All posts by nagaraj11081993

ನಾಯಿ ಕಡಿತ ನಿರ್ಲಕ್ಷಿಸಲು ಸಾಧ್ಯವಿಲ್ಲ, ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಖಡಕ್ ಆದೇಶ – Kannada News | Supreme Court of India Calls for Action on Rising Stray Dog Concerns

ನವದೆಹಲಿ, ಮೇ 19: ದೇಶಾದ್ಯಂತ ಸಾರ್ವಜನಿಕ ಸ್ಥಳಗಳು ಮತ್ತು ರಸ್ತೆಗಳಿಂದ ಬೀದಿ ನಾಯಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವ ಹಾಗೂ ಅವುಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಅತ್ಯಂತ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಾನು ನವೆಂಬರ್ 2025 ರಲ್ಲಿ ನೀಡಿದ್ದ ಐತಿಹಾಸಿಕ ಆದೇಶವನ್ನು ಮಾರ್ಪಡಿಸಲು ಅಥವಾ ಹಿಂಪಡೆಯಲು ಕೋರಿ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ನ್ಯಾಯಾಲಯವು ಸಂಪೂರ್ಣವಾಗಿ ವಜಾಗೊಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ಉಪಸ್ಥಿತಿಯು ಮತ್ತು ಅವುಗಳ ಜನಸಂಖ್ಯೆ ಹೆಚ್ಚುತ್ತಿರುವುದು ಅತ್ಯಂತ ಆತಂಕಕಾರಿ ಎಂದು ನ್ಯಾಯಾಲಯ ಬಣ್ಣಿಸಿದೆ.

ಪ್ರಾಣಿ ಹಕ್ಕುಗಳ ಕಾರ್ಯಕರ್ತರ ವಾದ ತಳ್ಳಿಹಾಕಿದ ಕೋರ್ಟ್
ಸಾರ್ವಜನಿಕ ಸ್ಥಳಗಳಿಂದ ಹಿಡಿದುಕೊಂಡು ಹೋಗುವ ಬೀದಿ ನಾಯಿಗಳಿಗೆ ಕ್ರಿಮಿನಾಶಕ (Sterilization) ಚಿಕಿತ್ಸೆ ನೀಡಿದ ನಂತರ, ಅವುಗಳನ್ನು ಮತ್ತೆ ಅದೇ ಹಳೆಯ ಸ್ಥಳಗಳಿಗೆ ಬಿಡಬಾರದು ಎಂದು ನ್ಯಾಯಾಲಯ ಈ ಹಿಂದೆ ಆದೇಶಿಸಿತ್ತು. ಆದರೆ, ನಾಯಿಗಳನ್ನು ಬೇರೆ ಸ್ಥಳಗಳಿಗೆ ಸ್ಥಳಾಂತರಿಸುವುದರಿಂದ ಅವುಗಳು ದಿಗ್ಭ್ರಮೆಗೊಳ್ಳಬಹುದು, ಗೊಂದಲಕ್ಕೊಳಗಾಗಬಹುದು ಮತ್ತು ಇದರಿಂದ ಜನರ ಮೇಲಿನ ದಾಳಿಗಳು ಮತ್ತಷ್ಟು ಹೆಚ್ಚಾಗಬಹುದು ಎಂದು ಪ್ರಾಣಿ ಹಕ್ಕುಗಳ ಕಾರ್ಯಕರ್ತರು ನ್ಯಾಯಾಲಯದಲ್ಲಿ ವಾದಿಸಿದ್ದರು.

ಆದರೆ, ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರಿದ್ದ ತ್ರಿಸದಸ್ಯ ಪೀಠವು ಈ ವಾದವನ್ನು ಒಪ್ಪಲು ನಿರಾಕರಿಸಿತು.

ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ

Source link

Video: ಆತುರದಿಂದ ಹಳಿ ದಾಟುವಾಗ ಬಂದೇ ಬಿಡ್ತು ರೈಲು, ಮಕ್ಕಳನ್ನು ಎದೆಗಪ್ಪಿ ಕುಳಿತ ಮಹಿಳೆ – Kannada News | Mother Shields Child on Railway Tracks as Train Passes Overhead

ಸಮಷ್ಟಿಪುರ, ಮೇ 19: ಬಿಹಾರದ ಸಮಷ್ಟಿಪುರದ ರೈಲ್ವೆ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಮ್ಮ ಮಕ್ಕಳೊಂದಿಗೆ ಆತುರದಿಂದ ಹಳಿ ದಾಟುವಾಗ ರೈಲು ಬಂದಿರುವ ವಿಡಿಯೋ ವೈರಲ್ ಆಗಿದೆ. ಶಹಪುರ್ ಪಟೋರಿ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ತಾಯಿಯೊಬ್ಬರು ತನ್ನ ಪ್ರಾಣವನ್ನು ಪಣಕ್ಕಿಟ್ಟು ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ. ಮಹಿಳೆಯ ಧೈರ್ಯ ಮತ್ತು ಸಹಾನುಭೂತಿಗೆ ಜನರಿಂದ ಪ್ರಶಂಸೆ ಗಳಿಸಿದೆ.

ವರದಿಗಳ ಪ್ರಕಾರ, ಮೂವರು ಮಹಿಳೆಯರು ಇಬ್ಬರು ಚಿಕ್ಕ ಮಕ್ಕಳೊಂದಿಗೆ ರೈಲ್ವೆ ಹಳಿಗಳನ್ನು ದಾಟುತ್ತಿದ್ದರು. ಅವರು ಆತುರದಿಂದ ಹಳಿಗಳನ್ನು ದಾಟಲು ಪ್ರಯತ್ನಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಅತಿ ವೇಗದ ರೈಲು ಬಂದಿತ್ತು. ರೈಲು ತುಂಬಾ ಹತ್ತಿರದಲ್ಲಿ ಬಂದದ್ದನ್ನು ನೋಡಿ, ಅವರೆಲ್ಲರೂ ಭಯಭೀತರಾಗಿದ್ದರು ಮತ್ತು ಏನು ಮಾಡಬೇಕೆಂದು ತಿಳಿಯಲಿಲ್ಲ. ಇಂತಹ ಕಷ್ಟದ ಸಮಯದಲ್ಲಿ, ಒಬ್ಬ ತಾಯಿಯ ನಿರ್ಧಾರ ಎಲ್ಲರನ್ನೂ ಅಚ್ಚರಿಗೊಳಿಸಿತು. ತಡಮಾಡದೆ, ಆ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ಹಳಿಯಿಂದ ತಳ್ಳಿ ಪ್ಲಾಟ್​ಫಾರಂ ಕಡೆ ಮಲಗಿಸಿದ್ದಾರೆ. ಯಾವುದೇ ಗಾಯಗಳಾಗದಂತೆ ತಡೆಯಲು ಮಕ್ಕಳಿಗೆ ಅಡ್ಡಲಾಗಿ ತಾಯಿ ಇದ್ದರು. ಮಹಿಳೆ ಗಾಯಗೊಂಡಿದ್ದರೂ ಕೂಡ ಮಕ್ಕಳಿಗೆ ಏನೂ ಆಗದಂತೆ ನೋಡಿಕೊಂಡಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Source link

Gold Rate: ಚಿನ್ನದ ಬೆಲೆ ಅಲ್ಪ ಏರಿಕೆ, ಬೆಳ್ಳಿ ಬೆಲೆ ಇಳಿಕೆ – Kannada News | Gold Price Today on 19th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 19: ಸತತವಾಗಿ ಇಳಿಯುತ್ತಿದ್ದ ಚಿನ್ನದ ಬೆಲೆ (Gold Rates) ಇಂದು ಮಂಗಳವಾರ ಗ್ರಾಮ್​ಗೆ 75 ರೂನಷ್ಟು ಹೆಚ್ಚಿದೆ. ಕಳೆದ ಹತ್ತು ದಿನದಲ್ಲಿ ಇದರ ಬೆಲೆ ಸುಮಾರು 430 ರೂಗಳಷ್ಟು ಹೆಚ್ಚಿದಂತಾಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇಂದು ಬಂಗಾರದ ದರ ಏರಿಕೆ ಆಗಿದೆ. ನಿನ್ನೆ ಏರಿದ್ದ ಬೆಳ್ಳಿ ಬೆಲೆ ಇವತ್ತು 5 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,57,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,43,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 19ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,704 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,395 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,778 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,704 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,395 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,395 ರೂ
  • ಚೆನ್ನೈ: 14,870 ರೂ
  • ಮುಂಬೈ: 14,395 ರೂ
  • ದೆಹಲಿ: 14,410 ರೂ
  • ಕೋಲ್ಕತಾ: 14,395 ರೂ
  • ಕೇರಳ: 14,395 ರೂ
  • ಅಹ್ಮದಾಬಾದ್: 14,400 ರೂ
  • ಜೈಪುರ್: 14,410 ರೂ
  • ಲಕ್ನೋ: 14,410 ರೂ
  • ಭುವನೇಶ್ವರ್: 14,395 ರೂ

