All posts by nagaraj11081993

‘ಧುರಂಧರ್ 2’ ಮೇಲೆ ಕಥೆ ಕದ್ದ ಆರೋಪ: ಚಿತ್ರತಂಡದ ವಿರುದ್ಧ ಕೇಸ್ ಹಾಕಲು ನಿರ್ಧಾರ

‘ಧುರಂಧರ್ 2’ ಮೇಲೆ ಕಥೆ ಕದ್ದ ಆರೋಪ: ಚಿತ್ರತಂಡದ ವಿರುದ್ಧ ಕೇಸ್ ಹಾಕಲು ನಿರ್ಧಾರ

ಬಾಲಿವುಡ್‌ನ ಸ್ಟಾರ್ ನಟ ರಣವೀರ್ ಸಿಂಗ್ ಅಭಿನಯದ ಮತ್ತು ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2: ದ ರಿವೆಂಜ್’ (Dhurandhar 2: The Revenge) ಚಿತ್ರ ಈಗ ಕಾನೂನು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಈ ಚಿತ್ರದ ಕಥೆಯು ತಾವು 2023ರಲ್ಲಿ ಬರೆದ ಸ್ಕ್ರಿಪ್ಟ್ ಅನ್ನು ಆಧರಿಸಿದೆ ಎಂದು ನಿರ್ದೇಶಕ ಸಂತೋಷ್ ಕುಮಾರ್ ಆರ್.ಎಸ್. ಅವರು ಆರೋಪಿಸಿದ್ದಾರೆ. ಅಲ್ಲದೇ ‘ಧುರಂಧರ್ 2’ (Dhurandhar 2) ಚಿತ್ರತಂಡದ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಅವರು ಆಕ್ರೋಶ ಹೊರಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂತೋಷ್ ಕುಮಾರ್ ಈ ಬಗ್ಗೆ ಪೂರ್ತಿ ವಿವರ ನೀಡಿದ್ದಾರೆ. ‘ನೀವೆಲ್ಲರೂ ಧುರಂಧರ್ 2 ಸಿನಿಮಾ ನೋಡಿರಬಹುದು. ಅದು ಎಲ್ಲೆಡೆ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಆದರೆ ಆ ಸಿನಿಮಾ ನೋಡಿದ ನಂತರವಷ್ಟೇ ಅದು ನನ್ನ ಕಥೆ ಎಂಬುದು ನನಗೆ ತಿಳಿಯಿತು. ನಾನು 2023ರಲ್ಲಿ ತುಂಬಾ ಕಷ್ಟಪಟ್ಟು ಈ ಸ್ಕ್ರಿಪ್ಟ್ ಬರೆದಿದ್ದೆ. ದೊಡ್ಡ ನಟರನ್ನು ಆಯ್ಕೆ ಮಾಡಬೇಕು ಎಂದರೆ ಕಾರ್ಪೊರೇಟ್ ಸಂಸ್ಥೆಗಳ ಬೆಂಬಲ ಬೇಕು ಎಂದು ತಿಳಿಸಿದ್ದರಿಂದ ನಾನು ಹಲವು ದೊಡ್ಡ ಪ್ರೊಡಕ್ಷನ್ ಕಂಪನಿಗಳಿಗೆ ಈ ಕಥೆ ವಿವರಿಸಿದ್ದೆ’ ಎಂದು ಹೇಳಿದ್ದಾರೆ.

ಸಂತೋಷ್ ಕುಮಾರ್ ಪ್ರಕಾರ ಅವರು ಈ ಸ್ಕ್ರಿಪ್ಟ್ ಅನ್ನು ಸೋನಿ ಪಿಕ್ಚರ್ಸ್, ಜೀ ಸ್ಟುಡಿಯೋಸ್, ಟಿ-ಸಿರೀಸ್ ಮತ್ತು ಧರ್ಮಾ ಪ್ರೊಡಕ್ಷನ್ಸ್ ಸೇರಿದಂತೆ ಹಲವು ಪ್ರಮುಖ ಸಂಸ್ಥೆಗಳಿಗೆ ಹೋಗಿ ಹೇಳಿದ್ದರು. ಅಷ್ಟೇ ಅಲ್ಲದೇ, ಈ ಚಿತ್ರಕ್ಕೆ ನಟ ಆದಿತ್ಯ ರಾಯ್ ಕಪೂರ್ ಅವರನ್ನು ನಾಯಕನನ್ನಾಗಿ ಮಾಡುವ ಉದ್ದೇಶ ಹೊಂದಿದ್ದರು.

ಈ ಆರೋಪಕ್ಕೆ ಸಂಬಂಧಿಸಿದಂತೆ ಎಲ್ಲಾ ಪುರಾವೆಗಳು ತಮ್ಮ ಬಳಿ ಇವೆ ಎಂದು ಅವರು ಹೇಳಿದ್ದಾರೆ. ‘ನಾನು ನನ್ನ ಕಥೆಯನ್ನು ನವೆಂಬರ್ 2023ರಲ್ಲಿ ಸ್ಕ್ರೀನ್ ರೈಟರ್ಸ್ ಅಸೋಸಿಯೇಷನ್‌ನಲ್ಲಿ ನೋಂದಾಯಿಸಿದ್ದೇನೆ. ಇದಕ್ಕೆ ಸಂಬಂಧಿಸಿದ ಇಮೇಲ್ ದಾಖಲೆಗಳು ಮತ್ತು ಇತರ ಪುರಾವೆಗಳು ನನ್ನ ಬಳಿ ಇವೆ. ಕಥೆಯನ್ನು ಕಳ್ಳತನ ಮಾಡಿ ಈಗ ಸಿನಿಮಾ ಮಾಡಿದ್ದಾರೆ’ ಎಂದು ಅವರು ದೂರಿದ್ದಾರೆ.

ಇದನ್ನೂ ಓದಿ: ತೀವ್ರ ಗತಿಯಲ್ಲಿ ಕುಸಿದ ‘ಧುರಂಧರ್ 2’ ಗಳಿಕೆ; ಆ ದಾಖಲೆ ಮುರಿಯೋದು ಕಷ್ಟ?

