All posts by nagaraj11081993

Daily Devotional: ಮನೆಯೊಳಗೆ ಸರಿಯಾಗಿ ಸೂರ್ಯನ ಬೆಳಕು ಬೀಳಬೇಕು ಯಾಕೆ ಗೊತ್ತಾ?

Daily Devotional: ಮನೆಯೊಳಗೆ ಸರಿಯಾಗಿ ಸೂರ್ಯನ ಬೆಳಕು ಬೀಳಬೇಕು ಯಾಕೆ ಗೊತ್ತಾ?

ಮನೆ, ಕಚೇರಿ, ವ್ಯಾಪಾರ ಸ್ಥಳ ಅಥವಾ ದೇವಾಲಯ ಯಾವುದೇ ಆಗಿರಲಿ, ಸೂರ್ಯನ ಬೆಳಕು ಪ್ರವೇಶಿಸುವುದಕ್ಕೆ ಎಲ್ಲರೂ ಗಮನ ನೀಡುತ್ತಾರೆ. ಅನೇಕ ಮನೆಗಳಲ್ಲಿ ದೇವರ ಮನೆ, ಮುಖ್ಯ ಬಾಗಿಲು ಅಥವಾ ಕಚೇರಿಯ ಮುಖ್ಯ ಹಾಲ್‌ನವರೆಗೂ ಸೂರ್ಯನ ಬೆಳಕು ಬರುತ್ತದೆ.ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಸೂರ್ಯರಶ್ಮಿಯ ಪ್ರವೇಶವು ದಿಕ್ಕುಗಳನ್ನು ಅವಲಂಬಿಸಿ ವಿಭಿನ್ನ ಫಲಿತಾಂಶಗಳನ್ನು ನೀಡುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ.

ಗುರೂಜಿಯವರು ಹೇಳುವಂತೆ, ಪೂರ್ವ ದಿಕ್ಕಿನಿಂದ ಸೂರ್ಯನ ಬೆಳಕು ಪ್ರವೇಶಿಸುವುದು ಅತ್ಯಂತ ಶುಭಕರವೆಂದು ಪರಿಗಣಿಸಲಾಗುತ್ತದೆ. ಮನೆಯ ಬಾಗಿಲು ಪೂರ್ವಕ್ಕಿಲ್ಲದಿದ್ದರೂ, ಪೂರ್ವ ದಿಕ್ಕಿನಿಂದ ಬರುವ ಸೂರ್ಯರಶ್ಮಿಯು ಆ ಮನೆಗೆ ಸರ್ವಥಾ ಶುಭವನ್ನು ತರುತ್ತದೆ. ಇದು ಮಾನಸಿಕ ನೆಮ್ಮದಿ, ಉತ್ತಮ ಆರೋಗ್ಯ, ಕೆಲಸ ಕಾರ್ಯಗಳಲ್ಲಿ ಶುಭ, ಆದಾಯದಲ್ಲಿ ಏರಿಕೆ ಮತ್ತು ಸಕಾರಾತ್ಮಕ ಭಾವನೆಗಳಿಗೆ ಕಾರಣವಾಗುತ್ತದೆ. ಆರೋಗ್ಯ, ಕೀರ್ತಿ ಮತ್ತು ಪ್ರತಿಷ್ಠೆಗೆ ಭಾಜನರಾಗಲು ಪೂರ್ವ ದಿಕ್ಕಿನಿಂದ ಬರುವ ಸೂರ್ಯರಶ್ಮಿ ಸಹಕಾರಿಯಾಗಿದೆ. ವಿಶೇಷವಾಗಿ ಪೂರ್ವ ಮತ್ತು ಈಶಾನ್ಯ ದಿಕ್ಕುಗಳಿಂದ ಬರುವ ಬೆಳಕು ಬಹಳಷ್ಟು ಶುಭ ಫಲಗಳನ್ನು ನೀಡುತ್ತದೆ.

ಸೂರ್ಯನು “ನಮಸ್ಕಾರಪ್ರಿಯೋ ಭಾನು” ಎಂದು ಕರೆಸಿಕೊಳ್ಳುತ್ತಾನೆ ಮತ್ತು “ಆತ್ಮಕಾರಕ” ಹಾಗೂ “ತಂದೆ” ಎಂದು ಪರಿಗಣಿಸಲ್ಪಡುತ್ತಾನೆ. “ಆರೋಗ್ಯಂ ಭಾಸ್ಕರಾದಿಚ್ಛೇತ್” ಎಂಬಂತೆ, ಭಾಸ್ಕರನೇ ಆರೋಗ್ಯವನ್ನು ನೀಡುವವನು ಎಂದು ನಂಬಲಾಗಿದೆ. ಹೀಗಾಗಿ ಸೂರ್ಯನ ಕಿರಣಗಳು ಆರೋಗ್ಯ ವೃದ್ಧಿಗೆ ಪೂರಕವಾಗಿವೆ. ಸಂಧ್ಯಾಕಾಲದಲ್ಲಿ ಅಂದರೆ ಸೂರ್ಯಾಸ್ತದ ಸಮಯದಲ್ಲಿ ಪಶ್ಚಿಮ ದಿಕ್ಕಿನಿಂದ ಮನೆಯೊಳಗೆ ಬೆಳಕು ಬರುವುದು ಸಹ ಶುಭಕರವಾಗಿದೆ.

ಇದನ್ನೂ ಓದಿ: ಈ ಒಂದು ವಸ್ತುವನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿ; ಅಪಾಯ ತಪ್ಪಿದ್ದಲ್ಲ!