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ! ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 559 ರಿಂಗಿಟ್ (13,557 ರುಪಾಯಿ)
  • ದುಬೈ: 510.25 ಡಿರಾಮ್ (13,389 ರುಪಾಯಿ)
  • ಅಮೆರಿಕ: 142 ಡಾಲರ್ (13,684 ರುಪಾಯಿ)
  • ಸಿಂಗಾಪುರ: 181.50 ಸಿಂಗಾಪುರ್ ಡಾಲರ್ (13,666 ರುಪಾಯಿ)
  • ಕತಾರ್: 504 ಕತಾರಿ ರಿಯಾಲ್ (13,326 ರೂ)
  • ಸೌದಿ ಅರೇಬಿಯಾ: 519 ಸೌದಿ ರಿಯಾಲ್ (13,329 ರುಪಾಯಿ)
  • ಓಮನ್: 53.85 ಒಮಾನಿ ರಿಯಾಲ್ (13,480 ರುಪಾಯಿ)
  • ಕುವೇತ್: 41.73 ಕುವೇತಿ ದಿನಾರ್ (13,054 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 285 ರೂ
  • ಚೆನ್ನೈ: 300 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 300 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 300 ರೂ
  • ಪುಣೆ: 285

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

TV9 Kannada News Live: ಬೆಳಗಾವಿ ವಂಚನೆ ಪ್ರಕರಣದಲ್ಲಿ ನೂರಾರು ಕೋಟಿ ಹಣ ಪತ್ತೆ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Belagavi 4500 Crore Scam, Fuel Price Hike and Lahore’s Historic Name Change

ಬೆಂಗಳೂರು, ಮೇ 19: ಬೆಳಗಾವಿಯ 4,500 ಕೋಟಿ ರೂ. ಮಹಾವಂಚನೆ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ, ನೂರಾರು ಕೋಟಿ ರೂ. ಪತ್ತೆ ಮಾಡಿದೆ. ಇತ್ತ ವಾರದಲ್ಲೇ ಎರಡನೇ ಬಾರಿ ಇಂಧನ (Petrol) ದರ ಏರಿಕೆಯಾಗಿದ್ದು, ಜನಸಾಮಾನ್ಯರು ಕಂಗಾಲಾಗಿದ್ದಾರೆ. ಇವೆಲ್ಲದರ ನಡುವೆ, ಪಾಕಿಸ್ತಾನದ ಲಾಹೋರ್‌ನಲ್ಲಿ ಐತಿಹಾಸಿಕ ಸ್ಥಳಗಳಿಗೆ ಹಳೆಯ ಹಿಂದೂ ಮತ್ತು ಸಿಖ್ ಹೆಸರುಗಳನ್ನು ಮರುಸ್ಥಾಪಿಸುವ ಮಹತ್ವದ ಬದಲಾವಣೆ ನಡೆದಿದೆ.

ಮುಖ್ಯಾಂಶಗಳು

ಬೆಳಗಾವಿ ವಂಚನೆ ಪ್ರಕರಣದಲ್ಲಿ ಆರೋಪಿಯ ಹದಿನೈದು ಬ್ಯಾಂಕ್ ಖಾತೆಗಳನ್ನು ಸಿಐಡಿ ಫ್ರೀಜ್ ಮಾಡಿದೆ.
ವಾರದಲ್ಲಿ ಎರಡನೇ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ.
ಪಾಕಿಸ್ತಾನದ ಲಾಹೋರ್ ರಸ್ತೆಗಳಿಗೆ ಹಳೆಯ ಹಿಂದೂ ಹಾಗೂ ಸಿಖ್ ಹೆಸರು ಮರುಸ್ಥಾಪಿಸಲಾಗುತ್ತಿದೆ.

ಆರೋಪಿ ಶಿವಾನಂದ ನೀಲಣ್ಣವರ್‌ಗೆ ಸೇರಿದ 15 ಬ್ಯಾಂಕ್ ಖಾತೆಗಳು ಫ್ರೀಜ್!

ಜಿಲ್ಲೆಯಲ್ಲಿ ನಡೆದಿರುವ ಬರೋಬ್ಬರಿ 4,500 ಕೋಟಿ ರೂ. ವಂಚನೆ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿ (CID) ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಪ್ರಕರಣದ ಮುಖ್ಯ ಆರೋಪಿ ಶಿವಾನಂದ ನೀಲಣ್ಣವರ್‌ಗೆ ಸೇರಿದ 15 ಬ್ಯಾಂಕ್ ಖಾತೆಗಳನ್ನು ಅಧಿಕಾರಿಗಳು ಪತ್ತೆಹಚ್ಚಿ ಫ್ರೀಜ್ ಮಾಡಿದ್ದಾರೆ. ಆಘಾತಕಾರಿ ವಿಷಯವೆಂದರೆ, ಈ ಪ್ರತಿಯೊಂದು ಖಾತೆಯಲ್ಲೂ ತಲಾ 100 ಕೋಟಿ, 80 ಕೋಟಿ, 50 ಕೋಟಿ ಹಾಗೂ 20 ಕೋಟಿ ರೂ.ವರೆಗೂ ಹಣ ಪತ್ತೆಯಾಗಿದೆ. ಸಾವಿರಾರು ಕೋಟಿ ರೂಪಾಯಿ ವರ್ಗಾವಣೆಯಾಗುತ್ತಿದ್ದರೂ ಇಡಿ (ED) ಅಥವಾ ಐಟಿ (IT) ಇಲಾಖೆಯ ಗಮನಕ್ಕೆ ತರದೆ, ಬ್ಯಾಂಕ್ ಖಾತೆಗಳನ್ನು ಯಾರಿಗೂ ಕಾಣದಂತೆ ಮುಚ್ಚಿಟ್ಟಿದ್ದ ಅಧಿಕಾರಿಗಳ ನಡೆ ಸಂಶಯ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, 5 ಪ್ರಮುಖ ಬ್ಯಾಂಕುಗಳಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ.

ಇದನ್ನೂ ಓದಿ 4,500 ಕೋಟಿ ರೂ. ವಂಚನೆ ಕೇಸ್​​: ಆರೋಪಿ ಶಿವಾನಂದ ನೀಲಣ್ಣವರ್​​ 10 ದಿನ ಸಿಐಡಿ ಕಸ್ಟಡಿಗೆ

ಒಂದೇ ವಾರದಲ್ಲಿ ಎರಡನೇ ಬಾರಿ ಇಂಧನ ದರ ಏರಿಕೆ!

ದೇಶಾದ್ಯಂತ ಗ್ರಾಹಕರಿಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿವೆ. ಕಳೆದ ಶುಕ್ರವಾರವಷ್ಟೇ (ಮೇ 15) ಇಂಧನ ದರ 3 ರೂ. ಏರಿಕೆಯಾಗಿದ್ದ ಬೆನ್ನಲ್ಲೇ, ಇಂದು ಮುಂಜಾನೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಪ್ರತಿ ಲೀಟರ್‌ಗೆ ಸರಾಸರಿ 94 ಪೈಸೆ ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ 4 ದಿನಗಳ ಹಿಂದೆ 106.17 ರೂ. ಇದ್ದ ಪೆಟ್ರೋಲ್ ಬೆಲೆ 107.16 ರೂ. ಗೆ ಹಾಗೂ 94.10 ರೂ. ಇದ್ದ ಡೀಸೆಲ್ ಬೆಲೆ 95.03 ರೂ. ಗೆ ತಲುಪಿದೆ. ಒಂದೇ ವಾರದಲ್ಲಿ ಎರಡು ಬಾರಿ ರೇಟ್ ಜಾಸ್ತಿ ಆಗಿರುವುದರಿಂದ ಸಾರ್ವಜನಿಕರ ಜೇಬಿಗೆ ಭಾರಿ ಕತ್ತರಿ ಬಿದ್ದಂತಾಗಿದೆ.

