ಯ ಮನವಿ

ಮುಖ್ಯಮಂತ್ರಿಯಾಗಿರುವುದರಿಂದ ಕ್ಷೇತ್ರಕ್ಕೆ ಹೆಚ್ಚು ಬಾರಿ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ ಸಿದ್ದರಾಮಯ್ಯ, ನನ್ನ ಮಗ ಯತೀಂದ್ರ ಆಗಾಗ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ನೀವು ನನ್ನನ್ನು ಹೇಗೆ ಬೆಳೆಸಿದಿರೋ ಹಾಗೆಯೇ ಯತೀಂದ್ರನನ್ನೂ ರಾಜಕೀಯವಾಗಿ ಬೆಳೆಸಬೇಕು ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ದೇವರ ಕುರಿತ ನಂಬಿಕೆಯನ್ನು ಸಿದ್ದರಾಮಯ್ಯ ವಿಶ್ಲೇಷಿಸಿದ್ದು ಹೀಗೆ…

ದೇವರ ಬಗ್ಗೆ ತಮ್ಮ ನಂಬಿಕೆ ಕುರಿತು ಕೂಡ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇವರ ಮೇಲಿನ ಭಕ್ತಿ ಶುದ್ಧವಾಗಿರಬೇಕು. ದೇವರು ಇದ್ದಾನೆ. ಭಕ್ತಿ ಎಲ್ಲರಲ್ಲೂ ಇರಬೇಕು. ಆದರೆ ಶುದ್ಧವಾದ ಭಕ್ತಿ ಇಲ್ಲದೆ ಎಷ್ಟೇ ದೇವರ ದರ್ಶನ ಮಾಡಿದರೂ ಅದರ ಪ್ರಯೋಜನವಾಗುವುದಿಲ್ಲ. ಯಾರನ್ನೂ ದ್ವೇಷಿಸದ ಭಕ್ತಿ ಇರಬೇಕು ಎಂದು ತಿಳಿಸಿದರು.

ನಮಗೂ ಹಾಗೂ ಇತರರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದಾಗ ಮಾತ್ರ ದೇವರು ಒಲಿಯುತ್ತಾನೆ. ದೇವರು ದೇವಸ್ಥಾನದಲ್ಲೇ ಮಾತ್ರ ಅಲ್ಲ, ಎಲ್ಲೆಡೆ ಇದ್ದಾನೆ. ಯಾರು ಶುದ್ಧ ಮನಸ್ಸಿನಿಂದ ದೇವರನ್ನು ಪೂಜಿಸುತ್ತಾರೋ ಅವರಿಗೆ ದೇವರು ಒಳ್ಳೆಯದನ್ನು ಮಾಡುತ್ತಾನೆ ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ಜೋರಾದ ಡಿನ್ನರ್ ಪಾಲಿಟಿಕ್ಸ್: ಮಾರ್ಚ್ 16 ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ ಸಿಎಂ ಸಿದ್ದರಾಮಯ್ಯ

ಇದೇ ವೇಳೆ, ದೇವರು ಪ್ರತಿಕ್ಷಣ ನಾವು ಮಾಡುವ ಕೆಲಸವನ್ನು ನೋಡುತ್ತಾನೆ. ಇತರರಿಗೆ ಕೆಟ್ಟದ್ದು ಬಯಸಿದರೆ ದೇವರು ಒಳ್ಳೆಯದು ಮಾಡುವುದಿಲ್ಲ. ನಾನು ಸದಾ ಇಡೀ ನಾಡಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸಿಎಂ ಕಾರ್ಯಕ್ರಮದಲ್ಲಿ ಸೇಬಿಗಾಗಿ ಮುಗಿಬಿದ್ದ ಜನರು

ಬೀರೇಶ್ವರಸ್ವಾಮಿ ದೇವಸ್ಥಾನ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾದರು. ಅವರು ಗ್ರಾಮಕ್ಕೆ ಆಗಮಿಸಿದಾಗ ಬೃಹತ್ ಸೇಬಿನ ಹಾರ ಹಾಕಿ ಸ್ವಾಗತಿಸಲಾಯಿತು. ಸಿಎಂ ತೆರಳಿದ ನಂತರ ಸೇಬು ಕೀಳಲು ಜನರು ಮುಗಿಬಿದ್ದರು. ಹೆಚ್ಚು ಜನ ಜಮಾಯಿಸಿದ್ದನ್ನು ಕಂಡು ಕ್ರೇನ್ ಆಪರೇಟರ್ ಹಾರವನ್ನು ಜಗ್ಗಾಡಿ ಆಟವಾಡಿಸಿದ ದೃಶ್ಯ ಕಂಡುಬಂತು. ಆತ ಹಾರ ಕೆಳಗಿಳಿಸುತ್ತಿದ್ದಂತೆಯೇ ಜನರು ಇಡೀ ಹಾರವನ್ನೇ ತುಂಡರಿಸಿ ಸೇಬನ್ನು ಕಿತ್ತುಕೊಂಡರು. ಕ್ಷಣಾರ್ಧದಲ್ಲಿ ಬೃಹತ್ ಹಾರದ ಒಂದೂ ಸೇಬನ್ನು ಬಿಡದೆ ಕಿತ್ತು ಮುಗಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪದಲ್ಲಿ ಥಳಿಸಿದ ಸ್ಥಳೀಯರು: ಹೃದಯಾಘಾತದಿಂದ ಯುವಕ ಸಾವು

