All posts by nagaraj11081993

ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ! – Kannada News | 10 Foot King Cobra Found Sleeping Outside House Door in Mudigere

ಚಿಕ್ಕಮಗಳೂರು, ಮೇ 19: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆ. ತಲಗೂರು ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದೆ. ಗ್ರಾಮದ ಮಂಜುನಾಥ್ ಆಚಾರ್ ಎಂಬುವವರ ಮನೆ ಬಾಗಿಲಿಗೆ ತಂಪಾದ ನೆರಳು ಹುಡುಕಿಕೊಂಡು ಬಂದ ಈ ಹಾವು, ಹೊಸ್ತಿಲಲ್ಲೇ ತಣ್ಣಗೆ ಮಲಗಿತ್ತು. ಮುಂಜಾನೆ ಇದನ್ನು ಕಂಡ ಮನೆಯವರು ಭಯಭೀತರಾಗಿದ್ದಾರೆ.

ಸುಮಾರು 10 ಅಡಿ ಉದ್ದವಿದ್ದ ಈ ಬೃಹತ್ ಕಾಳಿಂಗ ಸರ್ಪವನ್ನು ಕಂಡು ಗ್ರಾಮಸ್ಥರು ತಕ್ಷಣವೇ ಉರಗ ತಜ್ಞ ಸ್ನೇಕ್ ಆರೀಫ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಆರೀಫ್, ಹಾವನ್ನು ಜಾಗರೂಕತೆಯಿಂದ ಸೆರೆಹಿಡಿದಿದ್ದಾರೆ. ಬಳಿಕ ಅದನ್ನು ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಗಿದ್ದು, ಸದ್ಯ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದರ್ಶನ್-ವಿಜಯಲಕ್ಷ್ಮೀ ವಿವಾಹ ವಾರ್ಷಿಕೋತ್ಸವ; ಹೇಗಿತ್ತು ನೋಡಿ ಮದುವೆ ಆಮಂತ್ರಣ ಪತ್ರ – Kannada News | Darshan Vijayalakshmi 23rd Anniversary: Wedding Invitation Photo goes viral

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಹಾಗೂ ವಿಜಯಲಕ್ಷ್ಮೀ ದಂಪತಿ ಇಂದು (ಮೇ 19) ತಮ್ಮ 23ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ವಿಜಯಲಕ್ಷ್ಮೀ ಅವರು ಸಾಮಾಜಿಕ ಜಾಲತಾಣದಲ್ಲಿ ಪತಿಯ ಫೋಟೋ ಹಂಚಿಕೊಂಡು ಗಮನ ಸೆಳೆದಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇದರ ನಡುವೆ, ಇವರ ಮದುವೆಯ ಆಮಂತ್ರಣ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದು, ಅಭಿಮಾನಿಗಳು ಭಾವನಾತ್ಮಕವಾಗಿ ಕಮೆಂಟ್ ಮಾಡುತ್ತಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸದ್ಯ ಜೈಲಿನಲ್ಲಿದ್ದಾರೆ. ಜೈಲು ವಾಸದ ಕಾರಣದಿಂದಾಗಿ ಈ ಬಾರಿ ದರ್ಶನ್ ಅವರಿಗೆ ಪತ್ನಿ ಬಳಿ ಇದ್ದು ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ವಿಶೇಷ ಭೇಟಿಗೆ ವಿಜಯಲಕ್ಷ್ಮೀ ಅವರು ಅವಕಾಶ ಕೇಳಿದ್ದಾರೆ.

ಧರ್ಮಸ್ಥಳದಲ್ಲಿ ನಡೆದಿದ್ದ ಸರಳ ವಿವಾಹ:

2003ರ ಮೇ 19ರ ಸೋಮವಾರದಂದು ಧರ್ಮಸ್ಥಳದ ವಸಂತ ಮಹಲ್‌ನಲ್ಲಿ ಬೆಳಿಗ್ಗೆ 9:10 ರಿಂದ 9:50 ರವರೆಗಿನ ಮಿಥುನ ಲಗ್ನದಲ್ಲಿ ದರ್ಶನ್ ಹಾಗೂ ವಿಜಯಲಕ್ಷ್ಮೀ ವಿವಾಹ ನಡೆದಿತ್ತು. ಕೆಮಿಕಲ್ ಇಂಜಿನಿಯರಿಂಗ್ ಪದವೀಧರೆಯಾಗಿರೋ ವಿಜಯಲಕ್ಷ್ಮೀ ಹಾಗೂ ನಟ ದರ್ಶನ್ ಮಧ್ಯೆ ಪ್ರೀತಿ ಮೂಡಿ, ನಂತರ ಹಿರಿಯರ ಸಮ್ಮುಖದಲ್ಲಿ ಯಾವುದೇ ಆಡಂಬರವಿಲ್ಲದೆ ಸರಳವಾಗಿ ಮದುವೆ ನಡೆಯಿತು

ಈ ದಂಪತಿಗೆ ವಿನೀಶ್ ಹೆಸರಿನ ಮಗನಿದ್ದಾನೆ. ಇವರ ದಾಂಪತ್ಯ ಜೀವನವು ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದರೂ, ಪತಿಯಿಂದ ಎಷ್ಟೇ ನೋವಾದರೂ ವಿಜಯಲಕ್ಷ್ಮೀ ಅವರು ಪ್ರತಿ ಹಂತದಲ್ಲೂ ದರ್ಶನ್ ಅವರ ಬೆನ್ನಲುಬಾಗಿ ನಿಂತಿದ್ದಾರೆ. ಈ ಮೊದಲು ದರ್ಶನ್ ಅವರಿಗೆ ಪೂರ್ಣ ಪ್ರಮಾಣದ ಜಾಮೀನು ದೊರಕಿಸಿಕೊಡುವಲ್ಲಿ ವಿಜಯಲಕ್ಷ್ಮೀ ಪ್ರಮುಖ ಪಾತ್ರ ವಹಿಸಿದ್ದರು. ಆ ಬಳಿಕ ಸುಪ್ರೀಂಕೋರ್ಟ್ ದರ್ಶನ್ ಜಾಮೀನನ್ನು ರದ್ದು ಮಾಡಿತ್ತು.

‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ ಹಾಗೂ ಒಪ್ಪಿಕೊಂಡ ಸಿನಿಮಾ ಕೆಲಸ ಪೂರ್ಣಗೊಳಿಸಬೇಕಿದೆ ಎಂದು ದರ್ಶನ್ ಅವರು ಕೋರ್ಟ್ ಎದುರು ಅಲವತ್ತುಕೊಂಡಿದ್ದರು. ಆದಾಗ್ಯೂ ಸುಪ್ರೀಂಕೋರ್ಟ್ ಜಾಮೀನು ನೀಡಿಲ್ಲ. ಹೀಗಾಗಿ, ಇನ್ನೂ ಒಂದು ವರ್ಷ ಅವರು ಜೈಲಿನಲ್ಲೇ ಇರಬೇಕಿದೆ.

ಇದನ್ನೂ ಓದಿ: ವಿವಾಹ ವಾರ್ಷಿಕೋತ್ಸವ: ದರ್ಶನ್-ವಿಜಯಲಕ್ಷ್ಮಿ ಮುಖಾಮುಖಿ ಭೇಟಿಗೆ ಅವಕಾಶ ಇದೆಯಾ?

ವಿವಾಹ ವಾರ್ಷಿಕೋತ್ಸವ ಮಿಸ್ಸಿಂಗ್

ದರ್ಶನ್ ಜೈಲಿನಿಂದ ಹೊರಗಿದ್ದಾಗ ಪತ್ನಿ ಜೊತೆ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದರು. ಆದರೆ, ಈಗ ಇಬ್ಬರೂ ದೂರ ದೂರ ಇದ್ದಾರೆ. ಹೀಗಾಗಿ, ಅದ್ದೂರಿಯಾಗಿ ವಿವಾಹ ವಾರ್ಷಿಕೋತ್ಸವ ಆಚರಣೆ ಅಸಾಧ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 11:36 am, Tue, 19 May 26

Source link

ಮೇ 20ಕ್ಕೆ ರಾಷ್ಟ್ರವ್ಯಾಪಿ ಔಷಧ ವ್ಯಾಪಾರಿಗಳ ಮುಷ್ಕರ; ಬಂದ್ ಆಗಲಿವೆ ಮೆಡಿಕಲ್ ಸ್ಟೋರ್​ಗಳು; ಯಾಕಿದು ಪ್ರತಿಭಟನೆ? – Kannada News | Chemists and Druggists nation wide strike on May 20th, to protest against online pharmacies

ನವದೆಹಲಿ, ಮೇ 19: ಆನ್‌ಲೈನ್ ಔಷಧ ಮಾರಾಟ ವೇದಿಕೆಗಳು (e-pharmacies) ಮತ್ತು ಇ-ಕಾಮರ್ಸ್ ಸಂಸ್ಥೆಗಳ ಅನಿಯಂತ್ರಿತ ವ್ಯವಹಾರವನ್ನು ಪ್ರತಿಭಟಿಸಿ, ಮೇ 20ರಂದು ದೇಶಾದ್ಯಂತ ಔಷಧ ವ್ಯಾಪಾರಿಗಳು (Chemists) ಬೃಹತ್ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ಸ್ ಅಂಡ್ ಡ್ರಗಿಸ್ಟ್ಸ್ (AIOCD) ಎನ್ನುವ ಸಂಘಟನೆಯ ನೇತೃತ್ವದಲ್ಲಿ ಈ ಬಂದ್ ನಡೆಯುತ್ತಿದ್ದು, ದೇಶದ ಸುಮಾರು 12 ರಿಂದ 15 ಲಕ್ಷ ಔಷಧ ವ್ಯಾಪಾರಿಗಳು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.