ಇದನ್ನೂ ಓದಿ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ! ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್

ಪಾಕಿಸ್ತಾನದಲ್ಲಿ ಲಾಹೋರ್ ರಸ್ತೆಗಳಿಗೆ ಹಳೇ ಹಿಂದೂ-ಸಿಖ್ ಹೆಸರು

ಭಾರತ ಮತ್ತು ಪಾಕಿಸ್ತಾನ ವಿಭಜನೆಯಾಗಿ 79 ವರ್ಷಗಳ ನಂತರ, ಪಾಕಿಸ್ತಾನ ಸರ್ಕಾರವು ಲಾಹೋರ್‌ನ ಇತಿಹಾಸವನ್ನು ಪುನಃ ಬರೆಯುವ ಮಹತ್ವದ ಕಾರ್ಯಕ್ಕೆ ಕೈಹಾಕಿದೆ. ದಶಕಗಳ ಹಿಂದೆ ಇಸ್ಲಾಮೀಕರಣದ ಭಾಗವಾಗಿ ಬದಲಾಗಿದ್ದ ರಸ್ತೆಗಳು ಮತ್ತು ಐತಿಹಾಸಿಕ ಸ್ಥಳಗಳಿಗೆ ಅವುಗಳ ಮೂಲ ಹಿಂದೂ, ಸಿಖ್ ಮತ್ತು ಬ್ರಿಟಿಷ್ ಯುಗದ ಹೆಸರುಗಳ ಸೈನ್ ಬೋರ್ಡ್‌ಗಳನ್ನು ಮರುಸ್ಥಾಪಿಸಲಾಗುತ್ತಿದೆ. ಕೇವಲ ಎರಡು ತಿಂಗಳಲ್ಲೇ 9 ಪ್ರಮುಖ ಸ್ಥಳಗಳು ತಮ್ಮ ಮೂಲ ಗುರುತನ್ನು ಪಡೆದಿವೆ. ಮಾಜಿ ಪ್ರಧಾನಿ ನವಾಜ್ ಷರೀಫ್ ಹಾಗೂ ಪಂಜಾಬ್ ಸಿಎಂ ಮರ್ಯಮ್ ನವಾಜ್ ನೇತೃತ್ವದಲ್ಲಿ ‘ಲಾಹೋರ್ ಅಥಾರಿಟಿ ಫಾರ್ ಹೆರಿಟೇಜ್ ರಿವೈವಲ್’ ಸಂಸ್ಥೆಯು 50 ಬಿಲಿಯನ್ ಪಾಕಿಸ್ತಾನಿ ರೂಪಾಯಿ ವೆಚ್ಚದಲ್ಲಿ ಈ ನಗರ ಸಂರಕ್ಷಣಾ ಯೋಜನೆಯನ್ನು ಕೈಗೆತ್ತಿಕೊಂಡಿದೆ.

ಇದನ್ನೂ ಓದಿ ಇತಿಹಾಸಕ್ಕೆ ಮರುಜೀವ ನೀಡಿದ ಪಾಕ್: ವಿಭಜನೆ ಪೂರ್ವದ ಹಿಂದೂ-ಸಿಖ್ ಹೆಸರುಗಳು ಲಾಹೋರ್ ಬೀದಿಗಳಿಗೆ ವಾಪಸ್, ಇಸ್ಲಾಂಪುರ ಈಗ ಕೃಷ್ಣ ನಗರ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 10:47 am, Tue, 19 May 26

Source link

Garuda Purana: ಗರುಡ ಪುರಾಣವನ್ನು ಮನೆಯಲ್ಲಿ ಇಡಬಾರದು ಎಂಬುದು ನಿಜವೇ? ಇದರ ಹಿಂದಿನ ಅಸಲಿ ರಹಸ್ಯ ಇಲ್ಲಿದೆ! – Kannada News | Garuda Purana at Home: Myth vs. Truth. Is it Inauspicious? Find Out the Real Benefits

ಸನಾತನ ಧರ್ಮದಲ್ಲಿ 18 ಮಹಾಪುರಾಣಗಳಿಗೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಅವುಗಳಲ್ಲಿ ಭಗವಾನ್ ವಿಷ್ಣು ಮತ್ತು ಆತನ ವಾಹನವಾದ ಗರುಡನ ನಡುವಿನ ಸಂವಾದವೇ ‘ಗರುಡ ಪುರಾಣ‘. ಆದರೆ, ಇಂದಿಗೂ ಅನೇಕ ಮನೆಗಳಲ್ಲಿ ಗರುಡ ಪುರಾಣವನ್ನು ಇಡಲು ಅಥವಾ ಓದಲು ಜನರು ಹಿಂಜರಿಯುತ್ತಾರೆ. ಮನೆಯಲ್ಲಿ ಗರುಡ ಪುರಾಣವನ್ನು ಇಟ್ಟರೆ ಅಪಶಕುನವಾಗುತ್ತದೆ, ಸಾವು ಸಂಭವಿಸುತ್ತದೆ ಅಥವಾ ನಕಾರಾತ್ಮಕ ಶಕ್ತಿಗಳು ಆವರಿಸುತ್ತವೆ ಎಂಬ ಭೀತಿ ಅನೇಕರಲ್ಲಿದೆ.

ಆದರೆ ಧರ್ಮಶಾಸ್ತ್ರಗಳ ಪ್ರಕಾರ ಇದು ಸಂಪೂರ್ಣವಾಗಿ ಸುಳ್ಳು ಮತ್ತು ತಪ್ಪು ಕಲ್ಪನೆಯಾಗಿದೆ! ಹೌದು, ಗರುಡ ಪುರಾಣವನ್ನು ಮನೆಯಲ್ಲಿ ಖಂಡಿತವಾಗಿಯೂ ಇಡಬಹುದು. ಹಾಗಾದರೆ ಈ ತಪ್ಪು ಕಲ್ಪನೆ ಜನರಲ್ಲಿ ಮೂಡಿದ್ದು ಹೇಗೆ? ಇದನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಈ ತಪ್ಪು ಕಲ್ಪನೆ ಬರಲು ಕಾರಣವೇನು?

ಗರುಡ ಪುರಾಣದಲ್ಲಿ ಸಾವಿನ ನಂತರ ಆತ್ಮದ ಪ್ರಯಾಣ, ಪುನರ್ಜನ್ಮ, ಸ್ವರ್ಗ-ನರಕಗಳ ಕಲ್ಪನೆ ಮತ್ತು ಪಾಪ-ಪುಣ್ಯಗಳ ಬಗ್ಗೆ ಅತ್ಯಂತ ವಿವರವಾಗಿ ವಿವರಿಸಲಾಗಿದೆ.

ಅಂತಿಮ ಸಂಸ್ಕಾರದ ನಂಟು:

ಯಾರಾದರೂ ತೀರಿಕೊಂಡಾಗ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂಬ ಉದ್ದೇಶದಿಂದ 11 ರಿಂದ 13 ದಿನಗಳ ಶೋಕಾಚರಣೆಯ ಅವಧಿಯಲ್ಲಿ ಗರುಡ ಪುರಾಣದ ಒಂದು ನಿರ್ದಿಷ್ಟ ಭಾಗವನ್ನು (ಪ್ರೇತ ಕಲ್ಪ) ಪಠಿಸುವ ಸಂಪ್ರದಾಯವಿದೆ. ಇದೇ ಕಾರಣಕ್ಕಾಗಿ, ಜನರು ಈ ಪವಿತ್ರ ಗ್ರಂಥವನ್ನು ಕೇವಲ ಸಾವು, ದುಃಖ ಮತ್ತು ಸ್ಮಶಾನ ವೈರಾಗ್ಯಕ್ಕೆ ಮಾತ್ರ ಸೀಮಿತಗೊಳಿಸಿಬಿಟ್ಟರು. ಇದರ ಪುಸ್ತಕವನ್ನು ಮನೆಯಲ್ಲಿ ಇಟ್ಟರೆ ಸಾವು ಹತ್ತಿರವಾಗುತ್ತದೆ ಎಂದು ತಪ್ಪಾಗಿ ಭಾವಿಸಿದರು.

ಇದನ್ನೂ ಓದಿ: ನಿಮ್ಮ ಜನ್ಮ ದಿನಾಂಕದಲ್ಲೇ ಅಡಗಿದೆ ಮದುವೆಯ ರಹಸ್ಯ; ನಿಮಗಾಗುವುದು ಪ್ರೇಮ ವಿವಾಹವೋ ಅಥವಾ ಅರೇಂಜ್ ಮ್ಯಾರೇಜ್?