ಬಾಗಲಕೋಟೆ, ಮಾರ್ಚ್ 13: ಬಾಗಲಕೋಟೆ (Bagalkot) ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ನಡೆದ ಗಲಾಟೆಯಿಂದ ಯುವಕನೊಬ್ಬ ಸಾವಿಗೀಡಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಸಾವಳಗಿ ಗ್ರಾಮದ ಸುದೀಪ್ ಪಾಂಗೆ (19) ಎಂದು ಗುರುತಿಸಲಾಗಿದೆ. ಮಾರ್ಚ್ 11ರ ರಾತ್ರಿ ಸಾವಳಗಿ ಗ್ರಾಮ ಪಂಚಾಯಿತಿ ಕಟ್ಟಡದ ಆವರಣದಲ್ಲಿ ಇರುವ ಸಾವಳಗಿ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಸುದೀಪ್ ಪಾಂಗೆ ಶಾಲೆಯ ಮೇಲ್ಛಾವಣಿ ಮೇಲೆ ಕುಳಿತುಕೊಂಡು ಕೆಳಗಿದ್ದ ಕಾರ್ಯಕ್ರಮದತ್ತ ಕಲ್ಲು ಎಸೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ವಿದ್ಯಾರ್ಥಿನಿಯರು ಉಡುಪು ಬದಲಾಯಿಸುತ್ತಿದ್ದ ಸ್ಥಳದತ್ತ ಇಣುಕಿ ನೋಡಿದ್ದಾನೆ ಎಂಬ ಆರೋಪವೂ ಸ್ಥಳೀಯರಿಂದ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಕೆಲ ಯುವಕರು ಸುದೀಪ್ ಮೇಲೆ ಹಲ್ಲೆ ನಡೆಸಿದ್ದರು.

ರಾಜು ಮಾಳಿ, ವಿಜಯ್ ಸಾವಳಗಿ ಮತ್ತು ಮಲ್ಲಿಕಾರ್ಜುನ ಮಾಳಿ ಎಂಬ ಮೂವರು ಯುವಕರು ಸುದೀಪ್‌ಗೆ ಥಳಿಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸಿಸಿಟಿವಿ ಕ್ಯಾಮರಾ ವಿಡಿಯೋ ಇಲ್ಲಿ ನೋಡಿ


ಹಲ್ಲೆಯಿಂದ ಗಾಯಗೊಂಡ ಸುದೀಪ್ ಪಾಂಗೆಯನ್ನು ತಕ್ಷಣ ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಹೃದಯಾಘಾತ ಉಂಟಾಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಮೃತನ ಸಹೋದರ ನೀಡಿದ ದೂರಿನ ಆಧಾರದ ಮೇಲೆ, ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ರಾಜು ಮಾಳಿ, ವಿಜಯ್ ಸಾವಳಗಿ ಮತ್ತು ಮಲ್ಲಿಕಾರ್ಜುನ ಮಾಳಿ ವಿರುದ್ಧ ಸಾವಳಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪಿಜಿಗಳಲ್ಲಿಲ್ಲ ಮಧ್ಯಾಹ್ನದ ಊಟ, ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಗೂ ಸಂಕಷ್ಟ: ಸಿಲಿಂಡರ್​​ ಕೊರತೆ ಮತ್ತಷ್ಟು ಉಲ್ಬಣ

ಈ ಘಟನೆ ಮಂಗಳವಾರ (ಮಾರ್ಚ್ 11)ರಂದು ನಡೆದಿದ್ದು, ಪ್ರಕರಣ ಈಗ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ಸಾವಳಗಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Google Fellowship 2026: ಗೂಗಲ್​ನಿಂದ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ; 10 ಲಕ್ಷ ರೂ. ಸ್ಟೈಫಂಡ್ ಪಡೆಯುವ ಅವಕಾಶ

ಗೂಗಲ್‌ನಂತಹ ಜಾಗತಿಕ ಸಂಸ್ಥೆಯಲ್ಲಿ ಕೆಲಸ ಮಾಡುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕನಸು. ಈಗ ಆ ಕನಸನ್ನು ನನಸಾಗಿಸಿಕೊಳ್ಳಲು ಒಂದು ಸುವರ್ಣಾವಕಾಶ ಒದಗಿಬಂದಿದೆ. ಗೂಗಲ್ ವಿಶೇಷ ಫೆಲೋಶಿಪ್ ಪ್ರೋಗ್ರಾಂ ಅನ್ನು ಪ್ರಕಟಿಸಿದ್ದು, ಇದರಲ್ಲಿ ಭಾಗವಹಿಸುವವರಿಗೆ ಬರೋಬ್ಬರಿ 10 ಲಕ್ಷ ರೂಪಾಯಿಗಳವರೆಗೆ ಸ್ಟೈಫಂಡ್ ಪಡೆಯುವ ಅವಕಾಶವಿದೆ.

ವಾಷಿಂಗ್ಟನ್ ಡಿಸಿಯಲ್ಲಿ ನಡೆಯಲಿರುವ ಈ ವಿಶೇಷ ಫೆಲೋಶಿಪ್ ಕಾರ್ಯಕ್ರಮವು ಕೇವಲ ಅನುಭವವನ್ನು ಮಾತ್ರವಲ್ಲದೆ, ಆರ್ಥಿಕವಾಗಿಯೂ ವಿದ್ಯಾರ್ಥಿಗಳಿಗೆ ದೊಡ್ಡ ಬೆಂಬಲ ನೀಡಲಿದೆ. ಪದವಿ ಓದುತ್ತಿರುವ ವಿದ್ಯಾರ್ಥಿಗಳಿಂದ ಹಿಡಿದು ಪಿಎಚ್‌ಡಿ ಸಂಶೋಧಕರವರೆಗೆ ಯಾರು ಬೇಕಾದರೂ ಇದಕ್ಕೆ ಅರ್ಜಿ ಸಲ್ಲಿಸಬಹುದು.

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

ಶೈಕ್ಷಣಿಕ ಹಿನ್ನೆಲೆ:

ನೀವು ಪದವಿ (UG), ಸ್ನಾತಕೋತ್ತರ ಪದವಿ (PG) ಅಥವಾ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರಬೇಕು. ನೀವು ಪೂರ್ಣ ಸಮಯದ (Full-time) ಅಥವಾ ಅರೆಕಾಲಿಕ (Part-time) ವಿದ್ಯಾರ್ಥಿಯಾಗಿದ್ದರೂ ಅರ್ಜಿ ಸಲ್ಲಿಸಲು ಅವಕಾಶವಿದೆ.