ಆದರೆ, ವಾಸ್ತು ಪ್ರಕಾರ ನೈಋತ್ಯ ದಿಕ್ಕಿನಿಂದ ಸೂರ್ಯನ ಕಿರಣಗಳು ಮನೆಯನ್ನು ಪ್ರವೇಶಿಸುವುದು ಶುಭಕರವಲ್ಲ. ಇದು ದೇವಾಲಯ ಅಥವಾ ದೇವರ ಸ್ಥಾನವಾಗಿದ್ದರೆ, ಅಲ್ಲಿ ಶ್ರದ್ಧಾಭಕ್ತಿಗಳಿಂದ ನಡೆದುಕೊಂಡರೆ ಶುಭಫಲಗಳು ಪ್ರಾಪ್ತವಾಗುತ್ತವೆ. ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುವವರು ಸೂರ್ಯರಶ್ಮಿ ನೇರವಾಗಿ ಬೀಳದಿದ್ದರೂ, ಆ ಬೆಳಕು ಪ್ರವೇಶಿಸುವ ಬಗ್ಗೆ ಗಮನ ಹರಿಸಬೇಕು.

ಒಟ್ಟಾರೆಯಾಗಿ, ಸೂರ್ಯರಶ್ಮಿಯು ಮನೆ, ಕಚೇರಿ, ದೇವಾಲಯ, ಪ್ರಾಂಗಣ, ಶಿಖರ, ಕಿಟಕಿ ಅಥವಾ ಬಾಗಿಲುಗಳ ಮುಖಾಂತರ ಪ್ರವೇಶಿಸುವುದು ಅತ್ಯಂತ ಶುಭಕಾರಿಯಾಗಿದೆ. ಮನೆಯಲ್ಲಿ ಸೂರ್ಯರಶ್ಮಿಯು ಬೀಳುವುದರಿಂದ ಆ ಮನೆಯ ವಾಸ್ತು ಗಟ್ಟಿಯಾಗಿ, ಶುಭವಾಗಿ, ಸಕಾರಾತ್ಮಕ ಶಕ್ತಿಯಿಂದ ಕೂಡಿರುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್​ನಲ್ಲಿ ಗರಿಗೆದರಿದ ಡಿನ್ನರ್ ಪಾಲಿಟಿಕ್ಸ್: ಮಾರ್ಚ್ 16 ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 13: ಕರ್ನಾಟಕ ಕಾಂಗ್ರೆಸ್​ನಲ್ಲಿ (Congress) ಮತ್ತೆ ‘ಡಿನ್ನರ್ ರಾಜಕೀಯ’ ಸದ್ದು ಮಾಡುತ್ತಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಲವೇ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕೂಡ ಸಚಿವರಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ. ಮಾರ್ಚ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗೆ ಡಿನ್ನರ್ ಪಾರ್ಟಿ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿರುವುದು ಗಮನಾರ್ಹವಾಗಿದೆ.

ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಂಡ ನೆಪದಲ್ಲಿ ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ಆಯೋಜಿಸಿದ್ದರು. ಅದರ ಬೆನ್ನಲ್ಲೇ ಮಾರ್ಚ್ 12ರಂದು ಸಿಎಂ ಮತ್ತು ಡಿಸಿಎಂ ಬಣಗಳಿಗೆ ಸೇರಿರುವ ಕೆಲವು ಶಾಸಕರು ಪ್ರತ್ಯೇಕವಾಗಿ ಸಭೆ ನಡೆಸಿದ್ದು ರಾಜಕೀಯ ಚರ್ಚೆಗೆ ಕಾರಣವಾಗಿತ್ತು.

ಈ ಸಭೆಯಲ್ಲಿ ಸಚಿವ ಸ್ಥಾನ ಆಕಾಂಕ್ಷಿ ಶಾಸಕರು ಸಂಪುಟ ಪುನರ್‌ರಚನೆಗಾಗಿ ಒತ್ತಡ ಹೇರುವ ತಂತ್ರಗಾರಿಕೆ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಈ ಬೆಳವಣಿಗೆಗಳ ನಡುವೆಯೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಿಗೆ ಡಿನ್ನರ್ ಕೂಟ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ವಿವಿಧ ರೀತಿಯ ಚರ್ಚೆಗೆ ಗ್ರಾಸವಾಗಿದೆ.

ಈ ಡಿನ್ನರ್ ಸಭೆಯಲ್ಲಿ ಮುಂದಿನ ರಾಜಕೀಯ ತಂತ್ರಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಜಿಬಿಎ ಚುನಾವಣೆಗಳ ತಯಾರಿ, ಒಳಮೀಸಲಾತಿ ವಿಚಾರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಶೀಘ್ರದಲ್ಲೇ ಘೋಷಣೆಯಾಗಬಹುದಾದ ಪಂಚ ರಾಜ್ಯಗಳ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಗಳಲ್ಲಿ ಯಾರು ಭಾಗವಹಿಸಬೇಕು ಎಂಬುದರ ಕುರಿತಾಗಿಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: ರೆಸಾರ್ಟ್ ರಾಜಕೀಯ ಶುರು: ಬಿಡದಿಯ ವಂಡರ್ ಲಾ ರೆಸಾರ್ಟ್​ನತ್ತ 14 ಕಾಂಗ್ರೆಸ್ ಶಾಸಕರು!

ಒಟ್ಟಿನಲ್ಲಿ ಡಿಕೆ ಶಿವಕುಮಾರ್ ಅವರ ಡಿನ್ನರ್ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯೋಜಿಸಿರುವ ಈ ಔತಣಕೂಟ ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಆಂತರಿಕ ರಾಜಕೀಯದ ಮೇಲೆ ಅದರ ಪರಿಣಾಮ ಹೇಗಿರಲಿದೆ ಎಂಬುದರ ಬಗ್ಗೆ ಕುತೂಹಲ ಹೆಚ್ಚಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಚಂದ್ರಪ್ರಭ ಅವರು ಲೇಡಿ ಗೆಟಪ್​  ಅಲ್ಲಿ ಬಂದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ‘ಗಿಚ್ಚಿ-ಗಿಲಿಗಿಲಿ ಜ್ಯೂನಿಯರ್ಸ್’ನ ಶೋನಲ್ಲಿ ಅವರು ಈ ಗೆಟಪ್​​ ಅಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಚಂದ್ರಪ್ರಭ ಅವರನ್ನು ಲೇಡಿ ಗೆಟಪ್​​​ನಲ್ಲಿ ನೋಡಿ ಎಲ್ಲರೂ ನಕ್ಕಿದ್ದಾರೆ. ಅವರು ಸಖತ್ ಆಗಿ ಮನರಂಜನೆ ಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ಇಸ್ರೇಲ್-ಇರಾನ್ ಯುದ್ಧದಿಂದ ಕಂಗೆಟ್ಟ ಮಂಗಳೂರು ಡ್ರೈಫ್ರೂಟ್ಸ್ ಉದ್ಯಮ: ದಕ್ಷಿಣ ಭಾರತದ ಹಲವು ರಾಜ್ಯಗಳಿಗೆ ಪೂರೈಕೆ ಸ್ಥಗಿತ