ಅಸಲಿ ಸತ್ಯ:

ಹಿಂದೂ ಧರ್ಮದಲ್ಲಿ ಯಾವುದೇ ಪವಿತ್ರ ಗ್ರಂಥವನ್ನು (ವೇದ, ಉಪನಿಷತ್ ಅಥವಾ ಪುರಾಣ) ಅಶುಭ ಅಥವಾ ಅಮಂಗಳ ಎಂದು ಪರಿಗಣಿಸಲಾಗಿಲ್ಲ. ಗರುಡ ಪುರಾಣವು ಕೇವಲ ಸಾವಿನ ಬಗ್ಗೆ ಮಾತ್ರ ಮಾತನಾಡುವುದಿಲ್ಲ, ಬದಲಿಗೆ ಅದು ನಾವು ಬದುಕಿರುವಾಗ ಹೇಗೆ ಧರ್ಮ ಮಾರ್ಗದಲ್ಲಿ ನಡೆಯಬೇಕು ಎಂಬುದನ್ನು ಕಲಿಸುವ ‘ಕರ್ಮ ಸಿದ್ಧಾಂತ’ದ ದಿಕ್ಸೂಚಿಯಾಗಿದೆ. ಈ ಗ್ರಂಥದಲ್ಲಿ ಸದಾಚಾರ, ನೀತಿ, ದಾನ ಧರ್ಮದ ಮಹತ್ವ, ಆರೋಗ್ಯ ಸೂತ್ರಗಳು ಮತ್ತು ಭಗವಾನ್ ವಿಷ್ಣುವಿನ ಭಕ್ತಿಯ ಬಗ್ಗೆ ಸುಂದರವಾಗಿ ವಿವರಿಸಲಾಗಿದೆ.

  • ಸಾವಿನ ಭಯ ನಿವಾರಣೆ: ಆತ್ಮದ ಅಮರತ್ವದ ಬಗ್ಗೆ ತಿಳಿಸಿಕೊಡುವ ಮೂಲಕ ಇದು ಮನುಷ್ಯನಲ್ಲಿರುವ ಸಾವಿನ ಭಯವನ್ನು ಹೋಗಲಾಡಿಸುತ್ತದೆ.
  • ಕರ್ಮ ಪ್ರಜ್ಞೆ: ನಮ್ಮ ಇಂದಿನ ಕರ್ಮಗಳೇ ನಮ್ಮ ನಾಳಿನ ಭವಿಷ್ಯವನ್ನು ನಿರ್ಧರಿಸುತ್ತವೆ ಎಂಬ ಪ್ರಜ್ಞೆಯನ್ನು ಮೂಡಿಸಿ, ತಪ್ಪು ಹಾದಿಗೆ ಹೋಗದಂತೆ ನಮ್ಮನ್ನು ತಡೆಯುತ್ತದೆ.

ಮನೆಯಲ್ಲಿ ಗರುಡ ಪುರಾಣ ಇಡುವಾಗ ಪಾಲಿಸಬೇಕಾದ ನಿಯಮಗಳು:

ಭಗವದ್ಗೀತೆ ಅಥವಾ ರಾಮಾಯಣವನ್ನು ನಾವು ಎಷ್ಟು ಭಕ್ತಿ-ಗೌರವಗಳಿಂದ ಮನೆಯಲ್ಲಿ ಇಡುತ್ತೇವೆಯೋ, ಗರುಡ ಪುರಾಣವನ್ನೂ ಅಷ್ಟೇ ಪವಿತ್ರವಾಗಿ ಇಡಬೇಕು:

  • ಶುದ್ಧವಾದ ಸ್ಥಳದಲ್ಲಿಡಿ: ಇದನ್ನು ನಿಮ್ಮ ದೇವರ ಕೋಣೆಯಲ್ಲಿ (ಪೂಜಾ ಗೃಹ) ಅಥವಾ ಸ್ವಚ್ಛವಾದ ಪುಸ್ತಕದ ಕಪಾಟಿನಲ್ಲಿ ಗೌರವಪೂರ್ವಕವಾಗಿ ಇಡಿ. ಬೆಡ್‌ರೂಮ್‌ಗಳಲ್ಲಾಗಲಿ ಅಥವಾ ಅಶುದ್ಧ ಜಾಗಗಳಲ್ಲಾಗಲಿ ಇಡಬೇಡಿ.
  • ಸ್ವಚ್ಛತೆ ಮುಖ್ಯ: ಪುಸ್ತಕವನ್ನು ಮುಟ್ಟುವ ಮುನ್ನ ಕೈ-ಕಾಲುಗಳನ್ನು ತೊಳೆದು ಶುದ್ಧವಾಗಿರಿ.
  • ಓದುವ ಸರಿಯಾದ ಸಮಯ: ಗರುಡ ಪುರಾಣದ ಜ್ಞಾನವನ್ನು ಪಡೆಯಲು ಬಯಸುವವರು, ಅದನ್ನು ತಡರಾತ್ರಿಯಲ್ಲಿ ಓದುವ ಬದಲು ಹಗಲಿನ ವೇಳೆಯಲ್ಲಿ ಪ್ರಶಾಂತ ಮನಸ್ಸಿನಿಂದ ಓದುವುದು ಸೂಕ್ತ ಎಂದು ವಿದ್ವಾಂಸರು ಹೇಳುತ್ತಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಾಳೆ ಸಾರಿಗೆ ಬಸ್ ಮಾತ್ರವಲ್ಲ, ಔಷಧಗಳು ಸಿಗೋದೂ ಡೌಟ್! ಕರ್ನಾಟಕದಲ್ಲೂ ಮೆಡಿಕಲ್ ಶಾಪ್ ಬಂದ್ – Kannada News | Nationwide Medical Shop Strike on May 20: Pharmacies in Karnataka to Shut Down Over Online Medicine Sales

ಬೆಂಗಳೂರು, ಮೇ 19: ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯಾದ್ಯಂತ ನಾಳೆ (ಮೇ 20) ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿರುವ ಬೆನ್ನಲ್ಲೇ, ಜನಸಾಮಾನ್ಯರಿಗೆ ಮತ್ತೊಂದು ದೊಡ್ಡ ಆಘಾತ ಕಾದಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಖಾಸಗಿ ಔಷಧ ಮಳಿಗೆಗಳ (Medical Shop Bandh) ಬಂದ್‌ಗೆ ಕರೆ ನೀಡಲಾಗಿದ್ದು, ಕರ್ನಾಟಕದಲ್ಲೂ ಇದಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದೆ. ಇದರಿಂದಾಗಿ ನಾಳೆ ಬಸ್ ಸೌಲಭ್ಯ ಮಾತ್ರವಲ್ಲದೆ, ತುರ್ತು ಸಂದರ್ಭಗಳಲ್ಲಿ ಔಷಧಗಳು ಸಿಗುವುದೂ ಸಹ ದುಸ್ತರವಾಗುವ ಲಕ್ಷಣಗಳು ಕಾಣುತ್ತಿವೆ.

ಮುಖ್ಯಾಂಶಗಳು

  • ಇ-ಫಾರ್ಮಸಿ, ಭಾರಿ ರಿಯಾಯಿತಿ ವಿರೋಧಿಸಿ ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್‌.
  • ರಾಜ್ಯದಲ್ಲಿ ಕೆಸಿಡಿಎ ಸಂಘಟನೆ ಬಂದ್‌ಗೆ ನೇರ ಬೆಂಬಲ ಘೋಷಿಸಿದೆ.
  • ಕರ್ನಾಟಕ ಫಾರ್ಮಾ ರಿಟೇಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಷನ್ (KPRDO) ಸೇರಿದಂತೆ ಹಲವು ಒಕ್ಕೂಟಗಳು ಹೋರಾಟಕ್ಕೆ ನೈತಿಕ ಬೆಂಬಲ ಸೂಚಿಸಿವೆ.

ಆನ್‌ಲೈನ್ ಔಷಧ ಮಾರಾಟಕ್ಕೆ ತೀವ್ರ ವಿರೋಧ

ಖಾಸಗಿ ಮೆಡಿಕಲ್ ಶಾಪ್ ಮಾಲೀಕರು ಹಾಗೂ ವಿತರಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರಮುಖವಾಗಿ, ಯಾವುದೇ ಸೂಕ್ತ ಲಿಖಿತ ಪ್ರಿಸ್ಕ್ರಿಪ್ಷನ್ ಇಲ್ಲದೆ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ರಾಜಾರೋಷವಾಗಿ ನಿಯಮಬಾಹಿರವಾಗಿ ಔಷಧಗಳನ್ನು ಮಾರಾಟ ಮಾಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಹಾಗೂ ಸಣ್ಣ ವ್ಯಾಪಾರಿಗಳ ಬದುಕು ಬೀದಿಗೆ ಬರುತ್ತಿದೆ ಎಂದು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಬುಧವಾರದಿಂದ ಸಿಗಲ್ಲ ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್! ಸಾರಿಗೆ ಮುಷ್ಕರ ಬಹುತೇಕ ಫಿಕ್ಸ್