ವಯೋಮಿತಿ ಮತ್ತು ಕೌಶಲ್ಯಗಳು:

ಜನವರಿ 1, 2026 ರ ವೇಳೆಗೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಇಂಟರ್ನೆಟ್ ತಂತ್ರಜ್ಞಾನ ಮತ್ತು ನೀತಿಗಳ ಬಗ್ಗೆ ಆಸಕ್ತಿ ಇರಬೇಕು. ಉತ್ತಮ ಸಂಶೋಧನಾ ಮನೋಭಾವ, ಬರವಣಿಗೆ ಮತ್ತು ಸಂವಹನ ಕೌಶಲ್ಯ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.

ಸ್ಟೈಫಂಡ್ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಕೆಲಸದ ಅವಧಿಗೆ ಅನುಗುಣವಾಗಿ ಸ್ಟೈಫಂಡ್ ನೀಡಲಾಗುತ್ತದೆ:

  • ಪೂರ್ಣ ಸಮಯ (ವಾರಕ್ಕೆ 40 ಗಂಟೆ): ಸುಮಾರು $12,000 (ಅಂದಾಜು ₹10 ಲಕ್ಷ).
  • ಅರೆಕಾಲಿಕ (ವಾರಕ್ಕೆ 20 ಗಂಟೆ): ಸುಮಾರು $6,000 (ಅಂದಾಜು ₹5 ಲಕ್ಷ).

ಪ್ರಮುಖ ದಿನಾಂಕಗಳು ಮತ್ತು ಷರತ್ತುಗಳು:

  • ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 9, 2026 (ಮಧ್ಯಾಹ್ನ 12:00 ರೊಳಗೆ).
  • ಪ್ರವೇಶದ ಷರತ್ತು: ಆಗಸ್ಟ್ 30, 2026 ರೊಳಗೆ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿ ದಾಖಲಾಗಿರಬೇಕು.
  • ಗಮನಿಸಿ: ಈ ಹಿಂದೆ ಗೂಗಲ್‌ನ ಈ ಫೆಲೋಶಿಪ್‌ನಲ್ಲಿ ಭಾಗವಹಿಸಿದವರಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10th ಪಾಸಾಗಿದ್ರೆ ಸಾಕು!

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಗೂಗಲ್‌ನ ಅಧಿಕೃತ ವೃತ್ತಿ ಪೋರ್ಟಲ್ (Google Careers Portal) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ನಿಮ್ಮ ಶೈಕ್ಷಣಿಕ ಜೀವನಕ್ಕೆ ಹೊಸ ತಿರುವು ನೀಡಬಲ್ಲ ಈ ಅವಕಾಶವನ್ನು ಕೈಬಿಡಬೇಡಿ. ಇಂದೇ ಅರ್ಜಿ ಸಲ್ಲಿಸಿ ನಿಮ್ಮ ವೃತ್ತಿಜೀವನಕ್ಕೆ ಗೂಗಲ್ ವೇಗ ನೀಡಿ!

ವಿಶೇಷ ಸೂಚನೆ:

ಅಭ್ಯರ್ಥಿಗಳು ಅಮೆರಿಕದಲ್ಲಿ ಕೆಲಸ ಮಾಡಲು ಕಾನೂನುಬದ್ಧ ಅನುಮತಿ (Work Authorization) ಹೊಂದಿರಬೇಕು. ವೀಸಾ ಪ್ರಕ್ರಿಯೆಗೆ ಗೂಗಲ್ ಯಾವುದೇ ನೆರವು ನೀಡುವುದಿಲ್ಲ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

18 ವರ್ಷ ಅಡೋಬ್ ಸಿಇಒ ಆಗಿದ್ದ ಭಾರತ ಮೂಲದ ಶಾಂತನು ನಾರಾಯಣ್ ರಾಜೀನಾಮೆ

ಕ್ಯಾಲಿಫೋರ್ನಿಯಾ, ಮಾರ್ಚ್ 13: ವಿಶ್ವದ ಅತಿದೊಡ್ಡ ಡಿಸೈನ್ ಸಾಫ್ಟ್​ವೇರ್ ಕಂಪನಿಯಾದ ಅಡೋಬ್ (Adobe) ಅನ್ನು ಎರಡು ದಶಕಗಳ ಕಾಲ ಮುನ್ನಡೆಸಿರುವ ಭಾರತ ಮೂಲದ ಶಾಂತನು ನಾರಾಯಣ್ (Shantanu Narayen) ಅವರು ರಾಜೀನಾಮೆ ನೀಡಿದ್ದಾರೆ. ಮಾರ್ಚ್ 12, ನಿನ್ನೆ ಅವರು ತಮ್ಮ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದಾರೆ. ಎಐನಲ್ಲಿ ಕ್ಷಿಪ್ರ ಬದಲಾವಣೆಗಳಾಗುತ್ತಿರುವ ಹೊತ್ತಲ್ಲಿ ಹೊಸ ನಾಯಕತ್ವಕ್ಕೆ ಅವರು ಎಡೆ ಮಾಡಿಕೊಡುತ್ತಿದ್ಧಾರೆ. ಎರಡು ದಶಕಗಳ ಕಾಲ ಕಂಪನಿ ಮುನ್ನಡೆಸಿ ಈಗ ನಾಯಕತ್ವವನ್ನು ಮುಂದಿನ ತಲೆಮಾರಿಗೆ ಬಿಟ್ಟುಕೊಡುತ್ತಿದ್ದಾರೆ.