ಸಿನಿಮಾದ ಬಗ್ಗೆ ಮತ್ತೊಂದು ಗಂಭೀರ ಆರೋಪ ಮಾಡಿರುವ ಸಂತೋಷ್, ‘ನಾನು ಈ ಕಥೆಯನ್ನು ಸಿನಿಮಾ ಮತ್ತು ಮನರಂಜನೆಗಾಗಿ ಬರೆದಿದ್ದೆ. ಆದರೆ ಅವರು ಇದನ್ನು ರಾಜಕೀಯ ಪ್ರಚಾರದ ವಸ್ತುವನ್ನಾಗಿ ಮಾಡಿದ್ದಾರೆ. ಇದು ನನಗೆ ತುಂಬಾ ನೋವುಂಟು ಮಾಡಿದೆ. ನನ್ನ ಕಥೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು. ಅದಕ್ಕಾಗಿಯೇ ನಾನು ಕಾನೂನು ಹೋರಾಟ ನಡೆಸಲು ತೀರ್ಮಾನಿಸಿದ್ದೇನೆ’ ಎಂದು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನಾನು ಹುಟ್ಟಿದ್ದು ದೇಶಕ್ಕೆ ಸ್ವಾತಂತ್ರ್ಯ ಬಂದ ಮೂರು ತಿಂಗಳ ನಂತರ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾ.31: ಉಪಚುನಾವಣೆ ಹಿನ್ನೆಲೆಯಲ್ಲಿ ಮುಗಳ್ಳೊಳ್ಳಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿ ಯವರಿಗೆ ಬಡವರ, ದಲಿತರ, ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಬಗ್ಗೆ ಯಾವುದೇ ಕಳಕಳಿ ಅಥವಾ ಕಾಳಜಿ ಇಲ್ಲ ಎಂದು ಅವರು ಆರೋಪಿಸಿದರು. ಬಿಜೆಪಿಯು ಬಡವರ ವಿರೋಧಿಗಳು ಮತ್ತು ಮಹಿಳೆಯರ ವಿರೋಧಿಗಳು ಎಂದು ಸಿಎಂ ಬಣ್ಣಿಸಿದರು. ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ವಿಚಾರದಲ್ಲಿ ಕಾಂಗ್ರೆಸ್‌ನ ಕೊಡುಗೆಯನ್ನು ಸಿಎಂ ಸಿದ್ದರಾಮಯ್ಯ ನೆನಪಿಸಿದರು. ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ನಗರಸಭೆ, ಪುರಸಭೆ ಹಾಗೂ ನಗರಪಾಲಿಕೆಗಳಲ್ಲಿ ಇವತ್ತು 50% ಮೀಸಲಾತಿ ಜಾರಿಯಲ್ಲಿದ್ದರೆ, ಅದಕ್ಕೆ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ ತಂದ 73ನೇ ಮತ್ತು 74ನೇ ತಿದ್ದುಪಡಿಗಳೇ ಕಾರಣ ಎಂದು ಅವರು ಹೇಳಿದರು. ಬಿಜೆಪಿ ಯವರಿಗೆ ಬಡವರ ಕಷ್ಟ ಸುಖ ಗೊತ್ತಿಲ್ಲ ಎಂದು ಪ್ರತಿಪಾದಿಸಿದರು.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಪಕ್ಷದ ಪಾತ್ರದ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಪ್ರಶ್ನೆಗಳನ್ನು ಎತ್ತಿದರು. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್. ಬಿಜೆಪಿ ಎಂದಾದರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿತ್ತೇ ಎಂದು ಅವರು ಕೇಳಿದರು. 1925ರಲ್ಲಿ ಆರ್.ಎಸ್.ಎಸ್ ಉದ್ಭವವಾಗಿದ್ದರೂ, ಸ್ವಾತಂತ್ರ್ಯ ಹೋರಾಟದಲ್ಲಿ ಎಂದಿಗೂ ಭಾಗವಹಿಸಿರಲಿಲ್ಲ ಎಂದು ಅವರು ಆರೋಪಿಸಿದರು. ಬದಲಾಗಿ, ಬಿಜೆಪಿಯವರು ಬ್ರಿಟಿಷರ ಜೊತೆ ಸೇರಿಕೊಂಡಿದ್ದರು. ಬ್ರಿಟಿಷರನ್ನು ಈ ದೇಶದಿಂದ ತೊಲಗಿಸಿದವರು ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಕಾಂಗ್ರೆಸ್‌ನವರು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಕಾಂಗ್ರೆಸ್ ಪಕ್ಷವು ಇಂದಿರಾ ಗಾಂಧಿ, ನೆಹರು, ರಾಜೀವ್ ಗಾಂಧಿ, ನರಸಿಂಹರಾವ್ ಮತ್ತು ಮನ್ಮೋಹನ್ ಸಿಂಗ್ ಅವರ ಕಾಲದಿಂದಲೂ ದೇಶದಲ್ಲಿ ಜಾತಿ ಪದ್ಧತಿ, ಬಡತನ, ನಿರುದ್ಯೋಗ ಮತ್ತು ಅನಕ್ಷರತೆ ನಿವಾರಣೆಗೆ ಸತತವಾಗಿ ಶ್ರಮಿಸುತ್ತಿದೆ ಎಂದು ಅವರು ತಿಳಿಸಿದರು.

ಬಿಜೆಪಿ ಅಧಿಕಾರಕ್ಕೆ ಬಂದ ವಿಧಾನದ ಬಗ್ಗೆಯೂ ಸಿಎಂ ಟೀಕಿಸಿದರು. ಬಿಜೆಪಿಯವರು ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬಂದರೇ ಹೊರತು, ಜನರ ಆಶೀರ್ವಾದದ ಮೂಲಕ ನೇರವಾಗಿ ಅಧಿಕಾರಕ್ಕೆ ಬರಲಿಲ್ಲ ಎಂದು ಅವರು ಹೇಳಿದರು. 2008ರಲ್ಲಿ ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾದಾಗ 110 ಸ್ಥಾನಗಳನ್ನು ಮಾತ್ರ ಗೆದ್ದಿದ್ದರು. ನಂತರ ಜಗದೀಶ್ ಶೆಟ್ಟರ್ ಮತ್ತು ಸದಾನಂದ ಗೌಡರು ಮುಖ್ಯಮಂತ್ರಿಗಳಾದರು. ಈ ಮೂವರೂ ಮುಖ್ಯಮಂತ್ರಿಗಳಾದರೂ ಯಾವುದೇ ಗಣನೀಯ ಕೆಲಸ ಮಾಡಲಿಲ್ಲ ಎಂದು ಸಿಎಂ ಆರೋಪಿಸಿದರು. 2019ರಲ್ಲಿ ಮತ್ತೆ ಅಧಿಕಾರಕ್ಕೆ ಬಂದರೂ, ನಾಲ್ಕು ವರ್ಷ ಅಧಿಕಾರದಲ್ಲಿದ್ದುಕೊಂಡು ಯಾವುದೇ ಪ್ರಮುಖ ಕೆಲಸ ಮಾಡಲಿಲ್ಲ ಎಂದು ದೂರಿದರು. ನಿರ್ದಿಷ್ಟವಾಗಿ, ಅಪ್ಪರ್ ಕೃಷ್ಣ ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಿಸುವ ಕಾರ್ಯವನ್ನು ಬಿಜೆಪಿ ಸರಕಾರ ಮಾಡಲಿಲ್ಲ ಎಂದು ಸಿದ್ದರಾಮಯ್ಯ ಒತ್ತಿ ಹೇಳಿದರು. 2010ರಲ್ಲಿ ಸುಪ್ರೀಂ ಕೋರ್ಟ್‌ನಿಂದ ತೀರ್ಪು ಬಂದಿದ್ದರೂ, ಕಳೆದ 13 ವರ್ಷಗಳಿಂದ ಗೆಜೆಟ್ ನೋಟಿಫಿಕೇಶನ್ ಮಾಡಿಲ್ಲ. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದರೂ (ಡಬಲ್ ಇಂಜಿನ್ ಸರಕಾರ) ಈ ಕೆಲಸವನ್ನು ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು. ರೈತರು ಜಮೀನು ಕಳೆದುಕೊಂಡಿದ್ದರೂ ಅವರಿಗೆ ಪರಿಹಾರವನ್ನೂ ನೀಡಿಲ್ಲ. ತಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ, ಸಚಿವ ಎಸ್.ಆರ್. ನಾಯಕ್, ಎಸ್.ಆರ್. ಪಾಟೀಲ್, ತಿಮ್ಮಾಪುರ, ಶಿವಾನಂದ ಪಾಟೀಲ್ ಅವರೊಂದಿಗೆ ಸೇರಿ ರೈತ ಮುಖಂಡರ ಜೊತೆ ಮಾತುಕತೆ ನಡೆಸಿ ಪರಿಹಾರ ನೀಡಲು ತೀರ್ಮಾನ ಮಾಡಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ನೀರಾವರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ ರೂಪಾಯಿ, ಒಣ ಜಮೀನಿಗೆ 30 ಲಕ್ಷ ರೂಪಾಯಿ ಪರಿಹಾರ ನೀಡಲು ನಿರ್ಧರಿಸಲಾಗಿದ್ದು, 16 ಮಂದಿಗೆ ಈಗಾಗಲೇ ಚೆಕ್‌ಗಳನ್ನು ನೀಡಲಾಗಿದೆ ಎಂದರು. ಬಿಜೆಪಿ ಯವರು ಇದನ್ನು ಮಾಡಿಲ್ಲ, ಹಾಗಾಗಿ ಅವರಿಗೆ ಮತ ನೀಡಬಾರದು ಎಂದು ಸಿದ್ದರಾಮಯ್ಯ ಜನರಿಗೆ ಕರೆ ನೀಡಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಫ್ಯಾಟಿ ಲಿವರ್ ಯಾವಾಗ ಅಪಾಯಕಾರಿಯಾಗಬಹುದು? ಲಕ್ಷಣಗಳು ಹೇಗಿರುತ್ತವೆ ತಿಳಿದುಕೊಳ್ಳಿ

ಇತ್ತೀಚಿನ ಕೆಲವು ವರ್ಷಗಳಲ್ಲಿ ಲಿವರ್‌ಗೆ ಸಂಬಂಧಿಸಿದ ರೋಗಗಳು ಗಮನಾರ್ಹವಾಗಿ ಹೆಚ್ಚುತ್ತಿವೆ. ಅದರಲ್ಲಿಯೂ ಲಿವರ್ ಸಮಸ್ಯೆಗಳು ಸಾಮಾನ್ಯವಾಗಿ ಫ್ಯಾಟಿ ಲಿವರ್‌ನಿಂದ (Fatty Liver) ಆರಂಭವಾಗುತ್ತವೆ, ಇದರ ಅರ್ಥ, ಲಿವರ್‌ನಲ್ಲಿ ಅಗತ್ಯಕ್ಕಿಂತ ಹೆಚ್ಚು ಕೊಬ್ಬು (ಫ್ಯಾಟ್) ಸಂಗ್ರಹವಾಗಿರುವುದು. ಆರಂಭದಲ್ಲಿ ಇದು ಹೆಚ್ಚಿನ ತೊಂದರೆ ನೀಡದಿದ್ದರೂ, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯದಿದ್ದರೆ ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು. ಹಾಗಾಗಿ ಪ್ರತಿಯೊಬ್ಬರೂ ಕೂಡ ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಅದರ ಲಕ್ಷಣಗಳನ್ನು ಅರಿತುಕೊಂಡು ಅದನ್ನು ತಡೆಗಟ್ಟಲು ಪ್ರಯತ್ನಿಸಬೇಕು. ಇಲ್ಲವಾದಲ್ಲಿ ಈ ರೀತಿಯ ಆರೋಗ್ಯ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇರುತ್ತದೆ.