ದೊಡ್ಡ ಕಾರ್ಪೊರೇಟ್ ಕಂಪನಿಗಳು ಭಾರಿ ರಿಯಾಯಿತಿ (ಡೀಪ್ ಡಿಸ್ಕೌಂಟ್) ನೀಡಿ ಗ್ರಾಹಕರನ್ನು ಸೆಳೆಯುತ್ತಿರುವುದರಿಂದ ಸಾಂಪ್ರದಾಯಿಕ ಮೆಡಿಕಲ್ ಶಾಪ್‌ಗಳು ನಷ್ಟ ಅನುಭವಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಇಡೀ ದಿನ ಖಾಸಗಿ ಮೆಡಿಕಲ್ ಶಾಪ್‌ಗಳನ್ನು ಮುಚ್ಚಿ ಪ್ರತಿಭಟಿಸಲು ನಿರ್ಧರಿಸಲಾಗಿದೆ. ಆಸ್ಪತ್ರೆ ಆವರಣದೊಳಗಿನ ಫಾರ್ಮಸಿಗಳು ಎಂದಿನಂತೆ ಕಾರ್ಯನಿರ್ವಹಿಸಲಿದ್ದರೂ, ಜನಸಾಮಾನ್ಯರು ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಇಂದೇ ಅಗತ್ಯ ಔಷಧಗಳನ್ನು ಖರೀದಿಸಿಟ್ಟುಕೊಳ್ಳುವುದು ಉತ್ತಮ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಟ ಸಲ್ಮಾನ್ ಖಾನ್ ಮನೆಯಲ್ಲಿ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದ ಸಿಬ್ಬಂದಿ – Kannada News | Snake rescued at Salman Khan Mumbai home Galaxy Apartment Photo Goes Viral

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ಮುಂಬೈನ ಪ್ರಸಿದ್ಧ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ (Galaxy Apartment) ಆವರಣದಲ್ಲಿ ಸೋಮವಾರ (ಮೇ 18) ಹಾವೊಂದು ಪತ್ತೆಯಾಗಿದ್ದು, ಅದನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಅಪಾರ್ಟ್‌ಮೆಂಟ್‌ನ ನೆಲ ಅಂತಸ್ತಿನಲ್ಲಿ ಹಾವು (Snake) ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಮತ್ತು ಭದ್ರತಾ ಸಿಬ್ಬಂದಿಯು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಹಾವು ಹಿಡಿಯುವ ತಜ್ಞರು ಅತ್ಯಂತ ಜಾಣ್ಮೆಯಿಂದ ಹಾವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೊದಲು ಸಲ್ಮಾನ್ ಖಾನ್ (Salman Khan) ಅವರಿಗೆ ಹಾವು ಕಚ್ಚಿದ್ದ ಘಟನೆಯನ್ನು ಫ್ಯಾನ್ಸ್ ಈಗ ಮತ್ತೆ ನೆನಪಿಸಿಕೊಳ್ಳುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ದೃಶ್ಯಗಳಲ್ಲಿ, ರಕ್ಷಕನು ಹಾವಿನ ಬಾಲವನ್ನು ಹಿಡಿದು, ಅದನ್ನು ಹತೋಟಿಗೆ ತಂದು, ತದನಂತರ ಅತ್ಯಂತ ಜಾಗರೂಕತೆಯಿಂದ ತನ್ನ ಕೈಗೆ ಸುತ್ತಿಕೊಂಡು ಬ್ಯಾಗ್‌ನಲ್ಲಿ ತುಂಬಿಸುತ್ತಿರುವುದು ಕಂಡುಬಂದಿದೆ. ಈ ಕಾರ್ಯಾಚರಣೆಯ ಸಮಯದಲ್ಲಿ ಸ್ಥಳೀಯ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಸ್ಥಳದಲ್ಲಿದ್ದು ನೆರವಾಗಿದ್ದಾರೆ. ರಕ್ಷಕನು ಹಾವನ್ನು ಹ್ಯಾಂಡಲ್ ಮಾಡಿದ ವಿಧಾನವನ್ನು ನೋಡಿದರೆ, ಇದು ವಿಷಕಾರಿಯಲ್ಲದ ಹಾವು ಎಂದು ಅಂದಾಜಿಸಲಾಗಿದೆ.

ಮುಂಬೈನ ಅತ್ಯಂತ ಪ್ರಸಿದ್ಧ ಸೆಲೆಬ್ರಿಟಿ ನಿವಾಸಗಳಲ್ಲಿ ಒಂದಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿರುವುದರಿಂದ, ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಹಾವು ಹಿಡಿಯುವ ಕಾರ್ಯಾಚರಣೆಯನ್ನು ನೋಡಲು ಅಪಾರ್ಟ್‌ಮೆಂಟ್ ಹೊರಗಡೆ ಭಾರಿ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಅಭಿಮಾನಿಗಳು ಜಮಾಯಿಸಿದ್ದರು.

ವೈರಲ್ ವಿಡಿಯೋ:

ಈ ಹಿಂದೆ 2021ರಲ್ಲಿ, ಸಲ್ಮಾನ್ ಖಾನ್ ಅವರು ತಮ್ಮ ಪನ್ವೇಲ್ ಫಾರ್ಮ್‌ಹೌಸ್‌ನಲ್ಲಿದ್ದಾಗ ಹಾವಿನ ಕಡಿತಕ್ಕೆ ಒಳಗಾಗಿದ್ದರು. ಆ ಸಮಯದಲ್ಲಿ ಅವರಿಗೆ ತಕ್ಷಣವೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆ ಘಟನೆಯ ಬಗ್ಗೆ ಸಲ್ಮಾನ್ ಖಾನ್ ಈ ಹಿಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ‘ನನ್ನ ಫಾರ್ಮ್‌ಹೌಸ್‌ಗೆ ಹಾವೊಂದು ನುಗ್ಗಿತ್ತು, ನಾನು ಅದನ್ನು ಕೋಲಿನ ಸಹಾಯದಿಂದ ಹೊರಗೆ ಹಾಕಲು ಯತ್ನಿಸಿದೆ. ಆದರೆ ಅದು ನಿಧಾನವಾಗಿ ನನ್ನ ಕೈಗೆ ಹತ್ತಿತು. ನಾನು ಅದನ್ನು ಬಿಡುಗಡೆ ಮಾಡಲು ಹಿಡಿದಾಗ, ಅದು ನನಗೆ ಮೂರು ಬಾರಿ ಕಚ್ಚಿತು. ಅದು ಒಂದು ರೀತಿಯ ವಿಷಪೂರಿತ ಹಾವಾಗಿತ್ತು. ನಾನು 6 ಗಂಟೆಗಳ ಕಾಲ ಆಸ್ಪತ್ರೆಯಲ್ಲಿದ್ದೆ. ಸದ್ಯ ನಾನು ಆರಾಮವಾಗಿದ್ದೇನೆ’ ಎಂದು ತಿಳಿಸಿದ್ದರು.

ಇದನ್ನೂ ಓದಿ: ‘ರಾಜ ಶಿವಾಜಿ’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅಬ್ಬರ: ಜೀವಾ ಮಹಾಲಾ ಪಾತ್ರ ಕಂಡು ಫ್ಯಾನ್ಸ್ ಫಿದಾ

2023ರ ಸೂಪರ್ ಹಿಟ್ ಸಿನಿಮಾ ‘ಟೈಗರ್ 3’ ನಂತರ, ಸಲ್ಮಾನ್ ಖಾನ್ 2025ರಲ್ಲಿ ‘ಸಿಕಂದರ್’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಎ.ಆರ್. ಮುರುಗದಾಸ್ ನಿರ್ದೇಶನದ ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸನ್ನು ಸಾಧಿಸಲಿಲ್ಲ. ಈಗ ಸಲ್ಮಾನ್ ಖಾನ್ ಅವರು ನಿರ್ದೇಶಕ ಅಪೂರ್ವ ಲಖಿಯಾ ಅವರೊಂದಿಗೆ ‘ಮಾತೃಭೂಮಿ’ ಚಿತ್ರದ ಬಿಡುಗಡೆಯನ್ನು ಎದುರುನೋಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 10:29 am, Tue, 19 May 26

Source link

ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರಭಾವಿಗಳ ಜೊತೆ ಹೋರಾಟ ಮಾಡಬೇಕಾದೀತು – Kannada News | Horoscope May 19 Tuesday 2026; Dina Rashi Bhavishya Today, Checkout the details here

ಮೇಷ ರಾಶಿ:

ನೀವು ಅಪಾರ ಆತ್ಮವಿಶ್ವಾಸವನ್ನು ಪಡೆದಿದ್ದರೂ ಸರಿಯಾದ ಸಹಕಾರ ಸಿಗದೇ ಕಾರ್ಯವು ಅಪೂರ್ಣವಾಗುವುದು. ಮನೆಯಲ್ಲಿ ನಿಮ್ಮ ಶಕ್ತಿಯು ಸಮಸ್ಯೆಗಳನ್ನು ನಿವಾರಿಸುತ್ತದೆ. ಯಾರ ಮೇಲೋ ಅನುಮಾನಪಡುವುದಕ್ಕಿಂತ ಸರಿಯಾದ ಮಾಹಿತಿಯನ್ನು ಪಡೆದು ಮುಂದಡಿ ಇಡಿ. ಬಂಧುಗಳ ಆರೋಗ್ಯದ ಆರೈಕೆಯನ್ನು ನೀವು ಮಾಡಬೇಕಾದೀತು. ನಿಕಟವರ್ತಿಗಳ ಮಾತನ್ನು ನಗಣ್ಯ ಮಾಡುವಿರಿ. ಅವಾಚ್ಯ ಮಾತುಗಳಿಂದ ನಿಮ್ಮನ್ನು ಯಾರಾದರೂ ನಿಂದಿಸಬಹುದು.‌

ವೃಷಭ ರಾಶಿ:

ಯಾರಿಗೂ ಗೊತ್ತಾಗದಂತೆ ದಾನ ಮಾಡುವಿರಿ. ಇದು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಬಹುದು. ಹಣಕಾಸಿನಲ್ಲಿ ಹೆಚ್ಚು ಎಚ್ಚರಿಕೆ ವಹಿಸಿ. ಸಂಬಂಧಿಕರಿಗೆ ಹಣ ಕೊಡುವುದನ್ನು ತಪ್ಪಿಸಬೇಕು. ವೈವಾಹಿಕ ಜೀವನದಲ್ಲಿ ಇಂದು ವಿಭಿನ್ನ ಅನುಭವ ನಿಮಗೆ ಎದುರಾಗಬಹುದು. ನಿಮ್ಮ ಜೊತೆಗಿರುವವರೇ ನಿಮ್ಮ ವಸ್ತುವನ್ನು ಅಪಹರಿಸುವರು. ಪ್ರೇಮವು ನಿಮಗೆ ಹಾಯೆನಿಸುವುದು. ವೃತ್ತಿಯ ಏಕತಾನತೆಯಿಂದ ಹೊರಬರಲು ಬಯಸುವಿರಿ. ಆಪ್ತರು ಕಾರಣಾಂತರಗಳಿಂದ ದೂರಾಗಬಹುದು.

ಮಿಥುನ ರಾಶಿ :

ಸರಳತೆಯನ್ನು ರೂಢಿಸಿಕೊಳ್ಳುವ ಅಗತ್ಯವಿದೆ. ವ್ಯಕ್ತಿತ್ವದಿಂದ ನೀವು ಸಮಾಜದಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಳ್ಳುತ್ತೀರಿ. ಕೌಟುಂಬಿಕ ಕಲಹಗಳನ್ನು ಬಗೆಹರಿಸಿಕೊಳ್ಳಲು ಇದು ಸೂಕ್ತ ಸಮಯ. ಹಿರಿಯರ ಆಶೀರ್ವಾದ ಪಡೆದುಕೊಂಡು ಕಾರ್ಯಾರಂಭಿಸುವುದು ಶುಭ. ಮಕ್ಕಳೊಂದಿಗೆ ಸಮಯ ಕಳೆಯುವುದು ಜೀವನದ ನಿಜವಾದ ಮೌಲ್ಯವನ್ನು ನೆನಪಿಸುತ್ತದೆ. ದುರಭ್ಯಾಸವನ್ನು ರೂಢಿಸಿಕೊಂಡಿದ್ದು ಅರಿವಿಗೆ ಬರುವುದು. ನಿಮಗೆ ಪರೀಕ್ಷೆಯ ದಿನವಾಗಿರುವುದು.

ಕರ್ಕಾಟಕ ರಾಶಿ :

ಯಾರೊಂದಿಗಾದರೂ ವಿವಾದಕ್ಕೆ ಸಿಲುಕುವುದು ನಿಮಗೆ ನೋವುಂಟು ಮಾಡುತ್ತದೆ. ನಿಮ್ಮ ಸಂಕಷ್ಟಕ್ಕೆ ಯಾರನ್ನೂ ದೂಷಿಸಲು ಇಷ್ಟವಾಗದು. ನೀವು ನಿಮ್ಮ ಕೆಲಸವನ್ನು ಮುಂದುವರಿಸಿದರೆ ಒಳ್ಳೆಯದು. ನಿಮ್ಮ ಹಳೆಯ ಬಾಕಿಗಳಿಂದ ಬರಬಹುದಾದ ದಿನ. ಸ್ನೇಹಿತರ ಜೊತೆ ಕಾಲ ಕಳೆಯುವುದು ಸಂತೋಷ ತರುತ್ತದೆ. ಕುಟುಂಬವರ ಜೊತೆ ಸಮಯವನ್ನು ಕಳೆಯುವುದು ಆಗದು. ಆಪ್ತರ ಬಗ್ಗೆ ನಿಮ್ಮ ಭಾವನೆ ನಕಾರಾತ್ಮಕವಾಗಿ ಇರುವುದು. ಕಾನೂನಿನ ಚೌಕಟ್ಟಿನಲ್ಲಿ ನಿಮ್ಮ ನಡೆವಳಿಕೆ ಇರಲಿ. ಕಾರಣಾಂತರಗಳಿಂದ ನಿಮ್ಮ ಜೀವನದ ಮಾರ್ಗವು ಬದಲಾಗುವುದು.

ಸಿಂಹ ರಾಶಿ :

ನಿಮ್ಮ ಮನಸ್ಸಿಗೆ ಹಿಡಿಸದ ಸಂಗತಿಗಳ ವಿರುದ್ಧ ಧೈರ್ಯವಾಗಿ ನಿಲ್ಲುವ ಸಾಮರ್ಥ್ಯ ಇರುವುದು. ನಿಮ್ಮ ಪ್ರಾಮಾಣಿಕ ಪ್ರಯತ್ನಗಳು ಫಲ ನೀಡುತ್ತವೆ. ಸ್ನೇಹಿತರಿಂದ ಲಾಭದಾಯಕ ಸಲಹೆ ಸಿಗಬಹುದು. ಭಾವನಾತ್ಮಕ ಸಂಗತಿಗಳಲ್ಲಿ ಎಚ್ಚರದಿಂದಿರಿ. ಪ್ರಭಾವೀ ಜನರು ನಿಮ್ಮನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಕಾರ್ಯವನ್ನು ಸಾಧಿಸಿಕೊಳ್ಳುವರು. ಮಕ್ಕಳ ಏಳಿಗೆಯಲ್ಲಿ ನಿಮಗೆ ಸಂತೋಷ ಇರುವುದು. ನಿಂದನೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದು ಬೇಡ.

ಕನ್ಯಾ ರಾಶಿ :

ಇಂದಿನ‌ ಬಿಡುವಿನ ಸಮಯದಲ್ಲಿ ನೀವು ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಿರಿ. ಇಂದು ಸಮಯವನ್ನು ವ್ಯರ್ಥ ಮಾಡಬೇಡಿ. ಸಾಮಾಜಿಕ ಕಳಕಳಿಯನ್ನು ಜೊತೆಗಾರರು ಅರ್ಥಮಾಡಿಕೊಳ್ಳುವರು. ಅಪಪ್ರಚಾರಗಳಿಂದ ದೂರವಿರುವುದು ಒಳಿತು. ನಿಮ್ಮ ಸಂಗಾತಿಯೊಂದಿಗೆ ಭಾವನಾತ್ಮಕ ಸಂಬಂಧವು ಬಲವಾಗುತ್ತದೆ. ಸ್ವಾಭಿಮಾನವನ್ನು ಬಿಟ್ಟು ಇರುವುದು ಅಸಾಧ್ಯ ಎನಿಸಬಹುದು. ಕೆಲವರಿಂದ ತಪ್ಪಿಸಿಕೊಳ್ಳಲು ನೋಡುವಿರಿ. ಅನಾರೋಗ್ಯವು ನೆಪವಾಗಬಹುದು.