ಹೈದರಾಬಾದ್ ಮೂಲದ ಶಾಂತನು ನಾರಾಯಣ್ ಅವರು ಮುಂದಿನ ಸಿಇಒ ನೇಮಕವಾಗುವವರೆಗೂ ಆ ಸ್ಥಾನದಲ್ಲೇ ಮುಂದುವರಿಯಲಿದ್ದಾರೆ. ಹೊಸ ಸಿಇಒ ನೇಮಕದ ಬಳಿಕ ಅವರು ಅಡೋಬ್ ಆಡಳಿತ ಮಂಡಳಿಯ ಛೇರ್ಮನ್ ಸ್ಥಾನ ಅಲಂಕರಿಸುತ್ತಾರೆ ಎನ್ನಲಾಗಿದೆ.

ಇದನ್ನೂ ಓದಿ: ಮನೆಯಲ್ಲೇ ಅಡುಗೆ ಮಾಡಿಕೊಳ್ಳಿ, ತಿನ್ನಿ, ಕೆಲಸ ಮಾಡಿ: ಎಲ್​ಪಿಜಿ ಸಮಸ್ಯೆಗೆ ಎಚ್​ಸಿಎಲ್​ನಿಂದ ವರ್ಕ್ ಫ್ರಂ ಹೋಮ್ ಪರಿಹಾರ

ಇದೇ ವೇಳೆ, ಅಡೋಬ್​ನ ಸ್ವತಂತ್ರ ನಿರ್ದೇಶಕರಾದ ಫ್ರಾಂಕ್ ಕ್ಯಾಲ್ಡೆರೊನಿ ನೇತೃತ್ವದ ವಿಶೇಷ ಸಮಿತಿಯೊಂದು ರಚನೆಯಾಗಿದ್ದು, ಮುಂದಿನ ಸಿಇಒ ಆಯ್ಕೆ ಮಾಡಲಿದೆ. ಅಡೋಬ್ ಕಂಪನಿಯ ಒಳಗಿರುವ ವ್ಯಕ್ತಿಗಳು ಮತ್ತು ಹೊರಗಿನ ವ್ಯಕ್ತಿಗಳು ಎಲ್ಲರಿಗೂ ಅಡೋಬ್ ಸಿಇಒ ಆಗುವ ಅವಕಾಶ ಇದೆ. ಸೂಕ್ತ ಅಭ್ಯರ್ಥಿಗಳನ್ನು ಶೋಧಿಸಿ, ಆಯ್ಕೆ ಮಾಡುವ ಜವಾಬ್ದಾರಿ ಈ ಸಮಿತಿಯದ್ದಾಗಿರುತ್ತದೆ.

ಶಾಂತನು ನಾರಾಯಣ್ ಅವರು ಮುಂದಿನ ಸಿಇಒ ನೇಮಕವಾಗುವವರೆಗೂ ಸಿಇಒ ಆಗಿರುತ್ತಾರೆ. ನಂತರ, ಮಂಡಳಿ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಹೊಸ ಸಿಇಒ ಅವರು ಆ ಸ್ಥಾನಕ್ಕೆ ಹೊಂದಿಕೊಳ್ಳಲು ನೆರವು ನೀಡುವುದಾಗಿ ಶಾಂತನು ತಿಳಿಸಿದ್ದಾರೆ.

ಇದನ್ನೂ ಓದಿ: ಯುದ್ಧ ನಿಲ್ಲಿಸಲು ಇರಾನ್​ನ 3 ಷರತ್ತುಗಳು; ಭಾರತದ ಆರ್ಥಿಕತೆ ಮೇಲೇನು ಪರಿಣಾಮ? ಇಲ್ಲಿದೆ ಸಾಧ್ಯಾಸಾಧ್ಯತೆ

ಅಡೋಬ್ ಸಂಸ್ಥೆಯನ್ನು ಸ್ಥಾಪಿಸಿದವರು ಜಾನ್ ವಾರ್ನಾಕ್ ಮತ್ತು ಚುಕ್ ಗೆಶ್ಕೆ. 1988ರಲ್ಲಿ ಅಡೋಬ್ ಅನ್ನು ಸೇರಿದ ಶಾಂತನು ನಾರಾಯಣ್, 18 ವರ್ಷದ ಹಿಂದೆ 2007ರಲ್ಲಿ ಸಿಇಒ ಆಗಿ ಬಡ್ತಿ ಪಡೆದಿದ್ದರು. ಅವರ ನಾಯಕತ್ವದಲ್ಲಿ ಅಡೋಬ್​ನ ವಿವಿಧ ಉತ್ಪನ್ನಗಳು ಸಾಕಷ್ಟು ಬದಲಾವಣೆಗಳನ್ನು ಕಂಡಿವೆ. ಅಡೋಬ್ ಸೇರುವ ಮುನ್ನ ಶಾಂತನು ಅವರು ಆ್ಯಪಲ್ ಮೊದಲಾದ ಕಂಪನಿಗಳಲ್ಲಿ ಪ್ರಾಡಕ್ಟ್ ಡೆವಲಪ್ಮೆಂಟ್ ಕಾರ್ಯಗಳಲ್ಲಿ ಕೆಲಸ ಮಾಡಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್​​ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು

ಬೆಂಗಳೂರು, ಮಾರ್ಚ್​​ 13: ಕಾಂಗ್ರೆಸ್ ಪಕ್ಷದ 27-28 ಹಿರಿಯ ಶಾಸಕರು ಸಚಿವ ಸಂಪುಟ ಪುನಾರಚನೆಗೆ ಒತ್ತಾಯಿಸಿ ಬೌರಿಂಗ್ ಕ್ಲಬ್‌ನಲ್ಲಿ ಸಭೆ ನಡೆಸಿದ್ದಾರೆ. ಈ ಕುರಿತು ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಮುಂದಿನ ಚುನಾವಣೆಗಳಿಗೂ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶದಿಂದ ಈ ಚರ್ಚೆ ನಡೆಸಲಾಗಿದೆ. ಸಚಿವ ಸಂಪುಟದಲ್ಲಿ ಬದಲಾವಣೆ ತಂದು ಹೊಸ ಮುಖಗಳಿಗೆ ಅವಕಾಶ ನೀಡಬೇಕು. ಇದು ಯಾವುದೇ ಭಿನ್ನಮತವಲ್ಲ, ಬದಲಾಗಿ ಪಕ್ಷದ ಅಭಿವೃದ್ಧಿಗಾಗಿ ಮತ್ತು ಹಿರಿಯರಿಗೆ ಅವಕಾಶ ನೀಡಲು ಕೇಳುತ್ತಿರುವ ಹಕ್ಕು ಎಂದು ಬೇಳೂರು ಗೋಪಾಲಕೃಷ್ಣ ಸ್ಪಷ್ಟಪಡಿಸಿದ್ದಾರೆ. ಈ ವಿಷಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಬಳಿಕ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಸಂಪರ್ಕಿಸಲು ತೀರ್ಮಾನಿಸಿರುವುದಾಗಿ ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ

ಪುನೀತ್ ರಾಜ್​​ಕುಮಾರ್ (Puneeth Rajkumar) ನಟನೆಯ ‘ಆಕಾಶ್’ ಸಿನಿಮಾ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. 2005 ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾನಲ್ಲಿ ರಮ್ಯಾ ನಾಯಕಿಯಾಗಿ ನಟಿಸಿದ್ದರು. ಪುನೀತ್ ನಾಯಕನಾಗಿ ನಟಿಸಿದ ಐದನೇ ಸಿನಿಮಾ ಇದಾಗಿದ್ದು, ರಮ್ಯಾ ಜೊತೆಗೆ ನಟಿಸಿದ ಎರಡನೇ ಸಿನಿಮಾ ಆಗಿತ್ತು. ಮಹೇಶ್ ನಿರ್ದೇಶಿಸಿದ್ದ ಈ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು. ಸಿನಿಮಾ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದ್ದು, ನಟಿ ರಮ್ಯಾ ಸೇರಿದಂತೆ, ರಾಘವೇಂದ್ರ ರಾಜ್​ಕುಮಾರ್ ಇನ್ನೂ ಹಲವರು ಚಿತ್ರಮಂದಿರಕ್ಕೆ ಬಂದು ಸಿನಿಮಾ ವೀಕ್ಷಿಸಿದರು. ಪುನೀತ್ ಅಭಿಮಾನಿಗಳು ಸಹ ಅದ್ಧೂರಿಯಾಗಿ ‘ಆಕಾಶ್’ ಸಿನಿಮಾವನ್ನು ಸ್ವಾಗತಿಸಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ವರ್ಷಗಳಿಂದ ಅಭಿವೃದ್ಧಿ ಕಾಣದೆ ಉಳಿದ ಬಾಲಕಿಯರ ವಸತಿ ನಿಲಯ; ಮೌಢ್ಯವನ್ನೇ ನೆಪ ಮಾಡಿಕೊಂಡಿತಾ ಸರ್ಕಾರ?

ತುಮಕೂರು, ಮಾರ್ಚ್​ 13:  ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಅಕ್ಕಿರಾಂಪುರ ಗ್ರಾಮದಲ್ಲಿ ಬಾಲಕಿಯರ ವಸತಿ ನಿಲಯ (Girl’s Hostel) ಅಭಿವೃದ್ಧಿ ಕಾಣದೆ ಪಾಳು ಬಿದ್ದಿದೆ. ಗ್ರಾಮದಲ್ಲಿ ಇರುವ ಪಾರಂಪರಿಕ ನಂಬಿಕೆಯನ್ನು ನೆಪ ಮಾಡಿಕೊಂಡು ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೇ ನಿರ್ಲಕ್ಷ್ಯ ತೋರಿಸುತ್ತಿದೆಯೇ ಎಂಬ ಪ್ರಶ್ನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಸುಮಾರು 69 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಕಸ್ತೂರಿಬಾ ಬಾಲಿಕಿಯರ ವಿದ್ಯಾರ್ಥಿನಿಲಯ ಕಳೆದ ಎಂಟು ವರ್ಷಗಳಿಂದ ಖಾಲಿ ಬಿದ್ದಿದ್ದು, ಇದು ಇದೀಗ ವಿವಾದಕ್ಕೆ ಕಾರಣವಾಗಿದೆ.

ನಿರ್ಮಾಣವಾದ ಒಂದು ತಿಂಗಳಲ್ಲೇ ಖಾಲಿಯಾದ ಕಟ್ಟಡ

2015ರಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಅನುಕೂಲವಾಗಲೆಂದು ಈ ಬಾಲಕೀಯರ ನಿಲಯ ನಿರ್ಮಿಸಲಾಗಿತ್ತು. ಆದರೆ ನಿರ್ಮಾಣವಾದ ಕೇವಲ ಒಂದು ತಿಂಗಳಲ್ಲೇ ವಿದ್ಯಾರ್ಥಿನಿಯರ ಕೊರತೆಯಿಂದ ನಿಲಯವನ್ನು ಬಂದ್ ಮಾಡಲಾಗಿದೆ. ಅದಾದ ಬಳಿಕ ಇಂದಿಗೂ ಈ ವಿದ್ಯಾರ್ಥಿನಿಲಯ ಬಳಸಲಾಗದೇ ಖಾಲಿಯಾಗಿಯೇ ಉಳಿದಿದೆ.