ಫ್ಯಾಟಿ ಲಿವರ್‌ ಪ್ರಕಾರಗಳು

  • ನಾನ್- ಅಲ್ಕೊಹಾಲಿಕ್ ಫ್ಯಾಟಿ ಲಿವರ್
  • ಅಲ್ಕೊಹಾಲಿಕ್ ಫ್ಯಾಟಿ ಲಿವರ್ (ಮದ್ಯಪಾನದ ಪರಿಣಾಮ)

ಹಿಂದೆ ಹೆಚ್ಚು ಮದ್ಯಪಾನ ಮಾಡುವವರಲ್ಲಿ ಈ ಸಮಸ್ಯೆ ಕಂಡುಬರುತ್ತಿತ್ತು. ಆದರೆ ಈಗ ಮದ್ಯಪಾನ ಮಾಡದವರಲ್ಲೂ ಫ್ಯಾಟಿ ಲಿವರ್ ಕಾಣಿಸಿಕೊಳ್ಳುತ್ತಿದೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ಸ್ಥೂಲತೆ, ಹಾಗೂ ಅಸ್ವಸ್ಥ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಅಷ್ಟೇಅಲ್ಲ ಫಾಸ್ಟ್ ಫುಡ್ ಸೇವನೆ ಮತ್ತು ಶಾರೀರಿಕ ಚಟುವಟಿಕೆಯ ಕೊರತೆಯಿಂದ ಮಕ್ಕಳಲ್ಲೂ ಈ ಸಮಸ್ಯೆ ಹೆಚ್ಚುತ್ತಿದೆ.

ಫ್ಯಾಟಿ ಲಿವರ್ ಯಾವಾಗ ಅಪಾಯಕಾರಿಯಾಗಬಹುದು?

ಸಾಮಾನ್ಯವಾಗಿ ಫ್ಯಾಟಿ ಲಿವರ್ ಅಪಾಯಕಾರಿಯಾಗುವುದು ಲಿವರ್‌ನಲ್ಲಿ ಕೇವಲ ಕೊಬ್ಬು ಸಂಗ್ರಹವಾಗುವುದರಿಂದ ಮಾತ್ರವಲ್ಲ, ಅದರ ಜೊತೆಗೆ ಉರಿಯೂತ (ಇನ್ಫ್ಲಮೇಶನ್) ಉಂಟಾದಾಗ. ಈ ಸ್ಥಿತಿ ನಿಯಂತ್ರಣದಲ್ಲಿರದಿದ್ದರೆ ಲಿವರ್‌ಗೆ ಗಂಭೀರವಾಗಿ ಹಾನಿ ಉಂಟಾಗಬಹುದು. ಇದು ಫ್ಯಾಟಿ ಲಿವರ್‌ನ ಆರಂಭಿಕ ಹಂತದಲ್ಲಿ ಅಥವಾ ಮುಂದಿನ ಹಂತಗಳಲ್ಲಿ ಉಂಟಾಗಬಹುದು. ಹೈ ಬಿಪಿ ಅಥವಾ ಡಯಾಬಿಟಿಸ್ ಇರುವವರಲ್ಲಿ ಇದು ಇನ್ನಷ್ಟು ಅಪಾಯಕಾರಿಯಾಗಬಹುದು. ಇಂತಹ ಸಂದರ್ಭಗಳಲ್ಲಿ ಲಕ್ಷಣಗಳು ಬಹುಬೇಗ ಹೆಚ್ಚಾಗಬಹುದು ಮತ್ತು ಲಿವರ್‌ಗೆ ದೊಡ್ಡ ಮಟ್ಟದ ಹಾನಿ ಉಂಟಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಈ ಆಹಾರಗಳನ್ನು ಸೇವನೆ ಮಾಡ್ತೀರಾ? ಹಾಗಿದ್ರೆ ಫ್ಯಾಟಿ ಲಿವರ್ ಸಮಸ್ಯೆ ಬರುತ್ತೆ ಹುಷಾರ್!

ಲಕ್ಷಣಗಳು ಹೇಗಿರುತ್ತವೆ?

  • ನಿರಂತರ ದಣಿವು
  • ದೌರ್ಬಲ್ಯ
  • ಹೊಟ್ಟೆಯ ಮೇಲ್ಭಾಗದ ಬಲಬದಿಯಲ್ಲಿ ನೋವು
  • ಹಸಿವು ಕಡಿಮೆಯಾಗುವುದು
  • ಕಣ್ಣುಗಳು ಹಳದಿ ಬಣ್ಣಕ್ಕೆ ತಿರುಗುವುದು
  • ದೇಹದಲ್ಲಿ ಅಸ್ವಸ್ಥತೆ

ತಡೆಗಟ್ಟುವುದು ಹೇಗೆ?

  • ಮೈದಾ ಪದಾರ್ಥಗಳ ಸೇವನೆಯನ್ನು ಕಡಿಮೆ ಮಾಡಿ
  • ಪ್ರತಿದಿನ ವ್ಯಾಯಾಮ ಮಾಡಿ
  • ಹೊಟ್ಟೆ ನೋವನ್ನು ನಿರ್ಲಕ್ಷ್ಯ ಮಾಡಬೇಡಿ
  • ಯಾವುದೇ ಸಮಸ್ಯೆ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

ಫ್ಯಾಟಿ ಲಿವರ್ ಸಮಸ್ಯೆಯನ್ನು ಆರಂಭದಲ್ಲಿಯೇ ಗುರುತಿಸಿ ಸರಿಯಾದ ಕ್ರಮ ತೆಗೆದುಕೊಳ್ಳುವುದು ಅತ್ಯಂತ ಮುಖ್ಯ. ಆರೋಗ್ಯಕರ ಜೀವನಶೈಲಿ ಮತ್ತು ಸರಿಯಾದ ಆಹಾರ ಪದ್ಧತಿಯಿಂದ ಈ ಸಮಸ್ಯೆಯನ್ನು ನಿಯಂತ್ರಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗ್ಯಾಸ್ ಟ್ರಬಲ್: ನಾಡಿನಿಂದ ಕಾಡಿಗೆ, ಅರಣ್ಯದಲ್ಲಿ ಸೌದೆಗಾಗಿ ಮುಗಿಬಿದ್ದ ಜನ

ಕಾರವಾರ, (ಮಾರ್ಚ್ 31): ಗಲ್ಫ್​ ರಾಷ್ಟ್ರಗಳ ಕಾಳಗ ಕೊನೆ ಆಗುತ್ತಿಲ್ಲ. ಜನರ ಪರದಾಟ ಅಂತ್ಯವಾಗುತ್ತಿಲ್ಲ. ಗ್ಯಾಸ್​​ ಅಭಾವದಿಂದ ಹತ್ತಾರು ಸಮಸ್ಯೆ ಉದ್ಭವ ಆಗಿವೆ. ಗ್ಯಾಸ್ ಸಿಲಿಂಡರ್ (lpg Gas cylinder) ಸಿಗದಿದ್ದಕ್ಕೆ ಹಳ್ಳಿ ಕಡೆ ಜನರು ಸೌದೆ ಒಲೆ ಮೊರೆ ಹೋಗಿದ್ದು, ಸೌದೆಗಾಗಿ (Wood) ಅರಣ್ಣದಲ್ಲಿ ಮುಗಿಬಿದ್ದಿದ್ದಾರೆ. ಹೌದು…ಉತ್ತರ ಕನ್ನಡ (Uttara Kananda) ಜಿಲ್ಲೆಯ ಮುಂಡಗೋಡಿನ ಕೆಎಫ್​ಡಿಸಿ ಅರಣ್ಯ ಪ್ರದೇಶದಲ್ಲಿ ಜನರು ಸೌದೆಗಾಗಿ ಮುಗಿದ್ದಿದ್ದಾರೆ.