ಮಂಗಳೂರು, ಮಾರ್ಚ್ 13: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಯುದ್ಧದ ಪರಿಣಾಮ ಇದೀಗ ಭಾರತದ ಡ್ರೈಫ್ರೂಟ್ಸ್ (Dry Fruits) ಉದ್ಯಮಕ್ಕೂ ತಟ್ಟಿದ್ದು, ವಿಶೇಷವಾಗಿ ಮಂಗಳೂರಿನ (Mangalore) ವ್ಯಾಪಾರಕ್ಕೆ ಭಾರೀ ಹೊಡೆತ ಬಿದ್ದಿದೆ. ಇರಾನ್ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರಬೇಕಿದ್ದ ಖರ್ಜೂರ ಸೇರಿದಂತೆ ಹಲವು ಒಣಹಣ್ಣುಗಳ ಪೂರೈಕೆ ಅಡಚಣೆಗೆ ಒಳಗಾಗಿದ್ದು, ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಶುರುವಾಗಿದೆ. ಮಂಗಳೂರಿನ ಬಂದರು ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ದಕ್ಷಿಣ ಭಾರತದ ಪ್ರಮುಖ ಡ್ರೈಫ್ರೂಟ್ಸ್ ಆಮದು ಸಂಸ್ಥೆಯಾದ ‘ರೀಮ್ ಟ್ರೇಡರ್ಸ್’ ಸೇರಿದಂತೆ ಹಲವು ವ್ಯಾಪಾರಿಗಳು ಈಗ ಸಂಕಷ್ಟ ಎದುರಿಸುತ್ತಿದ್ದಾರೆ.

ಈ ಕಂಪನಿ ಮಂಗಳೂರಿನಿಂದ ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ, ಗೋವಾ ಸೇರಿ ದಕ್ಷಿಣ ಭಾರತದ ಹಲವು ರಾಜ್ಯಗಳಿಗೆ ಡ್ರೈಫ್ರೂಟ್ಸ್ ಪೂರೈಸುತ್ತದೆ. ಕರ್ನಾಟಕದ ವಿವಿಧ ಕಡೆಗಳಿಗೂ ಇಲ್ಲಿಂದಲೇ ಡ್ರೈಫ್ರೂಟ್ಸ್ ಪೂರೈಕೆಯಾಗುತ್ತಿದೆ.

ಆಮದು ಸ್ಥಗಿತ, ಡ್ರೈಫ್ರೂಟ್ಸ್ ದರ ಶೇ 15 ರಿಂದ 20 ರವರೆಗೆ ಏರಿಕೆ

ಯುದ್ಧ ಪರಿಸ್ಥಿತಿಯಿಂದಾಗಿ ಇರಾನ್ ಮತ್ತು ಅಫ್ಘಾನಿಸ್ತಾನದಿಂದ ಡ್ರೈಫ್ರೂಟ್ಸ್ ಆಮದು ಅಸ್ತವ್ಯಸ್ತಗೊಂಡಿದೆ. ಇದರ ಪರಿಣಾಮವಾಗಿ ಖರ್ಜೂರ ಸೇರಿದಂತೆ ಅಂಜೀರ್, ಅಪ್ರಿಕಾಟ್, ಬಾದಾಮ್, ಕಪ್ಪು ದ್ರಾಕ್ಷಿ, ಫೈನ್ ನಟ್ಸ್ ಸೇರಿದಂತೆ ಹಲವು ಒಣಹಣ್ಣುಗಳ ಬೆಲೆಗಳು ಶೇ 15 ರಿಂದ 20 ರವರೆಗೆ ಏರಿಕೆ ಕಂಡಿವೆ.

ಸಾಮಾನ್ಯವಾಗಿ ಭಾರತಕ್ಕೆ ಆಮದು ಆಗುವ ಖರ್ಜೂರಗಳಲ್ಲಿ ಸುಮಾರು 60 ಶೇಕಡಾ ಪ್ರಮಾಣ ಇರಾನ್‌ನಿಂದಲೇ ಬರುತ್ತದೆ. ಆದರೆ ಇತ್ತೀಚಿನ ಯುದ್ಧ ಪರಿಸ್ಥಿತಿಯಿಂದಾಗಿ ಇರಾನ್‌ನಿಂದ ಬರುತ್ತಿದ್ದ ದೊಡ್ಡ ಪ್ರಮಾಣದ ಖರ್ಜೂರ ಪೂರೈಕೆ ಅಡಚಣೆಗೆ ಒಳಗಾಗಿದೆ.

ಅಫ್ಘಾನಿಸ್ತಾನದಿಂದಲೂ ಆಮದು ಸ್ಥಗಿತ!