ಗ್ರಾಮಸ್ಥರ ಪಾರಂಪರಿಕ ನಂಬಿಕೆ

ವಿದ್ಯಾರ್ಥಿನಿಲಯದ ಸಮೀಪದಲ್ಲಿರುವ ಏಳುಮಂದೆಮ್ಮ ದೇವಾಲಯದ ಕಾರಣದಿಂದಾಗಿ ಈ ಪ್ರದೇಶದಲ್ಲಿ ಮಹಿಳೆಯರು ಸಂಚರಿಸುವುದು ಅಪವಿತ್ರ ಎಂದು ಗ್ರಾಮಸ್ಥರು ನಂಬುತ್ತಾರೆ. ಮುಟ್ಟಾದ ಮಹಿಳೆಯರು ಅಥವಾ ಬಾಣಂತಿಯರು ಈ ಜಾಗದಲ್ಲಿ ಸಂಚರಿಸಿದರೆ ದೇವಿ ಮುನಿಸಿಕೊಳ್ಳುತ್ತಾಳೆ ಎಂಬ ಭಯ ಗ್ರಾಮಸ್ಥರಲ್ಲಿ ಇದೆ. ಈ ಕಾರಣದಿಂದ ಪೋಷಕರು ತಮ್ಮ ಹೆಣ್ಣುಮಕ್ಕಳನ್ನು ಈ ವಿದ್ಯಾರ್ಥಿನಿಲಯಕ್ಕೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಕೆಲ ಗ್ರಾಮಸ್ಥರು ಹೇಳಿದ್ದಾರೆ.

ಇದನ್ನೂ ಓದಿ ಮದುವೆಯಾಗಿ 3 ತಿಂಗಳೊಳಗೆ ಪತಿಗೆ ಮುಹೂರ್ತ ಇಟ್ಟ ಪತ್ನಿ: ಪ್ರಿಯಕರನ ಜೊತೆ ಸೇರಿ ಕೊಲೆ

ಸರ್ಕಾರ ಕುಂಟು ನೆಪ ಹೇಳುತ್ತಿದೆ ಎನ್ನುತ್ತಿರುವ ಗ್ರಾಮಸ್ಥರು

ಆದರೆ ಗ್ರಾಮದ ಕೆಲವರು ಈ ಮೌಢ್ಯವನ್ನು ನೆಪ ಮಾಡಿಕೊಂಡು ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳದೆ ನಿರ್ಲಕ್ಷ್ಯ ತೋರಿಸುತ್ತಿವೆ ಎಂದು ಆರೋಪಿಸುತ್ತಿದ್ದಾರೆ. ವಿದ್ಯಾರ್ಥಿನಿಲಯವನ್ನು ಸರಿಯಾಗಿ ನಿರ್ವಹಿಸದೇ, ಭದ್ರತೆ ಹಾಗೂ ಸಿಬ್ಬಂದಿ ವ್ಯವಸ್ಥೆ ಮಾಡದೇ ಕಾಂಟ್ರಾಕ್ಟ್ ಮೂಲಕ ಖಾಸಗಿಯವರಿಗೆ ನೀಡಿದ್ದರಿಂದಲೇ ಈ ಸ್ಥಿತಿ ಉಂಟಾಗಿದೆ ಎಂದು ಕೆಲ ಗ್ರಾಮಸ್ಥರು ದೂರಿದ್ದಾರೆ.

ಅರ್ಚಕರು ಹೇಳಿದ್ದೇನು?

ಇದರ ನಡುವೆ ದೇವಸ್ಥಾನದ ಅರ್ಚಕರು ಈ ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ. ವಿದ್ಯಾರ್ಥಿನಿಲಯವು ದೇವಾಲಯದ ಗಡಿಯ ಹೊರಗಿದ್ದು ದೇವಸ್ಥಾನಕ್ಕೂ ಹಾಸ್ಟೆಲ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಮೌಢ್ಯ ನಂಬಿಕೆ, ಆಡಳಿತಾತ್ಮಕ ನಿರ್ಲಕ್ಷ್ಯ ಮತ್ತು ಅಭಿವೃದ್ಧಿಯ ಕೊರತೆ ನಡುವೆ 8 ವರ್ಷಗಳಿಂದ ಬಾಲಕೀಯರ ನಿಲಯ ಖಾಲಿ ಬಿದ್ದಿರುವುದು ಶಿಕ್ಷಣ ಇಲಾಖೆಗೆ ತಲೆನೋವಾಗಿಯೇ ಪರಿಣಮಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಬದುಕಿದ್ದಾರಷ್ಟೇ, ಟ್ರಂಪ್ ಹೀಗ್ಯಾಕಂದ್ರು?

ವಾಷಿಂಗ್ಟನ್, ಮಾರ್ಚ್​ 13: ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮಹತ್ವದ ಹೇಳಿಕೆ ನೀಡಿದ್ದಾರೆ. ಮೊಜ್ತಾಬಾ ಖಮೇನಿ ಉಸಿರಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಇಡೀ ಮಧ್ಯಪ್ರಾಚ್ಯವನ್ನು ಆವರಿಸಿದೆ. ಅಮೆರಿಕ-ಇಸ್ರೇಲ್ ವಾಯುದಾಳಿಗಳಿಗೆ ಪ್ರತಿಕ್ರಿಯೆಯಾಗಿ ಇರಾನ್ ಗಲ್ಫ್ ರಾಷ್ಟ್ರಗಳಾದ ಯುಎಇ, ಬಹ್ರೇನ್, ಕುವೈತ್, ಕತಾರ್ ಮತ್ತು ಸೌದಿ ಅರೇಬಿಯಾಗಳ ಮೇಲೆ ದಾಳಿ ಮಾಡಿದೆ.

ಯುದ್ಧದ ಮಧ್ಯೆ, ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಅನೇಕ ಹೇಳಿಕೆಗಳು ಬರುತ್ತಿವೆ.

ಫೆಬ್ರವರಿ 28 ರಂದು ಟೆಹ್ರಾನ್ ಮೇಲೆ ನಡೆದ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು ಮತ್ತು ಮೊಜ್ತಬಾ ಖಮೇನಿ ಗಾಯಗೊಂಡಿದ್ದರು ಎಂದು ಅಮೆರಿಕದ ಮಾಧ್ಯಮ ವರದಿಯ ನಂತರ ಟ್ರಂಪ್ ಅವರ ಹೇಳಿಕೆ ಹೊರಬಿದ್ದಿದೆ .