ಈ ಸುದ್ದಿಯ ಮುಖ್ಯಾಂಶಗಳು

  • ಆನ್ಲೈನ್ ಪ್ಲಾಟ್​ಫಾರ್ಮ್​ಗಳಿಂದ ಔಷಧ ಮಾರಾಟ ವಿರೋಧಿಸಿ ದೇಶಾದ್ಯಂತ ಔಷಧ ವ್ಯಾಪಾರಿಗಳು ಮೇ 20ರಂದು ಮುಷ್ಕರ ನಡೆಸಲಿದ್ದಾರೆ.
  • ಆಸ್ಪತ್ರೆಗಳ ಒಳಗೆ ಮತ್ತು ಹೊರಗಿನ ಆವರಣಗಳಲ್ಲಿರುವ ಮೆಡಿಕಲ್ ಸ್ಟೋರ್​ಗಳು ತೆರೆದಿರುತ್ತವೆ. ತುರ್ತು ಔಷಧ ಸೇವೆಗಳು ಲಭ್ಯ ಇರುತ್ತವೆ.
  • ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳ ಔಷಧ ವ್ಯಾಪಾರಿಗಳ ಸಂಘಟನೆಗಳು ಈ ಮುಷ್ಕರಕ್ಕೆ ಬೆಂಬಲ ನೀಡಿಲ್ಲ. ಜನೌಷಧ ಸೆಂಟರ್​ಗಳು ತೆರೆದಿರುತ್ತವೆ.

ಇದನ್ನೂ ಓದಿ: ಮೈಕ್ರೋಸಾಫ್ಟ್ ಎಐ ಮುಖ್ಯಸ್ಥರ ಎಚ್ಚರಿಕೆ; ಇನ್ನು, 12-18 ತಿಂಗಳಲ್ಲಿ ಇನ್ನಿಲ್ಲವಾಗುತ್ತವಂತೆ ವೈಟ್ ಕಾಲರ್ ಜಾಬ್​ಗಳು

ಔಷಧ ವ್ಯಾಪಾರಿಗಳ ಮುಷ್ಕರಕ್ಕೆ ಪ್ರಮುಖ ಕಾರಣಗಳೇನು?

  1. ಅನಿಯಂತ್ರಿತ ಇ-ಫಾರ್ಮಸಿಗಳು: ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಆನ್‌ಲೈನ್ ಔಷಧ ವಿತರಣೆಗೆ ಸರ್ಕಾರ ನೀಡಿದ್ದ ತಾತ್ಕಾಲಿಕ ಸಡಿಲಿಕೆಗಳನ್ನು (GSR 220E ಮತ್ತು 817E ನಿಯಮಗಳು) ಈಗಲೂ ಮುಂದುವರಿಸಲಾಗುತ್ತಿದ್ದು, ಆನ್‌ಲೈನ್ ಕಂಪನಿಗಳು ಇದರ ದುರುಪಯೋಗ ಮಾಡಿಕೊಳ್ಳುತ್ತಿವೆ ಎಂದು ಕೆಮಿಸ್ಟ್ ಸಂಘಟನೆಗಳು ಆರೋಪಿಸಿವೆ.
  2. ಅನ್ಯಾಯದ ಸ್ಪರ್ಧೆ ಮತ್ತು ಭಾರಿ ರಿಯಾಯಿತಿ: ದೊಡ್ಡ ಕಾರ್ಪೊರೇಟ್ ಆನ್‌ಲೈನ್ ಸಂಸ್ಥೆಗಳು ಶೇಕಡಾ 20 ರಿಂದ 50 ರಷ್ಟು ಭಾರಿ ರಿಯಾಯಿತಿಗಳನ್ನು (Discounts) ನೀಡುತ್ತಿರುವುದರಿಂದ ಸಣ್ಣ ಮತ್ತು ಸ್ಥಳೀಯ ಮೆಡಿಕಲ್ ಸ್ಟೋರ್‌ಗಳ ವ್ಯವಹಾರಕ್ಕೆ ಭಾರಿ ಹೊಡೆತ ಬಿದ್ದಿದೆ.
  3. ನಕಲಿ ಪ್ರಿಸ್ಕ್ರಿಪ್ಷನ್ ಮತ್ತು ಸುರಕ್ಷತೆಯ ಆತಂಕ: ಆನ್‌ಲೈನ್‌ನಲ್ಲಿ ಸೂಕ್ತ ವೈದ್ಯರ ಚೀಟಿ (Prescription) ಇಲ್ಲದೆ ಅಥವಾ ಎಐ (AI) ಮೂಲಕ ಸೃಷ್ಟಿಸಿದ ನಕಲಿ ಚೀಟಿಗಳನ್ನು ಬಳಸಿ ಆಂಟಿಬಯೋಟಿಕ್ಸ್ ಮತ್ತು ಮಾದಕ ಶೈಲಿಯ ಔಷಧಗಳನ್ನು ಸುಲಭವಾಗಿ ಆರ್ಡರ್ ಮಾಡಲಾಗುತ್ತಿದೆ. ಇದು ಸಾರ್ವಜನಿಕ ಆರೋಗ್ಯಕ್ಕೆ ಅಪಾಯಕಾರಿ ಎಂದು ವ್ಯಾಪಾರಿಗಳು ಹೇಳಿದ್ದಾರೆ.

ಸರ್ಕಾರಕ್ಕೆ ಪ್ರತಿಭಟನಾಕಾರರು ಮುಂದಿಟ್ಟಿರುವ ಬೇಡಿಕೆಗಳು

  • ಆನ್‌ಲೈನ್ ಔಷಧ ಮಾರಾಟದ ಮೇಲೆ ಕಠಿಣ ನಿಯಮಾವಳಿಗಳನ್ನು ಜಾರಿಗೆ ತರಬೇಕು.
  • ಕೋವಿಡ್ ಸಮಯದಲ್ಲಿ ನೀಡಲಾಗಿದ್ದ ಇ-ಫಾರ್ಮಸಿ ಸಡಿಲಿಕೆಗಳನ್ನು ತಕ್ಷಣವೇ ಹಿಂಪಡೆಯಬೇಕು.
  • ಸ್ಥಳೀಯ ಔಷಧ ವ್ಯಾಪಾರಿಗಳ ಹಿತರಕ್ಷಣೆಗಾಗಿ ಸೂಕ್ತ ನೀತಿಗಳನ್ನು ರೂಪಿಸಬೇಕು.

ಇದನ್ನೂ ಓದಿ: ದಿಲ್ಲಿಯಲ್ಲಿ ಟ್ಯಾಕ್ಸಿ, ಆಟೊ ಚಾಲಕರಿಂದ 3 ದಿನ ಮುಷ್ಕರ; ಏನಿವೆ ಅವರ ಬೇಡಿಕೆಗಳು?

12 ರಾಜ್ಯಗಳಲ್ಲಿ ಇಲ್ಲವಾ ಮುಷ್ಕರ?

ಎನ್​ಡಿಟಿವಿ ವರದಿ ಪ್ರಕಾರ, ಕರ್ನಾಟಕ, ಮಹಾರಾಷ್ಟ್ರ, ಉತ್ತರಪ್ರದೇಶ, ಕೇರಳ, ಪಂಜಾಬ್, ಪಶ್ಚಿಮ ಬಂಗಾಳ ಸೇರಿದಂತೆ 12ಕ್ಕೂ ಹೆಚ್ಚು ರಾಜ್ಯಗಳ ಔಷಧ ವ್ಯಾಪಾರಿಗಳ ಸಂಘಟನೆಗಳು ಈ ಮೇ 20ರ ಮುಷ್ಕರದಿಂದ ದೂರ ಉಳಿಯಲು ನಿರ್ಧರಿಸಿವೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಈ ರಾಜ್ಯಗಲ್ಲಿರುವ ಜನರು ಆತಂಕಪಡಬೇಕಿಲ್ಲ.