ಇದಕ್ಕೂ ಮೊದಲು ಅಫ್ಘಾನಿಸ್ತಾನದಿಂದ ಡ್ರೈಫ್ರೂಟ್ಸ್‌ಗಳನ್ನು ಪಾಕಿಸ್ತಾನದ ವಾಘಾ ಗಡಿ ಮಾರ್ಗದ ಮೂಲಕ ರಸ್ತೆ ಮೂಲಕ ಭಾರತಕ್ಕೆ ಆಮದು ಮಾಡಿಕೊಳ್ಳಲಾಗುತ್ತಿತ್ತು. ಆದರೆ ಪಾಕಿಸ್ತಾನ ಗಡಿಯನ್ನು ಸಂಪೂರ್ಣವಾಗಿ ಮುಚ್ಚಿರುವುದರಿಂದ ಆ ಮಾರ್ಗದಲ್ಲಿಯೂ ಆಮದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಫ್ಘಾನಿಸ್ತಾನದಿಂದ ಬರಬೇಕಾದ ಸರಕುಗಳನ್ನು ಈಗ ಸಮುದ್ರ ಮಾರ್ಗದ ಮೂಲಕ ಇರಾನ್‌ನ ಬಂದರ್ ಅಬ್ಬಾಸ್ ಬಂದರು ತಲುಪಿ, ಅಲ್ಲಿಂದ ಭಾರತಕ್ಕೆ ಕಳುಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸಾಗಾಟ ಸಮಯವೂ ಹೆಚ್ಚಾಗಿ, ವೆಚ್ಚವೂ ಹೆಚ್ಚಾಗಿದೆ.

ರಂಜಾನ್ ಸೀಸನ್‌ಗೆ ವ್ಯಾಪಾರಿಗಳಿಗೆ ಆತಂಕ

ರಂಜಾನ್ ಸೀಸನ್ ಹಿನ್ನೆಲೆಯಲ್ಲಿ ಖರ್ಜೂರಕ್ಕೆ ಹೆಚ್ಚಾದ ಬೇಡಿಕೆ ಇರುತ್ತದೆ. ಆದರೆ ಈ ವೇಳೆಯಲ್ಲೇ ಪೂರೈಕೆ ಕಡಿಮೆಯಾಗಿರುವುದು ವ್ಯಾಪಾರಿಗಳಿಗೆ ತಲೆನೋವಾಗುತ್ತಿದೆ. ಈಗಾಗಲೇ ಬಂದಿದ್ದ ಕೆಲವು ಸ್ಟಾಕ್‌ಗಳು ಮಾರಾಟವಾಗಿದ್ದು, ಹೊಸ ಸರಕುಗಳ ಆಗಮನದಲ್ಲಿ ವಿಳಂಬವಾಗುತ್ತಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಡ್ರೈಫ್ರೂಟ್ಸ್ ಪೂರೈಕೆ ಸ್ಥಗಿತ: ಉದ್ಯಮಿ ಹೇಳಿದ್ದೇನು?

ಮಂಗಳೂರಿನ ರೀಮ್ ಟ್ರೇಡರ್ಸ್ ಸಂಸ್ಥೆಯ ಮಾಲೀಕ ಮೊಹಮ್ಮದ್ ಮುಖ್ತಾರ್ ಅವರ ಪ್ರಕಾರ, ಯುದ್ಧದ ಪರಿಣಾಮದಿಂದ ಡ್ರೈಫ್ರೂಟ್ಸ್ ಕೊರತೆ ಉಂಟಾಗಿದ್ದು, ದರಗಳಲ್ಲೂ ಹೆಚ್ಚಳವಾಗಿದೆ. ಸೌದಿ ಅರೇಬಿಯಾ ಸೇರಿದಂತೆ ಗಲ್ಫ್ ರಾಷ್ಟ್ರಗಳಿಂದಲೂ ಖರ್ಜೂರ ಪೂರೈಕೆ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್-ಇರಾನ್ ಸಂಘರ್ಷ, ಬೆಂಗಳೂರಿನಲ್ಲಿ ದುಬಾರಿಯಾಗಲಿದೆ ಡ್ರೈ ಫ್ರೂಟ್ಸ್

ಒಟ್ಟಿನಲ್ಲಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಪರಿಸ್ಥಿತಿ ಭಾರತದ ಡ್ರೈಫ್ರೂಟ್ಸ್ ಉದ್ಯಮದ ಮೇಲೂ ಪರಿಣಾಮ ಬೀರಿದ್ದು, ಮಂಗಳೂರಿನ ವ್ಯಾಪಾರಿಗಳು ಹಾಗೂ ದಕ್ಷಿಣ ಭಾರತದ ಮಾರುಕಟ್ಟೆಯಲ್ಲಿ ಅದರ ಪರಿಣಾಮ ಕಾಣಿಸುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೈದರಾಬಾದ್​​ನ ಅಲ್ಲು ಸಿನಿಮಾಸ್​​​ನಲ್ಲಿ ಕನ್ನಡದ ಇಬ್ಬರು ನಿರ್ದೇಶಕರ ಫೋಟೋ