ಪ್ರತಿ ವರ್ಷ ಅಕೇಶಿಯಾ ಮರಗಳ ಕಟಾವಿನ ಬಳಿಕ ಅರಣ್ಯ ಇಲಾಖೆ, ಸಣ್ಣಪುಟ್ಟ ಕಟ್ಟಿಗೆಗೆ ಬೆಂಕಿ ಹಾಕುತ್ತಿತ್ತು.ಆದ್ರೆ ಇದೀಗ ಗ್ಯಾಸ್ ಸಿಗದಿದ್ದಕ್ಕೆ ಸೌದೆಯನ್ನ ಕೊಂಡೊಯ್ಯಲು ಜನರಿಗೆ ಅನುಮತಿ ಕೊಟ್ಟಿದೆ. ಹೀಗಾಗಿ, ಜನರು ವಾಹನದ ಜತೆ ಅರಣ್ಯಕ್ಕೆ ಬಂದು ಕಟ್ಟಿಗೆ ತುಂಬಿಕೊಂಡು ಹೋಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮಂತ್ರಾಲಯದ ಕರ್ನಾಟಕ ಅತಿಥಿ ಗೃಹದಲ್ಲಿ ಭ್ರಷ್ಟಾಚಾರದ ಹೊಗೆ: ಅಸ್ವಚ್ಛತೆ, ದುರಾಡಳಿತ ವಿರುದ್ಧ ಉಪಲೋಕಾಯುಕ್ತರ ಗರಂ!

ರಾಯಚೂರು, ಮಾ.31: ಮಂತ್ರಾಲಯಕ್ಕೆ ಭೇಟಿ ನೀಡುವ ಕನ್ನಡಿಗರಿಗಾಗಿ ನಿರ್ಮಿಸಲಾದ ‘ಕರ್ನಾಟಕ ಅತಿಥಿ ಗೃಹ’ವು ಈಗ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದೆ. ಅತಿಥಿ ಗೃಹದ ದುರವಸ್ಥೆಯನ್ನು ಕಂಡು ಆಘಾತಕ್ಕೊಳಗಾದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರ ಸೂಚನೆಯಂತೆ, ರಾಯಚೂರು ಲೋಕಾಯುಕ್ತ ಡಿವೈಎಸ್‌ಪಿ ರವಿ ಪುರುಷೋತ್ತಮ್ ಅವರು ನೀಡಿದ ವರದಿಯ ಆಧಾರದ ಮೇಲೆ ಇದೀಗ ಸ್ವಯಂಪ್ರೇರಿತ ದೂರು ದಾಖಲಾಗಿದೆ.

2022ರ ಆಗಸ್ಟ್‌ನಲ್ಲಿ ಲೋಕಾರ್ಪಣೆಗೊಂಡ ಈ ಸುಸಜ್ಜಿತ ಅತಿಥಿ ಗೃಹವು ಕೇವಲ ಮೂರೇ ವರ್ಷಗಳಲ್ಲಿ ಪಾಳುಬಿದ್ದಂತಾಗಿದೆ. ಲೋಕಾಯುಕ್ತರ ತನಿಖಾ ವರದಿಯಲ್ಲಿ ಈ ಕೆಳಗಿನ ಗಂಭೀರ ಲೋಪಗಳು ಪತ್ತೆಯಾಗಿವೆ. 50 ಶೌಚಾಲಯಗಳ ಸ್ವಚ್ಛತೆಗೆ ಇರುವುದು ಕೇವಲ ಇಬ್ಬರು ಸಿಬ್ಬಂದಿ. ಫ್ಲಷ್ ವ್ಯವಸ್ಥೆಯೇ ಇಲ್ಲದೆ ಶೌಚಾಲಯಗಳು ನಾರುತ್ತಿವೆ.

ನೀರಿಗಾಗಿ ಇಟ್ಟಿದ್ದ 8 ಸಿಂಟೆಕ್ಸ್ ಪೈಕಿ 5 ಒಡೆದು ಹೋಗಿವೆ. ಡ್ರೈನೇಜ್ ಪೈಪ್‌ಗಳು ಒಡೆದು ಯಾತ್ರಾರ್ಥಿಗಳು ದುರ್ವಾಸನೆಯಲ್ಲಿ ಕಾಲ ಕಳೆಯುವಂತಾಗಿದೆ. ಗೀಸರ್ ವೈರಿಂಗ್ ಲೋಪದಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗುತ್ತಿದ್ದು, ನಲ್ಲಿ ನೀರಿನಲ್ಲಿ ವಿದ್ಯುತ್ ಪ್ರವಹಿಸುತ್ತಿದೆ. ಇದು ಜೀವಹಾನಿಗೆ ಆಹ್ವಾನ ನೀಡುವಂತಿದೆ.

ಇನ್ನು ಸ್ನಾನಕ್ಕೆ ಒಂದು ಬಕೆಟ್ ಬಿಸಿನೀರಿಗೆ 30 ರೂಪಾಯಿ ವಸೂಲಿ ಮಾಡಲಾಗುತ್ತಿದೆ. ಹಾಸಿಗೆಗಳಲ್ಲಿ ತಿಗಣೆ ಮತ್ತು ಸೊಳ್ಳೆಗಳ ಕಾಟವಿದ್ದು, ಬೆಡ್ ಶೀಟ್‌ಗಳನ್ನು ದಿನನಿತ್ಯ ಸ್ವಚ್ಛಗೊಳಿಸುತ್ತಿಲ್ಲ. 10 ಎಸಿ ರೂಮ್‌ಗಳಲ್ಲಿ 6 ಎಸಿಗಳು ಕೆಟ್ಟುಹೋಗಿದ್ದರೂ ಯಾತ್ರಾರ್ಥಿಗಳಿಂದ ಹೆಚ್ಚಿನ ದರ ವಸೂಲಿ ಮಾಡಲಾಗುತ್ತಿದೆ.

ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಸಿದ ಮಾಜಿ ಎಂ.ಡಿಗೆ ಶಾಕ್: ವಿ. ಮುನಿಯಪ್ಪಗೆ 3 ವರ್ಷ ಜೈಲು, 4.5 ಕೋಟಿ ರೂ. ದಂಡ ವಿಧಿಸಿದ ಲೋಕಾಯುಕ್ತ ಕೋರ್ಟ್!

ಈ ಭ್ರಷ್ಟಾಚಾರ ಮತ್ತು ದುರಾಡಳಿತದ ಹಿನ್ನೆಲೆಯಲ್ಲಿ ಅತಿಥಿ ಗೃಹದ ಪತ್ರಾಂಕಿತ ವ್ಯವಸ್ಥಾಪಕ ಆಂಜನೇಯಲು ಮತ್ತು ಸಹಾಯಕ ನರಸನಗೌಡ ವಿರುದ್ಧ ಪ್ರಕರಣ ದಾಖಲಿಸಲು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಆದೇಶಿಸಿದ್ದಾರೆ. ಅಲ್ಲದೆ, ಈ ಆದೇಶದ ಪ್ರತಿಯನ್ನು ಮುಜರಾಯಿ ಸಚಿವರಿಗೂ ಕಳುಹಿಸಲು ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮಾವಿನಕಾಯಿ ಸೇವನೆಯಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ?

ಬೇಸಿಗೆ ಸಮಯದಲ್ಲಿ ಯಥೇಚ್ಛವಾಗಿ ಲಭ್ಯವಿರುವಂತಹ ಮಾವಿನ ಹಣ್ಣನ್ನು ಬಹುತೇಕ ಎಲ್ಲರೂ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಹಣ್ಣುಗಳ ರಾಜ  (mango) ತಿನ್ನಲಷ್ಟೇ ಅಲ್ಲ, ಆರೋಗ್ಯಕ್ಕೂ ಹಿತಕರ.  ಅದೇ ರೀತಿ ಬೇಸಿಗೆಯಲ್ಲಿ ಹೇರಳವಾಗಿ ಲಭ್ಯವಿರುವಂತಹ ಮಾವಿನ ಕಾಯಿ ಕೂಡ ಆರೋಗ್ಯಕ್ಕೆ ಹಿತಕರ ಎಂಬುದು ನಿಮಗೆ ತಿಳಿದಿದೆಯಾ? ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಇ, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಸತು, ನಾರು, ತಾಮ್ರ, ಪೊಟ್ಯಾಸಿಯಮ್ ಮತ್ತು ಸೋಡಿಯಂನಂತಹ ಪ್ರಮುಖ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಹಸಿ ಮಾವು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿವೆಯಂತೆ. ಹಾಗಿದ್ರೆ ಮಾವಿನಕಾಯಿಯ ಹಿತಮಿತ ಸೇವನೆಯಿಂದ ಲಭಿಸುವ ಆರೋಗ್ಯ ಪ್ರಯೋಜನಗಳೇನು ಎಂಬುದನ್ನು ನೋಡೋಣ ಬನ್ನಿ.