ಮೇ 20ರಂದು ನಿಮ್ಮ ಮನೆಯ ಹತ್ತಿರದ ಸಾಮಾನ್ಯ ಮೆಡಿಕಲ್ ಸ್ಟೋರ್‌ಗಳು ಮುಚ್ಚುವ ಸಾಧ್ಯತೆ ಇಲ್ಲದೇ ಇಲ್ಲ. ಆದ್ದರಿಂದ ನಿಮಗೆ ಅಗತ್ಯವಿರುವ ನಿಯಮಿತ ಅಥವಾ ತುರ್ತು ಜೀವರಕ್ಷಕ ಔಷಧಗಳನ್ನು ಮುಂಚಿತವಾಗಿಯೇ ಖರೀದಿಸಿ ಇಟ್ಟುಕೊಳ್ಳುವುದು ಉತ್ತಮ. ತುರ್ತು ಸಂದರ್ಭಗಳಲ್ಲಿ ಸರ್ಕಾರಿ ಆಸ್ಪತ್ರೆಗಳು ಅಥವಾ ಪ್ರಮುಖ ಆಸ್ಪತ್ರೆಗಳ ಔಷಧಾಲಯಗಳನ್ನು ಸಂಪರ್ಕಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಆಖ್ರಿ ಸವಾಲ್’ ವೀಕ್ಷಕರಿಗೆ ಭರ್ಜರಿ ಆಫರ್: ಒಂದು ಟಿಕೆಟ್ ಕೊಂಡರೆ ಮತ್ತೊಂದು ಉಚಿತ – Kannada News | Sanjay Dutt starrer Aakhri Sawal Movie makers announce Buy 1 Get 1 Free Ticket offer

ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಬಾಲಿವುಡ್‌ನ ಬಹುಚರ್ಚಿತ ‘ಆಖ್ರಿ ಸವಾಲ್’ (Aakhri Sawal) ಚಿತ್ರದ ನಿರ್ಮಾಪಕರು ಪ್ರೇಕ್ಷಕರಿಗೆ ಭರ್ಜರಿ ಕೊಡುಗೆಯೊಂದನ್ನು ಘೋಷಿಸಿದ್ದಾರೆ. ಸಿನಿಮಾಪ್ರೇಮಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರಮಂದಿರಗಳತ್ತ ಸೆಳೆಯುವ ಉದ್ದೇಶದಿಂದ ಚಿತ್ರದ ನಿರ್ಮಾಪಕ ನಿಖಿಲ್ ನಂದಾ ಅವರು ‘ಒಂದು ಟಿಕೆಟ್ ಖರೀದಿಸಿದರೆ ಮತ್ತೊಂದು ಟಿಕೆಟ್ ಉಚಿತ’ (Buy 1 Get 1 Free) ಎಂಬ ವಿಶೇಷ ಪ್ರಚಾರದ ಆಫರ್ ಪರಿಚಯಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸಿನಿಮಾ ಪ್ರೇಕ್ಷಕರು ಟಿಕೆಟ್ ಬುಕ್ ಮಾಡುವಾಗ AAKHRISAWAL ಎಂಬ ಪ್ರೋಮೋ ಕೋಡ್ ಬಳಸುವ ಮೂಲಕ ಈ ಕೊಡುಗೆಯ ಲಾಭವನ್ನು ಪಡಕೊಳ್ಳಬಹುದಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿರುವ ನಿರ್ಮಾಪಕ ನಿಖಿಲ್ ನಂದಾ, ‘ಒಂದು ಪ್ರಶ್ನೆ. ಒಂದು ಟಿಕೆಟ್. ಡಬಲ್ ಥ್ರಿಲ್. ಚಿತ್ರಮಂದಿರದ ಸೀಟುಗಳು ಭರ್ತಿಯಾಗುವ ಮುನ್ನವೇ ನಿಮ್ಮ ಆಫರ್ ಪಡೆದುಕೊಳ್ಳಿ. ನಿಮ್ಮವರ ಜೊತೆ ಬಂದು ಈ ನಿಗೂಢ ರಹಸ್ಯವನ್ನು ಒಟ್ಟಿಗೆ ವೀಕ್ಷಿಸಿ’ ಎಂದು ಬರೆದುಕೊಂಡಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಐತಿಹಾಸಿಕ ಮತ್ತು ರಾಜಕೀಯ ಹಿನ್ನೆಲೆಯನ್ನು ಒಳಗೊಂಡಿರುವ ಕಾರಣದಿಂದಾಗಿ, ಈ ಚಿತ್ರದ ಟ್ರೇಲರ್ ಬಿಡುಗಡೆಯಾದ ದಿನದಿಂದಲೇ ಭಾರಿ ಕುತೂಹಲ ಮೂಡಿಸಿತ್ತು. ತನಿಖಾ ಶೈಲಿಯ ಕಥಾಹಂದರ ಹೊಂದಿರುವ ಈ ಚಿತ್ರವು ಇತ್ತೀಚೆಗೆ ಹಲವು ಗಣ್ಯರ ವಿಶೇಷ ಪ್ರದರ್ಶನಗಳ ಮೂಲಕ ಗಮನ ಸೆಳೆದಿದೆ.

ಆರ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಈ ಚಿತ್ರದ ವಿಶೇಷ ಪ್ರದರ್ಶನವನ್ನು ವೀಕ್ಷಿಸಿದ್ದಾರೆ. ದೆಹಲಿಯಲ್ಲಿ ನಡೆದ ಪ್ರೀಮಿಯರ್ ಶೋನಲ್ಲಿ ಭಾಗವಹಿಸಿದ್ದ ಪ್ರಮುಖ ರಾಜಕೀಯ ಮುಖಂಡರಾದ ರೇಖಾ ಗುಪ್ತಾ ಅವರು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಚಿತ್ರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೇ, ಈ ಚಿತ್ರದ ವಿಶೇಷ ಪ್ರದರ್ಶನವೊಂದು ರಾಷ್ಟ್ರಪತಿ ಭವನದಲ್ಲೂ ಆಯೋಜನೆಗೊಂಡಿತ್ತು ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಆರ್​ಎಸ್​ಎಸ್ ಸಿನಿಮಾ: ವಿವಾದದ ನಡುವೆಯೂ ರಾಷ್ಟ್ರಪತಿ ಭವನದಲ್ಲಿ ‘ಆಖ್ರಿ ಸವಾಲ್’ ಪ್ರದರ್ಶನ?

ಚಿತ್ರವು ಒಂದು ಕಡೆ ಪ್ರಶಂಸೆ ಪಡೆಯುತ್ತಿದ್ದರೆ, ಮತ್ತೊಂದು ಕಡೆ ವಿವಾದಗಳನ್ನೂ ಎದುರಿಸಿದೆ. ಯುಎಇ (UAE) ಸೆನ್ಸಾರ್ ಮಂಡಳಿಯು ಈ ಚಿತ್ರದ ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ಮತ್ತು ಬದಲಾವಣೆ ಮಾಡಲು ಸೂಚಿಸಿತ್ತು. ಆದರೆ ಚಿತ್ರದ ಮೂಲ ಕಥೆಗೆ ಧಕ್ಕೆಯಾಗಬಾರದು ಎಂದು ನಿರ್ಮಾಪಕರು ಆ ಬದಲಾವಣೆಗಳನ್ನು ಮಾಡಲು ನಿರಾಕರಿಸಿದ್ದರಿಂದ ಯುಎಇನಲ್ಲಿ ಈ ಚಿತ್ರದ ಬಿಡುಗಡೆಗೆ ಅನುಮತಿ ಸಿಕ್ಕಿಲ್ಲ. ಇದರ ಜೊತೆಗೆ ಚಿತ್ರದ ಕೆಲವು ಅಂಶಗಳ ವಿರುದ್ಧ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಕೂಡ ದಾಖಲಾಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕಿರುಕುಳ ಕೊಟ್ಟು ಯುವತಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿ, ಹೆಣಕ್ಕೆ ತಾಳಿ ಕಟ್ಟಿದ ವ್ಯಕ್ತಿ – Kannada News | Jharkhand: Fiance Marries Deceased Bride Amid Ongoing Questions Around Her Death

ಗಿರಿದಿಹ್ , ಮೇ 19: ತನ್ನ ಕಿರುಕುಳಕ್ಕೆ ಬಲಿಯಾಗಿ ಹೆಣವಾಗಿ ಮಲಗಿದ್ದ ಯುವತಿ ಕತ್ತಿಗೆ ವ್ಯಕ್ತಿಯೊಬ್ಬ ತಾಳಿ ಕಟ್ಟಿರುವ ಘಟನೆ ಜಾರ್ಖಂಡ್​ನ ಗಿರಿದಿಹ್​ನಲ್ಲಿ ನಡೆದಿದೆ. ಆಕೆಯನ್ನು ಆತ್ಮಹತ್ಯೆ(Suicide)ಗೆ ತಳ್ಳಿದ ಆರೋಪಿ ಯುವಕನೇ ಪೊಲೀಸರ ಸಮ್ಮುಖದಲ್ಲಿ ಮದುವೆಯಾಗಿರುವ ವಿಲಕ್ಷಣ ಪ್ರಸಂಗ ನಡೆದಿದೆ. ಮೃತರ ಹಣೆಗೆ ಸಿಂಧೂರ ಹಚ್ಚಿ, ಸಾಂಕೇತಿಕವಾಗಿ ವಿವಾಹ ವಿಧಿವಿಧಾನಗಳನ್ನು ಮುಗಿಸಿದ ನಂತರವೇ ಆಕೆಯ ಅಂತ್ಯಕ್ರಿಯೆ ನಡೆಸಲು ಸಾಧ್ಯವಾಗಿದೆ.

ಪೊಲೀಸರ ಮಾಹಿತಿಯ ಪ್ರಕಾರ, ಆರೋಪಿ ಯುವಕ ಮನೀಶ್ ಮುರ್ಮು ಮತ್ತು ಮೃತ ಯುವತಿಗೆ ಸುಮಾರು ನಾಲ್ಕು ತಿಂಗಳ ಹಿಂದೆ ನಿಶ್ಚಿತಾರ್ಥವಾಗಿತ್ತು. ಎರಡೂ ಕುಟುಂಬಗಳ ಒಪ್ಪಿಗೆಯ ಮೇರೆಗೆ ಶೀಘ್ರದಲ್ಲೇ ಮದುವೆ ಮಾಡುವುದಾಗಿ ನಂಬಿಸಿ, ಯುವತಿಯನ್ನು ಮನೀಶ್ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಆದರೆ, ಮನೆಗೆ ಬಂದ ದಿನದಿಂದಲೇ ಆಕೆಗೆ ನಿರಂತರವಾಗಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಲು ಪ್ರಾರಂಭಿಸಿದ್ದನ.