ಅಲ್ಲು ಅರ್ಜುನ್ ಅವರು (Allu Arjun) ಸಿನಿಮಾ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ‘ಅಲ್ಲು ಸಿನಿಮಾಸ್’ ಮಲ್ಟಿಪ್ಲೆಕ್ಸ್​​ನ ಹೈದರಾಬಾದ್​​ನಲ್ಲಿ ಆರಂಭಿಸಿದ್ದಾರೆ. ಐಷಾರಾಮಿ ಆಸನ ವ್ಯವಸ್ಥೆ ಹಾಗೂ ಅದ್ಭುತ ಸಿನಿಮಾ ವೀಕ್ಷಣೆ ಅನುಭವ ನೀಡುವ ಈ ಮಲ್ಟಿಪ್ಲೆಕ್ಸ್ ಗುರುವಾರ (ಮಾರ್ಚ್ 12) ಉದ್ಘಾಟನೆ ಆಯಿತು. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಇದನ್ನು ಲೋಕಾರ್ಪಣೆ ಮಾಡಿದರು. ಈ ಥಿಯೇಟರ್​​ನ ವಾಲ್​​ ಆಫ್ ಫೇಮ್​ ಅಲ್ಲಿ ಇಬ್ಬರು ಕನ್ನಡದ ನಿರ್ದೇಶಕರ ಫೋಟೋ ಇದೆ ಎಂಬುದು ವಿಶೇಷ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಅಲ್ಲು ಅರ್ಜುನ್ ಅವರು ಹೈದರಾಬಾದ್​​ನವರು. ಅಲ್ಲಿಯ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಅವರು ಟಾಲಿವುಡ್​​ನ ಯಶಸ್ವಿ ನಿರ್ಮಾಪಕ ಮತ್ತು ವಿತರಕ. ನಿರ್ಮಾಣ ಸಂಸ್ಥೆ, ಒಟಿಟಿ, ಸ್ಟುಡಿಯೋಗಳನ್ನು ಅಲ್ಲು ಕುಟುಂಬ ಹೊಂದಿದೆ. ಇದೀಗ ಹೊಸ ಉದ್ಯಮವನ್ನು ಅಲ್ಲು ಅರ್ಜುನ್ ಆರಂಭಿಸಿದ್ದಾರೆ. ಇದು ಹೈದರಾಬಾದ್​ನಲ್ಲಿರೋ ವಿಜಯ್ ದೇವರಕೊಂಡ ಒಡೆತನದ ಎವಿಡಿ ಸಿನಿಮಾಸ್​​ ಹಾಗೂ ಮಹೇಶ್ ಬಾಬು ಒಡೆತನದ ಎಎಂಬಿ ಸಿನಿಮಾಸ್​ಗೆ ಸ್ಪರ್ಧೆ ಒಡ್ಡಲಿದೆ.

ಇನ್ನು, ಅಲ್ಲು ಅರ್ಜುನ್ ಅವರು ‘ಅಲ್ಲು ಸಿನಿಮಾಸ್’ ಅಲ್ಲಿ ವಾಲ್ ಆಫ್ ಫೇಮ್ ನಿರ್ಮಿಸಿದ್ದಾರೆ. ಇದರಲ್ಲಿ ಹಲವು ನಿರ್ದೇಶಕರ ಫೋಟೋಗಳನ್ನು ಹಾಕಲಾಗಿದೆ. ತೆಲುಗು ನಿರ್ದೇಶಕರಾದ ಸುಕುಮಾರ್, ತ್ರಿವಿಕ್ರಂ ಶ್ರೀನಿವಾಸ್, ರಾಜಮೌಳಿ, ತಮಿಳಿನ ವೆಟ್ರಿ ಮಾರನ್, ಮಣಿ ರತ್ನಂ, ಅಟ್ಲಿ, ಹಿಂದಿಯಲ್ಲಿ ಸಂದೀಪ್ ರೆಡ್ಡಿ ವಂಗ, ರಾಜ್​​ಕುಮಾರ್ ಹಿರಾನಿ ಇದ್ದಾರೆ.

ಇದನ್ನೂ ಓದಿ: ಓಪನ್ ಆಯ್ತು ಅಲ್ಲು ಸಿನಿಮಾಸ್; ಅಲ್ಲು ಅರ್ಜುನ್​ಗೆ ಹಾಲಿವುಡ್ ಸಿನಿಮಾ ಮಾಡಿ ಎಂದ ಸಿಎಂ

ಕನ್ನಡದ ಇಬ್ಬರು ನಿರ್ದೇಶಕರ ಫೋಟೋಗಳನ್ನು ಹಾಕಲಾಗಿದೆ. ಅದುವೇ ಪ್ರಶಾಂತ್ ನೀಲ್ ಹಾಗೂ ರಿಷಬ್ ಶೆಟ್ಟಿ. ಇದು ಕನ್ನಡಿಗರ ಪಾಲಿಗೆ ಹೆಮ್ಮೆ ಎನಿಸಿದೆ. ಇಬ್ಬರೂ ನಿರ್ದೇಶಕರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡಿರುವುದರಿಂದ ಇವರ ಫೋಟೋಗಳನ್ನು ಹಾಕಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Bengaluru Air Quality: ಉಡುಪಿ, ಮಂಗಳೂರಿನಲ್ಲಿ ಮತ್ತೊಮ್ಮೆ ಕುಸಿದ ವಾಯು ಗುಣಮಟ್ಟ!

ಬೆಂಗಳೂರು, ಮಾರ್ಚ್​ 13: ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ  (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 163ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಏರ್ ಕ್ವಾಲಿಟಿ ತೀರಾ ಕಳಪೆ ಮಟ್ಟಕ್ಕೆ ಇಳಿದಿತ್ತು. ಆದರೆ ಇಂದು ಅದೇ ಉಡುಪಿ, ಮಂಗಳೂರು ಸೇರಿದಂತೆ ಹಲವೆಡೆಯ ವಾಯು ಗುಣಮಟ್ಟ 150ಕ್ಕಿಂತ ಹೆಚ್ಚಾಗಿದೆ. ಆದರೆ ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –163
  • ಮಂಗಳೂರು-184
  • ಮೈಸೂರು –162
  • ಬೆಳಗಾವಿ – 154
  • ಕಲಬುರ್ಗಿ-114
  • ಶಿವಮೊಗ್ಗ – 164
  • ಬಳ್ಳಾರಿ – 144
  • ಹುಬ್ಬಳ್ಳಿ- 153
  • ಉಡುಪಿ –174
  • ವಿಜಯಪುರ –136

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

 