ಮಾವಿನಕಾಯಿ ಸೇವನೆಯಿಂದ ಲಭಿಸುವ ಪ್ರಯೋಜನಗಳೇನು?

ದೃಷ್ಟಿ ಸುಧಾರಿಸುತ್ತದೆ: ವಿಟಮಿನ್ ಎ ಯಿಂದ ಸಮೃದ್ಧವಾಗಿರುವ ಹಸಿ ಮಾವು ದೃಷ್ಟಿ ಸುಧಾರಿಸಲು ಮತ್ತು ಕಣ್ಣುಗಳ ಆರೋಗ್ಯಕ್ಕೆ  ತುಂಬಾನೇ ಪ್ರಯೋಜನಕಾರಿ. ಅಲ್ಲದೆ ಮಾವಿನಕಾಯಿ ಉತ್ತಮ ಪ್ರಮಾಣದ ಕ್ಯಾಲ್ಸಿಯಂ ಅನ್ನು ಹೊಂದಿದ್ದು, ಇದು ಮೂಳೆಗಳ ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿಯಾಗಿದೆ.

ಶಾಖದ ಹೊಡೆತದಿಂದ ರಕ್ಷಣೆ: ಬೇಸಿಗೆಯಲ್ಲಿ ಬಿಸಿಲಿನ ಹೊಡೆತ ಮತ್ತು ಶಾಖದ ಹೊಡೆತಕ್ಕೆ ಹಸಿ ಮಾವು ಅತ್ಯುತ್ತಮ ಪರಿಹಾರವಾಗಿದೆ. ಹಸಿ ಮಾವಿನಕಾಯಿಯ ಪಾನೀಯವನ್ನು ಕುಡಿಯುವುದರಿಂದ ಶಾಖದ ಹೊಡೆತದಿಂದ ದೇಹವನ್ನು ರಕ್ಷಿಸಿಕೊಳ್ಳಬಹುದು.  ಇದಲ್ಲದೆ ಈ ಸಮಯದಲ್ಲಿ ಚಟ್ನಿ, ಆಮ್‌ ಪನ್ನಾ ರೂಪದಲ್ಲಿಯೂ ಮಾವಿನಕಾಯಿ ಸೇವನೆ ಮಾಡಬಹುದು. ಮಾವಿನಕಾಯಿಯ ಸೇವನೆಯು ದೇಹವನ್ನು ತಂಪಾಗಿಸುತ್ತದೆ ಮತ್ತು ದೇಹಕ್ಕೆ ಜಲಸಂಚಯನವನ್ನು ಒದಗಿಸುತ್ತದೆ.

ಆಮ್ಲೀಯತೆಯನ್ನು ನಿವಾರಿಸುತ್ತದೆ:  ಮಾವಿನಕಾಯಿ ಆಮ್ಲೀಯತೆಯನ್ನು ನಿವಾರಿಸಲು ತುಂಬಾನೇ ಸಹಕಾರಿ. ಆಮ್ಲೀಯತೆಯನ್ನು ನಿವಾರಿಸಲು, ಕಪ್ಪು ಉಪ್ಪಿನೊಂದಿಗೆ ಹಸಿ ಮಾವಿನಹಣ್ಣನ್ನು ಸೇವಿಸಿ.. ಇದಲ್ಲದೆ, ಇದು ತೂಕ ನಷ್ಟಕ್ಕೂ ಪ್ರಯೋಜನಕಾರಿಯಾಗಿದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಹಸಿ ಮಾವು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮತ್ತು ಅದನ್ನು ಬಲಪಡಿಸುವ ಅನೇಕ ಅಂಶಗಳನ್ನು ಒಳಗೊಂಡಿದೆ. ಆದ್ದರಿಂದ, ಬೇಸಿಗೆಯಲ್ಲಿ ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಲು, ಮಾವಿನಕಾಯಿಯನ್ನು ಮಿತ ಪ್ರಮಾಣದಲ್ಲಿ ಸೇವಿಸಿ.

ಜೀರ್ಣಕ್ರಿಯೆಗೆ ಸಹಕಾರಿ: ಹಸಿ ಮಾವು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದರಲ್ಲಿ ಫೈಬರ್ ಮತ್ತು ಪೆಕ್ಟಿನ್ ಇದ್ದು, ಇದು ಮಲಬದ್ಧತೆ, ಗ್ಯಾಸ್ ಮತ್ತು ಅಜೀರ್ಣವನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಸುಡು ಬೇಸಿಗೆಯಲ್ಲಿ ಅನಾನಸ್‌ ಜ್ಯೂಸ್‌ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಯಕೃತ್ತನ್ನು ನಿರ್ವಿಷಗೊಳಿಸುತ್ತದೆ: ಹಸಿ ಮಾವು ಯಕೃತ್ತಿಗೆ ತುಂಬಾ ಪ್ರಯೋಜನಕಾರಿ. ಇದು ಯಕೃತ್ತನ್ನು ನಿರ್ವಿಷಗೊಳಿಸುತ್ತದೆ ಮತ್ತು ಪಿತ್ತರಸ ಸ್ರವಿಸುವಿಕೆಯನ್ನು ನಿಯಂತ್ರಿಸುತ್ತದೆ. ಇದು ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ ಮತ್ತು ಯಕೃತ್ತಿನ ಕಾರ್ಯವನ್ನು ಉತ್ತಮಗೊಳಿಸುತ್ತದೆ.

ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿ: ಹಸಿ ಮಾವಿನಲ್ಲಿರುವ ಉತ್ಕರ್ಷಣ ನಿರೋಧಕ ಜೀವಸತ್ವಗಳು ಚರ್ಮ ಮತ್ತು ಕೂದಲನ್ನು ಬಲಪಡಿಸುತ್ತವೆ ಮತ್ತು ಹೊಳಪು ನೀಡುತ್ತವೆ. ಇದು ದೇಹವನ್ನು ನಿರ್ವಿಷಗೊಳಿಸುತ್ತದೆ, ಚರ್ಮವನ್ನು ನೈಸರ್ಗಿಕವಾಗಿ ಹೊಳೆಯುವಂತೆ ಮಾಡುತ್ತದೆ ಮತ್ತು ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅನ್ನ ಹಾಕಿದ ಅಜ್ಜಿ ಇನ್ನಿಲ್ಲ:ಮುಖದ ಮೇಲೆ ಮುಖ ಇಟ್ಟು ದುಃಖಿಸಿದ ಮೂಕಪ್ರಾಣಿ

ರಾಮನಗರ, (ಮಾರ್ಚ್ 31): ವೃದ್ಧೆ ಸಾವಿಗೆ ಕೋತಿಯೊಂದು ಮರುಗಿ, ಮೃತದೇಹದ ಮೇಲೆ ಮಲಗಿ ರೋಧನೆ ವ್ಯಕ್ತಪಡಿಸಿರುವ ವಿಚಿತ್ರ ಘಟನೆ ಜಿಲ್ಲೆಯ ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯ ಚನ್ನಪಟ್ಟಣ (Channapatna) ತಾಲೂಕಿನ ಬಿ.ವಿ.ಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ 80 ವರ್ಷದ ಪಾರ್ವತಮ್ಮ ಮೃತದೇಹದ ಹತ್ತಿರ ಕಪಿರಾಯ ಕುಳಿತುಕೊಂಡು ಮನುಷ್ಯರ ರೀತಿ ಮುಖಕ್ಕೆ ಮುಖ ಕೊಡುತ್ತ ಕಣ್ಣೀರು ಹಾಕಿದ್ದಾನೆ. ಈ ದೃಶ್ಯ ನೋಡುಗರ ಕಣ್ಣಲ್ಲಿ ನೆರೆದಿದ್ದವರ ಕಣ್ಣಲ್ಲಿ ನೀರು ತರಿಸಿತು.