ಇತ್ತ ಯುವತಿಯ ತಂದೆ ಮದುವೆ ದಿನಾಂಕ ನಿಗದಿಪಡಿಸುವಂತೆ ಒತ್ತಡ ಹೇರಲು ಪ್ರಾರಂಭಿಸಿದಾಗ, ಶುಕ್ರವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಮಗಳು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾಳೆ ಎಂಬ ಸುದ್ದಿ ಸಿಕ್ಕಿದೆ. ಆತಂಕಗೊಂಡ ಪೋಷಕರು ಹುಡುಗನ ಮನೆಗೆ ಧಾವಿಸಿ ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಿದರಾದರೂ, ಆಕೆ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಮನೀಶ್ ನೀಡಿದ ನರಕಯಾತನೆಯನ್ನು ತಡೆಯಲಾರದೆ ನನ್ನ ಮಗಳು ವಿಷ ಸೇವಿಸಿದ್ದಾಳೆ, ಇದಕ್ಕೆ ಆತನೇ ಕಾರಣ ಎಂದು ಯುವತಿಯ ತಂದೆ ನೇರವಾಗಿ ಆಕ್ರೋಶ ಹೊರಹಾಕಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಆರೋಪಿ ಮನೀಶ್ ಮುರ್ಮುನನ್ನು ತಕ್ಷಣವೇ ಬಂಧಿಸಿದರು. ಆದರೆ, ಮರಣೋತ್ತರ ಪರೀಕ್ಷೆಯ ನಂತರ ಘಟನೆ ತೀವ್ರ ಉದ್ವಿಗ್ನ ರೂಪ ಪಡೆಯಿತು. ಎರಡೂ ಕುಟುಂಬಗಳ ನಡುವೆ ಜಗಳ ತಾರಕಕ್ಕೇರಿ, ಯಾರೂ ಕೂಡ ಯುವತಿಯ ಶವವನ್ನು ಸ್ವೀಕರಿಸಲು ಸಿದ್ಧರಿರಲಿಲ್ಲ. ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡು ಪೊಲೀಸರು ಅನಿವಾರ್ಯವಾಗಿ ಶವವನ್ನು ರಾತ್ರಿಯಿಡೀ ಪೊಲೀಸ್ ಠಾಣೆಯಲ್ಲೇ ಇಟ್ಟುಕೊಳ್ಳಬೇಕಾಯಿತು.

ಮತ್ತಷ್ಟು ಓದಿ: ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?

ಕಸ್ಟಡಿಯಿಂದ ಬಂದು ಹೆಣಕ್ಕೆ ತಾಳಿ ಕಟ್ಟಿದ ವರ
ಮರುದಿನ ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ಶವವನ್ನು ಯುವಕನ ಗ್ರಾಮಕ್ಕೆ ತರಲಾಯಿತು. ಈ ವೇಳೆ ಗ್ರಾಮಸ್ಥರು ಮತ್ತು ಯುವತಿಯ ಕುಟುಂಬಸ್ಥರು ವಿಚಿತ್ರ ಹಠಕ್ಕೆ ಬಿದ್ದರು. ಮನೀಶ್ ಶವವನ್ನು ಮದುವೆಯಾಗಲೇಬೇಕು ಎಂದು ಪಟ್ಟುಹಿಡಿದರು. ಕೊನೆಗೆ ಉದ್ರಿಕ್ತ ಜನಸಮೂಹವನ್ನು ನಿಯಂತ್ರಿಸಲು ಪೊಲೀಸರು ಕಸ್ಟಡಿಯಲ್ಲಿದ್ದ ಆರೋಪಿ ಮನೀಶ್‌ನನ್ನು ಸ್ಥಳಕ್ಕೆ ಕರೆತಂದರು.

ನೂರಾರು ಜನರ ಸಮ್ಮುಖದಲ್ಲಿ, ಪೊಲೀಸ್ ಅಧಿಕಾರಿಗಳ ಕಣ್ಣೆದುರೇ ಆರೋಪಿ ಮನೀಶ್ ಜೀವವಿಲ್ಲದ ಆ ಮುಗ್ಧ ಯುವತಿಯ ಹಣೆಗೆ ಸಿಂಧೂರ ಹಚ್ಚಿ, ಸಾಂಕೇತಿಕ ವಿವಾಹದ ವಿಧಿವಿಧಾನಗಳನ್ನು ನೆರವೇರಿಸಿದನು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬೆಂಗಳೂರಿನ ಲಾಡ್ಜ್​ನಲ್ಲಿ ಸಿಕ್ತು ಜೀವಂತ ಗುಂಡುಗಳಿದ್ದ ಮ್ಯಾಗಜೀನ್! ಅಮೇರಿಕ ನಿರ್ಮಿತ ಬುಲೆಟ್ಸ್ ತಂದಿದ್ದ ಯುವಕ ಅಂದರ್ – Kannada News | Live Bullets Found in Bengaluru’s Hotel, Man Arrested for Leaving US Made Magazine in Room

ಲಾಡ್ಜ್ ನಲ್ಲಿ ಜೀವಂತ ಗುಂಡುಗಳಿದ್ದ ಮ್ಯಾಗಜೀನ್ ಪತ್ತೆImage Credit source: google Gemini

ಬೆಂಗಳೂರು, ಮೇ 19: ನಗರದ ಪ್ರತಿಷ್ಠಿತ ಹೋಟೆಲ್‌ನಲ್ಲಿ ಅಮೆರಿಕ ನಿರ್ಮಿತ ಜೀವಂತ ಗುಂಡುಗಳಿದ್ದ ಪಿಸ್ತೂಲ್ ಮ್ಯಾಗಜೀನ್ (Live bullet) ಪತ್ತೆಯಾಗಿದ್ದು, ಈ ಸಂಬಂಧ ಜೆ.ಸಿ. ನಗರ ಪೊಲೀಸರು ಆರೋಪಿ ಅರ್ಮಾನ್ ಮುತಾಹರ್ ಎಂಬಾತನನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ. ಯುವತಿಯೊಬ್ಬಳೊಂದಿಗೆ ಲಾಡ್ಜ್​ಗೆ ಬಂದಿದ್ದ ಆರೋಪಿ, ಪಿಸ್ತೂಲ್ ಮ್ಯಾಗಜೀನ್ ಅನ್ನು ರೂಮ್​ನಲ್ಲಿಯೇ ಬಿಟ್ಟು ಹೋಗಿದ್ದ. ಅದನ್ನು ವಾಪಸ್ ತೆಗೆದುಕೊಂಡು ಹೋಗುವಂತೆ ಪದೇ ಪದೇ ಕೇಳಿದರೂ ಸರಿಯಾಗಿ ಸ್ಪಂದಿಸದ ಕಾರಣ ಹೋಟೆಲ್ ಮ್ಯಾನೇಜರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮುಖ್ಯಾಂಶಗಳು

  • ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಕೊಠಡಿಯಲ್ಲಿ ಜೀವಂತ ಗುಂಡುಗಳಿದ್ದ ಮ್ಯಾಗಜೀನ್ ಪತ್ತೆ.
  • ಮ್ಯಾಗಜೀನ್ ಬಿಟ್ಟು ಹೋಗಿದ್ದ ಆರೋಪಿ ಅರ್ಮಾನ್‌ನನ್ನು ಜೆ.ಸಿ.ನಗರ ಪೊಲೀಸರು ಬಂಧಿಸಿದ್ದಾರೆ.
  • ಪತ್ತೆಯಾದ ಬುಲೆಟ್‌ಗಳು ಅಮೆರಿಕ ದೇಶದಲ್ಲಿ ತಯಾರಾಗಿದ್ದು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ನಡೆದಿದ್ದೇನು?

ಕಳೆದ ಏಪ್ರಿಲ್ 27ರಂದು ರಾತ್ರಿ ಆರೋಪಿ ಅರ್ಮಾನ್ ಮುತಾಹರ್ ಯುವತಿಯೊಬ್ಬಳ ಜೊತೆ ಬಂದು ಜಯಮಹಲ್ ಪ್ಯಾಲೇಸ್ ಹೋಟೆಲ್‌ನಲ್ಲಿ ರೂಂ ಒಂದನ್ನು ಬುಕ್ ಮಾಡಿದ್ದ. ಆತನೊಂದಿಗೆ ಓರ್ವ ಯುವತಿಯೂ ಅದೇ ರೂಮ್​ನಲ್ಲಿ ತಂಗಿದ್ದಳು ಎಂದು ಲಾಡ್ಜ್​ನ ಮ್ಯಾನೇಜರ್ ತಿಳಿಸಿದ್ದಾರೆ. ಗುರುತಿನ ಚೀಟಿಗಾಗಿ ತನ್ನ ಪಾಸ್‌ಪೋರ್ಟ್ ನೀಡಿದ್ದ ಆತ, ಮರುದಿನ (ಏಪ್ರಿಲ್ 28) ಬೆಳಗ್ಗೆ ಕೊಠಡಿಯಿಂದ ಚೆಕ್-ಔಟ್ ಆಗಿದ್ದ.