Source link

Video: ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ

ಇರಾಕ್, ಮಾರ್ಚ್​ 13: ಇರಾನ್‌ನೊಂದಿಗಿನ ಯುದ್ಧಕ್ಕೆ ಸಂಬಂಧಿಸಿದ ಕಾರ್ಯಾಚರಣೆಗಳ ಸಮಯದಲ್ಲಿ ಪಶ್ಚಿಮ ಇರಾಕ್‌ನಲ್ಲಿ ಯುಎಸ್ ವಾಯುಪಡೆಯ ವೈಮಾನಿಕ ಇಂಧನ ತುಂಬುವ ವಿಮಾನವು ಅಪಘಾತಕ್ಕೀಡಾಗಿದೆ ಎಂದು ಯುಎಸ್ ಮಿಲಿಟರಿ ತಿಳಿಸಿದೆ, ರಕ್ಷಣಾ ತಂಡಗಳು ಪ್ರದೇಶವನ್ನು ಶೋಧಿಸುತ್ತಿವೆ.ಒಂದು ವಿಮಾನ ಪಶ್ಚಿಮ ಇರಾಕ್‌ನಲ್ಲಿ ಅಪಘಾತಕ್ಕೀಡಾಗಿದ್ದರೆ, ಇನ್ನೊಂದು ವಿಮಾನ ಸುರಕ್ಷಿತವಾಗಿ ಇಳಿಯಿತು.ಈ ಅಪಘಾತವು ಯುದ್ಧ ಕಾರ್ಯಾಚರಣೆಯಿಂದ ಉಂಟಾಗಿಲ್ಲ ಎಂದು ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ.

Source link

ಮೊನಾಲಿಸಾಗೆ ನಿಜಕ್ಕೂ 18 ವರ್ಷ ತುಂಬಿದೆಯೇ? ಇಲ್ಲಿದೆ ಉತ್ತರ

ಪ್ರಯಾಗ್‌ರಾಜ್ ಕುಂಭಮೇಳದ ಸಮಯದಲ್ಲಿ ರಾತ್ರೋರಾತ್ರಿ ಇಂಟರ್ನೆಟ್ ಸೆನ್ಸೇಷನ್ ಆದ ಮೊನಾಲಿಸಾ ಭೋಸ್ಲೆ (Monalisa Bhosle), ಕೇರಳದಲ್ಲಿ ತಮ್ಮ ಗೆಳೆಯ ಫರ್ಮಾನ್ ಖಾನ್ ಅವರನ್ನು ವಿವಾಹವಾದರು. ಕೇರಳದ ಪೂವಾರ್ ಬಳಿಯ ಅರುಮನೂರಿನ ನಾಯನಾರ್ ದೇವಸ್ಥಾನದಲ್ಲಿ ಈ ಜೋಡಿ ಹಿಂದೂ ಸಂಪ್ರದಾಯಗಳ ಪ್ರಕಾರ ವಿವಾಹವಾದರು. ಈ ಮದುವೆಯ ನಂತರ ಮೊನಾಲಿಸಾ ಭೋಸ್ಲೆ ಇಸ್ಲಾಂಗೆ ಮತಾಂತರಗೊಳ್ಳುತ್ತಾರೆಯೇ ಎಂಬ ಬಗ್ಗೆ ಕೆಲವರು ಅನುಮಾನ ವ್ಯಕ್ತಪಡಿಸಿದರು. ಮೊನಾಲಿಸಾ ಮತ್ತು ಫರ್ಮಾನ್ ಖಾನ್ ಇದಕ್ಕೆ ಉತ್ತರಿಸಿದ್ದಾರೆ.

ಮದುವೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೊನಾಲಿಸಾ, ‘ನಾವು ಹಿಂದೂ ಸಂಪ್ರದಾಯಗಳ ಪ್ರಕಾರ ವಿವಾಹವಾದೆವು. ನಾನು ಇಸ್ಲಾಂಗೆ ಮತಾಂತರಗೊಂಡಿಲ್ಲ. ಆದ್ದರಿಂದ ಇದು ಲವ್ ಜಿಹಾದ್ ಅಲ್ಲ’ ಎಂದು ಹೇಳಿದ್ದಾರೆ.

ಹಣೆಯ ಮೇಲೆ ಸಿಂಧೂರ ಧರಿಸಿದ್ದ ಫರ್ಮಾನ್ ಈ ಮದುವೆಗೆ ಮೊದಲು ಒಪ್ಪಿರಲಿಲ್ಲವಂತೆ. ನಂತರ ಮೊನಾಲಿಸಾ ಮನವೊಲಿಸಿ ಮದುವೆಯಾದರು. ಅದೇ ಸಂದರ್ಭದಲ್ಲಿ, ಫರ್ಮಾನ್, ‘ನಾವಿಬ್ಬರೂ ಕಲಾವಿದರು. ನಾವು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇವೆ. ಪ್ರೀತಿಯಲ್ಲಿ ಮತಾಂತರಗೊಳ್ಳುವ ಅಗತ್ಯವಿಲ್ಲ’ ಎಂದು ಹೇಳಿದರು. ಹೀಗಾಗಿ ಅವರು ತಮ್ಮ ಪತ್ನಿ ಮೊನಾಲಿಸಾ ಭೋಸ್ಲೆ ಇಸ್ಲಾಂಗೆ ಮತಾಂತರಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಮೊನಾಲಿಸಾ ಭೋಸ್ಲೆ ಇಸ್ಲಾಂ ಧರ್ಮಕ್ಕೆ ಮತಾಂತರ ಆಗ್ತಾರಾ? ಪತಿ ಫರ್ಮಾನ್ ಖಾನ್ ಸ್ಪಷ್ಟನೆ

ಚಿತ್ರೀಕರಣಕ್ಕಾಗಿ ಕೇರಳದಲ್ಲಿದ್ದಾಗ ರಕ್ಷಣೆ ಕೋರಿ ಮೊನಾಲಿಸಾ ತಿರುವನಂತಪುರಂ ಪೊಲೀಸರನ್ನು ಸಂಪರ್ಕಿಸಿದರು. ತನ್ನ ತಂದೆ ತನ್ನನ್ನು ಬಲವಂತವಾಗಿ ತನ್ನ ಊರಿಗೆ ಕರೆದೊಯ್ದು ಸಂಬಂಧಿಕರೊಬ್ಬರೊಂದಿಗೆ ಮದುವೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ಅವರು ಆರೋಪಿಸಿದರು. ‘ನನಗೆ ನನ್ನ ಸೋದರಸಂಬಂಧಿಯನ್ನು ಮದುವೆಯಾಗಲು ಇಷ್ಟವಿರಲಿಲ್ಲ, ಆದ್ದರಿಂದ ನಾನು ಪ್ರೀತಿಸಿದ ವ್ಯಕ್ತಿಯನ್ನು ಮದುವೆಯಾದಎ’ ಎಂದು ಅವರು ಪೊಲೀಸರಿಗೆ ತಿಳಿಸಿದರು.