ಮೊಜ್ತಬಾ ಖಮೇನಿ ಕೋಮಾದಲ್ಲಿದ್ದಾರೆ ಎಂದು ಅಮೆರಿಕದ ಮಾಧ್ಯಮ ವರದಿಗಳು ತಿಳಿಸಿವೆ. ಇರಾನ್‌ನಲ್ಲಿ ಯುದ್ಧ ಪ್ರಾರಂಭವಾದ ನಂತರ ಅಧಿಕಾರ ವಹಿಸಿಕೊಂಡಾಗಿನಿಂದ ಮೊಜ್ತಬಾ ಖಮೇನಿ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮತ್ತಷ್ಟು ಓದಿ: ಹೊಸ ಟ್ಯಾರಿಫ್​ಗೆ ನೆಪಗಳ ಹುಡುಕಾಟ; ಭಾರತ ಸೇರಿ 16 ಟ್ರೇಡಿಂಗ್ ಪಾರ್ಟ್ನರ್ಸ್ ಮೇಲೆ ಅಮೆರಿಕ ತನಿಖೆ

ಫಾಕ್ಸ್ ನ್ಯೂಸ್ ರೇಡಿಯೊದಲ್ಲಿ ಬ್ರಿಯಾನ್ ಕಿಲ್ಮೀಡ್ ಶೋಗೆ ಮಾತನಾಡಿದ ಟ್ರಂಪ್, ಅವರು ಗಾಯಗೊಂಡಿರಬಹುದು, ಯಾವುದೋ ರೂಪದಲ್ಲಿ ಜೀವಂತವಾಗಿರಬಹುದು ಎಂದರು.
ಇರಾನ್‌ನ ಸರ್ವೋಚ್ಚ ನಾಯಕರಾಗಿ ಅಧಿಕಾರ ವಹಿಸಿಕೊಂಡ ನಂತರ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಮೊಜ್ತಬಾ ಖಮೇನಿ ಅವರ ಬಗ್ಗೆ ತಮ್ಮ ಮೊದಲ ಹೇಳಿಕೆ ನೀಡಿದ್ದಾರೆ.

ಇರಾನ್‌ನೊಂದಿಗಿನ ನಡೆಯುತ್ತಿರುವ ಯುದ್ಧದಲ್ಲಿ ಅಮೆರಿಕ ಹಿಂದೆ ಸರಿಯುವುದಿಲ್ಲ ಎಂದು ಅವರು ಹೇಳಿದ್ದಾರೆ. ಇರಾನ್‌ನಲ್ಲಿ ಇತ್ತೀಚೆಗೆ ನಡೆದ ದಾಳಿಗಳ ನಂತರ, ಮೊಜ್ತಾಬಾ ಖಮೇನಿ ಬಗ್ಗೆ ವಿವಿಧ ಊಹಾಪೋಹಗಳು ಹರಡುತ್ತಿವೆ. ದಿ ಸನ್ ವರದಿಯ ಪ್ರಕಾರ, 56 ವರ್ಷದ ಖಮೇನಿ ಈ ದಾಳಿಗಳಲ್ಲಿ ಒಂದು ಕಾಲು ಕಳೆದುಕೊಂಡಿದ್ದಾರೆ ಮತ್ತು ಅವರ ಹೊಟ್ಟೆ ಅಥವಾ ಯಕೃತ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಿದೆ.

ಮೊಜ್ತಬಾ ಖಮೇನಿ ಅವರ ಪತ್ನಿ, ಅವರ ಸಹೋದರಿಗಳಲ್ಲಿ ಒಬ್ಬರು, ಅವರ ಸೊಸೆ ಮತ್ತು ಅವರ ತಂದೆ ಮತ್ತು ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಕೂಡ ಅಮೆರಿಕದ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ಹೇಳಿದೆ.

ಯುದ್ಧ ಪ್ರಾರಂಭವಾದಾಗಿನಿಂದ ಖಮೇನಿ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಯುದ್ಧವನ್ನು ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ ಅವರ ಮೊದಲ ಸಾರ್ವಜನಿಕ ಹೇಳಿಕೆಯನ್ನು ದೂರದರ್ಶನದಲ್ಲಿ ಅಥವಾ ವೀಡಿಯೊ ರೆಕಾರ್ಡಿಂಗ್ ಮೂಲಕ ವೈಯಕ್ತಿಕವಾಗಿ ನೀಡಲಾಗಿಲ್ಲ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

 

Source link

ಫರ್ಮಾನ್ ಖಾನ್ ಜೊತೆ ಮೊನಲಿಸಾ ಮದುವೆ: ತಂದೆ ಹೇಳಿದ್ದೇನು?

ಕುಂಭಮೇಳದ ಒಂದು ಚಿತ್ರದಿಂದ ಭಾರಿ ಜನಪ್ರಿಯತೆ ಪಡೆದ ಮೊನಲಿಸಾ ಭೋಸ್ಲೆಯ (Monalisa Bhosle) ಮದುವೆ ಇತ್ತೀಚೆಗಷ್ಟೆ ಕೇರಳದಲ್ಲಿ ನಡೆದಿದ್ದು, ಅವರ ಕುಂಭಮೇಳದ ಚಿತ್ರದಷ್ಟೆ ಅವರ ಮದುವೆಯೂ ವೈರಲ್ ಆಗುತ್ತಿದೆ. ಮೊನಲಿಸಾ ಭೋಸ್ಲೆ, ಫರ್ಮಾನ್ ಖಾನ್ ಎಂಬುವರನ್ನು ಅವರ ಕುಟುಂಬದ ಇಚ್ಛೆಯ ವಿರುದ್ಧವಾಗಿ ಕೇರಳದಲ್ಲಿ ಮದುವೆ ಆಗಿದ್ದಾರೆ. ಇವರ ಮದುವೆಯ ಮುಂದಾಳತ್ವವನ್ನು ಕೇರಳದ ಕೆಲವು ರಾಜಕೀಯ ಮುಖಂಡರು ವಹಿಸಿಕೊಂಡಿದ್ದು ವಿಶೇಷ. ಮೊನಲಿಸಾ ಮತ್ತು ಫರ್ಮಾನ್ ಖಾನ್ ಅವರ ಮದುವೆಯನ್ನು ಕೆಲವರು ‘ಲವ್ ಜಿಹಾದ್’ ಎಂದು ಸಹ ಕರೆದಿದ್ದಾರೆ, ಆದರೆ ನೂತನ ವಧು-ವರರು ಇದನ್ನು ಅಲ್ಲಗಳೆದಿದ್ದಾರೆ. ಇದೀಗ ಮೊನಲಿಸಾ ತಂದೆ ಈ ಬಗ್ಗೆ ಮಾತನಾಡಿದ್ದಾರೆ.