“ಬುಲೆಟ್ ಇಟ್ಟಿದ್ದೀನಿ, ಎತ್ತಿಡಿ” ಎಂದು ಕರೆ ಮಾಡಿದ ಆರೋಪಿ

ಹೋಟೆಲ್‌ನಿಂದ ಹೋದ ಸ್ವಲ್ಪ ಹೊತ್ತಿನ ಬಳಿಕ ರಿಸೆಪ್ಷನ್‌ಗೆ ಕರೆ ಮಾಡಿದ ಅರ್ಮಾನ್, ಜೀವಂತ ಗುಂಡುಗಳಿರುವ ನನ್ನ ಪಿಸ್ತೂಲಿನ ಮ್ಯಾಗಜೀನ್ ಅನ್ನು ರೂಮ್‌ನಲ್ಲೇ ಮರೆತು ಬಿಟ್ಟು ಬಂದಿದ್ದೇನೆ. ಅದನ್ನು ಎತ್ತಿಡಿ ಎಂದು ತಿಳಿಸಿದ್ದ. ಅದಾದ ನಂತರ ಆತ ತಂಗಿದ್ದ ಕೊಠಡಿಯನ್ನು ಹೌಸ್ ಕೀಪಿಂಗ್ ಸಿಬ್ಬಂದಿ ಪರಿಶೀಲಿಸಿದಾಗ ಜೀವಂತ ಗುಂಡುಗಳಿದ್ದ ಮ್ಯಾಗಜೀನ್ ಪತ್ತೆಯಾಗಿದೆ. ಒಂದೆರಡು ದಿನಗಳಲ್ಲಿ ಬಂದು ಪಡೆದುಕೊಳ್ಳುತ್ತೇನೆ ಎಂದಿದ್ದ ಆರೋಪಿ, ಹೋಟೆಲ್ ಸಿಬ್ಬಂದಿ ಹಲವು ಬಾರಿ ಕರೆ ಮಾಡಿದರೂ ವಾಪಸ್ ಬಂದಿರಲಿಲ್ಲ.

ಪೊಲೀಸ್ ಠಾಣೆ ಮೆಟ್ಟಿಲೇರಿದ ಮ್ಯಾನೇಜರ್

ಕೊನೆಗೆ ಮೇ 4ರಂದು ಹೋಟೆಲ್ ಮ್ಯಾನೇಜರ್ ಕರೆ ಮಾಡಿ, ನಿಮ್ಮ ಮ್ಯಾಗಜೀನ್ ಅನ್ನು ಪೊಲೀಸರಿಗೆ ಒಪ್ಪಿಸುತ್ತಿದ್ದೇವೆ ಎಂದಾಗ, ಸರಿ, ನಾನು ಪೊಲೀಸ್ ಠಾಣೆಯಿಂದಲೇ ಪಡೆದುಕೊಳ್ಳುತ್ತೇನೆ ಎಂದು ಅರ್ಮಾನ್ ಉತ್ತರ ನೀಡಿದ್ದ. ಅದಾದ ಬಳಿಕ ಹೋಟೆಲ್ ಮ್ಯಾನೇಜರ್ ಜೆ.ಸಿ. ನಗರ ಪೊಲೀಸ್ ಠಾಣೆಗೆ ದೂರು ನೀಡಿ ಮ್ಯಾಗಜೀನ್ ಹಸ್ತಾಂತರಿಸಿದ್ದಾರೆ.

ಇದನ್ನೂ ಓದಿ ಕೋಲಾರ ಗಡಿಯಲ್ಲಿ ಭಾರಿ ಪ್ರಮಾಣದ ಲೈವ್ ಬುಲೆಟ್ ಪತ್ತೆ: 1969ರ ಬ್ಯಾಚ್‌ನ ಗುಂಡುಗಳನ್ನು ವಶಪಡಿಸಿಕೊಂಡ ಪೊಲೀಸರು

ಅವರ ದೂರಿನ ಮೇರೆಗೆ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಅದು ಅಮೇರಿಕಾದಲ್ಲಿ ತಯಾರಿಸಲಾದ ಬುಲೆಟ್‌ಗಳು ಎಂಬುದು ಪತ್ತೆಯಾಗಿದೆ. ಅಧಿಕಾರಿಗಳ ಕಣ್ಣು ತಪ್ಪಿಸಿ ಈತ ದೇಶದೊಳಗೆ ಹಾಗೂ ಹೋಟೆಲ್‌ಗೆ ಇವುಗಳನ್ನು ಹೇಗೆ ತಂದಿದ್ದ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:36 pm, Tue, 19 May 26

Source link

ದುಬಾರೆ ಆನೆ ಶಿಬಿರ 2 ದಿನ ಬಂದ್: ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ – Kannada News | Dubare Elephant Camp Closed for 2 Days: Tourist Entry Banned After Chennai Woman Dies in Elephant Fight Incident

ಮಡಿಕೇರಿ, ಮೇ 19: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ನಡುವೆ ನಡೆದ ಕಾಳಗದ ಘಟನೆಯಿಂದಾಗಿ ಚೆನ್ನೈ ಮೂಲದ ಮಹಿಳೆ ತುಳಸಿ ಮೃತಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಸದ್ಯಬ ಆನೆ ಶಿಬಿರವನ್ನು ಎರಡು ದಿನಗಳ ಕಾಲ ಬಂದ್ ಮಾಡಲಾಗಿದೆ. ಪ್ರವಾಸಿಗರ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಘಟನೆಯಲ್ಲಿ ದಾಳಿಗೊಳಗಾದ ಮಾರ್ತಾಂಡ ಆನೆ ಚೇತರಿಸಿಕೊಳ್ಳುತ್ತಿದೆ. ಮಾರ್ತಾಂಡ ಮತ್ತು ಕಂಜನ್ ಆನೆಗಳ ನಡುವೆ ನಡೆದ ಕಾಳಗದ ವೇಳೆ ಮಹಿಳೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದರು. ದುಬಾರೆ ಆನೆ ಶಿಬಿರದಲ್ಲಿ ಆನೆಗಳೊಂದಿಗೆ ಹತ್ತಿರದಿಂದ ಒಡನಾಡಲು ಅವಕಾಶವಿದ್ದು, ಇದೇ ಕಾರಣದಿಂದ ಮಹಿಳೆಯ ಪ್ರಾಣಕ್ಕೆ ಅಪಾಯ ಎದುರಾಗಿತ್ತು. ಪ್ರಸ್ತುತ ಶಿಬಿರವು ನಿರ್ಜನವಾಗಿದ್ದು, ಸುತ್ತಮುತ್ತಲಿನ ಅಂಗಡಿ ಮುಂಗಟ್ಟುಗಳು ಸಹ ಬಂದ್ ಆಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾದಾಟದ ವೇಳೆ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಚಿಕಿತ್ಸೆ ಫಲಿಸದೆ ಸಾವು – Kannada News | Dubare Elephant Camp Tragedy: Marthanda Elephant Dies After Fatal Fight

ಮಡಿಕೇರಿ, ಮೇ 19: ಆನೆಗಳ ನಡುವಿನ ಕಾದಾಟದಿಂದಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಿನ್ನೆ (ಮೇ 18) ಕುಶಾಲನಗರದ ದುಬಾರೆ ಕ್ಯಾಂಪ್​​ನಲ್ಲಿ ನಡೆದಿತ್ತು. ಆನೆಗಳ ನಡುವೆ ಸಿಲುಕಿ ಪ್ರವಾಸಕ್ಕೆ ಬಂದಿದ್ದ ಚೆನ್ನೈ ಮೂಲದ ಮಹಿಳೆ ದಾರುಣವಾಗಿ ಉಸಿರು ಚೆಲ್ಲಿದ್ದರು. ಅವರ ಮಗು ಮತ್ತು ಪತಿ ಕೂದಲೆಳೆ ಅಂತರದಲ್ಲಿ ಬಚಾವ್​​ ಆಗಿದ್ದರು. ಆ ಬೆನ್ನಲ್ಲೇ ಕಾದಾಟದ ವೇಳೆ ಗಂಭಿರವಾಗಿ ಗಾಯಗೊಂಡಿದ್ದ ಆನೆ ಮಾರ್ತಾಂಡ ಕೂಡ ಚಿಕಿತ್ಸೆ ಫಲಕಾರಿಯಾಗದೆ ಇಂದು (ಮೇ 19) ಮೃತಪಟ್ಟಿದೆ.