ಮತ್ತೊಂದೆಡೆ, ಮೋನಾಲಿಸಾ ಅಪ್ರಾಪ್ತರೋ ಅಥವಾ ಮೇಜರ್ ಆಗಿದ್ದಾರೋ ಎಂಬ ಬಗ್ಗೆ ಸಾಕಷ್ಟು ಗೊಂದಲವಿತ್ತು. ಇದನ್ನು ಸ್ಪಷ್ಟಪಡಿಸಲು, ಪತ್ರಿಕಾಗೋಷ್ಠಿಯಲ್ಲಿ ಸಾಕ್ಷಿಯಾಗಿ ತಮ್ಮ ಜನನ ಪ್ರಮಾಣಪತ್ರವನ್ನು ಎಲ್ಲರಿಗೂ ತೋರಿಸಿದರು. ತನಗೆ 18 ವರ್ಷ ವಯಸ್ಸಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ‘ಮೋನಾಲಿಸಾ ಮೇಜರ್ ಆಗಿರುವುದರಿಂದ, ಅವಳು ತನಗೆ ಇಷ್ಟ ಬಂದಂತೆ ಬದುಕುವ ಹಕ್ಕನ್ನು ಹೊಂದಿದ್ದಾಳೆ’ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗ್ಯಾಸ್ ಸಂಕಷ್ಟ ಬೆನ್ನಲ್ಲೇ ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು

ಮಂಗಳೂರು, ಮಾರ್ಚ್ 13: ಇರಾನ್-ಇಸ್ರೇಲ್ ಯುದ್ಧದ ತೀವ್ರತೆಯು ಭಾರತದ ಗ್ರಾನೈಟ್ ಉದ್ಯಮದ ಮೇಲೆ ನೇರ ಪರಿಣಾಮ ಬೀರಿದೆ. ಗ್ಯಾಸ್ ಕೊರತೆಯು ಟೈಲ್ಸ್, ಗ್ರಾನೈಟ್ ಮತ್ತು ವೆಟ್ರಿಫೈಡ್ ಟೈಲ್ಸ್ ಉತ್ಪಾದನೆಗೆ ದೊಡ್ಡ ಅಡಚಣೆಯಾಗಿದೆ. ಈಗಾಗಲೇ ದೇಶದಾದ್ಯಂತ ನೂರಾರು ಫ್ಯಾಕ್ಟರಿಗಳು ಮುಚ್ಚಲ್ಪಟ್ಟಿವೆ. ಮಂಗಳೂರಿಗೆ ಸರಬರಾಜು ಮಾಡುತ್ತಿದ್ದ ಹಲವು ಘಟಕಗಳಿಗೂ ಬೀಗ ಜಡಿಯಲಾಗಿದೆ. ಟೈಲ್ಸ್ ಮತ್ತು ವೆಟ್ರಿಫೈಡ್ ಟೈಲ್ಸ್ ತಯಾರಿಕೆಗೆ ನೈಸರ್ಗಿಕ ಅನಿಲವನ್ನು ಹೀಟಿಂಗ್ ಮತ್ತು ಕೂಲಿಂಗ್ ಪ್ರಕ್ರಿಯೆಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಗ್ಯಾಸ್ ಕೊರತೆಯಿಂದಾಗಿ ಉತ್ಪಾದನಾ ವೆಚ್ಚ ಹೆಚ್ಚಾಗಿದೆ ಮತ್ತು ಉತ್ಪನ್ನಗಳ ಲಭ್ಯತೆ ಕುಸಿದಿದೆ. ಇದರ ಪರಿಣಾಮವಾಗಿ, ಮಾರುಕಟ್ಟೆಯಲ್ಲಿ ಟೈಲ್ಸ್ ಮತ್ತು ವೆಟ್ರಿಫೈಡ್ ಉತ್ಪನ್ನಗಳ ತೀವ್ರ ಕೊರತೆ ಎದುರಾಗಿದ್ದು, ಗ್ರಾಹಕರಿಗೆ ಆರ್ಡರ್ ಮಾಡಿದ ಉತ್ಪನ್ನಗಳು ಸಿಗುತ್ತಿಲ್ಲ. ಹೊಸ ಆರ್ಡರ್‌ಗಳನ್ನು ಅಂಗಡಿ ಮಾಲೀಕರು ಸಹ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಈ ಪರಿಸ್ಥಿತಿಯು ಸಾವಿರಾರು ಕಾರ್ಖಾನೆಗಳ ಭವಿಷ್ಯವನ್ನು ಅನಿಶ್ಚಿತತೆಗೆ ತಳ್ಳಿದೆ, ಉದ್ಯೋಗಿಗಳ ಮೇಲೆ ಕೂಡ ಪರಿಣಾಮ ಬೀರಿದೆ. ಮಧ್ಯಪ್ರಾಚ್ಯದ ಸಂಘರ್ಷದ ಪರಿಣಾಮಗಳು ದೇಶದ ಆರ್ಥಿಕತೆಯ ವಿವಿಧ ವಲಯಗಳ ಮೇಲೆ ವ್ಯಾಪಕವಾಗಿ ಹರಡುತ್ತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜೈಲಿನೊಳಗೆ ಕುಳಿತು ಬರೋಬ್ಬರಿ ಐದು ವರ್ಷಗಳ ಕಾಲ ಸುರಂಗ ತೋಡಿದ ಕೈದಿ, ಕೊನೆಗೆ ಹೋಗಿದ್ದೆಲ್ಲಿಗೆ?