ಮೊನಲಿಸಾ ತಂದೆ ಜಯಸಿಂಗ್ ಭೋಸ್ಲೆ ಹೇಳಿರುವಂತೆ, ‘ಕೆಲ ದಿನಗಳ ಹಿಂದಷ್ಟೆ ಕೆಲವರು ಅವರ ಮನೆಗೆ ಬಂದು ಕೇರಳದಲ್ಲಿ ನಟನೆ ತರಬೇತಿ ಹಾಗೂ ಸಿನಿಮಾ ಅಭಿನಯಕ್ಕಾಗಿ ತೆರಳುತ್ತಿದ್ದು, ಮೊನಲಿಸಾ ಅವರನ್ನು ಕಳಿಸಿಕೊಡುವಂತೆ ಕೇಳಿದರಂತೆ. ಇಂಥಹಾ ವಿಷಯಗಳ ಬಗ್ಗೆ ಹೆಚ್ಚು ಮಾಹಿತಿ ಇಲ್ಲದ ಜಯಸಿಂಗ್ ಭೋಸ್ಲೆ ಸರಿಯೆಂದು ಒಪ್ಪಿಕೊಂಡಿದ್ದು ಮಾತ್ರವಲ್ಲದೆ ಅವರೂ ಸಹ ಮೊನಲಿಸಾ ಜೊತೆಗೆ ಕೇರಳಕ್ಕೆ ತೆರಳಿದ್ದರಂತೆ. ಮನೆಗೆ ಬಂದಿದ್ದ ಗುಂಪಿನಲ್ಲಿ ಮೊನಲಿಸಾ ಈಗ ಮದುವೆ ಆಗಿರುವ ಫರ್ಮಾನ್ ಖಾನ್ ಸಹ ಇದ್ದರಂತೆ. ಈಗ ನೋಡಿದರೆ ಇಬ್ಬರೂ ಮದುವೆ ಆಗಿದ್ದಾರೆ.

ಮದುವೆ ಆಗುವ ವಿಷಯ ಹೇಳಿದಾಗ ನಾನು ವಿರೋಧಿಸಿದೆ, ಊರಿಗೆ ಮರಳೋಣ ಎಂದು ಕೇಳಿದೆ ಆದರೆ ಅವರು ಕೇರಳ ಪೊಲೀಸ್ ಠಾಣೆಗೆ ಹೋಗಿ ರಕ್ಷಣೆ ಕೇಳಿದರು. ಪೊಲೀಸರು, ಮೊನಲಿಸಾ ಈಗಾಗಲೇ 18 ವರ್ಷ ವಯಸ್ಸಿನವರಾಗಿರುವ ಕಾರಣ ಅವರು ತಮಗೆ ಇಚ್ಛೀಸಿದವರನ್ನು ವಿವಾಹವಾಗಬಹುದು ಎಂದರು. ನಾವು ಏನೂ ಮಾಡಲಾಗಲಿಲ್ಲ’ ಎಂದಿದ್ದಾರೆ ಜಯಸಿಂಗ್ ಭೋಸ್ಲೆ.

ಇದನ್ನೂ ಓದಿ:ಕುಂಭಮೇಳ ‘ಮೊನಾಲಿಸಾ’ಳ ಮೊದಲ ಸಿನಿಮಾ ಬಂದ್, ನಿರ್ದೇಶಕನಿಂದ ಮೋಸ?

ಮೊನಲಿಸಾ ಅವರ ಚಿಕ್ಕಪ್ಪ ಮಾತನಾಡಿ, ‘ಸಿನಿಮಾ ಅವಕಾಶದ ನೆಪ ಹೇಳಿ ಕೆಲವರು ಆಕೆಯನ್ನು ಕೇರಳಕ್ಕೆ ಕರೆಸಿದ್ದರು. ನಾವು ಹೆಚ್ಚು ವಿದ್ಯಾವಂತರಲ್ಲ ಮತ್ತು ಇದೆಲ್ಲ ಹೇಗೆ ನಡೆಯಿತು ಎಂದು ನಮಗೆ ಅರ್ಥವಾಗುತ್ತಿಲ್ಲ. ಬಹುಶಃ ಯಾರಾದರೂ ಆಕೆಯ ಮೇಲೆ ಪ್ರಭಾವ ಬೀರಿರಬಹುದು. ಆಕೆಯ ನಿರ್ಧಾರವನ್ನು ಒಪ್ಪಿಕೊಳ್ಳದೆ ಕುಟುಂಬಕ್ಕೆ ಬೇರೆ ದಾರಿಯಿಲ್ಲ’ ಎಂದಿದ್ದಾರೆ. ಅಲ್ಲದೆ, ‘ನಮಗೆ ಮೊದಲೇ ಹೇಳಿದ್ದರೆ ನಾವೇ ಮದುವೆಯನ್ನು ಏರ್ಪಾಡು ಮಾಡುತ್ತಿದ್ದೆವು’ ಎಂದು ಸಹ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link