ಮುಖ್ಯಾಂಶಗಳು

  • ದುಬಾರೆ ಕ್ಯಾಂಪ್​​ನಲ್ಲಿ ಚಿಕಿತ್ಸೆ ಫಲಿಸದೆ ಮಾರ್ತಾಂಡ ಆನೆ ಸಾವು
  • ಕಾದಾಟದ ವೇಳೆ ನಿನ್ನೆ ಗಂಭೀರ ಗಾಯಗೊಂಡಿದ್ದ ಮಾರ್ತಾಂಡ
  • ಸ್ನಾನಕ್ಕೆ ಕರೆದೊಯ್ದದ್ದ ವೇಳೆ ಅಟ್ಯಾಕ್​​ ನಡೆಸಿದ್ದ ಕಂಜನ್​​ ಆನೆ

ನಿನ್ನೆ ಸ್ನಾನಕ್ಕೆಂದು ಕಾವೇರಿ ನದಿಗೆ ಮಾವುತರು ಕಂಜನ್​​ ಮತ್ತು ಮಾರ್ತಾಂಡ ಆನೆಗಳನ್ನು ಕರೆತಂದಿದ್ದರು. ಈ ವೇಳೆ ಅವುಗಳ ನಡುವೆ ಕಾದಾಟ ಆರಂಭವಾಗಿದ್ದು, ದಂತದಿಂದ ತಿವಿದು ಕಂಜನ್​​ ಆನೆ ಮಾರ್ತಾಂಡ ಆನೆಯನ್ನು ನೆಲಕ್ಕೆ ಉರುಳಿಸಿತ್ತು. ಆ ಬಳಿಕ ಕೆಲ ಸಮಯದವರೆಗೂ ಆನೆಗಳು ಕಾದಾಡಿದ್ದವು. ಮಾವುತರು ಎಷ್ಟೇ ಪ್ರಯತ್ನ ಪಟ್ಟರೂ ಮದವೇರಿದಂತೆ ವರ್ತಿಸುತ್ತಿದ್ದ ಕಂಜನ್​​ ಆನೆಯನ್ನು ನಿಯಂತ್ರಿಸಲು ಸಾಧ್ಯವಾಗಿರಲಿಲ್ಲ. ಈ ವೇಳೆ ಮಾರ್ತಾಂಡ ಆನೆ ಗಂಭೀರವಾಗಿ ಗಾಯಗೊಂಡಿತ್ತು. ಗಾಯಗೊಂಡಿದ್ದ ಮಾರ್ತಾಂಡಗೆ ಶಿಬಿರದಲ್ಲೇ ಚಿಕಿತ್ಸೆ ನೀಡಲಾಗ್ತಿತ್ತು. ಆದರೆ ಅಂತಿಮವಾಗಿ ಚಿಕಿತ್ಸೆ ಫಲಕಾರಿಯಾಗದೆ ಅದು ಇಂದು ಮೃತಪಟ್ಟಿದೆ ಎಂದು ಡಿಎಫ್ಒ ಅಭಿಶೇಕ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ದುಬಾರೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಅವುಗಳ ನಡುವೆ ಸಿಲುಕಿ ಮಹಿಳೆ ಸಾವು

ವೈರಲ್​​ ಆಗಿದ್ದ ಆನೆಗಳ ಕಾದಾಟದ ವಿಡಿಯೋ

ಕಾವೇರಿ ನದಿಯಲ್ಲಿಯೇ ಆನೆಗಳ ನಡುವೆ ಕಾದಾಟ ನಡೆದು ಅವುಗಳ ನಡುವೆ ಸಿಲುಕಿ ಮಹಿಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್​​ ಆಗಿತ್ತು. ಆ ಬೆನ್ನಲ್ಲೇ ಅರಣ್ಯ ಸಚಿವರು ಇಂತಹ ಘಟನೆಗಳ ತಡೆಗೆ ಕ್ರಮಕ್ಕೆ ಆದೇಶಿಸಿದ್ದರು. ರಾಜ್ಯದಲ್ಲಿರುವ ಎಲ್ಲ ಸಾಕಾನೆ ಶಿಬಿರದಲ್ಲಿ ಮೇ 19ರಿಂದಲೇ ಪ್ರವಾಸಿಗರು ಆನೆಯ ಬಳಿ ಹೋಗದಂತೆ, ಕನಿಷ್ಠ 100 ಅಡಿ ದೂರದಲ್ಲಿ ನಿಂತು ಆನೆ ಮೈತೊಳೆಯುವುದನ್ನು ವೀಕ್ಷಿಸುವಂತೆ ಮತ್ತು ಯಾವುದೇ ಕಾರಣಕ್ಕೂ ಆನೆಗಳ ಬಳಿ ಹೋಗಿ ಸೆಲ್ಫಿ, ಫೋಟೋ ತೆಗೆಸಿಕೊಳ್ಳಲು, ಮೈತೊಳೆಯಲು ಅವಕಾಶ ನೀಡಬಾರದು. ಬಾಳೆಹಣ್ಣು, ಬೆಲ್ಲ, ಕಬ್ಬು ಇತ್ಯಾದಿ ಯಾವುದೇ ಆಹಾರವನ್ನು ಪ್ರವಾಸಿಗರ ಕೈಯಿಂದ ಆನೆಗಳಿಗೆ ತಿನ್ನಸಬಾರದು ಎಂದು ಆದೇಶಿಸಿಲು ಸೂಚಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Shani Transit in Pisces 2026: ಕರ್ಮಕಾರಕ ಶನಿಯಿಂದ ಕಷ್ಟ ಮಾತ್ರವಲ್ಲ, ಸುಖವೂ ಇದೆ; ಈ ರಾಶಿಗೆ ಅದೃಷ್ಟ – Kannada News | Shani Transit in Pisces 2026: Astrological Impact on Your Zodiac Sign

ಕರ್ಮಕಾರಕ ಶನಿಯಿಂದ ಕಷ್ಟ ಮಾತ್ರವಲ್ಲImage Credit source: Pinterest

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿ ದೇವನು‌ ಕರ್ಮ ಫಲವನ್ನು ನೀಡುವವನು ಎಂದು ಪ್ರಸಿದ್ಧ. ಕುಂಡಲಿಯಲ್ಲಿ ಶನಿಯ ಸ್ಥಾನದ ಮೇಲೆ ಉದ್ಯೋಗ, ಉದ್ಯಮಗಳು ತೀರ್ಮಾನವಾಗುತ್ತವೆ. ಅಧಿಕಾರವನ್ನೂ ನೀಡುವನು, ನ್ಯಾಯ ಮಾರ್ಗದಲ್ಲಿ ಹೋಗುವಂತೆ ಮಾಡಿ ನ್ಯಾಯವನ್ನೂ ಕೊಡಿಸುತ್ತಾನೆ. ​​ಮೀನ ಶನಿಗೆ ಸಮ ಕ್ಷೇತ್ರ, ಚಂದ್ರ ದ್ರೇಕ್ಕಾಣ ಶನಿಗೆ ಶತ್ರು ಕ್ಷೇತ್ರ, ರವಿಯ ಹೋರೆ ಶನಿಗೆ ಪರಮ ಶತ್ರುಕ್ಷೇತ್ರ, ಗುರುವಿನ ನವಾಂಶ ಮತ್ತು ತ್ರಿಂಶಾಂಶ ಸಮ/ಮಿತ್ರ ಕ್ಷೇತ್ರ, ಶುಕ್ರನ ದ್ವಾದಶಾಂಶ ಶನಿಗೆ ಮಿತ್ರ ಕ್ಷೇತ್ರ. ವರ್ತಮಾನದಲ್ಲಿ ಶನಿಯ ಸ್ಥಿತಿ ಇದಾಗಿದೆ.

​ಇಂತಹ ಶನಿ ಸ್ಥಿತಿಯಿಂದ ಯಾವ ರಾಶಿಗೆ ಎಂತಹ ಫಲ?

​ಶನಿಯು ಮೀನ ರಾಶಿಯಲ್ಲಿದ್ದಾಗ ಪ್ರಮುಖವಾಗಿ ದ್ವಾದಶ ರಾಶಿಗಳಿಗೆ ಸಾಮಾನ್ಯ ಮತ್ತು ಈ ವರ್ಗ ಬಲದ ಆಧಾರದ ಮೇಲೆ ವಿಶೇಷ ಫಲಗಳಿವು.

​ಮೇಷ, ಕರ್ಕಾಟಕ, ಸಿಂಹ ರಾಶಿ:

ಶನಿಯು ರವಿಯ ಹೋರೆ ಮತ್ತು ಚಂದ್ರನ ದ್ರೇಕ್ಕಾಣದಲ್ಲಿರುವುದರಿಂದ ಈ ರಾಶಿಯವರಿಗೆ ಮಾನಸಿಕ ಆತಂಕ, ಅನಗತ್ಯ ಖರ್ಚುಗಳು ಮತ್ತು ಕೌಟುಂಬಿಕ ಭಿನ್ನಾಭಿಪ್ರಾಯಗಳು ಹೆಚ್ಚಾಗಬಹುದು. ಆರೋಗ್ಯದ ಕಡೆ ಗಮನ ಹರಿಸುವುದು ಮುಖ್ಯ. ಆದರೆ ಗುರುವಿನ ನವಾಂಶವಿರುವುದರಿಂದ ಅಂತಿಮವಾಗಿ ಧಾರ್ಮಿಕ ಚಿಂತನೆಗಳಿಂದ ನೆಮ್ಮದಿ ಸಿಗುತ್ತದೆ.

​ವೃಷಭ, ತುಲಾ ರಾಶಿ :

ಶನಿಯು ಶುಕ್ರನ ದ್ವಾದಶಾಂಶದಲ್ಲಿರುವುದರಿಂದ ಈ ರಾಶಿಯವರಿಗೆ ಈ ಅವಧಿಯು ಆರ್ಥಿಕವಾಗಿ ಮತ್ತು ವೃತ್ತಿಪರವಾಗಿ ಉತ್ತಮ ಫಲಗಳನ್ನು ನೀಡುತ್ತದೆ. ಭೂಮಿ, ವಾಹನ ಅಥವಾ ಆಸ್ತಿ ಖರೀದಿಗೆ ಯೋಗವಿದೆ. ಕಷ್ಟಪಟ್ಟ ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ.