ಬ್ರೆಜಿಲ್, ಮಾರ್ಚ್​ 13: ಕೈದಿ(Prisoner)ಗಳು ಹೇಗಾದರೂ ಮಾಡಿ ಜೈಲಿನಿಂದ ತಪ್ಪಿಸಿಕೊಳ್ಳಬೇಕೆಂದು ಹಲವು ಸಾಹಸಗಳನ್ನು ಮಾಡುತ್ತಾರೆ. ಅದರಲ್ಲಿ ಇದು ಕೂಡ ಒಂದು. ಕೆಲವರು ಜೈಲಿನ ಗೋಡೆ ಹತ್ತಿ ಹಾರಿ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದರೆ, ಇನ್ನೂ ಕೆಲವರು ಆರೋಗ್ಯ ಸರಿಯಿಲ್ಲ ಎನ್ನುವ ನೆಪವೊಡ್ಡಿ ಆಸ್ಪತ್ರೆಗೆ ಹೋಗಿ ಅಲ್ಲಿಂದ ತಪ್ಪಿಸಿಕೊಳ್ಳುವವರಿದ್ದಾರೆ.

ಕೈದಿಯೊಬ್ಬ ಬರೋಬ್ಬರಿ ಐದು ವರ್ಷಗಳ ಕಾಲ ಸುರಂಗ ತೋಡಿ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ, ಪ್ರಯತ್ನವೇನೋ ಚೆನ್ನಾಗಿತ್ತು ಆದರೆ ಆ ಸುರಂಗ ಹೋಗಿದ್ದೆಲ್ಲಿಗೆ ಗೊತ್ತಾ, ಭದ್ರತಾ ಸಿಬ್ಬಂದಿ ಕೋಣೆಗೆ.

ಜೈಲಿನಿಂದ ತಪ್ಪಿಸಿಕೊಳ್ಳುವ ಪರಿ ಸಿನಿಮಾದಂತೆ ಕಾಣುತ್ತದೆ. ಶಾಂತ ಯೋಜನೆ, ತಾಳ್ಮೆ ಮತ್ತು ಸ್ವಾತಂತ್ರ್ಯದ ಒಂದೇ ಭರವಸೆ ಇಲ್ಲಿದೆ. ಬ್ರೆಜಿಲ್​​ನಲ್ಲಿ ಒಬ್ಬ ಕೈದಿಯು ಸುಮಾರು ಐದು ವರ್ಷಗಳ ಕಾಲ ಭಾರೀ ಭದ್ರತೆಯಿರುವ ಜೈಲಿನ ಕೆಳಗೆ ರಹಸ್ಯವಾಗಿ ಸುರಂಗವನ್ನು ಅಗೆಯುತ್ತಿದ್ದ.

ಮತ್ತಷ್ಟು ಓದಿ: ಜೈಲುಗಳಲ್ಲಿ ಅಕ್ರಮ ಚಟುವಟಿಕೆ ತಡೆಗೆ ಅಲೋಕ್ ಕುಮಾರ್ ದಿಟ್ಟ ಕ್ರಮ: ಕೈದಿಗಳ ಭೇಟಿಗೆ ಹೊಸ ರೂಲ್ಸ್

ವರದಿಗಳ ಪ್ರಕಾರ, ಕೈದಿ ವರ್ಷಗಳ ಕಾಲ ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದ, ಅಂತಿಮ ತಪ್ಪಿಸಿಕೊಳ್ಳುವಿಕೆಗೆ ತಯಾರಿ ನಡೆಸಿದ್ದ, ಅಂತಿಮವಾಗಿ ಸುರಂಗವು ಪೂರ್ಣಗೊಂಡಾಗ, ಆತ ತೆರೆದ ಗಾಳಿ ಮತ್ತು ಸ್ವಾತಂತ್ರ್ಯವನ್ನು ನಿರೀಕ್ಷಿಸುತ್ತಾ ತುದಿವರೆಗೆ ತೆವಳುತ್ತಾ ಹೋದ. ಬದಲಾಗಿ ಸುರಂಗವು ನೇರವಾಗಿ ಅಧಿಕಾರಿಗಳು ಈಗಾಗಲೇ ಇದ್ದ ಭದ್ರತಾ ಸಿಬ್ಬಂದಿ ಕೋಣೆಯೊಳಲ್ಲಿ ಕೊನೆಗೊಂಡಿದೆ.

ಇದು ಬ್ರೆಜಿಲ್‌ನ ಜೈಲು ವ್ಯವಸ್ಥೆಯ ಕೆಲವು ಭಾಗಗಳೊಳಗಿನ ಕಿಕ್ಕಿರಿದ ಮತ್ತು ಕಷ್ಟಕರ ಪರಿಸ್ಥಿತಿಗಳ ಬಗ್ಗೆಯೂ ಪ್ರಶ್ನೆಗಳನ್ನು ಹುಟ್ಟುಹಾಕಿತು. ಆತ ಸುರಂಗದಿಂದ ಹೊರಬರುತ್ತಿದ್ದಂತೆ ಅತ್ತ ಅಧಿಕಾರಿಗಳು ಆತನನ್ನು ಕೆಳಗಿಳಿಸಿದ್ದಾರೆ. 2023ರ ವರದಿ ಪ್ರಕಾರ, ವಿಸ್ತೀರ್ಣದ ಆಧಾರದಲ್ಲಿ 5ನೇ ಅತಿದೊಡ್ಡ ದೇಶ ಎನಿಸಿಕೊಂಡಿರುವ ಬ್ರೆಜಿಲ್‌ನಲ್ಲಿ ಅಪರಾಧಿಗಳ ಸಂಖ್ಯೆ ಕೂಡಾ ಹೆಚ್ಚೇ ಇದೆ. ಬ್ರೆಜಿಲ್‌ನಲ್ಲಿ ಒಟ್ಟು 8,11,707 ಮಂದಿ ಕೈದಿಗಳಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link