Headlines

nagaraj11081993

RCB ತಂಡದ ಗೆಲುವಿನ ಗುಟ್ಟು ರಟ್ಟು ಮಾಡಿದ ಜಿತೇಶ್ ಶರ್ಮಾ – Kannada News | Jitesh Sharma’s post match interview After RCB vs PBKS Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ 9 ಪಂದ್ಯಗಳನ್ನು ಗೆಲ್ಲುವ ಮೂಲಕ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಲಗ್ಗೆಯಿಟ್ಟಿದೆ. ಧರ್ಮಶಾಲಾದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​​ಸಿಬಿ 20 ಓವರ್​ಗಳಲ್ಲಿ 222 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 20 ಓವರ್​ಗಳಲ್ಲಿ 199 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ 23 ರನ್​ಗಳ ಗೆಲುವು ಸಾಧಿಸಿದೆ. ಈ…

Read More

ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ: ಕಾರಣ ಇಲ್ಲಿದೆ

ಬೆಂಗಳೂರು, ಮೇ 18: ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವೆಯೇ ಮಾರಾಮಾರಿ ನಡೆದಿರುವ ಘಟನೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್ ನಿನ್ನೆ ಹಲವು ಮಂದಿ ಪದಾಧಿಕಾರಿಗಳನ್ನು ಸ್ಥಾನದಿಂದ ಕಿತ್ತು ಹಾಕಿತ್ತು. ಇಂದು ಅದೇ ವಿಚಾರಕ್ಕೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ನಡುವೆ ಗಲಾಟೆ ನಡೆದಿದ್ದು, ಅದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಮತ್ತು ಅಧ್ಯಕ್ಷ ಮಂಜುನಾಥ್ ಗೌಡ ಬೆಂಬಲಿಗರು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು…

Read More

ಬಿಸಿಸಿಐಗೆ ಇಲ್ಲ ಆರ್‌ಟಿಐ ಬಿಸಿ! – Kannada News | BCCI Exempt From RTI: Landmark CIC Verdict

ಭಾರತದ ಅತ್ಯಂತ ಶ್ರೀಮಂತ ಕ್ರೀಡಾ ಸಂಸ್ಥೆಯಾದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮಾಹಿತಿ ಹಕ್ಕು ಕಾಯ್ದೆಯ (RTI) ವ್ಯಾಪ್ತಿಗೆ ಬರುವುದಿಲ್ಲ ಎಂದು ಕೇಂದ್ರ ಮಾಹಿತಿ ಆಯೋಗ (CIC) ಸೋಮವಾರ ಮಹತ್ವದ ತೀರ್ಪು ನೀಡಿದೆ. ನವ ದೆಹಲಿಯಲ್ಲಿರುವ ಕೇಂದ್ರ ಮಾಹಿತಿ ಆಯೋಗದ ಪ್ರಧಾನ ಕಚೇರಿಯಲ್ಲಿ ಇನ್​​ಫಾರ್ಮೇಷನ್ ಕಮಿಷನರ್ ಪಿ.ಆರ್. ರಮೇಶ್ ಅವರ ನೇತೃತ್ವದ ಪೀಠವು ಈ ಆದೇಶವನ್ನು ಹೊರಡಿಸಿದ್ದು, ಬಿಸಿಸಿಐ ಆರ್‌ಟಿಐ ಕಾಯ್ದೆಯ ಸೆಕ್ಷನ್ 2(h) ಅಡಿಯಲ್ಲಿ ಬರುವ ‘ಸಾರ್ವಜನಿಕ ಪ್ರಾಧಿಕಾರ’ (Public Authority) ಅಲ್ಲ ಎಂದು…

Read More

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಮಹಾ ಕ್ರಾಂತಿ: ಇನ್ನು ಐದು ಗಂಟೆಗಳ ಐವಿ ಡ್ರಿಪ್ ಬೇಕಿಲ್ಲ, ಭಾರತದಲ್ಲಿ ಬಿಡುಗಡೆಯಾಯ್ತು ಹೊಸ ಇಂಜೆಕ್ಷನ್ – Kannada News | New Rapid Cancer Injection Introduced in India, Treatment Takes Just Minutes