​ಮಿಥುನ, ಕನ್ಯಾ, ಧನು, ಮೀನ ರಾಶಿ :

ಶನಿಯು ಗುರುವಿನ ರಾಶಿ, ನವಾಂಶ ಮತ್ತು ತ್ರಿಂಶಾಂಶಗಳಲ್ಲಿರುವುದರಿಂದ ಈ ರಾಶಿಯವರಿಗೆ ಜ್ಞಾನಾರ್ಜನೆ, ಅಧ್ಯಾತ್ಮ, ಶಿಕ್ಷಣ ಮತ್ತು ಸಮಾಜದಲ್ಲಿ ಗೌರವ ಹೆಚ್ಚಾಗುವ ಸಾಧ್ಯತೆ ಇದೆ. ತೀರ್ಥಯಾತ್ರೆ ಅಥವಾ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಮೀನ ರಾಶಿಯವರಿಗೆ ಜನ್ಮ ಶನಿಯ ಪ್ರಭಾವವಿದ್ದರೂ, ಗುರುವಿನ ಬಲದಿಂದಾಗಿ ಬುದ್ಧಿಶಕ್ತಿ ಮತ್ತು ತಾಳ್ಮೆ ಹೆಚ್ಚುತ್ತದೆ.

​ವೃಶ್ಚಿಕ, ಮಕರ, ಕುಂಭ ರಾಶಿ:

ಮಕರ ಮತ್ತು ಕುಂಭ ಶನಿಯ ಸ್ವಂತ ರಾಶಿಗಳಾಗಿದ್ದರೂ, ಮೀನದಲ್ಲಿನ ಶನಿ ಸ್ಥಿತಿಯು ಮಿಶ್ರಫಲವನ್ನು ನೀಡುತ್ತದೆ. ಕಠಿಣ ಪರಿಶ್ರಮಕ್ಕೆ ತಕ್ಕಂತೆ ಧನಲಾಭವಾಗುತ್ತದೆ. ಆದರೆ ಶತ್ರುಗಳ ಕಾಟ ಅಥವಾ ಗುಪ್ತ ಆತಂಕಗಳು ಎದುರಾಗಬಹುದು.

​ಶನಿಯ ದಶೆ ಶುಭ :

ಈ ನಿರ್ದಿಷ್ಟ ವರ್ಗ ಕುಂಡಲಿಯ ಬಲದ ಪ್ರಕಾರ, ಈ ಕೆಳಗಿನ ಪರಿಸ್ಥಿತಿಯಲ್ಲಿರುವವರಿಗೆ ಶನಿ ದಶೆಯು ಅತ್ಯಂತ ಶುಭ ಫಲಗಳನ್ನು ನೀಡುತ್ತದೆ:

​ವೃಷಭ ಮತ್ತು ತುಲಾ:

ಶನಿಗೆ ಶುಕ್ರನು ಪರಮ ಮಿತ್ರ. ಇಲ್ಲಿ ಶನಿಯು ಶುಕ್ರನ ದ್ವಾದಶಾಂಶದಲ್ಲಿರುವುದರಿಂದ, ವೃಷಭ ಮತ್ತು ತುಲಾ ಲಗ್ನ ಅಥವಾ ರಾಶಿಯವರಿಗೆ ಶನಿ ದಶೆಯು ಭಾಗ್ಯೋದಯವನ್ನು ತರುತ್ತದೆ. ಆಸ್ತಿ ವೃದ್ಧಿ, ಉದ್ಯೋಗದಲ್ಲಿ ಪ್ರಗತಿ ಮತ್ತು ರಾಜಯೋಗದಂತಹ ಫಲಗಳು ಸಿಗುತ್ತವೆ.

​ಧನು ಮತ್ತು ಮೀನ :

ಶನಿಯು ಗುರುವಿನ ನವಾಂಶ ಮತ್ತು ತ್ರಿಂಶಾಂಶದಲ್ಲಿರುವುದರಿಂದ, ಗುರು ಪ್ರಧಾನ ರಾಶಿಯವರಿಗೆ ಶನಿ ದಶೆಯು ಆಧ್ಯಾತ್ಮಿಕ ಉನ್ನತಿ, ನ್ಯಾಯಾಲಯದ ವ್ಯವಹಾರಗಳಲ್ಲಿ ಜಯ, ಮತ್ತು ಸಮಾಜದಲ್ಲಿ ಉನ್ನತ ಪದವಿಯನ್ನು ತಂದುಕೊಡುತ್ತದೆ.

ಬಲಿಷ್ಠ ಶನಿ :

ಯಾರ ಜಾತಕದಲ್ಲಿ ಶನಿಯು ತುಲಾ ರಾಶಿಯಲ್ಲಿ ಅಥವಾ ಮಕರ ಅಥವಾ ಕುಂಭದಲ್ಲಿದ್ದು, ಪ್ರಸ್ತುತ ಗೋಚಾರದಲ್ಲಿ ಈ ಮೀನ ರಾಶಿಯ ಸ್ಥಿತಿಯಿದ್ದಾಗ ಶನಿ ದಶೆ ಆರಂಭವಾದರೆ ಅವರಿಗೆ ಸಕಲ ಸುಖ-ಭೋಗಗಳು ದೊರೆಯುತ್ತವೆ.

ಶನಿಯ ದಶೆ ಅಶುಭ:

ಮೇಷ ಮತ್ತು ವೃಶ್ಚಿಕ ಮಂಗಳನ ರಾಶಿ.ಇವರಿಗೆ ಶನಿಯು ನೈಸರ್ಗಿಕ ಶತ್ರು. ಜಾತಕದಲ್ಲಿ ಮಂಗಳ-ಶನಿ ದೋಷವಿದ್ದವರಿಗೆ ಈ ದಶೆಯು ಕಠಿಣ ಪರಿಶ್ರಮ ಪಟ್ಟರೂ ನಿರೀಕ್ಷಿತ ಫಲ ನೀಡದೆ ನಿರಾಸೆ ಮೂಡಿಸಬಹುದು.

​ಸಿಂಹ ಮತ್ತು ಕರ್ಕಾಟಕ :

ಶನಿಯು ಇಲ್ಲಿ ರವಿಯ ಹೋರೆಯಲ್ಲಿಯೂ ಚಂದ್ರನ ದ್ರೇಕ್ಕಾಣದಲ್ಲಿಯೂ ಇದ್ದಾನೆ. ರವಿ ಮತ್ತು ಚಂದ್ರರು ಶನಿಗೆ ವೈರಿಗಳು. ಆದ್ದರಿಂದ ಸಿಂಹ ಮತ್ತು ಕರ್ಕಾಟಕ ರಾಶಿಯವರಿಗೆ ಶನಿ ದಶೆಯು ತಾಯಿಯ ಆರೋಗ್ಯದಲ್ಲಿ ಏರುಪೇರು, ಮಾನಸಿಕ ಅಶಾಂತಿ, ಅಪವಾದ, ಮತ್ತು ಉದ್ಯೋಗದಲ್ಲಿ ಸ್ಥಾನಪಲ್ಲಟದಂತಹ ಕಷ್ಟಗಳನ್ನು ನೀಡಬಹುದು.

​ಸಾಡೇ ಸಾಥ್ :

ಸದ್ಯ ಮೀನ ರಾಶಿಯಲ್ಲಿ ಶನಿ ಇರುವುದರಿಂದ ಕುಂಭ, ಮೀನ ಮತ್ತು ಮೇಷ ರಾಶಿಯವರಿಗೆ ಏಳೂವರೆ ವರ್ಷದ ಶನಿಯ ಪ್ರಭಾವವಿರುತ್ತದೆ. ಈ ರಾಶಿಯವರ ಜಾತಕದಲ್ಲಿ ಶನಿ ದಶೆಯೂ ಒಟ್ಟಿಗೆ ಬಂದರೆ ಕೌಟುಂಬಿಕ ಮತ್ತು ಆರ್ಥಿಕ ಒತ್ತಡಗಳು ಹೆಚ್ಚಾಗುತ್ತವೆ.

ಗ್ರಹವು ರವಿ ಮತ್ತು ಚಂದ್ರನ ವರ್ಗಗಳಲ್ಲಿ ಅಶುಭ ಸ್ಥಾನದಲ್ಲಿದ್ದರೂ, ಗುರು ಮತ್ತು ಶುಕ್ರನ ವರ್ಗಗಳಲ್ಲಿ ಶುಭ ಸ್ಥಾನವನ್ನು ಪಡೆದಿರುವುದರಿಂದ, ಶನಿಯು ಸಂಪೂರ್ಣವಾಗಿ ಕೆಟ್ಟ ಫಲವನ್ನು ನೀಡುವುದಿಲ್ಲ. ಆರಂಭದಲ್ಲಿ ಕಷ್ಟಗಳನ್ನು ನೀಡಿದರೂ, ಅಂತಿಮವಾಗಿ ಜ್ಞಾನ, ತಾಳ್ಮೆ ಮತ್ತು ಅನುಭವದ ಮೂಲಕ ಯಶಸ್ಸನ್ನು ಕರುಣಿಸುತ್ತಾನೆ.