ನಿತ್ಯ ಮನೆ ಬಳಿ ಬರುತ್ತಿದ್ದ ಕೋತಿಯನ್ನ ತಿಂಡಿ ಕೊಟ್ಟು ವೃದ್ಧೆ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಕೋತಿ ಜೊತೆ ನಿತ್ಯ ಒಡನಾಟ ಹೊಂದಿದ್ದ ವೃದ್ಧೆ ಇಂದು (ಮಾರ್ಚ್ 31) ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಇದರಿಂದ ಕೋತಿ ವೃದ್ಧೆ ಸಾವಿಗೆ ಮೂಕರೋಧನೆ ವ್ಯಕ್ತಪಡಿಸಿದೆ. ಇದನ್ನು ಕಂಡ ಜನ ನಿಬ್ಬೆರಗಾಗಿದ್ದಾರೆ. ಇನ್ನು  ಪ್ರಾಣಿಗಳಿಗೂ ಮನುಷ್ಯರ ಪ್ರೀತಿ ಅರ್ಥವಾಗುತ್ತದೆ ಎಂಬುದಕ್ಕೆ ಇದೊಂದು ಸಾಕ್ಷಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಡಾ. ರಾಜ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆ ಆಗಲಿದೆ ‘ಪುನೀತ್ ನಿವಾಸ’ ಸಿನಿಮಾ

ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅಭಿಮಾನಿಗಳ ಮನದಲ್ಲಿ ಅವರು ಶಾಶ್ವತವಾಗಿ ಇರುತ್ತಾರೆ. ಒಂದಲ್ಲಾ ಒಂದು ರೂಪದಲ್ಲಿ ಅವರನ್ನು ಸ್ಮರಿಸುವ ಕೆಲಸ ಆಗುತ್ತಿದೆ. ಅದಕ್ಕೆ ‘ಪುನೀತ್ ನಿವಾಸ’ (Puneeth Nivasa) ಸಿನಿಮಾವೇ ಹೊಸ ಉದಾಹರಣೆ. ಈ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಶೀರ್ಷಿಕೆಯ ಮೂಲಕ ಈ ಸಿನಿಮಾ ಕೌತುಕ ಮೂಡಿಸಿದೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಹಿರಿಯ ನಟ ಅಭಿಜಿತ್ (Abhijith) ಅವರು ಈ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ.

ಏಪ್ರಿಲ್ 24ರಂದು ಡಾ. ರಾಜ್​ಕುಮಾರ್ ಅವರ ಜನ್ಮದಿನ. ಆ ಪ್ರಯುಕ್ತ ‘ಪುನೀತ್ ನಿವಾಸ’ ಸಿನಿಮಾವನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂಬುದು ವಿಶೇಷ. ಈ ಸಿನಿಮಾದಲ್ಲಿ ನಾಲ್ಕು ಹಾಡುಗಳಿವೆ. ಎಂ.ಎನ್. ಕೃಪಾಕರ್ ಅವರ ಸಂಗೀತ ನಿರ್ದೇಶನ ಮಾಡಿದ್ದಾರೆ. ಎಸ್. ಬಾಲು ಅವರ ಛಾಯಾಗ್ರಹಣ ಈ ಸಿನಿಮಾಗಿದೆ.

ಮಲ್ಲು ಪಾತ್ರದಲ್ಲಿ ಮಾಸ್ಟರ್ ವಿಠ್ಠಲ್ ಅವರು ಕಾಣಿಸಿಕೊಂಡಿದ್ದಾರೆ. ಅಭಿಜಿತ್ ಮಾತ್ರವಲ್ಲದೇ ಹಿರಿಯ ನಟ ಶಂಕರ್ ಭಟ್, ಗಂಡಸಿ ಸದಾನಂದಸ್ವಾಮಿ, ಕರಿಸುಬ್ಬು ಶ್ರೇಯಸ್, ಐಶ್ವರ್ಯಾ, ಡಿಂಗ್ರಿ ನಾಗರಾಜ್, ಎಂ.ಎಸ್. ಉಮೇಶ್, ಟೆನ್ನಿಸ್ ಕೃಷ್ಣ, ರೇಖಾದಾಸ್, ಗಣೇಶ್‌ರಾವ್ ಕೇಸರಕರ್ ಮುಂತಾದ ಕಲಾವಿದರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

‘ಪುನೀತ್ ನಿವಾಸ’ ಸಿನಿಮಾದಲ್ಲಿ ಚಿತ್ರರಂಗಕ್ಕೆ ಸಂಬಂಧಿಸಿದ ಕಥೆಯೇ ಇದೆ. ನಾಗೇಂದ್ರ ಪ್ರಸಾದ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅವರೇ ಕಥೆ ಮತ್ತು ಚಿತ್ರಕಥೆ ಬರೆದಿದ್ದಾರೆ. ‘ಶ್ರೀಪಂಚಮಿ ಸಿನಿ ಕ್ರಿಯೇಷನ್ಸ್’ ಮೂಲಕ ಪುನೀತ್ ಅಭಿಮಾನಿ ಎಸ್. ಮೋಹನ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕಥೆಯ ಬಗ್ಗೆ ಮಾಹಿತಿ ನೀಡಲಾಯಿತು.

ಇದನ್ನೂ ಓದಿ: ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಅಶ್ವಿನಿ

‘ಪುನೀತ್ ಅವರ ಅಪ್ಪಟ ಅಭಿಮಾನಿ ಮಲ್ಲು ಅನಾಥ ಹುಡುಗ. ಕಟ್ಟಡ ಕೂಲಿ ಕೆಲಸ ಮಾಡಿಕೊಂಡಿರುವ ಆತ ತನ್ನ ಮಾಲೀಕನ ಮನೆ ಮಾರಾಟ ಮಾಡಿಸಿಕೊಡುತ್ತಾನೆ. ಆಗ ಮಾಲೀಕ ನೀಡಿದ 5 ಲಕ್ಷ ರೂಪಾಯಿ ಕಮಿಷನ್ ಹಣದಲ್ಲಿ ಕನಸಿನ ಪುನೀತ್ ನಿವಾಸವನ್ನು ನಿರ್ಮಿಸುತ್ತಾನೆ. ನಂತರ ಆ ಪುನೀತ್‌ ನಿವಾಸದ ಒಳಗೆ ಬಂದಾಗ ಅಲ್ಲಿ ಆತನಿಗೆ ಪುನೀತ್ ಅವರೇ ಕಾಣಿಸ್ತಾರೆ. ಹೇಗೆ ಕಾಣಿಸುತ್ತಾರೆ ಎಂಬುದೇ ಚಿತ್ರದ ಕುತೂಹಲ’ ಎಂದು ಚಿತ್ರತಂಡ ಹೇಳಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಮೆರಿಕದ ಭೂದಾಳಿ ಸಾಧ್ಯತೆ; ಇರಾನ್​ಗೆ ಬೆಂಬಲವಾಗಿ ನಿಲ್ಲಲು ಸಿದ್ಧವಾಗಿದ್ದಾರಾ ರಷ್ಯನ್ ಬೆಂಬಲಿತ ಚೆಚೆನ್ ಹೋರಾಟಗಾರರು

ಮಾಸ್ಕೋ, ಮಾರ್ಚ್ 31: ಇರಾನ್ ಮೇಲೆ ಅಮೆರಿಕ ಭೂದಾಳಿಗೆ ಅಣಿಗೊಳ್ಳುತ್ತಿರುವ ಶಂಕೆ ಇದೆ. ಕೆಲ ದಿನಗಳಿಂದ ಅಮೆರಿಕವು ಇರಾನ್ ಸುತ್ತಲೂ ತನ್ನ ಸೈನಿಕರನ್ನು ಸಜ್ಜುಗೊಳಿಸುತ್ತಿದೆ. ಯಾವುದೇ ಕ್ಷಣದಲ್ಲೂ ಅದು ಗ್ರೌಂಡ್ ಇನ್ವೇಶನ್ ಅಥವಾ ಭೂ ದಾಳಿ (Ground Invasion) ಆರಂಭಿಸಬಹುದು ಎನ್ನುವ ವದಂತಿಗಳಿವೆ. ಇರಾನ್ ಕೂಡ ತಾನು ಈ ದಾಳಿ ಎದುರಿಸಲು ಸಿದ್ಧ ಇರುವುದಾಗಿ ಹೇಳುತ್ತಿದೆ. ಇದೇ ವೇಳೆ, ಇರಾನ್ ಮೇಲೆ ಅಮೆರಿಕವೇನಾದರೂ ಭೂದಾಳಿಗೆ ಇಳಿದರೆ ರಷ್ಯಾ ತನ್ನ ಚೆಚೆನ್ ಹೋರಾಟಗಾರರನ್ನು ಅಖಾಡಕ್ಕೆ ಇಳಿಸುವ ಸಾಧ್ಯತೆ ಇದೆ ಎನ್ನುವ ಸುದ್ದಿಯೂ ಹರಿದಾಡುತ್ತಿದೆ. ಇದು ಇರಾನ್​ನ ಪ್ರೆಸ್ ಟಿವಿ ವಾಹಿನಿಯ ವರದಿಯಲ್ಲಿ ತಿಳಿಸಲಾಗಿರುವ ಸುದ್ದಿ.