ಕ್ಯಾನ್ಸರ್ ಇಂಜೆಕ್ಷನ್ Image Credit source: Cancer treatment Centre of America ನವದೆಹಲಿ, ಮೇ 18: ಭಾರತದ ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಂತ ಕ್ರಾಂತಿಕಾರಿ ಹಾಗೂ ಆಶಾದಾಯಕ ಬೆಳವಣಿಗೆಯೊಂದು ನಡೆದಿದೆ. ಶ್ವಾಸಕೋಶದ ಕ್ಯಾನ್ಸರ್(Cancer) ರೋಗಿಗಳಿಗೆ ವರದಾನವಾಗಬಲ್ಲ ಅತ್ಯಾಧುನಿಕ ಚುಚ್ಚುಮದ್ದನ್ನು ದೇಶದಲ್ಲಿ ಪರಿಚಯಿಸಲಾಗಿದೆ. ಈ ಕುರಿತಾದ ಪೂರ್ಣ ವರದಿ ಇಲ್ಲಿದೆ. ಭಾರತದಲ್ಲಿ ಶ್ವಾಸಕೋಶದ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡುವ ವಿಧಾನದಲ್ಲಿ ಅತ್ಯಂತ ಮಹತ್ವದ ಹಾಗೂ ಕ್ರಾಂತಿಕಾರಿ ಬದಲಾವಣೆ ಗಾಳಿ ಬೀಸಿದೆ. ಗಂಟೆಗಟ್ಟಲೆ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಪಡೆಯಬೇಕಿದ್ದ…

Read More

SRH ತಂಡ ಗೆದ್ದರೆ ಎರಡು ತಂಡಗಳು ಪ್ಲೇಆಫ್​ಗೆ ಎಂಟ್ರಿ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಡಿಫೆಂಡಿಂಗ್ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 18 ಅಂಕಗಳೊಂದಿಗೆ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಇನ್ನುಳಿದ ಮೂರು ಸ್ಥಾನಗಳಿಗಾಗಿ ಸನ್​ರೈಸರ್ಸ್ ಹೈದರಾಬಾದ್, ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ನಡುವೆ ನೇರ ಹಣಾಹಣಿ ಇದೆ. (PC: IPL) ಆದರೆ ಇಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಪಂದ್ಯವು…

Read More

ಏನೇನೋ ಹೇಳ್ಬೇಡ್ರಯ್ಯ; ತಿಲಕ್ ವರ್ಮಾ-ಶ್ರೀಲೀಲಾ ಡೇಟಿಂಗ್ ವದಂತಿಗೆ ಬ್ರೇಕ್ – Kannada News | Sreeleela Denies Tilak Varma Dating Rumors: Mother Swarnalatha Clarifies Truth

ಸೆಲೆಬ್ರಿಟಿಗಳು ಸಣ್ಣ ಸಣ್ಣ ವಿಷಯಕ್ಕೂ ಸುದ್ದಿ ಆಗುತ್ತಾರೆ. ಅವರು ಏನೇ ಮಾಡಿದರೂ ಚರ್ಚೆ ಆಗುತ್ತದೆ. ಸಣ್ಣ ಸಣ್ಣ ಕಾಕತಾಳೀಯಗಳೂ ಸಹ ದೊಡ್ಡ ಮಟ್ಟದ ಗಾಸಿಪ್‌ಗಳಾಗಿ ಮಾರ್ಪಡುತ್ತವೆ. ಒಂದೇ ಜಾಗದಲ್ಲಿ ಕಾಣಿಸಿಕೊಂಡರೆ ಸಾಕು, ಅವರಿಬ್ಬರ ನಡುವೆ ಏನೋ ನಡೆಯುತ್ತಿದೆ ಎಂದು ಕಥೆ ಕಟ್ಟುವುದು ನೆಟ್ಟಿಗರಿಗೆ ಅಭ್ಯಾಸವಾಗಿಬಿಟ್ಟಿದೆ. ಈಗ ಇಂತಹದ್ದೇ ಒಂದು ಸುಳ್ಳು ವದಂತಿಗೆ ಸ್ಟಾರ್ ನಟಿ ಶ್ರೀಲೀಲಾ (Sreeleela) ಸಂತ್ರಸ್ತೆ ಆಗಿದ್ದಾರೆ. ಈಗ ಈ ವಿಷಯವಾಗಿ ಶ್ರೀಲೀಲಾ ತಾಯಿ ಸ್ವರ್ಣಲತಾ ಸ್ಪಷ್ಟನೆ ನೀಡಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಯುವ…