– ಲೋಹಿತ ಹೆಬ್ಬಾರ್

Source link

ಭಾರೀ ಪ್ರಮಾಣದಲ್ಲಿ ಉದ್ಯೋಗಗಳಿಗೆ ಕತ್ತರಿ ಹಾಕಲು ಟಿಸಿಎಸ್​ನಿಂದ ಬ್ಯಾಂಡ್ ಡಿ ಪ್ಲಾನ್? 29,000ಕ್ಕೂ ಹೆಚ್ಚು ಮಂದಿಗೆ ಲೇ ಆಫ್ ಭೀತಿ? – Kannada News | TCS Job Cuts: Up to 29,000 Employees at Risk as ‘Band D’ Signals Mass Layoffs

ನವದೆಹಲಿ, ಮೇ 19: ಇತ್ತೀಚೆಗಷ್ಟೇ ಶೇ 2ರಷ್ಟು ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ್ದ ಟಾಟಾ ಕನ್ಸಲ್ಪೆನ್ಸಿ ಸರ್ವಿಸಸ್ ಸಂಸ್ಥೆ (TCS- Tata Consultancy Services) ಈಗ ಇನ್ನೂ ಉಗ್ರ ಹೆಜ್ಜೆ ಇಡುವ ಯೋಜನೆ ಹಾಕಿದೆ. ಮಿಂಟ್ ಪತ್ರಿಕೆಯಲ್ಲಿ ಬಂದಿರುವ ವರದಿ ಪ್ರಕಾರ, ಟಿಸಿಎಸ್​ನ ಶೇ. 5ರಷ್ಟು ಉದ್ಯೋಗಿಗಳನ್ನು ‘ಬ್ಯಾಂಡ್ ಡಿ’ಗೆ (Band D) ವರ್ಗೀಕರಿಸಲು ಹೊರಟಿದೆ. ಟಿಸಿಎಸ್​ನ ಮ್ಯಾನೇಜರ್​ಗಳಿಗೆ ಈ ನಿಟ್ಟಿನಲ್ಲಿ ಸೂಚನೆ ಕೊಡಲಾಗಿದೆ. ವರದಿ ಪ್ರಕಾರ ಈಗಾಗಲೇ ಮ್ಯಾನೇಜರ್​ಗಳು 17,500 ಉದ್ಯೋಗಿಗಳನ್ನು ಡಿ ಬ್ಯಾಂಡ್​ಗೆ ವರ್ಗೀಕರಿಸಿದ್ದಾರೆ. ಕಳಪೆ ಸಾಧನೆ ತೋರಿರುವವರನ್ನು ಈ ಬ್ಯಾಂಡ್​ಗೆ ಸೇರಿಸಲಾಗುತ್ತದೆ. ಈ ಬೆಳವಣಿಗೆಯು ಟಿಸಿಎಸ್​ನಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ಲೇ ಆಫ್ ಆಗುವ ಸಾಧ್ಯತೆಯನ್ನು ಎತ್ತಿತೋರಿಸುತ್ತಿರುವಂತಿದೆ.

ಈ ಸುದ್ದಿಯ ಮುಖ್ಯಾಂಶಗಳು

  • ಭಾರತದಲ್ಲಿ ಅತಿಹೆಚ್ಚು ಉದ್ಯೋಗಿಗಳ ಬಳಗ ಹೊಂದಿರುವ ಸಂಸ್ಥೆಗಳಲ್ಲಿ ಒಂದೆನಿಸಿದ ಟಿಸಿಎಸ್ ಈಗ ಲೇ ಆಫ್ ಮೂಡ್​ನಲ್ಲಿದೆ.
  • ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಸಂಸ್ಥೆ ಶೇ. 5ರಷ್ಟು ಉದ್ಯೋಗಿಗಳನ್ನು ಬ್ಯಾಂಡ್ ಡಿಗೆ ವರ್ಗೀಕರಿಸುವಂತೆ ಮ್ಯಾನೇಜರ್​ಗಳಿಗೆ ತಿಳಿಸಿದೆ ಎಂದು ಮಿಂಟ್ ವರದಿ ಹೇಳಿದೆ.
  • ಅತ್ಯಂತ ಕಳಪೆ ಸಾಧನೆ ಮಾಡಿರುವ ಉದ್ಯೋಗಿಗಳನ್ನು ಬ್ಯಾಂಡ್ ಡಿಗೆ ಹಾಕಲಾಗುತ್ತದೆ. ಇದು ಲೇ ಆಫ್​ನ ಮೊದಲ ಹೆಜ್ಜೆಯಾಗಿರಬಹುದು.

ಇದನ್ನೂ ಓದಿ: ಭಾರತದಲ್ಲಿ ಶೀತವಾದರೆ ಅಮೆರಿಕದಲ್ಲಿ ನೆಗಡಿ..! ಭಾರತದ ಎಲ್​ಪಿಜಿ ಬಿಕ್ಕಟ್ಟಿನಿಂದ ಕ್ಯಾಲಿಫೋರ್ನಿಯಾ ತತ್ತರ; ಹೇಗೆ?

ಎಚ್​ಆರ್ ಪತ್ರ ಬರೆದು ತಿಳಿಸಿದ್ದಾರಾ?

ಐಟಿ ಸರ್ವಿಸ್ ಕಂಪನಿಯಾದ ಟಿಸಿಎಸ್​ನ ಎಚ್ಆರ್ ಎಕ್ಸಿಕ್ಯೂಟಿವ್​ವೊಬ್ಬರು ಒಬ್ಬ ಬ್ಯುಸಿನೆಸ್ ಯುನಿಟ್ ಮುಖ್ಯಸ್ಥರಿಗೆ ಏಪ್ರಿಲ್​ನಲ್ಲಿ ಬ್ಯಾಂಡ್ ಡಿ ಕುರಿತು ಇಮೇಲ್ ಕಳುಹಿಸಿದ್ದಾರೆ ಎಂದು ಮಿಂಟ್ ವರದಿ ಹೇಳುತ್ತದೆ. ‘ಶೇ. 5 ಮಂದಿಯನ್ನು ಬ್ಯಾಂಡ್ ಡಿಗೆ ವರ್ಗೀಕರಿಸಲು ಒಪ್ಪಲಾಗಿದೆ. ಉದ್ಯೋಗಿಗಳ ಸಾಧನೆಯನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿ, ಡಿ ಬ್ಯಾಂಡ್​ಗೆ ವರ್ಗೀಕರಿಸಬಹುದಾದವರ ಪಟ್ಟಿಯನ್ನು ನೀಡಿ’ ಎಂದು ಈ ಪತ್ರದಲ್ಲಿ ತಿಳಿಸಲಾಗಿದೆ ಎಂದು ಹೇಳಲಾಗಿದೆ.

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಸಂಸ್ಥೆಯಲ್ಲಿ ಸದ್ಯ 5,84,519 ಉದ್ಯೋಗಿಗಳ ಬಳಗ ಇದೆ. ಒಂದು ಸಂದರ್ಭದಲ್ಲಿ ಇಲ್ಲಿ 6.5 ಲಕ್ಷಕ್ಕೂ ಅಧಿಕ ಜನರು ಕೆಲಸ ಮಾಡುತ್ತಿದ್ದರು. ಅತಿಹೆಚ್ಚು ಮಂದಿಗೆ ಕೆಲಸ ಕೊಟ್ಟಿರುವ ಭಾರತೀಯ ಸಂಸ್ಥೆಗಳಲ್ಲಿ ಟಿಸಿಎಸ್ ಕೂಡ ಒಂದು. ಭಾರತೀಯ ಐಟಿ ಕಂಪನಿಗಳಲ್ಲಿ ಅತಿಹೆಚ್ಚು ಉದ್ಯೋಗಿಗಳು ಇರುವುದು ಟಿಸಿಎಸ್​ನಲ್ಲಿ.

ಇದನ್ನೂ ಓದಿ: ಮೈಕ್ರೋಸಾಫ್ಟ್ ಎಐ ಮುಖ್ಯಸ್ಥರ ಎಚ್ಚರಿಕೆ; ಇನ್ನು, 12-18 ತಿಂಗಳಲ್ಲಿ ಇನ್ನಿಲ್ಲವಾಗುತ್ತವಂತೆ ವೈಟ್ ಕಾಲರ್ ಜಾಬ್​ಗಳು

ಇಲ್ಲಿ ಶೇ. 5ರಷ್ಟು ಉದ್ಯೋಗಿಗಳು ಎಂದರೆ ಸುಮಾರು 29,000 ಮಂದಿಯಾಗುತ್ತಾರೆ. ಅಂದರೆ, ಇಷ್ಟೂ ಮಂದಿಯನ್ನು ಅಂಡರ್ ಪರ್ಫಾರ್ಮರ್ಸ್ ಎಂದು ವರ್ಗೀಕರಿಸಿ ಅವರನ್ನು ಕೆಲಸದಿಂದ ತೆಗೆಯುವ ಪ್ಲಾನ್ ಹಾಕಿರಬಹುದಾ ಟಿಸಿಎಸ್ ಎಂದು ಮಿಂಟ್ ವರದಿಯಲ್ಲಿ ಅನುಮಾನ ಪಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link