ಈ ವರದಿ ಪ್ರಕಾರ, ಅಮೆರಿಕದ ತುಕಡಿಗಳು ಇರಾನ್ ನೆಲದ ಮೇಲೆ ಕಾಲಿಟ್ಟರೆ ತಾವು ಅಖಾಡಕ್ಕೆ ಇಳಿಯಲು ಸಿದ್ಧ ಇರುವುದಾಗಿ ಚೆಚನ್ಯಾದ ಮಿಲಿಟರಿ ಘಟಕಗಳು ಹೇಳಿವೆ ಎಂದು ಹೇಳಲಾಗುತ್ತಿದೆ. ಇದೇನಾದರೂ ನಿಜವೇ ಆದಲ್ಲಿ ಇರಾನ್ ಯುದ್ಧವು ಹೆಚ್ಚು ವ್ಯಾಪಕತೆ ಪಡೆಯುವ ಅಪಾಯ ಇದ್ದು, ಜಾಗತಿಕ ಆರ್ಥಿಕತೆಗೆ ಧಕ್ಕೆಯಾಗುವುದು ಹೆಚ್ಚಾಗುತ್ತದೆ.

ಇದನ್ನೂ ಓದಿ: ಅಮೆರಿಕದಿಂದ ತೈಲ ಪಡೆಯಿರಿ, ಇಲ್ಲವೇ ಹಾರ್ಮುಜ್​ಗೆ ಹೋಗಿ ಪಡೆದುಕೊಳ್ಳಿ: ಬ್ರಿಟನ್ ಮತ್ತಿತರ ರಾಷ್ಟ್ರಗಳನ್ನು ಚುಚ್ಚಿದ ಟ್ರಂಪ್

ಯಾರು ಈ ಚೆಚನ್ಯಾ ಹೋರಾಟಗಾರರು?

ಚೆಚನ್ಯಾ ರಿಪಬ್ಲಿಕ್ ಎನ್ನುವುದು ರಷ್ಯಾದ ಭಾಗವಾಗಿರುವ ಒಂದು ಪ್ರಾಂತ್ಯ. ಇದರ ಮುಖ್ಯಸ್ಥ ರಮಜಾನ್ ಕಡಿರೋವ್. ಈತ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಆಪ್ತ. ಕಡಿರೋವ್ ಅವರ ಬಳಿ ಪ್ರಬಲ ಮಿಲಿಟರಿ ಪಡೆಯೇ ಇದೆ. ಈ ಪಡೆಯು ರಷ್ಯಾಗಿಂತ ಹೆಚ್ಚಾಗಿ ಕಡಿರೋವ್​ಗೆ ನಿಷ್ಠವಾಗಿದೆ.

ಈ ಪಡೆಯ ಹಿಂದಿನ ಕಥೆಯೂ ರೋಚಕವೇ ಇದೆ. 80, 90ರ ದಶಕದಲ್ಲಿ ಸೋವಿಯತ್ ಯೂನಿಯನ್ ಒಡೆದಾಗ ಉಕ್ರೇನ್, ಪೋಲ್ಯಾಂಡ್ ಇತ್ಯಾದಿ ಹಲವು ದೇಶಗಳು ಸ್ವತಂತ್ರ ದೇಶಗಳಾಗಿ ಬೇರ್ಪಟ್ಟವು. ಚೆಚನ್ಯಾ ಕೂಡ ಬೇರೆಯಾಗಲು ಯತ್ನಿಸಿತು. ರಷ್ಯಾ ಮತ್ತು ಚೆಚನ್ಯಾ ಮಧ್ಯೆ ಎರಡು ಯುದ್ಧಗಳೇ ನಡೆದವು. ಎರಡನೇ ಯುದ್ಧದ ನಂತರ ರಷ್ಯಾ ಚೆಚನ್ಯಾದ ಪ್ರತ್ಯೇಕತಾವಾದಿಗಳ ಹುಟ್ಟಡಗಿಸಿತು. ರಷ್ಯಾ ಪರ ಇದ್ದ ಕಡಿರೋವ್ ಕುಟುಂಬವನ್ನು ಚೆಚನ್ಯಾದ ಆಡಳಿತಕ್ಕೆ ಕೂರಿಸಿತು.

ಇದನ್ನೂ ಓದಿ: ತಾಹಿರ್ ಅನ್ವರ್ ಯಾರು? ಪಾಕಿಸ್ತಾನದಲ್ಲಿ ಮಸೂದ್ ಅಜರ್ ಸಹೋದರ ಅನುಮಾನಾಸ್ಪದವಾಗಿ ಸಾವು

ರಮಜಾನ್ ಕಡಿರೋವ್ ಅವರು ಬಹಳ ಗಟ್ಟಿಯಾದ ಮಿಲಿಟರಿ ಪಡೆಯನ್ನೇ ಕಟ್ಟಿಕೊಂಡಿದ್ದಾರೆ. ಈ ಪಡೆಗಳು ಕಡಿರೋವ್ ಅವರಿಗೆ ಪೂರ್ಣ ನಿಷ್ಠೆ ಹೊಂದಿವೆ. ಈ ಹೋರಾಟಗಾರರ ಬಳಿ ಭಾರೀ ಶಸ್ತ್ರಾಸ್ತ್ರಗಳಿವೆ. ಕಡಿರೋವ್ ಮೂಲಕ ರಷ್ಯಾದ ನಾಯಕತ್ವವು ಈ ಚೆಚನ್ಯಾ ಹೋರಾಟಗಾರರನ್ನು ಅಗತ್ಯವಿದ್ದೆಡೆ ಬಳಕೆ ಮಾಡುತ್ತದೆ. ಈಗ ಪುಟಿನ್ ಮನವಿ ಮೇರೆಗೆ ಕಡಿರೋವ್ ಅವರು ತಮ್ಮ ಪ್ರಬಲ ಮಿಲಿಟರಿ ಪಡೆಗಳನ್ನು ಇರಾನ್​ನಲ್ಲಿ ನಿಯೋಜಿಸಬಹುದು. ಇದರಿಂದ ರಷ್ಯಾ ನೇರವಾಗಿ ಯುದ್ಧಕ್ಕೆ ಧುಮುಕಿದಂತಾಗದೇ ಇದ್ದರೂ ಪರೋಕ್ಷವಾಗಿ ಇರಾನ್​ಗೆ ನೆರವು ಕೊಟ್ಟಂತಾಗುತ್ತದೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕುತ್ತಿಗೆಯ ಭಾಗದಲ್ಲಿ ಕಪ್ಪಾಗುವುದಕ್ಕೆ ಕಾರಣವೇನು? ಇದು ಯಾವ ಕಾಯಿಲೆಯ ಮುನ್ಸೂಚನೆ?