Read More

SSLC-2 ಪರೀಕ್ಷೆ: ಹಿಜಾಬ್ ಧರಿಸಿ ಬಂದವರಿಗಿಲ್ಲ ಅವಕಾಶ! ಈ ಹೊತ್ತಿನ ಪ್ರಮುಖ 4 ಸುದ್ದಿಗಳು ಇಲ್ಲಿವೆ – Kannada News | Today’s Top 4 News: No Hijab in Karnataka SSLC 2 Exam, HD Deve Gowda’s 94th Birthday, VD Satheesan Sworn in, KSRTC BMTC Strike Updates

ಸಾಂದರ್ಭಿಕ ಚಿತ್ರ (ಎಐ)Image Credit source: Google Gemini ಬೆಂಗಳೂರು, ಮೇ 18: ಬೆಂಗಳೂರು (Bengaluru) ಸೇರಿದಂತೆ ಕರ್ನಾಟಕದಾದ್ಯಂತ ಎಸ್​ಎಸ್​ಎಲ್​​ಸಿ 2ನೇ (SSLC 2 Exam) ಪರೀಕ್ಷೆ ಇಂದಿನಿಂದ (ಮೇ 18) ಆರಂಭವಾಗಿದೆ. ಸರ್ಕಾರ ಇತ್ತೀಚೆಗೆ ಧಾರ್ಮಿಕ ಸಂಕೇತಗಳನ್ನು ಧರಿಸಿ ಪರೀಕ್ಷೆ ಬರೆಯುವ ಬಗ್ಗೆ ಹೊಸ ಆದೇಶ ಹೊರಡಿಸಿದೆ. ಅದರಂತೆ, ಜನಿವಾರ, ಶಿವ ದಾರ, ಲಿಂಗ, ರುದ್ರಾಕ್ಷಿ, ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿದೆ. ಆದಾಗ್ಯೂ, ಎಸ್​ಎಸ್​ಎಲ್​​ಸಿ 2ನೇ ಪರೀಕ್ಷೆಯಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ…

Read More

ಪೇಟಿಎಂನಲ್ಲಿ ಹೊಸ ಫೀಚರ್; ಪೋಷಕರಿಂದ ಮಕ್ಕಳು ಪಡೆಯಬಹುದು ಆನ್​ಲೈನ್ ಪಾಕೆಟ್ ಮನಿ – Kannada News | Paytm ‘Pocket Money’ UPI Feature for children, with certain spending limit

ನವದೆಹಲಿ, ಮೇ 18: ಯುಪಿಐ ಬಳಸಬೇಕೆಂದರೆ ಬ್ಯಾಂಕ್ ಖಾತೆ ಹೊಂದಿರಬೇಕು. ಅಪ್ರಾಪ್ತ ವಯಸ್ಸಿನ ಮಕ್ಕಳು ಮತ್ತು ವಿದ್ಯಾರ್ಥಿಗಳು ಆನ್ಲೈನ್ ಪೇಮೆಂಟ್ ಮಾಡಲು ಪೋಷಕರನ್ನು ಅವಲಂಬಿಸಬೇಕು. ಪೇಟಿಎಂ (Paytm) ಇದಕ್ಕೊಂದು ಪರಿಹಾರ ಹುಡುಕಿದೆ. ಪಾಕೆಟ್ ಮನಿ (Pocket Money) ಎನ್ನುವ ಹೊಸ ಫೀಚರ್ ಜಾರಿಗೆ ತಂದಿದೆ. ಬ್ಯಾಂಕ್ ಖಾತೆ ಹೊಂದಿಲ್ಲದ ಅಪ್ರಾಪ್ತ ವಯಸ್ಕರು ಮತ್ತು ವಿದ್ಯಾರ್ಥಿಗಳು ಸಹ ತಮ್ಮ ಮೊಬೈಲ್ ಮೂಲಕವೇ ಸ್ವತಂತ್ರವಾಗಿ ಯುಪಿಐ (UPI) ಪಾವತಿ ಮಾಡಲು ಈ ಪೇಟಿಎಂ ಪಾಕೆಟ್ ಮನಿ ಅನುಕೂಲ ಮಾಡಿಕೊಡುತ್ತದೆ. ಈ…