ತುಲಾ ರಾಶಿ :

ಸಮಯದಲ್ಲಿ ಅಹಿತಕರ ಸುದ್ದಿಗಳ ಸೂಚನೆಗಳೂ ಇವೆ. ಪ್ರೇಮ ಜೀವನದಲ್ಲಿ ಭಾವನಾತ್ಮಕ ತೀವ್ರತೆ ಹೆಚ್ಚಾಗಬಹುದು. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ಅನಾರೋಗ್ಯಕ್ಕೆ ವಿಶ್ರಾಂತಿಗಿಂತ ಮನಸ್ಸಿನಲ್ಲಿ ಉತ್ಸಾಹ ಹೆಚ್ಚಿರಲಿ. ಹೊಸ ಯೋಜನೆಗಳ ಬಗ್ಗೆ ಆಲೋಚನೆ ಶುರುವಾಗಬಹುದು. ಭೂಮಿಯನ್ನು ಖರೀದಿಸುವ ಸಂದರ್ಭ ಬಂದರೂ ಪೂರ್ತಿ ಹಣವನ್ನು ಸೇರಿಸಲು ಆಗದು. ಯಾರ ಬಳಿಯೂ ಕೆಲಸವಿಲ್ಲ ಎಂದು ಹೇಳಬೇಡಿ. ಯಾರ ತಪ್ಪನ್ನೂ ನೇರವಾಗಿ ಹೇಳದೇ ಅರ್ಥ ಮಾಡಿಸಿ, ತಿದ್ದಿ.

ವೃಶ್ಚಿಕ ರಾಶಿ :

ಇಂದು ಭೇಟಿಯಾಗುವ ವ್ಯಕ್ತಿಗಳು ನಿಮ್ಮೊಳಗೆ ಧನಾತ್ಮಕ ಶಕ್ತಿಯನ್ನು ತುಂಬಿಸುವರು. ಕೆಲವು ವೈಫಲ್ಯಗಳು ನಿಮಗೆ ಪಾಠವಾಗಿ‌ ಕಲಿಯಬೇಕು. ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲಿದ್ದೀರಿ. ಇತರರಿಗೆ ಸಹಾಯಮಾಡುವ ನಿಮ್ಮ ಗುಣವು ಫಲ ನೀಡುತ್ತದೆ. ಪುಣ್ಯಾತ್ಮರ ದರ್ಶನವಾಗಲಿದೆ. ಪ್ರೀತಿಯ ಸಂಬಂಧಗಳಲ್ಲಿ ಸಿಹಿಯ ಅನುಭವ ಸಾಧ್ಯ. ಉದ್ಯೋಗವನ್ನು ಬದಲಿಸುವ ಮೊದಲು ಸ್ನೇಹಿತರ ಸಲಹೆಯನ್ನು ಪಡೆಯುವಿರಿ. ಸಣ್ಣ ಕೆಲಸವಾದರೂ ಶ್ರದ್ಧೆಯಿಂದ ಮಾಡುವಿರಿ. ನಿಮ್ಮ ಹೆಚ್ಚಿನವರ ಭೇಟಿಯಾಗುವುದು.

ಧನು ರಾಶಿ :

ನೀವು ಕುಟುಂಬದ ಸಮಸ್ಯೆಗಳನ್ನು ಕುಳಿತು ಮಾತನಾಡಬಹುದು. ಕೆಲವು ದುಃಖದ ಸುದ್ದಿಗಳು ಮನಸ್ಸನ್ನು ಹತಾಶೆಗೊಳಿಸಬಹುದು. ಯಾತ್ರೆಗಳಲ್ಲಿ ನಿಮ್ಮ ವಸ್ತುಗಳ ಬಗ್ಗೆ ಎಚ್ಚರಿಕೆಯಿಂದಿರಿ. ಮಾನವೀಯತೆಯ ದೃಷ್ಟಿಯಿಂದ ಸಹಕಾರ ಮಾಡುವಿರಿ. ಮನೆಯ ಸ್ವಚ್ಛತೆಯ ಕಡೆ ಗಮನ ಹರಿಸುವುದು ಸಂತೋಷದ ವಿಚಾರ. ಒಂಟಿಯಾಗಿ ಇರಬೇಕು ಎನಿಸಬಹುದು. ಸಹೋದರಿಯರ ನಡುವೆ ಮನಸ್ತಾಪವು ಬರುತ್ತದೆ. ಉದ್ಯಮದಲ್ಲಿ ಕೆಲವು ಮಾರ್ಪಾಡಿನ ಅವಶ್ಯಕತೆ ಇರಲಿದೆ.

ಮಕರ ರಾಶಿ :

ಅಪಾಯಕಾರಿಯಾಗಿರುವ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬೇಡಿ. ಆರ್ಥಿಕ ಪರಿಸ್ಥಿತಿ ಹದಗೆಡಬಹುದು. ಮನೆಯ ವ್ಯವಸ್ಥೆಯನ್ನು ಸುಧಾರಿಸುವ ಪ್ರಯತ್ನ ಯಶಸ್ವಿಯಾಗಿದೆ. ಪ್ರೀತಿಯ ವ್ಯಕ್ತಿಯಿಂದ ಅಚ್ಚರಿಯ ಉಡುಗೊರೆ ನಿರೀಕ್ಷಿಸಬಹುದು. ದಿನದ ಹೆಚ್ಚಿನ ಭಾಗವನ್ನು ಮನರಂಜನೆಗೆ ಮೀಸಲಿಡುವಿರಿ. ಅಹಂಕಾರಕ್ಕೆ ಸಂಬಂಧಿಸಿದಂತೆ ಗಂಡ ಹೆಂಡತಿಯ ನಡುವೆ ಭಿನ್ನಾಭಿಪ್ರಾಯಗಳು ಬರಬಹುದು. ವಿದ್ಯಾರ್ಥಿಗಳು ಓದಿನ ಸಮಯವನ್ನು ಬದಲಿಸಿಕೊಳ್ಳುವುದು ಸೂಕ್ತ.

ಕುಂಭ ರಾಶಿ :

ಇಂದು ನೀವು ಮಾತನಾಡುವ ರೀತಿ ಜನರನ್ನು ಆಕರ್ಷಿಸುವುದು. ಸಂಬಂಧದ ಜೊತೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳುವಿರಿ. ನಿಮ್ಮ ವಸ್ತುಗಳ ಬಗ್ಗೆ ಎಚ್ಚರಿಕೆಯಿಂದಿರಿ, ಕಳ್ಳತನ ಸಾಧ್ಯತೆ ಇದೆ. ಸಂಬಂಧಗಳ ಪುನ‌ರ್ ಸ್ಥಾಪನೆಯ ಸಮಯ ಇದು. ಪ್ರೇಮ ಸಂಬಂಧಗಳಲ್ಲಿ ನೈಜತೆ ಇಟ್ಟುಕೊಳ್ಳಿ. ಅರೋಗ್ಯದ ಸುಧಾರಣೆಗೆ ವೈದ್ಯರ ಸಲಹೆ ಅವಶ್ಯಕ. ಇಂದು ಆದ ನಿದ್ರಾಭಂಗದಿಂದ‌ ದಿನವು ಸರಿಯಾಗದೇ ಹೋಗಬಹುದು. ಎಲ್ಲರ ಮೇಲೂ ವಿನಾ ಕಾರಣ ಕೋಪ‌ ಮಾಡಿಕೊಳ್ಳುವಿರಿ. ಹಸಿವು ಹೆಚ್ಚಾಗಿ ಸಂಕಟಪಡುವಿರಿ.

ಮೀನ ರಾಶಿ :

ನಿಮ್ಮನ್ನು ನೀವು ಆಶಾವಾದಿಯನ್ನಾಗಿ ಮಾರ್ಪಾಡು ಮಾಡಿಕೊಳ್ಳುವಿರಿ. ಯಶಸ್ಸಿನ ದಾರಿಯನ್ನು ತೋರಿಸುತ್ತದೆ. ಕುಟುಂಬದ ಸ್ನೇಹಿತರೊಂದಿಗೆ ಮೋಜು ಮಸ್ತಿಯಲ್ಲಿ ಕಳೆವ ಕ್ಷಣ ಸ್ಮರಣೀಯವಾಗಿರುತ್ತದೆ. ಹಣದ ವ್ಯವಹಾರಗಳಲ್ಲಿ ಸಮತೋಲನ ಇರಲಿ. ಪ್ರೇಮದ ಆಕರ್ಷಣೆಯು ನಿಮ್ಮ ಗುರಿಯಿಂದ ನಿಮ್ಮನ್ನು ದೂರವಿಡಬಹುದು. ನಿಮ್ಮ‌ ಮಾತಿನ ಮೇಲೆ‌ ನಿಯಂತ್ರಣವಿರಲಿ. ನಿಮ್ಮ ವೃತ್ತಿಯು ನಿಮಗೆ ಗೌರವವನ್ನು ಕೊಡಿಸುವುದು. ಬೇಜವಾಬ್ದಾರಿತನದಿಂದ ನಿಮ್ಮ ಅಧಿಕಾರವನ್ನು ಕಳೆದುಕೊಳ್ಳಬೇಕಾಗುವುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ಮೇಷ, ಮಹಾನಕ್ಷತ್ರ : ಕೃತ್ತಿಕಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಸುಕರ್ಮ, ಕರಣ : ತೈತಿಲ, ಸೂರ್ಯೋದಯ – 05 – 57 am, ಸೂರ್ಯಾಸ್ತ – 06 – 44 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:33 – 17:09, ಯಮಗಂಡ ಕಾಲ 09:09 – 10:45, ಗುಳಿಕ ಕಾಲ 12:21 – 13:37