ನೀವು ಗಮನಿಸಿರಬಹುದು ಬಹಳಷ್ಟು ಜನರಿಗೆ ಗಲ್ಲ ಮತ್ತು ಕುತ್ತಿಗೆ ಭಾಗದಲ್ಲಿ ಕಪ್ಪಾಗುತ್ತದೆ (Dark Neck). ಆರಂಭದಲ್ಲಿ ಇದು ಅಷ್ಟು ಗಾಢವಾಗಿ ಕಂಡುಬರದಿರಬಹುದು ಆದರೆ ಮುಂದೆ ಅದು ಕಪ್ಪಾಗಿರುವುದು ಎಲ್ಲರಿಗೂ ಕಂಡುಬರಬಹುದು. ಇದನ್ನು ಸಾಮಾನ್ಯವಾಗಿ ಸೂರ್ಯನ ಬೆಳಕಿನಿಂದ ಆಗುವಂತದ್ದು ಅಥವಾ ಕೊಳೆ ಇದ್ದ ಪರಿಣಾಮ ಈ ರೀತಿ ಆಗುತ್ತಿರಬಹುದು ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಈ ರೀತಿ ಸಮಸ್ಯೆಯಾದಾಗ ಅದನ್ನು ಅಸಡ್ಡೆ ಮಾಡಬಾರದು. ಏಕೆಂದರೆ ಇದು ಕೆಲವೊಮ್ಮೆ ಚರ್ಮದ ಸಮಸ್ಯೆ ಅಥವಾ ದೇಹದ ಒಳಗಿನ ಕಾಯಿಲೆಯ ಸೂಚನೆಯಾಗಿರಬಹುದು. ಈ ಸಮಸ್ಯೆಯೊಂದಿಗೆ ಕೆಲವು ಸಾಮಾನ್ಯ ಲಕ್ಷಣಗಳು ಕೂಡ ಕಾಣಿಸಬಹುದು. ಉದಾಹರಣೆಗೆ, ಚರ್ಮ ದಪ್ಪವಾಗುವುದು, ಒರಟಾಗುವುದು, ಸ್ವಲ್ಪ ತುರಿಕೆ ಉಂಟಾಗುವುದು. ಕೆಲವು ಸಂದರ್ಭಗಳಲ್ಲಿ ಚರ್ಮದಲ್ಲಿ ಉರಿ, ಹೆಚ್ಚು ಬೆವರುವುದು ಕೂಡ ಕಂಡುಬರುತ್ತದೆ. ಅಷ್ಟು ಮಾತ್ರವಲ್ಲ, ಚರ್ಮವನ್ನು ಸ್ವಚ್ಛಗೊಳಿಸಿದ ನಂತರವೂ ಈ ರೀತಿ ಕಪ್ಪು ಬಣ್ಣ ಕಂಡುಬಂದಾಗ ಅದನ್ನು ನಿರ್ಲಕ್ಷ್ಯ ಮಾಡಬೇಡಿ, ಅದರ ಬದಲು ಈ ರೀತಿಯಾಗುವುದಕ್ಕೆ ಕಾರಣವೇನು, ಹೇಗೆ ತಡೆಗಟ್ಟಬೇಕು ಎಂಬುದರ ಬಗ್ಗೆ ತಿಳಿದುಕೊಳ್ಳಿ. ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಕುತ್ತಿಗೆ ಅಥವಾ ಗಲ್ಲದ ಕೆಳಭಾಗದಲ್ಲಿ ಕಪ್ಪಾಗುವುದಕ್ಕೆ ಕಾರಣವೇನು?

ತಜ್ಞರ ಪ್ರಕಾರ, ಕುತ್ತಿಗೆ ಮತ್ತು ಗಲ್ಲದ ಕೆಳ ಭಾಗದಲ್ಲಿ ಕಪ್ಪಾಗುವುದು ಯಾವಾಗಲೂ ಚರ್ಮ ಸಂಬಂಧಿ ಕಾಯಿಲೆಯ ಲಕ್ಷಣವಲ್ಲ. ಆದರೆ ಕೆಲವೊಮ್ಮೆ ಇದು ದೇಹದ ಒಳಗಿನ ಬದಲಾವಣೆಗಳ ಸೂಚನೆಯಾಗಿರಬಹುದು. ಇದು ಪಿಗ್ಮೆಂಟೇಶನ್ ಅಥವಾ ಇತರ ಚರ್ಮದ ಸಮಸ್ಯೆಗಳ ಕಾರಣವಾಗಿರಬಹುದು, ಜೊತೆಗೆ ಹಾರ್ಮೋನ್ ಬದಲಾವಣೆಗಳು, ಮೆಟಾಬಾಲಿಸಂ ಸಮಸ್ಯೆ ಅಥವಾ ಜೀವನಶೈಲಿಯೂ ಇದಕ್ಕೆ ಕಾರಣವಾಗಬಹುದು. ಈ ರೀತಿ ಕಪ್ಪಾಗುವಿಕೆ ಒಮ್ಮೆಲೇ ಹೆಚ್ಚಾದರೆ ಅಥವಾ ಜೊತೆಗೆ ತೂಕ ಹೆಚ್ಚಳ, ದೌರ್ಬಲ್ಯ ಮುಂತಾದ ಲಕ್ಷಣಗಳು ಕಂಡುಬಂದರೆ, ದೇಹದ ಒಳಗಿನ ಸಮತೋಲನದಲ್ಲಿ ವ್ಯತ್ಯಾಸ ಉಂಟಾಗಿದೆ ಎಂಬುದರ ಸೂಚನೆಯಾಗಬಹುದು. ಆದ್ದರಿಂದ, ಇದನ್ನು ಕೇವಲ ಹೊರಗಿನ ಸಮಸ್ಯೆ ಎಂದುಕೊಂಡು ಕ್ರೀಮ್ ಅಥವಾ ಮನೆಮದ್ದುಗಳಿಂದ ಮಾತ್ರ ಚಿಕಿತ್ಸೆ ಮಾಡಲು ಪ್ರಯತ್ನಿಸುವುದು ಸರಿಯಲ್ಲ. ಮೂಲ ಕಾರಣವನ್ನು ಗುರುತಿಸಿ ಸರಿಯಾದ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯ.

ಇವು ಕೂಡ ಕಾರಣವಾಗಿರಬಹುದು!

  • ದೀರ್ಘಕಾಲ ಸೂರ್ಯನ ಬೆಳಕಿನಲ್ಲಿ ಇರುವಿಕೆ
  • ಚರ್ಮವನ್ನು ಸರಿಯಾಗಿ ಆರೈಕೆ ಮಾಡದಿರುವುದು
  • ಹೆಚ್ಚು ರಾಸಾಯನಿಕಗಳಿರುವ ಉತ್ಪನ್ನಗಳ ಬಳಕೆ
  • ಚರ್ಮದ ಮೇಲೆ ಕೊಳಕಿರುವುದು
  • ಅಸ್ವಸ್ಥ ಜೀವನಶೈಲಿ
  • ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು
  • ನಿದ್ರೆಯ ಕೊರತೆ ಮತ್ತು ಅಧಿಕ ಒತ್ತಡ

ಕೆಲವರಲ್ಲಿ ಇದು ಅನುವಂಶಿಕವಾಗಿಯೂ (ಜೆನೆಟಿಕ್) ಇರಬಹುದು. ಜೊತೆಗೆ, ದೇಹದಲ್ಲಿ ಪೋಷಕಾಂಶಗಳ ಕೊರತೆ ಅಥವಾ ಹಾರ್ಮೋನ್ ಅಸಮತೋಲನ ಕೂಡ ಈ ಸಮಸ್ಯೆಯನ್ನು ಹೆಚ್ಚಿಸಬಹುದು.

ಇದನ್ನೂ ಓದಿ: ಸಣ್ಣ ವಯಸ್ಸಿನ ವರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಈ ಅಭ್ಯಾಸಗಳು ಕಾರಣ!

ಹೇಗೆ ತಡೆಗಟ್ಟಬೇಕು?

  • ದಿನನಿತ್ಯ ಚರ್ಮವನ್ನು ಸ್ವಚ್ಛಗೊಳಿಸಿಕೊಳ್ಳಿ
  • ಹೊರಗೆ ಹೋಗುವಾಗ ಸನ್‌ಸ್ಕ್ರೀನ್ ಬಳಸಿ
  • ಸೂರ್ಯನ ತೀವ್ರ ಬೆಳಕಿನಿಂದ ರಕ್ಷಣೆ ಪಡೆಯಿರಿ
  • ಆರೋಗ್ಯಕರ ಆಹಾರ ಸೇವಿಸಿ (ಹಣ್ಣು, ತರಕಾರಿಗಳು, ಸಾಕಷ್ಟು ನೀರು)
  • ಹೆಚ್ಚು ರಾಸಾಯನಿಕಗಳಿರುವ ಉತ್ಪನ್ನಗಳನ್ನು ಬಳಕೆ ಮಾಡಬೇಡಿ
  • ನಿಮ್ಮ ಚರ್ಮಕ್ಕೆ ಹೊಂದುವ ಉತ್ಪನ್ನಗಳನ್ನು ಮಾತ್ರ ಬಳಸಿ
  • ಸರಿಯಾಗಿ ನಿದ್ರೆ ಮಾಡಿ
  • ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ

ಈ ಸಮಸ್ಯೆ ಮುಂದುವರಿದರೆ ಅಥವಾ ಹೆಚ್ಚಾದರೆ, ಸಮಯಕ್ಕೆ ತಜ್ಞ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link