Read More

ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಈಶ್ವರ ಖಂಡ್ರೆ! – Kannada News | Madabula Zoo Inaugurated: Ministers Khandre and Kharge Open 43 Acre Facility in Chittapur

ಕಲಬುರ್ಗಿ, ಮೇ 18: ಜಿಲ್ಲೆಯ ಚಿತ್ತಾಪುರ ತಾಲೂಕಿನ ಮಾಡಬೂಳ ಗ್ರಾಮದಲ್ಲಿ ನೂತನ ಮೃಗಾಲಯವನ್ನು ತೆರೆಯಲಾಗಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಚಿತ್ತಾಪುರ ಕ್ಷೇತ್ರದಲ್ಲಿ 43 ಎಕರೆ ವಿಶಾಲ ಪ್ರದೇಶದಲ್ಲಿ ಈ ಮೃಗಾಲಯವನ್ನು ನಿರ್ಮಿಸಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ಸಚಿವರು ಹುಲಿ, ಚಿರತೆ ಸೇರಿದಂತೆ ವಿವಿಧ ವನ್ಯಜೀವಿಗಳು ಮತ್ತು ವಿದೇಶಿ ಪಕ್ಷಿಗಳನ್ನು ವೀಕ್ಷಿಸಿದರು. ಈ ಮೃಗಾಲಯವು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರಮುಖ…

Read More

ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾಗಲಕೋಟೆಯ ಬಾದಾಮಿಯಲ್ಲೊಂದು ಅಚ್ಚರಿ!

ಬಾಗಲಕೋಟೆ, ಮೇ 18: ಜಿಲ್ಲೆಯಾದ್ಯಂತ ಬಿಸಿಲಿನ ತಾಪ ಹೆಚ್ಚಾಗಿದ್ದು, ನದಿ, ಕೆರೆ-ಕಟ್ಟೆಗಳು ಬತ್ತಿ ಬರಗಾಲದ ಛಾಯೆ ಆವರಿಸಿದೆ. ಇಂತಹ ಸಂದರ್ಭದಲ್ಲಿ ಬಾದಾಮಿ ತಾಲ್ಲೂಕಿನ ಮಹಾಕೂಟದಲ್ಲಿರುವ ಮಹಾಕೂಟೇಶ್ವರ ದೇವಸ್ಥಾನದ ಆವರಣದಲ್ಲಿರುವ ಪುಷ್ಕರಣಿ ಎಂದಿಗೂ ಬತ್ತದೆ ಭಕ್ತರಿಗೆ ಆಕರ್ಷಣೀಯ ಕೇಂದ್ರವಾಗಿದೆ. ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ಈ ಐತಿಹಾಸಿಕ ಸ್ಥಳದಲ್ಲಿರುವ ಪುಷ್ಕರಣಿಯು ಚಾಲುಕ್ಯರ ಕಾಲದಲ್ಲಿ ನಿರ್ಮಾಣಗೊಂಡಿದ್ದು, ಸುಮಾರು ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ವಿಶೇಷವೆಂದರೆ, ಇಲ್ಲಿಯವರೆಗೂ ಈ ಪುಷ್ಕರಣಿ ಒಮ್ಮೆಯೂ ಬತ್ತಿದ ಉದಾಹರಣೆ ಇಲ್ಲ. ನಿರಂತರವಾಗಿ ನೀರಿನಿಂದ ಕೂಡಿರುವ ಈ…

Read More