-ಲೋಹಿತ ಹೆಬ್ಬಾರ್-8762924271 (what’s app only)

Source link

ಟಾಲಿವುಡ್​​​ನಲ್ಲಿ ಮತ್ತೊಂದು ಸಮಂತಾ ಆಗ್ತಾರಾ ಜಾನ್ವಿ ಕಪೂರ್ ? – Kannada News | Janhvi Kapoor’s Peddi Role: A Career Defining Moment After Ram Charan’s Trailer

ಟಾಲಿವುಡ್ ನಟ ರಾಮ್ ಚರಣ್ (Ram Charan) ನಟನೆಯ, ಬುಚ್ಚಿ ಬಾಬು ನಿರ್ದೇಶನದ ಬಹುನಿರೀಕ್ಷಿತ ‘ಪೆದ್ದಿ’ ಚಿತ್ರದ ಟ್ರೇಲರ್ ರಿಲೀಸ್ ಆಗಿ, ಭಾರಿ ಸದ್ದು ಮಾಡುತ್ತಿದೆ. ಗ್ರಾಮೀಣ ಹಿನ್ನೆಲೆಯಲ್ಲಿ ಸಾಗೋ ಈ ಚಿತ್ರ ಕ್ರೀಡಾ ಕಥೆಯನ್ನು ಹೊಂದಿದೆ. ‘ಪೆದ್ದಿ’ ಟ್ರೈಲರ್ ನೋಡಿದ ಸಿನಿಪ್ರಿಯರು, ಚಿತ್ರದ ನಾಯಕಿ ಜಾನ್ವಿ ಕಪೂರ್ ಅವರ ಪಾತ್ರವನ್ನು ‘ರಂಗಸ್ಥಲಂ’ ಚಿತ್ರದ ಸಮಂತಾ ಪಾತ್ರಕ್ಕೆ ಹೋಲಿಸಿ ಚರ್ಚೆ ಆರಂಭಿಸಿದ್ದಾರೆ.

2018ರಲ್ಲಿ ಬಿಡುಗಡೆಯಾಗಿದ್ದ ‘ರಂಗಸ್ಥಲಂ’ ಚಿತ್ರದಲ್ಲಿ ಸಮಂತಾ ನಟಿಸಿದ್ದ ರಾಮಲಕ್ಷ್ಮಿ ಹೆಸರಿನ ಹಳ್ಳಿ ಹುಡುಗಿಯ ಪಾತ್ರ ಅವರ ವೃತ್ತಿಜೀವನದಲ್ಲೇ ಅತ್ಯಂತ ಜನಪ್ರಿಯ ಹಾಗೂ ಶ್ರೇಷ್ಠ ಪ್ರದರ್ಶನಗಳಲ್ಲಿ ಒಂದಾಗಿತ್ತು. ಆ ಚಿತ್ರ ತಂದುಕೊಟ್ಟ ಭಾರಿ ಯಶಸ್ಸು ಮತ್ತು ಸ್ಟಾರ್‌ಡಮ್ ಸಮಂತಾ ಅವರ ಚಿತ್ರರಂಗದ ಜರ್ನಿಯನ್ನೇ ಬದಲಾಯಿಸಿತ್ತು. ಈಗ ‘ಪೆದ್ದಿ’ ಚಿತ್ರದಲ್ಲೂ ಅಂತಹದ್ದೇ ಥೀಮ್ ಇದೆ.

ಸಿನಿಮಾದಲ್ಲಿ ಹಳ್ಳಿಯ ವಾತಾವರಣ, ಗ್ರಾಮೀಣ ಸೊಗಡಿನ ಸಂಭಾಷಣೆ ಇದೆ. ಇದು ಜಾನ್ವಿ ಕಪೂರ್ ವೃತ್ತಿ ಜೀವನಕ್ಕೆ ಸಹಕಾರಿ ಆಗಬಹುದು. ಅವರು ಕೇವಲ ಗ್ಲಾಮರ್​​ಗೆ ಸೀಮಿತವಾಗದೆ, ನಟನೆಯಲ್ಲೂ ಮಿಂಚಿದರೆ ಮಾತ್ರ ಇದು ಸಾಧ್ಯವಾಗಲಿದೆ.

ಇದನ್ನೂ ಓದಿ:  ‘ಪೆದ್ದಿ’ ಟ್ರೇಲರ್ ಬಿಡುಗಡೆ; ಕ್ರಿಕೆಟ್ ಜೊತೆ ಕುಸ್ತಿ ಅಖಾಡದಲ್ಲೂ ರಾಮ್ ಚರಣ್ ಮಾಸ್ ಅವತಾರ

ಟ್ರೈಲರ್‌ನಲ್ಲಿ ಜಾನ್ವಿ ಕಪೂರ್ ಹಳ್ಳಿ ಹುಡುಗಿಯ ಪಾತ್ರಕ್ಕೆ ಹೊಂದಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಿರುವುದು ಎದ್ದು ಕಾಣುತ್ತಿದೆ. ಕೆಲವು ದೃಶ್ಯಗಳಲ್ಲಿ ಅವರ ಸ್ಕ್ರೀನ್ ಪ್ರೆಸೆನ್ಸ್ ಗಮನ ಸೆಳೆದಿದ್ದರೂ, ಸಿನಿಮಾ ನೋಡಿದ ಬಳಿಕವೇ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಒಂದು ವೇಳೆ ‘ಪೆದ್ದಿ’ ಸಿನಿಮಾ ದೊಡ್ಡ ಹಿಟ್ ಲಿಸ್ಟ್ ಸೇರಿದರೆ, ಅದು ಜಾನ್ವಿ ಅವರ ಸೌತ್ ಇಂಡಿಯನ್ ಸಿನಿ ಕೆರಿಯರ್‌ಗೆ ಬಹುದೊಡ್ಡ ತಿರುವು ನೀಡುವುದರಲ್ಲಿ ಅನುಮಾನವಿಲ್ಲ.
‘ಉಪ್ಪೇನಾ’ ಖ್ಯಾತಿಯ ಬುಚ್ಚಿ ಬಾಬು ಸನಾ ನಿರ್ದೇಶನದ, ಎ.ಆರ್. ರೆಹಮಾನ್ ಸಂಗೀತವಿರುವ ಹಾಗೂ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಪೆದ್ದಿ’ ಚಿತ್ರ ಜೂನ್ 4 ರಂದು ವಿಶ್ವದಾದ್ಯಂತ ತೆರೆಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 10:13 am, Tue, 19 May 26

Source link

ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ತೆರೆದ ನಾರಿಯರು!

ಕೊಪ್ಪಳ, ಮೇ 19: ಜಿಲ್ಲೆಯ ಕುಷ್ಟಗಿಯ ತೆಗ್ಗಿಣ ಓಣಿಯ ಮೂವರು ಮಹಿಳೆಯರು ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಳಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ಒಂದೇ ಕುಟುಂಬದ ಈ ಮೂವರು ಮಹಿಳೆಯರು, ಗೃಹಲಕ್ಷ್ಮಿ ಯೋಜನೆಯಡಿ ಬಂದ ಹಣವನ್ನು ಸಂಗ್ರಹಿಸಿ, ಅದನ್ನು ತಮ್ಮ ರೊಟ್ಟಿ ಕೇಂದ್ರದ ಸ್ಥಾಪನೆಗೆ ಹೂಡಿಕೆ ಮಾಡಿದ್ದಾರೆ. ಮೋಹಿನಿ ಮತ್ತು ಇನ್ನಿಬ್ಬರು ಸಹೋದರಿಯರು ಸೇರಿ ಗೃಹಲಕ್ಷ್ಮಿ ರೊಟ್ಟಿ ಕೇಂದ್ರವನ್ನು ಆರಂಭಿಸಿದ್ದು, ಇದು ಮಹಿಳೆಯರಿಗೆ ಜೀವನಪೂರ್ತಿ ದುಡಿದು ತಿನ್ನಲು ಒಂದು ದಾರಿಯಾಗಿದೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ರೊಟ್ಟಿ ಮಿಷನ್, ಹಿಟ್ಟು ಮಿಕ್ಸ್ ಮಾಡುವ ಗ್ರೈಂಡರ್ ಮತ್ತು ಹಿಟ್ಟಿನ ಗಿರಣಿ ಸೇರಿ ಸುಮಾರು 2 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link